ಯಾಕೂಬ್ ಮೆಮನ್ ಗಲ್ಲಿಗೆ ಕಂಬನಿ ಮಿಡಿದ ಜೀವಪರ ಮನಸ್ಸುಗಳು
– ಪ್ರವೀಣ್ ಕುಮಾರ್,ಮಾವಿನಕಾಡು
ಗಲ್ಲಿಗೇರಿ ಸತ್ತ 1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ,ನತದೃಷ್ಟ ಭಯೋತ್ಪಾದಕ ಯಾಕೂಬ್ ಮೆಮನ್ ನ ಸ್ಮರಣಾರ್ಥ ಹಾಳ್ ಟೌನ್ ನಲ್ಲಿ ಇಂದು ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾರತದ ನ್ಯಾಯ ವ್ಯವಸ್ಥೆಯ ವಿರುದ್ಧ ರಾಜ್ಯದ ಹಲವು ಪ್ರಮುಖ ಜೀವಪರ ಮನಸ್ಸುಗಳ ಆಕ್ರೋಶ ಸ್ಫೋಟಗೊಂಡಿತು.
ಆತನನ್ನು 257 ಜನರ ಸಾವಿಗೆ ಕಾರಣನೆನ್ನಲಾಗುತ್ತಿದೆ.ಒಂದು ವೇಳೆ ಅಂದು ಸ್ಥಳದಲ್ಲಿ ಆ 257 ಜನ ಇಲ್ಲದಿರುತ್ತಿದ್ದರೆ ಆತ ಕೊಲೆಗಾರನಾಗಲು ಹೇಗೆ ಸಾಧ್ಯವಾಗುತ್ತಿತ್ತು?ಆದ್ದರಿಂದ ಆ ಘಟನೆಗೆ ಆ 257 ಜನ ಮತ್ತು ಗಾಯಗೊಂಡ ವ್ಯಕ್ತಿಗಳೇ ಕಾರಣವೇ ಹೊರತೂ ಯಾಕೂಬ್ ಮೆಮನ್ ಅಲ್ಲ.257 ಜನ ಮಾಡಿದ ತಪ್ಪಿಗೆ ಅಮಾಯಕನೊಬ್ಬನನ್ನು ನಮ್ಮ ವ್ಯವಸ್ಥೆಯೇ ನೇಣು ಬಿಗಿದು ಕೊಂದು ಹಾಕಿತು ಎಂದು ಕರ್ನಾಟಕ ರಾಜ್ಯದ ಹಿರಿಯ ಬುದ್ಧಿಜೀವಿ ಬಾಯ್ಕಟ್ ಬೀಬಿ ಆಕ್ರೋಶ ವ್ಯಕ್ತಪಡಿಸಿದರು.
ಆತನಿಗೆ ಕ್ಷಮಾದಾನ ನೀಡಿದ್ದರೆ ಈ ರಾಷ್ಟ್ರ ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಶಕ್ತಿಯುತ ಸಂದೇಶವನ್ನು ಜಗತ್ತಿಗೆ ಸಾರುವ ಅವಕಾಶವಿತ್ತು!ಅನ್ಯಾಯವಾಗಿ ಭಾರತ ಅಂತಹಾ ಸುವರ್ಣಾವಕಾಶವನ್ನು ಕಳೆದುಕೊಂಡಿತು ಎಂದು ಕರ್ನಾಟಕ ರಾಜ್ಯ ಕಾರ್ಯಮರೆತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸದ್ಯದ ಪ್ರಗತಿಪರಬುದ್ಧಿಜೀವಿಪತ್ರಕರ್ತರಾಜಕಾರಣಿಯೊಬ್ಬರು ವ್ಯಾಖ್ಯಾನಿಸಿದರು.”ಮನುಷ್ಯರನ್ನು ಗಲ್ಲಿಗೇರಿಸುವುದು ಈ ದೇಶವನ್ನು ಸುರಕ್ಷಿತವಾಗಿಸುವುದಿಲ್ಲ ಬದಲಾಗಿ ನಮ್ಮನ್ನು ಕೆಳಕ್ಕೆ ನೂಕುತ್ತದೆ” ಎಂದು ಅವರು ಪ್ರತಿಪಾದಿಸಿದರು. ಕೇಂದ್ರದಲ್ಲಿ ನಾವು ಬೆಂಬಲಿಸುತ್ತಿರುವ ಸರ್ಕಾರವಿದ್ದಿದ್ದರೆ ಖಂಡಿತಾ ಇಂತಹಾ ಘಟನೆಗಳು ನಡೆಯಲು ಬಿಡುತ್ತಿರಲಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮತ್ತಷ್ಟು ಓದು 
ಶತಮಾನ ಕಂಡ ಕಾದಂಬರಿ: ಮಾಡಿದ್ದುಣ್ಣೋ ಮಹಾರಾಯ
– ರಾಘವೇಂದ್ರ ಅಡಿಗ ಎಚ್ಚೆನ್
ಸ್ನೇಹಿತರೇ ನಾನಿಲ್ಲಿ ಹೇಳ ಹೊರಟಿರುವ ಕಾದಂಬರಿ ಕನ್ನಡ ಕಾದಂಬರಿಗಳಲ್ಲೆಲ್ಲಾ ಅತ್ಯಂತ ಪ್ರಮುಖವಾದದ್ದು ಹಾಗೂ ಒಂದು ಶತಮಾನವನ್ನು ಕಂಡಂತದೂ ಆಗಿದೆ. ಕನ್ನಡದಲ್ಲಿ ಕಾದಂಬರಿ ಪ್ರಕಾರವನ್ನು ಜನಪ್ರಿಯಗೊಳಿಸಿದವರು ಕಾರಂತರು, ಅ.ನ.ಕೃ. ಮುಂತಾದವರಾದರೆ ಕಾದಂಬರಿ ಪ್ರಕಾರವನ್ನು ಹುಟ್ಟುಹಾಕಿದವರು ಗುಲ್ವಾಡಿ ವೆಂಕಟರಾವ್ (ಇಂದಿರಾಬಾಯಿ-ಕನ್ನಡದ ಮೊದಲ ಸಾಮಾಜಿಕ ಕಾದಂಬರಿ) ಮೈಸೂರು ಸೂರ್ಯನಾರಾಯಣ ಭಟ್ಟ ಪುಟ್ಟಣ್ಣ (ಎಂ.ಎಸ್. ಪುಟ್ಟಣ್ಣ) ನವರುಗಳು. ಇದರಲ್ಲಿ ಎಂ.ಎಸ್. ಪುಟ್ಟಣ್ಣನವರು ಬರೆದ ಪ್ರಥಮ ಕಾದಂಬರಿ-ಮಾಡಿದ್ದುಣ್ಣೋ ಮಹಾರಾಯ (1915) ಗೆ ಇದೀಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಕೃತಿಕಾರರಾದ ಪುಟ್ಟಣ್ಣ ಹಾಗೂ ಕೃತಿಯ ಕುರಿತಂತೆ ನಾಲ್ಕು ಮಾತುಗಳನ್ನು ನಿಮ್ಮೊಡನೆ ಹಂಚಿಕೊಳ್ಳುವ ಇರಾದೆ ನನ್ನದು.
ಅನೇಕರಿಗೆ ಇದಾಗಲೇ ಪುಟ್ಟಣ್ಣನವರ ಬಗೆಗೆ ತಿಳಿದಿರಬಹುದು ಆದರೂ ಇಲ್ಲಿ ಅವರ ಜೀವನದ ಕುರಿತಂತೆ ಸ್ವಲ್ಪ ತಿಳಿದುಕೊಂಡು ಬಳಿಕ ಕಾದಂಬರಿಯ ಕುರಿತು ವಿಚಾರ ಮಾಡೋಣ
ಪುಟ್ಟಣ್ಣ (ಲಕ್ಷ್ಮೀನರಸಿಂಹ ಶಾಸ್ತ್ರಿ)ನವರು ಹುಟ್ಟಿದ್ದು ಮೈಸೂರಿನಲ್ಲಿ (21-11-1854). ತಂದೆ ಸೂರ್ಯನಾರಾಯಣ ಭಟ್ಟ, ತಾಯಿ ಲಕ್ಷ್ಮಮ್ಮ. ಹುಟ್ಟಿದ ಹತ್ತು ದಿವಸದಲ್ಲೇ ತಾಯಿಯನ್ನು ಕಳೆದುಕೊಂಡು ಬೆಳದದ್ದು ಸೋದರ ಮಾವನ ಮನೆಯಲ್ಲಿ. ಪ್ರಾರಂಭಿಕ ವಿದ್ಯಾಭ್ಯಾಸ ಖಾಸಗಿ ಮಠಗಳಲ್ಲಿ ಪೂರೈಸಿದ ಪುಟ್ಟಣ್ಣನವರು ಬಳಿಕ ರಾಜಾ ಸ್ಕೂಲಿನಲ್ಲಿ (ಇಂದಿನದ ಮಹಾರಾಜಾ ಕಾಲೇಜು) ಎಫ್. ಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕೋಲಾರದ ಪ್ರೌಢಶಾಲೆಯಲ್ಲಿ ಸಹ ಅಧ್ಯಾಪಕರಾಗಿ ನೇಮಕಗೊಂಡರು.ಮದರಾಸಿನಲ್ಲಿ ಬಿ.ಎ. ಪದವಿ ವ್ಯಾಸಂಗವನ್ನು ಮುಗಿಸಿದ ಇವರು ಅಧ್ಯಾಪಕ ಪದವಿ ಬಿಟ್ಟು ಬೆಂಗಳೂರಿನ ಚೀಫ್ ಕೋರ್ಟಿನಲ್ಲಿ (ಈಗಿನ ಹೈಕೋರ್ಟಿನಲ್ಲಿ) ಭಾಷಾಂತರಕಾರರಾಗಿ ದುಡಿದರು. 1867 ರಲ್ಲಿ ಅವರನ್ನು ಚಿತ್ರದುರ್ಗದ ಅಮಲ್ದಾರನ್ನಾಗಿ ನೇಮಿಸಲಾಯಿತು. ಮುಂದೆ ನೆಲಮಂಗಲ, ಚಾಮರಾಜನಗರ, ಬಾಗೇಪಲ್ಲಿ, ಮುಳಬಾಗಿಲು, ಹೊಸದುರ್ಗಗಳಲ್ಲಿ ಅಮಲ್ದಾರರಾಗಿ ಕಾರ್ಯ ನಿರ್ವಹಿಸಿದರು. ಬೆಂಗಳೂರಿನ ತೆರಿಗೆದಾರರ ಸಂಘಟಕರಾಗಿದ್ದ ಅವರು ಆ ದಿನಗಳಲ್ಲಿಯೇ ದಾಖಲೆಗಳನ್ನು ಕನ್ನಡದಲ್ಲಿ ಮೂಡಿಸಲು ಕಾರಣರಾದರು. ಮತ್ತಷ್ಟು ಓದು 
ಸುಳ್ಸುದ್ದಿ : ಎಲ್ಲಾ ಡಿ-ದರ್ಜೆಯ ಹುದ್ದೆಗಳನ್ನು ರದ್ದು ಮಾಡಲು ಸರ್ಕಾರದ ಮಹತ್ವದ ನಿರ್ಧಾರ
– ರಾಘವೇಂದ್ರ ಸುಬ್ರಹ್ಮಣ್ಯ
ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಸಲಹೆಕಾರರು ಇತ್ತೀಚೆಗೆ ಕೊಟ್ಟ ಸಲಹೆಯೊಂದನ್ನು ಅಗತ್ಯಕ್ಕಿಂತ ಗಂಭೀರವಾಗಿ ಪರಿಗಣಿಸಿರುವ,ಘನಸರ್ಕಾರವು,ಎಲ್ಲಾ ಡಿ-ದರ್ಜೆಯ ಗುಮಾಸ್ತರ ಹುದ್ದೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದಾರೆ.ಇತ್ತೀಚೆಗೆ ಸಮಾರಂಭವೊಂದರಲ್ಲಿ ಸಲಹೆಕಾರರು,”ಜಮೀನ್ದಾರರು ಹೆಚ್ಚಿನ ಜಮೀನಿನ ಹಿಡುವಳಿಯಿಟ್ಟುಕೊಂಡು, ಕೂಲಿ ಕಾರ್ಮಿಕರಿಲ್ಲ ಎಂದು ಗೋಳಾಡುವ ಬದಲು, ಎಷ್ಟೋ ಬೇಕೋ ಅಷ್ಟಿಟ್ಟುಕೊಂಡು, ಉಳಿದ ಹೆಚ್ಚಿನ ಜಮೀನಿದ್ದರೆ ಬಡವರಿಗೆ ಕೊಟ್ಟರೆ, ಕೂಲಿಕಾರ್ಮಿಕರ ಸಮಸ್ಯೆ ಬರುವುದಿಲ್ಲ. ಬಡವರು ಕೂಲಿ ಕೆಲಸಕ್ಕೆ ಬರಬೇಕೆಂಬ ಧೋರಣೆಯೇ ಅಮಾನುಷ ಮತ್ತು ಅಮಾನವೀಯವಾದದ್ದು” ಎಂದಿದ್ದರು.
ಈ ಸುದ್ಧಿಯನ್ನು ಕೇಳಿ, ಅದೇ ಮಟ್ಟದಲ್ಲಿ ಯೋಚಿಸುತ್ತಿದ್ದ ಮು.ಮಂಗಳಿಗೆ ಸದನದಲ್ಲಿ ತೂಕೂಡಿಸುತ್ತಿದ್ದಾಗ ಹೊಳೆದ ಆಲೋಚನೆಯ ಪ್ರಕಾರ, “ಸರ್ಕಾರ ಎಲ್ಲರನ್ನೂ ಸಮನಾಗಿ ನೋಡಬೇಕು. ಸಿ ದರ್ಜೆ, ಡಿ ದರ್ಜೆ ಎಂದು ವಿಂಗಡಿಸುವುದೇ ಅಮಾನುಷ ಹಾಗೂ ಅಮಾನವೀಯ. ಸರ್ಕಾರವೇ ಹೀಗೆ ಮಾಡಿದರೆ, ಪ್ರಜೆಗಳಿನ್ನೆಷ್ಟರ ಮಟ್ಟಿಗೆ ಅಮಾನವೀಯವಾಗಿ ವರ್ತಿಸಬಹುದು!? ಆದ್ದರಿಂದ ಎಲ್ಲಾ ಡಿ-ದರ್ಜೆಯ ನೌಕರರನ್ನೂ ತಕ್ಷಣವೇ ಸಿ-ದರ್ಜೆಗೆ, ಎಲ್ಲಾ ಸಿ-ದರ್ಜೆಯ ನೌಕರರನ್ನು ಬಿ-ದರ್ಜೆಗೆ, ಹಾಗೇ ಮುಂದುವರಿದು ಎಲ್ಲಾ ಸೂಪರಿಂಟೆಂಡೆಂಟುಗಳನ್ನು ಕೆ.ಎ.ಎಸ್ ದರ್ಜೆಗೆ ಏರಿಸುವ ಆಲೋಚನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆಯೆಂದು, ಮು.ಮಂಗಳ ವಕ್ತಾರ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈ ವರ್ಷದಿಂದ ಡಿ-ದರ್ಜೆಯ ನೌಕರರೇ ಇಲ್ಲದಂತಾಗುತ್ತಾರೆ. ಸರ್ಕಾರ ಮತ್ತು ಸಮಾಜದಲ್ಲಿ ಜನರು ಒಂದು ಹೆಜ್ಜೆ ಮೇಲೇರಿದಂತಾಗುತ್ತದೆ. ಈ ಯೋಜನೆಯ ಮುಂದಿನ ಹಂತವಾಗಿ ಎಲ್ಲಾ ಸಿ-ದರ್ಜೆಯವರನ್ನು ಬಿ-ದರ್ಜೆಗೇರಿಸಿ, ಬಿ-ದರ್ಜೆಯನ್ನು ಎ-ದರ್ಜೆಗೇರಿಸಿ, ಕೊನೆಯ ಹಂತವಾದ ಕೆ.ಎ.ಎಸ್ ಅಧಿಕಾರಿಗಳನ್ನು ಐ.ಎ.ಎಸ್ ಅಧಿಕಾರಿಗಳನ್ನಾಗಿ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಬಂದಲ್ಲಿ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿ, ಕೇಂದ್ರಸರ್ಕಾರವನ್ನೇ ಅಮಾನ್ಯಗೊಳಿಸುವ ಬಗ್ಗೆಯೂ, ಸರ್ಕಾರಿ ವಕೀಲರು ಅಸಂವಿಧಾನಾತ್ಮಕ ಮಾರ್ಗಗಳನ್ನು ಹುಡುತಿದ್ದಾರೆ. ಈ ರೀತಿ ಸಮಾಜದಲ್ಲಿನ ಎರಡು ಹಂತನ ಅಸಮಾನತೆಯನ್ನು ತೊಡೆದುಹಾಕಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸೇರಲಿದೆಯೆಂದು ವಕ್ತಾರರು ತಿಳಿಸಿದ್ದಾರೆ.”
ಮತ್ತಷ್ಟು ಓದು 
“ಪೂರ್ವಾಗ್ರಹ” ಕುರಿತ ಪೂರ್ವಗ್ರಹ
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿವಿ
ಆಗಸ್ಟ್ ೨ ರಂದು ಬಿಡುಗಡೆಯಾದ ‘ಕೊಟ್ಟ ಕುದುರೆಯನೇರಲರಿಯದೆ…'(ವಚನಗಳ ಅಧ್ಯಯನದಲ್ಲಿ ಆಧುನಿಕರ ಪೂರ್ವಗ್ರಹಗಳು ಮತ್ತು ಅವುಗಳಾಚೆಗೆ) ಕೃತಿಯ ಶೀರ್ಷಿಕೆಯಡಿಯ ವಿವರಣ ವಾಕ್ಯ ಸಾಲಿನಲ್ಲಿ ಕಾಣಿಸಿದ “ಪೂರ್ವಗ್ರಹ” ಎಂಬ ಪದವನ್ನು ಕುರಿತು ಪೂರ್ವಾಗ್ರಹ ಪದ ಪರಿಚಯವಿರುವ ಬಹಳಷ್ಟು ಜನ ಇಲ್ಲೊಂದು ದೋಷವಾಗಿದೆ ಎಂದು ಹೇಳುತ್ತಿದ್ದಾರೆ.
ಇಲ್ಲ. ಪೂರ್ವಗ್ರಹ ಎಂಬುದೇ ವ್ಯಾಕರಣಾತ್ಮಕವಾಗಿ ಸರಿ.
ಇದು ಪೂರ್ವ+ಗ್ರಹಿಕೆ ಎಂಬುದರ ಸಂಕ್ಷಿಪ್ತ ರೂಪ. ಪೂರ್ವ ಮತ್ತು ಉತ್ತರ ಪದಗಳೆರಡೂ ಮುಖ್ಯವಾಗಿ ಮೂರನೆಯದನ್ನು ಹೇಳುವ ಕರ್ಮಧಾರಯ ಸಮಾಸದ ಪದ. ವ್ಯಕ್ತಿ, ವಿಷಯ ಇತ್ಯಾದಿಗಳನ್ನು ಕುರಿತು ಮೊದಲೇ ಒಂದು ಅಭಿಪ್ರಾಯ, ನಿರ್ಧಾರಕ್ಕೆ ಬರುವುದು ಎಂಬುದು ಇದರ ಅರ್ಥ. ಎಲ್ಲರೂ ಸಾಮಾನ್ಯವಾಗಿ ಭಾವಿಸಿದಂತೆ “ಪೂರ್ವ+ಆಗ್ರಹ” ಕೂಡಿ ಆದುದಲ್ಲ. ಅಷ್ಟಕ್ಕೂ “ಆಗ್ರಹಿಸುವ” ಅರ್ಥ ಈ ಪದ ಪ್ರಯೋಗದಲ್ಲಿ ಬರುವ ಪ್ರಶ್ನೆಯೇ ಇಲ್ಲ.
ಮತ್ತಷ್ಟು ಓದು 
ಕಂಡವರ ಮಕ್ಕಳನ್ನು ಕಾಡಿಗಟ್ಟುತ್ತಿರುವವರು ಯಾರು?
– ವಿಘ್ನೇಶ್, ಯಲ್ಲಾಪುರ
ಮೊನ್ನೆ ಮೊನ್ನೆ ನಡೆದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ನೋಡಿ ಕೆಲವು ಪ್ರಗತಿಪರರು “ಯೋಧ”ರನ್ನು ಕುರಿತು,ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ ಎಂದು ಬೊಬ್ಬೆ ಹಾಕುತಿದ್ದರು.ಇದು 24 – 11- 2008ರಂದು ಕನ್ನಡ ಪ್ರಭದಲ್ಲಿ ಪ್ರಕಟವಾಗಿದ್ದ ಲೇಖನ.ಈ ಲೇಖನವನ್ನೊಮ್ಮೆ ಓದಿ.ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿದವರು ಯಾರು ಎಂಬುದು ಅರ್ಥವಾಗಬಹುದು
ಅವಳು ಪಾರ್ವತಿ!
ಕೊಪ್ಪ ತಾಲೂಕಿನ ಸೂರ್ಯದೇವಸ್ಥಾನದ ಹುಡುಗಿ. ಕಾಲೇಜು ವಿದ್ಯಾಭ್ಯಾಸಕ್ಕೆಂದು ಹೋಗಿ ಸೇರಿದ್ದು ಶಿವಮೊಗ್ಗೆಯನ್ನು. ತನ್ನ ಕುಟುಂಬದಲ್ಲಿದ್ದ ಬಡತನ ಅವಳಲ್ಲಿ ಸಾಮಾಜಿಕ ಕಳಕಳಿಯನ್ನು ಹುಟ್ಟುಹಾಕಿತ್ತು; ಶಿವಮೊಗ್ಗದಲ್ಲಿದ್ದಷ್ಟು ವರ್ಷವೂ ಒಂದಲ್ಲ ಒಂದು ಸಾಮಾಜಿಕ ವಿಷಯದ ಕುರಿತು ಹೋರಾಟ ಮಾಡಲು ಪ್ರೇರೇಪಿಸಿತ್ತು. ಅದಕ್ಕಾಗಿ ವಿವಿಧ ಸಂಘಟನೆಗಳನ್ನು ಸೇರಿದಳು. ‘ಮಹಿಳಾ ಜಾಗೃತಿ’ಯ ಕಾರ್ಯಕರ್ತೆಯಾಗಿ ಹಗಲಿರುಳು ದುಡಿದಳು, ನಾಯಕಿಯಾಗಿ ಬೆಳೆದಳು. ಶಿವಮೊಗ್ಗದ ಕೆಲ ಉಪನ್ಯಾಸಕರು ದೂರದ ಆಂಧ್ರದಿಂದ ಗದ್ದರ್ನನ್ನು ಕರೆಸಿ ನಡೆಸಿದ ಸಭೆಗಳಲ್ಲಿ ನಡುರಾತ್ರಿಯವರೆಗೂ ಭಾಗವಹಿಸಿದಳು. ರೈತ ಹೋರಾಟದಿಂದ ಹಿಡಿದು ನದೀಮೂಲ ರಕ್ಷಣೆಯಂತಹ ವಿಷಯದವರೆಗೆ, ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆಯಿಂದ ಹಿಡಿದು ಕೊಳಚೆ ನಿವಾಸಿಗಳ ದನಿಯಾಗುವವರೆಗೆ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಳು. ಹೀಗೆ ಅತ್ಯಂತ ಕ್ರಿಯಾಶೀಲಳಾಗಿದ್ದ ಹುಡುಗಿ, ಇದ್ದಕ್ಕಿದ್ದಂತೆ ಒಂದು ದಿನ ಕಣ್ಮರೆಯಾದಳು. ನಾಲ್ಕೈದು ವರ್ಷ ಪಾರ್ವತಿ ಎಲ್ಲಿದ್ದಾಳೆ ಎಂಬುದೇ ನಾಗರಿಕ ಸಮಾಜಕ್ಕೆ ತಿಳಿದಿರಲಿಲ್ಲ. ಸಮಾಜದ ಕುರಿತು ಅಪಾರ ಕಳಕಳಿಯನ್ನಿಟ್ಟುಕೊಂಡು ಹಗಲಿರುಳೂ ಸೈಕಲ್ ತುಳಿಯುತ್ತಿದ್ದ ಹುಡುಗಿ ಹೀಗೆ ಇದ್ದಕ್ಕಿದಂತೆ ಕಣ್ಮರೆಯಾಗಿದ್ದು ಏಕೆ? ಎಲ್ಲಿ ಹೋದಳು?
ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 2003ರ ನವೆಂಬರ್ 17ನೇ ತಾರೀಖು. ಕಾರ್ಕಳ ತಾಲೂಕಿನ ಈದು ಬಳಿಯ ಬೊಲ್ಲೊಟ್ಟುವಿನ ಮನೆಯೊಂದರಲ್ಲಿ ರಾತ್ರಿ ಸಿಡಿದ ಪೋಲೀಸರ ಗುಂಡಿನ ಬೆಳಕಲ್ಲಿ ಪಾರ್ವತಿ ಗೋಚರಿಸಿದಳು. ಹರೆಯದ ಕನಸುಗಳೆಲ್ಲ ಅರಳಿ,ಬದುಕಿನ ಗಾಂಭೀರ್ಯದತ್ತ ಹೊರಳಬೇಕಾದ ವಯಸ್ಸಿನಲ್ಲಿ ಪಾರ್ವತಿ ಹೆಣವಾಗಿ ಬಿದ್ದಿದ್ದಳು! ಅವಳ ಜೊತೆಗೇ ಮಸಣ ಸೇರಿದ ಹಾಜಿಮಾಳ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ! ಮತ್ತಷ್ಟು ಓದು 
ನಮ್ಮ ನಡುವೆ ಮೊಳಕೆಯೊಡೆಯುತ್ತಿರುವ ಸೆಕ್ಯುಲರ್ ಭಯೋತ್ಪಾದಕರು
– ರೋಹಿತ್ ಚಕ್ರತೀರ್ಥ
ಕನ್ನಡದ ಚಲನಚಿತ್ರ ನಿರ್ದೇಶಕರೊಬ್ಬರು ಉದುರಿಸಿದ ಅಣಿಮುತ್ತುಗಳು ಇವು: “ಭಗತ್ಸಿಂಗ್, ಆಜಾದ್ ಮುಂತಾದವರನ್ನು ಬ್ರಿಟಿಷರು ಗಲ್ಲಿಗೇರಿಸಿದರು. ವ್ಯವಸ್ಥೆ ತನಗಾಗದವರ ಕತ್ತಿಗೆ ನೇಣು ಬಿಗಿಯಲು ಸದಾ ಉತ್ಸುಕವಾಗಿರುತ್ತದೆ. ಒಂದೊಂದು ಕಾಲಕ್ಕೆ ಒಂದೊಂದು ಸರಿ ಅನ್ನಿಸುತ್ತದೆ. ಕಾನೂನು ಯಾವತ್ತೂ ಸಾಪೇಕ್ಷ. ಆಳುವವರ ಮರ್ಜಿಗೆ ತಕ್ಕಂತೆ ನ್ಯಾಯ, ಕಾನೂನು, ಶಿಕ್ಷೆಯ ರೂಪಗಳು ಬದಲಾಗಬಹುದು.” ಈ ನಿರ್ದೇಶಕರು ಇಷ್ಟೆಲ್ಲ ಸಂಶೋಧನೆ ಮಾಡಿದ್ದು ಯಾಕೆಂದರೆ, ಯಾಕೂಬ್ ಮೆಮೊನ್ ಎಂಬ ದೇಶದ್ರೋಹಿಯನ್ನು ಗಲ್ಲಿಗೇರಿಸಬೇಕು ಎಂದು ಸುಪ್ರೀಂ ಕೋರ್ಟು ತೀರ್ಪು ಕೊಟ್ಟಿದ್ದು ಇವರಿಗೆ ಹೃದಯಕ್ಕೆ ಗೀರು ಕೊರೆದಷ್ಟು ನೋವಾಗಿದೆಯಂತೆ. ಅವನನ್ನು ಗಲ್ಲಿಗೇರಿಸಬಾರದು, ಭರತಖಂಡದ ನೂರಿಪ್ಪತ್ತು ಕೋಟಿ ಜನಗಳ ಮಧ್ಯೆ ಅವನೊಬ್ಬ ನಮಗೆ ಭಾರವಾಗುತ್ತಾನೆಯೇ? ಅವನನ್ನು ನೆಮ್ಮದಿಯಿಂದ ಇರಗೊಡಬೇಕು – ಎನ್ನುವುದು ಈ ನಿರ್ದೇಶಕರು ಮತ್ತು ಅವರ ಜೊತೆಗಿರುವ ಹತ್ತಾರು ಬುದ್ಧಿಜೀವಿಗಳ ವಾದ ಮತ್ತು ಅಳಲು. ಅವರ ಮಾತನ್ನು ಮೇಲುಮೇಲಕ್ಕೇ ನೋಡಿ “ಆಹಾ ಎಷ್ಟು ಚೆಂದ ಹೇಳಿದ್ದಾರಲ್ಲವಾ? ಮಾನವೀಯತೆ ಅವರ ಪದಪದಗಳಲ್ಲೂ ಜಿನುಗುತ್ತಿದೆ. ಅಂತಃಕರಣದ ಪ್ರೀತಿ, ಆದರ ಅವರ ಹನಿಹನಿ ರಕ್ತದಲ್ಲೂ ತೊಟ್ಟಿಕ್ಕುತ್ತಿದೆ” ಎಂದು ಭಾವಪರವಶರಾಗಿ ಸೋತುಹೋಗುವವರೂ ನಮ್ಮಲ್ಲಿ ಬಹುಮಂದಿ ಇದ್ದಾರೆ. ಮಹನೀಯರ ಮಾತುಗಳನ್ನು ಸ್ವಲ್ಪ ನಿದ್ದೆಬಿಟ್ಟೆದ್ದು ವಸ್ತುನಿಷ್ಠವಾಗಿ ನೋಡೋಣ.
ಸಮಯ ’ಪ್ರಜ್ಞೆ’ ಎಲ್ಲೆ ಮೀರಿದರೆ ಸಮಾಜ ಸಿಡಿದೇಳಬೇಕಾಗುತ್ತೆ..!
– ಸಂಕೇತ್ ಹೆಗ್ಡೆ
ಮಾನವ ಸಮಾಜ ಕೆಲವು ವ್ಯಕ್ತಿಗಳನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ! ಯೆಸ್, ಅವರೂ ಇದೇ ಪ್ರದೇಶದಲ್ಲಿ ಹುಟ್ಟಿದವರು,ಇದೇ ಗಾಳಿ ಸೇರಿಸಿದವರು, ಇದೇ ಮಣ್ಣಿನಲ್ಲಿ ಬೆಳೆದ ಆಹಾರ ತಿಂದವರು, ನಾವು ಕುಡಿಯುವ H2Oವನ್ನೇ ಕುಡಿದವರು. ಆದರೆ ಅವರಲ್ಲೊಂದು ಅಪೂರ್ವ ‘Character’ ಮೂಡಿರುತ್ತೆ! ಕ್ಷಮಿಸಿ, ಅವರು ಬೆಳೆಸಿಕೊಂಡಿರುತ್ತಾರೆ. ಅದು ನಿಷ್ಕಳಂಕ ವ್ಯಕ್ತಿತ್ವ, ಕೈತೊಳೆದುಕೊಂಡು ಮುಟ್ಟಬೇಕು! ಅಂಥವರು ಜನರಿಗೆ ತೀರಾ ಆಪ್ಯಾಯಮಾನವಾಗಿರುತ್ತಾರೆ. ಅವರು ಜೀವನದಲ್ಲಿ ಯಾರೂ ಸಾಧಿಸದಿದ್ದದ್ದೊಂದನ್ನು ಸಾಧಿಸಿರಬಹುದು, ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿರಬಹುದು, ಅಥವಾ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿರಬುಹುದು, ಕೊನೆಗೆ ರಾಷ್ಟ್ರಪತಿ ಹುದ್ದೆಯನ್ನೂ ಅಲಂಕರಿಸಿರಬಹುದು! It doesn’t matter, ಜನ ಅವರನ್ನು ಪ್ರೀತಿಸುವುದು ಖಂಡಿತ ಇವ್ಯಾವುದಕ್ಕೂ ಅಲ್ಲ! ಕೇವಲ ಅಂಥವರ ಹೃದಯ ಸಂಪನ್ನತೆಗೆ. ಕಲಾಂ ಸರ್ ಒಮ್ಮೆ ಬಾಯ್ಬಿಟ್ಟು ಹೇಳಿದ್ದರು ” I am not a handsome guy, but I can give my hand-to-some-one who needs help. Beauty is in heart, not in face” ಅಂತ. ಕಲಾಂ ದೇಶ ಬಾಂಧವರ ಕಣ್ಮಣಿಯಾಗಿದ್ದು ತಮ್ಮ ರೂಪದಿಂದಲ್ಲ, ನಡತೆಯಿಂದ. ಕಲಾಂ ತೀರಾ ಪುಟ್ಟ ಮಕ್ಕಳೊಂದಿಗೆ ಕಾಲಕಳೆಯುತ್ತಿದ್ದ ಎಷ್ಟು ಫೋಟೋಗಳು ಬೇಕು? ಕಂದಮ್ಮಗಳು ತಾತನನ್ನು ಹಾಗೆ ಅವರನ್ನು ಸುತ್ತುವರಿಯುತ್ತಿದ್ದವಲ್ಲ, ಅವುಗಳಿಗೆ ರಾಷ್ಟ್ರಪತಿ ಅಂದರೇನು, Rocket Engineer ಅಂದರೇನು ಅಂತ ಬಿಲ್ ಕುಲ್ ಗೊತ್ತಿರುವುದಿಲ್ಲ!
ಬಿಸಿಯೂಟದಲ್ಲಿ ಕೇಸರೀಬಾತು: ಮುಖ್ಯ ಶಿಕ್ಷಕ ಅಮಾನತು!
– ಪ್ರವೀಣ್ ಕುಮಾರ್,ಮಾವಿನಕಾಡು
ಕೋಮಿನಕೋಟೆ: ಕೋಮಿನಕೋಟೆ ತಾಲೂಕಿನ ಊಟೇನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟದಲ್ಲಿ ಕೇಸರೀಬಾತು ಪತ್ತೆಯಾಗಿದೆ.ಅನಾಮಧೇಯ ಕರೆಯೊಂದರ ಸ್ಪಷ್ಟ ಮಾಹಿತಿಯ ಮೇರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳು ಶಾಲೆಯ ಮೇಲೆ ದಾಳಿ ನಡೆಸಿ ಸುಮಾರು 8KG ಗೂ ಹೆಚ್ಚು ಕೇಸರೀ ಬಾತನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ಖಂಡಿಸಿ ಮಕ್ಕಳ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.ಅಲ್ಲದೆ ತಮಗೆ ನೀಡಲಾಗುತ್ತಿರುವ ಊಟ ಉತ್ತಮ ಗುಣಮಟ್ಟದ್ದೇ ಆಗಿದ್ದರೂ,ಊಟದಲ್ಲಿ ಪದೇ ಪದೇ ಕೇಸರೀಬಾತು ದೊರೆಯುತ್ತಿತ್ತು ಎಂದು ವಿದ್ಯಾರ್ಥಿಗಳು ಆರೋಪಿದ್ದಾರೆ.ಪ್ರಕರಣದ ರೂವಾರಿಗಳನ್ನು ಆದಷ್ಟೂ ಬೇಗ ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಆಡಳಿತ ಹಾಗೂ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿವೆ.ರಾಜ್ಯ ಕೋಮುವೇದಿಕೆಯ ಪ್ರಮುಖರಾದ ಗಂಜಿ ಕೋಮ್ಲೇಶ್ ಮತ್ತವರ ತಂಡ ಶಾಲೆಯಲ್ಲೇ ಬೀಡುಬಿಟ್ಟಿದ್ದು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದೆ.
“ವಿಧ್ವಂಸಕತೆ”ಯೆಂಬುದು ಪ್ರಗತಿಪರರ ಹುಟ್ಟುಗುಣವೇ?
– ರಾಕೇಶ್ ಶೆಟ್ಟಿ
ಎಲ್ಲಾ ಚುನಾವಣಾ ಸಮೀಕ್ಷೆಗಳನ್ನು ತಲೆಕೆಳಗು ಮಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಬಹುಮತ ಪಡೆದಾಗ,ದಶಕಗಳಿಂದ ನಡೆಸಿಕೊಂಡು ಬರಲಾಗಿದ್ದ “ಮೋದಿ ವಿರೋಧಿ ಕ್ಯಾಂಪೇನ್”ನ ಶವ ಪೆಟ್ಟಿಗೆಗೆ ಅಂತಿಮ ಮೊಳೆ ಬಿದ್ದಿತ್ತು.ಆದರೆ ಅತೃಪ್ತ ಆತ್ಮಗಳೇನು ಸುಮ್ಮನಿರುವ ಪೈಕಿಯೇ? ಅವುಗಳು ಶವಪೆಟ್ಟಿಗೆಯೊಳಗಿಂದಲೂ ಸದ್ದು ಮಾಡುತಿದ್ದವು.ಬಿಜೆಪಿಯ ವೋಟ್ ಶೇರ್ ಇರುವುದು ೩೧% ಮಾತ್ರ,ಇನ್ನು ೬೯% ಎಲ್ಲಿ ಅಂತ.ಪ್ರಗತಿಪರರ ಈ ಲೆಕ್ಕಾಚಾರವನ್ನು,ಕಷ್ಟಪಟ್ಟು ೩೫ ಅಂಕ ಪಡೆದು ಪಾಸ್ ಆದ ವಿದ್ಯಾರ್ಥಿಯೊಬ್ಬನ ಮುಂದೆ ನಿಂತು, “ನೋಡಪ್ಪಾ ನೀನು ತೆಗೆದಿರುವುದು ೩೫ ಮಾತ್ರ,ಇನ್ನು ೬೫ ತೆಗೆದಿಲ್ಲವಾದ್ದರಿಂದ ನೀನು ಪಾಸಾದರೂ,ಫೇಲ್ ಆದಂತೆ ಲೆಕ್ಕ” ಹೇಳಿದರೆ ಕೆನ್ನೆಯೂದುವುದು ಖಚಿತ.ಮೋದಿ ಸರ್ಕಾರದ ವಿರುದ್ಧ ಹೀಗೆ ಶುರುವಾದ ನರಳಾಟ ಮುಂದುವರೆಯುತ್ತಲೇ ಇದೆ.
Of course ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನ ಧ್ವನಿಗಳಿಗೆ ಮನ್ನಣೇ ನೀಡಲೇಬೇಕು.ಕೇಂದ್ರ ಸರ್ಕಾರವನ್ನು ವಿರೋಧಿಸಲೇ ಬಾರದೂ ಅಂತಲೂ ಏನಿಲ್ಲ.ಟೀಕೆ-ಟಿಪ್ಪಣಿಗಳಿರಲೇಬೇಕು.ಆದರೆ ಅವು ಸಕಾರಾತ್ಮಕವಾಗಿದ್ದರೆ ಸಮಾಜದ ಆರೋಗ್ಯಕ್ಕೂ ಒಳ್ಳೆಯದು.ಆದರೆ ನಮ್ಮ ಪ್ರಗತಿಪರರು ತಮ್ಮ “ಪುರಾತನ ಪದ್ಧತಿ”ಯಾದ ನಕಾರಾತ್ಮಕ ಟೀಕಾ ಶೈಲಿಯನ್ನೇ ಮುಂದುವರೆಸಿದ್ದಾರೆ.ಪುರಾತನ ಪದ್ಧತಿ ಎನ್ನಲು ಕಾರಣವಿದೆ.
ಮದರಾಸಿನ ಭಾಷಣವೊಂದರಲ್ಲಿ ಸ್ವಾಮಿ ವಿವೇಕಾನಂದರು,ಅಂದಿನ ಕಾಲದ ಸಮಾಜ ಸುಧಾರಕರ ಕುರಿತು “ಅವರದು ಧ್ವಂಸ ಮಾರ್ಗ.ನನ್ನದು ನಿರ್ಮಾಣ ಮಾರ್ಗ“ ಎಂದಿದ್ದರು.





