ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

25
ಜೂನ್

ಪ್ರೀತು, ಪ್ರೀತಿ ಮತ್ತು ಅವನು..

– ಅಬ್ದುಲ್ ಸತ್ತಾರ್

ಎಂತಹಾ ಹಾಯೆನಿಸುವ ವಾತಾವರಣವೆಂದರೆ ಆ ಸಂಜೆ ಎಲ್ಲಾ  ವಯಸ್ಕರೂ  ಅಲ್ಲಿ ಸೇರಿದ್ದರು. ಮುದಿಗೆಳೆಯಾ ಗೆಳತಿಯರು ಉಲ್ಲಾಸದಿಂದ ಎದುಸಿರು  ಬಿಡುತ್ತಾ ಆ ಕಲ್ಲು ಹಾಸಿನ ಮೇಲೆ ಓಡುತ್ತಿದ್ದರೆ ಕೆಲವರು ನಡೆಯುತ್ತಿದ್ದರು.
ವಿಶಾಲವಾದ ಆ ಪಾರ್ಕಿನ ಸುರಕ್ಷಿತ ಸ್ತಳದಲ್ಲಿ ಜೋಡಿಹಕ್ಕಿಗಳು ಮುನಿಸಿನಿಂದ,  ಸರಸದಿಂದ, ವಿರಸದಿಂದ ಒಟ್ಟಿಗೇ ಸೇರಿದ್ದವು.
ಆ ಕಲ್ಲು ಬೆಂಚಿನಲ್ಲಿ  ಅವನೂ ಅವಳೂ ದೂರ ದೂರ  ಕೂಳಿತಿದ್ದಾರೆ.  ಕೊನೆಗೂ  ಸುಮ್ಮನೆ ಕೂತು ಸುಖವಿಲ್ಲೆಂದು ಅವನು ಅವಳನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು
ನೋಡಿದ.  ಅವಳು ಹತ್ತಿರ ಬಂದು ಅವನಿಗೆ ತಾಗಿಕುಳಿತು ಕಯ್ಯನ್ನ ಅವನ  ಹೆಗಲಿಗೇರಿಸಿದ್ದಳು. ಅವನು ಸುತ್ತ-ಮುತ್ತಲೋಮ್ಮೆ ನೋಡಿ ಅವಳ ಕೈಯನ್ನ ಮೆಲ್ಲಗೆ ಹೆಗಲಿನಿಂದ ಜಾರಿಸಿ ಸರಿಯಾಗಿ ಕೂರಲು ಹೇಳಿದ. ಅವಳು ಮುನಿಸಿಕೊಂಡು ಮುಖ ಆ ಕಡೆ ಮಾಡಿದಳು.
“ಸಾರಿ ಪ್ರೀತು, ಇದು ಪಬ್ಲಿಕ್ಕು ಅಂತಾ..”
“ಹೋಗೊಲೋ, ನಿನಗೆ ನನ್ನ ನೋವು ಮಾಡೋದಲ್ದೆ ಮತ್ತೇನು ಗೊತ್ತು?, ನೀ ತುಂಬಾ ಕೆಟ್ಟವ್ನಪ್ಪ…”
ಅಲ್ಲಿ ಮೌನ.
“ಪ್ರೀತು, ಇದು ನಮ್ಮ ಕೊನೇ ಹದಿನೈದ್ನೆ ತಾರೀಖು. ಗೊತ್ತೇ ಇಲ್ಲದಂಗೆ ನಮ್ಮ ಮೂರು ವರ್ಷ ಕಳೆದು ಹೊಯ್ತಲ್ಲೇ..”
ಅವನ ಈ ಮಾತನ್ನ ಮನಸ್ಸಲ್ಲೇ ಗುನುಗುತ್ತಿದ್ದ ಅವಳ ಕಣ್ಣು ಸ್ವಲ್ಪವೇ ಹನಿಗೂಡಿತು.
“ನನ್ನ ಮರೀತಿಯೇನೋ? ಮುಂದೆ ಸಿಕ್ಕಾಗ ಈ ರೀತಿ ನೋವು ಮಾಡ್ದೆ ನನ್ನ ಒಪ್ಕೋತೀಯಲ್ವ?,ನಂಗೆ ತಡ್ಕೋಲ್ಳೊಕ್ಕಾಗಲ್ಲ”
25
ಜೂನ್

ಆಧುನಿಕ ಬೇತಾಳನೂ ವಿಕ್ರಮಾದಿತ್ಯನೂ ಮತ್ತು ಕಾಲೇಜು ಹುಡುಗರು…

ಸಾತ್ವಿಕ್ ಎನ್ ವಿ

ಯಥಾ ಪ್ರಕಾರ ಹಠಬಿಡದೇ ಸೆಪ್ಟೆಂಬರ್ ಮಾರ್ಚ್ ಸೆಪ್ಟೆಂಬರ್ ಎಕ್ಸಮ್ ಬರೆಯೋ ರಿಪಿಟರ್ ವಿದ್ಯಾರ್ಥಿ ಥರಾ ವಿಕ್ರಮ ರಾಜನು ಮರದಲ್ಲಿದ್ದ ಬೇತಾಳವನ್ನು ಪ್ರೈಮರಿ ಶಾಲೆಯ ಮಕ್ಕಳ ಮಣ ಭಾರದ ಪುಸ್ತಕದ ಚೀಲದಂತೆ ಹೆಗಲಿಗೇರಿಸಿ ನಡೆಯುತ್ತಿದ್ದನು. ವಶೀಲಿ ಗೊತ್ತಿಲ್ಲದ ಸರ್ಕಾರಿ ನೌಕರನಂತೆ ದುಡಿಯುವುದನ್ನು ನೋಡಿ ಬೇತಾಳನಿಗೆ ಅಯ್ಯೋ ಪಾಪ ಎನಿಸಿ ‘ ವಿಕ್ರಮ ಮಹಾರಾಜ ನಿನ್ನ ಕರ್ತವ್ಯ ಪ್ರಜ್ಞೆ ಮೆಚ್ಚಿದ್ದೇನೆ. ದಾರಿಸಾಗಲು ಕಥೆಯೊಂದನ್ನು ಹೇಳುತ್ತೇನೆ. ಮೊಬೈಲ್ ಅಲ್ಲಿ ಮಾತಾಡುತ್ತಾ ಸಾಗೋ ಪ್ರೇಮಿಯ ಹಾಗೆ ನಿನಗೆ ದಾರಿ ಸಾಗಿದ್ದೇ ಗೊತ್ತಾಗುವುದಿಲ್ಲ’ ಎಂದಿತು. ವ್ರತ ನಿಷ್ಠನಾದ ವಿಕ್ರಮ ಮಾತಾಡದೇ ಇದ್ದರೂ ಹುಡುಗಿಯರ ಮೌನವನ್ನೇ ಒಪ್ಪಿಗೆ ಎಂದು ಭಾವಿಸುವ ಪ್ರಿಯಕರನಂತೆ ತನ್ನ ಪಾಡಿಗೆ ತಾನು ಕಥೆ ಹೇಳಲು ಪ್ರಾರಂಭಿಸಿತು.

ಪುಣ್ಯ ಭರತ ಭೂಮಿಯಲ್ಲಿ ಕನ್ನಡನಾಡು ಎಂಬ ರಾಜ್ಯ. ಅಂತಿಪ್ಪ ರಾಜ್ಯದಲ್ಲಿ ತಂಗಳೂರು ವಿಶ್ವವಿದ್ಯಾನಿಲಯವೆಂಬ ವಿದ್ಯಾದೇಗುಲವಿತ್ತು. ಅಲ್ಲಿ ಉತ್ತಮ ದರ್ಜೆಯ ವಿದ್ಯಾಭ್ಯಾಸ ಸಿಗುತ್ತಿದ್ದ ಕಾರ್‍ಅಣ ಇಡೀ ದೇಶದಲ್ಲಿಯೇ ಪ್ರಸಿದ್ಧವಾಗಿತ್ತು. ಅಂಥ ವಿ ವಿ ಗೆ ಸುಭಗನೆಂಬ ವಿದ್ಯಾರ್ಥಿ ಕಲಿಯಲು ಸೇರಿದನು. ಕ್ರೀಡೆ, ಸಾಹಿತ್ಯ, ವಿಷಯಗಳಲ್ಲಿ ಒಳ್ಳೆಯ ಆಸಕ್ತಿ ಇತ್ತು. ಉತ್ತಮ ವಿದ್ಯಾರ್ಥಿಯಾದ ಈತನು ಬೇರೆ ವಿದ್ಯಾರ್ಥಿಗಳಿಗೆ ಅಸೂಯೆ ಮೂಡಿಸುವಷ್ಟು ಮಟ್ಟಿಗೆ ಬೆಳೆದನು. ವಿಭಾಗದಲ್ಲಿಯೂ ತೀವ್ರ ಚಟುವಟಿಕೆಯಿಂದ ಕೂಡಿದ್ದ ಇತನಿಗೆ ತನ್ನ ಸಮಾಜದ ಕೊಳಕುತನಗಳನ್ನು ಕಿತ್ತುಹಾಕಬೇಕೆಂಬ ತುಡಿತ. ಎಳೆ ವಯಸ್ಸು ಹುರಿಗಟ್ಟಿದ ದೇಹ, ಕನಸು ಬಿತ್ತುವ ಉಪನ್ಯಾಸಕರು ಇನ್ನೇನೂ ಬೇಕು ಸ್ವರ್ಗಕ್ಕೆ ಕಿಚ್ಚು ಹಚ್ಚಲು. ಮತ್ತಷ್ಟು ಓದು »

24
ಜೂನ್

ಜೀವನ ಬಂಡೆ ಕಲ್ಲಾ?

ಸುಬ್ರಹ್ಮಣ್ಯ ಬಿ ಎಸ್

ಇಂತಹದ್ದೊಂದು ಪ್ರಶ್ನೆ ಇಷ್ಟೊಂದು ಚಿಕ್ಕ ವಯಸ್ಸಿಗೆ ( ಹೌದ !!) ಉದ್ಭವಿಸಿದ್ದು ನನ್ನ ಮೊಬೈಲ್ ಗೆ ಸಂದೇಶವೊಂದು ಬಂದಾಗ…

ತಟ್ಟನೆ ಚುಟುಕಾಗಿ ಉತ್ತರಿಸಬೇಕಾದ ಪ್ರಶ್ನಾ ಸರಣಿ ಹೊತ್ತ ಸಂದೇಶ ನನ್ನ ಮೊಬೈಲ್ ಫೋನ್ಗೆ ಬಂತು. ನಿಯಮ ಇಷ್ಟೇ , ಪ್ರಶ್ನೆ ( ಸರಿಯಾಗಿ ಹೇಳಬೇಕೆಂದರೆ ಪದ ) ಓದಿದಾಗ ಮೊದಲಬಾರಿಗೆ ಅದೇನು ಹೊಳೆಯುತ್ತದೋ ಹೇಳಿ ಬಿಡಬೇಕಿತ್ತು.

ಮೊದಲನೆಯದು “ಪ್ರೀತಿ “- ಮನಸ್ಸಿನಲ್ಲಿ ಪಟ ಪಟ ಸದ್ದು ಮಾಡ್ತಾ ಜೋಡಿ ಹಕ್ಕಿಗಳು ಕಣ್ಮುಂದೆ ಬಂದ್ಬಿಡೋದೇ…? ಹೌದು ಇನ್ನೇನು , ಅಪ್ಪ ಅಮ್ಮಂದಿರ , ಸಂಸಾರ ,ಬಂಧುಬಳಗದ ವಿರೋಧ ಇಲ್ದಿದ್ರೆ ಪ್ರೀತಿ ಜೋಡಿ ಹಕ್ಕಿನೇ ತಾನೇ? ಸ್ವಚ್ಚಂದ ಆಗಸದಲ್ಲಿ ಪಟ ಪಟ ರೆಕ್ಕೆ ಬಿಚ್ಚಿ ಹಾರಿ ಇಬ್ಬರೇ ಕಾಲ ಕಳೀಬಹುದಲ್ವಾ?

ಎರಡನೆಯದು “ಜೀವನ” -ಅದ್ಯಾಕೋ ದೊಡ್ಡ ಬಂಡೆ ಕಲ್ಲುಗಳು ಕಣ್ಮುಂದೆ ಬರಬೇಕೆ? ಯಾಕೆ ಬಂತು? ನಾನೇನು ಬಂಡೆಕಲ್ಲುಗಳ ಕೆಲಸ ಮಾಡೋನಲ್ಲ.. ಚಿಕ್ಕ ಕಲ್ಲೆತ್ತಿ ಹೊಡೆದಿದ್ದೂ ಕಮ್ಮಿನೇ , ಮತ್ಯಾಕೆ? ಬಸ್ಸಿನೊಳಗೆ ಕುಳಿತ ನನಗೆ ಆ ರಾತ್ರಿಯ ಕತ್ತಲಲ್ಲಿ ಸುತ್ತ ಮುತ್ತ ಬಂಡೆಗಳೇನು ಕಾಣಿಸೋ ಹಾಗಿರಲಿಲ್ಲ..ಹಾಗಂತ ಜೀವನದಲ್ಲಿ ತುಂಬಾ ಕಷ್ಟ ಅನುಭವಿಸಿ ,ಜೀವಿಸಲು ಶ್ರಮಪಟ್ಟು ಜೀವನವೆಂದರೆ ಕಠಿಣ ಅನ್ನೋವಷ್ಟು ವಯಸ್ಸಾಗಲಿ ,ಸಾಧನೆಯಾಗಲಿ ಮಾಡಿಲ್ಲ. ಜುಜುಬಿ ಇಪ್ಪತ್ನಾಲ್ಕಕ್ಕೆ ಜೀವನ ಅಂದಾಗ ಬಂಡೆ ಕಲ್ಲು ಕಣ್ಣೆದುರಿಗೆ ಬಂದ್ರೆ ಸ್ವಲ್ಪ ಯೋಚನೆ ಮಾಡದಿದ್ದರೆ ಹೇಗೆ ? ಮತ್ತಷ್ಟು ಓದು »

24
ಜೂನ್

ಸರದಾರ್ ಅಂಕಲ್ …!

– ಹರೀಶ್ ಶೆಟ್ಟಿ , ಶಿರ್ವ

ಸರದಾರ್ ಅಂಕಲ್ ರವರ ಮನೆ ನಮ್ಮ ಬಿಲ್ಡಿಂಗ್‌ನ ಬದಿಯಲ್ಲಿ ಇತ್ತು, ಅವರ ಮನೆ ಹಾಗು ನಮ್ಮ ಬಿಲ್ಡಿಂಗ್ ಒಟ್ಟು ಸೇರಿ ಇತ್ತು. ಅವರು ಹಾಗು ಅವರ ಕುಟುಂಬಸ್ತಿಯರು ನಮ್ಮ ಬಿಲ್ಡಿಂಗ್ ನ ಗ್ರೌಂಡ್ ಫ್ಲೋರ್‌ನಲ್ಲಿ ಇದ್ದ ಕಾಮಾನ್ ಬಾತ್ ರೂಮ್/ಟೊಯಿಲ್ಟ್  ಉಪಯೋಗಿಸುತ್ತಿದ್ದರು. ಸರದಾರ್ ಅಂಕಲ್ ಐವತ್ತು ವರುಷ ದಾಟಿದ ಹರೆಯದ ಗಟ್ಟಿ ಮುಟ್ಟಾದ ಹಾಗು ತುಂಬಾ ಶಾರ್ಟ್ ಟೆಂಪೆರ್(ಕೋಪಿಷ್ಠ ) ಮನುಷ್ಯ. ಕೋಪ ಅವರ ಮೂಗಿನಲ್ಲಿ ೨೪ ಗಂಟೆ ಇರುತಿತ್ತು. ಅವರ ಕೋಪದ ಸ್ವಭಾವದಿಂದಾಗಿ ನಮ್ಮ ಬಿಲ್ಡಿಂಗ್‌ನವರು ಅವರತ್ರ ಮಾತಾಡಲಿಕ್ಕೆ ಸಹ ಹೆದರುತ್ತಿದ್ದರು. ಸರದಾರ್ ಅಂಕಲ್ ಹಾಗು ನಮ್ಮ ಬಿಲ್ಡಿಂಗ್‌ನಲ್ಲಿರುವ ಜನರ ಮಧ್ಯೆ ಯಾವಾಗಲು ನೀರಿಗಾಗಿ ಹಾಗು ಬಾತ್ ರೂಮ್ / ಟೊಯಿಲ್ಟ್‌ಗಾಗಿ ಜಗಳ ಆಗುತಿತ್ತು. ಆ ದಿನಗಳಲ್ಲಿ ನಮ್ಮ ಬಿಲ್ಡಿಂಗ್‌ನಲ್ಲಿ ನೀರಿನ ತುಂಬಾ ಕೊರತೆ ಇತ್ತ. ಮುನಿಸಿಪಾಲಿಟಿಯವರು ನೀರು ಬಿಟ್ಟು ಬಿಟ್ಟು  ಬಿಡುತ್ತಿದ್ದರು. ಆ ನೀರು ಒಂದನೇ ,ಎರಡನೆ ಹಾಗು ಮೂರನೇ ಮಹಡಿಯವರಿಗೆ ಬರುತ್ತಿರಲಿಲ್ಲ. ನೀರು ಖಾಲಿ ಗ್ರೌಂಡ್ ಫ್ಲೋರಿನ ಬಾತ್ ರೂಮ್‌ನಲ್ಲಿ ಬರುತ್ತಿತ್ತು. ಒಂದನೇ, ಎರಡನೆ ಹಾಗು ಮೂರನೇ ಮಹಡಿಯವರು ತನ್ನ ತನ್ನ ಬಕೆಟ್ಗಳು ಹಿಡಿದು ಕೆಳಗೆ ಗ್ರೌಂಡ್ ಫ್ಲೋರಿನ ಬಾತ್ ರೂಮ್‌ಗೆ ನೀರಿಗಾಗಿ ಬರುತ್ತಿದ್ದರು. ಇಲ್ಲಿ  ಸಮಸ್ಯೆ ಏನೆಂದರೆ ಆ ದಿನದಲ್ಲಿ ನೀರು ಎಂಟು ಗಂಟೆಯಿಂದ ಹತ್ತು ಗಂಟೆಯವರಗೆ ಬರುತ್ತಿತ್ತು. ಆದರೆ ಸರದಾರ್ ಅಂಕಲ್ ಎಂಟು ಮುಕ್ಕಾಲು (8 .45 ) ತನಕ ಯಾರನ್ನು ಬಾತ್‌ರೂಮ್‌ನ ಒಳಗೆ ಬರಲು ಬಿಡುತಿರಲಿಲ್ಲ. ಸರದಾರ್ ಅಂಕಲ್‌ನವರು ತನ್ನ ಮೆಚ್ಚಿನ ಸೋಪ್ “ಲೈಫ್ ಬೌಯ್”ನಿಂದ ಸ್ನಾನ ಮಾಡಿ, ತನ್ನ ಬಟ್ಟೆ ತೊಳೆದು ಹಾಗು ತನ್ನ ಮನೆಗೆ ಪೈಪ್‌ನಿಂದ ನೀರು ತುಂಬಿಸಿದ ನಂತರವೇ ಬೇರೆಯವರಿಗೆ ನೀರಿನ ಗತಿ. ಇದರಿಂದ ಒಂದನೇ , ಎರಡನೆ ಹಾಗು ಮೂರನೇ ಮಹಡಿಯವರಿಗೆ ತುಂಬಾ ಕಷ್ಟವಾಗುತಿತ್ತು. ಸರದಾರ್ ಅಂಕಲ್ ಯಾರನ್ನೂ, ಅವರ ಬಾತ್‌ರೂಮ್‌ನಲ್ಲಿದಾಗ ಒಳಗೆ ಬಿಡುತಿರಲಿಲ್ಲ. ಇದರಿಂದ ದಿನಾಲೂ ಏನಾದರೂ ಜಗಳ ಆಗುತಿತ್ತು.
ಮತ್ತಷ್ಟು ಓದು »
23
ಜೂನ್

ರಾಜಕಾರಣದಲ್ಲಿ ಆಣೆ ಮತ್ತು ಆಣೆಯ ರಾಜಕಾರಣ

ಸಂತೋಷ್ ಕುಮಾರ್ ಪಿ.ಕೆ

ಇತ್ತೀಚಿನ ರಾಜಕಾರಣದ ಬೆಳವಣಿಗೆಯಲ್ಲಿ ಹೆಚ್.ಡಿ.ಕುಮಾರ ಸ್ವಾಮಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಇವರ ನಡುವೆ ಸಂಧಾನವೇರ್ಪಟ್ಟಿಲ್ಲ ಎಂಬುದನ್ನು ಸಾಬೀತುಪಡಿಸಲು ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಆಣೆ ಮಾಡಲು ಸನ್ನದ್ದರಾಗಿರುವುದು ಬಹುಟೀಕೆಗೆ ಒಳಗಾಗಿದೆ. ಇದು ಮೇಲ್ನೋಟಕ್ಕೆ ಕೇವಲ ಆಣೆ ಪ್ರಮಾಣದ ಸಮಸ್ಯೆಯಂತೆ ಕಂಡರೂ ಸಹ ಆ ಸಮಸ್ಯೆಯ ಆಳ ಅಗಲ ನಾವು ಊಹಿಸಲು ಸಾಧ್ಯವಿರದ ಮಟ್ಟಿಗೆ ಇದೆ. ಬಹುತೇಕ ಚಿಂತಕರು, ಲೇಖಕರು ಹಾಗೂ ವಿದ್ವಾಂಸರನ್ನೊಳಗೊಂಡು ಆ ಆಣೆ ಮಾಡುವ ಪ್ರವೃತ್ತಿಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ, ಇಲ್ಲಿ ಕೇವಲ ಆಣೆ ಪ್ರಮಾಣದ ವಿಚಾರವನ್ನುವಿವಮರ್ಶಿಸಿದರೆ ಒಂದೊ, ರಾಜಕಾರಣಿಗಳ ಮೇಲೆ ಕೋಪ ಮಾಡಿಕೊಳ್ಳಬೇಕಾಗುತ್ತದೆ, ಇಲ್ಲವೆ ಅಂತಹ ಪ್ರೃತ್ತಿಯೇ ಕೆಟ್ಟದೆಒಳ್ಳೆಯದೋ ಎಂಬ ನಿರಪಯುಕ್ತ ಚರ್ಚೆಯನ್ನು ಮಾಡಬೇಕಾಗುತ್ತದೆ. ಆದ್ದರಿಂದ ಆಣೆ ಮಾಡುವ ಪ್ರವೃತ್ತಿಯನ್ನು ಪ್ರಶ್ನೆಮಾಡುವ ನೆಪದಲ್ಲಿ ನಮ್ಮ ರಾಜ್ಯಾಂಗದ ಅಥವಾ ಸೆಕ್ಯುಲರಿಸಂ ಸಮಸ್ಯೆಯನ್ನು ಇಲ್ಲಿ ಚರ್ಚಿಸಲು ಪ್ರಯತ್ನಿಸುತ್ತೇನೆ. ಹಾಗಾಗಿ ಆಣೆ ಮಾಡುವುದರಲ್ಲಿ ತಪ್ಪೇನಿದೆ ಎಂಬುದನ್ನು ನೋಡುವಾ ಅಥವಾ ಆಣೆ ಮಾಡುವುದು ನಮಗೇಕೆ ತಪ್ಪಾಗಿ ಗೋಚರಿಸುತ್ತಿದೆ ಎಂಬುದನ್ನು ಅವಲೋಕಿಸುವ. ಮತ್ತಷ್ಟು ಓದು »

23
ಜೂನ್

ಅಮೇರಿಕದಲ್ಲೀಗ ನಾಯಿ ಬೆಕ್ಕುಗಳಿಗೂ ಸಕ್ಕರೆ ಖಾಯಿಲೆ

ಗೋವಿಂದ ಭಟ್ 

ಮನುಷ್ಯನನ್ನು ದೇವರು ಸದಾ ಚಟುವಟಿಕೆಯಲ್ಲಿರುವಂತೆ ರೂಪಿಸಿದ್ದಾನೆ. ಜೀವನದ ಎರಡು ತುದಿಗಳಲ್ಲಿ ಅಂದರೆ ಹುಟ್ಟು ಸಾವಿನ ಆಸುಪಾಸು ಹೊರತು ಪಡಿಸಿದರೆ ಉಳಿದ ಸಮಯದಲ್ಲಿ ಸದಾ ತನ್ನ ಕಾಲಿನ ಮೇಲೆ ನಿಲ್ಲುವಂತೆ ಚಲಿಸುವಂತೆ ನಮ್ಮನ್ನು ವಿನ್ಯಾಸಗೊಳಿಸಲಾಗಿದೆ. ಆದರೆ ನಮಗೆ ಹೊರಿಸಿಕೊಳ್ಳುವುದೆಂದರೆ ಇಷ್ಟ. ನಡೆಯುವುದು ಕಷ್ಟ. ನಾಲ್ಕು ಹೆಜ್ಜೆ ಹೋಗಲೂ ವಾಹನವನ್ನೇ ಅವಲಂಬಿಸಲು ಇಷ್ಟ ಪಡುತ್ತೇವೆ. ಕಾಸಿಲ್ಲದವ ಮಾತ್ರ ನಡೆಯುವುದು ಎಂದು ನಮ್ಮವರ ಖಚಿತ ನಿಲುವು. ನಮಗೆ ಎಲ್ಲಕ್ಕೂ ಮಾದರಿಯಾದ ಅಮೇರಿಕದವರು ಶೌಚಾಲಯಕ್ಕೂ ಕಾರಲ್ಲಿ ಹೋಗುವರೋ ಅನ್ನುವ ಗುಮಾನಿ.

ಅಮೇರಿಕದಲ್ಲಿ ಚಲನಾತೀತ ಮನುಷ್ಯರಿಗೆ ಮಾತ್ರವಲ್ಲ ಅವರ ನಾಯಿ ಬೆಕ್ಕುಗಳಿಗೂ ಈಗ ಸಕ್ಕರೆ ಖಾಯಿಲೆ ಹಬ್ಬಲು ಪ್ರಾರಂಭಿಸಿದೆ. ಈ ಸಕ್ಕರೆ ಖಾಯಿಲೆ ಬಗೆಗೆ ಯೋಚಿಸಿದಾಗ ನನಗೆ ನೆನಪಿಗೆ ಬರುವುದು ತೇಜಸ್ವಿ ಕಥೆಯೊಂದರ ಪಾತ್ರಧಾರಿ. ಅವರು ತನಗೆ ಪರಂಗಿಯವರ ಸೀಕು ಉಂಟೆಂದು ಡಾಕ್ಟ್ರು ಹೇಳಿದರೆಂದು ಹೆಂಡತಿಯೊಂದಿಗೆ ಬಹಳ ಹೆಮ್ಮೆ ಪಟ್ಟುಕೊಳ್ಳುತ್ತಾರೆ. ಸಕ್ಕರೆ ಖಾಯಿಲೆ ಸಾಕುನಾಯಿಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶೇಕಡಾ ಮೂವತ್ತಮೂರರಷ್ಟು  ಏರಿದರೆ ಬೆಕ್ಕುಗಳಲ್ಲಿ ಶೇಕಡಾ ಹದಿನಾರು. ಹೋಲಿಕೆಯಲ್ಲಿ ಆ ದೇಶದಲ್ಲಿ ಮನುಷ್ಯರಲ್ಲಿ ಬರೇ ಶೇಕಡಾ ಹತ್ತು ಹೆಚ್ಚುವರಿಯಾಗಿ ಈ ಸೀಕು ಗುರುತಿಸಲ್ಪಟ್ಟಿದೆ. ಮತ್ತಷ್ಟು ಓದು »

22
ಜೂನ್

ಮಂಜುನಾಥನ ದಯೆ ಇರಲಿ!!!

 ಅರೆಹೊಳೆ ಸದಾಶಿವ ರಾವ್

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ,

ನಿನಗೊಂದು  ಪತ್ರ ಬರೆಯಬೇಕಾದ ಅನಿವಾರ್ಯತೆ ಬಂದೀತು ಎಂದು ನಾವು ಅಂದುಕೊಂಡಿರಲಿಲ್ಲ. ಒಂದು ನಂಬುಗೆ ಇದೆ. ಅದೆಂದರೆ, ನಿನ್ನ ಬಳಿ  ಯಾವುದೇ ಭಕ್ತ ಬಂದು, ತನ್ಮಯತೆಂದ ಏನಾದರೂ ಕೇಳಿಕೊಂಡರೆ, ಕಷ್ಟ ಪರಿಹಾರವಾಗಿ, ಕೋರಿಕೆ ನೆರವೇರುತ್ತದೆ ಎಂದು. ಆದರೆ ತಪ್ಪು ಮಾಡಿದವರನ್ನು ನೀನೇ ನೋಡಿಕೊಳ್ಳುತ್ತಿ ಎಂದು ಒಮ್ಮೆ ಬಾಮಾತಿನಲ್ಲಿ ಹೇಳಿದರೂ, ಮತ್ತೆ ಅದನ್ನು ಹಿಂಪಡೆಯಲು ನಿನ್ನ ಬಳಿಯೇ ಬರಬೇಕಾಗುತ್ತದೆ. ವಿಷಯವನ್ನು ನಿನ್ನ ಮಡಿಲಿಗೆ ಹಾಕಿ ಬಿಟ್ಟರೆ, ಫಲಾಫಲ ನಿನ್ನ ಇಚ್ಛೆಯಂತೆ ನಡೆಯುತ್ತದೆ ಮತ್ತು ಇದು ಇಡೀ ಕುಟುಂಬಕ್ಕೇ ಅನ್ವುಸುತ್ತದೆ.

ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಇಡೀ ರಾಜ್ಯ ಅಥವಾ ದೇಶದ ಕುಟುಂಬವೇ ಒಂದಾಗಿ ಒಬ್ಬ ಯಜಮಾನನನ್ನಾಗಿ ಆಯ್ಕೆ ಮಾಡಿ ಕಳುಹಿಸುತ್ತೇವೆ. ನಮ್ಮ ದುರಾದ್ರಷ್ಟವೆಂದರೆ ಅದಾದ ಮೇಲೆ ನಮಗೆ ಅಂತಹ ಯಜಮಾನನ ಮೇಲೆ ಯಾವುದೇ ನಿಯಂತ್ರಣ ಇರುವುದಿಲ್ಲ. ಆಗೆಲ್ಲಾ ನಾವು ನಮ್ಮನ್ನು ದೇವರೇ ಕಾಪಾಡಬೇಕು ಎಂದುಕೊಂಡು ನಿನ್ನ ತಲೆಯ ಮೇಲೆ ಭಾರ ಹಾಕಿ ಸುಮ್ಮನುಳಿಯುತ್ತೇವೆ.

ಗೌಡರ ವಂಶ ಇರಬಹುದು, ಯಡ್ಯೂರಪ್ಪನವರ ವಂಶವಿರಬಹುದು, ಎಲ್ಲರ ಮೇಲೂ ನಾವು ವಿಶ್ವಾಸ ಇಟ್ಟು, ದೇಶದ ಪರಮಾಧಿಕಾರಗಳ ವಿವಿಧ ಹಂತಗಳನ್ನು ನೀಡಿದವರು. ಆದರೆ ಅವರೆಲ್ಲಾ ಅಧಿಕಾರ ಸಿಕ್ಕ ನಂತರ, ಈ ಎಲ್ಲದೂ ತಮಗೆ ಕಟ್ಟಿಟ್ಟದ್ದು ಎಂಬಂತೆ ವರ್ತಿಸಿದ್ದು ಮಾತ್ರ ನಿಜ. ಎಲ್ಲರೂ ಅವರವರ ಮಟ್ಟಿಗೆ ರಾಜ್ಯದ ಬೊಕ್ಕಸದಿಂದ ಸಾಧ್ಯವಾದಷ್ಟೂ ಎತ್ತಿದವರೇ ಎಂದು ಇಬ್ಬರೂ ಆರೋಪಿಸಿಕೊಳ್ಳುತ್ತಿದ್ದಾರೆ. ಸತ್ಯ ಏನು ಎನ್ನುವುದು ರಾಜ್ಯದ ಎಲ್ಲರಿಗೂ ಗೊತ್ತಿದೆ. ಯಡ್ಯೂರಪ್ಪ ಮತ್ತು ಕುಮಾರ ಸ್ವಾಮಿ-ಇಬ್ಬರೂ ಎಲ್ಲೆಲ್ಲಾ ಸಾಧ್ಯವೋ ಅಲ್ಲೆಲ್ಲಾ ಮೆಂದವರೇ ಎಂಬುದೇ ಈ ಸತ್ಯ!(ನಿನಗೆ ಗೊತ್ತಿಲ್ಲದ್ದೇನಲ್ಲ ಬಿಡು) ಮತ್ತಷ್ಟು ಓದು »

22
ಜೂನ್

ಮಾಸದ ನೆನಪುಗಳು

ಪವನ್ ಪರುಪತ್ತೇದಾರ್ 

ಜೀವನದಲ್ಲಿ ಕೆಲೊವಂದು ಸರಿ ಬಹಳ ವಸ್ತುಗಳನ್ನು ಕಳೆದುಕೊಳ್ತಿವಿ, ಬೆಂಗಳೂರಿನ ಲೋಕಲ್ ಬಸ್ ನಲ್ಲಿ ಓಡಾಡೋವಾಗ ಪ್ರತಿ ದಿನ ಒಬ್ಬರಲ್ಲ ಒಬ್ಬರು ಮೊಬೈಲ್ ಫೋನ್ ಕಳೆದುಕೊಳ್ತಾನೆ ಇರ್ತಾರೆ. ನನ್ ಸ್ನೇಹಿತ ಒಬ್ಬ ಹೇಗೆ ಮೊಬೈಲ್ ಕಳಕೊಂಡು ಕಳ್ಳನ್ನ ಹಿಡಿಯೋಕೆ ಹೋಗಿ, ಅವರ ಹತ್ರ ಒದೆ ತಿಂದು ಬಂದಿರೋದು ಆಗಿದೆ. ಆ ಮೊಬೈಲ್ ನ ನೆನಪು ಅವನನ್ನ 15 ದಿನ ಕಾಡಿರ್ಬೋದು, ಆ ಒದೆ ತಿಂದ ನೋವು 2 ತಿಂಗಳು ಕಾಡಿರಬಹುದು ಆದ್ರೆ ಅ ಮೊಬೈಲ್ ಜಾಗದಲ್ಲಿ ತನಗಿಷ್ಟ ಅದವರನ್ನ ಕಳೆದು ಕೊಂಡರೆ ಎಷ್ಟು ಕಾಡುತ್ತೆ ಅಲ್ವಾ?? ನನ್ನ ಈ ಬರಹದಲ್ಲಿ ನನ್ನ ಆ ರೀತಿ  ಕಾಡುತ್ತಿರುವ ಮಾಸದ  ಒಂದು ನೆನಪಿನ ಬಗ್ಗೆ ಬರೀತಿದಿನಿ

        ನಾನು ಪಿ ಯು ಸಿ ಓದ್ತಾ ಇದ್ದೆ ಆಗ, ನಮ್ಮೂರಿಂದ  ಬೆಂಗಳೂರಿನ ಕಾಲೇಜ್ ಗೆ 1 ಘಂಟೆ ಪ್ರಯಾಣ,  ನಮ್ಮೂರಿಂದ ತುಂಬಾ ವಿದ್ಯಾರ್ಥಿಗಳು  ಬರ್ತಾ ಇದ್ರು ಎಲ್ರು ಜೊತೆಯಾಗಿ ಬಸ್ ಅಲ್ಲಿ ಮಜಾ ಮಾಡ್ಕೊತ ಒಬ್ಬರನ್ನೊಬ್ಬರು ರೇಗಿಸ್ತ ತುಂಬಾ ಖುಶಿಯಾಗಿ ಟ್ರಾವೆಲ್ ಮಾಡ್ತಾ ಇದ್ವಿ , ನಮ್ batch ನಲ್ಲೆ ಆನಂದ್ ಎಂಬ ಹುಡುಗ ನಮ್ಮುರೋನೆ ಎಲ್ಲರು ಪ್ರೀತಿಯಿಂದ ದೀದಿ ಅಂತ ಕರಿತ ಇದ್ವಿ . ಅವನು ಒಂತರ ವಿಚಿತ್ರ ಹುಡುಗ 100 ರು ಖರ್ಚು ಮಾಡಿದ್ರೆ 1000 ಅಂತಿದ್ದ 25 ಕೆ 15 ಮಾರ್ಕ್ಸ್ ಬಂದಿದ್ರೆ 23 ಅಥವಾ 24 ಅಂತಿದ್ದ.  ತುಂಬಾ ಹೇಳ್ಕೊಳೋ ಸ್ವಭಾವದ ಹುಡುಗ ಆದ್ರೆ ಅವ್ನು ಯಾವತ್ತು ಒಬ್ರನ್ನ ನೋಯಿಸ್ಬೇಕು ಅನ್ಕೊಂಡಿರಲ್ಲ ನೋಯಿಸ್ತನು ಇರ್ಲಿಲ್ಲ ಇನ್ನೂ ನಾವೇ ಎಲ್ಲ ಸೇರ್ಕೊಂಡು ಅವನ್ನ ಅವನ ಕೊಚ್ಚಿಕೊಳೊ ಸ್ವಾಭಾವಗಳನ್ನ ತೊಗೊಂಡು ರೆಗಿಸ್ತ ಇದ್ವಿ ಇವನನ್ನ ಪ್ರೀತಿಯಿಂದ ದೀದಿ ಅಂತ ಕರಿತ ಇದ್ವಿ .. ಮತ್ತಷ್ಟು ಓದು »
22
ಜೂನ್

ನಮ್ಮ ಹಾಗೂ ನಮ್ಮಪ್ಪನ ನಡುವಿನ ಭಿನ್ನಾಭಿಪ್ರಾಯಗಳು…

ಸತ್ಯಚರಣ್ ಎಸ್.ಎಂ

ಸ್ನೇಹಿತರೇ. ಮೊನ್ನೆ ಮೊನ್ನೆ ಆಂಗ್ಲರಿಂದ ಆಮದು ಮಾಡಿಕೊಂಡ “Father’s Day” ನಡೆಯಿತಲ್ವೇ.. ಆ ಸಂದರ್ಭಕ್ಕೆ ನನಗೆ ನನ್ನ ಈ ಕೆಳಗಿನ ಬರಹ ಹಿಂದೆ ಬರೆದದ್ದು ನೆನಪಾಗಿ, ಮತ್ತೆ ನಿಮ್ಮ ಮುಂದೆ ಇಡೋಣ ಅಂತನಿಸಿ, ಇಲ್ಲಿ ಇಡುವಂತಾಯ್ತು.. ಹೆಚ್ಚಿಗೆ ಬದಲಾಯಿಸದೇ, ಅಂದು ಬರೆದದನ್ನ ಹಾಗೇ ಇಡುತ್ತಿದ್ದೇನೆ.. 🙂

ಇದೊಂತರ ವಿಚಿತ್ರ “ವಿಷಯ” ಚರ್ಚೆಗೋಸ್ಕರ ಆದ್ರೆ.. ಅಂತ ಅನಿಸುತ್ತದೆ ನನ್ನ ಮನಸ್ಸಿಗೆ..
ಪ್ರಪಂಚದ ಬುಧ್ಧಿವಂತರೆಲ್ಲಾ ಒಂದು ತರಹದ ಉತ್ತರ ನೀಡಿದರೆ ಹೃದಯವಂತರೆಲ್ಲಾ ಇನ್ನೊಂದು ತರಹ ಮಾತಾಡುತ್ತಾರೆ ಈ ವಿಷಯದಲ್ಲಿ.

ಹ..ಹಾ.. ನಾನು ಯಾವ ಗುಂಪಿಗೆ ಸೇರುತ್ತೇನೋ ಗೊತ್ತಿಲ್ಲ… ಆದರೆ, ನನ್ನ ಮನಸ್ಸಿನಲ್ಲಿರೋ, ಮನಸ್ಸಿಗೆ ಹಿಂದೆ ಬಂದಿದ್ದ ಯೋಚನೆಗಳೆಲ್ಲ ಒಂದೆಡೆ ಹಾಕಿ, ಅದರ ಸಾರ ತೆಗೆಯೋ ಪ್ರಯತ್ನ ಇದು ಅನ್ಕೋತೀನಿ.. ಮುಂದಿನ ದಿನಗಳಲ್ಲಿ ನನ್ನ ವಿಚಾರಧಾರೆ ಯಾವ ದಿಕ್ಕಿನಲ್ಲಿ ಹರಿಯುತ್ತೋ ಗೊತ್ತಿಲ್ಲ.. ಸದ್ಯದ್ದು ಏನಿದೆಯೋ ಅದನ್ನು ನಿಮ್ಮ ಮುಂದೆ ಇಡ್ತಾ ಇದ್ದೇನೆ.. ಮತ್ತಷ್ಟು ಓದು »

21
ಜೂನ್

“ಪ.ಗೋ. ಕಾಲಂ” ಜಗತ್ತಿನಲ್ಲಿ ಪತ್ರಕರ್ತನಿಗೊಂದು “ಸರ್ಟಿಫಿಕೇಟ್”

-ರವಿ ಮುರ್ನಾಡು

  ಪ.ಗೋ. ಜಗತ್ತಿನ ಪದಗಳ  ಹಂದರದಲ್ಲಿ ಒಬ್ಬ ” ವಿಲನ್‍” ಸೃಷ್ಠಿಯಾಗುತ್ತಾನೆ . ಅವನನ್ನು ಬುದ್ಧಿವಂತ ಹುಚ್ಚ ಅನ್ನುತ್ತೇವೆ. ಅದು ಕೊಡಿಯಾಲ್‍ ಬೈಲ್‍ ನವಭಾರತ ಪತ್ರಿಕೆಯಿದ್ದಾಗ ಪತ್ರಿಕಾ ಪ್ರಸರಣಾ ವಿಭಾಗದ ಮುಖ್ಯಸ್ಥ ಕಾಮತ್‍. ಅದಕ್ಕೆ ದಿವಂಗತ ಪ.ಗೋ.ರವರು “ಹಿತ್ತಾಳೆ ದೂರುಗಂಟೆ” ಅಂತ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ತಮ್ಮ ” ವಿಚಿತ್ರ ಸೃಷ್ಠಿಯ ಲೋಕದಲ್ಲಿ ಮತ್ತು ಅಂಕಣ ಬರಹಗಳು” ಸಂಕಲನದಲ್ಲಿ  ಹಿತ್ತಾಳೆ ದೂರುಗಂಟೆಯ ಪಾತ್ರಧಾರಿ  ವಿಲಕ್ಷಣವಾಗಿ ಎದ್ದು ನಿಲ್ಲುವಂತದ್ದು. ಹೀಗೂ ಉಂಟೆ…?! ಅನ್ನುವ ಒಂದು ಪ್ರಶ್ನೆ. ಪತ್ರಿಕಾ ಕಾರ್ಯಾಲಯದಲ್ಲಿ ಅಚಾನಕ್ಕಾಗಿ ಸೃಷ್ಠಿಯಾಗುತ್ತವೆ, ಇಲ್ಲದಿದ್ದರೆ ಸೃಷ್ಠಿಸುತ್ತಾರೆ . ಎಲ್ಲಾ  ಖಾಸಾಗಿ ಸಂಸ್ಥೆಯಲ್ಲಿ  ಇಂತಹ “ಶಕುನಿ”ಗೊಂದು ಹುದ್ದೆ ಉಂಟೇ ಉಂಟು. ಪ.ಗೋ.ರವರು ಮೌನವಾಗಿ ನವಭಾರತ ಕಚೇರಿ ಬಿಟ್ಟು ಹೋದಾಗ, ಕಚೇರಿಯ ಬಾಗಿಲಿಗೆ ತುಕ್ಕು ಹಿಡಿಯಬಾರದಿತ್ತೋ ಆನ್ನಿಸಿತು. ಬದುಕಿನ ಗೋಡೆ ಬಿರುಕಿಟ್ಟ ಸನ್ನಿವೇಶಕ್ಕೆ, ಪತ್ರಿಕಾ ಬದುಕಿಗೆ ಛೀಮಾರಿ ಹಾಕುವಷ್ಟು ವ್ಯಥೆಯಾಗುವಂತದ್ದು.

ಇವತ್ತಿಗೂ ಮಾತಾಡುತ್ತಿದೆ…. ಮನುಷ್ಯ ಬದುಕಿಗೆ  ಸವಾಲು ಹಾಕಿದ ಮಾತು.  “ನಾನು ಪತ್ರಿಕೆ ಹುಟ್ಟು ಹಾಕುವ ಕನಸು ಕಂಡಿದ್ದು ತಪ್ಪಾಯಿತು..!” ಅಂತ. ಬದುಕಿನ ಸ್ಥಿತ್ಯಂತರದಲ್ಲಿ ಒಮ್ಮೊಮ್ಮೆ ಕನಸುಗಳು ಈಟಿ ಇರಿದಂತೆ ಅಣಕಿಸುತ್ತವೆ. ಮಂಗಳೂರಿನ ಕಡಲ ಮರಳ ಕಣಗಳಿಗೆ ಇದರ ಪರಿಚಯ ಉಂಟು. ಅಲೆಗಳು ದಡಕ್ಕೆ ಬಡಿದು ಎಚ್ಚರಿಸಿ ಹೋಗುತ್ತಿವೆ… ಆ ಒಂದು ಜಗತ್ತಿನ ವಿಸ್ತಾರದಲ್ಲಿ ಜೀವನದ ಸಾರ್ಥಕ್ಯಕ್ಕೆ  ಮನಸ್ಸುಗಳು ತೆರೆದುಕೊಳ್ಳಲಿಲ್ಲ . ಪಡ್ಯಾನ ಗೋಪಾಲಕೃಷ್ಣರ  ರೆಕ್ಕೆ ಮುರಿದ ಮಾತುಗಳ ಹಕ್ಕಿಯ ಕಲರವ ಕೇಳಿಸುತ್ತಲೇ ಇದೆ…. ಕನಸುಗಳ ಮೂಟೆ ಹೊತ್ತ ದೋಣಿ ಕಡಲ ಮಧ್ಯದಲ್ಲಿ ಈಜುತ್ತಿದೆ….! ಮತ್ತಷ್ಟು ಓದು »