ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

ಮತ್ತಷ್ಟು ಓದು »

5
ಜುಲೈ

ಪರಭಾಷೆಯ ಚಿತ್ರಗಳಿಗೆ ಮಾರುಕಟ್ಟೆ ನಿರ್ಮಿಸಿ ಕೊಡುತ್ತಿರುವವರ್ಯಾರು?

– ಅರುಣ್ ಜಾವಗಲ್

ಸುವರ್ಣ ಕನ್ನಡ ಪಿಲಂ ಅವಾರ್ಡ್ ಕಾರ್ಯಕ್ರಮ ಕಳೆದ ವಾರ ಟಿವಿಯಲ್ಲಿ ನೋಡಿದೆ. ನಿಜಕ್ಕು ಅದ್ಬುತವಾದ ಕಾರ್ಯಕ್ರಮ, ಪರಬಾಶೆಗಳಲ್ಲಿ ಮಾತ್ರ ನಡೆಯುತ್ತಿದ್ದ ಅದ್ದೂರಿ ಕಾರ್ಯಕ್ರಮಗಳು, ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲು ನಡೆಯಲು ಪ್ರಾರಂಬವಾಗಿರೋದು ನಿಜಕ್ಕೂ ಸಂತೋಶಕರ. ಈ ರೀತಿಯ ಕಾರ್ಯಕ್ರಮಗಳು, ಕನ್ನಡ ಚಿತ್ರರಂಗ, ತಾವೇನು ಯಾರಿಗೂ ಕಡಿಮೆಯಿಲ್ಲ ಅನ್ನೊದನ್ನ ಎತ್ತಿಹಿಡಿದಿದೆ….
ಈ ರೀತಿಯ ಕಾರ್ಯಕ್ರಮಗಳನ್ನ ಬಳಸಿಕೊಂಡು ಚಿತ್ರರಂಗದ ಮಾರುಕಟ್ಟೆಯನ್ನು ವಿಸ್ತಾರ ಮಾಡಿಕೊಳ್ಳಬಹುದು. ಈ ಕೆಲಸವನ್ನು ಬೇರೆ ಬಾಶೆಯ ಚಿತ್ರರಂಗದರು ತುಂಬ ಚೆನ್ನಾಗಿಯೇ ಮಾಡಿಕೊಂಡು ಬಂದಿದ್ದಾರೆ, ಆದರೆ ದುರದ್ರುಶ್ಟ ಅಂದ್ರೆ ಕನ್ನಡ ಚಿತ್ರರಂಗದ ಕಾರ್ಯಕ್ರಮಗಳಲ್ಲಿ ಪರಬಾಶೆಯ ಹಾಡು/ಕುಣಿತದೊಂದಿಗೆ ಪರಬಾಶೆಯ ಚಿತ್ರಗಳಿಗೆ ನಮ್ಮ ರಾಜ್ಯದಲ್ಲಿ ಮಾರುಕಟ್ಟೆ ನಿರ್ಮಿಸೋಕ್ಕೆ ಹೊರಟಿರೋದು ಯಾಕೆ ಅನ್ನೊದು ಗೊತ್ತಾಗುತ್ತಿಲ್ಲ.
ಕಾರ್ಯಕ್ರಮಗಳಲ್ಲಿ- ಕನ್ನಡಿಗರು ಕನ್ನಡ ಸಿನೆಮಾಗಳನ್ನ ನೋಡಿ ಉತ್ತೇಜನ ಕೊಡಬೇಕು….., ಸಿನೆಮಾ ನೋಡೊ ಹವ್ಯಾಸ ಹೊರ ರಾಜ್ಯದಲ್ಲಿರುವಶ್ಟು ನಮ್ಮಲ್ಲಿಲ್ಲ….., ಕನ್ನಡ ಸಿನೆಮಾ ನೋಡೊಕ್ಕೆ ಜನರೇ ಇಲ್ಲ…ಸಿನೆಮಾವನ್ನ ತಿಯೇಟರಿನಲ್ಲೇ ನೋಡಿ….ಹೀಗೆ ಬಾಶಣಗಳನ್ನ ಮಾಡಿ.. ಅದೇ ಕಾರ್ಯಕ್ರಮದಲ್ಲಿ ಪರಬಾಶೆಯ ಹಾಡು/ಕುಣಿತ ನಡೆಸಿದರೆ ಕನ್ನಡಿಗರ ಪಾಡು ಏನಾಗಬಾರದು. ಗಂಟೆಗಟ್ಟಳೆ ಬಾಶಣ ಮಾಡಿ ಚಿತ್ರರಂಗದ ಎಲ್ಲಾ ತೊಡುಕು/ತೊಂದರೆಗಳಿಗೆ ಕನ್ನಡ ಚಿತ್ರ ನೋಡುಗರನ್ನೇ ಹೆಚ್ಚು ಗುರಿಯನ್ನಾಗಿಸಿ, ಪರಬಾಶೆಯ ಚಿತ್ರಗಳಿಗೆ ಕೈಮುಗಿಯುವ ಜನರಿಗೆ ನೈತಿಕತೆಯ ಬಗ್ಗೆ ಅರಿವಿದೆಯೇ?

4
ಜುಲೈ

ದಿಲ್ಲಿಯ ’ಹುಳಿ ದ್ರಾಕ್ಷೆ’ ಹಿಡಿಯಲು ಹೋಗಿ

-ಕಾಲಂ ೯

ದಿಲ್ಲಿ ಕನ್ನಡದ ಪತ್ರಕರ್ತರಿಗೆ ದೂರ. 3000 ಕಿ.ಮೀ. ಅಷ್ಟೇ ಅಲ್ಲ. ಅದರಾಚೆಗೂ ದೂರ. ಕನ್ನಡದ ಪತ್ರಕರ್ತರು ದಿಲ್ಲಿಯಲ್ಲಿ ಹೆಜ್ಜೆ ಗುರುತು ಮೂಡಿಸುವುದು ಸುಲಭದ ಮಾತಲ್ಲ. ಏರು ಬಿಸಿಲು ಅಥವಾ ತೀವ್ರ ಚಳಿಯಲ್ಲಿ ನಿರಂತರ ಆಲೂ ಪಲ್ಯವನ್ನೂ ಅರಗಿಸಿಕೊಳ್ಳುತ್ತಲೇ ಇರಬೇಕು.

ದಿಲ್ಲಿಯ ಆಡುಭಾಷೆ ಹಿಂದಿ – ಉರ್ದು ಮಾತ್ರ. ಇಂಗ್ಲೀಷು ಅಷ್ಟಕ್ಕಷ್ಟೆ. ಇನ್ನು ಕನ್ನಡದ ಕಥೆ? ಪತ್ರಿಕಾರಂಗವೇನು? ಸುಪ್ರೀಂ ಕೋರ್ಟು, ಪಾರ್ಲಿಮೆಂಟು, ಐಎ ಎಸ್ ಲಾಬಿಯಲ್ಲಿಯೂ ಕನ್ನಡದ ಧ್ವನಿ ಕ್ಷೀಣವೇ.

ಕನ್ನಡದ ಪತ್ರಿಕೋದ್ಯಮಕ್ಕೆ ‘ಕೊಂಬು-ಕಹಳೆ’ ಎಲ್ಲ ಆದವರೂ ದಿಲ್ಲಿಯಲ್ಲಿ ಏನೂ ಅಲ್ಲ.

ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಅಂದರೆ ಅದು ಅಡ್ವಾಣಿಯದ್ದೋ – ಪ್ರಕಾಶ್ ಕಾರಟರದ್ದೋ – ಚಿದಂಬರರದ್ದೋ – ಯಾವುದೇ ರಾಷ್ಟ್ರೀಯ ನಾಯಕರದ್ದಾಗಲಿ. ಅಂದೊಂದು ಮದುವೆ ಮನೆಯ ಬಾಬತ್ತು. ಬರೋಬ್ಬರಿ 600 ಜನ. ಇಂಗ್ಲೀಷ್ ಚಾನೆಲ್ ಗಳು, ಹಿಂದಿ ಚಾನೆಲ್ ಗಳು, ರಾಷ್ಟ್ರೀಯ ಪತ್ರಿಕೆಗಳು, ಅವರವರ ಕ್ಯಾಮರಾಮೆನ್ ಗಳು, ಮೈಕ್‍ಮೆನ್ ಗಳು, ಅದರಾಚೆಗೆ ಎಲ್ಲೋ ಕಳೆದು ಹೋಗುವ ಕನ್ನಡದ ಪತ್ರಕರ್ತ. ಪ್ರಶ್ನೆ ಕೇಳುವುದು, ಉತ್ತರ ಬರೆಯುವುದು ದೂರದ ಮಾತು. ಎಷ್ಟು ದೂರವೆಂದರೆ ದೆಲ್ಲಿಯ ನಮ್ಮ ಧ್ವನಿಗಳು ಆ ಬಾಬತ್ತಿನ ತನಕ ಹೋಗುವುದೇ ಇಲ್ಲ. ದಿಲ್ಲಿಯ ತಮ್ಮ ಮನೆಯಲ್ಲಿಯೇ ಕೂತು NDTVಯದೋ ಆಜ್ ತಕ್ ನದೋ Direct Rellay ನೋಡ್ತಾ ನೋಡ್ತಾನೇ ಇವರು ಸುದ್ದಿ ಕೊಟ್ಟು ಕೈತೊಳೆದುಕೊಳ್ಳುತ್ತಾರೆ. ಮತ್ತಷ್ಟು ಓದು »

4
ಜುಲೈ

ಜನರೆಂದರೆ ಯಾರ್ ಯಾರು ಕಾಗೇರಿಯವರೇ?

– ಬನವಾಸಿ ಬಳಗ

ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.

ಸಾಹಿತಿಗಳಷ್ಟೇ… ಜನತೆಯಲ್ಲ!

ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.

ಮತ್ತಷ್ಟು ಓದು »

2
ಜುಲೈ

ದೆವ್ವದ ಹರಕೆ!!

– ನಾಗರಾಜ್ ಮೌಳಿ

ನಿಮಗೆ ಗೊತ್ತಿದೆ ಎಷ್ಟೊಂದು ದೆವ್ವ ಭೂತ, ಪಿಚಾಚಿಗಳು, ಹಾಗೆ ಅದು ಇದು ಅಂತ ಮೂವೀಸ್ ಬಂದಿದಾವೆ, ಕಥೆಗಳು , ಕಾದಂಬರಿಗಳು, ಹಾಗೆ ಅಲ್ಲಿ ಇಲ್ಲಿ ಕೇಳಿದ್ದು ಎಲ್ಲ ನಮ್ಮ ಕಿವಿಗೂ ಬೀಳ್ತಾ ಇರ್ತವೆ. ಅದರಲ್ಲಿ ಕೆಲವೊಂದು ನಿಮಗಾಗಿ ಇಲ್ಲಿ ಬರೀತಿನಿ…..ಅದಕ್ಕೂ ಮುಂಚೆ ನಮ್ಮೂರಲ್ಲಿ ದೆವ್ವ, ದೈವ, ದಯ್ಯ ಹೀಗೆಲ್ಲಾ ಕರಿತಾರೆ ನಿಮಗೆ ಯಾವತರ ಅನ್ಸುತ್ತೋ ಹಾಗೆ ಓದಿ..

ಮೊನ್ನೆ ಟಿ‌ವಿ 9 ಲಿ ತೋರಿಸ್ತಾ ಇದ್ರು ಬೆಂಗಳೂರಲ್ಲಿ ಒಂದು 8 ಮಹಡಿ ಬಿಲ್ಡಿಂಗ್ ಇದ್ಯಂತೆ ಅಲ್ಲಿ ಯಾರು ಹೋಗೋಕೆ ಅಗಲ್ವಂತೆ, ಅದು ಏನು ಅಂತ ನೋಡೋಕೆ ಟಿ‌ವಿ 9 ತಂಡ ಹೋದಾಗ ಭಯಾನಕ ಅನುಭವ ಆಯಿತಂತೆ, ಅದನ್ನು ತೋರಿಸ್ತಿದ್ರು ಅದು ರಾತ್ರಿ ಕಣ್ರೀ ಸ್ವಲ್ಪ ಭಯನೆ ಆಯಿತು ನನಗೂ.. ಏನ್ ಕೇಳ್ತೀರಾ ಆಟೋಮೇಟಿಕ್ ಆಗಿ ಮಾಮೂಲಿ ಬಾಗಿಲು ತೆಗೆದುಕೊಳ್ಳುತ್ತೆ, ನಿಮ್ಮ ಹತ್ತಿರದಲ್ಲೇ ನೆರಳುಗಳು ಒಡಿಯಾಡ್ತವೆ, 1ನೇ ಮಹಡಿಗೆ ಹೋದ್ರೆ 4ನೇ ಮಹಡಿಲಿ, ಹಾಗೆ 4ನೇ ದಕ್ಕೆ ಹೋದರೆ 1ನೆದರಲ್ಲಿ ಯಾರೋ ಭಯಾನಕವಾಗಿ ಅಳುತ್ತಿರುವ ಶಭ್ದ, ಮೆಟ್ಟಿಲುಗಳಿಂದ ಯಾರೋ ಇಳಿದುಕೊಂಡು ಹೋಗ್ತಾ ಇರೋ ಸದ್ದು ಕೇಳಿಸುತ್ತೆ ಅಬ್ಬಾ ನೋಡಿ ಸ್ವಲ್ಪ ನೀರಾದೆ….

ಮತ್ತೆ ಒಂದು ಮನೆ ಇದೆ ನಮ್ಮ ಊರಲ್ಲಿ ಆ ಮನೆಯ ಯಜಮಾನ್ರು ನಮ್ಮ ಅಪ್ಪನ ಹತ್ರ ನಾವು ಚಿಕ್ಕವರಿದ್ದಾಗ ಬಂದು ಹೇಳ್ತಿದ್ರು, ಅವ್ರ ಮನೇಲಿ ಮರದ ತೊಲೆಗಳ ಮೇಲೆ ಯಾರೋ ಕಂಟಿನಿಯಸ್ ಆಗಿ ಗುದ್ದಿದ ಶಭ್ದ ಕೇಳುತ್ತಿತಂತೆ, ಹಾಗೆ ರಾತ್ರಿ ಒಬ್ಬ ಎತ್ತರದ ಮನುಷ್ಯ ದೀಪ ಹಿಡಿದುಕೊಂಡು ಹಾರಿ ಹೋಗ್ತಾ ಇದ್ದಹಾಗೆ, ಗೇಟಿನಬಳಿ ಯಾವುದೋ ಬಿಳಿ ಸೀರೆಯ ಹೆಂಗಸು ನಿಂತು ಅಳುತ್ತಿರುವ ಹಾಗೆ ಕಾಣಿಸ್ತಿತ್ತಂತೆ,

ಮನೇಲಿ ಮಲಗಿದ್ರೆ ಮೈತುಂಬಾ ಯಾವುದೋ ಒಂದು ಹಾವು ಹರಿದಾಡಿದ ಅನುಭವ ಆಗಿ ಶಾಂತಿ ಮಾಡಿಸಿದ್ದನ್ನ ನೋಡಿದೀನಿ, ಮನೇಲಿ ನೀರು ಅದಾಗಿ ಅದೇ 5 ನಿಮಿಷದಲ್ಲಿ  ಕೆಂಪು ಬಣ್ಣಕ್ಕೆ ತಿರುಗೋದು, ಏನು ಅಡಿಗೆ ಮಾಡಿದ್ರೂ, ಉಪ್ಪು ಹಾಕದೇ ಇದ್ರು, ತಿಂದಾಗ ಅತಿಯಾಗಿ ಉಪ್ಪಾಗಿ ಊಟಾನೇ ಬಿಟ್ಟು ಏಳಬೇಕು ಹಾಗೆ ಆಗ್ತಿತ್ತು ಅಂತ ಹೇಳ್ತೀದ್ರು,  ಅದನ್ನ ನೋಡೋಕೆ ನಮ್ಮ ಕೆಲವು ಗುರುತು ಪರಿಚಯ ಇರೋರು ಹೋಗಿದ್ರೂ ನಾವು ಬಿಡಿ ತುಂಬಾ ದೈರ್ಯವಂತರು ಹಾಗಾಗಿ ಅಂತ ಸಾಹಸ ಮಾಡಲಿಲ್ಲ. ಮತ್ತಷ್ಟು ಓದು »

1
ಜುಲೈ

ಕ್ಷಮಿಸಿ,ನಿಮ್ಮ ನೆಮ್ಮದಿಯನ್ನು ಕಲಕುವ ಉದ್ದೇಶ!

– ಚಿತ್ರ ಸಂತೋಷ್

ನನ್ನ ಕಣ್ಣಿನಲ್ಲಿ ಕಣ್ಣೀರು ಎಂದೋ ಬತ್ತಿಹೋಗಿತ್ತು. ಅನ್ಯಾಯದ ವಿರುದ್ಧದ ದನಿ ಕುಗ್ಗಿಹೋಗಿತ್ತು. ನನಗೆ ಈಗ ದನಿ ಇಲ್ಲ. ಒಂದು ವೇಳೆ ದನಿ ಇದ್ದರೂ ಕೇಳುವ ಕಿವಿಗಳು ನನ್ನ ಬಳಿ ಇಲ್ಲ. ಅಪ್ಪ-ಅಮ್ಮನ ನೆನಪಾಗುತ್ತದೆ. ಲಂಡನ್‌ನ ನೆನಪುಗಳು ಆಗಾಗ ಸುಳಿಯುತ್ತವೆ. ಬದುಕು ಬೇಡ ಅನಿಸುತ್ತಿದೆ. ಆದರೂ, ನನ್ನ ಕೈಯಾರೆ ನಾನು ಕೊಲೆಯಾಗ ಬಯಸಲಾರೆ. ಎಲ್ಲವನ್ನೂ ಮರೆಯೋಕೆ ಕುಡಿತವನ್ನು ಬದುಕಾಗಿಸಿಕೊಂಡಿದ್ದೇನೆ.

ಆನೆ, ಹುಲಿ, ಸಿಂಹಗಳ ಅಂಗಾಂಗಳನ್ನು  ಪ್ರದರ್ಶನಕ್ಕಿಟ್ಟರೆ ದುಡ್ಡು ಕೊಟ್ಟು ನೋಡಲು ಖುಷಿಪಡ್ತೀವಿ. ಆದರೆ, ಒಬ್ಬ ಹೆಣ್ಣಿನ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ…ನೋಡುವುದು ಬಿಡಿ, ಕೇಳಲು ಅಸಹ್ಯವಾಗುತ್ತದೆ. ಆದರೆ, ಇಂಥದ್ದೊಂದು ನೈಜ ಘಟನೆ ಎರಡು ದಶಕಗಳ ಹಿಂದೆ ನಡೆದಿತ್ತು. ಇಂದಿಗೂ ದಕ್ಷಿಣ ಆಫ್ರಿಕಾದ ನೂರಾರು ಹೆಣ್ಣು ಮಕ್ಕಳು ಈ ಕಥೆಯನ್ನು ನೆನೆಸಿಕೊಂಡು ಕಣ್ಣೀರು ಹಾಕುತ್ತಾರೆ.

*****                                            *****
ನನ್ನ ಹೆಸರು ಸಾರಾ. ಹುಟ್ಟಿದ್ದು ೧೭೮೯ರಲ್ಲಿ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ. ನಾನು ಎದ್ದು ನಡೆಯುವ ಹೊತ್ತಿಗೆ ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದೆ. ಅವರು ಬಲಿಯಾಗಿದ್ದೂ ಬಡತನಕ್ಕೇ! ಇಂದು ನನ್ನೆದುರು ಅವರ ಮುಖವೂ ಅಸ್ಪಷ್ಟ. ಹಿಂದೆ-ಮುಂದೆ ಯಾರಿಲ್ಲ. ಒಬ್ಬಳೇ ಮಗಳು. ಒಂದಷ್ಟು ದಿನ ಸಂಬಂಧಿಕರ ಆಶ್ರಯದಲ್ಲಿ ಬೆಳೆದೆ. ಆದರೂ, ಅಲ್ಲಿ ನನ್ನ ಬದುಕಿರಲಿಲ್ಲ. ನಮ್ಮೂರಿನ ಪಕ್ಕದ ಡಚ್ ರೈತರ ಮನೆಯಲ್ಲಿ ಜೀತದಾಳಾಗಿ ಸೇರಿಕೊಂಡೆ. ಆಗಿನ್ನೂ ಹರೆಯಕ್ಕೆ ಬಂದ ವಯಸ್ಸು ಜಗತ್ತಿನ ಆಗುಹೋಗುಗಳನ್ನು ತಿಳಿಯಬಲ್ಲವಳಾಗಿದ್ದೆ. ಬಿಳಿಯರು ನಮ್ಮ ಜನಾಂಗದ ವಿರುದ್ಧ ನಡೆಸುತ್ತಿದ್ದ ಅನ್ಯಾಯಗಳ ಕುರಿತು ಕೇಳಿದ್ದೆ. ಎಲ್ಲವೂ ನನ್ನೊಡಲಲ್ಲಿ ಮೌನವಾಗಿದ್ದವು.

ಬೀದಿ-ಬೀದಿಯಲ್ಲಿ ಬೆತ್ತಲಾದೆ!
ಮತ್ತಷ್ಟು ಓದು »

1
ಜುಲೈ

ಪ್ರೀತಿ ಕುರುಡಾದರೂ ಪ್ರಿತಿಸುವವರು ಕುರುಡಾಗದಿರಲಿ

– ಪವನ್ ಪಾರುಪತ್ತೇದಾರ್

ಅಗ್ರಹಾರದ ಶಾಮಣ್ಣನವರಿಗೆ ತಮ್ಮ ಮಗಳನ್ನ ಬ್ಯಾಂಕ್ ಮ್ಯಾನೇಜರ್ ಮಾಡಬೇಕಂಬ ಅಸೆ ಇತ್ತು.ಮಗಳಿಗೆ SSLC ವರೆಗೂ ಹಳ್ಳಿಯಲ್ಲಿನ ಶಾಲೆಯಲ್ಲಿ ಓದಿಸಿದರು, ಪ್ರತಿದಿನ ಮಗಳನ್ನ ಶಾಲೆಗೆ ಕರೆದೊಯ್ಯುವುವುದು ಮತ್ತೆ ಕರೆತರುವುದು ಅವರದೇ ಕೆಲಸ. ಮನೆಗೆ ಕರೆ ತಂದೊಡನೆ ಮುದ್ದಾಗಿ ಮಾತನಾಡಿಸಿ ಶಾಲೆಯ ಬಗ್ಗೆ ವಿಚಾರಿಸುವುದು ಇವೆಲ್ಲ ನಡೆಯುತ್ತಿತ್ತು. ಆದರೆ ಹಳ್ಳಿಯಲ್ಲಿ ಕಾಲೇಜ್ ಇಲ್ಲದಿದ್ದರಿಂದ ಅನಿವಾರ್ಯವಾಗಿ ಪಕ್ಕದ ಪಟ್ಟಣಕ್ಕೆ ಸೇರಿಸಬೇಕಾಯ್ತು, ಪ್ರತಿ ದಿನ ಬಸ್ ಅಲ್ಲಿ ಪ್ರಯಾಣ ಮಗಳು ಮನೆಯಿಂದ ಹೊರ ಮತ್ತೆ ಸಂಜೆ ಬರುವ ವರೆಗೂ ಅವಳದ್ದೇ ಚಿಂತೆ ಶಾಮಣ್ಣ ಮತ್ತು ಅವರ ಹೆಂಡತಿಗೆ. ಆಗಾಗ ಕಾಲೇಜ್ ಬಳಿ ಹೋಗುತಿದ್ದರು, ಒಂದೆರಡು ಸಲಿ ಅವರು ಹೋದಾಗ ಮಗಳು ಕಾಲೇಜ್ ನಲ್ಲಿ ಇರಲಿಲ್ಲ.

ಮಗಳು ಮನೆಗೆ ಬಂದಮೇಲೆ ಕೇಳಿದಾಗ ಸ್ನೇಹಿತೆಯ ಮನೆಗೆ ಓದಲು ಹೋಗಿದ್ದೆ ಎಂದಳು. ಆದರು ಶಾಮಣ್ಣ ನವರಿಗೆ ಏನೋ ಒಂದು ರೀತಿ ಅನುಮಾನ ಮಗಳು ಎಲ್ಲಾದರೂ ತಪ್ಪು ದಾರಿ ತುಳಿಯುತಿರುವಳೋ ಅನ್ನೋ ಭಯ, ಕಾಲೇಜ್ ಹತ್ತಿರದಲ್ಲೇ ಇದ್ದಿದ್ದರೆ ಮೊದಲಿನ ಹಾಗೆ ತಾನೆ ಜೊತೆಯಲಿ ಹೋಗಿ ಬರಬಹುದಾಗಿತ್ತು ಅನ್ನೋ ಯೋಚನೆ ಇನ್ನು ಸ್ವಲ್ಪ ದಿನಗಳಾದ ಮೇಲೆ ಕಾಲೇಜ್ ಗೆ ಹೋದ ಶಾಮಣ್ಣ ನವರ ಮಗಳು ಮತ್ತೆ ಮನೆಗೆ ತಿರುಗಿ ಬಂದಿಲ್ಲ. ಆಮೇಲೆ ತಿಳಿದ ವಿಷಯ ಅಂದ್ರೆ ಅವಳು ಪಟ್ಟಣದಲ್ಲಿನ ಒಬ್ಬ ಆಟೋ ಡ್ರೈವರ್ ಜೊತೆ ಓದಿ ಹೋಗಿದ್ದಳು, ಹತ್ತಾರು ಎಕರೆ ಜಮೀನು ಅಸ್ತಿ ಪಾಸ್ತಿ ಎಲ್ಲ ಇದ್ದ ಶಾಮಣ್ಣನವರಿಗೆ ಮಗಳ ಮದುವೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಾಗಿರಲಿಲ್ಲ. ಆದರೆ ಮಗಳು ವಿದ್ಯಾವಂತೆ ಅಗಲಿ ಎಂದು ಅಸೆ ಪಟ್ಟಿದ್ದಕ್ಕೆ ಶಾಮಣ್ಣ ನವರಿಗೆ ಸಿಕ್ಕ ಪ್ರತಿಫಲ ಬಹಳ ವಿಷಾದನೀಯ. ಬಹಳ ಕಟ್ಟುನಿಟ್ಟಿನ ಬ್ರಾಹ್ಮಣ ಕುಟುಂಬ ಊರಿನ ಜನ ಮಾತ್ರವಲ್ಲದೆ ನೆಂಟರು ಇಷ್ಟರ ಮಧ್ಯೆ ಸಹ ಅವಮಾನ ಪಡುವಂತಾಯಿತು.

ಮತ್ತಷ್ಟು ಓದು »

30
ಜೂನ್

ಅಮ್ಮ ಹೊಲಿದ ತಂಗಿಯ ಅಂಗಿ..!

-ರವಿ ಮೂರ್ನಾಡು

          ಗೆಜ್ಜೆಗಳಿಲ್ಲದ ಕಾಲುಗಳಲ್ಲಿ ಮಗು ಅಂಬೆಗಾಲಿಕ್ಕುತ್ತಿತ್ತು. ಬೆಳಕಿನ ಚುಕ್ಕಿಯೊಂದು ಹಾಲ್ಗಲ್ಲದ ನಗೆ ಸೂಸುತ್ತಾ ಅಂಗಿ ತೊಟ್ಟು ಬರುತ್ತಿರುವಂತೆಯೇ, ಅಮ್ಮನ ಕಣ್ಣಿನಲ್ಲಿ ಹನಿಗಳು ತೊಟ್ಟಿಕ್ಕ ತೊಡಗಿದವು. ಹಾಗೇ ನೋಡುತ್ತಿದ್ದೆ. ಏಕಮ್ಮ ಅಳುತ್ತಿದ್ದೀಯ?. ಬಾಚಿ ತಬ್ಬಿಕೊಂಡ ಅಮ್ಮ, “ಇಲ್ಲ ಮಗನೇ.. ನೀನು ದೊಡ್ಡವನಾಗಿ ಕೆಲಸಕ್ಕೆ ಸೇರಿದ ಮೇಲೆ ನನಗೊಂದು ಸೀರೆ.. ತಂಗಿಗೊಂದು ಚೆಂದದ ಅಂಗಿ ತಂದು ಕೊಡಬೇಕು” ಅಂತ ಉಸುರಿದಳು. ಮನೆಯ ಹೊರಗೆ ಆಗ ತಾನೆ ಕತ್ತಲು ತಬ್ಬಿಕೊಂಡಿತ್ತು… ಹಾಗೇ ತಂಗಾಳಿ ಮುಖಕ್ಕೆ ಬಡಿದಾಗ, ಅಮ್ಮನ ಮಾತು ನನ್ನ ಹಗಲುಗಳನ್ನು ಕಾಯುತ್ತಿತ್ತು.

ವಾರಕ್ಕೆ ರವಿವಾರದ ಶಾಲೆಯ ರಜಾ ದಿನಗಳಲ್ಲಿ ಮನೆಗೆ ಬರುವಾಗಲೆಲ್ಲಾ, ಅವಳು ಕೇಳುತ್ತಾಳೆ ” ಮಾವ ಏನು ಕೊಡಲಿಲ್ಲವೇನೋ?” ಅಂತ . ಇದು ಪ್ರತೀ ಬಾರಿಯ ಪ್ರಶ್ನೆ. ಒಂದು ಬಾರಿ ಹಾಗೆ ಕೇಳಿದ್ದೆ. ಇಲ್ಲ ಸುಮ್ಮನೇ ಕೇಳಿದೆ ಅಂತ ಹೇಳಿದ್ದಳು. ತಂಗಿ ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಹುಟ್ಟಿದಾಗ, ಮಗು-ತಾಯಿಯನ್ನು ನೋಡಲು ಒಮ್ಮೆ ಮಾವ ಬಂದಿದ್ದು. ತದ ನಂತರ ಬರಲಿಲ್ಲ. ವರ್ಷ ಒಂದಾಗುತ್ತಾ ಬಂತು. ನಾಲ್ಕು ತಿಂಗಳ ಮಗುವಿರುವಾಗ, ಅಜ್ಜಿ  ಎರಡು ಅಂಗಿ ತಂದಿದ್ದರು. ಅಪ್ಪ ಮಡಿಕೇರಿಯ ಶುಕ್ರವಾರದ ಸಂತೆ ದಿನ , ದಾರಿ ಬದಿಯ ಮುಸ್ಲಿಂ ವ್ಯಾಪಾರಿಯಿಂದ ತಂದ ಎರಡು ಅಂಗಿ. ಮಗು ದೊಡ್ಡದಾಗುತ್ತಿದ್ದಂತೆ ಎಲ್ಲವೂ ಸಣ್ಣದಾಗಿದ್ದವು. ಮತ್ತಷ್ಟು ಓದು »

30
ಜೂನ್

ಟ್ರಾಪಿಕ್ ಸಮಸ್ಯೆ ಯ ಜಾಗ್ರುತಿ ಕನ್ನಡದಲ್ಲಿರಲಿ

-ಅರುಣ್ ಜಾವಗಲ್

ಬೆಂಗಳೂರಿನ ಟ್ರಾಫಿಕ್ ನಿಯಂತ್ರಿಸುವಲ್ಲಿ ದೇಶದ ಹಲವಾರು ನಗರಗಳ ಪೋಲೀಸರಿಗೆ ಹೋಲಿಸಿದರೆ ನಮ್ಮ ಪೋಲೀಸರು ಬಹಳ ಮುಂದಿದ್ದಾರೆ. ತಂತ್ರಜ್ನಾನವನ್ನ ಬಳಸೋದರ ಮೂಲಕ ಟ್ರಾಫಿಕ್ ನಿಯಂತ್ರಣದಲ್ಲಿ ದೇಶಕ್ಕೆ ಮಾದರಿಯಾಗಿದ್ದಾರೆ ಎನ್ನುವುದು ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುವಂತಹದ್ದು.

ಆದ್ರೆ, ಬೆಂಗಳೂರಿನ ಟ್ರಾಪಿಕ್ ಸಮಸ್ಯ್ತೆಯನ್ನು ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಪೋಲೀಸರಿಗೆ ಸರಿಯಾಗಿ ಸಹಕರಿಸಿಲ್ಲ ಎಂದು ಬೆಂಗಳೂರಿನ ಪೋಲೀಸ್ ಕಮಿಶನರ್ ಆದ ಜ್ಯೋತಿ ಪ್ರಕಾಶ್ ಮಿರ್ಜಿಯವರು ಇಂದು ನಗರದ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.


ಟ್ರಾಪಿಕ್ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಪೋಲೀಸಿನವರಶ್ಟೇ ಸಾರ್ವಜನಿಕರ ಪಾತ್ರವೂ ಇದೆ. ಟ್ರಾಫಿಕ್ ಸಮಸ್ಯೆ ಬಗ್ಗೆ ಸಾರ್ವಜನಿಕರಲ್ಲಿ ಜಾಗ್ರುತಿ ಅತ್ಯಗತ್ಯ. ಈ ಜಾಗ್ರುತಿ ಕೆಲಸವನ್ನು ಪೋಲೀಸಿನವರ ಮಾಡುತ್ತಿಲ್ಲವೆಂದೇನಿಲ್ಲ. ಸಾರ್ವಜನಿಕರಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಜಾಗ್ರುತಿ ಮೂಡಿಸೋ ಕೆಲ್ಸನೂ ಸಹ ಪೋಲೀಸಿನವರು ಮಾಡುತ್ತಿದ್ದಾರೆ. ಆದರೆ ಇದು ಪರಿಣಾಮಕಾರಿಯಾಗಿಲ್ಲ ಅನ್ನೊದು ನನ್ನ ಅನಿಸಿಕೆ.
ಟ್ರಾಪಿಕ್ ಸಮಸ್ಯೆಯ ಬಗ್ಗೆ ಜಾಗ್ರುತಿ ಕೆಲ್ಸದಲ್ಲಿ ಬಾಶೆ ಅತ್ಯಂತ ಮುಕ್ಯ. ಜನರಿಗೆ ಅರ್ತ ಆಗೋ ಬಾಶೆಲಿ ಈ ಕೆಲ್ಸ ನಡೆದ್ರೆ ಪರಿಣಾಮಕಾರಿಯಾಗಿರುತ್ತೆ. ಬೆಂಗಳೂರಿನ ಬಹುಸಂಕ್ಯಾತ ಜನರ ಬಾಶೆ ಕನ್ನಡದಲ್ಲಿ ಜಾಗ್ರುತಿ ಕಾರ್ಯಕ್ರಮ ನಡೆದ್ರೆ ಜಾಗ್ರುತಿಯ ಸಂದೇಶ ಜನರಿಗೆ ತಲುಪುತ್ತೆ. ವಿಶಾದದ ಸಂಗತಿಯೆಂದರೆ, ಪೋಲೀಸಿನವರು ಸಾರ್ವಜನಿಕರನ್ನ ಜಾಗ್ರುತಿ ಮಾಡೋ ಕಾರ್ಯದಲ್ಲಿ ವಲಸಿಗರನ್ನ ಮಾತ್ರ ಗಣನೆಗೆ ತೆಗೆದುಕೊಂಡು ಬಹುಸಂಖ್ಯಾತ ಕನ್ನಡಿಗರನ್ನ ಮರೆತಿರುವುದು ದುರದ್ರುಶ್ಟವೇ. ಮತ್ತಷ್ಟು ಓದು »
29
ಜೂನ್

ಸರ್ಕಾರಿ ಇಂಗ್ಲಿಶ್ ಶಾಲೆ – ಬೇಲಿಯೇ ಎದ್ದು ಹೊಲವ ಮೇಯ್ದೊಡೆ ಕಾಯುವರಾರು ?

 –ವಸಂತ್ ಶೆಟ್ಟಿ
ಜನರ ಅಪೇಕ್ಷೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಜನರಿಂದ ಬೇಡಿಕೆ ಬಂದ್ರೆ ಆರನೇ ತರಗತಿಯಿಂದ ಎಲ್ಲೆಡೆ ಇಂಗ್ಲಿಶ್ ಮಾಧ್ಯಮದ ಶಾಲೆಗಳನ್ನು ತೆರೆಯಲು ಸರ್ಕಾರ ತಯಾರಾಗಿದೆ ಅನ್ನುವ ಹೇಳಿಕೆಯನ್ನು ಪ್ರಾಥಮಿಕ ಮತ್ತು ಪ್ರೌಡಶಾಲೆ ಸಚಿವರಾದ ಕಾಗೇರಿಯವರು ಹೇಳಿದ್ದು ಮೊನ್ನೆ ಮೊನ್ನೆ ಪತ್ರಿಕೆಗಳಲ್ಲಿ ಕಂಡೆ. ಬೇಲಿಯೇ ಎದ್ದು ಹೊಲವ ಮೇಯೊದು ಅಂದ್ರೆ ಇದೇನಾ ಅನ್ನಿಸ್ತಾ ಇತ್ತು. ಒಂದೆಡೆ ಪಾಲಿಕೆ ವ್ಯಾಪ್ತಿಯ ಕನ್ನಡ ಶಾಲೆಗಳನ್ನು ಸಿ.ಬಿ.ಎಸ್.ಈ ತೆಕ್ಕೆಗೆ ಕೊಡಿಸಿ ತಮ್ಮ ಜನ್ಮ ಪಾವನವಾಯ್ತು ಅನ್ನುವ ಸಚಿವರೊಬ್ಬರು, ಇನ್ನೊಂದೆಡೆ ಜನರ ಅಪೇಕ್ಷೆ ಈಡೇರಿಸಲು ಎಲ್ಲೆಡೆ ಇಂಗ್ಲಿಶ್ ಶಾಲೆಗಳನ್ನು ತೆರೆಯುವುದಾಗಿ ಹೇಳುವ ಈ ಸಚಿವರು. ಇವರ ಹೊಣೆಗಾರಿಕೆ ಇಲ್ಲದ ಈ ನಡೆಗಳು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಗಟ್ಟಿಯಾದ ಸಮಾಧಿಯೊಂದನ್ನು ಸದ್ದಿಲ್ಲದೇ ಕಟ್ಟುತ್ತಿವೆ ಅನ್ನಬಹುದು.
ಇದೇ ಸಂದರ್ಭದಲ್ಲಿ ತಾಯ್ನುಡಿ ಶಿಕ್ಷಣದ ಬದಲು ಇಂಗ್ಲಿಶ್ ಬೇಕೆನ್ನುವವರ ವಾದವಾದರೂ ಏನು ಅಂದರೆ ನನಗೆ ಕಾಣುವುದು ಕೆಳಗಿನ ಕೆಲವು ಮಾತುಗಳು. ಅವುಗಳಿಗೆ ನನ್ನ ಅನಿಸಿಕೆ ಏನು ಅನ್ನುವುದನ್ನು ಈ ಸಂದರ್ಭದಲ್ಲಿ ಬರೆದಿರುವೆ.
ಕನ್ನಡ ಮಾಧ್ಯಮ ಬೇಕು ಅನ್ನುವವರದ್ದು ಬೂಟಾಟಿಕೆ. ಕನ್ನಡ ಮಾಧ್ಯಮ ಬೇಕು ಅನ್ನುವ ಸಾಹಿತಿಗಳು, ಚಿಂತಕರು, ಕನ್ನಡ ಪರ ಹೋರಾಟಗಾರರು, ರಾಜಕಾರಣಿಗಳು ತಮ್ಮ ಮಕ್ಕಳನ್ನು ಸೇರಿಸುವುದು ಇಂಗ್ಲಿಶ್ ಮಾಧ್ಯಮದ ಸಿ.ಬಿ.ಎಸ್.ಈ/ಐ.ಸಿ.ಎಸ್.ಈ ಶಾಲೆಗಳಿಗೆ, ಆದರೆ ಸಾಮಾನ್ಯ ಜನರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಬೇಕು. ತಮ್ಮ ಮಕ್ಕಳು ಯಾವ ಮಾಧ್ಯಮದಲ್ಲಿ ಕಲಿಯಬೇಕು ಅನ್ನುವುದನ್ನು ಪಾಲಕರ ನಿರ್ಧಾರಕ್ಕೆ ಬಿಡಿ.   ಮತ್ತಷ್ಟು ಓದು »