ಕಾರ್ಗಿಲ್ ವಿಜಯ ದಿನ
– ಮಯೂರಲಕ್ಷ್ಮಿ
ಅವರ ಕನಸುಗಳಲ್ಲಿ ನಾಳಿನ ನೆಮ್ಮದಿಯ ಬದುಕಿಲ್ಲ….
ಅವರ ಮನಸುಗಳಲ್ಲಿ ಬದುಕಿ ಬರುವ ಸುಳಿವಿಲ್ಲ….
ಮರಳಿ ಮನೆಗೆ ಹಿಂದಿರುಗಲೆಂದು ಹೆತ್ತವರ ಆಶಯ..
ಕೊರೆವ ಹಿಮದ ತಮದಲ್ಲಿ ಅಹರ್ನಿಶೆ ಕಾದಾಟದ ಭಯ…
ತ್ಯಾಗ-ಬಲಿದಾನವೇ ಸಾರ್ಥಕತೆಯ ವಿಜಯ!
ಹೌದು, ದೇಶವು ನಿದ್ರಿಸುತ್ತಿರಲು ಸುಂದರ ಭವಿಷ್ಯದ ಕನಸಿಲ್ಲದೆ, ವೈಯುಕ್ತಿಕ ಸುಖದ ಮರೀಚಿಕೆಯ ಸೋಗಿಲ್ಲದೆ, ರಕ್ತಸಿಕ್ತ ದೇಹಗಳಲ್ಲಾಗುವ ಗಾಯಗಳ ಕಿಂಚಿತ್ತೂ ನೋವಿಲ್ಲದಂತೆ ಕ್ಷಣಕ್ಷಣದಲ್ಲೂ ಆಪತ್ತಿನ ಕತ್ತಲೆಯ ಕಂದಕಗಳಲ್ಲಿ ಎಚ್ಚರದಿಂದಿದ್ದು ಗಡಿ ಕಾಯುವ ಅವರೇ ದೇಶದ ನಿಜ ನಾಯಕರು.ನಮ್ಮ ದೇಶದ ಅತ್ಯಧಿಕವೆನಿಸುವ ಆಪತ್ತುಗಳ ಪ್ರವಾಹ ಹರಿದಾಗ,ಭೂಕಂಪವಾದಾಗ, ಗಲಭೆಗಳಾದಾಗ, ನಿರಾಶ್ರಿತರಿಗೆ ನೆರವಾಗಲು ಅವರು ಸದಾ ಸಿದ್ಧ! ಗಡಿಗಡಿಗಳಲ್ಲಿ ಜೀವಭಯವಿಲ್ಲದೆ ಕಣಕಣಗಳಲ್ಲಿ ರಕ್ಷಣೆಯ ಹೊಣೆ ಹೊತ್ತು ನಮ್ಮನ್ನು ಕಾಪಾಡಲು ಧಾವಿಸುವ ಕೊನೆಯ ಆಸರೆಯೇ ಸೈನಿಕರು.
ಬೌದ್ಧಿಕ ದಾಸ್ಯದಲ್ಲಿ ಭಾರತ -ಪುಸ್ತಕ ವಿಮರ್ಶೆ
‘ಒಪ್ಪಿತ ಸತ್ಯ’ಗಳನ್ನು ಪ್ರಶ್ನಿಸುವ ಕೃತಿ
– ಡಾ. ಪ್ರವೀಣ ಟಿ. ಎಲ್. & ಶಿವಕುಮಾರ ಪಿ. ವಿ. ಶಿವಮೊಗ್ಗ
ಬೌದ್ಧಿಕ ದಾಸ್ಯದಲ್ಲಿ ಭಾರತ ಎಂಬ ಕೃತಿಯು ನಿಲುಮೆ ಪ್ರಕಾಶನದ ಚೊಚ್ಚಲ ಪುಸ್ತಕವಾಗಿ ದಿನಾಂಕ-01-03-2015ರಂದು ಲೋಕಾರ್ಪಣೆಗೊಂಡಿತು. ಈ ಕೃತಿಯು ಬಾಲಗಂಗಾಧರರವರ ವಿಚಾರಗಳ ಕನ್ನಡ ರೂಪಾಂತರವಾಗಿದೆ. ಬಾಲುರವರು ಕಳೆದ ಒಂದು ದಶಕದಿಂದಲೂ ಕನ್ನಡದ ಬುದ್ಧಿಜೀವಿ ವಲಯದಲ್ಲಿ ಚಿರಪರಿಚಿತರು. ಅವರ ಹೀದನ್ ಇನ್ ಹಿಸ್ ಬ್ಲೈಂಡ್ನೆಸ್ ಎಂಬ ಕೃತಿಯು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಶೀರ್ಷಿಕೆಯಲ್ಲಿ ಕನ್ನಡಕ್ಕೆ ಅನುವಾದಗೊಂಡಿದ್ದು ಸಾಂಸ್ಕೃತಿಕ ವಿಭಿನ್ನತೆ ಹಾಗೂ ಭಾರತೀಯ ಸಮಾಜದ ಕುರಿತ ಜ್ಞಾನದ ಹುಡುಕಾಟಕ್ಕೆ ಹೊಸ ಆಯಾಮಗಳನ್ನು ನೀಡಿದೆ. ಬಹುತೇಕ ಚಿಂತಕರು ಹೇಳುವಂತೆ ಅದು ಇತರ ವೈಜ್ಞಾನಿಕ ಸಂಶೋಧನೆಗಳಿಗೆ ಮಾದರಿ ಎಂಬ ಹೆಗ್ಗಳಿಕೆ ಪಡೆದಿದೆ. ಹಾಗಾಗಿಯೇ ಅದರ ಓದಿಗೆ ಕೆಲವು ಭೌದ್ಧಿಕ ಅಗತ್ಯ ಹಾಗೂ ಪ್ರಯತ್ನಗಳು ಬೇಕಾಗುತ್ತವೆ. ಅಂತಹ ಗಹನವಾದ ಸೈದ್ಧಾಂತಿಕ ವಿಚಾರಗಳಿಗೆ ಸಾಮಾನ್ಯ ಓದುಗರಿಗೂ ಸಹ ಪ್ರವೇಶ ಕಲ್ಪಿಸಿಕೊಡುವಲ್ಲಿ ರಾಜರಾಮ ಹೆಗಡೆಯವರ ಸರಳ ನಿರೂಪಣೆಯ 31 ಚಿಕ್ಕ ಅಂಕಣಗಳ ಪ್ರಸ್ತುತ ಕೃತಿಯು ಯಶಸ್ವಿಯಾಗಿದ್ದು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಮರು ಮುದ್ರಣವನ್ನೂ ಕಂಡಿದೆ.
ಭಾರತವು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತವಾಗಿ ಅರವತ್ತಕ್ಕೂ ಹೆಚ್ಚು ವರ್ಷಗಳೇ ಕಳೆದಿವೆ. ಆದರೆ ಐರೋಪ್ಯರ ಆಳ್ವಿಕೆಯಿಂದ ಸ್ವತಂತ್ರವಾದರೂ ಸಹ ಅವರ ಚಿಂತನೆಯ ದಾಸ್ಯದಿಂದ ಇನ್ನೂ ಸ್ವತಂತ್ರರಾಗಿಲ್ಲ. ವಸಾಹತು ಪ್ರಜ್ಞೆಯು ನಮ್ಮೆಲ್ಲರನ್ನು ಇನ್ನೂ ಐರೋಪ್ಯರ ದಾಸ್ಯದಲ್ಲಿಯೇ ಬಂಧಿಸಿಟ್ಟಿದೆ ಎಂದು ಈ ಕೃತಿಯು ಪ್ರತಿಪಾದಿಸುತ್ತದೆ. ದಿಗಿಲು ಬಡಿಸುವ ಈ ಹೇಳಿಕೆಯೇ ನಮ್ಮ ಸಮಾಜದ ಕುರಿತ ಈವರೆಗಿನ ಭೌದ್ಧಿಕ ಬೆಳವಣಿಗೆಯ ಬಗ್ಗೆ ಮೂಲಭೂತ ಅನುಮಾನ ಹುಟ್ಟಿಸುತ್ತದೆ. ಇಂತಹ ಹೇಳಿಕೆಗಳು ವಸಾಹತೋತ್ತರವಾದಗಳಲ್ಲಿ ಈಗಾಗಲೇ ಬಂದಿವೆ. ಆದರೆ ಅವುಗಳೂ ಸಹ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಐರೋಪ್ಯ ಚಿಂತನೆಗಳ ಮಿತಿಯಲ್ಲಿ ಬಳಲುತ್ತಿವೆ. ಅಂತಹ ಮಿತಿಗಳನ್ನು ದಾಟುವ ಪ್ರಸ್ತುತ ಕೃತಿಯ ಮೇಲಿನ ಪ್ರತಿಪಾದನೆಯು ಬಹುಮುಖ್ಯವೆನಿಸುತ್ತದೆ. ನಾವು ತೀರಾ ಸಹಜವೆಂಬಂತೆ ಒಪ್ಪಿರುವ ‘ಸತ್ಯ’ಗಳನ್ನು ಪ್ರಶ್ನಿಸಿ ಆ ಭೌದ್ಧಿಕದಾಸ್ಯದ ಸ್ವರೂಪ ಹೇಗಿದೆ? ಅದು ನಮ್ಮ ದಿನನಿತ್ಯದ ಸಮಸ್ಯೆಗಳಾಗಿ ವಿಭಿನ್ನ ರೂಪಗಳಲ್ಲಿ ಹೇಗೆ ಪ್ರವೇಶ ಪಡೆಯುತ್ತದೆ? ಅದರಿಂದಾಗುತ್ತಿರುವ ಅನಾಹುತಗಳೇನು? ಎಂಬುದನ್ನು ಕೃತಿಯಲ್ಲಿನ ಒಂದೊಂದು ಲೇಖನಗಳು ವಿಭಿನ್ನ ಸಮಸ್ಯೆಯನ್ನು ಎತ್ತಿಕೊಂಡು ಎಳೆಎಳೆಯಾಗಿ ಬಿಡಿಸಿಡುತ್ತವೆ. ಅದು ಕೃತಿಯ ನಾಲ್ಕು ಹಂತಗಳಲ್ಲಿ ನಡೆಯುತ್ತದೆ. ಮತ್ತಷ್ಟು ಓದು 
ಅನ್ನಭಾಗ್ಯ ಹಸಿದವರಿಗೋ,ರೈತರ ಅಧಃಪತನಕ್ಕೋ?
– ಡಾ. ಪ್ರವೀಣ ಟಿ. ಎಲ್, ಶಿವಮೊಗ್ಗ
ಅನ್ನಭಾಗ್ಯ ಯೋಜನೆಯ ಕುರಿತ ಚರ್ಚೆ ದಿನೇ ದಿನೇ ಕಾವು ಪಡೆಯುತ್ತಿರುವುದು ಸ್ಪಷ್ಟ. ಇಡೀ ಚರ್ಚೆಯಲ್ಲಿ ಅನ್ನಭಾಗ್ಯ ಯೋಜನೆಯನ್ನು ಟೀಕಿಸುವವರನ್ನು ಹಸಿದವರ ವಿರೋಧಿಗಳೆಂದೂ, ಬಿ.ಜೆ.ಪಿಯವರೆಂದೂ,ಮೇಲ್ವರ್ಗದ ಜಮೀನ್ದಾರೀ ಮನಸುಗಳೆಂದೂ, ಮಾನವೀಯತೆಯನ್ನು ಮರೆತವರೆಂದೂ ಬಿಂಬಿಸಿ, ವಿಮರ್ಶೆಗಳನ್ನು ಮೂಲೆಗುಂಪುಮಾಡಲಾಗುತ್ತಿದೆ. ಆದರೆ ಈ ಆರೋಪಗಳು ವಿಮರ್ಶೆಯ ತೀಕ್ಷ್ಣತೆಯನ್ನು ಕಡಿಮೆಗೊಳಿಸಬಹುದೇ ವಿನಃ, ‘ಅನ್ನಭಾಗ್ಯ’ದ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂಬುದು ಅಷ್ಟೇ ಸತ್ಯ.
ಹಸಿದವರಿಗೆ ‘ಅನ್ನ’ ನೀಡುವ ‘ಭಾಗ್ಯ’ ಎಂದು ಬಿಂಬಿಸುತ್ತಿರುವ ಈ ಯೋಜನೆಯು ನಿಜವಾಗಿಯೂ ಹಸಿದವರಿಗೆ, ದುರ್ಬಲರಿಗೆ ಅನ್ನನೀಡುವ ಕೆಲಸವಾಗಿದ್ದರೆ ಭಾರತದ ಯಾರೊಬ್ಬರೂ ವಿರೋಧಿಸುವ ಪ್ರಮೆಯವೇ ಎದುರಾಗುತ್ತಿರಲಿಲ್ಲ. ಏಕೆಂದರೆ, ಹಸಿದವರಿಗೆ, ದುರ್ಬಲರಿಗೆ ಭಿಕ್ಷೆನೀಡಿ ಸಾಕುವ ಸಂಪ್ರದಾಯ ತಲೆತಲಾಂತರಗಳಿಂದಲೂ ನಡೆದುಬಂದಿರುವುದು ನಮ್ಮ ಸಂಸ್ಕೃತಿಯ ವಿಶೇಷಗಳಲ್ಲೊಂದು. ಹಸಿದವರು, ದುರ್ಬಲರು ಮಾತ್ರವೇ ಈ ಯೋಜನೆಯ ಫಲಾನುಭವಿಗಳೇ? ಖಂಡಿತ ಇಲ್ಲ. ಬಿ.ಪಿ.ಎಲ್. ಕಾರ್ಡುದಾರರೆಲ್ಲರೂ ಈ ಯೋಜನೆಗೆ ಅರ್ಹರು. ಈ ಪಡಿತರ ಕಾರ್ಡು ಪಡೆಯುವುದು ‘ಆದಾಯ ಪ್ರಮಾಣ ಪತ್ರ’ ಪಡೆದಂತೆಯೇ. ಲಕ್ಷಾಂತರ ರೂಪಾಯಿ ಆದಾಯವಿದ್ದರೂ 11000/- ಅಥವಾ 15000/- ಎಂದೇ ನಮೂದಾಗುವುದು ಬಹಿರಂಗ ಸತ್ಯ. ಹೀಗಿರುವಾಗ, ನಿಜವಾದ ದುರ್ಬಲರನ್ನು, ಹಸಿದವರನ್ನು ಗುರುತಿಸದೆಯೇ ಈ ರೀತಿಯ ಬೃಹತ್ ಮೊತ್ತದ ಯೋಜನೆಗಳನ್ನು ರೂಪಿಸಿ, ಅನುಷ್ಟಾನಗೊಳಿಸುವುದು ಹಲವಾರು ದುಷ್ಪರಿಣಾಮಗಳಿಗೆ, ದುರುಪಯೋಗಕ್ಕೆ ಕಾರಣವಾಗುತ್ತದೆಯೇ ವಿನಃ ನಿಜವಾದ ಉದ್ದೇಶ ಈಡೇರಲಾರದು.
ಇದು ಬೌದ್ಧಿಕ ಕ್ಷತ್ರಿಯರ ಯುದ್ಧ
– ಚಕ್ರವರ್ತಿ ಸೂಲಿಬೆಲೆ
ಅಮೇರಿಕಾದ ಪ್ರಿಸ್ನಟನ್ ನ ಶಾಲೆ. ಅಲ್ಲಿನ ಶಿಕ್ಷರರೊಬ್ಬರು ದೆಹಲಿ ಮೂಲದ ಹಿಂದೂವೊಬ್ಬರನ್ನು ವಿವೇಕಾನಂದರು ಮತ್ತು ರಾಮಕೃಷ್ಣರ ಕುರಿತಂತೆ ಮಕ್ಕಳಿಗೆ ಪಾಠ ಮಾಡಬಾರದೆಂದು ನುಡಿದರು.ಆಶ್ಚರ್ಯಚಕಿತರಾದ ಆತ ಹುಬ್ಬೇರಿಸಿ ಏಕೆಂದು ಕೇಳಿದರೆ ಅವರು ಸಲಿಂಗಕಾಮಿಗಳಾಗಿದ್ದರಂತೆ ಎಂಬ ಉತ್ತರ ಬಂತು.ಬೆಚ್ಚಿ ಬಿದ್ದ ಭಾರತೀಯ ಮೂಲದ ವ್ಯಕ್ತಿ ಹಾಗೆ ಹೇಳಿದ್ದು ಯಾರೆಂದು ಕೇಳಿದ್ದಕ್ಕೆ ಅವರು ಆತನ ಕೈಗೊಂದು ಪುಸ್ತಕವಿತ್ತರು.ಅದು ಜೆಫ್ರಿ ಕೃಪಾಲ್ ಬರೆದಿದ್ದ ‘ಕಾಳಿಯ ಮಕ್ಕಳು’. ಕೃತಿಯುದ್ದಕ್ಕೂ ವಿಕೃತಿಗಳೇ ತುಂಬಿದ್ದುದನ್ನು ಕಂಡು ಅಸಹ್ಯದಿಂದ ಬೆಂದು ಹೋದ ಆತ ಅಮೇರಿಕಾದ ಬುದ್ಧಿವಂತರ ನಡುವೆ ತಿರುಗಾಡುತ್ತಿರುವ ಹಿಂದೂಗಳ ಅವಹೇಳನ ಮಾಡುವ ಅನೇಕ ಪುಸ್ತಕಗಳನ್ನು ಹುಡುಕಿದರು.ಅದರ ಕುರಿತಂತೆ ಇತರ ಹಿಂದೂಗಳಿಗೆ ಗೊತ್ತಿರಲಿಲ್ಲವೆಂದಲ್ಲ.ಆದರೆ ಅವರು ಅದೆಷ್ಟು ಅವಮಾನಿತರಾಗಿದ್ದರೆಂದರೆ ಬಾಯಿ ತೆರೆಯಲಾಗದೇ ಮೌನವಹಿಸಿ ಬಿಟ್ಟಿದ್ದರು.ಶಾಲೆಗಳಲ್ಲಿ ಹಿಂದೂವಾಗಿರುವುದು ಮಗುವೊಂದಕ್ಕೆ ಅತ್ಯಂತ ಕಠಿಣವಾಗಿತ್ತು.ಓರಗೆಯ ಕ್ರಿಶ್ಚಿಯನ್ನರು ಹಿಂದೂ ದೇವ-ದೇವಿಯರನ್ನು ಆಡಿಕೊಂಡು ನಗುವಾಗ ಇವರೆಲ್ಲ ಬರಿಯ ಮೂಕ ಪ್ರೇಕ್ಷಕರಷ್ಟೇ.
ರಾಜೀವ್ ಮಲ್ಹೋತ್ರಾ! ಬ್ರೇಕಿಂಗ್ ಇಂಡಿಯಾ, ಬೀಯಿಂಗ್ ಡಿಫರೆಂಟ್, ಇಂದ್ರಾಸ್ ನೆಟ್ ಗಳ ಮೂಲಕ ಅಮೇರಿಕಾದಾದ್ಯಂತ ಹರಡಿಕೊಂಡಿರುವ ಹಿಂದೂ ವಿರೋಧಿಗಳಿಗ ಸೂಕ್ತ ಉತ್ತರ ಕೊಡುತ್ತಿರುವ ವ್ಯಕ್ತಿ. ಎಡಪಂಥದ ಗಬ್ಬು ಘಾಟಿನಲ್ಲಿಯೇ ಕಾಲದೂಡುತ್ತಿರುವ ಭಾರತದ ಬುದ್ಧಿ ಜೀವಿಗಳ ಆರಾಧ್ಯವೆನಿಸಿದ್ದವರನ್ನೆಲ್ಲ ತನ್ನ ಬೌದ್ಧಿಕ ಗದಾಪ್ರಹಾರದಿಂದ ಝಾಡಿಸಿ ಕೊಡವಿ ಬಿಟ್ಟಿರುವ ಜಟ್ಟಿ ಆತ.
ಕುವೆಂಪು ಮತ್ತು ಅಧ್ಯಾತ್ಮ
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. “ನಾನೃಷಿಃ ಕುರುತೇ ಕಾವ್ಯಂ” ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ‘Immediate feeling of unity of the self with God’ ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ ಪ್ರೇಮ, ಹೀಗೆ ಯಾವುದೇ ಶಾಶ್ವತ ಮೌಲ್ಯವೂ ದೇವರಾಗಬಹುದು. ಇವು ವ್ಯಕ್ತಿಯಲ್ಲಿ ಲೀನವಾಗುವ ಬಗೆ ಅಧ್ಯಾತ್ಮದ ಹಂತಕ್ಕೆ ಒಯ್ಯುತ್ತದೆ.
ತೀವ್ರ ವಿಚಾರವಾದಿ, ಅಧ್ಯಾತ್ಮವಾದಿ, ಅಧ್ಯಾತ್ಮ ಜೀವಿಯಾದ ಕುವೆಂಪು ಸುಲಭಗ್ರಾಹ್ಯರಲ್ಲ. ಅವರು ವಿಚಾರವಾದಿ ನಿಜ, ಆದರೆ ಕೇವಲ ಭೌತವಾದಿಯಲ್ಲ. ಅಧ್ಯಾತ್ಮವಾದಿ ನಿಜ, ಆದರೆ ಕರ್ಮಠರಲ್ಲ. ಅಧ್ಯಾತ್ಮ ಜೀವಿ ನಿಜ, ಆದರೆ ಸಂನ್ಯಾಸಿಯಲ್ಲ. ನಿರಂಕುಶಮತಿಗಾಗಿ ಅವರು ನೀಡುವ ಕರೆ,ಆತ್ಮಶ್ರೀಗಾಗಿಯೇ ವಿನಾ ಭೌತಿಕ ರುಚಿಗಳ ಆರೈಕೆ, ಪೂರೈಕೆಗಳಿಗಾಗಿ ಅಲ್ಲ.
ಯಾವುದೇ ಅಧ್ಯಾತ್ಮ ತತ್ತ್ವದ ಅಂತಿಮ ಬಿಂದು ವ್ಯಕ್ತಿ ನಿಷ್ಠತೆ, ವ್ಯಕ್ತಿ ಉದ್ಧಾರ. ಸಮೂಹವನ್ನು ಇಡಿಯಾಗಿ ಉದ್ಧರಿಸುವ ಆಧ್ಯಾತ್ಮಿಕ ಸೂತ್ರ ಇಲ್ಲವೇ ಇಲ್ಲ. ಭಗವದ್ಗೀತೆಯಲ್ಲಿ ಹೇಳುವ “ಉದ್ಧರೇದಾತ್ಮನಾತ್ಮನಂ” ಎಂಬ ಮಾತು ಅಕ್ಷರಶಃ ನಿಜ. ವ್ಯಕ್ತಿ ಸ್ವತಃ ಉದ್ಧಾರವಾಗಬೇಕು. ವ್ಯಕ್ತಿ ವ್ಯಕ್ತಿಗಳು ಕೂಡಿ ಒಂದು ಸಮಾಜ. ವ್ಯಕ್ತಿಗಳ ಉದ್ಧಾರವೇ ಸಮಾಜದ ಉದ್ಧಾರ. ಕುವೆಂಪು ಅವರ ಕಾವ್ಯ, ಸಾಹಿತ್ಯ ಸೃಷ್ಟಿಯ ಮುಖ್ಯ ಸೂತ್ರವೂ ವ್ಯಕ್ತಿಯ ಆತ್ಮ ಸ್ವಾತಂತ್ರ್ಯಕ್ಕಾಗಿ ತುಡಿಯುವುದೇ ಆಗಿದೆ. ನಮ್ಮ ಉದ್ಧಾರಕ್ಕಾಗಿ ಯಾರೋ ಒಬ್ಬರು ದುಡಿಯುತ್ತಾರೆ ಎಂದು ಬಯಸುವಂತಿಲ್ಲ. ಎಲ್ಲರೂ ದುಡಿಯುತ್ತಲೇ ಅವರವರ ಹಾದಿಯಲ್ಲಿ ನಡೆದು, ಉದ್ಧಾರ ಕಂಡುಕೊಳ್ಳಬೇಕೆಂಬುದು ಅವರ ಕಾಣ್ಕೆ. ಹಾಗಾಗಿಯೇ ಅವರ ಸಾಹಿತ್ಯ ಸರ್ವಸ್ವದ ಸಾರವೇ ಆಗಿರುವ ಸಪ್ತ ಸೂತ್ರಗಳಲ್ಲಿ, “ಮತ ತೊಲಗಿ ಅಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು ಹಾಗೂ ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾಗುವ ಎಲ್ಲವನ್ನೂ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ಪಡೆಯಬೇಕು” ಎಂದಿದ್ದಾರೆ.
ಕ್ರಿಕೆಟ್ ನಿಂದ ಆಜೀವ ನಿಷೇಧ: ಮೇಯಪ್ಪನ್,ರಾಜ್ ಕುಂದ್ರಾಗೆ ಸಂತಸ !!
– ಪ್ರವೀಣ್ ಕುಮಾರ್ ಮಾವಿನಕಾಡು

ಚೆನ್ನೈ ನ ಹೊರವಲಯದ ರೆಸಾರ್ಟ್ ಒಂದರಲ್ಲಿ ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ರವರು ಜಂಟಿಯಾಗಿ ಆಯೋಜಿಸಿದ್ದ ಸಂತೋಷಕೂಟದಲ್ಲಿ,ತಂಡದ ಹಲವು ಆಟಗಾರರು ಹಾಗೂ ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಇಬ್ಬರೂ ಸಹಾ ತಮಗೆ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರಿದ ಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ನಿಷೇಧ ಹೇರಿದ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ! ಇಷ್ಟು ವರ್ಷಗಳ ಕಾಲ ಐಪಿಎಲ್ ನ ಜವಾಬ್ಧಾರಿಯಿಂದಾಗಿ ಬೆಟ್ಟಿಂಗ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ.ಇನ್ನು ಮುಂದೆ ನಾವುಗಳು ಪೂರ್ಣ ಪ್ರಮಾಣದಲ್ಲಿ ಬೆಟ್ಟಿಂಗ್ನಲ್ಲಿ ತೊಡಗಿಕೊಳ್ಳಲು ಯಾವುದೇ ತೊಂದರೆ ಇಲ್ಲ.ಇದರಿಂದ ತಮಗೆಲ್ಲರಿಗೂ ದುಪ್ಪಟ್ಟು ಲಾಭವಾಗಲಿದೆ ಎಂದು ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರೆಂದು ನಂಬಲನರ್ಹ ಮೂಲಗಳಿಂದ ತಿಳಿದುಬಂದಿದೆ.
ಅಭಿಮಾನ ಹೇಗಿರಬೇಕೆಂದರೆ… ಅಭಿಮಾನದ ಮೇಲೆಯೇ ಅಭಿಮಾನ ಮೂಡುವಂತಿರಬೇಕು.
– ಗುರುಪ್ರಸಾದ್ ಆಚಾರ್ಯ, ಕುಂಜೂರು
ನಮ್ಮಲ್ಲಿ ಸರ್ವೇ ಸಾಧಾರಣವಾಗಿ ಪ್ರತಿಯೊಬ್ಬರಿಗೂ ಹೆಚ್ಚಾಗಿ ಮೆಚ್ಚಿನ ನಟ ಅಥವಾ ಮೆಚ್ಚಿನ ರಾಜಕಾರಣಿ ಅಥವಾ ಮೆಚ್ಚಿನ ವ್ಯಕ್ತಿ ಅನ್ನೋ ಯಾವುದಾದರೂ ವ್ಯಕ್ತಿಗಳು ಇದ್ದೇ ಇರುತ್ತಾರೆ. ಅವರನ್ನ ಆರಾಧಿಸುವಷ್ಟು ನಮಗೆ ಅವರ ಮೇಲೆ ಅಭಿಮಾನ. ಅಂದರೆ ಗರ್ವ… ನನ್ನ ಮೆಚ್ಚಿನ ವ್ಯಕ್ತಿಯ ಯಾವುದೇ ನಡೆ ಕೂಡಾ ನಮಗೆ ಶ್ಲಾಘನೀಯವಾಗಿ ಬಿಡುತ್ತದೆ. ಅವರನ್ನ ಯಾರಾದರೂ ಟೀಕಿಸಿದರೆ ನಮಗೆ ಇನ್ನೆಲ್ಲಿಲ್ಲದ ಕೋಪ ಬಂದು ಬಿಡುತ್ತದೆ.ಇದು ಹೆಚ್ಚಾಗಿ ಕಾಣಸಿಗುವುದು ಸಿನಿಮಾ ನಟ/ಟಿ ವಿಷಯದಲ್ಲಿ ಅಥವಾ ರಾಜಕೀಯ ನಾಯಕರ ವಿಷಯದಲ್ಲಿ.ಈ ಅಭಿಮಾನ ಎಲ್ಲಿಯವರೆಗೆ ಸಾಗುತ್ತದೆ ಎಂದರೆ ನಾವು ನಮ್ಮ ನಮ್ಮಲ್ಲೇ ಜಗಳವಾಡಲೂ,ಸಂಬಂಧಗಳನ್ನು ಮುರಿಯಲೂ ಸಿದ್ಧರಾಗುತ್ತೇವೆ. ಹಾಗಾಗಿ ನಮ್ಮಲ್ಲಿ ನಮ್ಮಲ್ಲಿ ಇಂತಹಾ ಪ್ರಭಾವ ಬೀರಬಲ್ಲ ಈ ” ಅಭಿಮಾನ ” ಅನ್ನುವುದರ ಕುರಿತಾಗಿ ನಾವೊಮ್ಮೆ ಆಳವಾಗಿ ಚಿಂತಿಸಬೇಕಾಗಿದೆ ಅಂತನಿಸುವುದಿಲ್ಲವೇ…?
ಮೇಲೆ ಹೇಳಿದ ಹಾಗೇ ಸಿನಿಮಾ ನಟರ ಮೇಲಿನ ಅಭಿಮಾನ ಮತ್ತು ರಾಜಕೀಯ ನಾಯಕರ ಮೇಲಿನ ಅಭಿಮಾನ ಈ ಎರಡು ವಿಭಾಗವನ್ನೂ ಆಯ್ದುಕೊಂಡು ನನ್ನೊಳಗಿನ ಚಿಂತನೆಯನ್ನ ನಿಮ್ಮಲ್ಲಿ ಹಂಚಿಕೊಳ್ಳುವ ಆಸೆ…ಅದೇ ಈ ಲೇಖನದ ಮೂಲ ಆಶಯ.
ಟಿಂಗ್-ಟಾಂಗ್ : 1
– ವಿಶ್ವ ಸುಂಕಸಾಳ
೧. ಕೆಲವರು ಸತ್ಯವನ್ನು ಇಷ್ಟಪಡುತ್ತಾರೆ. ಯಾವತ್ತೂ ಸತ್ಯವನ್ನೇ ಹೇಳಬೇಕೆಂದೂ ಬಯಸುತ್ತಾರೆ.ಆದರೆ ಬಹಿರಂಗವಾಗಿ ಯಾವತ್ತೂ ಸತ್ಯವನ್ನೇ ಹೇಳುತ್ತಾ,ಒಪ್ಪಿಕೊಳ್ಳುತ್ತಾ ಹೋದರೆ ಮೋದಿ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗುವ ಭಯ..!!
೨. ನೀವು ತಟಸ್ಥ ಬರಹಗಾರರೆಂದು ಬಿಂಬಿಸಿಕೊಳ್ಳಬೇಕೆಂದಿದ್ದರೆ ಯಾವುದೇ ವಿಷಯದ ಮೇಲೆ ಬರೆದ ಬರಹವಾದರೂ ಸರಿ, ಕೊನೆಯಲ್ಲಿ ಮೋದಿಯನ್ನು ಟೀಕಿಸಿದರಾಯಿತು.
೩. ಸಲಹೆಯನ್ನು ಯಾರು ಬೇಕಾದರೂ ಕೊಡುತ್ತಾರೆ. ಆದರೆ ಎಲ್ಲರಿಗೂ ಸರ್ಕಾರೀ ಕಾರು, ಜನರ ದುಡ್ಡಿನಲ್ಲಿ ಮೋಜು ಮಾಡುವ ಸೌಲಭ್ಯಗಳೆಲ್ಲ ಸಿಗುವುದಿಲ್ಲ.
೪. ಕವಿಗಳಲ್ಲೂ ಕೆಲವರು ಸಜ್ಜನ ಕವಿಗಳಿರುತ್ತಾರೆ. ಎಲ್ಲರೂ ಜೀವಪರಕವಿಗಳಲ್ಲ.
೫. ಸೋಮಾರಿಗಳಿಗೆ ಮಾತ್ರ ಯೋಗದ ಅಗತ್ಯವಿದೆಯೆಂದು ನುಡಿದವರು ಕೊನೆಗೂ ಅದನ್ನು ಸ್ವತಃ ಮಾಡುವ ಮೂಲಕ ತಮ್ಮ ಮಾತನ್ನು ಸಾಬೀತುಪಡಿಸಿದರು.
೬. ಕೆಲವರು ಮುಂದಿನ ಐದು ವರ್ಷ ಟೀಕಾಕಾರರಾಗಿರಬೇಕೋ ಅಥವಾ ಹೊಗಳುಭಟರಾಗಿರಬೇಕೋ ಎಂಬುದನ್ನು ಚುನಾವಣೆ ನಿರ್ಧರಿಸುತ್ತದೆ.
ಮತ್ತಷ್ಟು ಓದು 
ಬಡವರಿರಬೇಕು, ಮಾತ್ರವಲ್ಲ, ಅವರು ಹೆಚ್ಚಬೇಕು!
– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಮೊದಲು ಒಂದು ಸಂಗತಿಯನ್ನು ಸ್ಪಷ್ಟಮಾಡಿಕೊಳ್ಳಬೇಕು: ಜನತಂತ್ರ ವ್ಯವಸ್ಥೆಯಲ್ಲಿ ಸರ್ಕಾರಗಳು ಜನರ ಕಲ್ಯಾಣಕ್ಕಾಗಿವೆಯೇ ವಿನಾ ಲಾಭ ಮಾಡುವುದಕ್ಕಲ್ಲ. ಆದರೆ ಸಮಾಜಕ್ಕೆ ಲಾಭವಾಗುವಂತೆ ಮಾಡುವುದು ಅವುಗಳ ಕರ್ತವ್ಯ. ಅಂಥ ಲಾಭ ದೀರ್ಘಕಾಲಿಕವಾಗುವಂತೆ ಅದು ನೋಡಿಕೊಳ್ಳಬೇಕಾಗುತ್ತದೆ. ಸಾಧ್ಯವಾದಷ್ಟು ವರ್ಷ ಅಧಿಕಾರದಲ್ಲಿ ಇರುವ ಆಸೆಯಿಂದ ಚುನಾಯಿತ ಸರ್ಕಾರಗಳು ಜನರನ್ನು ಓಲೈಸುವ ಅಗ್ಗದ ಜನಪ್ರಿಯ ಯೋಜನೆಗಳನ್ನು ಕೈಗೊಳ್ಳುವುದರಲ್ಲೇ ಆಸಕ್ತಿ ತೋರಿಸುತ್ತವೆ. ಇಂಥ ಯೋಜನೆಗಳ ಉದ್ದೇಶವನ್ನು ಯಾರೂ ಪ್ರಶ್ನಿಸುವಂತಿರುವುದಿಲ್ಲ, ಆದರೆ ಅವುಗಳ ಜಾರಿ, ಅವು ಉಂಟುಮಾಡುವ ದೀರ್ಘಕಾಲಿಕ ಪರಿಣಾಮ ಮೊದಲಾದ ಸಂಗತಿಗಳು ಚಿಂತನಾರ್ಹ.
ಹಿಂದೆ ವಯಸ್ಕ ಶಿಕ್ಷಣ ಎಂಬ ಸಾಕ್ಷರ ಯೋಜನೆಯೊಂದಿತ್ತು. ಎಲ್ಲರನ್ನೂ ಸಾಕ್ಷರರನ್ನಾಗಿಸಲು ಸಾವಿರಾರು ಕೋಟಿ ರೂ.ಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುರಿದವು. ಈಗಾಗಲೇ ಮಧ್ಯವಯಸ್ಸು ದಾಟಿದ, ಆದರೆ ಸಾಕ್ಷರರಲ್ಲದ ಜನಸಂಖ್ಯೆಯನ್ನು ಗುರುತಿಸಿ, ಸರಾಸರಿ ಆಯುರ್ಮಾನವನ್ನು ಎಣಿಸಿ ಅದರಂತೆ ಯೋಜನೆ ರೂಪಿಸಲಾಯಿತು. ಹೊಸದಾಗಿ ಜನಿಸುವವರಿಗೆ ಕಡ್ಡಾಯ ಶಿಕ್ಷಣದ ಮೂಲಕ ಸಾಕ್ಷರರನ್ನಾಗಿಸುವ ಯೋಜನೆ ಇದ್ದುದರಿಂದ ಅನಕ್ಷರಸ್ಥರು ಹುಟ್ಟುವ ಸಾಧ್ಯತೆ ಇರಲಿಲ್ಲ ಹಾಗೂ ದೇಶದ ಜನರ ಸರಾಸರಿ ಆಯಸ್ಸು 56-60 ಇದ್ದುದರಿಂದ ಈ ಯೋಜನೆಗೆ ನಿಗದಿತ ಅವಧಿ ಹಾಕಿಕೊಳ್ಳಲಾಯಿತು. 10ನೇ ಯೋಜನೆ ಮುಕ್ತಾಯದ ವೇಳೆಗೆ ನಿಗದಿತ ಗುರಿ ತಲಪುವಂತೆ ಕಾಲಮಿತಿ ಹಾಕಿಕೊಂಡ ಈ ಯೋಜನೆ ಈಗ ತನ್ನ ಸ್ವರೂಪ ಬದಲಿಸಿಕೊಂಡು ಔಪಚಾರಿಕ ಶಿಕ್ಷಣ ದೊರಕದವರಿಗೆ ಕೌಶಲ್ಯ ಕಲಿಸತೊಡಗಿ, ಸಾಕ್ಷರರಿಗೆ ಸ್ವಾವಲಂಬನೆ ಮಾರ್ಗ ತೋರಿಸುತ್ತಿದೆ. ಇದು ನಿಜಕ್ಕೂ ಸ್ತುತ್ಯರ್ಹವಾದುದು. ಹೀಗೆ ಸದುದ್ದೇಶದ ಯೋಜನೆಯೊಂದು ಬೆಳವಣಿಗೆ ಕಾಣಬೇಕು; ಸಮಾಜವನ್ನು ಸ್ವಾಸ್ಥ್ಯದತ್ತ ಕೊಂಡೊಯ್ಯಬೇಕು. ಸರ್ಕಾರಗಳ ಬಹಳಷ್ಟು ಯೋಜನೆಗಳಲ್ಲಿ ಇಂಥ ಬೆಳವಣಿಗೆಯೇ ಇರುವುದಿಲ್ಲ.
ಮತ್ತಷ್ಟು ಓದು 
ಬಹುಶಃ ನನಗೇ ಈ ಶೋಷಣೆ,ಸಮಾನತೆ,ಸಹಪಂಕ್ತಿ ಇವೆಲ್ಲಾ ಅರ್ಥವಾಗೊಲ್ಲ
– ರಾಘವೇಂದ್ರ ಸುಬ್ರಹ್ಮಣ್ಯ,ಶೃಂಗೇರಿ
ಯಾಕಂದ್ರೆ ನಮ್ಮೂರಲ್ಲಿ ದೇವಸ್ಥಾನಕ್ಕೆ ಒಳಗೆ ಬಿಡೋದ್ರ ಬಗ್ಗೆ ಗಲಾಟೆಯೇ ಇಲ್ಲ. ಶೃಂಗೇರಿ ಅಂತಲ್ಲ, ಸುತ್ತ ಮುತ್ತಲಿನ ಯಾವೂರಿನಲ್ಲೂ ‘ಏಯ್ ಹೊರಗೆ ಹೋಗೋ, ದೇವಸ್ಥಾನದೊಳಗೆ ನೀನು ಬರೋ ಹಾಗಿಲ್ಲ’ ಅನ್ನಲ್ಲ. ಅಲ್ಲಿ ಜನರನ್ನ ಹೊರಗಿಡೋದು ಬಿಡಿ, ಉಲ್ಟಾ, ಕೆಲವಷ್ಟು ಕೆಲಸಗಳಿಗೆ ಕೆಲಜನರು ಬರದಿದ್ರೆ ಮುಖ್ಯ ಕೆಲಸಗಳೇ ನಡೀತಾ ಇರ್ಲಿಲ್ಲ. ಉದಾಹರಣೆಗೆ, ಭೋವಿ ಜನಾಂಗದ ಜನರು ಬಂದು ಪಲ್ಲಕ್ಕಿ ಹೊರ್ಲಿಲ್ಲ ಅಂದ್ರೆ, ಸಾರದಬಾಗಿಲಿನಿಂದ ಜನ ಬಂದು ದೀಪ, ದೀವಟಿಗೆ, ಚಾಮರ ಹಿಡೀಲಿಲ್ಲ ಅಂದ್ರೆ ನವರಾತ್ರಿಯ ಅಡ್ಡಪಲ್ಲಕ್ಕಿಯ ಉತ್ಸವವೇ ನಡಿತಾ ಇರ್ಲಿಲ್ಲ. ಅವತ್ತಿನ ಮಟ್ಟಿಗೆ ನಾನಂತೂ ಅದನ್ನ ಶೋಷಣೆ ಅಂತಾ ಅಂದ್ಕೊಳ್ಳಿಲ್ಲ. ಉಲ್ಟಾ ಅದು ನಮ್ಮ ಐಡೆಂಟಿಟಿಯಾಗಿತ್ತು. ಇವತ್ತಿನ ಹುಡುಗ್ರು ಏನಂದ್ಕೊಳ್ತಾರೋ ಗೊತ್ತಿಲ್ಲಪ್ಪ. ಶೃಂಗೇರಿಯಲ್ಲಂತೂ ಬುರ್ಖಾ ಹಾಕಿಕೊಂಡೇ ಕೆಲ ಹೆಣ್ಣುಮಕ್ಕಳು ದೇವಸ್ಥಾನದಲ್ಲಿರೋ ಮೀನುಗಳಿಗೆ ಮಂಡಕ್ಕಿ ತಿನ್ಸೋಕೆ ಬಂದಿರೋದನ್ನ ನೋಡಿದ್ದೇನೆ. ದೇವಸ್ಥಾನವೆಂದರೆ ನಾಲ್ಕು ಜನ ಸೇರೋ ಜಾಗ ಅಂದುಕೊಂಡು ಬೆಳೆದ ನನಗೆ ಶೋಷಣೆಯ ಆಂಗಲ್ಲೇ ಹೊಳೆಯಲಿಲ್ಲ. ಅದೂ ಅಲ್ದೆ ‘ತಿಂಗಳ ಆ ದಿನಗಳಲ್ಲಿ’ ದೇವಸ್ಥಾನದೊಳಗೆ ಹೋಗದ ನನ್ನ ಅತ್ತೆಯಂದಿರು, ಉತ್ಸವ ಮೂರ್ತಿ ಹೊರಗೆ ಬಂದಾಗ ಕೈಮುಗಿದು ‘ನೋಡು ನಾವು ಒಳಗೆ ಹೋಗದಿದ್ರೇನಂತೆ, ಶಾರದಮ್ಮನೇ ಹೊರಗೆ ಬಂದು ನಮಗೆ ದರ್ಶನ ಕೊಟ್ಲು’ ಅಂತಾ ಹೇಳಿದ್ದು ನನಗೆ ತಮಾಷೆ ಎನ್ನಿಸಲೇ ಇಲ್ಲ. ಅವೊಂತರಾ pradigm shift ಮಾಡುವಂತಾ ಮಾತುಗಳಾಗಿಬಿಟ್ಟವು. ಆದರೂ ಕೆಲವರು ‘ನಮ್ಮನ್ನು ದೇವಸ್ಥಾದೊಳಕ್ಕೆ ಬಿಡಲಿಲ್ಲ’ ಅಂತಾ ಹೋರಾಟ ಮಾಡುವಾಗ ನನಗೆ ಆಶ್ಚರ್ಯವಾಗುತ್ತೆ. ಅದಕ್ಕೇ ಏನೋಪ್ಪ ನನಗೆ ಇವೆಲ್ಲಾ ಅರ್ಥವಾಗೊಲ್ಲ.




