ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

2
ನವೆಂ

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

2
ನವೆಂ

ಅಶ್ಫಾಕುಲ್ಲಾ ಖಾನ್” — ದೇಶಭಕ್ತಿಯ ಮೂರ್ತರೂಪ..

– ಭೀಮಸೇನ್ ಪುರೋಹಿತ್

ಆಗಸ್ಟ್ 9 – 1925.. ಅವತ್ತಿನ ರಾತ್ರಿ ಭಾರತದ ಕ್ರಾಂತಿಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾದ ದಿನ.. ಇನ್ನೂ ಮೀಸೆ ಚಿಗುರದ ನವತರುಣರು ಆಂಗ್ಲಶಾಹಿಯೆದುರಿಗೆ ತೊಡೆತಟ್ಟಿ ನಿಂತ ದಿನ ಅದು.. ಅದೇ “ಕಾಕೋರಿ” ಪ್ರಕರಣ..

ಆ ಹೊತ್ತಿಗಾಗಲೇ, ಅಮೇರಿಕಾದ “ಗದರ್” ಪಾರ್ಟಿಯ ಪ್ರಖರತೆ ಕಮ್ಮಿಯಾಗಿತ್ತು. ಭಾರತದಲ್ಲಿ, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಗದರ್ ಪಾರ್ಟಿಯ ಹಳೆಯ ಕೆಲವು ನಾಯಕರು ಸೇರಿ “ಹಿಂದುಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್” ಎಂಬ ಕ್ರಾಂತಿಸಮಿತಿಯನ್ನು ಶುರು ಮಾಡಿದ್ರು. ಗದರ್ ಪಾರ್ಟಿಯ ಪತನದ ನಂತರ  ಕ್ರಾಂತಿ ತಣ್ಣಗಾಗಿದೆ ಅಂತ, ಆಂಗ್ಲರು ಈ  HRA ಅನ್ನು  ಉಪೇಕ್ಷಿಸಿದ್ದರು.. ಅವರ ಆ ಅಲಕ್ಸ್ಯವೇ ಕ್ರಾಂತಿಕಾರಿಗಳಿಗೆ ವಾರವಾಯಿತು..

ರಾಮಪ್ರಸಾದ್ ಮತ್ತು ಅಶ್ಫಾಕ್ ಇಬ್ರೂ ಜೀವಕ್ಕೆ ಜೀವ ಕೊಡೊ ಗೆಳೆಯರು.. ಅವರ ಸ್ನೇಹದ ನಡುವೆ ಧರ್ಮ ಯಾವತ್ತೂ ಅಡ್ಡಿ ಬರ್ಲಿಲ್ಲ.. ಹಾಗೆ ನೋಡಿದರೆ, ರಾಮ್, ಪಕ್ಕಾ ಅರ್ಯಸಮಾಜದ ಹಿಂದೂವಾದಿ. ಆದ್ರೆ ಅವನು ಅಶ್ಫಾಕ್ ನನ್ನು ಅಪಾರವಾಗಿ ಗೌರವಿಸುತ್ತಿದ್ದ. ಹಾಗೆಯೇ ಅಶ್ಫಾಕ್ ಕೂಡ ಯಾವಾಗಲೂ “ನನ್ನ ರಾಮ” ಅಂತಾನೆ ಜಪಿಸುತ್ತಿದ್ದ.. ಅಶ್ಫಾಕ್  ಉತ್ತರಪ್ರದೇಶದ ಷಹಜಹಾನ್ ಪುರದವನು. ಅಶ್ಫಾಕ್ ಒಬ್ಬ ಮಹಾನ್ ಉರ್ದು ಕವಿ ಕೂಡ ಆಗಿದ್ದ.. ಅತ್ಯಂತ ಉದ್ಬೋಧಕ ದೇಶಭಕ್ತಿ ಗೀತೆಗಳನ್ನು ಬರೆದ ಸಾಹಿತಿ ಅವನು.. ಅದೇ ಅಶ್ಫಾಕ್ ಬಿಸ್ಮಿಲ್ಲನ ಸಹವಾಸಕ್ಕೆ ಬಂದೊಡನೆ, ಅವನ ಪಟ್ಟಶಿಷ್ಯನಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದ..

ಮತ್ತಷ್ಟು ಓದು »

2
ನವೆಂ

ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು………..

– ಸುಬ್ರಮಣ್ಯ ಮಾಚಿಕೊಪ್ಪ

ಭ್ರಷ್ಟಾಚಾರದ ವಿರುದ್ದ ಹೋರಾಡಲು ಒಂದು ಹರಿತ ಆಯುಧಕ್ಕಾಗಿ ಉಪವಾಸ ಸತ್ಯಾಗ್ರಹಗಳೆಲ್ಲಾ ನಡೆದುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಇನ್ನು ಸಿದ್ದವಾಗಿ ಬರಲಿರುವ ಲೋಕಪಾಲ್ ಮಸೂದೆ ಎಷ್ಟು ಹರಿತವೋ ಎಂಬುದನ್ನು ಕಾಲವೇ ಹೇಳಬೇಕು. ಭ್ರಷ್ಟಾಚಾರದ ವಿರುದ್ದ ಹೋರಾಡಲು ಈಗಾಗಲೇ ಒಂದು (ಸಾಕಷ್ಟು ಹರಿತವಾದ) ಆಯುದವಿದೆಯೆಂದು ಎಷ್ಟು ಜನಕ್ಕೆ ಗೊತ್ತು?? ಆ ಆಯುದವನ್ನು ಉಪಯೋಗಿಸಿ“ಅಲ್ಲಿ ಎನು ನಡಿಯುತ್ತಿದೆ?” ಎಂದು ತಿಳಿದುಕೊಂಡು ಭ್ರಷ್ಟಾಚಾರದ ಆಳವನ್ನು ಕಾಣಬಹುದು ಎಂಬುದು ಎಷ್ಟು ಜನರಿಗೆ ಗೊತ್ತಿದೆ?? ಆ ಆಯುದದ ಹೆಸರು ನಿಮಗೆಲ್ಲಾ ಎಲ್ಲೋ ಕೇಳಿ ಗೊತ್ತಿರಬಹುದು. ನಿಮ್ಮಲ್ಲಿ ಕೆಲವರಾದರೂ ಅದನ್ನು ಉಪಯೋಗಿಸಿಯೂ ಉಪಯೋಗಿಸಿರಬಹುದು. (ಕಾಮೆಂಟ್ ನಲ್ಲಿ ನಿಮ್ಮ ಅನುಭವ ಹೇಳಬಹುದು).ಅದೇ ಮಾಹಿತಿ ಹಕ್ಕು ಎಂಬ ಕಾನೂನು!!! ಈ ಲೇಖನ ಓದಿದ ಮೇಲೆ ಒಂದಿಬ್ಬರು ಇದನ್ನು ಉಪಯೋಗಿಸಿ“ಅಲ್ಲಿ ಎನು ನಡಿಯುತ್ತಿದೆ” ಎಂದು ತಿಳಿದುಕೊಂಡು ಸಂಬಂದಪಟ್ಟವರಿಗೆ ದೂರು ಕೊಟ್ಟರೆ ಕಾಮಗಾರಿಗಳು ಸ್ವಲ್ಪವಾದರೂ ಸರಿಯಾಗುತ್ತದೆ ಎಂಬುದೇ ನನ್ನ ಆಶಯ ಹಾಗೂ ನನ್ನ ಅನುಭವ. (ಹಾಗೆಲ್ಲಾ ಕಾಟಾಚಾರಕ್ಕೆ ಏನೇನೋ ಮಾಡದಂತೆ ಸ್ವಲ್ಪವಾದರೂ ಸರಿಯಾಗಿ ಕೆಲಸಮಾಡುವಂತೆ ಚುರುಕು ಮುಟ್ಟಿಸುತ್ತದೆ).ನಮ್ಮೂರ ರಸ್ತೆಯೊಂದರ ಕಳಪೆ ಡಾಮರ್ ಕಾಮಗಾರಿ ನಡೆದಾಗ – ಈ ಮಾಹಿತಿ ಹಕ್ಕು ಕಾನೂನು ಉಪಯೋಗಿಸಿ – ಕಾಮಗಾರಿಯ ಎಸ್ಟಿಮೆಶನ್ ತರಿಸಿ – ದೂರು ಕೊಡುತ್ತೇವೆಂದಾಗ – ಜಿಲ್ಲಾಪಂಚಾಯತ್ ಇಂಜೀನಿಯರ್ ಮತ್ತು ರಸ್ತೆ ಕಂಟ್ರಾಕ್ಟರ್ ನಮ್ಮ ಮನೆಯವರೆಗೂ ಪಾದಬೆಳೆಸಿ – ತಪ್ಪಾಗಿದ್ದನ್ನು ಒಪ್ಪಿಕೊಂಡು – ರಸ್ತೆಗೆ ಹೊಸದಾಗಿ ಜಲ್ಲಿ ಟಾರಿನ ಒಂದು ಪದರ ಹಾಕಿದ ವಿಷಯವೇ ಈ ಬ್ಲಾಗಿನ ಬರಹ. ಮತ್ತಷ್ಟು ಓದು »

1
ನವೆಂ

ಸೊರಗುತ್ತಿರುವ ಕನ್ನಡ ನುಡಿ; ಕೊರಗುತ್ತಿರುವ ಕನ್ನಡಿಗರು

-ರಶ್ಮಿ ಕಾಸರಗೋಡು

ರಾಜ್ಯೋತ್ಸವ…ರಾಜ್ಯದೆಲ್ಲೆಡೆ ಸಂಭ್ರಮದ ವಾತಾವರಣ. ‘ಜೈ ಕನ್ನಡಾಂಬೆ’ ಎನ್ನುವ ಘೋಷಣೆ, ಕನ್ನಡದ ಹೋರಾಟಗಾರರ ಭಾಷಣಗಳು, ಕನ್ನಡದ ಹಿರಿಯ ಕವಿಗಳ ಕಟೌಟ್  ಗಳಿಗೆ ಮಾಲಾರ್ಪಣೆ, ಅದ್ದೂರಿ ಆರ್ಕೆಸ್ಟ್ರಾಗಳು, ‘ಕನ್ನಡ ಉಳಿಸಿ, ಬೆಳೆಸಿ’ಎನ್ನುವ ಕೂಗುಗಳು, ಒಂದಷ್ಟು ಯೋಜನೆಗಳು , ಭರವಸೆಗಳು, ರಾಜ್ಯೋತ್ಸವ ಪ್ರಶಸ್ತಿಗಳು..ಹೀಗೆ ನವಂಬರ್ ತಿಂಗಳಿಡೀ ರಾಜ್ಯೋತ್ಸವ ಆಚರಣೆಯಲ್ಲಿ ಕಳೆದು ಹೋಗುತ್ತದೆ. ಮುಂದಿನ ವರ್ಷ ನವಂಬರ್ ತಿಂಗಳು ಬಂದಾಗ ಇದೇ ಆಚರಣೆ ಪುನರಾವತಿ೯ಸುತ್ತದೆ.

ಪ್ರತೀ ಸಲ ಕರ್ನಾಟಕ ರಾಜ್ಯೋತ್ಸವ ಆಚರಣೆಯ ವೇಳೆ ಕೇಳಿ ಬರುವ ಒಂದೇ ಕೂಗು “ಕನ್ನಡ ಭಾಷೆಯನ್ನು ಉಳಿಸಿ!” ಕರ್ನಾಟಕದ ಮಾತೃಭಾಷೆಯಾಗಿರುವ ಕನ್ನಡವನ್ನು ಕರ್ನಾಟಕದಲ್ಲಿ ಉಳಿಸಿ ಎಂದು ಹೋರಾಟ ಮಾಡಬೇಕಾದ ಪರಿಸ್ಥಿತಿ ಕನ್ನಡಿಗರದ್ದು.

ಹಾಗಾದರೆ ನಮ್ಮ ಭಾಷೆಯನ್ನು ಸಾಯಿಸುತ್ತಿರುವವರು ಯಾರು? ಜಾಗತೀಕರಣ, ವಾಣಿಜ್ಯೀಕರಣದಿಂದ ಪರಭಾಷೆಗಳು ಕನ್ನಡದ ಮೇಲೆ ಪ್ರಭಾವ ಬೀರಿರಬಹುದು. ಆದರೆ ಪ್ರಾಚೀನ ಹಾಗೂ ಸಮೃದ್ದ ವಾದ  ಕನ್ನಡ ನುಡಿ ಇಷ್ಟೊಂದು ಕ್ಷೀಣವಾಗಲು ಕಾರಣಕತ೯ರು ನಾವೇ ಅಲ್ಲವೇ?ಎಂಬುದು ಚಿಂತಿಸಬೇಕಾದ ಸಂಗತಿ.

ಭಾಷೆ ಎನ್ನುವುದು ಸಂವಹನ ಮಾಧ್ಯಮ ಮಾತ್ರವಾಗಿರದೆ ಅದು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ.  ಅಂತಹ ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಕನ್ನಡ ನುಡಿ ಇಂದು ಕರ್ನಾಟಕದಲ್ಲಿ ಸೊರಗಿಹೋಗುತ್ತಿದೆ. ಒಂದು ಕಾಲದಲ್ಲಿ “ಕನ್ನಡವೇ ನಮ್ಮಮ್ಮ ಅವಳಿಗೆ ಕೈ ಮುಗಿಯಮ್ಮ” ಎಂದು ಹಾಡಿದ್ದ ನಾವು ಇಂದು Sorry, I can’t speak kannada  ಅನ್ನುತ್ತೇವೆ.

ಪರಭಾಷಾ ವ್ಯಾಮೋಹದಲ್ಲಿ  ಕನ್ನಡ  ಬಡವಾಯಿತೆ?

ಹೌದು. ದೂರದ ಬೆಟ್ಟ ಕಣ್ಣಿಗೆ ನುಣ್ಣನೆ ಅನ್ನುವ ಹಾಗೆ ವಿದೇಶೀ ಸಂಸ್ಕೃತಿಯ ಅನುಕರಣೆ ನಮ್ಮ ಭಾಷೆಯನ್ನೂ ಬಲಿತೆಗೆದುಕೊಂಡಿದೆ. ಭೌಗೋಳಿಕ ಪ್ರದೇಶಕ್ಕನುಸಾರವಾಗಿ ನಮ್ಮ ಭಾಷೆಯ ಮೇಲೆ ಇತರ ಸಂಸ್ಕೃತಿ ಹಾಗೂ ಭಾಷೆಯ ಪ್ರಭಾವವಿದ್ದೇ ಇರುತ್ತದೆ. ಅದು ಮುಂದೆಯೂ ಇರುತ್ತದೆ. ಹಾಗಂತ ನಮ್ಮ ಮಾತೃಭಾಷೆಯನ್ನು ಕಡೆಗಣಿಸುವುದು ಎಷ್ಟು ಸರಿ? ಕಾಲ ಕಳೆದಂತೆ ಭಾಷೆ ಪ್ರಬುದ್ದತೆಯನ್ನು ಗಳಿಸುತ್ತದೆ ಎನ್ನುವುದಾದರೆ ಕನ್ನಡ ಭಾಷೆಗೆ ಈ ಸ್ಥಿತಿ ಯಾಕೆ ಬಂತು? ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಯಾಕೆ?  ಅಂದ ಹಾಗೆ ಕನ್ನಡ ಅನ್ನ ಕೊಡದ ಭಾಷೆಯೆ?  ಹೀಗೆ ಪ್ರಶ್ನೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

ಮತ್ತಷ್ಟು ಓದು »

31
ಆಕ್ಟೋ

ಹಾಲೋವಿನ್

– ಅಮಿತಾ ರವಿಕಿರಣ

ಪ್ರತಿ ಸೋಮವಾರ..ಮಗನ ಶಾಲೆಯಲ್ಲಿ..ವಾರಪೂರ್ತಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮ,ನಾವು ಕಲಿಸಬೇಕದ್ದು..ಅವರಿಂದ ಹೇಳಿಸುವುದು…ಮತ್ತಿತರ ವಿಷಯಗಳ ಬಗ್ಗೆ ಒಂದು ನ್ಯೂಸ್ ಲೆಟರ್ ಕೊಡಲಾಗುತ್ತೆ ..ಈ ಬಾರಿಯ ಲೆಟರ್ ನಲ್ಲಿದ್ದಿದ್ದು. ಹೆಲ್ಲೋವಿನ (holloween)ಎಂಬ ಆಚರಣೆ..ಮತ್ತು ಅದರ ಕುರಿತಾದ ಚಟುವಟಿಕೆಗಳ ಬಗ್ಗೆ..,,ಹೋದ ವರ್ಷ ನಾನೂ ಹಲ್ಲೋವಿನ್ ದಿನವೇ ಬಂದಿದ್ದೆ..ಆದ್ದರಿಂದ ಅದರ ಆಚರಣೆ..ಅದರ ಕುರಿತಾದ ಯಾವುದೇ ವಿಷಯ ನನಗೆ ಗೊತ್ತಿರಲಿಲ್ಲ..ಎಂ ಎ ಮೊದಲ ವರ್ಷದಲ್ಲಿ ಜಾಗತಿಕ ಜಾನಪದ ಇತಿಹಾಸ ಓದುವಾಗ ಅಲ್ಲಿ ಈ ಶಬ್ದ ಕೇಳಿದ ನೆನಪು ಬಿಟ್ಟರೆ ..ಇದರ ಬಗ್ಗೆ..ಬೇರೆನು ಗೊತ್ತಿರದ ನಾನು..ಬರುವ ಶುಕ್ರವಾರ..ಹಲೋವಿನ್ ಫ್ಯಾನ್ಸಿ ಡ್ರೆಸ್ ಪಾರ್ಟಿ ಇದೆ ಮಗುವನ್ನು ಸಿದ್ದ ಮಾಡಿ ಕಳಿಸಿ ಎಂದಾಗ..ಏನು ಮಾಡೋದು ಎಂಬ ಗೊಂದಲದಲ್ಲಿದ್ದೆ..ಮಗನ ಟೀಚರ್ ಗೆ ಕೇಳಿದಾಗ..ಯಾವುದೇ ಆದೀತು..ರಾಕ್ಷಸ ,ಮಾಟಗಾರ,ಸ್ಕೆಲಿಟನ್,..ಆಕೆಯ ಲಿಸ್ಟ್ ಮುಂದುವರೆದಿತ್ತು..ನನಗೆ ತಲೆ ಚಕ್ರ ಬರುತಿತ್ತು..ಮಕ್ಕಳಿಗೆ ಸಿಂಗಾರ ಮದೊದೆಂದರೆ ನನಗೆ ಮೊದಲಿಂದಲೂ..ಅದೇನೋ ವೀಪರೀತ  ಆಸಕ್ತಿ..ಓಣಿಯ ಮಕ್ಕಳು ಬಂಧುಗಳ  ಮಕ್ಕಳು..ಮನೇ  ಪಕ್ಕದ ಖಾಲಿ ಜಾಗೆಯಲ್ಲಿ..ಟೆಂಟ ಕಟ್ಟಿಕೊಂಡ ಅಲೆಮಾರಿ ಮಕ್ಕಳು ಯಾರಾದರೂ ಆದೀತು..ಅವರನ್ನು ಕರೆದು ತರ ತರದ ವೇಷ ಮಾಡಿ ಫೋಟೋ ತೆಗೆಡಿದುತ್ತಿದ್ದೆ,,,ನನ್ನ ಮಗನಿಗೂ..ಇವನ್ನೆಲ್ಲ ಪ್ರಯೋಗಿಸಿದ್ದೆನಾದರು..ಕೃಷ್ಣಾ,,ಬುದ್ಹ..ರಾಮ..ಶಕುಂತಲೆ..ಹುಡುಗಿವೇಶ.ಶಂಕರಾಚಾರ್ಯ ಬಿಟ್ಟರೆ..ಬೇರ್ಯಾವ ದೆವ್ವದ ವೇಷ ಹಾಕುವ ಧೈರ್ಯ ಮಾಡಿರಲಿಲ್ಲ.  ..ಈಗ ಶಾಲೆಯಲ್ಲೇ ಹೇಳಿದ್ದಾರೆ..ಅಂದ ಮೇಲೆ..ಮಾಡಲೇಬೇಕಲ್ಲ..ಸರಿ …ಆದರೆ ಇವರು ಬೇರೆಲ್ಲ ಬಿಟ್ಟು ಭಯಾನಕ ವೇಷಗಳನ್ನು ಈ ಹಬ್ಬದಲ್ಲಿ ಹಾಕೊದ್ಯಾಕೆ ಅನ್ನೋದು..ನನ್ನ ಪ್ರಶ್ನೆ ಆಗಿತ್ತು..ಮತ್ತೆ ಕೇಳಬೇಕೆ..???ಶುರು ಆಯ್ತು..ತನಿಖೆ…ಹಲೋವಿನ್..ಬಗ್ಗೆ..

30
ಆಕ್ಟೋ

’ಗೌಡಾನಂದ’ದ ಕಾರಣಗಳು ಮತ್ತು………

-ಅರೆಹೊಳೆ ಸದಾಶಿವರಾವ್

ಗಗನಕ್ಕೇರಿದ ಬೆಲೆ, ರಾಜಕಾರಣಿಗಳ ಜೈಲು ಯಾತ್ರೆ, ಕರೆಂಟಿಲ್ಲದೆ ಕತ್ತಲಾಗಿರುವ ಮನೆ, ಅಕಾಲದಲ್ಲಿ ಉಪದ್ರವಕಾರಿಯಾಗಿರುವ ಮಳೆ……..ಈ ಎಲ್ಲದರ ನಡುವೆ ಮತ್ತೆ ಬಂದಿರುವುದು ಹಬ್ಬಗಳ ಸಾಲು ಸಾಲು. ದಸರೆಯನ್ನು ಉಸಿರು ಬಿಗಿ ಹಿಡಿದು ಮಾಡಿಯಾಯ್ತು, ದೀಪಾವಳಿಯನ್ನು ಈ ಸಂದಿಗ್ಧದಲ್ಲಿಯೇ ಆಚರಿಸಿಕೊಳ್ಳುತ್ತಿದ್ದೇವೆ. ಇನ್ನೇನು ನಮ್ಮ ನಾಡಿನ ಮಟ್ಟಿಗೆ ಹೆಮ್ಮೆಯ ಕನ್ನಡ ರಾಜ್ಯೋತ್ಸವವೂ ಇದೆ. ಈ ಎಲ್ಲದರ ನಡುವೆ ನಮ್ಮ ಪರಿಸ್ಥಿತಿ ಏನಾಗಿದೆಯೋ ನೋಡಿ.
ಬಂದಿದೆ ಹಬ್ಬಗಳ ಸಾಲು ಸಾಲು
ಜೈಲಿಗೆ ಹೊರಟಿದೆ ನಮ್ಮ ನಾಯಕರ ಸಾಲುಹೀಗೆಂದು ಇಂದಿನ ನಮ್ಮ ರಾಜ್ಯದ ರಾಜಕಾರಣವನ್ನು ವಿವರಿಸಬಹುದೇನೋ. ಬಹುಶ: ಇಂದಿನ ಪರಿಸ್ಥಿತಿ ನೋಡಿದರೆ, ಅತೀ ಶೀಘ್ರದಲ್ಲಿಯೇ ನಮ್ಮ ರಾಜ್ಯ ಸರಕಾರದ ಆಡಳಿತ ಪರಪ್ಪನ ಅಗ್ರಹಾರ ಜೈಲಿನಿಂದಲೇ ಆದರೂ ಆಶ್ಚರ್ಯವಿಲ್ಲ. ಆರೋಪಿ ಎಂದು ಹೆಸರು ಕೇಳಿದಾಕ್ಷಣ ಎಲ್ಲರೂ ಅಪರಾಧಿಗಳೇ ಅಲ್ಲವಾದರೂ, ಈ ಪರಿ ಆರೋಪಿಗಳಾಗುತ್ತಿರುವುದು ನಮ್ಮ ಮಟ್ಟಿಗೆ ಆಶ್ಚರ್ಯ ಮತ್ತು ಅನಪೇಕ್ಷಿತ ಎಂಬುದು ಸುಳ್ಳಲ್ಲ.ಈ ದೀಪಾವಳಿಯನ್ನು ಹಿಂಬಾಲಿಸಿ ಕರ್ನಾಟಕ ರಾಜ್ಯೋತ್ಸವವೂ ಬರುತ್ತಿದೆ. ಕನ್ನಡಿಗರ ಪಾಲಿಗೆ ಇದು ಮತ್ತೊಂದು ದೀಪಾವಳಿ ಆಗುತ್ತಿದ್ದ ದಿನಗಳಿಂದ ಈಗದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಬಿಕರಿಗೆ ಸೀಮಿತವಾಗಿದೆ. ಈ ಸಲ ಕೇವಲ ಐವತ್ತು ಜನರಿಗೆ ಮಾತ್ರ ಪ್ರಶಸ್ತಿ ಕೊಡುವ ತೀರ್ಮಾನ ತನ್ನದು ಎಂದು ಮಾನ್ಯ ಮುಖ್ಯ ಮಂತ್ರಿಗಳು ಹೇಳುತ್ತಿರುವುದು ಸ್ವಲ್ಪ ಮಟ್ಟಿಗೆ ಕಳೆದು ಹೋಗಿರುವ ಪ್ರಶಸ್ತಿಯ ಬೆಲೆ ಹೆಚ್ಚಿಸಿದೆ. ಕಳೆದ ವರ್ಷ ಈ ಪ್ರಶಸ್ತಿಗೂ ವಿಪರೀತ ’ಬೆಲೆ’ ಹೆಚ್ಚದ್ದು, ಅದಕ್ಕಾಗಿ ದಲ್ಲಾಳಿಗಳು ಹುಟ್ಟಿಕೊಂಡಿದ್ದು ಎಲ್ಲವೂ ಸುದ್ದಿಯಾಗಿತ್ತು. ಪ್ರಶಸ್ತಿಯ ಹಣದಲ್ಲಿ ದಲ್ಲಾಳಿಗೆ ಪಾಲು ಹೋಗಿ, ಪ್ರಶಸ್ತಿ ವಿಜೇತರಿಗೆ ಚಿನ್ನದ ನಾಣ್ಯವೇ ಗಟ್ಟಿಯಾಗುತ್ತಿತ್ತು ಎಂಬುದು ಈಗ ಹಳೆ ಸುದ್ದಿ. ಈಗಿನ ಸುದ್ದಿ ಎಂದರೆ, ಈ ಸಲದ ಐವತ್ತು ಪ್ರಶಸ್ತಿಗೆ ಬಂದಿರುವ ಒಟ್ಟೂ ಅರ್ಜಿಗಳು ನಾಲ್ಕು ಸಾವಿರಕ್ಕೂ ಹೆಚ್ಚು!!. ಓಹ್ ಕನ್ನಡಿಗ..! ನೀನೆಷ್ಟು ಪುಣ್ಯವಂತ ಅನಿಸದಿರದೆ?
ಮತ್ತಷ್ಟು ಓದು »
29
ಆಕ್ಟೋ

ಇದು ”ನಮ್ಮ” ಮೆಟ್ರೋನಾ ????

– ಮಹೇಶ.ಎಮ್.ಆರ್

ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಬೆಂಗಳೂರು ಮೆಟ್ರೊ ಸೇವೆ ಶುರು ಆಗಿದೆ. ಮೆಟ್ರೊದಲ್ಲಿನ ಮೊದಲ ಓಡಾಟ ಹೊಸ ಅನುಭವ ನೀಡಿತು. ನಮ್ಮ ಮೆಟ್ರೊ ಸೇವೆಯನ್ನು ಅನುಭವಿಸಿದ ಮೇಲೆ ಇದೇ ಸಮಯದಲ್ಲಿ ಗಮನ ಸೆಳೆದಿದ್ದು ಎಂದರೆ ಅಲ್ಲಿ ಪಾಲಿಸಲಾದ ಬಾಷಾ ನೀತಿ. ಸಂವಿಧಾನದ ಮೂಲಕ ನಾವು ತಿಳಿದುಕೊಂಡಿದ್ದು ಏನು ಅಂದ್ರೆ, ಭಾರತದಲ್ಲಿ ಎಲ್ಲರೂ ಸಮಾನರು ಎಲ್ಲ ಬಾಷೇಗಳೂ ಸಮಾನ ಎಂದು. ಆದರೆ ಕರ್ನಾಟಕದಲ್ಲಿ ಅನುಷ್ಟಾನವಾಗುವ ಯೋಜನೆಗಳಲ್ಲಿ ಈ ನಮ್ಮ ತಿಳುವಳಿಕೆಯನ್ನು ಹುಸಿ ಮಾಡುವ ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ನಮ್ಮ ಮೆಟ್ರೊದಲ್ಲೂ ಇದನ್ನು ಕಂಡಿದ್ದು ಸುಳ್ಳಲ್ಲ. ಎಂದಿನಂತೆ ಕೇಂದ್ರ ಸರಕಾರ ಕರ್ನಾಟಕದ ಯೋಜನೆಗಳಿಗೆ ನಮ್ಮದೇ ತೆರಿಗೆ ಹಣವನ್ನು ಆರ್ಥಿಕ ಸಹಕಾರದ ಮೂಲಕ ನೀಡುವುದರ ಜೊತೆಗೆ ತನ್ನ ಹುಳುಕು ಬಾಷಾ ನೀತಿಯನ್ನು ನಮ್ಮ ಮೆಟ್ರೊ ಮೂಲಕ ಪ್ರದರ್ಶಿಸಿದೆ.

ಬೆಂಗಳೂರಿಗರಿಗೆ ಮೀಸಲಾಗಿರುವ ಈ ಸೇವೆಯಲ್ಲಿ ವಿನಾಕಾರಣ ಎಲ್ಲೆಡೆ ಹಿಂದಿಯನ್ನು ಬಳಸಲಾಗಿದೆ. ಬೆಂಗಳೂರಿನಲ್ಲಿ ೧% ಕ್ಕಿಂತಲೂ ಕಡಿಮೆಯಿರುವ ಹಿಂದಿ ಬಲ್ಲವರಿಗೆ ತೊಂದರೆ ಆಗಬಾರದು ಎಂಬ ನಿಯಮ ಇಲ್ಲಿ ಪಾಲಿಸಲಾಗಿದೆ. ಬೆಂಗಳೂರಿನಲ್ಲಿರುವ ಹಿಂದಿ ಬಾಷಿಕರ ಸಂಖ್ಯೆಯಷ್ಟೆ ಹೆಚ್ಚು ಕಡಿಮೆ ದಿಲ್ಲಿಯಲ್ಲೂ ಕನ್ನಡ ಬಾಷಿಕರ ಸಂಖ್ಯೆಯಿದೆ. ಈ ಸಂಖ್ಯಾ ಆಧಾರದ ಮೇಲೆ ನೋಡುವುದಾದರೆ, ಬೆಂಗಳೂರಿನ ನಮ್ಮ ಮೆಟ್ರೊದಲ್ಲಿ ಹಿಂದಿಯಲ್ಲಿ ಸೇವೆ ಕೊಡುವುದಾದರೆ ದಿಲ್ಲಿಯಲ್ಲಿನ ಮೆಟ್ರೊದಲ್ಲೂ ಕನ್ನಡದಲ್ಲಿ ಸೇವೆ ಕೊಡಬೇಕು. ಆದರೆ ಭಾರತದ ಬಾಷಾ ನೀತಿ ಪ್ರಕಾರ ಇದು ಸಾದ್ಯವಿಲ್ಲ. ದಿಲ್ಲಿ ಮೆಟ್ರೊದಲ್ಲಿ ಸ್ಥಳೀಯ ಬಾಷೆ ಮತ್ತು ಆಂಗ್ಲ ಬಾಷೆಗೆ ಮಾತ್ರ ಸ್ಥಾನ ಕಲ್ಪಿಸಿದರೆ ಬೆಂಗಳೂರಿನಲ್ಲಿ ಸ್ಥಳೀಯ ಮತ್ತು ಆಂಗ್ಲ ಬಾಷೆ ಜೊತೆಗೆ ಇನ್ನೊಂದು ಬಾಷೆಯನ್ನು ಸ್ಥಳೀಯರ ಮೇಲೆ ಹೇರಲಾಗುತ್ತಿದೆ. ದಿಲ್ಲಿಗೊಂದು ನಿಯಮ ಬೆಂಗಳೂರಿಗೊಂದು ನಿಯಮ ಯಾಕೆ.? ಇಂಥ ಹುಳುಕಿನ ಬಾಷಾ ನೀತಿಯಿಂದ ಒಕ್ಕೂಟ ವ್ಯವಸ್ಥೆಗೆ ಬೆಲೆಯಿಲ್ಲದಂತಾಗಿದೆ. ಎಲ್ಲ ಬಾಶೆಗಳೂ ಸಮಾನ ಎಂಬ ಸಂದೇಶ ಸಾರಬೇಕಾದ ಸರಕಾರಗಳೇ ಇಂದು ತಮ್ಮ ಯೋಜನೆಗಳ ಮೂಲಕ ಸ್ಥಳೀಯ ಬಾಷೆಗಳಿಗಿಂತ ಹಿಂದಿಗೆ ಕೊಂಬು ಜಾಸ್ತಿ ಎಂಬ ಸಂದೇಶ ರವಾನಿಸುತ್ತಿವೆ.

ಮತ್ತಷ್ಟು ಓದು »

29
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 8 – ಅಸೂಯೆ ತಂದ ಆಡಳಿತ

ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ಜನಿಸಿದ್ದು ಕಳೆದ ಶತಮಾನದ 1912ರ ಸೆಪ್ಟೆಂಬರ್ 08ರಂದು. ತಮ್ಮ ವಯಸ್ಸಿನ ನೂರನೇ ಸಂವತ್ಸರದ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆದಲ್ಲಿ ಪ್ರಕಟವಾಗುತ್ತಿದೆ.
 
ಮಾಡುತ್ತಲಿದ್ದ ಸುಧಾರಣಾ ಪ್ರಯೋಗಗಳನ್ನು ಮೇಳದ ಯಜಮಾನರಾದ ಶ್ರೀ ಕೊರಗಪ್ಪ ಶೆಟ್ಟಿಯವರು ಸ್ವಾಗತಿಸುತ್ತಿದ್ದರು. ಅಂತೆಯೇ, ಪ್ರೇಕ್ಷಕ ವರ್ಗದವರಿಂದಲೂ ಮೆಚ್ಚುಗೆ ಗಳಿಸುತ್ತಿದ್ದೆವು. ಇತರ ಕೆಲವು ತಾಪತ್ರಯಗಳನ್ನು ಸಹಿಸಿಕೊಂಡಾದರೂ, ಕಲಾ ವ್ಯವಸಾಯವನ್ನು ಹುಲುಸಾಗಿ ಮಾಡುತ್ತೇನೆ, ಆಸೆಯ ಕೆಲವು ಬಳ್ಳಿಗಳಿಗಾದರೂ ನೀರೆರೆಯುತ್ತೇನೆ ಎನ್ನುತ್ತಲೇ ವರ್ಷದ ಮುಕ್ಕಾಲು ಭಾಗವನ್ನು ನೂಕಿದೆ.ಮಾತ್ಸರ್ಯದ ಮೊಳಕೆ 
ನಾನು ತಿಳಿದಿದ್ದಂತೆಯೇ, ಕೆಲವೊಂದು ಮಂದಿ ಇತರ ಕಲಾವಿದರ ಮಾತ್ಸರ್ಯ ಬೀಜದ ಮೊಳಕೆಯಾಗಿತ್ತು. ಆದರೆ, ನಾನು ಹೋಗುತ್ತಲಿರುವುದು ಸರಿಯಾದ ದಾರಿ ಎಂಬ ಆತ್ಮವಿಶ್ವಾಸ ನನಗಿತ್ತು. ಹೇಗಾದರೂ ನನ್ನ ಮೇಲೆ ಮತ್ಸರವಿದ್ದರೆ ಅದು ನನ್ನ ಮೇಲಷ್ಟೆ ಪ್ರಯೋಗವಾಗಬೇಕು-ಬೇರಾರನ್ನೂ ಮುಟ್ಟಲಾರದು ಎಂದುಕೊಂಡಿದ್ದೆ.

ಮತ್ತಷ್ಟು ಓದು »

28
ಆಕ್ಟೋ

ಸಾರಥಿ – The lion king

– ಫಿಲ್ಮಿ ಪವನ್

ಸಾರಥಿ ಬಿಡುಗಡೆಯಾಗಿ ಬಹಳ ದಿನಗಳಾಯ್ತು. ಆದರೆ ನಮ್ಮೂರಿನ ಕಿತ್ತೋದ ಥಿಯೇಟರ್ ನಲ್ಲಿ ಕೂತು ಯಾರಾದ್ರು ಬೀಡಿ ಅಂಟಿಸಿದಾಗ, ಅಣ್ಣ ಒಂದು ಬೀಡಿ ಕೊಡಣ್ಣ ಅಂತ ತೊಗೊಂಡು mAss ಹೀರೋ ಚಿತ್ರವನ್ನು mAss ಆಗಿ ನೋಡೋದ್ರಲ್ ಇರೋ ಮಜನೆ ಬೇರೆ. ಅದಕ್ಕೆ ನೆನ್ನೆ ಕಾಲ ಬಂದಿತ್ತು , ಯಾಕೋ ಏನೋ ಇ ಚಿತ್ರ ಎಲ್ಲಿ ರಿಲೀಸ್ ಅದ್ರು ಟೈಮ್ ಗೆ ಸರ್ಯಾಗಿ ಸ್ಟಾರ್ಟ್ ಆಗ್ತಾ ಇಲ್ಲ ಅನ್ನೋ ವಿಷಯ ಮತ್ತೊಮ್ಮೆ ನಮ್ಮೂರಲ್ಲೂ ಪ್ರೋವ್ ಆಗೋಯ್ತು. ೭-೩೦ ರ ಶೋ ಗೆ ೭-೦೦ ಘಂಟೆಗೆ ಹೋಗಿದ್ರು ಥಿಯೇಟರ್ ಒಳಗೆ ಬಿಟ್ಟಿದ್ದೆ ೭-೪೦ಕ್ಕೆ. ಅಷ್ಟರಲ್ಲೇ ನಮ್ಮ ಮಾಮಂದಿರು ತಮ್ಮ ಟಾಟಾ ಸುಮೋದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಅಲ್ಲಲ್ಲಿ ನಿಂತಿದ್ದವರಿಗೆ ಬೊ… ಮಗನೆ, ಬೊ… ಡಿಕೆ, ಇನ್ನು ಮುಂತಾದ ಅಷ್ಟೋತ್ತರಗಳನ್ನು ಒದರಿ ಹೋಗಿದ್ದರು. ಟಿಕೆಟ್ ಕೌಂಟರ್ ಅಲ್ಲಿ ಹತ್ತಿ ಇಳಿದು ಸಾಹಸ ಮಾಡೋ ಗೋಜು ಸಾಧ್ಯ ಇರ್ಲಿಲ್ಲ. ಸಾಲಿನಲ್ಲಿ ಯಾರದ್ರು ನಮ್ಮೋರು ಕಾಣಿಸ್ತರ ಅಂತ ನೋಡ್ತಿರ್ಬೇಕಾದ್ರೆನೆ ನಮ್ ಬಾಡಿಗೆ ಮನೆ ಹುಡುಗ ಗುಂಡ ಕಾಣಿಸಕೊಂಡ, ಲೇ ಚುಡೆಲ್ , ನನಗೊಂದು ಟಿಕೆಟ್ ತೊಗೊಳ್ಳ ಅಂತ ೫೦ ರು ನೋಟು ಕೊಟ್ಟು entrance ಬಳಿ ಕಾಯ್ತಾ ನಿಂತಿದ್ದೆ. ಹಂಗು ಹಿಂಗು ನುಕಾಡಿ, ತಲ್ಲಾಡಿ, ಗುದ್ದಾಡಿ, ಗುಂಡ ಟಿಕೆಟ್ ತಂದೆ ಬಿಟ್ಟಿದ್ದ, ತೊಗೋ ಗುರು ಅಂತ ಟಿಕೆಟ್ ಕೊಟ್ಟ ಅದ್ರ ಮೇಲೆ ೪೦ ರು ಅಂತ ಇತ್ತು. ಲೋ ಅಪ್ಪಿ ಇನ್ ಹತ್ತು ರುಪಾಯಿ ವಾಪಾಸ್ ಕೊಡೊ ಅಂದ್ರೆ, ಅನ್ನೋ ನಿನ್ ಹೆಸರಲ್ಲಿ ಇಂಟರ್ವಲ್ ಅಲ್ ಒಂದು ಚಿಪ್ಸ್ ಪ್ಯಾಕೆಟ್ ತಿನ್ಕೊತಿನಿ ಬಿಡಣ್ಣ ಅಂದ. ನನ್ ಮಗ ನಂಗೆ ಬ್ಲಾಕ್ ಟಿಕೆಟ್ ಮಾರಿಬಿಟ್ನಲ್ಲ ಅನ್ನೋ ಬೇಜಾರಲ್ಲೇ ಒಳಗೋಗಿ ಮುರಿದೋಗಿರೋ ಪ್ಲಾಸ್ಟಿಕ್ ಚೀರ್ ಗಳ ಮಧ್ಯೆ ಚೆನ್ನಾಗಿರೋದನ್ನ ಹುಡುಕಿ ಮೊಬೈಲ್ ನ ಸೈಲೆಂಟ್ ಮೋಡಲ್ಲಿ ಹಾಕಿ ಕೂತೆ.

title ಕಾರ್ಡ್ ಅಲ್ಲೇ ಸ್ವಲ್ಪ ವಿಭಿನ್ನವಾಗಿ ಶುರುವಾದ ಚಿತ್ರ, ಮೊದಲರ್ಧ ಪೂರ್ತಿ ಕಾಮಿಡಿ ಯಾ ಝಾಲಕ್ ಜೊತೆಗೆ ಅಕ್ಷ್ಯನ್ ಪ್ಯಾಕ್, ಇವೆರಡರ ಜೊತೆಗೆ ಒಂದು ಸ್ವೀಟ್ ಲವ್ ಸ್ಟೋರಿ. ಲವ್ ಸ್ಟೋರಿ ಸ್ವೀಟ್ ಅನ್ನುವುದಕ್ಕಿಂತಲೂ cute ಅನ್ನಬೋಹುದು, ನಿಜವಾಗಿಯೂ ಬಹಳ ಮುದ್ದಾಗಿದೆ. ಹೀರೋ ಇನ್ ಗೆ expose ಮಾಡಿಸಿಲ್ಲ, ಕುಟುಂಬದೊಂದಿಗೆ ಬಂದವರಿಗೆ ಅದು ನಿರಾಳವಾದರೆ ಪಡ್ಡೆಗಳಿಗೆ ಸ್ವಲ್ಪ ಬೇಜಾರು. ಶಂಕರ್ ನಾಗ್ ಅವರನ್ನು ಹಾಡಿನಲ್ಲಿ ಬಳಸಿಕೊಂಡಿರುವ ರೀತಿಗೆ ದಿನಕರ್ ಗೆ ನಿಜಕ್ಕೂ ಒಂದು ಸಲಾಂ. ಅವರು ಇಹಲೋಕ ತ್ಯಜಿಸಿ ೧೬ ವರ್ಷಗಳದ್ರು ಅವರು ತೆರೆಯ ಮೇಲೆ ಬಂದಾಗ ಪ್ರೇಕ್ಷಕರ ಅರುಚಾಟ, ಕಿರುಚಾಟ, ಶಿಲ್ಲೆಗಳನ್ನು ಕೇಳಿದಾಗ ಶಂಕರಣ್ಣ ಇದ್ದಿದ್ರೆ ಇನ್ ಹೆಗಿರ್ತಿದ್ರೋ ಅನ್ನೋ ಯೋಚನೆ ಮನದಲ್ಲಿ ಮೂಡಿತ್ತು. ಮತ್ತೆ ಆಗಾಗ ಡಿಶುಂ ಡಿಶುಂ, ಪೋಲಿಸ್ ಗೆ ಬುದ್ದಿ ಹೇಳಿ ಕೊಡೊ ದೃಶ್ಯ. ಮತ್ತು ರೈತರನ್ನು ಹೊಗಳೋ ದೃಶ್ಯ ಮುಂತಾದವೆಲ್ಲ ಬಂದಾಗ ಸುಪರ್ರೋ ಸೂಪರ್ರು. ಮತ್ತಷ್ಟು ಓದು »

28
ಆಕ್ಟೋ

ಹಾವು ಪುರಾಣ!

-ವಾಣಿಶೆಟ್ಟಿ ಕುಂದಾಪುರ
“ನಾಗಾ…

ನೀ ಹೀಂಗೆಲ್ಲ ಬಪ್ಪಕಾಗ..
ಮಕ್ಕಳ್ ಮರಿ ತಿರ್ಗು ಜಾಗ
ಜಾಗ ಖಾಲಿ ಮಾಡ ಬೇಗ …”

ಮನೆ ಕಡೆ ನಾಗರಹಾವು ಬಂದಾಗಲೆಲ್ಲಾ ಅದನ್ನು ಓಡಿಸೋವಾಗ “ಅದಕ್ಕೆ ನೋವು ಮಾಡಬೇಡಿ” ಅನ್ನೋ ದೊಡ್ಡವರ ರಾಗದ ಹಿನ್ನಲೆಯಲ್ಲಿ ನಮ್ಮ ಕುಂದಗನ್ನಡದ ಪ್ರಾಸ ಹೀಗಿತ್ತು :) ನಮ್ಮ ಹಳ್ಳಿಗಳಲ್ಲಿ ಹಾವಿನ ಬಗ್ಗೆ ಭಯ ಮತ್ತು ಆಸಕ್ತಿ ಸ್ವಲ್ಪ ಕಮ್ಮಿನೇ ಜನರಲ್ಲಿ.ಆದರೆ ನಂಗೆ ಮಾತ್ರ ಇವತ್ತಿಗೂ ಅಷ್ಟೇ ಉತ್ಸಾಹ ಅವುಗಳ ಬಗ್ಗೆ.ಅದರಲ್ಲೂ ನಾಗರಹಾವು ಅಂದ್ರೆ ಸಕತ್ ಖುಷಿ..ಅದು ಮಾಡುವಷ್ಟು ಗೊಂದಲ ,ಖರ್ಚು,ಭಯ ಮತ್ಯಾವ ಹಾವುಗಳು ಮಾಡೋದಿಲ್ಲ.ಅಪರೂಪಕ್ಕೆ ಅವುಗಳು ಕೋಳಿ ಗೂಡಲ್ಲಿರೋ ಮೊಟ್ಟೆ ತಿನ್ನೋಕೆ ಬಂದರೆ ಈ ಅಕ್ಕ ಪಕ್ಕದ ಮನೇಲಿ ಎಲ್ಲ ಹೋ ದೇವ್ರ್ ಹಾವ್ ಬಂತ್ ..ಎಂದು ಪಡುವ ಸಂಭ್ರಮವೋ ಸಂಭ್ರಮ!ನಂತರ  ಅದಕ್ಕಿಷ್ಟು ಹಾಲು ಇಟ್ಟು ,ಅಕ್ಕಿ ಚೆಲ್ಲಿ ಕೈ ಮುಗಿಯೋರು !ಆದರೆ ಅದು ಕುಡಿದದ್ದು ನಾ ನೋಡೇ ಇಲ್ಲ.ಪಾಪ !ಅದರ ಹೆದರಿಕೆ ಅದಕ್ಕೆ ಎಲ್ಲಿ ಹೊಡಿತಾರೋ ಅಂತ!ಯಾವ ಹಾವಿಗೂ ಇರದ ಮುಂಡು ಬಾಲ ಇದಕ್ಕೆ ಇರೋದರಿಂದ  ಅದರ ನಿಕ್ ನೇಮ್ ಮುಂಡಪ್ಪ.

ಒಮ್ಮೆ ನಮ್ಮ ಪಕ್ಕದ ಕಾಡಿಗೆ ನವಿಲು ಹಿಡಿಯುವ ಗುಂಪೊಂದು ಬಂದಿತ್ತು.ಅವರ ಜೊತೆ ನಾವು ಕೂಡ ನೋಡಲು ಹೋಗಿದ್ದೆವು .ಚಂದದ ನವಿಲು ಗರಿ ಸಿಗುತ್ತಲ್ಲಾ ಅಂತ!ಸರಿ ಹೋಗ್ತಾನೆ ಒಂದು ದೊಡ್ಡ ನವಿಲು ಸಿಕ್ಕಿಬಿಟ್ಟಿತು.ಅವರು ಅದನ್ನು ಕೊಲ್ತಾರೆ ಅಂತ ಮಾತ್ರ ನಮಗೆ ಗೊತ್ತಿರಲಿಲ್ಲ.ಅವರು ಅದನ್ನ ಕೊಂದು ಹೊಟ್ಟೆ ಸೀಳಿದಾಗ ಅಲ್ಲೊಂದು ಪುಟ್ಟ ನಾಗರ ಮರಿ!ಆಮೇಲೆ ನಾಗರ ಹಾವಿನ ಹೆಣ ಕಂಡ ತಪ್ಪಿಗೆ (ಅಷ್ಟು ಚಂದದ ನವಿಲು ಕೊಂದಿದ್ದು ಮಾತ್ರ ಸರಿಯಂತೆ ಅವರ ಪ್ರಕಾರ ) ಸರ್ಪ ಸಂಸ್ಕಾರ ,ಅದೂ ಇದೂ ಪೂಜೆ ಮಾಡಬೇಕಾಯ್ತು ,ಆಮೇಲೆ ನವಿಲು ಹಿಡಿಯೋದು ಬಿಟ್ಟಿರಬೇಕು ಬಹುಶಃ :) ಮತ್ತಷ್ಟು ಓದು »