ಸುಳ್ಸುದ್ದಿ : ಉದ್ಯಮಿಗಳಿಬ್ಬರ ದೇವರ ಕೋಣೆಗಳು ಇನ್ನು ಮುಜರಾಯಿ ಇಲಾಖೆಯ ವಶಕ್ಕೆ!!
– ಪ್ರವೀಣ್ ಕುಮಾರ್ ಮಾವಿನಕಾಡು
ಹೂವು,ಹಣ್ಣು,ಅಗರಬತ್ತಿ,ಕರ್ಪೂರ ಮುಂತಾದ ಪೂಜಾ ಸಾಮಗ್ರಿಗಳ ಖರೀದಿಯ ಲೆಕ್ಕ ಪತ್ರಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ನೀಡಿ ಬೆಂಗಳೂರಿನ ಇಬ್ಬರು ಉದ್ಯಮಿಗಳ ಪೂಜಾ ಗೃಹಗಳನ್ನು ಮುಜರಾಯಿ ಇಲಾಖೆಯ ವಶಕ್ಕೆ ಪಡೆಯುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ! ಉದ್ಯಮಿಗಳ ವಿರುದ್ದ ಅವರ ಹೆಂಡತಿ ಹಾಗೂ ಮಕ್ಕಳಿಂದ ಸಲ್ಲಿಕೆಯಾಗಿರುವ ದೂರುಗಳ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಮಟ್ಟದಲ್ಲಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮಗಳು ಜರುಗಲಿವೆ.ಈ ಬಗ್ಗೆ ಈಗಾಗಲೇ ಇಲಾಖೆಯ ಕಾನೂನು ತಜ್ಞರಿಂದ ಅಭಿಪ್ರಾಯ ನಿರೀಕ್ಷಿಸಲಾಗುತ್ತಿದ್ದು,ಅವರಿಂದ ಶಿಫಾರಸು ಬಂದ ನಂತರ ಇಲಾಖೆಯ ಆಯುಕ್ತರು ಅಗತ್ಯ ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಮುಜರಾಯಿ ಸಚಿವರು ತಿಳಿಸಿದರು.
ಇದಕ್ಕೂ ಮುನ್ನ ಒಬ್ಬ ಉದ್ಯಮಿಯ ಪತ್ನಿ,ತನ್ನ ಪತಿ ನನ್ನನ್ನು ತುಂಬಾ ಹಣ ಖರ್ಚಾಗುತ್ತದೆ ಎನ್ನುವ ಕಾರಣವೊಡ್ಡಿ ಶಾಪಿಂಗ್ ಗೆ ಕರೆದು ಕೊಂಡು ಹೋಗುವುದಿಲ್ಲ, ಆದರೆ ಪ್ರತೀ ತಿಂಗಳೂ ಸಂಕಷ್ಟ ಹರ ಗಣಪತಿ ವ್ರತಕ್ಕಾಗಿ ಸಾವಿರಾರು ರೂ.ಖರ್ಚು ಮಾಡುತ್ತಾರೆ.ಜೊತೆಗೆ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ ಎಂದರೆ ಅದನ್ನೂ ಕೊಡುತ್ತಿಲ್ಲ ಎಂದು ದೂರು ದಾಖಲಿಸಿದ್ದರು.
ಇನ್ನೊಬ್ಬ ಉದ್ಯಮಿಯ ಪುತ್ರ,ನನ್ನ ತಂದೆ ತುಂಬಾ ಹಣ ಖರ್ಚಾಗುತ್ತದೆ ಎಂದು ನನ್ನ ಬಹು ದಿನದ ಬೇಡಿಕೆಯಾದ ಸೈಕಲ್ ಕೊಡಿಸಿರಲಿಲ್ಲ.ಆದರೆ ಮೊನ್ನೆ ಮೊನ್ನೆ ವರಮಹಾ ಲಕ್ಷ್ಮಿ ಹಬ್ಬಕ್ಕೆ ಸುಮಾರು ಹತ್ತು ಸಾವಿರ ರೂ.ಗಳಿಗಿಂತಾ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಮತ್ತು ಇದ್ಯಾವುದಕ್ಕೂ ಸರಿಯಾದ ಲೆಕ್ಕ ಪತ್ರವನ್ನೂ ಇಟ್ಟಿಲ್ಲ ಎಂದು ದೂರು ದಾಖಲಿಸಿದ್ದನು.
ಮತ್ತಷ್ಟು ಓದು 
ಅಂಬೇಡ್ಕರ್ ಮತ್ತು ಮಾರ್ಕ್ ವಾದ
– ಡಾ. ಜಿ. ಭಾಸ್ಕರ ಮಯ್ಯ
ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ ಅವರ ಸ್ಥಾನಮಾನಗಳ ಕುರಿತು ಸ್ಪಷ್ಟವಾಗಿ ಚರ್ಚಿಸಿದ್ದಾರೆ. ಈ ಕುರಿತು ಬಿ.ಟಿ. ರಣದಿವೆಯವರ “ಜಾತಿ ಮತ್ತು ವರ್ಗ” ಕೃತಿಯನ್ನು ನೋಡಬಹುದು. ಆದರೆ, ಬಹಳಷ್ಟು ಇತರೇ ಬುದ್ಧಿಜೀವಿಗಳಿಗೆ ಅಂಬೇಡ್ಕರ್ ಅವರು ಮಾರ್ಕ್ಸ್ ವಾದಕ್ಕೆ ಅತಿನಿಕಟ ಎಂತಲೊ ಅಥವಾ ಅಂಬೇಡ್ಕರ್ರದ್ದೇ ನಿಜವಾದ ಮಾರ್ಕ್ಸ್ ವಾದ ಎಂತಲೊ ಭ್ರಮೆಯಿದೆ.
ಇತ್ತೀಚೆಗೆ ವಿಜಯಕರ್ನಾಟಕದಲ್ಲಿ ಬರಗೂರು ರಾಮಚಂದ್ರಪ್ಪನವರ “ಕೆರಳಿದ ಕರುಳ ಧ್ವನಿ ಅಂಬೇಡ್ಕರ್” ಎಂಬ ಲೇಖನ ಪ್ರಕಟವಾಗಿದೆ. ಇಲ್ಲಿಯೂ ಅಂತಹ ಒಂದು ವಿಲಕ್ಷಣ ಭ್ರಮಾಪ್ರಯತ್ನವನ್ನು ನೋಡಬಹುದು. ಈ ಕುರಿತು ಒಂದು ಚರ್ಚೆ ಪ್ರಸ್ತುತ ಲೇಖನದ ಉದ್ದೇಶ. ಮೊದಲಿಗೆ ಬರಗೂರರು ಅಂಬೇಡ್ಕರರ ಮೂರು ಹೇಳಿಕೆಗಳನ್ನು (ಅವುಗಳಲ್ಲಿ 2, 3 ಮಾರ್ಕ್ಸ್ ವಾದವನ್ನು ಎತ್ತಿ ಹಿಡಿಯುತ್ತವೆ) ಉಲ್ಲೇಖಿಸಿ ಅದರ ಮೇಲೆ ತಮ್ಮ ಚರ್ಚೆಯನ್ನು ಆರಂಭಿಸುತ್ತಾರೆ.
ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರಲ್ಲ
ಗಾಂಧೀಜಿಯವರ ಕುರಿತು ಬರಗೂರು “ಆರಂಭದಲ್ಲಿ ಜಾತಿವರ್ಣಗಳನ್ನು ತಮ್ಮದೇ ವ್ಯಾಖ್ಯಾನದ ಮೂಲಕ ಸಮರ್ಥಿಸುತ್ತಿದ್ದ ಗಾಂಧೀಜಿ ಆನಂತರ ಜಾತಿ ಮತ್ತು ವರ್ಗರಹಿತ ಸಮಾಜದ ನಿರ್ಮಾಣವನ್ನು ಪ್ರತಿಪಾದಿಸಿದರು” ಎಂದಿದ್ದಾರೆ. ಜಗತ್ತಿನ ಯಾವ ಮಾರ್ಕ್ಸ್ ವಾದಿಯೂ ಮೈಮರೆತು ಕೂಡಾ ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರು ಎಂದು ಹೇಳಿಲ್ಲ. ಏಕೆಂದರೆ ಗಾಂಧೀಜಿ ಎಂದೂ ವರ್ಗರಹಿತ ಸಮಾಜ ನಿರ್ಮಾಣದ ಕನಸು ಕಂಡಿಲ್ಲ. ಭಾರತದ ಅತ್ಯುನ್ನತ ಮಟ್ಟದ ಮಾರ್ಕ್ಸ್ ವಾದಿಗಳಾದ ಡಾಂಗೆ, ಯಶ್ಪಾಲ್,ಇಎಂಎಸ್ ನಂಬೂದಿರಿ ಪಾಡ್-ಎಲ್ಲರೂ ಗಾಂಧೀಜಿಯ ಒಟ್ಟು ಐತಿಹಾಸಿಕ ಪಾತ್ರ ಬಂಡವಾಳಿಗರ ವರ್ಗವನ್ನು ಹೇಗೆ ಪ್ರತಿನಿಧಿಸುತ್ತಿತ್ತು ಎಂಬುದನ್ನೇ ವಿಶದೀಕರಿಸಿದ್ದಾರೆ. ಗಾಂಧೀಜಿಯವರ ಅತ್ಯಂತ ಯಥಾರ್ಥ
ಮೌಲ್ಯಮಾಪನವನ್ನು ಇಎಂಎಸ್ ತಮ್ಮ “ಗಾಂಧಿ ಎಂಡ್ ಹಿಸ್ ಇಸಮ್” ಕೃತಿಯಲ್ಲಿ ವಿವರವಾಗಿ ದಾಖಲಿಸಿದ್ದಾರೆ. ನನಗನ್ನಿಸುವಂತೆ ಬಹಳಷ್ಟು ಬುದ್ಧಿಜೀವಿಗಳಿಗೆ “ವರ್ಗ” ಎಂಬ ವಿಶೇಷ ಪದದ ಅರ್ಥವೇ ತಿಳಿದಿಲ್ಲ! ಅದರಿಂದಾಗಿಯೇ ಇಂತಹ ಅವಾಂತರಗಳು ಉಂಟಾಗುತ್ತವೆ.
ಕನ್ನಡಿಯಲ್ಲಿ ಮುಖನೋಡಿಕೊಳ್ಳಿ ಬುದ್ಧಿಜೀವಿಗಳೇ
– ರಾಕೇಶ್ ಶೆಟ್ಟಿ
ಕಳೆದ ಭಾನುವಾರ ಕಲ್ಬುರ್ಗಿಯವರ ಹತ್ಯೆಯ ಸುದ್ದಿ ತಿಳಿದಾಗ ಆಘಾತವಾಯಿತು.ಹತ್ಯೆ ಯಾವ ಕಾರಣಕ್ಕಾಗಿದೆಯೋ ಅದು ತನಿಖೆಯಿಂದ ಹೊರಬರಲಿದೆ.ಆದಷ್ಟು ಬೇಗ ತನಿಖೆಯಾಗಿ ಸತ್ಯಹೊರಬಂದು ಅವರ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು.ಕಲ್ಬುರ್ಗಿಯವರ ಐಡಿಯಾಲಜಿಗಳೇನೇ ಇದ್ದಿರಬಹುದು,ಆದರೆ ಅವರು ಈ ನಾಡಿನ ಸಂಶೋಧನಾ ಕ್ಷೇತ್ರದ ಪ್ರಮುಖ ವಿದ್ವಾಂಸರಲ್ಲೊಬ್ಬರಾಗಿದ್ದವರು.ಅವರ ಕೊಲೆ ಸಹಜವಾಗಿಯೇ ನಾಡಿನ ವೈಚಾರಿಕ ವಲಯದ ಆಕ್ರೋಶಕ್ಕೆ ಕಾರಣವಾಯಿತು.ಕ್ರೋಧ-ಆಕ್ರೋಶಕ್ಕೊಳಗಾದ ಮನಸ್ಸಿನಿಂದ ಒಳಿತಿಗಿಂತ ಹಾನಿಯೇ ಹೆಚ್ಚು ಎಂಬ ಮಾತಿನಂತೆ,ಈ ಘಟನೆಯ ಸುತ್ತ ದೊಡ್ಡವರು ಎನಿಸಿಕೊಂಡವರ ವರ್ತಿಸಿದ ರೀತಿಯೇ ಉದಾಹರಣೆ.ಸೂತಕದ ಮನೆಯಲ್ಲಿ ಸಂಭ್ರಮಿಸುವುದು ಎಷ್ಟು ವಿಕೃತವೋ,ಅದೇ ರೀತಿ ಸೂತಕದ ಮನೆಯಲ್ಲಿ ಸಂಯಮ ಕಳೆದುಕೊಳ್ಳುವುದು ಹಾಗೂ ರಾಜಕೀಯ ಮಾಡುವುದೂ ಸಹ!
ಮಾಧ್ಯಮಗಳಲ್ಲಿ ಹತ್ಯೆಯ ಸುದ್ದಿ ಹೊರಬರುತಿದ್ದಂತೆ ನಾಡಿನ ಕೆಲವು ಬುದ್ಧಿಜೀವಿಗಳು,ಇದೊಂದು ವೈಚಾರಿಕ ಕಾರಣಕ್ಕೇ ಆದ ಹತ್ಯೆ ಎಂಬಂತೆ ತೀರ್ಪುಕೊಡಲಾರಂಭಿಸಿದರು.ಬುದ್ಧಿಜೀವಿ,ಪ್ರಗತಿಪರರ ಗುಂಪಿನ ಈ ನಡೆ ಅವರ ಜೊತೆಯೇ ಗುರುತಿಸಿಕೊಳ್ಳುವ ಕೆಲವರಿಗೆ ಯಾವ ರೀತಿ ರೇಜಿಗೆ ಹುಟ್ಟಿಸಿತು ಎಂಬುದಕ್ಕೆ,ಪ್ರಜಾವಾಣಿಯಲ್ಲಿ ನಟರಾಜ್ ಹುಳಿಯಾರ್ ಅವರು ಬರೆದ ಲೇಖನವೇ ಸಾಕ್ಷಿ. ಲೇಖನದಲ್ಲಿ ದಾಖಲಿಸಿರುವಂತೆ, “ಇಂತ ಸಮಯದಲ್ಲಿ ನಾವು ಸ್ಟ್ರಾಟರ್ಜಿ ಮಾಡ್ಬೇಕ್ರಿ” ಎಂದು ಒಬ್ಬರು ಹೇಳಿದರು ಅಂದರೇ ಕರ್ನಾಟಕದ ಬುದ್ಧಿಜೀವಿ ವಲಯ ಬಂದು ನಿಂತಿರುವುದೆಲ್ಲಿ? ಇದನ್ನು ಸಾವಿನ ಮನೆಯ ರಾಜಕಾರಣ ಮಾಡುವ ಇವರನ್ನು ರಾಜಕಾರಣಿಗಳು ಎನ್ನೋಣವೆಂದರೆ, ನಮ್ಮ ರಾಜ್ಯದಲ್ಲಿ ಬಹಳಷ್ಟು ಸಹೃದಯಿ ರಾಜಕಾರಣಿಗಳಿದ್ದಾರೆ ಮತ್ತು ಖುದ್ದು ಈ ಕೇಸಿನಲ್ಲಿ ಅವರೇ ಎಲ್ಲೂ ರಾಜಕೀಯ ಮಾಡಿಲ್ಲ.ಆದರೆ ನಮ್ಮ ಬುದ್ದಿಜೀವಿ ವಲಯ ಮಾತ್ರ ರಾಜ್ಯದಲ್ಲಿ “ವೈಚಾರಿಕ ಅಸಹನೆ” ಹೆಪ್ಪುಗಟ್ಟಿದೆ ಎಂದು ಕೂಗಿಕೊಳ್ಳುತ್ತಿದೆ.
ಮತ್ತಷ್ಟು ಓದು 
ಮಹದಾಯಿ : ಜನರ ದಾರಿ ತಪ್ಪಿಸುವುದು ಕಾಂಗ್ರೆಸ್ಗೆ ಶೋಭೆಯೇ?
– ವೃಷಾಂಕ್ ಭಟ್,ದೆಹಲಿ
ಕಳಸಾ-ಬಂಡೂರ ಕಾಲುವೆಗೆ ಮಹದಾಯಿ ನೀರು ಹರಿಸಲು ಪ್ರಧಾನಿಯೊಬ್ಬರೇ ಶಕ್ತರು ಎಂಬ ರಾಜಕೀಯ ಸುಳ್ಳನ್ನು ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ. ತಿಳಿದೋ ತಿಳಿಯದೆಯೋ ಮಾಧ್ಯಮಗಳು ಕೂಡ ಹೆಚ್ಚು ಕಡಿಮೆ ಇದೇ ಸುಳ್ಳನ್ನು ಪ್ರಸಾರ ಮಾಡುತ್ತಿದೆ. ಮಹದಾಯಿ ಸಮಸ್ಯೆ ದೇಶದ ಸಮಸ್ಯೆಯಾಗಿ ಉಳಿದಿಲ್ಲ. ಕಾಂಗ್ರೆಸ್ ಪಾಲಿಗಿದು ರಾಜಕೀಯ ಅವಕಾಶ. ಮಹದಾಯಿ ಸಮಸ್ಯೆ ಜೀವಂತವಾಗಿದ್ದಷ್ಟು ದಿನವೂ ರಾಜ್ಯದ ಜನರ ಮನಸ್ಸಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತದೆ ಎಂಬುವುದು ಸಿದ್ಧರಾಮಯ್ಯ ಮತ್ತವರ ಹೈಕಮಾಂಡ್ಗೆ ತಿಳಿಯದ ವಿಷಯವಲ್ಲ. ಹಾಗಾಗಿ ಮಹದಾಯಿ ಸಮಸ್ಯೆ ಬಹೆಗರಿಯುವುದು ರಾಜ್ಯ ಸರ್ಕಾರಕ್ಕೇ ಬೇಕಿಲ್ಲ. ಸಮಸ್ಯೆ ಬಗೆಹರಿಸಲು ನಿಜಕ್ಕೂ ಸಾಧ್ಯವಿದೆಯೆಂದಾದರೆ ಅದು ಕಾಂಗ್ರೆಸ್ಗೆ ಮಾತ್ರ. ಮಹದಾಯಿ ಪ್ರಕರಣ ಸಂಬಂಧ ನ್ಯಾಯಾಧಿಕರಣ ರಚನೆಯಾದ ಬಗೆ ಮತ್ತು ಅದರಲ್ಲಿ ಕಾಂಗ್ರೆಸ್ ಪಾತ್ರ ಎಷ್ಟಿದೆ ಎಂಬುದನ್ನು ನೋಡೋಣ.
1) ಜುಲೈ 2002 : ಅಂತಾರಾಜ್ಯ ನದಿ ನೀರು ವ್ಯಾಜ್ಯ-1956 ಅಡಿಯಲ್ಲಿ ಮಹದಾಯಿ ನ್ಯಾಯಾಧಿಕರಣ ರಚಿಸುವಂತೆ ಗೋವಾ ಸರ್ಕಾರ ಕೇಂದ್ರಕ್ಕೆ ಮನವಿ ನೀಡಿತ್ತು. ಆದರೆ ಕೇಂದ್ರವು ಆ ಕೂಡಲೇ ನ್ಯಾಯಾಧಿಕರಣ ರಚಿಸಲಿಲ್ಲ.ಆಗಿದ್ದದ್ದು ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರ.
2) ಏ.4-2006: ಕೇಂದ್ರ ಜಲಸಂಪನ್ಮೂಲ ಸಚಿವಾಲಯವು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸುತ್ತಾರೆ. ಆದರೆ ಅಂದು ಗೋವಾ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ನ ಪ್ರತಾಪ್ ಸಿಂಗ್ ರಾಣೆ ನ್ಯಾಯಾಧಿಕರಣ ರಚನೆಯಾಗಲೇ ಬೇಕು ಎಂದು ಹಠ ಹಿಡಿಯುತ್ತಾರೆ. ಆ ಮೂಲಕ ಮಾತು ಕತೆಯ ಉದ್ದೇಶ ವಿಫಲ.
ಮತ್ತಷ್ಟು ಓದು 
ಸುಳ್ಸುದ್ದಿ : ಹಿಂದೂಪರ ಸಂಘಟನೆಗಳಿಂದಲೇ ಇನ್ನು ಬುದ್ಧಿಜೀವಿಗಳ ರಕ್ಷಣೆ !!
– ಪ್ರವೀಣ್ ಕುಮಾರ್ ಮಾವಿನಕಾಡು
ರಾಜ್ಯದಲ್ಲಿ ವಿಚಾರವಾದಿಯೆಂದು ಹೇಳಿಕೊಳ್ಳುವ ಯಾವುದೇ ವ್ಯಕ್ತಿಗೆ ಏನೇ ಆದರೂ ಅದಕ್ಕೆ ಯಾವುದೇ ಆಧಾರವಿಲ್ಲದೆಯೂ ಹಿಂದೂಪರ ಸಂಘಟನೆಗಳೇ ನೇರ ಹೊಣೆ ಹೊರಬೇಕಾಗಿದ್ದು, ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಹಿಂದೂಪರ ಸಂಘಟನೆಗಳೇ ನೇರವಾಗಿ ಅವರುಗಳ ರಕ್ಷಣೆಯ ಹೊಣೆಯನ್ನು ಹೊರಲು ಮುಂದಾಗಿವೆ!
ಎಲ್ಲಿ ಯಾರಿಗೆ ಏನೇ ಆಗಲೀ,ಸ್ಥಳಕ್ಕೆ ಪೊಲೀಸರು ಬರುವ ಮುನ್ನವೇ ಉಳಿದ ಬುದ್ಧಿಜೀವಿಗಳು ಮತ್ತು ಕೆಲವು ಪಕ್ಷಗಳು ಹಿಂದೂಪರ ಸಂಘಟನೆಗಳನ್ನೇ ಹೊಣೆ ಮಾಡಿ ಅವರನ್ನು ಅಪರಾಧಿ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನೂ ಪ್ರಕಟಿಸಿಯಾಗಿರುತ್ತದೆ! ಆದ್ದರಿಂದ ಹಿಂದೂ ಸಂಘಟನೆಗಳಿಗೆ ಈ ಬುದ್ಧಿಜೀವಿಗಳು ‘ಬದುಕಿದ್ದರೂ ಕಷ್ಟ-ಸತ್ತರೂ ಕಷ್ಟ’ ಎಂಬಂತಾಗಿದೆ. ಈ ಸಂಕಟದಿಂದ ಪಾರಾಗಲು ಈ ಬೇಜವಬ್ದಾರಿ ಅವರುಗಳ ಒಂದು ಕೂದಲೂ ಕೊಂಕದಂತೆ ರಕ್ಷಣೆ ಮಾಡುವ ಜವಾಬ್ಧಾರಿಯನ್ನು ಇನ್ನು ಮುಂದೆ ನಮ್ಮ ಸಂಘಟನೆಗಳೇ ಹೊರಲಿವೆ ಎಂದು ಹೆಸರು ಹೇಳಲಿಚ್ಚಿಸದ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಬ್ಬರು ತಿಳಿಸಿದರು.
“ವಿಚಾರವಾದಿಗಳ ರಕ್ಷಣಾ ಪಡೆ” ಎನ್ನುವ ಗಟ್ಟಿಮುಟ್ಟಾದ ಯುವಕರ ತಂಡವೊಂದನ್ನು ರಚಿಸಿದ್ದು,ಸುಮಾರು 2000 ಯುವಕರಿಗೆ ಈ ಬಗ್ಗೆ ಈಗಾಗಲೇ ತರಬೇತಿಯನ್ನು ನೀಡಲಾಗುತ್ತಿದೆ.ಇನ್ನು ಕೆಲವೇ ದಿನಗಳಲ್ಲಿ ಅವರನ್ನು ವಿಚಾರವಾದಿಗಳ ರಕ್ಷಣೆಗೆ ನೇಮಿಸಲಾಗುತ್ತದೆ.ಹಿರಿಯ “ಮಾಜಿ ಪತ್ರಕರ್ತ,ಹಾಲಿ ಬುದ್ದಿಜೀವಿ ಕಮ್ ರಾಜಕಾರಣಿ”ಯೊಬ್ಬರು ನೀಡಿದ, ಪ್ರಾಣಾಪಾಯವನ್ನೆದುರಿ -ಸುತ್ತಿರುವ ವಿಚಾರವಾದಿಗಳ ಜ್ಯೇಷ್ಠತಾ ಪಟ್ಟಿಯನ್ನಾಧರಿಸಿ ಮೇಲ್ವರ್ಗದ ಬುದ್ಧಿಜೀವಿಗಳಿಂದ ಹಿಡಿದು ಅತ್ಯಂತ ಕೆಳ ಹಂತದ ಬುದ್ಧಿಜೀವಿಗಳವರೆಗೂ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಎಷ್ಟೂ ಅಂತ ಮಾನಸಿಕ ಮಾಲಿನ್ಯ ಹರಡುತ್ತೀರಿ?
– ಜೆಬಿಆರ್ ರಂಗಸ್ವಾಮಿ
ನಮ್ಮ ಸಾಹಿತ್ಯಲೋಕದ ದೇವೇಗೌಡರಾದ ಮಾನ್ಯ ದೇ.ಜವರೇಗೌಡರು ಕ್ರೈಸ್ತರ ಸಭೆಯಲ್ಲಿ ಮಾತಾಡಿದ್ದಾರೆ. ಅಸಮಾನತೆ ಬೋಧಿಸುವ ಹಿಂದೂ ಧರ್ಮದ ಮೇಲೆ ಕೊಂಚವೂ ಗೌರವವಿಲ್ಲವಂತೆ.ಅದು ಧರ್ಮವೇ ಅಲ್ಲವೆಂದು ಕಿಡಿಕಾರಿದರಂತೆ! 25 ವರ್ಷದಿಂದ ಕ್ರಿಸ್ತನನ್ನು ಪೂಜಿಸುತ್ತಿದ್ದಾರಂತೆ ! ಕ್ರಿಸ್ತ ಮಾತ್ರ ಸಮಾನತೆಯನ್ನು ಸಾರಿದ್ದಾರಂತೆ. ಹಿಂದೂಧರ್ಮದವರಿಗೆ ತಾರತಮ್ಯವನ್ನು ಬಿಡಲೂ ಮನಸ್ಸಿಲ್ಲವಂತೆ . . .ಅಂತ ಅದೇನೇನೋ ಹೇಳಿಕೊಂಡು ಸನ್ಮಾನ ಸ್ವೀಕರಿಸಿದ್ದಾರೆ. ( ಪ್ರಜಾವಾಣಿ 30-08-2015 )
ಅವರಿಗೆ ಹಿತವೆನಿಸಿದರೆ ಯೇಸುವನ್ನೋ ಮತ್ತೊಬ್ಬರನ್ನೋ ಆರಾಧಿಸಿಕೊಳ್ಳಲಿ.ಅದು ಅವರ ವೈಯುಕ್ತಿಕ.ಅದನ್ನು ಕಟ್ಟಿಕೊಂಡು ಏನೂ ಆಗಬೇಕಾಗಿಲ್ಲ.ಆದರೆ ಆ ಸಭೆಯಲ್ಲಿ ಅನಗತ್ಯವಾಗಿ ಹಿಂದೂಧರ್ಮವನ್ನು ಹೀಗೆಳೆದು ಮಾತಾಡುವ ಅಗತ್ಯವಿತ್ತೇ? ನೂರುವರ್ಷದ ಬದುಕಿನಲ್ಲಿ ಏನೇನೋ ಓದಿರುವ ಅವರಿಗೆ,ಪ್ರಪಂಚದ ಎಲ್ಲ ಧರ್ಮಗಳಲ್ಲೂ ಅಸಮಾನತೆ,ಕ್ರೌರ್ಯ,ಮೂಢಾಚರಣೆಗಳು ಇರುವುದು ತಿಳಿದೇ ಇಲ್ಲವೇ? ಸರ್ವರನ್ನೂ ಸಮಾನವಾಗಿ ಕಾಣುವ ತತ್ವಬೋಧೆ,ಮೌಲ್ಯಗಳು ಎಲ್ಲಧರ್ಮಗಳಲ್ಲೂ ಇದೆ. ನಿಜ.ಆದರೆ ಅವೇ ಮೌಲ್ಯ ಸಿದ್ಧಾಂತಗಳನ್ನು ಅವು ಇರುವ ಹಾಗೆಯೇ ಸರ್ವರೆಲ್ಲರೂ ಸಮಾನವಾಗಿ ಆಚರಿಸಬಲ್ಲ ಒಂದೇ ಒಂದು ಧರ್ಮ ಯಾವುದಾದರೂ ಈ ಭೂಲೋಕದಲ್ಲಿದೆಯೇ?
ಒಂದು ಸಾವಿನ ಸುತ್ತ ಬುದ್ಧಿಜೀವಿಗಳ ಭೂತಕುಣಿತ
– ರೋಹಿತ್ ಚಕ್ರತೀರ್ಥ
ಕಲ್ಬುರ್ಗಿಯವರ ಸಾವು ಕರ್ನಾಟಕವನ್ನು ಬೆಚ್ಚಿಬೀಳಿಸಿದೆ. ಯಾರೋ ಇಬ್ಬರು ಅಪರಿಚಿತರು ಬೈಕ್ನಲ್ಲಿ ಮನೆವರೆಗೆ ಬಂದು ತಾವು ನಿಮ್ಮ ವಿದ್ಯಾರ್ಥಿಗಳು ಎಂದು ಹೇಳಿಕೊಂಡು ಕಲ್ಬುರ್ಗಿ ಎದುರು ಬಂದು ನಿಂತು ಅವರ ಹಣೆಯ ಸಹಸ್ರಾರಕ್ಕೆ ಗುರಿಯಿಟ್ಟು ಗುಂಡು ಹೊಡೆದು ಪರಾರಿಯಾದರು. ಕ್ಷಣಮಾತ್ರದಲ್ಲಿ ಕಲ್ಬುರ್ಗಿ ನೆಲಕ್ಕುರುಳಿದರು. ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಸುದ್ದಿ ಭಾನುವಾರದ ಮುಂಜಾನೆ ಹತ್ತೂವರೆ ಹೊತ್ತಿಗೆಲ್ಲ ರಾಜ್ಯಾದ್ಯಂತ ಸಂಚಲನ ಹುಟ್ಟಿಸಿತು. ಕೊಲೆ ಯಾಕಾಗಿ ಆಗಿದೆ, ಯಾರು ಮಾಡಿದ್ದಾರೆ ಎನ್ನುವುದರ ಕುರಿತು ಯಾರಿಗೂ, ಪೋಲೀಸರಿಗೂ ಮಾಹಿತಿ ಇರಲಿಲ್ಲ. ಆದರೆ, ಕೊಲೆ ನಡೆದು ಅರ್ಧತಾಸಿನಲ್ಲೇ ಈ ಕೊಲೆಯನ್ನು ಪೂರ್ವದಲ್ಲೇ ನಿಯೋಜಿಸಿದ್ದವರಂತೆ ಹತ್ತುಹಲವು ಸಾಹಿತಿಗಳು, ಪಂಡಿತರು ಮಾಧ್ಯಮಗಳಲ್ಲಿ ಕಾಣಿಸಿಕೊಂಡು “ಇದಕ್ಕೆ ಸಂಘಪರಿವಾರವೇ ಕಾರಣ. ಕಲ್ಬುರ್ಗಿಯವರ ವಿಚಾರವನ್ನು ಸಹಿಸಿಕೊಳ್ಳಲಾಗದೆ ಶೂಟ್ ಮಾಡಿ ಉಸಿರು ನಿಲ್ಲಿಸಿದ್ದಾರೆ” ಎಂದು ಹೇಳತೊಡಗಿದರು. ಬರಗೂರು ರಾಮಚಂದ್ರಪ್ಪ ಟಿವಿ ಜೊತೆಗೆ ಮಾತಾಡುತ್ತ ಎಷ್ಟೊಂದು ಕರಾರುವಾಕ್ಕಾಗಿ ಈ ಕೊಲೆಯ ವಿವರಗಳನ್ನು ಕೊಟ್ಟರೆಂದರೆ ಅವರೇ ಸಂಘಿಗಳ ಜೊತೆ ಕೂತು ಈ ಕೊಲೆಯನ್ನು ರೂಪಿಸಿದ್ದರೋ ಎಂಬ ಅನುಮಾನ ನೋಡುಗನಿಗೆ ಬರಬೇಕು, ಹಾಗಿತ್ತು! ಅತ್ತ ದೊಡ್ಡ ಬುದ್ಧಿಜೀವಿಗಳು ಟಿವಿ ಮಾಧ್ಯಮದಲ್ಲಿ ತಮ್ಮ ಚಿಂತನೆ ಹರಿಯಬಿಡುತ್ತಿದ್ದರೆ ಇತ್ತ ಮರಿ ಬುದ್ಧಿಜೀವಿಗಳು ಫೇಸ್ಬುಕ್ ಮತ್ತು ಟ್ವಿಟ್ಟರ್ ಮಾಧ್ಯಮಗಳಲ್ಲಿ ಸಂಘಪರಿವಾರ ಮತ್ತು ಕೋಮುವಾದಿಗಳನ್ನು ಹೀಯಾಳಿಸತೊಡಗಿದರು. ಕೆಲವರು ಕಲ್ಬುರ್ಗಿಯನ್ನು ಕೊಂದವನು ಆಧುನಿಕ ಗೋಡ್ಸೆ ಎಂದರು. ಸಂಜೆಯ ಹೊತ್ತಿಗೆ ಮತ್ತೆ ಟೌನ್ಹಾಲಿನೆದರು ಸೇರಿದ್ದ ಪ್ರಗತಿಪರ ಮತ್ತು ತಳಸ್ಪರ್ಶಿ ಚಿಂತಕರಿಗೆ ಯಾರು ಕೊಲೆಗಾರ ಎನ್ನುವುದು ರುಪಾಯಿಗೆ ಹದಿನಾರಾಣೆ ಸ್ಪಷ್ಟವಾಗಿತ್ತು!
ನಮ್ಮದಲ್ಲದ ಭಾರತದ ರಾಜಕೀಯ ಇತಿಹಾಸ
ಡಾ. ಸಂತೋಷ್ ಕುಮಾರ್ ಪಿ.ಕೆ
ಭಾರತದ ಪ್ರಾಚೀನ ಕಾಲದ ರಾಜಕೀಯ ಚಿಂತನೆ ಎಂಬುದು ಬಹುತೇಕವಾಗಿ ರಾಜ್ಯಶಾಸ್ತ್ರಜ್ಞರಿಗೆ ಅಪ್ರಸ್ತುತವಾಗಿದೆ. ಇದಕ್ಕೆ ಪ್ರಧಾನವಾಗಿ ಎರಡು ಕಾರಣಗಳನ್ನು ನೋಡಬಹುದು, ಒಂದು, ಕಾಲಾಂತರದ ಬದಲಾವಣೆ, ಹಾಗೂ ಎರಡು, ನಮ್ಮೆಲ್ಲಾ ರಾಜಕೀಯ ಚಿಂತನೆ ಮತ್ತು ಅಳವಡಿಸಿಕೊಂಡಿರುವ ರಾಜಕೀಯ ವ್ಯವಸ್ಥೆಗಳೆಲ್ಲವೂ ಆಧುನಿಕ ಪಾಶ್ಚಾತ್ಯ ರಾಷ್ಟ್ರಗಳಿಂದ ಪ್ರೇರೇಪಿತವಾಗಿರುವುದರಿಂದ ಭಾರತೀಯ ಚಿಂತನೆಯ ಅಗತ್ಯತೆ ನಮಗೆ ಕಾಣಸಿಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗಲೂ ರಾಜ್ಯಶಾಸ್ತ್ರದ ವಿದ್ಯಾರ್ಥಿಗಳು ಮಾತ್ರ ಕೌಟಿಲ್ಯನ ಸಿದ್ಧಾಂತ, ಮಹಾಭಾರತದ ಕೆಲವು ಭಾಗಗಳು, ಹಾಗೂ ಹಲವಾರು ನೀತಿಸಾರಗಳನ್ನು ಪರೀಕ್ಷೆಯ ದೃಷ್ಟಿಯಿಂದ ಓದುತ್ತಿರುತ್ತಾರೆ. ಇದರ ಒಟ್ಟಿಗೆ ಹಲವಾರು ವಿದ್ವಾಂಸರುಗಳೂ ಸಹ ಪ್ರಾಚೀನತೆಯ ಹುಡುಕಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೂ ವಿದ್ಯಾರ್ಥಿಗಳ ಓದು, ವಿದ್ವಾಂಸರ ಅಧ್ಯಯನಗಳು ಆಧುನಿಕ ರಾಜಕೀಯ ವ್ಯವಸ್ಥೆಗೆ ಯಾವುದೇ ಕೊಡುಗೆಯನ್ನು ನೀಡುವ ಭರವಸೆಗಳಿಲ್ಲ, ಕಾರಣ ಆಧುನಿಕ ಸಮಸ್ಯೆಗಳಿಗೆ ಆಸಕ್ತಿದಾಯಕವಾದ ಪರಿಹಾರವನ್ನು ಹುಡುಕುವ ಯಾವ ಲಕ್ಷಣಗಳೂ ಸಹ ಗೋಚರಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಗಾಗಿ ಪ್ರಾಚೀನ ಭಾರತದ ರಾಜಕೀಯ ಚಿಂತನೆ ಅನಾಸಕ್ತಿಯ ವಿಷಯವಾಗಿಯೇ ಮುಂದುವರಿಯುತ್ತಿದೆ.
ಪ್ರಾಚೀನ ಭಾರತವನ್ನು ಅಧ್ಯಯನ ನಡೆಸುವುದು ಚರಿತ್ರೆಕಾರರ ಕೆಲಸವೇ ಆಗಿದ್ದರೂ ಸಹ, ಅಲ್ಲಿನ ರಾಜಕೀಯ ವಿಚಾರ ಧಾರೆಗಳನ್ನು ಪತ್ತೆಹಚ್ಚುವುದು, ಅಧ್ಯಯನ ನಡೆಸುವುದು ರಾಜ್ಯಶಾಸ್ತಜ್ಞರ ಜವಾಬ್ದಾರಿಯೂ ಹೌದು. ಆದರೆ, ರೊಮಿಲಾ ಥಾಪರ್, ಅಲ್ಟೇಕರ್, ಆರ್.ಎಸ್.ಶರ್ಮಾ, ಡಿ.ಡಿ.ಕೋಸಾಂಬಿ ಇನ್ನೂ ಮುಂತಾದ ‘ಇತಿಹಾಸಕಾರ’ರಿಗೆ ಮಾತ್ರ ಇಂತಹ ಅಧ್ಯಯನಗಳು ಮುಖ್ಯವಾಗುತ್ತಿರುವುದು ಹಾಗೂ ರಾಜ್ಯಶಾಸ್ತ್ರಜ್ಞರುಗಳು ಅದನ್ನು ಅವಗಾಹನೆಗೆ ತಮ್ಮ ತೆಗೆದುಕೊಳ್ಳದೆ ಇರುವುದು ವಾಸ್ತವಾಗಿದೆ. ರಾಜಕೀಯ ಚಿಂತನೆಗಳ ಕುರಿತೇ ಅಧ್ಯಯನ ನಡೆಸುವವರು ಇತಿಹಾಸದ ಚಿಂತನೆಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ಗಮನಿಸದೇ ಹೋದರೆ ಪ್ರಾಚೀನ ರಾಜಕೀಯ ಚಿಂತನೆಗೆ ಪ್ರವೇಶ ದೊರಕುವುದು ಕಷ್ಟಸಾಧ್ಯ.
ಸಲ್ಲೇಖನ ವ್ರತದ ನಿಷೇಧದ ಹಿಂದಿನ ವಸಾಹತುಶಾಹಿ ಪ್ರಜ್ಞೆ
– ಡಂಕಿನ್ ಝಳಕಿ, India Platform
ಸಲ್ಲೇಖನ ವ್ರತದ ಆಚರಣೆ ಆತ್ಮಹತ್ಯೆಗೆ ಸಮಾನ ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜಸ್ಥಾನ ಉಚ್ಚ ನ್ಯಾಯಾಲಯವು ಈ ವ್ರತವನ್ನು ಕಾನೂನು ಬಾಹಿರವೆಂದು ಘೋಷಿಸಿ, ಇದನ್ನು ಭಾರತೀಯ ದಂಡ ಸಂಹಿತೆ 306 ಹಾಗು 309ರ ಅನುಸಾರ ಶಿಕ್ಷಾರ್ಹ ಅಪರಾಧ ಎಂದು ತೀರ್ಪನ್ನು ನೀಡಿದೆ. ದಂಡ ಸಂಹಿತೆ 306ರ ಪ್ರಕಾರ ಆತ್ಮಹತ್ಯೆಗೆ ಪ್ರೇರಣೆ ನೀಡುವುದು ಮತ್ತು 309ರ ಪ್ರಕಾರ ಆತ್ಮಹತ್ಯೆಗೆ ಪ್ರಯತ್ನಿಸುವುದು ಎರಡೂ ಶಿಕ್ಷಾರ್ಹ ಅಪರಾಧ. ಈ ಪ್ರಕಾರ ಸಲ್ಲೇಖನ ವ್ರತವನ್ನು ಕೈಗೊಳ್ಳುವ ವ್ಯಕ್ತಿಯ ಜೊತೆಗೆ ಈ ವ್ರತದಲ್ಲಿ ಭಾಗಿಯಾಗುವ ಪ್ರತಿಯೋರ್ವನೂ, ಅಂದರೆ ಇಡಿಯ ಜೈನ ಸಂಪ್ರದಾಯವನ್ನೂ ಬಹುಶಃ ಕಟಕಟೆಗೆ ಎಳೆಯಬಹುದು. ಹೀಗೆ ಭಾರತೀಯ ಸಂಪ್ರದಾಯವೊಂದನ್ನು, ಅದನ್ನು ಆಚರಿಸುವವರನ್ನು ಅಪರಾಧೀ ಸ್ಥಾನಕ್ಕೆ ಎಳೆಯುತ್ತಿರುವುದು (ಕ್ರಿಮಿನಲೈಸ್ ಮಾಡುತ್ತಿರುವುದು) ಇದೇ ಮೊದಲಲ್ಲ. ಕಳೆದ ಸುಮಾರು ಒಂದು ಸಾವಿರ ವರುಷಗಳ ಕಾಲ, ಎರಡು ವಸಾಹತುಶಾಹಿ ಆಳ್ವಿಕೆಗಳಡಿ ಭಾರತೀಯ ಸಂಪ್ರದಾಯಗಳು ಎದುರಿಸಿದ್ದು ಇದೇ ಪರಿಸ್ಥಿತಿ. ವಿಪರ್ಯಾಸವೆಂದರೆ ಸ್ವಾತಂತ್ರ್ಯ ಬಂದು ಆರು ದಶಕಗಳೇ ಕಳೆದರೂ, ಈ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬದುಕುವ ಹಕ್ಕಿನ ಉಲ್ಲಂಘನೆ ಎಂಬ ಅರ್ಥವಾಗದ ಪಾಶ್ಚಾತ್ಯ ಮತ್ತು ಕ್ರಿಶ್ಚಿಯನ್ ಚಿಂತನೆಯ ಹೆಸರಿನಲ್ಲಿ, ಸಾವಿರಾರು ವರುಷಗಳಿಂದ ನಡೆಯುತ್ತಾ ಬಂದಿರುವ ಭಾರತೀಯರ ಆಧ್ಯಾತ್ಮಿಕ ಆಚರಣೆಗಳನ್ನು ಹೀಗೆ ತುಚ್ಛವಾಗಿ ಕಂಡು ಅವುಗಳ ಸಂಹಾರ ನಡೆಯುತ್ತಿರುವ ಇಂದಿನ ದಿನಗಳಲ್ಲಿ ನಾವು ಮಾಡಬೇಕಾದದ್ದು ಏನು? ಮತ್ತಷ್ಟು ಓದು 
‘ಆತ್ಮಾಹುತಿ’ ಯಿಂದ ಆತ್ಮವಿಮರ್ಶೆ
– ಮನುಶ್ರೀ ಜೋಯಿಸ್
ಮಹಾಭಾರತ, ರಾಮಾಯಣದಂತ ಯಾವುದೇ ಗ್ರಂಥವಾಗಲಿ ಮೊದಲ ಬಾರಿಗೆ ಓದುವಾಗ ಮನಸ್ಸಲ್ಲಿ ಒಂದು ವಿಶೇಷ ತನ್ಮಯ ಭಾವವಿರುತ್ತದೆ. ‘ವಿಶೇಷ’ ಏಕೆಂದರೆ ಇದು ಬೇರೆ ಪುಸ್ತಕಗಳಂತಲ್ಲದೆ ಸುತ್ತ-ಮುತ್ತ ಕೇಳಿದ, ಜೀವನದಲ್ಲಿ ಬೆರೆತ, ಅಜ್ಜಿ ಶುರು ಮಾಡಿದ ಒಂದು ಕುತೂಹಲದ ಕಥೆ. ಓದುವಾಗ ಬೇರೆ ಯುಗವನ್ನೇ ನೋಡಿ ಬಂದಂತಹ ಪುಳಕ, ಪಾತ್ರಗಳ ಜೀವನದಲ್ಲಿ ಭಾಗಿಯಾದಂತಹ ರೋಮಾಂಚನ. ಪೂರ್ವಜರ ಚರಿತ್ರೆಯೆಂದೆನೋ.. ಪುಸ್ತಕ ಮುಗಿದಾಗ ಮನಸು ತುಂಬಿ ಬರುತ್ತದೆ. ಇನ್ನು ಕೊನೆ ಅಧ್ಯಾಯದ ಪುಟಗಳಲ್ಲಿ ಕಣ್ಣಾಡಿಸುವಾಗ ಬಿಟ್ಟು ಹೋದ ಎಷ್ಟೋ ಹೆಜ್ಜೆ ಗುರುತುಗಳನ್ನು ಹಚ್ಚಿಕೊಂಡು ಬಿಟ್ಟಿರುತ್ತೇವೆ.
ಹೀಗೆ ಪುರಾಣಗಳಂತೆ ಮನಸಿಗೆ ಹತ್ತಿರವಾಗುವ, ಎತ್ತರದಲ್ಲಿ ನಿಲ್ಲುವ ಒಂದು ಅದ್ಭುತ ಕೃತಿ ಶಿವರಾಮುರವರ ‘ಆತ್ಮಾಹುತಿ’. ಇದು 1970 ರಲ್ಲಿ ಮೊದಲ ಬಾರಿಗೆ ಪ್ರಕಟಗೊಂಡಿತು. ಪ್ರತಿಯೊಬ್ಬ ಭಾರತೀಯನು ತಿಳಿದಿರಬೇಕಾದ ಇತಿಹಾಸ ಇದು. ಓದಲೇ ಬೇಕಾದ the best book.
ಸ್ವಾತಂತ್ರ್ಯ ವೀರ ಸಾವರಕರ ರವರ ಜೀವನ ಚರಿತ್ರೆ. ಇದನ್ನು ಆತ್ಮಕಥೆಯಂತೆ ನಿರೂಪಿಸಲಾಗಿದೆ. ಸಾಮಾನ್ಯ ವ್ಯಕ್ತಿಯೊಬ್ಬನ ಉನ್ನತ ಧೇಯ್ಯೋದ್ದೇಶಗಳು ಹೇಗೆ ಮಹಾನ್ ವ್ಯಕ್ತಿತ್ವಕ್ಕೆ ಮೆಟ್ಟಿಲುಗಳಾಗುತ್ತವೆ ಎಂಬುದಕ್ಕೆ ನಿದರ್ಶನವಿದು. ಬಾಲಕನಿದ್ದಾಗ ಚಿಗುರುವ ದೇಶ ಭಕ್ತಿ ಇಡೀ ವಿಶ್ವಕ್ಕೆ ವ್ಯಾಪಿಸುವ ಕಥಾನಕವಿದು. ಹಿಂದುತ್ವದ ಅಮೋಘ ಪರಿಕಲ್ಪನೆಯನ್ನು ಅನಾವರಣಗೊಳಿಸುವ ಇವರ ಜ್ಞಾನ ಅಗಾಧ. ಇದೆಲ್ಲವನ್ನೂ ಕೇಳುವುದಕ್ಕಿಂತ ಅನುಭವಿಸ ಬೇಕೆಂದಿದ್ದರೆ ಆತ್ಮಾಹುತಿಯನ್ನು ಓದಲೇಬೇಕು ಬೇಕು.
ಮತ್ತಷ್ಟು ಓದು 




