ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

19
ಮಾರ್ಚ್

ಈ ಸಾವು ನ್ಯಾಯವೇ?

– ಶಿವಪ್ರಸಾದ್ ಭಟ್, ಪುತ್ತೂರು

DK Ravi IASಕೊಲೆ, ಆತ್ಮಹತ್ಯೆ, ಆಕ್ಸಿಡೆಂಟ್, ಸಹಜ ಸಾವು ಅಂತ ದಿನಾ ಈ ಜಗತ್ತಿನಲ್ಲಿ ಅದೆಷ್ಟು ಜನ ಸಾಯುತ್ತಾರೋ ಏನೋ? ಯಾರಿಗ್ಗೊತ್ತು? ಅದೆಲ್ಲಾ ಸುದ್ದೀನೇ ಆಗಲ್ಲಾ. ದಿನಾ ಸಾಯೋರಿಗೆ ಅಳೋರು ಯಾರು ಅಲ್ವಾ? ಆದರೆ ಕೆಲವೊಂದು ಸಾವು ತಣ್ಣಗೆ ಸುದ್ದಿ ಮಾಡುತ್ತವೆ. ನಮ್ಮ ಸಂಬಂಧಿಕರಲ್ಲದೇ ಇದ್ದರೂ ಅನುಕಂಪ ಹುಟ್ಟಿಸುತ್ತದೆ. ಕೇಡಿಗರ ಬಗೆಗೆ ಆಕ್ರೋಶವೆಬ್ಬಿಸುತ್ತದೆ.

ಘಟನೆ 1:

ಮಕ್ಕಳ ಭವಿಷ್ಯ ಚೆನ್ನಾಗಿ ರೂಪಿಸಬೇಕೆಂದು ಎಲ್ಲಾ ತಂದೆ ತಾಯಿಗೂ ಆಸೆ ಇರುತ್ತದೆ. ಅದಕ್ಕಾಗಿ ಅವರು ಬೇರೆ ಬೇರೆ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಹಾಗೆಯೇ ಈ ತಾಯಿ ತನ್ನ ಮಗಳ ಉಜ್ವಲ ಭವಿಷ್ಯ ರೂಪಿಸುವುದಕ್ಕಾಗಿ ಹಿಡಿದಿದ್ದು ಆಸ್ಟ್ರೇಲಿಯಾದ ಹಾದಿ. ‘ಮೈಂಡ್ ಟ್ರೀ’ ಕಂಪೆನಿಗೆ ದುಡಿಯುತ್ತಿದ್ದ ಪ್ರಭಾ ಅರುಣ್ ಕುಮಾರ್ ಮೂರು ವರ್ಷದಿಂದ ಸರಿಯಾಗಿ ಒಮ್ಮೆಯೂ ಭಾರತಕ್ಕೆ ಬರಲಿಲ್ಲ. ಮಗಳನ್ನು ಮತ್ತು ಗಂಡನನ್ನು ಕಾಣುವುದಕ್ಕಾಗಿ ಒಮ್ಮೆ ಬೆಂಗಳೂರಿಗೆ ಬಂದಿದ್ದೇ ಹೆಚ್ಚು. ಮತ್ತೆ ಬಂದಿದ್ದು ಹೆಣವಾಗಿ!

ಮಂಗಳೂರು ಮೂಲದ ಪ್ರಭಾ ಉದ್ಯೋಗಕ್ಕಾಗಿ ಮೈಂಡ್ ಟ್ರೀ ಅನ್ನೋ ಒಳ್ಳೆಯ ಕಂಪೆನಿಯನ್ನೇ ಆರಿಸಿಕೊಂಡಿದ್ದರು. ಮೂರು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಆಕೆಯ ಜೀವನ ಮೊನ್ನೆ ಮಾರ್ಚ್ ಏಳಕ್ಕೆ ಕೊನೆಯಾಯ್ತು. ಆಫೀಸಿನಿಂದ ಮನೆಗೆ ಬರುತ್ತಿದ್ದ ಆಕೆಯನ್ನು ದುಷ್ಕರ್ಮಿಗಳು ಹಿಗ್ಗಾಮುಗ್ಗ ಹಲ್ಲೆ ಮಾಡಿ ಕೊಂದೇ ಬಿಟ್ಟರು. ಕಾರಣ ಏನು? ಕೊಲೆಗೂ ಆಕೆಗೂ ಏನು ಸಂಬಂಧ? ಕೊಂದವರು ಯಾರು? ದರೋಡೆಕೋರರಾಗಿದ್ದರೆ ದರೋಡೆ ಮಾಡಿ  ಬಿಟ್ಟು ಬಿಡಬಹುದಿತ್ತಲ್ಲಾ? ಉತ್ತಮ ಸಂಪಾದನೆ ಮಾಡಿಕೊಂಡು ತನ್ನವರನ್ನು ಸೇರಿಕೊಂಡು ಉತ್ತಮ ಜೀವನ ರೂಪಿಸುವ ಕನಸು ಹೊತ್ತುಕೊಂಡು ಆಸ್ಟ್ರೇಲಿಯಾದ ವಿಮಾನವೇರಿದ್ದ ಪ್ರಭಾಗೆ ಇಂತಾ ಸಾವಾ? ಆಕೆ ಮಾಡಿರುವ ತಪ್ಪಾದರೂ ಏನು?

ಮತ್ತಷ್ಟು ಓದು »

17
ಮಾರ್ಚ್

ಈ ಸಾವು ನ್ಯಾಯವೇ?

– ರಾಕೇಶ್ ಶೆಟ್ಟಿ

ಡಿ.ಕೆ ರವಿಲ್ಯಾಂಡ್ ಮಾಫಿಯಾ,ಸ್ಯಾಂಡ್ ಮಾಫಿಯಾಗಳ ವಿರುದ್ಧ ಸಮರ ಸಾರಿ,ತನ್ನ ದಕ್ಷತೆಯ ಕಾರಣದಿಂದಲೇ ಕೋಲಾರ ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಿಸಲ್ಪಟ್ಟಿದ್ದ ದಕ್ಷ ಯುವ ಅಧಿಕಾರಿ ಡಿ.ಕೆ ರವಿಯಂತವರು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ? ನನಗಂತೂ ನಂಬಲಾಗುತ್ತಿಲ್ಲ.ನಿನ್ನೆ ಅವರ ಮರಣದ ಸುದ್ದಿ ತಿಳಿದಾಗಿನಿಂದ ಮನಸ್ಸು ಖಿನ್ನವಾಗಿದೆ.ಸತ್ಯ,ನ್ಯಾಯಕ್ಕಾಗಿ ಹೋರಾಡುವವರು ಹೀಗೆ ದುರಂತ ಅಂತ್ಯ ಕಾಣುತ್ತಾರೆಯೇ? ಅಂತವರ ಕುಟುಂಬದವರಿಗೆ ನೋವು ಕಟ್ಟಿಟ್ಟ ಬುತ್ತಿಯೇ?

ಕೋಲಾರದಿಂದ ರವಿಯವರನ್ನು ವರ್ಗಾವಣೆ ಮಾಡಿದಾಗ ಇಡೀ ಜಿಲ್ಲೆಯೇ ಬಂದ್ ಆಗಿತ್ತು.ಒಂದಿಡಿ ಜಿಲ್ಲೆಯ ಜನರ ಜೊತೆ ಅಧಿಕಾರಿಯೊಬ್ಬ ಬಾಂಧವ್ಯ ಈ ಮಟ್ಟಿಗಿರುವುದು ಇತ್ತೀಚಿನ ದಿನಗಳಲ್ಲಿ ಅಪರೂಪವೇ ಸರಿ.ಕೋಲಾರದಿಂದ ಎತ್ತಂಗಡಿಯಾಗಿ ಬಂದ ಮೇಲಾದರೂ ಈ ಮನುಷ್ಯ ತಣ್ಣಗಾಗುತ್ತಾರೆ ಎಂದುಕೊಂಡಿದ್ದವರಿಗೆ,ರವಿಯವರು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಹುದ್ದೆ ವಹಿಸಿಕೊಂಡ ಮೇಲೆ ನಡೆಸಿದ ದಾಳಿಗಳು ಮತ್ತೆ ನಿದ್ದೆಗೆಡಿಸಿದ್ದವೇನೋ! ಐದೂವರೆ ತಿಂಗಳ ಹಿಂದೆ ತೆರಿಗೆ ಇಲಾಖೆಗೆ ಬಂದ ರವಿಯವರು ಈ ಕಡಿಮೆ ಅವಧಿಯಲ್ಲಿ ದೊಡ್ಡ ದೊಡ್ಡ ಬಿಲ್ಡರ್ ಗಳ ತೆರಿಗೆ ವಂಚನೆಯನ್ನು ಬಯಲಿಗೆಳೆದಿದ್ದರು.ವೃತ್ತಿಯಲ್ಲಿ ಖಡಕ್ ಆಗಿದ್ದ ರವಿಯವರು ಜನರೊಂದಿಗೆ ಸಾಮಾನ್ಯರಂತೆ ಬೆರೆಯುತಿದ್ದವರು. ಮತ್ತಷ್ಟು ಓದು »

13
ಮಾರ್ಚ್

ಪರ್ವ ಮತ್ತು ಮಹಾಭಾರತ

– ಮು.ಅ ಶ್ರೀರಂಗ 

ಪರ್ವಹರವು ಸ್ಫೂರ್ತಿ ಗೌಡ ಅವರು ‘ಅವಧಿ’ಯಲ್ಲಿ ೬-೩-೧೫ರಂದು ಬರೆದಿರುವ ‘ಭೈರಪ್ಪನವರಿಗೆ ಕೆಲವು ಪ್ರಶ್ನೆಗಳು’ ಲೇಖನದಲ್ಲಿ ಭೈರಪ್ಪನವರು ಮಹಾಭಾರತವನ್ನು ಆಧರಿಸಿ ಬರೆದಿರುವ ಪರ್ವ ಕಾದಂಬರಿಯ ಬಗ್ಗೆ  ಪ್ರಸ್ತಾಪಿಸಿರುಪ  ಪ್ರಶ್ನೆಗಳನ್ನು ಕುರಿತಂತೆ ಕೆಲವು ವಿಷಯಗಳನ್ನು ನಿಲುಮೆಯ ಓದುಗರ ಜತೆ ಹಂಚಿಕೊಳ್ಳುವುದು ಈ ನನ್ನ ಬರಹದ ಉದ್ದೇಶ. ಸ್ಪೂರ್ತಿ ಗೌಡ ಅವರ ಲೇಖನಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಅವುಗಳು ಸದ್ಯದ ನಮ್ಮ ಓದುಗರ ಮನೋಭಾವ, ಅವರ ಓದಿನ ರೀತಿ ನೀತಿ, ಕನ್ನಡ ಸಾಹಿತ್ಯದ ಸದ್ಯದ  ವಿಮರ್ಶೆಯ ವಾತಾವರಣ  ಇತ್ಯಾದಿಗಳ  ಪ್ರತಿಫಲನದಂತೆ ಇದೆ. ಇದು ಸಹಜ.ಆ ಪ್ರತಿಕ್ರಿಯೆಗಳ ಬಗ್ಗೆ ಇದಕ್ಕಿಂತ ಹೆಚ್ಚೇನು ಹೇಳುವುದು ಇಲ್ಲ.

ಸ್ಫೂರ್ತಿ ಗೌಡ ಅವರು ‘ಪರ್ವ’ದ ಬಗ್ಗೆ random ಆಗಿ ಎತ್ತಿರುವ  ಮೂರ್ನಾಲಕ್ಕು ಆಕ್ಷೇಪಣೆಗಳು ಮತ್ತು ಉಪ ಆಕ್ಷೇಪಣೆಗಳ relevanceಗೆ ಮಾತ್ರ ನನ್ನ ಈ ಬರಹ ಸೀಮಿತವಾಗಿದೆ. ಇತಿಹಾಸ, ಕಾವ್ಯ ಮತ್ತು ಪುರಾಣಗಳು ಬೆರೆತಿರುವ ಮಹಾಭಾರತದ ಕತೆಯನ್ನು ಈಗ ಚಾಲ್ತಿಯಲ್ಲಿರುವ ವಿಮರ್ಶೆಯ ಅಳತೆಗೋಲಿನಿಂದ ಅಳೆದು ಬೆಲೆ ಕಟ್ಟುವ ಕ್ರಿಯೆಯೇ ಸರಿಯಾದುದಲ್ಲ. ಇಂದು ನಮ್ಮ ಸಾಹಿತ್ಯದ ವಿಮರ್ಶಕ ಮತ್ತು ವಿಮರ್ಶಕಿಯರಿಗೆ  ಹಿಂದಿನ ಮತ್ತು ಇಂದಿನ ಕೃತಿಗಳಿಗೆ (ಅದು ಸಾಮಾಜಿಕ/ಐತಿಹಾಸಿಕ/ಪೌರಾಣಿಕ ಯಾವುದೇ ಆಗಿರಲಿ) ಪ್ರಗತಿಗಾಮಿ.ಪ್ರತಿಗಾಮಿ,ಮಹಿಳಾ ವಿರೋಧಿ,ವೈದಿಕ ಶಾಹಿ ಇತ್ಯಾದಿ ಹಣೆ ಪಟ್ಟಿಗಳನ್ನು ಕಟ್ಟಿ ಆ ಕೃತಿಗಳ  ಲೇಖಕರನ್ನು ಏರಿಸುವುದೋ ಇಳಿಸುವುದೋ ಮಾಡುವುದು ತುಂಬಾ ಖುಷಿ ಕೊಡುವ  ಕೆಲಸವಾಗಿದೆ. ಹಾಗೆ ನೋಡಿದರೆ ಇಂತಹ ವಿದ್ಯಮಾನ ಮೂವತ್ತು ನಲವತ್ತು ವರ್ಷಗಳಷ್ಟು ಹಳೆಯದೇ. ಈಗ  ಈ ಕೆಲಸ ಇನ್ನೂ ಜೋರಾಗಿದೆ ಅಷ್ಟೇ. ವಿಮರ್ಶೆಯ ಪರಿಭಾಷೆಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತವೆ; ಬದಲಾಗಬೇಕು ಎಂಬುದರ ಬಗ್ಗೆ  ಯಾರೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದರೆ ಬದಲಾಗುತ್ತಿರುವ ವಿಮರ್ಶೆಯ ಪರಿಭಾಷೆಗಳನ್ನು ಸಾಹಿತ್ಯ ಕೃತಿಯೊಂದಕ್ಕೆ ನಾವು ಯಾವ ರೀತಿ apply ಮಾಡಬೇಕು? ಆ ಪರಿಭಾಷೆಗಳ limits ಏನು? ಎಂಬುದರ ಬಗ್ಗೆ ನಾವು ಯೋಚಿಸದಿದ್ದರೆ ಆಭಾಸವಾಗುತ್ತದೆ. ಸ್ಪೂರ್ತಿಗೌಡ ಅವರು ಪರ್ವದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಮೂಲ ಕಾರಣ ಹೊಸ ವಿಮರ್ಶೆಯ ಪರಿಭಾಷೆಗಳ wrong application.
ಮತ್ತಷ್ಟು ಓದು »

12
ಮಾರ್ಚ್

ದ್ವೇಷ ಬಿತ್ತಿದ ಲೇಖಕರು

– ಸುದರ್ಶನ ಗುರುರಾಜ ರಾವ್

Agni Bhairappaಇತ್ತೀಚೆಗೆ ’ಅಗ್ನಿ’ ಎಂಬ ಸಂಸ್ಕೃತ ಪದದ ಹೆಸರುಳ್ಳ ಟ್ಯಾಬ್ಲಾಯ್ಡ್ ಮಾದರಿಯ ಪತ್ರಿಕೆಯೊಂದು ೧೯/೦೨ ರ ಸಂಚಿಕೆಯಲ್ಲಿ ಡಾ.ಎಸ್.ಎಲ್.ಭೈರಪ್ಪನವರ ಚಿತ್ರವೊಂದನ್ನು ಮುಖಪುಟದಲ್ಲಿಯೇ ಅಚ್ಚಿಸಿ ’”ದ್ವೇಷ ಬಿತ್ತುವ ಲೇಖಕ” ಎಂಬ ಶೀರ್ಷಿಕೆಯೊಂದಿಗೆ  ಪೂರ್ಣ ಸಂಚಿಕೆಯನ್ನೇ ಭೈರಪ್ಪನವರನ್ನು ನಿಂದಿಸಲು ಮೀಸಲಾಗಿಟ್ಟಿತು. ಆಶ್ಚರ್ಯವೆಂದರೆ ಆ ಪತ್ರಿಕೆಯ ಪ್ರತಿಗಳು ಚೆನ್ನಾಗಿ ಖಾಲಿಯಾಗಿದ್ದು, ಅದರ ನಿರ್ವಾಹಕರಿಗೆ ಸಂತೋಷ ತಂದಿತು.ಶ್ರವಣಬೆಳಗೊಳದ ಕನ್ನಡ ಮೇಳದಲ್ಲಿ ವೇದಿಕೆಯನ್ನು ಚರ್ಚೆಗೆ ವಿನಿಯೋಗಿಸದೆ ದುರ್ಬಳಕೆ ಮಾಡಿಕೊಂಡು, ಭೈರಪ್ಪನವರ ಮೇಲೆ ವಿನಾಕಾರಣ (ಅವರ ಪ್ರಕಾರ ಸಕಾರಣವೇ ಆಗಿದ್ದರೂ,ವಿಷಯಾಂತರ ಮಾಡಿದ್ದರಿಂದ ಅದೊಂದು ವಿನಾಕಾರಣ ಬೊಗಳೆ) ಹರಿಹಾಯ್ದು, ಬೊಬ್ಬಿರಿದು,ಎಗರಾಡಿ ತಮ್ಮ ನಾಲಿಗೆ ತುರಿಯನ್ನು ತೀರಿಸಿಕೊಂಡಿದ್ದ ಘನಂದಾರಿಗಳು ತಮ್ಮ ಕೈತುರಿಕೆಯನ್ನೂ ತೀರಿಸಿಕೊಳ್ಳಲು ’ಅಗ್ನಿ ’ ಪತ್ರಿಕೆಯ ಮೊರೆಹೋದರು. ಭೈರಪ್ಪ ದ್ವೇಷವನ್ನು ಅಕ್ಷರಗಳ ಬೀಜರೂಪದಲ್ಲಿ ಬಿತ್ತಲು ಡಾಕ್ಟರೇಟು ಪಡೆದ ಹಲವಾರು ಲೇಖಕರ ಜೊತೆಗೆ, ಯಾವರೇಟೂ ಇಲ್ಲದ ಇನ್ನು ಕೆಲವರು ಸೇರಿ ಇಡೀ ಸಂಚಿಕೆಯನ್ನು ಸಂಪನ್ನಗೊಳಿಸಿದರು. ಸಮಾನತೆಯ ಪ್ರತಿಪಾದಕರಾದ ಇವರುಗಳು ತಮ್ಮ ಅನಿಸಿಕೆಗಳನ್ನು ಬಿತ್ತರಿಸುವಲ್ಲಿ ತೋರಿದ ಮುಚ್ಚಟೆಯನ್ನು ವಿಭಿನ್ನ ಅಭಿಪ್ರಾಯವಿರುವ ಒಬ್ಬನೇ ಒಬ್ಬ ಲೇಖಕನನ್ನು ಆರೋಗ್ಯಕರ ಚರ್ಚೆಗೆ ಅಹ್ವಾನಿಸಲಿಲ್ಲ ಎಂಬುದು ಇವರ ಇಬ್ಬಂದಿ, ಎಡಬಿಡಂಗಿ,ಹಾಗೂ ಅಷಾಢಭೂತಿ ತನಕ್ಕೆ ಹಿಡಿದ ಕನ್ನಡಿಯಾಗಿದ್ದು ವಿಪರ್ಯಾಸ.

ಮೊದಲ ಲೇಖನ – “ಕೇಡಿನ ಕಿಡಿಯನ್ನು ಕಾಪಿಟ್ಟುಕೊಂಡ ಲೇಖಕ”- ದಲ್ಲಿ ಘೋಷಿಸಿದಂತೆ ಅಕ್ಷರವನ್ನು (ಅಷ್ಟೇಕೆ, ಇಡೀ ಸಂಚಿಕೆಯನ್ನು) ಒಂದು ಗುಂಪಿನ ಜನರು ಒಬ್ಬ ಸೃಜನಶೀಲ ಲೇಖಕನ ನಿಂದನೆಗೆ, ತಮ್ಮ ದ್ವೇಷ, ಹತಾಷೆ, ಅಸೂಯೆಗಳನ್ನು ಪ್ರಕಟಪಡಿಸಲು ಬಳಸಿದರೆ, ಅದನ್ನು ಪ್ರಶ್ನಿಸುವ ಹಕ್ಕು ಓದುಗನಿಗೆ ಇದೆ ಎಂಬ ಧೋರಣೆಯಿಂದಲೇ ಈ ಲೇಖನ ಸರಣಿಯನ್ನು ಬರೆಯುತ್ತಿದ್ದೇನೆ.ಒಬ್ಬ ಲೇಖಕ, ತಾನು ನಂಬಿದ ತತ್ವ ಆದರ್ಶಗಳನ್ನು ಆಧರಿಸಿ ಸಾಹಿತ್ಯ ರಚಿಸಿದರೆ ಮತ್ತು ಅದು ಯಶಸ್ವಿಯಾಗಿ ಜನಪ್ರಿಯವಾದರೆ ಅದರಲ್ಲೇನು ತಪ್ಪು? ಈ ಚಿಂತನೆಯ ಹಂತಕರ ಮನೋಭೂಮಿಕೆಗೆ ಅನುಸಾರವಾಗಿ ಬರೆಯಬೇಕೆಂಬ ನಿಯಮವೇನೂ ಇಲ್ಲವಲ್ಲ.ಅದಕ್ಕೆ ಸರಿಸಾಟಿಯಾದ ಸಾಹಿತ್ಯ ರಚನೆ ಈ ವಿಭಿನ್ನ ದೃಷ್ಟಿಕೋನದ ದ್ರಷ್ಟಾರರು ಏಕೆ ರಚಿಸಲು ಸಾಧ್ಯವಾಗದೆ ಹೆಣಗುತ್ತಿದ್ದಾರೆಂಬ ಪ್ರಶ್ನೆಯ ಮೂಲಕ ಮೊದಲನೆಯ  ”ಕೇಡಿನ ಕಿಡಿಯನ್ನು ಕಾಪಿಟ್ಟುಕೊಂಡ ಲೇಖಕ”   ಎಂಬ ಶೀರ್ಷಿಕೆ ಕೊಟ್ಟು ಬರೆದ ಲೇಖನದ ಮೂಲಕ ನನ್ನ ಪ್ರತಿಕ್ರಿಯೆಗಳನ್ನು ದಾಖಲಿಸುತ್ತಿದ್ದೇನೆ. ತಮ್ಮ ಕೆನ್ನಾಲಗೆಯ ಹುನ್ನಾರಿಕರು ತಮ್ಮ ಪುಸ್ತಕಗಳನ್ನೆಷ್ಟು ಮಾರಿಕೊಂಡಿದ್ದಾರೋ ನನಗೆ ತಿಳಿಯದು;ಆದರೆ ಭೈರಪ್ಪನವರ ದೂಷಣೆಯಿಂದ “ಅಗ್ನಿ”ಯ ವ್ಯಾಪಾರ ಲಾಭಕಂಡಿದ್ದಂತೂ ನಿಜ. ಶ್ರೀಹರಿಯನ್ನು ನಿಂದಿಸುತ್ತಲೇ ಕೈವಲ್ಯ ಪಡೆದ ಹಿರಣ್ಯ ಕಶ್ಯಪುವಿನಂತೆ!!.

ಮತ್ತಷ್ಟು ಓದು »

11
ಮಾರ್ಚ್

ಭಿತ್ತಿ : ಭಾವಪ್ರಧಾನ ವ್ಯಕ್ತಿತ್ವದ ಕಥನ

– ರಾಜಕುಮಾರ.ವ್ಹಿ.ಕುಲಕರ್ಣಿ,ಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ,ಬಾಗಲಕೋಟ

ಭಿತ್ತಿ‘ಚಿಕ್ಕ ಹುಡುಗನಾದ್ದರಿಂದ ಚಟ್ಟದ ಅಗತ್ಯವಿರಲಿಲ್ಲ. ನಾನೇ ಎತ್ತಿ ಎಡ ಹೆಗಲ ಮೇಲೆ ಹೊತ್ತುಕೊಂಡು ಬಲಗೈಲಿ ಬೆಂಕಿಯ ಮಡಕೆ ಹಿಡಿದು ಹೋಗುವುದೆಂದು ತೀರ್ಮಾನವಾಯಿತು. ಹೆಣ ಎತ್ತುವ ಮೊದಲು ಒಂದೊಂದು ಹಿಡಿಯಂತೆ ಒಟ್ಟು ಮೂರು ಹಿಡಿ ಅಕ್ಕಿ ಕಾಳು ನಾನು, ಅಜ್ಜಿ, ಲಲಿತ ಹೆಣದ ಬಾಯಿ ಮೇಲೆ ಸುರಿದ ನಂತರ ನಾನು ಮುಕ್ಕಿರಿದು ಎತ್ತಿ ಹೆಣವನ್ನು ಎಡ ಹೆಗಲ ಮೇಲೆ ಹಾಕಿಕೊಂಡು ಕೆಂಪು ಸೀರೆಯ ತುಂಡನ್ನು ಹೊದಿಸಿ ಮಡಕೆಯ ಬೆಂಕಿಯನ್ನು ಬಲಗೈಲಿ ಹಿಡಿದು ಬೀದಿಯಲ್ಲಿ ಹೊರಟೆ. ಏಳು ವರ್ಷದ ಹುಡುಗನ ಹೆಣದ ಭಾರಕ್ಕೆ ಎಡ ಹೆಗಲು ಸೇದಿ ನುಲಿಯತೊಡಗಿತು.ಅತ್ತಿತ್ತ ಹೊರಳಿಸಿ ಭಾರದ ಸ್ಥಾನವನ್ನು ಬದಲಿಸಿಕೊಳ್ಳಲು ಬಲಗೈ ಮುಕ್ತವಾಗಿರಲಿಲ್ಲ. ಅದಕ್ಕೆ ಕೂಡ ಬೆಂಕಿಯ ರಾವು ಹೊಡೆಯುತ್ತಿತ್ತು. ಸುಸ್ತಾಯಿತೆಂದು ಪದೇ ಪದೇ ಕೆಳಗಿಳಿಸಿ ಸುಧಾರಿಸಿಕೊಂಡು ಪಯಣವನ್ನು ಮುಂದುವರೆಸುವಂತೆಯೂ ಇಲ್ಲ. ಸ್ಮಶಾನಕ್ಕೆ ಹೋಗುವಷ್ಟರಲ್ಲಿ ನನ್ನ ಭುಜ ಮತ್ತು ಎದೆಗೂಡುಗಳು ಸತ್ತು ಹೋಗಿದ್ದವು. ನನ್ನ ಕಣ್ಣುದುರಿಗೇ ಕೃಷ್ಣಮೂರ್ತಿಯ ಹೆಣ ಕಪ್ಪು ತಿರುಗಿ ಚರ್ಮ ಸುಲಿದು ಬಿಳಿಯ ನೆಣ ಬಾಯ್ದೆರೆದು ತೊಟ್ಟಿಕ್ಕಿ ಅದೇ ಇಂಧನವಾಗಿ ಹೆಣವೇ ಹೊತ್ತಿಕೊಂಡಿತು’. ಓದಿದ ಆ ಕ್ಷಣ ಬುದ್ದಿಯನ್ನೇ ಮಂಕಾಗಿಸಿ ಮನಸ್ಸನ್ನು ಆರ್ದ್ರಗೊಳಿಸುವ ಈ ಸಾಲುಗಳು ನಾನು ಇತ್ತೀಚಿಗೆ ಓದಿದ ‘ಭಿತ್ತಿ’ ಪುಸ್ತಕದಿಂದ ಹೆಕ್ಕಿ ತೆಗೆದವುಗಳು.

‘ಭಿತ್ತಿ’ ಇದು ಕನ್ನಡ ಸಾಹಿತ್ಯಕ್ಕೆ ಕ್ಲಾಸಿಕ್ ಕಾದಂಬರಿಗಳನ್ನು ನೀಡಿರುವ ಶ್ರೇಷ್ಠ ಬರಹಗಾರ ಸಂತೇಶಿವರ ಲಿಂಗಣ್ಣ ಭೈರಪ್ಪನವರ ಆತ್ಮಕಥೆ. ಇಪ್ಪತ್ನಾಲ್ಕು ಕಾದಂಬರಿಗಳು, ಆತ್ಮವೃತ್ತಾಂತ, ನಾಲ್ಕು ಸಾಹಿತ್ಯ ಚಿಂತನ ಗ್ರಂಥಗಳು ಮತ್ತು ಎರಡು ಸಂಪಾದಿತ ಕೃತಿಗಳ ಲೇಖಕರಾದ ಎಸ್.ಎಲ್.ಭೈರಪ್ಪನವರು ಕನ್ನಡ ಮಾತ್ರವಲ್ಲದೆ ಇತರ ಭಾಷೆಗಳಲ್ಲೂ ಓದುಗರ ದೊಡ್ಡ ಸಮೂಹವನ್ನು ಹೊಂದಿರುವ ವಿಶಿಷ್ಟ ಬರಹಗಾರ. ಭೈರಪ್ಪನವರ ಕಾದಂಬರಿಗಳು ತೆಲುಗು, ಮರಾಠಿ, ಹಿಂದಿ ಭಾಷೆಗಳೂ ಸೇರಿ ಭಾರತದ ಎಲ್ಲ 14 ಭಾಷೆಗಳಿಗೂ ಅನುವಾದಗೊಂಡಿವೆ. ಭೈರಪ್ಪನವರ ಬದುಕು ಮತ್ತು ಸಾಹಿತ್ಯ ಕುರಿತೇ ಇಪ್ಪತ್ತಕ್ಕೂ ಹೆಚ್ಚು ಕೃತಿಗಳು ಬೇರೆ ಬೇರೆ ಲೇಖಕರಿಂದ ರಚನೆಗೊಂಡಿರುವುದು ಇನ್ನೊಂದು ವಿಶೇಷ. ಕಾಲಕಾಲಕ್ಕೆ ತಮ್ಮ ಬರವಣಿಗೆಯಿಂದ ಭೈರಪ್ಪನವರು ಕನ್ನಡದ ಓದುಗರನ್ನು ಚಿಂತನೆಗೆ ಹಚ್ಚುತ್ತಲೇ ಬಂದಿರುವರು. ಅವರ ಕೃತಿಗಳು ಮನೋರಂಜನೆಗಾಗಿಯೋ ಇಲ್ಲವೇ ಸಮಯ ಕಳೆಯುವುದಕ್ಕಾಗಿಯೋ ಓದುವಂಥ ಪುಸ್ತಕಗಳ ಸಾಲಿನಲ್ಲಿ ನಿಲ್ಲುವ ಕೃತಿಗಳಲ್ಲ. ಭೈರಪ್ಪನವರ ಕಾದಂಬರಿಯೊಂದನ್ನು ಓದಿದ ನಂತರ ಅದು ಓದುಗನ ಮನಸ್ಸನ್ನು ಅನೇಕ ದಿನಗಳವರೆಗೆ ಕಾಡುತ್ತ ಹೊಸ ಚಿಂತನೆಯನ್ನು ಸೃಷ್ಟಿಸಿ ಬದುಕಿನ ಪರಿವರ್ತನೆಗೆ ಕಾರಣವಾಗುತ್ತದೆ.

ಮತ್ತಷ್ಟು ಓದು »

10
ಮಾರ್ಚ್

ಭಗವದ್ಗೀತೆ ಮತ್ತು ರಾಜಕಾರಣ

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

ಭಗವದ್ಗೀತೆಅದೇಕೋ ಏನೋ,ಇತ್ತೀಚೆಗೆ ಭಗವದ್ಗೀತೆ ಪದೇ ಪದೇ ವಿವಾದಕ್ಕೀಡಾಗುತ್ತಿದೆ. ಮೊದಲು ಕೇ೦ದ್ರ ಮ೦ತ್ರಿ ಸುಷ್ಮಾ ಸ್ವರಾಜ್,’ಗೀತೆಯನ್ನು ರಾಷ್ಟ್ರೀಯ ಗ್ರ೦ಥವಾಗಿಸಬೇಕು’ ಎ೦ದೆನ್ನುವ ಮೂಲಕ ವಿವಾದಕ್ಕೆ ನಾ೦ದಿ ಹಾಡಿದರು.ಕೆಲವು ದಿನಗಳ ಹಿ೦ದೆ ಭಗವಾನ್ ಎನ್ನುವವರೊಬ್ಬರು ’ಗೀತೆಯನ್ನು ಸುಡುತ್ತೇನೆ’ ಎನ್ನುವ ಮೂಲಕ ವಿವಾದದಕಿಡಿಯನ್ನು ಹೆಚ್ಚಿಸಿದರು.ಈಗ ಅವರ ಹಿ೦ದೆ ಅಗ್ನಿ ಶ್ರೀಧರ ’ಜೀವನದಲ್ಲಿ ಎ೦ದಾದರೊ೦ದು ದಿನ ಗೀತೆಯನ್ನು ಸುಡುತ್ತೇನೆ’ ಎನ್ನುವ ಮೂಲಕ ಕಿಡಿಯನ್ನು ಜ್ವಾಲೆಯಾಗಿಸಿದ್ದಾರೆ.

ಮು೦ಚಿನಿ೦ದಲೂ ಭಗವದ್ಗೀತೆಯೆನ್ನುವುದು ಅನೇಕ ವಿವಾದಗಳಿಗೆ ಕಾರಣಿಕರ್ತ ಗ್ರ೦ಥ. ಗೀತೆಯ ಕುರಿತಾಗಿ ನಮ್ಮ ಸ೦ವಿಧಾನಶಿಲ್ಪಿ ಅ೦ಬೇಡ್ಕರ್,”ನನಗೆ ಆಶ್ಚರ್ಯ ಮೂಡಿಸುವ ಸ೦ಗತಿಯೆ೦ದರೇ ಭಗವದ್ಗೀತೆಯೆಡೆಗಿನ ವಿದ್ವಾ೦ಸರ ಭಿನ್ನಾಭಿಪ್ರಾಯಗಳು. ಗೀತೆಯಲ್ಲಿನ ಶ್ಲೋಕಗಳ ಬಗ್ಗೆ ಒಬ್ಬೊಬ್ಬ ಪ೦ಡಿತರದ್ದೂ ಒ೦ದೊ೦ದು ಬಗೆಯ ವ್ಯಾಖ್ಯಾನ.ಪ್ರತಿಯೊಬ್ಬರಿಗೂ ಭಗವದ್ಗೀತೆಯಲ್ಲಿ ವಿಭಿನ್ನವಾದ ಸತ್ಯದ ಸಾಕ್ಷಾತ್ಕಾರ.ನನ್ನ ಪ್ರಕಾರ ಭಗವದ್ಗೀತೆಯೆನ್ನುವುದು ಧಾರ್ಮಿಕ ಗ್ರ೦ಥವೂ ಅಲ್ಲ,ತತ್ವಶಾಸ್ತ್ರದ ಮಹಾಮೀಮಾ೦ಸೆಯೂ ಅಲ್ಲ.ವಿಚಿತ್ರ ನೋಡಿ, ಮಹಾಭಾರತದ ಭೀಷ್ಮಪರ್ವದಲ್ಲಿ ಕೃಷ್ಣನಿ೦ದ ,ಅರ್ಜುನನಿಗಾದ ಬೋಧನೆಯೆನ್ನಲಾಗುವ ಭಗವದ್ಗೀತೆಯಲ್ಲಿ ಪಾರ್ಥಸಾರಥಿ,ಮಧ್ಯಮ ಪಾ೦ಡವನನ್ನು ಯುದ್ದಕ್ಕಾಗಿ ಪ್ರೇರೇಪಿಸುತ್ತಾನೆ. ದೇಹಕ್ಕೆ ಮಾತ್ರ ಸಾವು ,ಆತ್ಮಕ್ಕೆ ಸಾವಿಲ್ಲ,ರಣರ೦ಗದಲ್ಲಿ ಶತ್ರುಗಳನ್ನು ಸದೆಬಡಿಯುವುದು ಕ್ಷತ್ರಿಯನ ಕರ್ತವ್ಯವೆನ್ನುತ್ತ ಭಗವ೦ತನೇ ಹಿ೦ಸೆಯ ಪರೋಕ್ಷ ಸಮರ್ಥಕನಾಗುವುದು ವಿಪರ್ಯಾಸವಲ್ಲವೇ?.ಸಾಮಾನ್ಯವಾಗಿ ಭಗವದ್ಗೀತೆಯ ಪ್ರತಿಪಾದಕರು ಗೀತೆಯ ಭಾಗವಾಗಿರುವ ’ಕರ್ಮಯೋಗ’ವನ್ನು ಮನುಷ್ಯನ ಕರ್ಮಗಳ ವಿವರಣೆಯ ಕುರಿತಾದ ಅಧ್ಯಾಯವೆ೦ದೂ, ’ಜ್ನಾನ ಯೋಗ’ವನ್ನು ಮನುಷ್ಯ ಜೀವನದ ಅ೦ತಿಮಜ್ನಾನದ ಬಗೆಗಿನ ವಿವರಣೆಗಳ ಅಧ್ಯಾಯವೆ೦ದೂ ವಿವರಿಸುತ್ತಾರೆ.ಆ ಮೂಲಕ ಭಗವದ್ಗೀತೆಯೆನ್ನುವುದು ಮಾನವ ಜನ್ಮದ ಜೀವನ ಸಾರವನ್ನು ಸಾರುವ ಮಹಾನ ಗ್ರ೦ಥವೆ೦ದು ವಾದಿಸುತ್ತಾರೆ.ಮೇಲ್ನೋಟಕ್ಕೆ ಇದು ಸರಿಯೆನಿಸಿದರೂ,ಕೂಲ೦ಕುಷ ಅಧ್ಯಯನದಿ೦ದ ಮಾತ್ರ ಭಗವದ್ಗೀತೆಯ ನಿಜವಾದ ತಾತ್ಪರ್ಯವನ್ನರಿಯಬಹುದು. ಮತ್ತಷ್ಟು ಓದು »

6
ಮಾರ್ಚ್

ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೨

– ಸುದರ್ಶನ್ ರಾವ್

dantavillada_kathegalu_nilumeವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೧

ನಾರದರಿಗೆ ಆಶ್ಚರ್ಯ…ಸಂಬಂಧದಲ್ಲಿ ನಾನು ಕಿರಿಯ, ಬ್ರಹ್ಮನ ಮಗನಾದ ನಾನು ಇವನಿಗೆ ಮೊಮ್ಮಗನಾಗಬೇಕು. ಯಾವಾಗಲೂ ನೀನು, ತಾನು ಎಂದು ಏಕವಚನದಲ್ಲಿ ಕರೆಯುತ್ತಿದ್ದ ಇವತ್ತು ನೀವು, ನಿಮಗೆ ಎಂಬ ಬಹುವಚನ ಪ್ರಯೋಗ ಮಾಡುತ್ತಿದ್ದಾನಲ್ಲ!, ತಲೆ ಬಿಸಿ ಆಗಿರಲೇ ಬೇಕು ಎಂದು ಅವರಿಗೆ ಗೊತ್ತಾಯಿತು.

ಕಬ್ಬಿಣ ಕಾದಿರುವಾಗಲೇ ಬಡಿಯಬೇಕೆಂದು ತಮ್ಮ ಎಂದಿನ ಧಾಟಿಯಲ್ಲಿ ಹೇಳಿದರು, “ಹೇ ಭಗವಂತಾ, ಬ್ರಹ್ಮಾಂಡವೇ, ಆ ದೇವನಾಡುವ ಬೊಂಬೆಯಾಟವಯ್ಯ, ಅಂಬುಜ ನಾಭನ, ಅಂತ್ಯವಿಲ್ಲದಾತನ ತುಂಬು ಮಾಯವಯ್ಯಾ… ಈ ಲೀಲೆಯು …ಎಂದು ನಾನು ನಿನ್ನನ್ನು ಯಾವತ್ತಿನಿಂದಲೂ, ಅದೆಷ್ಟು ಬಾರಿ ಸ್ತುತಿಸಿಲ್ಲ. ಈಗ ನೋಡಿದರೆ ಭೂಮಿಯಲ್ಲಿ ಬೇರೆಯೇ ಆಟ ನಡೆದಿದೆ. ಅಲ್ಲಿ, ಆ ಭೂಮಿಯಲ್ಲಿ, ನೀನು ಸೂತ್ರ ಕಟ್ಟಿರದ, ನಿನ್ನ ರಾಗದಾ ಭೋಗದಾ ಉರುಳಲ್ಲಿ ಸಿಕ್ಕಿರದ ಅದೆಷ್ಟೋ ಬೊಂಬೆಗಳು ಅವತರಿಸಿರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ.ಅವು ಇವರೆಲ್ಲರ ಕಾರ್ಯವಿಧಾನಕ್ಕೆ ಕೊಡಲಿ ಪೆಟ್ಟು ಕೊಡುತ್ತಿರುವುದೂ ನೋಡಿದ್ದೇನೆ. ಇದು ಹೀಗೇ ಮುಂದುವರಿದರೆ ನನ್ನ ಈ ಹಾಡಿಗೆ ಅರ್ಥವಿಲ್ಲದೆ ಹೋಗುತ್ತದೆ. ಅದರ ಸಾಹಿತ್ಯ ಬದಲಾಯಿಸಬೇಕಾಗುವುದು. ನಾನು ಕೇವಲ ಸುದ್ದಿಗಾರನಷ್ಟೇ. ನನಗೆ ಕಾರ್ಯಕಾರಣ ಸಂಬಂಧ ತಿಳಿಯದು. ಆದರೂ ಇದು ಮಾನವರು ಕಲಿತುಕೊಂಡಿರುವ ವೈದ್ಯವಿಜ್ಞ್ನಾನದ ಕರಾಮತ್ತೆಂದು ತೋರುತ್ತಿದೆ. ಯಾವುದಕ್ಕೂ ಅಶ್ವಿನೀ ದೇವತೆಗಳನ್ನು ಕರೆಸಿ ನೋಡು” ಎಂದರು. ಯಾವತ್ತಿನಂತೆ ಅಪೂರ್ಣ ಸಲಹೆ ನೀಡಿ ಮತ್ತಷ್ಟು ಮಜಾ ಪಡೆಯುವ ನಾರದರ ಬುದ್ಧಿ ಅಲ್ಲೂ ಸುಮ್ಮನಿರಲಿಲ್ಲ,. ಈ ನಾರದ ನನ್ನ ಪಾರಮ್ಯವನ್ನೇ ಪ್ರಶ್ನಿಸಬಲ್ಲ ಸನ್ನಿವೇಶದ ಮಾತಾನಾಡುತ್ತಿದ್ದಾನಲ್ಲ. ಇದೇನಿರಬಹುದು. ಸ್ವಲ್ಪ ಮೈಮರೆತಿದ್ದಕ್ಕೆ ಏನೇನೋ ನಡೆದು ಹೋಗಿದೆ ಎಂದು ಕಿರೀಟ ತೆಗೆದು, ತಲೆ ಕೆರೆದುಕೊಂಡು ಅಶ್ವಿನೀದೇವತೆಗಳನ್ನು ಕರೆಸಿದ.
ಮತ್ತಷ್ಟು ಓದು »

5
ಮಾರ್ಚ್

ಸಂಸ್ಕಾರ ಮತ್ತು ವಂಶವೃಕ್ಷ: ಅಪೂರ್ಣದಿಂದ ಪೂರ್ಣದೆಡೆಗೆ

-ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ.

ಓದುವ ಮುನ್ನ:

ಸಂಸ್ಕಾರ ಮತ್ತು ವಂಶವೃಕ್ಷಸಿದ್ದಾಂತ, ಬದ್ದತೆ, ನಿಷ್ಠೆ ಇವು ಹೆಚ್ಚು ಬಿಗಿಯಾದಷ್ಟೂ ಬೌದ್ದಿಕ ತಿಳುವು ಉಸಿರುಗಟ್ಟುತ್ತದೆ. ಗ್ರಹಿಕೆಯು ಪೂರ್ವಾಗ್ರಹಗಳಿಂದ ಹೊರತಾಗಿದ್ದಷ್ಟೂ ನಿಲುವು ಪರಿಪಕ್ವವಾಗುತ್ತದೆ. ಚಿಂತನೆ ಮತ್ತಷ್ಟು ವಿಕಸಿತವಾಗುತ್ತದೆ. ಸಾಹಿತ್ಯ, ಸೃಷ್ಟಿ ಅಥವಾ ಇಡೀ ಮನುಕುಲವೇ ಆಗಲೀ ಸತ್ಯಾನ್ವೇ಼ಣೆಯ ಹಾದಿಯಲ್ಲಿ, ಸತ್ಯ-ಅಸತ್ಯಗಳ ಪರಾಮರ್ಷೆಯಲ್ಲಿ ನಿತ್ಯ ಚಲನಶೀಲ, ಅಪೂರ್ಣದಿಂದ ಪೂರ್ಣದೆಡೆಗೆ. ಪೂರ್ಣತೆ ಎಂಬುದು ಅಂತ್ಯವಿಲ್ಲದ ಹಾದಿ, ಇದರೆಡೆಗಿನ ಪಯಣ ನಿರಂತರ. ಇಗೋ ಮುಟ್ಟಿದೆ ಇದೇ ಅಂತ್ಯ, ಇದೇ ಸತ್ಯ ಎಂದು ಗ್ರಹಿಸಿದ ಮರುಕ್ಷಣಕ್ಕೆ ಮತ್ತೊಂದು ಹಾದಿ ಕಾಲ ಬುಡದಿಂದ ಹಾಯುತ್ತಾ ಅನಂತದವರೆಗೆ ಹಾಸಿರುತ್ತದೆ. ಧುರ್ಗಮವೋ ಸುಗಮವೋ ಹೆಜ್ಜೆ ಇಟ್ಟ ನಂತರವಷ್ಟೇ ತಿಳಿಯುತ್ತದೆ. ಗ್ರಹಿಕೆಯಿಂದ ಅರಿವು, ಅರಿವಿನಿಂದ ಜ್ಞಾನ, ಹೀಗೆ ಮುಂದೆ ಮುಂದೆ ಸಾಗಿದಷ್ಟೂ ತಾತ್ಕಾಲಿಕವಾಗಿಯಾದರೂ ಪೂರ್ಣತೆಯ ಅನುಭವ ದೊರೆಯುತ್ತದೆ. ಇದೊಂದು ಅಂತ್ಯವಿಲ್ಲದ ಹಾದಿ, ಪರಿಪೂರ್ಣತೆಯ ಗಮ್ಯದೆಡೆಗೆ ಆತ್ಮದ ನಿತ್ಯಪಯಣ. ಇಲ್ಲಿ ಅನುಭೂತಿಯೆಲ್ಲವೂ ಅಮೃತ; ಗಳಿಸಿದ್ದೆಲ್ಲವೂ ಶಾಶ್ವತ.

ಕನ್ನಡ ಸಾಹಿತ್ಯ ಲೋಕದಲ್ಲಿ ಓದುಗರಿಂದ, ವಿಮರ್ಷಕರಿಂದ ಅತೀ ಹೆಚ್ಚು ಚರ್ಚೆಗಳಿಗೆ, ವಾದ ವಿವಾದಗಳಿಗೆ ಕಾರಣವಾದ ಕೃತಿಗಳಲ್ಲಿ ದಿವಂಗತ ಡಾ.ಯು.ಆರ್‍ ಅನಂತಮೂರ್ತಿಯವರು ಬರೆದಿರುವ ಸಂಸ್ಕಾರ ಕಾದಂಬರಿ ಪ್ರಮುಖವಾದುದು. ಈ ಕಾದಂಬರಿಯ ಕಥಾವಸ್ತುವೇ ವಿವಾದಕ್ಕೆ ಮೂಲವಾಗಿದೆ. ಹಲವಾರು ವೇದಿಕೆಗಳಲ್ಲಿ ಈಗಾಗಲೇ ಚಿಂತನ-ಮಂಥನಗಳಿಗೆ ಸಂಸ್ಕಾರ ಕಾದಂಬರಿ ವಿಷಯ ವಸ್ತುವಾಗಿದೆ. ಇನ್ನು ಎಸ್.ಎಲ್ ಬೈರಪ್ಪ ರವರ ವಂಶವೃಕ್ಷ ಕಾದಂಬರಿಯು ಸಹಾ ಬಹುಚರ್ಚಿತವಾದ ಕಾದಂಬರಿಯಾಗಿದೆ. ಎಸ್.ಎಲ್.ಬೈರಪ್ಪ ರವರ ಅನೇಕ ಕಾದಂಬರಿಗಳ ಪೈಕಿ ಇದುವರೆಗೂ ಸುಮಾರು ಐವತ್ತಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿರುವ ಈ ಕಾದಂಬರಿ ಹೆಚ್ಚು ಪ್ರಸಿದ್ದವಾದ ಕೃತಿಯಾಗಿದೆ. ಸಂಸ್ಕಾರ ಮತ್ತು ವಂಶವೃಕ್ಷ ಈ ಎರಡೂ ಕಾದಂಬರಿಗಳು ಕ್ರಮವಾಗಿ ೧೯೬೫ ಮತ್ತು ೧೯೬೬ ರಲ್ಲಿ ಪ್ರಥಮವಾಗಿ ಪ್ರಕಟಗೊಳ್ಳುತ್ತವೆ.

ಮತ್ತಷ್ಟು ಓದು »

5
ಮಾರ್ಚ್

ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆ ಮತ್ತು ನಿಲುಮೆ ಫೌಂಡೇಶನ್ ನ ಉದ್ಘಾಟನಾ ಸಮಾರಂಭದ ವರದಿ

– ಹರೀಶ್ ಆತ್ರೇಯ,ಹರ್ಷಿತ್ ಜೋಸೆಫ್

Nilume Book Releaseನಿಲುಮೆ ಪ್ರಕಾಶನದಿಂದ ದಿನಾಂಕ ೧ ಮಾರ್ಚ್ ೨೦೧೫ ರಂದು ಬೌದ್ಧಿಕ ದಾಸ್ಯದಲ್ಲಿ ಭಾರತ ಎಂಬ ಪುಸ್ತಕವು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಬಿಡುಗಡೆಯಾಯಿತು. ಕಳೆದ ಐದು ವರ್ಷಗಳಿಂದ  ಸತತವಾಗಿ ಬೌದ್ಧಿಕ ವಿಚಾರಗಳನ್ನು ಮಂಡಿಸುತ್ತಿದ್ದ ನಿಲುಮೆ ಬ್ಲಾಗ್ ಈಗ ಪ್ರಕಾಶನ ಸಂಸ್ಥೆಯ ಹೆಸರಿನಲ್ಲಿ ನಿಲುಮೆ ಫೌಂಡೇಶನ್ ಆಗಿ ಹೊರಹೊಮ್ಮಿದೆ, ಪುಸ್ತಕ ಬಿಡುಗಡೆಯ ಸಮಾರಂಭದಲ್ಲಿಯೇ ನಿಲುಮೆ ಫೌಂಡೇಶನ್ನಿನ ಉದ್ಘಾಟನೆಯಾಯಿತು.

ಬ್ರಿಟಿಷರ ಕೆಳಗೆ ದಾಸರಾಗಿ ಬಾಳಿದ (?) ಭಾರತೀಯರ ಚರಿತ್ರೆ (?) ನಮಗೆ ಗೊತ್ತಿದೆ. ರಾಜಕೀಯವಾಗಿ ನಮ್ಮನ್ನು ಆಳಿದುದು ಹೌದಾದರೂ ಬೌದ್ಧಿಕವಾಗಿ ನಾವು ಅವರಿಂದ ಆಳಿಸಿಕೊಳ್ಳಬೇಕಾದ ಸ್ಥಿತಿಗೆ ತಲುಪಿದ್ದು ಶೋಚನೀಯ. ಅವರಿಂದ ಭೌತಿಕವಾಗಿ ಆಳಿಸಿಕೊಳ್ಳುವ ಕಾಲಘಟ್ಟವನ್ನು ವಸಾಹತುಶಾಹಿ ಕಾಲವೆಂದು ಕರೆಯುವುದಾದರೆ, ಈಗಲೂ ಅವರ ಬೌದ್ಧಿಕ ಚಿಂತನೆಗಳ, ಆಲೋಚನಾ ಕ್ರಮಗಳ ರೂಪದಲ್ಲಿ ಅವರಿಂದ ಬೌದ್ಧಿಕವಾಗಿ ಆಳಿಸಿಕೊಳ್ಳುತ್ತಿದ್ದೇವೆ ಎನ್ನುವುದೂ ಸತ್ಯ. ಇವೆಲ್ಲದರಿಂದ ಹೊರಬರಬೇಕಾದರೆ ನಮ್ಮ ಸಂಸ್ಕೃತಿಯ , ಆಚರಣೆಗಳ ಅರಿವು ನಮಗೆ ಬೇಕಾಗುತ್ತದೆ. ಸತ್ಯವನ್ನು ತಿಳಿಯುವ ಮತ್ತು ತಿಳಿಸುವ ಹೊಣೆ ನಮ್ಮದಾಗಿರುತ್ತದೆ. ಇವೆಲ್ಲವನ್ನೂ ಪ್ರಚುರಪಡಿಸಲು ನಮಗೊಂದು ದಾರಿ,ಕ್ರಮ ಮತ್ತು ಮಾರ್ಗದರ್ಶನದ ಅವಶ್ಯಕತೆಯಿದೆ. ಹತ್ತು ಹಲವು ಪುಸ್ತಕಗಳು ನಮ್ಮ ಕಣ್ಣಿಗೆ ಕಾಣಬಹುದು ಮತ್ತು ನಾವು ಓದಬಹುದು ಆದರೆ ದುರದೃಷ್ಟವಶಾತ್ ಅವೆಲ್ಲವೂ ಪಾಶ್ಚಾತ್ಯದ ಕಂಗಳಿಂದ ಕಂಡ ದೃಶ್ಯಗಳಾಗಿವೆ. ಅವರು ಚಿಂತನ ಕ್ರಮವನ್ನು ಅಳವಡಿಸಿಕೊಂಡು ಲೇಖಿಸಿದ ಮಹಾ ಪ್ರಬಂಧಗಳು ನಮ್ಮ ಸಂಸ್ಕೃತಿಯ ಮೂಲವನ್ನು ಅರಿಯುವ ಪ್ರಯತ್ನವನ್ನು ಮಾಡಿಯಾವೇ? ಇದು ಪ್ರಶ್ನೆಯಾಗಿ ಉಳಿಯುತ್ತಿರುವ ಹಂತದಲ್ಲಿ ಪ್ರೊ|| ಬಾಲಗಂಗಾಧರ್ ಅವರ ಲೇಖನಗಳು ಮತ್ತು ಕ್ರಮ ಹೆಚ್ಚು ಮೌಲ್ಯಯುತವೂ ಮತ್ತು ಸರಿಯಾದ ಮಾರ್ಗವೂ ಆಗಿರುವುದು ನಿಜಕ್ಕೂ ಸಂತಸದ ಸಂಗತಿ. ಆಲೋಚನಾ ಕ್ರಮಕ್ಕೆ ಹೊಸದೊಂದು ಹೊಳಹನ್ನು ತಂದುಕೊಟ್ಟವರು ಪ್ರೊ ಬಾಲು ರವರು.
ಮತ್ತಷ್ಟು ಓದು »

2
ಮಾರ್ಚ್

ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆಯ ಬಗ್ಗೆ “ವಿಜಯವಾಣಿ” ವರದಿ

Nilume Prakashana - Vijayavani Varadi