ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

9
ಜೂನ್

ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಲಿ

– ಶ್ರೀ ಹರ್ಷ ಸಾಲಿಮಠ

ಇದೊಂದು ಮಾತನ್ನು ಅತ್ಯಂತ ತೀವ್ರ ಸಂಕಟದಿಂದ ಹೇಳುತ್ತಿದ್ದೇನೆ. ಕಾಲಿಗೆ ಗ್ಯಾಂಗ್ರಿನ್ ಆದಾಗ ಕಾಲನ್ನು ಕತ್ತರಿಸುತ್ತಾರಲ್ಲ ಹಾಗೆ.  ನೋವಾಗುತ್ತದೆ ಆದರೆ ಬದುಕಲು ಅದು ಅನಿವಾರ್ಯ. ಕನ್ನಡ/ಕರುನಾಡು ಉಳಿಯಬೇಕೆಂದರೆ ಈ ಕೆಲಸ ಆಗಬೇಕಾಗಿದೆ.

ಬೆಂಗಳೂರಲ್ಲಿ ಕನ್ನಡ ಸಿಗುವುದಿಲ್ಲ.ಕನ್ನಡಿಗರು ಕಾಣೆಯಾಗುತ್ತಿದ್ದಾರೆ ಎಂಬ ಮಾತನ್ನು ಅತಿಶಯೋಕ್ತಿ ಎಂದುಕೊಂಡಿದ್ದೆ.ಇತ್ತೀಚಿನ ನನ್ನ ಕೆಲ ಅನುಭವಗಳು ಇದು ಸತ್ಯವೆಂದು ಬಿಂಬಿಸಿವೆ. ನಾನು ಎರಡು ಕಂಪನಿಗಳಿಗೆ ಇಂಟರ್‍ ವ್ಯೂ ಪ್ಯಾನೆಲಿಸ್ಟ್ ಆಗಿದ್ದೇನೆ. ಎರಡು ಕಾಲೇಜುಗಳಿಗೆ ಅಕಡೆಮಿಕ್ ಕನ್ಸಲ್ಟಂಟ್ ಆಗಿದ್ದೇನೆ. ನನ್ನ ಅನುಭವ ಮತ್ತು ವಿಶ್ಲೇಷಣೆಯಿಂದ ಇದೊಂದು ಅಭಿಪ್ರಾಯವನ್ನು ಮುಂದಿಡುತ್ತಿದ್ದೇನೆ.

ಇಲ್ಲಿಯವರೆಗೆ ಕಂಪನಿಗಳಿಗಾಗಿ ಸುಮಾರು ಸೂರು ಜನರ ಸಂದರ್ಶನ ನಡೆಸಿದ್ದೇನೆ. ದಯವಿಟ್ಟು ನಂಬಿ. ಇಲ್ಲಿಯವರೆಗೆ ಒಬ್ಬನೇ ಒಬ್ಬ ಕನ್ನಡಿಗ ಸಂದರ್ಶನಕ್ಕಾಗಿ ಬಂದಿಲ್ಲ! ನಾನು ಮತ್ತು ಪ್ಯಾನೆಲ್ ನಲ್ಲಿರುವ ಕೆಲವರು ಕನ್ನಡಿಗ ಗೆಳೆಯರು ಕನ್ನಡದ ಹುಡುಗರು ಬಂದರೆ ಕೊಂಚ ದಡ್ಡರಿದ್ದರೂ ಸರಿ ಶತಾಯಗತಾಯ ಮುಂದಕ್ಕೆ ತಳ್ಳಬೇಕೆಂದು ಯೋಜಿಸಿಕೊಂಡಿದ್ದೆವು. ಆದರೆ ಕನ್ನಡದ ಒಬ್ಬ ಹುಡುಗನಾದರೂ ಬಂದರೆ ತಾನೆ? ಬಂದವರು ಬಹುತೇಕರು ತೆಲುಗರು ಮತ್ತು ಬಿಹಾರಿಗಳು! ಕೃಷ್ಣದೇವರಾಯ ವಿಶ್ವವಿದ್ಯಾಲಯದ ಲ್ಲಿ ಬಿಎಎಸ್ಸಿ  ಪದವಿ ಮುಗಿಸಿ ಎರಡು ವರುಷಗಳ ಸುಳ್ಳು ಅನುಭವ ಹಾಕಿಕೊಂಡು ಬರುತ್ತಾರೆ. ಕಂಪನಿಗಳಾದರೋ ಇವರು ಸುಳ್ಳರು ಎಂದು ತಿಳಿದೂ ತೆಗೆದುಕೊಳ್ಳುತ್ತವೆ. ಏಕೆಂದರೆ ಈಗ ಬಹುತೇಕ ಕಂಪನಿಗಳು ಸರ್ವಿಸ್ ಮತ್ತು ಮೇಂಟೆನೆನ್ಸ್ ಕೆಲಸಗಳನ್ನು ನಡೆಸುತ್ತಿವೆ. ಈ ಕೆಲಸಕ್ಕೆ ಹೆಚ್ಚಿನ ಕೌಶಲ್ಯ ಅಗತ್ಯವಿಲ್ಲ. ಒಂದೆರಡು ತಿಂಗಳಲ್ಲಿ ಯಾರಾದರೂ ಕಲಿಯಬಹುದು. ಗಿರಾಕಿಗಳಿಗೆ ತೋರಿಸಲು ಬಿಲ್ಲಿಂಗಿಗಾಗಿ ಕೆಲವು ನೌಕರರ ಅವಶ್ಯಕತೆ ಇರುತ್ತದೆ. ಹಾಗಾಗಿ ಕೌಶಲ್ಯದ ಬಗ್ಗೆ ಹೆಚ್ಚಿನ ತಲೆ ಕೆಡಿಸಿಕೊಳ್ಳದೇ ಕಂಪನಿಗಳು ಇವರನ್ನು ಕೊಳ್ಳುತ್ತವೆ. ಇವರು ಕಡಿಮೆ ಸಂಬಳಕ್ಕೆ ರಾತ್ರಿ ಪಾಳಿಗೂ ಕೆಲಸ ಮಾಡಲು ತಯಾರಿರುವುದರಿಂದ ಕಂಪನಿಗಳಿಗೂ ಲಾಭ!
ಮತ್ತಷ್ಟು ಓದು »

9
ಜೂನ್

ಗತಂ ಗತಂ

ಪವನ್ ಪಾರುಪತ್ತೇದಾರ್

ನಮಮ್ಮನಿಗೆ ಇದ್ದಕ್ಕಿದ್ದ ಹಾಗೆ ಅಕ್ಕನ ನೆನಪಾಗಿ ನನ್ನ ಕೇಳಿದ್ರು ಕರೆದು ಕೊಂಡು ಹೋಗು ಅಂತ, ನನಗು ಮಾಡಕ್ ಏನು ಕೆಲಸ ಇಲ್ಲದ ಕಾರಣ electronic ಸಿಟಿ ಕಡೆ ಪ್ರಯಾಣ ಮಾಡಿದೆ. ನಾನು ಅವರ ಮನೆಗೆ ಹೋಗಿ ಸುಮಾರು ೪ ವರ್ಷ ಗಳಾಗಿತ್ತು. ಹೋಗಿ ಅವರ ಮನೆ ಸೇರಿದ ತಕ್ಷಣ ಉಭಯ ಕುಶಲೋಪರಿಗಳನ್ನು ಮುಗಿಸಿ ಚೌ ಚೌ ಬಿಸ್ಕತ್ತು ತಿನ್ನುತ್ತ ಮಾತನಾಡುತ್ತಿರುವಾಗ ನಮ್ಮ ಅಣ್ಣ ನಮ್ಮ ತಾಯಿಗೆ ಹೇ ನಿನ್ನ 2nd year BA ದು ಒಂದು ಪುಸ್ತಕ ಹಾಗೆ ಇಟ್ಟಿದಿನಿ ಕಣೆ ಅಂದ ( ಹೆಚ್ಹು ಸಲಿಗೆ ಚಿಕ್ಕಮ್ಮ ಆದರು ಹೋಗೆ ಬಾರೆ ಎಂದೆ ಮಾತನಾಡುತ್ತಾರೆ )

ನಮಮ್ಮ ಯಾವುದೊ ಅದು ಅಂದ್ರು ,ಅದಕ್ಕೆ ನಮ್ಮಣ್ಣ untouchable ಅಂತ ನೆನಪಿದ್ಯ ಅಂದ ಅಮ್ಮ ಹೌದು ಹೌದು ಇನ್ನು ಇತ್ತಿದ್ಯ good ಅಂದ್ರು. ಅದಕ್ಕವ, ನಾನು ಮಾತ್ರ ಯಾರಿಗೂ ಪುಸ್ತಕ ಕೊಡೋದಿಲ್ಲಪ ಅದನ್ನ ಯಾರಿಗದ್ರು ಕೊಟ್ರೆ ವಾಪಾಸ್ ಬರೋದೆ ಕಷ್ಟ ಅದಕ್ಕೆ ಜೋಪಾನವಾಗಿ ಜೋಡಿಸ್ತೀನಿ ಸಮಯ ಸಿಕ್ಕಾಗ ಓದ್ತಾ ಇರ್ತೀನಿ ಅಂದ. ಅಷ್ಟರಲ್ಲೇ ಅಲ್ಲೇ ಕೂತಿದ್ದ ನಮ್ಮ ದೊಡ್ಡಪ್ಪ ಕಣಗಾಲ್ ಶಂಕರ್ ನಾರಾಯಣ್ ( ಕನ್ನಡ ಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರವರ ಮೊದಲನೇ ತಮ್ಮ ) ಒಂದು ಮಾತು ಹೇಳಿದರು, ” ಪುಸ್ತಕಂ ವನಿತಂ ವಿತ್ತಂ ಪರ ಹಸ್ತೇ ಗತಂ ಗತಂ ” ಆಹಾ ಎಷ್ಟು ಅರ್ಥ ಗರ್ಭಿತವಾಗಿದೆ. ಈ ಮಾತು, ಪುಸ್ತಕ ಅಗಲಿ ಹೆಣ್ಣಾಗಲಿ ಹಣ ಅಗಲಿ ಇನ್ನೊಬ್ಬರ ಕೈಗೆ ಹೋದರೆ ಅದು ಹೋದಂತಯೇ ತಿಳಿಯಬೇಕು. ಅಕಸ್ಮಾತ್ ಮತ್ತೆ ಬಂದರು ಅದು ಸರಿಯಾಗಿ ಬರುವುದು ಬಹಳ ಕಷ್ಟ , ಸರಿಯಾದ ಮಾತು. ನನ್ನ ಜೆವನದಲ್ಲೇ ಅಂತ ಸಂಗತಿಗಳು ನಡೆದಿವೆ, ನಾನು ೫ನೆ ತರಗತಿ ಓದೋವಾಗ ನನಗೆ ಬಹುಮಾನವಾಗಿ ಬಂದಿದ್ದ ಒಂದು ಜನರಲ್ knowledge ಪುಸ್ತಕವನ್ನ ತೆಗೆದುಕೊಂಡಿದ್ದ ಮೇಸ್ಟ್ರು ನಾನು ಪ್ರೌಢ ಶಾಲೆ ಸೇರುವರೆಗೂ ಕೇಳಿದ್ರು ವಾಪಾಸ್ ಕೊಡಲಿಲ್ಲ. ಮತ್ತಷ್ಟು ಓದು »

9
ಜೂನ್

ನೈಂಟಿ ಜತೆಗಿನ ನಂಟು!!!

– ರಶ್ಮಿ.ಕಾಸರಗೋಡು

ನೈಂಟಿ! ಅದೊಂದು ಥರಾ ಕಿಕ್ ಕೊಡುವಂತದ್ದೇ. ಅರೇ..ನೀವು ಉದ್ದೇಶಿಸುತ್ತಿರುವ ‘ಬಾಟಲಿ’ ಬಗ್ಗೆ ನಾನು ಹೇಳುತ್ತಿಲ್ಲ. ನಾನು ಹೇಳೋಕೆ ಹೊರಟಿರುವುದು 90ರ ದಶಕದ ಟಿವಿ ಕಾರ್ಯಕ್ರಮಗಳ ಬಗ್ಗೆ. ದೂರದರ್ಶನ ಅದೊಂದೇ ಚಾನೆಲ್ ಸಾಕು…ಎಲ್ಲ ತಿಳಿಯೋಕೆ, ಕಲಿಯೋಕೆ. ಹಿಂದಿ ಅರ್ಥವಾಗುತ್ತಿಲ್ಲವಾದರೂ ಟಿವಿ ಮುಂದೆ ನಾವು ಹಾಜರು. ಆವಾಗನಮ್ಮ ಮನೆಯಲ್ಲಿ ಟಿವಿ ಇರಲಿಲ್ಲ, ಆದರೂ ಒಂದು ಕಿಮೀ ನಡೆದು ಪಕ್ಕದ ಮನೆಗೆ ಟಿವಿ ನೋಡಲು ಹೋಗುತ್ತಿದ್ದೆ. ಅದೂ ಮಹಾಭಾರತ ನೋಡಲು. ಮಹಾ….ಭಾರತ್ ಅಂತ ಅದರ ಹಾಡು ಶುರುವಾಗುವ ಹೊತ್ತಿಗೆ ನಾವು ಮೂವರು (ಜತೆಗೆ ಅಣ್ಣ, ಅಕ್ಕ) ಅಲ್ಲಿ ಹಾಜರು. ಅಲ್ಲಿ ಯುದ್ಧ ನಡೆಯುತ್ತಿದ್ದರೆ ಕಣ್ಣು ಮುಚ್ಚಿ ನೋಡುವುದು, ಮರಣ ಶಯ್ಯೆಯಲ್ಲಿರುವ ಬೀಷ್ಮನನ್ನು ನೋಡಿ ಅಳುವುದು ಹೀಗೆ ಸಾಗುತ್ತಿತ್ತು ನಮ್ಮ ‘ಮಹಾ’ ಭಾರತ. ಆಮೇಲೆ ನಮ್ಮ ಮನೆಗೂ ಬ್ಲಾಕ್ ಆ್ಯಂಡ್ ವೈಟ್ ಟಿವಿ ಬಂತು. ಟಿವಿ ಬಂದ ಮೊದಲ ದಿನ ಫುಲ್ ಚಾಲೂ. ಪ್ರೋಗ್ರಾಂ ಮುಗಿದು ಬಣ್ಣ ಬಣ್ಣದ ಸ್ಟೈಪ್ ಕಾಣಿಸಿಕೊಂಡರೂ ಅದನ್ನೇ ನೋಡುತ್ತಾ ಕುಳಿತಿರುತ್ತಿದ್ದೆವು. ರುಕಾವಟ್ ಕೆ ಲಿಯೆ ಕೇದ್ ಹೈ ಅಂದ್ರೆ ಏನೂ ಅಂತಾ ಗೊತ್ತಿಲ್ಲದಿದ್ದರೂ ಸ್ವಲ್ಪ ಸಮಯದ ನಂತರ ಪ್ರೋಗ್ರಾಂ ಬರುತ್ತೆ ಅಂತಾ ಗೊತ್ತಿತ್ತು. “ಟಿವಿ ಬಂತಾ…ಇನ್ನು ಮಕ್ಕಳು ಓದಲ್ಲ ಬಿಡಿ” ಅಂತಾ ಅಮ್ಮನಿಗೆ ಚಾಡಿ ಹೇಳುವ ನೆರೆಯವರು ಬೇರೆ. ಅಂತೂ ಟಿವಿಯ ಮೂಲಕ ಹಿಂದಿ ಬೇಗನೆ ಕಲಿತುಕೊಳ್ಳುವಂತಾಯಿತು.
ಮತ್ತಷ್ಟು ಓದು »

8
ಜೂನ್

ಕಳ್ಳ…! ನಮ್ಮ ಅನ್ನ ಕದ್ದ ಕಳ್ಳ..!

-ರವಿ ಮುರ್ನಾಡು

          ಹೊಡೆಯಬೇಡಿ ನನ್ನನ್ನು… ಹೊಡೆಯಬೇಡಿ…. ಇನ್ನು ಮುಂದೆ ಕದಿಯುವುದಿಲ್ಲ…! ಹಾಗಂತ, ತೊದಲು ನುಡಿಯಲ್ಲಿ ಪ್ರಾರ್ಥಿಸಿದ್ದೆ. ಹೊಡೆತ ನಿಂತಿತ್ತು. “ಕಳ್ಳ” ಅನ್ನುವ ಹಣೆಪಟ್ಟಿ ತೆಗೆಯಲಾಗಲಿಲ್ಲ. ಅವರೆಲ್ಲಾ ಕೆಕ್ಕರುಗಣ್ಣಿನಲ್ಲಿ ದುರುಗುಟ್ಟಿ ನೋಡುತ್ತಿದ್ದರು. ಇನ್ನು ಅನ್ನ ಕದ್ದರೆ, ಕಣ್ಣಿಗೆ ಮೆಣಸು ಹಾಕಿ ಹೊಡೆದೇವು ಜೋಕೆ ಅಂದರು. ಆಯಿತು, ನಾನು ಕದಿಯಲಿಲ್ಲ. ಅನ್ನದ ಆಸೆಗೆ ಮೂಗು ಸುವಾಸನೆಯನ್ನು ಅರಸುತ್ತಿತ್ತು. ಹೊಟ್ಟೆ ಅರ್ಧವಾದರೂ ಏಟಿಗೆ  ಹೆದರಿ ಹಸಿಯದೆ ಸುಮ್ಮನಾಯಿತು.

ಅನ್ನ ಕದ್ದ ಕತೆಗಳು ಸಿನೇಮಾದಲ್ಲಿ ಬಣ್ಣಗಳಾದವು. ಜಗತ್ತಿನ ಅತ್ತ್ಯುನ್ನತ ಪ್ರಶಸ್ತಿಗಳ ಕಿರೀಟ ಹೊತ್ತ ಹಲವು ಸಾಹಿತ್ಯ ಪ್ರಾಕಾರಗಳು ಇದರ ಹಿಂದೆ ಇತಿಹಾಸದ ಪುಟ ಸೇರಿದವು. ಇಂದಿಗೂ ಕಣ್ಣಿಗೆ ಕಾಣದ ಅನ್ನ ಕದಿಯುವ ಸರದಿಗಳು ಈ ಸಮಾಜದಲ್ಲಿ ಹೀಗೆ ಸಾಲು ಸಾಲಾಗಿ ಜೀವಂತವಾಗಿವೆ. ಇಂತಹ ಸಿನೇಮಾ ನೋಡುವಾಗ ಮತ್ತು ಸಾಹಿತ್ಯಗಳನ್ನು ಓದುವಾಗ ಅದರೊಳಗೆ ಆಕಸ್ಮಿಕವಾಗಿ  ನಾನೇ ಪಾತ್ರಧಾರಿಯಾಗುತ್ತೇನೆ. ಅಲ್ಲೆಲ್ಲಾ ಮಾತನಾಡುತ್ತೇನೆ. ನನ್ನ ಹಾಗೇ ನನ್ನದೇ ನೆರಳಿನ ನರ್ತನ…!. ನನ್ನದೇ  ಜಗತ್ತಿನ ಒಂದು ಪ್ರಶ್ನೆ . ನಾನೊಬ್ಬ ಅನ್ನ ಕದ್ದ ಕಳ್ಳನೇ?. ಹಿಗ್ಗಾ ಮುಗ್ಗಾ ಹೊಡೆದರು. ಬೆಳಿಗ್ಗಿನಿಂದ ಸಂಜೆಯವರೆಗೆ ದುಡಿದ ಅವರ ಅನ್ನವನ್ನು ನಾನು ಕದ್ಡೆ ಅನ್ನುವ  ಕಾರಣಕ್ಕಾಗಿ ಕಂಡ ಕಂಡಾಗಲೆಲ್ಲ ಕಳ್ಳ ಎಂದು ಮೂದಲಿಸಿದರು. ಅವರ ಮಕ್ಕಳೆಲ್ಲಾ ಹಿಯ್ಯಾಳಿಸಿದರು. ಕಣ್ಣುಗಳು ತೇವಗೊಳ್ಳುತ್ತವೆ…. ಏಕೆ ಅನ್ನ ಕದ್ದೆ ಅಂತ ಅವರು ಕೇಳಲಿಲ್ಲ. ಸುರುಳಿ ಬಿಚ್ಚುತ್ತಿದೆ ಮನಸ್ಸು …!

ಅದು ಕಾರ್ಮಿಕರ ಲೈನ್‍ ಮನೆ. ಓಗರೆಯ ಐದು ಮನೆಗಳಿದ್ದವು. ಕೊಡಗಿನ ಸೋಮವಾರಪೇಟೆಯಲ್ಲಿ ಹೆಚ್ಚು ಇಂತಹ ಕಾರ್ಮಿಕರ ಮನೆಗಳು ಕಂಡು ಬರುತ್ತವೆ. ದೊಡ್ಡ ದೊಡ್ಡ ಕಾಫಿ ತೋಟಗಳು ಅದು. ಕಾಫೀ  ಕೊಯ್ಲಿನ ಸಮಯದಲ್ಲಿ ಹೊರ ಜಿಲ್ಲೆಗಳಾದ ಮೈಸೂರು,ಹಾಸನ ಸೇರಿದಂತೆ, ಕೇರಳ,ತಮಿಳುನಾಡಿನಿಂದಲೂ ಕಾರ್ಮಿಕರು ಠಿಕಾಣಿ ಹೂಡುತ್ತಾರೆ. ಸುಂಟಿಕೊಪ್ಪ ಪಟ್ಟಣದಿಂದ ಎಂಟು ಕಿ. ಮೀ. ದೂರ ” ಕಾರೆಕೊಲ್ಲಿ” ಕಾಫಿ ಎಸ್ಟೇಟಿಗೆ. ಅಲ್ಲಿಂದ   “ಕಂಟ್ರೋಲ್‍” ಎಸ್ಟೇಟಿಗೆ ಮೂರು ಕಿ.ಮೀ. ದೂರ .  ಸುಂಟಿಕೊಪ್ಪದಿಂದ ಮಡಿಕೇರಿ ದಾರಿ ಮಧ್ಯೆಯೂ  ಬಸ್ಸಿನಲ್ಲಿ ಇಳಿದು ಇಲ್ಲಿಗೆ ಹೋಗಬಹುದು. ಅದು ನಮಗೆ ಗೊತ್ತಿಲ್ಲ. ನಾವೆಲ್ಲರೂ ನಡೆದು ಹೋಗಿಯೇ ಈ ಎಸ್ಟೇಟಿಗೆ ತಲಪುತ್ತಿದ್ದದ್ದು. ಅದು ಕಾರೆಕೊಲ್ಲಿ ಎಸ್ಟೇಟ್ ಮೂಲಕ. ಇಲ್ಲಿಯೇ ನನ್ನ ಅಜ್ಜಿ ಮನೆ. ಮತ್ತಷ್ಟು ಓದು »

8
ಜೂನ್

ಐ ಹೇಟ್ ಕ್ರಿಕೆಟ್..!!!???

ಅರೆಹೊಳೆ ಸದಾಶಿವರಾವ್

ಕ್ರಿಕೆಟಿಗರು ಮೈದಾನದಲ್ಲಿ ಆಡುತ್ತಿದ್ದರೆ ಮೈ ಎಲ್ಲಾ ಕಣ್ಣಾಗಿ, ದೇಶದ ಧ್ವಜವನ್ನು ಹಾರಿಸಿ ನೋಡುವ, ಮನೆಯೊಳಗೆ ಎಲ್ಲಾ ಕೆಲಸ ಬಿಟ್ಟು ಟಿ” ಮುಂದೆ ಕುಳಿತುಕೊಳ್ಳುವ ನಾವೆಲ್ಲರೂ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ, ಬಹುಷ ನಾವೂ ಈ ಕ್ರಿಕೆಟಿಗರೆಂಬ ‘ದೇಶ ದ್ರೋ”‘ಗಳಿಗಿಂತ ಕಡಿಮೆ ಇಲ್ಲದಂತಾಗುತ್ತದೆ. ವ್ಯತ್ಯಾಸ ಎಂದರೆ ಅವರಿಗೆ ಕೈತುಂಬಾ ಹಣ ಸಿಗುತ್ತದೆ, ನಮ್ಮದು ಜೀವನದ ಅಪೂರ್ವಗಳಿಗೆಗಳು ವ್ಯರ್ಥವಾಗಿ ಕಳೆದುಹೋಗುತ್ತವೆ.

ಹಲವು “ಷಯಗಳ ಬಗ್ಗೆ ನಾ”ಲ್ಲಿ ಯೋಚಿಸಲೇ ಬೇಕು. ಇತ್ತೀಚಿನ ಐಪಿಎಲ್ ಪಂದ್ಯಾವಳಿಯ ವೇಳೆ, ರಾಯಲ್ ಚ್ಯಾಲೆಂಜರ್ಸ್, ಬೆಂಗಳೂರು ತಂಡವನ್ನು ಹಲವರು ನಮ್ಮ ತಂಡ ಎಂದೇ ಸಂಬೋಧಿಸುತ್ತಿದ್ದರು. ನಮ್ಮ ಕರ್ನಾಟಕದ ಆಟಗಾರರನ್ನೆಲ್ಲಾ ಕೈ ಬಿಟ್ಟು, ಕೇವಲ ಬೇರೆ ರಾಜ್ಯ ಮತ್ತು “ದೇಶಿ ಆಟಗಾರರನ್ನು ಮಾತ್ರ ‘ಖರೀದಿಸಿ’, ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನ ಹೆಸರಿಟ್ಟುಕೊಂಡು, ಬೆಂಗಳೂರಿನಲ್ಲಿ ಆದ ಪಂದ್ಯಗಳಲ್ಲೆಲ್ಲಾ ಕ್ರಿಕೆಟ್ ಪ್ರೇ”ಗಳ ಹಣ ದೋಚಿದ್ದು ಬಿಟ್ಟರೆ, ಬೇರಾವ ರೀತಿಯಲ್ಲೂ ಈ ಬೆಂಗಳೂರು ತಂಡ ನಮ್ಮzಲ್ಲವಾಗಿತ್ತು!. ಆದರೂ ಅದನ್ನು ನಮ್ಮದು ಎಂದು, ನಮ್ಮದೇ ರಾಜ್ಯದ ಕ್ರಿಕೆಟಿಗರು ಬೇರೆ ತಂಡದಲ್ಲಿ ಆಡುತ್ತಿದ್ದರೂ, ನಾವು ಮಾತ್ರ ಮರುಳರಂತೆ ‘ಅಭಿಮಾನ’ದ ಪರಾಕಾಷ್ಠೆ ಮೆರೆದದ್ದು. “ಜಯ ಮಲ್ಯರಿಗಂತೂ ಖುಯಾಗಿರಬಹುದು. ಮತ್ತಷ್ಟು ಓದು »

7
ಜೂನ್

ಇಲ್ಲಿ ‘ನಿಮ್ಮ’ ಕಣ್ಣಿಗೆ ಸಣ್ಣವರಾದ ಸಾಮಾನ್ಯ ಜನರು ಇದ್ದರು…

ಡಾ.ಅಜಕ್ಕಳ ಗಿರೀಶ್

ರಾಮದೇವ್ ಬಗ್ಗೆ ಬೇಕಾದದ್ದು ಮಾತಾಡಲಿ. ಆದರೆ ಹಾಗೆ ಹಿಡನ್ ಅಜೆಂಡಾ, ಕೋಮುವಾದಿಗಳು ಇತ್ಯಾದಿ ಬೈಯುವಾಗ ಕೂಡ ಯಾರೊಬ್ಬರೂ ಗಮನಿಸದ ವಿಚಾರ ಅಂದರೆ, ಅವರನ್ನು ಬೇಂಬಲಿಸಿ ರಾಮಲೀಲ ಮೈದಾನಕ್ಕೆ ಗಂಟುಮೂಟೆ ಕಟ್ಟಿಕೊಂಡು ಹೋದ ಸಾವಿರಾರು ಜನರು ಇದ್ದಾರಲ್ಲ ಅವರು ಯಾವ ಸ್ವಾರ್ಥದಿಂದ ಹೋದರು? ನಿಜ , ಅಲ್ಲಿ ಕಡುಬಡವರು ಇದ್ದಿರಲಾರರು. ಆದರೆ,ಅಲ್ಲಿ ಇದ್ದವರು ನಿಜವಾದ ದೇಶಭಕ್ತರು. ದೇಶಭಕ್ತಿ ಅಂದರೆ ಏನು ಅಂತ ವಿವರಿಸುವುದು ಯಾವಾಗಲೂ ಕಷ್ಜ್ಟ. ಆದರೆ ಇಂದು ಬಹುಶಃ ದೇಶಭಕ್ತಿ ಅಂದರೆ ಏನು ಅಂತ ಯಾರಿಗಾದರೂ ಪಾಠ ಹೇಳಬೇಕಾದರೆ ನಾವು ಇದು ಅಂತ ತೋರಿಸಬಹುದುದು. ಬೇರೆ ಅಂಥ ಉದಾಹರಣೆಗಳು ಬಹಳ ಸಿಗಲಿಕ್ಕಿಲ್ಲ. ಊಟದ ಆಸೆಯಿಂದ ಸೇರಿದ್ದಾರೆ ಅನ್ನಲು ಅಲ್ಲಿ ಊಟವಿಲ್ಲ,ಉಪವಾಸ. ಹಣದ ಆಸೆಗೆ ಹೋದರೇ? ಅವರು ತಮ್ಮ ಸ್ವಂತ ಹಣದಿಂದ ಹೋದರು ,ಅಷ್ಟೇ ಅಲ್ಲ ,ಬಹುಶ ಬಹಳ ಜನ ಪೆಂಡಲ್ ಇತ್ಯಾದಿ ಖರ್ಚಿಗೆ ದೇಣಿಗೆ ಕೂಡ ಕೊಟ್ಟಿರಬಹುದು(ದೇವಸ್ತಾನಗಳಿಗೆ ನಮ್ಮ ಖರ್ಚಲ್ಲಿ ಹೋಗಿ ಕಾಣಿಕೆ ಹಾಕಿದಂತೆ.ದೇವಸ್ತಾನದಲ್ಲಿ ಪುಣ್ಯವಾದರೂ ಸಿಗುತ್ತೆ ಸ್ವಂತಕ್ಕೆ ಅಂತ ಆಸೆ ಇರುತ್ತೆ, ಇಲ್ಲಿ ಸ್ವಂತಕ್ಕೆ ಅಂತ ಏನಿಲ್ಲ.) ಮತ್ತಷ್ಟು ಓದು »

7
ಜೂನ್

ನಾವಿನ್ನೂ ಬ್ರಿಟಿಷರ ಆಳ್ವಿಕೆಯಲ್ಲಿದ್ದೇವೆಯೇ?

– ಸಂಪತ್ ಕುಮಾರ್

ಸ್ವತಂತ್ರ, ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವ  ದೇಶದಲ್ಲಿ ಇಂತಹ ಘಟನೆಗಳು ನಡೆಯಲು ಸಾಧ್ಯವೇ!? ಜೂನ್ ೪ ರ ಘಟನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ.ಪ್ರಜೆಗಳ ಮೂಲಭೂತ ಹಕ್ಕುಗಳ ಕಗ್ಗೊಲೆಯಾಗಿದೆ. ಗಾಂಧಿಜಿ ಹೇಳಿಕೊಟ್ಟ ಸತ್ಯಾಗ್ರಹದಂತಹ ಅಸ್ತ್ರ ಬೆಲೆ ಕಳೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದನೆ ನೀಡಿದಂತಾಗಿದೆ.
ಪ್ರಜೆಗಳ ದನಿಯನ್ನು ಹತ್ತಿಕ್ಕಲು ಹೊಸ ವಿಧಾನವನ್ನು ಸರಕಾರ ಹೇಳಿಕೊಟ್ಟಿದೆ. ಬಾಬಾ ರಾಮದೇವ್ ಅವರ ಅಹಿಸಾತ್ಮಕ ಪ್ರತಿಭಟನೆಗೆ ಹಿಂಸಾತ್ಮಕ ಉತ್ತರ ನೀಡಿ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಏಪ್ರಿಲ್ ೧೨ ರಂದು ನಾನು ನಿಲುಮೆಯಲ್ಲಿ ಬರೆದ ಲೇಖನ “ಇನ್ನೊಂದು ಸಮರಕ್ಕೆ ಸಿದ್ದರಾಗಿ” ಸದಾಶಯದಂತೆ ಬಾಬಾ ರಾಮದೇವ್ ಅವರು ಸತ್ಯಾಗ್ರಹಕ್ಕೆ ಕುಳಿತದ್ದು ಸಂತೋಷದ ವಿಚಾರವಾಗಿರುತ್ತದೆ. ಲೋಕಪಾಲದಂತಹ ಬಹು ಆಯಾಮದ ಸಮಸ್ಯೆಯನ್ನು ಎದುರಿಸುವ ಬದಲು, “ಕಪ್ಪು ಹಣ” ದಂತಹ ಒಂದೇ ಸಮಸ್ಯೆಯನ್ನು ಎದುರಿಸಿ ಬಾಬಾ ಯಶಸ್ಸನ್ನು ಪಡೆಯುವ ಹಂತದಲ್ಲಿರುವಾಗಲೇ ಹೀಗೆ ಸತ್ಯಾಗ್ರಹವನ್ನು ಹತ್ತಿಕ್ಕಿದ್ದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಸರಕಾರದ ಸರ್ವಾಧೀಕಾರದ ಧೋರಣೆ ಎಂದಿಗೂ ಸಲ್ಲ.

ಮತ್ತಷ್ಟು ಓದು »

7
ಜೂನ್

ಬಾಲ್ಯಕಾಲವೇ ನೀ ಇನ್ನೊಮ್ಮೆ ಬಾರೆಯಾ?

– ಡಾ.ಶೈಲಾ ಯು.

ಮಾರಣಕಟ್ಟೆಯ ಜಾತ್ರೆಗೆ ಮಕ್ಕಳೊ೦ದಿಗೆ ಹೊರಟಿದ್ದೇನೆ; ನೆನಪುಗಳು ಮರುಕಳಿಸುತ್ತಿವೆ.   ಅವರನ್ನು ನೆಪವಾಗಿಟ್ಟುಕೊ೦ಡು ಎಷ್ಟು ವರ್ಷಗಳಿ೦ದ ನನ್ನ ಬಾಲ್ಯದ ದಿನಗಳನ್ನು ಮೆಲುಕು ಹಾಕಿದ್ದೇನೋ? ನನಗೇ ನೆನಪಿಲ್ಲ. ಯಾವುದಕ್ಕೂ ಬಿಡುವಿಲ್ಲ ಬಿಡುವಿಲ್ಲ ಎ೦ಬ ಗೊಣಗಾಟವನ್ನು ತತ್ಕಾಲಕ್ಕೆ ನಿಲ್ಲಿಸಿ, ಮಕ್ಕಳಿಗೂ ಕಿ೦ಚಿತ್ ಅನುಭವ ಸಿಗುವುದೇ ಎ೦ಬ ಕಾತುರದಲ್ಲಿ ನನ್ನ ಅಕ್ಕರೆಯ ಅಜ್ಜಿ ನಮಗೆಲ್ಲ ಪ್ರೀತಿ ಉಣಿಸಿದ ಆವರಣ ಈಗ ಹೇಗಿದೆ ನೋಡಲು ಹೋಗುತ್ತಿದ್ದೇನೆ. ಅ೦ದು ಆ ಊರು ಎಷ್ಟೊ೦ದು ಆತ್ಮೀಯವಾಗಿತ್ತು; ಆ ದಿನಗಳು ಎಷ್ಟೊ೦ದು ಚೆನ್ನಾಗಿದ್ದವು!…
ಕು೦ದಾಪುರ ತಾಲೂಕಿನ ಅ೦ದಿನ ಒ೦ದು ಕುಗ್ರಾಮ ನನ್ನಜ್ಜಿಯ ಮನೆರುವ ಊರು. ಸುತ್ತಲಿನ ಇಳಿಜಾರಾದ ಪ್ರದೇಶದಲ್ಲಿ ಸಮತಟ್ಟಾದ ಗದ್ದೆಗಳು. ಅವುಗಳ ತಪ್ಪಲಲ್ಲಿ ನನ್ನಜ್ಜಿಯ ಮನೆ. ‘ಅಜ್ಜಿ ಮನೆ’ ಎನ್ನುವಾಗಲೇ ನನ್ನೊಳಗೆ ಅವಿತಿರುವ ಆರ್ದ್ರತೆಯ೦ತಹ ಹೇಳಿಕೊಳ್ಳಲಾರದ ಭಾವ ನನ್ನನ್ನು ಆವರಿಸಿಕೊಳ್ಳುತ್ತದೆ. ಮನಸ್ಸು ತು೦ಬಿಬರುವ ಸವಿ ಸವಿ ನೆನಪುಗಳು. ಬಾಲ್ಯದ ರಜಾಕಾಲದಲ್ಲಿ ಅಲ್ಲಿ ಕಳೆಯುತ್ತಿದ್ದ ದಿನಗಳು ನನ್ನನ್ನು ಏಕಾ೦ಗಿಯಾಗಿದ್ದಾಗಲೆಲ್ಲ ಕಾಡುತ್ತವೆ; ನನ್ನ ಸಹಜ ಭಾವುಕ ಗುಣವನ್ನು ಉದ್ದೀಪಿಸಿ ಕಣ್ಣ೦ಚಿನಲ್ಲಿ ನೀರು ಜಿನುಗುವ೦ತೆ ಮಾಡುತ್ತವೆ. ಮತ್ತಷ್ಟು ಓದು »

5
ಜೂನ್

ಗಾಂಧಿ ಪಕ್ಷದೊಳಗಿನ ಬ್ರಿಟಿಷರು…!

– ರಾಕೇಶ್ ಶೆಟ್ಟಿ

ತಲೆಬರಹವನ್ನ ನಕಲಿ ಗಾಂಧಿಗಳ ಪಕ್ಷದೊಳಗಿನ ಬ್ರಿಟಿಷರು ಅಂತ ಓದಿಕೊಳ್ಳಿ.ಮಹಾತ್ಮರ ಹೆಸರನ್ನ ಬೇಡ ಬೇಡವೆಂದರೂ ಅನಿವಾರ್ಯವಾಗಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪಕ್ಷದ/ಸರ್ಕಾರದ ದೌರ್ಜನ್ಯದ ವಿರುದ್ಧ ಮಾತನಾಡುವಾಗ ಬಳಸಿಕೊಳ್ಳಲೇಬೇಕಿದೆ.

ಪ್ರಾಮಾಣಿಕ ಪ್ರಧಾನಿಯ ಸರ್ಕಾರ ಅನೈತಿಕ ಕೆಲಸಕ್ಕೆ ಕಡೆಗೂ ಕೈ ಇಟ್ಟಿದೆ.ಮಧ್ಯರಾತ್ರಿ ಕಳ್ಳರಂತೆ-ದರೋಡೆಕೋರರಂತೆ ರಾಮ್ ಲೀಲಾ ಮೈದಾನಕ್ಕೆ ನುಗ್ಗಿ ಹೆಂಗಸರು-ಮಕ್ಕಳು ಅಂತ ನೋಡದೆಯೆ ರಾಕ್ಷಸರಂತೆ ವರ್ತಿಸಿದ ರೀತಿ ನೋಡಿದರೆ, ಮನಮೋಹನ್ ಸಿಂಗ್ ಅನ್ನುವ ಸೋ-ಕಾಲ್ಡ್ ಪ್ರಧಾನಿಯ ಪ್ರಾಮಾಣಿಕತೆ ಉಪ್ಪಿನಕಾಯಿ ಹಾಕಲಿಕ್ಕಾ ಅಂತ ಕೇಳಲೆಬೇಕಾಗುತ್ತದೆ.

ಹುಚ್ಚು ನಾಯಿ ಕಡಿತಕ್ಕೆ ಚುಚ್ಚು ಮದ್ದು ತೆಗೆದುಕೊಳ್ಳದಿದ್ದರೆ ಏನಾಗುತ್ತೆ ಅನ್ನೋದಕ್ಕೆ ದಿಗ್ವಿಜಯ್ ಸಿಂಗ್ ಆಗಾಗ ನೀಡೋ ಹೇಳಿಕೆಗಳೇ ಉದಾಹರಣೆ.ಇಂತ ದಿಗ್ಗಿ ನಿನ್ನೆ ಹೇಳಿದ ಮಾತು ನೆನಪಿದೆಯಾ? ‘ಸರ್ಕಾರ ರಾಮ್ದೇವ್ ಅವರಿಗೆ ಹೆದರಿಲ್ಲ, ಒಂದು ವೇಳೆ ಹೆದರಿದ್ದರೆ ರಾಮ್ ದೇವ್ ಅವರನ್ನ ಬಂಧಿಸುತಿತ್ತು!’.ಹಾಗೇ ಹೇಳಿದ ಮಧ್ಯರಾತ್ರಿಯೇ ಬ್ರಿಟಿಷರು ಜಲಿಯನ್ ವಾಲಾಬಾಗ್ಗೆ ನುಗ್ಗಿದ ರೀತಿಯಲ್ಲೆ ನುಗ್ಗಿ ಅದೇ ರಾಮ್ ದೇವ್ರನ್ನ ಬಂಧಿಸಿದ್ದಾರೆ.ಅಂದರೆ ಕಾಂಗ್ರೆಸ್ಸ್ ಸರ್ಕಾರದ ಬೆದರಿದೆ ಅಂತಲೇ ಅರ್ಥವಲ್ಲವಾ?

ಮತ್ತಷ್ಟು ಓದು »

5
ಜೂನ್

ಹನುಮಪ್ಪನೆ ಆಗಿರಲಿ ಇಮಾಂ ಸಾಬಿಯೇ ಆಗಿರಲಿ…!

– ಪವನ್‍ ಪಾರುಪತ್ತೇದಾರ‍್, ಬೆಂಗಳೂರು

ಜನ ಲೋಕಪಾಲ್ ಜಾರಿಗಾಗಿ ಅಣ್ಣಾ ಹಜಾರೆ ಹೋರಾಟ ಮಾಡಿದ್ರು , ಮೇಧಾ ಪಾಟ್ಕರ್ ಹೋರಾಟಗಳನ್ನ ಮಾಡುತ್ತಲೇ ಇರ್ತಾರೆ. ಎರಡು ಗ್ರೇಟ್‍  ಹಗರಣ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸುಬ್ರಮಣ್ಯನ್ ಸ್ವಾಮಿ ಅವರ ಹೋರಾಟವೇ ಕಾರಣ. ಈಗ ತಾನೆ ಮಿಲಿಂದ್ ಸೋಮನ್ ಹಸಿರು ಕ್ರಾಂತಿ ಮಾಡಲು 531 ಕಿ.ಮೀ. ಓಟ ಮುಗಿಸಿದ್ದಾರೆ.ಇನ್ನು ಎಷ್ಟೋ ಹೋರಾಟಗಳು ನಡಿತನೆ ಇರುತ್ತವೆ. ಆದರೆ ,ಈಗ ಬಾಬಾ ರಾಮದೇವ್ ಹೋರಾಟ ಮಾಡಲು ಪ್ರಾರಂಭ ಮಾಡಿದ ತಕ್ಷಣ ಈ  ಮಾಧ್ಯಮಗಳು ಏಕೆ ಅದಕ್ಕೆ ಕೋಮುವಾದದ ಬಣ್ಣ ಹಚ್ಹುತ್ತಿವೆಯೋ ಅ ದೇವರೇ ಬಲ್ಲ ” ಟೈಮ್ಸ್ ನೌ” ಅರ್ನಬ್ ಗೋಸ್ವಾಮಿ ಇರಬಹುದು ಅಥವಾ “ಸಿಎನ್‍ಎನ್‍”  ನ ರಾಜ್ದೀಪ್ ಸರ್ದೇಸಾಯಿ ಇರಬಹುದು, ಶಾರುಕ್ ಖಾನ್, ಸಲ್ಮಾನ್ ಖಾನ್ ,ಶೋಭಾ ಡೆ ಮುಂತಾದ ಸೆಲೆಬ್ರಿಟಿಗಳು ಆಗಿರಬಹುದು, ಬಾಬಾ ರಾಮದೇವ್ ಮಾಡುತ್ತಿರುವುದು ನಾಟಕ ಅವರಿಗೆ ಯೋಗ ಹೇಳಿಕೊಡುವುದು ಬಿಟ್ಟು ಈ ಕೆಲಸ ಯಾಕೆ ಅಂತ ಕೇಳುತಿದ್ದಾರೆ .ಕಾಂಗ್ರೆಸ್ಸ್ ನ ದಿಗ್ವಿಜಯ್ ಸಿಂಗ್ ಅಂತು ಗಂಟೆಗೊಂದು ಹೇಳಿಕೆ ರಾಮದೇವ್ ವಿರುದ್ದ ನೀಡುತಿದ್ದಾರೆ  ಆದರೆ ಅತ್ತ ಅವರ ಪಕ್ಷದ ಹಿರಿಯ ಸಚಿವರೆಲ್ಲ ಬಾಬ ಅವರನ್ನ ಮೀಟ್ ಮಡಿ ಕಾಂಪ್ರಮೈಸ್‍ ಅಗೋ ತಂತ್ರ ಹೆಣೆಯುತಿದ್ದಾರೆ .

ಇಷ್ಟಕ್ಕೂ ಮಾಧ್ಯಮದವರು ಕೋಮುವಾದದ ಬಣ್ಣ ಕಟ್ಟುತ್ತಿರುವುದು ಯಾಕೆ ರಾಮದೇವ್ ಅವರು ಕಾವಿ ವಸ್ತ್ರ ಧರಿಸಿ ಮರದ ಪಾದರಕ್ಷೆ ಧರಿಸಿದ್ದಾರೆ ಅಂತಲೇನು?? ಭ್ರಷ್ಟಾಚಾರದ ವಿರುದ್ದ ಹೋರಾಡಲು ಕಾವಿಯದರೇನು ಕಪ್ಪು ವಸ್ತ್ರವಾದರೇನು ? ಮರದ ಚಪ್ಪಲಿ ಅದರೇನು ADIDAS ಶೂ ಅದರೇನು? ಭಾರತದ ಪ್ರತಿಯೊಬ್ಬ ಪ್ರಜೆಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಹಕ್ಕಿದೆ, ಎಲ್ಲ ಡಾಕುಮೆಂಟ್ ಸರಿ ಇದ್ದರು ಪೋಲಿಸ್ ಗಾಡಿ ಅಡ್ಡ ಹಾಕಿದ ಮೇಲೆ 50 ರೂಪಾಯಿ ಲಂಚ ಕೊಟ್ಟ ಪ್ರತಿಯೊಬ್ಬ ನಾಗರಿಕನಿಗೂ ಅವಾಜ್ ಹಾಕುವ ತಾಕತ್ತಿದೆ. ಈ ಎಲ್ಲ ಭಾರತದ ಪ್ರಜೆಗಳಲ್ಲಿ ಬಾಬಾ ರಾಮದೇವ್ ಸಹ ಒಬ್ಬರು ಎಂದು ಏಕೆ ಮಾಧ್ಯಮದವರು ಬಿಂಬಿಸಬಾರದು? ಮಾಧ್ಯಮಗಳಲ್ಲಿ ಅಪ ಪ್ರಚಾರ ಮಾಡಿ ಹೋರಾಟಕ್ಕೆ ತೊಡಕು ಮಾಡಲು ಕಾಂಗ್ರೆಸ್ ಗೆ ಸಹಾಯ ಮಾಡುವ ತಂತ್ರವಾ? ರಾಜಕೀಯ ವ್ಯಕ್ತಿಗಳಿಗೆ ಹೋರಾಟದಲ್ಲಿ ನಿಷೇಧ ಇದೆ ಆದ್ದರಿಂದ ಈ ಹೋರಾಟದಲ್ಲಿ ಯಾವುದೇ ಪಕ್ಷಗಳಿಗೆ ಲಾಭವಂತು ಇಲ್ಲ.ಈ ಹೋರಾಟದ ಯೆಶಸ್ಸಿನಿಂದ ಲಾಭವಗೋದು ನಾಗರಿಕರಿಗೆ. ಆದರೆ ವಿರೋಧ ಪಕ್ಷದಲ್ಲಿರುವ ಬಿಜೆಪಿ ತನ್ನ ಚುನಾವಣೆಯ ಪ್ರಣಾಳಿಕೆಯಲ್ಲೇ ಕಪ್ಪು ಹಣವನ್ನು ತರುವ ಪ್ರಸ್ತಾವನೆ ಮಾಡಿತ್ತು. ಈಗ ಬೆಂಬಲ ಸೂಚಿಸಿದೆ. ಅದಕ್ಕೆ ಮಾಧ್ಯಮಗಳ ಕಣ್ಣಿಗೆ ಬಾಬಾ ರಾಮದೇವ್ ಬಿಜೆಪಿ ಏಜೆಂಟ್ ಆಗಿದ್ದಾರೆ.

ಮತ್ತಷ್ಟು ಓದು »