ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು, ಒಂದು ತಲೆಕೆಟ್ಟ ನಿರ್ಧಾರ ಸಾಕು||
– ರಾಘವೇಂದ್ರ ನಾವಡ
ಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅಂತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತಃಕಲಹ, ಅಹಂಕಾರ ಮುಂತಾದವುಗಳಿಂದ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ, ತನ್ನ ಮೇರು ಪ್ರಭೃತಿ ದೇವೇಗೌಡರು ತೆಗೆದುಕೊಂಡ ಒಂದು ಚಾಣಾಕ್ಷತನದ ನಿರ್ಧಾರದಿಂದ ಕುಂಭಕರ್ಣ ನಿದ್ರೆಯಿಂದ ದಢಾಲ್ಲನೆ ಎದ್ದರೆ, ಯಡಿಯೂರಪ್ಪನವರ ನಾಯಕತ್ವದಲ್ಲಿ ಸ್ವಲ್ಪ-ಸ್ವಲ್ಪವೇ ಮೇಲೇಳುತ್ತಿದ್ದ (ಇಲ್ಲಿಯೂ ಅಂತಃ ಕಲಹವಿದೆ. ಆದರೆ ನಾಯಕರು ಸ್ವಲ್ಪ ಚುರುಕಾಗಿದ್ದರು) ರಾಜ್ಯ ಭಾಜಪಾ, ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆದಿದ್ದ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸುವುದರ ಮೂಲಕ ಮಕಾಡೆ ಮಲಗಿತು!! ಒಬ್ಬರು ಫೀನಿಕ್ಸ್ ನಂತೆ ಎದ್ದರೆ ಮತ್ತೊಬ್ಬರು ಶವದಂತೆ ಬಿದ್ದರು!! ಮತ್ತಷ್ಟು ಓದು 
ನಾನು – ನನ್ನದು
-ಗೀತಾ ಹೆಗ್ಡೆ
ಪ್ರತಿಯೊಬ್ಬರ ಮನದಲ್ಲೂ ಅಡಗಿಕೊಂಡಿರುವ ಆತ್ಮಾಭಿಮಾನವೊ ಅಥವಾ ನನ್ನದು ಅನ್ನುವ ಅಹಂಕಾರವೊ ಗೊತ್ತಿಲ್ಲ. ಆದರೆ ಯಾವುದು ನನ್ನದು ಎಂಬ ಭ್ರಮೆ ಎಲ್ಲಿಯವರೆಗೆ ನಮ್ಮ ಮನಸ್ಸಿನಲ್ಲಿ ಮನೆ ಮಾಡಿರುತ್ತೋ ಅಲ್ಲಿಯವರೆಗೆ ಅದರ ಹುಳುಕು ನಮಗೆ ಗೊತ್ತಾಗೋದೆ ಇಲ್ಲ. ಒಂದಾ ಶಾಂತವಾಗಿ ಕುಳಿತು ಯಾವ ತಾರತಮ್ಯವಿಲ್ಲದೆ ವಿಮರ್ಷಿಸುವ ಬುದ್ಧಿ ಹೊಂದಿರಬೇಕು. ಇಲ್ಲಾ ಬೇರೆಯವರು ಬೊಟ್ಟು ಮಾಡಿ ತೋರಿಸಿದಾಗ ಇದು ಸರಿಯಿಲ್ಲ ಅಥವಾ ನಿನ್ನಲ್ಲಿ ದೋಷವಿದೆ ಎಂದೆನ್ನುವ ಮಾತು ಕೇಳಿಸಿಕೊಂಡು ಅರ್ಥ ಮಾಡಿಕೊಳ್ಳುವ ಒಳ್ಳೆಯ ಮನಸ್ಸಿರಬೇಕು. ನಮ್ಮನ್ನು ಉತ್ತುಂಗದತ್ತ ಏರಲು ಹಾಕಿ ಕೊಟ್ಟ ಮೆಟ್ಟಿಲು ಎಂದು ಭಾವಿಸಬೇಕು. ಇನ್ನೂ ಹೆಚ್ಚಿನ ಉತ್ಸಾಹದಲ್ಲಿ ಗುರಿ ಮುಟ್ಟುವತ್ತ ನಮ್ಮ ನಡೆ ಬದಲಾಯಿಸಿಕೊಳ್ಳಬೇಕು. ಇವ್ಯಾವುದೂ ಇಲ್ಲದ ಜನರು ” ನಾನು, ಇದು ನನ್ನದು, ಯಾವೋನಾದರೂ ಬೊಟ್ಟು ಮಾಡಿ ತೋರಿಸಲಿ ನೋಡ್ತೀನಿ” ಅನ್ನುವ ಮೂರ್ಖತನದ ಮಾತು ಹೇಳುತ್ತಿರುತ್ತಾರೆ. ಆದರೆ ಈ ನಡೆ ಒಳ್ಳೆಯ ನಡೆಯಲ್ಲ; ಇದು ಖಂಡಿತಾ ನಮ್ಮನ್ನು ಅದಃಪತನಕ್ಕೆ ಕರೆದೊಯ್ಯುತ್ತದೆ. ಕೊನೆಯಲ್ಲಿ ಪಶ್ಚಾತ್ತಾಪವೇ ಕಟ್ಟಿಟ್ಟ ಬುತ್ತಿ. ಮತ್ತಷ್ಟು ಓದು 
ಮದ್ದರೆಯದಿದ್ದರೆ ಈ ಮಾವೋವ್ಯಾಧಿ ನಿದ್ದೆಗೆಡಿಸಲಿದೆ ಎಚ್ಚರ!
– ರೋಹಿತ್ ಚಕ್ರತೀರ್ಥ
ಎರಡು ಸುದ್ದಿಗಳಿವೆ. ಒಂದು – ಉರಿ ಸೇನಾನೆಲೆಯ ಮೇಲೆ ನಾಲ್ಕು ಮಂದಿ ಮುಸ್ಲಿಂ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 17 ಸೈನಿಕರು ಹತರಾಗಿದ್ದಾರೆ. ಎರಡು – ಭಾರತದ ನಕ್ಸಲ್ ಉಗ್ರರು ಜಗತ್ತಿನ ಭಯೋತ್ಪಾದನೆಯ ಪಟ್ಟಿಯಲ್ಲಿ ಕಂಚಿನ ಪದಕವನ್ನು ಜಸ್ಟ್ ಮಿಸ್ ಮಾಡಿಕೊಂಡು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಇವೆರಡರಲ್ಲಿ, ನಕ್ಸಲರ ಸಮಸ್ಯೆಯೇ ದೊಡ್ಡದು ಅನಿಸಿದ್ದರಿಂದ ಅದನ್ನು ಈ ವಾರದ ಅಂಕಣಕ್ಕೆ ಆಯ್ದುಕೊಂಡಿದ್ದೇನೆ. ಯಾಕೆಂದರೆ ಹೊರಗಿನ ಶತ್ರುಗಳನ್ನು ಪ್ರತಿದಾಳಿ ಮಾಡಿಯೋ ಯುದ್ಧ ಘೊಷಿಸಿಯೋ ತಹಬದಿಗೆ ತರಬಹುದೆನ್ನೋಣ; ಆದರೆ, ತಾಯ್ನಾಡಿನ ಒಳಗೇ ಇದ್ದುಕೊಂಡು ಒರಲೆಯಂತೆ ದೇಶವನ್ನು ಕೊರೆದು ಪುಡಿಗುಟ್ಟುವ ಆಂತರಿಕ ಶತ್ರುಗಳನ್ನು ಬಗ್ಗುಬಡಿಯುವುದು ಹೇಗೆ? 2015ರಲ್ಲಿ ಭಾರತದಲ್ಲಿ ನಡೆದ 791 ಭಯೋತ್ಪಾದನಾ ಕೃತ್ಯಗಳಲ್ಲಿ 43% ಅನ್ನು ನಕ್ಸಲೈಟ್ ಸಂಘಟನೆಗಳೇ ಮಾಡಿವೆ ಎಂದು ಅಂತಾರಾಷ್ಟ್ರೀಯ ವರದಿಯೊಂದು ಹೇಳುತ್ತಿದೆ. ಒಂದೇ ವರ್ಷದಲ್ಲಿ ಇವರು ನಡೆಸಿರುವ ದಾಳಿಗಳು 343; ಇವರ ಅಟ್ಟಹಾಸಕ್ಕೆ ಬಲಿಯಾಗಿ ಶವವಾಗಿ ಮಲಗಿದ ಅಮಾಯಕರ ಸಂಖ್ಯೆ 176. 2010ರಿಂದ 2015ರವರೆಗಿನ ಅವಧಿಯಲ್ಲಿ ದೇಶದೊಳಗೆ ನಡೆದ ಭಯೋತ್ಪಾದನಾ ಕೃತ್ಯಗಳಲ್ಲಿ 2162 ನಾಗರಿಕರು, 802 ಭದ್ರತಾ ಸಿಬ್ಬಂದಿ ಹತರಾಗಿದ್ದಾರೆಂದು ಕೇಂದ್ರದ ಗೃಹಸಚಿವಾಲಯದ ವರದಿ ಹೇಳುತ್ತಿದೆ. ಜಗತ್ತಿನಲ್ಲಿ ತಾಲಿಬಾನ್, ಐಸಿಸ್ ಮತ್ತು ಬೊಕೋ ಹರಾಮ್ ಎಂಬ ಉಗ್ರಗಾಮಿ ಸಂಘಟನೆಗಳ ನಂತರದ ಸ್ಥಾನವನ್ನು ಭಾರತದ ನಕ್ಸಲ್ ಚಳವಳಿ ತನ್ನ ಮುಡಿಗೇರಿಸಿಕೊಂಡಿದೆ. ಭಾರತ ಪ್ರಪಂಚದೆದುರು ತಲೆ ತಗ್ಗಿಸುವಂಥ ವಿಚಾರವಿದು. ಕರ್ನಾಟಕದ ಸಂದರ್ಭದಲ್ಲಿ ನಕ್ಸಲೈಟ್ ಚಳವಳಿಯ ನೆಲೆ-ಬೆಲೆಗಳೇನು ಎಂಬುದನ್ನು ವಿಮರ್ಶಿಸುವುದೇ ಪ್ರಸ್ತುತ ಲೇಖನದ ಉದ್ದೇಶ. ಮತ್ತಷ್ಟು ಓದು 
ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)
ನಿಲುಮೆ ತಂಡವು, ಮಂಗಳೂರಿನಲ್ಲಿ ( 18.09.2016 ) ರಂದು ನಡೆಸಿದ ‘ಕಾಶ್ಮೀರದ ಕುರಿತು ವಿಚಾರ ಸಂಕಿರಣ’ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆಯವರ ಮಾತುಗಳನ್ನು ರೂಪಲಕ್ಷ್ಮೀಯರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..
ಚಕ್ರವರ್ತಿ ಸೂಲಿಬೆಲೆಯವರ ಭಾಷಣದ ಮುಖ್ಯಾಂಶಗಳು.
ವರ್ಷಕೊಮ್ಮೆ ನಾನು ಜಮ್ಮು, ಕಾಶ್ಮೀರಕ್ಕೆ ಹೋಗೋದ್ರಿಂದ, ಅಲ್ಲಿ ನಾನು ನೋಡಿರುವ ಆಧಾರದ ಮೇಲೆ, ನನ್ನ ವಿಚಾರಗಳನ್ನು ಹೇಳ್ತೀನಿ. ಪ್ರೊಫೆಸರ್ ಪ್ರೇಮ್ ಶೇಖರ್ ಅವರು ಆಗಲೇ ಹೇಳಿದ ಪ್ರಕಾರ, ಕಾಶ್ಮೀರದಲ್ಲಿ ಮೂರು ತರಹದ ಜನಾಂಗಗಳಿವೆ. ೧. ಹಿಂದು, ೨. ಮುಸ್ಲಿಮ್ ಮತ್ತು ೩. ಬುದ್ದಿಸ್ಟ್ – ಲಡಾಕ್ ನಲ್ಲಿರುವಂತಹವರು. ಆದರೆ ಮುಸ್ಲಿಮರು ಹೇಳೋದು – ಕಾಶ್ಮೀರದಲ್ಲಿ ನಾಲ್ಕು ತರಹದ ಜನರಿದ್ದಾರೆ. ೧. ಹಿಂದೂ, ೨. ಮುಸ್ಲಿಮ್ – ಸುನ್ನಿ ಮತ್ತು ಶಿಯಾ ೩. ಲಡಾಕ್. ಪ್ರೇಮ್ ಶೇಖರ್ ಸರ್ ಹೇಳಿದ ಹಾಗೆಯೇ ಇನ್ನು ಮುಂದೆ ಕಾರ್ಗಿಲ್ ನ ಸುದ್ಧಿಗೆ ಪಾಕಿಸ್ತಾನ್ ಬರೋಲ್ಲ. ಯಾಕೆಂದರೆ ಕಾರ್ಗಿಲ್ ನಲ್ಲಿ ಹೆಚ್ಚಾಗಿರುವ ಮುಸ್ಲಿಮರು – ಶಿಯಾ ಪಂಗಡದವರು. ಪಾಕಿಸ್ತಾನದಲ್ಲಿರುವ ಮುಸ್ಲಿಮರು – ಸುನ್ನಿ ಪಂಗಡದವರು. ಕಾಶ್ಮೀರದ ಕಣಿವೆಯಲ್ಲಿರೋ ಮುಸ್ಲಿಮರು, ಪಾಕಿಸ್ತಾನದ ಮುಸ್ಲಿಮರನ್ನು ತಮ್ಮ ಮುಸಲ್ಮಾನರು ಅಂತಂದುಕೊಳ್ತಾರೆ. ಆದರೆ ಕಾರ್ಗಿಲ್ ನ ಶಿಯಾದವರಿಗೆ ಚೆನ್ನಾಗಿ ಗೊತ್ತು. ತಾವೇನಾದರೂ ಪಾಕಿಸ್ತಾನಕ್ಕೆ ಹೋದರೆ, ಇದುವರೆವಿಗೂ ಕಣಿವೆಯಲ್ಲಾದ ಅತ್ಯಾಚಾರಗಳು, ದೌರ್ಜನ್ಯಗಳನ್ನು, ಈ ಪಾಕಿಸ್ತಾನದ ಸುನ್ನಿಗಳು ತಮ್ಮ ಮೇಲೆಯೇ ನಡೆಸುತ್ತಾರೆ. ಆ ಭಯದಿಂದ ಕಾರ್ಗಿಲ್ ನ ಮುಸ್ಲಿಮರು, ಏನೇ ಆದರೂ ನಾವು ಭಾರತದಲ್ಲೇ ಇರ್ತೀವಿ. ಪಾಕಿಸ್ತಾನಕ್ಕೆ ಸೇರೋಲ್ಲ ಅಂತಾ ಹೇಳ್ತಾರೆ. ಮತ್ತಷ್ಟು ಓದು 
ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ
– ಗುರುಪ್ರಸಾದ್ ಕೆ ಕೆ.
ಶ್ರೀಧರಭಾಮಿನಿಧಾರೆ ೧-೫
ಶ್ರೀಧರಭಾಮಿನಿಧಾರೆ ೬-೧೦
ಶ್ರೀಧರಭಾಮಿನಿಧಾರೆ ೧೧-೧೫
11)
ತಾಯ ದುಃಖವ ಮರೆಸಲಿಕೆ ತಾ
ಜೀಯ ಸಿರಿಧರ ಮರುಳು ಮಾಡುವ
ರಾಯರಳಿದಾ ದುಃಖಮರೆಸಲು ಆಡಿ ನಲಿಸುವನೂ||
ಆಯುಕಳೆಯೇ ಸಕಲರಿಂಗು ವಿ-
ಧಾಯ ಮರಣವು ಖಚಿತವಯ್ಯಾ
ಒಯ್ಯುವನು ಆ ನಿಯಮಪಾಲಕ ಯಮನು ಎಲ್ಲರನೂ||
ತಾತ್ಪರ್ಯ : ಶ್ರೀಧರರು ತಾಯಿಗೆ ಪತಿವಿಯೋಗದ ಸ್ಮರಣೆಯಿಂದ ಅಥವಾ ಇನ್ಯಾವುದೇ ಕಾರಣದಿಂದ ವಿಷಾದ ಭಾವ ಮೂಡಿದಾಗಲೆಲ್ಲ ತನ್ನ ನಾನಾ ವಿಧದ ಬಾಲಲೀಲೆಗಳಿಂದ ಸಮಾಧಾನಗೊಳಿಸುತ್ತಿದ್ದರು. ನಿಯಮಪಾಲಕ ಯಮಧರ್ಮರಾಜನ ಎದುರು ಮಾನವಮಾತ್ರರು ಏನು ತಾನೇ ಮಾಡಲು ಸಾಧ್ಯ. ಆಯಸ್ಸು ಕಳೆದಿರುವ ಎಲ್ಲ ಜೀವಜಂತುಗಳನ್ನೂ ಅವನು ಕರೆದೊಯ್ಯುತ್ತಾನೆ. ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ ೪)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಆಗಷ್ಟ್ ೩೦ ೧೭೭೩ ಇಡಿ ಪುಣೆ ಗಣೇಶ ಉತ್ಸವದ ಸಂಭ್ರಮದಲ್ಲಿ ಮುಳುಗೇಳುತ್ತಿದೆ. ಕೇಸರಿ ಗುಲಾಬಿ ರಂಗಿನೋಕುಳಿಗೆ ನಗರ ನವಶೃಂಗಾರಗೊಂಡಿದೆ. ಶನಿವಾರವಾಡೆಯಲ್ಲೂ ಉತ್ಸವ ಕಳೆಗಟ್ಟಿತ್ತು. ಹಾಡು, ಕುಣಿತ, ಕೀರ್ತನೆ,ಆರತಿ, ಸಂತರ್ಪಣೆ ಭರ್ಜರಿಯಾಗಿ ನಡೆದಿತ್ತು. ಪೇಶ್ವಾಗಳ ಆರಾಧ್ಯಮೂರ್ತಿ ಚಿಂತಾಮಣಿ ಗಣಪತಿಯ ಪೂಜೆ ಆಗಷ್ಟೆ ಮುಗಿದು ಎಲ್ಲರೂ ವರ್ಷಕ್ಕಾಗುವಷ್ಟು ಸಂಭ್ರಮವನ್ನು ಮನದಲ್ಲಿ ತುಂಬಿಕೊಂಡು ಮರಳಿದರು. ವಾಡೆಯಲ್ಲಿ ಕಾವಲು ಭಟರು ಮತ್ತು ಪರಿಚಾರಕ ವರ್ಗವನ್ನು ಬಿಟ್ಟು ಉಳಿದವರೆಲ್ಲರೂ ತಮ್ಮ ತಮ್ಮ ಸ್ವಸ್ಥಾನ ಸೇರಿಕೊಂಡಿದ್ದರು. ಮಹಾ ದುರಂತವೊಂದು ನಡೆಯುವ ಮೊದಲು ಆವರಿಸುವ ಅಸಾದ್ಯ ನೀರವತೆ ವಾಡೆಯನ್ನು ಆವರಿಸಿಕೊಂಡಿತ್ತು. ರಂಗ ಮಹಲ್ ಕಡೆಯಿಂದ ಐದಾರು ದೀವಟಿಕೆಗಳು ಒಳಪ್ರವೇಶಿಸಿದವು. ಖಿಡ್ಕಿ ದರವಾಜಾ ಬಳಿ ಎರಡು ಬಟ್ಟೆ ಸುತ್ತಿದ ಮುಖಗಳು ಗೋಚರಿಸಿದವು. ಕ್ಷಣಮಾತ್ರದಲ್ಲೇ ಶನಿವಾರವಾಡೆಯ ಹಜಾರಗಳಲ್ಲಿ ಹತ್ತಾರು ಗುಂಪುಗಳ ಹೆಜ್ಜೆಯ ಸಪ್ಪಳ ಮೊಳಗಿತು. ವಾಡೆಯ ಮುಖ್ಯದ್ವಾರದ ಬಳಿ ಐವತ್ತು ಜನರಿದ್ದ ಸೇನಾ ತುಕುಡಿಯೊಂದು ಬಂದು ನಿಂತಿತು. ಗುಂಪಿನ ನಾಯಕ ಸುಮೇರು ಸಿಂಗ್ ಕಾವಲುಗಾರನ ಬಳಿ ಬಂದು ಕೂಡಲೆ ಪೇಶ್ವಾ ಅವರನ್ನು ಕಾಣಬೇಕು ತುರ್ತು ಕೆಲಸವಿದೆ ಎಂದ. ಈಗ ಪೇಶ್ವಾ ಅವರು ನಿದ್ದೆಯಲ್ಲಿದ್ದಾರೆ. ನಾಳೆ ಬಂದು ಭೇಟಿಯಾಗಿ ಎಂದ ಮುಖ್ಯದ್ವಾರದ ರಕ್ಷಣೆಯಲ್ಲಿದ್ದ ಮಹಾದಜಿ ಗೋರೆ… ಮಾತು ಪೂರ್ಣಗೊಳ್ಳುವ ಮೊದಲೇ ಸುಮೇರು ಸಿಂಗ್ ಓರೆಯಿಂದ ಕತ್ತಿ ಹೊರಬಂದು ಗೋರೆಯ ಹೊಟ್ಟೆ ಸೀಳಿ ಹಾಕಿತು. ತುಕುಡಿಯನ್ನು ಒಳನುಗ್ಗುವಂತೆ ಸುಮೇರ್ ಆದೇಶಿಸಿದ ಕೇವಲ ಹತ್ತು ನಿಮಿಷದಲ್ಲೇ ವಾಡೆ ಸುಮೇರು ಸಿಂಗ್ ಕೈವಶವಾಯಿತು. ಆ ವಾಡೆಯ ಕೆಳ ಅಂತಸ್ತಿನಲ್ಲೇ ರಘುನಾಥ ರಾವ್, ಆನಂದಿ ಬಾಯಿ ವಾಸವಾಗಿದ್ದರು. ಸುಮೇರು ಸಿಂಗ್ ಹಿಂಬಾಲಕರು ವಾಡೆಯ ಕಾವಲಿಗಿದ್ದವರನ್ನು ತರಿದು ಹಾಕಿದರು. ಘನಘೊರ ರಕ್ತಪಾತ ನಡೆಯಿತು. ಕೆಲವೇ ಗಂಟೆಗಳ ಮೊದಲು ಚೌತಿಯ ಸಡಗರದಲ್ಲಿ ಗಿಜಿಗುಟ್ಟುತ್ತಿದ್ದ ಶನಿವಾರವಾಡೆ ಈಗ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿತ್ತು. ವಾಡೆಯ ಮೊದಲ ಅಂತಸ್ತಿನ ತೇಗದ ಮುಚ್ಚಿಗೆಗಳಿಂದ ರಕ್ತ ಒಸರ ತೊಡಗಿತು. ಸುಮೇರು ಸಿಂಗ್ ನಾರಾಯಣ ಪೇಶ್ವಾ ಮಲಗಿದ್ದ ಕೋಣೆಗೆ ನುಗ್ಗಿದ. ವಾಡೆಯಲ್ಲಿ ಆಹಾಕಾರ ಚೀತ್ಕಾರಗಳು ಎದ್ದಿರುವುದನ್ನು ಕಂಡು ನಾರಾಯಣನಿಗೆ ಪರಿಸ್ಥಿತಿಯ ಅರಿವಾಯಿತು. ಮತ್ತಷ್ಟು ಓದು 
ಸಿದ್ಧಾಂತಗಳ ಚರಿತ್ರೆ – 3 ಕಮ್ಯುನಿಸಂ: ( ಅಪ್ರಸ್ತುತ ಸಿದ್ಧಾಂತ, ಅವಾಸ್ತವಿಕ ಪರಿಹಾರ )
– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
ಕಮ್ಯುನಿಸ್ಟ್ ಚಿಂತನೆಯನ್ನು ಕಾರ್ಲ್ ಮಾರ್ಕ್ಸ್ ಪ್ರಾರಂಭಿಸಿದವನಲ್ಲ; ಆದರೆ ಅದಕ್ಕೊಂದು ಸ್ಪಷ್ಟ ರೂಪ ಕೊಟ್ಟವನು ಆತ. ಮಾರ್ಕ್ಸ್ ತೀರಿಕೊಂಡ ಮೂವತ್ತು ವರ್ಷಗಳ ನಂತರ ರಷ್ಯದಲ್ಲಿ ಕ್ರಾಂತಿಯಾಗಿ ಲೆನಿನ್ ಅಧಿಪತ್ಯ ಬಂತು. ಮಾರ್ಕ್ಸ್ ನ ಅದುವರೆಗಿನ ಅಪ್ರಕಟಿತ ಕೃತಿಗಳೆಲ್ಲ ಒಂದರ ಮೇಲೊಂದರಂತೆ ಸಾಲಾಗಿ ಪ್ರಕಟವಾಗಿ ಜಗತ್ತಿನ ಹಲವು ದೇಶಗಳಲ್ಲಿ, ಹಲವು ಯುವಕರ ಕೈಗೆ ಬಂದು, ಅವರೆಲ್ಲ ತಮ್ಮ ಸುತ್ತಲಿನ ಹಳೆಯ ವ್ಯವಸ್ಥೆಯನ್ನು ಕಿತ್ತೊಗೆಯುವ ಸಂಕಲ್ಪ ತೊಡುವಂತಾಯಿತು. 1920ರಿಂದ 1960ರವರೆಗಿನ ಅವಧಿ ಕಮ್ಯುನಿಸಂ ಮತ್ತು ಮಾಕ್ರ್ಸಿಸಂಗಳ ಉಚ್ಛ್ರಾಯಕಾಲ. ರಷ್ಯ, ಚೀನಾ, ಕೊರಿಯ, ಕಾಂಬೋಡಿಯಾ, ಜರ್ಮನಿ, ಗ್ರೇಟ್ ಬ್ರಿಟನ್, ಫ್ರಾನ್ಸ್, ಕ್ಯೂಬಾದಂಥ ಹಲವು ದೇಶಗಳು ಮಾಕ್ರ್ಸ್ ಚಿಂತನೆಯ ಪ್ರಯೋಗ ಶಾಲೆಗಳಾದವು. ಸ್ವಾತಂತ್ರ್ಯಾ ನಂತರದ ಮೊದಲ ಮೂರು ದಶಕಗಳಲ್ಲಿ ಭಾರತ ಕೈಗೊಂಡ ಹತ್ತುಹಲವು ಯೋಜನೆಗಳಲ್ಲಿ ಸೋವಿಯೆಟ್ ರಷ್ಯಾ ಪ್ರಣೀತ ಕಮ್ಯುನಿಸಂನ ದಟ್ಟ ಛಾಯೆಯಿದ್ದದ್ದು ಸುಸ್ಪಷ್ಟ. ಆದರೆ 1970ರ ನಂತರ ರಷ್ಯಾ ಹಲವು ಹೋಳುಗಳಾಗಿ ಒಡೆದುಹೋಗಿ ಶೀತಲಸಮರ ಅಘೋಷಿತ ಅಂತ್ಯ ಕಂಡಿದ್ದರಿಂದ ಕಮ್ಯುನಿಸಂ ಹಿನ್ನಡೆಯನುಭವಿಸಿತು. ಅಲ್ಲದೆ ಕಮ್ಯುನಿಸಂನ್ನು ಅಪ್ಪಿಕೊಂಡ ದೇಶಗಳೆಲ್ಲ ಸರ್ವಾಧಿಕಾರಿಗಳ ನಿಯಂತ್ರಣಕ್ಕೊಳಪಟ್ಟು ಬೃಹತ್ ಪ್ರಮಾಣದ ಹತ್ಯಾಕಾಂಡಗಳಿಗೆ ಸಾಕ್ಷಿಯಾದ್ದರಿಂದ, ಮಾರ್ಕ್ಸ್ ನ ಚಿಂತನೆಗಳ ಮೇಲಿದ್ದ ಭರವಸೆಗಳೆಲ್ಲ ಕಮರಿಹೋದವು. ಕಮ್ಯುನಿಸಂನ ಮೆಕ್ಕಾ ಎಂದೇ ಕರೆಸಿಕೊಳ್ಳುತ್ತಿದ್ದ ರಷ್ಯಾದೊಳಗಿನ ಬಡತನ, ಶೋಷಣೆ, ಸ್ವಾತಂತ್ರ್ಯಹರಣ, ಹಿಂಸಾಚಾರಗಳ ಕಟು ಕತೆಗಳು ಹೊರಜಗತ್ತಿಗೆ ತಿಳಿಯತೊಡಗಿದ್ದು 70ರ ದಶಕದ ನಂತರ; ಅದೂ ತುಣುಕು ತುಣುಕಾಗಿ. ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ 3)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಶನಿವಾರವಾಡೆಗೆ ಶನಿ ಎಡಗಾಲಿಟ್ಟು ವಕ್ಕರಿಸಿದ್ದ. ರಘುನಾಥನನ್ನು ಗೃಹಬಂಧನದಲ್ಲಿ ಇಢಲಾಗಿದ್ದರೂ, ಆತನ ದುಷ್ಟಕೂಟ ಮಾತ್ರ ಸುಮ್ಮನೆ ಕೂತಿರಲಿಲ್ಲ. ಅದು ಒಂದಲ್ಲಾ ಒಂದು ಸಂಚನ್ನು ಹೆಣೆಯುತ್ತಲೇ ಇತ್ತು. ರಘುನಾಥನ ಬಂಧನವಾದ ಕೆಲವೇ ದಿನದಲ್ಲಿ ಪೇಶ್ವಾ ಮಾಧವ ರಾವ್ ಮೇಲೆ ಮಾರಣಾಂತಿಕ ದಾಳಿ ನಡೆಯಿತು. ಮಾಧವ ರಾವ್ ಬೆಂಗಾವಲಿಗನಾಗಿದ್ದ ರಾಮಸಿಂಗ್ ಎಂಬಾತ ಮಾಧವ್ ರಾವ್ ಮೇಲೆ ಅನಿರೀಕ್ಷಿತವಾಗಿ ತಲವಾರು ಝಳಪಿಸಿದ. ಕುತ್ತಿಗೆಗೆ ಬೀಳಬೇಕಿದ್ದ ಪೆಟ್ಟು ತೋಳಿಗೆ ಬಿತ್ತು ಬದುಕಿಕೊಂಡ, ಇದರ ಹಿಂದೆ ರಘುನಾಥ ರಾವ್ ಕೈವಾಡ ಇತ್ತು ಎಂದು ಬಳಿಕ ತಿಳಿದು ಬಂತು. ಹೈದರ್ ಆಲಿಯ ವಿರುದ್ಧ ಮೂರನೇ ಯುದ್ಧಕ್ಕೆ ಮಾಧವ್ ರಾವ್ ಪೇಶ್ವಾ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಪೇಶ್ವಾ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಭಯಾನಕ ಟಿಬಿ ಖಾಯಿಲೆ ಪೇಶ್ವಾನಿಗೆ ತಟ್ಟಿತ್ತು. ಅಂದಿನ ಕಾಲಕ್ಕೆ ಅದು ಬ್ರಿಟಿಷರು ತಂದು ಬಿಟ್ಟಿದ್ದ ಹೊಸ ಖಾಯಿಲೆಯಾದ ಕಾರಣ ಇಲ್ಲಿ ಟಿಬಿಗೆ ಸರಿಯಾದ ಚಿಕಿತ್ಸೆ ಇರಲಿಲ್ಲ. ಥೇವೂರು ಚಂತಾಮಣಿ ದೇವಾಲಯದಲ್ಲಿ ಪೇಶ್ವಾ ಮಾಧವ ರಾವ ಕೊನೆಯುಸಿರೆಳೆದ. ಅಲ್ಲೇ ಆತನ ಅಂತ್ಯಸಂಸ್ಕಾರ ನಡೆಸಲಾಯಿತು. ಆತನ ಪ್ರಿಯ ಪತ್ನಿ ರಾಮಾಬಾಯಿ ಗಂಡನ ಚಿತೆಗೆ ಹಾರಿ ಪ್ರಾಣ ಬಿಟ್ಟಳು. ಮಾಧವ ರಾವ್, ಶನಿವಾರವಾಡೆಯ ಪೇಶ್ವಾ ಗದ್ದುಗೆ ಅಲಂಕರಿಸಿದ ಕೊನೆಯ ಸಮರ್ಥ ಪೇಶ್ವಾ. ಈತ ಹಲವಾರು ಸಮರ್ಥ ಸೇನಾನಿಗಳನ್ನು ಗುರುತಿಸಿ ಅವರಿಗೆ ಬೇರೆ ಬೇರೆ ವಲಯಗಳ ಅಧಿಕಾರ ನೀಡಿದ. ಇಂದು ನಾವು ರಾಜಸ್ಥಾನದಲ್ಲಿ ಕಾಣುತ್ತಿರುವ ಸಿಂಧ್ಯಾ ಮನೆತನದ ಮೂಲ ಪುರುಷ ಮಹಾದ್ ಜಿ ಸಿಂಧ್ಯಾನನ್ನು ಬೆಳೆಸಿದ್ದು ಮಾಧವರಾವ್ ಪೇಶ್ವಾ. ಕೊಲ್ಹಾಪುರದ ಭೋಸ್ಲೆಗಳು, ಬರೋಡಾದ ಗಾಯಕ್ವಾಡರು, ಉತ್ತರಭಾರತದಲ್ಲಿ ಹೋಳ್ಕರ್ಗಳು ಇವರೆಲ್ಲಾ ಮಾಧವರಾವ್ ಪೇಶ್ವಾನ ಗರಡಿಯಲ್ಲೇ ಪಳಗಿ ಪುಣೆಗೆ ನಿಷ್ಟರಾಗಿ ಆಡಳಿತ ನಡೆಸಿದರು. ಮಾಧವರಾವ್ ಪೇಶ್ವೆ ತೀರಿಕೊಳ್ಳುತ್ತಿದ್ದಂತೆ ಈ ರಾಜ್ಯಗಳ ಹಿಡಿತ ಪುಣೆಯಿಂದ ಕೈ ತಪ್ಪಿತು. ಎಲ್ಲರೂ ಸ್ವತಂತ್ರರಾಗಿ ಆಳ್ವಿಕೆ ಮಾಡಲು ಆರಂಭಿಸಿದರು. ಮಾಧವ ರಾವ್ ಬಳಿಕ ಪುಣೆಯಲ್ಲಿ ನಾಲಾಯಕ್ಕುಗಳ ಸರದಿ ಆರಂಭ ವಾಯಿತು. ಪೇಶ್ವಾಯಿಯ ರಕ್ತ ಎಲ್ಲಿ ಕಳಪೆಯಾಯಿತೋ ಗೊತ್ತಿಲ್ಲ, ಒಬ್ಬರಿಗಿಂತ ಒಬ್ಬರು ಅಯೋಗ್ಯರೇ ಬರಲಾರಂಭಿಸಿದರು. ಶನಿವಾರ ವಾಡೆಯನ್ನು ಇಂದಿಗೂ ಕಾಡುತ್ತಿರುವ ಪ್ರೇತದ ಕತೆ ಇಲ್ಲಿ ಆರಂಭವಾಗುತ್ತದೆ. ಮತ್ತಷ್ಟು ಓದು 
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 30:
ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ:
– ರಾಮಚಂದ್ರ ಹೆಗಡೆ
ರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಬಲಿದಾನಗೈದ ಅಸ್ಸಾಮಿನ ವೀರವನಿತೆಯರು ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಭೂಪಟ, ವಂದೇಮಾತರಂ ಎಲ್ಲವೂ ದೇಶಾಭಿಮಾನದ ಅಭಿವ್ಯಕ್ತಿಯ ಸಂಕೇತಗಳಾದರೂ ಅವು ನಮ್ಮಲ್ಲಿ ಸೃಷ್ಟಿಸುವ ಭಾವ ವರ್ಣನಾತೀತ. ಸೈನಿಕನೊಬ್ಬ ಯುದ್ಧ ಗೆದ್ದಾಗ, ಕ್ರೀಡಾಳುವೊಬ್ಬ ಆಟದಲ್ಲಿ ಗೆದ್ದಾಗ ತ್ರಿವರ್ಣ ಧ್ವಜ ಹಿಡಿದು ಕುಣಿದು ಕುಪ್ಪಳಿಸುವುದು ಕಾಣುತ್ತೇವೆ. ಯುದ್ಧಕ್ಕೆ ಹೋರಾಟ ಯೋಧನೊಬ್ಬ ಗೆದ್ದರೆ ಧ್ವಜ ಹಿಡಿದು ಬರುವೆ, ಸತ್ತರೆ ತ್ರಿವರ್ಣಧ್ವಜವನ್ನು ಸುತ್ತಿಕೊಂಡು ಬರುವೆ ಎಂದು ಹೇಳಿದ್ದು ಈ ಎಲ್ಲ ಸಂಕೇತಗಳ ಕುರಿತು ನಮಗಿರುವ ಹೆಮ್ಮೆ ಅಭಿಮಾನದ ಪ್ರತೀಕ. ರಾಷ್ಟ್ರಧ್ವಜವೆಂದರೆ ಕೇವಲ ಅದು ಬಟ್ಟೆಯಲ್ಲ. ಅದು ನಮ್ಮ ಹೆಮ್ಮೆ, ದೇಶದ ಕುರಿತ ಪ್ರೀತಿಯ ಸಂಕೇತ, ಅದು ನಮ್ಮ ಆತ್ಮಾಭಿಮಾನದ ಸಂಕೇತ. ರಾಷ್ಟ್ರಧ್ವಜದ ಪೂಜ್ಯತೆ ಹಾಗೂ ಗೌರವದ ರಕ್ಷಣೆಗಾಗಿ ೧೭ ರ ತರುಣಿ ಕನಕಲತಾರಿಂದ ಹಿಡಿದು ೭೩ ರ ವೃದ್ಧೆ ಮಾತಂಗಿನಿ ಹಜ್ರಾರವರೆಗೆ ಸ್ವಾತಂತ್ರ್ಯ ಸಮರದ ಉದ್ದಕ್ಕೂ ಸಾವಿರಾರು ಮಂದಿ ಬಲಿದಾನ ಮಾಡಿದ್ದಾರೆ. ಮತ್ತಷ್ಟು ಓದು 




