“ನೀನು” ಯಾರು? ಸತ್ಯ ಶೋಧನೆಗೆ ಸಮಿತಿ
– ಪ್ರವೀಣ್ ಕುಮಾರ್ ಮಾವಿನಕಾಡು
ಇತ್ತೀಚೆಗಷ್ಟೇ ವಾಲ್ಮೀಕಿ ಯಾರು ಎನ್ನುವ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಸರ್ಕಾರ, ಹೇಗಾದರೂ ಮಾಡಿ ಮತ್ತೆ ಆ ಪುಸ್ತಕ ಜನರನ್ನು ತಲುಪಲು ಬಿಡಬಾರದು ಎನ್ನುವ ಕಾರಣಕ್ಕಾಗಿ ಆಯ್ದ ವ್ಯಕ್ತಿಗಳಿಂದ ಕೂಡಿದ ಸತ್ಯ ಶೋಧನಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಈಗ ಉಪೇಂದ್ರ ನಿರ್ದೇಶಿಸಿ ನಟಿಸಿದ ಉಪ್ಪಿ2 ಚಿತ್ರದಲ್ಲಿ ಬರುವ ‘ನೀನು’ ಅಂದರೆ ಯಾರು ಎನ್ನುವ ಬಗ್ಗೆ ಸತ್ಯಶೋಧನೆ ಕೈಗೊಳ್ಳಲು ಹಂಪೆನಾಗ್ ಅವರ ನೇತೃತ್ವದಲ್ಲಿ ಸರಕಾರ ಇನ್ನೊಂದು ಸತ್ಯಶೋಧನಾ ಸಮಿತಿಯನ್ನು ರಚಿಸಿದೆ! ಅಲ್ಲದೇ ಉಪೇಂದ್ರ ಅವರು ತಮ್ಮ ಚಿತ್ರಕ್ಕೆ ಉಪ್ಪಿಟ್ಟು ಎನ್ನುವ ಹೆಸರನ್ನೇ ಏಕೆ ಇಟ್ಟರು,ಬಹುಜನರು ಸೇವಿಸುವ ಇತರ ಮಾಂಸಾಹಾರದ ಹೆಸರನ್ನು ಏಕೆ ಇಡಲಿಲ್ಲ ಎನ್ನುವ ಬಗ್ಗೆಯೂ ಸಮಿತಿ ಚರ್ಚಿಸಿ ಸರ್ಕಾರಕ್ಕೆ ತನ್ನ ವರದಿ ಒಪ್ಪಿಸಲಿದೆ.
ಈ ಮೊದಲು ಕೆಲವು ಕಾರಣಗಳಿಗಾಗಿ ಉಪೇಂದ್ರ ರವರ ಈ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಸರ್ಕಾರ ಅಂದುಕೊಂಡಿತ್ತಾದರೂ ನಂತರ,ನ್ಯಾಯಾಲಯವು ಸರ್ಕಾರ ಕೊಡಲಿದ್ದ ಕಾರಣಗಳನ್ನು ಒಪ್ಪುವ ಸಾಧ್ಯತೆಗಳು ತೀರಾ ಕಮ್ಮಿ ಎನ್ನುವ ತಜ್ಞರ ಸಲಹೆಯ ಮೇರೆಗೆ ಈ ಸತ್ಯ ಶೋಧನಾ ಸಮಿತಿಯನ್ನು ರಚಿಸಿ ಆ ಸಮಿತಿಯಿಂದ ತಮಗೆ ಬೇಕಾದ ರೀತಿಯಲ್ಲಿ ವರದಿಯನ್ನು ಪಡೆದು ನಂತರ ಚಿತ್ರ ಪ್ರದರ್ಶನ ರದ್ದು ಮಾಡಲು ತೀರ್ಮಾನಿಸಿದೆ.ಆದ್ದರಿಂದ ಶ್ರೀ ಹಂಪೆನಾಗರಾಜು ಅವರ ನೇತೃತ್ವದಲ್ಲಿ ಆರು ಜನ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗಿದೆ.
ಮೇಕಿಂಗ್ ಆಫ್ ಸೂಪರ್ಮ್ಯಾನ್
– ರೋಹಿತ್ ಚಕ್ರತೀರ್ಥ
ನಾನು ಶೇಕ್ ನಾಸಿರ್. ಕನಸಿನ ನಗರಿ ಮುಂಬೈಯಿಂದ ಬರೋಬ್ಬರಿ 296 ಕಿಲೋಮೀಟರ್ ದೂರದ ಮಾಲೆಗಾಂವ್ ಎಂಬ, ದಿನದ ಹನ್ನೆರಡು ಗಂಟೆ ಕರೆಂಟಿಲ್ಲದ ಪುಟ್ಟಹಳ್ಳಿಯ ಜಗತ್ಪ್ರಸಿದ್ಧ ಫಿಲ್ಮ್ ಡೈರೆಕ್ಟರ್. ನೀವು, ನಾನು ಮಾಡಿದ ಶೋಲೆ, ಶಾನ್ ಚಿತ್ರಗಳನ್ನು ನೋಡಿಯೇ ಇರುತ್ತೀರಿ. ನನ್ನ ವಿಶ್ವವಿಖ್ಯಾತ ಸೂಪರ್ಮ್ಯಾನ್ ಚಿತ್ರ ಕೂಡ. ಬಿಡಿ, ಸೂಪರ್ಮ್ಯಾನ್ ಕತೆ ಹೇಳೋ ಮೊದಲು, ನನ್ನ ಮತ್ತು ನಮ್ಮ ಹಳ್ಳಿಯ ಕತೆ ಸ್ವಲ್ಪ ಹೇಳ್ತೀನಿ. ಕತೆಗೆ ಮುನ್ನ ಪೀಠಿಕೆ, ಚಿತ್ರಕ್ಕೆ ಮುನ್ನ ಫ್ಲ್ಯಾಶ್ಬ್ಯಾಕ್ – ತುಸು ಇಂಟರೆಸ್ಟಿಂಗ್ ಆಗಿರುತ್ತೆ.
ಅಂದಹಾಗೆ, ನನ್ನೂರಿನ ಹೆಸರನ್ನು ನೀವು ಕೇಳಿರಬಹುದು, ಓದಿರಬಹುದು. ಕೋಮುಘರ್ಷಣೆಗೆ ಬಹಳ ಪ್ರಸಿದ್ಧವಾದ ಊರು ನನ್ನದು. ಹಳ್ಳಿಯ ನಡುಮಧ್ಯೆ ಗೌರಮ್ಮ ಬೈತಲೆ ತೆಗೆದ ಹಾಗೆ ಒಂದು ನದಿ ಹರಿಯುತ್ತೆ. ಅದರಾಚೆ ಹಿಂದೂಗಳು, ಈಚೆ ಮುಸ್ಲಿಮರು ಬದುಕ್ತಾ ಇದಾರೆ. ಇರೋರಲ್ಲಿ ಮುಕ್ಕಾಲುಭಾಗ ಮುಸ್ಲಿಮರೇ ಇರೋದು. ನಮ್ಮ ಬಿಕನಾಸಿ ಉದ್ಯೋಗಗಳಿಗೆ ಒಂದು ಹೆಸರು ಅಂತ ಕೂಡ ಇಲ್ಲ. ಗುಜರಿ, ಪೇಪರ್, ಚಾದಂಗಡಿ, ಗಾಡಿ ರಿಪೇರಿ, ಪಂಚರು, ಪ್ಲಂಬರ್, ಬಟ್ಟೆ ಅಂಗಡಿ, ಹಜಾಮತಿ – ಹೀಗೆ ಮಧ್ಯಾಹ್ನ ರೊಟ್ಟಿ ತಟ್ಟೋದಕ್ಕೆ ಆಗುವಷ್ಟು ಕೂಲಿ ಹುಟ್ಟಿದರೆ ಸಾಕು, ಅದೇ ಒಂದು ಉದ್ಯೋಗ. ಇವತ್ತು ಗಡ್ಡ ಹೆರೆದವನು ನಾಳೆ ಬೋರ್ಡು ಬರೀಬಹುದು, ನಿನ್ನೆ ಟೈರ್ ಹೊಲಿದು ಪಂಚರ್ ಹಾಕಿದೋನು ಇವತ್ತು ಟೈಲರ್ ಆಗಬಹುದು! ಒಟ್ಟಲ್ಲಿ ಹೇಳುವುದಾದರೆ, ಈ ಊರಿನ ಸಮಸ್ತರೂ ಸಕಲಕಲಾವಲ್ಲಭರು!
ಸ್ವಪ್ನ ಸಾರಸ್ವತ – ಎರಡು ಅನಿಸಿಕೆಗಳು
ಸ್ವಪ್ನ ಸಾರಸ್ವತ – ಕುಲ ಮತ್ತು ಕಾಲದ ಕಥೆ
– ನವೀನ ಗಂಗೋತ್ರಿ
ನೆನಪಳಿಯದ ಕೃತಿಗಳ ಸಾಲಿನಲ್ಲಿ ಈ ಹೆಸರು ಎಂದಿಗೂ ಅಜರಾಮರ- ಸ್ವಪ್ನ ಸಾರಸ್ವತ. ಒಂದು ಕೃತಿ ಯಾಕೆ ಹಾಗೆ ಪದೇ ಪದೇ ಸ್ಮರಣೀಯವಾಗುತ್ತದೆ ಎನ್ನುವುದಕ್ಕೆ ಆ ಕೃತಿಯ ರೋಚಕತೆಯಾಗಲೀ, ಕಥೆಯ ಕಲ್ಪಕತೆ ಅಥವಾ ಕುತೂಹಲದ ತುದಿಯಲ್ಲಿ ನಿಲ್ಲಿಸುವ ಗುಣವಾಗಲೀ ಕಾರಣವಾಗದೆ ಆ ಕೃತಿಯು ತನ್ನ ಪಾತ್ರಗಳ ಮೂಲಕ ಮಾನವ ಬದುಕಿನ ಯಾವೆಲ್ಲ ಘಟ್ಟಗಳನ್ನು ತಾಕಬಲ್ಲದು,ಮತ್ತು ತಾತ್ತ್ವಿಕವಾಗಿ ಯಾವ ಅನಿಸಿಕೆಯನ್ನು ವ್ಯಕ್ತಪಡಿಸಬಲ್ಲದು ಎನ್ನುವುದು ಕಾರಣವಾಗುತ್ತದೆ. ಮಹಾಕಾವ್ಯಗಳಲ್ಲದೆ, ನಮ್ಮನಡುವೆ ಉಳಿದುಬಂದ ಯಾವುದೇ ಮೌಲಿಕ ಕೃತಿಯನ್ನು ತೆಗೆದುಕೊಂಡರೂ ಅದರ ಸಾರ್ವತ್ರಿಕ ಗುಣ ಇದುವೇ ಆಗಿರುತ್ತದೆ- ಮಾನವ ಬದುಕನ್ನು ಅದು ಕಾಣುವ ರೀತಿ ಮತ್ತು ಕಟ್ಟಿಕೊಡುವ ತಾತ್ತ್ವಿಕತೆ. ಬದುಕಿನ ಅರ್ಥದ ಬಗ್ಗೆ ಮನುಷ್ಯನಿಗಿರುವ ಆರದ ಕುತೂಹಲವೂ ಇದಕ್ಕೆ ಕಾರಣವಿದ್ದೀತು. ಎಷ್ಟೇ ರೋಚಕವಾದರೂ ಯಾವುದೋ ಸಾಮಾನ್ಯ ಪತ್ತೇದಾರಿ ಕಾದಂಬರಿ, ಯಾವುದೋ ಸಾಮಾನ್ಯ ಪ್ರೇಮ ಕಥೆ ನೆನಪಿರುವುದು ತುಂಬ ತುಂಬ ವಿರಳ. ಸಾರಸ್ವತದ ಚಿರಂಜೀವಿತ್ವ ಇರುವುದು ಅದರ ಚಿಂತನೆ ಮತ್ತು ತಾತ್ತ್ವಿಕ ಹಿನ್ನೆಲೆಯಲ್ಲಿ.
ಗೋವೆಯೆಂಬ ಪುಟ್ಟ ನಾಡಲ್ಲಿ ತಮ್ಮಪಾಡಿಗೆ ತಾವು ಬದುಕಿದ್ದ ಸಾರಸ್ವತ ಜನಾಂಗ, ಏಕಾ ಏಕಿ ಎರಗಿದ ಹುಂಬ ಪೋರ್ಚುಗೀಸರ ಭಯಂಕರ ಕಿರುಕುಳ ತಾಳಲಾರದೆ ತಮ್ಮ ಉಸಿರಿನ ನೆಲ ಬಿಟ್ಟು, ಬದುಕಲ್ಲಿ ಎಂದಿಗೂ ಕಂಡಿರದಿದ್ದ ಅರಿಯದ ನೆಲೆಗೆ ಎದ್ದುನಡೆದ ಕಥೆ ಅದು. ಕಥೆಯ ಹಂದರವಂತೂ ತುಂಬ ತುಂಬ ಸಂಕೀರ್ಣವಾಗಿದೆ. ಓದುವುದಕ್ಕೇ ಅದೊಂದುಬಗೆಯ ಏಕಾಗ್ರತೆಯನ್ನು ಬೇಡುವ ಈ ಕೃತಿ ತನ್ನ ಬರಹಗಾರನಲ್ಲಿ ಬೇಡಿದ ತಪಸ್ಸಿನ ಮೊತ್ತವನ್ನು ಕಲ್ಪಿಸಿ ಚಕಿತನಾಗುತ್ತೇನೆ.
ಸಮುದಾಯವೊಂದು ತನ್ನ ಜೀವನೆಲೆಯಂತಿರುವ ಭೂಭಾಗವನ್ನು ತೊರೆದು ಬರುವಾಗ ಅದೊಂದು ’ಕೇವಲ ಸ್ಥಾನಾಂತರಣ’ ಆಗಿರದೆ, ತಲೆಮಾರುಗಳನ್ನು ಪ್ರಭಾವಿಸುವ ಸಂಗತಿಯಾಗಿರುತ್ತದೆ ಎನ್ನುವುದು ಸಾರಸ್ವತವನ್ನು ಓದುವಾಗ ನಿಚ್ಚಳವಾಗುತ್ತದೆ. ತನ್ನ ಪರಿವಾರ, ಪರಿಸ್ಥಿತಿ, ಸಮೂಹದ ಸಮೇತ ಒಂದು ಕುಲ ಸ್ಥಾನಾಂತರವಾಗುವಾಗ ಯಾವುದೆಲ್ಲವನ್ನು ತನ್ನೊಡನೆ ಕೊಂಡೊಯ್ಯಬಹುದು? ಆಸ್ತಿ, ಹಣ, ಒಡವೆ, ಉಳಿಕೆ, ಗಳಿಕೆ- ಯಾವುದನ್ನು? ಸಾರಸ್ವತದ ದೃಷ್ಟಿ ಕೇಂದ್ರಗೊಳ್ಳುವುದು ಇದ್ಯಾವುದರ ಮೇಲೆಯೂ ಅಲ್ಲ, ಬದಲಿಗೆ ಆ ಹಂತದಲ್ಲಿ ಮನುಷ್ಯ ತುಂಬಾ ಗಾಢವಾಗಿ ಹೊತ್ತೊಯ್ಯಲು ಬಯಸುವುದೆಂದರೆ ತನ್ನ ತಲೆಮಾರುಗಳಿಗೆ ಸಾಕಾಗುವಷ್ಟು ನೆನಪನ್ನು, ಸಂಪ್ರದಾಯ ಆಚಾರ ಮತ್ತು ನಂಬುಗೆಗಳನ್ನು ಎಂಬ ನಿಲುಮೆಗೆ ಸಾರಸ್ವತ ಬರುತ್ತದೆ. ನೆಲ ಬಿಟ್ಟೆದ್ದು ಬಂದದ್ದೇ ಆಚಾರದ ಉಳಿಕೆಗಾಗಿ ಎಂಬಾಗ, ಹೊತ್ತೊಯ್ಯಬೇಕಿರುವುದು ಅದನ್ನೇ ಅಲ್ಲವೆ?
ಯು. ಆರ್. ಅನಂತಮೂರ್ತಿಯವರ “ಪ್ರಜ್ಞೆ ಮತ್ತು ಪರಿಸರ”
–ಡಾ. ಪ್ರವೀಣ ಟಿ. ಎಲ್,ಕುವೆಂಪು ವಿಶ್ವವಿದ್ಯಾನಿಲಯ
ಕಳೆದ ವರ್ಷ ತುಂಬಾ ಚರ್ಚೆಯಲ್ಲಿದ್ದು, ಈಗ ನಮ್ಮೊಂದಿಗಿಲ್ಲದ ಹಿರಿಯ ಸಾಹಿತಿ ಯು. ಆರ್ ಅನಂತಮೂರ್ತಿ. ಅವರು ಮೋದಿ ವಿರುದ್ಧ ನೀಡಿದ ಹೇಳಿಕೆಯಿಂದ ಹಿಡಿದು, ಅವರ ಅಂತ್ಯ’ಸಂಸ್ಕಾರ’ದ ನಂತರವೂ ಸುದ್ದಿಯಲ್ಲಿದ್ದರು. ಆ ಸಂದರ್ಭದಲ್ಲಿ ಅವರನ್ನು ಅರ್ಥಮಾಡಿಕೊಳ್ಳಲು ಸ್ವತಃ ಅವರ ಸಮರ್ಥಕರಿಗೂ, ವಿಮರ್ಶಕರಿಗೂ ಸ್ವಲ್ಪ ತ್ರಾಸವೇ ಆಯಿತು. ಆಗ ಕೆಲವರು ಅನಂತಮೂರ್ತಿಯವರ ನಿಲುವನ್ನು ‘ಕಪಟತನ’ ಎಂದು ಒರಟಾಗಿಯೂ, ಇನ್ನು ಕೆಲವರು ‘ದ್ವಂಧ್ವ’ ಎಂದೂ ತೀರ್ಪಿತ್ತರು. ಅವರ ಗ್ರಹಿಕೆಯ ಸಂಪೂರ್ಣ ಚಿತ್ರಣವನ್ನು ನೀಡುವುದು ಈ ಲೇಖನದ ವ್ಯಾಪ್ತಿಯಲ್ಲಿ ಅಸಾಧ್ಯ. ಆದರೆ ಅವರು ಹಿಂದೂ ಸಂಪ್ರದಾಯಗಳ ‘ಆಂತರಿಕ ವಿಮರ್ಶಕ’ರಾಗಿ ಜೀವನದುದ್ದಕ್ಕೂ ಅದರ ಆಚರಣೆಗಳನ್ನು ಟೀಕಿಸುತ್ತಾ ಬಂದವರು, ಕೊನೆಗೆ ಆ ಸಂಪ್ರದಾಯದಂತೆಯೇ ತನ್ನ ಸಂಸ್ಕಾರ ನಡೆಯಬೇಕೆಂದು ಇಚ್ಚಿಸಿದ್ದು ದೊಡ್ಡ ಚರ್ಚೆಗೆ ಗ್ರಾಸವಾಯಿತು. ಈ ನಡೆಯು ಅವರ ಪ್ರಗತಿಪರ ಮಿತ್ರರಿಗೆ ನುಂಗಲಾರದ ತುತ್ತಾಗಿದ್ದು ಈಗ ಇತಿಹಾಸ. (ಅವರ ಕಾದಂಬರಿಯ ನಾರಾಣಪ್ಪನವರ ಸಂಸ್ಕಾರದಂತೆ ತನ್ನ ಸಂಸ್ಕಾರ ದೊಡ್ಡ ಸವಾಲಾಗದಿರಲಿ ಎಂದು ಬ್ರಾಹ್ಮಣ ಪರಂಪರೆಯಂತೆ ತಮ್ಮ ಅಂತ್ಯಸಂಸ್ಕಾರವಾಗಬೇಕೆಂಬ ಇಚ್ಚೆಯನ್ನು ವ್ಯಕ್ತಪಡಿಸಿದರೇನೋ!!) ಆದರೆ ಹೀಗ್ಯಾಕೆ ಮಾಡಿದರು ಎಂಬ ಪ್ರಶ್ನೆಗೆ ಬಹುತೇಕರು ಸಮರ್ಪಕ ಉತ್ತರ ಹುಡುಕುವ ಬದಲಿಗೆ, ಅದನ್ನು ಬ್ರಾಹ್ಮಣರ ಕುತಂತ್ರಕ್ಕೋ, ಕಪಟತನಕ್ಕೋ ಸಂಬಂಧ ಕಲ್ಪಿಸಿ ಕೈತೊಳೆದುಕೊಂಡರು. ಆದರೆ ಅದನ್ನು ಗ್ರಹಿಸಲು ಯತ್ನಿಸಿದ ಕೆಲವರು ‘ಮೇಷ್ಟ್ರು ನಮ್ಮ ನಂಬಿಕೆಗೆ ಮೋಸ ಮಾಡಿದರು’ ಎಂದು ಅಲವತ್ತುಕೊಳ್ಳುವಲ್ಲಿಯೇ ತೃಪ್ತಿಹೊಂದಿದರು. ಆ ದ್ವಂದ್ವವನ್ನು ಅರ್ಥೈಸುವ ಚಿಕ್ಕ ಪ್ರಯತ್ನವೇ ಈ ಬರಹ.
ಡಾ. ಯು.ಆರ್ ಅನಂತಮೂರ್ತಿ ನೆನಪಿನಲ್ಲಿ
– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಕನ್ನಡದ ಶ್ರೇಷ್ಟ ಬರಹಗಾರ ಮತ್ತು ಚಿಂತಕ ಡಾ.ಯು.ಆರ್.ಅನಂತಮೂರ್ತಿ ನಿಧನರಾಗಿ ಅಗಸ್ಟ್ 22 ಕ್ಕೆ ಒಂದು ವರ್ಷವಾಯಿತು. ತಮ್ಮ ಸಮಗ್ರ ಸಾಹಿತ್ಯದ ಮೂಲಕ ಕನ್ನಡಕ್ಕೆ ಆರನೆ ಜ್ಞಾನಪೀಠ ತಂದುಕೊಟ್ಟು ಕನ್ನಡ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ ಡಾ.ಯು.ಆರ್.ಅನಂತಮೂರ್ತಿ ಅವರು ಸಂಸ್ಕಾರ, ಭವ, ಘಟಶ್ರಾದ್ಧ, ಬರ ಹೀಗೆ ಸಂಖ್ಯಾತ್ಮಕ ದೃಷ್ಟಿಯಿಂದ ಬೆರಳೆಣಿಕೆಯ ಕಾದಂಬರಿಗಳನ್ನು ಮತ್ತು ಕೆಲವು ಕಥಾ ಸಂಕಲನಗಳನ್ನು ಬರೆದು ಬರೆದದ್ದು ಕಡಿಮೆ ಎಂದೆನಿಸಿದರೂ ಅವರು ಬರೆದದ್ದೆಲ್ಲ ತುಂಬ ಮೌಲಿಕವಾದದ್ದು. 1960 ರ ದಶಕದಲ್ಲಿ ‘ಸಂಸ್ಕಾರ’ದಂಥ ಸಂಪ್ರದಾಯ ವಿರೋಧಿ ಕಾದಂಬರಿಯನ್ನು ಅದು ಕುರುಡು ನಂಬಿಕೆಗಳು ಅತ್ಯಂತ ಪ್ರಸ್ತುತವಾಗಿದ್ದ ದಿನಗಳಲ್ಲಿ ಬರೆಯಲು ಸಾಧ್ಯವಾಗಿದ್ದು ಮೂರ್ತಿಗಳಲ್ಲಿದ್ದ ಸಮಾಜದ ಕುರಿತಾದ ಕಳಕಳಿಗೆ ನಿಜವಾದ ದೃಷ್ಟಾಂತ. ಸಂಪ್ರದಾಯವನ್ನು ವಿರೋಧಿಸಿ ಬರೆಯಲು ತಮಗೆ ಹೇಗೆ ಸಾಧ್ಯವಾಯಿತು ಎನ್ನುವುದನ್ನು ತಮ್ಮ ಆತ್ಮಕಥನ ‘ಸುರಗಿ’ಯಲ್ಲಿ ಹೀಗೆ ಹೇಳಿಕೊಂಡಿರುವರು ‘ಅಪ್ಪ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದ ಹೊಲದ ಕೆಲಸದ ಆಳನ್ನು ತಮ್ಮ ಸಮಕ್ಕೆ ಕೂಡಿಸಿಕೊಂಡು ಊಟ ಹಾಕುತ್ತಿದ್ದ ಅಂದಿನ ಮನೆಯ ವಾತಾವರಣವೇ ನಾನು ಬದುಕುತ್ತಿದ್ದ ವ್ಯವಸ್ಥೆಯನ್ನು ವಿರೋಧಿಸಿ ಬರೆಯಲು ಸ್ಪೂರ್ಥಿ ನೀಡಿತು’. ಸಂಪ್ರದಾಯಗಳು ಜಡ್ಡುಗಟ್ಟಿದ ಆ ದಿನಗಳಲ್ಲೇ ಅನಂತಮೂರ್ತಿ ಅವರು ಅಂತರ್ ಧರ್ಮೀಯ ವಿವಾಹವಾಗಿದ್ದು ಅವರೊಳಗಿನ ಸಾಮಾಜಿಕ ಬದ್ಧತೆಗೆ ಸಾಕ್ಷಿಯಾಗಿದೆ. ಕೇವಲ ಉಪದೇಶಿಸದೆ ಹೇಳಿದ್ದನ್ನು ಸ್ವತ: ಕಾರ್ಯಗತ ಮಾಡಿತೋರಿಸಿದ ಅವರೊಳಗಿನ ಈ ಧಾಡಸಿತನದ ಗುಣವೇ ಅವರನ್ನು ವಿರೋಧಿಸುವವರಂತೆ ಮೆಚ್ಚುವ ಮತ್ತು ಅಭಿಮಾನಿಸುವ ಅಭಿಮಾನಿಗಳ ಪಡೆಯನ್ನೇ ಸೃಷ್ಟಿಸಿತು. ಡಾ.ಯು.ಆರ್.ಅನಂತಮೂರ್ತಿ ವೈಚಾರಿಕವಾಗಿ ಅತ್ಯಂತ ಪ್ರಬುದ್ಧರಾಗಲು ಮತ್ತು ತಾನು ಬದುಕುತ್ತಿದ್ದ ವ್ಯವಸ್ಥೆಯ ಅಪಸವ್ಯಗಳನ್ನು ವಿರೋಧಿಸುವಂತಾಗಲು ಅವರು ಪಡೆದ ಇಂಗ್ಲಿಷ್ ಶಿಕ್ಷಣವೂ ಕಾರಣವಾಯಿತು. ಬರ್ಮಿಂಗ್ಹ್ಯಾಮ್ ಯುನಿವರ್ಸಿಟಿಯಲ್ಲಿನ ಇಂಗ್ಲಿಷ್ ಶಿಕ್ಷಣ ಅವರನ್ನು ಬರಹಗಾರನ ಜೊತೆಗೆ ಒಬ್ಬ ಚಿಂತಕನನ್ನಾಗಿಯೂ ರೂಪಿಸಿತು. ಅದಕ್ಕೆಂದೇ ಅವರು ತಮ್ಮ ಬರಹ ಮತ್ತು ವೈಚಾರಿಕ ಚಿಂತನೆಗಳಿಂದ ತಾವು ಬದುಕುತ್ತಿದ್ದ ಸಮಾಜವನ್ನು ಕಾಲಕಾಲಕ್ಕೆ ಜಾಗೃತಗೊಳಿಸುತ್ತಲೇ ಬಂದರು. ಬರಹಗಾರನೊಬ್ಬ ಸಮಾಜದ ಸಮಸ್ಯೆಗಳು ಮತ್ತು ವ್ಶೆರುಧ್ಯಗಳಿಗೆ ಸದಾಕಾಲ ಮುಖಾಮುಖಿಯಾಗಿರಬೇಕು ಎನ್ನುವ ನಿಲುವು ಅವರದಾಗಿತ್ತು. ಉತ್ತಮವಾದದ್ದನ್ನು ಉತ್ತೇಜಿಸಿ ಮಾತನಾಡುತ್ತಿದುದ್ದಕಿಂತ ತಮಗೆ ಸರಿಕಾಣದ್ದನ್ನು ಅವರು ಖಂಡಿಸಿ ಮಾತನಾಡಿದ್ದೇ ಹೆಚ್ಚು. ಲೇಖಕ ಸತ್ಯನಾರಾಯಣ ಅವರು ಹೇಳುವಂತೆ ಲೇಖಕನಾದವನ ಕೆಲಸ ಸದಾಕಾಲ ಓದುಗರಿಗೆ ಪ್ರಿಯವಾದದ್ದನ್ನೇ ಹೇಳುವುದಲ್ಲ ಎನ್ನುವ ಮಾತು ಅನಂತಮೂರ್ತಿ ಅವರಿಗೆ ಹೆಚ್ಚು ಅನ್ವಯವಾಗುತ್ತದೆ. ಈ ಕಾರಣದಿಂದಲೇ ಅವರು ‘ಬರಹಗಾರ ಏನನ್ನೂ ಸುಲಭವಾಗಿ ಒಪ್ಪಿಕೊಳ್ಳದೆ ಎಲ್ಲವನ್ನೂ ಅನುಮಾನದಿಂದ ನೋಡಬೇಕು’ ಎಂದು ಯುವಬರಹಗಾರರಿಗೆ ಕಿವಿಮಾತು ಹೇಳುತ್ತಿದ್ದರು.
ಮತ್ತಷ್ಟು ಓದು 
ಮಾತೃಪ್ರೇಮಕ್ಕೂ ಒ೦ದು ವೈಜ್ಞಾನಿಕ ವಿವರಣೆಯಿದೆ ಗೊತ್ತಾ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ತು೦ಬ ಪ್ರೀತಿಯಿ೦ದ ಮಗನನ್ನು ಬೆಳೆಸಿರುತ್ತಾಳೆ ತಾಯಿ.ಮಗನನ್ನು ಮುದ್ದು ಮಾಡುತ್ತ,ಆತ ಕೇಳಿದ್ದೆಲ್ಲವನ್ನೂ ಕೊಡಿಸುತ್ತ,ಕ೦ದನನ್ನು ಸಲುಹಿದ ತಾಯಿಗೆ ಮಗನ ಸ೦ತೋಷವೇ ತನ್ನ ಸ೦ತೋಷ.ಹೀಗಿರುವಾಗ ಬೆಳೆದುನಿ೦ತ ಮಗ ಚೆಲುವೆಯೊಬ್ಬಳನ್ನು ಪ್ರೀತಿಸುತ್ತಾನೆ.ಹುಡುಗಿಗೂ ಇವನನ್ನು ಕ೦ಡರೆ ಇಷ್ಟ.ಆದರೆ ಇವನಮ್ಮ ಅ೦ದರೆ ಕಷ್ಟ.ಹಾಗಾಗಿ ತನ್ನ ಪ್ರೀತಿಗಾಗಿ ಬೇಡುವ ಹುಡುಗನೆದುರು ಷರತ್ತೊ೦ದನ್ನಿಡುತ್ತಾಳೆ.’ತನ್ನ ಪ್ರೀತಿ ಬೇಕಾದರೆ ,ಹೆತ್ತಮ್ಮನ ಹೃದಯವನ್ನು ಕಿತ್ತು ತರಬೇಕು’.ಬೆಳೆದುನಿ೦ತ ಹುಡುಗನಿಗೆ ಈಗ ತಾಯಿ ಬೇಕಿಲ್ಲ.ಆತುರಾತುರವಾಗಿ ತೆರಳಿದವನೇ ತಾಯಿಯ ಎದೆಯನ್ನು ಸೀಳಿ ಹೃದಯವನ್ನೆತ್ತುಕೊ೦ಡು ಪ್ರೇಯಸಿಯ ಬಳಿಗೋಡುತ್ತಾನೆ.ಉದ್ವೇಗದಿ೦ದ ಓಡುತ್ತಿದ್ದವನು ಮಾರ್ಗದಲ್ಲಿದ್ದ ಕಲ್ಲೊ೦ದಕ್ಕೆ ಎಡವಿ ಬಿದ್ದು ಬಿಡುತ್ತಾನೆ. ‘ಅಮ್ಮಾ..’ ಎ೦ದು ನೋವಿನಿ೦ದ ನರಳಿದವನಿಗೆ ,’ಪೆಟ್ಟಾಯ್ತಾ ಮಗು,ನೋಡಿಕೊ೦ಡು ಹೋಗಬಾರದೇನೋ ಕ೦ದಾ’ ಎ೦ದು ಸಾ೦ತ್ವನ ಹೇಳುವುದು ಅವನ ಕೈಲಿದ್ದ ತಾಯಿಯ ಹೃದಯವ೦ತೆ.ಬಹುಶ; ಈ ಕತೆಯನ್ನು ನೀವೆಲ್ಲರೂ ಕೇಳಿರುತ್ತೀರಿ.ತಾಯಿಯ ಮಹತ್ವವನ್ನು ಸಾರುವ ಈ ಕತೆ ಸಾಕಷ್ಟು ಹಳೆಯದ್ದೇ.ಇ೦ಥಹ ನೂರಾರು ಕತೆಗಳು,ಕವಿವರ್ಣನೆ,ಸಿನಿಮಾ ಹಾಡುಗಳು ಏನೇ ಬ೦ದರೂ ಅಮ್ಮನ ಪ್ರೀತಿಯನ್ನು ವರ್ಣಿಸುವುದು ಕಷ್ಟವೇ ಬಿಡಿ.ಆಕೆಯ ಪ್ರೀತಿಗಿರುವ ಶಕ್ತಿಯೇ ಅ೦ಥದ್ದು.ಹುಟ್ಟಿದಾರಭ್ಯ ಮಗುವಿನ ಜೀವಕ್ಕೆ ಜೀವವಾಗುವವಳು ಅಮ್ಮ.ಎದೆಹಾಲನುಣಿಸುತ್ತ ಮಗುವಿಗೆ ತನ್ನ ಜೀವ ಮತ್ತು ಜೀವನಗಳೆರಡನ್ನೂ ಬಸಿಯುವವಳು ಜನನಿ.ಕೂಸಿಗಾಗಿ ತನ್ನ ಜೀವವನ್ನಾದರೂ ಆಕೆ ಒತ್ತೆಯಿಟ್ಟಾಳು.ಮನುಷ್ಯರು ಬಿಡಿ.ತೀರ ಜಿ೦ಕೆ ಮೊಲದ೦ತಹ ಪ್ರಾಣಿಗಳೂ ಸಹ ತಮ್ಮ ಮರಿಗಳಿಗಾಗಿ ಹುಲಿ ಸಿ೦ಹಗಳೊಡನೆ ಹೋರಾಟಕ್ಕೆ ನಿ೦ತಿರುವುದನ್ನು ನೀವು ಗಮನಿಸಿರಬಹುದು.ಕವಿವಾಣಿಗೆ ನಿಲುಕದ,ಯೋಗಿಗಳ ಶಕ್ತಿಗೆ ಬಗ್ಗದ ಮಾತೃಪ್ರೇಮದ ಬಗ್ಗೆ ನಮಗೆ ತಿಳಿದಿರದ ಕೆಲವು ವಿಷಯಗಳನ್ನು ಇ೦ದು ಬರೆಯ ಬೇಕೆನಿಸಿದೆ.
ಮಲ್ಟಿಪ್ಲೆಕ್ಸ್ ಗಳಲ್ಲಿನ್ನು ಕನ್ನಡ ರೀ-ಮೇಕ್ ಚಿತ್ರಗಳ ಪ್ರದರ್ಶನ ಕಡ್ಡಾಯ!
– ಪ್ರವೀಣ್ ಕುಮಾರ್ ಮಾವಿನಕಾಡು
ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀ ಮೇಕ್ ಚಿತ್ರಗಳ ಪ್ರದರ್ಶನ ಮಾಡಲೇಬೇಕು ಎಂದು ಮಲ್ಟಿಪ್ಲೆಕ್ಸ್ ಮಾಲೀಕರಿಗೆ ಸಿ.ಎಂ.ತಾಕೀತು ಮಾಡಿದ್ದಾರೆ.ಅಲ್ಲದೇ ಟಿಕೆಟ್ ದರ ಕೂಡ ಕಡಿಮೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.ಅಷ್ಟೇ ಅಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ರೀಮೇಕ್ ಚಿತ್ರ ಪ್ರದರ್ಶನ ಮತ್ತು ಅದರ ದರ ನಿಗದಿ ಮಾಡುವ ಸಂಬಂಧ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರವರ ನೇತೃತ್ವದಲ್ಲಿ ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳು ನಿರ್ಮಾಪಕರಿಗೆ ಭರವಸೆ ನೀಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ತಮ್ಮ ಇನ್ನೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಕಳೆದ ೧೦ ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ನೂರಾರು ನಿರ್ಮಾಪಕರನ್ನು ಖುದ್ದು ಮುಖ್ಯಮಂತ್ರಿಗಳೇ ಭೇಟಿ ಮಾಡಿ ತುರ್ತುಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಇದರಿಂದ ಕನ್ನಡಿಗರೂ ಮಲ್ಟಿಪ್ಲೆಕ್ಸ್ ಗಳಿಗೆ ಹೋಗಬಹುದು” ಎಂದು ಚಲನಚಿತ್ರ ನಿರ್ಮಾಪಕರ ಸಂಘದ ಸದಸ್ಯ R.S.ಬಾಬು ಹರ್ಷ ವ್ಯಕ್ತಪಡಿಸಿದರು.
ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೨
– ರೋಹಿತ್ ಚಕ್ರತೀರ್ಥ
ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೧
ಎಲ್ಲ ವಿಷಯಗಳಲ್ಲೂ, ಇಪ್ಪತ್ತೊಂದನೆ ಶತಮಾನದ ಸಂದರ್ಭವನ್ನು ನೋಡಿ ಎನ್ನುವ ನಾವು ಬ್ರಾಹ್ಮಣ ಮತ್ತು ಉಳಿದ ಜಾತಿಗಳ ನಡುವಿನ ಸಂಬಂಧಗಳ ವಿಷಯ ಬಂದಾಗ ಮಾತ್ರ ಇತಿಹಾಸಕ್ಕೆ ಹಾರುವುದು ಯಾಕೆ ಎನ್ನುವುದು ಸದ್ಯದ ಯುಗದಲ್ಲಿ ಬದುಕುತ್ತಿರುವ ನನ್ನಂಥವರಿಗೆ ಬಿಡಿಸಲಾರದ ಒಗಟಾಗಿದೆ. ಇಪ್ಪತ್ತೊಂದನೆ ಶತಮಾನದ ಬ್ರಾಹ್ಮಣ, ಉಳಿದ ಜಾತಿ-ಪಂಥದ ಜನರಿಗಿಂತ ಯಾವ ವಿಷಯದಲ್ಲೂ ಹೆಚ್ಚಿನ ಸವಲತ್ತುಗಳನ್ನು ಪಡೆದು ಹುಟ್ಟಿಬಂದ ಸೂಪರ್ಮ್ಯಾನ್ ಅಲ್ಲ. ನಿಜಕ್ಕಾದರೆ, ಅವನು ನೂರಾರು ಹರಿತಖಡ್ಗಗಳನ್ನು “ಬ್ರಾಹ್ಮಣ”ನೆಂಬ ತನ್ನ ಮೊಂಡುಗತ್ತಿಯಿಂದ ಎದುರಿಸಬೇಕಾಗಿದೆ. ತನ್ನ ಬಾಲ್ಯ, ಶಾಲೆ, ಕಾಲೇಜುಗಳಲ್ಲಿ ಒಂದು ದಿನವೂ ಜಾತೀಯತೆ ಆಚರಿಸದ ಬ್ರಾಹ್ಮಣನಿಗೆ ಕೂಡ ಅಂಥದೊಂದು ವಿಷಸರ್ಪದ ಮೊದಲ ಕಡಿತದ ಅನುಭವವಾಗುವುದು, ಕಾಲೇಜಿನ ಫೀಸ್ ಕಟ್ಟುವಾಗ. ಪ್ರವಾಸಿಸ್ಥಳಗಳಲ್ಲಿ, “ಭಾರತೀಯರಿಗೆ 5 ರುಪಾಯಿ ಟಿಕೇಟು; ವಿದೇಶಿಯರಿಗೆ 50 ರುಪಾಯಿ” ಎಂದು ಬೋರ್ಡ್ ಬರೆದಿರುವಂತೆ, ಬೇರೆ ಜಾತಿಯವನು ಕಟ್ಟಿದ ಫೀಸಿಗೆ ಎರಡೋ ಮೂರೋ ಸೊನ್ನೆ ಸೇರಿಸಿ ವಿಧಿಸುವ ದೊಡ್ಡಮೊತ್ತವನ್ನು ತಾನು ಕಟ್ಟಬೇಕಾಗಿ ಬಂದಾಗ, ಅವನಿಗೆ ಜಾತೀಯತೆಯ ಮೊದಲ ಮುಖದರ್ಶನವಾಗುತ್ತದೆ. ಆದರೆ, ಈ ಸರಕಾರೀ ಜಾತೀಯತೆಯ ಬಗ್ಗೆ ಎಲ್ಲಾದರೂ ಆತ ಪ್ರತಿಭಟಿಸಲು ಅವಕಾಶ ಇದೆಯೆ?
ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರೀ ಸಂಸ್ಥೆಗಳಲ್ಲಿ, ಪದವಿ/ಪಿಎಚ್ಡಿ ಕೋರ್ಸುಗಳ ಸಂದರ್ಶನಕ್ಕೆ ಆಯ್ಕೆಯಾದ ಕೆಲವೊಂದು ಜಾತಿಯ ವಿದ್ಯಾರ್ಥಿಗಳು ಸಂದರ್ಶನಕ್ಕೆ ಎರಡು ದಿನ ಮೊದಲು ಸಂಸ್ಥೆಗೆ ಬಂದು, “ತರಬೇತಿ” ಪಡೆಯುವ ಅವಕಾಶ ಇದೆ. ಪ್ರತಿಭೆಯೊಂದೇ ಮಾನದಂಡವೆಂದು ಪರಿಗಣಿಸಬೇಕಿದ್ದ ಇಂತಹ ಉನ್ನತ ಸಂಸ್ಥೆಗಳಲ್ಲಿ ಕಾಣಸಿಗುವ ಈ ಜಾತೀಯತೆಯನ್ನು ಬ್ರಾಹ್ಮಣವಟು ಎಂದಾದರೂ ಪ್ರಶ್ನೆ ಮಾಡಿದ್ದಿದೆಯೆ? ಇನ್ನು ಉದ್ಯೋಗದ ವಿಷಯಕ್ಕೆ ಬಂದಾಗ ನಮ್ಮ ದೇಶದಲ್ಲಿ ನಡೆಯುವ “ಸರಕಾರೀ ಜಾತೀಯತೆ”ಯ ಅಂದಾಜು ಮಾಡುವುದು ಯಾವ ಬ್ರಹ್ಮನಿಗೂ ಸಾಧ್ಯವಿಲ್ಲದ ಮಾತು. ಮೀಸಲಾತಿ, ವಿಶೇಷ ಸವಲತ್ತು, ಸಬಲೀಕರಣಗಳ ಹೆಸರಿನಲ್ಲಿ ಹುಟ್ಟುಹಾಕಿದ ಈ ಯಾವ ವ್ಯವಸ್ಥೆಯನ್ನೂ ನಾವು ಜಾತೀಯತೆ ಎಂದು ಪರಿಗಣಿಸದೇ ಇರುವಾಗ, ಶತಶತಮಾನಗಳ ಹಿಂದೆ ಬ್ರಾಹ್ಮಣ ಮಾಡಿದ್ದಾನೆನ್ನಲಾದ ತಾರತಮ್ಯ ಮಾತ್ರ “ಜಾತೀಯತೆ” ಆಗುವುದು ಹೇಗೆ? ನನಗಂತೂ ಗೊತ್ತಿಲ್ಲದ ರಹಸ್ಯ ಇದು!
ಮತ್ತಷ್ಟು ಓದು 
ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೧
– ರೋಹಿತ್ ಚಕ್ರತೀರ್ಥ
ಬ್ರಾಹ್ಮಣ!
ಕಳೆದ ಎರಡೂವರೆ ಸಾವಿರ ವರ್ಷಗಳಲ್ಲಿ ಇತ್ತೋ ಇಲ್ಲವೋ ಗೊತ್ತಿಲ್ಲ; ಆದರೆ ಕಳೆದ ಹತ್ತು-ಹದಿನೈದು ವರ್ಷಗಳಿಂದ ಇದೊಂದು ಶಬ್ದ ಬಹಳ ಶಬ್ದ ಮಾಡುತ್ತಿದೆ! ಸೊಳ್ಳೆ ಕಡಿದು ಕಾಲು ಕೆಂಪಾಯಿತು ಎನ್ನುವುದರಿಂದ ಹಿಡಿದು ಗ್ರೀಸ್ ದೇಶದ ದಿವಾಳಿತನದವರೆಗೆ ಈ ಜಗತ್ತಿನಲ್ಲಿ ನಡೆದುಹೋದ ಯಾವ ಸಮಸ್ಯೆಯ ಬಗ್ಗೆ ನಮ್ಮ ಬುದ್ಧಿಜೀವಿಗಳನ್ನು ಕೇಳಿದರೂ, ಅವರ ಉತ್ತರ ಶುರುವಾಗುವುದು ಹೀಗೆ: “ಹಸಿವು! ಈ ದೇಶದ ಶೋಷಿತ ಸಮುದಾಯದ ಹಸಿವನ್ನು ತುಳಿದು ಅವರ ಬೆವರ ಹನಿಗಳ ಮೇಲೆ ಅರಮನೆ ಕಟ್ಟಿಕೊಂಡವರು ವೈದಿಕರು. ಇವರ ಉದರದ ಉರಿ ಇಂದುನಿನ್ನೆಯದಲ್ಲ! ಆಳದಲ್ಲಿ ಅಡಗಿ ಸಿಂಬೆ ಸುತ್ತಿಕೊಂಡು ಮಲಗಿರುವ ಈ ಅಸಹನೆಯ ದಂತಗಳಲ್ಲಿ ಪುರಾತನ ಕಾಲದ ವಿಷವಿದೆ. ನೊಂದವನ, ಹಸಿದವನ, ಕೆಳಗೆ ಬಿದ್ದು ಧೂಳಾದವನ ಗೋಳಿಗೆ ಕರಗದೆ ನುಲಿಯದೆ ಸೆಟೆದು ಬಿದ್ದ ಆರ್ಯಪುತ್ರರ ಕರುಳುಗಳಲ್ಲಿ ಕ್ರೌರ್ಯವಿದೆ…” ಈ ಮಾತುಗಳನ್ನು ಹಾಗೇ ಒಂದು ಸಿನೆಮಾದೃಶ್ಯದಂತೆ ಕಲ್ಪಿಸಿನೋಡಿ. ನಿಮಗೆ ಕಾಣುವುದೇನು? ಒಬ್ಬ ಬಳಲಿ ಬೆಂಡಾದ, ಕಡಿದುಹಾಕಿದ ಬಾಳೆಗಿಡದಂತೆ ನೆಲಕ್ಕೆ ಚೆಲ್ಲಿಬಿದ್ದ “ಶೋಷಿತ” ಮತ್ತು ಅವನನ್ನು ಹಿಗ್ಗಾಮುಗ್ಗಾ ಥಳಿಸುವ; ಒದೆಯುವ; ತುಚ್ಛಮಾತುಗಳಿಂದ ಹೀಯಾಳಿಸುವ ರಾಕ್ಷಸರೂಪೀ ಘೋರ “ಆರ್ಯಪುತ್ರ”! ಆ ದಲಿತ ಜೀವ ಉಳಿಸೆಂದು ದಯನೀಯವಾಗಿ ಬೇಡಿಕೊಳ್ಳುತ್ತಿದ್ದಾನೆ; ಆದರೆ ಅವನ ಜೀವ ತೆಗೆದೇ ಸಿದ್ಧ ಎಂದು ಶಪಥ ಹಾಕಿದಂತೆ ಈ ಬ್ರಾಹ್ಮಣ ಅವನಿಗೆ ಬಾರಿಸುತ್ತಿದ್ದಾನೆ! ಜನಿವಾರದ ಈ ಹಾರುವನಿಗೆ ಹುಲಿಗಿರುವಂತಹ ವಿಕಾರ ಕೋರೆಹಲ್ಲುಗಳು! ಅದರಂಚಿನಿಂದ ಕೀವಿನಂತೆ ಒಸರುತ್ತಿರುವ ಅಸಹನೆಯ ವಿಷ! ಅಬ್ಬಾ!
ಲಿಫ್ಟ್ ಎಂಬ ಮಾಯಾ ಪೆಟ್ಟಿಗೆ
– ನಾಗೇಶ್ ಕುಮಾರ್ ಸಿ ಎಸ್,ಚೆನ್ನೈ
ನಮ್ಮ ಇಂದಿನ ನಾಗರೀಕತೆಯ ಕುರುಹಾಗಿ ಎಲ್ಲೆಲ್ಲೂ ಕಾಂಕ್ರೀಟ್ ಜಂಗಲ್ ಎಂಬ ತೆಗಳಿಕೆಗೆ ಗುರಿಯಾದ ಬಹು ಅಂತಸ್ತಿನ ಕಟ್ಟಡಗಳೊಂದಿಗೇ ಅವಶ್ಯಕವಾಗಿ ಒದಗಿಬಂದ ಸೌಕರ್ಯ: ಲಿಫ್ಟ್ ಅಥವಾ ಎಲಿವೇಟರ್ ಎಂಬ ಏರುವ, ಇಳಿಯುವ ಏಣಿ…ಮಿಂಚಿನ ವೇಗದಲ್ಲಿ ಹಿತವಾಗಿ ಸುಯ್ಯೆಂದು ನಮಗೆ ಹಲವು ಮಹಡಿಗಳನ್ನು ಶ್ರಮವಿಲ್ಲದೇ ಏರಿಸಿ ಇಳಿಸಿಬಲ್ಲ ಈ ಉಪಯುಕ್ತ ಸಾಧನ ಯಾರಿಗೆ ಬೇಡ?
ಬ್ರಿಟಿಷ್ ಇಂಗ್ಲೀಶಿನಲ್ಲಿ “ಲಿಫ್ಟ್” ಎಂದೂ, ಅಮೆರಿಕನ್ ಪರಿಭಾಷೆಯಲ್ಲಿ “ಎಲಿವೇಟರ್” ಎಂದೂ ಕರೆಯಲ್ಪಡುವ ಈ ಹಾರುವ ಪೆಟ್ಟಿಗೆಗೆ ಒಂದು ಅಂತಸ್ತಿನಿಂದ ಇನ್ನೊಂದಕ್ಕೆ ಕೇವಲ ಸಾಮಾನು ಸರಂಜಾಮು ಸಾಗಿಸಲು ಮಾತ್ರ ಬಳಸಿದರೆ “ ಡಂಬ್ ವೇಯ್ಟರ್”( ಮೂಕ ಮಾಣಿ?) ಎಂದೂ ಹೆಸರಿಸಿದ್ದಾರೆ.
“ನಿಮ್ಮ ಆರೋಗ್ಯಕ್ಕೆ ಒಳ್ಳೆಯದು, ಮೆಟ್ಟಿಲೇರಿ..” ಎಂದು ನಿಮ್ಮ ವೈದ್ಯರು ಎಷ್ಟೇ ಬೋಧಿಸಿದರೂ. ಅದನ್ನು ಮನೆಯಲ್ಲೆ ಮರೆತು,, ಆ ಸಾಲು ಸಾಲು ಲಿಫ್ಟ್ಗಳನ್ನು ಬಹು ಅಂತಸ್ತಿನ ಕಚೇರಿಗಳಲ್ಲಿ ಕಂಡ ಒಡನೆಯೇ ಬಟನ್ ಪ್ರೆಸ್ ಮಾಡಿ ಅದರ ಸಂಖ್ಯೆಯನ್ನು ಕಾತರದಿಂದ ಶಬರಿಯಂತೆ ಕಾಯುತ್ತ ನಿಲ್ಲುವ ಪೀಳಿಗೆ ನಮ್ಮದು…




