ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

15
ಆಗಸ್ಟ್

ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!

– ರಾಕೇಶ್ ಶೆಟ್ಟಿ

ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.

ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.

“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦

ಮತ್ತಷ್ಟು ಓದು »

15
ಆಗಸ್ಟ್

ಸತ್ಯೇಂದ್ರನಾಥ್ ಬೋಸ್ – Another Forgotten Hero…

– ಭೀಮ ಸೇನ್ ಪುರೋಹಿತ್

ನಮ್ಮ ದೇಶದ ಸ್ವಾತಂತ್ರ್ಯಹೋರಾಟಕ್ಕೆ ಅತಿಹೆಚ್ಚು ಹಾಗು ಪ್ರಖರ ಕೊಡುಗೆಗಳನ್ನು  ನೀಡಿದ ಯಶಸ್ಸು ‘ಪಶ್ಚಿಮ ಬಂಗಾಳ’ ರಾಜ್ಯಕ್ಕೆ ಸಲ್ಲುತ್ತದೆ. ಆ ಬಂಗಾಳದ ಮತ್ತೊಂದು ಹುಲಿಯೇ “ಸತ್ಯೇಂದ್ರನಾಥ್ ಬೋಸ್”. ಇವನ ಇಡೀ ಕುಟುಂಬವೇ ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿತ್ತು. ಅವನ ತಂದೆ ‘ರಾಜನಾರಾಯಣ ಬೋಸ್’, ಸಹೋದರರಾದ ‘ಜ್ಞಾನೇಂದ್ರನಾಥ್ ಬೋಸ್’,’ಭೂಪೆಂದ್ರನಾಥ್ ಬೋಸ್’,ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರೆ.. ಮಿಡ್ನಾಪುರ್ ಜಿಲ್ಲೆಯಲ್ಲಿ ಜನಿಸಿದ ಸತ್ಯೇನ್, ಓದಿನಲ್ಲಿ ಜಾಣ. ಬಿ.ಎ ತನಕ ಓದಿದರೂ, ಮುಂದೆ ಓದಲಾಗಲಿಲ್ಲ..ಇನ್ನೊಂದು ವಿಶೇಷ ಅಂದ್ರೆ, ಈ ಸತ್ಯೇಂದ್ರನಾಥ್, ಶ್ರೀ ಅರವಿಂದ್ ಘೋಶರಿಗೆ ಸಂಬಂಧಿ…

“ಅಲಿಪುರ ಬಾಂಬ್ ಪ್ರಕರಣ” ಮತ್ತು “ಮಾಣಿಕ್ ತೊಲಾ ಗಾರ್ಡನ್ ಬಾಂಬ್ ಪ್ರಕರಣ”, ಈ ಎರಡು ಪ್ರಕರಣಗಳೂ, ಸ್ವಾತಂತ್ರ್ಯಹೋರಾಟದ ಸಮಯದಲ್ಲಿ, ಬಂಗಾಳ ಪ್ರಾಂತದಲ್ಲಿ ನಡೆದ ಬಹುದೊಡ್ಡ ಬ್ರಿಟಿಶ್ ವಿರೋಧಿ ಕಾರ್ಯಗಳು.. ಇವೆರಡರ ಹಿಂದೆ ಇದ್ದಿದ್ದು ಬಂಗಾಳದ “ಅನುಶೀಲನ ಸಮಿತಿ” ಹಾಗು “ಯುಗಾಂತರ ಸಮಿತಿ”ಯ ಕ್ರಾಂತಿಕಾರಿಗಳು, ಹಾಗು ಈ ಕ್ರಾಂತಿಕಾರಿಗಳನ್ನ ಪ್ರೆರೆಪಿಸಿದವ್ರು, ಮಹಾನ್ ರಾಷ್ಟ್ರವಾದಿ ( ನಾನಂತೂ ಅವರನ್ನ ‘ಮಹರ್ಷಿ’ ಅಂತಾನೆ ಕರೆಯೋದು ) ಶ್ರೀ ಅರವಿಂದ್ ಘೋಷ್…. ಈ ಎರಡು ಪ್ರಕರಣಗಳಾದ ಮೇಲೆ ಬ್ರಿಟಿಷರು ಎಚ್ಚೆತ್ತು ತನಿಖೆ ಶುರು ಮಾಡಿದ್ರು.. ಎರಡರಲ್ಲಿಯೂ ಬಳಸಲಾದ ಬಾಂಬ್ ಗಳು ಒಂದೇ ಥರದ್ದು ಅಂತ ಗೊತ್ತಾಯ್ತು. ಹೀಗಾಗಿ ಅನುಶೀಲನ ಸಮಿತಿ ಹಾಗು ಯುಗಾಂತರದ ಕೆಲವು ಕ್ರಾಂತಿಕಾರಿಗಳನ್ನ ಬಂಧಿಸಲಾಯ್ತು. ಜೊತೆಗೆ ಇವರೆಲ್ಲರ ಹಿಂದೆ ಇರೋರು ಅರವಿಂದ ಘೋಶರೆ ಅಂತ ಅಪಾದನೆ ಹೊರಿಸಿ ಅವರನ್ನೂ ಜೈಲಿಗೆ ಕಳಿಸಿದರು..ಇದು ಕ್ರಾಂತಿಕಾರಿಗಳಲ್ಲಿ ಬೇಸರ ಹಾಗು ಆಕ್ರೋಶವನ್ನ ಮೂಡಿಸ್ತು..

ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಯ್ತು. ಬ್ರಿಟಿಷರು ಎಂದಿನಂತೆ ಕ್ರಾಂತಿಕಾರಿಗಳಿಗೆ ಚಿತ್ರಹಿಂಸೆ ಕೊಟ್ಟು ಬಾಯಿಬಿಡಿಸೋದಕ್ಕೆ ಪ್ರಯತ್ನಿಸಿದರು.. ಅದಕ್ಕೆ ಹೆದರಿ, ಬ್ರಿಟಿಷರ ಆಮಿಷಕ್ಕೆ ಸೋತು, ‘ನರೇನ್ ಗೋಸ್ವಾಮಿ’ ಅನ್ನೋನು approver ಆಗ್ಬಿಟ್ಟ.. ಭಾರತದ ಇತಿಹಾಸದುದ್ದಕ್ಕೂ ದೇಶಭಕ್ತರಷ್ಟೇ, ದೇಶದ್ರೋಹಿಗಳೂ ಇದಾರೆ..!!!
ಇತ್ತ ಕೋರ್ಟ್ ನಲ್ಲಿ ನರೇನ್ ಎಲ್ಲರ ವಿರುದ್ಧ ಸಾಕ್ಷಿ ಹೇಳೋದಕ್ಕೆ ಶುರು ಮಾಡಿದ. ಅಷ್ಟೇ ಆಗಿದ್ರೆ ಸುಮ್ನಿರ್ತಿದ್ರೆನೋ.. ಆದ್ರೆ ನರೇನ್, ಅರವಿಂದ ಘೋಷ್ ವಿರುದ್ಧನೂ ಸಾಕ್ಷಿ ಹೇಳೋದಕ್ಕೆ ತಯಾರಾದ.ಅಲ್ಲಿಗೆ ಕ್ರಾಂತಿಕಾರಗಳ ಸಿಟ್ಟು ಮಿತಿ ಮೀರಿತು..ಜೈಲಿನ ಒಳಗಿದ್ದ ‘ಸತ್ಯೇಂದ್ರನಾಥ್’ ಹಾಗು ಅವನ ಗೆಳೆಯ ‘ಕನ್ನಯ್ಯಲಾಲ್ ದತ್ತ’ ಇಬ್ರೂ ಸೇರಿ ಆ ದ್ರೋಹಿ ನರೇನ್ ಸಂಹಾರಕ್ಕೆ ಪ್ಲಾನ್ ಹಾಕಿದರು…

ಮತ್ತಷ್ಟು ಓದು »

15
ಆಗಸ್ಟ್

ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ

– ಪವನ್ ಪರುಪತ್ತೆದಾರ್

ಮೊದಲಿಗೆ ನಿಲುಮೆಯ ಎಲ್ಲ ಓದುಗರಿಗೆ ಸ್ವಾತಂತ್ರ್ಯದಿನದ ಶುಭಾಶಯಗಳು. ೬೫ ನೆ ಸ್ವತಂತ್ರ ದಿನದ ಆಚರಣೆ ಎಲ್ಲ ಕಡೆ ಭರ್ಜರಿಯಿಂದ ಸಾಗಲಿ ಎಂದು ಆಶಿಸೋಣ. ೧೯೪೭ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಸಿಕ್ಕಿದ ವಿಷಯ ನಮಗೆಲ್ಲ  ತಿಳಿದಿದ್ದೆ. ಇಂದು  ನಮಗೆ  ಅ  ಸ್ವಾತಂತ್ರ್ಯ ಎಷ್ಟರ ಮಟ್ಟಿಗೆ  ಸಿಕ್ಕಿದೆಯೆಂದರೆ ನಮ್ಮ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸುವ  ಮಟ್ಟಿಗೆ ಸಿಕ್ಕಿದೆ. ನಾ ಬೇಕಾದರೆ ಬಾಜಿ ಕಟ್ಟುತ್ತೇನೆ ನಾಳಿನ ಪೇಪರ್ ನೋಡಿ ನಮ್ಮ ರಾಜ್ಯದಲ್ಲೇ  ಒಂದೆರಡು  ಕಡೆಯಾದರು ಧ್ವಜವನ್ನು ಉಲ್ಟಾ ಹಾರಿಸಿರುತ್ತಾರೆ. ಬ್ರಿಟಿಷರ ದಬ್ಬಾಳಿಕೆ ಹದ್ದು ಮೀರಿದಾಗ ಹಿಂಸೆಯ ನಾನಾ ಮಾರ್ಗಗಳು ಪ್ರಯೋಗಿಸಿ ಹುತಾತ್ಮರಾದವರು, ನಂತರ ದೇಶವನ್ನೆಲ್ಲ ಒಟ್ಟಿಗೆ ಸಂಘಟಿಸಿ ಅಹಿಂಸೆಯಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಾಧ್ಯ ಎಂದು ತೋರಿಸಿಕೊಟ್ಟು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ  ಮಹಾತ್ಮರು, ನಮ್ಮ ಈಗಿನ ಸ್ವಾತಂತ್ರ್ಯವನ್ನೇನಾದರು ನೋಡಿದ್ದರೆ, ಇವರಿಗೆ  ಯಾಕಾದ್ರು ಸ್ವಾತಂತ್ರ್ಯ ಕೊಡಿಸಿದೆವೋ ಎಂದು ಮರುಗುತಿದ್ದರೆನೋ…..

ನನ್ನ  ಮಾತುಗಳು ಅತಿಶಯೋಕ್ತಿ ಎನಿಸಬಹುದು. ಆದರೆ ನಮ್ಮ ದೇಶದಲ್ಲಿ ಎಲ್ಲರಿಗು ಎಷ್ಟು ಸ್ವಾತಂತ್ರ್ಯವಿದೆ ಅಂತ ನಿಮಗೆ ಗೊತ್ತು. ಟ್ರಾಫಿಕ್ ಪೋಲಿಸ್ ಡಾಕುಮೆಂಟ್ ಸರಿ ಇದ್ದರು ಲಂಚ ಪಡೆಯುವ ಸ್ವಾತಂತ್ರ್ಯ, ಖಾತೆ ಬದಲಾವಣೆ ಮಾಡಿಸಬೇಕಾದರೆ ಪತ್ರ ಸ್ಕಾನ್ನಿಂಗ್ ಮಾಡುವನಿಂದ ಹಿಡಿದು, ಮೊಹರು ಹಾಕುವ ಗುಮಸ್ತನಿಂದ ಹಿಡಿದು, revinue inspector ತನಕ ಲಂಚ ಪಡೆಯುವ ಸ್ವಾತಂತ್ರ್ಯ. ಗೆದ್ದೊಡನೆ ತಮ್ಮ ಕ್ಷೇತ್ರದ ಜನತೆಯನ್ನು ಮರೆತು ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡುವ ಸ್ವಾತಂತ್ರ್ಯ, ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತು ಪಕ್ಷಾಂತರ ಮಾಡುವ ಸ್ವಾತಂತ್ರ್ಯ, ರೈತನ ಜಮೀನನ್ನು ಕಸಿದು ಅಧುನಿಕರಣದ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸ್ವಾತಂತ್ರ್ಯ, ನಮ್ಮ ಭೂಮಿಯ ಸಂಪತ್ತಲ್ಲದೆ ಅಂತರಂಗದಲ್ಲಿರುವ ತರಂಗಾಂತರಗಳನ್ನು ಮೋಸದಿಂದ ಮಾರುವ ಸ್ವಾತಂತ್ರ್ಯ, ಇನ್ನು ತಮಾಷೆಯೆಂದರೆ ತಪ್ಪು ಮಾಡಿ ದುಷ್ಕ್ರುತ್ಯಗಳನ್ನೆಸಗಿ ವಾರ್ಷಿಕ ೧೧ ಕೋಟಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿಸಿಕೊಳ್ಳೋ ಸ್ವಾತಂತ್ರ್ಯ ಮತ್ತು ತಪ್ಪಿತಸ್ತ ಎಂದು ಖಾತರಿಯಾದ ಮೇಲು ಶಿಕ್ಷೆ ಇಲ್ಲದೆ ಐಶಾರಾಮಿ ಜೀವನ ನಡೆಸುವ ಸ್ವಾತಂತ್ರ್ಯ, ಇಂತಹದ್ದೆನ್ನಲ್ಲ ವಿರೋಧಿಸಿದರೆ ವಿರೋಧಿಸಿದವರ ವಿರುದ್ದವೇ ಕೇಸು ಜಡಿಯುವ ಸ್ವಾತಂತ್ರ್ಯ.ಆಹಾ ಹೇಳುತ್ತಾ ಹೋದರೆ ಪುಟಗಟ್ಟಲೆ ಇಂತಹ ಸ್ವಾತಂತ್ರ್ಯಗಳು ಸಿಗುತ್ತವೆ.

ಮತ್ತಷ್ಟು ಓದು »

15
ಆಗಸ್ಟ್

ಸ್ವಾತಂತ್ರ್ಯ ಸಂಭ್ರಮ

12
ಆಗಸ್ಟ್

ನೊಂದ ಹುಡುಗಿಯ ಡೈರಿಯಿಂದ…

– ವಿದ್ಯಾ ರಮೇಶ್

ದೇವರೆ,

ಇದೊ ನಿನಗೊಂದು ಪತ್ರ. ಏನು ಈ ಹುಚ್ಚು ಹುಡುಗಿ ನನಗೆ ಪತ್ರ ಬರೆಯುತ್ತಿದ್ದಾಳೆ ಎಂದುಕೊಳ್ಳುತ್ತಿದ್ದೀಯ? ಏನು ಮಾಡಲಿ, ನಿನ್ನ ಜೊತೆ ಯಾವಗಲೊ ಒಂದು ಸರತಿ ಸಂಪರ್ಕಿಸುವ ನಾನು, ಒಂದೇ ಕ್ಷಣದಿ ಎಲ್ಲಾ ಹೇಳಲು ಹೇಗೆ ಸಾಧ್ಯ? ಅದು ಅಲ್ಲದೆ ನಿನಗೆ ಎಲ್ಲಾ ಕೇಳುವ ತಾಳ್ಮೆಯಾದರು ಎಲ್ಲಿದೆ? ಎಷ್ಟೋ ಜನರ ಕೋರಿಕೆಗಳನ್ನ ನೋಡ್ಕೊಬೇಕು ನೀನು.., ಅಂತಹದರಲ್ಲಿ ನನ್ನ ನಿಧಾನಗತಿಯಲ್ಲಿ ಹೇಳುವ ಮಾತುಗಳ ಕೇಳಿಸಿಕೊಳ್ಳಲು ಸಧ್ಯವೆ ನಿನಗೆ? ಕಂಡಿತಾ ಇಲ್ಲ. ಇನ್ನು ನೀನು ಈ ಪತ್ರವನ್ನೂ ಓದ್ತಿಯಾ ಅಂತ ನಾ ಅಂದುಕೊಂಡಿಲ್ಲ…ಹಾಗೆ ಅಂದುಕೊಳ್ಳುವುದು ಮೂರ್ಖತನ ಅಂತಲೂ ಗೊತ್ತು. ಆದ್ರೇನು ಮಾಡ್ಲಿ, ಹೇಗಾದರು ನಿನಗೆ ಕನಿಕರ ಬಂದೋ ಏನೊ ಒಮ್ಮೆ ಈ ಪತ್ರ ಓದಿ ನನ್ನ ಮನಸ್ಥಿತಿ ತಿಳಿದಿಕೊಳ್ತಿಯೇನೋ ಅನ್ನೊ ಒಂದು ಚೂರು ನಂಬಿಕೆ…, ಅದಕ್ಕೆ ನಿನಗೆ ಪತ್ರ ಬರೆಯುತಿರುವುದು…

ನಿನಗೆ ತಿಳಿದಿದೆ ಅಲ್ವ ದೇವ್ರೆ, ನಾನು ನಿನ್ನನ್ನು ಜಾಸ್ತಿ ಏನೂ ಕೇಳಿಕೊಳ್ಳುವುದಿಲ್ಲ. ಅಲ್ಲದೆ ನಿನ್ನ ಬಳಿ ಬರುವುದು ನಾನು ಎಂದೊ ಒಂದು ದಿನ, ಯಾವುದೋ ಹಬ್ಬದಂದು. ಆಗ “ಎಲ್ಲರನ್ನು ಚೆನ್ನಾಗಿ ಇಡು” ಅಥವಾ ಪರೀಕ್ಷೆಗಳು ಹತ್ತಿರ ಬರುತಿದ್ದರೆ “ಓದು ಚೆನ್ನಾಗಿ ಆಗಲಿ, ಪರೀಕ್ಷೆ ಸುಲಭವಾಗಿ ಇರಲಿ” ಎಂದು ಕೇಳಿಕೊಳ್ಳುತೀನಿ. ಅದು ಬಿಟ್ಟು ಬೇರೆ ಏನಾದರು ಕೇಳಿರುವೆನೇನು? ಬೆಳಗೆ ಎದ್ದಾಗ ಒಮ್ಮೆ ನಿನ್ನ ಆ ಫೋಟೊ ನೋಡಿದರೆ ಮತ್ತೆ ನಿನ್ನ ನೋಡುವುದು ಮಾರನೆ ದಿನವೇ! ಇದೇ ನಿನಗೆ ಕೋಪವನ್ನುಂಟು ಮಾಡುತಿದೇಯ? ಮನಸ್ಸಿನಲ್ಲಿರುವ ಭಕ್ತಿ ಸಾಲದೆ? ಬೂಟಾಟಿಕೆಗಾಗಿ ನಡೆಸುವವರ ಭಕ್ತಿಯೇ ನಿನಗೆ ಮೆಚ್ಚೆ?

ಮಧ್ಯಮ ವರ್ಗದಲ್ಲಿದ್ದರೂ ನಿನ್ನ ಎಂದೂ ಇಶ್ವರ್ಯಕ್ಕಾಗಿ ಕೇಳಿಲ್ಲ. ನನ್ನನ್ನು ಸಿರಿಯುಳ್ಳವರ ಮನೆಯಲ್ಲಿ ಹುಟ್ಟಿಸಲಿಲ್ಲವಲ್ಲ ಎಂದು ದೂಡಿಲ್ಲ.., ಅಂತಹದರಲ್ಲಿ ಇದ್ದ ಅಲ್ಪ ಸ್ವಲ್ಪ ಖುಷಿಗೂ ಕಲ್ಲೊಡೆಯುವುದೆ ನೀನು? ಸಂತೊಷವ ಬಯಸಲೇ ಬಾರದೆ ನಾನು? ಬಯಸಬಾರದಂತಾದರೆ ನಾನು ಮಾಡಿರುವ ತಪ್ಪಾದರೂ ಏನು?

ಮತ್ತಷ್ಟು ಓದು »

11
ಆಗಸ್ಟ್

ಕಾಂಗ್ರೆಸ್ಸಿನ ದೇವರು ಮತ್ತು ಪೂಜಾರಿಗಳು..!

ಸಚಿನ್.ಕೆ

ಯುಪಿಎ ಒಕ್ಕೂಟದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಶ್ರೀಮತಿ ಸೋನಿಯ ಗಾಂಧಿ ಸರ್ವೈಕಲ್ ಕ್ಯಾನ್ಸರ್ ನಿಂದ ಬಳಲುತಿದ್ದು ಅಮೆರಿಕದ ಪ್ರಖ್ಯಾತ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿರುವಂತಹದ್ದು. ಅವರು ಬೇಗ ಗುಣಮುಖರಾಗಲಿ ಎಂದು ದೇಶದ ಬಹುತೇಕ ಜನರು ದೇವರಲ್ಲಿ ಪ್ರಾರ್ಥಿಸುತಿದ್ದಾರೆ. ನಾವು ಸಹ ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇವೆ.
ಇಂದು ಮತ್ತು ಮೊನ್ನೆಯ ಕೆಲ ಮುಖ್ಯ ಘಟನೆಗಳನ್ನು ನಾನು ಇಲ್ಲಿ ಪ್ರಸ್ತಾಪಿಸಬೇಕೆಂದಿದ್ದೇನೆ.

ಬಳ್ಳಾರಿಯಲ್ಲಿ ಪ್ರತಿಪಕ್ಷದ ಮುಖಂಡರಾದ ಶ್ರೀ ಸಿದ್ದರಾಮಯ್ಯ ನವರು ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ೧೦೧ ತೆಂಗಿನಕಾಯಿ ಹೊಡೆದು ಮೇಡಂ ಬೇಗ ಗುಣಮುಖರಾಗಲಿಎಂದು ಪೂಜೆ ಸಲ್ಲಿಸಿದರು 

ಮತ್ತಷ್ಟು ಓದು »

10
ಆಗಸ್ಟ್

ಮದನಾರಿ ಬೇಕಾ?

– ಸಚಿನ್

 ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ “ಮದನಾರಿ”, ಚಿತ್ರರಂಗದ ಭಾಷೆಯಲ್ಲಿ ಹೇಳಬೇಕಾದರೆ ಇದೊಂದು ಮಸಾಲ ಕಾರ್ಯಕ್ರಮ, ಇದರ ಮುಖ್ಯ ಆಕರ್ಷಣೆ ಎಂದರೆ ಐಟಮ್ ಗರ್ಲ್ ಗಳ ಬಗ್ಗೆ ಸಂಪೂರ್ಣ ವಾದ ವಿವರ ಅವರ ಜೀವನದ ಏಳು ಬೀಳುಗಳ ಬಗ್ಗೆ ವಿವರ, ಅವರಿಗಿರುವ ಬಾಯ್ ಫ್ರೆಂಡ್ ಗಳು ಜತೆಯಲ್ಲಿ ಇರುವವರ ಹಾಗು ಕೈ ಕೊಟ್ಟವರ ಬಗ್ಗೆ ಮಾತು. ಹಾಗು ಚಿತ್ರ ರಂಗಕ್ಕೆ ಪ್ರವೇಶ ಅದರ ಹಿನ್ನೆಲೆ, ಇನ್ನು ಮುಂತಾದ ಚಿತ್ರ ವಿಚಿತ್ರ ಸಂಗತಿ ಗಳಿಂದ ಕಾರ್ಯಕ್ರಮ ವನ್ನು ನಿರೂಪಕಿ ದಿವ್ಯಶ್ರಿ ಅವರಿಂದ ನಿರೂಪಿತ ವಾಗಿತ್ತದೆ. ಪ್ರತಿ ಭಾನುವಾರ ರಾತ್ರಿ ಹಾಗೂ ವಾರದ ದಿನಗಳಲ್ಲಿ ಮತ್ತೆ ಮರುಪ್ರಸಾರ ಮಾಡಲಾಗುತ್ತದೆ.ಆದರೆ ಇಷ್ಟೇ ಆಗಿದ್ದರೆ ಈ ಕಾರ್ಯಕ್ರಮದ ಬಗ್ಗೆ ನಾವು ಇಲ್ಲಿ ಟೀಕೆ ಮಾಡುವ ಪ್ರಮೇಯ ವೇ ಬರುತ್ತಿರಲಿಲ್ಲ. ಈ ಎಲ್ಲ ವಿವರ ಗಳ ಜತೆಗೆ ಅಶ್ಲೀಲ ದೃಶ್ಯ ಗಳನ್ನು ಪ್ರಸಾರ ಮಾಡುತ್ತಾರಲ್ಲ ಅದು ಹೇಸಿಗೆ ಹುಟ್ಟಿಸುತ್ತೆ.

ಮತ್ತಷ್ಟು ಓದು »

10
ಆಗಸ್ಟ್

ನೇತ್ರಾವತಿಯ ಶ್ರೀಮುಡಿಗೆ ಕೈಯಿಕ್ಕಿರುವ ಎಂ ಎಸ್ ಇ ಜಡ್:ರಕ್ಷಿಸುವ ಪ್ರವೀಣರೆಲ್ಲಿದ್ದಾರೆ?

-ಸುಂದರ ರಾವ್

ಇತ್ತೀಚಿಗೆ ಕೆಲವು ಪತ್ರಿಕೆಗಳಲ್ಲಿ “ಸರಪಾಡಿ ಸಮೀಪದ ಬೊಳ್ಳಾಜೆಯಲ್ಲಿ ಎಮ್ ಎಸ್ ಇ ಜಡ್ ಪೈಪ್ ಲೈನ್ ಕಾಮಗಾರಿ ಪ್ರಾರಂಭ” ಎಂಬ ಸುದ್ದಿಗಳು ಪ್ರಕಟವಾದವು. “ವಂಶ” ಪತ್ರಿಕೆಯ ಮಿತ್ರರನ್ನು “ನಮ ಒರ ಪೋದು ತೂದು ಬರ್ಕನ?” (ನಾವು ಹೋಗಿ ನೋಡಿ ಬರೋಣವೆ?) ಎಂದು ಕೇಳಿದೆ.
ಮಳೆಗಾಲವಾದರೂ ನಾವು ಹೋದಾಗ ಬಿಸಿಲಿತ್ತು. ಸರಪಾಡಿಯಲ್ಲಿ ಎಂ ಆರ್ ಪಿ ಎಲ್ ನ ಪಂಪ್ ಹೌಸೋ ಏನೋ ಒಂದಿದೆ. ಅದಕ್ಕಿಂತ ಮೊದಲೇ ಬಲಕ್ಕೆ ಹೊಸರಸ್ತೆ ಕಡಿದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು.ಹಸಿ ಹಸಿ ಮಣ್ಣಿನ ರಸ್ತೆ. ಜೆಸಿಬಿ ಉಪಯೋಗಿಸಿ ರಸ್ತೆ ಮಾಡಿದ್ದರೆಂಬುದು ಯಾರಿಗೂ ಗೊತ್ತಾಗುವಂತಿತ್ತು. ಅದರಲ್ಲಿ ಸ್ವಲ್ಪ ದೂರ ನಡೆದ ಮೇಲೆ ತೆರೆದುಕೊಂಡಿದ್ದು ವಿಶಾಲವಾದ ಪ್ರದೇಶದಲ್ಲಿ ಶೇಖರಗೊಂಡಿದ್ದ ನೀರಿನ ದೃಶ್ಯ.
ಮುಂದೆ ಎ ಎಂ ಆರ್ ಕಂಪೆನಿಯ ಅಣೆಕಟ್ಟು ಕಾಣುತ್ತಿತ್ತು. ನಮ್ಮೆದುರಿಗೆ ಕಾಣುತ್ತಿದ್ದುದು ಅದೇ ಅಣೆಕಟ್ಟಿನಲ್ಲಿ ಸಂಗ್ರಹಿಸಿದ್ದ ನೀರಿನ ರಾಶಿ. ನಾವು ಮುಟ್ಟಿದ್ದು ಒಂದು ಜೆಸಿಬಿ ನಿಂತಿದ್ದ ಸ್ಥಳವನ್ನು. ಸುತ್ತ ಅನೇಕ ಮರಗಳು ಬೇರು ಮೇಲಾಗಿ ಸೊಪ್ಪು ಒಣಗಿ ಉದುರಿ ಕಳಚಿಕೊಂಡು ಬೆತ್ತಲೆ ಅಸ್ತಿಪಂಜರಗಳಂತೆ ವಿಕಾರವಾಗಿ ಆಚೀಚೆ ಉರುಳಿಕೊಂಡಿದ್ದವು. ಕಪ್ಪು ಕಲ್ಲುಗಳನ್ನು ಒಡೆದು ತೆಗೆದಿರುವುದು (ಬಹುಶಃ ಡೈನಮೈಟ್ ಬಳಸಿ) ಸ್ಪಷ್ಟವಾಗಿಯೇ ಕಾಣುತ್ತಿತ್ತು. ಸ್ವಲ್ಪ ದೂರಕ್ಕೆ ಆಳವಾದ ಹೊಂಡದಲ್ಲಿ ಭೂಮಿಯ ಹೊಟ್ಟೆ ಬಗೆದು ಏನೋ ಕಾಮಗಾರಿ ನಡೆಸಿರುವುದೂ ಕಾಣುತ್ತಿತ್ತು. ಒಟ್ಟಿನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳು ಯಾವುದೋ ದೊಡ್ಡ ಕಾಮಗಾರಿಯ ಮುನ್ಸೂಚನೆಯಾಗಿ ಕಂಡವು. ಸಾಧ್ಯವಿದ್ದಷ್ಟು ಫೋಟೋಗಳನ್ನು ತೆಗೆದುಕೊಂಡು ನಾವು ಹಿಂದೆ ಬಂದೆವು.

ಮತ್ತಷ್ಟು ಓದು »

9
ಆಗಸ್ಟ್

ಕಾರ್ಯಕರ್ತ

– ಪವನ್ ಪರುಪತ್ತೆದಾರ

ಊರಲೆಲ್ಲ ತಲೆಯ ಮೇಲೆ ಹಾರ್ನ್ ಹೊತ್ತ ಆಟೋ ಒಂದೇ ಡೈಲಾಗ್ ಅನ್ನು ಹೇಳುತ್ತಾ ತಿರುಗಾಡುತಿತ್ತು,ಮರಯದಿರಿ ಮತ ಬಾಂಧವರೆ ಮರೆತು ನಿರಾಶರಾಗದಿರಿ, ಈಗ ಮರೆತು ಮುಂದೆ ಯಾಕಾದರೂ ಇಂತಹ ತಪ್ಪು ಮಾಡಿದೆನೋ ಎಂದು ಮರುಗದಿರಿ, ನಿಮ್ಮ ಮತವನ್ನು ನಮ್ಮ ಕಮಲಣ್ಣನ ಪಾರ್ಟಿಯ ಅಭ್ಯರ್ಥಿಯಾದಂಥ ಬಡವರ ಬಂಧು ಧಿಮಂತ ನಾಯಕ ಶ್ರೀಮಾನ್ ಸಿದ್ದಣ್ಣ ನವರಿಗೆ ನೀಡಿ, ಸಿದ್ದಣ್ಣ ನವರಿಗೆ ಮತ ನಮ್ಮೂರಿನ ಜನತೆಗೆ ಹಿತ  ಇದನ್ನೇ ಮತ್ತೆ ಮತ್ತೆ ಅರಚುತ್ತ ಸಾಗುತಿದ್ದ ಆಟೋ ಒಳಗಿಂದ ಸುರೇಶ ಸಿದ್ದಣ್ಣನ ಹೆಸರಿನಲ್ಲಿರುವಂತಹ ಒಂದು pamplet ಅನ್ನು ಹಂಚುತಿದ್ದ, ಅದಕ್ಕಾಗಿ ಮಕ್ಕಳು ಆ ಆಟೋ ಹಿಂದೆಯೇ ಓಡುತ್ತಾ ಇದ್ದರು………

ಅಂಗಡಿ ಬೀದಿಯಲ್ಲಿ ಅಬ್ಧುಲ್ಲ ತನ್ನ ಒಂದು ಸಣ್ಣ ಗುಂಪನ್ನು ಕಟ್ಟಿಕೊಂಡು ಅಲ್ಲಿರುವ ಕರೆಂಟ್ ಕಂಬಗಳನೆಲ್ಲ ನೋಡುತ್ತಾ, ಅರೆ ಇಸ್ಕಿ ಕ್ಯಾ ರೆ ಕಮಲಣ್ಣನ ಪಾರ್ಟಿ ಅವ್ರು ಆಗಲೇ banner ಗೆ ಕಟ್ಬಿಟ್ಟಿ ಅವ್ರೆ. ನಮ್ದುಕೆ ಇನ್ನು ಎಲ್ಡು ಅಡಿ ಮೇಲಕ್ಕೆ ಕಟ್ಟೋಣ ಅಂತ ತನ್ನ ಶಿಷ್ಯನ್ನ ಕರೆದ, ಹೇ ಪಟ್ಟೆ ಅರೆ ಇದರ್ ಅಂತ ಕಂಬ ಹತ್ತಿಸಿ ಹಸ್ತಣ್ಣನ ಪಾರ್ಟಿ ಕಡೆ ಇಂದ ನಿಂತಿದ್ದ ಸನಾಉಲ್ಲ ನ ಫೋಟೋ ಸಮೇತ ಇರೋ ಹಸ್ತಣ್ಣನ ಪಾರ್ಟಿಗೆ ಮತ ನಮ್ಮೂರಿನ ಜನಕ್ಕೆ ಹಿತ. ಅಂತ ಇರೋ banner ಗಳನ್ನ ಕಟ್ಟಿಸ್ತ ಇದ್ದ. ಅಷ್ಟರಲ್ಲೇ ಅಲ್ಲಿದ್ದ ಕೆಲವರು ಗುಂಪು ಸೇರಿ ಇವರು ಮಾಡುತ್ತಾ ಇದ್ದ ಕೆಲಸವನ್ನು ಗಮನಿಸ್ತ ಇದ್ರು, ಅವರನ್ನ ನೋಡಿದ ಅಬ್ದುಲ್ಲ ಹೇ ಅಣ್ಣ ನಮಸ್ಕಾರ ನಮ್ಮ ನೆಚ್ಚಿನ ನಾಯಕ, ಬಡವರ್ಗೆ ಸಹಾಯ ಮಾಡೋದ್ರಾಗ ಎತ್ತಿದ ಕೈ ನಮ್ ಸನಾಉಲ್ಲಾದು. ನಿಮ್ಮದು ಎಲ್ಲರ್ದುಗೆ ಓಟು ನಮ್ದು ಹಸ್ತಣ್ಣ ಪಾರ್ಟಿ ಗೆ ಹಾಕಿ ಅಂತ ಭಾಷಣ ಮಾಡಿದ. ಅದೇ ಬೀದಿಲಿ ಹಾದು ಹೋಗುತ್ತಿದ್ದ ಕಮಲಣ್ಣನ ಪಾರ್ಟಿಯ ಒಬ್ಬ ವ್ಯಕ್ತಿ ಇದನ್ನ ನೋಡಿ ಮಖ ಕೆಂಪಗ ಮಾಡಿಕೊಂಡು ಹೋದ……. ಮತ್ತಷ್ಟು ಓದು »

8
ಆಗಸ್ಟ್

ಸ್ಥಿರತೆಯತ್ತ… ಸರ್ಕಾರವೋ? ಮಾಧ್ಯಮವೋ?

-ಕಾಲಂ ೯

ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡ ಕಳೆದ ೧೫ ದಿನಗಳ ಘಟನಾವಳಿ ಈಗ ಒಂದು ಮಜಲಿಗೆ ಬಂದು ನಿಂತಂತೆ ಗೋಚರಿಸುತ್ತದೆ.

2008ರ ಚುನಾವಣೆ ನಡೆದಿದ್ದೇ ‘ನನಗಾದ ಅನ್ಯಾಯ’ಕ್ಕೆ. ಜನತೆ ಓಟು ಹಾಕಿದ್ದೇ ನನಗಾದ ಅನ್ಯಾಯ ಸರಿಪಡಿಸಲು. ನನಗೆ ಸಿಕ್ಕ ಜನತಾ ನ್ಯಾಯವನ್ನು ಯಾವ ಹೈಕಮಾಂಡು ಕಿತ್ತುಕೊಳ್ಳುವ ಹಾಗಿಲ್ಲ ಎಂಬಂತೆ ಸೆಟೆದು ನಿಂತಿದ್ದ ಯಡಿಯೂರಪ್ಪ 15 ದಿನ ಕನ್ನಡದ ಮಾಧ್ಯಮಗಳಿಗೆ ಭವಿಷ್ಯದ ಕೆಲಸ ಕೊಟ್ಟಿದ್ದರು.

ಕನ್ನಡ ಸುದ್ದಿವಾಹಿನಿಗಳ ಎಳಸುತನ, ಗಂಭೀರ ವರದಿಗಾರಿಕೆಯ ಕೊರತೆ, ಮತ್ತೆ ಮತ್ತೆ ಪ್ರದರ್ಶನಕ್ಕೆ ಬಂದಿತೆನ್ನಬೇಕು.

ರೇಸ್ ಕೋರ್ಸ್ ರಸ್ತೆಯತ್ತ ಎರಡು ಬಸ್‍ಗಳು ಕಾಣಿಸಿಕೊಂಡಿದ್ದೇ ತಡ, ವಾಹಿನಿಯೊಂದು ‘ಶಾಸಕರು ರೆಸಾರ್ಟ್‍ನತ್ತ’ ಎಂದು ‘ಬ್ರೇಕಿಂಗ್ ನ್ಯೂಸ್’ ಬಿತ್ತರಿಸಿತು. ಕೆಲವೇ ಕ್ಷಣಗಳಲ್ಲಿ ಉಳಿದ ವಾಹಿನಿಗಳೂ ಅದನ್ನೇ ಹೇಳತೊಡಗಿದವು. ಯಾರೊಬ್ಬರೂ ಇಂತಹ ಸುದ್ದಿಗಳ ನೈಜತೆ ಪರಿಶೀಲಿಸುವ ಗೋಜಿಗೆ ಹೋಗುವುದಿಲ್ಲ. ಯಾವುದೋ ನಾಯಕರ ವಾಹನ ಚಾಲಕರು, ಅಲ್ಲೆಲ್ಲೋ ನಿಂತ ಪೋಲಿಸ್ ಕಾನ್‍ಸ್ಟೇಬಲ್‍ಗಳೇ ಸುದ್ದಿಯ ಸೋರ್ಸ್‍ಗಳಾಗಿರೋದು ಮಾಧ್ಯಮದ ದುರಂತವಾಗಿದೆ. ಮೂರೋ, ಆರೋ ತಿಂಗಳ ಅನುಭವದ ಪತ್ರಕರ್ತರ ದಂಡನ್ನೂ ಕಟ್ಟಿಕೊಂಡು ಮುಖ್ಯಮಂತ್ರಿ ನಿವಾಸ, ಅಶೋಕ ಹೋಟೆಲ್, ಬಿಜೆಪಿ ಕಛೇರಿ, ಕೇಶವಕೃಪಾ… ಇಲ್ಲೆಲ್ಲ ಒಬ್ಬೊಬ್ಬರನ್ನು ನಿಲ್ಲಿಸಿಕೊಂಡು ಕ್ಷಣ, ಕ್ಷಣದ ಸುದ್ದಿ ಬಿತ್ತರಿಸುವ ಕನ್ನಡ ಸುದ್ದಿ ವಾಹಿನಿಗಳ ಪಾಡು ಹೇಳತೀರದು. ಸುದ್ದಿ ಯಾವುದು? ಅಂದಾಜು ಯಾವುದು? ಸುಳ್ಳು ಯಾವುದು? ಆ ಕ್ಷಣದಲ್ಲೇ ಬೆತ್ತಲಾಗಿ ಸುದ್ದಿ ವಾಹಿನಿಗಳ ವಿಶ್ವಾಸಾರ್ಹತೆ ಮೂರಾಬಟ್ಟೆ ಯಾಗಿದೆ. ಮತ್ತಷ್ಟು ಓದು »