ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

18
ಮೇ

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!

– ರಾಘವೇಂದ್ರ ನಾವಡ

ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ  ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ  ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು  ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!

ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು »

18
ಮೇ

ಬೆಂಗಳೂರಿನ ಕೆಲವು ವಿಶೇಷ ಸ್ಥಳನಾಮಗಳು ಬದಲಾಗುವ ಪ್ರವೃತ್ತಿ

ಡಾ|| ಬಿ.ಆರ್. ಸತ್ಯನಾರಾಯಣ 

ಮೊನ್ನೆ ಅಂದರೆ ಏಪ್ರಿಲ್ 12 ಮತ್ತು 13ನೆಯ ತಾರೀಖುಗಳಂದು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ‘ಬೆಂಗಳೂರು ನಗರ ಇತಿಹಾಸ ಮತ್ತು ಪುರಾತತ್ವ’ ಕುರಿತಂತೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆದಿತ್ತು. ನಾನು 13ರಂದು ಮಂಡಿಸಿದ ‘ಬೆಂಗಳೂರಿನ ಕೆಲವು ವಿಶೇಷ ಸ್ಥಳನಾಮಗಳು ಬದಲಾಗುವ ಪ್ರವೃತ್ತಿ’ ಎಂಬ ಲೇಖನದ ಪೂರ್ಣಪಾಠ ಇಲ್ಲಿದೆ. 14.4.11ರ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಪ್ರಬಂಧದ ಬಗ್ಗೆ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಅದರ ಚಿತ್ರವನ್ನು ಇಲ್ಲಿ ಕಾಣಿಸಿರುತ್ತೇನೆ.

ಬೆಂಗಳೂರಿನ ಸ್ಥಳನಾಮಗಳ ಬಗ್ಗೆ ಈಗಾಗಲೇ ಹಲವಾರು ವಿದ್ವಾಂಸರು ಬೆಳಕು ಚೆಲ್ಲಿದ್ದಾರೆ. ’ಬೆಂಗಳೂರು’ ಎಂಬ ಸ್ಥಳನಾಮದ ಬಗೆಗೆ ನಡೆದ ಅಧ್ಯಯನಗಳು ಅಸಂಖ್ಯಾತ. ಬೆಂಗಳೂರು ಪದದ ಪ್ರಾಚೀನರೂಪಗಳು ಯಾವ ಶಾಸನದಲ್ಲಾಗಲೀ, ಸಾಹಿತ್ಯಕೃತಿಯಲ್ಲಾಗಲೀ ಉಲ್ಲೇಖಗೊಂಡಿಲ್ಲ. ಅತ್ಯಂತ ಪ್ರಾಚೀನ ಉಲ್ಲೇಖವಾಗಿ ದೊರೆತಿರುವ ಬೇಗೂರಿನ ಶಾಸನದಲ್ಲಿಯೂ ’ಬೆಂಗಳೂರು’ ಎಂದು ಸ್ಪಷ್ಟವಾಗಿಯೇ ಇದೆ. ಬೆಂದಕಾಳು ಊರು, ಬೆಂದಕಾಡು ಊರು, ಬೆಂಗಾಡು ಊರು, ಬೆಣಚುಕಲ್ಲು ಊರು… ಇತ್ಯಾದಿ ಹಲವಾರು ನಿಷ್ಪತ್ತಿಗಳಲ್ಲಿ, ಊಹೆಗಳಲ್ಲಿ ಯಾವುದನ್ನು ಒಪ್ಪಿಕೊಳ್ಳಬೇಕು ಬಿಡಬೇಕು ಎಂಬುದೇ ಬಹುದೊಡ್ಡ ಸಮಸ್ಯೆಂಇಇಗಿದೆ.
ಸಾಮಾನ್ಯವಾದ ಐತಿಹಾಸಿಕ ಆಕರಗಳನ್ನು ಬಿಟ್ಟು ಸ್ವಲ್ಪ ಭಿನ್ನವಾಗಿ ನೋಡಲೆತ್ನಿಸಿದಾಗ ದೊರೆತಿದ್ದು, ಕೆನೆತ್ ಅಂಡರ್‌ಸನ್ ಉಲ್ಲೇಖಿಸಿರುವ ವಿಷಯ. ’ಇಲ್ಲಿಯ ಜನ ಹೆಚ್ಚಾಗಿ ತಿನ್ನುವ, ರುಚಿಕಟ್ಟಾದ ಹಾಗೂ ತರಾವರಿ ಕಾಳುಗಳಿಂದಲೇ ಈ ಹೆಸರು ಬಂದಿದೆಯೆಂದು ಇಲ್ಲಿನ ಜನ ನಂಬಿದ್ದಾರೆ’ ಎಂಬುದನ್ನು ಅಂಡರ್‌ಸನ್ ದಾಖಲಿಸಿದ್ದಾನೆ. ಬೇಯಿಸಿ ತಿನ್ನಬಹುದಾದ ಕಾಳುಗಳ ದೆಸೆಯಿಂದಿಲೇ ಬೆಂಗಳೂರು ಹೆಸರು ರೂಪಗೊಂಡಿರುವ ಸಾಧ್ಯತೆಯೇ ಹೆಚ್ಚು ಎಂದು ಹೇಳಬಹುದು, ಅಷ್ಟೆ.
ಬೃಹದಾಕಾರವಾಗಿ ಹಾಗೂ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸ್ಥಳನಾಮಗಳು ನೆಲೆಗೊಳ್ಳುವುದು, ಬದಲಾಗುವುದು, ಸಂಕ್ಷಿಪ್ತಗೊಳ್ಳುವ ಪ್ರಕ್ರಿಯೆಯೇ ವಿಶೇಷವಾದುದು. ಮೊದಲ ಹಂತದಲ್ಲಿ ಕನ್ನಡ ಅಥವಾ ದ್ರಾವಿಡಮೂಲದಲ್ಲಿದ್ದ ಹೆಸರುಗಳು, ಸಂಸ್ಕೃತೀಕರಣಗುಳ್ಳುತ್ತಿದ್ದವು. ನಂತರದಲ್ಲಿ ಕನ್ನಡ ಹಾಗೂ ಸಂಸ್ಕೃತ ಭಾಷಾಮೂಲದಿಂದ ಇಂಗ್ಲಿಷ್ ಭಾಷೆಗೆ, ಇಂಗ್ಲಿಷ್ ಭಾಷೆಯಿಂದ ಇಂಗ್ಲಿಷ್ ಭಾಷೆಯ ಸಂಕ್ಷಿಪ್ತರೂಪದೆಡೆಗೆ ಬದಲಾಗಿರುವುದನ್ನು ಕಾಣಬಹುದು. ಮತ್ತೊಂದು ಬೆಳವಣಿಗೆಯೆಂದರೆ ಇಂಗ್ಲಿಷ್ ಭಾಷೆಯಿಂದ ಮತ್ತೆ ಭಾರತೀಯ ಹೆಸರುಗಳನ್ನು ಪಡೆದಿರುವುದನ್ನು ನೋಡಬಹುದು. ಭಾರತೀಯ ಹೆಸರುಗಳನ್ನು ಸಂಕ್ಷಿಪ್ತಗೊಳಿಸಿರುವುದೂ ಉಂಟು. ಕೆಲವು ಉದಾಹರಣೆಗಳ ಮೂಲಕ ಈ ಬದಲಾಗುವ ಪ್ರವೃತ್ತಿಯನ್ನು ಹೆಚ್ಚು ಮನನ ಮಾಡಿಕೊಳ್ಳಬಹುದು. ಮತ್ತಷ್ಟು ಓದು »
17
ಮೇ

ಅ”ರಾಜಕೀಯ”

– ವಿಜಯ ಹೆರಗು

     ರ್ನಾಟಕದ ಮಹಾಜನತೆಯ ದೌರ್ಭಾಗ್ಯಕ್ಕೆ ಅಂತ್ಯವೇ ಇಲ್ಲವೇನೋ ಎನ್ನಿಸುತ್ತಿದೆ. ಕರ್ನಾಟಕದ ರಾಜಕೀಯ ವಿದ್ಯಮಾನ ದಿನಕ್ಕೊಂದು, ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಿದೆ. ರಾಜಕೀಯ ರಂಗದ ಅನಿಶ್ಚಿತತೆ, ಅರಾಜಕತೆ ಮತ್ತೊಮ್ಮೆ ತನ್ನ ವಿರಾಟ್ ರೂಪದ ಪ್ರದರ್ಶನ ನೀಡಿದೆ. ಹದಿನಾರು ಶಾಸಕರ ಅನರ್ಹತೆಯ ಆದೇಶವನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದ ಬೆನ್ನಲ್ಲೇ ಆಡಳಿತ ಪಕ್ಷ, ವಿರೋಧ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ.

 ಅತ್ತ ಬಿಜೆಪಿ ಹೈಕಮಾಂಡಿನ ಹಿರಿತಲೆಗಳು ಹನ್ನೊಂದು ಮಂದಿ ಬಂಡಾಯ ಶಾಸಕರಲ್ಲಿ ಹತ್ತು ಮಂದಿಯನ್ನು ಕರೆದು ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಯಡಿಯೂರಪ್ಪನವರ ನಾಯಕತ್ವವನ್ನು ಪ್ರಶ್ನಿಸಿ ಬಂಡೆದಿದ್ದರೋ ಅದೇ ಯಡಿಯೂರಪ್ಪನ ಮುಂದೆ ಮಂಡಿಯೂರಿ ಶರಣಾಗಿ ನೀವೇ ನಮ್ಮ ನಾಯಕ ಎನ್ನುತ್ತಾ ತಲೆಬಾಗಿ ನಿಂತ ಇವರ ಭಂಗಿ ಅಸಹ್ಯವನ್ನುಂಟು ಮಾಡುತ್ತದೆ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವಲ್ಲ-ಶಾಶ್ವತ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ.
                            ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಖುರ್ಚಿ ಉಳಿಸಿಕೊಳ್ಳುವ ಸಲುವಾಗಿ ಹೊರಾದುವುದನ್ನೇ ಆಡಳಿತ ಎಂದು ತಿಳಿದಂತಿದೆ. ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ತಮ್ಮದೇ ಪಕ್ಷದ ನಾಯಕರಿಂದ, ಹೊರಗಿನವರಿಂದ ಪ್ರಬಲ ಪ್ರತಿರೋಧ ಎದುರಿಸುತ್ತಿದ್ದರೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳುವ ಸಲುವಾಗಿ ದಿನಕ್ಕೊಂದು ಪಟ್ಟು ಹಾಕುತ್ತಿದ್ದಾರೆ. 
17
ಮೇ

ನಾನು ಫೋಟೊ ತೆಗೆಯುವ ಆಸೆ-ಭಾಗ ೨

-ಶಿವು.ಕೆ

ಮೊದಲ ಭಾಗದಲ್ಲಿ ನಮ್ಮ ಕಣ್ಣಿಗೆ ಕಾಣುವ ಚಿತ್ರಗಳಿಗೆ ಮೊದಲಿಗೆ ಕೈ ಬೆರಳುಗಳಿಂದ, ನಂತರ ಕ್ಯಾಮೆರದ ವ್ಯೂ ಪೈಂಡರಿನ ಮೂಲಕ ಹೇಗೆ ಚೌಕಟ್ಟುಗಳನ್ನು ಹಾಕಬಹುದು?  ಆ ಮೂಲಕ ಕಂಡ ಪುಟ್ಟ ಚಿತ್ರಗಳನ್ನು ನೋಡುತ್ತಲೇ ಮನಸ್ಸಿಗೆ ಲಿಂಕ್ ಮಾಡಿಕೊಂಡು ಆನಂದಿಸಬಹುದು, ಹಾಗೆ ಕ್ಲಿಕ್ಕಿಸಿದ ಫೋಟೊವನ್ನು ನೂರಾರು ಜನರು ನೋಡುವುದರ ಮೂಲಕ ಅವರಿಗೂ ನಿಮ್ಮ ಮನಸ್ಸಿನೊಳಗೆ ಉಂಟಾದ ಸಂತೋಷವನ್ನು ಹಂಚಿಕೊಳ್ಳಬಹುದು ಎನ್ನುವುದನ್ನು ವಿವರಿಸಿದ್ದೆ.

ಈ ಮೂಲಕ ನೀವು ಹೊರಗಿನವರ ಕಣ್ಣಿಗೆ ಮತ್ತು ನಿಮ್ಮ ಮಟ್ಟಿಗೆ ಛಾಯಾಗ್ರಾಹಕರಾಗಿಬಿಟ್ಟಿದ್ದೀರಿ!  ಎಷ್ಟು ಖುಷಿಯ ವಿಚಾರ ಅಲ್ವಾ!  ಇದೇ ಖುಷಿಯಲ್ಲಿ ನಾವು ಮುಂದೇನು ಮಾಡುತ್ತೇವೆ ಗೊತ್ತಾ? ಗೆಳೆಯರು, ಮನೆಯವರು, ಹೊರಗಿನವರು ನನ್ನನ್ನು ಛಾಯಾಗ್ರಹಕನೆಂದು ಗುರುತಿಸಿದ್ದಾರೆ ಎಂದುಕೊಂಡು ನಿಮಗರಿವಿಲ್ಲದಂತೆ ನಿಮ್ಮ ಉತ್ಸಾಹ ನೂರ್ಮಡಿಯಾಗಿ ಕಣ್ಣಿಗೆ ಕಂಡಿದ್ದನ್ನೆಲ್ಲಾ ಕ್ಲಿಕ್ಕಿಸತೊಡಗುತ್ತೀರಿ…ಮತ್ತೆ ನೀವು ಕಲಿತ ಚೌಕಟ್ಟು ಹಾಕುವುದು ನಿಯಮವನ್ನು ಚೆನ್ನಾಗಿಯೇ ಪಾಲಿಸಿ ಸಿಕ್ಕಾ ಪಟ್ಟೆ ಫೋಟೊ ತೆಗೆಯಲಾರಂಭಿಸುತ್ತೀರಿ. ಮತ್ತಷ್ಟು ಓದು »

17
ಮೇ

ಮೀಡಿಯಾದ ಅಜ್ಜಿ ಕಥೆಯೂ,ಬುಷ್-ಬಿನ್ ಲಾಡೆನ್ ಎ೦ಬ ಟೆರೆರಿಸ್ಟ್ ಗಳೂ…

(ಒಸಾಮ ಸತ್ತ ಮೇಲೆ,ಎಲ್ಲ ಅಮೇರಿಕಾವನ್ನು ಬಯ್ಯುತ್ತಲೋ,ಒಸಾಮನನ್ನು ಹೊಗಳುತ್ತಲೋ ಬರೆಯುವಾಗ, ಶಿಹಾ ಅವ್ರ ವಿಭಿನ್ನ ಯೋಚನಾ ದಾಟಿಯ ಈ ಬರಹ ನಿಲುಮೆಯ ಓದುಗರಿಗಾಗಿ)

– ಶಿಹಾ ಉಳ್ಳಾಲ್

ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಹತ್ಯೆಯ ಸುದ್ಧಿಯನ್ನು ಜಗತ್ತಿನ ವಿವಿಧ ಚಾನೆಲುಗಳು ವಿವಿಧ ರೀತಿಯಲ್ಲಿ ಪ್ರಸಾರಮಾಡುತ್ತಿದ್ದಾಗ ನಮ್ಮ ಕರ್ನಾಟಕದ ನ೦.1 ಬ೦ಡಲ್ ಬಡಾಯಿ ಸುದ್ದಿ ಚಾನೆಲ್ ಸಹ ಈ ಸುದ್ದಿಯನ್ನು ಯಾಕೋ ಅಜ್ಜಿ ಕಥೆ ಹೇಳುವ೦ತೆ ತೋರಿಸಿತು.

 ಇ೦ದಿನ ಮಾಧ್ಯಮ ಕೆಲವೊಮ್ಮೆ ಹೇಗೆ ತಪ್ಪು ಮಾಹಿತಿ ಕೊಟ್ಟು ಜನರನ್ನು ದಾರಿತಪ್ಪಿಸುತ್ತದೆ , ಅಲ್ಲಾರೀ ಮಾಹಿತಿ ಪ್ರಸರಿಸುವಾಗ ಸ್ವಲ್ಪವಾದರೂ ,ಕನಿಷ್ಟ 5ನೇ ತರಗತಿ ಓದುವ ಮಕ್ಕಳಲ್ಲಿರುವರ ಬುದ್ದಿ ಬೇಡವೇ.. ಅದನ್ನು ಇಡೀ ವಿಶ್ವ ನೋಡುತ್ತದೆ ಎ೦ಬ ಅರಿವು ಬೇಡವೇ? ಅಲ್ಲ ಅವರ೦ತೆ ,ನೋಡುವವರು ದಡ್ಡರು ಎ೦ದುಕೊ೦ಡಿದ್ದಾರೆಯೇ ?

 ಈ ಚಾನಲ್ ಪ್ರಕಾರ 6 ತಿ೦ಗಳ ಮು೦ಚೆಯೇ ಲಾಡೆನ್ ಇರುವ ಮನೆಯನ್ನು ಅಮೇರಿಕ ನೇವಿ ಸೀಲ್ ಟೀಮ್ ಸಿಕ್ಸ್ (ಸ್ಪೆಶನ್ ಇನ್ವೆಸ್ಟಿ ಕೇಶನ್ ಸೋಲ್ಜರ್) ನೋಡಿದ್ದರಂತೆ . ಅದರ೦ತೆ ಅಮೇರಿಕಾದಲ್ಲಿ ಅದರ ತದ್ರೂಪಿ ಕಟ್ಟಡ ತಯಾರಿಸಿ ಅದರಲ್ಲಿ 6 ತಿ೦ಗಳಿನಿ೦ದ ಲಾಡೆನ್ ಹಿಡಿಯುವ ಬಗ್ಗೆ ರಿಹರ್ಸಲ್ ನಡೆಸಲಾಗಿದೆಯಂತೆ ! ಅಬ್ಬಾ ಎ೦ತಹ ಜೋಕ್ ಅಲ್ವೇ ?

 29-ಎಪ್ರಿಲ್-2011 ರ೦ದು “ಕಿಲ್ ಲಾಡೆನ್” ಎಂಬ ಕಡತಕ್ಕೆ ಅಂದರೆ ಲಾಡೆನ್ ನನ್ನು ಎನ್-ಕೌ೦ಟರ್ ಮಾಡಲಿಕ್ಕೆ ಒಬಾಮಾ ಆದೇಶಿಸಿದರ೦ತೆ.ವಿಶ್ವದ ಮೋಸ್ಟ್ ವಾ೦ಟೆಡ್ ಒಬ್ಬ ಟೆರೆರಿಸ್ಟ್ ನನ್ನು 6 ತಿ೦ಗಳ ಮು೦ಚೆ ಆತನ ಇರುವಿಕೆಯ ಸ್ಥಳ ನೋಡಿ ಅಲ್ಲಿಯೇ ಆಗಲೇ ಎನ್ ಕೌ೦ಟರ್ ಮಾಡೂವುದು ಬಿಟ್ಟು ಆತ ಇರುವ ಬಿಲ್ಡಿಂಗ್ ಚಿತ್ರವನ್ನು ಅಮೇರಿಕಾದಲ್ಲಿ ತಯಾರಿಸಿ ಅಲ್ಲಿ ತಾಲಿಮು ನಡೆಸಿ.. ಹೋ……..

ಮತ್ತಷ್ಟು ಓದು »

16
ಮೇ

ಒಸಾಮ ಸತ್ತ… ಭಾರತ ಬದುಕಿದೆಯಾ!?

– ರಾಕೇಶ್ ಶೆಟ್ಟಿ

ತನ್ನ ಮಕ್ಕಳಿಗೆ ಮಾತ್ರ ’ಜಿಹಾದ್’ನೆಡೆಗೆ ಬರಬೇಡಿ ನನ್ನಾಣೆ ಅಂತೇಳಿ, ಕಂಡೋರ ಮಕ್ಕಳ ಬೆನ್ನ ಹಿಂದೆ ಅವಿತು ಕುಳಿತು ಮನುಶ್ಯರನ್ನ ಹುಳಗಳಿಗಿಂತ ಕಡೆಯದಾಗಿ ಸಾಯಿಸಿದ ಒಸಾಮ ಅನ್ನುವ ಸೈತಾನನೊಬ್ಬ ಸತ್ತರೆ ನಾವ್ಯಾಕೆ ಕುಣಿಯಬಾರದು!? ಕುಣಿದರೇನು ತಪ್ಪು?ಇನ್ನೇನು ಅಳಬೇಕಿತ್ತಾ?

ಒಸಾಮ ಸತ್ತರೆ ನಾವ್ಯಕೆ ಕುಣಿಯಬೇಕು? ಅನ್ನುವ ಬರಹವನ್ನೋದಿದೆ.ಅದರಲ್ಲಿ ’ದೇಶ ಪ್ರೇಮ’ ಅನ್ನುವ ಪದದ ಬಗ್ಗೆಯೂ ಉಡಾಫ಼ೆಯಿದೆ.ದೇಶಪ್ರೇಮ ಅನ್ನುವುದನ್ನ ತಾವು ವಿರೋಧಿಸುವ ಪಕ್ಷ/ಸಂಘಟನೆಯ ಗುತ್ತಿಗೆ ಕೊಡಲಾಗಿದೆಯೆಂಬಂತೆ,ಅವರು ಮಾತ್ರವೇ ದೇಶ ಪ್ರೇಮಿಗಳು ಅಂದುಕೊಂಡು,ಅವರ ಮೇಲಿನ ಅಸಹನೆಯನ್ನ ’ದೇಶ ಪ್ರೇಮಿ’ಗಳು ಅನ್ನುವ ಪದಕ್ಕೆ ಜೋಡಿಸಿ ಮಾತನಾಡಿದ್ದಾರೆ ಲೇಖಕರು.

ಮತ್ತಷ್ಟು ಓದು »

15
ಮೇ

ನನಗೂ ಸ್ವಲ್ಪ ಕೊಡಿ…

– ಚೇತನ್ ಕೋಡುವಳ್ಳಿ

ಮಾರ್ಚ್ ತಿಂಗಳ ಎಲ್ಲ ವೀಕೆಂಡಲ್ಲೂ ಊರಿಗೆ ಹೋಗಿದ್ದೆ. ಊರಲ್ಲಿ ಮಳೆಗಾಗಿ ಕಾಯ್ತಿದ್ರು. ಈಸಲನಾದ್ರೂ ಚೆನ್ನಾಗಿ ಮಳೆ ಬಂದು ಕಾಫಿ ಚೆನ್ನಾಗಿ ಹೂ ಬಿಡ್ಲಿ ಅಂತಿದ್ರು. ನಾನೂ ಹೋದಾಗಲೆಲ್ಲ ಮಳೆಗೆ ಕಾಯ್ತಿದ್ದೆ, ಜೊತೆಗೆ ಕಾಫಿಯ ಹೂವಿಗೆ ಸಹ. ಹೂವಿನಿದ ತುಂಬಿಕಂಗೊಳಿಸುವ ತೋಟವನ್ನ ನೋಡೋದೇ ಕಣ್ಣಿಗೆ ಹಬ್ಬ, ಎಲ್ಲಿ ಕಣ್ಣು  ಹಾಯಿಸಿದರೂ  ಬಿಳೀಹೂಗಳದ್ದೇ  ರಾಶಿ,  ಅಲ್ಲದೆ ಆ ಹೂವಿನ ಘಮಲು, ಆಹಾ ಏನು ಪರಿಮಳ, ದಿನಾ ಪೂರ್ತಿ ಅಲ್ಲೇಕುಳಿತಿರೋಣ ಎಂದನ್ನಿಸುತ್ತದೆ.೨ ವರ್ಷ ಆ ಸೌಭಾಗ್ಯ ಸಿಕ್ಕಿರ್ಲಿಲ್ಲ  ಯಾಕಂದ್ರೆ ಹೂವು ಆಗಿದ್ದು ವಾರದ ಮಧ್ಯದಲ್ಲಿ 😦 ವೀಕೆಂಡ್ ಬರೋ ಹೊತ್ತಿಗೆ ಎಲ್ಲ ಹೂವು ಉದುರಿ ಹೋಗಿರ್ತಿತ್ತು.

ಒಂದಿನ  ಮೋಡ ಆದ ಹಾಗೆ ಆಗ್ತಿತ್ತು, ದೂರದ ಗಿರಿಯಲ್ಲಿ ಕಪ್ಪನೆಯ ಮೋಡ, ಸ್ವಲ್ಪ ಹೊತ್ತಾದಮೇಲೆ ಮಳೆ. ಇತ್ತ ಕಡೆ ಗಾಳಿ ಬೀಸುತ್ತಿತ್ತು, ಮಳೆಯೂ ಬರುತ್ತಿರುವ ಹಾಗನ್ನಿಸುತ್ತಿತ್ತು. ಎಲ್ಲೋದೂರದ ಆಸೆ, ಇನ್ನೇನು ಕಾಲು ಘಂಟೆಯಲ್ಲಿ ಇಲ್ಲಿಗೆ ಬರತ್ತೆ, ಹೋಗಿ ನೆನೆಯಬಹುದು ಅಂತ.ಆಮೇಲೆ ಮಳೆ ಬಂದ್ರೆ ೩-೪ ದಿನ ಆದ್ಮೇಲೆ ಚಿಗುರು ಬಿಟ್ಟು ಹೂವು ಆಗೋ  ಹೊತ್ತಿಗೆ  ೧ ವಾರಆಗತ್ತೆ, ಮುಂದಿನ ವಾರ ಬರಬಹುದು ಅಂತ ದೂರದ ಆಸೆ. ದೂರದಲ್ಲಿ ಜೋರಾಗಿಸುರಿಯುತ್ತಿದ್ದ ಮಳೆ ಗಾಳಿ ಬೀಸುತ್ತಿದ್ದಂತೆ ಇತ್ತ ಕಡೆ ಬರ್ತಾ ಇತ್ತು. ಅಲ್ಲೇ ಕಣದಲಿ  ನಿಂತುನೋಡುತ್ತಿದ್ದ ನನಗೆ, ಪಕ್ಕದ ಊರಲ್ಲಿ ಹನಿಗಳು ಬಿದ್ದಾಗ ಆದ ಸಂತಸ ಅಷ್ಟಿಷ್ಟಲ್ಲ. ಆದರೆ ಸ್ವಲ್ಪಹೊತ್ತಾದ ಮೇಲೆ ಅಲ್ಲಿ ಬೀಳುವುದೂ ಕಡಿಮೆಯಾಯ್ತು. ಕಾಯುತ್ತಿದ್ದ ನಾನು ಸಪ್ಪೆ  ಮೊರೆಹಾಕಿಕೊಂಡು ಮನೆ ಒಳಗೆ ಹೋದೆ.

ಬೆಂಗಳೂರಿಗೆ ಬಂದ ಮಾರನೇ ದಿನ ಅಮ್ಮ ಫೋನ್ ಮಾಡಿ ಮಳೆ ಬಂತು ಅಂದಾಗ ಮೊದಲಿಗೆ ಸ್ವಲ್ಪ ದುಃಖ ಆದರೆ ಮರುಕ್ಷಣವೇ ಖುಷಿ. ಮುಂದಿನ ವಾರ ಹೇಗಿದ್ದರೂ ಯುಗಾದಿಗೆ ಊರಿಗೆಹೋಗಬೇಕು ಆಗ ಇಡೀ ತೋಟ ಸುತ್ತಾಡಿ  ಅಲ್ಲಿಯ ಸೊಬಗನ್ನು, ಜೊತೆಗೆ ಸುವಾಸನೆಯನ್ನೂ ಸವಿಯಬಹುದಲ್ಲ ಎಂದೆನಿಸಿತು.

ಮತ್ತಷ್ಟು ಓದು »

14
ಮೇ

ಮನದ ಕದವನು ತೆರೆದು….

-ರವಿ ಮೂರ್ನಾಡ್‍
ಎಲ್ಲ ಉದ್ಯೋಗಗಳಿಗೂ “ಡಿಗ್ರಿ” ,”ಸರ್ಟಿಫಿಕೇಟ್‍”ಗಳ ಅಗತ್ಯವಿದೆ. ಒಂದು ಕವಿತೆ,ಕಥೆ,ಲೇಖನ,ಕಾದಂಬರಿ ಬರೆಯಲು ಇದರ ಅಗತ್ಯವಿಲ್ಲ.ಯಾವುದೇ ಪಠ್ಯ ಪುಸ್ತಕಗಳ ಅಗತ್ಯವೂ ಇಲ್ಲ.ಒಬ್ಬ ಬರಹಗಾರ ಎಲ್ಲೂ ಒಂದು ಕೃತಿಯನ್ನು ಓದಿ,ಆಸಕ್ತಿ ಬೆಳಸಿ ಅದರಂತೆ ಬರೆಯಬೇಕೆನ್ನುವ ಹಂಬಲದಿಂದ ಸಾಹಿತ್ಯ ಪ್ರಪಂಚವನ್ನ ಪ್ರವೇಶಿಸುತ್ತಾನೆ.ಯಾವುದೇ ಆದಾಯ, ಬಡ್ತಿ, ಮಾನ್ಯತೆ ಈ ಒಂದು ಪ್ರಪಂಚದ ” ಪ್ರಾಸ್ಪೆಕ್ಟ್”ನಲ್ಲಿ  ಇಲ್ಲ.
 ಅನುಭವಗಳಿಂದ ಒಬ್ಬ ವ್ಯಕ್ತಿ ಬರವಣಿಗೆಯನ್ನ ಸಿದ್ಧಿಸುತ್ತಾನೆ ಎನ್ನುವ ಸಾಮಾನ್ಯ ಮಾತುಗಳು ಕೇಳಿ ಬರುತ್ತವೆ.ಆದರೆ,ಅತೀ ವಿಚಿತ್ರವೂ,ಅದ್ಭುತವೂ ಆದ ಅನುಭವಗಳಿರುವ ವ್ಯಕ್ತಿಗೆ ಯಾಕೆ ಬರವಣಿಗೆ ಸಾಧ್ಯವಾಗುವುದಿಲ್ಲ?ಒಂದು ಸಾಮಾನ್ಯ ಅನುಭವವಿರುವ ಒಬ್ಬ ವ್ಯಕಿ ಹೇಗೆ ಬರಹಗಾರನಾಗುತ್ತಾನೆ? ಅದೇ ತೀರಾ ಸಾಮಾನ್ಯವಾದ ಅನುಭವವಿರುವ ವ್ಯಕ್ತಿ ಯಾಕೆ ಬರಹಗಾರನಾಗುವುದಿಲ್ಲ?
ಒಂದು ಸಾದಾರಣ ವಸ್ತು ವಿಷಯದಲ್ಲೂ ಕೆಲವು ಒಳನೋಟಗಳನ್ನು ಕಂಡುಕೊಳ್ಳುವ ವ್ಯಕ್ತಿಗೆ ಬರವಣಿಗೆ ಸಾಧ್ಯವಾಗುತ್ತದೆ.ಈ ಸಮಾಜದಲ್ಲಿ ಪ್ರತಿಯೊಂದು ಘಟನೆ ಧಾರುಣವೊ, ಭೀಕರವೂ ಆಗಿದ್ದಲ್ಲಿ,ಒಬ್ಬೊಬ್ಬ ವ್ಯಕ್ತಿ ಅದಕ್ಕೆ ಸಾಕ್ಷಿಯಗಿ ತನ್ನದೇ ಆದ ಮಾನವೀಯ ಸಂವೇದನೆಗಳನ್ನು ಬೆಳೆಸಿಕೊಂಡಿರುತ್ತಾನೆ.ಆದರೆ, ಶೀಘ್ರ ಗತಿಯ ಬದುಕಿನ ಜಂಜಡದಲ್ಲಿ- ಗೊಂದಲದಲ್ಲಿ ಈ ಸವೇದನೆಗಳನ್ನು ಹುಟ್ಟು ಹಾಕಬಹುದಾದ ಸೂಕ್ಷ್ಮ ಭಾವನೆಗಳು ಕ್ಷಣದಲ್ಲಿ  ಮಾಯಾವಾಗಬಹುದು.
13
ಮೇ

ಶಾಪ ವಿಮೋಚನೆಯಾಗದ ಅಹಲ್ಯೆಯರು…

– ರೂಪ ರಾವ್,ಬೆಂಗಳೂರು

ರಾಮಾಯಣದ ಸೀತಾ ಸ್ವಯಂವರದ ನಾಟಕದ ತಾಲೀಮು ನಡೆಯುತ್ತಿತ್ತು.
ಅದರಲ್ಲಿ ಬರುವ ಅಹಲ್ಯಾ ಶಾಪ ವಿಮೋಚನೆಯ ಪ್ರಸಂಗವನ್ನೂ  ವೇದಿಕೆಯಮೇಲೆ ತರೋಣ

“ಗೀತಾ ಅಹಲ್ಯಾ ಪಾತ್ರ ನೀನೇ ಮಾಡಬೇಕು .” ಮೇಡಂ ನನ್ನನ್ನು ಈ ಪಾತ್ರಕ್ಕೆ ಕರೆದಾಗ ನಾನು ಕಕ್ಕಾಬಿಕ್ಕಿ, ಜೊತೆಗೆ ಒಮ್ಮೆಗೆ,ಮಾಡಬಾರದೆನಿಸಿತು.
“ಮೇಡಂ ನಾ………….ನು …………ಈ ಪಾರ್ಟ್ ಮಾಡಲ್ಲ. ………” ಹಿಂಜರಿಕೆಯಿಂದಲೇ ನುಡಿದೆ.

“ಯಾಕೆ ಗೀತಾ “? ನನ್ನತ್ತಲೇ ತೀಕ್ಷ್ಣವಾಗಿ ನೋಡುತ್ತಾ

“ಮೇಡಂ iam not happy with Ahalya’s charactor. ತುಂಬಾ ಸಲ ಅನ್ಕೂಂಡಿದ್ದೀನಿ ಯಾಕೆ ಈ ಪಂಚ ಮಹಾ ಕನ್ನಿಕೆಯರ ಹೆಸರಲ್ಲಿ  ಅಹಲ್ಯಾ ಹೆಸರು ಸೇರಿದೆ ಅಂತ?”
“ಯಾಕಮ್ಮಾ”? ಮತ್ತೆ ಪ್ರಶ್ನೆ ಎಸೆದರು.
” ಹಾಗಲ್ಲ ಮೇಡಂ ಗಂಡ ಇರದಿದ್ದಾಗ  ಮತ್ತೊಬ್ಬನ ಜೊತೆ ಸಂಬಂಧ ಹೊಂದಿದವಳು. ಅಸಲಿಗೆ ಆ ಕಥೆಯೇ ಬೇಕಿರಲಿಲ್ಲ .ರಾಮನ ಔನ್ನತೆಯನ್ನ ಎತ್ತಿ ತೋರೋದಿಕ್ಕೆ ಈ ಕತೆ ಸೇರಿಸಿದ್ದಾರೆ ಅಷ್ಟೇ.

“ಸರಿ.ಆಯ್ತು,ನಿನಗೆ ಯಾವ ಪಾತ್ರ ಬೇಕೋ ಅದನ್ನೇ ಚೂಸ್ ಮಾಡು.ಆದರೂ ಪಾತ್ರಕ್ಕಿಂತ ಪಾತ್ರಧಾರಿಯ ಆ ಪಾತ್ರದಲ್ಲಿ ಹೇಗೆ ಇನ್‌ವಾಲ್ವ್ ಆಗ್ತಾನೆ ಅನ್ನೋದು ಮುಖ್ಯ. ಮತ್ತೆ ಪುರಾಣದಲ್ಲಿ ಕೇಳಿದ ಕಥೆಯನ್ನ ಆ ನೆಲೆಯಲ್ಲಿಯೇ ನೋಡುವುದಕ್ಕಿಂತ ಒಂದು ವಿಭಿನ್ನ ನೆಲೆಯಲ್ಲಿ ನೋಡಿದರೆ ಪಾತ್ರ ಇಂಟರೆಸ್ಟಿಂಗ್ ಆಗಿರುತ್ತೆ. ಅಹಲ್ಯಾ ಜೀವನದಲ್ಲಿ ನಿಜಕ್ಕೂ ಏನು ನಡೆದಿರಬಹುದು ಅನ್ನೋದನ್ನ ಯೋಚಿಸಿದರೆ ಆ ಪಾತ್ರ ನಿಜಕ್ಕೂ ತುಂಬಾ ಕಾಂಪ್ಲಿಕೇಟೆಡ್ ಅನ್ಸುತ್ತೆ. “ಮೇಡ್ಂ ಒಂದೇ ಸಲಕ್ಕೆ ಒಪ್ಪಿ, ಜೊತೆಗೇ ನನ್ನ ಮನಸಲ್ಲಿ ಅಲೆಯನ್ನು ಎಬ್ಬಿಸಿದರು.
ಮತ್ತಷ್ಟು ಓದು »

13
ಮೇ

ಅಟ್ಲಾಂಟಿಕ್ ಸಾಗರ ಸಮ್ಮುಖದಲ್ಲಿ….

– ಅಮಿತಾ ರವಿಕಿರಣ್

”ದೇಶ ಸುತ್ತು ಕೋಶ ಓದು”  ಅನ್ನೋ ಗಾದೆ ಮಾತು ನನಗೇ ಬಹಳ ಇಷ್ಟಾ….ಯಾಕಂದ್ರೆ ಅದರಲ್ಲಿ ತಿರುಗಾಟ ಇಷ್ಟಾ ಪಡೋರ್ ಬಗ್ಗೆ ಒಂದು ಒಲುಮೆ ಇದೆಯಲ್ಲ ಅದಕ್ಕೆ….!!ಬಾಲ್ಯದಿಂದಲೂ ನನಗೇ ತಿರುಗಾಟ ಅತಿ ಪ್ರಿಯವಾದ ವಿಷಯ ಶಾಲೆಯ ಟ್ರಿಪ್ಪ್ ಗಳನ್ನೂ ನಾ ಯಾವತ್ತು ಮಿಸ್ ಮಾಡಿಲ್ಲ…ಅದರ ನಂತರ ಸಂಗೀತ ನನ್ನ ವೃತ್ತಿ ಆಯಿತು ಅಲ್ಲಿ ಸ್ಪರ್ಧೆ…ಇಲ್ಲಿ ಕಾರ್ಯಕ್ರಮ ಅಂತ ಬರೀ ತಿರುಗಾಟ ನಡೆಸಿದ್ದೆ… ,ಕೆ ಎಸ್ಸ್ ಆರ್ ಟಿ ಸಿ ಬಸ್ಸು ಅಂದರೆ ನನ್ನ ಎರಡನೇ ತವರು ..ಕಾಲೇಜ್ ಗೆ ಹೋಗಿದ್ದು ಧಾರವಾಡ್ ದಲ್ಲಿ..ಮೊದಲಿಗೆ ಕರ್ನಾಟಕ ಕಾಲೇಜ್ ಸಂಗೀತ ವಿದ್ಯಾಲಯ ,,,,ಆಮೇಲೆ ಕರ್ನಾಟಕ ವಿಶ್ವ ವಿದ್ಯಾಲಯ…ನನ್ನೂರಿಂದ ೭೬ ಕಿ ಮಿ  ದೂರದಲ್ಲಿದ್ದರು ನಾ ದಿನ ಓಡಾಡಿಯೇ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದ್ದು….

ಮದುವೆ ಆಗೋ ಹೊತ್ತಿಗೆ…ಸ್ವಲ್ಪ ದಿನ ಮನೇಲಿರೋ ಭಾಗ್ಯ ದೊರಕಿದ್ದು…ಮೊದ ಮೊದಲು ಬಹಳ ಪ್ರೀತಿಸಿದೆ ಈ ವಿರಾಮವನ್ನ…ಆದರೆ ಕಾಲಿಗೆ ನಾಯಿಗೆರೆ ಇದ್ದವರನ್ನ ಕಟ್ಟಿ ಹಾಕಿದಂತಾಗಿತ್ತು…ಮದುವೆ ಮುಂಚಿನಿಂದಲೂ ದಿನಪತ್ರಿಕೆಯಲ್ಲಿ ನಿಯತಕಾಲಿಕೆ ಯಲ್ಲಿ ಬರುತ್ತಿದ್ದ ಎಲ್ಲಾ ಪ್ರವಾಸಿ ತಾಣಗಳ ಕುರಿತಾದ ಮಾಹಿತಿಯನ್ನು ಕತ್ತರಿಸಿ ಅಂಟಿಸಿ …ಮಾಡಿದ ಆ ಪುಸ್ತಕದ ಚಿತ್ರಗಳನ್ನು ನೋಡಿ ನೋಡಿ ಖುಷಿ ಪಡ್ತಿದ್ದೆ…ಪತಿದೇವನಿಗೆ ಪದೇ ಪದೇ ಹೇಳ್ತಿದ್ದೆ.”..ಒಮ್ಮೆ ನಿಮ್ಮ ಜೊತೆ ಸಮುದ್ರ ದಂಡೆಯಲ್ಲಿ ಬರಿಗಾಲಲ್ಲಿ ಕಿಲೋಮೀಟರ್ ಗಳಷ್ಟು ಸುಮ್ಮನೆ ಸುತ್ತಾಡಬೇಕು …ರಾಶಿ ಫೋಟೋ ತಗಿಬೇಕು.”.ಅಂತೆಲ್ಲಾ …”.sure sure”.. ಅಂದು ಪ್ರಾಮಿಸ್ ಮಾಡಿದ್ದೇನೋ ನಿಜ….ಸಮುದ್ರ ದಂಡೆ ಮನೇ ಯಿಂದ ೨ ಕಿಲೋಮೀಟರ್ ಅಂತರದಲ್ಲಿದ್ದರು ಏನೋ ಒಂದು ಕಾರಣಕ್ಕೆ ಪ್ರತಿಬಾರಿ ತಪ್ಪಿ ಹೋಗುತ್ತಿತ್ತು…