ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

11
ಮಾರ್ಚ್

ವಿಶ್ವ ಕನ್ನಡ ಸಮ್ಮೇಳನ – ಏನಿದೆ, ಏನಿರಬೇಕಾಗಿತ್ತು?

ವಸಂತ ಶೆಟ್ಟಿ, ಬೆಂಗಳೂರು

ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ನೇನು ಹೊತ್ತು ಎಣಿಕೆ ಶುರುವಾಗಿದೆ. ನಾಟಕ, ಕವನ ವಾಚನ, ಗಮಕ ವಾಚನ, ಕುಣಿತ, ಹಾಡುಗಾರಿಕೆ ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅನ್ನುತ್ತೆ ಸಮ್ಮೇಳನದ ವೆಬ್ ಸೈಟ್ ಅಲ್ಲಿರೋ ಕರೆಯೋಲೆ. ಇದಲ್ಲದೇ, ಕೆಲವು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಾ ಗೋಷ್ಟಿಯನ್ನು ಏರ್ಪಡಿಸಲಾಗಿದೆ ಅಂತಲೂ ಕಂಡೆ. ಕನ್ನಡ, ಕನ್ನಡಿಗ, ಕರ್ನಾಟಕ ಇತಿಹಾಸದಲ್ಲೆಂದೂ ಕಂಡಿರದಂತಹ ಸವಾಲುಗಳನ್ನು ಎದುರಿಸುತ್ತಿರುವ ಜಾಗತೀಕರಣದ ನಂತರದ ಈ ದಿನಗಳಲ್ಲಿ ಇಂತಹ ಸಮ್ಮೇಳನಗಳು ಹೆಚ್ಚಿನ ಮಹತ್ವ ಪಡೆದಿವೆ ಕೂಡಾ. ಈ ಸಮ್ಮೇಳನ ಕರ್ನಾಟಕದ, ಕನ್ನಡಿಗರ ನಾಳೆಗಳನ್ನು ಕಟ್ಟಲು ಆಗಬೇಕಾದ ಕೆಲಸಗಳ ಬಗ್ಗೆ, ಇವತ್ತು ನಾವೆಲ್ಲಿದೀವಿ, ಈ ದಿನ ನಮ್ಮೆದುರು ಇರುವ ಸವಾಲುಗಳೇನು, ನಾವು ಸಾಗಬೇಕಾದ ದಾರಿ ಯಾವುದು, ಎಂತದ್ದು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುವ, ಹೊಸ ದಿಕ್ಕು,ದೆಸೆ ನೀಡುವ ವೇದಿಕೆಯಾಗುತ್ತೆ ಅನ್ನುವುದು ನನ್ನ ನಿರೀಕ್ಷೆಯಾಗಿತ್ತು, ಆದರೆ ಕಾರ್ಯಕ್ರಮದ ಪಟ್ಟಿ ನೋಡಿದಾಗ ಕೆಲ ಮಟ್ಟಿಗೆ ನಿರಾಸೆಯಾಗಿದೆ ಅಂತಲೇ ಹೇಳಬೇಕು. ಜ್ಞಾನಾಧಾರಿತ ಹೊಸ ಜಗತ್ತಿನ ಸವಾಲುಗಳನ್ನು ಎದುರಿಸಿ ಗೆಲ್ಲಲು ಕನ್ನಡಿಗರ ಕಲಿಕೆ, ದುಡಿಮೆಯ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಚೆನ್ನಾಗಿ ಕಟ್ಟಿಕೊಳ್ಳಬೇಕಾದ ತುರ್ತು ಅಗತ್ಯ ನಮ್ಮ ಮುಂದಿದೆ. ಆದರೆ ಕಾರ್ಯಕ್ರಮದ ಪಟ್ಟಿ ನೋಡಿದ್ರೆ, ಈ ಸಮ್ಮೇಳನ ಹೊಟ್ಟೆಗೆ ಹಿಟ್ಟಿನ ವಿಷಯಗಳಿಗಿಂತ ಹೆಚ್ಚು ಜುಟ್ಟಿನ ಮಲ್ಲಿಗೆಯ ವಿಷಯಗಳತ್ತಲೇ ಗಮನ ಹರಿಸಿದೆಯೆನೋ ಅನ್ನುವಂತಿದೆ !

ಏನಿದೆ?

ಹಾಗಂತ, ಸಮ್ಮೇಳನದಲ್ಲಿ ಪ್ರಯೋಜನವಾಗುವಂತಹ ವಿಷಯಗಳೇ ಇಲ್ಲ ಅಂತಿಲ್ಲ. ಜಾಗತೀಕರಣ, ಮಾರುಕಟ್ಟೆ ಮತ್ತು ಯುವಕರ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಜಾಗತೀಕರಣ ಕರ್ನಾಟಕ ಅನ್ನುವ ಗೋಷ್ಟಿ, ಗಡಿನಾಡಲ್ಲಿರುವ ಕನ್ನಡಿಗರ ಶಿಕ್ಷಣ ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವ ಗಡಿನಾಡ ಕನ್ನಡಿಗರು ಅನ್ನುವ ಗೋಷ್ಟಿ, ಕನ್ನಡ ತಂತ್ರಾಂಶ, ವಿಜ್ಞಾನ ಶಿಕ್ಷಣದಂತಹ ವಿಷಯಗಳ ಬಗೆಗಿನ ಜ್ಞಾನ-ವಿಜ್ಞಾನ-ತಂತ್ರಜ್ಞಾನ-ಕರ್ನಾಟಕಅನ್ನುವ ಗೋಷ್ಟಿ, ಆಡಳಿತದಲ್ಲಿ ಕನ್ನಡ ಬಳಕೆ ಬಗೆಗಿನ ಕನ್ನಡ ಭಾಷಾ ಬಳಕೆ ಅನ್ನುವ ಗೋಷ್ಟಿ, ಕೃಷಿ ರಂಗ ಎದುರಿಸುತ್ತಿರುವ ಸವಾಲುಗಳ ಬಗೆಗಿನ ಕೃಷಿ-ಸಾಧನೆ ಸವಾಲು ಗೋಷ್ಟಿಗಳು ಈ ಕಾಲಮಾನಕ್ಕೆ ಪ್ರಸ್ತುತವೆನ್ನಿಸುವಂತಹ ಗೋಷ್ಟಿಗಳಾಗಿವೆ. ಇಲ್ಲಿ ಪಾಲ್ಗೊಳ್ಳುತ್ತಿರುವವರು ಅಷ್ಟೇ ಯೋಗ್ಯರು ಅನ್ನುವುದು ಕೂಡಾ ಗಮನಿಸಬೇಕಾದದ್ದು.  ಮತ್ತಷ್ಟು ಓದು »

11
ಮಾರ್ಚ್

ಸೌರ ವಿದ್ಯುತ್ ಅವಕಾಶಗಳು

– ಗೋವಿಂದ ಭಟ್

ಹಿಮ್ಮೊಗ ಹರಿದೀತೆ ವಿದ್ಯುತ್ ? ಎನ್ನುವ ಆಲೋಚನೆ ತುಂಬಾ ಕುತೊಹಲದಾಯಕ. ಶ್ರಿ ನಾಗೇಶ ಹೆಗಡೆಯವರ ಅಡಿಕೆ ಫತ್ರಿಕೆ ಅಂಕಣ ಒದುತ್ತಾ ಕುಳಿತಿದ್ದೆ. ಮೇಲ್ನೋಟಕ್ಕೆ ಅಸಾದ್ಯ ಎನ್ನುವ ವಿಚಾರ ಮನಸ್ಸಿಗೆ ಬಂದರೂ ಅವಕಾಶಗಳ ಬಗ್ಗೆ ಕೆದಕುತ್ತಾ ಸಾಗಿದಂತೆ ಸಾದ್ಯತೆಗಳು ಸ್ಪಷ್ಟವಾಗುತ್ತಾ ಬಂತು.
ಹಿಂದೊಮ್ಮೆ ಸೈಕಲಿನೊಂದಿಗೆ ಪ್ರಪಂಚಕ್ಕೊಂದು ಸುತ್ತು ಬಂದಿರುವ ನನಗೆ ಈ ವಿಚಾರಗಳಲ್ಲಿ ಬಹಳ ಆಸಕ್ತಿ. ಸೌದೆಯಿಂದ ಅನಿಲ (wood gasifier ) ಪಡೆದು ಅದರಿಂದ ಪಂಪ್ ಚಾಲೂ ಮಾಡಿದ್ದೆ. ಕಳೆದ ಆರು ವರುಷಗಳಿಂದ ಅಸಂಪ್ರದಾಯಕ ಶಕ್ತಿ ಮೂಲಗಳಲ್ಲಿ ಒಂದಾದ ಸೌರ ವಿದ್ಯುತ್ ಬಗೆಗೆ ನನ್ನ ಪ್ರಯತ್ನಗಳು ಸಾಗುತ್ತಾ ಬಂದಿದೆ. ಇದೊಂದು ಪೂರ್ವ ಉದಾಹರಣೆಗಳು ದೊರಕದ ಸವೆಯದ ಹಾದಿಯಲ್ಲಿ ಒಬ್ಬಂಟಿ ಪಯಣ. ಅದುದರಿಂದ ನನ್ನ ಅನುಭವ ಅನಿಸಿಕೆ ಎರಡನ್ನೂ ಹಂಚಿಕೊಳ್ಳುತ್ತೇನೆ. 

ಒಮ್ಮೆ ಹೊಸ ಕೊಳವೆ ಬಾವಿಗೆ ಸೌರ submersible ಪಂಪಿನ ವಿಚಾರಣೆಗೆ ಹೋಗಿದ್ದೆ. ಆಗ ಒಂದು ಮಾಮೂಲಿ surface ಪಂಪಿಗೆ ಸಬ್ಸಿಡಿ ಇದ್ದ ಕಾಲ. ಹಾಗಾಗಿ ಅಂಗಡಿಯವರು ಅಷ್ಟೊಂದು ಫಲಕಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆಲೋಚನೆ ಮಾಡಿ ಎಂದು ಪುಸಲಾಯಿಸಿದರು. ಅಂದಿಗೆ ಹದಿನೆಂಟು ವರ್ಷ ಹಿಂದೆ ಸೈಕಲಿನಲ್ಲಿ ದೆಹಲಿಗೆ ಸಾಗುವಾಗ ಟಿಲೋನಿಯದಲ್ಲಿ ಸೌರ ವಿದ್ಯುತ್ ಬಳಸಿ ರಾತ್ರಿ ಶಾಲೆ ಕಾರ್ಯಾಚರಿಸುವುದನ್ನು ಕಂಡಿದ್ದೆ. ಆಗಲೇ ಈ ಸೌರ ವಿದ್ಯುತ್ ಉಪಯೋಗ ಬಗೆಗೆ ಮನದಲ್ಲಿ ಬಿತ್ತಿದ ಬೀಜ ಮೊಳಕೆಯೊಡೆಯಿತು. ನನಗೆ ಬೇಕಾದ ಪಂಪ್ ಅಲ್ಲವಾದರೂ ಇದನ್ನು ಬಳಸಬಹುದೆಂಬ ಅಲೋಚನೆಯಿಂದ ಒಪ್ಪಿದೆ.

ಹಾಗೆ 2002ರಲ್ಲಿ ಒಂದಷ್ಟು ಫಲಕಗಳೊಂದಿಗೆ ಒಂದು ಸೌರ ಶಕ್ತಿಯ ಪಂಪು ನಮ್ಮಲ್ಲಿಗೆ ಬಂತು. ಅಂದಿನಿಂದ ಇಂದಿನ ವರೆಗೆ ಸೌರ ವಿದ್ಯುತ್ ಗರಿಷ್ಟ ಉಪಯೋಗದ ಬಗೆಗೆ ಆರು ಇಂಚು ಮೇಲೆ ಸರಿದರೆ ಮೂರು ಇಂಚು ಕೆಳಗೆ ಜಾರುವುದು ಎನ್ನುವ ಕಪ್ಪೆಯಾಟ ನಿರಂತರವಾಗಿ ಸಾಗುತ್ತಲೇ ಇದೆ.

ಮತ್ತಷ್ಟು ಓದು »

10
ಮಾರ್ಚ್

ಅವಳೊಂದಿಗೆ ಆ ಭಾಷೆಯೂ ಮಣ್ಣಾಯಿತು!

– ಚಿತ್ರಾ ಸಂತೋಷ್

ಕಾಡುಹಂದಿ ಬೇಟೆ ಅಂದ್ರೆ ಅವಳಿಗಿಷ್ಟ. ದಟ್ಟಾರಣ್ಯದಲ್ಲಿ ಹೆಜ್ಜೆಗೊಂದು ಸಿಗುತ್ತಿದ್ದ ಆಮೆಗಳನ್ನೂ ಅವಳು ಬಿಟ್ಟವಳಲ್ಲ. ತಾನು ಹೋದಲೆಲ್ಲಾ ಬಿಲ್ಲು ಬಾಣಗಳನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿದ್ದ ಆ ಹೆಣ್ಣುಮಗಳು ತನ್ನ ಜೀವನಶಾಲೆಯನ್ನು ತಾನೇ ನಿರ್ಮಿಸಿಕೊಂಡವಳು. ಅವಳು ಹುಟ್ಟಿದ್ದು ಉತ್ತರ ಅಂಡಮಾನ್‌ನ ದಟ್ಟ ಕಾನನದಲ್ಲಿ. ೮೫ ವರ್ಷಗಳ ಹಿಂದೆ ಅವಳು ಹುಟ್ಟಿದಾಗ ಅವಳ ಜೊತೆ ಒಡನಾಡುವ ಸಂಗತಿಗಳಿದ್ದರು. ಸಮಾಜದ ಮುಖ್ಯವಾಹಿನಿ ಅಂದ್ರೆ ಅವಳಿಗೇನೂ ಗೊತ್ತಿಲ್ಲ. ವಿದ್ಯೆಯೆಂಬುವುದರ ನಂಟು ಆ ಕಾಡಿಗಿಲ್ಲ. ಭಾರತದಲ್ಲಿ ಬ್ರಿಟಿಷ್ ಅಧಿಪತ್ಯವಿದ್ದಾಗ ಅಂಡಮಾನನ್ನು ‘ಶಿಕ್ಷಾರ್ಹ ತಾಣ’ವೆಂದು ಪರಿಗಣಿಸಿ, ಸ್ವಾತಂತ್ರಕ್ಕಾಗಿ ಹೋರಾಡಿದ ಅದೆಷ್ಟೋ ಭಾರತೀಯರನ್ನು ಅಲ್ಲಿ ಶಿಕ್ಷೆಗೆ ಗುರಿಪಡಿಸುತ್ತಿದ್ದನ್ನು ಕಣ್ಣಾರೆ ಕಂಡಿದ್ದಾಳೆ. ತನ್ನ ಪರಿವಾರದವರು ಕಳ್ಳಭಟ್ಟಿ ಕುಡಿದು ಎಂಜಾಯ್ ಮಾಡುತ್ತಿದ್ದಾಗ ತಾನೂ ಅವರೊಂದಿಗೆ ಸಂಭ್ರಮಿಸಿದ್ದಾಳೆ. ೨೦೦೪ರಲ್ಲಿ ಅಂಡಮಾನ್ ಪ್ರದೇಶಕ್ಕೆ ಭೀಕರ ಸುನಾಮಿ ಕಾಲಿಟ್ಟಾಗ ೩೫೧೩ ಮಂದಿ ಸಾವನ್ನಪ್ಪಿದ್ದರೂ, ಈಕೆ ಮಾತ್ರ ಬದುಕುಳಿದಿದ್ದಳು. ಇದು ಅವಳ ಅದೃಷ್ಟವೋ ಏನೋ?

ಅಂಥ ಉತ್ಸಾಹದ ಬದುಕು ಕಂಡ ಆ ಕಾಡಿನ ಮಹಿಳೆಯ ಹೆಸರು ಬೋ ಎಸ್‌ಆರ್…
ಅದೇನು ವಿಶೇಷ ಅಂತೀರಾ? ಇತ್ತೀಚೆಗಷ್ಟೇ ಬೋ ಎಸ್‌ಆರ್ ನಿಧನವಾಗಿದ್ದಾಳೆ. ಇದು ಇವಳ ಸಾವು ಮಾತ್ರವಲ್ಲ, ದೇಶದ ಪುರಾತನ ಭಾಷೆಯ ಸಾವು, ಸಾಂಸ್ಕೃತಿಕ ಪರಂಪರೆಯ ಸಾವು ಕೂಡಾ ಹೌದು.

ಬೋ ಎಂದರೆ….

ಬೋ ಎಂಬುವುದು ವಿಶಿಷ್ಟವಾದ ಬುಡಕಟ್ಟು ಭಾಷೆ. ಈ ಭಾಷೆಯ ತವರು ಆಫ್ರಿಕಾ. ೭೦,೦೦೦ ವರ್ಷಗಳ ಹಿಂದೆಯೇ ಬೋ ಎನ್ನುವ ಬುಡಕಟ್ಟು ಜನಾಂಗ ಆಗ್ನೇಯ ಏಷ್ಯಾ ಭಾಗಕ್ಕೆ ವಲಸೆ ಬಂದಿದ್ದರು. ಅಂತೆಯೇ ಅಂಡಮಾನಿನಲ್ಲೂ ಬೋ ಜನಾಂಗ ಅಸ್ತಿತ್ವ ಕಂಡುಕೊಂಡಿತ್ತು. ೧೮೫೮ರಲ್ಲಿ ಅಂಡಮಾನಿನಲ್ಲಿ ಬೋ ಜನಾಂಗಕ್ಕೆ ಸೇರಿದ ಸುಮಾರು ೫ ಸಾವಿರ ಜನರಿದ್ದರು. ಕ್ರಮೇಣ ಅಲ್ಲಿ ಬ್ರಿಟೀಷರು ತಮ್ಮ ಅಧಿಪತ್ಯ ಸ್ಥಾಪಿಸಿದಾಗ ಅಮಾಯಕ ಬೋ ಜನಾಂಗ ಬ್ರಿಟೀಷರ ದಬ್ಬಾಳಿಕೆಗೆ ಬಲಿಯಾದರು. ಸಮಾಜದ ಮುಖ್ಯವಾಹಿನಿಯ ಕುರಿತು ಒಂದಿಷ್ಟೂ ತಿಳಿವಿರದ ಬೋ ಜನರಿಗೆ ರೋಗಗಳು ಬಂದರೂ ಅದಕ್ಕೂ ಸಾವೇ ಪರಿಹಾರ. ಬ್ರಿಟೀಷರ ದಬ್ಬಾಳಿಕೆ ಮತ್ತು ಹೇಳಿಕೇಳದೆ ಬರುವ ಹಲವಾರು ಸಾಂಕ್ರಾಮಿಕ ರೋಗಗಳ ಪರಿಣಾಮ ಬೋ ಜನಾಂಗ ವಿನಾಶದ ಹಾದಿ ಹಿಡಿಯಿತು.
ಕಳೆದ ನಲವತ್ತು ವರ್ಷದಿಂದ ಬೋ ಎಸ್‌ಆರ್ ಅವಳದು ಏಕಾಂಗಿ ಬದುಕು. ಅವಳಿಗೆ ಬರುವುದು ಅದೊಂದೇ ಭಾಷೆ ಬೋ. ಹಾಗಾಗಿ ಸುತ್ತಮುತ್ತಲಿನ ಯಾರ ಜೊತೆಯೂ ಸಂವಹನ ಸಾಧ್ಯವಿರಲಿಲ್ಲ. ೧೯೭೦ರಲ್ಲಿ ಭಾರತ ಸರ್ಕಾರ ಅಂಡಮಾನಿನಲ್ಲಿದ್ದ ಬೋ ಎಸ್‌ಆರ್ ಸೇರಿದಂತೆ ವಿವಿಧ ಬುಡಕಟ್ಟು ಜನಾಂಗಗಳಿಗೆ ಕಾಂಕ್ರೀಟ್ ಮನೆ ಮತ್ತು ೫೦೦ ರೂ. ಪಿಂಚಣಿ ಒದಗಿಸಿತ್ತು. ಆ ಪುಟ್ಟ ಮನೆಯೊಂದೇ ಬೋ ಸಂಸಾರ. ಬಹಳಷ್ಟು ವರ್ಷಗಳ ಹಿಂದೆಯೇ ಗಂಡನನ್ನು ಕಳೆದುಕೊಂಡ ಬೋ ಎಸ್‌ಆರ್‌ಗೆ ಮಕ್ಕಳೂ ಇರಲಿಲ್ಲ. ಜೀವನದ ಕೊನೆ ಗಳಿಗೆಯಲ್ಲಿ ಆಕೆ, ”ನಮ್ಮ ಜನಾಂಗದಲ್ಲಿ ನಾನು ಒಬ್ಬಳೇ ಉಳಿದಿದ್ದೇನೆ. ನಾನು ಕೊನೆಯವಳು ಎಂಬುವುದು ಹೆಮ್ಮೆಯಾಗುತ್ತಿದೆ. ಆದರೆ, ನಾನು ಮತ್ತೆ ಹುಟ್ಟಿದ ಆ ದಟ್ಟಾರಣ್ಯಕ್ಕೆ ಮರಳಬೇಕು. ಈ ನಾಡಿಗಿಂತ ಆ ಕಾಡು ಚೆನ್ನ. ಅದೇ ಮುಳ್ಳುಹಂದಿ, ಆಮೆ ಬೇಟೆಯಾಡಬೇಕು. ಕಾಡಿನೊಂದಿಗೆ ಮತ್ತೆ ನಾನು ಬದುಕಬಲ್ಲೆ. ಕಾಡಿನಲ್ಲಿ ನನ್ನ ಭವಿಷ್ಯ ಇದೆ, ಕಾಡಾದರೂ ನನಗೆ ಸಂಗಾತಿಯಾಗುತ್ತಿತ್ತು…. ”ಎಂದು ಹಂಬಲಿಸುತ್ತಿದ್ದಳಂತೆ. ಮತ್ತಷ್ಟು ಓದು »

10
ಮಾರ್ಚ್

ಅತ್ಮಹತ್ಯೆಯಲ್ಲಿ ಹತ್ಯೆಯಾಗುವುದು ದೇಹ ಮಾತ್ರ…!

ಪವನ್ ಎಂ ಟಿ

ಇಂಡಿಯಾ ಟುಡೇ  ಇತ್ತೀಚೆಗಷ್ಟೇ ರಾಷ್ಟ್ರವ್ಯಾಪ್ತಿಯಾಗಿ ಸಮೀಕ್ಷೆಯನ್ನು ನಡೆಸಿತು. ಆ ಸಮೀಕ್ಷೆಯ ಪ್ರಕಾರ ಈ ದೇಶದಲ್ಲಿ ನಡೆಯುವ ಆತ್ಮಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮುಖ್ಯ ಫಲಿತಗಳನ್ನು ತಿಳಿಸುತ್ತಾರೆ.

೧.      ಕಳೆದ ಐದು ವರ್ಷಗಳಿಂದ ಈಚೆಗೆ ಆತ್ಮಹತ್ಯೆ ಮಾಡಿ ಕೊಳ್ಳುವವರ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ಎಂಟು ಶೇಕಡ ವೃದ್ಧಿಯಾಗುತ್ತಿದೆ.

೨.      ಆತ್ಮಹತ್ಯೆ ಮಾಡಿ ಕೊಳ್ಳುವವರ ಪ್ರಮಾಣವನ್ನು ಗಮನಿಸಿದರೆ ಹಳ್ಳಿಗಳಿಗಿಂತ ಹೆಚ್ಚು ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ಆತ್ಮಹತ್ಯೆ ಪ್ರಮಾಣದಲ್ಲಿ ಹೆಚ್ಚಿದೆ.

೩.      ಆತ್ಮಹತ್ಯೆ ಮಾಡಿಕೊಂಡವರ ಪ್ರಮಾಣವನ್ನು ಒಟ್ಟು ಗಮನಿಸಿದರೆ ೮೮% ದಷ್ಟು ಆತ್ಮಹತ್ಯೆಗಳಾಗುತ್ತಿರುವುದು ೧೬ ರಿಂದ ೨೪ ವರ್ಷ ಪ್ರಾಯದ ವಯಸ್ಸಿನವರ ಮಧ್ಯೆ.

೪.      ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಒಟ್ಟು ಸಂಖ್ಯೆಯಲ್ಲಿ ೬೫% ಹುಡುಗರಿದ್ದಾರೆ. ೩೫%ದಷ್ಟು ಹುಡುಗಿಯರಿದ್ದಾರೆ ಎಂದು. ಈ ಫಲಿತಗಳನ್ನು ಇಟ್ಟುಕೊಂಡು ಅಥವ ಈ ಮಾದರಿಯ ಆಂಕಿ ಅಂಶಗಳನ್ನು ಇಟ್ಟುಕೊಂಡು ಹದಿಹರೆಯದವರು ಯಾಕೆ ಇಷ್ಟು ಪ್ರಮಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂಶೋಧಿಸಲಾಯಿತು.

ಸಾಮಾನ್ಯವಾಗಿ ಆತ್ಮಹತ್ಯೆಗೂ ಯೌವ್ವನಕ್ಕೂ ಆತ್ಯಂತ ನಿಕಟ ಸಂಬಂಧವಿದೆ. ನೆನಪಿಟ್ಟು ಕೊಳ್ಳಬೇಕಾದ ಅಂಶವೆಂದರೆ ಆತ್ಮಹತ್ಯೆ ಎನ್ನುವುದು ಹೊಸ ಬೆಳವಣಿಗೆಯೇನಲ್ಲ. ಅದೆಷ್ಟೋ ವರ್ಷದಿಂದ ಇದು ನಡೆದುಕೊಂಡು ಬಂದಿದೆ. ಎಷ್ಟೋ ಬಾರಿ ಆತ್ಮಹತ್ಯೆಗೆ ಕಾರಣ ಮಾಧ್ಯಮಗಳ ಪ್ರಭಾವ. ವಿಶೇಷವೆಂದರೆ ನಮ್ಮಲ್ಲಿ ಜನ ಸಂಖ್ಯೆ ಯಾವ ರೀತಿಯಲ್ಲಿ ವೃದ್ಧಿಯಾಗುತ್ತಿದೆಯೋ ಅಷ್ಟೇ ಪ್ರಮಾಣದಲ್ಲಿ ಆತ್ಮಹತ್ಯೆಯೂ ವೃದ್ಧಿಯಾಗುತ್ತಿದೆ. ಮತ್ತಷ್ಟು ಓದು »

9
ಮಾರ್ಚ್

ಕರಾವಳಿಗರನ್ನು ಬಲಿ ತೆಗೆದುಕೊಳ್ಳಲಿರುವ ನೇತ್ರಾವತಿ ನದಿ ತಿರುವು ಯೋಜನೆ…!

-ಶಂಶೀರ್, ಬುಡೋಳಿ

ಯಾರಾದರೂ ಊಹಿಸಿರಬಹುದೇ?

ತಣ್ಣನೆಯ ಹಾದಿಯಲ್ಲಿ ಹರಿಯುತ್ತಿದ್ದ ನೇತ್ರಾವತಿ ನದಿಗೋಸ್ಕರ ಒಂದೊಮ್ಮೆ ಹೋರಾಟ ನಡೆಸುವ ಬಗ್ಗೆ ನಮ್ಮ ಹಿರಿಯರು ಕನಸು ಕೂಡಾ ಕಂಡಿರಬಹುದೇ? ಇಲ್ಲ. ಸಾಧ್ಯವೇ ಇಲ್ಲ. ಯಾಕೆಂದರೆ ನದಿಯ ಮೂಲ ಶೋಧಿಸಬೇಡ ಎನ್ನುವ ಮಾತನ್ನು ಅವರು ನಂಬಿದ್ದರು. ಹಾಗಾಗಿ ಅವರು ಈ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ.ಪಶ್ಚಿಮ ಘಟ್ಟದ ಉಳಿವಿಗಾಗಿ ನಡೆಸುತ್ತಿರುವ ಹೋರಾಟದ ನಂತರ ಕರಾವಳಿಗರು ನಡೆಸುತ್ತಿರುವ ನೇತ್ರಾವತಿ ನದಿ ಉಳಿಸುವ ಹೋರಾಟ ಇವತ್ತಿಗೂ ನಡೆಯುತ್ತಲೇ ಇದೆ.ಮೊನ್ನೆಯ ವಿಶ್ವ ತುಳು ಸಮ್ಮೇಳನದಲ್ಲೂ ಸಹ ಈ ಬಗ್ಗೆ ಚರ್ಚೆ ಉಂಟಾಗಿತ್ತು. ಇತ್ತೀಚಿಗೆ ಪರಮಶಿವಯ್ಯನವರು ಈ ಬಗ್ಗೆ ಚಕಾರವೆತ್ತಿದ್ದು ತನ್ನ ವರದಿ ಅಸಮರ್ಪಕವಾಗಿದ್ಜದರೆ ತಾನು ಯಾವ ಶಿಕ್ಷಾರ್ಹ ಕ್ರಮಕ್ಕೂ ಬದ್ಧ ಎಂದು ಹೇಳಿಕೆ ಕೊಟ್ಟಿದ್ದಾರೆ. ಆದರೆ ಸರಕಾರ ಮಾತ್ರ ತೆಪ್ಪಗಾಗಿದೆ. ವಿಜ್ಞಾನ-ತಂತ್ರಜ್ಞಾನ,ಭ್ರಷ್ಟ ರಾಜಕಾರಣ,ಬಂಡವಾಳಶಾಹಿತ್ವದ ವಿರುದ್ಧದ ಹೋರಾಟದ ತರಹೇ ಈ ನೇತ್ರಾವತಿ ನದಿ ಉಳಿಸುವ ಹೋರಾಟ. ಈ ಹೋರಾಟಕ್ಕೆ ಪ್ರಗತಿಪರ ಸಂಘಟನೆಗಳು ಮಾತ್ರ ಬೆಂಬಲ ಕೊಡುತ್ತಿರುವುದರಿಂದ ಬಲಪಂಥೀಯ ಎನ್ನಿಸುವ ಸಂಘಟನೆಗಳ ವಿರುದ್ಧದ ಆಟದಿಂದ ಇವತ್ತು ಈ ಹೋರಾಟ ಮುಂದುವರಿಯುತ್ತಲೇ ಇದೆ. ಹಾಗಾಗಿ ಪಕ್ಷಾತೀತವಾದ ಸ್ವತಂತ್ರ ಸಂಘಟನೆಗಳು, ಸೇವಾ ಸಂಸ್ಥೆಗಳು ಮಾತ್ರ ಈ ಹೋರಾಟದಲ್ಲಿ ಭಾಗಿಯಾಗಿರುವುದನ್ನು ನಾವು ನೋಡ್ತಾ ಇದ್ದೇವೆ. ಉದಾಹರಣೆಗೆ ಭಾರತೀಯ ಕಿಸಾನ್ ಸಂಘ,ನಾಗರಿಕ ಸೇವಾ ಟ್ರಸ್ಟ್ ಮುಂತಾದ ಸಂಘಟನೆಗಳನ್ನ ಗುರುತಿಸಬಹುದು. ೨೦೦೯ಸಾಗಿದ್ದರೂ ಈ ವರ್ಷದಲ್ಲಿ ನೇತ್ರಾವತಿ ನದಿಯ ಹರಿವನ್ನು ನಿಲ್ಲಿಸಿ ಬೆಂಗಳೂರಿನಲ್ಲಿ ನದಿ ತಿರುಗಿಸುವ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ.

ಮತ್ತಷ್ಟು ಓದು »

9
ಮಾರ್ಚ್

ಹೆಣ್ಣು ಮಹಿಳೆಯಾಗುತ್ತಿದ್ದಾಳೇಯೇ?

– ರೂಪ ರಾವ್

ನಿನ್ನೆ ಮಹಿಳಾ ದಿನಾಚರಣೆ, ಎಷ್ಟೊ ಶುಭಾಶಯಗಳು, ಆಕಾಂಕ್ಷೆಗಳು. ಹಾರೈಕೆಗಳು. ಒಮ್ಮೆಗೆ ಕೂತು ಯೋಚಿಸುತ್ತಿದ್ದಾಗ, ಮೂಡಿದ ಯೋಚನೆಗಳು ಹಲವಾರು ಅದರಲ್ಲಿ ಮೂಡಿದ ಒಂದು ಪ್ರಶ್ನೆ,
ಮಹಿಳೆ ಎನಿಸಿಕೊಳ್ಳುವ ಹಂಬಲದಲ್ಲಿ ಹೆಣ್ಣಿನ ಸಹಜ ಸಂವೇದನೆಗಳನ್ನು ಕಳೆದುಕೊಳ್ಳುತ್ತಿದ್ದೇವೆಯೇ ನಾವುಗಳು? ಅಷ್ಟಕ್ಕೂ ಹೆಣ್ಣಿಗೂ ಮಹಿಳೆಗೂ ಏನು ವ್ಯತ್ಯಾಸ?
ಹೌದು ಅರ್ಥದ ಪ್ರಕಾರ ಯಾವುದೂ ಇಲ್ಲ
ಆದರೆ ಮನಸಿಗೆ ಹೆಣ್ಣು ಆಪ್ತಳಾಗುತ್ತಾಳೆ, ಆದರೆ ಮಹಿಳೆ ದೂರದಲ್ಲಿಯೇ ನಿಲ್ಲುತ್ತಾಳೆ .
ಇದರ ಬಗ್ಗೆ ನನ್ನದೊಂದಿಷ್ಟು ಸಂವೇದನೆಗಳು

ಹೆಣ್ಣಿನ ಮೊದಲ ಹಂತವೇ ಹೆಣ್ಣಾಗುವುದು.

ಬಾಲಕಿ ಹೆಣ್ಣಾಗುವ ಆ ಹಂತದಲ್ಲಿ ಎಷ್ಟೋ ಕಾತುರತೆ,ನಿರೀಕ್ಷೆಗಳು,ನಾಚಿಕೆ,ಲಜ್ಜೆ,ಕನಸುಕಂಗಳು,ಕೆನ್ನೆಯ ಚುಂಬಿಸುತ್ತಲೆ ಇರುವ ರೆಪ್ಪೆಗಳು… ಹೀಗೆ ಏನೇನೋ ಲಕ್ಷಣಗಳು … ಹೌದು ಇವೆಲ್ಲಾವನ್ನು ಓದಿರುತ್ತೇವೆ, ನೋಡಿರುತ್ತೇವೆ ಎಲ್ಲಿ ಕಥೆಗಳಲ್ಲಿ ಕಾವ್ಯಗಳಲ್ಲಿ,ನಮ್ಮ ತಾಯಿ ಅಥವಾ ಅವರ ತಾಯಿಯ ಕಾಲಕ್ಕಿರಬಹುದೇನೋ…!

ಈಗ ಬಾಲಕಿ ಹೆಣ್ಣಾಗುವುದಿಲ್ಲ ಸೀದಾ ಮಹಿಳೆಯಾಗುವ ಹಂತಕ್ಕೆ ತಲುಪಿರುತ್ತಾಳೆ, ಅದೇನು ಗಾಂಭೀರ್ಯ,ಎಲ್ಲವನ್ನೂ ತಿಳಿದಿರುವವರ ಲಕ್ಷಣ, ಹುಡುಗರೆಂಬ ಕುತೂಹಲವಿರಲಿ ಅವರನು ಹೇಗೆ ಆಟ ಆಡಿಸುವುದೆಂಬ ಯೋಚನೆಯಲ್ಲಿ ತೊಡಗುತ್ತಾಳೆ.ಯಾವುದೇ ವಿಚಾರಕ್ಕಿರಲಿ ದೊಡ್ಡವರನ್ನು ಕೇಳಬೇಕಾದ ಅನಿವಾರ್ಯತೆ ಈಗ ಇಲ್ಲ.ಎಲ್ಲಕ್ಕೂ ಅಂತರ್ಜಾಲವಿದೆ. ಯಾವುದೇ ಕುತೂಹಲ,ಪ್ರಶ್ನೆಗೆ ಉತ್ತರ ಅಗತ್ಯಕ್ಕಿಂತ ಹೆಚ್ಚಾಗಿಯೇ ಸಿಗುತ್ತದೆ.ಹಾಗಾಗಿ ಲೈಂಗಿಕತೆ ಎಂಬುದು ಅವಳಿಗೆ ದೊಡ್ಡ ವಿಷಯವೇ ಅನ್ನಿಸುವುದಿಲ್ಲ.
ಈಗೀಗ ಕಾಲೇಜಿನಲ್ಲಿ ಹುಡುಗ ಕೈ ಕೊಟ್ಟ ಎಂಬ ಮಾತುಗಳಿಗಿಂತ ಹುಡುಗಿ ಬಿಟ್ಟು ಹೋದಳು ಎಂಬ ದೂರುಗಳೇ ಹೆಚ್ಚು.

ಅಪ್ಪ ಅಮ್ಮನ ನಂತರ ಹುಡುಗಿ ಹುಡುಕುವುದೇ ಸೂಕ್ತ ಗೆಳೆಯನಿಗಾಗಿ, ಹುಡುಗನಲ್ಲಿ ಗೆಳೆಯನನ್ನು ಹುಡುಕುತ್ತಾಳೆ,ಆಪ್ತವಾದ ಭಾವನೆ ಹುಟ್ಟು ಹಾಕುವ ಹುಡುಗ ಅವಳಿಗೆ ಹಿಡಿಸುತ್ತಾನೆ. ಆದರೆ ಯಾವುದೋ ಒಂದು ಘಳಿಗೆ ಯಲ್ಲಿ ತಾನು ಬಂದಿರುವುದು ಓದಲು ಪ್ರೀತಿಸಲು ಅಲ್ಲ ಎಂಬ ದಿವ್ಯ  ತಿಳುವಳಿಕೆ ಬರುತ್ತದೆ. ಇದ್ದಕ್ಕಿದ್ದಂತೆಯೇ ಬಾಳಿನ ಗುರಿಗಳು ನೆನಪಾಗುತ್ತವೆ. ತನ್ನ ಮೊದಲ ಆದ್ಯತೆ ತಂದೆ ತಾಯಿ ಹಾಗು ಗುರಿ ಈ ಹುಡುಗ ಅಲ್ಲ ಎಂಬ ಆಲೋಚನೆಗಳು ಮುತ್ತಿಡಲಾರಂಭಿಸಿದೊಡನೆಯೇ ಹುಡುಗನ ಚಿತ್ರ ಮನದಿಂದ ದೂರವಾಗಲಾರಂಭಿಸುತ್ತದೆ. ಅದು ತಾತ್ಕಾಲಿಕ, ಮತ್ತೊಬ್ಬ ಹುಡುಗ ಬಂದು ಮನದಲ್ಲಿ ಕೂರುವವರೆಗೆ…

ಮತ್ತಷ್ಟು ಓದು »

8
ಮಾರ್ಚ್

ಅರುಣಳ ಬಾಳಿಗೆ ಅರುಣೋದಯವೆಂದು

ರೂಪಾ

ಕೊನೆಗೂ ಅರುಣಾಗೆ ಅರುಣೋದಯ ಕಾಣಲೇ ಇಲ್ಲ . ಕೊನೆಗೆ ಈ ಜೀವನದಿಂದ ಬಿಡುಗಡೆ ಸಿಕ್ಕೀತೆ ಎಂಬ ನಿರೀಕ್ಷೆಯೂ ಇಲ್ಲವಾಗಿ ಹೋಗಿದೆ. ಜೀವ ಹೋಗುವ ತನಕ ದಿನದಿನವೂ ಸಾಯುತ್ತಲೇ ಜೀವಿಸಿರಲೇಬೇಕಾಗಿದೆ. ಅಷ್ಟಕ್ಕೂ ಈ ಅರುಣಾ ಶಾನಭಾಗ್ ಎಂಬ ನಮ್ಮ ಕರ್ನಾಟಕದ ಹುಡುಗಿ ಮಾಡಿದ ತಪ್ಪಾದರೂ ಏನು?

ಹೊನ್ನಾವರದ ಹಳದಿಪುರದಲ್ಲಿ ಹುಟ್ಟಿದಾಕೆಗೆ,  ಬಾಂಬೆಯ ಕೆಮ್ಸ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಸಿಕ್ಕಾಗ ರೋಗಿಗಳ ಸೇವೆಯಲ್ಲಿ ಬದುಕುವಾಸೆ ಕಂಡಿದ್ದಳೇನೋ,ಆದರೆ ಅವಳನ್ನು ಜೀವನವಿಡೀ ಜೀವಚ್ಛವವನ್ನಾಗಿ ಮಾಡುವ ಭೀಭತ್ಸ ಘಟನೆಯೊಂದು ಕಾದಿತ್ತು ಎಂದು ಅವಳಿಗಾದರೂ ಎಲ್ಲಿ ಗೊತಿತ್ತು?.
ಅರುಣಾ ಮಹತ್ವಾಕಾಂಕ್ಶೆಯ ಹುಡುಗಿ.ವಿದೇಶದಲ್ಲಿ ತನ್ನ ಓದನ್ನು ಮುಂದುವರೆಸುವ ಆಸಕ್ತಿ ಹೊಂದಿದ್ದಳು . ಇದನ್ನು ತನ್ನ ಕಸಿನ್ ಜೊತೆ ಹೇಳಿಕೊಂಡಿದ್ದಳು ನೋಡಲೂ ಚೆಂದವಿದ್ದಳು. ನಾಲಿಗೆ ಮಾತ್ರ ಸ್ವಲ್ಪ ಚುರುಕು ಎಂದು ಅವಳ ಸಹೋದ್ಯೋಗಿಗಳು ಹೇಳಿದ್ದಾರೆ. ಅದೇ ಆಸ್ಪತ್ರೆಯಲ್ಲಿಯೇ ಕೆಲಸ ಮಾಡುತ್ತಿದ್ದ ಡಾಕ್ಟರ್ ಒಬ್ಬರ ಜೊತೆ ಮದುವೆಯೂ ನಿಶ್ಚಯವಾಗಿ  ಸುಂದರ ಜೀವನದ ಕನಸು ಕಾಣುತ್ತಿದ್ದವಳನ್ನು, ಸೋಹನ್ ಲಾಲ್ ಭರ್ತ ವಾಲ್ಮೀಕಿ ಎಂಬ ಹೆಸರಿನ ವಾರ್ಡ್‌ ಬಾಯ್ ಮುಂದೆಂದೂ ಕನಸು ಕಾಣುವುದಿರಲಿ ಯೋಚಿಸಲೂ ಸಾಧ್ಯವಾಗದಂತಹ ಸ್ಥಿತಿಗೆ ದೂಡಿದ್ದ ಅರುಣಾ ಅವನ ಅವ್ಯವಹಾರವನ್ನು ಕಂಡು ಬೈದಿದ್ದನ್ನೇ ನೆಪ ಮಾಡಿಕೊಂಡು ಅವಳ ಮೇಲೆ ಅತ್ಯಾಚಾರವವೆಸಗುವ ಸಂದರ್ಭದಲ್ಲಿ ಅವಳ ಕುತ್ತಿಗೆಗೆ ನಾಯಿಯ ಚೈನ್ ಕಟ್ಟಿ ಪಶುವಿಗಿಂತ ಕೀಳು ಮತ್ತು ಅಸ್ವಾಭಾವಿಕ ರೀತಿಯಲ್ಲಿ  ತನ್ನ ತೃಷೆ ತೀರಿಸಿಕೊಂಡ .
ಇತ್ತ ಅರುಣಾಳ ಬಾಳಲ್ಲಿ ಮತ್ತೆ ಅರುಣೋದಯ ನೋಡುವ ಅವಕಾಶ ಬರಲೇ ಇಲ್ಲ.ಕಟ್ಟಿದ್ದ ಚೈನಿನ ಬಿಗಿತದಿಂದ ಮೆದುಳಿಗೆ ಆಮ್ಲಜನಕದ ಕೊರತೆಯುಂಟಾಗಿ,ಮೆದುಳು ನಿಷ್ಕ್ರಿಯವಾಗಿ ಜೀವಂತ ಹೆಣವಾಗಿ ಹೋದಳು ಅರುಣಾ.
8
ಮಾರ್ಚ್

ಹೆಣ್ಣೆಂದರೆ ಹೀಗೇಕೆ…..?

-ಶ್ರೀದೇವಿ ಅಂಬೆಕಲ್ಲು॒॒

೩೭ ವರ್ಷಗಳ ಹಿಂದೆ ವಾರ್ಡ್ ಹುಡುಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಾನಸಿಕ ಯಾತನೆ ಅನುಭವಿಸುತ್ತಿರುವ ನರ್ಸ್ ಅರುಣಾ ಶಾನ್‌ಭಾಗ್ ಅವರ ನರಳುವಿಕೆ, ಮಾನಸಿಕ ನೋವು ಮತ್ತು ಆಕೆಯ ಗೆಳತಿ ಪಿಂಕಿ ವಿರಾನಿ ಅರುಣಾಗೆ ದಯಾಮರಣ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ವರದಿ ಇತ್ತೀಚೆಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ, ಕೇಳಿದ್ದೇವೆ. ಹೀಗೆ ಹೆಣ್ಣು ಮಗಳೊಬ್ಬಳು ದೌರ್ಜನ್ಯಕ್ಕೊಳಗಾಗಿ ಅನುಭವಿಸುತ್ತಿರುವ ಯಾತನಾಮಯ ಜೀವನ ಇನ್ಯಾವ ಹೆಣ್ಣು ಮಗಳಿಗೂ ಬಾರದಿರಲಿ ಅನ್ನೋದು ಎಲ್ಲ ತಾಯಿ ಹೃದಯದವರ ಆಶಯ.

ಹೆಣ್ಣು ಹೆಣ್ಣೆಂದು ಹೆಣ್ಣನ್ನೇಕೆ ಹೀಗಳೆಯುವಿರಿ…?ಹೆಣಲ್ಲವೇ ನಮ್ಮನ್ನ ಹೆತ್ತ ತಾಯಿ…?

ಮಾರ್ಚ್ ೮ ಅಂತರರಾಷ್ಟ್ರೀಯ ಮಹಿಳಾ ದಿನ.  ದಿನಾಚರಣೆಯ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತದೆ. ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಘೋಷ ವಾಕ್ಯ ’ಶಿಕ್ಷಣ, ತರಬೇತಿ ಹಾಗೂ ವಿಜ್ಞಾನ, ತಂತ್ರಜ್ಞಾನಕ್ಕೆ ಸಮಾನ ಅವಕಾಶ-ಮಹಿಳೆಯರಿಗೆ ಒಳ್ಳೆಯ ಕೆಲಸಕ್ಕೆ ಹಾದಿ’.

ಒಬ್ಬ ಗಂಡಸಿನಷ್ಟೇ ಶ್ರಮ ವಹಿಸಿ ದುಡಿಯುವ ಹೆಣ್ಣು ಮಗಳಿಗೆ ನೀಡುವ ಸಂಬಳದಲ್ಲಿ ತಾರತಮ್ಯ ಮಾಡಲಾಗುತ್ತದೆ. ಗಂಡ ದಿನದ ೭ ಗಂಟೆ ದುಡಿದು ಬಂದು ತಾನೆ ಉತ್ಪಾದಕ ಎಂದು ಹೆಮ್ಮೆಯಿಂದ ಬೀಗಿಕೊಳ್ಳುತ್ತಾನೆ. ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿಯ ಪರಿಶ್ರಮಕ್ಕೆ ಯಾವ ಬೆಲೆಯೂ ಇಲ್ಲ. ಒಂದು ಕಡೆ ವೇತನ ತಾರತಮ್ಯವಾದರೆ ಇನ್ನೊಂದೆಡೆ ಮಹಿಳಾ ದೌರ್ಜನ್ಯ ಪ್ರಕರಣಗಳು. ಮತ್ತೊಂದೆಡೆ ಕುಟುಂಬ ಜವಾಬ್ದಾರಿ ಹೊರಗಡೆಯೂ ದುಡಿಯಬೇಕು ಎಂಬ ಹೆಚ್ಚುವರಿ ಜವಾಬ್ದಾರಿ. ಬದುಕು ಎಂದರೆ ನೋವು ನಲಿವುಗಳ ಸಮ್ಮಿಲನ. ಆದರೆ ಹೆಣ್ಣಿನ ಬದುಕು ಅಂದರೆ ಅದು ಕೇವಲ ನೋವುಗಳ ಸಂಕಲನ. ಬುದ್ಧಿವಂತಿಕೆ, ಪರಿಶ್ರಮ, ಕ್ರೀಯಾಶಿಲತೆ, ನೋವು ನುಂಗುವ ಶಕ್ತಿ ಮತ್ತು ಸಂಘಟನೆಯಲ್ಲಿ ತಾನು ಮುಂದು ಎಂದು ಹೆಣ್ಣು ತೋರಿಸಿಕೊಟ್ಟಿದ್ದಾಳೆ.

ಮತ್ತಷ್ಟು ಓದು »

7
ಮಾರ್ಚ್

ಹಿರಿಯ ಜೀವದ ಮನ ಆ ಕ್ಷಣ ತಳಮಳಗೊಂಡಿದ್ಯಾಕೆ?

– ನಿಲುಮೆ 
 

Reading between the lines ಎಂಬ ಮಾತನ್ನು ಕೇಳಿರಬಹುದು. ಅಂತ ಮಾತಿಗೆ ಒಳ್ಳೆಯ ಉದಾಹರಣೆ ಚಿದಾನಂದ ಮೂರ್ತಿಯವರ ಪತ್ರ. ಪಾಪ ವಯಸ್ಸಾಯಿತು. ಅದರಿಂದ ಹೀಗೆಲ್ಲ ಬಡಬಡಿಸುತ್ತಿದ್ದಾರೆ ಅಂಥ ಕೆಲವು ಪತ್ರಿಕೆಗಳು ಬರೆದು ಕಾಸಿಗೆ ರಾಜ ಮಾರ್ಗ ಮಾಡಿಕೊಂಡವು. ನಿಜ.ಚಿಮೂ ಅವರಿಗೆ ವಯಸ್ಸಾಯಿತು.ಆದರೆ ಅವರಳೊಗಿನ ಸಂಶೋಧಕನಿಗೆ ಇತಿಹಾಸದ ಕ್ರೂರ ಅಧ್ಯಾಯಗಳ ಅರಿವಿದೆ. ಮೈ ಮರೆತರೆ ಮತ್ತೊಮ್ಮೆ ಇತಿಹಾಸ ಮರುಕಳಿಸಬಹುದೆಂದ ಸಹಜ ಆತಂಕವೂ ಇದೆ. ಹಂಪಿಯ ಬಗ್ಗೆ ಹೋರಾಡಿದವರ ಅರಿವಿಗೆ ದಂಡೆತ್ತಿ ಬಂದು ಧೂಳಿಪಟ ಮಾಡಿದವರ,ರಕ್ಕಸ ತಂಗಡಿಯ ನೆನಪು ಬಾರದಿರಬಹುದೇ? ಭಾವುಕ ಜೀವಿ ಚಿಮೂ ಅವರಿಗೆ ಇಳಿ ವಯಸ್ಸಿನಲ್ಲಿ ಇವೆಲ್ಲ ಇನ್ನೂ ಹೆಚ್ಚಾಗಿ ಕಾಡುತ್ತಿರಬಹುದು,ಅದರಲ್ಲೂ ಮೈ-ಕೈಗೆ ಎಣ್ಣೆ ಸವರಿಕೊಂಡು ಸತ್ಯ ಹೇಳಲು ಬಂದವರ ಕಣ್ಣಿಗೆ ಮಣ್ಣೇರಚಿ ಹಾದಿ ತಪ್ಪಿಸುವ ಜನರ ಮಧ್ಯೆ ಮಾತಾಡುವ ಚಾಣಕ್ಷ ಮಂದಿಯ ನಡುವೆ ದಿಗಿಲಿಗೆ ಬಿದ್ದ ಆ ಹಿರಿಯ ಜೀವದ ತಲ್ಲಣ ನಮಗರಿವಾಗುತ್ತಿಲ್ಲವಾ?
 
ಕೆಲ ದಿನಗಳ ಹಿಂದೆ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ರಾಜ್ಯಪಾಲರು ಹಿರಿಯ ವಿದ್ವಾಂಸ,ಸಂಶೋಧಕ ಚಿಮೂ ಅವರಿಗೆ ಡಾಕ್ಟರೇಟ್ ನಿರಾಕರಿಸಿದಾಗ ಕನ್ನಡ ಸಾರಸ್ವತ ಲೋಕವೇ ರಾಜ್ಯಪಾಲರೆಡೆಗೆ ತಿರುಗಿ ನಿಂತಿತ್ತು. ತಪ್ಪಿನ ಅರಿವಾದ ರಾಜ್ಯಪಾಲರು ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಆಯಿತು. ಹಾಗೆ ಡಾಕ್ಟರೇಟ್ ಪಡೆದ ನಂತರ ಚಿಮೂ ಅವರು ಪ್ರಜಾವಾಣಿಯಲ್ಲಿ ’ರಾಜ್ಯಪಾಲರು ಇದನ್ನು  ಗಮನಿಸಬೇಕು’ ಅನ್ನುವ ಶೀರ್ಷಿಕೆಯ ಪತ್ರವನ್ನು  ವಾಚಕರ ವಾಣಿಗೆ ಬರೆದ್ರು. ಅದರಲ್ಲಿ ಗೋರಿ ಪಾಳ್ಯದಲ್ಲಿ ಹಸಿರು ಬಾವುಟ ನೋಡಿದ್ದರ ಬಗ್ಗೆ, ಅಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ, ಮಾಂಸದಂಗಡಿಯ ಮುಂದೆ ನಿಂತ ಹಸುವಿಗೆ ಮರುಗುತ್ತ ಇದ್ದಿದ್ದನ್ನ ಹೇಳಿಕೊಂಡಿದ್ದಾರೆ. ಹಾಗೆಯೆ ಅದರಲ್ಲಿ ಮತಾಂತರದ ಬಗ್ಗೆಯು ಮಾತುಗಳಿವೆ.
7
ಮಾರ್ಚ್

ಮತ್ತೊಮ್ಮೆ ಹಳ್ಳಿಗೆ ಪ್ಯಾಟೆ ಹುಡುಗೀರು ಹೊಂಟಿದ್ದಾರೆ…

ಜಿ.ವಿ ಜಯಶ್ರೀ

(ದೃಶ್ಯ ಮಾಧ್ಯಮಗಳ ಎಡವಟ್ಟುಗಳ ಬಗ್ಗೆ ಕುಟುಕವ ಜಯಶ್ರೀ ಅವರು ಸುವರ್ಣ ವಾಹಿನಿ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫಿನ ಎಡವಟ್ಟಿನ ಬಗ್ಗೆ ಬರೆದಿದ್ರು.ಸುವರ್ಣ ವಾಹಿನಿಗೆ ದೇವರು ಒಳ್ಳೆ ಬುದ್ದಿ ಕೊಡಲಿ 😉 ಅಂತ ಕೇಳುತ್ತ,ಅವರ ಪುಟ್ಟ ಬರಹ ನಿಮಗಾಗಿ –ನಿಲುಮೆ)

ಸುವರ್ಣ ವಾಹಿನಿಯಲ್ಲಿ ಮತ್ತೊಮ್ಮೆ ಹಳ್ಳಿಗೆ ಪ್ಯಾಟೆ ಹುಡುಗೀರು ಹೊಂಟಿದ್ದಾರೆ. ಕಾಡಿಗೆ ಹೋಗುವಾಗ ಅವರ ಉಡುಪು ಹೇಗೆ ಇರಲಿ ತೊಂದ್ರೆ ಇಲ್ಲ ಆದ್ರೆ ನಾಡಿನ ರಿಯಾಲಿಟಿ ಷೋ ನಲ್ಲಿ ಉಡುಪುಗಳ ಬಗ್ಗೆ ಸ್ವಲ್ಪ ಗಮನ ಹರಿಸ ಬೇಕಿತ್ತು ಎಂದು ಗೆಳೆಯ ರಾಕೇಶ್ ಶೆಟ್ಟಿ ನನ್ನ ಬಳಿ ಬೇಸರದಿಂದ ಹೇಳಿದ್ರು. ಪಾಪ ಗಂಡು ಹಾರ್ಟ್ ವಿಲ ವಿಲ ಒಳ್ಳೆಯ ಗೆಳೆಯ ಆತ, ಅವರ ನೋವಿನ ಮಾತಿಗೆ ನಾನು ಪ್ರತಿಕ್ರಿಯೆ ತೋರದೆ ಇರಲು ಸಾಧ್ಯವೇ 😉