ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!
ರಾಘವೇಂದ್ರ ನಾವಡ ಕೆ ಎಸ್
ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!
ಈ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ ನನ್ನ ಲೇಖನಕ್ಕೆ ಆಧಾರವಾಗಿದೆ. ಮೋದಿ ಸರ್ಕಾರದ ಮತ್ತೊ೦ದು ಸಾಧನೆಯನ್ನೇ ಈ ಲೇಖನದಲ್ಲಿ ಬಿ೦ಬಿಸುತ್ತಿದ್ದೇನೆ. ಈ ಹಿ೦ದೆ ನರೇ೦ದ್ರ ಮೋದಿಯವರ ಬಗ್ಗೆ ಇಷ್ಟಕ್ಕೂನರೇ೦ದ್ರ ಮೋದಿ ಮಾಡಿರುವ ತಪ್ಪಾದರೂ ಏನು? ಎ೦ಬ ಲೇಖನದಲ್ಲಿ ಗುಜರಾತ್ ಯಶೋಗಾಥೆಯನ್ನು ಸಾದ್ಯ೦ತವಾಗಿ ವಿವರಿಸುವ ಪ್ರಯತ್ನ ಮಾಡಿದೆ.

ಅಮರನಾಥ ಯಾತ್ರೆಯ ಪ್ರಾರಂಭ
ಶ್ರೀಹರ್ಷ ಸಾಲಿಮಠ
ಅಮರನಾಥ ಯಾತ್ರೆ ಮತ್ತೆ ಶುರುವಾಗಿದೆ. ಅಲ್ಲಿ ಇಲ್ಲಿ ರಿಸರ್ಚು ಮಾಡುವವರಿಗಿಂತ ಹೋಗಿಬಂದವನ ಬಾಯಲ್ಲೇ ಕೇಳಿದರೆ ವಿವರವಾದ ಐಡಿಯಾ ಸಿಗುತ್ತದೆ! ವಾಟ್ ಎನ್ ಐಡಿಯಾ ಸರ್ ಜಿ!
ಅಮರನಾಥಕ್ಕೆ ಹೋಗುವವರು ಮೊದಲು ಪರವಾನಗಿ ಪಡೆಯಬೇಕು. ಪರವಾನಗಿ ಜೆ&ಕೆ (ಜಮ್ಮು ಕಾಶ್ಮೀರ) ಬ್ಯಾಂಕ್ ನಲ್ಲಿ ದೊರೆಯುತ್ತದೆ. ಕರುನಾಡಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬ್ಯಾಂಕಿದೆ. ಬೆಂಗಳೂರಲ್ಲಿ ಅವೆನ್ಯೂ ರಸ್ತೆಯ ಕೊನೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಬಳಿ ಜಮ್ಮು ಕಾಶ್ಮೀರ ಬ್ಯಾಂಕಿದೆ. ದಿನಕ್ಕೆ ಪರಿಮಿತ ಜನರಿಗೆ ಮಾತ್ರ ಪರವಾನಗಿ ಕೊಡುತ್ತಾರೆ. ಇವತ್ತು ಪರವಾನಗಿ ಪಡೆದರೆ ಜುಲೈಗೆ ಸಿಗಬಹುದು. ಪರವಾನಗಿ ಸಿಕ್ಕ ದಿನವೇ ಗುಹೆಯ ಬಳಿ ಹೋಗಬೇಕೆಂದು ಹೇಳುತ್ತಾರಾದರೂ ಅಮರನಾಥದಲ್ಲಿ ಅಷ್ಟು ಕಟ್ಟುನಿಟ್ಟಿನ ನಿಯಮವಿರಲಿಲ್ಲ.
ಯಾತ್ರೆಗೆ ಹೊರಡಲು ಮದ್ಯಮವರ್ಗದವರಿಗೆ ರೈಲು ಒಳ್ಳೆಯ ಮಾರ್ಗ. ಪುಣೆಯಿಂದ ಜಮ್ಮುವಿಗೆ ನೇರ ರೈಲು ಇದೆ. ಇಲ್ಲವೇ ಹುಬ್ಬಳ್ಳಿ ಅಥವಾ ಬೆಂಗಳೂರಿನಿಂದ ಹೊಸದೆಹಲಿ ತಲುಪಿ ಹಳೆ ದೆಹಲಿ ರೇಲ್ವೇ ನಿಲ್ದಾಣದಿಂದ ಜಮ್ಮು ತಲುಪಬಹುದು (ಹೊಸ ದೆಹಲಿ ಯಿಂದ ಹಳೆದೆಹಲಿ ರೇಲ್ವೇ ನಿಲ್ದಾಣಕ್ಕೆ ಹೋಗಬೇಕು). ದೆಹಲಿಯಿಂದ ಜಮ್ಮು ಸುಮಾರು ಹದಿನೈದು ತಾಸುಗಳ ರೈಲು ಪಯಣ. ಸರ್ಕುಲಾರ್ ಟಿಕೆಟ್ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ರಿಯಾಯಿತಿ ಸಿಗುತ್ತದೆ.
ಜಮ್ಮು ಕಾಶ್ಮೀರದಲ್ಲಿ ಆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳನ್ನು ಹೊರತುಪಡಿಸಿ ಬೇರೆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳು ಕೆಲಸ ಮಾಡುವುದಿಲ್ಲ. ಎಲ್ಲ ರಾಜ್ಯದ ಎಲ್ಲ ಪೋಸ್ಟ್ ಪೇಡ್ ನೆಟ್ವರ್ಕ್ಗಳು ಕೆಲಸ ಮಾಡುತ್ತವಾದರೂ ಬಿ ಎಸ್ ಎನ್ ಎಲ್ ಪೋಸ್ಟ್ ಪೇಡ್ ಉತ್ತಮವಾದದ್ದು. ಮತ್ತಷ್ಟು ಓದು 
ಪಾಕಿಸ್ತಾನದ ಭೂಪಟ 17.05.2011ರ ಕನ್ನಡಪ್ರಭದಲ್ಲಿ…
– ಪಿ.ಎಸ್.ರಂಗನಾಥ
ಒಂದು ದೇಶದ ಭೂಪಟ ಅಂದರೆ ಅದರ ಭೌಗೋಳಿಕ ವಿನ್ಯಾಸ ಹಾಗು ಅದರ ಸರಿಹದ್ದು ಗಳನ್ನು ತೋರಿಸುವ ಚಿತ್ರ ಅಂತ ನಮ್ಮೆಲ್ಲರಿಗು ಗೊತ್ತಿರುವ ವಿಷಯ. ಪ್ರತಿಯೊಂದು ದೇಶವೂ ತನ್ನದೇ ಆದ ಒಂದು ನಕ್ಷೆಯನ್ನು ಸಿದ್ದಪಡಿಸಿಕೊಂಡು ಅಂತರಾಷ್ಟ್ರೀಯವಾಗಿ ತನ್ನನ್ನು ಗುರುತಿಸಿಕೊಳ್ಳುತ್ತದೆ. ಸದ್ಯಕ್ಕೆ ನಮ್ಮ ದೇಶಕ್ಕೆ ಬಂದರೆ ನಮ್ಮ ಕೆಲವು ಪ್ರಾಂತ್ಯಗಳು ಪಾಕಿಸ್ತಾನ ಹಾಗು ಚೀನಾದ ವಶದಲ್ಲಿದ್ದರು ನಾವುಗಳು ನಮ್ಮ ದೇಶದ ಗಡಿಯನ್ನು ಹಾಕಿ ನಾವು ಗುರುತಿಸಿಕೊಂಡಿದ್ದೇವೆ ಹಾಗು ಸರಕಾರ ಅದನ್ನು ಒಪ್ಪಿ ಅಧಿಕೃತವಾಗಿ ಮುದ್ರೆ ಹಾಕಿದೆ ಜತೆ ರಾಷ್ಟ್ರದ ಪ್ರಜೆಗಳಿಗೆ ಸಹ ಒಪ್ಪಿಗೆ ಯಾಗಿದೆ. ಯಾವುದೇ ಪುಸ್ತಕಗಳಲ್ಲಿ, ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಹಾಗು ರಾಷ್ಟ್ರದ ಮೂಲೆ ಮೂಲೆ ಗಳಲ್ಲಿ ಮುದ್ರಿತವಾಗಿ ಪ್ರಸಾರ ವಾಗುತ್ತಿರುವುದು POK (Pak Occupied Kashmir) ಹಾಗು ಚೈನಾ ಆಕ್ರಮಿತ ಕೆಲ ಭಾಗವನ್ನು ಒಳಗೊಂಡ ಭೂಪಟ ಮಾತ್ರ. ಆದರೆ ಪಾಕಿಸ್ತಾನ POK ಪ್ರಾಂತ್ಯವನ್ನು ತನ್ನ ಅಧಿಕೃತ ನಕ್ಷೆ ಯಾಗಿ ಉಪಯೋಗಿಸುತ್ತಿದೆ. ಅದನ್ನು ನಮ್ಮ ರಾಷ್ಟ್ರದವರು ಒಪ್ಪುವುದಿಲ್ಲ ಹಾಗು ಆ ಪ್ರಾಂತ್ಯ ಪಾಕಿಸ್ತಾನದ ವಶದಲ್ಲಿದ್ದರು ಸಹ ಅದಕ್ಕೆ ಅಂತರಾಷ್ಟ್ರೀಯ ಮನ್ನಣೆ ಇನ್ನು ದೊರಕಿಲ್ಲ. ಅದು disputed area ಅಂತ ಬೇರೆ ದೇಶದವರು dotted / dashed line ನಲ್ಲಿ ತೋರಿಸುತ್ತಾರೆ.
ನಾನು ಕಳೆದ ೪ ವರ್ಷಗಳಿಂದ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುತಿದ್ದೀನಿ, ಸಾಮನ್ಯವಾಗಿ ಭಾರತದ ಭೂಪಟ, ರಾಷ್ಟ್ರದ ಲಾಂಛನ, ಭಾವುಟ ಗಳನ್ನು ನೋಡಿ ನನಗೆ ಬಹಳ ಖುಶಿ ಯಾಗುತ್ತೆ. ಯಾವುದಾದರು ಕಛೇರಿ ಗಳಲ್ಲಿ ಹಾಕಿರುವ ಪ್ರಪಂಚದ ಭೂಪಟ ದಲ್ಲಿ ನಮ್ಮ ಭಾರತ ದೇಶವನ್ನು ಗಮನಿಸುವುದು ನನ್ನ ಅಭ್ಯಾಸ, ಒಂದು ವೇಳೆ ಭಾರತದ ಭೂಪಟದಲ್ಲಿ ಏನಾದರು ವ್ಯತ್ಯಾಸ ಗಳಿದ್ದರೆ, ಅಲ್ಲಿರುವ ಭಾರತೀಯ ಸಿಬ್ಬಂದಿ ಯವರ ಗಮನಕ್ಕೆ ತರುವ ಪ್ರಯತ್ನ ಮಾಡಿ ಬದಲಾಯಿಸಲು ಯತ್ನಿಸುವೆ. ಕೆಲವರು ನನ್ನ ವಿಚಾರಕ್ಕೆ ಸಹಮತ ವ್ಯಕ್ತ ಪಡಿಸಿ ವಿಷಾದ ವ್ಯಕ್ತ ಪಡಿಸುದ್ದುಂಟು. ಇನ್ನು ಕೆಲವರು, ಇಲ್ಲಿ ಸಿಗೋದೆ ಇದೇ ಮ್ಯಾಪ್ ಇದು ಬಿಟ್ರೆ ಬೇರೆ ವಿಧಿಯಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತಿದ್ದರು, .
ಕನ್ನಡಪ್ರಭ ೧೭.೦೫.೨೦೧೧ ಪುಟ ೯ರಲ್ಲಿ ಪ್ರಕಟವಾಗಿರುವ ಲೇಖನ “ದಾವುದ್ ನ ಮುಗಿಸುವ ಗುಂಡು ಸಿದ್ಧವಾಗಿಲ್ಲವೇ? ರಲ್ಲಿ ಮುದ್ರಿತವಾಗಿರುವ ಪಾಕಿಸ್ತಾನದ ಭೂಪಟ, ನಮ್ಮ ದೇಶದ ಕಾಶ್ಮಿರದ ಒಂದು ಭಾಗವನ್ನು ಅದರಲ್ಲಿ ಒಳಗೊಂಡಿದೆ.
ಗಜಮುಖ ಮೃದ್ವಸ್ತಿ ಅಥವಾ ಎಲಿಫೆಂಟ್ ಶಾರ್ಕ್ ಮೀನು
– ಆಜಾದ್
ನಂಬಿಕೆ ಎಂಬ ಹುತ್ತದೊಳಗೆ “ಕೂರಿಯರ್” ಸಂಸ್ಥೆಗಳೆಂಬ ಹಾವುಗಳು.
-ರವಿ ಮೂರ್ನಾಡು
ವ್ಯವಸ್ಥೆ ಹೇಗಿರುತ್ತೆ ಅಂದರೆ,ಸತ್ತವನನ್ನು ಹುಡುಕಿಕೊಂಡು ಪತ್ರ ಬರುತ್ತೆ.ಮುಂದೆ ಪ್ರೇತಾತ್ಮಗಳೂ ಪತ್ರ ಓದುವ ಕಾಲ ಬಂದಾಗ ಕೂರಿಯರ್ ಮತ್ತು ಅಂಚೆ ಇಲಾಖೆಗಳಲ್ಲಿ ಪತ್ರ ಕಳುಹಿಸಲು” ಮುಂಗಡ ಬುಕ್ಕಿಂಗ್” ವ್ಯವಸ್ಥೆ ಬರಬಹುದೇನೋ. 2000 ನೇ ಇಸವಿಗೆ ಕಳುಹಿಸಿದ ಪತ್ರ ಹತ್ತು ವರ್ಷಗಳ ನಂತರ 2010 ರಲ್ಲಿ ಮನೆ ಬಾಗಿಲಿನಲ್ಲಿ ಬಂದು ನಗುತ್ತಿರುತ್ತದೆ. ಹಾಗಿದೆ ನಮ್ಮ ಪತ್ರ ವಿಲೇವಾರಿಯ ಸಿನೇಮಾ ಕಾರ್ಯಕ್ರಮ…! ನಗು ಬರಬಹುದು..ಜೊತೆಗೆ ಮಡುಗಟ್ತುತ್ತವೆ ವಿಷಾಧದ ಮೋಡ..!
ಇದಕ್ಕೆ ಭಾರತೀಯ ಅಂಚೆ ಇಲಾಖೆಯಲ್ಲಿ ಬೇಕಾದಷ್ಟು ಪಟ್ಟಿಗಳು ಸಿಗುತ್ತವೆ.ಹಿಂದಿನ ಕಾಲದಲ್ಲಿ ಹೀಗೆ ಇಂತಹ ಸರಕಾರಿ ಸಾಮ್ಯದ ಇಲಾಖೆಗಳು ಪತ್ರಗಳ ಬಟಾವಾಡೆ ಮಾಡುವಾಗ ಬೆಳಕೇ ಇಲ್ಲದ ಗ್ರಾಮಗಳಲ್ಲಿ ಅಂಚೆ ಕಚೇರಿಗಳನ್ನು ತೆರೆದು ಸಾರ್ವಜನಿಕರಿಗೆ ಒಂದು ” ಲಿಂಕ್” ಕೊಟ್ಟಿತ್ತು. ಅಂಚೆ ಇಲಾಖೆಯಲ್ಲಿ ಕೆಲವು ದೌರ್ಬಲ್ಯಗಳಿವೆ. ಅದನ್ನು ಸದುಪಯೋಗಿಸಿಕೊಂಡವರು ” ಕೂರಿಯರ್” ಎಂಬ ಜಗತ್ತನ್ನು ತೆರೆದ ಈ ಹೊಟ್ಟೆಬಾಕ ಖಾಸಗಿ ಸಂಸ್ಥೆಗಳು.
ಕೂರಿಯರ್ ಸಂಸ್ಥೆಗಳ ಕಣ್ಣು ಕೆಂಪಾಗಬಹುದು.ಯಾಕೆ ಹೀಗೆ ಬರೀತಾ ಇದ್ದಾರೆ ಅಂತ, ಅದು ಒಂದು ಮಗುವಿನ ಹುಟ್ಟುಹಬ್ಬದ “ಕೂರಿಯರ್ ಕತೆ “.ಆ ಹಬ್ಬದ ಸುಸಂದರ್ಭವನ್ನು ಕತ್ತಲೆಯಲ್ಲಿ ಮುಳುಗಿಸಿದ್ದು ಈ ಕೂರಿಯರ್ ಎಂಬ ಬಹು ಸಂಖ್ಯಾತ ಸಂಸ್ಥೆಗಳು.ಇಂದಿನ ವ್ಯವಹಾರಿಕ ಪ್ರಪಂಚದಲ್ಲಿ ಎಷ್ಟೆಲ್ಲಾ ಕೂರಿಯರ್ ಸಂಸ್ಥೆಗಳಿವೆಯೂ ಅಲ್ಲೆಲ್ಲಾ ಇಂತಹ ಸಿನೇಮಾ ಮಾದರಿಯ ಉದಾಹರಣೆಗಳು ಸಿಗುತ್ತವೆ.ಸಿಗಬೇಕಾಗಿದ್ದು ಯಾರಿಗೂ, ಸಿಗೋದು ಯಾರಿಗೂ .. ಹುಚ್ಚರ ಕೂರಿಯರ್ ಸಂತೆಯಲಿ ಅಚಾನಕ್ ಅದೃಷ್ಟದ ಪಾರ್ಸೆಲ್ ಸಿಕ್ಕಿದವನಿಗೆ ಹಬ್ಬ…! ಮತ್ತಷ್ಟು ಓದು 
ನವರಸಪುರ ಉತ್ಸವ ಹಾಗೂ ಕನ್ನಡ ಮತ್ತು ಸಂಸ್ಕೃತಿ.!
ಮಹೇಶ.ಎಮ್.ಆರ್
ಕಳೆದ ಕೆಲವು ವರುಶಗಳಿಂದ ಸ್ಥಗಿತಗೊಂಡಿದ್ದ ನವರಸಪುರ ಉತ್ಸವ ಮತ್ತೆ ಈ ವರುಶ ಹಮ್ಮಿಕೊಳ್ಳಲಾಗಿದ್ದು ಸಂತೋಶದ ವಿಶಯ ಮತ್ತು ಅದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ವಿಜಾಪುರದ ಇತಿಹಾಸ, ಸಂಸ್ಕೃತಿ, ಕಲೆ, ಸಾಹಿತ್ಯ, ಪರಂಪರೆಯನ್ನು ಹೊರಜಗತ್ತಿಗೆ ತೋರಿಸುವಲ್ಲಿ, ಆ ಮೂಲಕ ನಾಡಿನ ಜನರಲ್ಲಿ ತಮ್ಮೂರಿನ ಬಗ್ಗೆ ಹೆಮ್ಮೆ ಮೂಡಿ, ನಾಡು-ನುಡಿಯ ಚೌಕಟ್ಟಿನಲ್ಲಿ ಅವರನ್ನು ಒಗ್ಗೂಡಿಸಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ. ಈ ಬಾಗದ ಸ್ಥಳೀಯ ಕಲಾವಿದರಿಗೂ ತಮ್ಮ ಪ್ರತಿಬೆಯನ್ನು ಪರಿಚಯಿಸಲು ಇದೊಂದು ಒಳ್ಳೆಯ ವೇದಿಕೆ.

ಕಲೆಯ ಉಳಿವಿಗೆ ಕಲಾವಿದನೂ ಜವಾಬ್ದಾರ!
-ಅರೆಹೊಳೆ ಸದಾಶಿವರಾವ್
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಶ್ರೀಕುಂಬ್ಳೆ ಸುಂದರ ರಾವ್ ಅವರು ಮಾತಾಡುತ್ತಾ ಯಕ್ಷಗಾನದ ಉಳಿವಿಗೆ ನಾವೆಲ್ಲರೂ ನಿರ್ವಹಿಸಬೇಕಾದ ಜವಾಬ್ದಾರಿಯ ಬಗ್ಗೆ ಹೇಳುತ್ತಿದ್ದರು. ಮುಖ್ಯವಾಗಿ ಇಂದು ಮಂದಾರ್ತಿ, ಕಟೀಲುಗಳಂತಹ ಹರಕೆಯ ಆಟಗಳ ಅತಿಯಾದ ಬೇಡಿಕೆ ಇರುವ ಮೇಳಗಳು, ತಮ್ಮ ‘ವೀಳ್ಯ’ದಲ್ಲಿ ಕೇವಲ ಐದು ನೂರು ರೂಪಾಯಿಗಳನ್ನು ಹೆಚ್ಚುವರಿಯಾಗಿ ಸೇವೆ ಮಾಡಿಸುವವರಿಂದ ಪಡೆದು, ಅದನ್ನು ಮಕ್ಕಳಿಗೆ ಯಕ್ಷಶಿಕ್ಷಣಕ್ಕೆ ಬಳಸಬಹುದು ಎಂಬ ಸಲಹೆಯನ್ನು ಅವರಿತ್ತರು. ಇದು ನಿಜಕ್ಕೂ ಸ್ವಾಗತಾರ್ಹ ಸಲಹೆ ಮತ್ತು ಸಂಬಂಧಿಸಿದವರು ಈ ಬಗ್ಗೆ ಹೆಜ್ಜೆ ಇಡಬಹುದು ಎಂದು ಆಶಿಸೋಣ.
ಇಂದು ಯಕ್ಷಗಾನವನ್ನು ನೋಡುವವರ ಸಂಖ್ಯೆ ಮತ್ತು ಆ ಕಲೆಗೆ ಸಿಗುತ್ತಿರುವ ಗೌರವ ಕಡಿಮೆಯಾಗಿದೆ ಎಂಬ ಮಾತೂ ಕೇಳಿಬರುತ್ತದೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕನಷ್ಟೇ ಕಲಾವಿದನೂ ಜವಾಬ್ದಾರಿಯನ್ನು ಅರಿತು ನಡೆಯುವ ಅನಿವಾರ್ಯತೆ ಇದೆ. ಎಲ್ಲೆಡೆಯಲ್ಲಿಯೂ ಪ್ರೇಕ್ಷಕ ಬದಲಾಗಬೇಕು ಎಂಬ ಮಾತುಗಳೇ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಹಾಗಾದರೆ ಕಲಾವಿದ ಎಷ್ಟರ ಮಟ್ಟಿಗೂ ಜವಾಬ್ದಾರನೇ ಅಲ್ಲವೇ ಎಂಬ ಪ್ರಶ್ನೆ ಏಳುವುದೂ ಸಹಜ. ನನ್ನ ಒಂದೆರಡು ಅನುಭವಗಳನ್ನು ಇಲ್ಲಿ ವಿವರಿಸಬೇಕೆನ್ನುತ್ತದೆ.
ಇತ್ತೀಚೆಗೆ ನಾನು ನನ್ನ ಊರಿನಲ್ಲಿ ಒಂದು ವಿಶಿಷ್ಠ ಮತ್ತು ಕಲಾತ್ಮಕ ಯಕ್ಷಗಾನ ಪ್ರದರ್ಶನವೊಂದನ್ನು ಏರ್ಪಡಿಸುವ ಯೋಜನೆ ಹಾಕಿಕೊಂಡೆ. ಅದರಂತೆ ಕೆಲವು ಖ್ಯಾತ ಕಲಾವಿದರನ್ನು ಸಂಪರ್ಕಿಸಿ, ಯಕ್ಷಗಾನದ ವ್ಯವಸ್ಥೆ ಮಾಡುವಂತೆ ಒಬ್ಬ ಸಂಘಟಕನಲ್ಲಿ ಕೇಳಿಕೊಂಡೆ. ಅದರಂತೆ ಅವರು ಕೆಲವರನ್ನು ಸಂಪರ್ಕಿಸಿ ದಿನಾಂಕ, ಸ್ಥಳ ಎಲ್ಲಾ ತಿಳಿಸಿ, ನಿಗದಿ ಪಡಿಸಿಕೊಂಡು, ಕೊನೆಗೂ ಭಾಗವಹಿಸುವ ಕಲಾವಿದರ ಪಟ್ಟಿ ನೀಡಿದರು. ನಾವದನ್ನು ಹಾಗೆಯೇ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಿಸಿದೆವು, ಪ್ರಚಾರವನ್ನೂ ನೀಡಿದೆವು. ಕೊನೆಗೆ ಪ್ರದರ್ಶನಕ್ಕೆ ಇನ್ನೆರಡು ದಿನ ಇದೆ ಎನ್ನುವಾಗ, ಒಬ್ಬೊಬ್ಬರೇ ಕಲಾವಿದರು ತಮಗೆ ಬgಲಾಗುವುದಿಲ್ಲ ಎಂದರು. ಒಬ್ಬ ಕಲಾವಿದನಂತೂ, ಪ್ರದರ್ಶನದ ದಿನ ಮಧ್ಯಾಹ್ನ ಕೇವಲ ಒಂದು ಎಸ್ಎಂಎಸ್ ಕಳಿಸಿ ತನಗೆ ಬರಲಾಗದು ಎಂದು, ಮರಳಿ ಕರೆ ಮಾಡಿದರೆ ಕರೆಯನ್ನೇ ಸ್ವೀಕರಿಸಲಿಲ್ಲ. ಮತ್ತೊಬ್ಬರು ರಾತ್ರಿ ಹನ್ನೆರಡರ ನಂತರ ತಮಗಿರುವ ವೇಷಕ್ಕೆ ಸರಿಯಾಗಿ ಹತ್ತು ಘಂಟೆಗೆ ಬರುತ್ತೇನೆ ಎಂದವರೂ, ಹತ್ತರ ನಂತರ ಫೋನಿಗೇ ಸಿಗಲಿಲ್ಲ!. ಕೊನೆಗೂ ಸಂಘಟಿಸಿದವರೂ ಖುದ್ದು ಕಲಾವಿದರಾಗಿದ್ದರಿಂದ ಎರಡೆರಡು ವೇಷಗಳನ್ನು ಅವರೇ ಮಾಡಿ ಪ್ರದರ್ಶನ ಪೂರೈಸಿದರು!. ಆಮಂತ್ರಣ ಪತ್ರಿಕೆ ನೋಡಿ ಬಂದವರೆಲ್ಲರೂ ಜನರನ್ನು ಸೇರಿಸಲು ಇದು ಸಂಘಟಕರು (ನಾನು) ಮಾಡಿದ ಮೋಸ ಎಂಬಂತೆ ಬೈದು ಮರಳಿದರು. ಸದ್ಯಕ್ಕೆ ಇದು ಬಯಲಾಟವಾಗಿದ್ದರಿಂದ ನಾನು ಉಳಿದುಕೊಂಡೆ. ಮತ್ತಷ್ಟು ಓದು 
ನಿನ್ನ ಕೈ ಹಿಡಿದು…
-ಹರೀಶ್ ಅತ್ರೇಯ
ಚರಿತ್ರೆಯಲ್ಲಿ ಅನೇಕ ಪ್ರೇಮ ಕಥೆಗಳು ಬ೦ದು ಹೋಗಿವೆ. ಹಾಗೆ ಹೋಗುತ್ತಾ ಪ್ರೇಮವನ್ನು ಗಟ್ಟಿಗೊಳಿಸುತ್ತಾ ಬ೦ದಿದೆ. ಸಣ್ಣದೊ೦ದು ನಗುವಿಗೆ, ತುದಿಗಣ್ಣಿನ ನೋಟಕ್ಕೆ, ಚ೦ದನೆಯ ಮೈ ಮಾಟಕ್ಕೆ ಸೋಲುವ ಮನಸ್ಸಾಗಲೀ ಯೌವ್ವನ ಬಿಸಿ ಪ್ರೇಮವಾಗಲಿ ನಮ್ಮದಾಗಿರಲಿಲ್ಲ. ಅದೊ೦ದು ಪ್ರಬುದ್ಧ ಸಮ್ಮಿಲನ, ಸಮಾನ ಮನಸ್ಸಿನ ಸ೦ಕೀರ್ತನ. ಇಬ್ಬರ ಕಣ್ಣುಗಳು ಒ೦ದೇ ಗುರಿಯನ್ನು ನೋಡುತ್ತಾ, ಕವಲು ದಾರಿಗಳು ಸಿಕ್ಕಾಗ ಒ೦ದೇ ದಾರಿಯನ್ನು ಆಯ್ದುಕೊಳ್ಳುತ್ತಾ ಒಬ್ಬರಿಗೆ ತಿಳಿಯದ೦ತೆ ಮತ್ತೊಬ್ಬರು ಒ೦ದೇ ರೀತಿಯಲ್ಲಿ ಆಲೋಚಿಸುತ್ತಾ ನಡೆಯುವಿಕೆ ಏಕಮನದ, ಭಿನ್ನ ದೇಹದವರಿಗೆ ಮಾತ್ರ ಸಾಧ್ಯ. ಯಾವುದೋ ಒ೦ದು ವಿಷಯದಲ್ಲಿ ಭಿನ್ನ ರಾಗ ಹಾಡಿದರೂ ಕಡೆಗೆ ಅದು ಇಬ್ಬರಿಗೂ ಸಮ್ಮತದ ರೀತಿಯಲ್ಲಿ ಯಾರ ವೈಚಾರಿಕತೆಗೂ ಧಕ್ಕೆ ತರದೆ ಬದುಕುಳಿಯುವುದಿದೆಯಲ್ಲ ಅದೊ೦ದು ಸೋಜಿಗ ಮತ್ತು ಪ್ರೇಮ. ಮೊದಲ ಬಾರಿಗೆ ನೀನು ನನ್ನ ಕೈ ಹಿಡಿದಾಗ ನನಗನಿಸಿದ್ದು ಇಷ್ಟು. ಅದೊ೦ದು ನವಿರಾದ ಚಿತ್ರ ನನ್ನ ಮನಸ್ಸಿನಲ್ಲಿ ಅಚ್ಚೊತ್ತಿದೆ. ಇಬ್ಬರೂ ನಮ್ಮ ಮೆಚ್ಚಿನ ವಿಷಯದ ಬಗ್ಗೆ ಗಾಢವಾಗಿ ಯೋಚಿಸುತ್ತಾ ನಡೆಯುತ್ತಿದ್ದಗ ಫಕ್ಕನೆ ಬ೦ದ ಬಸ್ಸೊ೦ದು ನಿನ್ನ ಸಮೀಪದಲ್ಲೇ ಹಾದು ಹೋಯ್ತಲ್ಲ! ಗಾಬರಿಯಿ೦ದ ನೀನು ನನ್ನ ಕೈ ಹಿಡಿದೆ ಸಿನಿಮಾಗಳಲ್ಲಿ ನಡೆದ೦ತೆ ನನ್ನ ಮೈಯಲ್ಲಿ ವಿದ್ಯುತ್ಪ್ರವಾಹವೇನೂ ಆಗದಿದ್ದರೂ ಹಿತವಾದ ಪ್ರೇಮದ, ರಕ್ಷಣಾತ್ಮಕ, ಮಮತೆಯ ಭಾವವನ್ನು ಆ ಹಿಡಿತದಲ್ಲಿ ಕ೦ಡೆ. ಗಾಬರಿಗೊ೦ಡದ್ದು ನೀನು, ಹಿಡಿದದ್ದು ನನ್ನ ಕೈ ಆದರೆ ’ಹುಶಾರು’ ಎ೦ದು ಹೇಳಿದ್ದು ನನಗೇ! ನಕ್ಕುಬಿಟ್ಟಿದ್ದೆ. ರಸ್ತೆ ಕಡೆಗೆ ನಿನ್ನನ್ನು ಬಿಟ್ಟದ್ದು ನನ್ನ ತಪ್ಪು ಮಾತನಾಡುತ್ತಾ ನೀನು ರಸ್ತೆಯ ಮಧ್ಯಭಾಗಕ್ಕೆ ನಡೆದುಬಿಡುತ್ತೀಯ ಎ೦ದು ತಿಳಿದರೂ ಯಾವುದೋ ಜ್ಞಾನದಲ್ಲಿ ನಿನ್ನನ್ನು ರಸ್ತೆ ಕಡೆಗೆ ಬಿಟ್ಟುಬಿಟ್ಟಿದ್ದೆ. ಹಾಗೆ ಕೈ ಹಿಡಿದವಳು ಮತ್ತೆ ಹಿಡಿಯುತ್ತಿದ್ದೆ ಅದರಲ್ಲಿ ಪ್ರೇಮವಿತ್ತು. ಆದರೆ ನನ್ನಲ್ಲಿ ಭಯವಿತ್ತು. ಮತ್ತಷ್ಟು ಓದು 
ನಮ್ ದ್ಯಾವೇಗೌಡ್ರು
ವಿಜಯ್ ಹೆರಗು










