ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

28
ಜನ

ವಾರದ ಉದ್ಯೋಗ ಮಾಹಿತಿ- ಯಾವುದೇ ಪದವಿ ಇತ್ಯಾದಿ ವಿದ್ಯಾರ್ಹತೆಗಳಿಗೆ

ಈ ವಾರದ ಉದ್ಯೋಗ ಮಾಹಿತಿ ವಿವರ ಹೀಗಿದೆ

೧) ಹುದ್ದೆಯ ಹೆಸರು: ಡೆಸ್ಕ್ ಟಾಪ್ ಸಫೊರ್ಟ್ ಪರಿಣಿತರು
ಅನುಭವ: ೧ ವರ್ಷದ ಮೇಲ್ಪಟಿರಬೇಕು
ವಿದ್ಯಾರ್ಹತೆ: ಯಾವುದೆ ಪದವಿ
೨) ಹುದ್ದೆಯ ಹೆಸರು: ವಾಯ್ಸ್ ಸಫೊರ್ಟ್ ಇ೦ಜಿನೀಯರ್ಸ್ (ಸಿಸ್ಕೊ – ವಾಯ್ಪ್ ನೆಟ್ವರ್ಕ್ ಅನುಭವ ಇರಬೇಕು )
ಅನುಭವ: ೨ ವರ್ಷಕ್ಕಿ೦ತ ಹೆಚ್ಚಿರಬೇಕು
ವಿದ್ಯಾರ್ಹತೆ: ಯಾವುದೆ ಪದವಿ

೩) ಹುದ್ದೆಯ ಹೆಸರು: ಟೆಕ್ನಿಕಲ್ ಸಫೊರ್ಟ್ ಇ೦ಜಿನೀಯರ್ಸ್
ಅನುಭವ : ವಿ೦ಡೋಸ್ ಮತ್ತು ಲಿನಕ್ಸ್ ನಲ್ಲಿ ಪರಿಣಿತರಾಗಿರಬೇಕು ೧ ವರ್ಷಕ್ಕಿ೦ತ ಹೆಚ್ಚಿರಬೇಕು
ವಿದ್ಯಾರ್ಹತೆ: ಯಾವುದೆ ಪದವಿ

ಇ ಮೇಲಿನ ಎಲ್ಲ ಹುದ್ದೆಗಳಿಗಾಗಿ ನಿಮ್ಮ ರೆಸ್ಯುಮ್ ಅನ್ನು ಈ ಕೆಳಕ೦ಡ ವಿಳಾಸಕ್ಕೆ ತಕ್ಷಣ ಕಳುಹಿಸಿ
abhi082941@gmail.com

28
ಜನ

ಮಾಧ್ಯಮಗಳೇಕೆ ಹೀಗೆ ?

-ರೂಪ ರಾವ್
ನಟನೆಗೆ ಚೌಕಟ್ಟು ಇದೆಯೇ……..?
ಇಂತಾಹದೊಂದು ಪ್ರಶ್ನೆ ಕಾಡಿದ್ದು ನೆನ್ನೆ ವಿಜಯ ಕರ್ನಾಟಕದಲ್ಲಿ ಶರಣು ಹುಲ್ಲೂರುರವರ ಸುಮ್ನೇನಾ ಸುಮನ್ ಅನ್ನುವ ಲೇಖನ ಓದಿ.
ಸುಮನ್ ಹಾಗಿದ್ದರು, ಹೀಗಾದರು, ವಿವಾಹ ವಿಚ್ಗೇದನಕ್ಕೆ ಒಳಗಾದರು. “ಇಂತಹ” ಪಾತ್ರಕ್ಕೆ ಬ್ರಾಂಡ್ ಆದರು. ಬರೀ ಇಂತಹದೇ ಪದಗಳು.
ಸುಮನ್ ಅನ್ನು ಒಬ್ಬ ನಟಿಯಾಗಿ ನೋಡದೇ ಒಬ್ಬ  ಹೆಣ್ಣಾಗಿ  ನೋಡಿದಾಗ ಈ ರೀತಿಯ ಯೋಚನೆಗಳು ಬರುತ್ತವೆ.
ಅಷ್ಟಕ್ಕೂ ಪಾತ್ರ ಯಾವುದಾದರೇನು ಅದಕ್ಕೆ ನ್ಯಾಯ ಒದಗಿಸಬೇಕಾದ್ದು ನಟಿಯ ಧರ್ಮ, ಅವರು ಇಂತಹದ್ದೇ ಪಾತ್ರ ಮಾಡಬೇಕೆಂದು ನಿರ್ಧೇಶಿಸುವುದು ನಟಿಯ ಸ್ವಾತಂತ್ರಹರಣ ಎನ್ನುವುದು ನನ್ನ ಅಭಿಪ್ರಾಯ.
ಇಂತಹದೇ ಎನ್ನಲು ಅವರು ಮಾಡಿರುವ ಪಾತ್ರವಾದರೂ ಎಂತಹದ್ದು……
ಅವರ ಲುಕ್, ಅವರ ಗ್ಲಾಮರ್ ಅವರನ್ನು ಇಂತಹ ಪಾತ್ರಕ್ಕೆ ಒಗ್ಗಿಸಿದಲ್ಲಿ ಅದು ಅವರ ಹೆಚ್ಚುಗಾರಿಕೆ, ಅದರಿಂದ ನೋಡುಗರಿಗೆ  ತೊಂದರೆ ಏನು?
ಚಮೇಲಿಯಲ್ಲಿ ಕರೀನಾ , ಡರ್ಟಿ ಪಿಕ್ಚರ‍್ನಲ್ಲಿ  ವಿದ್ಯಾ ಬಾಲನ್,  ಅಷ್ಟೇ ಏಕೆ? ನಮ್ಮ ಚತುರ್ಭಾಷಾ ನಟಿ ಚತುರೆ ಲಕ್ಷ್ಮಿ ಮೇಡಮ್ ಹೂವು ಹಣ್ಮಿನಲ್ಲಿ ನಟಿಸಿದ ಪಾತ್ರಗಳಿಂದ ಅವರ ಅಭಿನಯಕ್ಕಾಗಿ ಹೊಗಳಿಸಿಕೊಂಡಿದ್ದಾರೆಯೇ ಹೊರತು ಇಂತಹ ಪಾತ್ರ ಬೇಕಿತ್ತೇ ಎಂದನಿಸಿಕೊಂಡಿಲ್ಲ. ಪತ್ರಿಕಾ ಮಾಧ್ಯಮದಲ್ಲಿ ತಮಗೆ ಸರಿ ಎನಿಸದ ನಟಿಯರ ಬಗ್ಗೆ ಈ ರೀತಿಯ ಕಾಮೆಂಟ್ಸ್ ಸಹಜವಾಗಿದೆ. ಒಮ್ಮೆಪ್ರಿಯಾ ಮಣಿಯ ಬಗ್ಗೆ ಬರೆಯುತ್ತಾ ರಾವಣ್ ಚಿತ್ರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಂತಹ ಪಾತ್ರಗಳನ್ನು ಮಾಡಿ ಎಂಬ ತೆಗಳಿಗೆ ಮಾಡಿದ್ದರು. ಹಾಗೆ ಸೌಂದರ್ಯರವರು  ಯಾವುದೋ ವೇಳೆಯಲ್ಲಿ ಮಾಧ್ಯಮದವರ ಕೈಗೆ ಸಿಗಲಿಲ್ಲ  ಎಂಬ  ಕಾರಣಕ್ಕೆ ಅವರನ್ನು ಅತೀ ಪುರಾತನ ನಟಿ ಎಂಬ “ನಾಮಕರಣ” ಮಾಡಿದ್ದರು.
ಮತ್ತೊಮ್ಮೆ ಪವಿತ್ರ ಲೋಕೇಶ್‌ರವರು ಯಾವುದೋ ಚಿತ್ರದ ಪಾತ್ರವೊಂದಕ್ಕೆ ಒಪ್ಪಲಿಲ್ಲ ಎಂದು ಅವರು ಇಂತಹ ಚಿತ್ರದಲ್ಲಿ “ಅಂತಹ” ಪಾತ್ರ ಮಾಡಿದ್ದರು . ಇಲ್ಲಿ ಏಕೆ ಮಡಿವಂತಿಕೆ ಎಂಬ ಕಾಮೆಂಟ್. ಇಂತಹದೇ ಕಾಮೆಂಟ್ಸ್ ಗಳು ಅತಿಯಾಗಿ ನಟಿಯರ ಮೇಲೆ ಪತ್ರಿಕೆಗಳಲ್ಲಿ ಹಾಕಲ್ಪಟ್ಟಿವೆ, ಹಾಕಲಾಗುತ್ತಿವೆ. ಮತ್ತಷ್ಟು ಓದು »
27
ಜನ

ಪ್ರೇಮ, ಯುದ್ಧ ಮತ್ತು ಚುನಾವಣೆಯಲ್ಲಿ ಎಲ್ಲವೂ ನ್ಯಾಯವೇ

-ಚಾಮರಾಜ ಸವಡಿ

ಕೆಲವೊಬ್ಬರು ಏನು ಮಾಡಿದರೂ ವಿವಾದವಾಗುತ್ತದೆ. ಅವರು ಸೃಜನಶೀಲ ಕ್ಷೇತ್ರದಲ್ಲಿದ್ದರಂತೂ ವಿವಾದ ಇನ್ನಷ್ಟು ತೀವ್ರ. ಕನ್ನಡದ ಮಟ್ಟಿಗೆ ಆ ಕೀರ್ತಿ ಎಸ್.ಎಲ್. ಭೈರಪ್ಪ ಅವರದಾದರೆ, ಭಾರತೀಯ ಇಂಗ್ಲಿಷ್ ಬರಹಗಾರರ ಪೈಕಿ ಆ ಪಟ್ಟ ಸಲ್ಮಾನ್ ರಶ್ದಿಗೆ.
ಬಹುಶಃ, ದಿ ಸೆಟನಿಕ್ ವರ್ಸಸ್ ಕೃತಿಯನ್ನು ರಶ್ದಿ ಬರೆಯದೇ ಹೋಗಿದ್ದರೆ, ಅವರ ಪಾಲಿಗೆ ವಿವಾದಗಳಾಗಲಿ, ವಿವಾಹಗಳಾಗಲಿ ಈ ಪರಿ ಇರುತ್ತಿರಲಿಲ್ಲವೇನೋ. ಮುಸ್ಲಿಂ ಮನಃಸ್ಥಿತಿಯನ್ನು ಮಾತ್ರ ಕೆರಳಿಸುವಂಥ ಈ ಪುಸ್ತಕವನ್ನು ಮುಗಿಬಿದ್ದು ಮುಟ್ಟುಗೋಲು ಹಾಕಿಕೊಂಡ ಭಾರತ ಸರ್ಕಾರ, ರಶ್ದಿಗೆ ಜೀವಂತ ಇರುವಾಗಲೇ ಹುತಾತ್ಮನ ಪಟ್ಟ ಕಟ್ಟಿಬಿಟ್ಟಿತು.
ಅದರ ಮುಂದುವರಿದ ಅಧ್ಯಾಯವೇ ಜೈಪುರದ ಸಾಹಿತ್ಯ ಉತ್ಸವದಲ್ಲಿ ನಡೆದಿರುವ ಪ್ರಹಸನ. ಅಲ್ಲಿ ನಡೆಯಬೇಕಾಗಿದ್ದುದು ಸಾಹಿತ್ಯದ ಚರ್ಚೆ. ಆದರೆ, ನಡೆದಿದ್ದು ಮತ್ತು ನಡೆಯುತ್ತಿರುವುದು ಲೇಖಕ ಸಲ್ಮಾನ್ ರಶ್ದಿ ಉತ್ಸವದಲ್ಲಿ ಪಾಲ್ಗೊಳ್ಳಬೇಕೆ ಬೇಡವೆ ಎಂಬುದರ ಬಗ್ಗೆ. ಅಂತರ್‌ರಾಷ್ಟ್ರೀಯ ಮಟ್ಟದ ವೇದಿಕೆಯನ್ನು ಯಾವ ರೀತಿ ದುರ್ಬಳಕೆ ಮಾಡಬಹುದು ಮತ್ತು ಅದರ ಉದ್ದೇಶವನ್ನು ಹಾಳು ಮಾಡಬಹುದು ಎಂಬುದಕ್ಕೆ ಇದು ಅತ್ಯುತ್ತಮ ನಿದರ್ಶನ.
26
ಜನ

ಪ್ರಜಾಪ್ರಭುತ್ವದ ಶಿಕ್ಷಣ

-ರಾವ್ ಎವಿಜಿ

ಪ್ರಜಾಪ್ರಭುತ್ವ ಒಂದು ಸುಂದರ ಪರಿಕಲ್ಪನೆ ಎಂಬುದರ ಕುರಿತಾಗಲಿ, ನಮಗೆ ತಿಳಿದಿರುವ ಪ್ರಭುತ್ವದ ನಮೂನೆಗಳ ಪೈಕಿ ಅತ್ಯಂತ ಶ್ರೇಷ್ಠವಾದದ್ದು ಎಂಬುದರ ಕುರಿತಾಗಲಿ ಯಾವ ಸಂಶಯವೂ ನನಗಿಲ್ಲವಾದರೂ ನಮಗೆ, ಅರ್ಥಾತ್ ಈ ಕರ್ಮಭೂಮಿಯ ಪ್ರಜೆಗಳಿಗೆ ಪ್ರಜಾಪ್ರಭುತ್ವ ಪದ್ಧತಿಯನ್ನು ಅಳವಡಿಸಿಕೊಳ್ಳಲು ಅಗತ್ಯವಾದ ಅರ್ಹತೆ ಇದೆಯೇ ಎಂಬುದರ ಕುರಿತು ಸಂಶಯ ಇದೆ. ನನಗೆ ತಿಳಿದ ಮಟ್ಟಿಗೆ ಪ್ರಜಾಪ್ರಭುತ್ವದ ಯಶಸ್ಸು ಪ್ರಜೆಗಳ, ಅರ್ಥಾತ್  ಮತದಾರನ ವಿವೇಕವನ್ನು ಆಧರಿಸಿರುತ್ತದೆ.

  • ಹಣ, ಹೆಂಡ. ಸೀರೆ ಮೊದಲಾದವನ್ನು ಧಾರಾಳವಾಗಿ ಕೊಡುವವರನ್ನೇ ಆಗಲಿ ಚುನಾವಾಣೆಯಲ್ಲಿ ಗೆದ್ದು ಬಂದರೆ ಉಚಿತವಾಗಿ ‘ಕಲರ್’ಟಿವಿ,’ಮಿಕ್ಸಿ’ ನಗಣ್ಯ ಅನ್ನಬಹುದಾದಷ್ಟು ಕಡಿಮೆ ಬಡ್ಡಿಯ ಸಾಲ ಮುಂತಾದವನ್ನು ಕೊಡುವುದಾಗಿ ಭರವಸೆ ನೀಡುವ ಮಂದಿಯನ್ನು ಆಯ್ಕೆ ಮಾಡುವ ನಾವು ವಿವೇಕಿಗಳೇ?
  • ನಮ್ಮ ಮತದವ, ನಮ್ಮ ಜಾತಿಯವ, ನಮ್ಮ ಊರಿನವ ಎಂಬ ಕಾರಣಕ್ಕಾಗಿ ನಾಯಕನನ್ನು ಆಯ್ಕೆ ಮಾಡುವ ನಾವು ವಿವೇಕಿಗಳೇ ? ಮತ್ತಷ್ಟು ಓದು »
25
ಜನ

ಮಧುರ ಪಿಸುಮಾತಿಗೆ, ಅದರ ತುಸು ಪ್ರೀತಿಗೆ

–  ಪ್ರಸಾದ್.ಡಿ.ವಿ

ಜನವರಿ ೧, ಸದಾ ನನ್ನ ನೆನಪಿನಲ್ಲುಳಿಯುವ ದಿನ. ಅದು ನವ ವಸಂತದ ಆರಂಭವೆಂಬ ಕಾರಣಕ್ಕೆ ಮಾತ್ರವಲ್ಲ. ನನ್ನ ಜೀವನದಲ್ಲಿನ ಒಂದು ಅನಿರೀಕ್ಷಿತ ತಿರುವು, ಒಂದು ಸುಮಧುರ ಯಾತನೆಯಾಗಿ ಉಳಿದ ಕಾರಣದಿಂದ. “ಆತ(?)” ನನ್ನ ಜೀವನದಲ್ಲಾಡಿದ ಆಟವನ್ನು ನಾನೆಂದಿಗೂ ಮರೆಯುವಂತಿಲ್ಲ..! ಇಂದು ಆ ಕ್ಷಣವನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇನೆ.

ನನ್ನ ಕ್ಯಾಂಟೀನ್ ಪುರಾಣದಲ್ಲಿ “ನಾನು ನಿನ್ನನ್ನು ನನ್ನ ಜೀವದ ಗೆಳೆಯನೆಂದು ತಿಳಿದಿದ್ದೇನೆಯೇ ಹೊರತು ನಲ್ಲನಾಗಿ ಅಲ್ಲ” ಎಂದು ಆಕೆ ನನ್ನ ಪ್ರೀತಿಗೆ ಅಲ್ಪವಿರಾಮವಿಟ್ಟಿದ್ದಳು..! ನನಗೋ ಅದ್ಯಾವುದಕ್ಕೂ ಹೊಂದಿಕೊಳ್ಳಲಾಗದೆ ಸ್ನೇಹಕ್ಕೆ ಪ್ರೀತಿಯನ್ನು ತ್ಯಾಗ ಮಾಡಿದ ಅಮರ ಪ್ರೇಮಿಯಾಗಿದ್ದೆ. ಆನಂತರದಲ್ಲಿ ಆಕೆ ಮತ್ತೊಂದು ಕತೆ ಹೇಳಲು ಶುರುವಚ್ಚಿದ್ದಳು. ನಾನು ಒಬ್ಬ ಹುಡುಗನನ್ನು ಪ್ರೇಮಿಸಿದ್ದೇನೆ, ಆತನನ್ನು ನನ್ನ ಜೀವದ ಗೆಳೆಯನಾದ ನಿನಗೆ ಪರಿಚಯಿಸಬೇಕೆಂದು ಹೇಳಿದಳು.ನನಗೋ ಹೃದಯದಲ್ಲಿ ಹೇಳಿಕೊಳ್ಳಲೂ, ತಾಳಿಕೊಳ್ಳಲೂ ಆಗದ ತಳಮಳ. ನನ್ನವಳೆಂದು ತಿಳಿದವಳು ನನ್ನೆದುರಿಗೆ ಮತ್ತೊಬ್ಬನನ್ನು ಪ್ರೀತಿಸುವುದು ಸಹಿಸಲಾಗದ ನೋವನ್ನು ನೀಡಿತ್ತು, ನಿದ್ರೆ ಬಿಟ್ಟ ಉದಾಹರಣೆಗಳೂ ಉಂಟು. ಇವೆಲ್ಲವುಗಳ ನಡುವೆಯೇ ಆಕೆ ಮತ್ತು ಆಕೆಯ ಮನೆಯವರೊಂದಿಗೆ ನಿಮಿಷಾಂಬಾ ದೇವಿಯ ದರ್ಶನವೂ ಆಗಿತ್ತು. ಅವಳ ಕುಟುಂಬದ ಎಲ್ಲ ಸದಸ್ಯರೂ ನನಗೆ ತುಂಬಾ ಹಿಡಿಸಿದ್ದರು ಆಕೆ ಅಂದು ನನ್ನೊಂದಿಗೆ ಏನನ್ನೋ ಹೇಳಲು ಚಡಪಡಿಸಿದ್ದಳು, ನಾನು ಆ ನಿಮಿಷಾಂಬಾ ದೇವಿಗೆ ನನ್ನ ಪ್ರೀತಿಯನ್ನು ‘ನಮ್ಮ ಪ್ರೀತಿಯಾಗಿ’ ಮಾಡೆಂದು ಅರ್ಜಿ ಹಾಕಿದ್ದೂ ಆಗಿತ್ತು.

ಮತ್ತಷ್ಟು ಓದು »

24
ಜನ

ಶ್ರಾದ್ಧ … ಆಚರಣೆ

-ಪ್ರಕಾಶ್ ನರಸಿಂಹಯ್ಯ

ಹುಟ್ಟು ಅಂದಮೇಲೆ  ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ  ಮರಣದೊಂದಿಗೆ  ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ  ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು  ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ  ಕರ್ಮಅಥವಾ ತಿಥಿ ಎಂಬ  ಹೆಸರಿನಲ್ಲಿ  ಆಚರಣೆ ಮಾಡುವುದು ರೂಡಿಯಲ್ಲಿದೆ.

 ಈ ದೇಹಕ್ಕೆ ಅಂತ್ಯ ಸಂಸ್ಕಾರವಾದ ಮೇಲೆ ಶ್ರಾದ್ಧ  ಅಥವಾ ತಿಥಿ ಎನ್ನುವ ಕರ್ಮ ಬೇಕೇ? ಏಕೆ ಬೇಕು? ಅಂತ್ಯವಾದ ಮೇಲೆ ಶ್ರಾದ್ಧ  ಯಾರಿಗೆ? ಇದರ ಅವಶ್ಯಕತೆ ಏನು? ಎಂದು  ಹಲವರು  ಪ್ರಶ್ನೆ ಮಾಡುತ್ತಾರೆ . ಇನ್ನು ಹಲವರು “ವ್ಯಕ್ತಿ ಜೀವಂತ ಇದ್ದಾಗ ಅವರನ್ನು ಚೆನ್ನಾಗಿ ನೋಡಿಕೊಳ್ಳದೆ, ಗೊಳುಹಾಕಿ ಕೊಂಡು ಸತ್ತ ನಂತರ ನೂರಾರು ಜನರಿಗೆ ಊಟ ಹಾಕಿದರೇನು ಬಂತು?  ಇರುವಷ್ಟು ದಿನ ತಂದೆ ತಾಯಿಯನ್ನು ಪ್ರೀತಿಯಿಂದ ನೋಡಿಕೊಂಡು ಅವರ ಬೇಕುಬೇಡಗಳನ್ನು ಒದಗಿಸಿದರೆ ಸಾಕು. ಸತ್ತ ನಂತರ ತಿಥಿ ಮಾಡದಿದ್ದರೂ ಪರವಾಗಿಲ್ಲ.” ಎನ್ನುತ್ತಾರೆ. ಮತ್ತೆ ಕೆಲವರು “ನಮ್ಮ ಹಿರಿಯರು ನಡೆಸಿಕೊಂಡು ಬಂದ ಆಚಾರ ವಿಚಾರ, ಸುಮ್ಮನೆ ಮಾಡಿರುವುದಿಲ್ಲ. ಇದನ್ನು ಏಕೆ ತಪ್ಪಿಸಬೇಕು? ಇಂತಹ ಒಂದು ಆಚರಣೆ ಶ್ರಾದ್ಧ .
23
ಜನ

ಸಂಸ್ಕೃತಿ ಸಂಕಥನ – 19 – ವಿಚಾರಕ್ಕೂ ಆಚಾರಕ್ಕೂ ಏನು ಸಂಬಂಧ ?

-ರಮಾನಂದ ಐನಕೈ

ನಮ್ಮೂರಿನಲ್ಲಿ ಒಬ್ಬರು ವಿಚಾರವಂತರಿದ್ದಾರೆ. ನಿಜವಾಗಲೂ ಅವರು ಚಿಂತಕರೆ, ನಾವೆಲ್ಲ ತಮಾಷೆಗಾಗಿ ಅವರನ್ನು ಸೆಕ್ಯುಲರ್ ಚಿಂತಕರು  ಎಂದು ಕರೆಯುತ್ತೇವೆ. ಯಾವತ್ತೂ ವೇದಿಕೆಯ ಮೇಲೆ ಅವರು ನಾಸ್ತಿಕತೆಯ ಕುರಿತಾಗಿ  ಮಾತನಾಡುತ್ತಾರೆ. ದೇವರುಗಳನ್ನು ಟೀಕಿಸುತ್ತಾರೆ.  ಗ್ರಾಮೀಣ ಜನರ ಆಚಾರಗಳು ಮೌಢ್ಯವೆಂದು ಗುರುತಿಸುತ್ತಾರೆ. ಹೊರಗೆ ಬಂದಾಗ ಹೆಂಡ, ಸಿಗರೇಟುಗಳೆಲ್ಲ ಅವರ ಆಪ್ತ ಸಂಗಾತಿಗಳು. ಆದರೆ ಆ ವ್ಯಕ್ತಿ ಅವರ ಊರಿನಲ್ಲಿ ಒಬ್ಬ ಪೂಜಾರಿ. ಮನೆಯಲ್ಲಿ ಕರ್ಮಠ ಆಸ್ತಿಕರು. ಜಪ-ತಪ, ಮಡಿ-ಮೈಲಿಗೆ ಮುಂತಾದವುಗೆಳೆಲ್ಲವೂ ಅವರ ನಿತ್ಯಕರ್ಮಗಳು. ಜ್ಯೋತಿಷ್ಯ, ಶಕುನ ಮುಂತಾದವುಗಳೆಲ್ಲದರಲ್ಲೂ ಪ್ರವೀಣರು. ಶನಿವಾರ ಅವರ ಮನೆ ಮುಂದೆ ಜನರ ಸರದಿ ಇರುತ್ತದೆ. ಈ ವ್ಯಕ್ತಿಯನ್ನು ನಾವು ಯಾವ ರೀತಿ ಅರ್ಥೈಸೋಣ? ಸಾರ್ವಜನಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾದ ಅವರ ಆಚರಣೆಯೂ ಶುದ್ಧವಾಗಿರುತ್ತದೆ. ಇವೆರಡರಲ್ಲಿ ಯಾವುದು ತಪ್ಪು ಅನ್ನಲು ಸಾಧ್ಯ? ಇದೇ ಭಾರತದ ಆಧುನಿಕ ವಿಚಾರವಾದಿಗಳ ಸಮಸ್ಯೆ.

ವಿಜ್ಞಾನಿಯೊಬ್ಬರು ದೇವರ ಫೋಟೋ ಪೂಜಿಸುವುದು, ದೇವಸ್ಥಾನಕ್ಕೆ ಹೋಗುವುದು ಹಾಸ್ಯಾಸ್ಪದ ಅನಿಸುತ್ತದೆ. ಲಕ್ಷ್ಮೀ ಪೂಜೆಯ ದಿನ  ಕಂಪ್ಯೂಟರಿಗೆ ಬಿಳಿಪಟ್ಟೆ ಎಳೆದು ಪೂಜಿಸಿದರೆ ನಗು ಬರುತ್ತದೆ. ಸೂರ್ಯ, ಚಂದ್ರ ಭೂಮಿಯ ಪರ್ಯಟನದಿಂದಾಗಿ ಗ್ರಹಣವಾಗುತ್ತದೆ ಎಂಬ ವೈಜ್ಞಾನಿಕ ಸತ್ಯ ನಮಗೆ ಗೊತ್ತಿದೆ. ಆದರೂ ಉಪವಾಸ ಇರುತ್ತೇವೆ. ದೇವರನ್ನು ಮುಳುಗಿಸಿಬಿಡುತ್ತೇವೆ. ಮನೆಯ ಬಿಟ್ಟು ರಸ್ತೆಗೇ ಬರುವುದಿಲ್ಲ. ಗ್ರಹಣದ ನಂತರ ಸ್ನಾನ ಮಾಡುತ್ತೇವೆ. ಯಾಕೆ? ತಿಳಿದಿರುವುದೊಂದು ಮಾಡುವುದೊಂದು, ಹೇಳುವುದೊಂದು ಮಾಡುವುದೊಂದು. ಇದನ್ನೇ ಸೋಗಲಾಡಿತನ ಎಂದು ಟೀಕಿಸುತ್ತೇವೆ.

ಮತ್ತಷ್ಟು ಓದು »

22
ಜನ

ಐಶ್ವರ್ಯ ಕಳೆದು ಹೋದಾಗ….!!

ಪವನ್ ಪಾರುಪತ್ತೇದಾರ

ಪುಟ್ಟನಿಗೆ ಕ್ರಿಕೆಟ್ ಎಂದರೆ ಪ್ರಾಣ, ಹರಿದ ಚಡ್ಡಿ ಹಾಕಿಕೊಂಡು ತೂತು ಬನಿಯನ್ನಲ್ಲೇ ಮರದ ತುಂಡೊಂದನ್ನು ಹಿಡಿದು ಆಡಲು ಹೋಗುತಿದ್ದ. ಕೈಗೆ ಸಿಕ್ಕಿದ ಉದ್ದಗಿನ ವಸ್ತುಗಳೆಲ್ಲಾ ಅವನ ಕೈಲಿ ಬ್ಯಾಟ್ ಆಗಿಬಿಡುತಿತ್ತು. ಅದಕ್ಕೆ ಬಹಳಾನೆ ಉದಾಹರಣೆಗಳು. ತೆಂಗಿನ ಮೊಟ್ಟೆ, ಮರದ ರಿಪೀಸು, ಅಷ್ಟೇ ಯಾಕೆ ಅಮ್ಮನ ಮುದ್ದೆ ಕೆಲಕುವ ಕೋಲನ್ನು ಬಿಡುತ್ತಿರಲಿಲ್ಲ. ಪುಟ್ಟನ ಅಪ್ಪ ರೈತ, ಪಾರ್ಟ್ ಟೈಮ್ ಎಲೆಕ್ಟ್ರಿಕ್ ಕೆಲಸ ಸಹ ಮಾಡುತಿದ್ದರು. ಮನೆಲಿ ೨ ಸೀಮೆ ಹಸುಗಳು ಸಹ ಇದ್ದವು, ಅಪ್ಪ ಎಲೆಕ್ಟ್ರಿಕ್ ಕೆಲಸಕ್ಕೆ ಸಾಮಾನ್ಯವಾಗಿ ಸಂಜೆ ಹೋಗುತಿದ್ದರು

ಪುಟ್ಟ ಅಷ್ಟು ಹೊತ್ತಿಗೆ ಶಾಲೆಯಿಂದ ಮನೆಗೆ ಬರುತಿದ್ದ. ಬರುವಾಗಲೇ ಆಟದ ಕನಸು ಹೊತ್ತು ಬರುತಿದ್ದ ಪುಟ್ಟ ಅಪ್ಪ ಲೋ ಮಗ ನಾನು ಕೆಲಸಕ್ಕೆ ಹೋಗ್ತಾ ಇದ್ದೇನೆ ಹಸುಗಳನ್ನ ಚೆನ್ನಾಗಿ ನೋಡ್ಕೋ ಅಂತ ಹೇಳುತಿದ್ದರು. ಅಪ್ಪನ ಮಾತಿಗೆ ಇಲ್ಲ ಎನ್ನದೆ ಮುಖ ಸೊಟ್ಟಗೆ ಮಾಡ್ಕೊಂಡು ಆಯ್ತು ಅಂತಿದ್ದ. ಆಗ ಅಪ್ಪ ಲೋ ಮಗನೆ ನಿಮ್ಮೊಳ್ಳೇದಕ್ಕೆ ಕಣೋ ದುಡೀತಾ ಇರೋದು ಬೇಜಾರು ಮಾಡ್ಕೋಳದೆ ಹೋಗೋ ಅನ್ನೋರು. ಪುಟ್ಟ ಸಹ ಸ್ವಲ್ಪ ಮೂತಿ ಸೊಟ್ಟ ಮಾಡ್ಕೊಂಡು ಹಸು ಮೇಸಕ್ಕೆ ಕೆರೆ ಬಯಲಿಗೆ ಹೋಗ್ತಾ ಇದ್ದ.

ಕೆರೆ ಬಯಲಲ್ಲಿ ಪುಟ್ಟನ ತರಹವೇ ಇನ್ನೂ ಸುಮಾರು ಹುಡುಗರು ಬರುತಿದ್ದರು. ಹಸುಗಳನ್ನು ಬಯಲಲ್ಲಿ ಬಿಟ್ಟು ಎಲ್ಲರೂ ಸೇರಿ ಕಲ್ಲನ್ನು ವಿಕೆಟ್ನಂತೆ ಜೋಡಿಸಿ ತಮ್ಮಲ್ಲೇ ತಂಡಗಳನ್ನಾಗಿ ಮಾಡಿಕೊಂಡು ಸೂರ್ಯ ಬೈದು ಮನೇಗೆ ಹೋಗ್ರೋ ಅನ್ನೋವರೆಗು ಆಡುತಿದ್ದರು. ಪುಟ್ಟ ಒಳ್ಳೆಯ ಬೌಲರ್ ಆಗಿದ್ದ. ಬಹಳ ದೂರದಿಂದ ಓಡಿ ಬರದಿದ್ದರೂ ವೇಗವಾಗಿ ಚೆಂಡು ಎಸೆಯುವ ತಂತ್ರಗಾರಿಕೆ ಅವನಲ್ಲಿತ್ತು. ಆಗಾಗ ಲೆಗ್ ಸ್ಪಿನ್ ಹಾಕುತಿದ್ದ ಇದ್ದಕ್ಕಿದ್ದಂತೆ ಆಫ್ ಸ್ಪಿನ್ ಹಾಕುತಿದ್ದ. ಅವನ ಎಸತದಲ್ಲೇ ವೇಗವಾಗಿ ಸ್ಪಿನ್ ಆಗತಿದ್ದುದ್ದನ್ನು ಆಡಲಾಗದೆ ಬ್ಯಾಟಿಂಗ್ ಮಾಡುತ್ತಿರುವರೆಲ್ಲ ತತ್ತರಿಸುತಿದ್ದರು. ಎಲ್ಲಾ ಆಡಿದ ನಂತರ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಹಸುಗಳನ್ನು ಕರೆದುಕೊಂಡು ಮನೆಗೆ ಮರಳುತಿದ್ದರು. ಮತ್ತಷ್ಟು ಓದು »

21
ಜನ

ಭಗವಾನ್ ರಮಣ ಮಹರ್ಷಿಗಳ ಸಂದೇಶ – 2

ಪ್ರಕಾಶ್ ನರಸಿಂಹಯ್ಯ

ತನ್ನ ತಾನು ಅರಿಯಲು ಬ್ರಹ್ಮಜ್ಞಾನ ಪ್ರಾಪ್ತಿಯಾಗಬೇಕೆ?. ಈ ಬ್ರಹ್ಮಜ್ಞಾನ ಪಡೆಯಲು ಸಾಮಾನ್ಯರಿಗೆ ಸಾಧ್ಯವೇ? ಈ ಪ್ರಶ್ನೆಯನ್ನು ಭಗವಾನ್ ರಮಣ ಮಹರ್ಷಿಗಳಲ್ಲಿ ಒಬ್ಬ ವಿದೇಶಿ ಭಕ್ತ ನಿವೇದಿಸಿಕೊಂಡ.

ಆಗ ಮಹಷಿಗಳು ಕೊಟ್ಟ ಸ್ಪಷ್ಟ ಉತ್ತರ ಏನೆಂದರೆ  “ಬ್ರಹ್ಮಜ್ಞಾನವೆಂಬುದು ಸಂಪಾದಿಸುವ ವಿದ್ಯೆಯಲ್ಲ;        ಬ್ರಹ್ಮಜ್ಞಾನ ಪಡೆಯುವುದರಿಂದ ಸಂತೋಷ ವಾಗಿರಬಹುದೆಂದು  ಆಶಿಸಿದರೆ ಇದೊಂದು ತಪ್ಪು ಗ್ರಹಿಕೆ. ನಿಮ್ಮೊಳಗಿರಬಹುದಾದ ಈ ತಪ್ಪುಗ್ರಹಿಕೆ  ಹೇಗಿದೆಯೆಂದರೆ ಹತ್ತು ಜನ ಧಡ್ಡರು ನದಿದಾಟಿದಂತಿದೆ.”   ಎಂದು  ಒಂದು ಕಥೆಯನ್ನು ಹೇಳಲು ಪ್ರಾರಂಭಿಸಿದರು. ” ಹತ್ತು ಜನ  ಧಡ್ಡರು ನದಿ ದಾಟಲು ಸಿದ್ದರಾದರು. ಎಲ್ಲರೂ ಈಜಿ  ದಡವನ್ನು ಸೇರಿದರು. ದಡ ಸೇರಿದ ನಂತರ ಎಲ್ಲರೂ ಬಂದು ತಲುಪಿರವರೆ, ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕೆಂದು ತಂಡದ ನಾಯಕನು ಎಲ್ಲರ ತಲೆಯನ್ನು ಎಣಿಸಿದ.    ಒಂಬತ್ತು ಜನ ಮಾತ್ರ ಲೆಕ್ಕಕ್ಕೆ ಸಿಕ್ಕಿದರು. ಪುನಃ ಎಣಿಸಿದ, ಆಗಲು ಅಷ್ಟೇ!  ಮತ್ತೊಬ್ಬನನ್ನು ಕರೆದು ಎಲ್ಲರನ್ನು ಸಾಲಾಗಿ  ನಿಲ್ಲಿಸಿ ಎಣಿಸಲು ಹೇಳಿದ. ಆಗಲೂ ಒಂಬತ್ತು ಜನರೇ!  ನಾಯಕನಿಗೆ ಗಾಭರಿ ಆಯ್ತು.  ಏನೂ ತೋಚದೆ ಎಲ್ಲರು ಅಳಲು ಪ್ರಾರಂಭಿಸಿದರು.  ಇವರ ಅಳುವನ್ನು ಕೇಳಿ ದಾರಿಯಲ್ಲಿ ಬರುತ್ತಿದ್ದ ದಾರಿಹೋಕ ಏನೆಂದು ವಿಚಾರಿಸಿದ.  ನಾಯಕ ಎಲ್ಲವನ್ನು ವಿಸ್ತಾರವಾಗಿ ವಿವರಿಸಿದ.  ದಾರಿಹೋಕ ಸುಮ್ಮನೆ ಎಣಿಸಿನೋಡುವಾಗ ಸರಿಯಾಗಿ ಹತ್ತು ಜನರಿದ್ದರು.  ಆಗ ಎಲ್ಲರನ್ನು ಸಾಲಾಗಿ ನಿಲ್ಲಿಸಿ ಎಲ್ಲರ ಬೆನ್ನು ಮೇಲೆ ಒಂದೊಂದು ಪೆಟ್ಟು ಕೊಡುತ್ತ ಎಣಿಸಿದ. ಎಲ್ಲರು ಸೇರಿ ಹತ್ತು ಜನರಾದರೆಂದು ತಿಳಿದಮೇಲೆ ಸಂತೋಷಗೊಂಡ ದಡ್ಡರು ದಾರಿಹೋಕನನ್ನು ಕೊಂಡಾಡಿದರು.  ಹತ್ತೂ ಜನರು ತಮ್ಮ ಪ್ರಯಾಣವನ್ನು ಮುದುವರೆಸಿದರು.”  ಕಥೆಯನ್ನು ಮುಗಿಸಿ ಒಂದು ಕ್ಷಣ ಸುಮ್ಮನಾದರು.

ಮತ್ತಷ್ಟು ಓದು »

20
ಜನ

ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…

– ಭೀಮಸೇನ್ ಪುರೋಹಿತ್

ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.

ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.

ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.

ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..

ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.

ಮತ್ತಷ್ಟು ಓದು »