ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

28
ಜನ

ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”

ರಾಕೇಶ್ ಶೆಟ್ಟಿ

“ಮಚ್ಚು,ಲಾಂಗು,ಲೀಟರ್ ಗಟ್ಲೆ ರಕ್ತ ಬಿಟ್ಟು ಬೇರೆ ಇನ್ನೆನಪ್ಪ ಇದೆ ನಿಮ್ಮ ಕನ್ನಡ ಚಿತ್ರಗಳಲ್ಲಿ?, ವರ್ಷಕ್ಕೆ ಬರೋ ಚಿತ್ರಗಳಲ್ಲಿ ಅರ್ದಕ್ಕರ್ಧ ರಿಮೇಕ್ ಚಿತ್ರಗಳೇ.ಯಪ್ಪಾ!! ಬಿಡೋ ಹೋಗ್ಲಿ… ” ಅಂತ ನನ್ನ ಅನ್ಯ ಭಾಷೆಯ ಗೆಳೆಯರು ಕೂಡಿ ಗೇಲಿ ಮಾಡಿ ನಗ್ತಾ ಇದ್ರು.ನಾನಾದರು ಏನಂತ ಉತ್ತರ ಕೊಡ್ಲಿ, ಇರೋ ವಿಷ್ಯಾನೆ ತಾನೇ ಪಾಪ ಅವ್ರು ಹೇಳ್ತಾ ಇರೋದು.ಅದ್ರಲ್ಲಿ ತಪ್ಪೇನಿದೆ?,ಒಬ್ಬ ಕನ್ನಡ ಸಿನೆಮಾ ಅಭಿನಯದ ಅಭಿಮಾನಿಯಾಗಿದ್ದಕ್ಕೆ ಇಂತ ಮಾತುಗಳನ್ನ ಕೇಳಲೆಬೇಕಾಗಿತ್ತು.

ಅವ್ರು ಹೇಳಿದ್ ಮಾತ್ಗಳನ್ನ ಒಮ್ಮೆ ಕೂತು ಯೋಚಿಸಿ ನೋಡಿದೆ.ಹೌದಲ್ಲ! ನಮ್ಮ ಚಿತ್ರರಂಗದವರು ‘ಓಂ’ ಚಿತ್ರ ಗೆದ್ದಾದ ಮೇಲೆ ದಶಕಗಳ ಕಾಲ ಮಚ್ಚು,ಲಾಂಗು ಹಿಡಿದು ಟಿ.ಎಂ.ಸಿಗಟ್ಲೆ  ರಕ್ತ ಚೆಲ್ಲಾಡಿ,ಮಧ್ಯೆ ‘ತವರಿನ’ ನೆನಪಾಗಿ  ತೊಟ್ಟಿಲು,ಬಟ್ಟಲು,ಬಿಂದಿಗೆ,ಚೊಂಬು ಎಲ್ಲ ತಂದು,ಕಡೆಗೆ ‘ಮುಂಗಾರು ಮಳೆ’ ಬಂದ್ ಮೇಲೆ ಪ್ರವಾಹದ ರೀತಿಯಲ್ಲಿ ಪ್ರೀತಿಯ ಮಳೆ ಸುರಿಸುತ್ತಾ,ಒಂದ್ಸರಿ ತಮಿಳು ಸಿನೆಮ, ಇನ್ನೊಂದ್ಸರಿ ತೆಲುಗು ಸಿನೆಮ,ಟೈಮ್ ಸಿಕ್ಕಾಗ ಮಲಯಾಳಂ,ಹಿಂದಿ ಸಿನೆಮಾಗಳನ್ನ ನೋಡಿ ಆ ರೀಲುಗಳನ್ನ ಇಲ್ಲಿಗ್ ತಗಂಡ್ ಬಂದು,ಅದನ್ನ ಇಲ್ಲಿ ಬಿಚ್ಚಿ ಅದೇ ಕತೆಗೆ ಕನ್ನಡದ ಬಣ್ಣ (ಅದನ್ನು ಸರಿಯಾಗ್ ಬಳಿಯೋದಿಲ್ಲ ಎಷ್ಟೋ ಜನ,ಅದು ಇರ್ಲಿ ಬಿಡಿ) ಬಳಿದು ಮೇಲ್ಗಡೆ ಆ ಸ್ಟಾರು,ಈ ಸ್ಟಾರು ಅಂತ ಹೆಸ್ರಾಕಂಡು ರಿಲೀಸ್ ಮಾಡ್ತಾರೆ.ಜನ ಬಂದ್ ನೋಡ್ತಾರಾ?,ಎಲ್ಲೋ ನಮ್ಮಂತ ಕನ್ನಡ ಚಿತ್ರಗಳನ್ನ ಮಾತ್ರ ನೋಡೋ ಮಂದಿ ವಿಧಿಯಿಲ್ಲದೇ ಬಂದು ನೋಡ್ತಾರೆ.ಉಳಿದವರು ‘ಬನ್ರೋ,ಆ ಸಿನೆಮ ಬಂದೈತೆ ನೋಡನ’ ಅಂದ್ರೆ ‘ಹೇಯ್,ಹೋಗಲೇ ಅದನ್ನ ಆ ಭಾಷೆಯಲ್ಲೇ ನೋಡಿವ್ನಿ.ಯಾವ್ದಾದ್ರು ಇವರೇ ಮಾಡಿರೋ ಕತೆಯಿದ್ರೆ ಹೇಳು ಬತ್ತಿನಿ ನೋಡಕೆ’ ಅಂತಾರೆ. ಮತ್ತಷ್ಟು ಓದು »

27
ಜನ

28 ವರ್ಷಗಳ ಬಳಿಕ ಬ್ಲೂ ಪಡೆ ಗೆಲ್ಲಬಹುದೇ ವಿಶ್ವಕಪ್!?

– ಶಂಶೀರ್ ಬುಡೋಳಿ

ಜನವರಿ ೧೭. ಫೆಬ್ರವರಿ ೧೯ರಿಂದ ಎಪ್ರಿಲ್ ೨ ರವರೆಗೆ ಭಾರತ, ಬಾಂಗ್ಲಾದೇಶ ಹಾಗೂ  ಶ್ರೀಲಂಕಾ ದೇಶಗಳ ಅತಿಥೇಯತ್ವದಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್‌ಗಾಗಿ ೧೫ ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ ದಿನ. ಸಮತೋಲನ  ರೀತಿಯಲ್ಲಿ ವಿಶ್ವಕಪ್‌ಗಾಗಿ ತಂಡವನ್ನು ಆಯ್ಕೆ ಮಾಡಿರುವ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಜೊತೆಗೆ ಯಶ್ಪಾಲ್ ಶರ್ಮಾ,  ಸುರೇಂದ್ರ ಭಾವೆ, ನರೇಂದ್ರ ಹಿರ್ವಾನಿ ಹಾಗೂ ರಾಜಾ ವೆಂಕಟ್ ಸಮಿತಿಯು ಇಪ್ಪತ್ತೆಂಟು ವರ್ಷಗಳ ಬಳಿಕ ಭಾರತ ತಂಡ ವಿಶ್ವಕಪ್ ಗೆಲ್ಲಬೇಕೆಂಬ ನೆಲೆಯಲ್ಲಿ ತಂಡವನ್ನು ಪ್ರಕಟಿಸಿದಂತಿದೆ.

ಧೋನಿ ನೇತೃತ್ವದ ಭಾರತೀಯ ತಂಡ ಫೇವರೀಟ್ ತಂಡಗಳಲ್ಲೊಂದು ಎಂಬುದು ಸಂಶಯವಿಲ್ಲ. ಟೆಸ್ಟ್ ಅಗ್ರಸ್ಥಾನಿ ಹಾಗೂ ಏಕದಿನ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತ ಕ್ರಿಕೆಟ್ ತಂಡ ೨೦೧೧ರ ವಿಶ್ವಕಪ್ ಕ್ರಿಕೆಟ್‌ನಲ್ಲಿ ವಿಶ್ವಕಪ್ ಗೆಲ್ಲುವುದು  ಅನಿವಾರ್ಯವೆಂದು ಗುರಿ ಇಟ್ಟುಕೊಂಡರೆ ಫೈನಲ್ ಹಾದಿಗೇರಬಹುದು. ತಂಡದ ಆಯ್ಕೆ ಸಮತೋಲನವಾಗಿದೆ. ಈ ಜೊತೆಗೆ ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ, ನ್ಯೂಝಿಲೆಂಡ್ ವಿರುದ್ಧ  ಯಾವ  ರೀತಿಯ  ಪ್ರದರ್ಶನ ನೀಡುತ್ತದೆಯೆಂಬುದು ಕೌತುಕವಾಗಿದೆ. ಯಾಕೆಂದರೆ ಇವರೆಗೆ ತವರಿನಲ್ಲಿ ನಡೆದ  ಸರಣಿ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಭಾರತ, ಈ ಬಾರಿಯ ವಿಶ್ವಕಪ್,  ತವರಿನಲ್ಲಿ ನಡೆಯುವುದರಿಂದ್ದ  ವಿಶ್ವಕಪ್ ಜಯಿಸುವ ಫೇವರೀಟ್ ತಂಡಗಳಲ್ಲೊಂದಾಗಿದೆ. ಗ್ರೂಪ್ ಬಿಯಲ್ಲಿ ಸ್ಥಾನ ಪಡೆದಿರುವ ಭಾರತದ ಫೈನಲ್ ಹಾದಿ ಸುಗಮವಾಗಿದೆ ಎಂದು ಹೇಳಬಹುದು. ಯಾಕೆಂದರೆ ಗ್ರೂಪ್ ಬಿಯಲ್ಲಿ  ಭಾರತದ ಜೊತೆಗೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್‌ಇಂಡೀಸ್, ಬಾಂಗ್ಲಾದೇಶ, ಐರ್ಲೆಂಡ್ ಹಾಗೂ ಹಾಲೆಂಡ್ ತಂಡಗಳು ಸ್ಥಾನ ಪಡೆದಿವೆ.

ಮತ್ತಷ್ಟು ಓದು »

26
ಜನ

ಕರ್ನಾಟಕವೂ ಸಹ ಭಾರತದ ಭಾಗವಾಗಿರಲಿಲ್ಲ!

– ರಾಕೇಶ್ ಶೆಟ್ಟಿ

ಅಲ್ಲಿ ರಾಷ್ಟ್ರ ಧ್ವಜ ಹಾರುತ್ತದೋ ಇಲ್ವೋ? ಹಾರಿದರೆ ಏನಾಗುತ್ತೆ? ಅನ್ನೋದಕ್ಕೆಲ್ಲ ಬಹುಷಃ ಜನವರಿ ೨೬ರ ಇಂದಿನ ದಿನ ಉತ್ತರ ಸಿಗಲಿದೆ.Fine ನಾನೀಗ ಅರುಂಧತಿ ರಾಯ್ ಅವರ ಹೇಳಿಕೆಯ ಸುತ್ತ ಮಾತಾಡ ಹೊರಟೆ.

‘ಕಾಶ್ಮೀರ ಭಾರತದ ಭಾಗವಾಗಿರಲಿಲ್ಲ’ ಅಂತೇಳಿದ ಸುದ್ದಿ ಜೀವಿ  ಅರುಂಧತಿ ರಾಯ್ ಅವರಿಗೆ ‘ಕರ್ನಾಟಕವೂ ಸಹ ಭಾರತದ ಭಾಗವಾಗಿರಲಿಲ್ಲ’, ಹಾಗೆ ಇನ್ನ ಸ್ವಲ್ಪ ಕೆದಕುತ್ತ ಹಿಂದೆ ಹೋದರೆ ಖುದ್ದು ‘ಭಾರತವೂ ಸಹ ಭಾರತದ ಭಾಗವಾಗಿರಲಿಲ್ಲ’ ಅನ್ನೋದು ಗೊತ್ತಿಲ್ಲ ಅನ್ನಿಸುತ್ತೆ.

ಅಸಲಿಗೆ ಉಪಖಂಡವನ್ನ ಆಡಳಿತದ ಕಾರಣಕ್ಕಾಗಿ ‘ಭಾರತ’ ಅಂತ ಹಿಡಿದಿಟ್ಟವರು ಬ್ರಿಟಿಷರು.೪೭ರಲ್ಲಿ ಅವರು ಸ್ವಾತಂತ್ರ್ಯ ಕೊಟ್ಟು ಹೊರಡುವಾಗ ಇಲ್ಲಿ ೫೫೦ಕ್ಕು ಹೆಚ್ಚು ಸಣ್ಣ ಪುಟ್ಟ ರಾಜ ಸಂಸ್ಥಾನಗಳಿದ್ದವು. ಅವೆಲ್ಲ ಪಟೇಲರ ಮಂತ್ರದಂಡಕ್ಕೆ ತಲೆಬಾಗಿ ಭಾರತದ ಒಕ್ಕೊಟವನ್ನ ಸೇರಿಕೊಂಡವು.

 

ಮತ್ತಷ್ಟು ಓದು »

25
ಜನ

ಕನ್ನಡ ಸಾಹಿತ್ಯ ಸಮ್ಮೇಳನ – ಬಂತು ನಮ್ ಬೆಂಗಳೂರಿಗೆ !

— ವಸಂತ್ ಶೆಟ್ಟಿ

41 ವರ್ಷಗಳ ದೊಡ್ಡ ಅಂತರದ ನಂತರ ಕನ್ನಡ ಸಾಹಿತ್ಯ ಸಮ್ಮೇಳನ ರಾಜಧಾನಿ ಬೆಂಗಳೂರಿಗೆ ಬರುತ್ತಿದೆ. 1970ರ ಬೆಂಗಳೂರಿಗೂ, 2011ರ ಬೆಂಗಳೂರಿಗೂ ಆಕಾಶ-ಭೂಮಿಗಿರುವಷ್ಟು ಅಂತರವಿದೆ. ಬೆಂಗಳೂರಿನ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳಲ್ಲಿ ಗಣನೀಯವಾದ ಬದಲಾವಣೆಯಾಗಿದೆ. ಜಾಗತೀಕರಣದ ನಂತರ ಶುರುವಾದ ಐಟಿ ಕ್ರಾಂತಿ, ತದನಂತರ ಕೋಡಿ ಬಿದ್ದ ಕೆರೆಯಂತೆ ಹರಿದು ಬಂದ ವಲಸಿಗರ ಅಬ್ಬರದಲ್ಲಿ ಬೆಂಗಳೂರು ಖಂಡಿತ ಬದಲಾಗಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿಗೆ ಬರುತ್ತಿರುವ ಸಮ್ಮೇಳನ ಖಂಡಿತವಾಗಿಯೂ ಪ್ರಮುಖವಾದದ್ದು, ಅಲ್ಲಿ ಆಗಬೇಕಾದ ಚರ್ಚೆ, ನಡೆಯಬೇಕಾದ ವಿಚಾರ-ವಿಮರ್ಷೆ, ತೆಗೆದುಕೊಳ್ಳಬೇಕಾದ ನಿಲುವು ಎಲ್ಲವೂ ಬೆಂಗಳೂರು, ಕರ್ನಾಟಕದ ಮುಂದಿನ ದಾರಿಗೆ ದಿಕ್ಸೂಚಿಯಾಗಬಲ್ಲಂತದ್ದು ಅನ್ನುವುದು ನನ್ನ ಅನಿಸಿಕೆ.

ಬೆಂಗಳೂರಿಗೆ ಅಷ್ಟೊಂದು ಮಹತ್ವ ಯಾಕೆ?
ಇದೆಲ್ಲ ಸರಿ, ಆದ್ರೆ ಬೆಂಗಳೂರಲ್ಲಿ ಸಾಹಿತ್ಯ ಸಮ್ಮೇಳನ ಆದ್ರೆ ಅದಕ್ಯಾಕೆ ಅಷ್ಟು ಮಹತ್ವ ಅನ್ನಿಸಬಹುದು. ಬೆಂಗಳೂರು ಅನ್ನುವುದು ಕರ್ನಾಟಕದ ಬೇರೆ ಊರುಗಳಂತಲ್ಲ. ಇಡೀ ಕರ್ನಾಟಕದ, ಕನ್ನಡಿಗರ ಕಲಿಕೆ, ದುಡಿಮೆ, ಬದುಕು ರೂಪಿಸಬೇಕಾದ ವ್ಯವಸ್ಥೆಯಾದ ಸರ್ಕಾರ ಇಲ್ಲೇ ನೆಲೆಗೊಂಡಿರುವುದು. ಕರ್ನಾಟಕದ ಸಾಂಸ್ಕೃತಿಕ ಗುರುತುಗಳಲ್ಲೊಂದಾದ ಕನ್ನಡ ಚಿತ್ರೋದ್ಯಮ ಇಲ್ಲೇ ನೆಲೆಗೊಂಡಿರುವುದು. ಕರ್ನಾಟಕದ ಕಳೆದ 60 ವರ್ಷಗಳ ಇತಿಹಾಸದಲ್ಲಿ ರೂಪುಗೊಂಡ ಹತ್ತು ಹಲವು ನಾಡ ಪರ, ಭಾಷೆ ಪರ ಚಳುವಳಿಗಳಿಗೆ ಹೊಸ ದಿಕ್ಕು ತೋರಿಸಿದ, ಜನಾಭಿಪ್ರಾಯ ರೂಪಿಸುವಲ್ಲಿ ಕೆಲಸ ಮಾಡಿದ ಹತ್ತು ಹಲವು ಕನ್ನಡ ಚಿಂತಕರು, ಸಂಘಟನೆಗಳಿಗೂ ಬೆಂಗಳೂರು ಕೇಂದ್ರ ಸ್ಥಾನ. ಕರ್ನಾಟಕದ ರಾಜಕೀಯ, ಆಡಳಿತ ವ್ಯವಸ್ಥೆಯನ್ನು ಹದ್ದಿನ ಕಣ್ಣಿನಿಂದ ಬೆನ್ನು ಬಿಡದೇ ಕಾಯುತ್ತಿರುವ ಸುದ್ದಿ, ದೃಶ್ಯ ಮಾಧ್ಯಮಗಳಿಗೂ ಬೆಂಗಳೂರೇ ಕೇಂದ್ರ ಸ್ಥಾನ. ಇವೆಲ್ಲದಕ್ಕೂ ಮಿಗಿಲಾಗಿ ಕರ್ನಾಟಕದ ಆರ್ಥಿಕ ವ್ಯವಸ್ಥೆಯನ್ನು ಬಹು ಪಾಲು ನಿಯಂತ್ರಿಸುತ್ತಿರುವುದು  ಬೆಂಗಳೂರೆಂಬ ಕೆಂಪೇಗೌಡರ ಊರು. ಕರ್ನಾಟಕದ ಪಾಲಿನ ಹೆಚ್ಚಿನ ಎಲ್ಲ stakeholders ಇರೋ ಬೆಂಗಳೂರಲ್ಲಿ, ಇವರೆಲ್ಲರ ನಡುವೆ ನಡಿತಿರೋ ಈ ಸಮ್ಮೇಳನ ನಿಜಕ್ಕೂ ಮಹತ್ವದ್ದೇ. ಮತ್ತಷ್ಟು ಓದು »
22
ಜನ

ರಾಜ್ಯಪಾಲರು…ಅತಿರೇಕ ಹಾಗೂ ಯಡಿಯೂರಪ್ಪ…..

  ‘ ನಂದನವನ’
                                        
ಭ್ರಷ್ಟಚಾರ, ಸ್ವಜನಪಕ್ಷಪಾತ, ಅಧಿಕಾರ ದುರಪಯೋಗ ಕಾರಣಗಳಿಂದಾಗಿ ಮುಖ್ಯಮಂತ್ರಿ ವಿರುದ್ಧವೇ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯಪಾಲ ಹನ್ಸ್ರಾಜ್ ಭಾರದ್ವಾಜ್ ಅನುಮತಿ ನೀಡಿದ್ದಾರೆ. ಕಟ್ಟರ್ ಕಾರ್ಯಕರ್ತರ ಪಕ್ಷವಾದ ಬಿಜೆಪಿ, ಸಂಘಪರಿವಾರಿಗಳು ನಾಚುವ ಬದಲು ರಾಜ್ಯಪಾಲರ ವಿರುದ್ಧವೇ ತೊಡೆತಟ್ಟಿ ನಿಂತಿರುವುದು ನಾಚಿಕೇಡು. ಭ್ರಷ್ಟಚಾರದ ವಿರುದ್ಧ ಧ್ವನಿ ಎತ್ತುವ ಮೂಲಕ ಕಾನೂನಿನಲ್ಲಿ ಒಬ್ಬ ಸಾಮಾನ್ಯ ಮನುಷ್ಯನಿಂದ ಹಿಡಿದು ಮುಖ್ಯಮಂತ್ರಿಯವರಿಗೆ ಒಂದೇ ನ್ಯಾಯ ಎಂಬ ಘೋಷ ವ್ಯಾಕ್ಯವನ್ನು ವಕೀಲರಾದ ಸಿರಾಜ್ ಭಾಷಾ, ರಾಮಚಂದ್ರ ಸಿಎಂ ವಿರುದ್ದ ಮೊಕದ್ದಮೆಗೆ ಅವಕಾಶ ನೀಡುವಂತೆ ರಾಜ್ಯಪಾಲರ ಅನುಮತಿ ಕೋರುವ ಮೂಲಕ ಎತ್ತಿ ಹಿಡಿದಿದ್ದಾರೆ.
ಮೊದಲಿನಿಂದಲೂ ರಾಜ್ಯದಲ್ಲಿ ಒಂದು ರೀತಿ ವಿರೋಧ ಪಕ್ಷದಂತೆಯೇ ವತರ್ಿಸಿಕೊಂಡು ಬಂದ ರಾಜ್ಯಪಾಲರು ಸಿಎಂ  ವಿರುದ್ಧ ಮೊಕದ್ದಮೆ ಹೂಡಲು ಖಂಡಿತಾ ಅನುಮತಿ ಕೊಟ್ಟೆ ಕೊಡುತ್ತಾರೆ ಎಂಬುದರಲ್ಲಿ ಎರಡು ಮಾತು ಇರಲಿಲ್ಲ. ರಾಜ್ಯಪಾಲರು ಈ ಹಿಂದಿನ ಕೆಲವು ಪ್ರಕರಣಗಳಲ್ಲಿ ಸಿಎಂ ಹಾಗೂ ಬಿಜೆಪಿ ಸಕರ್ಾರದ ವಿರುದ್ಧದ ತೋರಿದ ಅಸಹಕಾರ ನಿಜಕ್ಕೂ ಅವರ ಹುದ್ದೆಗೆ  ಘನತೆ ತರುವಂಥದ್ದಲ್ಲ. ಆದರೂ ಭ್ರಷ್ಟಾಚಾರದ ವಿಷಯದಲ್ಲಿ ಅವರು ತೆಗೆದುಕೊಂಡಿರುವ ನಿಧರ್ಾರಕ್ಕೆ ಹ್ಯಾಸ್ಟ್ ಅಫ್ ಹೇಳಲೇಬೇಕು.
ರಾಜಕೀಯವಾಗಿ ರಾಜ್ಯಪಾಲರ ಕ್ರಮ ದುರುದ್ದೇಶಪೂರಿತ ವಿರಬಹುದು. ಆದರೆ ಸಾಂವಿಧಾನಿಕವಾಗಿ, ಈ ನೆಲದ ಕಾನೂನು, ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರತಿಯೊಬ್ಬ ವ್ಯಕ್ತಿಯು ರಾಜ್ಯಪಾಲರ ಈ ನಿರ್ಣಯವನ್ನು ಗೌರವಿಸುವಂಥದೇ ಆಗಿದೆ. ಮುಖ್ಯಮಂತ್ರಿ ವಿರುದ್ಧದದ ಭ್ರಷ್ಟಾಚಾರದ ಪ್ರಕರಣಗಳು ಪುಂಖಾನುಫುಂಖವಾಗಿ ಮಾಧ್ಯಮಗಳಲ್ಲಿ ಈ ಹಿಂದೆಯೇ ವರದಿಯಾಗಿದ್ದವು. ಒಮ್ಮೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗಕ್ಕೆ ಕಾಲಿಟ್ಟರೂ ಅಲ್ಲಿಯ ಸಾಮಾನ್ಯ ಜನರು ಕೂಡ ಸಿಎಂ ಅವರ ಪ್ರವರ ಹೇಳುತ್ತಾರೆ. ಅಷ್ಟೂ ಅಲ್ಲದೇ ರಾಜ್ಯಪಾಲರಿಗೆ ಆ ಇಬ್ಬರು ವಕೀಲರು ಕೇವಲ ಅನುಮತಿ ಕೋರಿ ಅಜರ್ಿ ಬರೆದಿಲ್ಲ, ಬದಲಿಗೆ 2000 ಸಾವಿರ ಪುಟಗಳಷ್ಟು ದಾಖಲೆ, ಇನ್ನೂರು ಪುಟಗಳ ವರದಿಯನ್ನು ನೀಡಿದ್ದಾರೆ.

ಮತ್ತಷ್ಟು ಓದು »

22
ಜನ

ಇವನು ಇನಿಯನಲ್ಲ… ತುಂಬ ಸನಿಹ ಬಂದಿಹನಲ್ಲ…

ಸುಪ್ರೀತ್.ಕೆ.ಎಸ್

ತನಗೆ ಹೆಂಡತಿಯಾಗುವವಳು ಹೇಗಿರಬೇಕು ಎನ್ನುವ ಕುರಿತು ಪ್ರಾಚೀನ ಗಂಡು ಹೀಗೆ ಹೇಳಿದ್ದಾನೆ:

ಕಾರ್ಯೇಶು ದಾಸಿ, ಕರುಣೇಶು ಮಂತ್ರಿ.
ರೂಪೇಶು ಲಕ್ಷ್ಮಿ, ಕ್ಷಮಯಾ ಧರಿತ್ರಿ.
ಬೋಜ್ಯೇಶು ಮಾತಾ, ಶಯನೇಶು ರಂಭ,
ಷಡ್ಗುಣ್ಯ ಭಾರ್ಯ, ಕುಲಮುದ್ಧರಿತ್ರಿ.

ಹೆಂಡತಿಯಾದವಳು ಕುಟುಂಬದ ಪರಿಸ್ಥಿತಿ, ಗಂಡನ ಆವಶ್ಯಕತೆಗೆ ಅನುಗುಣವಾಗಿ ದಾಸಿ,ಮಂತ್ರಿ, ತಾಯಿ, ವೇಶ್ಯೆ ಮೊದಲಾದ ಪಾತ್ರಗಳನ್ನು ವಹಿಸಬೇಕು. ಪ್ರಾಚೀನ ಕಾಲದ ಕುಟುಂಬ ವ್ಯವಸ್ಥೆ ಹಾಗೂ ದಾಂಪತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಉಕ್ತಿಯನ್ನು ಓದಿಕೊಂಡರೆ ನಮಗೆ ಈ ಗಂಡಿನ ಬೇಡಿಕೆಗಳು ಕೊಂಚ ಆಸಕ್ತಿಕರವಾದವುಗಳೇ ಎಂದೆನ್ನಿಸುತ್ತದೆ.

ಹೆಣ್ಣನ್ನು ತೊತ್ತು, ತನ್ನ ಸಂಗ್ರಹದಲ್ಲಿರುವ ಬೆಲೆಬಾಳುವ, ಅಂತಸ್ಥನ್ನು ಪ್ರತಿಬಿಂಬಿಸುವ ವಸ್ತುಗಳಲ್ಲಿ ಒಂದು ಎಂದು ಕಾಣುವ ಅನಾಗರೀಕ ವರ್ತನೆಯಿಂದ ಈ ಗಂಡಸು ತುಂಬಾ ಮುಂದೆ ಬಂದಿದ್ದಾನೆ ಎನ್ನುವುದು ಕಾಣುತ್ತದೆ. ಈತನಿಗೆ ತಾನು ಮದುವೆಯಾದಾಕೆ ಕೇವಲ ಒಂದು ಪಶುವಿನ ಹಾಗೆ ತನ್ನ ನೆರಳನ್ನು ನೆಚ್ಚಿಕೊಂಡು ಬದುಕುವುದು ಬೇಕಿಲ್ಲ. ಹಾಗಂತ ಆಕೆಯನ್ನು ತನ್ನ ಸಮಾನಳೆಂದು ಪುರಸ್ಕರಿಸುವುದೂ ಇಲ್ಲ. ತನ್ನ ಕೆಲಸ ಕಾರ್ಯಗಳನ್ನು ದಾಸಿಯ ಹಾಗೆ ಮಾಡಬೇಕು ಎನ್ನುವುದು ಆತನ ಮೊದಲ ಬೇಡಿಕೆ. ಅನಂತರ ತನ್ನ ಬುದ್ಧಿವಂತಿಕೆಯಿಂದ ಆಕೆ ತನ್ನ ಜೀವನ ನಿರ್ವಹಣೆಗೆ ನೆರವಾಗಬೇಕು ಎಂದು ಬಯಸುತ್ತಾನೆ. ರೂಪವಿದ್ದರೆ ಯಾರಿಗೆ ತಾನೆ ಸಂತೋಷವಾಗುವುದಿಲ್ಲ? ತನ್ನ ತಪ್ಪುಗಳನ್ನೆಲ್ಲ ಕ್ಷಮಿಸಿ ಪೊರೆಯುವ ಭೂಮಿಯಾಗಿರಲಿ ಎಂದು ಅಪೇಕ್ಷಿಸುವುದರಲ್ಲಿ ಗಂಡು ಬದಲಾಗಿಯೇ ಇಲ್ಲ. ತಾಯಿಯಂತೆ ಪುಷ್ಕಳವಾಗಿ ಅಡುಗೆ ಮಾಡಿ ತನ್ನ ಹಸಿವನ್ನು ಇಂಗಿಸಬೇಕು. ದೈಹಿಕ ಕಾಮನೆಯನ್ನು ಸಹ ತೃಪ್ತಿ ಪಡಿಸಬೇಕು. ಇಷ್ಟೆಲ್ಲಾ ಗುಣಗಳು ಹೆಂಡತಿಯಲ್ಲಿದ್ದರೆ ತನ್ನ ಕುಲ ಉದ್ಧಾರವಾಗುವುದು ಎನ್ನುವುದು ಪ್ರಾಚೀನ ಗಂಡಿನ ನಂಬಿಕೆ.

ಮತ್ತಷ್ಟು ಓದು »

21
ಜನ

25ರ ಲಹರಿಯಲ್ಲಿ

ಪ್ರವೀಣಚಂದ್ರ, ಪುತ್ತೂರು

ಒಂದಲ್ಲ, ಎರಡಲ್ಲ, ಹತ್ತಾರು ಬಾರಿ ಲೆಕ್ಕ ಮಾಡಿ ನೋಡಿದೆ. 25ಕ್ಕಿಂತ ಕಡಿಮೆಯಾಗುವುದೇ ಇಲ್ಲ. ಮತ್ತೆ ಮತ್ತೆ ಲೆಕ್ಕ ಮಾಡಿ ಅದೇ ಉತ್ತರ ಬಂದಾಗ ಒಂದಿಷ್ಟು ಖುಷಿ ಮತ್ತು ದಿಗಿಲು ಜೊತೆಯಾಯಿತು.

ಮುಂಜಾನೆ ಎದ್ದಾಗಲೇ 4 ಮೆಸೆಜ್‌ಗಳು ಬರ್ತ್‌ಡೇ ವಿಷ್‌ ಮಾಡಲು ಕಾಯುತ್ತಿದ್ದವು. ಸ್ವಲ್ಪ ಸಮಯವಾದಾಗ ಮತ್ತೆ ಒಬ್ಬರು ಮೆಸೆಜ್‌ ಮಾಡಿದರು. ಸ್ವಲ್ಪ ಹೊತ್ತಾದಾಗ ಗೆಳೆಯ ಸೂರ್ಯ ಕಾಲ್‌ ಮಾಡಿ ವಿಷ್‌ ಮಾಡಿದ. ಮೊಬೈಲ್‌ನ ಬ್ರೌಸರ್‌ ಆನ್‌ ಮಾಡಿ ನೋಡಿದಾಗ ಸುಮಾರು ಬರ್ತ್‌ಡೇ ವಿಷ್‌ಗಳು ಬಂದಿದ್ದವು. ಆಫೀಸ್‌ಗೆ ಹೋಗಿ ನೋಡಿದಾಗ ಫೇಸ್‌ಬುಕ್‌ನಲ್ಲಿ 19 ಜನ, ಆರ್ಕುಟ್‌ನಲ್ಲಿ 32 ಜನ ಬರ್ತ್‌ಡೇ ವಿಷ್‌ ಮಾಡಿ ನನಗೆ 25 ವರ್ಷ ಮುಗೀತು ಅಂತ ಕನ್‌ಫರ್ಮ್‌ ಮಾಡಿದ್ರು. ಅದರಲ್ಲಿ ನನ್ನ ಆತ್ಮೀಯ ಸ್ನೇಹಿತರು, ನನಗಿಂತ ಹಿರಿಯರು, ಕಿರಿಯರು, ಜೀವನದಲ್ಲಿ ಬಹಳಷ್ಟು ಸಾಧಿಸಿದವರೂ ಎಲ್ಲರೂ ಇದ್ದರು. ಯಾಕೋ ತುಂಬಾ ಖುಷಿಯಾಗಿಬಿಟ್ಟಿತು. ಅಮ್ಮನಿಗೆ ಫೋನ್‌ ಮಾಡಿ ವಿಷಯ ತಿಳಿಸಿದೆ. ಇಲ್ಲಿ ನೀನು ಇರುತ್ತಿದ್ದರೆ ಪಾಯಸ ಮಾಡಬಹುದಿತ್ತು ಅಂತ ಹೇಳಿ ಅವಳೂ ಕನ್‌ಫರ್ಮ್‌ ಮಾಡಿ ಬಿಟ್ಟಳು. ಅಣ್ಣನಿಗೆ ಕಾಲ್‌ ಮಾಡಲಿಲ್ಲ. ಯಾಕೆಂದರೆ ಕಳೆದ 5ರಂದು ಆತನ ಬರ್ತ್‌ಡೇ ಮುಗಿದಿತ್ತು. ಆತನಿಗೆ ವಿಷ್‌ ಮಾಡಲು ಮರೆತಿದ್ದೆ.

ಆಫೀಸ್‌ನಲ್ಲಿ ಕೀಬೋರ್ಡ್‌ನ ಮೇಲೆ ನನಗೊಂದು ವಿಶಿಷ್ಠ ಗಿಫ್ಟ್‌ ಕಾದಿತ್ತು. ಚಂದದ ದೊಡ್ಡ ಪ್ಲಾಸ್ಟಿಕ್‌ ಕವರ್‌, ಅದರೊಳಗೆ ಎ4 ಸೈಜ್‌ ಕಾಗದದಲ್ಲಿ ಹ್ಯಾಪಿಬರ್ತ್‌ ಡೇ ಅಂತ ಪ್ರಿಂಟ್‌, ಒಳಗಡೆ ಅಚ್ಚರಿಯ ಉಡುಗರೆಗಳು. ಅಂದ್ರೆ ಇಂಕ್‌ ಖಾಲಿಯಾಗಿರುವ ಪೆನ್ನು ಇತ್ಯಾದಿ. ಅವರು ಅಂತಹ ವಿಶಿಷ್ಠ ಗಿಫ್ಟ್‌ ನೀಡಲು ಕಾರಣ ಅವರ ಬರ್ತ್‌ಡೇಗೆ ನಾನೂ ಹಾಗೇ ಮಾಡಿದ್ದೆ. ಅಂದ್ರೆ ಪುಟ್ಟ ಕಾಗದದಲ್ಲಿ ಹ್ಯಾಪಿ ಬರ್ತ್‌ಡೇ ಅಂತ ಬರೆದು `ನಿನ್ನ ಜನ್ಮದಲ್ಲಿ ಇಂತಹ ಗಿಫ್ಟ್‌ ಯಾರಾದರೂ ಕೊಟ್ಟಿದ್ದಾರಾ? ಅಂತ ಕೊಚ್ಚಿಕೊಂಡಿದ್ದೆ. ಅವರು ಅಷ್ಟೇ ನನ್ನ ಜೀವನದಲ್ಲಿ ನನಗೆ ಯಾರೂ ನೀಡದಂತಹ ವಿಶಿಷ್ಠ ಗಿಫ್ಟ್‌ ನೀಡಿ ನನ್ನನ್ನು ಆಶ್ಚರ್ಯಗೊಳಿಸಿದ್ದರು. ಮತ್ತಷ್ಟು ಓದು »

20
ಜನ

ಬೇಕಾಗಿದ್ದಾರೆ!

ಹೇಮ ಪವಾರ್

ಮದುವೆ ಆಗೋದು ಅಂತ ತೀರ್ಮಾನಿಸಿ ಬಿಟ್ಟಿದೀನಿ! ಬಂದ ’ಗಂಡು’ (ಗುಂಡು?) ಗಳನ್ನೆಲ್ಲ,
ಸ್ಟೀಲ್ ಬಿಂದಿಗೆ, ಹಿತ್ತಾಳೆ ಹಂಡೆ, ತೊಳೆದ ಕೆಂಡ, ನರಸಿಂಹರಾಜು ಮುಖ, ಅಂಬರೀಷ್
ಸೊಂಟ ಅಂತೆಲ್ಲ ಹೆಸರಿಟ್ಟು ರಿಜೆಕ್ಟ್ ಮಾಡ್ತಿದ್ದವಳು ಈಗ ಇದ್ದಕ್ಕಿದ್ದಂತೆ ಮದುವೆ
ಆಗೋದು ಅಂತ ತೀರ್ಮಾನಿಸಿ ಬಿಟ್ಟಿದ್ದೀನಿ. ಬುದ್ದನಿಗೆ ಬೋಧಿವೃಕ್ಷದ ಕೆಳಗಡೆ ಆದ ಹಾಗೆ
ನನಗೂ ನಮ್ಮ ಅಡುಗೆಮನೆಲಿ ಗ್ನಾನೋದಯ ಆಗಿ ಹೋಗಿದೆ. ನನ್ನಮ್ಮ ತನ್ನ ಪುಣ್ಯದ
ಅಕೌಂಟನ್ನು ಕ್ರೆಡಿಟ್ ಮಾಡಿಕೊಳ್ಳಲು ದೇವಸ್ಥಾನಗಳಿಗೆ ಹೊರಟು ಇಂದಿಗೆ ವಾರವಾಯಿತು.
ನಂಬುವ ಮಾತೇ ಅಲ್ಲ ಆದರೂ ನನ್ನಂತ ನಾನೇ ಈ ಒಂದು ವಾರವೂ ನನ್ನ ಬೆಳಗಿನ ತಿಂಡಿಯನ್ನು
ಬಲಿಕೊಟ್ಟಿದ್ದೇನೆ. ಈಗೊಂದು ವಾರದಿಂದ ಎದ್ದು ತಿಂಡಿ ಮಾಡಿಕೊಂಡು ತಿನ್ನುವುದಿರಲಿ,
ಯಾರಾದರೂ ಮಾಡಿಟ್ಟಿದ್ದರೂ ತಿನ್ನಲು ಸಮಯವಿಲ್ಲದಷ್ಟು ಲೇಟಾಗಿ ಹೋಗಿ, ಅರ್ಧಗಂಟೆ
ತಡವಾಗಿ ಆಫೀಸ್ ಸೇರಿ ಕಂಪ್ಯೂಟರ್ ನೊಳಗೆ ಕಳೆದು ಹೋದರೆ, ಮತ್ತೆ ತಿಂಡಿ
ತಿಂದಿಲ್ಲವೆಂದು ನೆನಪಾಗುವುದು ಊಟದ ಸಮಯಕ್ಕೆ. ಯಾವುದೇ ಡಯಟ್ಟಿನ ಸಹಾಯವಿಲ್ಲದೆ
ಅನಾಮತ್ತು ೨ ಕೆಜಿ ತೂಕ ಇಳಿಸಿಬಿಟ್ಟಿದ್ದೇನೆ.ಮುಂದೆ ಹೀಗಾಗಬಾರೆದೆಂಬ
ಮುನ್ನೆಚ್ಚರಿಕೆಗಾಗಿಯೇ ಚೆನ್ನಾಗಿ ಅಡುಗೆ ಬಲ್ಲ ಹುಡುಗನನ್ನು ಹುಡುಕಿ
ಮದುವೆಯಾಗಿಬಿಡಬೇಕೆಂದಿದ್ದೇನೆ. ಹೀಗೆಂದ ತಕ್ಷಣ ನನ್ನನ್ನು ಸಮಾನತೆ, ಸ್ತ್ರೀವಾದಿ
ಎಂದೆಲ್ಲ ಬ್ರಾಂಡ್ ಮಾಡಿಬಿಡಬೇಡಿ. ಚೆನ್ನಾಗಿ ಅಡುಗೆ ಬರುವ ಯಾವ ಹುಡುಗನೂ ನನ್ನ ಕೈಯ
ಅಡಿಗೆಯನ್ನು ತುಂಬಾ ದಿನ ಸಹಿಸಿಕೊಳ್ಳಲಾರನೆಂಬ ಕಾನ್ಫಿಡೆನ್ಸ್ ನಿಂದ ಈ
ಮಾತನ್ನು ಹೇಳುತ್ತಿದ್ದೇನೆ.

ಅಡುಗೆಮನೆ ಅನ್ನೋದು ಹುಡುಗಿಯರಿಗೆ ಅದೇಕೆ ಬ್ರಾಂಡ್ ಮಾಡಿದ್ದಾರೋ, ಏನೇ ಇದ್ದರೂ ನಾನು
ಮತ್ತು ಅಡುಗೆ ಎರೆಡೂ ವಿರುದ್ದ ಪದಗಳು. ಕಷ್ಟಪಟ್ಟು ವಾಂಗಿಭಾತ್ ಮಾಡುವುದನ್ನು
ಕಲಿತು, ಮನೆಗೆ ಬಂದ ಅತಿಥಿಗಳಿಗೆ ಒಮ್ಮೆ ಕೊಟ್ಟರೆ, ಪುಳಿಯೋಗರೆಗೆ ಸ್ವಲ್ಪ ಹುಳಿ
ಕಡಿಮೆ ಹಾಕಬೇಕಿತ್ತು ಎಂದಾಗ, ಅವರನ್ನೇ ಹುಣಸೇಹಣ್ಣಿನಂತೆ ಕಿವುಚಿಬಿಡುವ
ಮನಸ್ಸಾಗಿತ್ತು. ಅಪ್ಪನಿಗೆ ಅಮ್ಮ ಮನೆಯಲ್ಲಿ ಇಲ್ಲದಾಗ ಕಾಫಿ ಮಾಡಿಕೊಡಲೋ ಅಥವಾ ಟೀ
ಕುಡೀತೀರ ಎಂದು ಕೇಳಿದರೆ, ಯಾವುದನ್ನಾದರೂ ಮಾಡು ಮಗಳೇ ನೀ ಮಾಡಿದರೆ ಎರೆಡು ಒಂದೇ ತರ
ಇರುತ್ತೆ ಎಂದಂದು ನಗುತ್ತಾರೆ. ನಾನು ಮಾಡಿದ ಚಪಾತಿ ಯಾವಾಗಲೂ ಆಸ್ಟ್ರೇಲಿಯ ಮ್ಯಾಪ್
ತರಹ ಇರುತ್ತದೆಂದು ಅಕ್ಕನ ಪುಟ್ಟ ಮಗಳು ಹಿಯ್ಯಾಳಿಸುತ್ತಾಳೆ. ಅಲ್ಲರೀ ಆಸ್ಟ್ರೇಲಿಯ
ಮ್ಯಾಪ್ ಆದರೇನು ಇಂಡಿಯಾ ಮ್ಯಾಪ್ ಆದರೇನು ಮುರಿದೇ ತಾನೆ ತಿನ್ನುವುದು. ಹೊಟ್ಟೆ ಒಳಗೆ
ಏನು ಶೇಪ್ ಸಮೇತ ಹೋಗತ್ತ? ಬುದ್ದಿಇಲ್ಲ ಜನಕ್ಕೆ. ನನ್ನ ಹೊಸ ಪ್ರಯತ್ನವನ್ನು ಯಾರ
ಕೈಲದಾರೂ ಹೊಗಳಿಸಬೇಕೆಂದು ಮೊನ್ನೆ ಪಕ್ಕದ ಮನೆಯ ಹುಡುಗನಿಗೆ ನಾನು ಮಾಡಿದ್ದ
ತಿಂಡಿಯನ್ನು ಕಪ್ ನಲ್ಲಿ ಹಾಕಿಕೊಟ್ಟೆ, ’ಚೂರು ಸಪ್ಪೆ ಇತ್ತು ಅಕ್ಕ, ಪಾಯಸದಲ್ಲೆಲ್ಲೂ
ಬೇಳೆ ಕಾಣಲಿಲ್ಲ, ಆದರೂ ಚೆನ್ನಾಗಿದೆ’ ಎಂದುಬಿಟ್ಟ, ನನಗೆ ನಖಶಿಖ ಅಂತ ಉರಿದು
ಹೋಯಿತು, ನಾನು ಮಾಡಿದ್ದಿದ್ದು ಜಾಮೂನು, ಅದು ಗುಂಡಗೆ ಉಳಿಯದೇ ತನ್ನ ಶೇಪ್
ಕಳೆದುಕೊಂಡು ಪಾಕದಲ್ಲಿ ಕರಗಿ ಹೋಗಿತ್ತಷ್ಟೇ!! ಮತ್ತಷ್ಟು ಓದು »

19
ಜನ

ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ

ಪ್ರಿಯಾಂಕ್ ಬೆಂಗಳೂರು

೧೭ನೇ ಜನವರಿ ೨೦೧೧  ವಿಜಯ ಕರ್ನಾಟಕದಲ್ಲಿ “ವಿದೇಶೀಯರ ಹಿಂದಿ ಮೋಹ” ಎಂಬ ಹೆಸರಿನಡಿ ಒಂದು ಅಂಕಣ ಮೂಡಿ ಬಂದಿದೆ. ವಿದೇಶೀಯರು ಹಿಂದಿ ಕಲಿಯಲು ಆಸಕ್ತಿ ತೋರುತ್ತಿರುವುದು, ಕೇಂದ್ರ ಸರಕಾರವು ಜನವರಿ ಹತ್ತರಂದು ಹಿಂದಿ ದಿವಸ್ ಆಚರಿಸುವುದು, ಇತ್ಯಾದಿ ವಿಷಯಗಳನ್ನು ಮುಂದಿಟ್ಟು, ಕನ್ನಡಿಗರಲ್ಲಿ ಹಿಂದಿ ಕಲಿಕೆ ಬಗ್ಗೆ ಒಲವು ಮೂಡಿಸುವ ಒಂದು ಪ್ರಯತ್ನದಂತೆ ಈ ಅಂಕಣ ಕಾಣುತ್ತದೆ. ಹಿಂದಿಗೆ ಎಲ್ಲಿಲ್ಲದ ಬೇಡಿಕೆಯಿದೆ ಎಂದು ಹೇಳುವ ಅವಸರದಲ್ಲಿ, ವ್ಯವಸ್ಥಿತ ಹಿಂದಿ ಹೇರಿಕೆಯಿಂದ ಕನ್ನಡಕ್ಕಾಗುತ್ತಿರೋ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಕೆಲಸವನ್ನು ವಿಜಯ ಕರ್ನಾಟಕ ಮರೆತಂತಿದೆ. ಈ ಅಂಕಣ ಓದಿದ ಕನ್ನಡಿಗರಲ್ಲಿ “ವಿಜಯ ಕರ್ನಾಟಕ ಹಿಂದಿ ಹೇರಿಕೆಯ ಪರ ಇದೆಯೇ?” ಎಂಬ ಪ್ರಶ್ನೆ ಹುಟ್ಟಿರುವುದಂತೂ ಹೌದು.

ಅಂಕಣದಲ್ಲಿ ಹೇಳಲಾಗಿರುವ ಕೆಲವು ವಿಷಯಗಳಲ್ಲಿ ಎರಡನ್ನು ಇಲ್ಲಿ ಹೆಸರಿಸಿ, ಆ ವಿಷಯಗಳು ಕನ್ನಡಕ್ಕೆ ಹೇಗೆ ಕುತ್ತು ಎಂಬುದನ್ನು ವಿವರಿಸಲಾಗಿದೆ. ಮತ್ತಷ್ಟು ಓದು »

18
ಜನ

ಹುಡುಗರೇ ಹುಶಾರ್…!!!

ಸಾತ್ವಿಕ್ ಎನ್ ವಿ

ಹುಡುಗಿಯರ ಹಿಂದೆ ಲವ್ ಲವ್ ಅಂತ ಗಂಟು ಬೀಳೋ ಮಜ್ನುಗಳಿಂದ ತಪ್ಪಿಸಿ ಕೊಳ್ಳಲು ಹುಡುಗಿಯರ ಹತ್ರ ಹಲವಾರು ಅಸ್ತ್ರಗಳಿರುತ್ತವೆ. ಒಂದೋ ರಾಖಿ ಕಟ್ಟಿ ಬಿಡುವುದು ಇಲ್ಲವೇ ಮೊದಲ ಪರಿಚಯದಲ್ಲೇ ಅಣ್ಣ ಅಂದು ಬಿಡುವುದು!… ರಾಖಿ ಕಟ್ಟುವ ಪ್ರಯೋಗ ಎಲ್ಲ ಟೈಮಲ್ಲೂ ಯೂಸ್ ಅಗುತ್ತೆ ಅಂತ ಏನೂ ಇಲ್ಲ. ಯಾಕೆಂದರೆ ರಾಖಿ ಕಟ್ಟಲು ಹೋದ ಮೂಮೆಂಟನ್ನೇ ಪ್ರಪೋಸ್ ಮಾಡೋ ಅವಕಾಶವಾಗಿ ಪರಿವರ್ತಿಸಿಕೊಂಡ ಹೈಕಳ ಪಟ್ಟಿ ದೊಡ್ಡದಿದೆ. ಹೀಗಾಗಿ ರಾಖಿ ಕಟ್ಟೊ ವಿಷಯ ಬಿಟ್ಟು ಹುಡುಗಿಯರು ಅಯ್ದುಕೊಂಡ ಮತ್ತೊಂದು ಹಾದಿಯೇ ಮೊದಲ ಪರಿಚಯದಿಂದ ಕಂಡ ಕಂಡಲ್ಲಿ ಆತನನ್ನು ಅಣ್ಣನೆಂದು ಕರೆದು ಪ್ರತಿಷ್ಠಾಪಿಸಿ ಬಿಡುವುದು. ಹೀಗೆ ಹೇಳಿದ ಮೇಲೆ ಹುಡುಗ ಬಾಯಿ ಬಿಡೊ ಹಾಗಿಲ್ಲ. ಅಂತಹ ಅಣ್ಣ ಬ್ಲಾಕ್ ‘ಮೇಲ್’ ತಂತ್ರವಿದು. ಅದನ್ನು ಮೀರಿ ಹೊರಟನೋ ಪೋಲಿ ಅನ್ನೋ ಇಮೇಜ್ ಜತೆಗೆ ಹುಡುಗಿಯ ಸಂಪರ್ಕವೂ ತಪ್ಪಿ ಹೋಗುತ್ತೆ. ಇಂಥ ಸಂದರ್ಭದಲ್ಲಿ ಹುಡುಗನಿಗೆ ಉಳಿಯೋ ಆಯ್ಕೆ ಅಂದ್ರೆ ಈ ಮೊದಲು ಇದೇ ತಂತ್ರಕ್ಕೆ ಬಲಿಯಾದಾಗ(?!) ದೊರಕಿರುವ ಹತ್ತಾರು ತಂಗಿಯರ ಜತೆಗೆ ಹನ್ನೊಂದನೆಯದ್ದು ಸೇರಿಸಿ ತಮ್ಮ ಮುಂದಿನ ಬೇಟೆಗೆ ಹೊರಡುವುದು.

ಇನ್ನು ನಮ್ಮ ಹುಡುಗರೋ ಕಂಡ ಎಲ್ಲ ಹುಡುಗಿಯರನ್ನು ಲವ್ ಮಾಡುವಷ್ಟು ವಿಶಾಲ ಹೃದಯಿಗಳು. ಅದಕ್ಕಾಗಿಯೇ ‘ ಏನಮ್ಮಾ/ ಏನ್ ಮಗ (?) ನಿನ್ನ ತಂಗಿಯರೆಲ್ಲ ಹೇಂಗಿದ್ದಾರೆ’ (ಇದು ಅವನ ಕ್ಲಾಸ್ನಲ್ಲಿರುವ ಹುಡುಗಿಯರ ಬಗ್ಗೆ ಕೇಳೊ ಸ್ಟೈಲು. ನಿಜ ತಂಗಿಯ ಬಗ್ಗೆ ಕೇಳಿದರೆ ತನ್ನ ಬೆನ್ನಿಗೆ ಮೂಲ ಅನ್ನೊವ ವಿಷಯ ಆತನಿಗೆ ತಿಳಿಯದೆ?) ಆಂತ ಮಾತು ಪ್ರಾರಂಭಿಸುವ ಮೂಲಕ ಸ್ನೇಹಿತನಲ್ಲಿ ಸೋದರ ಭಾವನೆ ಬಿತ್ತುವ ಮತ್ತು ತನ್ನ ಆಯ್ಕೆಯನ್ನು ಸ್ವತಂತ್ರವಾಗಿಡುವ ತಂತ್ರವಿದು. ಬಹುಶ: ಬೆಂದಕಾಳೂರಿನ ಹುಡುಗರ ಬಾಯಲ್ಲಿ ಯಾವಾಗಲೂ ಕೇಳಿ ಬರುವ ‘ಮಚ್ಚ’ (ಬಾವ) ಎಂಬ ಶಬ್ದ ಇದೇ ಹಿನ್ನೆಲೆಯಿಂದ ಬಂದಿರಬಹುದೇ ಎಂಬುದನ್ನು ನಮ್ಮ ಸಂಶೋಧಕರು ದೃಢಪಡಿಸಿಲ್ಲ. ಮತ್ತಷ್ಟು ಓದು »