ನನ್ನ Some ಶೋಧನೆ!!
-ಸವಿತ ಎಸ್.ಆರ್
ಆಗಷ್ಟೇ ಕನ್ನಡ ಮಾಧ್ಯಮದಲ್ಲಿ 10ನೇ ತರಗತಿ ಮುಗಿಸಿ, ಪ್ರಥಮ ಪಿ.ಯು.ಸಿ ಕಾಲೇಜಿಗೆ ಸೇರಿದ ದಿನಗಳು. ಹೊಸ ಕಾಲೇಜು, ಹೊಸ ಗೆಳತಿಯರು, ವಿಜ್ಞಾನದ ವಿಷಯಗಳು,
ಭೌತ,ಸಸ್ಯ,ಜೀವ,ರಾಸಾಯನಿಕ ಶಾಸ್ತ್ರದ ಪ್ರಯೋಗಗಳು, ಗಣಿತ ಸಮೀಕರಣಗಳು….ಅದೂ ಎಲ್ಲಾ ಇಂಗ್ಲೀಷ್ ಮಾಧ್ಯಮದಲ್ಲಿ…..ಎಲ್ಲವೂ ಒಂಥರಾ ಹೊಸತೇ 🙂
ಒಂದಿನ ಮಧ್ಯಾಹ್ನ ನಾನು ಕಾಲೇಜಿನಿಂದ ಮನೆಗೆ ವಾಪಾಸ್ಸಾಗಿ…ಊಟ ಮಾಡಿ ಟಿ.ವಿ. ಮುಂದೆ ಹಾಜರ್ರು. ನನ್ನ ತಮ್ಮ ಕೂಡ ಆವಾಗಲೇ ಬಂದ. ಅದ್ಯಾರೋ ಸ್ನೇಹಿತರು ಕೊಟ್ರು ಅಂತ ಒಂದು ಚಿಕ್ಕ ಸೀಸೆಯಲ್ಲಿ ಪಾದರಸವನ್ನ ತಂದಿದ್ದ. ಅಮ್ಮನಿಗೆ ಕಾಣದ ಹಾಗೆ ನನ್ನ ಬಳಿ ತಂದು ಒಮ್ಮೆ ಆ ಸೀಸೆಯನ್ನ ಜೋರಾಗಿ ಅಲುಗಾಡಿಸಿ ತೋರಿಸಿದ. ಒಂದು ದೊಡ್ಡ ಹನಿಯಂತಿದ್ದ ಪಾದರಸ ಒಡೆದು ಅನೇಕ ಚಿಕ್ಕ ಚಿಕ್ಕ ಹನಿಗಳಾದವು. ಮತ್ತೊಮ್ಮೆ ನಿಧಾನವಾಗಿ ಸೀಸೆಯನ್ನ ತಿರುಗಿಸಿದರೆ ಮತ್ತೆ ಮೊದಲಿನ ದೊಡ್ಡ ಹನಿಯಾಯ್ತು. ಇಷ್ಟಕ್ಕೆ ನಿಲ್ಲದ ಅವನು ಪೇಪರಿನ ಮೇಲೆ ನಿಧಾನವಾಗಿ ಸುರುವಿ…ಈಗ ಅದು ಹೇಗೆ ಹರಿದಾಡತ್ತೆ ಅಂತ ತೋರಿಸಿದ್ದು ನನ್ನ ಕುತೂಹಲ ಕೆರಳಿಸಿತು. ಮತ್ತೆ ಪೇಪರಿನ ಮೂಲೆಯಲ್ಲೊಂದು ಚಿಕ್ಕ ಮಡಿಕೆ ಮಾಡಿ ಅದರಿಂದ ಪುನಃ ಪಾದರಸವನ್ನ ಸೀಸೆಯೊಳಗೆ ಹಾಕಿ….ಇದು ನನ್ನದು….ತೆಗೆದರೆ ನೋಡು ಅಂತ ಕಟ್ಟಾಜ್ಞೆಯೊಂದಿಗೆ ಟೇಬಲ್ ಮೇಲೆ ಸೀಸೆಯನ್ನಿಟ್ಟ. ನಾನು ಟೀವಿ ನೋಡುತ್ತಲೇ ಇದ್ದೆ.
ಊಟ ಮುಗಿಸಿ ತಮ್ಮ ಸ್ಕೂಲಿಗೆ ಹೊರಟುಹೋದ. ಅಲ್ಲಿಯವರೆಗೂ ಕುತೂಹಲ ತಡೆದಿಟ್ಟುಕೊಂಡಿದ್ದ ನನಗೊಂದು ಛಾನ್ಸ್….!! 🙂 ನಿಧಾನವಾಗಿ ಸೀಸೆಯ ಮುಚ್ಚಳ ತೆಗೆದೆ (ರಾಸಾಯನಿಕ ವಸ್ತುವನ್ನ ಬರಿಗೈಯಲ್ಲಿ ಮುಟ್ಟಬಾರದು ಅಂತ ತಿಳಿದಿದ್ರೂ, ಏನೂ ಆಗೋಲ್ಲ ಅನ್ನೋ ಧೈರ್ಯದ ಮೇಲೆ) ಪಾದರಸವನ್ನ ಬರಿಗೈಯಲ್ಲಿ ಸ್ವಲ್ಪ ಒತ್ತಡದಲ್ಲಿ ಮುಟ್ಟಿದೆ. ಅದು ಚಿಕ್ಕ ಚಿಕ್ಕ ತುಣುಕುಗಳಾದವು..ಮತ್ತೆ ಬೆರಳಿಗೇನಾದ್ರು ಆಯ್ತಾ ಅಂತ ಒಮ್ಮೆ ನೋಡಿದೆ ಏನೂ ಆಗಿರಲಿಲ್ಲ. ಅದೇ ಧೈರ್ಯದ ಮೇಲೆ ಪಾದರಸವನ್ನ ಬಲಗೈ ಅಂಗಳದಲ್ಲಿ ಸುರುವಿಕೊಂಡು..ಬಲಗೈಯಿಂದ ಎಡಗೈಗೆ…ಮತ್ತೆ ಎಡಗೈಯಿಂದ ಬಲಗೈಗೆ ಸುರಿದಾಡೋದು ಮಜಾ ಅನ್ನಿಸ್ತು.. 🙂
ಬದುಕಿಗೆ ಪರಿಧಿ ಹಾಕೋಳ್ತಾ ಇದ್ದೀವಿ ಅನಿಸ್ತಾ ಇದೆ…
ಚಿತ್ರಾ ಸಂತೋಷ್
ಹಂಚಿ ಉಂಡರೆ ಹಸಿವಿಲ್ಲ…!! ಹತ್ತನೇ ತರಗತಿಯಲ್ಲಿ ನಾನು ಓದುತ್ತಿದ್ದಾಗ ಬಾಗೇವಾಡಿ ಅನ್ನೋ ಹೆಸರಿನ ಮೇಷ್ಟ್ರು ಇದ್ದರು. ತುಂಬಾ ಒಳ್ಳೆಯ ಮೇಷ್ಟ್ರು.ಮೂರು ವರ್ಷ ನಮ್ಮ ಜೊತೆಗಿದ್ದ ಆ ಮೇಷ್ಟ್ರು ಆಗಾಗ ಹೇಳುತ್ತಿದ್ದ ಮಾತು ಹಂಚಿ ಉಂಡರೆ ಹಸಿವಿಲ್ಲ. ಈಗಲೂ ಆ ಮಾತು ಆಗಾಗ ನೆನಪಾಗುತ್ತಿದೆ. ಮಾಮೂಲಿ ನಮ್ಮನೆಯಲ್ಲಿ ನಾನು-ತಮ್ಮ ಇಬ್ಬರೇ ಇರ್ತೀವಿ. ಆಗ ಒಂದು ಥರ ಬೋರ್. ನನಗೆ ರಜೆ ಇದ್ದ ದಿನ ಅವನಿಗರಲ್ಲ, ಅವನಿಗೆ ರಜೆ ಇದ್ದ ದಿನ ನಂಗೆ ರಜೆ ಇರೊಲ್ಲ. ಅದಕ್ಕೆ ಅವನಿಗೆ ರಜೆ ಇದ್ದ ನಾನು ಆಫೀಸ್ ನಿಂದ ಬೇಗ ಹೊರಡೋದು, ನಂಗೆ ರಜೆ ಇದ್ದ ದಿನ ಅವನು ಆಫೀಸ್ ನಿಂದ ಬೇಗ ಹೊರಟುಬರೋದು. ನಮಗೆ ರಜೆ ಇದ್ದ ದಿನ ಮಾವ, ಅಣ್ಣ ಬೇಗನೆ ಮನೆಮುಂದೆ ಹಾಜರಾಗೋದು. ಏನಾದ್ರೂ ಸ್ಪೆಷಲ್ ಅಡುಗೆ ಮಾಡೋದು, ದೇವಸ್ಥಾನಕ್ಕೆ ಹೋಗೋದು…ಅದೊಂದು ಥರಾ ನಮಗೆ ತುಂಬಾ ಖುಷಿಕೊಡೋದು. ನಂಗೆ ಎಲ್ಲಕ್ಕಿಂತ ಖುಷಿಕೊಡೋದು ಎಲ್ಲರೂ ಜೊತೆಗೆ ಊಟ ಮಾಡೋದು. ನಾವೇನದ್ರೂ ಮಾಡಿದ್ರೆ ಪಕ್ಕದ್ಮನೆ ಅಡುಗೆ ತಜ್ಞೆ ಆಂಟಿ ಅಲ್ಲಿ ಹಾಜರಾಗಿ..ನಾವು ಮಾಡೋ ಡಬ್ಬ ಅಡುಗೇನ ಇನ್ನಷ್ಟು ರುಚಿಯಾಗಿಸ್ತಾರೆ. ಆಮೇಲೆ ಅವರ ಮನೆ ಸಾರು ನಮ್ಮನೆಗೆ, ನಮ್ಮನೆ ಸಾರು ಅವರ ಮನೆಗೆ ಹೋಗುತ್ತೆ. ಒಟ್ಟಿನಲ್ಲಿ ಮನೆತುಂಬಾ ಜನರು ಓಡಾಡ್ತಾ ಇದ್ರೆ ಸಕತ್ ಖುಷಿ ಆಗೋದು.
ಪಕ್ಕದ್ಮನೆ ತಾತನೂ ಚಿತ್ರಾನಿಗೆ ಸಾರು ಕೊಟ್ಟೆಯೇನು? ಅಂತ ರಾತ್ರಿ ಮಲಗೋಕೆ ಮುಂಚೆ ಮೊಮ್ಮಕ್ಕಳನ್ನು ಗದರಿಸಿ ಅವರ ಕೈಯಲ್ಲಿ ಕೊಟ್ಟು ಕಳಿಸ್ತಾರೆ. ಸ್ವಲ್ಪನೇ ಆಗಲೀ ಮತ್ತೊಬ್ಬರಿಗೆ ಕೊಟ್ಟು ತಿನ್ನೋದ್ರಲ್ಲಿ ತುಂಬಾ ಖುಷಿ ಇರುತ್ತೆ ಅಲ್ವಾ? ಊರಲ್ಲಿ ಆದ್ರೆ ಮನೆಗೆ ಯಾರಾದ್ರೂ ನೆಂಟರು ಬರ್ತಾರೆ, ಖುಷಿ-ಖುಷಿಯಾಗಿ ಸಂಭ್ರಮಿಸೋ ಅವಕಾಶಗಳಿರ್ತವೆ. ಆದರೆ, ಬೆಂಗಳೂರಿನಲ್ಲಿದ್ರೆ ನೆಂಟರಿಲ್ಲ, ತುಂಬಾ ಆಪ್ತರಿಲ್ಲ, ಆಪ್ತರಿದ್ರೂ ಅವರಿಗೆ ಅವರದೇ ಆಗ ಕೆಲಸಗಳಿರ್ತವೆ. ನಮ್ಮನೆಯಲ್ಲಿ ಬಂದು ಅವರಿಗೆ ಹರಟೆ ಹೊಡೆಯೋಕೆ ಸಮಯವೆಲ್ಲಿ ಇರುತ್ತೆ? ಮತ್ತಷ್ಟು ಓದು 
ಸಂಜೆ ಏಳರ ಬಸ್ಸು…
-ಸೌಮ್ಯ ಭಾಗವತ್
ಕುಮಟಾದಿಂದ ಹತ್ತು ಕಿಲೋಮೀಟರುಗಳು ದೂರದಲ್ಲಿರುವ ನಮ್ಮೂರಿಗೆ, ದಿನಕ್ಕೆ ಹತ್ತು ಬಸ್ಸುಗಳಿವೆ. ಸುಮಾರಾಗಿ ಡಾಂಬರು ಇರುವ ರಸ್ತೆಯಲ್ಲಿ ಸುತ್ತಲಿನ ಹಸಿರು ಗದ್ದೆಗಳು, ಹಳ್ಳಗಳು, ಬೆಟ್ಟ ಗುಡ್ಡಗಳನ್ನು ನೋಡುತ್ತಾ ಬಸ್ಸಿನಲ್ಲಿ ಬರುವುದೇ ಒಂಥರದ ಖುಷಿ.
ಮಾಯಾನಗರಿ ಬೆಂಗಳೂರಿನ ಹಳೆಯ ಬಸ್ಸುಗಳೆಲ್ಲ (KA-01 registration) ನಮ್ಮಲ್ಲಿ ಹಳ್ಳಿಗಳಿಗೆ ಓಡಾಡುವ ಪುಷ್ಪಕ ವಿಮಾನಗಳು. ಹೆಚ್ಚಾಗಿ ಜನಸಾಮಾನ್ಯರ ಓಡಾಟ ಆ ಬಸ್ಸುಗಳ ಮೇಲೆ ಅವಲಂಬಿತ. ಇವಿಷ್ಟನ್ನು ನನ್ನ ಬರಹದ ವಿಷಯ ಎನ್ನಬಹುದಾದರೂ. ನನ್ನ ಜನ್ಮಸಿದ್ಧ ಹಕ್ಕನ್ನು ಚಲಾಯಿಸದೇ ಬಹಳ ದಿನಗಳೇ ಕಳೆದವು. (ತಲೆ ತಿನ್ನುವುದು ನನ್ನ ಆ ಜನ್ಮ ಸಿದ್ಧ ಹಕ್ಕು ಅದನ್ನು ನಾನು ಪಡೆದೆ ತೀರುತ್ತೇನೆ.! ಎಂದು ನಾನು ಈ ಭೂಮಿಗೆ ಬಂದಾಗಲೇ ನಿರ್ಧರಿಸಿ ಆಗಿತ್ತು). ವಿಷಯದ ರೈಲು ಅಲ್ಲಲ್ಲಿ ಹಳಿ ತಪ್ಪಿದರೂ ಸರಿಪಡಿಸಿ ಓಡಿಸಿದ್ದೇನೆ ನೀವು ಓದಿ.
ನಾನು ಬಸ್ಸಿನಲ್ಲಿ ಓಡಾಡುವುದನ್ನೇ ಇಷ್ಟ ಪಡುತ್ತೇನೆ.ಮಂಗಳೂರಿನಲ್ಲಿ ಗಾಜುಗಳಿಲ್ಲದ ಕಿಟಕಿಗಳ ಬಸ್ಸಿನಲ್ಲಿ ಕೂತು,ಒಂದುಕಾಲದಲ್ಲಿ ಬಾಬ್ ಇದ್ದ ಕೂದಲನ್ನು ಜುಟ್ಟಿಗೆ ಸಿಕ್ಕಿಸಲು ಹರಹರಿ ಸಾಹಸ ಮಾಡುತ್ತಾ.ಕೊನೆಗೆ ‘ಉಪೇಂದ್ರ’ನಿಗೆ ನೀನೇ ಸ್ಫೂರ್ತಿಯೋ ಎಂದೂ ಕೇಳಿಸಿಕೊಂಡಿದ್ದೇನೆ ಬಿಡಿ.
‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು
ಅರೆಹೊಳೆ ಸದಾಶಿವರಾಯರು
ಫೇಸ್ ಬುಕ್ನಲ್ಲಿ ಒಂದು ಸಾಲು ಓದಿದೆ. ‘ಮ್ಯಾಜಿಷಿಯನ್’ ಸತ್ಯ ಸಾಯಿಬಾಬಾ ಇನ್ನಿಲ್ಲ ಎಂದು ಒಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದರು. ಮುಂದುವರಿಯುತ್ತಾ, ಈ ಸತ್ಯಸಾಯಿಬಾಬಾ ಎಂಬ ಜಾದೂಗಾರನನ್ನು ಕೇವಲ ಮಾಧ್ಯಮಗಳು ಈ ಮಟ್ಟಿಗೆ ದೇವಮಾನವನನ್ನಾಗಿ ಮಾಡಿವೆ ಎಂದೂ ಸೇರಿಸಿಕೊಂಡಿದ್ದರು.
ಮೊದಲಾಗಿ ಮಾನವ ಎಂದರೆ ಏನು ಎಂಬತ್ತ ಗಮನ ಹರಿಸಬೇಕು. ಅದಕ್ಕೂ ಮೊದಲಾಗಿ ಒಂದು ವಿಷಯ ಸ್ಪಷ್ಟೀಕರಣದೊಂದಿಗೇ ಲೇಖನ ಆರಂಭಿಸಬೇಕು. ಅದೆಂದರೆ ನಾನು ಸಾಯಿ ಬಾಬಾ ಅವರ ಭಕ್ತನೂ ಅಲ್ಲ ಮತ್ತು ಅವರ ಪವಾಡಗಳ ಕುರಿತು ಪರ-ವಿರೋಧ ಎಂದು ಹೇಳಿಕೊಳ್ಳುವಷ್ಟು, ಜ್ಞಾನಿಯೂ ಅಲ್ಲ. ಆ ಮಟ್ಟಿಗೆ ಈ ವಿಷಯದಲ್ಲಿ ನಾನು ತಟಸ್ಥ. ಇನ್ನು ಮಾನವ ಎಂದರೆ…..!. ಜೀವಂತ ಇರುವ ಎಲ್ಲವೂ ಮಾನವನಾಗುವುದಿಲ್ಲ ಅಥವಾ ಮನುಷ್ಯಗರ್ಭದಲ್ಲಿ ಜನಿಸಿದ ಎಲ್ಲರೂ ಮಾನವನಂತೆ ಬದುಕುವುದಿಲ್ಲ. ಪರಸ್ಪರರನ್ನು ಪ್ರೀತಿಸುತ್ತಾ ಸಾಧ್ಯವಾದಷ್ಟೂ ಜನರ ಬಳಿ, ಜನರನ್ನು ಗೌರವಿಸುತ್ತಾ ಬದುಕುವುದು ಮಾನವೀಯ ಧರ್ಮ ಎನಿಸುತ್ತದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು, ಅಕ್ಷರಶ: ಅದನ್ನೇ ಪಾಲಿಸಿದರೆ ಆತ ಜನರ ಪಾಲಿಗೆ ಜನಾರ್ದನನಾಗುತ್ತಾನೆ;ದೇವತ್ವವನ್ನು ಪಡೆಯುತ್ತಾನೆ-ಸಾಯಿಬಾಬಾ ವಿಷಯದಲ್ಲಿಯೂ ಅದೇ ಆಗಿದೆ. ಮತ್ತಷ್ಟು ಓದು 
ಬಂಜರಾದ ಬಾಂಜಾರು
ಪವನ್ ಎಂ. ಟಿ
ಪ್ರಿಯ ನಿಲುಮೆಯ ಓದುಗರೆ ಕಳೆದ ಕೆಲವು ದಿನಗಳ ಹಿಂದೆ ನಿಲುಮೆಯಲ್ಲಿ ಮಲೆಕುಡಿಯರ ಪ್ರದೇಶವಾದ ಬಂಗಾರ್ ಪಲ್ಕೆಯ ಕುರಿತಂತೆ, ಅಲ್ಲಿಯ ಸಾಮಾಜಿಕ ಸಮಸ್ಯೆಗಳ ಕುರಿತಂತೆ ಲೇಖನವೊಂದು ಪ್ರಕಟವಾಗಿತ್ತು. ಇನ್ನೊಂದು ವಿಭಿನ್ನ ಪ್ರದೇಶವಾದ ಬಾಂಜಾರು ಮಲೆಯ ಮಲೆಕುಡಿಯರ ಕುರಿತಂತೆ, ಅವರ ಕಷ್ಟದ ಪರಿಪಾಟಲಿನ ಕುರಿತ ಸಣ್ಣ ಪರಿಚಯವನ್ನು ಈ ಲೇಖನದಲ್ಲಿ ನಿಮ್ಮ ಮುಂದಿಡುತ್ತಿದ್ದೇನೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಚಾರ್ಮಾಡಿ ರಸ್ತೆಯಲ್ಲಿ ಸುಮಾರು ೪೦ ಕಿಲೋಮೀಟರ್ ಪ್ರಯಾಣಿಸಿದರೆ ಘಾಟ್ನ ೯ ನೇ ತಿರುವಿನಲ್ಲಿ ಬಲಬದಿಗೆ ಒಂದು ಕಿರಿದಾದ ಕಚ್ಚಾ ರಸ್ತೆ ಸಿಗುತ್ತದೆ. ಈ ಕಚ್ಚಾ ರಸ್ತೆ ಹೆಚ್ಚು ದೂರದ ವರೆಗೆ ಇಲ್ಲ. ಎಲ್ಲಿಯಾದರೂ ಸಾಮಾನ್ಯ ಜನರೀಗೆ ಇದರಿಂದ ಉಪಯೋಗವಾಗಿ ಬಿಟ್ಟರೆ ಕಷ್ಟ ನೋಡಿ ಅದಕ್ಕೆ ಈ ರಸ್ತೆ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಎಸ್ಟೇಟ್ ನ ಅಥಿತಿ ಗೃಹದ ವರೆಗೆ ಮಾತ್ರವಿದೆ. ಇಲ್ಲಿ ಖಾಸಗಿ ಎಸ್ಟೇಟ್ ನವರು ಒಂದು ದೊಡ್ಡ ಗೇಟು ಹಾಕಿದ್ದಾರೆ ಈ ಗೇಟನ್ನು ಒಳ ಪ್ರವೇಶ ಮಾಡಿಯೇ ನಾವು ಬಾಂಜಾರು ಮಲೆಗೆ ಹೋಗಬೇಕು. ಇಲ್ಲಿ ಎಸ್ಟೇಟ್ ಮಾಲಿಕರ ಪರವಾನಿಗೆ ಇಲ್ಲದೇ ನಾವು ಒಳ ಹೋಗುವಂತಿಲ್ಲ. ಮೊದಲು ನಮಗೆ ಮಲೆಕುಡಿಯರಲ್ಲಿಗೆ ಹೋಗುವುದಕ್ಕೆ ಎಸ್ಟೇಟ್ನವರ ಒಪ್ಪಿಗೆ ಯಾಕೆ ಪಡೆಯಬೇಕು ಎಂಬ ಪ್ರಶ್ನೆ ಮೂಡಿತು . ಆದರೆ ನಮ್ಮ ಕೆಲಸ ಆಗಬೇಕಾದರೆ ನಾವು ಒಪ್ಪಿಗೆ ಪಡೆಯಲೇ ಬೇಕಲ್ಲಾ ಅದಕ್ಕೆ ಆ ಕೆಲಸವನ್ನು ಮೊದಲು ಮಾಡಿದೆವು. ಮುಂದೆ ಸಾಗಿದಂತೆ ಆ ಅಥಿತಿ ಗೃಹದಲ್ಲಿ ಕೆಲಸ ಮಾಡುವ ಮಲೆಕುಡಿಯರನ್ನು ಕಂಡೆವು. ಇದೆಲ್ಲವನ್ನು ನೋಡುವಾಗ ನನ್ನಲ್ಲಿ ಮೂಡಿದ ಪ್ರಶ್ನೆ? ಎಸ್ಟೇಟ್ ನವರು ಯಾಕೆ ಈ ರೀತಿ ಗೇಟ್ ಹಾಕಿದ್ದಾರೆ? ಮಲೆಕುಡಿಯರನ್ನು ನಿಯಂತ್ರಣದಲ್ಲಿಟ್ಟಿರ ಬಹುದೇ? ನಮ್ಮನ್ನು ಯಾಕೆ ಪರೀಕ್ಷಿಸಿಯೇ ಒಳ ಬಿಡುತ್ತಾರೆ? ಇದರ ಹಿಂದೆ ಏನಿದೆ? ಮಲೆಕುಡಿಯರು ಯಾಕೆ ಇವರಲ್ಲಿಯೇ ಕೆಲಸ ಮಾಡುತಿದ್ದಾರೆ? ಎಂದು. ನಂತರ ಬಾಂಜಾರಿನ ಮಲೆಕುಡಿಯರೇ ಹೇಳಿದರೂ ಎಸ್ಟೇಟ್ ನವರು ನಮಗೆ ೫ ಎಕರೆ ಜಾಗವನ್ನು ಪ್ರತಿಯೊಬ್ಬರಿಗೂ ನೀಡಿದ್ದಾರೆ ಅದರಲ್ಲಿ ಕೃಷಿ ಮಾಡಿಕೊಂಡು ಮತ್ತು ಎಸ್ಟೇಟ್ನ ಕೆಲಸವನ್ನು ಮಾಡಿಕೊಂಡು ನಾವು ಬದುಕುತ್ತಿದ್ದೇವೆ. ಈ ಮಾತನ್ನು ಕೇಳಿದಾಗ ನನ್ನಲ್ಲಿ ಮೂಡಿದ್ದ ಪ್ರಶ್ನೆಗಳಿಗೆ ಅಲ್ಪ ಸ್ವಲ್ಪ ಉತ್ತರ ಸಿಕ್ಕಿದಂತಾಯಿತು. ಮತ್ತಷ್ಟು ಓದು 
ಎಲ್ಲಿ ಹೋದವು ಆ ವೈಶಾಖದ ದಿನಗಳು …..
ಶಿವರಾತ್ರಿ ಮುಗಿಯೇತೆಂದರೆ ಸಾಕು…ಪರೀಕ್ಷೆ ತಯಾರಿಗಳು ಆರಂಭ ವಾಗುತ್ತಿದ್ದವು ಮತ್ತೇನು ಬಂದೆ ಬಿಡ್ತು ಯುಗಾದಿ …ಕೆಲವೊಮ್ಮೆ ಎಪ್ರಿಲ್ ೧೦ ರ ನಂತರ ಕೆಲವೊಮ್ಮೆ ಅದಕ್ಕಿಂತ ಮುಂಚೆ…ಸರಿ ಈಗ ಅಜ್ಜಿ ಮನೆ ಪ್ರವಾಸಕಕ್ಕೆ ತಯಾರಿ ಶುರು…
ಅಜ್ಜಿ ಮನೆಯಲ್ಲಿ ಇಗ ಮರದ ತುಂಬಾ ಮಾವು ಹಲಸು,ಅಜ್ಜನ ಕಿಟಿಪಿಟಿ ಒಂದನ್ನು ಬಿಟ್ಟರೆ ….ಅಜ್ಜಿ ಮನೆ ಎಂಬುದು ಅಧ್ಭುತ ಮಾಯಾಲೋಕ…ನನ್ನ ಎಲ್ಲಾ ಅಕ್ಕ ಅಣ್ಣಂದಿರು…ಅಲ್ಲಿ ಬಂದಿರುತ್ತಿದ್ದರು…ಎಲ್ಲಾ ಸೇರಿ ಆ ಎರಡು ತಿಂಗಳು ..ಖುಷಿಯನ್ನು ಲೂಟಿ ಮಾಡುತ್ತಿದ್ದೆವು…ಅದೂ ಮೇ …..ತಿಂಗಳು ಮದುವೆ, ಮುಂಜಿ, ಚೌಲ ….ಒಂದೇ ಎರಡೇ…ಅಜ್ಜಿ ಜೊತೆಗೆ ಹೋಗಲು ನಾ ಮುಂದು ನೀ ಮುಂದು ಎಂದು ಲಡಾಯಿ..ಮಾಡುತ್ತಿದ್ದ ಆ ದಿನಗಳು…
ಅಜ್ಜನಿಗೆ ಮಕ್ಕಳೆಂದರೆ ಅಷ್ಟಕ್ಕಷ್ಟೇ…ಆತ ಯಾವತ್ತೂ ಮೊಮ್ಮೊಕ್ಕಳಿಗೆ ಸಲಿಗೆ ಕೊಟ್ಟಿರಲಿಲ್ಲ…ನಮಗೂ ಅವ ದೊಡ್ಡ ಪ್ರತಿಸ್ಪರ್ಧಿಯಂತೆ… ಭಾಸವಾಗುತ್ತಿದ್ದ …ಬೇಕಂತಲೇ ಅವನಿಗೆ ತೊಂದರೆ ಕೊಡುತ್ತಿದ್ದೆವು…ಆ ದಿನ ಬಾಯಿರಿಗಳ ಮನೆತನಕ ಶಾರ್ಟ್ ಕಟ್ನಲ್ಲಿ ಹೋಗಲು ಹೋಗಿ ಮರದ ಬೇರಿಗೆ ಎಡವಿ ಮೂತಿ ಚಚ್ಚಿ ಕೊಂಡು ಆಸ್ಪತ್ರೆ ಸೇರಿದ ಅಜ್ಜ…ಇನ್ನೆರಡು ದಿನ ಬಿಟ್ಟು ಬರಲಿ ಎಂದು ಆಶಿಸುತ್ತಿದ್ದ ಆ ದಿನಗಳು….
‘ವಾಸಾ’ ಎಂಬ ಯುದ್ಧ ನೌಕೆ ಮತ್ತು ವಿಧಿಯ ಆಯ್ಕೆ!
– ಪ್ರಶಾಂತ್ ಯಳವಾರಮಠ
೧೬ನೇ ಶತಮಾನದ ಸ್ವೀಡನ್ ದೇಶದ ರಾಜ ಕಿಂಗ್ ಗುಸ್ತಾವ್ II ಅಡಾಲ್ಫ್ ಗೆ ತನ್ನ ನೌಕಾದಳದ ಶಕ್ತಿಯನ್ನು ಹೆಚ್ಚಿಸಬೇಕು ಅನ್ನೋ ಇಚ್ಛೆ ಇಂದ ಹಡಗು ನಿರ್ಮಿಸುವುದರಲ್ಲಿ ಪ್ರಖ್ಯಾತಿ ಹೊಂದಿದ್ದ ಡಚ್ ದೇಶದ ಹೆನ್ರಿಕ್ ಹೈಬರ್ಟ್ ಸನ್ ಜೊತೆ ನಾಲ್ಕು ಯುದ್ದನೌಕೆಗಳನ್ನು ನಿರ್ಮಿಸುವ ಒಪ್ಪಂದ ಮಾಡಿಕೊಂಡ. ೧೬೨೬ ರಲ್ಲಿ ನಾಲ್ಕರಲ್ಲಿ ಮೊದಲನೆಯದಾಗಿ ವಾಸಾ ಎಂಬ ನೌಕೆಯನ್ನು ನಿರ್ಮಿಸಲು ಪ್ರಾರಂಭಿಸಿದ ತಂಡ ಅದನ್ನು ಆಗಿನ ಕಾಲದ ಅತೀ ದೊಡ್ಡ ನೌಕೆಯೇನ್ನಾಗಿ ನಿರ್ಮಿಸಬೇಕೆಂದು ಪನತೋಟ್ಟಿತು! ಅದಕ್ಕಾಗಿ ಸುಮಾರು ೩೦೦ ಜನರ ತಂಡ ತನ್ನ ಕೆಲಸವನ್ನ ಆರಂಬಿಸಿತ್ತು.ಕ್ರಾಂತಿಗೆ ಅಕ್ಷರದ ಹಂಗೇಕೆ?
– ಚಿತ್ರ ಸಂತೋಷ್
ಮಧ್ಯಪ್ರದೇಶದ ತಲನ್ಪುರ ಗ್ರಾಮದಲ್ಲಿ ಓದು ಬರಹ ತಿಳಿಯದ ಬುಡಕಟ್ಟು ಮಹಿಳೆಯರೇ ಸಾಮಾಜಿಕ ಕ್ರಾಂತಿಗೆ ಮುನ್ನುಡಿಯಾಗಿದ್ದಾರೆ. ನಿತ್ಯ ಕುಡಿದು, ಸಂಸಾರದ ಒಂದಿಷ್ಟು ಚಿಂತೆಯಿಲ್ಲದ
ಪುರುಷರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಇಡೀ ಹಳ್ಳಿಯ ಮಹಿಳೆಯರು ಒಂದಾಗಿ ಸಾರಾಯಿ ನಿಷೇಧ ಮಾಡಿದ್ದಾರೆ.
ಆ ಹಳ್ಳಿಯೇ ಹಾಗೆಯೇ. ಬುಡಕಟ್ಟು ಬದುಕುಗಳ ಸಂಗಮ. ನೂರಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳನ್ನು ಹೊಂದಿರುವ ಆ ಹಳ್ಳಿಯಲ್ಲಿ ಹೊತ್ತಿನ ಊಟಕ್ಕೂ ಕಷ್ಟ. ಪತಿ-ಪತ್ನಿಯರು ಎಲ್ಲಾರೂ ಕೂಲಿಗಾಗಿ ಅರಸುವವರು. ವಿದ್ಯೆ, ಶಿಕ್ಷಣ ಎಂಬುವುದು ಅವರ ಪಾಲಿಗೆ ಮರೀಚಿಕೆ. ಸಾಂಪ್ರದಾಯಿಕ ಬದುಕಿನ ಚೌಕಟ್ಟಿನಲ್ಲಿಯೇ ಇಂದಿಗೂ ಬದುಕು ಸವೆಸುವ ಅಲ್ಲಿನ ಕುಟುಂಬಗಳಲ್ಲಿ ಆಧುನಿಕತೆಯ ಥಳುಕಿಲ್ಲ. ಸಿನಿಮಾ, ಫ್ಯಾಷನ್ ಯಾವುದೂ ಗೊತ್ತಿಲ್ಲ. ದುಡಿಯುವುದು, ದಿನದ ಮೂರು ಹೊತ್ತಿನ ಅನ್ನ ತುಂಬಿಸಿಕೊಳ್ಳುವುದಷ್ಟೇ ಅವರಿಗೆ ಗೊತ್ತು.
ಅದು ಮಧ್ಯಪ್ರದೇಶದ ತಲನ್ಪುರ್ ಎಂಬ ಹಳ್ಳಿ. ಇಲ್ಲಿನ ಜನಸಂಖ್ಯೆ ಸುಮಾರು ೩೦೦೦. ಇಂದೋರ್ನಿಂದ ಇಲ್ಲಿಗೆ ಸುಮಾರು ೧೮೦ ಕಿ.ಮೀ. ದೂರವಿದೆ.
‘ಎಂಡೋ ನಿಷೇಧಿಸಿ’ – ಶರದ್ ಪವಾರ್ ಗೊಂದು ಬಹಿರಂಗ ಪತ್ರ
*ರಶ್ಮಿ. ಕಾಸರಗೋಡು
ಶರದ್ ಪವಾರ್ ಜೀ,
ನಮಸ್ತೆ. ಕೇಂದ್ರ ಕೃಷಿ ಮಂತ್ರಿಯಾಗಿದ್ದು ಕೊಂಡು ಭ್ರಷ್ಟಾಚಾರದ ಹೊದಿಕೆ ಹೊದ್ದು ಗಾಢ ನಿದ್ರೆಗೆ ಜಾರಿರುವ ನೀವು ಎಂದಾದರೂ ಸಾಮಾನ್ಯ ಜನರ ಬಗ್ಗೆ ಯೋಚಿಸಿದ್ದೀರಾ? ಹಣ ಕೂಡಿಡುವ ನಿಮ್ಮ ಕಾಯಕದ ನಡುವೆ ಒಂದಷ್ಟು ಹೊತ್ತು ವಿರಾಮ ಸಿಕ್ಕರೆ ಎಂಡೋಸಲ್ಫಾನ್ ಪೀಡಿತರ ಬಗ್ಗೆ ಒಮ್ಮೆ ದೃಷ್ಟಿ ಹಾಯಿಸಿ. ಕೇರಳದ ಪುಟ್ಟ ಜಿಲ್ಲೆಯಾದ ಕಾಸರಗೋಡಿನ ಎಣ್ಮಕಜೆ, ಬೋವಿಕ್ಕಾನ, ಪೆರ್ಲ, ಪೆರಿಯ ಮೊದಲಾದ ಊರುಗಳಲ್ಲಿ ಎಂಡೋಸಲ್ಫಾನ್ ಎಂಬ ವಿಷದಿಂದಾಗಿ ಪ್ರಾಣ ಕಳೆದುಕೊಂಡವರೆಷ್ಟು ಮಂದಿ? ಇನ್ನೂ ಜೀವಂತ ಶವವಾಗಿರುವವರು, ಅಂಗವೈಕಲ್ಯತೆಯಿಂದು ಬಳಲುತ್ತಿರುವ ಮಕ್ಕಳು …ಇಲ್ಲೊಂದು ನರಕವಿದೆ. ಸಂಕಷ್ಟಕ್ಕೆ ಸಿಲುಕಿರುವ ಈ ಜನರ ಕೂಗು ನಿಮಗೆ ಕೇಳಿಸುತ್ತಿಲ್ಲವೇ?
ಗೇರುಬೀಜದ ಮರಗಳಿಗೆ ಈ ವಿಷವನ್ನು ಸಿಂಪಡಿಸಿ ಜನರ ಬಾಳನ್ನು ನರಕವಾಗಿಸಿದ ಪ್ಲಾಂಟೇಷನ್ ಕಾರ್ಪರೇಷನ್ ಇದೀಗ ಮೌನ ವಹಿಸಿರುವುದು ಎಷ್ಟು ಸರಿ?. ಕಾಸರಗೋಡಿನ 11 ಪಂಚಾಯತುಗಳ ಜನರು ಎರಡು ದಶಕಗಳಿಂದ ಎಂಡೋ ಪೀಡೆಗೆ ಬಲಿಯಾಗುತ್ತಾ ಬಂದಿರುವುದು ನಿಮಗೆ ಕಾಣಿಸುವುದಿಲ್ಲವೇ? ಎಂಡೋ ಪೀಡಿತರ ಸಂಕಷ್ಟಗಳ ಬಗ್ಗೆ ದಿನ ನಿತ್ಯವೂ ಒಂದಲ್ಲ ಒಂದು ಸುದ್ದಿ ವರದಿಯಾಗುತ್ತಲೇ ಇದ್ದರೂ ನೀವು ಕಿವಿ, ಕಣ್ಣು ಮುಚ್ಚಿ ಕುಳಿದ್ದೀರಾ? ‘ಎಂಡೋ’ ವಿಷ ಎಂದು ಇಷ್ಟರವರೆಗೆ ಪ್ರೂವ್ ಆಗಿಲ್ಲ ಆದ್ದರಿಂದ ಎಂಡೋ ನಿಷೇಧ ಯಾಕೆ ಅಂತಾ ಕೇಳ್ತಿದ್ದೀರಲ್ಲಾ? ಎಂಡೋ ಪೀಡಿತ ಪ್ರದೇಶಗಳಿಗೊಮ್ಮೆ ಭೇಟಿ ನೀಡಿ ನೋಡಿ. ಈ ಜನರ ಸಂಕಷ್ಟಕ್ಕೆ ನಿಮ್ಮ ಮನ ಮರುಗದೇ ಇದ್ದರೆ ನಿಮ್ಮದು ‘ಕಲ್ಲು ಹೃದಯ’ ಅಂತಾ ಅಂದುಕೊಳ್ಳುತ್ತೀನಿ.
ಮತ್ತಷ್ಟು ಓದು 
ಹಿಂದಿ ಬೇಕು …. ಕೂಪಮಂಡೂಕತನ ಬೇಡ……..
*ಅನಿರುದ್ಧ ಕುಮಟ
ಮಕ್ಕಳ ಜಗಳದಲ್ಲಿ ಅಮ್ಮ ಬಡಪಾಯಿಯಾದಳು ಅಂತ ಒಂದು ಗಾದೆ ಮಾತು ಇದೆಯಾ? ಇಲ್ಲದಿರಲೂಬಹುದು. ಆದರೆ ನಿಮ್ಮ ಕನ್ನಡದ ಜಗಳ, ಆ ನೀರಿನ ಜಗಳ, ಆ ಧಾರ್ಮಿಕ ಕಲಹ ಇವನ್ನೆಲ್ಲ ನೋಡಿದಾಗ ನನಗೆನಿಸಿದ್ದು ಅಮ್ಮ ಬಡವಾಗಿದ್ದಾಳೆ ಅಂತ. ಅಲ್ಲಾರಿ ನೀವು ಪಕ್ಕದ ಮರಾಠಿಗರನ್ನು ಕಂಡರೆ ಬೆಂಕಿಕಾರುತ್ತಿರಿ. ಪಾಪ ಆ ತಮಿಳರು ಇಲ್ಲಿ ಬೆಳೆದರೆ ಕರಬುತ್ತೀರಿ. ಅಥವಾ ನೀರಿನ ವಿಷಯ ಹಿಡಿದುಕೊಂಡು ಸುನಾಮಿಯಂತೆ ಜಗಳ ಮಾಡುತ್ತೀರಿ…ಥಕ್ ನಿಮ್ಮ ಇಂತಹ ಜಗಳದಲ್ಲಿ ಬಡವಾದದ್ದು ಯಾರು. ಭಾರತವಲ್ಲವೇ. ಇಡೀ ಭಾರತದ ಬಗ್ಗೆ ಯೋಚಿಸಬೇಕಾದ ನಾವೆಲ್ಲ, ದಾಯಾದಿಗಳ ತರಹ ಯಾಕೆ ಕಿತ್ತಾಡಿಕೊಳ್ಳಬೇಕು? ನಿಮಗೆ ನಿಮ್ಮ ಬಗ್ಗೆಯೇ ಅಸಹ್ಯ ಎನಿಸುವುದಿಲ್ಲವೇ?
ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ ಅನ್ನೋ ಹೆಡ್ ಲೈನ್ ನಲ್ಲಿ ಪ್ರಕಟವಾದ ಲೇಖನವನ್ನೇ ನೋಡಿ. ಪತ್ರಿಕೆಯಲ್ಲಿ ವಿದೇಶಿಯರ ಹಿಂದಿ ಮೋಹ ಅನ್ನೋ ಲೇಖನ ಪ್ರಕಟಗೊಂಡರೆ ಸಾಕು. ಜಗತ್ತಿನಲ್ಲಿರುವ ಸಮಸ್ತ ಕನ್ನಡ ಪುಸ್ತಕಗಳೆಲ್ಲ ಬೆಂಕಿಯಲ್ಲಿ ಉರಿದು ಹೋಯ್ತು ಅನ್ನೋ ತರಹ ಯಾಕೆ ಉರಿದು ಹೋಗ್ತಿರಿ. ಅರೇ ಅದೊಂದು ಪತ್ರಿಕೆ. ಅದರಲ್ಲಿ ಭಿನ್ನ, ವಿಭಿನ್ನ ವಿಚಾರಧಾರೆಯ ಲೇಖನಗಳು ಪ್ರಕಟಗೊಳ್ಳುತ್ತವೆ. ಅವರೇನೂ ಹಿಂದಿಯಲ್ಲಿ ಬರೆದಿಲ್ಲ ನನಗಂತೂ ಕನ್ನಡಿಗರಲ್ಲಿ ಹಿಂದಿ ಕಲಿಸುವ ಒಂದು ಪ್ರಯತ್ನದಂತೆ ಆ ಲೇಖನ ಕಾಣಲೇ ಇಲ್ಲ. ನನ್ನ ಪ್ರಕಾರ ಕನ್ನಡಿಗರು ಮತ್ತಷ್ಟು ಓದು 





