ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

18
ಮಾರ್ಚ್

‘ಕುಂದನಗರಿ’ಯ ಸಮ್ಮೇಳನದ ನೆನಪುಗಳು…!

– ಅರೆಹೊಳೆ ಸದಾಶಿವ ರಾವ್

ಹಾಗೆ ನೋಡಿದರೆ ಬೆಳಗಾವಿಗೆ ನಾನು ಎರಡು ತಿಂಗಳಿಗೊಮ್ಮೆ ಹೋಗುತ್ತಿರುತ್ತೇನೆ. ಹಾಗಾಗಿ ಸಂಪೂರ್ಣ ಅಲ್ಲದಿದ್ದರೂ ಬೆಳಗಾವಿಯ ರಸ್ತೆ ಮತ್ತದರ ದುರವಸ್ತೆಗಳನ್ನು ಆಗಾಗ ಗಮನಿಸಿದ್ದೇನೆ. ಇವತ್ತು ಬೆಳಗಾವಿ ಏನಾದರೂ ನಮ್ಮ ಪ್ರಭುಗಳ ಗಮನ ಸೆಳೆದಿದ್ದರೆ, ಅದಕ್ಕೆ ಮರಾಠಿಗರು ಖಂಡಿತಕ್ಕೂ ಕಾರಣರು! ಏಕೆಂದರೆ ಬೆಳಗಾವಿ ತಮ್ಮದು ಎಂಬ ವಿವಾದವನ್ನು ಸದಾ ಜೀವಂತವಾಗಿಟ್ಟುಕೊಂಡಿರುವವರು ಮರಾಠಿಗರು. ಈ ಹಿನ್ನೆಲೆಯಲ್ಲಿ ನಮ್ಮ ಪ್ರಭುತ್ವ, ಬೆಳಗಾವಿಯನ್ನು ಒಂದು ಕಣ್ಣಿಟ್ಟು ನೋಡುತ್ತಲೇ ಇರುತ್ತದೆ! ಅದಿಲ್ಲವಾಗಿದ್ದರೆ ಬಹುಶ: ಈ ಕುಂದನಗರಿಯೂ  ಉತ್ತರ ಕರ್ನಾಟಕದ ಇತರ ಜಿಲ್ಲೆ-ಪಟ್ಟಣಗಳಂತೆ ನಿರ್ಲಕ್ಷ್ಯದ ಬೇಗುದಿಯಲ್ಲಿ ಕಾಲ ತಳ್ಳುತ್ತಲೇ ಇರುತ್ತಿತ್ತೇನೋ!.

ಅದಿರಲಿ, ಈಗ ವಿಷಯ ಅದಲ್ಲ. ಇಪ್ಪತ್ತೈದು ವರ್ಷಗಳ ನಂತರ ಈ ಕುಂದ ನಗರಿಯಲ್ಲಿ ಎರಡನೆಯ ವಿಶ್ವ ಕನ್ನಡ ಸಮ್ಮೇಳನ ನಡೆಯಿತಲ್ಲ; ಒಂದು ಅಪೂರ್ವ ಅವಕಾಶವೆಂಬಂತೆ, ನಾನೂ ಅದರಲ್ಲಿ ಭಾಗವಹಿಸುವ ಉದ್ದೇಶದಿಂದ ಹೋಗಿದ್ದೆ. ಸಮ್ಮೇಳನದ ಬಗ್ಗೆ, ಅಲ್ಲಿ ಮುಳುಗಿ ಹೋದ ೩೭ಕೋಟಿ ರೂಪಾಯಿಗಳ ಬಗ್ಗೆ ಮಾಧ್ಯಮಗಳು ಮಾತಾಡುತ್ತಲೇ ಇರುವುದನ್ನು ಕೇಳಿದ್ದೀರಿ. ನಾನು ಗಮನಿಸಿದ ಒಂದು ಅಂಶವೆಂದರೆ, ಬೆಳಗಾವಿಗೆ ಕಾಲಿಟ್ಟರೆ ಪ್ರತೀ ರಸ್ತೆಗಳೂ ರಿಪೇರಿಯಾಗಿರುವುದು ಬಿಟ್ಟರೆ, ಪಟ್ಟಣ ಸಿಂಗಾರಗೊಂಡಿರುವುದು ಮಾತ್ರ ಕಣ್ಣಿಗೆ ಕಾಣುತ್ತದೆ.  ಮತ್ತೆ ಈ ಮೂವತ್ತೇಳು ಕೋಟಿ ಎಲ್ಲಿಗೆ ಹೋಗಿದೆ ಎಂಬುದಕ್ಕೆ ಹುಟುಕಾಡಿದರೂ ಏನೂ ಸಿಗುವುದಿಲ್ಲ.

ಇನ್ನು ಕನ್ನಡ ವೆಂದರೆ ಏನು? ಅದರ ಉಳಿವು-ಅಳಿವು  ಎಂದರೆ ಏನು ಎಂಬುದೂ ಪ್ರಶ್ನೆಯಾಗಿ ಕಾಡಿದ್ದು ಸುಳ್ಳಲ್ಲ! ಈ ರೀತಿಯ ದ್ವಂದ್ವಕ್ಕೂ ಕಾರಣವಿದೆ. ಇದು ವಿಶ್ವ ಕನ್ನಡ ಸಮ್ಮೇಳನ. ಬೆಳಗಾವಿಯ ನಗರದ ಪ್ರತೀ ಗೋಡೆಯ ಮೇಲೂ ಕನ್ನಡ ಉಳಿಸಿ-ಬೆಳೆಸಿ ಎಂಬ ಉದ್ಘೋಷವೇ ಕಾಣುತ್ತಿತ್ತು. ಆದರೆ ಇಡೀ ಮೂರುದಿನ ನಡೆದ ಸಮ್ಮೇಳನದಲ್ಲಿ ಈ ಹಿನ್ನೆಲೆಯಲ್ಲಿ ಏನಾದರೂ ಕ್ರಮಗಳನ್ನು ಸರಕಾರ ಆಗಲೀ, ಸಮ್ಮೇಳನ ಸಮಿತಿಯಾಗಿಯಾಗಲೀ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಅದೂ ಅಲ್ಲದೇ ಇದೇ ರೀತಿಯ ಸಮ್ಮೇಳನವನ್ನು ಐದು ವರ್ಷಗಳಿಗೊಮ್ಮೆ ನಡೆಸುವ ತೀರ್ಮಾನವನ್ನು ‘ಬಹುಜನರ’ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳು ಕೈಗೊಂಡರು. ಅದು ಒಂದು ರೀತಿಯಲ್ಲಿ ಸಂತಸದ ವಿಚಾರವೇ ಸರಿ…..ಆದರೆ…? ಮತ್ತಷ್ಟು ಓದು »

17
ಮಾರ್ಚ್

‘ದುರ್ಗಾಸ್ತಮಾನ’ ಮತ್ತು ‘ಗಂಡುಗಲಿ ಮದಕರಿ ನಾಯಕ’

–  ಶ್ಯಾಮಲ ಜನಾರ್ದನನ್

ದುರ್ಗಾಸ್ತಮಾನದ ಮುನ್ನುಡಿಯಲ್ಲೇ ಲೇಖಕ ದಿವಂಗತ ಶ್ರೀ ತರಾಸು ಬರೆದಿರುವ “ಚಿತ್ರದುರ್ಗ ಎಂದರೆ ತಮ್ಮ ಕರುಳಿಗೆ ಕಟ್ಟಿಕೊಂಡು ಬೆಳೆದ ಜೀವಂತ ವಸ್ತು – ಮದಕರಿ ನಾಯಕ ಒಬ್ಬ ಅರಸನಲ್ಲ ಜೀವಂತ ಆಪ್ತನೆಂಟ. ಚಿತ್ರದುರ್ಗ – ಮದಕರಿನಾಯಕ ಬೇರೆ ಬೇರೆಯಲ್ಲ ಒಂದೇ ಎಂಬ ಅವಿನಾಭಾವ, ದುರ್ಗ ಎಂದರೆ ಮದಕರಿ, ಮದಕರಿ ಎಂದರೆ ದುರ್ಗ ” ಎಂಬ ಮಾತುಗಳು ಅತ್ಯಂತ ಪ್ರಭಾವೀ ವಾಕ್ಯಗಳಾಗಿ, ನಾವು ಪುಸ್ತಕ ಓದಲು ತೊಡಗುವ ಮೊದಲೇ ನಮ್ಮ ಮನಸ್ಸನ್ನು ದುರ್ಗ-ಮದಕರಿ ಎಂಬ ಮೋಡಿಯಲ್ಲಿ ಸಿಲುಕಿಸುತ್ತದೆ.

ನಾಯಕವಂಶದಲ್ಲಿ ಹಲವಾರು ಮದಕರಿನಾಯಕರುಗಳಿದ್ದರೂ, ಜನತೆ ಈಗಲೂ ತುಂಬಾ ಅಭಿಮಾನದಿಂದ ದುರ್ಗ – ಮದಕರಿ ಎಂದರೆ ನೆನಪಿಸಿಕೊಳ್ಳುವುದು, ಈ ಕಥೆಯ ನಾಯಕ, ಕೊನೆಯ ಪಾಳೆಯಗಾರ / ಅರಸ ಚಿಕ್ಕ ಮದಕರಿನಾಯಕರನ್ನೇ !! ಈ ನಮ್ಮ ಅಭಿಮಾನಕ್ಕೆ ಕಾರಣನಾದ ಮದಕರಿನಾಯಕ ಅತಿ ಸಾಹಸಿ, ಅತಿಕ್ರೂರಿ, ಅತಿಮದಾಂಧ, ಅತಿಕಾಮಿ ಮತ್ತು ದೈವಕೃಪೆ, ಗುರುವಿನ ಅನುಗ್ರಹ ಎರಡನ್ನೂ ಕಳೆದುಕೊಂಡಿದ್ದ ನತದೃಷ್ಟ ಎಂದು ಚಿತ್ರದುರ್ಗ ಸಂಸ್ಥಾನದ ಚಪ್ಪೇ ಚಾವಡಿ ದಳವಾಯಿಗಳ ನೇರ ವಂಶಸ್ಥರಾದ, ಭದ್ರಾವತಿಯ ಉಕ್ಕಿನ ಕಾರ್ಖಾನೆಯ ನಿವೃತ್ತ ವರ್ಕ್ಸ್ ಮ್ಯಾನೇಜರ್ ಶ್ರೀ ಸಿ ಪರಶುರಾಮನಾಯಕ್ ರವರು ಹೇಳಿದ್ದನ್ನೂ, ಈ ಕೃತಿ “ದುರ್ಗಾಸ್ತಮಾನ” ಬರೆಯಲು ಸ್ಫೂರ್ತಿಯಾದದ್ದನ್ನೂ ಲೇಖಕರು ಸ್ಮರಿಸಿದ್ದಾರೆ.

ದುರ್ಗಾಸ್ತಮಾನವನ್ನು ಅನೇಕ ಸಂಶೋಧನೆಗಳು, ಮುದ್ರಣ ರೂಪದಲ್ಲಿ ಪ್ರಕಟವಾಗಿಲ್ಲದ ಶ್ರೀ ಚಿಕ್ಕೇರೂರು ಗೋವಿಂದಾಚಾರ್ಯರು ಬರೆದ ಹರಪನಹಳ್ಳಿ ಪಾಳೆಯಗಾರರ ಚರಿತ್ರೆಯ ಹಸ್ತಪ್ರತಿಯನ್ನು ಆಧರಿಸಿ ಬರೆಯಲಾಗಿದೆ. ಚಿತ್ರದುರ್ಗದ ಇತಿಹಾಸಕ್ಕೆ ಸಂಬಂಧಪಟ್ಟ ಮತ್ತು ಲಭ್ಯವಿದ್ದ ಎಲ್ಲಾ ದಾಖಲೆಗಳನ್ನೂ ಚೆನ್ನಾಗಿ ಅಧ್ಯಯನ ಮಾಡಿದ ನಂತರವೇ ಶ್ರೀ ತರಾಸುರವರು ಕಾದಂಬರಿ ಬರೆದಿದ್ದಾರೆ.

ತರಾಸುರವರು, ಅತ್ಯಂತ ಕಾಳಜಿಯಿಂದ, ಎಲ್ಲಾ ಅಧ್ಯಯನಗಳನ್ನೂ ಮಾಡಿ, ಸಂಗ್ರಹಕ್ಕೆಲ್ಲಾ ಆಧಾರ ತೋರಿಸಿಯೇ ದುರ್ಗಾಸ್ತಮಾನದಲ್ಲಿ ದೊರೆ ಮದಕರಿ ನಾಯಕನನ್ನು ಮೆಚ್ಚಬೇಕಾದ ಶೂರ ಎಂದೇ ಚಿತ್ರಿಸಿದ್ದಾರೆ. ದುರಂತ ಕಾದಂಬರಿಗೆ ಅರ್ಹನಾದ ಧೀರೋದ್ಧಾತ ನಾಯಕ ಎನ್ನುವಂತೆಯೂ ಚಿತ್ರಿಸಿದ್ದಾರೆ. ತನ್ನ ದುರ್ಗದ ಜನರೇ ತನಗೆ ದ್ರೋಹ ಮಾಡಿ, ಹೈದರಾಲಿಯ ಸೇನೆ ಕೋಟೆ ಮುತ್ತಿದಾಗ, ವೀರಾವೇಶದಿಂದ ಕಾದಾಡುತ್ತಾ, ಕೊನೆಯ ಉಸಿರು, ಒಡಲು ಬಿಡುವ ಮುನ್ನ ಮದಕರಿ, ಹೈದರನ ಧ್ವಜ ಸ್ಥಂಭವನ್ನು ಹೊಡೆದುರಿಳಿಸಿದ್ದನ್ನು ಓದುವಾಗ, ರೋಮಾಂಚನದಿಂದ ಮೈ ನವಿರೇಳುತ್ತದೆ. ಹೈದರಾಲಿಯ ಕಡೆಯವರ ಹತ್ತಾರು ಗುಂಡುಗಳು ಮದಕರಿಯನ್ನು ಹೊಡೆದುರುಳಿಸಿದಾಗ, ದುರ್ಗದ ಗಂಡುಗಲಿ ವೀರ ಮದಕರಿನಾಯಕ ತನ್ನ ಪ್ರಾಣಪ್ರಿಯವಾದ ದುರ್ಗದ ಮಣ್ಣಿಗೆ ರಕ್ತ ತರ್ಪಣ ನೀಡುತ್ತಾ, ಕೋಟೆಯ ಮೇಲಿಂದ ಕೆಳಗುರುಳುತ್ತಾನೆ. ಮತ್ತೇಳುವುದಿಲ್ಲ – ಅಲ್ಲಿಗೆ ದುರ್ಗದ ಇತಿಹಾಸದಲ್ಲಿ ಪ್ರಜ್ವಲಿಸುವ ಸೂರ್ಯ ಅಸ್ತನಾಗಿದ್ದ, ದುರ್ಗಾಸ್ತಮಾನವಾಗಿ ಹೋಗುತ್ತದೆ, ಆ ಕ್ಷಣ.

ಮತ್ತಷ್ಟು ಓದು »

17
ಮಾರ್ಚ್

ಅನ್ಯಾಯವನ್ನು ಕಾಪಿಡುತಿರುವ ಕಾನೂನಿನಡಿಯಲ್ಲಿ ಮಹಿಳೆಯೆಷ್ಟು ಭದ್ರ?!!!

– ತೇಜಸ್ವಿನಿ ಹೆಗಡೆ
ಎಲ್ಲಿ ನಾರಿಯರನ್ನು ಪೂಜಿಸುತ್ತಾರೋ ಅಲ್ಲಿ ದೇವತೆಗಳು ವಾಸಿಸುತ್ತಾರೆ -ಸಂಸ್ಕೃತ ಸುಭಾಷಿತವೊಂದು ತುಂಬಾ ಸುಂದರ ಸಂದೇಶವನ್ನು ನೀಡುತ್ತದೆ. ಅಂತೆಯೇ ಗಾಂಧೀಜಿ ಕೂಡ ಎಂದು ಮಧ್ಯರಾತ್ರಿಯಂದೂ ಕೂಡ ಮಹಿಳೆ ನಿರ್ಭಯಳಾಗಿ ತಿರುಗುವಂತಾಗುವುದೋ ಅಂದೇ ನಮಗೆ ಸ್ವಾತಂತ್ರ್ಯ ಸಿಕ್ಕಿದಂತಾಗುವುದು ಎಂದು ಹೇಳಿದ್ದಾರೆ. ಎಷ್ಟೊಂದು ಉದಾತ್ತ ವಿಚಾರಗಳಿವು! ಆದರೆ ಈ ಮೇಲಿನ ಹೇಳಿಕೆಗಳೆಲ್ಲಾ ಇಂದು ಕನಸಿನೊಳಗಿನ ಕನ್ನಡಿಗಂಟಿನಂತೇ ಸರಿ! ಎಂದೆಂದೂ ಈ ಸ್ವಾತಂತ್ರ್ಯ ಮಹಿಳೆಯದಾಗಲು ಸಾಧ್ಯವೇ ಇಲ್ಲದಂತಹ ಪರಿಸ್ಥಿತಿ ಇಂದಾಗಿದೆ. ಮುಂದೆ ಇದಕ್ಕಿಂತಲೂ ದುಃಸ್ಥಿತಿ ನಮ್ಮದಾಗಬಹುದು. ಮನೆಯೊಳಗೇ ಇರಲಿ ಇಲ್ಲಾ ಹೊರಜಗತ್ತಿನಲ್ಲೇ ಇರಲಿ ಮಹಿಳೆಯರ ಬದುಕು ಆತಂಕದೊಂದಿಗೇ ಕಳೆಯುವಂತಾಗಿರುವುದು ತುಂಬಾ ಖೇದಕರ!

 

“ಬಲಾತ್ಕಾರ, ಮಾನಭಂಗ, ಮಾನಹರಣ, ರೇಪ್” ಈ ಶಬ್ದಗಳನ್ನು ಕೇಳುವಾಗಲೇ ಮೊಗ ಕಪ್ಪಿಡುತ್ತದೆ. ಮನ ಭಯಗೊಳ್ಳುತ್ತದೆ. ಆ ಕೃತ್ಯ ಎಸಗಿದ ವ್ಯಕ್ತಿಯ ಮೇಲೆ ಅಗಾಧ ರೋಷ, ತಿರಸ್ಕಾರ, ಅಸಹ್ಯ ಮೂಡುತ್ತದೆ ನಮಗೆ. ಆದರೆ ಈ ದುಷ್ಕೃತ್ಯಕ್ಕೆ ಒಳಗಾದ ವ್ಯಕ್ತಿಗೆ ಯಾವ ರೀತಿ ಅನಿಸಬಹುದು? ಆಕೆ ಹೇಗೆ ತನ್ನ ತಾನು ಸಂಭಾಳಿಸಿಕೊಳ್ಳುವಳು? ಮುಂದೆ ಆಕೆಯ ಬದುಕು ಅವಳನ್ನು ಎಲ್ಲಿಗೆ ಒಯ್ಯಬಹುದು? ಎನ್ನುವ ಚಿಂತನೆಗೆ ಹೋಗುವವರು ಕಡಿಮೆಯೇ. ಆ ಕ್ಷಣದ ಕರುಣೆ, ಅನುಭೂತಿ, ಅಯ್ಯೋ ಪಾಪ ಎನ್ನುವ ಅನುಕಂಪವನ್ನಷ್ಟೇ ತೋರಿ, ಆ ಪಾಪಿಗೆ ಸರಿಯಾಗಿ ಶಿಕ್ಷೆಯಾಗಲೆಂದು ಹಾರೈಸಿ ಮರೆಯುತ್ತೇವೆ. ಆದರೆ ಅಂತಹ ಒಂದು ಮಹಾಪಾಪವನ್ನು ಎಸಗಿದ ವ್ಯಕ್ತಿಗೆ ಸರಿಯಾದ ಶಿಕ್ಷೆಯಾಗಿದೆಯೋ ಇಲ್ಲವೋ?! ಇಲ್ಲದಿದ್ದರೆ ಹೇಗೆ ಶಿಕ್ಷೆ ಆಗುವಂತೆ ಮಾಡಬೇಕು? ಎಂಬುದನ್ನು ನಾವು ಯೋಚಿಸುವುದೇ ಇಲ್ಲ. ಆ ಹೊತ್ತಿನ ಬಿಸಿ ಸುದ್ದಿಯನ್ನಷ್ಟೇ “Breaking News” ಆಗಿ ಪ್ರಸಾರಮಾಡುವ ಮಾಧ್ಯಮ, ತದನಂತರದ ಬೆಳವಣಿಗೆಯ ಬೆನ್ನತ್ತಿ ಹೋಗುವುದೂ ಇಲ್ಲ. ಆಘಾತಕ್ಕೊಳಗಾದ ಮಹಿಳೆಗೆ ತಮ್ಮ ಬೆಂಬಲ ಹಾಗೂ ಮಾನಸಿಕ ಶಕ್ತಿಯನ್ನು ನೀಡಿ, ಆ ಮೂಲಕ ಪಾಪಿಗೆ ಆಕೆಯೇ ಶಿಕ್ಷೆ ನೀಡುವಂತೆ ಮಾಡಲು ಸಹಕರಿಸುವ ನಿಟ್ಟಿನಲ್ಲಿ ನಮ್ಮ ಸಮಾಜವಾಗಲೀ, ಕಾನೂನಾಗಲೀ, ಕನಿಷ್ಠ ಆಕೆಯ ಮನೆಯವರಾಗಲೀ ಮುಂದುವರಿಯುವುದೇ ಇಲ್ಲ!

ಮತ್ತಷ್ಟು ಓದು »

16
ಮಾರ್ಚ್

ಎರಡು ಕೋಟಿಗೆಷ್ಟು ಮನೆ ಕಟ್ಟಿಸಬಹುದು ಯಡ್ಯೂರಪ್ಪನವ್ರೇ?

– ರಾಕೇಶ್ ಶೆಟ್ಟಿ

ಸೂಪರ್ ಮೂನ್ ಎಫ಼ೆಕ್ಟ್ ಬಗ್ಗೆ ಮಾತಾಡುತ್ತ ಏನೋ ವಿಪತ್ತು ಕಾದಿದೆಯಂತೆ ಮಾರಾಯ ಅಂತ ಗುಸು ಗುಸು ಶುರುವಾಗಿತ್ತು,ಊಟಕ್ಕೆ ಹೋಗಿ ಬಂದವ ತಾಜ ಸುದ್ದಿಯೇನು ಅಂತ ನೋಡ ಹೋಗಿ ಮೈ ಒಮ್ಮೆ ತಣ್ಣಗಾಯಿತು.ಜಪಾನ್ನಲ್ಲಿ ಸುನಾಮಿಯೆದ್ದಿದೆ! ಕ್ಷಣಕಾಲ ಅವಕ್ಕಾದೆ,ನಂತರ ಗೂಗಲ್ ಮಹರಾಜನ ಮೊರೆ ಹೋಗಿ ವಿಡಿಯೋ ನೋಡಿ ದಂಗಾಗಿ ಹೋದೆ,ಅದಿನ್ನೆಂತ ರಾಕ್ಷಸ ಅಲೆಗಳು ಅವು!ತಮ್ಮ ಹರಿವಿನಳೊಗೆ ಸಿಕ್ಕಿದ್ದನ್ನೆಲ್ಲ ಆಪೋಷನ ತೆಗೆದುಕೊಳ್ಳುತ್ತ ಹೊರಟಿತಲ್ಲ,ಅದಿನ್ನೆಷ್ಟು ಸಾವಿರ ಜನರ ಬದುಕು ಮೂರಾ ಬಟ್ಟೆಯಾಯಿತು,ಜಪಾನ್ ಅನ್ನುವ ಸ್ವಾಭಿಮಾನಿಗಳ ದೇಶಕ್ಕೆ ಇದೊಂದು ದೊಡ್ಡ ಪೆಟ್ಟು.ಈ ಆಘಾತದಿಂದ ಜಪಾನ್ ಸಹೋದರರು ಎದ್ದು ಬರಲಿ,ಮತ್ತೆ ಜಪಾನ್ ಗೆಲ್ಲಲೇಬೇಕು ಇದು ಬಹುಷಃ ಬಹುತೇಕರ ಪ್ರಾರ್ಥನೆ.

ಪ್ರವಾಹ! … ಸುನಾಮಿಯ ರಕ್ಕಸ ಅಲೆಗಳನ್ನ ನೋಡಿದಾಗ ನನಗೆ ತಟ್ಟನೆ ನೆನಪಾಗಿದ್ದು, ಎರಡು ವರ್ಷದ ಹಿಂದೆ ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ಸುರಿದ ಮಳೆಯಲ್ಲಿ ಸಿಕ್ಕಿ ಹಾಕಿಕೊಂಡು almost ಎದೆಯ ಹತ್ತಿರ ಹರಿದು ಬರುತಿದ್ದ ನೀರಿನಲ್ಲಿ ನಾವು ಪಟ್ಟ ಪಾಡು! ಮತ್ತು ಆಗ ನೀರಿನ ರಭಸಕ್ಕೆ ಪಲ್ಸರ್ ಬೈಕಿನಲ್ಲಿ ತೇಲಿಕೊಂಡು ಬಂದ ಆಸಾಮಿಯೊಬ್ಬ ಸಾವರಿಸಿಕೊಂಡು ಹೇಳಿದ ಮಾತು!

“‘ಸರ್,ಈ ತರ ಟೀ.ವಿಯಲ್ಲಿ ನೋಡಿದ್ದೇ,ಅನುಭವಿಸಿರಲಿಲ್ಲ.ಈ ಮಳೆಗೆ ಹಿಂಗೆ ನಾವು ಚಡಪಡಿಸ್ತ ಇದ್ದಿವೀ, ಇನ್ನ ಪಾಪ ಉತ್ತರ ಕರ್ನಾಟಕದ ಪ್ರವಾಹದಲ್ಲಿ ಸಿಕ್ಕಿಕೊಂಡ ಜನರ ಕತೆ ಹೇಗಾಗಿರಬೇಡ”. ಅವನಂದ ಮಾತು ನಿಜ ಅಂತ ಅನ್ನಿಸಿತ್ತು.

ಮತ್ತಷ್ಟು ಓದು »

16
ಮಾರ್ಚ್

ಇಂಗ್ಲೀಷ್ ಮತ್ತು ಮೊಬೈಲ್ ಫೋನ್ !

– ಸಂದೀಪ್ ಕಾಮತ್

ಒಂದು ಜಾಹೀರಾತು ಬರುತ್ತೆ. ಅದು ಚಹಾದ ಬಗ್ಗೆ. ತಂದೆ ಮಗನಿಗೆ ಚಹಾ ಕುಡಿಯಬೇಡ ಅನ್ನೋವಾಗ ತಾಯಿ ’ಯಾರು ಹೇಳಿದ್ದು ಚಹಾ ಒಳ್ಳೆಯದಲ್ಲ ಅಂತ ? ’ ಈ ಪ್ರಶ್ನೆಗೆ ತಂದೆ ನನಗೆ ಸರಿಯಾಗಿ ನೆನಪಿಲ್ಲ ಬಹುಶಃ ನನ್ನ ತಾಯಿ ಹೇಳಿರ್ಬೇಕು ಅಂತ ತಾಯಿ ಮೇಲೆ ಗೂಬೆ ಕೂರಿಸ್ತಾನೆ. ಅವನ ತಾಯಿ ಆಗ ’ ನನಗೂ ಸರಿಯಾಗಿ ನೆನಪಿಲ್ಲ ನಿನ್ನ ತಂದೆ ಹೇಳಿರ್ಬೇಕು ’ ಅಂತ ಅವಳ ಗಂಡನ ಮೇಲೆ ಗೂಬೆ ಕೂರಿಸ್ತಾಳೆ. ಕಡೆಗೂ ಚಹಾ ಕೆಟ್ಟದು ಅಂತ ಯಾರು ಹೇಳಿದ್ದು ಗೊತ್ತಾಗೋದೆ ಇಲ್ಲ!

ಈ ಜಾಹೀರಾತಿನ ಪ್ರಸ್ತಾವ ಯಾಕೆ ಬಂತು ಅಂದರೆ ನನಗೂ ಅಂಥದ್ದೇ ಒಂದು ಪ್ರಶ್ನೆ ಮನದಲ್ಲಿ ಮೂಡಿದೆ.

“ಯಾರು ಹೇಳಿದ್ದು ಕನ್ನಡ ನಶಿಸುತ್ತಿದೆ ಅಂತ ? ”

ನಿಮ್ಮಲ್ಲಿ ಕೆಲವರು ಥಟ್ ಅಂತ ನನಗೆ ಅವರು ಹೇಳಿದ್ದು ನನ್ಗೆ ಆ ವೆಬ್ ಸೈಟ್ ನಲ್ಲಿ ವಿಷಯ ಸಿಕ್ಕಿತ್ತು , ಅಂತ ಥೇಟ್ ಆ ಜಾಹೀರಾತಿನ ಹಾಗೆಯೇ ಹೇಳಬಹುದು. ಆದ್ರೆ ಅದು ಸರಿನಾ?

ಕನ್ನಡಕ್ಕೆ ಸಾವಿರಾರು ಭಾಷೆಯ ಇತಿಹಾಸ ಇದೆ ಅಂತಾರೆ. ಹಾಗಾದ್ರೆ ಸಾವಿರಾರು ವರ್ಷಗಳಿಂದ ತನ್ನತನವನ್ನು ಉಳಿಸಿಕೊಂಡಿರುವ ಭಾಷೆ ಅದು ಹೇಗೆ ಸಾಯುತ್ತೆ ?

ಮತ್ತಷ್ಟು ಓದು »

15
ಮಾರ್ಚ್

ದೇವರಿಗೇ ಹಿಪ್ನಾಟಿಸಂ…!

– ಪ್ರಸನ್ನ, ಬೆಂಗಳೂರು

ಮೊನ್ನೆ ಆಪ್ತಮಿತ್ರ ಚಲನಚಿತ್ರ ನೋಡುತ್ತಿದ್ದಾಗ ಕೊನೆಯ ದೃಶ್ಯದಲ್ಲಿ ಯು ಆರ್ ಗಂಗಾ, ಹೌ ಡು ಯು ಫೀಲ್ ಎಂಬ ಸಂಭಾಷಣೆ ಕೇಳಿದವನಿಗೆ ನನ್ನ ಕಾಲೇಜ್ ದಿನಗಳಲ್ಲಿ ನಡೆದ

ಒಂದು ಪ್ರಸಂಗವನ್ನು ಬರಹದಲ್ಲಿ ಹಿಡಿದಿಡುವ ಮನಸ್ಸಾಯಿತು ಅದರ ಫಲವೆ ಈ ಲೇಖನ.

ಒಂದು ಬೆಳಿಗ್ಗೆ ನಮ್ಮ ಗುಂಪಿನ ಹುಡುಗರಾದ (ಇದ್ದದ್ದೇ ೩ ಮತ್ತೊಂದು ಜನ ಅದರಲ್ಲಿ ಗುಂಪೇನು ಇರಲಿಲ್ಲ ಆದರೂ ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ಗುಂಪುಗಳಿದ್ದದ್ದು ನಿಜ) ಮುರಳಿ,ಮಂಜು, ಸಂಜೀವ್ ಬದಾಮಿ, ಎಲ್ಲರೂ ನಿನ್ನೆ ನಡೆದ ಹಿಪ್ನಾಟಿಸಂ ಬಗ್ಗೆ ಮಾತನಾಡುತ್ತಿದ್ದರು. ಪಕ್ಕದೂರಿನ ಬಸ್ಸಿಳಿದು ಅವರ ಜೊತೆ ಸೇರಿದ ನನಗೆ ಇದು ಹೆಚ್ಚು ಕುತೂಹಲ ಮೂಡಿಸಿತು. ನಮ್ಮ ಪ್ರಾಧ್ಯಾಪಕರ ಸಂಬಂಧಿ ಮತ್ತು ಸ್ನೇಹಿತರಾದ ವೈದ್ಯರೊಬ್ಬರು ( ಇವರ ಮನೆಯಲ್ಲಿದ್ದ ಸುಂದರ ಹುಡುಗಿಯಿಂದ ಇವರು ನಮಗೆಲ್ಲ ಚಿರಪರಿತರು) ನಡೆಸಿದ ಅಥವ ಪ್ರಯೋಗಿಸಿದ ಹಿಪ್ನಾಟಿಸಂಗೆ ಒಳಗಾದ ಮುರಳಿ ತನ್ನ ಅನುಭವವನ್ನು ಬಿಡಿ ಬಿಡಿಯಾಗಿ ಅರುಹಿದ. ನನಗಂತೂ ಕುತೂಹಲ ನೂರ್ಮಡಿಸಿತು. ಸುಧಾ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡ ’ಅಘೋರಿಗಳ ನಡುವೆ’ ಕಾದಂಬರಿಯನ್ನು ಪ್ರತಿವಾರ ಕಾಯುತ್ತ ಓದಿದ್ದು ನೆನಪಿನಲ್ಲಿತ್ತು ಮತು ಅದೇ ಪುಸ್ತಕ ರೂಪದಲ್ಲಿ ಪ್ರಕಟಗೊಂಡಾಗ ಲೈಬ್ರರಿಯಿಂದ ತಂದು ೨-೩ ಬಾರಿ ಓದಿದ್ದೆ. ಅಘೋರಿಗಳು ಗಳಿಸಿರುವ ಅಗಾಧ ಮಾನಸಿಕ ಶಕ್ತಿ ಮತ್ತು ಅವರಿಗಿರುವ ಏಕಾಗ್ರತೆಯನ್ನು ಮತ್ತು ಇಡೀ ಕಾದಂಬರಿಯ ಹೂರಣವನ್ನು ಒಂದೇ ಸಾಲಿನಲ್ಲಿ ಹಿಡಿದಿಟ್ಟ ಆ ಪುಸ್ತಕ ನನಗೆ ಅತ್ಯಂತ ಪ್ರಿಯವಾಗಿತ್ತು.

ಮುರಳಿಯ ಕೈಯನ್ನು ಕಭ್ಭಿಣದಂತೆ ಗಟ್ಟಿಯೆಂದು ಆದೇಶವಿತ್ತು. ನಂತರ ಸೂಜಿಯಿಂದ ಆಳಕ್ಕೆ ಚುಚ್ಚಿದ್ದರೂ ಆತನಿಗೆ ನೋವಾಗದಿದ್ದದ್ದು ನನಗೆ ಕುತೂಹಲದ ವಿಷಯ ಆದರೆ ಇದನ್ನೆಲ್ಲಾ ಹೇಳುವಾಗ ಅದರ ನೋವನ್ನುಣ್ಣುತ್ತಿದ್ದ. ಹಿಪ್ನಾಟಿಸಂ ಮುಖಾಂತರ ಕೆಲವು ಮಾನಸಿಕ ಜನ್ಯ ಖಾಯಿಲೆಗಳನ್ನು ಗುಣಪಡಿಸುವ ಸಾಧ್ಯತೆಯ ಬಗ್ಗೆ ಆಗತಾನೆ ಅದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಗೇರುವ ಪ್ರಯತ್ನದಲ್ಲಿದ್ದ ಆ ವೈದ್ಯರ ಮಾತುಗಳು ನನ್ನನ್ನು ಆ ಕಡೆಗೆ ಬಲವಾಗಿ ಸೆಳೆಯಿತು. ಅಂತೂ ಒಂದು ಶನಿವಾರ ಮತ್ತೊಮ್ಮೆ ಪ್ರಯೋಗ ಮಾಡಿ ತೋರಿಸಲು ಆ ವೈದ್ಯರನ್ನು ಒಪ್ಪಿಸಿ ನಾವೆಲ್ಲ ಆ ಶನಿವಾರಕ್ಕಾಗಿ ಕಾಯುತ್ತಾ ಕುಳಿತೆವು.

ಮತ್ತಷ್ಟು ಓದು »

14
ಮಾರ್ಚ್

ಬಾಪೂ ನೇತಾಜಿಯನ್ನು ತುಳಿದರೆ ?

– ಶ್ರೀಹರ್ಷ ಸಾಲೀಮಠ

ಸುಭಾಷ ಚಂದ್ರ ಭೋಸರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಕಂಡ ಅತ್ಯಂತ ಚಾರ್ಮಿಂಗ್ ವ್ಯಕ್ತಿ. ಅವರು ಹುಟ್ಟಾ ಜಿನಿಯಸ್. ಕೇವಲ ಎಂಟು ತಿಂಗಳ ಅವಧಿಯ ಸಿದ್ಧತೆಯಲ್ಲಿ ಐ.ಸಿ.ಎಸ್ ಪರೀಕ್ಷೆಯಲ್ಲಿ ನಾಲ್ಕನೆಯ ರ್‍ಯಾಂಕ್ ಪಡೆದ ಮೇಧಾವಿ. ಸುಭಾಷ್ ರ ಚರಿಷ್ಮಾ ಹಿಟ್ಲರ್‌ನಂತಹವನನ್ನೇ ಬೆರಗುಗೊಳಿಸಿತ್ತು. ದೇಶಬಂಧು ಚಿತ್ತರಂಜನ್ ದಾಸ್ ರ ಗರಡಿಯಲ್ಲಿ ಪಳಗಿದ ನೇತಾಜಿ ಕ್ರಿಯಾಶಿಲತೆಯಲ್ಲೂ ಎಲ್ಲರಿಗಿಂತ ಒಂದು ಕೈ ಮೇಲು. ದೇಶಸೇವೆಯ ಕೈಂಕರ್ಯಕ್ಕೆ ಓಗೊಟ್ಟು ಐ.ಸಿ.ಎಸ್ ನಂತಹ ಹುದ್ದೆಯನ್ನು ಬಿಟ್ಟು ಮರಳಿದವರು. ನೇತಾಜಿಯ ದೇಶಭಕ್ತಿಯ ಬಗ್ಗೆ ಯಾರಿಗೂ ಅನುಮಾನಗಳಿರಲಿಲ್ಲ; ಇಂದಿಗೂ ಇಲ್ಲ!

ಸುಭಾಷರಿಗೂ ಬಾಪೂರಿಗೂ ತಾತ್ವಿಕವಾದ ಅಭಿಪ್ರಾಯಬೇಧಗಳಿದ್ದವು. ಅದನ್ನು ವೈಯಕ್ತಿಕ ಮಟ್ಟದ ಬೇಧಗಳು ಎಂಬಂತೆ ಚಿತ್ರಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕಸ್ತುರ್ ಬಾ ಹೇಳುತ್ತಾರೆ “ಗಾಂಧೀಜಿ ಮತ್ತು ಸುಭಾಷರು ಚರ್ಚೆಗೆ ಕುಳಿತರೆ ಇಬ್ಬರು ದೈವಿಪುರುಷರು ಸಂಭಾಷಣೆಗೆ ತೊಡಗಿದಂತೆ ತೋರುತ್ತಿತ್ತು.” ಅಭಿಪ್ರಾಯಗಳಲ್ಲಿ ಬಲವಾದ ಬೇಧಗಳಿದ್ದರೂ ನೇತಾಜಿ ಮತ್ತು ಬಾಪೂಜಿಯವರಲ್ಲಿ ವಯಕ್ತಿಕ ಮಟ್ಟದ ದ್ವೇಷಗಳಿರಲಿಲ್ಲ.

ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡಲು ವಿದೇಶಿ ತಾಕತ್ತು ಹಾಗೂ ಸೈನ್ಯದ ನೆರವು ಪಡೆಯಬೇಕು ಎಂಬ ಅಭಿಪ್ರಾಯ ನೇತಾಜಿಯವರಾಗಿತ್ತು. ಸಂಪೂರ್ಣ ಸ್ವದೇಶಿ ಮಾರ್ಗದಲ್ಲೇ ಸ್ವಾತಂತ್ರ್ಯ ಪಡೆಯಬೇಕೆಂಬುದು ಗಾಂಧೀಜಿಯ ಅಭಿಪ್ರಾಯವಾಗಿತ್ತು. ಯುದ್ಧಾಸ್ತ್ರಗಳು, ಬಾಂಬುಗಳ ಸಹಾಯದಿಂದ ನೆತ್ತರು ಹರಿಸಿ ಸ್ವಾಯತ್ತೆ ಪಡೆಯಬೇಕೆಂಬುದು ನೇತಾಜಿ ಚಿಂತನೆಯಾಗಿದ್ದರೆ ಸತ್ಯ ಮತ್ತು ಅಹಿಂಸೆ ಗಾಂಧೀಜಿಯ ಮಂತ್ರವಾಗಿತ್ತು. ಇದು ಅವರ ನಡುವೆ ಸಾಕಷ್ಟು ಜಿಜ್ಞಾಸೆ, ಚರ್ಚೆಗಳಿಗೆ ದಾರಿ ಮಾಡಿಕೊಂಡಿತ್ತು. ಹಾಗಂತ ಇಬ್ಬರೂ ಪರಸ್ಪರ ದ್ವೇಷಿಸುತ್ತಿರಲಿಲ್ಲ.

ಮತ್ತಷ್ಟು ಓದು »

14
ಮಾರ್ಚ್

ನಾ ಕಂಡಂತೆ ನಮ್ಮ ಬೆಳಗಾವಿ

– ಚೇತನ್ ಜೀರಾಳ್

ಉತ್ತರ ಕರ್ನಾಟಕದವನಾದ ನನಗೆ, ಬೆಳಗಾವಿ ನನ್ನ ಬೆಳವಣಿಗೆಯ ಒಂದು ಭಾಗವೇ ಅಂದರೆ ತಪ್ಪಲ್ಲ. ವರ್ಷಗಳು ಕಳೆದಂತೆ ನನ್ನ ಜೊತೆಯೇ ಬೆಳಗಾವಿಯ ಸ್ವರೂಪ ಬದಲಾಗುತ್ತಾ ಬಂತು. ಉತ್ತರ ಕರ್ನಾಟಕದ ಜಿಲ್ಲೆಗಳು ಶೈಕ್ಷಣಿಕವಾಗಿ ಬಹಳ ಹಿಂದುಳಿದಿವೆ. ಒಳ್ಳೆಯ ಓದು ಅಥವಾ ಉನ್ನತ ಶಿಕ್ಷಣ ಪಡೆಯಬೇಕೆಂದರೆ ನಾವು ಹುಬ್ಬಳ್ಳಿ, ಧಾರವಾಡ ಇಲ್ಲವೆಂದರೇ ಬೆಳಗಾವಿಗೆ ಹೋಗಿ ಓದಬೇಕು. ಪಿಯುಸಿ ಮುಗಿಸಿದ ಮೇಲೆ ಇಂಜಿನಿಯರಿಂಗ್ ಒದಲು ನನಗೆ ಸಿಕ್ಕಿದ್ದು ಬೆಳಗಾವಿಯ ಒಂದು ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ. ಅದು 2003-04ರ ಸಮಯ, ಕಾಲೇಜಿಗೆ ಸೇರಿಕೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಇದ್ದವು, ಆಗ ಒಂದು ಕಡೆ ಖುಷಿಯಾಗುತ್ತಿದ್ದರೆ ಮತ್ತೊಂದು ಕಡೆ ಭಯ ಕಾಡುತ್ತಿತ್ತು ಕಾರಣ ನಾನು ಹೋಗುತ್ತಿರುವುದು ಬೆಳಗಾವಿ ಅನ್ನೋ ಊರಿಗೆ. ಜೊತೆಗೆ ಹಿಂದೆ ನನ್ನ ತಂದೆ ಇಲ್ಲಿ ಓದುತ್ತಿದ್ದಾಗ ಅವರಿಗೆ ಆಗಿದ್ದ ಅನೇಕ ಕಹಿ ಘಟನೆಗಳು. ಹೆದರಿಕೆಗೆ ಕಾರಣವಿದ್ದದ್ದು ಬೆಳಗಾವಿಯಲ್ಲಿ ಮರಾಠಿಗರು ಹೆಚ್ಚು, ಅಲ್ಲಿ ಕನ್ನಡ ಮಾತನಾಡುವವರನ್ನು ಹೊಡೆಯುತ್ತಾರೆ ಅನ್ನೋ ಭಯ, ಕಾರಣ ನನ್ನ ತಂದೆ 70ರ ದಶಕದಲ್ಲಿ ಇಲ್ಲಿ ಓದುತ್ತಿದ್ದಾಗ ಕನ್ನಡ ಮಾತನಾಡಿದ್ದಕ್ಕಾಗಿ ಮರಾಠಿಗರು ನನ್ನ ತಂದೆ ಜೊತೆ ಜಗಳವಾಡಿ ಅವರನ್ನ ಹೊಡೆದಿದ್ದರು ಕೂಡ.

ಮತ್ತಷ್ಟು ಓದು »

13
ಮಾರ್ಚ್

ಓದೋದೊಂದು, ಮಾಡೋದೊಂದು

ಸುಪ್ರೀತ್, ಬೆಂಗಳೂರು

ಆತ ಕಂಪ್ಯೂಟರ್ ಸೈನ್ಸಿನಲ್ಲಿ ಡಿಗ್ರಿ ಪಡೆದಿರುತ್ತಾನೆ ಆದರೆ ಶೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿರುತ್ತಾನೆ. ಆಕೆ ಟಿಸಿಎಚ್ ಮಾಡಿಕೊಂಡು ಕಾಲ್ ಸೆಂಟರಿನಲ್ಲಿ ದುಡಿಯುತ್ತಿರುತ್ತಾಳೆ. ಈಕೆಯದು ಬಿಕಾಂ ಪದವಿ ಆದರೆ ಕೆಲಸ ಮಾಡುವುದು ಇಂಜಿನಿಯರಿಂಗ್ ಕಂಪೆನಿಯಲ್ಲಿ. ಅವರಿಗೆ ಅರ್ಥಶಾಸ್ತ್ರ, ಸಮಾಜಶಾಸ್ತ್ರಗಳಲ್ಲಿ ಡಾಕ್ಟರೇಟ್ ಇರುತ್ತದೆ, ಜಾಹೀರಾತು ಕಂಪೆನಿಯ ವ್ಯವಸ್ಥಾಪಕರಾಗಿರುತ್ತಾರೆ. ಕೆಲವು ಮಂದಿ ಇಂಜಿನಿಯರಿಂಗ್ ಓದಿರುತ್ತಾರೆ ಪತ್ರಿಕೋದ್ಯಮದ ಗಿರಣಿಗೆ ಬಿದ್ದಿರುತ್ತಾರೆ. ಎಂಬಿಬಿಎಸ್ ಓದಿ ರಾಷ್ಟ್ರ ಜಾಗೃತಿಗಾಗಿ ಸಂಘಟನೆ ಕಟ್ಟಿಕೊಂಡಿರುತ್ತಾರೆ. ಗಮನಿಸುತ್ತಾ ಹೋದರೆ ಹತ್ತರಲ್ಲಿ ಐದು ಮಂದಿ ಓದುವುದೇ ಒಂದು ಮುಂದೆ ಜೀವನದಲ್ಲಿ ಮಾಡುವುದೇ ಮತ್ತೊಂದು!

ಓದಿ ಓದಿ ಮರುಳಾದ!

ಶಿಕ್ಷಣವೆನ್ನುವುದು ಮೂಲಭೂತವಾಗಿ ಶುರುವಾಗಿದ್ದು ಉದ್ಯೋಗ ಹಿಡಿದು ಕಮಾಯಿ ಮಾಡಲಿ ಎನ್ನುವ ಕಾರಣಕ್ಕಲ್ಲ. ಅಕ್ಷರಗಳನ್ನು ಓದಲು, ಬರೆಯಲು ಕಲಿಯುವುದೇ ಶಿಕ್ಷಣದ ಪ್ರಮುಖ ಉದ್ದೇಶವಾಗಿತ್ತು. ಓದು ಬರಹ ಕಲಿತವನಿಗೆ ನಾಗರೀಕತೆಯ ಪರಿಚಯವಾಗಿರುತ್ತದೆ, ಶಿಸ್ತು ರೂಢಿಯಾಗಿರುತ್ತದೆ. ಶಿಕ್ಷಿತ ವ್ಯಕ್ತಿಯು ಮುಂದೆ ಸಮಾಜ ಸತ್ಪ್ರಜೆಯಾಗುತ್ತಾನೆ ಎನ್ನುವುದು ರೂಢಿಗತ ನಂಬಿಕೆಯಾಗಿತ್ತು. ಹೀಗಾಗಿ ಓದಿಗೂ ಹೊಟ್ಟೆ ಪಾಡಿಗಾಗಿ ಹಿಡಿಯುವ ನೌಕರಿಗೂ ಅಂತಹ ಸಂಬಂಧವೇನೂ ಇರಲಿಲ್ಲ. ಅಲ್ಲದೆ, ಇಂದಿನ ಹಾಗೆ ವೃತ್ತಿ ಪರ ಶಿಕ್ಷಣ ಕೋರ್ಸುಗಳ ಹಾವಳಿಯೂ ಇಲ್ಲದ ದಿನಗಳಲ್ಲಿ ಶಿಕ್ಷಣವೆಂದರೆ ದಿನಪತ್ರಿಕೆ ಓದಬಲ್ಲಷ್ಟು, ಪತ್ರ, ಅರ್ಜಿಗಳನ್ನು ಬರೆಯಬಲ್ಲಷ್ಟು, ಕೂಡು, ಕಳೆ, ಗುಣಿಸು ಎನ್ನುವ ಗಣಿತವನ್ನೂ ಕಲಿಯುವುದು ಎಂದೇ ಭಾವಿಸಲಾಗುತ್ತಿತ್ತು. ಮತ್ತಷ್ಟು ಓದು »

11
ಮಾರ್ಚ್

ಮರಳಿ ಎದ್ದು ಬಾ ಜಪಾನ್…

ಸಾತ್ವಿಕ್ ಎನ್ ವಿ

ಮತ್ತೆ ಅದೇ ಹಾಡು ಕೇಳುವ ಪ್ರಸಂಗ ಬರುತ್ತದೆ ಎಂದುಕೊಂಡಿರಲಿಲ್ಲ.

ರೈಲಿನಲ್ಲಿ ಹೋಗುತ್ತಿರುವಾಗ ನಾಲ್ವರು ವಿದೇಶಿಯರು ಇದಕ್ಕಿದ ಹಾಗೆ ಎದ್ದು ನಿಂತು ಹಾಡತೊಡಗಿದರು. ಬೋಗಿಯಲ್ಲಿನ ಜನರಿಗೆಲ್ಲ ಆಶ್ಚರ್ಯ. ಯಾರೋ ಹಿರಿಯರು ಆ ವಿದೇಶಿಯರನ್ನು ಕೇಳಿದಾಗ ಅಲ್ಲಿದ್ದ ಜನರಿಗೆ ಕಣ್ಣಾಲಿಗಳು ತುಂಬಿ ಬಂದವು. ವಿಷಯವಿಷ್ಟೇ. ಅವರು ಜಪಾನಿಯರು. ಅದರಲ್ಲಿ ಒಬ್ಬ ರೇಡಿಯೋ ಕೇಳುತ್ತಿದ್ದ. ಇದಕ್ಕಿದ ಹಾಗೆ ರೇಡಿಯೋದಲ್ಲಿ ಜಪಾನ್ ನಲ್ಲಿ ಭೂಕಂಪವಾಗಿ ಸಾಕಷ್ಟೂ ಸಾವು ನೋವುಗಳಾಗಿರುವುದು ತಿಳಿದುಬಂತು. ಆಗ ಆ ಜಪಾನಿಯರು ಎದ್ದು ನಿಂತು ತಮ್ಮ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ  ಸಾವು ನೋವುಗಳಿಗೆ ಈಡಾದ ತಮ್ಮ ದೇಶವಾಸಿಗಳಿಗೆ ಸಂತಾಪ ಸೂಚಿಸಿದ್ದರು. ಇದು ಎಲ್ಲೋ ಓದಿದ್ದ ಸಂಗತಿ.

ಮತ್ತೆ ಈಗ ನೆನಪಾದದ್ದು ಘೋರವಾಗಿ ಅಪ್ಪಳಿಸಿದ ಸಮುದ್ರದ ಸುನಾಮಿಯ ಹೊಡೆತಕ್ಕೆ ಸಿಕ್ಕಿ ಜಪಾನಿನ ಒಂದು ಭಾಗವೇ ಉಳಿದ ಪ್ರದೇಶದೊಂದಿಗೆ ಸಂಪರ್ಕ ಕಳೆದುಕೊಂಡಿದೆ. ೮.೯ ಮ್ಯಾಗ್ನಟ್ಯುಡ್ ಇದ್ದ ಭೂಕಂಪ ಇಂಥ ಸುನಾಮಿಯನ್ನು ಎಬ್ಬಿಸಿದೆ. ಲಕ್ಷಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಇದರ ಭೀಕರತೆಯ ವಿವರ ತಿಳಿದು ಬರಬೇಕಷ್ಟೇ.

ಮತ್ತಷ್ಟು ಓದು »