ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

29
ಜೂನ್

ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ದನಿ ಎತ್ತಿದ್ದಕ್ಕೆ ಜನಸಾಮಾನ್ಯನಿಗೆ ಯು.ಪಿ.ಎ ಇ೦ದ ಶಿಕ್ಷೆ…!!!

ಮಂಜುನಾಥ್ ಮಠದ್

(ಬೆಲೆಯೇರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯನ ಮನದಾಳದ ಮಾತು ಈ ಲೇಖನವಾಗಿ ಮೂಡಿ ಬಂದಿದೆ – ನಿಲುಮೆ )

ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ದನಿ ಎತ್ತಿದ ಬಾಬ ರಾಮ್ ದೇವ್ ಅವರನ್ನು  ರಾತ್ರೋರಾತ್ರಿ ಬ೦ಧಿಸಿ,ಲೋಕ ಪಾಲ್ ಮಸೂದೆ ಜಾರಿಗೆ ತರಲು ಯತ್ನಿಸುತ್ತಿರುವ ಅಣ್ಣಾ ಹಜಾರೆಯವರನ್ನು ವ೦ಚಿಸುತ್ತಿರುವ ಕೇ೦ದ್ರದ ಯು.ಪಿ.ಎ ಸರ್ಕಾರ, ಅದರ ವಿರುದ್ದ  ದನಿ ಎತ್ತಿದ ಜನ ಸಾಮಾನ್ಯನ ಮೇಲೂ ಡೀಸೆಲ್,ಅಡುಗೆ ಅನಿಲ,ಸೀಮೇಎಣ್ಣೆ ದರಗಳನ್ನು ಹೆಚ್ಚಿಸುವ ಮೂಲಕ ತನ್ನ ಸೇಡನ್ನು ತೀರಿಸಿಕೊ೦ಡಿದೆ.

’ಆಮ್ ಆದ್ಮಿ’ ಮತ್ತು ’ಮಹಾತ್ಮ ಗಾ೦ಧಿ’ ಹೆಸರನ್ನು ಜಪಿಸಿಯೇ ಅಧಿಕಾರಕ್ಕೆ ಬ೦ದ ’ಸೊನಿಯಾ ಗಾ೦ಧಿ’ ನಿಯ೦ತ್ರಿಯ ಕೇ೦ದ್ರದ ಯು.ಪಿ.ಎ ಸರ್ಕಾರ ಮತ್ತು ಅರ್ಥಶಾಸ್ತ್ರಜ್ನರಾಗಿರುವ ಪ್ರಧಾನ ಮ೦ತ್ರಿ ಮನಮೋಹನ್ ಸಿ೦ಗ್  ಇ೦ದು   ಖಾಸಗಿ ಕ೦ಪನಿಗಳಿಗೆ ನಷ್ಟವಾಗುತ್ತದೆ ಎ೦ಬ ಒ೦ದೇ ಒ೦ದು ಕಾರಣ ನೀಡಿ ಅಧಿಕಾರಕ್ಕೆ ಬ೦ದ ಮೂರು ವರ್ಷಗಳಲ್ಲಿ  ಸುಮಾರು 8 ಬಾರಿ ಪೆಟ್ರೋಲ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಿ  ದಿನೋಪಯೋಗಿ ವಸ್ತುಗಳ  ಬೆಲೆ ನಿಯ೦ತ್ರಣಕ್ಕೆ ತರಲಾಗದೆ ’ಆಮ್ ಆದ್ಮಿ’ ಗೆ ಹೊರೆಯಾಗಿ ಪರಿಣಮಿಸಿದೆ.

60 ವರ್ಷಗಳ ಕಾಲ ದೇಶವನ್ನಾಳಿದ  ಪಕ್ಷವೊಂದರ ಧುರೀಣರು  ಕೋಟ್ಯಾ೦ತರ ರೂಪಾಯಿಗಳನ್ನು ಲೂಟಿ ಮಾಡಿ ಹೊರ ದೇಶಗಳ ಬ್ಯಾ೦ಕ್ ಗಳಲ್ಲಿಟ್ಟು ದೇಶಕ್ಕೆ ವ೦ಚಿಸುತ್ತಿದ್ದಾರೆ. ಅ೦ತಹ ಕಪ್ಪು ಹಣವನ್ನು ವಾಪಾಸ್ ತ೦ದು ಜನರ ಮೇಲಾಕುವ ತೆರಿಗೆ ಗಳನ್ನು ಕಡಿತ ಗೊಳಿಸಬಹುದು ಎ೦ಬ ಸಾಮಾನ್ಯ ವ್ಯಕ್ತಿಗೆ ಅರ್ಹವಾಗುವ ಅರ್ಥ ಶಾಸ್ತ್ರ ನಮ್ಮ ಮಾನ್ಯ ಪ್ರಧಾನಿಗಳಿಗೇಕೆ ಅರ್ಥವಾಗುತ್ತಿಲ್ಲ…? ಮತ್ತಷ್ಟು ಓದು »

28
ಜೂನ್

ಪತ್ರಿಕೋದ್ಯಮದಲ್ಲಿ ಪಕ್ಕಕ್ಕೆ ಹೋದವರ ನೆಲೆ-ಬೆಲೆ

– ಕಾಲಂ ೯

ಕನ್ನಡ ಪತ್ರಿಕೋದ್ಯಮದಲ್ಲಿಂದು ನೇತೃತ್ವ ಪರೀಕ್ಷೆಯ ಕಾಲ. ಹೇಗೋ ಪತ್ರಿಕೆ ನಡೆಸುವ ಕಾಲ ಪಕ್ಕಕ್ಕೆ ಸರಿದಿದೆ. ವೈಎನ್ಕೆ ಅಂಥಾ ಯಶಸ್ವೀ ಸಂಪಾದಕರೇ ಸಂಜೆ ಆರಾಗುತ್ತಿದ್ದಂತೆಯೇ ’Phd’ ಕಾಲ ಬಂತೆಂದು ಚಡಪಡಿಸಿ ಎದುರಿಗಿದ್ದವರನ್ನು ಎಬ್ಬಿಸಿಕೊಂಡು ಗಯಾಬ್ ಆಗಿಬಿಡುವ ಕಾಲವೊಂದಿತ್ತು. ವಾರಕ್ಕೊಂದೆರಡು ಸಲ ಬಂದು ಹೋಗುವ ಸಂಪಾದಕರೂ ಇದ್ದರು. ಈಗ ಹಾಗಲ್ಲ. ಯಾರೇ ಸಂಪಾದಕರಾಗಲಿ ತಮ್ಮನ್ನು ಪೂರ್ತಿಯಾಗಿ  activate ಮಾಡಿಕೊಳ್ಳಲೇ  ಬೇಕು. ಎಲ್ಲ ಪುಟಗಳ ಮೇಲೆ ನಿಗಾ ಇಡಬೇಕು. ತಾಂತ್ರಿಕತೆಯನ್ನು ಬೆರಳ ತುದಿಗೆ ಸಿದ್ಧಿಸಿಕೊಳ್ಳಬೇಕು.

ಇಂತಹದೊಂದಿಷ್ಟು ಗುಣ – ಗತ್ತು ಎಲ್ಲ ಇದ್ದೂ ಹೊರಬಿದ್ದಿರುವ ’ಸಂಪಾದಕರು’ ಈಗೇನು ಮಾಡುತ್ತಿದಾರೆ? ಅವರೆತ್ತ ದೃಷ್ಟಿ ನೆಟ್ಟು ಕೂತಿದ್ದಾರೆ? ಈ ಬಗ್ಗೆ ಒಂದಿಷ್ಟು ಇಣುಕು ನೋಟ ಇಲ್ಲಿದೆ.

ಹೆಚ್. ಆರ್. ರಂಗನಾಥ್: ವಿಜಯ ಕರ್ನಾಟಕದ ದರಸಮರದಲ್ಲ್ಲಿಸಿಲುಕಿ ಪ್ರಸಾರ ಸಂಖ್ಯೆ ೫೨ ಸಾವಿರಕ್ಕೆ ಇಳಿದು ನೆಲಕಚ್ಚಿದ್ದ ’ಕನ್ನಡಪ್ರಭ’ಕ್ಕೆ ರಭಸ ಕೊಟ್ಟು ೨ ಲಕ್ಷ ಪ್ರಸಾರ ದಾಟಿಸಿದ ಸಂಪಾದಕ.

ಸುದ್ದಿಯ ವಾಸನೆ ಹಿಡಿಯುವ ಕಲೆಯಲ್ಲಿ ವಿಶಿಷ್ಠತೆ ತೋರಿಸುವ ರಂಗನಾಥ್ ಸುವರ್ಣ ನ್ಯೂಸ್ ಗೆ ಇಡೀ ತಂಡ ಸಮೇತವೇ ಹಾರಿದರು. ನಿರೀಕ್ಷೆಗಳು ಕುಣಿದೆದ್ದವು. ‘ಸುವರ್ಣ ಕರ್ನಾಟಕ’ ಪತ್ರಿಕೆ ರೂಪ ಪಡೆಯಲೇ ಇಲ್ಲ. ಸುವರ್ಣ ನ್ಯೂಸ್ ಏರುಗತಿಯಲ್ಲಿದ್ದಾಗಲೇ ಹೊರ ಬರಬೇಕಾಯ್ತು. ರಂಗ ಅವರು ಈಗಾಗಲೇ Writemen media pvt ltd ಅಂತ ಹೊಸ ಮೀಡಿಯಾ ಕಂಪೆನಿ ಆರಂಭಿಸಿದ್ದಾರೆ. ಟಿವಿ೫ ಜೊತೆ ಸೇರಿ ಕನ್ನಡ ಚಾನೆಲ್ ಟಿವಿ5 ಕನ್ನಡ ಸುದ್ದಿವಾಹಿನಿಯ ಸಾರಥ್ಯ ವಹಿಸಲಿದ್ದಾರೆ. ಮತ್ತಷ್ಟು ಓದು »

28
ಜೂನ್

ಹಿಂದಿ ಹೇರಿಕೆಯಲ್ಲೂ ಸುಣ್ಣ ಬೆಣ್ಣೆ..!

– ಮಹೇಶ. ಎಮ್. ಆರ್

ಇವತ್ತಿನ (೨೬-೦೬-೧೧) ಪ್ರಜಾವಾಣಿ ದಿನಪತ್ರಿಕೆಯಲ್ಲಿ ಮಿನಿಸ್ಟ್ರಿ ಆಫ್ ಮೈಕ್ರೊ, ಸ್ಮಾಲ್ ಆಂಡ್ ಮಿಡಿಯಮ್ ಎಂಟರಪ್ರೈಜಸ್ ಅವರು ತಮ್ಮ ಕಾಯರ್ ಬೋರ್ಡ್ ಎಂಬ ಸಂಸ್ಥೆಯ ಮೂಲಕ ಒಂದು ಜಾಹೀರಾತನ್ನು ಕೊಟ್ಟಿದ್ದಾರೆ. ಅದು ಸಂಪೂರ್ಣ ಹಿಂದಿಯಲ್ಲಿರೋದು ಕಾಣುತ್ತೆ. ಅವರ ಮಾಹಿತಿ ಪ್ರಜಾವಾಣಿ ಓದುವ ಅಥವಾ ಆ ಜಾಹೀರಾತನ್ನು ನೋಡುವ ಬಹುತೇಕ ಜನರಿಗೆ, ಕಣ್ಣಿಗೆ ಬಿದ್ದರೂ ಮಾಹಿತಿ ತಿಳಿಸುವ ಹಂತಕ್ಕೆ ಅದು ಹೋಗುವುದಿಲ್ಲ ಎಂಬುದು ಸತ್ಯ. ಹೀಗಾಗಿ ಮಾಹಿತಿ ಕೊಡುವ ಉದ್ದೇಶಕ್ಕಿಂತ ಅದರಲ್ಲಿ ಹಿಂದಿ ಹೇರಿಕೆಯ ಉದ್ದೇಶನೇ ಎದ್ದು ಕಾಣುತ್ತೆ. ಇನ್ನು ಈ ಜಾಹೀರಾತು ಕೊಟ್ಟ ಕಾಯರ್ ಬೋರ್ಡ ಅನ್ನೋ ಸಂಸ್ಥೆಯ ಕೇಂದ್ರ ಕಚೇರಿ ಕೇರಳದ ಕೊಚ್ಚಿಯಲ್ಲಿದೆ. ಕೇರಳದ ಬಾಶೆ ಮಲಯಾಳಂ, ಹೀಗಾಗಿ ಅಲ್ಲಿನೂ ಇದೇ ರೀತಿ ಹಿಂದಿಯಲ್ಲಿ ಕೊಟ್ಟಿದ್ದಾರಾ ಅಂತ ನೋಡಿದ್ರೆ,, ಅಲ್ಲಿನ ಮಲಯಾಳ ಮನೋರಮಾ ದಿನಪತ್ರಿಕೆಯಲ್ಲಿ ಇದೇ ಜಾಹೀರಾತು ಸಂಪೂರ್ಣ ಆಂಗ್ಲ್ ಬಾಶೆಯಲ್ಲಿತ್ತು. ವಿಚಿತ್ರ ಅಂದ್ರೆ, ಕಾಯರ್ ಬೋರ್ಡ ತಮ್ಮೂರಿನಲ್ಲಿ ಆಂಗ್ಲ ಬಾಶೆಯಲ್ಲಿ ಜಾಹೀರಾತು ಹಾಕಿಸಿ, ನಮ್ಮೂರಿನಲ್ಲಿ ಹಿಂದಿಯಲ್ಲಿ ಜಾಹೀರಾತು ಹಾಕಿಸಿದ್ದು.! ಎರಡು ಹಿಂದಿಯೇತರ ದಿನಪತ್ರಿಕೆಗಳೇ. ಒಂದು ಪ್ರಾದೇಶಿಕ ದಿನಪತ್ರಿಕೆಯಲ್ಲಿ ಆಂಗ್ಲ ಮತ್ತೊಂದರಲ್ಲಿ ಹಿಂದಿ ಹಾಕಿದ್ದು ಯಾಕೆ ಅನ್ನೋದಶ್ಟೆ ಪ್ರಶ್ನೆ. ಎರಡೂ ಕಡೆ ಪ್ರಾದೇಶಿಕ ಬಾಶೆನೇ ಇರಬೇಕಿತ್ತು ಅನ್ನೋದು ಮಾತ್ರ ವಿವಾದಕ್ಕೆ ಎಡೆ ಇಲ್ಲದ ವಾದ.! ಅಂದಹಾಗೆ ಬೆಂಗಳೂರಿನಲ್ಲೂ ಅದರ ಪ್ರಾದೇಶಿಕ ಕಚೇರಿ ಇದೆ.

ಮತ್ತಷ್ಟು ಓದು »

27
ಜೂನ್

ಪ್ರಜಾಪ್ರಭುತ್ವ ಭಾರತದಲ್ಲಿ ಗಾಂಧಿತ್ವದ ಮೌಲ್ಯಗಳು

– ಅರಹೊಳೆ ಸದಾಶಿವರಾಯರು

ಪ್ರತೀ ವರ್ಷವೂ ನಾವು ಗಣರಾಜ್ಯದಿನ, ಸ್ವಾತಂತ್ರ್ಯ ದಿನ, ಗಾಂಧಿ ಜಯಂತಿ ಹಾಗೂ ಗಾಂಧೀಜಿ ಪುಣ್ಯತಿಥಿಗಳನ್ನು ಆಚರಿಸುತ್ತೇವೆ-ಒಂದು ರೀತಿಯ ಅನಿವಾರ್ಯತೆಯಿಂದ ಆಚರಿಸಿದಂತೆ. ಈ ಸಂದರ್ಭಗಳಲ್ಲಿ ಮಾತ್ರ ನಮಗೆ, ಗಾಂಧೀಜಿಯವರ ತತ್ವ-ಚಿಂತನೆಗಳು ಪ್ರವಾಹೋಪಾದಿಯಲ್ಲಿ ನೆನಪಾಗುತ್ತವೆ ಮತ್ತು ಆ ಕ್ಷಣದಲ್ಲಿಯೇ ಅವುಗಳು ಮರೆತೂ ಹೋಗುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮನ್ನು ನಾವು ಚಿಂತನೆಗೊಡ್ಡಿಕೊಂಡಾಗ, ಒಂದು ರೀತಿಯ ಖೇದಾಶ್ಚರ್ಯಗಳು ಹುಟ್ಟುತ್ತವೆ.

ಪರಿಮಿತಿಯರಿತಾಶೆ, ಪರವಶತೆಯಳಿದ ಸುಖ

ವಿರತಿಯೊಡವೆರೆದ ಲೋಕೋದ್ಯೋಗಯುಕ್ತಿ

ಪರಿಕಿಸುತ ಜೀವಿತವ ಸತ್ಯವನೆ ಪಿಡಿವ ಮತಿ

ವರಗಳೀ ನಾಲ್ಕೆ ವರ-ಮಂಕುತಿಮ್ಮ

ಪರಿಮಿತವಾದ ಆಸೆ ಇರಬೇಕು, ವ್ಯಾಮೋಹ ತೊರೆದ ಸುಖವಿರಬೇಕು, ವಿರಕ್ತಿಯಿಂದ ಕೂಡಿದ ಉದ್ಯೋಗ ಯುಕ್ತಿ ಇರಬೇಕು. ಜೀವನವನ್ನು ಪರೀಕ್ಷಿಸುತ್ತಾ, ಸತ್ಯವನ್ನು ಪ್ರೀತಿಸುವ ಬುದ್ದಿ ಇರಬೇಕು.ಇದು ಕನ್ನಡದ ಭಗವದ್ಗೀತೆಯೆಂದೇ ಜನಜನಿತವಾಗಿರುವ ಮಂಕುತಿಮ್ಮನ ಕಗ್ಗದ ಸಾಲುಗಳು. ಇದರ ಉದ್ಧರಣೆಯೊಂದಿಗೆ ನಾನು ಇಂದು ಪ್ರಸ್ತುತ ಪಡಿಸಲಿರುವ ವಿಚಾರಧಾರೆಗೆ ಮೊದಲಂಕಿತ ಇಡುತ್ತಿದ್ದೇನೆ. ಮತ್ತಷ್ಟು ಓದು »

27
ಜೂನ್

ಜಾತಿ ವಿನಾಶವೋ? ಸಂಪ್ರದಾಯಗಳ ವಿನಾಶವೋ?

– ಸಂತೋಷ್ ಕುಮಾರ್ ಪಿ.ಕೆ, ಶಂಕರಘಟ್ಟ

ಇತ್ತೀಚೆಗೆ ಶಿವಮೊಗ್ಗದಲ್ಲಿ ಜಾತಿ ವಿನಾಶ ಸಮಾವೇಶವೊಂದು ಜರುಗುತ್ತಿರುವುದು ಒಳ್ಳೆಯ ಸುದ್ದಿ. ಸಮಾಜದಲ್ಲಿರುವ ಅನ್ಯಾಯ ಶೋಷಣೆಗಳನ್ನು ಹೋಗಲಾಡಿಸಲು ಚಳುವಳಿಗಳು, ಸಮಾವೇಶಗಳು ಯಾವ ಸ್ವರೂಪದಲ್ಲಾದರೂ ನಡೆಯಲೇಬೆಕು. ಅದು ಭೌದ್ದಿಕ ಚಳುವಳಿಯಾಗಲಿ, ಸಾಮಾಜಿಕ ಚಳುವಳಿಯಾಗಲೀ ಎರಡೂ ಸಹ ಅಷ್ಟೇ ಪ್ರಮುಖವಾದವು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶ ಜಾತಿಯನ್ನು ನಾಶಮಾಡಲು ಅಂತರಜಾತಿವಿವಾಹಿತರನ್ನು ಹಾಗೂ ಅದಕ್ಕೆ ಸಂಬಂಧಿಸಿದ ಸಮಾನ ಮನಸ್ಕರನ್ನು ಒಟ್ಟಿಗೆ ಸೇರಿಸುವ ಪ್ರಯತ್ನವನ್ನು ಮಾಡುತ್ತಿದೆ. ಅದರ ಜೊತೆ ಜೊತೆಗೆ ಭೌದ್ಧಿಕ ಚಳುವಳಿಯೂ ಸಹ ಆಗಿಂದಾಗ್ಗೆ ನಡೆಯುತ್ತಲೇ ಇದೆ. ಅಂತಹ ಚಳುವಳಿಯ ಕುರುಹಾಗಿ ಹಲವಾರು ಲೇಖನಗಳು ಮಾದ್ಯಮಗಳಲ್ಲಿ ಬರುತ್ತಿವೆ. ಹಾಗೆ ಬಂದಂತಹ ಒಂದು ಲೇಖನದ ವಿಮರ್ಶೆಯನ್ನು ಇಲ್ಲಿ ಮಾಡಲು ಪ್ರಯತ್ನಿಸಲಾಗುವುದು. ಇಂತಹ ಪ್ರಯತ್ನ ಏಕೆಂದರೆ ಕಳೆದ ೬೦, ೭೦ ವರ್ಷಗಳಿಂದಲೂ ಇಂತಹ ಚಳುವಳಿ ಸಮಾವೇಶ ನಡೆಯುತ್ತಿದ್ದರೂ ಜಾತಿ, ಶೋಷಣೆ, ಅನ್ಯಾಯ ದಿನೆದಿನೇ ಹೆಚ್ಚಾಗುತ್ತಿವೆ. ಕೇವಲ ಹಳೆಯ ಹಲಸಲು ವಿಚಾರಗಳನ್ನೇ ಪುನರಾವರ್ತಿಸುವ ಬದಲು ಸಮಸ್ಯೆ ಎಲ್ಲಿಂದ ಉಗಮವಾಗುತ್ತಿದೆ ಎಂಬುದನ್ನು ತುರ್ತಾಗಿ ಅರಿಯಬೇಕಾಗಿದೆ. ಆದ್ದರಿಂದ ಪ್ರಸಕ್ತ ಕಾಲಘಟ್ಟದಲ್ಲಿ ಇದುವರೆಗೂ ನಾವು ಕೇಳಿಕೊಂಡು ಬಂದಂತಹ ವಿಚಾರಗಳನ್ನು ಹಾಗೂ ಇಂದು ಹೇಳುತ್ತಿರು ವ ವಿಚಾರಗಳನ್ನು ಜೊತೆಗೆ ನಮ್ಮನ್ನು ನಾವೇ ಪುನರಾವಲೋಕಿಸುವ ಸಂದರ್ಭ ಇಂದು ನಮ್ಮ ಮುಂದಿದೆ.

ಎಸ್. ಕೆ ಭಗವಾನ್ ದಿನಾಂಕ 3 ಜೂನ್ 2011 ರಂದು ಪ್ರಜಾವಾಣಿಯಲ್ಲಿ  ಬರೆದ ಅವರ ಲೇಖನದ ಒಟ್ಟಾರೆ ವಾದ ಈ ರೀತಿಯಾಗಿತ್ತು,  ಜಾತಿಯನ್ನು ಇದುವರೆಗೂ ದೂರಿದ್ದು ಸಾಕು, ಇನ್ನು ಅದನ್ನು ನಾಶ ಮಾಡಲೇಬೇಕು. ಜಾತಿ ನಾಶವಾದರೆ ಹಲವಾರು ಸವಲತ್ತುಗಳು ಸಹ ಸುಮುದಾಯಗಳಿಗೆ ದೊರೆಯುತ್ತವೆ ಎಂದು ಲೇಖಕರು ಹೇಳುತ್ತಾರೆ. ಆದರೆ ಹಾಗೆ ಹೇಳುವ ಮುನ್ನ ಕೆಳಕಾಣಿಸಿರುವ ಪ್ರಶ್ನೆಗಳಿಗೆ ಯಾರಾದರೂ ಉತ್ತರಿಸಲೇಬೇಕು. ಮತ್ತಷ್ಟು ಓದು »

27
ಜೂನ್

ನನ್ನ ಇಂಜಿನಿಯರಿಂಗ್ ಬದುಕಿನ ಕಡೆಯ 22 ಘಂಟೆಗಳು…!!!

– ಪವನ್ ಪಾರುಪತ್ತೇದಾರ್

ಅಂದು ದಿನಾಂಕ ಜೂನ್ 16 2011 ಮಧ್ಯಾಹ್ನ 2 ಘಂಟೆ ಆಗಿತ್ತು ಇಂಜಿನಿಯರಿಂಗ್ ಬದುಕಿನ ಕಟ್ಟ ಕಡೆಯ ಪರೀಕ್ಷೆಗೆ ಕೇವಲ 22 ಘಂಟೆ ಮಾತ್ರ ಉಳಿದಿತ್ತು, ೪ ವರ್ಷಗಳ ಕಠಿಣ ಪರಿಶ್ರಮದ ನಂತರ ಕೊನೆಯ ಸೆಮಿಸ್ಟರ್ ನ ಪ್ರಾಜೆಕ್ಟ್ ವರ್ಕ್ ನಮ್ಮ ಭವಿಷ್ಯವನ್ನು ನಿರ್ಧಾರ ಮಾಡುವುದು. ಅದನ್ನು ಬಹಳ ಕಷ್ಟ ಪಟ್ಟು ಜಯನಗರದಲ್ಲಿನ ಒಂದು consultacy ಅಲ್ಲಿ ಮಾಡಿದ್ದೆವು. ಸಮಾಜದಲ್ಲಿ ಮತದಾನ ಮಾಡುವುದರಲ್ಲಿ ಆಗುವ ಲೋಪದೋಷಗಳನ್ನು ಸರಿಪಡಿಸಲೆಂದು ನಾವು finger print recognisation sensor ಉಪಯೋಗಿಸಿ ಒಂದು ಮಾಡೆಲ್ ರೆಡಿ ಮಾಡಿದ್ದೆವು.ನಾನು ಸಂದೀಪ್ ರಘು ಮತ್ತು ಮಂಜು ಸೇರಿ ಈ ಮಾಡೆಲ್ ಮಾಡಿದ್ದೆವು.

ಮಧ್ಯಾಹ್ನ ಅಮ್ಮ ಮಾಡಿದ ರಾಗಿಮುದ್ದೆ ಮತ್ತು ಸೊಪ್ಪು ಹುಳಿ ಸವಿಯುತ್ತ ಇದ್ದ ನನಗೆ ಮೊಬೈಲ್ ರಿಂಗಣಿಸಿದ್ದು ತಿಳಿಯಲೇ ಇಲ್ಲ, ಕಡೆಗೆ ಅಮ್ಮ ಪವನ್ ಆಗ್ಲಿಂದ ಮೊಬೈಲ್ ಬಡ್ಕೊತಿದೆ ನೋಡೋ ಅಂದಾಗ ರಾಗಿಮುದ್ದೆಯ ಕಡೆಯ ತುಂಡು ನನ್ನ ಬಾಯಲಿತ್ತು. ಹಾ ನೋಡ್ತಿನಮ್ಮ ಎಂದು ಮೊಬೈಲ್ ಬಳಿಗೆ ಹೋಗುವಷ್ಟರಲ್ಲಿ ಕಾಲ್ ಮತ್ತೆ ಕಟ್ ಆಗಿತ್ತು. ಮೊಬೈಲ್ ನ ದಿಸ್ಪ್ಳಿ, 5 missed calls ಎಂದು ತೋರಿಸುತಿತ್ತು. ನೋಡಿದರೆ 4 ಮಿಸ್ ಕಾಲ್ ಸಂದೀಪ್ ಮತ್ತು ಒಂದು ಮಂಜುದು ಆಗಿತ್ತು.ನಾನು ಸಂದೀಪ್ ಗೆ ಕರೆ ಮಾಡಿದೆ, ಸಂದೀಪ್ ಒಂಥರಾ ಗಾಬರಿ ಹುಡುಗ, ನೋಡಲು ಸದೃಢ ಮತ್ತು ಇರೋದು ಶಿವಾಜಿನಗರದಂತ ಸುಂದರ ಏರಿಯದಲ್ಲಿ.ಮನೆಯಲ್ಲಿ ತೆಲುಗು ಭಾಷೆ ಮಾತನಾಡುವರಾದರು ಶಿವಾಜಿನಗರ ಅವನನ್ನು ಅರ್ಧ ತಮಿಳಿಗನಾಗಿ ಮಾಡಿದೆ ಮತ್ತು ಅಲ್ಲಿನ ವಾತಾವರಣ ಅವನನ್ನು ಶಾರ್ಟ್ temperd ಮಾಡಿದೆ. ಸಂದೀಪ್ ಕರೆ recieve ಮಾಡುತ್ತಲೇ ಮಚ್ಚ…… ಅಂತ ಅರಚಿದ, ನಾನು ಏನೋ, ಏನಾಯ್ತೋ, ರಿಪೋರ್ಟ್ ಚೆನ್ನಾಗಿ ಓದಿ ರೆಡಿ ಆಗಿ ಬಾ ನಾಳೆ ಸೆಮಿನಾರ್ ಗೆ ಅಂದೆ. ಅದಕ್ಕವನು ಮಾಡೆಲ್ ಇಲ್ಲಿ ಎಕ್ಕುಟ್ಟಿ ಹೋಗಿದೆ ಇನ್ನು ಸೆಮಿನಾರ್ ಎಲ್ಲಿಂದ ಕೊಡೋದೋ ಅಂದ. ಅ ಮಾತು ಕೇಳಿದ ಒಡನೆ ಇನ್ನೊಂದು ರಾಗಿಮುದ್ದೆ ತಿನ್ನಬೇಕೆನಿಸಿದ್ದ ನನ್ನ ಅಸೆ ಹಾಗೆ ಕರಗಿ ಹೋಯ್ತು 2 ಲೋಟ ನೀರು ಗಟಗಟ ಕುಡಿದು ನಂತರ ಮಾತಿಗಿಳಿದೆ.

ಮತ್ತಷ್ಟು ಓದು »

27
ಜೂನ್

ಹೆಸರಲ್ಲಿ ಏನಿದೆ?!

– ಹೇಮಾ ಪವಾರ್, ಬೆಂಗಳೂರು

ಕಷ್ಟಗಳು ಹೇಗ್ಹೇಗೆ ಬರುತ್ತವೆ ಎಂದು ಅಂದಾಜಿಸುವುದು  ತುಂಬಾ ಕಷ್ಟ! ಇಂತಹ ಕಂಪೆನಿಯ CEO ಎಂದು ತನ್ನ ಹೆಸರು ಹೇಳಿ ಪರಿಚಯಿಸಿಕೊಂಡ ಆ ಮನುಷ್ಯ ನನ್ನ ಕಿವಿಗಳು available mode ನಲ್ಲಿವೆ ಎಂದು ಪರಿಗಣಿಸಿದ ಹಾಗಿತ್ತು, ನಿಲ್ಲಿಸದೆ ಇಪ್ಪತ್ತುನಿಮಿಷಗಳವರೆಗೆ ಮಾತಾಡುತ್ತಿದ್ದ, ಕೇಳುತ್ತ ಕಣ್ಣು ತೆರೆದುಕೊಂಡೇ ನಿದ್ದೆ ಮಾಡುವುದುನನಗೆ ಹೊಸತಲ್ಲ ಅನ್ನಿ ಆದರೆ ಇದ್ದಕ್ಕಿದ್ದ ಹಾಗೆ ನನಗೆ ನೆನಪಾಗಿದ್ದು ನಾನವನ ಹೆಸರುಮರೆತಿದ್ದೇನೆಂದು. ಆತನ ಮಾತುಕೇಳಿಸಿಕೊಳ್ಳುತ್ತಲೆ ತಲೆಗೆ ಕೆಲಸ ಕೊಟ್ಟೆ, ಎಲ್ಲವನ್ನೂrecall ಮಾಡಿಕೊಳ್ಳ ತೊಡಗಿದೆ, ಕೆಲಸಕ್ಕೆ ಬಾರದ ಅವನ ಎಲ್ಲ ಮಾತುಗಳುನೆನಪಾಗುತ್ತಿದ್ದವು ಹೆಸರೊಂದು ನೆನಪಾಗಲೊಲ್ಲದು.

ತುಂಬಾ ಕಾಮನ್ ಎನಿಸುವ ಹೆಸರದು,ಸುರೇಶ ಮಹೇಶ ರಮೇಶ ಸತೀಶಗಳ ಹಾಗೆ ಆದರೆ ಈ ಚಾಟರ್ ಬಾಕ್ಸ್ ಯಾವ ಶ ಎಂದು ಹೊಳೆಯಲೇ ಇಲ್ಲ. ಹೆಸರು ಮನುಷ್ಯನಿಗೆ ತುಂಬಾ ಮುಖ್ಯವೆನ್ನುತ್ತಾರೆ (ಸಾಕು ನಾಯಿಬೆಕ್ಕುಗಳಿಗೂ?!), ಎಲ್ಲರಿಗು ನೆನಪಿನಲ್ಲಿರುವಂತಹ ಹೆಸರಿಡಬಾರದಿತ್ತೆ? ಇವನಿಗೆ‘ಮಾತೇಶ’ ಎಂದಿಟ್ಟಿದ್ದರೆ ಹೆಚ್ಚು ಸರಿಯಿತ್ತು ಅಂದುಕೊಳ್ಳುತ್ತಿದ್ದಂತೆ ಮುಖದಲ್ಲಿಮುಗುಳುನಗೆ ಮೂಡಿತು. ತನ್ನ ಮಾತನ್ನು ಇವಳು ಎಂಜಾಯ್ ಮಾಡುತ್ತಿದ್ದಾಳೆ ಅನ್ನಿಸಿತೇನೋ ಅವನಿಗೆ ಪಾಪ ಇನ್ನೂ ಹುರುಪಿನಿಂದ ಮಾತನಾಡ ತೊಡಗಿದ. ನನಗೆ ಅವನ ಹೆಸರು ನೆನಪಾಗದೇ, ಅವನಿಗೆ ಉತ್ತರಿಸಲೂ, ಅವನನ್ನು ಮಾತಡದಂತೆ ತಡೆಯಲೂ ಆಗದೆ ಆ ಜಾಗ ಬಿಟ್ಟು ಎದ್ದುಬಿದ್ದು ಓಡಿಬರುವ ಹಾಗಾಗುತ್ತಿತ್ತು.

ನನ್ನ ಗೆಳತಿ ಒಬ್ಬರಿದ್ದಾರೆ ಆಕೆಯ ಹೆಸರು ’ಹೂ’ ಎಂದು, ಮೊದಲನೇ ಬಾರಿ ಕೇಳಿದಾಗನಿಮ್ಮ ಹಾಗೇ ನನಗೂ ’ವಿಚಿತ್ರ’ ಎನಿಸಿತ್ತು, ಆಕೆಯ ಹಲವು ನಾರ್ಥ್ಇಂಡಿಯನ್ ಗೆಳೆಯರು ಆಕೆಯ ಹೆಸರನ್ನು ಹಿಂದಿಗೆ ಭಾಷಾಂತರಿಸಿ ‘ಫೂಲ್’ (fool) ಎಂದುಕರೆಯುತ್ತಾರೆ. ಇಂಗ್ಲಿಷ್ ನಲ್ಲಿ ಆಕೆಯನ್ನು ರೇಗಿಸುವುದು ಇನ್ನು ಸುಲಭ ’who ishoo?’ ಎಂತಲೋ ’who let the dogs out, who(o) whoo whoo’ ಎಂದು ಕಿಚಾಯಿಸತೊಡಗುತ್ತೇವೆ. ವಿದೇಶಿಯರು ಯಾರಾದರು ಕೇಳಿದರೆ, ಇವರು ಹೂ ವೇರ್ ವಾಟ್ ಅಂತೆಲ್ಲ ಹೆಸರಿಟ್ಟುಕೊಳ್ಳುತ್ತಾರ ಎಂದು ತಲೆ ಕೆರೆದುಕೊಳ್ಳಬೇಕು.

ಮತ್ತಷ್ಟು ಓದು »

26
ಜೂನ್

ಎಂಥ ಫೋಟೊ ತೆಗೆಯೋಕೆ ನನಗಿಷ್ಟ-ಪೋಟೊಗ್ರಫಿ ಲೇಖನ-3

-ಶಿವು.ಕೆ

ಎಂಥ ಫೋಟೊ ತೆಗೆಯೋಕೆ ನನಗಿಷ್ಟ?  ಇಂಥದೊಂದು ಪ್ರಶ್ನೆ ಮನದಲ್ಲಿ ಮೂಡಿದಾಗ ನಮ್ಮ ಕಣ್ಣೆದುರಿಗೆ ಫೋಟೊಗ್ರಫಿ ಲೋಕದ ಸಾಗರವೇ ಕಂಡಂತೆ ಭಾಶವಾಗುತ್ತದೆ.  ಏಕೆಂದರೆ ಇದರಲ್ಲಿ ನೂರಾರು ವಿಧಗಳಿವೆ. ಅವುಗಳನ್ನೆಲ್ಲಾ ವಿಸ್ತಾರವಾಗಿ ವಿವರಿಸಲು ಪ್ರಯತ್ನಿಸಿದರೆ ಅದೇ ನೂರಾರು ಪುಟಗಳಾಗಬಹುದು.  ಬದಲಿಗೆ  ಅವುಗಳಲ್ಲಿ ಕೆಲವನ್ನು ಮಾತ್ರ ಆರಿಸಿಕೊಂಡು ತಿಳಿದುಕೊಳ್ಳುವ ಪ್ರಯತ್ನ ಮಾಡೋಣ.

ವನ್ಯ ಜೀವಿ ಛಾಯಾಗ್ರಾಹಣ: ಇದು ಸುಲಭವಾಗಿ ಪ್ರತಿಯೊಬ್ಬ ಛಾಯಾಗ್ರಾಹಕನನ್ನು ತಕ್ಷಣಕ್ಕೆ ಸೆಳೆಯುವ ವಿಭಾಗ. ಪ್ರಾರಂಭದಲ್ಲಿ ಕಾಡಿನ ಫೋಟೊಗಳನ್ನು ತೆಗೆಯುವುದಕ್ಕೆ ವನ್ಯಜೀವಿ ಛಾಯಾಗ್ರಾಹಣವೆಂದುಕೊಂಡಿದ್ದೆ.  ಆದ್ರೆ ಇದರಲ್ಲಿ ಹತ್ತಾರು ವಿಭಾಗಗಳಿವೆ. ಕಾಡುಪ್ರಾಣಿಗಳ ನೈಜ ಚಿತ್ರಗಳನ್ನು ಕ್ಲಿಕ್ಕಿಸುವುದೊಂದೇ ಅಲ್ಲ, ಪಕ್ಷಿಗಳ ಛಾಯಾಗ್ರಾಹಣ, ಕೀಟಪ್ರಪಂಚ, ಲ್ಯಾಂಡ್‍ ಸ್ಕೇಪ್, ಕಾಡುಹೂಗಳು, ಕಾಡುಹಣಬೆಗಳು, ಗಿಡಮರಗಳು., ಹೀಗೆ ಸಾಗುತ್ತದೆ.
ಮತ್ತಷ್ಟು ಓದು »

26
ಜೂನ್

ಗೌಡಪ್ಪನ ದುಬೈ ಪ್ರವಾಸ : ಜನಾರ್ಧನ ಹೋಟೆಲ್ ಜಾಮೂನು – ಮಸಾಲೆ ದೋಸೆ!

ಮಂಜುನಾಥ್ ಹೊಳೆನರಸೀಪುರ

ರಾಜಭವನದ ಮು೦ದೆ ಕಿತ್ತೋಗಿದ್ ರೋಡ್ನಾಗೆ ಫುಲ್ ಟ್ರಾಫಿಕ್ನಾಗೆ ಕಾರ್ ಓಡುಸ್ಕೊ೦ಡು ತಮ್ಮ ಚಡ್ಡಿ ದೋಸ್ತ್ ಇನಾಯತ್ ಜೊತೆ ಬರ್ತಿದ್ದ ಮ೦ಜಣ್ಣನ ಮೊಬೈಲು ಒ೦ದೇ ಸಮನೆ ಹೊಡ್ಕೊಳ್ಳೋಕ್ಕೆ ಶುರುವಾತು!  ಎಷ್ಟು ಕಿತಾ ಕಟ್ ಮಾಡುದ್ರೂ ಒಡ್ಕೋತಿದ್ದುದುನ್ ನೋಡಿ ಥತ್ ಇಸ್ಕಿ ಅ೦ತ ಕೊನೇಗೆ ರಿಸೀವ್ ಮಾಡುದ್ರೆ ಆ ಕಡೆಯಿ೦ದ ಒ೦ದು ಗೊಗ್ಗರು ಧ್ವನಿ ” ನಮಸ್ಕಾರಾ ಸಾ, ನಾನು ಗೌಡಪ್ಪ ಸಾ,, ಒಸಿ ಅರ್ಜೆ೦ಟಾಗಿ ನಿಮ್ಮುನ್ ನೋಡ್ಬೇಕೂ ಸಾ” ಅ೦ದಾಗ ಮ೦ಜಣ್ಣ ಸರಿ ಗೌಡ್ರೆ, ಈವಾಗ ಎಲ್ಲಿದೀರ’ ಅ೦ದ್ರು, ’ಇಲ್ಲೇ ಸಿ.ಎ೦. ಮನೆ ಹತ್ರ ಇದೀವಿ ಸಾ, ಇ೦ಗೇ ಬನ್ನಿ ಸಾ…’ ಅ೦ದ ಗೌಡಪ್ಪ. ರೇಸ್ ಕೋರ್ಸ್ ರಸ್ತೇನಾಗೆ ಬ೦ದು ಎಡಿಕ್ ತಿರುಕ್ಕೊ೦ಡು ಸಿ.ಎ೦.ಮನೆ ಮು೦ದೆ ಬ೦ದ್ರೆ ಗೌಡಪ್ಪ, ಸೀನ, ಸುಬ್ಬ, ಕೋಮಲ್ಲು, ತ೦ತಿಪಕಡು ಸೀತು, ಕಿಸ್ನ, ಇಸ್ಮಾಯಿಲ್ಲು, ಚಾ ಅ೦ಗ್ಡಿ ನಿ೦ಗ ಎಲ್ಲ ಲೈನಾಗಿ ನಿ೦ತಿದ್ರು.  ಗೌಡಪ್ಪನ ಕೈನಾಗೆ ದೊಡ್ಡದೊ೦ದು ಬ್ಯಾಗು!

ಮ೦ಜಣ್ಣನ ಐಟೆನ್ ಕಾರು ಬತ್ತಿದ್ದ೦ಗೇನೇ ಗೌಡಪ್ಪ ದೂರದಿ೦ದ್ಲೇ ಕೈ ಮುಗುದು ನಮಸ್ಕಾರ ಸಾ ಅ೦ದ, ಕೋಮಲ್ಲು ಅ೦ಡ್ ಗ್ರೂಪು ೩೨ ಹಲ್ಲು ತೋರುಸ್ಕೊ೦ಡು ನಗ್ತಿದ್ರು, ’ಇದೇನ್ರೀ ಇದ್ದಕ್ಕಿದ್ದ೦ಗೆ ಬೆ೦ಗ್ಳೂರ್ನಾಗೆ ನೀವೆಲ್ಲ’ ಅ೦ತು ಮ೦ಜಣ್ಣ. ”ಇ೦ಗೇ ಸಿ.ಎ೦.ಮನೇಗೆ ಬ೦ದಿದ್ವಿ ಸಾ, ಅ೦ಗೇ ನಿಮ್ಮುನ್ನೂ ನೋಡುವಾ ಅ೦ತ, ಅರ್ಜೆ೦ಟ್ ವಿಸ್ಯ ಐತೆ ಬನ್ನಿ ಸಾ ಯಾವ್ದಾನ ಓಟೆಲ್ನಾಗೆ ಕುತ್ಗ೦ಡು ಮಾತಾಡುವಾ’ ಅ೦ದ ಗೌಡಪ್ಪ.  ಸರಿ ಅ೦ತ ಎಲ್ರುನೂ ಆ ಕಾರ್ನಾಗೆ ಮತ್ತೊ೦ದು ಆಟೋದಾಗೆ ತು೦ಬ್ಕೊ೦ಡು ಮ೦ಜಣ್ಣ ಜನಾರ್ಧನ ಹೋಟೆಲಿಗೆ ಬ೦ದ್ರು.  ತಲಾಗೆ ಎರಡೆರಡು ಮಸಾಲೆ ದೋಸೆ, ಜಾಮೂನು ಆರ್ಡರ್ ಮಾಡಿ ಕುತ್ಗೊ೦ಡ್ರು.  ಆ ಸಪ್ಲೈಯರ್ರು ಚಟ್ನಿ ಬಟ್ಟಲಿನಾಗಿ ಕೊಟ್ಟು ಸಾಕಾಗಿ ಒ೦ದು ಬಕೆಟ್ಟು ತ೦ಡು ಗೌಡಪ್ಪನ ಟೀ೦ ಮು೦ದೆ ಇಟ್ಟೋಗಿದ್ದ!  ನಿ೦ಗ ನೀರು ಇಟ್ಟಿದ್ದ ಜಗ್ಗಿನಾಗೆ ಟೀ ಹಾಕುಸ್ಕೊ೦ಡು ಸೊರ್ ಅ೦ತ ಎಮ್ಮೆ ಕಲಗಚ್ಚು ಕುಡಿಯೋ ಥರಾ ಕುಡೀತಿದ್ದ.  ಮತ್ತಷ್ಟು ಓದು »

25
ಜೂನ್

ಅಲ್ಲಿ ಆಲ್ಫಾ ಅಂತಿದೆ ನೋಡಿ, ಮೊದಲ ಪ್ರಯತ್ನಕ್ಕೆ ಸಹಕಾರ ನೀಡಿ

– ಕಾಲಂ 9

ಗೂಗಲ್ ಸಂಸ್ಥೆಯು ಇತ್ತೀಚಿಗೆ ತನ್ನ ಭಾಶಾಂತರ ಸೇವೆಯ ಕನ್ನಡ ಅವತರಣಿಕೆಯ ಆಲ್ಫಾ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇಂಗ್ಲಿಷ್ ಭಾಷೆಯಿಂದ ಕನ್ನಡಕ್ಕೆ ಯಾಂತ್ರೀಕೃತ ಭಾಶಾಂತರಕ್ಕೆ ಇದು ಮೊದಲ ಪ್ರಯತ್ನ. ಆದರೆ ಇದು ಕನ್ನಡದ ಕೊಲೆ ಎಂದು ಉದಯವಾಣಿಯು ‘ವಾಷಿಂಗ್ಟನ್‍ನಿಂದ’ ವರದಿ ಮಾಡಿದ್ದಾರೆ.

ಉದಯವಾಣಿಯ ವಾಷಿಂಗ್ಟನ್ ವರದಿಗಾರರಲ್ಲಿ ನನ್ನ ಮನವಿ: ನೀವು ಪುಕ್ಕಟೆ ಪ್ರಯತ್ನಕ್ಕೆ ಸಿಟ್ಟಾಗುವ ಮೊದಲು ಸಾಧ್ಯವಾದರೆ ಮೌಂಟೆನ್ ವ್ಯೂ ನಲ್ಲಿರುವ ಗೂಗಲ್ ಕಛೇರಿಗೆ ಒಮ್ಮೆ ಹೋಗಿ ಭಾಷಾಂತರ ಪ್ರಾಜೆಕ್ಟ್ ಬಗ್ಗೆ ಸ್ವಲ್ಪ ಕೇಳಿ. ಅಥವಾ translate.google.com ಪುಟದ ಕೊನೆಗಿರುವ About Google Transate ಕೊಂಡಿಯನ್ನೊಮ್ಮೆ ಬಳಸಿ ಅದರ ಬಗ್ಗೆ ಸ್ವಲ್ಪ ಓದಿ. ಮೊದಲನೆಯದಾಗಿ ಇದೂ ಇನ್ನೂ ಆಲ್ಫಾ ಆವೃತ್ತಿ. ಇನ್ನೂ ಬೀಟ ಆವೃತ್ತಿಯ ನಂತರ ಸೇವೆಯು ಸಾಧಾರಣ ಬಳಕೆಗೆ ಲಭ್ಯವಾಗುತ್ತದೆ. ಆಲ್ಫಾ ಆವೃತ್ತಿಯ ಬಗ್ಗೆ ಗೂಗಲಿಸಿದರೆ ನಿಮಗೆ ಹಾಗೆಂದರೇನೆಂಬುದು ತಿಳಿಯುತ್ತದೆ. ಮತ್ತಷ್ಟು ಓದು »