ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

17
ಸೆಪ್ಟೆಂ

ಕತ್ತಲೆಯಲ್ಲಿ ಕನ್ನಿಕಾ…

ಶ್ರೀಮುಖ ಸುಳ್ಯ

ಕತ್ತಲೆಯ ಕೋಣೆಯಲ್ಲಿ ಕನ್ನಿಕಾ ಬಿಕ್ಕಿ-ಬಿಕ್ಕಿ ಅಳುತ್ತಾ ಇದ್ದಾಳೆ. ಅವಳ ಕಣ್ಣೀರು ಕಣ್ಣನ್ನು ತೊರೆಯದಂತೆ ರೆಪ್ಪೆಗಳು ಮಾಡಿದ ಯತ್ನಗಳು ವಿಫಲವಾಗುತ್ತಿವೆ. ಕಣ್ಣಿನ ರೆಪ್ಪೆಯ ಬಂಧವನ್ನು ಕಳೆದು ಕಣ್ಣ ಹನಿಗಳು ಕೆನ್ನೆಯನ್ನು ಒರೆಸಿ, ಸಮಾಧಾನಿಸುವಲ್ಲಿ ಅಸಹಾಯಕರಾಗಿ ಕೆಳಬೀಳುತ್ತಿವೆ. ಮುಚ್ಚಿದ ಕೋಣೆಯ ಬಾಗಿಲು- ಆಕೆಯ ನೋವು ಕತ್ತಲಿನಿಂದ ಬೆಳಕಿನೆಡೆಗೆ ಸರಿಯದಂತೆ ನೋಡಿಕೊಳ್ಳುತ್ತಿವೆ. ತುಂಬಿದ ಮನೆಯ- ಮುಂದಿನ ಕೋಣೆಯ- ಗೋಡೆಗಳ ಬದಿಯಲ್ಲಿ ಆಕೆ ಕುಳಿತು ಅಳುತ್ತಿರುವ ಕಾರಣ ಆದರು ಏನು?!.. ಆಕೆಯ ಬೆಚ್ಚಗಿನ ಮಡಿಲಲ್ಲಿ, ಸೆರಗನ್ನು ಬಳಸಿ ಮಗುವಿನಂತಹ ಚಿಕ್ಕದೊಂದು ಗೊಂಬೆ ಉಸಿರಿಡದೆ ಮಲಗಿದೆ.    

          ಕೋಣೆಯ ಕತ್ತಲಿಗೂ- ಆಕೆ ಮಗುವಿನ ಮನಸ್ಸೊಂದನ್ನು ಕಳಕೊಂಡಿದ್ದಾಳೆ- ಎಂಬುದು ಸ್ಪಷ್ಟವಾಗಿ ತಿಳಿಯುವಂತಿದೆ. 
               ಸರಿಯಾಗಿ 2 ವರ್ಷಗಳ ಹಿಂದೆ, ಪರಮೇಶಿ ಅನ್ನುವ ದೂರದ ಸಂಬಂಧಿ ಕನ್ನಿಕಾಳಿಗೆ ಹತ್ತಿರವಾಗಿರುತ್ತಾನೆ. ಇಬ್ಬರೂ ಸ್ನೇಹಿತರಾಗಿರುತ್ತಾರೆ. ಪರಮೇಶಿ ಸ್ನೇಹವನ್ನು ಪ್ರೀತಿಯಾಗಿ ಬದಲಿಸುವ ಹಂಬಲವನ್ನು ಮುಂದಿಟ್ಟಾಗ,ಬಹಳ ಕಟುವಾಗಿ ತಿರಸ್ಕರಿಸಿದ ಕನ್ನಿಕಾ-ಕೆಲ ತಿಂಗಳುಗಳ ನಂತರ ಒಲುಮೆಗೆ ಒಪ್ಪಿಯೇ ಬಿಡುತ್ತಾಳೆ.  ಮತ್ತಷ್ಟು ಓದು »
16
ಸೆಪ್ಟೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಮಗು ಅರ್ಥ ಹೇಳುತ್ತಾನೆ…

ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಯಕ್ಷಗಾನ ಅಭಿಮಾನಿಗಳಿಗಾಗಿ ‘ನಿಲುಮೆ’ಯಲ್ಲಿ ಪ್ರಕಟವಾಗುತ್ತಿದೆ.
 

ಬಣ್ಣದ ಬದುಕು 2

 ತೀರ್ಥರೂಪರ ಕವಿತೆಗಳಲ್ಲಿ ‘ಕುಕ್ಕುಟಾಪುರ’ವೆನಿಸಿ ಮೆರೆದ ಕೋಳ್ಯೂರು ನಮ್ಮ ಬಯಲಿನಂತಹ ಹತ್ತಾರು ಬಯಲುಗಳಿಗೆ ದೈವ ಕೇಂದ್ರ. ಅಲ್ಲಿನ ‘ಮಂಡಲಪೂಜೆ’ ಎಂದರೆ ಸುತ್ತಿನ ಹತ್ತು ಗ್ರಾಮಗಳಲ್ಲೂ ಪ್ರಸಿದ್ಧವಾಗಿತ್ತು. ಕೆಲವರು ಆಸಕ್ತರಿಂದಾಗಿ ಜಾತ್ರೆಯ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ (ಆ ಹೆಸರಿನಿಂದಲ್ಲವಾದರೂ) ಅಲ್ಲಿ ನಡೆಯುವುದಿತ್ತು. ನಮ್ಮತ್ತ ಸಾಂಸ್ಕೃತಿಕ ಕಾರ್ಯಕ್ರಮಗಳೆಲ್ಲ ಪುರಾಣವಾಚನ, ಹರಿಕಥೆ, ತಾಳಮದ್ದಳೆಗಳಿಗೆ ಮಾತ್ರ ಮುಕ್ತಾಯಗೊಳ್ಳುತ್ತಿದ್ದವು. ಆಗಿನ ಕಾಲದಲ್ಲಿ ಹತ್ತು ಸಮಸ್ತರು ಭಾಗವಹಿಸಿದ ಚಟುವಟಿಕೆಗಳೆಲ್ಲ ಅಲ್ಲೇ ನಡೆಯಬೇಕು.

ಚಟುವಟಿಕೆಯ ಕಾರ್ಯಕ್ರಮಗಳು ಏನಿದ್ದರೂ, ತಂದೆಯವರು ಪ್ರಮುಖ ಕಾರ್ಯಕರ್ತರಲ್ಲೊಬ್ಬರಾಗಿರುವಾಗ, ನಮಗೆ ಸುದ್ದಿ ಸಿಗದಿರುತ್ತದೆಯೆ? ನನ್ನ ಜೊತೆಯವರೊಂದಿಗೆ ನಾನೂ ಅಲ್ಲಿ ಹಾಜರಾಗುತ್ತಿದ್ದೆ. ಮನೆಯಿಂದ ಕೋಳ್ಯೂರಿಗೆ ಇರುವ ನಾಲ್ಕು ಮೈಲು ದೂರವೇನು ಮಹಾ? ಬಯಲಿನ ತುದಿಗೆ ಬಂದು, ಇನ್ನೊಂದು ಬಯಲು ಕಳೆದ ಮೇಲೆ, ಹೊಳೆಯನ್ನು ದಾಟಿ, ಒಂದು ಗುಡ್ಡವನ್ನು ಏರಿ, ನಡುವೆ ಇದ್ದ ತಟ್ಟಿನಲ್ಲಿ ಅಷ್ಟು ದೂರ ನಡೆದು ಗುಡ್ಡ ಇಳಿದರೆ ಆಯಿತು. ಕೋಳ್ಯೂರ ದೇವಸ್ಥಾನ ಕಾಣಿಸುತ್ತದೆ. ಮತ್ತಷ್ಟು ಓದು »

16
ಸೆಪ್ಟೆಂ

ವಿಮಾನಯಾನ: ವಿಷಯಾನ

ಪ್ರಶಸ್ತಿ ಪಿ, ಶಿವಮೊಗ್ಗ

ಶೀರ್ಷಿಕೆ ನೋಡಿ ನಾನು ಪೋಲಿಸರು ಹತ್ತಿಸುತ್ತಾರೆ ಅನ್ನೋ ವಿಮಾನದ ಬಗ್ಗೆ ಮಾತಾಡ್ತಾ ಇದ್ದೀನಾ ಅಂತ ಕೆಲವ್ರಿಗೆ ಸಂದೇಹ ಬಂದ್ರೂ ಬಂದಿರ್ಬೋದು. ಇಲ್ಲಾ ಸ್ವಾಮಿ. ನಾ ಹೇಳ್ತಿರೋದು ಜನ್ರು ಬೇಗ ಹೋಗ್ಬೇಕೋ, ದೂರ ಹಾರ್ಬೇಕು ಅಂತ ಬಳಸೋ ವಿಮಾನದ ಬಗ್ಗೇನೆ. ಅದು ಅಪಘಾತವಾಗಿ ಸುಮಾರು  ಜನ ಸಾಯ್ತಾರೆ.ಆದ್ರೆ ಅದ್ರಲ್ಲಿನ ಪ್ರತೀ ಪ್ರಯಾಣವೂ ಹೇಗೆ ವಿಷಯಾನ ಆಗತ್ತೆ ಅಂತ ಕುತೂಹಲ ಕಾಡೋಕೆ ಶುರು ಆಯ್ತಾ? ಹಾಗಾದ್ರೆ ಮುಂದೆ ಓದಿ.

ಕಾಸ್ಮಿಕ್ ಕಿರಣಗಳು ಅಂತ ನೀವು ಕೇಳಿರಬಹುದು.ಅಂತರಿಕ್ಷದಲ್ಲಿ ಸಂಚರಿಸ್ತಾ ಇರೋ ಶಕ್ತಿಭರಿತವಾದ ಹೀಲಿಯಂ ಅಯಾನುಗಳು, ಪ್ರೋಟಾನುಗಳು ಇತ್ಯಾದಿಗಳಿಗೆ ಹಾಗೆನ್ನುತ್ತಾರೆ. ಅವು ನಮ್ಮ ಭೂಮಿಯ ಕಡೇನೂ ಬರ್ತಿರುತ್ತೆ. ಆದ್ರೆ ನಮ್ಮ ಹೀರೋ ಸೂರ್ಯನ ಮತ್ತು ಭೂಮಾತೆಯ ಆಯಸ್ಕಾಂತೀಯ ಕ್ಷೇತ್ರಗಳು ಅವನ್ನು ಭೂಮಿಯಿಂದ ದೂರ ತಳ್ಳೋಕೆ ಪ್ರಯತ್ನ ಮಾಡ್ತಾ ಇರುತ್ತೆ. ಹೆಚ್ಚು ದೂರ ಕ್ರಮಿಸಿದಂತೆ, ಭೂಮಿಯ ವಾತಾವರಣದಿಂದಲೂ ಆ ಕಿರಣಗಳ ತೀವ್ರತೆ ಸ್ವಲ್ಪ ಕಮ್ಮಿ ಆಗುತ್ತೆ. ಹಂಗಂತಾ ನಾವ್ಯಾವಾಗ್ಲೂ ಸುರಕ್ಷಿತರಲ್ಲ ಸ್ವಾಮಿ. ಸೂರ್ಯನೇ ಕೆಲವೊಮ್ಮೆ ಸೌರಜ್ವಾಲೆಗಳ ಮೂಲಕ ಕಾಸ್ಮಿಕ್ ಕಿರಣಗಳಿಗೆ ಪುಷ್ಟಿ ನೀಡೋದುಂಟು. ಸೂರ್ಯನಿಗೂ ಸೂರ್ಯಚಕ್ರ ಅಂತ ಇರುತ್ತೆ. ಪ್ರತೀ ಹನ್ನೊಂದು ವರ್ಷಕ್ಕೆ ಪುನರಾವರ್ತನೆ ಆಗತ್ತೆ. ತೀಕ್ಷ್ಣ ಅವಧಿ ಅಂದರೆ ಸೂರ್ಯನಲ್ಲಿ ನಡೆಯೋ ಚಟುವಟಿಕೆಗಳೆಲ್ಲಾ ಚೆನ್ನಾಗಿ ನಡೆದು ಅದರಿಂದ ಪ್ರಬಲ ಆಯಸ್ಕಾಂತೀಯ ಕ್ಷೇತ್ರ ನಿರ್ಮಾಣ ಆಗೋ ಸಮಯ. ದುರ್ಬಲ ಅಂದ್ರೆ ಇದಕ್ಕೆ ವ್ಯತಿರಿಕ್ತ.  ಈ ರೀತಿ ದುರ್ಬಲವಾದಾಗ ತೀಕ್ಣವಾಗಿದ್ದಾಗ ತಡೆಯೋದಕ್ಕಿಂತ ೪೦ ಪ್ರತಿಶತ ಕಮ್ಮಿ ತಡೆಯುತ್ತೆ. ಇಷ್ಟೆಲ್ಲಾ ಪೀಠಿಕೆ ಆದ ಶೀರ್ಷಿಕೆಯ ವಿಷಯಕ್ಕೆ ಬರೋಣ. ಮತ್ತಷ್ಟು ಓದು »

13
ಸೆಪ್ಟೆಂ

ಅಶ್ವಮೇಧ ಯಾಗ…

– ವೇದಸುಧೆ

ಅಶ್ವಮೇಧ ಯಾಗ: ಶತಪಥ ಬ್ರಾಹ್ಮಣದಲ್ಲಿ ಅಶ್ವಮೇಧದ ಬಗ್ಗೆ ಹೇಳಿದೆ…….. “ಅಶ್ವಂ ಇತಿ ರಾಷ್ಟ್ರಂ” ಅದರ ವಿವರಣೆ ಹೀಗಿದೆ. ಶ್ವ: ಅಂದರೆ ನಾಳೆ. ಅಶ್ವ: ಅಂದರೆ ಯಾವುದಕ್ಕೆ ನಾಳೆ ಇಲ್ಲವೋ ಅದು.ಯಾವುದಕ್ಕೆ ನಾಳೆ ಎನ್ನುವುದು ಇಲ್ಲವೋ ಅದಕ್ಕೆ ನಿನ್ನೆ ಎಂಬುದೂ ಇಲ್ಲ. ಅಂದರೆ ಯಾವುದು ನಿರಂತರವಾಗಿ ಇದ್ದೇ ಇರುತ್ತದೋ ಅದಕ್ಕೆ ನಿನ್ನೆ ನಾಳೆಗಳಿಲ್ಲ.ಯಾವುದಕ್ಕೆ ನಿನ್ನೆ ನಾಳೆಗಳಿರುತ್ತದೆ ಎಂದರೆ ಯಾವುದುಶಾಶ್ವತ ವಲ್ಲವೋ ಅದಕ್ಕೆ ಇರುತ್ತದೆ. ನಿನ್ನೆ ಇತ್ತು, ಇವತ್ತು ಇದೆ. ನಾಳೆ ಗೊತ್ತಿಲ್ಲ ಅಂದರೆ ಅದು ಶಾಶ್ವತವಲ್ಲ ಎಂದಾಯ್ತು.ಯಾವುದು ನಿನ್ನೆ ಇತ್ತು, ಇವತ್ತೂ ಇದೆ, ನಾಳೆಯೂ ಇರುತ್ತದೋ ಅದು ಮಾತ್ರ ಶಾಶ್ವತ.ಯಾವುದು ನಿರಂತರವಾಗಿರುತ್ತದೆ, ಅದು ಅಶ್ವ.ಆದ್ದರಿಂದಲೇ “ಅಶ್ವಂ ಇತಿ ರಾಷ್ಟ್ರಂ” ನಾನು ಇವತ್ತು ಇದ್ದೀನಿ, ನಾಳೆ ಗೊತ್ತಿಲ್ಲ.ಆದರೆ ರಾಷ್ಟ್ರಶಾಶ್ವತ.[“ದೇಹ ನಶ್ವರವೆಂದು, ದೇಶಶಾಶ್ವತವೆಂದು, ನಶ್ವರವುಶಾಶ್ವತಕೆ ಮುಡಿಪಾಗಲೆಂದು” ಎಂಬ ಗೀತೆ ಕೇಳಿರುವೆ] ನಾವೆಲ್ಲಾ ಪ್ರಜೆಗಳು ಇಂದು ಇದ್ದೀವಿ. ಇನ್ನೊಂದು ಐವತ್ತು ವರ್ಷ ನಾವು ಇರಬಹುದೇನೋ , ಮತ್ತೆ ಬೇರೆ ಪ್ರಜೆಗಳ ಹುಟ್ಟು, ಸಾವು, ಇದೆಲ್ಲಾ ನಡೆಯುತ್ತಲೇ ಇರುತ್ತದೆ.ಎಷ್ಟೋ ತಲೆಮಾರು ಕಳೆಯುತ್ತಲೇ ಇರುತ್ತದೆ ,ಅದರೆ ರಾಷ್ಟ್ರ ಮಾತ್ರ ನಿರಂತರ. ನಿರಂತರವಾಗಿರುವ ಭೂಮಿ ರಾಷ್ಟ್ರ. ಇಂದು ಇದ್ದು ನಾಳೆ ಇಲ್ಲಾವಾಗುವವರು ನಾವು ನೀವು.

ಮತ್ತಷ್ಟು ಓದು »

12
ಸೆಪ್ಟೆಂ

ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?

– ಕೆ.ಎಸ್ ರಾಘವೇಂದ್ರ ನಾವಡ

  “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!

ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್  ಕಾರ್ಯಕರ್ತರ ಹಠಾತ್ ಕಣ್ಮರೆ..

ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ

ಕಾಲ : ೨೦೦೨

ಆ ನರಮೇಧದ ಹಿ೦ದಿನ ರೂವಾರಿಯ  ಹೆಸರು ಸುಶಾ೦ತ್ ಘೋಷ್!!

ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..

 

ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು!   ಒಮ್ಮೆ ಮಮತಾ ದೀದಿ   ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು  ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!

ಮತ್ತಷ್ಟು ಓದು »

12
ಸೆಪ್ಟೆಂ

ರೇಲ್ವೇ ಇಲಾಖೆ ಮತ್ತು ಹಿಂದಿ ಹೇರಿಕೆ.!

– ಮಹೇಶ.ಎಮ್.ಆರ್

ವಿ.ಸೂ: ಬೇರೆ ಒಂದು ಬಾಶೆಯನ್ನು ಗೌರವಿಸುವುದಕ್ಕೂ ಅದನ್ನು ನಮ್ಮ ಮೇಲೆ ಹೇರಿಸಿಕೊಳ್ಳುವುದಕ್ಕೂ ಇರುವ ವ್ಯತ್ಯಾಸವನ್ನು ತಿಳಿದಿರುವವರು ಮಾತ್ರ ಮುಂದುವರಿಯಲು ಕೋರಿಕೆ.!

ಸ್ವಾತಂತ್ರ್ಯ ನಂತರ, ಬಾರತೀಯತೆಗೂ ಹಿಂದಿಗೂ ತಳುಕು ಹಾಕಿ ಅದನ್ನು ರಾಶ್ಟ್ರ ಬಾಶೆ ಮಾಡಲು ಹೊರಟ ಕೇಂದ್ರ ಸರಕಾರದ ಮತ್ತು ಕೆಲವರ ಪ್ರಯತ್ನ ಅನೇಕ ಹಿಂದಿಯೇತರರ ವಿರೋದಿ ಹೋರಾಟದ ಫಲವಾಗಿ ವಿಫಲವಾಯಿತು. ಇದರ ತರುವಾಯ ಮುಂದೆ ಕೇಂದ್ರ ಸರಕಾರ ನೋಡಿಕೊಂಡ ದಾರಿಯೇ ಆಡಳಿತ ಬಾಶೆಯೆಂಬ ಹಿಂದಿನ ಬಾಗಿಲು. ಹಿಂದಿಯನ್ನು ಆಡಳಿತ ಬಾಶೆಯನ್ನಾಗಿ ಮಾಡಿ ತನ್ನ ಸಂಸ್ಥೆ, ಇಲಾಖೆ, ಬ್ಯಾಂಕುಗಳನ್ನು ಉಪಯೋಗಿಸಿ ಹಿಂದಿನ ಬಾಗಿಲ ಮೂಲಕ.

ಮತ್ತಷ್ಟು ಓದು »

11
ಸೆಪ್ಟೆಂ

ಮಿಂಚು ಮರೆಯಾದಾಗ…

– ಅಬ್ದುಲ್ ಸತ್ತಾರ್,ಕೊಡಗು

ಅದು ನಿರ್ಜನವಾದ ಒಂಟಿ ಮನೆ. ಸುತ್ತಲೂ ಹಸಿರಲ್ಲದೆ ದೂರದಲ್ಲೊಂದು ಬೆಟ್ಟ, ಮನೆಯ ಬೇಲಿ ದಾಟಿದಾಗ ನೆಟ್ಟಗೆ ಹಾದು ಹೋಗಿರುವ ರೈಲು ಕಂಬಿ. ಮಳೆ ಸುರಿಸೀ ಸುರಿಸೀ ಸುಸ್ತಾಗಿದ್ದ ಮಳೆರಾಯ ಅಂದು ಸುಮ್ಮನಾಗಿದ್ದ. ಮರ – ಗಿಡ – ಬಳ್ಳಿಗಳೆಲ್ಲಾ ಕೊಟ್ಟಿಕ್ಕುತ್ತಾ ಹಾಯಾಗಿದ್ದವು. ತಂಪು ತಂಪು ಗಾಳಿ, ಚಿಲಿ-ಪಿಲಿ ನಾದ. ವಾತಾವರಣ ನೋಡಿ ಸಮಯವೆಷ್ಟೆಂದು ಅಂದಾಜಿಸುವುದು ಅಸಾಧ್ಯ.

ಆ ಮನೆಯಿಂದ ಇಬ್ಬರು ಹೊರಬಂದರು. ಹೆಣ್ಣು-ಗಂಡು ಅಥವಾ ಪ್ರೇಯಸಿ-ಪ್ರಿಯತಮ ಅಥವಾ ಗಂಡಾ-ಹೆಂಡಿರಿರಬಹುದು. ಅವಳಿಗೆ ತಲೆ ತುಂಬಾ, ಮೈ ತುಂಬಾ ಶಾಲು ಹೊದಿಸಲಾಗಿತ್ತು. ಒಂದು ಕಯ್ಯಲ್ಲಿ ಮಡಚಿದ ಕೊಡೆ, ಮತ್ತೊಂದು ಕಯ್ಯಿಂದ ಅವಳ ತೋಳನ್ನ ಬಳಸಿಕೊಂಡಿದ್ದ. ವಿಶಾಲ ಜಗುಲಿ ದಾಟಿ ಗೇಟು ಮುಚ್ಚಿ ರೈಲು ಕಂಬಿಯಲ್ಲಿ ನಡೆಯಲು ಶುರುವಾದರು.

“ಆಗೋಲ್ಲ ಕಣೋ, ತುಂಬಾ ಚಳಿಯಾಗ್ತಿದೆ”, “ಏನೂ ಆಗೋಲ್ಲ ಪುಟ್ಟ, ಇಷ್ಟು ದಿನ ಜ್ವರ ಹಿಡುಕೊಂಡು ಮಲಗಿದ್ದ ನಿನಗೆ ಇದೊಳ್ಳೆ ಬಿಡುವು ಕೊಡುತ್ತೆ, ಇನ್ನು ಸ್ವಲ್ಪೇ ಸ್ವಲ್ಪ ನಡೆಯೋಣ”ಅಂದ. ಗೊರ ಗೊರ ಕೆಮ್ಮಿದಳು. ಪೂರ್ತಿ ನಿಶ್ಯಕ್ತಳಾಗಿದ್ದಳು. ಕೊಡೆಯನ್ನ ಹಳಿಯಲ್ಲಿ ಬಿಟ್ಟು ಅವಳನ್ನ ಗಟ್ಟಿಯಾಗಿ ತಬ್ಬಿಕೊಂಡ. ಅವಳು ಅಳುಮುಖದೊಂದಿಗೆ ಅವನನ್ನ ದಿಟ್ಟಿಸಿದಳು. ಕಣ್ಣು ಕೆಂಪಾಗಿತ್ತು. ಅವನ ಕಣ್ಣೂ ಯಾಕೋ ಹನಿಗೂಡಿತು. ಸ್ವಲ್ಪ ಹೊತ್ತು ಹಾಗೇ….,
ಮತ್ತಷ್ಟು ಓದು »

9
ಸೆಪ್ಟೆಂ

ಯಾರು ಅಪಾಯಕಾರಿ!?

– ಸಚಿನ್

ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.

ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ  ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.

ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.

 

ಮತ್ತಷ್ಟು ಓದು »

8
ಸೆಪ್ಟೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ

“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…”  ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು  18.11.1972  ರಂದು ಬಣ್ಣ ಕಳಚಿ  ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912  ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ  ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ  ಅಂಕಣಕಾರ  ಪದ್ಯಾಣ ಗೋಪಾಲಕೃಷ್ಣ  ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…

—————-

ಮತ್ತಷ್ಟು ಓದು »

8
ಸೆಪ್ಟೆಂ

ಮೊದಲ ಪ್ರೇಮ ಗೀತೆ……

ಪವನ್ ಪರುಪತ್ತೇದಾರ್

ಸುತ್ತಲೂ ದೊಡ್ಡದಾಗಿ ನೆರೆದಿದ್ದ ವಿದ್ಯಾರ್ಥಿ ಸಮೂಹ, ಅಲ್ಲಲ್ಲಿ ಒಬ್ಬಬ್ಬರು ಒಂದೊಂದು ಆಟ ಅಡುತಿದ್ದರು. ಕೆಲವರು ಬಾಕ್ಸ್ ಟೆನ್ನಿಸ್, ಕೆಲವರು ಲೆಗ್ ಕ್ರಿಕೆಟ್, ಕೆಲವರು ಹೈ ಜಂಪ್ ಮತ್ತೆ ಕೆಲವರು ಕಬ್ಬಡ್ಡಿ, ಇನ್ನೊಂದು ಬದಿಯಲ್ಲಿ ಕೆಲವು ವಿದ್ಯಾರ್ಥಿಗಳು ನೆನ್ನೆ ಕೊಟ್ಟ ಹೋಂ ವರ್ಕ್ ಮನೆಯಲ್ಲಿ ಮಾಡಿಲ್ಲದಿದ್ದರಿಂದ ಸ್ನೇಹಿತರ ಬಳಿ ಪಡೆದು ಆತುರಾತುರವಾಗಿ ಗೀಚುತಿದ್ದರು.

ಅಲ್ಲೇ ಒಂದು ಮೂಲೆಯಲ್ಲಿ ಪ್ರವೀಣ ಗೆತನ್ನೇ ನೋಡುತ್ತಾ ನಿಂತಿದ್ದ. ತನ್ನ ಸ್ನೇಹಿತರೆಲ್ಲ ಒಂದಲ್ಲ ಒಂದು ಆಟ ಅಡುತಿದ್ದರು ಪ್ರವಿಣನಿಗೆ ಅ ಕಡೆ ಗಮನ ಬಂದಿಲ್ಲ, ಅವನ ಗಮನ ಏನಿದ್ದರು ಸಂಪೂರ್ಣ ಗೇಟಿನ ಕಡೆಯೇ ಕೆಂದ್ರಿಕ್ರುತವಗಿತ್ತು. ಇದ್ದಕ್ಕಿದ್ದಂತೆ PT ಮೇಷ್ಟ್ರು ಜೋರಾಗಿ ಪೀಪಿ ಊದಿದರು. ಆಡುತಿದ್ದ ಮಕ್ಕಳೆಲ್ಲರೂ ಓಡೋಡಿ ಬಂದು ಸಾಲುಗಳಲ್ಲಿ ನಿಂತರು. ಹೋಂ ವರ್ಕ್ ಮದುತಿದ್ದವರೆಲ್ಲ ಘಾಬರಿ ಘಾಬರಿಯಾಗಿ ಪುಸ್ತಕಗಳನ್ನು ಹೇಗೆ ಬರೆಯುತಿದ್ದರೋ ಹಾಗೇ ಬ್ಯಾಗ್ ಗೆ ತುಂಬಿಸಿಕೊಂಡು ಬಂದು ಸಾಲಲ್ಲಿ ನಿಂತರು. ಪ್ರವೀಣ ಗೇಟನ್ನು ನೋಡುತ್ತಲೇ ಮುಖ ಚಿಕ್ಕದು ಮಾಡಿಕೊಂಡು ಬೇಸರವಾಗಿ ಭಾರವಾದ ಹೆಜ್ಜೆ ಇಡುತ್ತಾ ಬಂದು ಸಾಲಿನ ಮುಂಭಾಗದಲ್ಲಿ ಪ್ರಾರ್ಥನೆ ಹೇಳಿಕೊಡುವ ಜಾಗದಲ್ಲಿ ನಿಂತನು.  ಅಷ್ಟರಲ್ಲೇ ಬಜಾಜ್ ಸ್ಕೂಟರ್ ಒಂದು ಬಂದು ಗೇಟಿನ ಹೊರಗಡೆ ನಿಂತಿತು. ಭಾರವಾದ ಬ್ಯಾಗ್ ಹೊತ್ತ ಹುಡುಗಿ ತನ್ನ ತಂದೆಗೆ ಟಾಟಾ ಮಾಡುತ್ತ ಗೇಟ್ ಒಳಗೆ ಬಂದು ಓಡೋಡಿ ಪ್ರಾರ್ಥನೆಯ ಜಾಗಕ್ಕೆ ಬರುತಿದ್ದಳು, ಪ್ರವಿಣನ ಬಾಡಿದ್ದ ಮುಖ ಚಿಗುರಿ ಮನ ಆತ್ಮ ವಿಶ್ವಾಸದಿಂದ ತುಳುಕಾಡಿತು. ಬ್ಯಾಗ್ ಪಕ್ಕ ಇಟ್ಟು ಅ ಹುಡುಗಿಯು ಬಂದು ಪ್ರವಿಣನ ಪಕ್ಕ ನಿಂತಳು. ಪ್ರವೀಣ ಯಾಕೆ ಕಾವ್ಯ ಇವತ್ತು ಲೇಟ್ ಅಂದ, ಅಮ್ಮ ಬಾಕ್ಸ್ ಕೊಡೋದು ಲೇಟ್ ಮಾಡಿದ್ರು ಅನ್ನೋ ಮಾಮೂಲಿ ಉತ್ತರವನ್ನೇ ಅವಳು ಕೊಟ್ಟಳು. ಸ್ವಾಮಿ ದೇವನೇ ಲೋಕ ಪಾಲನೆ ಎಂದು ಪ್ರಾರ್ಥನೆ ಮಡಿ ಎಲ್ಲರು ತಮ್ಮ ತಮ್ಮ ತರಗತಿಗಳಿಗೆ ಸೇರಿಕೊಂಡರು… ಮತ್ತಷ್ಟು ಓದು »