ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

6
ಏಪ್ರಿಲ್

ಇಗೋ,ಇದರಲ್ಲಿ ಮುಂದಿದೆ…

– ಕಿರಣ ಬಾಟ್ನಿ, ಬನವಾಸಿ ಬಳಗ

’ನಿಲುಮೆ’ಯಲ್ಲಿ ಕನ್ನಡದ ಸೊಲ್ಲರಿಮೆಯ ಬಗ್ಗೆ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಅಕ್ಟೋಬರ್ ೨೦೦೮ರಲ್ಲಿ ನಾನು ಬರೆದ ಒಂದು ಬರಹವನ್ನು ಬನವಾಸಿ ಬಳಗದ ಗೆಳೆಯರಾದ ಶ್ರೀ ಆನಂದ್ ಜೋಶಿಯವರು ಈ ಚರ್ಚೆಗೆ ಸರಿಹೊಂದುತ್ತದೆ ಎಂದು ಪ್ರಕಟಣೆಗೆ ಕಳುಹಿಸಿ ಅದು ಪ್ರಕಟಿಸಲಾಗಿ, ಆ ಬರಹದಲ್ಲಿ ಬಂದ ಕೆಲವು ವಿಶಯಗಳ ಬಗ್ಗೆ, ಮತ್ತು ಬನವಾಸಿ ಬಳಗದ ನಿಲುವುಗಳ ಬಗ್ಗೆ ತಮ್ಮ ೪/೪/೨೦೧೧ರ ಬರಹದಲ್ಲಿ ಶ್ರೀ. ಅಜಕ್ಕಳ ಗಿರೀಶ ಬಟ್ಟರು ಪ್ರತಿಕ್ರಿಯೆ ನೀಡಿರುವುದರಿಂದ ಈ ಬರಹವನ್ನು ಬರೆಯುತ್ತಿದ್ದೇನೆ.

ಆ ಬರಹದಲ್ಲಿ ಗಿರೀಶಬಟ್ಟರನ್ನು ಕುರಿತು ನಾನು ಯಾವ ಮಾತನ್ನೂ ಆಡಿಲ್ಲ; ಅದನ್ನು ಬರೆದಾಗ ಅವರು ತಮ್ಮ ಹೊತ್ತಗೆಯನ್ನು ಪ್ರಕಟಿಸಿದ್ದರ ನೆನಪಿಲ್ಲ, ಅವರ ಹೆಸರೂ ನನಗಾಗ ಗೊತ್ತಿರಲಿಲ್ಲ. ಆದುದರಿಂದ ಆ ಬರಹದಲ್ಲಿ ಶಂಕರಬಟ್ಟರಿಗೆ ಗಿರೀಶಬಟ್ಟರು ಕೊಟ್ಟಿರುವ ಉತ್ತರಗಳ ವೈಗ್ನಾನಿಕತೆ-ಅವೈಗ್ನಾನಿಕತೆಗಳ ಬಗ್ಗೆ ನಾನು ಮಾತನಾಡಿರಲು ಸಾದ್ಯವೇ ಇರಲಿಲ್ಲ. ಆದರೆ ಶ್ರೀ. ಕೆ. ವಿ. ತಿರುಮಲೇಶರ ಒಂದು ಬರಹವನ್ನು ಕುರಿತು ಆ ಮಾತುಗಳನ್ನು ಆಡಿದ್ದು ನಿಜ, ಅವರು ಪ್ರತಿನಿದಿಸುವ ’ಹಳೆ-ಶಾಲೆ’ಯವರೆಲ್ಲರನ್ನೂ ಕುರಿತು ಆ ಮಾತುಗಳನ್ನು ಆಡಿದ್ದು ನಿಜ. ಈಗ ಗಿರೀಶಬಟ್ಟರಿಗೆ ಆ ಮಾತುಗಳು ತಮ್ಮನ್ನು ಕುರಿತೇ ಆಡಿದ್ದು ಎಂದು ಅನಿಸಿರುವುದರಲ್ಲಿ ಹಳೆಯ ಬರಹವನ್ನು ಹೊಸ ಚರ್ಚೆಯೊಂದರಲ್ಲಿ ಪ್ರಕಟಿಸಿದ್ದು ಒಂದು ಕಾರಣವಾದರೆ, ಮತ್ತೊಂದು ಕಾರಣ ನಿಜಕ್ಕೂ ಗಿರೀಶಬಟ್ಟರು ಆ ’ಹಳೆ-ಶಾಲೆ’ಗೇ ಸೇರುತ್ತಾರೆ ಎನ್ನುವುದು. ಮೊದಲನೆಯ ಕಾರಣಕ್ಕೆ ಬನವಾಸಿ ಬಳಗದ ಪರವಾಗಿ ನಾನು ಗಿರೀಶಬಟ್ಟರಲ್ಲಿ ಕ್ಶಮೆ ಕೇಳಿಕೊಳ್ಳುತ್ತ, ಎರಡನೆಯ ಕಾರಣದಿಂದ ಪ್ರೇರಿತರಾಗಿ ಅವರು ತಮ್ಮ ೪/೪/೨೦೧೧ರ ಬರಹದಲ್ಲಿ ಅದೇ ಹಳೆಯ ವಾದವನ್ನು ಮಂಡಿಸಿರುವುದರಿಂದ ಅದಕ್ಕೆ ಇಲ್ಲಿ ಮರುವುತ್ತರ.

ಮತ್ತಷ್ಟು ಓದು »

5
ಏಪ್ರಿಲ್

ಯಾವುದು ನಿಜವಾದ ದೇಶಪ್ರೇಮ ?

– ವಸಂತ್ ಶೆಟ್ಟಿ  

ವಿಶ್ವ ಕಪ್ ಗೆದ್ದ ಭಾರತಕ್ಕೆ ಅಭಿನಂದನೆಗಳು. ಹಾಗೆಯೇ ಕೊನೆಯವರೆಗೂ ಅತ್ಯಂತ ಸ್ಪರ್ಧಾತ್ಮಕ ಕ್ರಿಕೆಟ್ ಆಡಿದ ಶ್ರೀಲಂಕೆಗೂ ಶುಭಾಶಯಗಳು. ಮೊನ್ನೆ ಮೊನ್ನೆಯ ಪಾಕಿಸ್ತಾನದ ಎದುರಿನ ಸೆಮಿ ಫೈನಲ್ ಬಗ್ಗೆ ಮಾಧ್ಯಮಗಳಲ್ಲಿ ಇದ್ದ ಕ್ರೇಜ್, ಇದೊಂದು ಯುದ್ಧ ಅನ್ನುವ ಮನಸ್ಥಿತಿ ಫೈನಲ್ ಪಂದ್ಯದಲ್ಲಿ ಅಷ್ಟಾಗಿ ಕಾಣಲಿಲ್ಲ. ಸೆಮಿ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿದರೆ ಸಾಕು, ಫೈನಲ್ ಗೆಲ್ಲದಿದ್ದರೂ ಆದೀತು ಅನ್ನುವ ಅನಿಸಿಕೆಗಳನ್ನು ಅಲ್ಲಲ್ಲಿ ಕಂಡೆ. ಹಾಗೆಯೇ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತಕ್ಕೆ ಈ ಕಪ್ಪು ಬೇಕೇ ಬೇಕು ಅನ್ನುವ ತರಹದ ಚರ್ಚೆಗಳನ್ನು ಅಲ್ಲಲ್ಲಿ ಕಂಡೆ. ಕೊನೆಯಲ್ಲಿ, ಕಪ್ ಗೆದ್ದ ತಂಡಕ್ಕೆ ಹೆಚ್ಚಿನ ಸರ್ಕಾರಗಳು (ನಮ್ಮ ರಾಜ್ಯ ಸರ್ಕಾರವು ಸೇರಿದಂತೆ ) ಬಹುಮಾನದ ಸುರಿಮಳೆ ಗೈದು ತಮ್ಮ ಅಸಂಖ್ಯ ಪಾಪುಲಿಸ್ಟ್ ಕ್ರಮಗಳಿಗೆ ಇನ್ನೊಂದು ಸೇರ್ಪಡೆ ಮಾಡಿದ್ದನ್ನು ಕಂಡೆ. ಒಂದು ಆಟಕ್ಕೆ ಈ ಮಟ್ಟದ ಗಮನ, ಆದ್ಯತೆ ಕೊಡುವಷ್ಟರಲ್ಲಿ ಅದರ ಅರ್ಧದಷ್ಟು ಗಮನ ಈ ದೇಶದ, ಅದರ ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲೂ ಕೊಟ್ಟಿದ್ದಲ್ಲಿ ನಮ್ಮೆದುರು ಇರುವ ಸಮಸ್ಯೆಗಳಲ್ಲಿ ಕೆಲವಕ್ಕಾದರು ಪರಿಹಾರ ಸಿಕ್ಕಿರುತಿತ್ತೇನೋ ಅನ್ನಿಸಿತು.

ಮತ್ತಷ್ಟು ಓದು »

4
ಏಪ್ರಿಲ್

ಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ?

ಅಜಕ್ಕಳ ಗಿರೀಶ್ ಭಟ್

ಕನ್ನಡದ ಬಗ್ಗೆ ಚರ್ಚೆಯಾಗುತ್ತಿರುವುದು ಸಂತೋಷ. ಬನವಾಸಿ ಬಳಗ ಹಾಗೂ ಶುಭಶ್ರೀಯವರ ಲೇಖನಗಳನ್ನು ಓದಿದೆ. ಈಗಾಗಲೇ ನಾನು ಹಿಂದಿನ ಒಂದು ಪ್ರತಿಕ್ರಿಯೆಯಲ್ಲಿ ಬರೆದಿರುವಂತೆ, ಅಲ್ಲಿ ಎತ್ತಲಾಗಿರುವ ಹಲವು ಅಂಶಗಳು ನನ್ನ ಪುಸ್ತಕದಲ್ಲಿ ಪ್ರಸ್ತಾಪವಾಗಿವೆ. ಆದರೂ ಕೆಲವು ನಿರ್ದಿಷ್ಟ ಪ್ರಶ್ನೆಗಳನ್ನು ನಾನು ಇಲ್ಲಿ ಮತ್ತೆ ಎತ್ತಿಕೊಳ್ಳಬಯಸುತ್ತೇನೆ. ಶಂಕರ ಭಟ್ಟರ ಸಿದ್ಧಾಂತಗಳ ಬಗ್ಗೆ ನಾನು ಬರೆದುದನ್ನು ವೈಜ್ಞಾನಿಕವಲ್ಲ, ವೈಯಕ್ತಿಕ ದಾಳಿ ಅಂತೆಲ್ಲ ಕರೆಯಲಾಗಿದೆ. ವಾದದ ವಿಷಯಗಳ ಬಗ್ಗೆ ಹೇಳುವುದಕ್ಕಿಂತ, ಶಂಕರ ಭಟ್ಟರ ವಾದಗಳ ಕುರಿತು ನಾನು ಬರೆದ ಹೊತ್ತಗೆಯ ಶೀರ್ಷಿಕೆಯ ಬಗ್ಗೆಯೇ ಹೆಚ್ಚು ಒತ್ತು ಕೊಟ್ಟು ಬರೆದಿದ್ದಾರೆ. ಇರಲಿ. ಇದು ಅಷ್ಟು ಮುಖ್ಯ ಅಂತ ನನಗೆ ಅನ್ನಿಸದಿದ್ದರೂ ಈ ಶೀರ್ಷಿಕೆಯ ಬಗ್ಗೆ ಆರೋಪವನ್ನು ಮತ್ತೆ ಮತ್ತೆ ಮಾಡಲಾಗಿರುವುದರಿಂದ ಸಮರ್ಥನೆ ನೀಡುವೆ. ಮೊದಲೇ ಸ್ಪಷ್ಟಪಡಿಸುತ್ತೇನೆ,ನನಗೆ ಆ ಹಿರಿಯ ಭಾಷಾವಿದ್ವಾಂಸರ ಬಗ್ಗೆ ತುಂಬ ಗೌರವ ಉಂಟು. ವೈಯಕ್ತಿಕ ದ್ವೇಷವಾಗಲೀ ಅಸೂಯೆಯಾಗಲೀ ಇಲ್ಲ ! ಇನ್ನು, ಶೀರ್ಷಿಕೆಯಲ್ಲಿ ಅವರ ಹೆಸರು ಯಾಕೆ ತರಬೇಕಿತ್ತು? ಅವರು ಏಕಾಂಗಿ ಎಂದು ಬಿಂಬಿಸುವ ಯತ್ನವೇ? ಇತ್ಯಾದಿ ಪ್ರಶ್ನೆಗಳೂ ಬಂದಿವೆ.
ಮೊದಲನೆಯದಾಗಿ ತಾವು ಹೇಳಿದ ಹಾಗೆ ವ್ಯಾಪಕವಾಗಿ ಹೊತ್ತಗೆಗಳನ್ನು ಬರೆಯುತ್ತಿರುವವರು ಅವರೊಬ್ಬರೇ. ಅವರನ್ನು ಬೆಂಬಲಿಸಿದ ವಿವಿಧ ವಿ.ವಿ.ಗಳ ಮುಖ್ಯಸ್ಥರು ಅಥವಾ ಇನ್ನಾರಾದರೂ (ಶುಭಶ್ರೀಯವರೂ ಸೇರಿದಂತೆ) ಬರೆಯಲಾರಂಭಿಸಿಲ್ಲ. ಇನ್ನು ಆರಂಭಿಸಲೂಬಹುದು. ಆರಂಭಿಸಿದರೆ ನನ್ನ ಆಕ್ಷೇಪವಿಲ್ಲ, ದುಖವೂ ಇಲ್ಲ. ಯಾರಾದರೂ ಬರೆದರೆ ನಾನು ಓದುವುದಿಲ್ಲ ಅಂತ ಶಪಥ ಕೂಡ ಮಾಡೊಲ್ಲ. ಯಾಕೆಂದರೆ ಓದದಿದ್ದರೆ ಓದದವರಿಗೆ ನಷ್ಟ ಅಂತ ನನಗೊತ್ತು. ಒಟ್ಟಿನಲ್ಲಿ ಈಗ ಸದ್ಯಕ್ಕೆ ನಿಜವಾಗಿ ಕತ್ತರಿ ಪ್ರಯೋಗ ಮಾಡಿದವರು ಅವರೊಬ್ಬರೇ.
2
ಏಪ್ರಿಲ್

ಆತನಿಗೆ ಮದುವೆಯ ಮೊದಲೆ ಗೊತ್ತಿತು!?

ಪವನ್ ಎಂ.ಟಿ

ಯಾವುದೇ ತೊಂದರೆಯಿಲ್ಲದೆ ಸುಂದರವಾಗಿ ಜೀವನಮಾಡುತ್ತಿದ್ದ ವಿದ್ಯಾವಂತಳಾದ ಆಕೆಯ ಬಾಳಿನಲ್ಲಿ ಮದುವೆಯ ಸಂದರ್ಭವೊಂದು ಬಂದಿತು. ದೂರದ ಮುಂಬೈಯಿಂದ ಯುವಕನೊರ್ವ ಆಕೆಯನ್ನು ನೋಡಲು ಬಂದ. ಆ ವರನಿಗೆ ವಧು ಇಷ್ಟವಾದಳು. ಮುಂಬೈಯಲ್ಲಿರುವ ಹುಡುಗ, ಒಳ್ಳೆಯ ಸಂಪಾದನೆ, ಸುಂದರ, ಇದೆಲ್ಲವನ್ನು ಕಂಡ ವಧುವಿನ ಕಡೆಯವರಿಗೂ ವರ ಇಷ್ಟವಾದನು. ವರನ ಕಡೆಯವರು ಆತುರದಲ್ಲಿ ಮದುವೆಯನ್ನು ಪಿಕ್ಸ್ ಮಾಡಿದರು. ಮದುವೆಯೂ ಆಯಿತು. ಮದುವೆಯಾಗಿ ಮೊದಲ ಮಗುವಾಗುವ ಸಮಯದಲ್ಲಿ  ಆಕೆಗೆ ತಿಳಿಯಿತು ನನಗೆ ಎಚ್‌ಐವಿ ಬಂದಿದೆ ಎಂದು. ಇದನ್ನು ಆಕೆಯ ಗಂಡ ಉಡುಗೊರೆಯಾಗಿ ನೀಡಿದ್ದ ಆತನಿಗೆ ಮದುವೆಗೆ ಮೊದಲೇ ಈ ರೋಗವಿದ್ದರೂ ಅದನ್ನು ಎಲ್ಲರೂ ಸೇರಿ ಮುಚ್ಚಿ ಹಾಕಿ ಆಕೆಯ ಜೀವನದಲ್ಲಿ ಆಟವಾಡಿದ್ದರು. ಆದರೆ ಸಂಘಟನೆಯ ಸಹಾಯ ಪಡೆದು ಎಆರ್‌ಟಿ ಚಿಕಿತ್ಸೆಯನ್ನು ಪಡೆದು ಎಲ್ಲರಂತೆ ಬದುಕುತ್ತಿದ್ದಾಳೆ. ನೋಡಿ ಈ ಮಾತನ್ನು ಎಚ್‌ಐವಿ ಪೀಡಿತೆಯಾದ ಅಮಾಯಕ ಹೆಣ್ಣುಮಗಳೊಬ್ಬಳು ಹೇಳುತ್ತಿರುವಂತಹದ್ದು. ಈ ರೀತಿ ಮೋಸವನ್ನು ಹೋಗುವುದಕ್ಕೆ ಮೊದಲು ವಿವಾಹ ಸಂಬಂಧವನ್ನು ಮಾಡುವಾಗ ನೀವೆಲ್ಲ ಸ್ವಲ್ಪ ಯೋಚನೆಮಾಡಿ ನಿರ್ಧಾರ ತೆಗೆದುಕೊಳ್ಳಿ. ಆವಾಗ ಮುಂದೆ ಪರಿತಪಿಸುವ ಅಗತ್ಯ ಬರಲ್ಲ. ಆ ಮಾತು ಆಗಿರಲಿ ಈಗ ಎಚ್‌ಐವಿ ಬಂದವರು ಏನು ಮಾಡುವುದು ಎಂಬುದರ ಬಗ್ಗೆ ಸ್ವಲ್ಪ ಗಮನಹರಿಸೋಣ. ಮತ್ತಷ್ಟು ಓದು »

1
ಏಪ್ರಿಲ್

ಸುದ್ದಿ ‘ಮೋಹ’ದ ಪತ್ರಿಕೆಗಳ ಬಗ್ಗೆ…..

ಅರೆಹೊಳೆ ಸದಾಶಿವರಾಯರು

ಕಟೀಲು ದೇವಳಕ್ಕೆ ಶಿಲ್ಪಾ ಶೆಟ್ಟಿ ಬಂದರು!. ಇದು ನಮ್ಮ ಪತ್ರಿಕೆಗಳ ಮಟ್ಟಿಗೆ ಬಹು ಮುಖ್ಯ ಸುದ್ದಿಯಾಯಿತು! ಆಶ್ಚರ್ಯವೆಂದರೆ, ನಮ್ಮ ಪತ್ರಿಕೆಗಳು ಇದನ್ನು ಮುಖ ಪುಟದಲ್ಲಿ ಪ್ರಕಟಿಸಿ ಕೃತಾರ್ಥವಾದುವು. ಆಕೆ ತನ್ನದೇ ಹುಟ್ಟೂರಿಗೆ ಬಂದದ್ದು, ತನ್ನ ಅಜ್ಜಿಮನೆಯಲ್ಲಿ ಓಡಾಡಿದ್ದು, ಕೋಳಿ ಸುಕ್ಕಾ ತಿಂದದ್ದು…..ಎಲ್ಲವು ಸುದ್ದಿಯಾಯಿತು. ಮತ್ತೂ ಒಂದು ವಿಶೇಷ ಸುದ್ದಿ ಎಂದರೆ ಕಟೀಲು ಕ್ಷೇತ್ರವೇ ಈಕೆಯ ಭೇಟಿಯಿಂದ ಪವಿತ್ರವಾಯಿತೇನೋ ಎಂಬಷ್ಟೂ ಸುದ್ದಿಯನ್ನು ಆಕೆ ವಿಮಾನದಲ್ಲಿ ಬಂದಿಳಿದಿದ್ದರಿಂದ, ಮರಳಿ ವಿಮಾನವೇರುವ ತನಕ ಬರೆಯಲಾಯಿತು. ಎಲ್ಲಾ ಪತ್ರಿಕೆಗಳ ಒಬ್ಬೊಬ್ಬ ಪತ್ರಕರ್ತನೂ ಅಷ್ಟು ಹೊತ್ತಿನ ಮಟ್ಟಿಗೆ ಆಕೆಯ ಸಂಸಾರದ ಹಿಂದಿದ್ದ.!

ಈ ಕ್ಷಣದಲ್ಲಿ ನನಗೊಂದು ವಿಷಯ ನೆನಪಿಗೆ ಬರುತ್ತದೆ. ಇತ್ತೀಚೆಗೆ ನಾವು ಒಂದು ಸಮ್ಮೇಳನವನ್ನು ಆಯೋಜಿಸಿದ್ದೆವು. ಅದರ ಉದ್ಘಾಟನಾ ಸಮಾರಂಭದ ವರದಿ ಸವಿಸ್ತಾರವಾಗಿ ಪ್ರಕಟವಾಯಿತು. ಉದ್ಘಾಟನೆ ಮುಗಿಯುತ್ತಲೇ, ಒಂದು ಮಗು ವಾಮಾಚಾರಕ್ಕೆ ಬಲಿಯಾದ ಘಟನೆ ಬಹಿರಂಗ ಗೊಂಡಿತು. ಅದೇ ಸಂಜೆ ನಮ್ಮ ಸಮ್ಮೇಳನದ ಸಮಾರೋಪವೂ ನಡೆಯುತ್ತಿತ್ತು. ಆದರೆ ಸಂಜೆ ಒಬ್ಬನೇ ಒಬ್ಬ ಪತ್ರಕರ್ತನೂ ಅಲ್ಲಿರಲಿಲ್ಲ. ಅಲ್ಲಿನ ಯಾವ ವರದಿಯೂ ದಾಖಲಾಗಲಿಲ್ಲ.  ಸಮ್ಮೇಳನದಲ್ಲಿಯೇ ತಲ್ಲೀನರಾಗಿದ್ದ ನಮಗೆ ಇದೇಕೆ ಎಂದು ಆಶ್ಚರ್ಯವಾಯಿತು. ನಂತರ,   ನಮಗೆ ಆ ವಾಮಾಚಾರದ ಘಟನೆಯಿಂದ ಸಂಭ್ರಮದ ಘಟನೆಯನ್ನೂ ಮರೆಯುವಷ್ಟು ಘಾಸಿಯಾಯಿತು-ಖೇದವಾಯಿತು. ಮತ್ತಷ್ಟು ಓದು »

1
ಏಪ್ರಿಲ್

ಸ್ನೇಹಿತ ಮೊದಲ ಬಾರಿ ಅತ್ತುಬಿಟ್ಟ…!

ಪ್ರವೀಣಚಂದ್ರ, ಪುತ್ತೂರು

ಬಸ್ ವೇಗವಾಗಿ ಸಾಗುತ್ತಿತ್ತು. ಊರಿಗೆ ಬಂದ ಸಂಭ್ರಮವನ್ನು ಕಿತ್ತುಕೊಂಡ ಆ ಕ್ಷಣದ ಕುರಿತು ಯೋಚಿಸುತ್ತಿದ್ದೆ. ಬಸ್ಸಿನ ಕಿಟಕಿ ಹಾಕಿದ್ದರೂ ಚಳಿ ಕಾಡುತ್ತಿತ್ತು. ಹೃದಯವೂ ತಣ್ಣಗಿತ್ತು. ಅಪದಮನಿ ಅಭಿದಮನಿಗಳೆರಡೂ ನೋವಿನಲ್ಲಿತ್ತು. ಆಪ್ತ ಸ್ನೇಹಿತನೊಬ್ಬನ ಮುಂದೆ ಸ್ವಾಭಿಮಾನದ ಪ್ರಶ್ನೆಯೆದ್ದು ಅಹಲ್ಯೆಯಂತೆ ಕಲ್ಲಾದ ಪರಿಣಾಮವದು. ನನ್ನ ಎದುರು ಮಾತು ಆತನಿಗೆ ಅನಿರೀಕ್ಷಿತವಾಗಿತ್ತು. ನನಗೆ ಅನಿವಾರ್ಯವಾಗಿತ್ತು.
***
ಬ್ಯಾಗಿನಲ್ಲಿದ್ದ ಪತ್ರಿಕೆಯೊಂದನ್ನು ಕೈಗೆತ್ತಿಕೊಂಡೆ. ಅಲ್ಲಿ ನಾಗತಿಹಳ್ಳಿ ಸಂಬಂಧದ ಕುರಿತು ಬರೆದಿದ್ದರು. ಸಂಬಂಧವೆಂದರೆ ಬೆಂಕಿ ಮತ್ತು ಚಳಿ ಕಾಯುವವನ ನಡುವಿನ ಅಂತರದಂತೆ. ಚಳಿಯಾಗುತ್ತೆ ಎಂದು ಬೆಂಕಿಯನ್ನು ಮುಟ್ಟುವ ಹಾಗಿಲ್ಲ. ಬೆಂಕಿಗೂ ವ್ಯಕ್ತಿಗೂ ಒಂದಿಷ್ಟು ಅಂತರ ಕಾಯ್ದುಕೊಳ್ಳಬೇಕು ಅಂತ ಬರೆದಿದ್ದರು. ಸ್ನೇಹಕ್ಕೂ ಇದು ಅನ್ವಯವಾಗುತ್ತಾ? ನಾನು ಯೋಚಿಸತೊಡಗಿದೆ. ಸ್ನೇಹಕ್ಕೆ ಯಾವುದೇ ಅಂತರಗಳೇ ಇಲ್ಲವಾ ಅರ್ಥವಾಗಲಿಲ್ಲ.
***
ಇನ್ ಬಾಕ್ಸ್ ತೆರೆದು ನೋಡಿದಾಗ ಸ್ನೇಹದ ಮಹತ್ವ ಸಾರುವ ಹತ್ತಾರು ಸಂದೇಶಗಳು ಬಂದು ಕೂತ್ತಿದ್ದವು. ನಮ್ಮ ಕೋಪನೋಡಿ ಸ್ನೇಹಿತರೇ ಕಳುಹಿಸುತ್ತಿದ್ದರು. ಬೇರೆ ಸಂದರ್ಭದಲ್ಲಿಯಾದರೆ ಡಿಲಿಟ್ ಮಾಡಿ ಬಿಡುತ್ತಿದ್ದೆ. ಈಗ ಪ್ರತಿಪದಗಳು ಅರ್ಥವತ್ತಾಗಿ ಗೋಚರಿಸುತ್ತಿದ್ದವು. ನಮ್ಮೊಳಗೆ ಯಾಕೆ ಜಗಳ ಎಂದು ಸ್ನೇಹಿತರೆಲ್ಲರ ಗೋಗೆರತದಂತೆ ಕಾಡುತ್ತಿದ್ದವು.
***
ಅವನಲ್ಲಿ ಜಗಳ ಮಾಡಿದ ಮರುಕ್ಷಣವೇ ಆತನೊಂದಿಗೆ ಮನಸ್ಸು ರಾಜಿಯಾಗಿತ್ತು. ಆದರೆ ಮಾತನಾಡಲು ಮನಸ್ಸು ಇಚ್ಚಿಸಲಿಲ್ಲ. ಏನು ನಡೆಯಿತು ಎಂದು ಬರೆಯಲು ಕಷ್ಟ. ಯಾಕೆಂದರೆ ಅದರ ಯಾತನೆ ಅನುಭವವೇದ್ಯ. ಇಲ್ಲೊಂದು ಕತೆ ಓದಿ.
***
ಮತ್ತಷ್ಟು ಓದು »

31
ಮಾರ್ಚ್

ಹಳ್ಳಿಗರೇ ಕರೆಂಟ್ ಉಳಿಸಿ, ಎಂಜಿ ರೋಡಿಗೆ ಲೈಟ್ ಹಾಕಬೇಕು

ಸಾತ್ವಿಕ್ ಎನ್ ವಿ

ಪ್ರಪಂಚ ಹೀಗೆನೇ!
ಯಾರು ಪಾಲಿಸ್ತಾರೋ ಅವರ ಮೇಲೆಯೇ ಎಲ್ಲವನ್ನು ಹೇರಿ ಅರಾಮದಲ್ಲಿ ಇದ್ದು ಬಿಡುತ್ತೆ. ‘ಉಳಿಸಿ’ ಅಂತ ಸರ್ಕಾರ ಯಾವುದಾದ್ರು ಅಭಿಯಾನ ಮಾಡಿದ್ರೆ ಅದರ ಟಾರ್ಗೆಟ್ ಮಧ್ಯಮ ಇಲ್ಲವೇ ಕೆಳವರ್ಗವೇ ಆಗಿರುತ್ತೆ. ಅದು ನೀರುಳಿಸಿ ಎಂಬುದೋ, ಪೆಟ್ರೋಲ್ ಉಳಿಸಿ ಅಂತಲೋ, ಕಡೆಗೆ ವಿದ್ಯುತ್ ಉಳಿಸಿ ಅಂತಾನೋ ಇರಬಹುದು. ಇಲ್ಲಿ ‘ಉಳಿಸಬೇಕಾದವರು’ ಯಾವುದನ್ನು ಕಡಿಮೆ ಪಡೆಯುತ್ತಿರುತ್ತಾರೋ ಅವರೇ! ವಿಚಿತ್ರ, ಆದ್ರೂ ಸತ್ಯ.
ಉದಾಹರಣೆಗೆ ನೀರು ಉಳಿಸಿ-ಮಿತವಾಗಿ ಬಳಸಿ ಅಂತ ಹೇಳಲಾಗುತ್ತೆ. ಆದ್ರೆ ಅದನ್ನು ಪಾಲಿಸಬೇಕಾದ ಜನತೆಗೆ ವಾರಕ್ಕೆ ಒಮ್ಮೆಯೋ ಎರಡು ಬಾರಿಯೋ ನೀರು ಬಂದ್ರೆ ಅದೇ ಹೆಚ್ಚು. ಒಮ್ಮೆ ಎಲ್ಲಿಯಾದ್ರೂ ಈ ಜನರು ಈ ನಿಯಮಗಳನ್ನು ಪಾಲಿಸುವಲ್ಲಿ ಸೋತರೆ ನಾವೆಲ್ಲ ಬೊಬ್ಬೆ ಹಾಕಿ ಬಿಡ್ತೇವೆ. ಅದ್ರೆ ಆ ಬೊಬ್ಬೆಯಲ್ಲಿ ಸತ್ಯವೊಂದು ಮುಚ್ಚಿ ಹೋಗಿರುತ್ತೆ. ಒಬ್ಬ ಶ್ರೀಮಂತನ ಮನೆಯ ಟಾಯ್ಲೆಟ್ ನಲ್ಲಿ ಬಳಕೆಯಾಗುವ ನೀರಿನಷ್ಟು ಸಾಮಾನ್ಯ ಜನರ ಕುಡಿಯುವ ನೀರು ಶುದ್ಧವಾಗಿರಲ್ಲ.

ಮತ್ತಷ್ಟು ಓದು »

31
ಮಾರ್ಚ್

ಅಜಕ್ಕಳರಿಗೇಕೆ ಈ ಅಸಹನೆ?

(ಡಾ.ಅಜಕ್ಕಳ ಗಿರೀಶ್ ಭಟ್ ಅವರ ಲೇಖನಕ್ಕೆ ಶುಭಶ್ರೀಯವರ ಉತ್ತರ ಇಲ್ಲಿದೆ – ನಿಲುಮೆ)

– ಶುಭಶ್ರೀ

ಈ ಪುಸ್ತಕವನ್ನು ಬರೆದಿರುವ ಡಾ. ಅಜಕ್ಕಳ ಗಿರೀಶ್ ಭಟ್ಟರು ತಾವು ಬರೆದ ಪುಸ್ತಕಕ್ಕೆ ಇಟ್ಟಿರುವ ಹೆಸರೇ ಶ್ರೀಯುತರ ಉದ್ದೇಶವು ತಾತ್ವಿಕ ನಿಲುವನ್ನು ಪ್ರತಿಪಾದಿಸುವುದಾಗಲೀ, ವಾದವೊಂದನ್ನು ಆರೋಗ್ಯಕರವಾಗಿನಡೆಸುವುದಾಗಲೀ ಅಲ್ಲವೆಂದೂ ವ್ಯಕ್ತಿಯ ತೇಜೋವಧೆಯನ್ನು ಮಾಡುವುದಕ್ಕಾಗಿ ಮಾತ್ರವೇ ಎಂದೂ ವೇದ್ಯವಾಗುವುದಿಲ್ಲವೇ? ಇಲ್ಲದಿದ್ದರೆ “ಕನ್ನಡಕ್ಕೇಕೆ ಕತ್ತರಿ?” ಎನ್ನುವ ಹೆಸರು ಸಾಕಾಗುತ್ತಿತ್ತು.

“ಶಂಕರಬಟ್ಟರಕತ್ತರಿ” ಎಂದು ಬರೆದಿರುವ ಉದ್ದೇಶವೇ ಡಾ. ಡಿ ಎನ್ ಎಸ್ ಅವರನ್ನು ಏಕಾಂಗಿ ಎಂದು ಬಿಂಬಿಸುವ ದುರುದ್ದೇಶದಿಂದ ಅಲ್ಲವೇ? ಪುಸ್ತಕದ ಹೆಸರಿನ ಬಗ್ಗೆ ಆಕ್ಷೇಪಾ ಯಾಕೆಂದರೆ ಅದರಲ್ಲಿ ಶಂಕರಭಟ್ಟರನ್ನು ಹಳಿಯುವ ಉಮ್ಮೇದಿಯೊಂದೇ ಕಾಣುತ್ತಿರುವುದು. ಡಾ. ಡಿ ಎನ್ ಶಂಕರಭಟ್ಟರ ವಿಚಾರಗಳ ಬಗ್ಗೆ ನಡುನಡುವೆ ತಮ್ಮ ವಾದಕ್ಕೆ ಅನುಕೂಲವಾಗುವಂತಹ ಸಾಲುಗಳನ್ನು ಮಾತ್ರಾ ಎತ್ತಿಕೊಂಡು ತಮಗೆ ತೋಚಿದಂತೆ ವಿಶ್ಲೇಷಿಸಿರುವಂತೆ ಕಾಣುತ್ತಿದೆ. ಯಾಕೆಂದರೆ ಅಚ್ಚಕನ್ನಡ ವರ್ಣಮಾಲೆಯೆಂದು ಅನೇಕ ಕಡೆ, ಬಹಳಷ್ಟು ಹಿಂದೆಯೇ ಈ ಮಹಾಪ್ರಾಣ ಬಿಟ್ಟ ವರ್ಣಮಾಲೆ ಪ್ರಕಟವಾಗಿದೆಯಲ್ಲವೇ?

ಮೂಲತಃ ಶಂಕರಭಟ್ಟರ ನಿಲುವುಗಳನ್ನು ಖಂಡಿಸುತ್ತಾ ಇವುಗಳನ್ನು ಒಪ್ಪಿರುವ ಯಾವ ಭಾಷಾ ವಿಜ್ಞಾನಿಯೂ ಇಲ್ಲವೆನ್ನುವಂತೆ ಕೆಲವರು ಬರೆದಿರುವುದು ಸರಿಯಲ್ಲ. ಕರ್ನಾಟಕದ ಬಹುತೇಕ ಭಾಷಾ ವಿಜ್ಞಾನಿಗಳು ಇಂದು ಡಾ.ಡಿ ಎನ್ ಎಸ್ ಅವರ ನಿಲುವುಗಳ ಬಗ್ಗೆ –ಅವುಗಳಲ್ಲಿ ಒಪ್ಪಿತವಾಗುವುವೆಷ್ಟು? ಆಗದವೆಷ್ಟು?ಎಂದೆಲ್ಲಾ ಚರ್ಚೆ ನಡೆಸಿದ್ದಾರೆ. ಹಾಂ… ಅದೂ ಭಾಷಾ ವಿಜ್ಞಾನದ ನೆಲೆಯಲ್ಲಿ.  ಇವತ್ತಿನ ದಿವಸ ಕರ್ನಾಟಕದಲ್ಲಿ ಭಾಷಾವಿಜ್ಞಾನಿಗಳಲ್ಲಿ ದೊಡ್ಡ ಹೆಸರು ಡಾ. ಕೆ ವಿ ನಾರಾಯಣ, ಡಾ. ಸಿ ಎಸ್ ರಾಮಚಂದ್ರ,  ಡಾ. ಮಲ್ಲಿಕಾರ್ಜುನ್‍ಮೇಟಿ… ಮತ್ತಷ್ಟು ಓದು »

30
ಮಾರ್ಚ್

ನಮ್ಮ ನೆಲದಲ್ಲಿ ನಿಮ್ಮನ್ನು ಗೆಲಲು ನಾ ಬಿಡೆ!

– ಆಸು ಹೆಗ್ಡೆ

ನಿನ್ನೆಯ ಸುದ್ದಿ ರಾತ್ರಿ ಮೊಹಾಲಿಯಲ್ಲಿ
ಸುರಿಯುತ್ತಾ ಇತ್ತಂತೆ ತುಂತುರು ಮಳೆ
ಇಂದು ಅಲ್ಲಿ ಕಂಡು ಬರಲಿ ಬರಿ ನಮ್ಮ
ದಾಂಡಿಗರ ಓಟಗಳ ಭರ್ಜರಿ ಸುರಿಮಳೆ

ಮತ್ತಷ್ಟು ಓದು »

29
ಮಾರ್ಚ್

ಭಾರತ-ಪಾಕ್ ಮಧ್ಯೆ ನಡೆಯುವುದು ಕೇವಲ ಪಂದ್ಯವಲ್ಲ!

– ರಾಕೇಶ್ ಶೆಟ್ಟಿ

ಅದನ್ನ ಕೇವಲ ಕ್ರಿಕೆಟ್ ಪಂದ್ಯ ಅಂತ ಹೇಳಲು ಸಾಧ್ಯವಾ? ನಾಳೆ ಬುಧವಾರ ಮಧ್ಯಾನ್ಹ ೨.೩೦ರ ನಂತರ ಬಹುತೇಕ ರಸ್ತೆಗಳು ಬಿಕೋ ಎನ್ನಲು ಶುರುವಾಗುತ್ತವೆ! ಎಂ.ಎನ್.ಸಿಗಳು ಸಹ ಉದ್ಯೊಗಿಗಳಿಗೆ ನಾಳೆ ವಿನಾಯಿತಿ ಕೊಡಲಿವೆ.(ಕೊಡದಿದ್ರೆ ಮಾಡೋ ಕೆಲ್ಸದಲ್ಲಿ ಯಡವಟ್ಟು ಮಾಡಿಬಿಡ್ತಾರೇನೋ ಅನ್ನೋ ಭಯಕ್ಕಾಗಿ 😉 ).ಜನ ಟೀವಿ ಮುಂದೆ ಕೂತ್ರೆ ಮುಗಿತು ಭಾರತ-ಪಾಕ್ ಕ್ರಿಕೆಟ್ ಸಮರದ ಫ಼ಲಿತಾಂಶ ಬರುವವರೆಗೂ ಅಲ್ಲಾಡಲಿಕ್ಕಿಲ್ಲ.

ಭಾರತ-ಪಾಕ್ ನಡುವೆ ನಡೆಯುವ ವಿಶ್ವಕಪ್ ಪಂದ್ಯ ಅಂದರೆ ಅದು ಸಮರವೇ ಸರಿ! ವಿಶ್ವಕಪ್ನಲ್ಲಿ ಭಾರತ-ಪಾಕ್ ಇದುವರೆಗು ೯೨,೯೬,೯೯ ಮತ್ತು ೨೦೦೩ ರಲ್ಲಿ ೪ ಬಾರಿ ಮುಖಾಮುಖಿಯಾಗಿವೆ.ಮತ್ತು ೪ ಬಾರಿಯು ಭಾರತ ಪಾಕಿಗಳಿಗೆ ಬಡಿದಿದೆ.ಅದರಲ್ಲೂ ವಿಶೇಷವಾಗಿ ಸಚಿನ್ನದ್ದು ಪಾಕ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಆರ್ಭಟ ತುಸು ಹೆಚ್ಚು! ಅದರಲ್ಲೂ ೨೦೦೩ರಲ್ಲಿ ಸೌತ್ ಆಫ಼್ರೀಕಾದ ಲ್ಲಿ ನಡೆದ ಪಂದ್ಯದಲ್ಲಂತೂ, ’ಸಚಿನ್ನನ್ನ ಮೊದಲನೆ ಚೆಂಡಿನಲ್ಲೆ ಔಟ್ ಮಾಡಿ ಕಳಿಸುತ್ತೇನೆ’ ಅಂತ ಪಂದ್ಯದ ಮೊದಲೆ ಕಿರುಚಿದ್ದ ಶೋಯೆಬ್ ಅಖ್ತರ್ನನ್ನ ಅಟ್ಟಾಡಿಸಿ ಬಡಿದಿದ್ದ! ಬಹುಷಃ ಆ ಅನುಭವದಿಂದಾಗಿಯೋ ಏನೋ,ಈ ಭಾರಿ ಅಖ್ತರ್ ಬಾಯಿ ಬಿಟ್ಟಿಲ್ಲ. ಆದರೆ ಅಫ಼್ರಿದಿ ಮಾತ್ರ ಸಚಿನ್ ನೂರನೇ ಶತಕ ಬಾರಿಸಲು ಇನ್ನಷ್ಟು ಸಮಯ ಕಾಯಬೇಕು ಅಂದಿದ್ದಾನೆ.ಯಥಾ ಪ್ರಕಾರ ಬ್ಯಾಟಿನಲ್ಲೆ ಉತ್ತರ ಕೊಡೊ ಅಭ್ಯಾಸವಿರೋ ನಮ್ಮ ಲಿಟಲ್ ಮಾಸ್ಟರ್ ಪ್ರತಿಕ್ರಿಯಿಸಿಲ್ಲ!

ಮತ್ತಷ್ಟು ಓದು »