ಇರುವೆ ಕೊಟ್ಟ ಕಿರಿಕಿರಿ
ಪ್ಯಾಂಟ್ ಹಾಕಿ ಇನ್ ಶರ್ಟ್ ಮಾಡಿ, ಶಾಲೆಗೆ ಟಿಪ್ ಟಾಪಾಗಿ ಹೋಗುತ್ತಿದ್ದೆ. ಸ್ವಲ್ಪ ತುಂಟನಾಗಿದ್ದ ನಾನು ತರಗತಿಯ ಕೊನೆಯ ಬೆಂಚಿನಲ್ಲಿ ಕೂರಲು ಇಷ್ಟ ಪಡುತ್ತಿದ್ದೆ. ಟೀಚರ್ ತರಗತಿಗೆ ಬಂದೊಡನೆ “ದೀಪಕ್ ಎಲ್ಲಿ ಬಾ” ಎಂದು ಮುಂದಿನ ಬೆಂಚಿನಲ್ಲಿ ಕೂರಿಸಿ ನನ್ನಾಸೆಗೆ ತಣ್ಣೀರು ಹಾಕುತ್ತಿದ್ದರು.
ನಾಲ್ಕು ಕಣ್ಣಿನ ಆ ಟೀಚರ್ ಬಾರಿ ಸೀರಿಯಸ್ ಮತ್ತು ಜೋರಿನವರು. ಅವರ ಮುಖದಲ್ಲಿ ನಗು ನೋಡಿದರೆ ಏನೋ ವಿಸ್ಮಯ ಕಂಡಂತೆ ಆಗುತ್ತಿತ್ತು. ಎಂದಿನಂತೆ ಟೀಚರ್ ತರಗತಿಗೆ ಬಂದು ಹಾಜರಾತಿ ಕರೆದರು. ಒಂದು ಕೈಯಲ್ಲಿ ಬೆತ್ತ ಮತ್ತೊಂದು ಕೈಯಲ್ಲಿ ‘ಸಮಾಜ ವಿಜ್ಞಾನ’ ಪುಸ್ತಕ ಹಿಡಿದು ಪಾಠ ಶುರು ಮಾಡಿದರು.
ಅಷ್ಟರಲ್ಲಿ ನನ್ನ ಕಾಲಿನಲ್ಲಿ ಏನೋ ಹರಿದಂತೆ ಆಯಿತು. ನಿಧಾನವಾಗಿ ಮೇಲೆ-ಮೇಲೆ ಹತ್ತುತ್ತಾ ಬಂದ ಅ ಜೀವಿ ಎಡ ತೊಡೆಗೆ ‘ಚುನ್ಕ್ ‘ಎಂದು ಕಚ್ಚಿತು. ಓಹೋ … ಇದು ಇರುವೆಯದೆ ಕೆಲಸ ಎಂದು ತಿಳಿಯಿತು. ಹೇಗೋ ಸಹಿಸಿಕೊಂಡು ಕಾಲನ್ನು ಆ ಕಡೆ ಈ ಕಡೆ ಆಡಿಸಿದೆ. ಸ್ವಲ್ಪ ಹೊತ್ತು ಸುಮ್ಮನಾದ ಇರುವೆ ಮತ್ತೊಮ್ಮೆ ‘ಚೋಇಕ್ ‘ಎಂದು ಕಚ್ಚಿತ್ತು. ಉರಿ ತಡೆಯಲಾರದೆ ಮೆಲ್ಲೆ ” ಹ್ಹೂ …. ” ಎಂದೆ. ಟೀಚರ್ ನ ಕಿವಿ ನನ್ನ ಬಾಯಿಯಲ್ಲೇ ಇತ್ತೇನೋ ಎಂಬಂತೆ ಸರಕ್ಕನೆ ನನ್ನೆಡೆಗೆ ತಿರುಗಿದರು. ಹುಬ್ಬಾಡಿಸುತ್ತಾ “ಏನೋ? ” ಎಂದರು. “ಏನಿಲ್ಲ ” ಎಂದೆ. ಎದ್ದು ನಿಲ್ಲಲು ಹೇಳಿದರು. ” ಯಾರದ್ರು ಏನಾದ್ರು ಮಾಡಿದ್ರಾ ?” ಎಂದು ಕೇಳಿದರು. ‘ಇಲ್ಲ’ ಎಂಬಂತೆ ತಲೆಯಾಡಿಸಿದೆ. ನಾನು ಎದ್ದ ವೇಗಕ್ಕೆ ಇರುವೆಗೆ ಕೋಪ ನೆತ್ತಿಗೀರಿರಬೇಕು. ಅದು ಮತ್ತೊಮ್ಮೆ -ಮಗದೊಮ್ಮೆ ಕಚ್ಚ ತೊಡಗಿತು. ಪ್ಯಾಂಟಿನ ಒಳಗೆ ಇರುವೆ ಕಚ್ಚುತ್ತಿದೆ ಎಂದು ಹೇಳಿ ಬಿಡಲೇ?. ಬೇಡ- ಬೇಡ ಎಲ್ಲಾ ನಗುತ್ತಾರೆ, ಹೇಳದೆ ಹೋದರೆ ಟೀಚರ್ ಹೊಡಿಯುತ್ತಾರೆ. ಇರುವೆಯ ಕಡಿತ, ಟೀಚರ್ ಹೊಡೆತ ಯಾರಿಗೆ ಬೇಕು ? ಆ ಮಳೆಗಾಲದ ಚಳಿಯಲ್ಲೂ ಬೆವರತೊಡಗಿದೆ. ಯಾವ ಜನ್ಮದ ಶಾಪವೋ ಎಂದು ಯೋಚಿಸುತ್ತಿರಬೇಕಾದರೆ:, “ಕುಳಿತುಕೋ , ನಿನ್ನ ಕಪಿ ಚೆಸ್ತೆ ಮನೆಯಲ್ಲಿಟ್ಟುಕೋ, ನನ್ ಜೊತೆ ತೋರಿಸಬೇಡ ” ಎಂದು ಟೀಚರ್ ಗುಟುರು ಹಾಕಿ ಕೂರಿಸಿದರು . ಮತ್ತಷ್ಟು ಓದು 
ಮೆಸೆಜ್ನ ಸ್ವಗತ
ಅಶ್ವಥ್ ಸಂಪಾಜೆ
ಅಯ್ಯೇ ಇಲ್ಲೊಬ್ಬಳು ಹುಡುಗಿ ಮುಸಿ ಮುಸಿ ಅಳುತ್ತಿದ್ದಾಳೆ, ಯಾಕಿರಬಹುದು? ಅದೂ ಜ೦ಘಮವಾಣಿ ಕೈಯಲ್ಲಿ ಹಿಡಿದುಕೊ೦ಡು, ಅದರಲ್ಲೂ ನನ್ನನ್ನು ನೋಡಿ. ನಾನು ಇಷ್ಟೊ೦ದು ಪ್ರಭಾವಿತನೇ. . . !
ಹೌದು, ಈ ಪ್ರಪ೦ಚದಲ್ಲಿ ನಾನು ಅಭಿಮಾನಿಗಳ ಜೊತೆ ಹರಿದಾಡದಿದ್ದರೆ ಅವರು ದಿನದಲ್ಲಿ ಏನೋ ಕಳಕೊ೦ಡ ಹಾಗೆ! ಬೆಳಗ್ಗಿನಿ೦ದ ಮಧ್ಯರಾತ್ರಿಯವರೆಗೂ ನನ್ನ ಸ೦ಚಾರ. ದಿವಸದ ೨೪ ಗ೦ಟೆ, ೩೬೫ದಿನ ನನಗೆ ವಿಶ್ರಾ೦ತಿ ಎನ್ನುವುದು ಇಲ್ಲ. ನಿರ೦ತರ ಚಲನಶೀಲವ್ಯಕ್ತಿ ಅ೦ತಾ ಬಿರುದು ಕೊಡುವುದು ಏನೂ ಬೇಡ. ಅಭಿಮಾನಿಗಳು ಬಾಯಿಯಿ೦ದಲೇ ಬ೦ದ ಮೇಲೆ ಮತ್ತೆ ನಾನು ನಿವೇದನೆ ಮಾಡುವುದು ಸರಿಯಲ್ಲ.
ನನಗೆ ಎಷ್ಟು ಹೆಸರುಗಳಿವೆ ಎನ್ನುವುದು ನನಗೆ ಗೊತ್ತಿಲ್ಲ. ` ಸ೦ದೇಶ’ ಅ೦ತಾ ಎಲ್ಲರೂ ಸಾಮಾನ್ಯವಾಗಿ ಕರೆಯುತ್ತಾರೆ. ಸಮಯ, ಸ೦ದರ್ಭ, ಸನ್ನಿವೇಶಕ್ಕೆ ತಕ್ಕ೦ತೆ ನಾನು ಹೊಸ ಹೊಸ ಹೆಸರುಗಳಿ೦ದ ಪ್ರಸಿದ್ಧಿಗೆ ಬರುತ್ತಾನೆ. ಎಲ್ಲರ ಶುಭಾಶಯ ವಿನಿಮಯ ಮಾಡುವ, ಶುಭಕರನಾಗಿ ಸ್ನೇಹಿತರ ಸಮಸ್ಯೆಗಳನ್ನು ನಿವಾರಿಸುವ ` ನಿವಾರಕ’ನಾಗಿ, ಯುವ ಜೋಡಿಗಳ ಭಾವನೆಗಳನ್ನು ಹರಿಬಿಡುವ ಮೇಘಸ೦ದೇಶದ ` ಧೂತ’ನಾಗಿ. ಕಿರುಕುಳ ನೀಡಿ ಮಜ ತೆಗೆದುಕೊಳ್ಳುವ ದಾಳದ `ಆಟಗಾರ’ನಾಗಿ, ಅದನ್ನು ಓದಿ ಕಿರಿಕಿರಿ ಅ೦ತಾ ಅನಿಸುವವರಿಗೆ `ಕಿರಿಕ್ ವ್ಯಕ್ತಿಯಾಗಿ. . . . ಹೀಗೆ ನಾನು, ನಾನಾ ಹೆಸರು, ವೇಷ ಧರಿಸಿ ನಿಮ್ಮ ಸ೦ಚಾರಿ ದೂರವಾಣಿಯ ಜೊತೆ ಅ೦ದು ಸೇರಿ ಕುಳಿತುಬಿಡುತ್ತೇನೆ. ಮತ್ತಷ್ಟು ಓದು 
ಕನ್ನಡಿಗನ ರಾಷ್ಟ್ರೀಯತ್ವಕ್ಕೆ ಹಿಂದಿ ಬೇಕಿಲ್ಲ,ಕನ್ನಡ ಮಾತ್ರ ಸಾಕು
ಕಲ್ಯಾಣ ರಾಮನ್ ಚಂದ್ರಶೇಖರನ್
*****
ಕಳೆದ ಭಾನುವಾರ, ೨೬ ಡಿಸಂಬರ್ ೨೦೧೦ ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ, ಕರ್ನಾಟಕ ಮಹಿಳಾ ಹಿಂದಿ ಸೇವಾ ಸಮಿತಿಯ ೩೭ನೇ ಘಟಿಕೋತ್ಸವದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತ “ರಾಷ್ಟ್ರ ಭಾಷೆ ಹಿಂದಿ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳು ಭಾರತದ ಏಕತೆಯ ಸಂಕೇತಗಳಿದ್ದಂತೆ” ಎಂದು ತಿಳಿಸಿರುತ್ತಾರೆ(ವಿಜಯ ಕರ್ನಾಟಕ ಸುದ್ಧಿ ೨೭/೧೨/೨೦೧೦, ಪುಟ ೧೧).
ಮೊದಲಿಗೆ ಹಿಂದಿ ಭಾರತದ ರಾಷ್ಟ್ರ ಭಾಷೆ ಅಲ್ಲ. ಹಾಗೆಂದು ನಮ್ಮ ಸಂವಿಧಾನದಲ್ಲಿ ಎಲ್ಲೂ ನಮೂದಾಗಿಲ್ಲ. ಅರಿವು-ತಿಳಿವುಳ್ಳ ಕಾಯ್ಕಿಣಿಯಂತಹವರೇ, ಹಿಂದಿ ನಮ್ಮ ರಾಷ್ಟ್ರ ಭಾಷೆ ಎಂಬ ತಪ್ಪು ಅಭಿಪ್ರಾಯ ಹೊಂದಿರುವಾಗ ಇನ್ನು ಜನ ಸಾಮಾನ್ಯರ ಆಭಿಪ್ರಾಯದ ಕುರಿತಾಗಿ ಹೇಳುವುದೇನಿದೆ? ಇದು ಈ ಹಿಂದಿ ಸೇವಾ ಸಮಿತಿಗಳು, ತಮ್ಮ ಪ್ರಚಾರಕ್ಕಾಗಿ ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಬಿಂಬಿಸುತ್ತಿರುವ ಪರಿಯನ್ನು ಎತ್ತಿ ತೋರಿಸುತ್ತಿದೆ ಮತ್ತು ಜನಸಾಮಾನ್ಯರಲ್ಲಿ, ಹಿಂದಿ ಭಾರತದ ರಾಷ್ಟ್ರ ಭಾಷೆ, ಹಿಂದಿ ಬಲ್ಲವ ಮಾತ್ರ ರಾಷ್ಟ್ರ ಭಕ್ತಿ ಹೊಂದಿರಲು ಸಾಧ್ಯ , ಇಡೀ ಭಾರತದ ಸಂಸ್ಕೃತಿಯೆಂದರೆ ಕೇವಲ ಹಿಂದಿ ಸಂಸ್ಕೃತಿ ಮಾತ್ರ, ಹಿಂದಿ ಬಲ್ಲವನಿಗೆ ಮಾತ್ರ ಸರ್ಕಾರದ ಎಲ್ಲಾ ಉದ್ಯಮಗಳಲ್ಲಿ ಕೆಲಸ ಲಭ್ಯ, ಹಿಂದಿಯನ್ನು ಕಲಿತು ಇಡೀ ಭಾರತವನ್ನು ಸುತ್ತಾಡಿ ಎಲ್ಲವನ್ನು ಗ್ರಹಿಸಿ, ಎಲ್ಲರೊಂದಿಗೆ ಐಕ್ಯತೆಯನ್ನು ಸಾಧಿಸಿಬಿಡಬಹುದು ಮತ್ತು ಹಿಂದಿ ಬಾರದಿರುವುದೇ ನಮ್ಮ ಜನಪ್ರತಿನಿಧಿಗಳಿಗೆ ರಾಷ್ಟ್ರ ವರ್ಚಸ್ಸು ಗಳಿಸಲು ಸಾಧ್ಯವಾಗದಿರುವ ಕಾರಣ ಎಂಬ ಕಲ್ಪನೆ – ಭ್ರಮೆಯನ್ನು ಆಳವಾಗಿ ಬಿತ್ತಿದೆ. ವಾಸ್ತವವೆಂದರೆ ಭಾರತದೆಲ್ಲೆಡೆ ಹಿಂದಿಯ ಪ್ರತಿಪಾದನೆ ಕೇವಲ ಹಿಂದಿ ಭಾಷಿಕರಿಗೆ/ಪ್ರದೇಶಗಳಿಗೆ ಮಾತ್ರ ಒಲಿದಿರುವ ವರದಾನವಾಗಿ ಪರಿಣಮಿಸಿದೆ ಮತ್ತು ಹಿಂದಿ ಭಾಷಿಕರು ತಾವು ನೆಲಸಲು ಬರುವ ಪ್ರದೇಶಗಳ ಭಾಷೆಯನ್ನು ಕಡೆಗಣಿಸಲು ಮತ್ತು ಅಸಡ್ಡೆ ತೋರಲು ಪರೋಕ್ಷವಾಗಿ ಸಹಕಾರಿಯಾಗಿದೆ. ಮತ್ತಷ್ಟು ಓದು 
ತುಕ್ರ ಬೆಂಗಳೂರಿಗೆ ಹೋದದ್ದು..
ಕಿಟಕಿಯ ಕಡೆಯಿಂದ ಬೀಸುವ ಚಳಿಗಾಳಿಗೆ ಕಬ್ಬಿಣವೂ ಮಂಜುಗಡ್ಡೆಯಾಗಿತ್ತು. `ಏನು ಚಳಿ ದೇವ್ರೆ’ ಅಂತ ಗೊಣಗುತ್ತ ತಣ್ಣಗಿನ ರೈಲಿನ ಕಬ್ಬಿಣದ ಸೀಟ್ ಮೇಲೆ ಮಲಗಲಾರದೇ ತುಕ್ರ ಎದ್ದು ಕುಳಿತುಕೊಂಡ. ಕಿಸೆಯಿಂದ ಬೆಲ್ಟ್ ತುಂಡಾಗಿರುವ ಟೈಟಾನ್ ಕಂಪನಿಯ ವಾಚ್ ತೆರೆದು ಗಂಟೆ ನೋಡಿಕೊಂಡ. ಇನ್ನೂ ಆರೂವರೆಯಷ್ಟೇ. ಏಳುವರೆಗೆ ಮೆಜೆಸ್ಟಿಕ್ಗೆ ತಲುಪುವುದಾಗಿ ಆತನಿಗೆ ಗೊತ್ತಿತ್ತು. ಈ ಚಳಿಯಲ್ಲಿ ಜನ ಹೇಗೆ ಬದುಕುತ್ತಾರಪ್ಪ ಅಂದುಕೊಳ್ಳುತ್ತ ರೈಲಿನ ಬಾಗಿಲ ಬಳಿ ಕುಳಿತುಕೊಂಡು ಒಂದು ಬೀಡಿಗೆ ಬೆಂಕಿ ಹಚ್ಚಿದ. ಒಳಗೆ ಹೊಗೆ ಪ್ರವೇಶಿಸಿದಾಗ ಮೈ ಒಂದಿಷ್ಟು ಬಿಸಿಯಾಗಿ ಹಾಯೆನಿಸಿತ್ತು. `ಸಾಬ್ ಬೀಡಿ’ ಅಂತ ಮುದುಕನೊಬ್ಬ ಇವನ ಪಕ್ಕ ಕುಳಿತುಕೊಂಡಾಗ ಅವನಿಗೂ ಒಂದು ತೆಗೆದುಕೊಟ್ಟ. ಆತ ಸಹ ಬಾಗಿಲ ಪಕ್ಕದಲ್ಲಿ ಇವನಿಗೆ ಒರಗಿ ಕುಳಿತ. ಸ್ವಲ್ಪ ಸಮಯವಾದಗ ಒಂದಿಷ್ಟು ತೂಕಡಿಕೆ ಬಂದಂತಾಗಿ ಅಲ್ಲಿಂದ ಎದ್ದು ಬಂದ ತುಕ್ರ ಸೀಟ್ನಲ್ಲಿ ಕುಳಿತುಕೊಂಡ.
****
ದಿನಾ ಕುಡಿದು ಬರುವುದನ್ನು ತುಕ್ರಾನ ಹೆಂಡತಿ ಕಮಲ ಆಕ್ಷೇಪಿಸುತ್ತಿದ್ದಳು. ಇದೇ ಕಾರಣಕ್ಕೆ ದಿನನಿತ್ಯ ಸಣ್ಣಪುಟ್ಟ ಜಗಳವೂ ಆಗುತ್ತಿತ್ತು. ನಿನ್ನೆ ರಾತ್ರಿ ಹೆಂಡತಿ ಏನೋ ಹೇಳಿದ್ದು ಇವನ ಪಿತ್ತವನ್ನು ನೆತ್ತಿಗೇರಿಸಿತ್ತು. ನೀನು ಒಬ್ಬಳೇ ಇಲ್ಲಿರು. ನಾನು ಮಗನಲ್ಲಿಗೆ ಹೋಗ್ತಿನಿ ಅಂದಾಗ ಕಮಲ ಮೊದಲು ಕುಡಿದ ಅಮಲಿಗೆ ಹೇಳುತ್ತಿದ್ದಾನೆ ಅಂದುಕೊಂಡಳು. ಕ್ವಿಂಟಾಲ್ ಅಕ್ಕಿ ತರಲೆಂದು ಕಪಾಟ್ನಲ್ಲಿಟ್ಟಿದ್ದ ಒಂದು ಸಾವಿರ ರೂಪಾಯಿಯನ್ನು ಕಿಸೆಗೆ ಹಾಕಿಕೊಂಡು ಅಂಗಿ ಹಾಕಿದಾಗ ಕಮಲ ಕಳವಳಗೊಂಡು ಕ್ಷಮೆ ಕೇಳಿದರೂ ತುಕ್ರ ಹಠ ಬಿಡಲಿಲ್ಲ. ಯಾಕೋ ಎಂದು ನೋಡಿರದ ಬೆಂಗಳೂರು ಕುಡಿದ ಅಮಲಿನಲ್ಲಿ ತುಕ್ರನಿಗೆ ಸುಂದರವಾಗಿ ಕಾಣಿಸಿತ್ತು. ಮತ್ತೆ ಒಂದಿಷ್ಟು ಜಗಳ ಮಾಡಿ ಸೀದಾ ಪುತ್ತೂರು ರೈಲ್ವೆ ಸ್ಟೇಷನ್ಗೆ ಬಂದಿದ್ದ. ಸ್ಟೇಷನ್ವರೆಗೆ ಹೂವಿನ ಅಂಗಡಿಯ ಗಡಂಗ್ ಗೆಳೆಯ ನಾರಾಯಣನನ್ನು ಕರೆದುಕೊಂಡು ಹೋಗಿದ್ದ.
**** ಮತ್ತಷ್ಟು ಓದು 
ಕೃಷ್ಣಾ ತೀರ್ಪು:100 ಟಿ.ಎಂ.ಸಿ ನೀರು ಸುಮ್ಮನೆ ಬಿಟ್ಟು ಬಿಡುವುದಕ್ಕೆ ಅದೇನು 100 ಬಕೆಟ್ ನೀರಲ್ಲ..!
ಚೇತನ್ ಜೀರಾಳ್
ನಾಲ್ಕು ದಶಕಗಳ ಸುಧೀರ್ಘ ಹೋರಾಟದ ನಂತರ ಕೃಷ್ಣ ನದಿ ನೀರು ಹಂಚಿಕೆಯ ತೀರ್ಪು ಹೊರಬಿದ್ದಿದೆ. ಮೇಲ್ನೋಟಕ್ಕೆ ನಮಗೆ ಸಂಪೂರ್ಣ ನ್ಯಾಯ ದಕ್ಕಿದೆ ಅಂತ ಅನ್ನಿಸಿದರೂ ಸಹ ಕೆಲವು ಪ್ರಮುಖ ವಿಷಯಗಳಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲವೇನೋ ಅನ್ನಿಸುತ್ತದೆ. ಇದುವರೆಗೂ ಮಾಧ್ಯಮಗಳು ಹಾಗೂ ಅಂತರ್ಜಾಲದಲ್ಲಿ ದೊರಕಿರುವ ಮಾಹಿತಿಯ ಪ್ರಕಾರ,ಸ್ಕೀಮ್ ಬಿಯಲ್ಲಿ ಒಟ್ಟು ಲಭ್ಯವಿರುವ 448 ಟಿ.ಎಂ.ಸಿ ನೀರಿನ ಹಂಚಿಕೆಯ ವಿವರಗಳು ಇಂತಿದೆ: ಮಹಾರಾಷ್ಟ್ರಕ್ಕೆ 81 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ, ಕರ್ನಾಟಕಕ್ಕೆ 177 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ ಹಾಗೂ ಆಂಧ್ರ ಪ್ರದೇಶಕ್ಕೆ 190 ಟಿ.ಎಂ.ಸಿ ಯಷ್ಟು ನೀರನ್ನು ಹಂಚಲಾಗಿದೆ.
ಇದರ ಜೊತೆಗೆ ರಾಜ್ಯದ ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 519 ಮೀಟರ್ ನಿಂದ 524.26 ಮೀಟರ್ ವರೆಗೆ ಏರಿಸಲು ಇದ್ದ ಅಡಚಣೆಯನ್ನು ನಿವಾರಿಸಿ ನ್ಯಾಯಾಧಿಕರಣ ಅವಕಾಶ ನೀಡಿದೆ. ಕೃಷ್ಣ ನದಿಯ ಒಟ್ಟು ನೀರು ಹಂಚಿಕೆಯಲ್ಲಿ ಕರ್ನಾಟಕದ ಪಾಲಿಗೆ 911 ಟಿ.ಎಂ.ಸಿ ನೀರು ಸಿಕ್ಕಿದೆ, ಮಹಾರಾಷ್ಟ್ರದ ಪಾಲಿಗೆ 666 ಟಿ.ಎಂ.ಸಿ ಹಾಗೂ ಆಂಧ್ರ ಪ್ರದೇಶಕ್ಕೆ 1001 ಟಿ.ಎಂ.ಸಿ ನೀರು ಸಿಕ್ಕಿದೆ. ಇದರ ಜೊತೆಗೆ ಕರ್ನಾಟಕ ಪ್ರತಿ ವರ್ಷ ಜೂನ್-ಜುಲೈ ತಿಂಗಳಿನಲ್ಲಿ 8-10 ಟಿ.ಎಂ.ಸಿ ನೀರು ಆಂಧ್ರಕ್ಕೆ ಬಿಡಬೇಕು ಎಂದು ತೀರ್ಪು ನೀಡಿದೆ. ಹಾಗದರೆ ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ???
ರಾಜ್ಯಕ್ಕೆ ಅನ್ಯಾಯವಾಗಿರುವುದೆಲ್ಲಿ?
ಮೊದಲನೆಯದಾಗಿ ಬಚಾವತ್ ಆಯೋಗ ತನ್ನ ತೀರ್ಪಿನಲ್ಲಿ ಕೃಷ್ಣಾ ನದಿಯ ಕೊಳ್ಳದಲ್ಲಿ ಲಭ್ಯವಿರುವ ಹೆಚ್ಚುವರಿ ನೀರನ್ನು ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಕ್ಕೆ ಕ್ರಮವಾಗಿ 50%, 25% ಹಾಗೂ 25% ಹಂಚಬೇಕು ಎಂದು ತೀರ್ಪು ನೀಡಿತ್ತು. ಆದರೆ ಬಂದಿರುವ ತೀರ್ಪಿನಲ್ಲಿ ಕರ್ನಾಟಕಕ್ಕೆ ಬರಬೇಕಾಗಿದ್ದ 50% ನೀರಿನ ಬದಲು ಸಿಕ್ಕಿರುವುದು ಕೇವಲ 39.5% ನಷ್ಟು ಮಾತ್ರ. ಆಂಧ್ರಕ್ಕೆ ಸಿಗಬೇಕಾಗಿದ್ದ 25% ಬದಲು ಇಂದು ಸಿಕ್ಕಿರುವುದು 42.41% ಹಾಗೂ ಮಹಾರಾಷ್ಟ್ರಕ್ಕೆ ಸಿಗಬೇಕಾಗಿದ್ದ 25% ನಲ್ಲಿ ಸಿಕ್ಕಿರುವುದು ಕೇವಲ 18.08% ಮಾತ್ರ. ಕರ್ನಾಟಕ ತನ್ನ ಪಾಲಿಗೆ ಬರಬೇಕಾಗಿದ್ದ ಸುಮಾರು 100 ಟಿ.ಎಂ.ಸಿ ಯಷ್ಟು ನೀರನ್ನು ಕಳೆದುಕೊಂಡಿದೆ. ಮತ್ತಷ್ಟು ಓದು 
ಪ್ರೀತಿಯ ಹಚ್ಚಿಕೊಂಡಿರೋ ಹುಚ್ಚು ಹುಡುಗರಿಗೆ
ಶ್ರೀಕಾಂತ್.ಎನ್.ಎಸ್, ಬೆಂಗಳೂರು
ನಮ್ಮ ನಡುವಿನ, ಈಗಿನ ಹೆಣ್ಣು ಮಕ್ಕಳ ನೆನೆದರೆ ಕಣ್ಣ ಮುಂದೆ ಬರುವುದು ಜೀನ್ಸು, ಹೈ ಹೀಲ್ಸು, ಬಳುಕುವ ನಡಿಗೆ. ಇದೆಲ್ಲದರ ಸಂಗಮವೇ, ಹುಡುಗರ ಹರಿದಿರೋ ಜೇಬು! ಒಬ್ಬ ಹುಡುಗಿ ಬಂದು ತನ್ನನ್ನು ಮಾತಾಡಿಸುತ್ತಿದ್ದಂತೆಯೇ ಹುಡುಗರಿಗೆ ಎಲ್ಲಿಲ್ಲದ ರೋಮಾಂಚನ, ಆನಂದ. ತಮ್ಮದೇ ಆದ ಲೋಕಕ್ಕೆ ಹೋಗಿಬಿಡುತ್ತಾರೆ. ಅದೇ ಗುಂಗಿನಲ್ಲಿ ಒಂದಿಷ್ಟು ಪ್ರೇಮಕಥೆಗಳು ಅವರ ಮನಸ್ಸಿನಲ್ಲಿ ಹಾದುಹೋಗುತ್ತವೆ. ಹೀಗೆ ಪ್ರೀತಿ ಅಪ್ಪಳಿಸಿದ ನಾವೆಯಾಗಿ ಅವರು ತಮ್ಮ ಸ್ವಂತಿಕೆಯನ್ನು ಮರೆಯುತ್ತಾ ಅವನತಿಯ ಹಾದಿಯನ್ನು ಹಿಡಿಯುತ್ತಾರೆ. ಇಷ್ಟೆಲ್ಲಾ ಪ್ರೀತಿ ತುಂಬಿದ ಹುಡುಗಾಟದ ಹುಡುಗರ ಮನಸ್ಸಿನ ಚೀತ್ಕಾರಕ್ಕೆ ವರವಾಗಿ ಸಿಗುವುದು, ಹುಡುಗಿಯಿಂದ ಪಾತಾಳಕ್ಕೆ ಹೆದ್ದಾರಿ, ಅವರಿವರಿಂದ ಛೀಮಾರಿ!
ಹುಡುಗಿ ಹುಡುಗನ ಹಿಂದೆ ಹೋದ್ರೆ,
ಅವಳು ಅವನ ಅತಿಥಿ,
ಹುಡುಗ ಹುಡುಗಿ ಹಿಂದೆ ಹೋದ್ರೆ
ಅವತ್ತೇ ಅವನ ತಿಥಿ. ಮತ್ತಷ್ಟು ಓದು 
ಆಲದ ಮರ ಮತ್ತು ಅತೃಪ್ತ ಆತ್ಮಗಳು
ಸಂತೋಷ್ ಆಚಾರ್ಯ
ಮನೆಯ ಕಾಂಪೌಂಡಿನಿಂದ ಸುಮಾರು ಐವತ್ತು ಮೀಟರ್ ದೂರದಲ್ಲಿದ್ದ ಆಲದ ಮರದಲ್ಲಿ ಭೂತವಿತ್ತು ಎಂಬುದು ಅಜ್ಜಿ ಕಲಿಸಿಕೊಟ್ಟ ಸಂಗತಿ. ಆಗ ಭೂತವೆಂದರೆ ಬಿಳಿ ಸೀರೆಯನ್ನುಟ್ಟ ಮಹಿಳೆ ಎಂದೆನಿಸುತ್ತಿದ್ದೆ. ವಿಶಾಲವಾಗಿದ್ದ ಆ ಮರದ ಯಾವುದೋ ಕೊಂಬೆಯಲ್ಲಿ ರಾತ್ರಿ ಬಂದು ನೇತಾಡುತ್ತಿರಬಹುದು ಎಂದು ನನ್ನ ಊಹೆಯಾಗಿತ್ತು. ಅದು ನಾನು ಓದುತ್ತಿದ್ದ ಪುಸ್ತಕಗಳ ಮಹಿಮೆಯೋ ಟಿವಿಯ ಮಹಿಮೆಯೋ ಅಥವಾ ಅಜ್ಜಿಯ ಮಹಿಮೆಯೋ ಭೂತವೆಂದರೆ ಹೀಗೆಯೇ ಇರತ್ತೆ ಎಂದು ನಾನು ಅಂದುಕೊಂಡಿದ್ದೆ. ಅದರ ಮೇಲೆ ಮನೆಯ ಹಿಂದಿನ ಬ್ರಾಹ್ಮಣರ ತಂದೆಯ ಶವವನ್ನೂ ಅಲ್ಲೇ ಸುಟ್ಟಿದ್ದು ಅವರ ಭೂತ ಕೂಡ ಅಲ್ಲಿ ಸೇರಿರಬಹುದು ಎಂದು ನನ್ನ ಶಂಕೆಯಾಗಿತ್ತು. ಪುರುಷರೂ ಸತ್ತ ನಂತರ ಭೂತವಾಗುತ್ತಾರೆ. ಸೊಳ್ಳೆಗಳಂತೆ ಅವು ತೊಂದರೆ ಮಾಡುವುದಿಲ್ಲ ಎಂದು ನನ್ನ ಅನಿಸಿಕೆಯಾಗಿತ್ತು. ಒಟ್ಟಾರೆ ಸತ್ತ ಬಳಿಕ ಎಲ್ಲರೂ ಭೂತವಾಗುತ್ತಾರೆ ಮತ್ತು ಆ ಮರದಲ್ಲಿ ಜೋತು ಬೀಳುತ್ತಾರೆ ಎಂದು ಅಂದುಕೊಂಡಿದ್ದೆ. ನನ್ನ ಎಷ್ಟೋ ಟೆನ್ನಿಸ್ ಬಾಲುಗಳು ಆ ಮರದ ಕೆಳಗಿದ್ದ ಪೊದೆಗಳಲ್ಲಿ ಮರೆಯಾಗಿತ್ತು. ಹುಡುಕುವ ಧೈರ್ಯ ಯಾವತ್ತೂ ಮಾಡಿರಲಿಲ್ಲ. ಆದರೆ ಕ್ರಮೇಣ ಚಿಂತನೆಗಳು ಬದಲಾದಂತೆ ಇದೆಲ್ಲಾ ನಗಣ್ಯವಾಗಿದ್ದು ಬೇರೆ ಮಾತು. ಮತ್ತಷ್ಟು ಓದು 
ABVP ಸಮಾವೇಶಕ್ಕೆ ಹಿಂದಿ ಬ್ಯಾನರ್ ಯಾಕೆ?
ವಸಂತ ಶೆಟ್ಟಿ
ಮೊನ್ನೆ ಬಸವನಗುಡಿಯ ಟಾಗೋರ್ ಸರ್ಕಲ್ ಬಳಿ ಹೋಗುವಾಗ ಈ ಬ್ಯಾನರ್ ಕಂಡಿತು. ಇದೇನಪ್ಪ ಇದು ಅಂತ ನೋಡಿದ್ರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ABVP ಯವರ ಯಾವುದೋ ವಿಧ್ಯಾರ್ಥಿ ಸಮಾವೇಶದ ಬ್ಯಾನರ್, ಅದು ಪೂರ್ತಿ ಹಿಂದಿಯಲ್ಲಿ !!. ಅಲ್ಲಲ್ಲಿ…
ಮೊನ್ನೆ ಬಸವನಗುಡಿಯ ಟಾಗೋರ್ ಸರ್ಕಲ್ ಬಳಿ ಹೋಗುವಾಗ ಈ ಬ್ಯಾನರ್ ಕಂಡಿತು. ಇದೇನಪ್ಪ ಇದು ಅಂತ ನೋಡಿದ್ರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ABVP ಯವರ ಯಾವುದೋ ವಿಧ್ಯಾರ್ಥಿ ಸಮಾವೇಶದ ಬ್ಯಾನರ್, ಅದು ಪೂರ್ತಿ ಹಿಂದಿಯಲ್ಲಿ !!. ಅಲ್ಲಲ್ಲಿ ಕನ್ನಡದಲ್ಲೂ ಬ್ಯಾನರ್ ಕಂಡಿದ್ದೆ, ಆದರೆ ಕರ್ನಾಟಕದಲ್ಲಿ ಹಿಂದಿ ಬ್ಯಾನರ್ ಯಾವ ಪುರುಷಾರ್ಥಕ್ಕಾಗಿ ಹಾಕಿದ್ದಾರೆ ಅಂತ ಗೊತ್ತಾಗಲಿಲ್ಲ. ಮತ್ತಷ್ಟು ಓದು 
ಭೈರಪ್ಪ ಎಂಬ STAR WRITER

USB ಡ್ರೈವ್ ನಲ್ಲಿ ಲಿನಕ್ಸ್
ಓಂಶಿವಪ್ರಕಾಶ್ ಎಚ್. ಎಲ್
ಹೊಸದಾಗಿ ಲಿನಕ್ಸ್ ಬಳಸಬೇಕು ಅಂತಿರೋರು, ಹೊಸ ಹೊಸ ಗ್ನು/ಲಿನಕ್ಸ್ ಆವೃತ್ತಿಗಳನ್ನು ಟೆಸ್ಟ ಮಾಡಿನೋಡ್ಬೇಕು ಅಂತಿರೋ ನನ್ನಂತಹವರು ಪ್ರತಿ ಭಾರಿಯೂ ಲಿನಕ್ಸ್ ಅನ್ನು ನಮ್ಮ ಲ್ಯಾಪ್ಟಾಪ್ ಗಳಲ್ಲಿ ಅಥವಾ ಡೆಸ್ಕಾಪ್ ಗಳಲ್ಲಿ ಪುನ: ಪುನ: ಇನ್ಸ್ಟಾಲ್ ಮಾಡ್ಕೊಳ್ಳಿಕ್ಕೆ ಇಷ್ಟ ಪಡಲ್ಲ. ಹಾಗಿದ್ರೆ ಅದನ್ನ ಬಳಸೋದಾದ್ರೂ ಹ್ಯಾಗೆ?
ವರ್ಚುಅಲ್ ಬಾಕ್ಸ್ – ತಂತ್ರಜ್ಞಾನ ಕುರಿತಾದ ಲೇಖನಗಳನ್ನು ನೀವು ಓದ್ತಿದ್ರೆ ಇಷ್ಟೋತ್ತಿಗಾಗಲೇ ಇದರ ಹೆಸರು ನಿಮ್ಮ ಬಾಯಿಂದ ಹೊರಡಿರಬೇಕು. ಹೊಸಬರಿಗೆ ಅದೂ ಸ್ವಲ್ಪ ಕಿರಿ ಕಿರಿ ಅನ್ನಿಸ್ಬಹುದು. ಹಾಗಿದ್ರೆ ಅಂತವರಿಗೆಲ್ಲ ಗು/ಲಿನಕ್ಸ್ ನ ಔತಣವನ್ನ ಹೇಗೆ ಬಡಿಸೋದು ಅನ್ನೊದು ಮುಂದಿನ ಪ್ರಶ್ನೆ.
ಇದಕ್ಕೆ ಒಂದು ಉತ್ತರ ಹೇಳ್ತೀರಾ?
-> ಲೈವ್ ಸಿ.ಡಿ ಉಪಯೋಗಿಸ್ಬಹುದಲ್ವಾ?
ಟೆಕ್ ತಂಡ ಹೊರತಂದ ಡೆಬಿಯನ್ ಚಿಗುರು ಕೂಡಾ ಲೈವ್ ಸಿ.ಡಿ ಯೇ. ನಿಮ್ಮ ಕಂಪ್ಯೂಟರ್ ಅನ್ನು ಸಿ.ಡಿ ಯಲ್ಲಿ ಬೂಟ್ ಮಾಡಿದರಾಯಿತು. ಮತ್ತಷ್ಟು ಓದು 










