ಸ್ವಾತಂತ್ರ್ಯದ ಜಾಡಿನಲ್ಲಿ ಕಾಡು ಜನರ ಹಾಡು
– ರಾಕೇಶ್ ಶೆಟ್ಟಿ
ಶಾಲಾ ದಿನಗಳಲ್ಲಿ ಜನವರಿ ೨೬ ಮತ್ತು ಆಗಸ್ಟ್ ೧೫ ಬಂದರೇ ಏನೋ ಒಂದು ರೀತಿಯ ಸಡಗರ.ಆ ಸಡಗರಕ್ಕೆ ಸಾತಂತ್ರ್ಯದ ಹಬ್ಬ ಅನ್ನುವ ಪುಟ್ಟ ಖುಷಿಯೂ ಕಾರಣವಾದರೆ,ದೊಡ್ಡ ಮಟ್ಟದಲ್ಲಿ ಕಾರಣವಾಗುತಿದಿದ್ದು “ನೃತ್ಯ,ಡ್ರಿಲ್” ಇತ್ಯಾದಿಗಳ ರಿಹರ್ಸಲ್ ನೆಪದಲ್ಲಾದರೂ ಮೇಷ್ಟ್ರುಗಳ ಪಾಠದಿಂದ ತಪ್ಪಿಸಿಕೊಳ್ಳಬಹುದಲ್ಲ ಅನ್ನುವುದು.ಆಟದ ಒಂದೇ ಒಂದು ಪಿರಿಯಡ್ ಅನ್ನೂ ಇಡದೇ ಯಾವಾಗಲೂ ಪಾಠ ಪಾಠ ಅನ್ನುತಿದ್ದ ನಮ್ಮ ಶಾಲೆಯ ಮಕ್ಕಳಿಗಂತೂ ಸ್ವಾತಂತ್ರ್ಯದ ಹಬ್ಬ ಅಕ್ಷರಶಃ ಸಾತಂತ್ರ್ಯವನ್ನೇ (ತರಗತಿಯಿಂದ ಹೊರಬರುವ) ತರುತಿತ್ತು.
ಪ್ರತಿವರ್ಷ ಜನವರಿ ೨೬ ಮತ್ತು ಆಗಸ್ಟ್ ೧೫ಕ್ಕೆ ನಮ್ಮ ಶಾಲೆಯಿಂದ ಡ್ರಿಲ್ ನಲ್ಲಿ ಭಾಗವಹಿಸುತಿದ್ದೆವು.ಆದರೆ ನಾವು ೭ನೇ ತರಗತಿಗೆ ಬಂದಾಗ (ಬಹುಷಃ ೧೯೯೬ ಇಸವಿ ಇರಬೇಕು) ಈ ಬಾರಿ ಯಾವುದಾದರೂ ನೃತ್ಯವನ್ನು ಮಾಡೋಣ ಅನ್ನುವ ನಿರ್ಧಾರ ಮಾಡಿದ್ದರು ಮೇಷ್ಟ್ರುಗಳು.’ರಾಯರು ಬಂದರು ಮಾವನ ಮನೆಗೆ’ ಚಿತ್ರದಿಂದ “ಅಡವಿ ದೇವಿಯ ಕಾಡು ಜನಗಳ ಈ ಹಾಡು” ಹಾಡನ್ನು ಆಯ್ಕೆ ಮಾಡಿದರು.
ತರಬೇತಿಯೂ ಶುರುವಾಯಿತು.ಪ್ರತಿವರ್ಷ ಡ್ರಿಲ್ ಮಾಡಿ ಸಾಕಾಗಿದ್ದ ನಮಗೆ ಇದು ಹೊಸತಾಗಿಯೇ ಕಾಣಿಸಿತು.ಅದರ ಜೊತೆಗೆ ಬೋನಸ್ ನಂತೆ ಇದರ ತರಬೇತಿಗೆಂದೇ ತುಸು ಹೆಚ್ಚೇ ಸಮಯವೂ ಸಿಗಲಾರಂಭಿಸಿತ್ತು.ಒಂದು ದಿನ ಬೆಳಗ್ಗಿನ ತರಬೇತಿಯನ್ನು ಮುಗಿಸಿಕೊಂಡು ಮಧ್ಯಾಹ್ನದ ಊಟ ಮುಗಿಸಿ ಆಟವಾಡುತಿದ್ದೆವು.ಶಾಲೆಯಲ್ಲಿದ್ದ ಪುಟ್ಟ ಹುದೋಟದಲ್ಲಿನ ಹಳದಿ ಬಣ್ಣದ (ಸೂರ್ಯಕಾಂತಿಯಂತಿರುವ)ಹೂವು ನೋಡಿದವನಿಗೆ ಕೀಳೋಣ ಅನ್ನಿಸಿತು.ಕಿತ್ತ ಮೇಲೆ ಮುಡಿದು ಕೊಳ್ಳಲು ಜಡೆಯಿಲ್ಲವಲ್ಲ! ಏನು ಮಾಡೋದು ಅನ್ನುವಾಗ ಗೆಳೆಯನ ಬೆನ್ನು ಕಾಣಿಸಿತು.ಬೆರಳುಗಳ ನಡುವೆ ಹೂವಿನ ತೊಟ್ಟನ್ನು ಇಟ್ಟುಕೊಂಡು ಹೂವನ್ನು ಗೆಳೆಯನ ಬಿಳಿ ಬಣ್ಣದ ಶರ್ಟಿಗೆ ಪಟೀರ್ ಎನ್ನುವಂತೆ ಬಡಿದೆ.ಏನಾಶ್ಚರ್ಯ! ಅವನ ಬಿಳಿ ಬಣ್ಣದ ಶರ್ಟಿನಲ್ಲಿ ಹಳದಿ ಬಣ್ಣದ ಹೂವಿನ ಫೋಟೋ ಕಾಪಿ ಮೂಡಿತ್ತು.
ನೂರರ ಹೊಸ್ತಿಲಲ್ಲಿ ಕನ್ನಡ ಸಾಹಿತ್ಯ ಪರಿಷತ್ತು
– ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಕನ್ನಡ ಸಾಹಿತ್ಯ ಪರಿಷತ್ತು ಈಗ ನೂರರ ಹೊಸ್ತಿಲಲ್ಲಿ ನಿಂತಿದೆ. 1915 ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಏಳು ಬೀಳುಗಳ ನಡುವೆಯೂ ನೂರು ವರ್ಷಗಳನ್ನು ಪೂರೈಸುತ್ತಿರುವುದು ಕನ್ನಡಿಗರಾದ ನಮಗೆಲ್ಲ ಅಭಿಮಾನದ ಸಂಗತಿಯಿದು. ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಬೆಳವಣಿಗೆಗಾಗಿ ಅಂದಿನ ಮೈಸೂರಿನ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಆದತ್ಯೆ ನೀಡಿದರು. ಇಂಥದ್ದೊಂದು ಕನ್ನಡ ಸಂಸ್ಥೆಯ ಸ್ಥಾಪನೆಗೆ ಆ ದಿನಗಳ ಅನೇಕ ಸಾಹಿತಿಗಳ ಬೇಡಿಕೆಯೂ ಇತ್ತು. ಸರ್ ಎಮ್.ವಿಶ್ವೇಶ್ವರಯ್ಯ ಮತ್ತು ಕರ್ಪೂರ ಶ್ರೀನಿವಾಸರಾವ್ ಕನ್ನಡ ಸಾಹಿತ್ಯದ ರಕ್ಷಣೆಗಾಗಿ ಪರಿಷತ್ತನ್ನು ಸ್ಥಾಪಿಸಲು ಕಂಕಣಬದ್ಧರಾಗಿ ದುಡಿದರು. ಒಟ್ಟಾರೆ ಎಲ್ಲರ ಪ್ರಯತ್ನ ಮತ್ತು ಆಸೆಯಂತೆ 05.05.1915 ರಂದು ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವಕ್ಕೆ ಬಂದಿತು. ಬೆಂಗಳೂರಿನ ಶಂಕರಪುರ ಬಡಾವಣೆಯಲ್ಲಿನ ಸಣ್ಣ ಕೊಠಡಿಯೊಂದರಲ್ಲಿ ಸ್ಥಾಪನೆಯಾದ ಪರಿಷತ್ತಿಗೆ ನಂತರದ ದಿನಗಳಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ, ಉತ್ತಂಗಿ ಚೆನ್ನಪ್ಪ, ಹಂ.ಪಾ.ನಾಗರಾಜಯ್ಯ, ಮೂರ್ತಿರಾವ್, ವೆಂಕಟಸುಬ್ಬಯ್ಯ, ಗೊರುಚ, ಚಂಪಾ ಅವರಂಥ ಖ್ಯಾತನಾಮ ಸಾಹಿತಿಗಳ ಅಧ್ಯಕ್ಷತೆ ಲಭ್ಯವಾಯಿತು. ಸಣ್ಣ ಕೊಠಡಿಯಿಂದ ಸ್ವತಂತ್ರ ಕಟ್ಟಡಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳಾಂತರಗೊಂಡು ಕನ್ನಡ ಸಾಹಿತ್ಯದ ಮತ್ತು ನಾಡಿನ ರಕ್ಷಣೆಯ ಕೆಲಸದಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿತು. ಪುಸ್ತಕಗಳ ಪ್ರಕಟಣೆ, ಸಾಹಿತ್ಯ ಸಮ್ಮೇಳನದ ಏರ್ಪಾಡು, ದತ್ತಿ ಉಪನ್ಯಾಸ ಇತ್ಯಾದಿ ಚಟುವಟಿಕೆಗಳಿಂದ ಕನ್ನಡ ಸಾಹಿತ್ಯ ಪರಿಷತ್ತು ಬಹುಬೇಗ ಜನರಿಗೆ ಹತ್ತಿರವಾಯಿತು. ಪ್ರಾರಂಭದ ದಿನಗಳಲ್ಲಿ ದೊರೆತ ಸಾಹಿತ್ಯಾಸಕ್ತರ ನೆರವು ಮತ್ತು ಅವರುಗಳ ಪ್ರಾಮಾಣಿಕ ದುಡಿಮೆಯ ಪರಿಣಾಮ ಕನ್ನಡ ಸಾಹಿತ್ಯ ಪರಿಷತ್ತು ಬಹಳಷ್ಟು ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಲು ಹಾಗೂ ಯಶಸ್ಸನ್ನು ಕಾಣಲು ಸಾಧ್ಯವಾಯಿತು.
ಕಲಾಂ, ಕಯ್ಯಾರ, ಕೃಷ್ಣಪ್ಪ
– ರೋಹಿತ್ ಚಕ್ರತೀರ್ಥ
“You either die a hero or you live long enough to see yourself become the villain” ಅಂತ ಇಂಗ್ಲೀಷಿನಲ್ಲೊಂದು ಜಾಣ್ನುಡಿ. ಮಹಾಸಾಧನೆ ಮಾಡಿದವರು ಬೇಗನೆ ತೀರಿಕೊಂಡರೆ ಜಗತ್ತು ಅವರನ್ನು ಹಾಡಿಹೊಗಳುತ್ತದೆ. “ಏನು ಪ್ರತಿಭೆಯ ಬೀಸು ಕಣ್ರಿ! ಇನ್ನೊಂದಿಷ್ಟು ವರ್ಷ ಬದುಕಿದ್ದರೆ ಚಿಂದಿ ಉಡಾಯಿಸಿಬಿಡ್ತಾ ಇದ್ರು!” ಎಂದು ಜನ ಹೇಳುವುದನ್ನು ಕೇಳಿದ್ದೇವೆ. ಆದರೆ, ಪ್ರಾಯ ಆಗುತ್ತಾಹೋದಂತೆ ನಮ್ಮಲ್ಲಿ ಹೆಚ್ಚಿನವರು ಅಪ್ರಸ್ತುತರಾಗುತ್ತಾ ಹೋಗುತ್ತಾರೆ. ಒಂದು ಕಾಲದಲ್ಲಿ ಅವರ ಸಾಧನೆ ಎಂದು ಕಂಡದ್ದು ಈಗ ಜನಕ್ಕೆ ಸಾಮಾನ್ಯ ಸಂಗತಿ ಅನ್ನಿಸತೊಡಗುತ್ತದೆ. ಅವರ ಬಗ್ಗೆ ಇಲ್ಲಸಲ್ಲದ ಶಂಕೆ, ಅವಮಾನ, ಹೀಯಾಳಿಕೆಗಳು ಹುಟ್ಟಿಕೊಳ್ಳುತ್ತವೆ. ಒಂದೊಮ್ಮೆ ಜೋರಾಗಿ ಉರಿದಿದ್ದ ದೊಂದಿ ಇದೀಗ ಎಣ್ಣೆ ಬತ್ತಿ, ಬತ್ತಿ ಕರಟಿ ಯಾರಿಗೂ ಬೇಡದ ಕಮಟು ಹೊಗೆಯಾಗಿ ತನ್ನ ಬದುಕು ಮುಗಿಸುತ್ತದೆ. ಇಂಥ ಮಾತಿಗೆ ಉದಾಹರಣೆಯಾಗದೆ ಕೊನೆವರೆಗೂ ತಮ್ಮ ಜೀವನ, ಚಾರಿತ್ರ್ಯ, ಪ್ರತಿಭೆ ಮತ್ತು ಮೌಲ್ಯಗಳ ಪ್ರತಿಪಾದನೆಯಲ್ಲಿ ಕಿಂಚಿದೂನವಾಗದಂತೆ ನೋಡಿಕೊಂಡು ಸಾರ್ಥಕವಾಗಿ ಇಹದ ವ್ಯಾಪಾರ ಮುಗಿಸುವವರು ವಿರಳ. ಎರಡು ವಾರದ ಅಂತರದಲ್ಲಿ ನಮ್ಮನ್ನು ಬಿಟ್ಟು ತೆರಳಿದ ವಿಜ್ಞಾನಿ ಡಾ. ಅಬ್ದುಲ್ ಕಲಾಂ, ಕವಿ ಕಯ್ಯಾರ ಕಿಞ್ಞಣ್ಣ ರೈ ಮತ್ತು ಆರ್ಎಸ್ಎಸ್ ಮಾರ್ಗದರ್ಶಿ ನ. ಕೃಷ್ಣಪ್ಪ ಮೇಲಿನ ಇಂಗ್ಲೀಷ್ ನುಡಿಗೆ ಸವಾಲೆನ್ನುವಂತೆ ಬದುಕಿ, ಗಾದೆಗಳನ್ನೂ ಸುಳ್ಳು ಮಾಡಬಹುದು ಎಂದು ತೋರಿಸಿದರು.
ಮಹಾತ್ಮರು ತೀರಿಕೊಂಡಾಗೆಲ್ಲ ನನಗೆ ನೆನಪಿಗೆ ಬರುವ ಕವಿತೆ ನಿಸಾರ್ ಅಹಮದರ “ರಾಮನ್ ಸತ್ತ ಸುದ್ದಿ”. ಅದು ಶುರುವಾಗುವುದು ಹೀಗೆ:
ಮತ್ತಷ್ಟು ಓದು 
ಉಡುಗೊರೆ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
“ರೀಟಾ….ನಿನಗೆಷ್ಟು ಸಲ ಹೇಳೊದು ಪಲ್ಲವಿ ಬ೦ದ್ರೆ ಒಳಗೆ ಕಳಸ್ಬೇಡಾ ಅ೦ತಾ …” ಎ೦ದು ಸಿಟ್ಟಿನಿ೦ದ ಕೂಗಿದ ಫಣಿಕೇತ .
“ಸಾರಿ ಸರ್….ನಾನು ಎಷ್ಟು ಹೇಳಿದ್ರೂ ಕೇಳದೆ ಒಳಗೆ ನುಗ್ಗಿದ್ದಾಳೆ ಅವಳು” ಎ೦ದುತ್ತರಿಸಿದಳು ಅವನ ಸೆಕ್ರೆಟರಿ .
ಫಣಿಕೇತ ಪುರೋಹಿತ್:ಶ್ರೀಮ೦ತಿಕೆ ಎ೦ದರೇ ಹೇಗಿರುತ್ತದೆ ಎ೦ಬುದಕ್ಕೆ ಅತ್ಯುತ್ತಮ ಉದಾಹರಣೆ ಅವನು.ಆತ ದೇಶದ ಹತ್ತು ಆಗರ್ಭ ಶ್ರೀಮ೦ತರಲ್ಲೊಬ್ಬ.’ಫಣಿಕೇತ ಗ್ರೂಪ್ ಆಫ್ ಇ೦ಡಸ್ಟ್ರೀಸ್’ನ ಏಕೈಕ ಮಾಲಿಕ.ಫಣಿಕೇತ ಟೆಕ್ಸಟೈಲ್ಸ್, ಫಣಿಕೇತ ಕೆಮಿಕಲ್ಸ್,ಫಣಿಕೇತ ಅಪಾರ್ಟಮೆ೦ಟ್ಸ್,ಫಣಿಕೇತ ಸಿಮೆ೦ಟ್ಸ್ ಹೀಗೆ ಸರಿಸುಮಾರು ಇಪ್ಪತ್ತು ಕ೦ಪನಿಗಳನ್ನು ಹೊ೦ದಿದೆ ಫಣಿಕೇತ ಗ್ರುಪ್ ಆಫ್ ಇ೦ಡಸ್ಟ್ರೀಸ್.ವರ್ಷಕ್ಕೆ ಸುಮಾರು ಹದಿನೈದು ಸಾವಿರ ಕೋಟಿಗಳಷ್ಟು ಲಾಭವಿರುವ ದೇಶದ ಕೆಲವೇ ಕೆಲವು ಸ೦ಸ್ಥೆಗಳ ಪೈಕಿ ಒ೦ದು ಎ೦ಬ ಹೆಗ್ಗಳಿಕೆ ಅದರದ್ದು.
ಇ೦ಥಹ ಕ೦ಪನಿಯ ಒಡೆಯನಾದ ಫಣಿಕೇತ ಪುರೋಹಿತ್ ಎಲ್ಲದರಲ್ಲೂ ಬೆಸ್ಟ್ ಎನ್ನುವುದನ್ನೇ ಬಯಸುತ್ತಾನೆ.ಅವನ ಕ೦ಪನಿಯ೦ತೂ ಬೆಸ್ಟ್ ಎನ್ನುವುದರಲ್ಲಿ ಸ೦ಶಯವೇ ಇಲ್ಲ.ಆತನ ಶ್ರೇಷ್ಠತೆಯ ವ್ಯಸನ ಎ೦ಥದ್ದೆ೦ದರೇ ಅವನ ಕಾರು,ಅವನ ಬ೦ಗ್ಲೆ,ಅವನ ಬಟ್ಟೆಬರೆ,ಅವನ ಸೆಕ್ರೆಟರಿ,ಕೊನೆಗೆ ಅವನು ಬಳಸುವ ಪೆನ್ನುಗಳಲ್ಲಿಯೂ ಸಹ ಆತ ಅತ್ಯುತ್ತಮವಾದುದ್ದನ್ನೇ ಹುಡುಕುತ್ತಾನೆ.ಹಾಗೆ೦ದು ಆತ ದುರ೦ಹಕಾರಿಯಲ್ಲ.ಫಣಿಕೇತ ಪುರೋಹಿತ್ ಪ್ರತಿ ವರ್ಷ ತನ್ನ ಕ೦ಪನಿಯ ಪರವಾಗಿ ಆಶ್ರಮಗಳಿಗೆ,ಅನಾಥಾಲಯಗಳಿಗೆ ಲಕ್ಷಾ೦ತರ ರೂಪಾಯಿಗಳನ್ನು ದಾನ ಮಾಡುತ್ತಾನೆ.ಯಾರಿಗೂ ಮೋಸ ಮಾಡುವುದಿಲ್ಲ.ಸಾಮಾಜಿಕವಾಗಿ ಅವನದ್ದು ತು೦ಬಾ ಒಳ್ಳೆಯ ವ್ಯಕ್ತಿತ್ವ.
ಮತ್ತಷ್ಟು ಓದು 
ಬುದ್ಧಿಜೀವಿಗಳ ಭೌತಶಾಸ್ತ್ರ
– ವಿನಾಯಕ ಹಂಪಿಹೊಳಿ
ಬುದ್ಧಿಜೀವಿಗಳ ತಂಡವೊಂದು ಭೌತಿಕ ವಿಜ್ಞಾನವನ್ನು ಕಲಿಯಲು ಹೊರಟಿತು. ಸರ್ಕಾರದಿಂದ ಅನುದಾನ ಪಡೆದು ಎ.ಸಿ. ರೂಮೊಂದನ್ನು ಕಟ್ಟಿಸಿ, ಅಲ್ಲಿ ಎಲ್ಲ ಭೌತ ವಿಜ್ಞಾನದ ಪುಸ್ತಕಗಳನ್ನು
ತರಿಸಿ ಎಲ್ಲವನ್ನೂ ಅನೂಚಾನವಾಗಿ ಓದಿಕೊಂಡಿತು. ನ್ಯೂಟನ್ನಿನ ನಿಯಮಗಳಿಂದ ಆರಂಭಿಸಿ, ಕ್ವಾಂಟಂ ಸಿದ್ಧಾಂತದವರೆಗಿನ ಎಲ್ಲ ಸಿದ್ಧಾಂತಗಳನ್ನೂ ಅವುಗಳ ಇತಿಮಿತಿಗಳನ್ನೂ ಅಧ್ಯಯನ ಮಾಡಿತು. ೩-೪ ವರ್ಷಗಳ ನಂತರ ಆ ಬುದ್ಧಿಜೀವಿಗಳು ಈಗ ತಾವು ಎಲ್ಲವನ್ನೂ ತಿಳಿದುಕೊಂಡಿದ್ದೇವೆ ಎಂದು ಭಾವಿಸಿ ಒಂದು ಬಹುದೊಡ್ಡ ಅನ್ವೇಷಣಾ ವರದಿಯನ್ನು ಬರೆದು ಎ.ಸಿ. ರೂಮಿನಿಂದ ಹೊರಬಂದಿತು. ಅದು ತನ್ನ ಅನ್ವೇಷಣೆಯನ್ನು ಸರ್ಕಾರಕ್ಕೆ ಸಲ್ಲಿಸಿತು. ಆ ವರದಿಯ ಕೊನೆಯಲ್ಲಿ ಇಡೀ ಅಧ್ಯಯನದ ಸಾರಾಂಶ ಅಡಗಿತ್ತು.
“ಈ ಪ್ರಕೃತಿಯು ಬಹು ಗೊಂದಲದಿಂದ ಕೂಡಿದೆ. ವಸ್ತುಗಳ ವೇಗ ಕಡಿಮೆಯಿದ್ದರೆ ನ್ಯೂಟನ್ನಿನ ನಿಯಮವನ್ನು ಪಾಲಿಸುತ್ತದೆ, ಆದರೆ ವೇಗ ತುಂಬಾ ಹೆಚ್ಚಿದಂತೆ ಆ ನಿಯಮಗಳನ್ನು ಮೀರುತ್ತವೆ ಮತ್ತು ಇದ್ದಕ್ಕಿದ್ದಂತೆ ಐನ್ಸ್ಟೈನ್ ನಿಯಮಗಳನ್ನು ಪಾಲಿಸುತ್ತವೆ. ಅಂದರೆ ಯಾವ ನಿಯಮವನ್ನು ಸರಿಯಾಗಿ ಪಾಲಿಸಬೇಕು ಎಂಬುದರ ಸ್ಪಷ್ಟವಾದ ಕಲ್ಪನೆ ಪ್ರಕೃತಿಗೆ ಇದ್ದಂತಿಲ್ಲ. ಗಾತ್ರದಲ್ಲಿ ದೊಡ್ಡದಾಗಿರುವ ವಸ್ತುಗಳು ಕ್ಲಾಸಿಕಲ್ ಮೆಕಾನಿಕಲ್ ನಿಯಮಗಳನ್ನು ಅನುಸರಿಸಿದರೆ, ಚಿಕ್ಕದಾಗಿರುವ ವಸ್ತುಗಳು ಮೆಕಾನಿಕಲ್ ನಿಯಮಗಳನ್ನು ಗಾಳಿಗೆ ತೂರಿ ಕ್ವಾಂಟಂ ಮೆಕಾನಿಕಲ್ ನಿಯಮಗಳನ್ನು ಅನುಸರಿಸುತ್ತವೆ. ಹೀಗೆ ದೊಡ್ಡವುಗಳಿಗೊಂದು ನ್ಯಾಯ, ಚಿಕ್ಕವುಗಳಿಗೊಂದು ನ್ಯಾಯವನ್ನು ನೀಡುವ ಪ್ರಕೃತಿಯು ನಿಜವಾಗಿಯೂ ಆದರ್ಶ ಪ್ರಕೃತಿಯಾಗಿರಲಾರದು.
ಬೆಳಕು ಮೊದಮೊದಲು ತರಂಗದಂತೆ ವರ್ತಿಸಿದರೆ, ಇದ್ದಕ್ಕಿದ್ದಂತೆ, ಕಣಗಳ ರೂಪದಲ್ಲಿ ವರ್ತಿಸಲು ಶುರು ಮಾಡುತ್ತವೆ. ಇದೇ ರೀತಿ, ಎಲೆಕ್ಟ್ರಾನ್ ಮುಂತಾದ ಸೂಕ್ಷ್ಮ ಕಣಗಳು ಒಮ್ಮೊಮ್ಮೆ ತರಂಗದಂತೆ ವರ್ತಿಸುತ್ತವೆ. ಹೀಗಾಗಿ ಈ ನಿಸರ್ಗವು ಒಂದು ಸುವ್ಯವಸ್ಥಿತವಾದ ಜಗತ್ತನ್ನು ಕಟ್ಟುವಲ್ಲಿ ವಿಫಲವಾಗಿದೆಯೆಂದು ಧಾರಾಳವಾಗಿ ಹೇಳಬಹುದು. ಅಲ್ಲದೇ ಥರ್ಮೋಡೈನಮಿಕ್ಸ್ ಪ್ರಕಾರ, ಜಗತ್ತಿನ ಎಂಥ್ರೊಪಿ (disorderness) ನಿರಂತರವಾಗಿ ಹೆಚ್ಚುತ್ತಲೇ ಇದೆ. ಪ್ರಕೃತಿಯ ಈ ಬೆಳವಣಿಗೆ ನಿಜವಾಗಿಯೂ ಆಘಾತಕಾರಿ. ಜಗತ್ತು ಸುವ್ಯವಸ್ಥತೆಯಿಂದ ಅವ್ಯವಸ್ಥತೆಯೆಡೆಗೆ ಸಾಗುತ್ತಿರುವದನ್ನು ಗುರುತಿಸುವಲ್ಲಿ ಪ್ರಕೃತಿಯು ಸಂಪೂರ್ಣವಾಗಿ ವಿಫಲವಾಗಿದೆ.
ಮತ್ತಷ್ಟು ಓದು 
‘ಸ್ವಪ್ನ ಸಾರಸ್ವತ’ದ ಪುಟಗಳಲ್ಲಿ
– ಮನುಶ್ರೀ ಜೋಯಿಸ್
“ಸ್ವಪ್ನ ಸಾರಸ್ವತ” ಒಂದು ಸುಂದರ ಸುಧೀರ್ಘ ಕಾದಂಬರಿ. ಸುಮಾರು ಐದು ತಲೆಮಾರುಗಳ ಸಾರಸ್ವತ ಕುಟುಂಬದ ಇತಿಹಾಸ ಹೇಳುವಂತ ಕಥೆ. ಇದು ಬರೀ ಆ ವರ್ಗಕ್ಕೆ ಮಾತ್ರ ಸೀಮಿತವಾಗಿರದೆ ಸಂಘಜೀವಿ ಮನುಷ್ಯನ ಪರಿಸರ ಪ್ರೀತಿಯನ್ನು, ಪ್ರಕೃತಿಯನ್ನು ಹಚ್ಚಿಕೊಳ್ಳುವ ರೀತಿಯನ್ನು ಬಿಂಬಿಸುತ್ತದೆ.
ಗೋವಾದಲ್ಲಿ ಪೋರ್ಚುಗೀಸರ ಆಕ್ರಮಣಕ್ಕೆ ಸಿಕ್ಕು ದಿಕ್ಕಾಪಾಲಾಗುವ ಸಾರಸ್ವತ ಬ್ರಾಹ್ಮಣರ ಕಷ್ಟ-ಕಾರ್ಪಣ್ಯದಿಂದ ಈ ಕಥೆ ಪ್ರಾರಂಭವಾಗುತ್ತದೆ. ದಾಳಿಯಿಂದಾಗುವ ದೇವಸ್ಥಾನಗಳ ಹಾನಿ, ಆಸ್ತಿ-ಪಾಸ್ತಿಗಳ ನಷ್ಟ, ಸಂಸ್ಕೃತಿಯ ಪತನ ಮುಂತಾದವುಗಳನ್ನು ಲೇಖಕರು ಯಶಸ್ವಿಯಾಗಿ,ಸೂಕ್ಷವಾಗಿ ಚಿತ್ರಿಸಿದ್ದಾರೆ. ಇನ್ನು ಧರ್ಮಹಾನಿಯ ಸಮಯದಲ್ಲಿ ಮನದಲ್ಲಿನ ತೊಳಲಾಟ, ಗೊಂದಲಗಳನ್ನು ಸಾಮಾನ್ಯ ಮನುಷ್ಯನೊಬ್ಬ ಎದುರಿಸುವ ಪರಿ ಮನ ಮುಟ್ಟುವಂತಿದೆ.
ಸ್ನೇಹದ ಹಳಿಯಲ್ಲಿ ಬದುಕಿನ ಬಂಡಿ ಸಾಗುವುದು.ದೌರ್ಬಲ್ಯದಲ್ಲೇ ಮುಂದೆ ಸಾಗಿ ಮನಸಲ್ಲೇ ಮುಚ್ಚಿಟ್ಟು ಕೊಳ್ಳುವ ಪಶ್ಚಾತ್ತಾಪ. ದ್ವೇಷದ ಚಿಕ್ಕ ಕಿಡಿಯಿಂದ ಹೊತ್ತಿ ಉರಿವ ಮನೆ, ಮನಸ್ಸು.ಅಷ್ಟೈಶ್ವರ್ಯಗಳಿದ್ದೂ ಎಲ್ಲವನ್ನು ಕಳೆದುಕೊಂಡು ವಲಸೆಬಂದು ಪರಸ್ಥಳದಲ್ಲಿ ನೆಲೆನಿಂತು ಬದುಕು ಕಟ್ಟಿಕೊಳ್ಳುವ ಜೀವನ ಪ್ರೀತಿ. ಮನುಷ್ಯನ ಮೋಹ,ಲೋಭ,ದ್ವೇಷಗಳು, ದಾರಿ ತಪ್ಪುವ ಮನಸ್ಸಿನ ಹೊಯ್ದಾಟಗಳು,ಪರಿಣಾಮಗಳು,ಜಿಜ್ಞಾಸೆಗಳು ಯಥಾವತ್ತಾಗಿ ಜೀವನವೇ ಹಾಳೆಯ ಮೇಲೆ ಮೂಡಿ ಬಂದಂತಿದೆ.
ಮತ್ತಷ್ಟು ಓದು 
ಸೋತು ಗೆದ್ದ ಸ೦ತನ ಕತೆಯಿದು…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ರಾಮಕೃಷ್ಣ ಪರಮಹ೦ಸರು ಯಾರಿಗೆ ತಾನೇ ಗೊತ್ತಿಲ್ಲ.ಬಹುಪಾಲು ಭಾರತೀಯರಿಗೆ ರಾಮಕೃಷ್ಣರು ಚಿರಪರಿಚಿತರು.ಅವರೊಬ್ಬ ಪೂಜಾರ್ಹ ವ್ಯಕ್ತಿ ಎ೦ಬುದು ಎಲ್ಲರೂ ಒಪ್ಪತಕ್ಕ೦ತಹ ವಿಷಯ.ಆದರೆ ಆರ೦ಭಿಕ ದಿನಗಳಲ್ಲಿ ಬಹುತೇಕ ಜನರು ಅವರನ್ನೊಬ್ಬ ವಿಚಿತ್ರ ವ್ಯಕ್ತಿಯೆ೦ಬ೦ತೆ ಭಾವಿಸುತ್ತಿದ್ದರು. ನೋಡುಗನಿಗೆ ಅವರ ನಡುವಳಿಕೆ ಹುಚ್ಚುತನದ೦ತೆ ಕ೦ಡುಬ೦ದರೂ ಆತನ ವರ್ತನೆಯಲ್ಲೊ೦ದು ಸೌ೦ದರ್ಯವೂ ತು೦ಬಿರುತ್ತಿತ್ತು.ಪೆದ್ದತನದಿ೦ದ ಕೂಡಿದ೦ತೆನಿಸುವ ಅವರ ನಡೆನುಡಿಗಳಲ್ಲೊ೦ದು ಆಳವಾದ ಜೀವನಸತ್ಯವಡಗಿದೆ ಎ೦ಬುದನ್ನು ಕೆಲವರಾದರೂ ಕ೦ಡುಕೊ೦ಡಿದ್ದರು.ಅ೦ದಿಗೆ ಭಾರತದ ರಾಜಧಾನಿಯಾಗಿದ್ದ,ಮಹಾ ಬುದ್ದಿವ೦ತರ ನಾಡೆ೦ದೇ ಪ್ರಸಿದ್ಧವಾಗಿರುವ ಕಲ್ಕತ್ತೆಯ ಹೂಗ್ಲಿ ನದಿಯ ತೀರದಲ್ಲಿ ತಮ್ಮ ಬೆರಳೆಣಿಕೆಯಷ್ಟು ಶಿಷ್ಯರೊ೦ದಿಗೆ ಪರಮಹ೦ಸರು ವಾಸವಾಗಿದ್ದರು.ತಮ್ಮದೇ ಲೋಕದಲ್ಲಿ ,ಹಾಡುತ್ತ ಕುಣಿಯುತ್ತ ಕಾಲ ಕಳೆಯುತ್ತಿದ್ದ ಪರಮಹ೦ಸರು ಅದ್ಯಾವ ಪರಿ ದೈವ ಸ್ಮರಣೆಯಲ್ಲಿ ಮುಳುಗಿರುತ್ತಿದ್ದರೆ೦ದರೇ ತಮ್ಮ ವಿಲಕ್ಷಣವೆನಿಸುವ ಆದರೆ ಆಯಸ್ಕಾ೦ತೀಯ ವರ್ತನೆಯಿ೦ದ ದಿನದಿ೦ದ ದಿನಕ್ಕೆ ತಮ್ಮ ಅನುಯಾಯಿಗಳು ಹೆಚ್ಚುತ್ತಿರುವುದರ ಪರಿವೆಯೂ ಅವರಿಗಿರಲಿಲ್ಲ.
ಹೀಗೊಬ್ಬ ವಿಕ್ಷಿಪ್ತ ವ್ಯಕ್ತಿ ತಮ್ಮ ನಡುವೆಯೇ ಇದ್ದಾನೆ ಮತ್ತು ಆತ ದೇವರ ಇರುವಿಕೆಯನ್ನು ಕಲ್ಕತ್ತೆಯಲ್ಲಿಯೇ ಸಾರುತ್ತಿದ್ದಾನೆ ಎ೦ಬುದನ್ನು ಮೊದಲು ಗಮನಿಸಿದವರು ಪಶ್ಚಿಮ ಬ೦ಗಾಳದ ಮಹಾನ್ ಚಿ೦ತಕರಲ್ಲಿ ಒಬ್ಬರಾದ ಕೇಶವ ಚ೦ದ್ರ ಸೇನರು.ಬ್ರಹ್ಮೋಸಮಾಜದ ಸದಸ್ಯರಾಗಿದ್ದ ಕೇಶವ ಚ೦ದ್ರರು ಮೂರ್ತಿ ಪೂಜೆಯ ಕಟ್ಟಾವಿರೋಧಿಗಳು. ಪರಮ ನಾಸ್ತಿಕರು ಮತ್ತು ಚತುರ ವಾಗ್ಮಿ. ಕಾಳಿದೇವಿಯ ವಿಗ್ರಹಾರಾಧಕನೊಬ್ಬ ತಮ್ಮ ಊರಿನಲ್ಲಿಯೇ ದೇವರ ಮಹಿಮೆಯನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾನೆ,ಅ೦ಥವನಿಗೆ ಕೆಲವು ಕಾಲೇಜಿನ ಅಧ್ಯಾಪಕರು ಶಿಷ್ಯರಾಗಿದ್ದಾರೆನ್ನುವ ವಿಷಯವನ್ನು ಕೇಳಿದಾಗ ಕೇಶವ ಸೇನರಿಗೆ ನಖಶಿಖಾ೦ತ ಕೋಪ.
ಅಂಥ ಹುಡುಗಿಯರ ನಡುವೆ ನಾವು ಕಳೆದು ಹೋಗಿದ್ದೇವೆ!
– ವಿನಾಯಕ ಕೊಡ್ಸರ
ಪೋರ್ನ್ ಬ್ಯಾನ್ ರಾಷ್ಟ್ರೀಯ ವಿಪತ್ತು ಎಂಬಂತೆ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ಫೇಸ್ಬುಕ್, ವಾಟ್ಸಪ್ನಲ್ಲಿ ಒಂದಷ್ಟು ಜೋಕುಗಳು ಹರಿದಾಡುತ್ತಿವೆ. ಪರ-ವಿರೋಧದ ನಿಲುವುಗಳು ಇದ್ದೇ ಇದೆ! ನೀವು ಯಾವುದೇ ಸೆಕ್ಸ್ ವೀಡಿಯೋ ನೋಡಿದ್ರೂ, ಅದು ಸಹಜವಾಗಿದ್ದಲ್ಲ, ಸಂಪಾದನೆಗೊಂಡ ಆವೃತಿ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತೆ. ಕ್ಯಾಮೆರ ಫ್ರೇಮ್ಗಳು, ಬದಲಾಗುವ ಸ್ಥಳಗಳು, ಮ್ಯೂಸಿಕ್ನಲ್ಲಿನ ವ್ಯತ್ಯಯಗಳು ಎಲ್ಲವೂ ಕೂಡ ಇದೊಂದು ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋನಂತೆ ಎಡಿಟೆಡ್ ಆವೃತಿ ಮತ್ತು ಪೂರ್ತಿ ಸ್ಕ್ರಿಪ್ಟೆಡ್ ಎಂಬುದನ್ನು ಸೂಚಿಸುತ್ತದೆ.
ಜಗತ್ತಿಗೆ ಚಲಿಸುವ ಚಿತ್ರಗಳ ಪರಿಕಲ್ಪನೆ ಬಂದಾಗಿನಿಂದ ಈ ಪೊರ್ನೊಗ್ರಫಿಯ ಇತಿಹಾಸ ಸಿಗುತ್ತೆ. ಅಂದ್ರೆ ೧೮೯೦ರ ದಶಕದಿಂದಲೆ ಈ ಉದ್ಯಮ ಆರಂಭವಾಗಿದ್ದು ಎಂಬ ಅನುಮಾನದಿಂದ ಗೂಗಲ್ನಲ್ಲಿ ಇಂಥ ಚಿತ್ರಗಳು ಎಲ್ಲಿ ತಯಾರಾಗುತ್ತವೆ, ಹೇಗೆ ತಯಾರಾಗುತ್ತವೆ, ಇವುಗಳ ಹಕ್ಕಿಕತ್ತು ಏನು ಎಂಬ ಕುರಿತು ಒಂದಷ್ಟು ದಿನದ ಹಿಂದೆ ಸುಮ್ಮನೆ ಜಾಲಾಡಿದ್ದೆ.
ಈ ಪೋರ್ನ್ ವೀಡಿಯೋ ಉತ್ಪಾದಕ ಪ್ರೊಡೆಕ್ಷನ್ ಹೌಸ್ಗಳು ಮುಖ್ಯವಾಗಿ ಬೇರು ಬಿಟ್ಟಿರುವುದು ಯೂರೋಪ್ ಮತ್ತು ಅಮೆರಿಕದಲ್ಲಿ. ಒಂದು ಅಂದಾಜಿನ ಪ್ರಕಾರ ೨೦೧೨ರವೇಳೆಗೆ ಈ ನೀಲಿಚಿತ್ರ ಜಗತ್ತಿನ ವಾರ್ಷಿಕ ಆದಾಯ ೧೫-೨೦ ಶತಕೋಟಿ ಡಾಲರ್. ಅಮೆರಿಕದ ೨ ಪ್ರಮುಖ ವೆಬ್ಸೈಟ್ಗಳು ವರ್ಷಕ್ಕೆ ಸುಮಾರು ೪ ಶತಕೋಟಿ ಡಾಲರ್ನಷ್ಟು ವಹಿವಾಟು ನಡೆಸುತ್ತಿವೆ. ಅಲ್ಲಿಗೆ ಇದೊಂದು ವ್ಯವಸ್ಥಿತ ಉದ್ಯಮ ಎಂಬುದನ್ನು ಖಾತ್ರಿಪಡಿಸಿಕೊಂಡು ಇಂಟರ್ನೆಟ್ನಲ್ಲಿ ಜಾಲಾಡುತ್ತ ಹೋದಾಗ ನನಗೆ ಇಂಗ್ಲಿಷ್ನ ೨ ಅತ್ಯದ್ಭುತ ಲೇಖನ ಸಿಕ್ಕಿತ್ತು.
ಮತ್ತಷ್ಟು ಓದು 
ರಿವೈಂಡ್ ಮಾಡಲಾಗದ ಫಿಲ್ಮಿನ ರೀಲು ಮುಗಿಯುವ ಮುನ್ನ
– ರೋಹಿತ್ ಚಕ್ರತೀರ್ಥ
ಈ ಮಾತನ್ನು ನಿನಗೆ ಹೇಳಬೇಕೋ ಬೇಡವೋ ಅನ್ನುವ ವಿಷಯದಲ್ಲಿ ನನಗೆ ಖಂಡಿತ ಗೊಂದಲವಿಲ್ಲ. ಆದರೆ, ಹೇಗೆ ಹೇಳಬೇಕು ಅನ್ನುವ ಸಂಗತಿ ಮಾತ್ರ ನನ್ನ ತಲೆತಿನ್ನುತ್ತಿದೆ. ಎಷ್ಟೋ ಸಲ, ನಮ್ಮ ಇಡೀ ಜೀವಮಾನವೇ ಇಂತಹ ಮೂಲಭೂತ ಪ್ರಶ್ನೆಗಳನ್ನು ಚಿಂತಿಸುತ್ತ ಕೂರುವುದರಲ್ಲೇ ಹೋಗಿಬಿಡುತ್ತದೆ. ಆಗೆಲ್ಲ, ಯೋಚನೆಯೇ ಮಾಡದೆ ಮುನ್ನುಗ್ಗಿ ಕೆಲಸ ಮುಗಿಸಿದವರೇ ಎಷ್ಟೋ ವಾಸಿ; ನಿಂತು ತಲೆ ತುರಿಸಿಕೊಳ್ಳೋ ಬದಲು ಕೆಲವು ಫರ್ಲಾಂಗಾದರೂ ನಡೆದರು ಅಂತ ಹೇಳಬಹುದು. ಹಾಗಾಗಿ, ನಾನು ನನ್ನ ವಿಷಯ ನಿರೂಪಣೆಯಲ್ಲಿ, ಹೇಳುವ ಕ್ರಮದಲ್ಲಿ, ಮುಚ್ಚುಮರೆಯಿಲ್ಲದ ನಿರ್ಭಿಡೆಯಲ್ಲಿ ಸ್ವಲ್ಪ ಹೆಚ್ಚೇ ಸ್ವಾತಂತ್ರ್ಯ ತೆಗೆದುಕೊಂಡೆ ಅನ್ನಿಸಿದರೆ, ಧಾರಾಳವಾಗಿ ಮಗನಾಗಿ ಕ್ಷಮಿಸಿಬಿಡು!
ಅಸಲಿಗೆ ಈ ವಿಷಯವನ್ನು ಶಾಲೆ-ಕಾಲೇಜಲ್ಲಿ ಹೇಳುವುದಿಲ್ಲ; ಪಠ್ಯಪುಸ್ತಕದಲ್ಲಿ ಬರೆಯುವುದಿಲ್ಲ; ಇದರ ಬಗ್ಗೆ ಪರೀಕ್ಷೆಯಲ್ಲಿ ಪ್ರಶ್ನೆಗಳಾಗಲೀ ಅಂಕಗಳಾಗಲೀ ಇಲ್ಲ; ಪ್ರಾಕ್ಟಿಕಲ್ ತರಗತಿಯಲ್ಲಿ ಇದರ ಮೇಲೆ ವೈವಾ ಇಲ್ಲ. ಆದರೆ, ನಮ್ಮ ಹುಡುಗರ ಬಹುಪಾಲು ಸಮಯ, ದುಡ್ಡು, ಮನೋಲೋಕವನ್ನು ತಿನ್ನುವ ಸಂಗತಿ ಇದು. ಎಷ್ಟೋ ಜನ ಇದರ ಬೆನ್ನುಬಿದ್ದು, ಹಿಂದೆ ಬರಲಾಗದಷ್ಟು ದೂರ ನಡೆದುಬಿಟ್ಟಿದ್ದಾರೆ. ಕೆಲವರು ಇದರ ಹಿಡಿತದಿಂದ ತಪ್ಪಿಸಿಕೊಂಡು ಹೊರಬಂದರೂ ಅದು ಮಾಡಿದ ಗಾಯ, ಎಳೆದ ಗೀರು ಮಾಯದೆ ನೋವಿನಿಂದ ನರಳಿದ್ದಾರೆ. ಯಾರೂ ಈ ಬಗ್ಗೆ ಹೊರಗೆ ಸಾರ್ವಜನಿಕವಾಗಿ ಮಾತಾಡೋದಿಲ್ಲ. ಸಭ್ಯರ ಸಮ್ಮುಖದಲ್ಲಿ ಇದಕ್ಕೆ ಎಂಟ್ರಿ ಇಲ್ಲ. ಮುಚ್ಚಿದ ಕೋಣೆಗಳ ಹಿಂದೆ, ಅಡಗಿಸಿಟ್ಟ ಪುಸ್ತಕಗಳ ಹಾಳೆಗಳ ಮಧ್ಯೆ, “ಇಂಪಾರ್ಟೆಂಟ್ ಅಸೈನ್ಮೆಂಟ್ಸ್” ಎಂದಿರುವ ಲಾಕ್ ಮಾಡಿದ ಫೋಲ್ಡರ್ಗಳೊಳಗೆ ಇದು ತೆಪ್ಪಗೆ, ತಣ್ಣಗೆ ಕೂತಿದೆ. ಜಗತ್ತು ಇದನ್ನು ‘ಪೋರ್ನ್’ ಎನ್ನುತ್ತದೆ.
ಮತ್ತಷ್ಟು ಓದು 





