ಸ್ವಾಮಿ ವಿವೇಕಾನಂದರೊಳಗಿನ ’ಮನುಷ್ಯ’ ಮತ್ತು ಮನುಷ್ಯನೊಳಗಿನ ’ಅವಿವೇಕ’
– ರಾಕೇಶ್ ಶೆಟ್ಟಿ
ಓದು,ಅನುಭವ ಮತ್ತು ವಯಸ್ಸು,ಮನುಷ್ಯನನ್ನ ಮಾಗಿಸುತ್ತದೆ ಅನ್ನುತ್ತಾರೆ,ಆದರೆ ಕೆಲವರ ಪಾಲಿಗೆ ಓದು,ಅನುಭವದ ಜೊತೆಗೆ ವಯಸ್ಸು ಬಾಗಿಸುತ್ತದೆ ದೇಹ ಮತ್ತೆ ತಲೆ ಎರಡನ್ನೂ…! ಅಂತವರ ವಿಷಯ ಪಕ್ಕಕ್ಕಿರಲಿ….ವಿವೇಕಾನಂದರ ವಿಷಯಕ್ಕೆ ಬರೋಣ…
ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸ್ವಾಮಿ ವಿವೇಕಾನಂದರು ಜಪಾನ್ ಮೂಲಕ ಸಾಗುವಾಗ ಅಲ್ಲಿನ ನಗರ ವೀಕ್ಷಣೆಯ ನಂತರ ತಮ್ಮ ಮದರಾಸಿ ಶಿಷ್ಯರಿಗೆ ಬರೆದ ಪತ್ರದ ಸಾಲುಗಳಿವು.ಈ ಪತ್ರದ ಕೆಲವು ಸಾಲುಗಳು ಇಂದಿಗೂ ನಮ್ಮ ನಡುವಿನ ತಲೆ ಕೆಟ್ಟ ಸಮಸ್ಯೆಗಳ ಅರಿವಿದ್ದೆ ಅವರು ಅಂದೇ ಹೇಳಿದ್ದರೇನೋ ಅನ್ನುವಂತಿವೆ.
“ಜಪಾನೀಯರ ಪಾಲಿಗಂತೂ ಭಾರತವೆಂದರೆ ಇನ್ನೂ ಎಲ್ಲ ಶ್ರೇಷ್ಠ-ಉನ್ನತ ವಿಚಾರಗಳ ಸ್ವಪ್ನ ಲೋಕವೇ ಆಗಿದೆ.ಆದರೆ ನೀವು?ನೀವೆಂಥವರು?… ಜೀವನವಿಡೀ ಕಾಡು ಹರಟೆಯಲ್ಲೇ ಮುಳುಗಿರುವವರು.ಕೇವಲ ಹರಟೆ ಮಲ್ಲರು.ಇನ್ನೆಂಥವರು ನೀವು? ಬನ್ನಿ ಇಲ್ಲಿಗೆ.ಈ ಜನರನ್ನು ನೋಡಿ ಬಳಿಕ ನಾಚಿಕೆಯಿಂದ ಮುಖ ಮುಚ್ಚಿ ಕುಳಿತುಕೊಳ್ಳಿ.
ಸಮುದ್ರ ದಾಟಿದರೆ ನಿಮ್ಮ ಜಾತಿ ಕೆಟ್ಟು ಹೋಗುತ್ತದಲ್ಲವೇ…!? ಬುದ್ದಿ ಕೆಟ್ಟ ಅರಳು ಮರಳು ಜನಾಂಗ…! ಶತಶತಮಾನಗಳಿಂದಲೂ ಮೂಢನಂಬಿಕೆ-ಕಂದಾಚಾರಗಳ ಕಂತೆಗಳನ್ನೇ ತಲೆಯ ಮೇಲೆ ಹೊತ್ತು ಕುಳಿತಿರುವವರು…!
ಈ ಆಹಾರವನ್ನು ಮುಟ್ಟಬಹುದೇ? ಆ ಆಹಾರವನ್ನು ಮುಟ್ಟಬಹುದೇ? ಎಂಬ ಬಹಳ ದೊಡ್ಡ ವಿಮರ್ಶೆಯಲ್ಲಿ ನೂರಾರು ವರ್ಷಗಳಿಂದ ಮುಳುಗಿದ್ದೀರಲ್ಲಾ-ಎಂಥ ಮನುಷರು ನೀವೆಲ್ಲ!
ಕನ್ನಡ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಆಸೆಯೇ?
–ಓಂ ಶಿವಪ್ರಕಾಶ್
ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡಕ್ಕೆ ದುಡಿಯುವ ಬಲವಾದ ಆಸೆಯಿರುತ್ತದೆ. ಅಕ್ಷರ ಕಲಿಯುವ ದೆಸೆಯಿಂದ ಹಿಡಿದು, ದುಡಿದು ದೊಡ್ಡವನಾಗುವವರೆಗೂ ಹೇಗೆ ತನ್ನ ಆಸೆಯನ್ನು ಈಡೇರಿಸಿಕೊಳ್ಳುವುದೆಂಬ ಪ್ರಶ್ನೆ ಮನಸ್ಸಿನಲ್ಲಿ ಸುಳಿಯುತ್ತಲೇ ಇರುತ್ತದೆ. ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಂತೂ, ಅದನ್ನು ಬಳಸುವ ಸಾಮಾನ್ಯನಿಂದ ಹಿಡಿದು, ತಂತ್ರಜ್ಞಾನದ ಜೊತೆಗೇ ದಿನದೂಡುವ ತಂತ್ರಜ್ಞನವರೆಗೂ ಎಲ್ಲರಿಗೂ ಕನ್ನಡ ಬಳಸುವ ಮತ್ತು ಬೆಳೆಸುವ ಆಸೆ ಖಂಡಿತ ಇರುತ್ತದೆ. ಅಂತಹ ಆಸೆಗಳನ್ನು ಮತ್ತೆ ಚಿಗುರಿಸಿ, ಮಾಹಿತಿ ತಂತ್ರಜ್ಞಾನದ ಬಳಕೆದಾರನ ದಿನನಿತ್ಯದ ಪ್ರಶ್ನೆಗಳನ್ನು ಉತ್ತರಿಸುತ್ತಾ, ಕನ್ನಡದ ತಾಂತ್ರಿಕ ಬೆಳವಣಿಗೆಗೆ ನಾಂದಿಯಾಗಲು ನಾವು ಇಡಬೇಕಾದ ‘ಹೆಜ್ಜೆಗಳು” ಅನೇಕ.
ದೈನಂದಿನ ಬದುಕಿನಲ್ಲಿ ತಂತ್ರಜ್ಞಾನದ ಮುಖೇನ ಕನ್ನಡದಲ್ಲೇ ವ್ಯವಹರಿಸಬಹುದೇ? ಕನ್ನಡದ ತಾಂತ್ರಿಕ ಬೆಳವಣಿಗೆ ಹೇಗೆ ಸಾಧ್ಯ? ಅದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಬಗೆ ಹೇಗೆ? ಕನ್ನಡ ಭಾಷಾ ತಂತ್ರಜ್ಞಾನ ಬೆಳವಣಿಗೆಯ ತೊಡಕುಗಳ ನಿವಾರಣೆ ಸಾಧ್ಯವೇ? ತಂತ್ರಾಂಶಗಳು ನಡೆಯಬೇಕಿರುವ ಹಾದಿಯ ಕಿರು ಪರಿಚಯ ಎಲ್ಲಿ ಸಿಗಬಹುದು? ಇದಕ್ಕೊಂದು ಸಮುದಾಯವಿದೆಯೇ? ಈ ಸಮುದಾಯ ಅಭಿವೃದ್ದಿಯ ಪರಿಕಲ್ಪನೆ ಏನು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ‘ಹೆಜ್ಜೆ’ ರೂಪಿತಗೊಂಡಿದೆ.
ಮಾಹಿತಿ ತಂತ್ರಜ್ಞಾನದ ವಿವಿಧ ಸ್ತರಗಳಲ್ಲಿ ಕನ್ನಡದ ಬೆಳವಣಿಗೆಗೆ ಬೇಕಾದ ವಿಷಯಗಳ ಬಗ್ಗೆ ಅನುಭವಿ ತಜ್ಞರು, ತಂತ್ರಜ್ಞರು ತಮ್ಮ ಅನುಭವವನ್ನು ಹಂಚಿಕೊಳ್ಳುವುದರ ಮೂಲಕ ಪ್ರಾರಂಭವಾಗುವ ಈ ಕಾರ್ಯಕ್ರಮ, ಮೇಲೆ ಹೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಪಡೆದುಕೊಳ್ಳುವ ‘ಹೆಜ್ಜೆ’ಗಳ ಹಾದಿಯನ್ನು ನಿಮ್ಮ ಮುಂದೆ ತೆರೆಯಲಿದೆ.
ಬನ್ನಿ ನಮ್ಮೊಡನೆ ಜೊತೆಜೊತೆಯಾಗಿ ಹೆಜ್ಜೆ ಹಾಕಿ, ನಿಮ್ಮ ಬರುವಿಕೆಯನ್ನು ಇಂದೇ ಕಾಯ್ದಿರಿಸಿ
* * * * * *
ಚಿತ್ರಕೃಪೆ : hejje.sanchaya.net
ಭಾಷಾ ಆಯಾಮದಲ್ಲಿ “Consumer Protection Act”
ಒಬ್ಬ ಗ್ರಾಹಕನಿಗೆ ಮಾರುಕಟ್ಟೆಯಲ್ಲಿ ಮೋಸವಾಗದಂತೆ ರಕ್ಷಣೆ ಕೊಡಲು “Consumer Protection Act” ಮಸೂದೆಯನ್ನು 1986 ನಲ್ಲಿ ಅಂಗೀಕರಿಸಲಾಯಿತು. ಒಬ್ಬ ಕನ್ನಡಿಗನಿಗೆ ಗ್ರಾಹಕ ಸೇವೆಗಳನ್ನು ಕನ್ನಡದಲ್ಲೇ ಪಡೆಯಲು ಈ ಮಸೂದೆ ಹೇಗೆ ಸಹಕಾರಿಯಾಗಿದೆ ಎಂದು ನೋಡೋಣ.ಸಂಕ್ರಮಣದ ಹಾದಿಯಲ್ಲಿ ನಿಲುಮೆ…
ಎಲ್ಲ ತತ್ವದ ಎಲ್ಲೆ ಮೀರಿ
ನಿರ್ದಿಗಂತವಾಗಿ ಏರಿ
ಓ ನನ್ನ ಚೇತನ ಆಗು ನೀ ಅನಿಕೇತನ…
ರಸ ಋಷಿ ಕುವೆಂಪು ಅವರ ಈ ನುಡಿಗಳೆ ನಮಗೆ ಸ್ಪೂರ್ತಿ. ಯಾವುದೇ ಜಾತಿ, ಮತ, ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ, ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ, ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು. ಅಷ್ಟಕ್ಕೂ ’ಸತ್ಯ’ ಅನ್ನುವುದು ಎಡ-ಬಲ ಪಂಥದ ಆಸ್ತಿಯೇನು ಅಲ್ಲವಲ್ಲ. ಅದು ಈ ಇಬ್ಬರ ನಡುವೆಯು ಸಿಲುಕದೆ ತನ್ನ ಪಾಡಿಗದು ಯಾವುದೋ ಮೂಲೆಯಲ್ಲಿ ನಿರ್ಲಿಪ್ತವಾಗಿರುತ್ತದೆ. ಅದನ್ನ ಹುಡುಕುವ ಮುಗ್ಧ ಆಸೆ ನಮ್ಮದು.ನೊಂದ ಜೀವಗಳಿಗೆ ದನಿಯಾಗುವ ಬಯಕೆ ನಮ್ಮದು… ”
ಅವನು ಕುತ್ತಿಗೆಗೆ ಚಾಕು ಇಟ್ಟ, ದೇಹ ಹೆಣವಾಗಿತ್ತು :ಆಫ್ರೀಕಾದ ಕ್ಯಾಮರೂನ್ ಲೂಟಿ ಪ್ರಸಂಗ !
-ರವಿ ಮೂರ್ನಾಡು
ಅಲ್ಲೆಲ್ಲೋ ಕೊಲೆಯಾದ ವ್ಯಕ್ತಿಯ ಬಂಧುಗಳು ನ್ಯಾಯಕ್ಕಾಗಿ ಗೋಗರೆಯುತ್ತಿದ್ದರು. ಪತ್ರಿಕಾ ಕಚೇರಿಯಲ್ಲಿ ಕುಳಿತು ಅದು ಅರಿವಿಗೆ ಬಂದಿರಲಿಲ್ಲ. ಪುಸ್ತಕವೊಂದಕ್ಕೆ ಆಸ್ಪತ್ರೆಯ ಶವಾಗಾರದಲ್ಲಿ ಮಲಗಿದ ಹೆಣದ ಟಿಪ್ಪಣಿ ಮಾಡುವಾಗಲೂ ಅದು ಗೊತ್ತಿರಲಿಲ್ಲ. ನನ್ನ ಕುತ್ತಿಗೆಗೆ ಚಾಕು ಇಟ್ಟಾಗ ನಾನೇ ಹೆಣವಾಗಿದ್ದೆ. ಆಫ್ರೀಕಾದ ಕ್ಯಾಮರೂನಿನಲ್ಲಿ ಲೂಟಿಗಾರರು ಸುತ್ತುವರಿದು ವಾಚು-ಮೊಬೈಲು-ಹಣಕ್ಕಾಗಿ ತಡಕಾಡಿ ಮುಗಿಸುವವರೆಗೂ ಜೀವ ಅವರ ಕೈಯಲ್ಲೇ ಇತ್ತು. ಸತ್ತ ದೇಹ ನನ್ನಲ್ಲಿತ್ತು. ಕತ್ತಿನಿಂದ ಚಾಕು ತೆಗೆದದ್ದೇ ತಡ, ಸತ್ತವನು ಎದ್ದು ಕುಳಿತಿದ್ದೆ. ..!
ಇಲ್ಲಿನ ಡ್ವಾಲಾ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2007 ರಲ್ಲಿ ಕಾಲಿಟ್ಟು ಪಾಸ್ಪೋರ್ಟಿಗೆ ಮುದ್ರೆಯೊತ್ತಿ ಲಗ್ಗೇಜು ವಿಲೇವಾರಿಗೆ ಬರುವಾಗಲೇ ಈರ್ವರು ಹಿಂದೆಯೇ ಬಂದರು. “ ನಾನು ಕಸ್ಟಂ ಅಧಿಕಾರಿ, ನಿಮ್ಮ ಬ್ಯಾಗ್ ಚೆಕ್ ಮಾಡಬೇಕು, ಸ್ವಲ್ಪ ಈ ಕಡೆ ಬನ್ನಿ” ಅಂದರು. ಅರೆ..! ಅಧಿಕಾರಿಯಾಗಿದ್ದರೆ ಮರೆಗೆ ಕರೆಯುವ ಆಲೋಚನೆ ಏನು ಅಂತ ಯೋಚಿಸಿದ್ದೆ. ಇಲ್ಲಿನ ಐದು ಸಾವಿರ ಕ್ಯಾಮರೂನ್ ಫ್ರಾಂಕ್ ಕೊಟ್ಟರೆ ತಕರಾರಿಲ್ಲ ಅಂದರು. ಅಲ್ಲಿಯೇ ನಮ್ಮ ಕಂಪೆನಿಯ ವಾರೀಸುದಾರರು ಮಧ್ಯೆ ಬಂದಿದ್ದರಿಂದ ಆ ಪೀಡನೆಯಿಂದ ಪಾರಾದೆ. ಅಮಾನುಷ ಕೃತ್ಯಗಳ ಹೆಣಗಳ ವಾಸನೆ ನನ್ನ ಮೂಗಿಗೆ ಆಗಲೇ ಬಡಿದಿದೆ. ಹಣ ಕೊಟ್ಟರೆ ಕಾನೂನುಗಳು ಇಲ್ಲಿ ನಮ್ಮ ಕೈಗೆ ಬರುತ್ತವೆ. ಹಾಗಂತ ಹಣಕ್ಕೆ ಬಾಯ್ಬಿಟ್ಟ ನಡೆದಾಡುವ ಹೆಣಗಳೇ ಇಲ್ಲಿನ ಮನುಷ್ಯರು. ಭಾರತದಲ್ಲಿ ಇಂತಹದ್ದು ಬೇಕಾದಷ್ಟು ನಡೆಯುತ್ತವೆ. ಅದನ್ನು ಪ್ರಶ್ನಿಸುವ ಜನರಿದ್ದಾರೆ ಅನ್ನುವ ಸಮಾಧಾನ. ಇಲ್ಲಿ ಕೇಳುವವರು, ಕೊಡುವವರು ಎಲ್ಲರೂ ಕಳ್ಳರೇ ಅಂದಾಗ ಸತ್ಯಕ್ಕೂ ಹಲ್ಲು ಕಿರಿಯಲು ನಾಚಿಕೆ…!
ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು (ವ್ಯಾಲ್ಯೂಸ್) ಕಲಿಸುವುದು ಹೇಗೆ?
-ರಾವ್ ಎವಿಜಿ
ಮೌಲ್ಯಗಳು ಎಂದರೇನು ಎಂಬ ಪ್ರಶ್ನೆಗೆ ‘ನಿರ್ದಿಷ್ಟ ವಸ್ತು, ಕ್ರಿಯೆ ಮತ್ತು ಸನ್ನಿವೇಶಗಳಿಗೆ ವ್ಯಕ್ತಿಗಳು ನೀಡುವ ಬೆಲೆಗೆ ಸಂಬಂಧಿಸಿದ ಅದ್ವಿತೀಯ ಶಾಬ್ದಿಕ ಪರಿಕಲ್ಪನೆಗಳು’ ಎಂಬ ಸೈದ್ಧಾಂತಿಕ ಉತ್ತರ ನೀಡಬಹುದಾದರೂ ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ಸರ್ವಸಮ್ಮತ ಉತ್ತರ ನೀಡುವುದು ಕಷ್ಟ. ಕೆಲವು ವಿಶೇಷಜ್ಞರು ವ್ಯಕ್ತಿಯ ಮನೋಧರ್ಮಗಳ (ಆಟಿಟ್ಯೂಡ್) ಸಂಘಟನೆಯನ್ನು ಮೌಲ್ಯ ಎಂದು ಉಲ್ಲೇಖಿಸುವುದೂ ಉಂಟು. ಅದೇನೇ ಇರಲಿ ವರ್ತನೆಯ ನೈತಿಕತೆಗೆ ಸಂಬಂಧಿಸಿದಂತೆ ಯಾವುದು ಸರಿ ಯಾವುದು ತಪ್ಪು, ಜೀವನದಲ್ಲಿ ಯಾವುದಕ್ಕೆ ಎಷ್ಟು ಪ್ರಾಮುಖ್ಯ ನೀಡಬೇಕು, ಜೀವನದ ಗುರಿ ಏನಾಗಿರಬೇಕು ಮುಂತಾದವನ್ನು ನಿರ್ಧರಿಸುವುದರಲ್ಲಿ ನಾವು ಒಪ್ಪಿಕೊಂಡಿರುವ ಮೌಲ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂಬುದರಲ್ಲಿ ಸಂಶಯವಿಲ್ಲ. ಆದರೂ ಬಹುತೇಕ ಸನ್ನಿವೇಶಗಳಲ್ಲಿ ನಾವು ಕೈಗೊಳ್ಳುವ ಮೌಲ್ಯಾಧಾರಿತ ತೀರ್ಮಾನಗಳು ವ್ಯಕ್ತಿನಿಷ್ಠವೂ ಸಾಪೇಕ್ಷವೂ ಆಗಿರುತ್ತವೆ. (ಅ) ನಿರ್ದಿಷ್ಟ ಅಂಶಕ್ಕೆ ನಾವು ಎಷ್ಟು ಬೆಲೆ ಕೊಡುತ್ತೇವೆ ಎಂಬುದನ್ನು ಸೂಚಿಸುವ ಪರಿಮಾಣಾತ್ಮಕ ಆಯಾಮ, (ಆ) ನಿರ್ದಿಷ್ಟ ಮೌಲ್ಯಕ್ಕೆ ನಾವು ಎಷ್ಟು ಬದ್ಧರಾಗಿರುತ್ತೇವೆ ಎಂಬುದನ್ನು ಸೂಚಿಸುವ ಗುಣಾತ್ಮಕ ಆಯಾಮ ಮತ್ತು (ಇ) ನಮ್ಮಲ್ಲಿ ಅಂತಸ್ಥವಾಗಿರುವ ಮೌಲ್ಯಗಳ ನಡುವಿನ ಸಂಬಂಧವನ್ನು ಸೂಚಿಸುವ ಅಂತರ್- ಸಂಬಂಧ ಆಯಾಮ – ಈ ಮೂರು ಆಯಾಮಗಳು ನಮ್ಮಲ್ಲಿ ಅಂತಸ್ಥವಾಗಿರುವ ಮೌಲ್ಯಗಳಿಗೆ ಇರುತ್ತವೆ.
ಸಂಸ್ಕೃತಿ ಸಂಕಥನ – 18 – ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ
-ರಮಾನಂದ ಐನಕೈ
ಇತ್ತೀಚೆಗೆ ಮಂಚೀಕೇರಿಯಲ್ಲಿ ಬಾಲಗಂಗಾಧರರ ಸಂವಾದ ಕಾರ್ಯಕ್ರಮ ಏರ್ಪಡಿಸ ಲಾಗಿತ್ತು. ಮುಂಚೀಕೇರಿಯ ಸಂಹತಿ ಟ್ರಸ್ಟ್ ಹಾಗೂ ಶಿವಮೊಗ್ಗ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಹತಿ ಗೆಳೆಯರು ತುಂಬಾ ಅಚ್ಚುಕಟ್ಟಾಗಿ ಸಂಘಟಿಸಿದ್ದರು. ನೂರಕ್ಕೂ ಹೆಚ್ಚು ಜನ ಸಂವಾದದಲ್ಲಿ ಪಾಲ್ಗೊಂಡು ಪ್ರಶ್ನೆಗಳ ಸುರಿಮಳೆ ಗೈದರು. ಬೇರೆ ಬೇರೆ ಪ್ರಶ್ನೆಗಳಿಗೆ ಬಾಲ ಗಂಗಾಧರರು ನೀಡಿದ ಉತ್ತರಗಳನ್ನು ಒಂದು ಚೌಕಟ್ಟಿನಲ್ಲಿ ಹಿಡಿದಿಡುವ ಪ್ರಯತ್ನ ಇಲ್ಲಿದೆ.
ಭಾರತ ತನ್ನ ಇತಿಹಾಸದಲ್ಲಿ ಎರಡು ವಸಹಾತು ಶಾಹಿಗಳನ್ನು ಕಂಡಿದೆ. ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ. ಇವೆರಡೂ ಕೂಡಾ ಸೆಮೆಟಿಕ್ ರಿಲಿಜನ್ ಹೊಂದಿದ ಸಂಸ್ಕೃತಿ ಯಿಂದ ಬಂದಂತಹವುಗಳು. ಇವರು ಪ್ರಪಂಚದ ಎಲ್ಲ ಸಂಸ್ಕೃತಿಗಳಲ್ಲಿ ರಿಲಿಜನ್ ಇದೆ ಎಂದು ನಂಬಿ ದವರು, ಭಾರತಕ್ಕೆ ಬಂದಾಗ ಇಲ್ಲಿನ ಸಂಸ್ಕೃತಿ ಯಲ್ಲೂ ರಿಲಿಜನ್ ಹುಡುಕಲು ಪ್ರಾರಂಭಿಸಿದರು. ಅದು ಅವರಿಗೆ ಸುಲಭಕ್ಕೆ ಸಾಧ್ಯವಾಗಲಿಲ್ಲ. ಸೆಮೆಟಿಕ್ ರಿಲಿಜನ್ಗಳ ಕನ್ನಡಕ ಹಾಕಿಕೊಂಡು ಹುಡುಕಿದರು. ಕೊನೆಗೂ ‘ಹಿಂದೂಯಿಸಂ’ ಎಂಬ ರಿಲಿಜನ್ನನ್ನು ಕಂಡುಹಿಡಿದೇಬಿಟ್ಟರು. ಹಿಂದೂ ರಿಲಿಜನ್ ಅಂದರೆ ಪಾಶ್ಚಾತ್ಯರಿಗೆ ಮಾತ್ರ ಅರ್ಥ ವಾಗುತ್ತದೆ. ಭಾರತೀಯರಿಗೆ ಅರ್ಥವಾಗುವು ದಿಲ್ಲ. ಏಕೆಂದರೆ ಭಾರತದ ಹೆಚ್ಚಿನ ಜನರಿಗೆ ಹಿಂದೂ ರಿಲಿಜನ್ನಿನ ಅನುಭವವೇ ಆಗುವುದಿಲ್ಲ. ರಿಲಿಜ ನ್ನಿನ ಯಾವುದೇ ಸರಳ ರೇಖೆಗಳು ನಮ್ಮಲ್ಲಿಲ್ಲ. ದಿನನಿತ್ಯ ನಮ್ಮ ನಡುವೆ ಕಾಣುವ ಗೊಂದಲಗಳು ರಿಲಿಜನ್ ಹಾಗೂ ಸಂಸ್ಕೃತಿಯ ನಡುವಿನ ಹೊಂದಾಣಿಕೆ ಆಗದ ತಿಕ್ಕಾಟಗಳು, ಆದರೆ ಇದು ವರೆಗೆ ಯಾವ ಭಾರತೀ ಯನೂ ಈ ಕುರಿತು ಸಂಶೋಧನೆ ನಡೆಸದೇ ಇದ್ದದ್ದು ಆಶ್ಚರ್ಯದ ವಿಷಯ. ಪಾಶ್ಚಿಮಾತ್ಯರು ಭಾರತದ ಕುರಿತಾದ ತಮ್ಮ ಅನುಭವಗಳನ್ನು ಹೇಳಿ ಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಭಾರತೀಯರು ತಮ್ಮ ನಿಜ ಎಂದು ನಂಬಿಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಈಗ ನಮ್ಮ ಅನುಭವಗಳೆಂಬಂತೆ ಪುನರಾವರ್ತಿಸುತ್ತಿದ್ದೇವೆ. ಇದನ್ನೇ ವಸಾಹತು ಪ್ರಜ್ಞೆ ಅನ್ನುವುದು. ಬಾಲ ಗಂಗಾಧರರು ಈ ಕುರಿತು ಸಂಶೋ ಧನೆ ನಡೆಸುತ್ತಿರುವ ದೇಶದ ಹಾಗೂ ಪ್ರಪಂಚದ ಪ್ರಪ್ರಥಮ ಚಿಂತಕರು.
‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!
– ಭೀಮಸೇನ್ ಪುರೋಹಿತ್
‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..
ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..
ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..
ಅಮ್ಮ ಮಾಡಿದ ಕೇಕು
– ಅಮಿತ ರವಿಕಿರಣ
ಜಗತ್ತಿಗೆಲ್ಲ ಜನೆವರಿ ೧ ಹೊಸ ವರ್ಷದ ಆರಂಭ ಆದ್ರೆ..ನನಗೆ ಮಾತ್ರ ಜನೆವರಿ ೩ ಹೊಸ ವರ್ಷ ಅದ್ಯಾಕೆ ಅನ್ನೋ ಪ್ರಶ್ನೆ ಹುಟ್ಟೋ ಮೊದಲೇ ಉತ್ತರ ಹೇಳೋ ಕಾತರ ನನಗೆ…ಈ ದಿನವೇ ನನಗೆ ಜಗತ್ತಿನ ಅತ್ಯುನ್ನತ ಹುದ್ದೆ ಸಿಕ್ಕಿದ್ದು,ಹೊಸ ಬದುಕಿಗೆ ಹೊಸ ಜೀವನ ಶೈಲಿಗೆ ,ಹೊಸ ಪದವಿಗೆ ನನ್ನ ಪರಿಚಯ ಆದದ್ದು..ನಾ ಅಮ್ಮ ಎಂಬ ಟೈಟಲ್ ಪಡೆದಿದ್ದು…ಬದುಕಿನ ಪ್ರತಿ ಬದಲಾವಣೆಯನ್ನು ಮನಸ್ಪೂರ್ತಿ ಸ್ವಾಗತಿಸಿ ನೋವನ್ನು ಕೂಡ ಒಂದು ಖುಷಿಯಿಂದ ಅನುಭವಿಸುವ ನನಗೆ ಇದು ಅವರ್ಣನೀಯ ಅನುಭವ.ಆಸ್ಪತ್ರೆಗೆ ದಾಖಲಾಗಿ,ಹೊಟ್ಟೆನೋವ ಭರದಲ್ಲಿ ನನ್ನ ತಲೆಯಲ್ಲಿ ಅಚ್ಚಾಗಿದ್ದ ಅಷ್ಟು ಹಾಡುಗಳನ್ನು ಹಾಡಿ ಬರಿದು ಮಾಡಿ ಸಂಕಟದಲ್ಲೂ ಸಂತಸ ವನ್ನು ತುಂಬಿ ಕೊಟ್ಟ ರಾತ್ರಿಯದು…ಮುಂಜಾನೆ ಮೊದಲ ಪ್ರಹರಕ್ಕೆ ಪ್ರಥಮ್ ನನ್ನ ಪಕ್ಕ ದಲ್ಲಿ .ಹಾಯಾಗಿ ನಿದ್ರಿಸುತ್ತಿದ್ದ. ಇದೆಲ್ಲ ಮೊನ್ನೆ ಮೊನ್ನೆಯಂತಿದೆ ಅದಾಗಲೇ ಪ್ರಥಮನಿಗೆ ೫ ತುಂಬಿತು .ಕಳೆದ ನಾಲ್ಕು ವರ್ಷದ ಜನುಮದಿನದ ಆಚರಣೆಯನ್ನು ನಮಗಿಷ್ಟ ಬಂದಂತೆ ಆಚರಿಸಿದ್ದು ಆಯ್ತು. ಇಗ ಅವನು ತನ್ನ ಅನಿಸಿಕೆ ಇಚ್ಹೆ ವ್ಯಕ್ತ ಪಡಿಸಲು ಶುರು ಮಾಡಿದಾನೆ ಅದಕ್ಕೆ ಅವನನ್ನೇ ಕೇಳಿದೆ ಹೇಗೆ ಆಚರಿಸೋಣ ನಿನ್ನ ಬರ್ತ್ ಡೇ???ಯಾರನ್ನ ಕರಿಬೇಕು ??ನಿನಗೇನು ಗಿಫ್ಟ್ ಬೇಕು??







