ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

16
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 7:
ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್

– ರಾಮಚಂದ್ರ ಹೆಗಡೆ

collage_305_121915014504ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್ ರದ್ದು ಒಂದು ವಿಶೇಷ ಅಧ್ಯಾಯ. ಹಿಂದೂ ಮುಸ್ಲಿಂ ಭ್ರಾತೃತ್ವದ ಒಂದು ಅಪರೂಪದ ಉದಾಹರಣೆ ಈ ಇಬ್ಬರದು. ಇವರಿಬ್ಬರ ಮಧ್ಯೆ ಮತೀಯ ಸಂಘರ್ಷ ತಂದಿಡುವ ಬ್ರಿಟಿಷರ ಹುನ್ನಾರಕ್ಕೆ ದಿಟ್ಟ ಉತ್ತರವಾಗಿ ನೇಣಿಗೇರುವವರೆಗೂ ಒಂದಾಗಿ ರಾಷ್ಟ್ರೀಯ ಚಿಂತನೆಗೆ ತಮ್ಮನ್ನು ಅರ್ಪಿಸಿಕೊಂಡ ಮಹಾನ್ ದೇಶಭಕ್ತರು. ತಮ್ಮ ತಮ್ಮ ಧರ್ಮಗಳಿಗೆ ಬದ್ಧರಾಗಿಯೂ ಈ ದೇಶಕ್ಕೆ ನಿಷ್ಠರಾಗಲು ಸಾಧ್ಯ ಎಂಬುದನ್ನು ಈ ದೇಶಭಕ್ತ ಜೋಡಿ ತೋರಿಸಿಕೊಟ್ಟಿದೆ ಹಾಗೂ ಇಂದಿನ ಪ್ರತ್ಯೇಕತಾವಾದಿಗಳಿಗೆ ಇವರ ಬದುಕು ಒಂದು ಪಾಠ. ಮತ್ತಷ್ಟು ಓದು »

16
ಆಗಸ್ಟ್

ಕನ್ನಡದ ಮೊದಲ ಕೋಮುವಾದಿ ಈ ಮುಮ್ಮಡಿ ಬಲ್ಲಾಳ ವೀರ!

– ಸಂತೋಷ್ ತಮ್ಮಯ್ಯ

hoಕ್ರಿ.ಶ ೧೩೧೦. ಅದು ಮುಸಲ್ಮಾನರ ರಂಜಾನ್ ತಿಂಗಳಿನ ೨೨ನೇ ದಿನ, ಭಾನುವಾರ. ಆ ಪವಿತ್ರ ತಿಂಗಳಿನ ೨೧ ದಿನಗಳೂ ಮುಸಲ್ಮಾನರು ದಕ್ಷಿಣ ಭಾರತದಲ್ಲಿ ನಿರಂತರ ಲೂಟಿ ನಡೆಸಿದ್ದರು. ಕಾಫಿರರ ಕೊಲೆ ಮಾಡಿದ್ದರು, ವಿಗ್ರಹ ಭಂಜನೆ ನಡೆಸಿದ್ದರು, ಮತಾಂತರಗಳು ನಡೆದಿದ್ದವು.

ರಂಜಾನಿನ ೨೨ನೇ ದಿನದಂದು ಅವರು ಲೂಟಿಗೆ ಆರಿಸಿಕೊಂಡದ್ದು ಶ್ರೀಮಂತ ದ್ವಾರಸಮುದ್ರವನ್ನು. ಮಲ್ಲಿಕಾಫರ್ ಎಂಬ ಒಂದು ಕಾಲದ ಬ್ರಾಹ್ಮಣ ಮತಾಂತರವಾದೊಡನೆಯೇ ವಿಪರೀತ ಕ್ರೂರಿಯೂ, ಮಾತೃ ಧರ್ಮದ ದ್ವೇಷಿಯೂ ಆಗಿ ಬದಲಾಗಿದ್ದ. ಹಿಂದೂ ಧರ್ಮದ ಯಾವ ನರವನ್ನು ಮೀಟಿದರೆ ಲಾಭ ಎಂಬುದನ್ನು ಉಳಿದ ದಾಳಿಕೋರರಿಗಿಂತ ಆತ ಚೆನ್ನಾಗಿ ಬಲ್ಲವನಾಗಿದ್ದ. ಅಲ್ಲಾವುದ್ದೀನ್ ಖಿಲ್ಜಿಯ ಕೂಲಿ ಮಾಡುತ್ತಿದ್ದ ಆತ ದಣಿಯನ್ನು ಮೆಚ್ಚಿಸಲು ಏನು ಮಾಡಲೂ ಹಿಂಜರಿಯುತ್ತಿರಲಿಲ್ಲ. ದ್ವಾರಸಮುದ್ರವನ್ನು ಲೂಟಿಮಾಡಬೇಕು ಎಂದು ಆತನೇ ಮುಹೂರ್ತ ನಿಗದಿಪಡಿಸಿದ್ದ. ಏಕೆಂದರೆ ಆ ಹೊತ್ತಲ್ಲಿ ದ್ವಾರಸಮುದ್ರದ ರಾಜ ರಾಜಧಾನಿಯಲ್ಲಿರಲಿಲ್ಲ. ನಿಶ್ಚಯವಾದಂತೆ ದ್ವಾರಸಮುದ್ರದ ಮೇಲೆ ದಾಳಿಯಾಯಿತು. ನಿರಂತರ ೧೩ ದಿನ ಲೂಟಿ ನಡೆಯಿತು. ದೇವಸ್ಥಾನಗಳು ಧ್ವಂಸವಾದವು. ಅತ್ತ ರಾಜ ರಾಜಧಾನಿಗೆ ದೌಢಾಯಿಸಿ ಬಂದಾಗ ಕಾಲ ಮಿಂಚಿಹೋಗಿತ್ತು. ಮಲ್ಲಿಕಾಫರನಿಗೆ ಶರಣಾಗದೆ ಆತನಿಗೆ ಬೇರೆ ದಾರಿಯಿರಲಿಲ್ಲ. ದುಷ್ಟ ಮಲ್ಲಿಕಾಫರ್ ಆತನಿಗೆ ಎರಡು ಆಯ್ಕೆಗಳನ್ನು ನೀಡಿದ. ಒಂದೋ ಇಸ್ಲಾಮಿಗೆ ಮತಾಂತರವಾಗಬೇಕು. ಇಲ್ಲವೇ ತಮಿಳು ಪಾಂಡ್ಯರನ್ನು ಗೆಲ್ಲಲು ಸಹಾಯ ಮಾಡಬೇಕು ಮತ್ತು ದ್ವಾರಸಮುದ್ರದಲ್ಲಿ ಮುಸಲ್ಮಾನ ಸೈನ್ಯವನ್ನು ಇರಿಸಿಕೊಳ್ಳಬೇಕು. ರಾಜ ಮತಾಂತರಕ್ಕೆ ಒಪ್ಪಿಗೆ ನೀಡಲಿಲ್ಲ. ಉಳಿದ ಷರತ್ತುಗಳಿಗೆ ಒಪ್ಪಿದ. ಮಲ್ಲಿಕಾಫರ್ ದ್ವಾರಸಮುದ್ರದ ಸೈನ್ಯದ ಬಲದಿಂದ ತಮಿಳು ಪಾಂಡ್ಯರನ್ನು ಗೆದ್ದು ಲೂಟಿಗೈದು ದೆಹಲಿಗೆ ಹೊರಟುಹೋದ. ಮತ್ತಷ್ಟು ಓದು »

15
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 6:
ಭೂಪೇಂದ್ರನಾಥ ದತ್ತ :
– ರಾಮಚಂದ್ರ ಹೆಗಡೆ

170px-Swami_Vivekananda_July_1895_Thousand_Island_Parkದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಒಂದೇ ಕುಟುಂಬದ ತಾಯಿ ಮಗ ಸೊಸೆ ಸೆರೆವಾಸ ಅನುಭವಿಸಿದ ಕಥೆಯನ್ನು ನಿನ್ನೆಯ ಮೈಲಾರ ಮಹಾದೇವರ ಸ್ಮರಣೆಯಲ್ಲಿ ಓದಿದ್ದೇವೆ. ದೇಶಾದ್ಯಂತ ಹಾಗೆ ಅನೇಕ ಕುಟುಂಬಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ತಮ್ಮನ್ನು ಸಂಪೂರ್ಣ ದಾಸ್ಯ ವಿಮೋಚನೆಯ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇದು ಅಂತಹದೇ ಮತ್ತೊಂದು ದೇಶಭಕ್ತ ಕುಟುಂಬದ ಸ್ಮರಣೆ. ಇದು ಕಲಕತ್ತೆಯ ವಿಶ್ವನಾಥ ದತ್ತ ಹಾಗೂ ಭುವನೇಶ್ವರಿ ದೇವಿ ದಂಪತಿಗಳ ಇಬ್ಬರು ಪುತ್ರರತ್ನಗಳು ದೇಶದ ದಾಸ್ಯ ವಿಮುಕ್ತಿ ಹಾಗೂ ಭವಿಷ್ಯದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ಅರ್ಪಿಸಿಕೊಂಡ ಪ್ರೇರಣಾದಾಯಿ ಕಥೆ. ಒಬ್ಬರು ನರೇಂದ್ರನಾಥ ದತ್ತ ಮುಂದೆ ‘ಸ್ವಾಮಿ ವಿವೇಕಾನಂದ’ ರಾಗಿ ಭಾರತದ ಆಧ್ಯಾತ್ಮ ಯೋಗ ವೇದಾಂತಗಳ ಸಾರವನ್ನು ಜಗತ್ತಿಗೇ ಬೋಧಿಸಿ ವಿಶ್ವದ ಮನಗೆದ್ದರೆ ಮತ್ತೊಬ್ಬರು ಭೂಪೇಂದ್ರನಾಥ ದತ್ತ ಶ್ರೇಷ್ಠ ಕ್ರಾಂತಿಕಾರಿಯಾಗಿ ಭಾರತೀಯ ಸ್ವಾತಂತ್ರ್ಯ ಚಳುವಳಿಯ ಕ್ರಾಂತಿಕಾರಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದರು. ಭೂಪೇಂದ್ರರು ಕ್ರಾಂತಿಕಾರಿ ಸಂಘಟನೆಗಳಾದ ಯುಗಾಂತರ ಹಾಗೂ ಅನುಶೀಲನ ಸಮಿತಿಯ ಪ್ರಮುಖ ಸದಸ್ಯರಾಗಿದ್ದರು. ಬ್ರಿಟಿಷರನ್ನು ಹೊಡೆದೋಡಿಸಲು ಹಾಗೂ ಭಾರತವನ್ನು ಸ್ವಾತಂತ್ರ್ಯಗೊಳಿಸಲು ಕ್ರಾಂತಿಯೇ ಸರಿಯಾದ ಮಾರ್ಗ ಎಂಬುದು ಯುಗಾಂತರದ ನಂಬಿಕೆಯಾಗಿತ್ತು. ಮತ್ತಷ್ಟು ಓದು »

14
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 5 : ಮೈಲಾರ ಮಹದೇವ
– ರಾಮಚಂದ್ರ ಹೆಗಡೆ

31byd11857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲಿನಿಂದಲೇ ಆರಂಭಿಸಿ, ಕ್ವಿಟ್ ಇಂಡಿಯಾ ಚಳುವಳಿ, ನಂತರ ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ವಿವಿಧ ರೀತಿಯ ಹೋರಾಟಗಳು ನಡೆದವು. ಹೋರಾಟದ ಕಿಚ್ಚು, ಕ್ರಾಂತಿಯ ಕಿಡಿ ವಿವಿಧ ರೂಪದಲ್ಲಿ ಪ್ರಕಟಗೊಂಡು ಸಾವಿರಾರು ಮಂದಿ ಭಾರತ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದರು. ಹಾಗೆ ಬ್ರಿಟಿಷರ ಗುಂಡಿಗೆ ಎದೆಕೊಟ್ಟು ವೀರಸ್ವರ್ಗವೇರಿದ ಅಪ್ರತಿಮ ಬಲಿದಾನಿಗಳಲ್ಲಿ ಹಾವೇರಿ ಜಿಲ್ಲೆ ಮೋಟೆಬೆನ್ನೂರಿನ ಮೈಲಾರ ಮಹದೇವ ಅವರ ಪಾತ್ರ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿದೆ. ಸ್ವಾತಂತ್ರ್ಯಾಂದೋಲನದಲ್ಲಿ ಮಹದೇವರ ತಾಯಿ ಬಸಮ್ಮ ಕೂಡಾ ಸೆರೆಮನೆವಾಸ ಅನುಭವಿಸಿದವರು. ಮತ್ತಷ್ಟು ಓದು »

14
ಆಗಸ್ಟ್

ವೇದಾಂತದ ಕಥೆಗಳ ಆಧಾರದಲ್ಲಿ ಇತಿಹಾಸ ಶಬ್ದದತ್ತ ಕಿರುನೋಟ

– ವಿನಾಯಕ ಹಂಪಿಹೊಳಿ

download (3)ಹಿಸ್ಟರಿ ಎನ್ನುವ ಶಬ್ದದ ಸ್ವರೂಪವು ಬೈಬಲ್ಲಿನ ಥಿಯಾಲಜಿಯಲ್ಲಿ ನಮಗೆ ಕಾಣಸಿಗುತ್ತದೆ. ಪ್ರತಿಯೊಂದು ಸಮಾಜಕ್ಕೂ ಗಾಡ್ ತನ್ನ ಸಂದೇಶಗಳನ್ನು ಪ್ರವಾದಿಗಳ ಮೂಲಕ ತಲುಪಿಸಿರುತ್ತಾನೆ. ಇದು ಒಂದಾನೊಂದು ಕಾಲದಲ್ಲಿ ಆ ಸಮಾಜದಲ್ಲಿ ನಡೆದಿರುವ ಘಟನೆಯಾಗಿರುತ್ತದೆ. ಆ ಸಮಾಜದ ಜನರನ್ನು ಅರಿತುಕೊಳ್ಳಲು ಹಾಗೂ ಅಲ್ಲಿನ ಜನರು ಆಚರಿಸುವ ಪದ್ಧತಿಗಳಲ್ಲಿ ರಿಲಿಜಿಯಸ್ ಯಾವುದು ಎಂದು ಗುರುತಿಸಿಕೊಳ್ಳಲು ಈ ಸಂದೇಶಗಳು ಅಗತ್ಯ. ಹೀಗಾಗಿ ಸಮುದಾಯವೊಂದನ್ನು ಅಧ್ಯಯನ ಮಾಡುವಾಗ ಆ ಸಮುದಾಯದಲ್ಲಿ ಗಾಡ್ ಯಾವಾಗ ಮಧ್ಯಪ್ರವೇಶಿಸಿ ತನ್ನ ಸಂದೇಶಗಳನ್ನು ನೀಡಿದ್ದ ಎನ್ನುವುದನ್ನು ಕಂಡುಕೊಳ್ಳುವದು ಅಗತ್ಯ. ಹಿಸ್ಟರಿ ಎನ್ನುವ ಅಧ್ಯಯನ ಕ್ರಮವು ಈ ಪ್ರಕ್ರಿಯೆಯಿಂದಲೇ ಹುಟ್ಟಿರುತ್ತದೆ. ಲಭ್ಯವಿರುವ ಶಾಸನಗಳ ಆಧಾರದಲ್ಲಿ ಸಮಂಜಸವಾದ ವಿವರಣೆಯೊಂದನ್ನು ಕಟ್ಟಿಕೊಡುವುದೇ ಹಿಸ್ಟರಿಯ ಧ್ಯೇಯ. ಹಿಸ್ಟರಿ ಶಬ್ದಕ್ಕೆ ಪರ್ಯಾಯವಾಗಿ ನಾವು ಇತಿಹಾಸ ಎಂಬ ಶಬ್ದವನ್ನು ಬಳಸುತ್ತ ಬಂದಿದ್ದೇವೆ. ಆದರೆ ವಸಾಹತು ಪ್ರಜ್ಞೆಗೂ ಪೂರ್ವದಲ್ಲಿ ಇತಿಹಾಸ ಎಂಬ ಶಬ್ದವು ಏನನ್ನು ಪ್ರತಿನಿಧಿಸುತ್ತಿತ್ತು? ಸದ್ಯಕ್ಕೆ ಉಪನಿಷತ್ತುಗಳ ಕಥೆ ಮತ್ತು ಅದಕ್ಕೆ ಶಂಕರಾಚಾರ್ಯರು ಬರೆದ ಭಾಷ್ಯಗಳನ್ನು ಆಧಾರವಾಗಿಟ್ಟುಕೊಂಡು ಚರ್ಚಿಸೋಣ. ಮತ್ತಷ್ಟು ಓದು »

13
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 4:

ಖುದಿರಾಮ್ ಬೋಸ್ (ಡಿಸೆಂಬರ್ 3, 1889 – ಆಗಸ್ಟ್ 11, 1908)
– ರಾಮಚಂದ್ರ ಹೆಗಡೆ

khudiram boseಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. ಅತೀ ಚಿಕ್ಕ ವಯಸ್ಸಿಗೇ ಕೇವಲ 19 ರ ಹರೆಯದಲ್ಲಿ ನೇಣುಗಂಬವೇರಿದ ಪ್ರಥಮ ಬಲಿದಾನಿ ಖುದಿರಾಮ್ ಬೋಸ್. ‘ಕಿಂಗ್ಸ್ ಫೊರ್ಡ್’ ಎಂಬ ಬ್ರಿಟೀಷ್ ನ್ಯಾಯಧೀಶ ಕಲ್ಕತ್ತಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಘೋರಾತಿಘೋರ ಶಿಕ್ಷೆಗಳನ್ನು ಕೊಡುತ್ತಾ ವಿಕೃತ ಆನಂದವನ್ನು ಅನುಭವಿಸುತ್ತಿದ್ದ. ಭಾರತೀಯರ ಮೇಲೆ ಆತನ ದೌರ್ಜನ್ಯ ಮಿತಿಮೀರಿತ್ತು. ಈತನ ಕ್ರೌರ್ಯಕ್ಕೆ ಕೊನೆಹಾಡಬೇಕೆಂದು ನಿರ್ಧರಿಸಿದ ಖುದಿರಾಮ್ ಕಿಂಗ್ಸ್ ಫೊರ್ಡ್ ನನ್ನ ಕೊಲ್ಲುವ ಯತ್ನ ಮಾಡಿದ. ಆದರೆ ಕಿಂಗ್ಸ್ ಫೊರ್ಡ್ ಬಚಾವಾದ. ಆದರೂ ಆ ಪ್ರಯತ್ನದಲ್ಲಿ ಈ ಪ್ರಖರ ದೇಶಭಕ್ತನಿಗೆ ಗಲ್ಲು ಶಿಕ್ಷೆಯಾಯ್ತು. ಮತ್ತಷ್ಟು ಓದು »

12
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 3
ಸದ್ಗುರು ರಾಮಸಿಂಗ್ ಕೂಕಾ
– ರಾಮಚಂದ್ರ ಹೆಗಡೆ

download (1)ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಪಂಜಾಬಿ ಸಿಖ್ಖರ ಪಾತ್ರ ಬಹಳ ದೊಡ್ಡದು. ಅಪ್ರತಿಮ ದೇಶಭಕ್ತರ ಸಂಪ್ರದಾಯವದು. ಇಂದಿಗೂ ಭಾರತೀಯ ಸೈನ್ಯದಲ್ಲಿ ಸಿಖ್ ರೆಜಿಮೆಂಟ್ ಎಂದರೆ ಪರಮ ಪರಾಕ್ರಮಿಗಳ ದಂಡು. ಅಂತಹ ಪಂಜಾಬಿ ಸಿಖ್ಖರ ‘ನಾಮಧಾರಿ ಸಂಪ್ರದಾಯ’ ಅಥವಾ ‘ಕೂಕಾ ಪಂಥ’ ದ ಸ್ಥಾಪಕ ಸದ್ಗುರು ರಾಮಸಿಂಗ್ ಕೂಕಾ. ಮೂಲತಃ ಬಡಗಿ ವೃತ್ತಿಯ ಕುಟುಂಬದ ರಾಮಸಿಂಗ್ ತಾನೂ ತನ್ನ ತಂದೆಯ ಬಡಗಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ನೆರವಾಗುತ್ತಿದ್ದ. ಆದರೆ ಮಿತಿಮೀರಿದ ಬ್ರಿಟಿಷರ ದೌರ್ಜನ್ಯ ಹಾಗೂ ಅಲ್ಲಿಯ ಜನರ ನಿರಭಿಮಾನ ಅವನನ್ನು ರೊಚ್ಚಿಗೆಬ್ಬಿಸಿತು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಮಿಷನರಿಗಳು ಮತಾಂತರದಲ್ಲಿ ನಿರತರಾಗಿದ್ದವು. ಇದನ್ನೆಲ್ಲಾ ಕಂಡ ರಾಮಸಿಂಗ್ ಜನರನ್ನು ಆಧ್ಯಾತ್ಮಿಕವಾಗಿ ಮೇಲ್ಮಟ್ಟಕ್ಕೆ ಒಯ್ಯುವ, ಅವರೊಳಗೆ ದೇಶಾಭಿಮಾನ ಬೆಳೆಸುವ, ಧಾರ್ಮಿಕ, ಸಾಮಾಜಿಕ, ರಾಜಕೀಯ ಜನಜಾಗೃತಿ ನಿರ್ಧಾರದಿಂದ ಕೂಕಾ ಪಂಥವನ್ನು ಆರಂಭಿಸಿದ. ರಾಮಸಿಂಗ್ ಸದ್ಗುರು ರಾಮಸಿಂಗ್ ಆದ. ರಾಮಸಿಂಗ್ ನ ಕೂಕಾ ಪಂಥದ ಪ್ರಸಿದ್ಧಿ ಎಲ್ಲೆಡೆಗೆ ಹರಡಿ ಸಾವಿರಾರು ಜನ ಈ ಪಂಥಕ್ಕೆ ಸೇರ್ಪಡೆಯಾದರು. ಪಂಜಾಬ ಪ್ರಾಂತದ ೨೧ ಜಿಲ್ಲೆಗಳಲ್ಲೂ ಕೂಕಾಗಳ ಚಟುವಟಿಕೆಗಳ ಜಾಲ ಹಬ್ಬಿತು. ಮತ್ತಷ್ಟು ಓದು »

11
ಆಗಸ್ಟ್

ದೆವ್ವ….ದೆವ್ವ….!

ಗುರುರಾಜ ಕೋಡ್ಕಣಿ. ಯಲ್ಲಾಪುರ

Ghost2ಅದು ಸುಮಾರು ಮಧ್ಯರಾತ್ರಿ ಸಮಯ.ನಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಸಾಮಾನ್ಯವಾಗಿ ನಾನು ರೈಲಿನಲ್ಲಿ ಚೆನ್ನಾಗಿ ನಿದ್ರಿಸುತ್ತೇನೆ. ಆದರೆ ಅದೇಕೋ ಅ೦ದು ನನಗೆ ನಿದ್ದೆ ಬರುತ್ತಿರಲಿಲ್ಲ.ಸುಮ್ಮನೆ ಆಕಳಿಕೆ. ಬೆಕ್ಕಿನ೦ತೆ ಆಕಳಿಸುತಾ ಕಿಟಕಿಯಿ೦ದ ಹೊರ ನೋಡಿದೆ. ‘ಅಮವಾಸ್ಯೆಯ ಕತ್ತಲು’ ಹೊರಗಡೆಯ ದೃಶ್ಯಗಳು ಯಾವುದೂ ಕಾಣುತ್ತಿರಲಿಲ್ಲ. ಸಮಯ ನೋಡಿದೆ. ಹನ್ನೆರಡುವರೆ. ನನ್ನ ಸ್ಥಳ ಬರಲು ಇನ್ನೂ ಸಮಯವಿದೆ.

ನನ್ನ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ. ನಾನ್ನೊಬ್ಬನೇ. ಇದೇ ಕೊನೆಯ ಬೋಗಿ ಬೇರೆ! ರೈಲಿನ ಕೊನೆಯ ಬೋಗಿಗಳಲ್ಲಿ ದೆವ್ವಗಳು ಇರ್ತಾವ೦ತೆ, ಈ ಸಮಯದಲ್ಲಿ ಇಲ್ಲಿ ದೆವ್ವ ಬ೦ದು ಬಿಟ್ಟರೇ..? ನನ್ನ ವಿಚಾರಸರಣಿ ನೋಡಿ ನನಗೇ ನಗು ಬ೦ತು. ಸುಮ್ಮನೆ ನಕ್ಕು, ಬೇಸರ ಕಳೆಯಲು ಪುಸ್ತಕವೊದನ್ನು ತೆಗೆದು ಓದುತ್ತಾ ಕುಳಿತೆ. ಮತ್ತಷ್ಟು ಓದು »

11
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

– ರಾಮಚಂದ್ರ ಹೆಗಡೆ

ಈ ದಿನದ ಸ್ಮರಣೆ: ಕಾರ್ನಾಡ್ ಸದಾಶಿವ ರಾವ್

14MNRAO_G53ASPDES__2509976eಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ‘ಸದಾಶಿವ ನಗರ’ ಎಂಬುದು ಎಲ್ಲರಿಗೂ ತಿಳಿದದ್ದೇ. ಆದರೆ ಅದ್ಯಾರು ಸದಾಶಿವ ಎಂಬುದು ಬಹುತೇಕರಿಗೆ ತಿಳಿಯದು. ಆ ಸದಾಶಿವರೇ ಅಪ್ರತಿಮ ದೇಶಭಕ್ತ ದಕ್ಷಿಣ ಕನ್ನಡದ ಗಾಂಧಿ ಎಂದೇ ಸುಪ್ರಸಿದ್ಧರಾದ ಶ್ರೀ ಕಾರ್ನಾಡ್ ಸದಾಶಿವರಾವ್. ಇವರು ಮಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಸದಾಶಿವರಾಯರ ಮನೆ ಸ್ವಾತಂತ್ರ್ಯ ಸಂಗ್ರಾಮದ ತವರು ಮನೆಯಾಗಿತ್ತು. ಮಹಾತ್ಮಾ ಗಾಂಧಿ, ಚಿತ್ತರಂಜನ ದಾಸ, ರಾಜಗೋಪಾಲಾಚಾರಿ ಹಾಗೂ ಸರೋಜಿನಿ ನಾಯ್ಡುರವರಿಗೆ ವಸತಿಗೃಹವಾಗಿತ್ತು. ದೇಶದಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಾರಂಭವಾದಾಗ ಕಾರ್ನಾಡು ಸದಾಶಿವರಾಯರು ಅಂಕೋಲೆಗೆ ಹೋಗಿ ಅಲ್ಲಿನ ಜನತೆಗೆ ಮಾರ್ಗದರ್ಶನ ನೀಡಿ ಅಲ್ಲಿ ನಾಲ್ಕು ದಿನಗಳಿದ್ದರು. ಮತ್ತಷ್ಟು ಓದು »

10
ಆಗಸ್ಟ್

ನಂಬಿಕೆ, ನಿಷೇಧ, ಆಚರಣೆಗಳಲ್ಲಿ ಆಹಾರ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

Non-Veg-Restaurantsಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಕುರಿತು ಬಹಳಷ್ಟು ಚರ್ಚೆ ರಾಷ್ಟ್ರಮಟ್ಟದಲ್ಲಿ ಆಗಾಗ ನಡೆಯುತ್ತದೆ. ದನ ಕದಿಯುವ ಹಾಗೂ ಅದನ್ನು ರಕ್ಷಿಸುವ ಗುಂಪುಗಳ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಪ್ರಧಾನಿ ಮೋದಿ “ಸೋ ಕಾಲ್ಡ್ ಗೋರಕ್ಷಕರ” ವಿರುದ್ಧ ಗುಡುಗುತ್ತಿದ್ದಂತೆಯೇ ಮತ್ತೆ ಇಂಥ ಚರ್ಚೆ ಶುರುವಾಗಿದೆ. ಈ ಚರ್ಚೆಗಳಲ್ಲಿ ಮೇಲ್ನೋಟದಲ್ಲಿ ಬಹುಸಂಖ್ಯಾತರ ಆಹಾರ ಕ್ರಮವನ್ನು ಅಲ್ಪ ಸಂಖ್ಯಾತರ ಮೇಲೆ ಹೇರುವ ಹುನ್ನಾರ; ದಲಿತರು ಹಾಗೂ ಅಲ್ಪಸಂಖ್ಯಾತರ ಆಹಾರ ಪದ್ಧತಿಯನ್ನು ಪುರೋಹಿತಶಾಹಿ ವ್ಯವಸ್ಥೆ ಆಳುತ್ತಿರುವ ಸಂಕೇತ ಎಂದೂ, ಬ್ರಾಹ್ಮಣರನ್ನು ಬಿಟ್ಟರೆ ಬೇರೆ ಸಾವಿರಾರು ಜಾತಿ-ಸಮುದಾಯಗಳಿಗೆ ಆಹಾರ ಸಂಬಂಧಿ ವಿಧಿ-ನಿಷೇಧಗಳೇ ಇಲ್ಲ ಎಂಬಂತೆಯೂ ಬಿಂಬಿಸಲಾಗುತ್ತಿದೆ. ಅಷ್ಟೇ ಅಲ್ಲ, ಆಹಾರ ಸೇವಿಸುವಾಗಲೂ ಬ್ರಾಹ್ಮಣರು ಮಾತ್ರ ಅನ್ಯರನ್ನು ಸಹಪಂಕ್ತಿ ಭೋಜನದಲ್ಲಿ ಕೂರಿಸಿಕೊಳ್ಳುವುದಿಲ್ಲ, ಉಳಿದವರಲ್ಲಿ ಇಂಥ ಸಂಪ್ರದಾಯವಿಲ್ಲ ಎಂಬಂತೆಯೂ ಬಿಂಬಿಸುತ್ತ, ಇವೆಲ್ಲ ಜಾತಿಪದ್ಧತಿಯನ್ನು ಬಲಗೊಳಿಸುವ ಪುರೋಹಿತಶಾಹಿಯ ಹುನ್ನಾರ ಎಂದೂ ಸರಳವಾಗಿ ವಾದಿಸಲಾಗುತ್ತದೆ. ಆದರೆ ಇವೆಲ್ಲ ಹಾಗೆ ವಾದಿಸುವವರ ವಿವಿಧ ಸಮುದಾಯಗಳ ಆಹಾರ ಸಂಬಂಧಿ ಅಜ್ಞಾನವನ್ನು ತೋರಿಸುತ್ತದೆಯಲ್ಲದೇ ಇನ್ನೇನನ್ನೂ ಅಲ್ಲ. ಇಂಥ ತಿಳಿವಳಿಕೆಯನ್ನು ತಲೆಕೆಳಗಾಗಿಸುವ ಕ್ಷೇತ್ರಾಧಾರಿತ ಅಧ್ಯಯನದ ಫಲಿತ ಹಾಗೂ ವಾಸ್ತವ ಇಲ್ಲಿದೆ. ಇದು ತುಮಕೂರು ಜಿಲ್ಲೆಯ ಸಾಂಪ್ರದಾಯಿಕ ಆಹಾರ ಪದ್ಧತಿ ಕುರಿತ ಯೋಜನೆಯೊಂದನ್ನು ಆಧರಿಸಿದೆ. ಮತ್ತಷ್ಟು ಓದು »