ಕನ್ನಡನಾಡಿನ ಏಳಿಗೆ ಹೊಸದೊಂದು ಶಾಲೆಯಿಂದಲೇ ಆಗಬಲ್ಲುದು…!
– ಬನವಾಸಿ ಬಳಗ
ಕನ್ನಡದ ಸೊಲ್ಲರಿಮೆಯನ್ನು (ವ್ಯಾಕರಣವನ್ನು) ಮತ್ತು ಸ್ವರೂಪವನ್ನು ಅರ್ಥಮಾಡಿಕೊಳ್ಳುವುದರಲ್ಲಿ ವೈಜ್ಞಾನಿಕ ಮನೋಭಾವದ ಕನ್ನಡಿಗರೆಲ್ಲರ ಮನಸ್ಸನ್ನು ಗೆದ್ದಿರುವ ಶ್ರೀ. ಡಿ.ಎನ್. ಶಂಕರಭಟ್ಟರ
ಕೊಡುಗೆ ಬಹಳ ಮುಖ್ಯವಾದದ್ದು. ಭಟ್ಟರ “ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ”, “ಮಾತಿನ ಒಳಗುಟ್ಟು”, “ಕನ್ನಡ ನುಡಿ ನಡೆದುಬಂದ ದಾರಿ” ಮುಂತಾದ ಹೊತ್ತಿಗೆಗಳು ಜನರಲ್ಲಿ ಕನ್ನಡದ ಬಗೆಗಿರುವ ತಪ್ಪು ತಿಳುವಳಿಕೆಯನ್ನು ಸುಟ್ಟು ಹಾಕುತ್ತವೆ. ಈ ಕ್ಷೇತ್ರದಲ್ಲಿ ಬಹುಕಾಲದಿಂದ ಕನ್ನಡದ ಭಾಷಾವಿಜ್ಞಾನಿಗಳು ಮತ್ತು ವ್ಯಾಕರಣಕಾರರು ಮಾಡಿಕೊಂಡು ಬಂದಿರುವ ತಪ್ಪುಗಳನ್ನು ಭಟ್ಟರು ಖಡಾಖಂಡಿತವಾಗಿ ತೋರಿಸಿಕೊಟ್ಟಿರುವುದರಿಂದ (ಮತ್ತು ಇನ್ನೂ ಮುಂದೆ ಬರುವ ಹೊತ್ತಿಗೆಗಳಲ್ಲಿ ತೋರಿಸಿಕೊಡಲಿರುವುದರಿಂದ) ಹಳೆ-ಶಾಲೆಗೆ ಅಂಟಿಕೊಂಡಿರುವ ಕೆಲವರ ಕಾಲ್ಕೆಳಗಿನ ನೆಲವೇ ಕುಸಿದಂತಾಗಿ, ಭಟ್ಟರನ್ನೂ ಮತ್ತವರ ತತ್ವಗಳನ್ನೂ ಕಟುವಾಗಿ ವಿರೋಧಿಸುವುದನ್ನೇ ಒಂದು ಹವ್ಯಾಸವಾಗಿಸಿಕೊಂಡಿದ್ದಾರೆ! ತಮಾಷೆಯೇನೆಂದರೆ ಇವರಾರ ವಿರೋಧವೂ ಭಟ್ಟರ ವೈಜ್ಞಾನಿಕತೆಯ ಮಟ್ಟಕ್ಕೆ ಏರದೆ ಬರೀ ಅವರನ್ನು ವೈಯಕ್ತಿಕವಾಗಿ ಮೂದಲಿಸುವುದರಿಂದ ಹಿಡಿದು, ಸಂಸ್ಕೃತದ ಪಂಡಿತರಾದ ಅವರೇ ಸಂಸ್ಕೃತದ್ವೇಷಿಗಳೆಂದು ಮೂದಲಿಸುವವರೆಗೆ, ಎಪ್ಪತ್ತೈದು ವರ್ಷದ ಮುದುಕರಾದ ಭಟ್ಟರು ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿದ್ದಾರೆ ಎನ್ನುವ ಸೊಂಟದ ಕೆಳಗಿನ ಆರೋಪದವರೆಗೆ ಮಾತ್ರ ತಲುಪುತ್ತವೆ! ಈ ಅವೈಜ್ಞಾನಿಕತೆಯೇ ಕನ್ನಡದ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದರಲ್ಲಿ ಕನ್ನಡಿಗರನ್ನು ಸೋಲಿಸಿರುವುದರಿಂದ ಇದನ್ನು ಕಿತ್ತೊಗೆಯದೆ ಬೇರೆ ದಾರಿಯಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ೩ರ ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಕೂಡಲಸಂಗಮ ದೇವನ ಕನ್ನಡ” ಎಂಬ ಬರಹದಲ್ಲಿ ಶ್ರೀ ಕೆ.ವಿ. ತಿರುಮಲೇಶ್ ಅವರು ಅದೇ ಅವೈಜ್ಞಾನಿಕತೆಯನ್ನು ಓದುಗರ ಮುಂದಿಟ್ಟು ನಮ್ಮ ಈ ಮರುವುತ್ತರವನ್ನು ತಾವೇ ಬರಮಾಡಿಕೊಂಡಿದ್ದಾರೆ. ತಿರುಮಲೇಶರ ಬರಹದಲ್ಲಿ ಆ ಹಳೆ-ಶಾಲೆಯ ಅವೈಜ್ಞಾನಿಕತೆಯು ಮೈದಳೆದು ಬಂದಿರುವುದರಿಂದ ನಮ್ಮ ಈ ಉತ್ತರವು ಅವರಿಗೊಬ್ಬರಿಗೇ ಅಲ್ಲದೆ ಆ ಹಳೆ-ಶಾಲೆಯವರೆಲ್ಲರಿಗೂ ಒಪ್ಪುತ್ತದೆ.
ಬನ್ನಿ ತುಳುವಿನಲ್ಲಿ ಮಾತಾಡುವ…!
– ನಿಲುಮೆ
ಪಂಚ ದ್ರಾವಿಡ ಭಾಷೆಗಳಲ್ಲೊಂದಾದ ತುಳುವನ್ನ ಕರ್ನಾಟಕದ ಕರಾವಳಿಯಿಂದ ಹಿಡಿದು ನಮ್ಮ ಕಾಸರಗೋಡಿನಲ್ಲೂ ಮಾತಾಡುತ್ತಾರೆ.ಅಲ್ಲಷ್ಟೇ ಯಾಕೆ ಕರ್ನಾಟಕದ ಮೂಲೆ ಮೂಲೆಯಲ್ಲಿ ನೆಲೆ ನಿಂತ ತುಳುವರು,ಹೊರ ರಾಜ್ಯದಲ್ಲಿ,ಹೊರ ದೇಶದಲ್ಲೂ ಮಾತಾಡುತ್ತಾರೆ.
’ತುಳು ಮಹಾಭಾರತ’ದ ಕಾಲ ೧೩ನೇ ಶತಮಾನ,’ತುಳು ದೇವಿ ಮಹಾತ್ಮೆ’ಯ ಕಾಲ ೧೫ನೇ ಶತಮಾನ.ಹಾಗೆಯೇ ’ತುಳು ಭಾಗವತ’ ’ಕಾವೇರಿ’ ಬಂದಿದ್ದು ೧೭ನೇ ಶತಮಾನದಲ್ಲಿ!
‘A comparative Grammar of the Dravidian or South Indian Family of Languages’ ಅನ್ನು ಬರೆದ ರೆವ್.ಕ್ಲಾಡ್ವೆಲ್ ಅವರು ’ದ್ರಾವಿಡ ಭಾಷೆಗಳಲ್ಲಿ ಸದೃಡವಾಗಿ ಬೆಳೆದು ನಿಂತ ಭಾಷೆ ತುಳು’ ಅಂದಿದ್ರು.
ವಿದ್ವಾಂಸರಿಂದ ಹೀಗೆಲ್ಲ ಹೊಗಳಿಸಿಕೊಂಡ ತುಳುವಿಗೊಂಡು ಲಿಪಿ ಇರಲಿಲ್ವಾ? ಬಾಲ್ಯದಲ್ಲಿ ನಮಗೆ ಸಹಜವಾಗಿ ಮೂಡುತಿದ್ದ ಪ್ರಶ್ನೆಯದು.ಅಪ್ಪ-ಅಮ್ಮರನ್ನ ’ತುಳುವನ್ನ ಬರೆಯಲು ಸಾಧ್ಯವಿಲ್ವಾ?’ ಅಂತ ಕೇಳಿದರೆ.’ತುಳುವಿಗೆ ತನ್ನದೇ ಆದ ಲಿಪಿ ಇಲ್ಲ ಮಗ,ಆದರೆ ಮಲಯಾಳಂ ಲಿಪಿ ಬಳಸಿ ತುಳುವನ್ನ ಬರೆಯುತ್ತಾರೆ ಅಂತಿದ್ರು ಅಮ್ಮ.ಬೆಳೆಯುತ್ತ ಬೆಳೆಯುತ್ತ ಅರಿವಿಗೆ ಬಂದಿದ್ದೇನೆಂದರೆ ಅಸಲಿಗೆ ಮಲಯಾಳಂ ಅನ್ನು ತುಳು ಲಿಪಿ ಬಳಸಿ ಬರೆಯುತ್ತಾರೆ ಅನ್ನುವುದು!
ಎಂಡೋಸಲ್ಫನ್ ತಯಾರಕರ ದೇಶ ಸೇವೆ ಮುಖವಾಡ
– ಗೋವಿಂದ್ ಭಟ್
ಎಂಡೋಸಲ್ಫನ್ ತಯಾರಕರ ಹೊಸ ವರಸೆ ಗಾಬರಿಯಾಗುತ್ತದೆ. ಅವರೀಗ ಯುರೋಪಿನ ವಿಷ ತಯಾರಕರು ಎಂಡೋಸಲ್ಫನ್ ಬಹಿಷ್ಕಾರ ಚಳುವಳಿಯ ಹಿಂದಿದ್ದಾರೆ ಎಂದು ಆಪಾದಿಸುತ್ತಿದ್ದಾರೆ. ಬಾರತದ ತಯಾರಕರು ಜೀವ ಉಳಿಸುವ ಔಷದಿಯಲ್ಲಿ ಮೂಲವಸ್ತುಗಳ ಹೆಸರಿನಲ್ಲಿ ತಯಾರಿಸಿ ಕಡಿಮೆ ಬೆಲೆಯಲ್ಲಿ ಮಾರಿದ್ದು ಹಾಗೂ ಸಮಾಜ ಇವರಿಗೆ ಬೆಂಬಲಿಸಿದ್ದು ಈಗ ಇತಿಹಾಸ. ಈಗ ಈ ಕೀಟನಾಶಕ ವನ್ನೂ generic ಅನ್ನೋ ಮುಖವಾಡದ ಹವಣಿಕೆಯಲ್ಲಿದ್ದಾರೆ. ನಾವು ಕಡಿಮೆ ಬೆಲೆಯಲ್ಲಿ ಎಂಡೋಸಲ್ಫನ್ ತಯಾರು ಮಾಡಿ ಮಾರುವುದು ಬಾರತದ ರೈತರ ಉದ್ದಾರ ಮಾಡುವುದನ್ನು ಯುರೊಪಿಯನರು ಸಹಿಸುತ್ತಿಲ್ಲ. ನಾವು ಬಾಗಿಲು ಹಾಕಿದರೆ ಯುರೋಪಿನ ತಯಾರಕರು ಇದಕ್ಕಿಂತ ಹಲವು ಪಾಲು ದುಬಾರಿಯ ಮಾಲುಗಳನ್ನು ಬಾರತದ ರೈತರು ಅವಲಂಬಿಸಬೇಕಾಗುತ್ತದೆ.ಡಾ.ಅಬ್ದುಲ್ ಕಲಾಂರನ್ನ ನಿನ್ನೆ ಸಾಯಿಸುವವರಿದ್ದರು!
-ರಾಕೇಶ್ ಶೆಟ್ಟಿ
ನನ್ನ ಶಾಲೆಯ ದಿನಗಳವು ಆಗಿನ್ನೂ ಶಂಕರ್ ನಾಗ್ ಅಪಘಾತದಲ್ಲಿ ನಮ್ಮಿಂದ ದೂರವಗಿದ್ದರು,ಅದೇ ಸಮಯದಲ್ಲಿ ಕಿಡಿಗೇಡಿಗಳು ವಿಷ್ಣು ಇನ್ನಿಲ್ಲ ಅಂತ ಸುದ್ದಿ ಹಬ್ಬಿಸಿದ್ದರು.ಕಡೆಗದು ಟುಸ್ಸ್ ಪಟಾಕಿಯಾಗಿತ್ತು.ಈ ರೀತಿಯ ಸುದ್ದಿಗಳನ್ನ ಕೇಳಿ ಕೇಳಿ,ಕಡೆಗೆ ನಿಜವಾಗಿ ವಿಷ್ಣು ನಮ್ಮನ್ನ ಅಗಲಿದ ದಿನ,ಬೆಳ್ಳಂ ಬೆಳಿಗ್ಗೆ ಗೆಳೆಯ ಶ್ರೀಕಾಂತ ಬಂದು ವಿಷ್ಣು ಹೊದ್ರಂತೆ ಅಂದಾಗ, ’ಜೊತೆಗ್ ನೀನೂ ಹೋಗಲೆ’ ಅಂತ ಬೈದು ಕಳಿಸಿದ್ದೆ.ಆದರೆ ನಿಜ ಅಂತ ಗೊತ್ತಾದಗ ಮನಸ್ಸು ಕಳವಳಗೊಂಡಿತ್ತು.
ಈ ಗಾಳಿ ಸುದ್ದಿಗಳೇ ಹಾಗೆ ಅಲ್ವಾ? ನಿಜ ಸುದ್ದಿಗಳಿಗೊಂದು ಗುದ್ದು ನೀಡಿ ಹೊರಟು ನಿಲ್ಲುತ್ತವೆ! ಕಳೆದವಾರ ತಾನೆ ಆಫ಼ೀಸಿನಲ್ಲಿ ಕುಳಿತಿದ್ದವನಿಗೆ ಅತ್ತಿಗೆ ಕರೆ ಮಾಡಿ ಜಪಾನ್ ಮುಳುಗುತ್ತಿದೆ ನೋಡು ಅಂದಾಗಲು ನಂಬಲಿಕ್ಕಾಗಲಿಲ್ಲ.ಆದರೆ ಅದೂ ನಿಜವಾಗಿತ್ತು 😦
ಮತ್ತೆ ನಿನ್ನೆ ಮಧ್ಯಾನ ಗೆಳೆಯ ಸಾತ್ವಿಕ್ ಕರೆ ಮಾಡಿ ’ವಿಷ್ಯ ಗೊತ್ತಾಯ್ತ?’ ಅಂದ್ರು. ’ಏನ್ರಿ’ ಕೇಳ್ದೆ. ’ಅಬ್ದುಲ್ ಕಲಾಂ ಹೋಗ್ಬಿಟ್ರಂತೆ’ ಅನ್ನೋದಾ!…’ನೋಡಿ confirm ಮಾಡಿ ಹೇಳ್ರಿ’ ಅಂದ್ರು.’ಹೌದಾ!?’ ಅಂತ ತಡಬಡಾಯಿಸಿ ಗೂಗಲ್ ದೇವರಲ್ಲಿ ಪ್ರಶ್ನೆ ಹಾಕಿದರೆ ಮೊದಲ ಸುದ್ದಿ ಇದ್ದದ್ದು ’Abdul Kalam’s Advisor Dr.Hafiz Saleh Muhammad Alladin died’ ಅಂತ.ನಾನೋ ಗಾಬರಿಯಲ್ಲಿ ಅದನ್ನ ಅಬ್ದುಲ್ ಕಲಾಮ್ ಅವರೇ ಹೋಗ್ಬಿಟ್ರು ಅಂತಲೇ ಓದಿ ಕೊಂಡು, ಆಫ಼ಿಸಿನಲ್ಲೂ ಕಲಾಂ ಹೋಗ್ಬಿಟ್ರು ಅಂದು,ಕಡೆಗೆ ಇನ್ನೊಮ್ಮೆ ಶಾಂತನಾಗಿ ನೋಡಿ. ’ಹೇ,ಇಲ್ಲಾ ರೀ,ಯಾವನೋ ಕಿಡಿಗೇಡಿ ಸುದ್ದಿ ಮಾಡಿದ್ದಾನೆ’ ಅಂದೆ.
ಮತ್ತಷ್ಟು ಓದು 
ಸುನಾಮಿ ಕಾವು – ಮಾಧ್ಯಮಗಳಿಗೆ ಮೇವು
ತಲೆಕೆಟ್ಟ ಮಾಧ್ಯಮಗಳ ಮಾತಿಗೆ ಹೆದರಿ ಕಂಗಾಲಾದವರು, ಮತ್ತೆ ಮತ್ತೆ ಮುರ್ಖರಾಗುವವರು ಅದೇ ಸಾಮಾನ್ಯ ಜನ.
ಮಾರ್ಚ್ ೧೯ ರಂದು ಸುಪರ್ ಮೂನ್ ಪ್ರಭಾವದಿಂದ ಸಮುದ್ರ ಉಕ್ಕಿ ಹರಿದು ಇಡೀ ಮಂಗಳೂರಿಗೆ ಮಂಗಳೂರೇ ಮುಳುಗಿ ಹೋಗುತ್ತೆ ಅಂತ ಯಾವಾಗ ಟೀವಿಯಲ್ಲಿ ಸುದ್ದಿ ಬಂತೋ ಪರವೂರಗಳಿಂದ ಬಂದು ಇಲ್ಲಿ ಕೆಲಸ ಮಾಡ್ತಾ ಇರೋ ಜನ ಬೆವತು ಹೋದರು. ಮೊದಲೇ ಇಲ್ಲಿನ ಪ್ರಕೃತಿಯ ಸರಿಯಾದ ಅಂದಾಜಿಲ್ಲದ ಜನರಂತೂ ನಿಜಕ್ಕೂ ಒಂದು ಕ್ಷಣ ಅವಕ್ಕಾದರು. ಅವರವರ ಮನೆಗಳಿಂದ ಪೋನಿನ ಮೇಲೆ ಪೋನ್ ಬರತೊಡಗಿದವು. ಎಲ್ಲರದ್ದೂ ಒಂದೇ ಮಾತು ಈ ಕ್ಷಣವೇ ಅಲ್ಲಿಂದ ಹೊರಟು ಬಾ ಅಂತ.
ಹೆದರಿದವರ ಮೇಲೆ ಹಾವು ಎಸೆದಂತೆ ಜಪಾನಿನಲ್ಲಿ ಎದ್ದ ಸುನಾಮಿ ಇನ್ನಷ್ಟು ಹೆದರಿಕೆ ಹುಟ್ಟಿಸಿತು. ಇದರೆಲ್ಲರ ಪರಿಣಾಮ ದೂರದ ಊರಿಗೆ ಹೋಗೋ ಎಲ್ಲ ಬಸ್ಸುಗಳು ಬಸುರಿಯಂತೆ ತುಂಬಿ ಹೋದವು. ರಾತ್ರೋ ರಾತ್ರಿ ಖಾಸಗಿ ಬಸ್ಸಿನವರು ಪ್ರಯಾಣ ದರವನ್ನು ಹೆಚ್ಚಿಸಿ ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ ಮಾಡಿದರು. ಒಂದಕ್ಕೆ ಎರಡು ನೀಡಿ ತಮ್ಮ ಊರಿಗೆ ಹೊರಟು ನಿಂತಿತು ಜನತೆ. ೫೦ ಜನರು ಇರಬೇಕಾದ ಬಸ್ಸಿಲ್ಲಿ ೬೦-೭೦ ಜನ ಪ್ರಯಾಣ ಮಾಡಿದರು.
ಮಕ್ಕಳು, ಮರಿ, ಹೆಂಗಸರು, ಗಂಡಸರು ಎಂಬ ಬೇಧಭಾವವಿಲ್ಲದೇ ಹೊರಟೆ ಹೊರಟರು. ಇವರೆಲ್ಲ ಮಾಸಿಕ ಪಗಾರ ಎಣಿಸೋ ಸರ್ಕಾರಿ ಬಾಬುಗಳಲ್ಲ. ದಿನಗೂಲಿಗೆ ದೂರದ ಉತ್ತರ ಕರ್ನಾಟಕದಿಂದ ಬಂದ ಜನ. ಒಪ್ಪತ್ತಿಗೆ ಪರದಾಡುತ್ತಿರುವ ಇವರು, ಪ್ರಕೃತಿಯ ಮುನಿಸಿಗೆ ಒಳಗಾದ ನೆರೆಪೀಡಿತ ಜನ.
ಬೇಕೇ ಇಂಥ ಮಕ್ಕಳು?
– ಪವನ್ ಎಂ. ಟಿ
ಒಂದು ಮಾತಿದೆಯಲ್ವಾ, ಈ ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲಿಕ್ಕಿಲ್ಲ ಅಂತ.ನಾನೀಗ ಹೇಳ ಹೊರಟಿರುವುದು ಹಾಗೊಬ್ಬ ತಾಯಿಯ ಮತ್ತು ಅವಳ ಕಟುಕ ಮಗನ ಬಗ್ಗೆ.ತನ್ನ ವಯಸ್ಸಾದ ತಂದೆ ತಾಯಿಯನ್ನು ಯಾವ ಮಕ್ಕಳು ತಾನೆ ದಿನಗೂಲಿ ನೌಕರನಂತೆ ದುಡಿಸಿಕೊಳ್ಳುತ್ತಾರೆ ನೀವೆ ಹೇಳಿ? ಆದರೆ ಇಲ್ಲಿ ಅಂತವನಿದ್ದಾನೆ. ಒಬ್ಬ ಅಜ್ಜಿ ತನ್ನ ಒಂದು ತುತ್ತು ಅನ್ನಕ್ಕಾಗಿ, ನಿತ್ಯದ ಜೀವನಕ್ಕಾಗಿ ದಿನವಿಡೀ ದುಡಿಯಲೇ ಬೇಕಾದ ಅನಿವಾರ್ಯತೆಯಲ್ಲಿದ್ದಾರೆ.
ಈ ಬಡಜೀವ ತನ್ನ ೯೫ ನೇ ವಯಸ್ಸಿನಲ್ಲಿಯೂ ಕೂಡ ಬುಟ್ಟಿಯನ್ನು ತಯಾರಿಸಿ ಬದುಕಬೇಕಾಗಿದೆ. ಈ ಬುಟ್ಟಿಗಾಗಿ ದೂರದ ಕಾಡಿನಿಂದ ಸಾಮಾಗ್ರಿಗಳನ್ನು ತರಲು ಒಬ್ಬರೆ ಹೋಗುತ್ತಾರೆ. ಸರಿಯಾಗಿ ನಡೆಯಲು ಸಾಧ್ಯವಿಲ್ಲದ ಗೂನು ಬೆನ್ನಿನ ಅಜ್ಜಿ ಕಾಡಿಗೆ ತೆರಳಿದಾಗ ಅಲ್ಲಿ ಏನಾದರೂ ತೊಂದರೆಯಾದರೆ ಏನು ತಾನೆ ಮಾಡಿಯಾರು? ಒಂದು ವೇಳೆ ತೊಂದರೆಯಾದರೂ ಸಹ ಅಲ್ಲಿ ಅಜ್ಜಿಯ ಬಗ್ಗೆ ತಲೆಕೆಡಿಸಿ ಕೊಳ್ಳುವವರಾರು ಇಲ್ಲ.
ಮತ್ತಷ್ಟು ಓದು 
ಪಕ್ಷಗಳ ಆಟಕ್ಕೆ ಜನರ ಹಣವೇಕೆ ಬಲಿ?
– ರಾಕೇಶ್ ಶೆಟ್ಟಿ
ಮತ್ತೆ ೩ ಕ್ಷೇತ್ರಗಳಲ್ಲಿ ಉಪಚುನಾವಣೆ ಬಂದು ನಿಂತಿದೆ.ಮೊದಲೆಲ್ಲ ಜನಪ್ರತಿನಿಧಿಗಳ ಮರಣದಿಂದಾಗಿಯೇ ಉಪಚುನಾವಣೆಗಳು ನಡೆಯುತಿದ್ವು.ಅದರ ನಡುವೆ ನಮ್ಮ ಚುನಾವಣ ಆಯೋಗದ
ತಲೆ ಕೆಟ್ಟ ಒಂದು ಕಾನೂನು ಇದ್ಯಲ್ಲ : ’ಒಂದೇ ಕಾಲದಲ್ಲಿ ಒಬ್ಬ ಅಭ್ಯರ್ಥಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು’ ಅಂತ.ಅದೂ ಕೂಡ ಕೆಲವೊಮ್ಮೆ ಉಪಚುನಾವಣೆಗೆ ಕಾರಣವಾಗಿದ್ದಿದೆ.ಉದಾಹರಣೆಗೆ ಸೋನಿಯ ಮೇಡಂ ಬಳ್ಳಾರಿಲಿ ಗೆದ್ದು ’ಕೈ’ ಎತ್ತಿ ಹೊರಟಿದ್ದು ಗೊತ್ತಿದೆ ಅಲ್ವಾ?
ನಮ್ ದೇವೆಗೌಡ್ರು ಪ್ರಧಾನಿ ಕುರ್ಚಿಯಿಂದ ಇಳಿದು ಬಂದ್ಮೇಲೆ ಎದುರಿಸಿದ ಲೋಕಸಭಾಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಿ ಸೋತು,ಆ ನಂತರ ಕನಕಪುರದಲ್ಲಿ ನಡೆದ ಉಪಲೋಕಸಭೆ ಚುನಾವಣೆಯಲ್ಲಿ ಗೆದ್ದು ಬಂದಿದ್ರು.ಆ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತೆ ಕನಕಪುರ ಎರಡೂ ಕ್ಷೇತ್ರದಿಂದ ಸ್ಪರ್ಧಿಸಿದ್ರು.ಒಂದು ವೇಳೆ ಎರಡೂ ಕಡೆ ಗೆದ್ದಿದ್ರೆ ಹಾಸನ ಕೈ ಬಿಡ್ತಾ ಇದ್ರೂ ಅಂತ ಆಗ ಜನ ಮಾತಡಿಕೊಳ್ತಾ ಇದ್ರು.ದೇವರ ದಯೆ ಹಾಸನದಲ್ಲಿ ಮಾತ್ರ ಗೆದ್ರು! 🙂
ದೇವರ ದಯೆ ಅಂತ್ಯಾಕ್ ಹೇಳ್ದೆ ಅಂದ್ರೆ, ಹೀಗೆ ಎರಡೂ ಕಡೆ ನಿಂತೂ ಎರಡೂ ಕಡೆ ಗೆದ್ರೆ, ಅವ್ರು ಒಂದು ಕ್ಷೇತ್ರವನ್ನ ಬಿಟ್ಟುಕೊಡಲೇಬೇಕಲ್ವಾ? ಆಗ ತೆರವಾದ ಸ್ಥಾನಕ್ಕೆ ಮತ್ತೊಮ್ಮೆ ಉಪಚುನಾವಣೆ ಬಂದು ನಿಲ್ಲುತ್ತೆ. ಮತ್ತೆ ನಮ್ಮ ಜನರು ಬೆವರು ಸುರಿಸಿದ ತೆರಿಗೆ ಹಣ ಪೋಲು ಆಗೋದಿಲ್ವಾ?
ಈ ಬಾರಿಯ ಬಿಜೆಪಿ ಸರ್ಕಾರ ಬಂದು ಆಪರೇಶನ್ ಕಮಲ ಅಂತ ಹೇಳಿಕೊಂಡು ಮಾಡಿದ್ದು ಜನರ ತೆರಿಗೆ ಹಣದ ಆಪರೇಶನ್ ಅಲ್ವಾ?… ಈ ಮಧ್ಯೆ ಕುಮಾರಸ್ವಾಮಿಯವ್ರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂ.ಪಿ ಆದ್ರು,ಈಗ ಮತ್ತೆ ಚನ್ನಪಟ್ಟಣ ಉಪಚುನಾವಣೆಗೆ ನಿಲ್ತಾ ಇದ್ದರೆ.ಅಲ್ಲಿ ಗೆದ್ರೆ ಮತ್ತೆ ಲೋಕಸಭೆಯ ಸ್ಥಾನಕ್ಕೆ ಉಪಚುನಾವಣೆ ನಡಿಬೇಕಲ್ವಾ?…
ಸಾವಯವ ಕೃಷಿ ಎಂಬ ಮೂರ್ಖತನ !
– ಶ್ರೀ ಹರ್ಷ ಸಾಲಿಮಠ
ವ್ಯವಸಾಯ ಎಂಬುದು ಭಾರತ ದೇಶದ ಮಟ್ಟಿಗೆ ಉದ್ಯೋಗ ಮತ್ತು ಹೊಟ್ಟೆಪಾಡು ಮಾತ್ರವಲ್ಲ. ಅದೊಂದು ಸಂಸ್ಕೃತಿ, ಜೀವನಶೈಲಿ. ಅದೆಷ್ಟೋ ವರ್ಷಗಳಿಂದ ನಾಗರಿಕತೆಯನ್ನು ಸಲಹಿಕೊಂಡು ಬಂದ ದಾರಿ.ಮನುಷ್ಯ ಒಂದೆಡೆ ನಿಂತು ನೆಲೆಯೂರಿ ತನ್ನದೊಂದು ಬದುಕು ಕಟ್ಟಿ ಕೊಳ್ಳುವುದು ಸಾಧ್ಯವಾದದ್ದೇ ಅವನು ಬೇಸಾಯ ಮಾಡಲು ಆರಂಭಿಸಿದಾಗಿನಿಂದ.
ಇತ್ತೀಚೆಗೆ ಸಾವಯವ ಕೃಷಿ ಎಂಬುದು ಬಹಳವಾಗಿ ಕೇಳಿ ಬರುತ್ತಿರುವ ಸುದ್ದಿ. ಸರಕಾರವೂ ಸೇರಿದಂತೆ ಸಮೂಹ ಸನ್ನಿಗೊಳಗಾದಂತೆ ಸಾವಯವ ಕೃಷಿಯ ಕಡೆ ಜನ ಓಡುತ್ತಿದ್ದಾರೆ. ಸುಭಾಶ್ ಪಾಳೇಕರ್ ರಂತಹ ಅನೇಕರು ಕೃಷಿ ಗುರುಗಳಾಗಿದ್ದಾರೆ.
ಅವರ ಬಳಿ ನೂರಾರು ರೈತರು ಸಾವಯವ ಕೃಷಿಯ ತರಬೇತಿ ಪಡೆದು ಬೇಸಾಯದಲ್ಲಿ ತೊಡಗಿದ್ದಾರೆ. ರಸಗೊಬ್ಬರ ಹಾಕಿ ಹಣ ಕಳೆದುಕೊಂಡವರಂತೆ ಸಾವಯವ ಕೃಷಿಗೆ ಮೊರೆ ಹೋದವರೂ ಹಣ ಕಳೆದುಕೊಂಡಿದ್ದಾರೆ. ಸಮಯ ಹಾಳು ಮಾಡಿಕೊಂಡಿದ್ದಾರೆ.ಅದೆಷ್ಟೇ ತರಬೇತಿ ಶಿಬಿರ ಪ್ರಚಾರ ನಡೆಯುತ್ತಿದ್ದರೂ ರೈತರ ಪರಿಸ್ಥಿತಿ ಸುಧಾರಿಸುತ್ತಿಲ್ಲ.
ನಮ್ಮ ದೇಶದಲ್ಲಿ ನೆಲ ಜಲ ಭಾಷೆ ಔಶಧಿ ನಲವತ್ತು ಕಿಲೋಮೀಟರು ಗಳಿಗೊಮ್ಮೆ ಬದಲಾಗುತ್ತದೆ. ಮಣ್ಣಿನ ಗುಣ ಪ್ರತಿ ನಲವತ್ತು ನಲವತ್ತು ಕಿಲೋಮೀಟರುಗಳಿಗೆ ಬದಲಾಗುತ್ತದೆ. ಗಾಳಿ ಬೀಸುವ ದಿಕ್ಕು, ಮಳೆಯ ಪ್ರಮಾಣ, ಭೂಮಿಯ ಗಟ್ಟಿತನ, ನೀರಿನ ಕ್ಷಾರತೆ ಎಲ್ಲವೂ ಬದಲಾಗುತ್ತಾ ಹೋಗುತ್ತದೆ. ಅಷ್ಟೇ ಅಲ್ಲ ಅಲ್ಲಿನ ಪ್ರಾಣಿಸಂಪತ್ತು ಸಹ ಬದಲಾಗುತ್ತದೆ. ಅಸುಗಳ ಜಾತಿ ಮತ್ತು ಅವುಗಳ ಹೊಂದಿಕೊಳ್ಳುವಿಕೆ ಬದಲಾಗುತ್ತದೆ. ಬೆಳೆಯುವ ಬೆಳೆ ಸಂಪೂರ್ಣವಾಗಿ ಈ ಎಲ್ಲ ಪ್ರಾಕೃತಿಕ ಗುಣಗಳ ಮೇಲೆ ಅವಲಂಬನೆಯಾಗಿರುತ್ತದೆ.
ಉದಾಹರಣೆಗೆ ಮಲೆನಾಡಿನಲ್ಲಿ ಬೇಸಿನ ಮರ ಜಾಲಿಯ ಮರಗಳು ಬೆಳೆಯುವದಿಲ್ಲ, ಅದೇ ಸಮಯಕ್ಕೆ ಬಯಲುಸೀಮೆಯಲ್ಲಿ ಜಾಲಿಯ ಮರ ಆಳದಷ್ಟು ದೊಡ್ಡದಾಗಿ ಬೆಳೆಯುತ್ತದೆ. ಮಲೆನಾಡಿನ ಔಷಧೀಯ ಸಸ್ಯಗಳು ಬಯಲು ಸೀಮೆಯ ಕಡೆ ಬೆಳೆಯಲು ಸಾಧ್ಯವೆ ಇಲ್ಲ. ಹೀಗಿರುವಾಗ ಆಯಾ ನೆಲದ ಪ್ರಾಕೃತಿಕ ಅಂಶಗಳಿಗೆ ಅನುಗುಣವಾಗಿ ಬೆಳೆ ಬರುವಂತೆ ಕೃಷಿ ಇರಬೇಕೆ ಹೊರತು ಎಲ್ಲೋ ನಡೆಸಿದ ಪ್ರಯೋಗಗಳಿಗೆ ಅನುಗುಣವಾಗಿ ಅಲ್ಲ. ಸುಭಾಶ್ ಪಾಳೇಕರ್ ಅವರ ಪ್ರಯೋಗ ನಡೆದಿರುವುದು ಮಹಾರಾಷ್ಟ್ರದ ಗದ್ದೆಗಳಲ್ಲಿ. ಅವರ ಪ್ರಯೋಗಗಳಲ್ಲಿ ಅಲ್ಲಿಯ ಪರಿಸರಕ್ಕೆ ಸರಿ ಹೊಂದುವಂತೆ ಕೆಲವು ಯಶಸ್ಸುಗಳು ಕೆಲವು ಅಪಜಯಗಳೂ ಸಿಕ್ಕಿರುತ್ತವೆ. ಅಲ್ಲಿನ ಯಶಸ್ವಿ ಸೂತ್ರಗಳನ್ನು ಅವರು ಎಲ್ಲೆಡೆ ಬೋಧಿಸುತ್ತಿದ್ದಾರೆ. ಆ ಯಶಸ್ಸನ್ನು ಹಿಂಬಾಲಿಸಿ ಜನ ಬೇಸಾಯ ಕೈಗೊಂಡು ಕೈ ಸುಟ್ಟು ಕೊಳ್ಳುತ್ತಿದ್ದಾರೆ.
ಈ ಸಾವು ನ್ಯಾಯವೇ?
– ರೂಪ ರಾವ್
ಮೊನ್ನೆಯ ಬೆಂಗಳೂರು ಮಿರರ್ ಪತ್ರಿಕೆಯಲ್ಲಿ ಓದಿದ ಸುದ್ದಿಯೊಂದು ಮನಸನ್ನ್ನು ಗಾಢವಾಗಿ ಕಾಡಿತು. ಸಯೋನಿ ಚಟರ್ಜಿ ಎಂಬ ಹನ್ನೊಂದರ ಮುದ್ದು ಬಾಲೆಯ ಫೋಟೊ ನೋಡುತ್ತಿದ್ದಂತೆ
ಮನಸು ಕಲಕಿತು.
ಎಂ ಎನ್ ಸಿಗಳ ತೆಕ್ಕೆಗೆ ಔಷಧ – ಹೆಲ್ತ್ ಫಾರ್ Only rich!
– ಹರ್ಷ ಕುಗ್ವೆ
ಒಂದು ದೇಶದಲ್ಲಿ ತಯಾರಿಸಲಾಗುವ ಔಷಧ ಮಾತ್ರೆಗಳು ಆ ದೇಶದ ಜನರ ಆರೋಗ್ಯಕ್ಕಾಗಿ ಅಲ್ಲದೇ ಕೇವಲ ಬಿಸಿನೆಸ್ ಕಂಪನಿಗಳ, ಅಥವಾ ಬಹುರಾಷ್ಟ್ರೀಯ ಕಂಪನಿಗಳ ಲಾಭಕ್ಕಾಗಿ ತಯಾರಿಸಲ್ಪಟ್ಟರೆ ಏನಾಗುತ್ತದೆ??
ಇದು ಸಧ್ಯದ ನಮ್ಮ ಭಾರತದ ಸ್ಥಿತಿ. ಇದಕ್ಕೆ ನಮ್ಮ ರಾಜಕಾರಣಿಗಳ, ಉದ್ಯಮಿಗಳ ದುರಾಸೆ ಒಂದೆಡೆ ಕಾರಣವಾದರೆ ವಿದೇಶೀ ದೈತ್ಯ ಕಂಪನಿಗಳ ಹಸಿವು ಮತ್ತೊಂದು ಕಾರಣ..
ಇದೆಲ್ಲಾ ಹೇಗಾಯ್ತು ಕೊಂಚ ನೋಡೋಣ.
ನಮ್ಮ ದೇಶವು ಪರಕೀಯರ ನೇರ ಮುಷ್ಠಿಯಿಂದ ಪಾರಾದ ಬಳಿಕ ಹಲವಾರು ಕ್ಷೇತ್ರಗಳಲ್ಲಿ ದಾಪುಗಾಲನ್ನಿಟ್ಟಿತ್ತು. ಔಷಧ ತಯಾರಿಕೆಯ ಉದ್ದಿಮೆಯಲ್ಲಿ ಸಹ ಅದು ಮುಂದುವರೆದ ದೇಶಗಳೂ ಹುಬ್ಬೇರಿಸಿ ನಿಲ್ಲುವಂತೆ ಅಭಿವೃದ್ಧಿ ಸಾಧಿಸಿತು. ನಮ್ಮ ಸಕರ್ಾರವು ಪಾಲಿಸಿದ ಕೆಲವಾರು ಉತ್ತಮ ಆರ್ಥಿಕ ನೀತಿಗಳಿಂದಾಗಿ ನಮ್ಮ ದೇಶದ ಔಷದೋದ್ಯಮವನ್ನು MNC ಸ್ಪರ್ಧೆಯಿಂದ ರಕ್ಷಿಸಿ ಅದು ಅಭೂತಪೂರ್ವ ಬೆಳವಣಿಗೆ ಸಾಧಿಸುವಂತೆ ಮಾಡಲಾಗಿತ್ತು. ಔಷದ್ಯುತ್ಪನ್ನಗಳ ಉತ್ಪಾದನೆಯ ಪ್ರಮಾಣದಲ್ಲಿ ಇಡೀ ಪ್ರಪಂಚದಲ್ಲಿ ನಾವೇ ಮೂರನೇ ಸ್ಥಾನಪಡೆಯುವ ಹಂತಕ್ಕೆ ಈ ಬೆಳವಣಿಗೆ ತಲುಪಿತು. ಮಾತ್ರವಲ್ಲ ಜನರ ಅಗತ್ಯಕ್ಕನುಗುಣವಾಗಿ ಉತ್ತಮ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡಿದ್ದೂ ನಮ್ಮ ಉದ್ದಿಮೆಯ ಹೆಗ್ಗಳಿಕೆ.
2105ರ ಸುಮಾರಿಗೆ ಭಾರತದ ಔಷಧಿ ಮಾರುಕಟ್ಟೆಯಲ್ಲಿ ಒಂದು ವರ್ಷಕ್ಕೆ ನಡೆಯುವ ವಹಿವಾಟು ಎಷ್ಟು ಗೊತ್ತೇ? ಬರೋಬ್ಬರಿ 90ಸಾವಿರ ಕೋಟಿ!




![Media_goofup_photo[1]](https://nilume.net/wp-content/uploads/2011/03/media_goofup_photo1.jpg?w=300&h=240)
