ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

10
ಆಕ್ಟೋ

ಪರಮಾತ್ಮ

– ಇಂಚರ

ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು.  ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ.  ಮಗನ ಮೇಲೆ ಅದಮ್ಯ ವಿಶ್ವಾಸ.  ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ  ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!

ಮತ್ತಷ್ಟು ಓದು »

10
ಆಕ್ಟೋ

ಅಗಲಿದ ಚೇತನಗಳಿಗೆ ನಮನ

-ಪ್ರಶಸ್ತಿ.ಪಿ ಸಾಗರ

ಎಂದಿನಂತೆ fb ಗೆ ಬರ್ತಿದ್ದಂತೆಯೇ ಕಂಡ ಮೊದಲ ಪೋಸ್ಟು.. “ಮತ್ತೂರು ಕೃಷ್ಣಮೂರ್ತಿಗಳು,ಸ್ಟೀಪ್ ಜಾಬ್ಸ್ ಆತ್ಮಕ್ಕೆ ಶಾಂತಿ ಸಿಗಲಿ..” ವಿಜಯದಶಮಿಯ ದಿನವೆಂದರೆ ಕೆಟ್ಟದ್ದರ ಒಳ್ಳೆಯದರ ವಿಜಯದ ಸಂಕೇತವೆಂಸು ಪ್ರತೀತಿ.ಆದರೆ ಅಂದೇ ಇಬ್ಬರು ಅಪ್ರತಿಮ ಸಾಧಕರ ಸಾವಿನ ಸುದ್ದಿ ಕೇಳುವಂತಾಯಿತಲ್ಲ ವಿಧಿಯೇ ಅನಿಸ್ತು.. ಸುದ್ದಿ ಸುಳ್ಳಾಗಿರಬಹುದೇ ಅನ್ನೋ ಮನದ ಮೂಲೆಯ ಆಸೆಯಿಂದ ಒಮ್ಮೇ ನೆಟ್ಟಲ್ಲಿ ಹುಡುಕಿದೆ.. ಅದರ ತುಂಬೆಲ್ಲಾ ಸ್ಟೀವ್ ಜಾಬ್ಸನದೇ ಸುದ್ದಿ.. ಮತ್ತೂರು ಕೃಷ್ಣಮೂರ್ತಿಗಳ ಸುದ್ದಿ ತಿಳಿಯಲು ಮತ್ತೂರು ಗೆಳೆಯನಿಗೆ ಸಂದೇಶ ಕಳಿಸಾಯಿತು..ಎಲ್ಲೆಲ್ಲೂ ಬರೀ ಬೇಸರದ ಪೋಸ್ಟುಗಳು.. ಯಾಹೂ, ibn, times news ಹೀಗೆ ಎಲ್ಲೆಲ್ಲೂ ಸ್ಟೀವ್ ಜಾಬ್ಸ್ ಮರಣದ ವಾರ್ತೆ, fb, google + ಹೀಗೆ ಸಾಮಾಜಿಕ ತಾಣಗಳಲ್ಲೂ ಅವರಿಗೆ ನೆನಪಿನ ಕಂಬನಿ, ಫೋಟೋಗಳು, ವೀಡಿಯೋಗಳು,ಕೊಂಡಿಗಳು, ಅವರ ppt ಗಳು, ನುಡಿಮುತ್ತುಗಳು.. ಹೀಗೆ ಏನುಂಟು.. ಏನಿಲ್ಲ.. ಆ ಎರಡೂ ಮಹಾಚೇತನಗಳಿಗೆ ನನ್ನದೂ ಒಂದು ಈ ಮೂಲಕ ಪದಾಂಜಲಿ

 

ಮತ್ತಷ್ಟು ಓದು »

7
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 5 – ಕರ್ಣನಿಂದಾಗಿ ಕಣ್ಣೀರು ಬಂತು ….

ಅಡವಿ ಗಿಡ ಮರ ಕಲ್ಲು ನೋಡಿದರೆಯರಸಿನದ ಪುಡಿಯಂತೆ ತೋರುತಿದೆ ತಮ್ಮಾ! ಒಡಲೊಳುರಿ ತಾಪ ಬೇರ್ವಿಡಿದು ಜಠರಾಗ್ನಿಯಲಿ ನಡುಗುತಿದೆ ಕೈ ಕಾಲು ತಮ್ಮಾ” ಎಂದು ಸೀತೆಯನ್ನು ಕಳೆದುಕೊಂಡ ಶ್ರೀರಾಮ ಹಂಬಲಿಸುತ್ತಾನೆ. ಲಕ್ಷ್ಮಣನೊಡನೆ ಅಳಲನ್ನು ತೋಡಿಕೊಳ್ಳುತ್ತಾನೆ. ಪದ್ಯದ ತರುವಾಯ, ರಾಮನ ಉದ್ವೇಗದ ಸಂಪೂರ್ಣ ಚಿತ್ರಣವಾಗಬೇಕಾದರೆ- ತಾಳಮದ್ದಳೆಯ (ಕುಳಿತು ಮಾತನಾಡುವ- ವೇಷವಿಲ್ಲದ) ರಾಮ ಬಹಳ ಮಾತುಗಳನ್ನು ಖರ್ಚು ಮಾಡಬೇಕಾಗುತ್ತದೆ. ಭಾವನೆಗಳು ಮೂಡದೆ ಬರಿಯ ಮಾತುಗಳನ್ನೇ ಹೊರಡಿಸುವವನು ರಾಮನಾಗಿದ್ದರೆ, ಪ್ರೇಕ್ಷಕರಲ್ಲಿ ಪ್ರತಿಕ್ರಿಯೆ ಮೂಡಿಸುವ ಪ್ರಯತ್ನ ನಿರರ್ಥಕ ಎನಿಸುತ್ತದೆ,

ಶೃಂಗಾರ ರಸದ ನಿರೂಪಣೆ ಇರುವ ಪಾತ್ರಗಳಲ್ಲೂ ಅಂತಹುದೇ ಅನುಭವ. ”ಕಾಮಸನ್ನಿಭ ಮಾತ ಕೇಳೂ! ನಿನ್ನೊಳ್! ಕಾಮಿಸಿ ಕಾಮಿಸಿ ಬಂದೆ ಕೃಪಾಳೂ!!” ಎಂದು ಮಾಯಾ ಶೂರ್ಪನಖಿಯು ಲಕ್ಷ್ಮಣನೊಡನೆ ನುಡಿದ ಸನ್ನಿವೇಶದಲ್ಲಿ ಬರಿ ಮಾತಿನ ಬರಡುತನವನ್ನೂ ಕಂಡುಕೊಳ್ಳುವಂತಾಗಿತ್ತು.

ಅತೃಪ್ತಿ
ವೀರರಸದ ಸಂದರ್ಭಗಳಲ್ಲೂ ಅದೇ ತೊಡಕು, ಒಂದೆರಡು ಸನ್ನೆಗಳು, ಎರಡು ಮೂರು ಮಾತುಗಳಲ್ಲಿ ಪರಿಣಾಮಕಾರಿಯಾಗಿ ಮಾಡಬಹುದಾದ ಕೆಲಸಕ್ಕೆ ಬಹಳ ಮಾತುಗಳನ್ನೇ ವೆಚ್ಚ ಮಾಡಿದ ತರುವಾಯವೂ ‘ಇದು ಸಾಕಾಗಲಿಲ್ಲ!’ ಎಂದು ಅತೃಪ್ತಿ.

”ಅರ್ಥ ಉದ್ದವಾಯಿತು.” ಎಂಬ ಮಾತು ಕೇಳಿ ಬಂದರೆ ಅದರಲ್ಲಿ ಆಶ್ಚರ್ಯವೇನು?

ಇಂತಹುದೇ ವಿಚಾರಗಳ ಚರ್ಚೆ ಜಿಜ್ಞಾಸೆಗಳು ಗೆಳೆಯರೊಂದಿಗೆ ಆಗಾಗ ನಡೆಯುತ್ತಿದ್ದವು.
ಮತ್ತಷ್ಟು ಓದು »

6
ಆಕ್ಟೋ

ಮರೆಯಲಾಗದ ಲಾಟರಿ ಟಿಕೆಟ್

– ಪವನ್ ಪಾರುಪತ್ತೇದಾರ

ಕಾಲೇಜ್ ನ ಗೋಡೆಯ ಮೇಲೆ ಹೋಗೆ ಬಿಡುತ್ತಾ ನಾನು ಮತ್ತು ಬಾಸ್ ಬಂಡಾರಿ ಕುಳಿತಿದ್ದೆವು. ಸಿಗರೇಟನ್ನು ಘಾಡವಾಗಿ ಎಳೆದ ಭಂಡಾರಿ ಎಲ್ಲೋ ಶಿಷ್ಯ ಇನ್ನು ಸಿಂಹ ಬಂದೆ ಇಲ್ಲಾ ಅಂದ. ನಾನು ಒಮ್ಮೆ ಗಡಿಯಾರವನ್ನು ನೋಡಿ ಬಾಸ್ ಈಗ fly ಓವರ್ ಕಾಮಗಾರಿ ನಡೆಯುತ್ತಿದೆ ಅಲ್ವಾ ಟ್ರಾಫಿಕ್ ತುಂಬಾ ಇರತ್ತೆ ಅದಕ್ಕೆ ಲೇಟ್ ಆಗಿರಬೇಕು ಎಂದೆ. ಆಗ ಸಮಯ ಸುಮಾರು ೧೧ ಘಂಟೆ.  ನಾನು ದ್ವಿತೀಯ PUC ಡುಮ್ಕಿ ಹೊಡೆದು ನಮ್ಮ ಸರ್ಕಾರೀ ಕಾಲೇಜ್ ನ ಗೋಡೆಯ ಮೇಲೆ ಕೂತು ಗೆಳೆಯರ ಜೊತೆ ಹರಟೆ ಹೊಡೆಯುವುದನ್ನೇ ಕಾಯಕವಾಗಿ ಮಾಡಿಕೊಂಡಿದ್ದೆ. ಬಾಸ್ ನಮಗಿಂತ ಒಂದೆರಡು ವರುಷ ಹಿರಿಯರು. ಅವರು ಸಹ ಡಿಪ್ಲೋಮಾ ಇಯರ್ ಬ್ಯಾಕ್ ಆಗಿ ನಮ್ಮ ಜೊತೆಯಲ್ಲೇ ಅಡ್ಡ ಹೊಡೆಯುತಿದ್ದರು. ಬೆಳಿಗ್ಗೆ ತಿಂಡಿ ತಿಂದು ಮನೆಯಿಂದ ಹೊರಟರೆ ಊಟದ  ಸಮಯಕ್ಕೆ ಮತ್ತೆ ಮನೆ ಸೇರುತಿದ್ದಿದ್ದು, ಮತ್ತೆ ಸಂಜೆ ೪ ಕ್ಕೆ ಕ್ರಿಕೆಟ್ ಆಡಲು ಹೊರಟರೆ ಮನೆ ಸೇರುತಿದ್ದಿದ್ದು ರಾತ್ರಿ ೧೦ ಘಂಟೆಗೆ.

ಇಂತಹ ನಮ್ಮ ದಿನಚರಿಯಲ್ಲಿ ಸಿಂಹ ಪ್ರತಿ ದಿನ ಸಿಂಹ ಒಂದು ಒಳ್ಳೆಯ ಕೆಲಸ ಮಾಡುತಿದ್ದ. ದ್ವಿತೀಯ PUC ಫೈಲ್ ಆದರು, ಮನೆಗೆ ಒಂದಷ್ಟು ಸಹಾಯವಗುತಿದ್ದ. ಅವನು ಮಾಡುತಿದ್ದ ಕೆಲಸ ನಮ್ಮೂರಿಂದ ಬೆಂಗಳೂರಿಗೆ ಹೋಗಿ ಲಾಟರಿ ಟಿಕೆಟ್ ಕೊಂಡು ತರುವುದು. ಇಷ್ಟಕ್ಕೂ ಸಿಂಹ ಎಂದರೆ ಇವನ ಧೈರ್ಯಕ್ಕೆ ಪ್ರತಾಪಕ್ಕೆ ಕೊಟ್ಟಿರುವ ಬಿರುದೇನಲ್ಲ ಬಿಡಿ. ಅ ವಯಸಿಗೆ ಅವನ ಕಿವಿಯ ಮೇಲೆ ಒಂದೆರಡು ರೋಮ ಹುಟ್ಟಿತ್ತು, ಅದನ್ನೇ ಆಗಾಗ ನಿವುತ್ತ ಸಿಂಹ ಸಿಂಹ ಹಹಹಹ ಎಂದು ವಿಚಿತ್ರವಾಗಿ ಘರ್ಜಿಸುತಿದ್ದ. ಅದಕ್ಕೆ ನಾವು ಆಯಿತು ಬಿಡಪ್ಪ ನೀನು ಸಿಂಹನೆ ಅಂತ ಹಾಗೆ  ಕರೆಯುತಿದ್ದೆವು. ಅವನ ನಿಜವಾದ ಹೆಸರು ಮಹೇಶ್, ಮಹೇಶ್ ಕುಮಾರ್ ಯಾದವ್

ಮತ್ತಷ್ಟು ಓದು »

4
ಆಕ್ಟೋ

ನಿಮ್ಮ ನಿಲುಮೆಗೆ ಒಂದು ವರ್ಷ- ಹರಸ ಬನ್ನಿ, ಹಾರೈಸಬನ್ನಿ

ವರ್ಷವಾಗಿದ್ದು ತಿಳಿಯಲೇ ಇಲ್ಲ ನೋಡಿ.ಹೌದು ನಮ್ಮ-ನಿಮ್ಮ ’ನಿಲುಮೆ’ಗೆ ವರ್ಷದ ಸಂಭ್ರಮ :). ’ಕನಸು-ಕನವರಿಕೆ’ಯಾಗಿ ಶುರುವಾದ ನಿಲುಮೆ ’ಎಲ್ಲ ತತ್ವದ ಎಲ್ಲೇ ಮೀರಿ’ ನಿಲ್ಲಲ್ಲಿ ಅನ್ನುವ ನಮ್ಮ ಆಶಯಕ್ಕೆ ವರುಷವಾಗಿದೆ. ಈ ಸಂಭ್ರಮಕ್ಕೆ ನಮ್ಮ ಎಲ್ಲ ಬರಹಗಾರರು, ಓದುಗರು ಕಾರಣಕರ್ತರು. ಅವರಿಲ್ಲದಯೇ ನಾವಾದರೂ ಏನು ಮಾಡಲಿಕ್ಕಾಗುತಿತ್ತು ಅಲ್ಲವೇ?

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದ ಎಲ್ಲೆ ಮೀರಿ
ನಿರ್ದಿಗಂತವಾಗಿ ಏರಿ
ಓ ನನ್ನ ಚೇತನ ಆಗು ನೀ ಅನಿಕೇತನ

ರಸ ಋಷಿ ಕುವೆಂಪು ಅವರ ಈ ನುಡಿಗಳೆ ನಮಗೆ ಸ್ಪೂರ್ತಿ. ಯಾವುದೇ ಜಾತಿ, ಮತ, ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ, ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ, ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು. ಅಷ್ಟಕ್ಕೂ ’ಸತ್ಯ’ ಅನ್ನುವುದು ಎಡ-ಬಲ ಪಂಥದ ಆಸ್ತಿಯೇನು ಅಲ್ಲವಲ್ಲ. ಅದು ಈ ಇಬ್ಬರ ನಡುವೆಯು ಸಿಲುಕದೆ ತನ್ನ ಪಾಡಿಗದು ಯಾವುದೋ ಮೂಲೆಯಲ್ಲಿ ನಿರ್ಲಿಪ್ತವಾಗಿರುತ್ತದೆ. ಅದನ್ನ ಹುಡುಕುವ ಮುಗ್ಧ ಆಸೆ ನಮ್ಮದು.ನೊಂದ ಜೀವಗಳಿಗೆ ದನಿಯಾಗುವ ಬಯಕೆ ನಮ್ಮದು. ಮತ್ತಷ್ಟು ಓದು »

3
ಆಕ್ಟೋ

ನಿಲುಮೆಯ ಬಗ್ಗೆ ನಿಮ್ಮ ನಿಲುವೇನು?

1
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 4 – ಐದು ವರ್ಷಗಳಲ್ಲಿ ಆಸ್ತಿ ಅಡವು

1931ರ ಆರ್ಥಿಕ ಮುಗ್ಗಟ್ಟಿನ ದಿನಗಳ ನೆನಪಿರುವವರು ಬಹಳ ಮಂದಿ. ನಮ್ಮ ನಾಟಕ ಮಂಡಳಿಯಿಂದಾಗಿ ನನಗೂ ಆ ದಿನಗಳ ನೆನಪು ಉಳಿದಿದೆ; ಅಂದಿನ ಮತ್ತು ಇಂದಿನ ಪರಿಸ್ಥಿತಿಗಳ ವ್ಯತ್ಯಾಸವನ್ನು ಜ್ಞಾಪಿಸಿಕೊಳ್ಳುವ ಹಾಗಾಗಿದೆ.

ಆಗ ಊರಿಂದೂರಿಗೆ ಸಾಮಾನು ಸಾಗಿಸುವ ಲಾರಿಗಳ ಸೌಕರ್ಯವಿರಲಿಲ್ಲ. ಸಾಗಾಟಕ್ಕೆ ಸಿಗುತ್ತಿದ್ದುದು ಎತ್ತಿನ ಗಾಡಿಗಳು ಮಾತ್ರ.

ದಶಾವತಾರದ ಮೇಳಗಳಲ್ಲಿ ಇರುತ್ತಿದ್ದ ಸಾಮಾನುಗಳನ್ನು ಸಾಗಿಸಲು ಬಹಳ ಕಷ್ಟವಾಗುತ್ತಿರಲಿಲ್ಲ. ಪರದೆ ಇತ್ಯಾದಿಗಳ ತೊಡಕು ಇಲ್ಲದ ಕಾರಣ, ಕೆಲವು ಪೆಟ್ಟಿಗೆಗಳನ್ನು ತಲೆ ಹೊರೆಯಲ್ಲಿ ಸಾಗಿಸಲು ಸಾಧ್ಯವಾಗುತ್ತಿತ್ತು. ಸಂಚಾರಕ್ಕೆ ರಸ್ತೆಯ ಅನುಕೂಲವಿದ್ದರೆ ಒಂದು ಗಾಡಿಯನ್ನು ಬಾಡಿಗೆಗೆ ಹಿಡಿದರೆ ಸಾಕಾಗುತ್ತಿತ್ತು. ಊರು ಸೇರಿದ ತರುವಾಯ ಡೇರೆಯ ವ್ಯವಸ್ಥೆಯೂ ಬೇಕಾಗುತ್ತಿರಲಿಲ್ಲ. ಹೆಚ್ಚಾಗಿ ಬಯಲಾಟಗಳೇ ಅಂದು ನಡೆಯುತ್ತಿದ್ದುವು.

ಆದರೆ ಯಕ್ಷಗಾನ ನಾಟಕ ಕಂಪೆನಿಯ ಹೊಣೆ ಹೊತ್ತ ನಮ್ಮ ಪರಿಸ್ಥಿತಿ ಅದಕ್ಕೆ ತೀರಾ ವ್ಯತಿರಿಕ್ತವಾಗಿತ್ತು.

ದೃಶ್ಯಾವಳಿಗಳಿಗಾಗಿ ಪರದೆಗಳು, ‘ಪಕ್ಕದ ರೆಕ್ಕೆ’ಗಳು, ಆಸನ- ಪೀಠೋಪಕರಣಗಳು, ಕಿರೀಟ-ಆಯುಧ, ಅಲಂಕಾರಗಳು ಇವೆಲ್ಲವುಗಳ ಜೊತೆಗೆ ಸಾಕಷ್ಟು ಫರ್ನಿಚರ್‌ಗಳನ್ನು ಸಾಗಿಸಲು ಎಂಟು ಹತ್ತು ಗಾಡಿಗಳನ್ನು ಅನುವು ಮಾಡಿಕೊಳ್ಳಬೇಕಾಗುತ್ತಿತ್ತು. ಎಷ್ಟೇ ಜನಪ್ರಿಯತೆ ಗಳಿಸಿದರೂ, ಕೆಲವು ದಿನಗಳ ತರುವಾಯ ಊರು ಬದಲಾಯಿಸಲೇಬೇಕಾಗುವುದಷ್ಟೇ.

ಊರಿಂದೂರಿಗೆ
ಬಟ್ಟೆಯ ಡೇರೆಗೆ ಬೇಕಾದ ಅನುಕೂಲ ನಮಗೆ ಇರಲಿಲ್ಲ. ಆದುದರಿಂದ ಪ್ರತಿಯೊಂದು ಊರಿನಲ್ಲೂ ”ಥಿಯೇಟರ್” ಕಟ್ಟಿಸಬೇಕಾಗುತ್ತಿತ್ತು. ಸರಾಸರಿ ಒಂದು ಸಾವಿರ ರೂ. ಅದಕ್ಕಾಗಿ ವೆಚ್ಚವಾಗುತ್ತಿತ್ತು.
ಮತ್ತಷ್ಟು ಓದು »

29
ಸೆಪ್ಟೆಂ

ಸಂಸ್ಕೃತಿ ಸಂಕಥನ – ೭

– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ

ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು »

29
ಸೆಪ್ಟೆಂ

ಲೈಫು ಇಷ್ಟೇನೇ

– ರೂಪಾ ರಾಜೀವ್
ಗಾಂಧಿನಗರದಲ್ಲಿ ತಯಾರಾಗುವ ಪ್ರತಿ ಚಲನಚಿತ್ರಗಳು ಇಂತಿಂತಹ ಗುಂಪಿಗೆ ಎಂದು ತಯಾರಾಗುತ್ತವೆ.  ಉದಾಹರಣೆಗೆ ಮಚ್ಚು, ಲಾಂಗ್, ಫೈಟ್, ಇಂತಹವು ಒಂದು ವರ್ಗದ ವೀಕ್ಷಕರಿಗೆ, ಕಣ್ಣೀರು, ತಾಯಿ ಸೆಂಟಿಮೆಂಟ್ಸ್ ಮತ್ತೊಂದು ವರ್ಗದವರಿಗೆ, ದೇವಿ ಮಹಾತ್ಮೆ ಇಂತಹ ಭಕ್ತಿ ಪ್ರಧಾನ ಚಿತ್ರಗಳು ಇನ್ನೊಂದು ವರ್ಗದ ವೀಕ್ಷಕರಿಗೆ, ಹೀಗೆ.  ಯೋಗರಾಜ್ ಭಟ್ ತಮ್ಮ ‘ಪಂಚರಂಗಿ’ ನಿರ್ಮಾಣದ ವೇಳೆಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು, ನಮ್ಮ ಕನ್ನಡ ಚಲನಚಿತ್ರಗಳು ಉಳಿಯಬೇಕಾದರೆ ಅಥವಾ ಥಿಯೇಟರು ಗಳಲ್ಲಿ ಹಣ ಮಾಡಬೇಕೆಂದಿದ್ದರೆ ಆ ಚಿತ್ರವು ಯುವ ಜನಾಂಗವನ್ನು ಅಂದರೆ ೧೮ ವಯಸ್ಸಿನಿಂದ ೨೩ ವರ್ಷದವರನ್ನು ಸೆಳೆಯುವಂತಿರಬೇಕು. ಆ ವರ್ಗದವರಿಗೆ ಸಿನೆಮಾ ಹಿಡಿಸಿದರೆ ಚಿತ್ರವು ಹಿಟ್ ಆಗುವುದು ಎಂದಿದ್ದರು. ಅವರ ಶಿಷ್ಯ ಪವನ್ ಕುಮಾರ್ ಅಕ್ಷರಷಃ ಭಟ್ಟರ ಈ ಮಾತಿಗೆ ಮಾರು ಹೋಗಿ ನಿರ್ದೇಶಿಸಿರುವ ಸಿನೆಮಾ ‘ಲೈಫು ಇಷ್ಟೇನೇ’.

ಮತ್ತಷ್ಟು ಓದು »

28
ಸೆಪ್ಟೆಂ

ಬೆಳಕಿಗಿಂತ ವೇಗವಾಗಿ ಚಲಿಸಬಹುದಾದದ್ದು ಯಾವುದು?

ವಿಷ್ಣು ಪ್ರಿಯ

ಸೆರ್ನ್ ವಿಜ್ಞಾನಿಗಳ ಪ್ರಯೋಗ ಭೌತಶಾಸ್ತ್ರದ ಮೂಲನಿಯಮವನ್ನೇ ಅಲ್ಲಾಡಿಸುತ್ತಿದೆಯಲ್ಲ ಎಂಬ ಚಿಂತೆ ಈಗಾಗಲೇ ಹಲವರಲ್ಲಿ ಮೂಡಿದೆ. ಬೆಳಕಿಗಿಂತ ವೇಗವಾಗಿ ಚಲಿಸುವುದಕ್ಕೆ ಹೇಗೆ ಸಾಧ್ಯ? ಇದನ್ನು ಆರಂಭದಲ್ಲಿ ಸೆರ್ನ್ ವಿಜ್ಞಾನಿಗಳೂ ನಂಬಲಿಲ್ಲ. ಆದರೆ ತಮ್ಮ ಯಂತ್ರೋಪಕರಣಗಳಲ್ಲಿ, ಲೆಕ್ಕಾಚಾರಗಳಲ್ಲಿ ಯಾವುದೇ ದೋಷ ಇಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕವೇ ಅವರು ಮಾಹಿತಿಯನ್ನು ಹೊರಹಾಕಿದ್ದಾರೆ. ಹಾಗಿದ್ದರೆ ಐನ್ ಸ್ಟೀನನ ಸಿದ್ಧಾಂತವೇ ತಪ್ಪೇ?

ಇದರ ಬಗ್ಗೆಯೇ ಚಿಂತಿಸುತ್ತಾ ಅಂತರ್ಜಾಲದಲ್ಲಿ ಹುಡುಕಾಡುತ್ತಿರಬೇಕಾದರೆ ಟ್ರುಥ್ ಡೈವ್ ಎಂಬ ಅಂತರ್ಜಾಲತಾಣದಲ್ಲಿ ಕವಿ, ಲೇಖಕ, ಎಂಜಿನಿಯರ್ ಮನೋಹರನ್ ಸಂಬಂದಮ್ (Manoharan Sambandam) ಎಂಬವರು ಬರೆದಿದ್ದಂಥ ಲೇಖನ ಸಿಕ್ಕಿತು. ಅವರ ವಾದಸರಣಿ ನಿಜಕ್ಕೂ ಮನಸ್ಸಿಗೆ ನಾಟಿತು. ನನ್ನ ಬ್ಲಾಗ್ ಮಿತ್ರರಿಗಾಗಿ ಈ ಲೇಖನದ ಯಥಾವತ್ ಕನ್ನಡಾನುವಾದವನ್ನು ಇಲ್ಲಿ ಕೊಡುತ್ತಿದ್ದೇನೆ.

ಇಲ್ಲಿಂದ ಮನೋಹರನ್ ಲೇಖನ….

ಮತ್ತಷ್ಟು ಓದು »