ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

8
ಆಗಸ್ಟ್

ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ

– ರಾಕೇಶ್ ಎನ್ ಎಸ್

ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಅಪನಂಬಿಕೆ, ಸ್ವಜನಪಕ್ಷಪಾತ, ಅಧಿಕಾರದ ಮೋಹ, ಇನ್ನೊಬ್ಬರ ಕಾಲೆಳೆಯುವ ಚಾಳಿ, ಭಟ್ಟಂಗಿಗಳ ಪಟಾಲಂ ಈ ಪಂಚ ಅನಿಷ್ಠ ಗುಣಗಳಲ್ಲಿ ಒಂದು ಗುಣವಿದ್ದರು ಕೂಡ ಒಬ್ಬ ವ್ಯಕ್ತಿಯ ಬದುಕು ಪಾತಳ ಮುಖಿ ಅಗುವುದರಲ್ಲಿ ಅನುಮಾನವಿಲ್ಲ. ಅಂತಹದ್ದರಲ್ಲಿ ಈ ಪಂಚ ಗುಣಗಳನ್ನೆ ತಮ್ಮ ನಡತೆಯಾಗಿಸಿಕೊಂಡಿವವರು ನಾಯಕರಾಗಿ ಬಿಟ್ಟರೆ ಅಥವಾ ನಾಯಕರೆಂದು ಕರೆಸಿಕೊಂಡರೆ ಅವರು ಮಾತ್ರವಲ್ಲ ಅವರಿರುವ ಸಮಾಜ ಅಥವಾ ಪರಿಸರ ಗಬ್ಬೆದ್ದು ಹೋಗುತ್ತದೆ ಎಂಬುದಕ್ಕೆ ಬಿ ಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ರಾಜ್ಯ ರಾಜಕೀಯವೇ ಸಾಕ್ಷಿ. ಮತ್ತಷ್ಟು ಓದು »
8
ಆಗಸ್ಟ್

ಪೌರ ಕಾರ್ಮಿಕರ ಬದುಕು ಹಸನಾಗುವುದು ಯಾವಾಗ?

– ಪವನ್ ಯಂ.ಟಿ

ನಾಳೆ ಬೆಳಗ್ಗೆ ೫ ಗಂಟೆಗೆ ಅಲಾರಾಮ್ ಇಡು ಮಗಳೆ ೫:೩೦ ರ ಬಸ್ಸು ಮಿಸ್ ಆಗೋದ್ರೆ ಕಸವೆಲ್ಲ ಅಲ್ಲೇ ಉಳಿದು ಬಿಡುತ್ತೆ, ನಿನ್ನೆ ದಿನ ಸಂತೆ ಬೇರೆ ಇತ್ತು. ಕಸದ ರಾಶಿಯೇ ಬಿದ್ದಿರ ಬಹುದು. ಬೇಗ ಹೋಗಿ ಕ್ಲೀನ್ ಮಾಡಬೇಕು…! ಎಂದು ಪೌರಕಾರ್ಮಿಕೆ ಮಲ್ಲಮ್ಮ ತನ್ನ ಮಗಳಿಗೆ ಹೇಳಿ ಮಲಗಿಕೊಂಡಳು. ಮಲ್ಲಮ್ಮನಿಗಿರುವ ಒಂದೇ ಆಲೋಚನೆ ತನಗೆ ವಹಿಸಿದ ವಾರ್ಡನಂಬರ್ ೭ರಲ್ಲಿ ಬಿದ್ದಿರುವ ಕಸವನ್ನು ತೆಗೆದು ಶುಚಿಗೊಳಿಸುವುದು. ಎಲ್ಲಿ ಬೆಳಗ್ಗೆ ಬಸ್ಸು ಮಿಸ್ಸಾದರೆ ಕಸದ ರಾಶಿ ಅಲ್ಲಿಯೇ ಉಳಿದು ಮೇಲಾಧಿಕಾರಿಗಳು, ಗುತ್ತಿಗೆದಾರರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೋ ಅನ್ನುವ ಭಯ ಮಲ್ಲಮ್ಮನಿಗೆ. ಇದು ಕೇವಲ ಒಬ್ಬ ಪೌರಕಾರ್ಮಿಳ/ನ  ಚಡಪಡಿಕೆಯಲ್ಲ. ನಮ್ಮ ದೇಶದಲ್ಲಿ ಅಥವಾ ರಾಜ್ಯದಲ್ಲಿ ದುಡಿಯುತ್ತಿರುವ ಎಲ್ಲಾ ಪೌರ ಕಾರ್ಮಿಕರ ಚಡಪಡಿಕೆಯಾಗಿದೆ. ಪೌರ ಕಾರ್ಮಿಕರಿಗೆ ದಿನಬೆಳಗಾದರೆ ಸ್ವಚ್ಚತೆಯದ್ದೇ ಚಿಂತೆ. ಅವರು ಈ ಕೆಲಸವನ್ನು ತಮ್ಮ ಒಟ್ಟೆ ಪಾಡಿಗಾಗಿ ಮಾಡಿದರೂ ಸಹ  ಅದರ ಹಿಂದೆ ಪ್ರತಿಯೊಬ್ಬ ನಾಗರೀಕನ ಆರೋಗ್ಯದ ಕುರಿತ ಕಾಳಜಿ ಅವರಲ್ಲಿ ಮನೆ ಮಾಡಿರುತ್ತದೆ.

ನಾವು ಬೆಳಗ್ಗೆ ಎದ್ದು ಸುಮಾರು ೭ ಗಂಟೆಯ ಸಮಯಕ್ಕೆ ಪಟ್ಟಣಕ್ಕೆ ಒಂದು ಸುತ್ತು ಬಂದರೆ ಸಾಕು ಪೌರ ಕಾರ್ಮಿಕರು ಪಡುವ ಕಷ್ಟ, ಅವರು ಮಾಡುವ ಕೆಲಸ, ನಮ್ಮ ಕಣ್ಣಿಗೆ ಕಾಣುತ್ತದೆ. ನಮಗೆ ಅಸಯ್ಯ ಎನ್ನಿಸುವ ಕೆಲಸವನ್ನು ಅವರು ಮಾಡಿದಂತೆ ಕಂಡರೂ ಅವರೆಲ್ಲ ನಮ್ಮ ಪಾಲಿನ ದೇವರಿದ್ದಂತೆ, ಇಂದು ನಾವೆಲ್ಲ ಒಳ್ಳೆಯ, ಕೈತುಂಬಾ, ಹಣ ಬರುವ ಕೆಲಸವನ್ನು ಮಾತ್ರ ಹುಡುಕುತ್ತೇವೆ. ಒಂದು ವೇಳೆ ಪೌರ ಕಾರ್ಮಿಕರೇ ಇಲ್ಲವೆಂದಿದ್ದರೇ ಇಂದು ನಮ್ಮ ಆರೋಗ್ಯದ ಪರಿಸ್ಥಿತಿ ಏನಾಗುತ್ತಿತ್ತು ಎನ್ನುವುದನ್ನು ನೀವೇ ಯೋಚಿಸಿ.

ಮತ್ತಷ್ಟು ಓದು »

6
ಆಗಸ್ಟ್

ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?

– ಕುಮಾರ ರೈತ

 “ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”

ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ  ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’

ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು  ಕನ್ನಡಿಗ ರಾಮನಾಯಕ.  (ಟಿಪ್ಪು ಸುಲ್ತಾನ್ ಸೈನ್ಯದ  ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.

ಮತ್ತಷ್ಟು ಓದು »

6
ಆಗಸ್ಟ್

ಸಂಸತ್ತಿನಲ್ಲಿ ಕನ್ನಡದ ಕಂಪು ಸದಾ ಮೊಳಗಲಿ

– ಅರುಣ್ ಜಾವಗಲ್

ನೆನ್ನೆ ನಡೆದ ಸಂಸತ್ ಕಲಾಪದಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾದ ಲೋಕಸಬಾ ಸದಸ್ಯರಾದ ಚಲುವರಾಯಸ್ವಾಮಿಯವರು ಕನ್ನಡದಲ್ಲಿ ಬಾಶಣ ಮಾಡಿ ಗಮನ ಸೆಳೆದಿದ್ದಾರೆ. ಬಹಳ ದಿನಗಳ ಮೇಲೆ ಸಂಸತ್ತಿನಲ್ಲಿ ಕನ್ನಡದ ಕಂಪು ಮೊಳಗಿದೆ.

೧೯೬೭ ರಲ್ಲಿ ಲೋಕಸಬೆಯ ಕಲಾಪಗಳಲ್ಲಿ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಜೆ ಹೆಚ್ ಪಟೇಲ್ ರವರು ಬಾಶಣ ಮಾಡಿದ್ದರು. ಮೊಟ್ಟ ಮೊದಲ ಬಾರಿಗೆ ಸಂಸತ್ತಿನಲ್ಲಿ ಕನ್ನಡದ ಡಿಂಡಿಮ ಮೊಳಗಿಸಿದ ಕೀರ್ತಿ ಪಟೇಲ್ ರವರಿಗೆ ಸಲ್ಲಬೇಕು.

ಲೋಕಸಬೆ ಕಲಾಪಗಳಿಗೆ ಹಿಂದಿ/ಇಂಗ್ಲೀಶ್ ಬರಲ್ಲ ಅಂತ ಹಲವಾರು ಜನ ಹಿಂದಿಯೇತರ ಲೋಕಸಬಾ ಸದಸ್ಯರು ಕಲಾಪಗಳಿಗೆ ಹೋಗದೆ ಅತವಾ ಹೋದರು ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳದ ಬಗ್ಗೆ ಕೇಳಿದ್ದಿವಿ. ಆದರೆ ತಮ್ಮ ಬಾಶೆಯಲ್ಲು ಬಾಶಣ ಮಾಡಲು ಪ್ರಜಾಪ್ರಬುತ್ವದಲ್ಲಿ ಅವಕಾಶವಿದ್ದರು ಹಲವಾರು ಜನ ಸದಸ್ಯರು ತಮ್ಮ ಬಾಶೆಯನ್ನ ಬಳಸದಿರುವುದು ದುರಂತವೇ! ನಿಜಕ್ಕು ಅವರು ತಮ್ಮ ಬಾಶೆಯನ್ನ ಬಳಸಿದ್ದೇ ಆದಲ್ಲಿ ವಿಶಯವನ್ನ ಅತ್ಯಂತ ನೇರ ಮತ್ತು ನಿಕರವಾಗಿ ಹೇಳಬಹುದಲ್ಲದೇ ಲೋಕಸಬಾ ಟಿವಿ ಅತವಾ ಇನ್ಯಾವುದೋ ಟಿವಿಯಲ್ಲಿ ಅವರವರ ಕ್ಷೇತ್ರದ ಜನರಿಗೂ ತಾವು ಆಯ್ಕೆ ಮಾಡಿ ಕಳಿಸಿದ ಸದಸ್ಯ ಏನ್ ಮಾತಾಡ್ತಿದ್ದಾರೆ, ಯಾವ ವಿಶಯ ಪ್ರಸ್ತಾಪಿಸುತ್ತಿದ್ದಾರೆ ಅನ್ನೊದು ತಿಳಿಯೋ ಹಾಗೆ ಆಗುತ್ತೆ.
ಮತ್ತಷ್ಟು ಓದು »

5
ಆಗಸ್ಟ್

ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು

ಡಾ. ರಾಜಾರಾಮ ಹೆಗಡೆ

ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ  ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು  ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.

ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ  ಅದೊಂದು ಅಪಾಯಕಾರಿ ಗ್ರಂಥವಾಗಿದೆ.  ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು »

5
ಆಗಸ್ಟ್

ಸಂಸ್ಕೃತಿ ಸಂಕಥನ – ೪

– ರಮಾನಂದ ಐನಕೈ

ಧರ್ಮದ ಮೈಮೇಲೆ – ರಿಲಿಜನ್ನಿನ ಅಂಗಿ 

 ವಿಪರ್ಯಾಸ ನೋಡಿ. ಒಂದು ಕಡೆ ‘ಹಿಂದೂ ಧರ್ಮ’ ಅನ್ನುತ್ತೇವೆ. ಇನ್ನೊಂದು ಕಡೆ ಅದನ್ನೇ ‘ಹಿಂದೂ ರಿಲಿಜನ್’ ಅನ್ನುತ್ತೇವೆ. ಯಾವುದೇ ಭಾರತೀಯರನ್ನು ಕೇಳಿದರೆ ಇವೆರಡರ ನಡುವೆ ವ್ಯತ್ಯಾಸವೇ ಇಲ್ಲ ಎಂದು ಆತ್ಮವಿಶ್ವಾಸದಿಂದ ಪ್ರತಿಪಾದಿಸುತ್ತಾರೆ. ಇವೆರಡರ ವ್ಯತ್ಯಾಸ ತಿಳಿಯದಿದ್ದದ್ದೇ ಭಾರತೀಯರ ಮುಖ್ಯ ಮಾನಸಿಕ ತೊಂದರೆ. ಹಾಗಾಗೇ ನಿತ್ಯ ಗೊಂದಲದಲ್ಲಿ ಒದ್ದಾಡುತ್ತೇವೆ.

‘ರಾಜಕೀಯದಲ್ಲಿ ಧರ್ಮ ಇರಬಾರದು’, ‘ಸಾಹಿತ್ಯದಲ್ಲಿ ಧರ್ಮ ಬರಬಾರದು’, ‘ಕೋಮು ಗಲಭೆಗೆ ಧರ್ಮ ಕಾರಣ’ – ಇತ್ಯಾದಿ ಹೇಳಿಕೆ ಕೇಳಿದಾಗ ನಮಗೆ ಪುನಃ ಗೊಂದಲ. ಏಕೆಂದರೆ ಈ ಹೇಳಿಕೆಯನ್ನು ತೇಲಿ ಬಿಡುವವರು ಬುದ್ಧಿಜೀವಿಗಳು. ಅವರು ರಿಲಿಜನ್ ಎಂಬ ಪರಿಕಲ್ಪನೆಯ ಮೇಲೆ ಪ್ರಜ್ಞಾಪೂರ್ವಕವಾಗಿ ವಾದಿಸುತ್ತಾರೆ. ಆದರೆ ನಾವು ಸಾಮಾನ್ಯ ನಾಗರಿಕರು ಧರ್ಮ ಎಂಬ ಅರ್ಥದ ನೆಲೆಯಲ್ಲಿ ಅದನ್ನು ಗ್ರಹಿಸುತ್ತೇವೆ. ಹಾಗಾಗಿ ಎಲ್ಲವೂ ನಮ್ಮ ಮನಸ್ಸಿಗೆ ಅರ್ಧಸತ್ಯ ಅನಿಸುತ್ತದೆ. ಧರ್ಮ ಬೇಡ ಅಂದರೆ ಪ್ರತಿಯೊಂದಕ್ಕೂ ಅದರದ್ದೇ ಆದ ಕರ್ತವ್ಯ ಬೇಡವೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ ಧರ್ಮ ಹಾಗೂ ರಿಲಿಜನ್ ಮಧ್ಯೆ ವ್ಯತ್ಯಾಸ ಇರಲೇಬೇಕೆಂಬುದು ನಮ್ಮ ಗೃಹಿಕೆಗೆ ಸೂಚಿಸುತ್ತದೆ. ಎರಡೂ ಒಂದೇ ಆಗಿದ್ದರೆ ಈ ರೀತಿ ಗೊಂದಲ ಏಕೆ ಸೃಷ್ಟಿಯಾಗುತ್ತದೆ? ಇದೇ ಅರ್ಥವಾಗದ ಒಗಟು.

ಮತ್ತಷ್ಟು ಓದು »

3
ಆಗಸ್ಟ್

ಅಲಾಲ್ ಟಪಾಲ್…!

ಪವನ್ ಪಾರುಪತ್ತೇದಾರ

ನಮ್ಮಪ್ಪ ನನ್ನ ಹಾಗೆ ಕರೆಯೋದ್ರಲ್ಲು ಒಂದು ಅರ್ಥ ಇತ್ತು ಕಾರಣ ಇತ್ತು. ಏಳುತ್ತಾ ಇದ್ದದ್ದು ೯ ಘಂಟೆ ಎದ್ದು ಹಲ್ಲು ತಿಕ್ಕೋ ಅಷ್ಟರಲ್ಲಿ ಅಮ್ಮ ಕಾಫೀ ಕೊಡುತಿದ್ದರು, ನಂತರ ಸ್ನಾನ ಮುಗಿಸಿ ತಿಂಡಿ. ಅಷ್ಟರಲ್ಲಿ ೧೧ ಘಂಟೆ ಆಗಿರೋದು. ಇನ್ನು ಆಗ ಕಂಪ್ಯೂಟರ್ ಮುಂದೆ facebook, orkut, ಅ ಸಂಘ, ಈ ಕೂಟ, ಇನ್ಯಾವುದೋ ಬಳಗ ಅಂತ ಚಾಟಿಂಗ್ ಮಾಡುತ್ತಾ ಕೂತರೆ ಮಧ್ಯಾಹ್ನ ೨ ಘಂಟೆ ಆಗುವುದೇ ಗೊತ್ತಾಗುವುದಿಲ್ಲ. ಅಷ್ಟರಲ್ಲಿ ದೇವಸ್ಥಾನಕ್ಕೆ ಹೋಗಿದ್ದ ಅಪ್ಪ ಮನೆಗೆ ಬರುತ್ತಾರೆ. ಊಟ ಮಾಡಲು ಎಲ್ಲರು ಕೂತು ಊಟ ಮುಗಿಸಿ ನಂತರ ಮತ್ತೆ online ಹೋದರೆ ಮತ್ತೆ ಸಮಯದ ಅರಿವೇ ಇರುವುದಿಲ್ಲ.

ಸಂಜೆ ೬ ಘಂಟೆ ಹೊತ್ತಿಗೆ ಹಸು ಮನೆಯಲ್ಲಿನ ಸಗಣಿ ಕಸ clean ಮಾಡಿ, ಮತ್ತೆ ಒಂದು ರೌಂಡ್ ಕಾಫೀ ಕುಡಿದು ಹೊರಟರೆ ಮತ್ತೆ ಮನೆ ಸೇರುತಿದ್ದಿದ್ದು 10 ಘಂಟೆಗೆ. ಸ್ನೇಹಿತರ ಜೊತೆ ಅಡ್ಡ, ಕಾಡು ಹರಟೆ, ಮನೆಗೆ ಬಂದೊಡನೆ ಊಟ ಮಾಡಿ ಮತ್ತೆ online 12 ರ ತನಕ ಚಾಟಿಂಗ್ ನಂತರ ನಿದ್ದೆ. ಈ ರೀತಿಯ ದಿನಚರಿ ಇರುವ ಯಾವ ಮಗನನ್ನಾದರೂ ಅಲಾಲ್ ಟಪಾಲ್ ಅನ್ನದೆ ಮುದ್ದು ಮಾಡೋದಕ್ಕ ಸಾಧ್ಯ??

ಹೌದು ನಾನು ಅಲಾಲ್ ಟಪಾಲೇ, ಅಲೆದು ಅಲೆದು ನಂತರ ಅದರ ಗುರಿಯನ್ನು ಸೇರುವ ಟಪಾಲಿನ ಮೇಲೆ ಒಂದು ವಿಳಾಸ ಇರುತ್ತದೆ. ಹಾಗೆ ನನ್ನ ಈ ಬದುಕಿನ ವಿಳಾಸ ನಾನೆ ಬರೆದುಕೊಂಡಿರುವಂತೆ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಆಗಬೇಕೆಂದು. ಆದರೆ ವಿಧಿ ಅದನ್ನು ಸರ್ಟಿಫಿಕೇಟ್ ಗಷ್ಟೇ ಸೀಮಿತಗೊಳಿಸಿದೆ. campus ಇಂಟರ್ವ್ಯೂ ಗೆ ಬಂದ ಕಂಪನಿಗಳೆಲ್ಲ software ಗಳೆ, ನಾನು ಅದ್ರಲ್ಲಿ ಸೆಲೆಕ್ಟ್ ಆಗೋವಷ್ಟು ಬುದ್ಧಿವಂತ ಆಗಿರಲಿಲ್ಲ ಅನ್ಸುತ್ತೆ. ಯಾವ ಕಂಪನಿಯವರು ನನ್ನ ಸೆಲೆಕ್ಟ್ ಮಾಡಿಲ್ಲ.

ಮತ್ತಷ್ಟು ಓದು »

3
ಆಗಸ್ಟ್

ನಮಗೆ ದುಡ್ಡಿನ ಬೆಲೆ ಗೊತ್ತಿದ್ಯಾ?

-ಪ್ರಶಸ್ತಿ. ಪಿ,ಶಿವಮೊಗ್ಗ

ಇಸ್ತ್ರಿಯಂಗಡಿಗೆ ಹೋಗಿದ್ದೆ.. ಅಲ್ಲಿ ಅವ ಹೇಳ್ತಾ ಇದ್ದ. ೧ ಚೀಲ ಇದ್ದಿಲಿಗೆ ೧೫೦೦ ರೂಪಯಿ. ಒಂದು ವರ್ಷನೂ ಬರಲ್ಲ ಈ ಇಸ್ತ್ರಿ ಪೆಟ್ಟಿಗೆ, ಅದ್ಕೆ ೪೦೦೦ ರೂಪಾಯಿ. ಬಟ್ಟೆಗೆ ೩ ರೂ ಕೇಳಿದ್ರೆ ನೀವು ಹಿಂದೆ ಮುಂದೆ ನೋಡ್ತೀರ. ಜೀವನ ಕಷ್ಟಾಪ್ಪ. ಅವನು ಹೇಳೋದು ಕೇಳ್ದಾಗ ಅನುಸ್ತು.. ” ನಮಗೆ ದುಡ್ಡಿನ ಬೆಲೆ ಗೊತ್ತಿದ್ಯಾ” ಅಂತ.

ಅಪ್ಪನೋ ಅಮ್ಮನೋ ಬೇಕಾದಗ ದುಡ್ಡು ಕೊಟ್ಟಿರ್ತಾರೆ. ಬ್ಯಾಂಕ್ ಸಾಲ ಮಾಡಿ ಓದೋ ಹಲ ಗೆಳೆಯರಿಗೂ A.T.M ಇಂದ ದುಡ್ಡು ಬೇಕಂದಾಗ ಸಿಗುತ್ತೆ ಅನ್ನೋ ಭರವಸೆ ಇರುತ್ತೆ. ಅದ್ರ ಹಿಂದೆ ನಮ್ಮ ತಂದೆ/ತಾಯಿ ಶ್ರಮ ಎಷ್ಟಿರುತ್ತೆ ಅಂತ ಎಂದಾದ್ರು ಯೋಚ್ನೆ ಮಾಡಿರ್ತೀವಾ? ಪ್ರತೀ ಪೈಸೆ ಹಿಂದೆನೂ ಎಷ್ಟು ಶ್ರಮ ಅಡಗಿರುತ್ತೆ ಅಂತ ಯೋಚ್ನೆ ಮಾಡ್ತೀವಾ?

ಖರ್ಚು ಮಾಡೋದು ತಪ್ಪು ಅಂತ ನಾ ಹೇಳ್ತಿಲ್ಲ. ಆದ್ರೆ ನಾವು ಖರ್ಚು ಮಾಡ್ತಿರೋ ಪ್ರತೀ ರೂಪಾಯಿ ಬೆಲೆ ನಮಗೆ ಗೊತ್ತಾ ಅನ್ನೋ ಸಂದೇಹ ಸುಮಾರು ಸಲ ಕಾಡುತ್ತೆ. ದುಡ್ಡು ಕೊಟ್ಟು ತಂಗಡಿರ್ತೀವಿ. ಸ್ವಲ್ಪ ಉಪ್ಪೋ , ಖಾರಾನೋ ಜಾಸ್ತಿ ಆಯ್ತು ಅಂದ್ರೆ ಹಾಗೆ ದಂಡ ಮಾಡ್ತೀವಿ.. ಮನೇನಲ್ಲೂ ಎಷ್ಟೋ ಸಲ ತಿಂಡಿ ತಿನ್ನದೇ ಜಗಳ ಮಾಡ್ಕೊಂಡು ಹೊರಟು ಬಂದಿರ್ತೀವಿ.. ದುಡ್ಡಿರುತ್ತಲ್ಲಾ.. ಕೊಟ್ರೆ ಬೇರೆದು, ಒಳ್ಳೇದು ಸಿಗುತ್ತೆ ಅನ್ನೋ ಭಾವನೆ ಅಲ್ವಾ?. . ಆದ್ರೆ ನಮಗೆ ಬೇಜಾರು ಮಾಡ್ಬಾರ್ದು ಅಂತ ಸುಮ್ಮನಿರೋ ಅಪ್ಪ-ಅಮ್ಮ, ದುಡ್ಡು ಕೊಟ್ಟಿದೀವಿ ಅಂತ ಸುಮ್ಮನಿರೋ ಹೋಟಲಿನವರು.. ಹೀಗೆ ಏನು ಕಾಣ್ತಿದೆಯೋ ಆದರ ಹಿಂದಿನ ವಾಸ್ತವ ಅರಿಯೋಕೆ ಪ್ರಯತ್ನನೇ ಮಾಡಲ್ಲ ಅಲ್ವಾ? ನೀರು ತರ ಖರ್ಚು ಮಾಡ್ತಿರೋ ದುಡ್ಡಿನ ಬೆಲೆ ಬಗ್ಗೆ ಒಂದಿನನಾದ್ರೂ ತಲೆ ಕೆಡ್ಸ್ಕಂಡಿರ್ತೀವಾ?

ಮತ್ತಷ್ಟು ಓದು »

2
ಆಗಸ್ಟ್

ಸಂತಾನಹೀನತೆಯ ಕಾರಣ ಶೋಧಿಸುತ್ತ….

– ವಿಷ್ಣುಪ್ರಿಯ
(ಯೋನಿಯ ಮೂಲಕ ಪ್ರವೇಶಿಸುವಂಥ ವೀರ್ಯವು ಗರ್ಭನಾಳವನ್ನು ಹಾದು, ಗರ್ಭಕೋಶವನ್ನು ಸೇರಿ ಅಲ್ಲಿರುವ ಅಂಡಾಣುವಿನೊಂದಿಗೆ ಮಿಲನವಾಗಬೇಕು. ಅಂದರೆ ಗರ್ಭವತಿಯಾಗಬೇಕೆಂದರೆ ಎರಡು ಮಿಲನಗಳಾಗಬೇಕು- ಒಂದು ಸ್ತ್ರೀ-ಪುರುಷ ಮಿಲನ, ಇನ್ನೊಂದು ಈ ಮಿಲನದ ಬಳಿಕದ ಅಂಡಾಣು-ವೀರ್ಯಾಣು ಮಿಲನ. ದೇಹದಲ್ಲಿರುವಂಥ ಪ್ರತಿರಕ್ಷಣಾ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ವೀರ್ಯದ ಚಲನೆಯನ್ನು ತಡೆಯುವುದಕ್ಕೆ ಪ್ರಯತ್ನಿಸುತ್ತದೆ. ಆದರೆ ವೀರ್ಯಕ್ಕೆ ಹೊದಿಕೆಯಂತೆ (ಕೋಟ್ನಂತೆ) ಇರುವ ಪ್ರೋಟೀನ್ ಡಿಇಎಫ್ ಬಿ 126 ಈ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸೀಳಿಕೊಂಡು ಮುಂದಕ್ಕೆ ಚಲಿಸಿ ಅಂಡಾಣುವಿನೊಂದಿಗೆ ಮಿಲನವಾಗುತ್ತದೆ. ಒಂದು ವೇಳೆ ವೀಯಾಣುವಿನಲ್ಲಿ ಈ ಪ್ರೋಟೀನ್ ಹೊದಿಕೆ ಇಲ್ಲದೇ ಹೋದರೆ?  )
`ಮಕ್ಕಳಿರಲವ್ವ ಮನೆತುಂಬ’ ಎಂದರು ಹಿರಿಯರು. ಸುಮ್ಮನೇ ಹೇಳಿರುತ್ತಾರೆಯೇ? ಈ ಬಯಕೆಯ ಹಿಂದೊಂದು ವಾಸ್ತವವಿದೆ. ಮಕ್ಕಳು ಮನೆಯಲ್ಲಿದ್ದರೆ ಅದೆಷ್ಟೋ ನೋವುಗಳು ತಮ್ಮಷ್ಟಕ್ಕೇ ಶಮನಗೊಳ್ಳುತ್ತವೆ.ಮಗುವಿನ ಕಿಲಕಲ ನಗು, ಅದರ ಅಳು, ರಂಪಾಟ, ಅದರ ಚೇಷ್ಟೆಗಳು, ಆಟಗಳು… ಮಗುವಿನ ಒಂದೊಂದು ಕ್ಷಣದಲ್ಲೂ ಬೆರೆತುಕೊಂದಡರೆ ದೊಡ್ಡವರೂ ಕೂಡಾ ಮಕ್ಕಳೇ ಆಗುತ್ತಾರೆ! ಆ ಕಂದಮ್ಮಗಳೊಂದಿಗೆ ತಾವೂ ತೊದಲುನುಡಿಯಲ್ಲಿ ಮಾತನಾಡುತ್ತಾರೆ. ಮಕ್ಕಳೊಂದಿಗೆ ಕಳೆಯುವ ಆ ಕ್ಷಣಗಳನ್ನು ಪದಗಳಲ್ಲಿ ವರ್ಣಿಸುವುದು ಕಷ್ಟವೇನೋ? ಮುದ್ದಾದ ಮಕ್ಕಳನ್ನು ಕಂಡಾಗ ಭಾವುಕರಾಗದವರು ಯಾರಿದ್ದಾರೆ? ಇಂಥದ್ದೇ ಒಂದು ಮುದ್ದು ಕಂದ ನನಗೂ ಇರಬೇಕು… ಹಾಗಂತ ಹೆಂಗಸರೂ ಬಯಸುತ್ತಾರೆ, ಪುರುಷರೂ ಕೂಡಾ! ಬಯಕೆಗಳು ಎಲ್ಲಾ ಕಾಲದಲ್ಲೂ ಈಡೇರುವುದಿಲ್ಲ. ಸಂತಾನ ಪಡೆಯುವುದು ಸುಲಭದ ವಿಚಾರವೂ ಅಲ್ಲ. ಸ್ತ್ರೀ-ಪುರುಷ ಮಿಲನಗೊಂಡರೆ ಸಾಕು ಸಂತಾನವಾಗದೇ ಏನು ಎಂಬ ಪ್ರಶ್ನೆಗಳು ಸಹಜ. ಮಿಲನವೊಂದಷ್ಟೇ ಸಂತಾನದ ವಿಚಾರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದಲ್ಲ.

ಮತ್ತಷ್ಟು ಓದು »

1
ಆಗಸ್ಟ್

ದೆಹಲಿಯೇ ಬೆಂಗಳೂರಿಗೆ ಬಂತು ಮತ್ತು ಅದೇ ಸರಿಯಾದದ್ದು !

-ವಸಂತ್ ಶೆಟ್ಟಿ
ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ನಡೆದಿರೋ ರಾಜಕೀಯ ಬಿಕ್ಕಟ್ಟು ಇನ್ನೇನು ಮುಗಿಬಹುದು ಅನ್ನೋ ಹಂತಕ್ಕೆ ಬಂದಿದೆ. ಕಳೆದ ಒಂದು ವಾರದಿಂದ ನಡೆದಿರೋ ವಿದ್ಯಮಾನವನ್ನು ಗಮನಿಸಿದರೆ ಕರ್ನಾಟಕದ ರಾಜಕೀಯ ಒಂದು ದೊಡ್ಡ ಬದಲಾವಣೆಯ ಘಟ್ಟದಲ್ಲಿದೆ ಅನ್ನಬಹುದು. ಯಾಕೆ ಹಾಗಂದೆ ಅಂತ ಕೇಳಿದ್ರೆ ನನ್ನ ಅನಿಸಿಕೆ ಇಂತಿದೆ:

ಕಳೆದ 60 ವರ್ಷದಿಂದಲೂ ನಾವು ನೋಡಿರುವುದು ಏನೆಂದರೆ ಕರ್ನಾಟಕದ ರಾಜಕೀಯ ನಾಯಕರು ಒಂದು ಸಣ್ಣ ವಿಷಯಕ್ಕೂ ದೆಹಲಿಗೆ ಹೋಗಿ ಅಲ್ಲಿನ ದೊರೆಗಳ ಮುಂದೆ ಕೈ ಕಟ್ಟಿಕೊಂಡು ನಿಂತು, “ಅಪ್ಪಣೆ ಮಹಾಪ್ರಭು” ಅಂತ ನಿಂತುಕೊಳ್ಳೊರು. ಅವರು ಕೊಟ್ಟ ಆಜ್ಞೆನಾ ಪ್ರಸಾದ ಅಂಬಂತೆ ಕಣ್ಣಿಗೊತ್ತಿಕೊಂಡು ವಾಪಸ್ ಬರೋರು. “ನಮ್ದು ನ್ಯಾಶನಲ್ ಪಾರ್ಟಿ ರೀ, ನಾವು ಶಿಸ್ತಿನ ಸಿಪಾಯಿಗಳು ರೀ,,ಹೈಕಮಾಂಡ್ ಮಾಡಿದ ಆಜ್ಞೆ ನಾವ್ ಮೀರುವುದುಂಟೇನು” ಎಂದು ತಮ್ಮ ಗುಲಾಮಗಿರಿಯನ್ನೇ ಖುಷಿಯಾಗಿ ಸಮರ್ಥಿಸಿಕೊಳ್ಳೊರು. ಆದರೆ ಮೊಟ್ಟ ಮೊದಲ ಬಾರಿಗೆ ದೆಹಲಿಯ ಮೂರು ಮತ್ತೊಂದು ನಿವೃತ್ತ ನಾಯಕರಿಗೆ ಸೆಡ್ಡು ಹೊಡೆದು ದೆಹಲಿಯೇ ಬೆಂಗಳೂರಿಗೆ ಬರುವಂತೆ ಮಾಡಿದ್ದು, ಎರಡು ದಿನವಾದರೂ ಅವರಿಗೆ toughest ಫೈಟ್ ಕೊಟ್ಟಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಿಂದ ಕೇಂದ್ರವಿರಬೇಕು, ಬಾಟಮ್ ಅಪ್ ಆಪ್ರೋಚ್ ಇರಬೇಕು ಅನ್ನುವ ಸಂದೇಶವನ್ನು ಕೊಟ್ಟ ಕಾರಣಕ್ಕೆ ಯಡಿಯೂರಪ್ಪನವರನ್ನು ಮೆಚ್ಚದಿರಲು ಆಗದು. ಮತ್ತಷ್ಟು ಓದು »