ವಿಷಯದ ವಿವರಗಳಿಗೆ ದಾಟಿರಿ

Posts from the ‘ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ’ Category

11
ಆಕ್ಟೋ

ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೩ )

– ಡಾ. ಮಾಧವ ಪೆರಾಜೆ

ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )

ಎರಡು ಭಿನ್ನ ಶಾಸನಗಳು:

tirumalaಆದರೆ ಈ ಮಾತಿಗೆ ಅಪವಾದಗಳಾಗಿ ಭಿನ್ನ ರಾಗವನ್ನು ಹಾಡುವ ಶಾಸಗಳೂ ಇಲ್ಲದಿಲ್ಲ. ಸದ್ಯಕ್ಕೆ ಅಂತಹ ಎರಡು ಶಾಸನಗಳು ನನ್ನ ಗಮನಕ್ಕೆ ಬಂದಿದೆ. ಮೊದಲನೆಯದು ಸಿರಗುಪ್ಪದ ಶಾಸನ, ಎರಡನೆಯದು ಹರಪನಹಳ್ಳಿಯ ಶಾಸನ. ಸಿರಗುಪ್ಪದ ಶಾಸನವು ಶಂಭುಲಿಂಗೇಶ್ವರ ದೇವಾಲಯದಲ್ಲಿರುವುದಾಗಿ ಅದರ ಕಾಲವು ಕ್ರಿ.ಶ. 1199 ಎಂದು ತಿಳಿದು ಬರುತ್ತದೆ. ಈ ಶಾಸನದ ಕೊನೆಯಲ್ಲಿ …… ಮತ್ತಷ್ಟು ಓದು »

10
ಆಕ್ಟೋ

ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )

– ಡಾ. ಮಾಧವ ಪೆರಾಜೆ

ಮಧ್ಯಕಾಲದಲ್ಲಿ ಗುಡಿಗಳು:

tirumalaದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ  ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. ಮತ್ತಷ್ಟು ಓದು »

5
ಆಗಸ್ಟ್

ಅಪರಾಧಕ್ಕೆ ಜಾತಿ ಬಣ್ಣ ಬಳಿಯುವುದೇಕೆ?

– ರಾಕೇಶ್ ಶೆಟ್ಟಿ

victims_and_witnesses_of_crime_crimeಕಳೆದ ವಾರ ಎರಡು ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾದವು. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಎಸ್ಪಿ ನಾಯಕಿ ಮಾಯಾವತಿಯವರ ಬಗ್ಗೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ದಯಾಶಂಕರ್ ಮಾಡಿದ ಕೆಟ್ಟ ಟೀಕೆಯ ಪ್ರಕರಣ ಮೊದಲನೆಯದು.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ದಯಾಶಂಕರ್ ಮೇಲೆ BJP ಪಕ್ಷ ಆರು ವರ್ಷಗಳ ಕಾಲ ಉಚ್ಚಾಟನೆಯಂತಹ ಕಠಿಣ ಕ್ರಮ ಕೈಗೊಂಡಿದೆ. ಅವರ ಮೇಲೆ FIR ಕೂಡ ದಾಖಲಾಗಿದೆ. ಆದರೆ, ದಯಾಶಂಕರ್ ಅವರ ಮಗಳನ್ನು, ಮಡದಿಯನ್ನು ನಮಗೊಪ್ಪಿಸಿ ಎಂದಿರುವ BSP ನಾಯಕ ನಸೀಮುದ್ದೀನ್ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ಅಕ್ರಮ ಸಂತಾನ ಎನ್ನುವ ಮೂಲಕ, ದಯಾಶಂಕರ್ ಅವರ ತಾಯಿಗೆ ಅವಮಾನ ಮಾಡಿದ BSP ಶಾಸಕಿ ಉಷಾ ಚೌಧರಿ ವಿರುದ್ಧ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಎಷ್ಟು ಕೇಸುಗಳು ದಾಖಲಾಗಿವೆ ? ದಯಾಶಂಕರ್ ನಾಲಗೆ ಕತ್ತರಿಸಿ ತಂದವರಿಗೆ ಐವತ್ತು ಲಕ್ಷ ಕೊಡುತ್ತೇನೆ ಎಂದ BSP ಪಕ್ಷದ ನಾಯಕಿ ಜನ್ನತ್ ಜಹಾನ್ ಮೇಲೆ ಮಾಯಾವತಿ ಯಾವ ಕ್ರಮ ಕೈಗೊಂಡಿದ್ದಾರೆ ? ಕ್ರಮ ಕೈಗೊಳ್ಳುವುದು ಪಕ್ಕಕ್ಕಿರಲಿ. ಮಾಯವತಿಯವರು, ಅವರ ಕಾರ್ಯಕರ್ತರ ಘೋಷಣೆಗಳನ್ನು ಸಮರ್ಥಿಸಿಕೊಂಡಿದ್ದಾರೆ! ಮಾಯಾವತಿಯವರಿಗಾದರೆ ಮಾತ್ರ ನೋವು, ದಯಾಶಂಕರ್ ಅವರ ತಾಯಿ, ಮಗಳು, ಹೆಂಡತಿಗಾಗುವ ನೋವು ನೋವಲ್ಲವೇ? ಮತ್ತಷ್ಟು ಓದು »

30
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೩

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಚಿತ್ರಣಕಾಯಿದೆ ಮತ್ತು ವಾಸ್ತವ ಸ್ಥಿತಿಗಳು

The Scheduled Castes and Scheduled Tribes (Prevention of Atrocities) Act, 1989ಈ ವರದಿಯಲ್ಲಿ ಸಂಗ್ರಹಿಸಿರುವ ಅಂಕಿ-ಅಂಶ ಮತ್ತು ಉಲ್ಲೇಖಿತವಾಗಿರುವ ವಿವರಣೆಗಳನ್ನೇ ಗಮನಿಸಿದರೂ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯು ಏಕೆ ವಿಫಲವಾಗುತ್ತಿದೆ ಎನ್ನುವುದು ಅರಿವಿಗೆ ಬರುತ್ತದೆ. ಈ ವರದಿಯಲ್ಲಿನ ಅಂಶಗಳು ಸ್ಪಷ್ಟಪಡಿಸುವ ಹಾಗೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಜಾತಿವ್ಯವಸ್ಥೆಯ ಚೌಕಟ್ಟಿನಡಿಯಲ್ಲಿ ನಿರೂಪಿಸಲಾದ ಸಾಮಾಜಿಕ ತಾರತಮ್ಯದ ಅಥವಾ ಅಸ್ಪೃಷ್ಯತೆಯ ಆಚರಣೆಯ ಹೆಸರಿನಲ್ಲಿ ದಾಖಲಾಗುತ್ತಿರುವುದು ಕೆಲವೇ ಪ್ರಕರಣಗಳು. ಅದರಲ್ಲೂ ನೇರವಾಗಿ ಈ ರೀತಿಯ ಪ್ರಕರಣಗಳಲ್ಲಿ ನಿಂದನೆ ಮತ್ತು ಹಲ್ಲೆಗಳನ್ನೊಳಗೊಂಡ ಪ್ರಕರಣಗಳೇ ಹೆಚ್ಚಿನವು. ಉಳಿದಂತೆ ಈ ವರದಿಯು ನಿಜಕ್ಕೂ ಸಾಮಾಜಿಕ ತಾರತಮ್ಯ, ಅಸ್ಪೃಷ್ಯತಾಚರಣೆ ಎನ್ನುವುಂತಹ ಪ್ರಕರಣಗಳನ್ನು ವಿರಳವಾಗಿ ಹೆಸರಿಸುತ್ತದೆ. ಉಳಿದಂತೆ ನಿಂದನೆ, ಹಲ್ಲೆ, ಭೂ ವಿವಾದ, ಗೋಮಾಳ, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಸಾಮಾನ್ಯ ಪ್ರಕರಣಗಳೇ ಹೆಚ್ಚಾಗಿವೆ.

ಈ ರೀತಿಯ ವ್ಯಾಜ್ಯಗಳು ಸಾಮಾನ್ಯವಾಗಿ ಜನರ ನಡುವೆ ದಲಿತರೆನಿಸಿಕೊಂಡಿರುವವರ ನಡುವೆ, ದಲಿತರಲ್ಲದವರ ನಡುವೆ ಮತ್ತು ದಲಿತರೆನಿಸಿಕೊಂಡವರು ಮತ್ತು ಅಲ್ಲದವರ ನಡುವೆ ನಡೆಯುತ್ತಲೇ ಇರುತ್ತವೆ. ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ ಇದು ಸಾಮಾನ್ಯ ಸಂಗತಿ. ಆದರೆ,ಈ ರೀತಿಯಲ್ಲಿ ಸಾಮಾನ್ಯವಾಗಿ ದಾಖಲಾಗುವ ಪ್ರಕರಣಗಳಲ್ಲಿ ವಾದಿ ಪ್ರತಿವಾದಿಗಳು ದಲಿತರು ಮತ್ತು ದಲಿತೇತರರು ಆಗಿದ್ದರೆ, ಅದು ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ ಅಷ್ಟೇ. ಉಳಿದ ಸಂದರ್ಭದಲ್ಲಿ ಸಾಮಾನ್ಯ ಪ್ರಕರಣವೆಂದು ದಾಖಲಾಗುತ್ತದೆಯಷ್ಟೆ.

ಸಾಮಾನ್ಯವಾಗಿ ಯಾವುದೇ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವರೆಗೆ ಅದರಲ್ಲಿ ತಪ್ಪಿತಸ್ಥರು ಮತ್ತು ಮುಗ್ದರ ತೀರ್ಮಾನ ಸಾಧ್ಯವಿಲ್ಲ. ಅದರೆ ಅದೇ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾದ ತಕ್ಷಣ ಅಲ್ಲಿ ಅಪರಾಧಿ ಮತ್ತು ಮುಗ್ದರ ತೀರ್ಮಾನವಾಗಿರುತ್ತದೆ. ಹಾಗಾಗಿಯೇ ಅಲ್ಲವೇ? ಇಲ್ಲಿ ಕೇವಲ ಪ್ರಕರಣ ದಾಖಲಾಗಿ ಕನ್ವಿಕ್ಷನ್ ಆಗದಿದ್ದರೂ, ಪೆಂಡಿಂಗ್ ಇದ್ದರೂ, ರಾಜಿಮಾಡಿಕೊಂಡಿದ್ದರೂ ಸಹ ಸರ್ಕಾರದ ಹಣಕಾಸಿನ ಪರಿಹಾರ ನೀಡಲಾಗಿರುತ್ತದೆ. ಅಲ್ಲದೆ ದೂರದಾರರೆನಿಸಕೊಂಡ ಮತ್ತು ದೌರ್ಜನ್ಯಕ್ಕೆ ಒಳಗಾದವರೆನಿಸಿಕೊಂಡ ದಲಿತರೂ ಸಹ ಪ್ರಕರಣಗಳನ್ನು ದಾಖಲು ಮಾಡಿ ಪರಿಹಾರ ಪಡೆದನಂತರ ಇಡೀ ಪ್ರಕರಣದ ಬಗ್ಗೆ ಆಸಕ್ತಿಯನ್ನೇ ತೋರದೆ ಕೆಲಸ ಮುಗಿಯಿತೆಂದು ಸುಮ್ಮನಿದ್ದುಬಿಡುತ್ತಿರುತ್ತಾರೆ.

ಈ ಕಾಯ್ದೆಯಡಿಯಲ್ಲಿ ದಲಿತರ ದೌರ್ಜನ್ಯ ಪ್ರಕರಣಗಳನ್ನು ಪರಿಭಾವಿಸುವುದರಲ್ಲಿಯೇ ಸಮಸ್ಯೆಗಳಿವೆ ಎನ್ನುವುದು ಒಂದೆಡೆಯಾದರೆ, ಮತ್ತೊಂದೆಡೆ ಹಳ್ಳಿಯ ದೀನರ ನಿಜವಾದ ಜಾತಿ ತಾರತಮ್ಯ ಅಥವಾ ಅಸ್ಪೃಷ್ಯತೆಯ ಆಚರಣೆಗಳ ಸಮಸ್ಯೆಗಳನ್ನು ಇದು ಹೇಗೆ ಪರಿಹರಿಸುತ್ತದೆ? ಎನ್ನುವ ಪ್ರಶ್ನೆ ಏಳುತ್ತದೆ. ಹೇಳಬೇಕೆಂದರೆ ಅಸ್ಪೃಷ್ಯತೆಯ ಆಚರಣೆಗಳ ಸಂದರ್ಭಕ್ಕಿಂತ ಅತಿಹೆಚ್ಚಾಗಿ ಈ ಕಾಯ್ದೆಯು ಬಳಕೆಯಾಗಿರುವುದೇ ಬೇರೆ ಸಂದರ್ಭಗಳಲ್ಲಿ. ಹಾಗಿದ್ದಪಕ್ಷದಲ್ಲಿ ಮಂತ್ರಿಗಳು ಮತ್ತು ಬುದ್ಧಿಜೀವಿ ವರ್ಗಗಳು ಈ ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳುತ್ತಿಲ್ಲ, ಈ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿಯಾಗುವವರ ಪ್ರಮಾಣ ಅತ್ಯಂತ ಕಡಿಮೆ ಇದೆಯೆಂದು ಕಳವಳ ಪಡುವುದರ ಹಿಂದೆ ಯಾವ ವಾಸ್ತವ ಸಮಸ್ಯೆಯ ಕಾಳಜಿ ಇದೆ?

ಮತ್ತಷ್ಟು ಓದು »

29
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೨

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

ಕ್ಷೇತ್ರಾಧ್ಯಯನ ಆಧಾರಿತ ಮಾಹಿತಿಗಳು ಮತ್ತು ವಿಶ್ಲೇಷಣೆ:

The Scheduled Castes and Scheduled Tribes (Prevention of Atrocities) Act, 1989ಈ ಮೇಲಿನ ಪ್ರಶ್ನೆಯನ್ನು ಪರಿಶೀಲಿಸಲು ಒಂದು ಕ್ಷೇತ್ರಾಧಾರಿತ ಸಂಶೋಧನಾ ಪ್ರಾಜೆಕ್ಟ್‍ನ ಮಾಹಿತಿಗಳು ಕೆಲವು ವಿಶೇಷವಾದ ಆಸಕ್ತಿಕರ ಅಂಕಿ-ಅಂಶಗಳನ್ನು ಕೊಡುತ್ತವೆ. ಈ ಕ್ಷೇತ್ರಾಧ್ಯಯನದ ಮಾಹಿತಿಗಳು, ದಾಖಲಾಗುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಅವುಗಳು ಶಿಕ್ಷೆಯಾಗುವ ಪ್ರಕರಣಗಳ ಪ್ರಮಾಣದ ನಡುವಿನ ಅಂತರಕ್ಕೆ ಕಾರಣಗಳ ಬಗ್ಗೆ ಬೇರೆಯದೇ ರೀತಿಯಲ್ಲಿ ಯೋಚಿಸಲು ದಾರಿ ಮಾಡಿಕೊಡುತ್ತದೆ.

ಮೈಸೂರು ವಿಶ್ವವಿದ್ಯಾನಿಲಯದ ಆಂತ್ರೋಪಾಲಜಿ ವಿಭಾಗದ ಅಧ್ಯಾಪಕರೊಬ್ಬರು ತಮ್ಮ ಏಳುಜನ ಸಂಶೋದನಾ ಸಹಾಯಕರೊಂದಿಗೆ ಕರ್ನಾಟಕ ಸರ್ಕಾರದ ಪರವಾಗಿ ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಕೇಂದ್ರದ ವತಿಯಿಂದ ಒಂದು ಸಂಶೋಧನಾ ಅಧ್ಯಯನ ಕೈಗೊಂಡಿದ್ದರು. ಇದು ‘ಕರ್ನಾಟಕದಲ್ಲಿನ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ಮತ್ತು ದೌರ್ಜನ್ಯಕ್ಕೆ ಬಲಿಯಾದವರಿಗೆ ನೀಡಲಾಗಿರುವ ಪರಿಹಾರಗಳ’ ಬಗ್ಗೆ ಮಾಡಲಾದ ಒಂದು ಮೌಲ್ಯಮಾಪನ ಅಧ್ಯಯನವಾಗಿದೆ. ಇದು ಬಾಗಲಕೋಟೆಯೊಂದನ್ನುಳಿದು ಉಳಿದ ಕರ್ನಾಟಕದ ಎಲ್ಲಾ 26 ಜಿಲ್ಲೆಗಳಿಂದ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿ ಪರಿಹಾರಗಳನ್ನು ಪಡೆದ ಫಲಾನುಭವಿ ದಲಿತರನ್ನು ಮತ್ತು ಅಪರಾಧಿಗಳನ್ನು ಗುರುತಿಸಿ ಅವರುಗಳಲ್ಲಿ ಪ್ರತಿಜಿಲ್ಲೆಯಿಂದ ಶೇ. 10ರಷ್ಟು ಜನರನ್ನು ಸಂದರ್ಶನ ನಡೆಸಿದ್ದಾರೆ.

ಮೊದಲಿಗೆ ಅವರ ಅಧ್ಯಯನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಿಗೆ ಮೂಲಕಾರಣ (Root Cause) ವಾದ ಅಂಶಗಳಾವುವು ಮತ್ತು ಅವುಗಳಲ್ಲಿ ಯಾವ ಯಾವ ರೀತಿಯ ನಡವಳಿಕೆಗಳು ಬರುತ್ತವೆ ಎಂಬುದನ್ನು ಯಾವ ರೀತಿ ಗುರುತಿಸುತ್ತಾರೆ ಎನ್ನುವುದನ್ನು ನೋಡೋಣ.

ದಲಿತರ ಮೇಲಿನ ದೌರ್ಜನ್ಯಕ್ಕೆ ಮೂಲಕಾರಣಗಳು: ಈ ವರದಿಯಲ್ಲಿ ನಮೂದಿಸಿರುವಂತೆ ಪೋಲೀಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸಿರುವ ಕಾರಣಗಳು ಮತ್ತು ಅಧ್ಯಯನದ ಸಂದರ್ರ್ಭದಲ್ಲಿ ಸಂದರ್ಶಿತ ಮಾಹಿತಿದಾರರು ನೀಡಿದ ಕಾರಣಗಳನ್ನು ತುಲನೆ ಮಾಡಿ ಅವುಗಳನ್ನು ವರ್ಗೀಕರಿಸಿದ್ದಾರೆ. ಅವುಗಳೆಂದರೆ: ಸಾಮಾಜಿಕ ತಾರತಮ್ಯ, ಭೂವಿವಾದ, ರಾಜಕೀಯ ವೈಷಮ್ಯ, ಹಿಂದಿನ ವೈರತ್ವ, ಆರ್ಥಿಕ ವ್ಯವಹಾರಗಳು, ಕಾರ್ಮಿಕ ವ್ಯಾಜ್ಯಗಳು, ಮತ್ತು ಇತರೆ. ಅವುಗಳ ಕುರಿತು ಸಂಕ್ಷಿಪ್ರವಾಗಿ ನೋಡುವುದಾದರೆ,

  • ಸಾಮಾಜಿಕ ತಾರತಮ್ಯ (Social Discrimination): ಈ ವರ್ಗೀಕರಣದಡಿಯಲ್ಲಿ ಅಸ್ಪೃಷ್ಯತೆ ಆಚರಣೆಗಳು ಎನ್ನಬಹುದಾಂತಹ ಅಂಶಗಳನ್ನು ಪಟ್ಟಿಮಾಡಲಾಗಿದೆ ಎನ್ನುತ್ತದೆ ವರದಿ. ಮುಖ್ಯವಾಗಿ, ಸಮಾಜದ ಪ್ರತಿಯೊಂದು ಜಾತಿಗಳು ಪರಸ್ಪರ ವ್ಯವಹರಿಸುವಂತಹ ಪ್ರದೇಶಗಳಾದ ಶಾಲೆಗಳು, ಆಸ್ಪತ್ರೆಗಳು, ಗ್ರಾಮ ಅಥವಾ ಪಟ್ಟಣ ಪಂಚಾಯಿತಿಗಳು, ಮತ್ತಿತರೆ ಕಾರ್ಯಕ್ಷೇತ್ರಗಳಲ್ಲಿ ಮೇಲ್ಜಾತಿಗಳ ಸದಸ್ಯರಿಂದ ಅಸ್ಪೃಷ್ಯತೆಯ ಆಚರಣೆಗಳೆಂದು ಕಂಡುಬಂದ ಅಂಶಗಳು. ಅವುಗಳೆಂದರೆ:
  1. ಶಾಲೆಗಳಲ್ಲಿ ಪರಿಶಿಷ್ಟಜಾತಿಯ ಮಕ್ಕಳನ್ನು ಪ್ರತ್ಯೇಕ ಬೆಂಚ್‍ಗಳಲ್ಲಿ ಕುಳಿತುಕೊಳ್ಳುವಂತೆ ಮಾಡಿರುವುದು.
  2. ವಿಶೇಷ ಸಮಾರಂಭಗಳು, ವಿಧಿ ಆಚರಣೆಗಳು ಹಬ್ಬಗಳ ಸಂದರ್ಭಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ಊಟಕ್ಕೆ ಪ್ರತ್ಯೇಕ ಸಾಲಿನಲ್ಲಿ ಕೂರಿಸುವುದು.
  3. ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯದಂತೆ ಪರಿಶಿಷ್ಟ ಜಾತಿಯ ಸದಸ್ಯರನ್ನು ತಡೆಯುವುದು.
  4. ಗ್ರಾಮೀಣ ಪ್ರದೇಶಗಳ ಕೆಲವು ಹೊಟೇಲುಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರುಗಳಿಗೆ ಪ್ರತ್ಯೇಕ ಲೋಟ ಮತ್ತು ತಟ್ಟೆಗಳಲ್ಲಿ ಉಪಾಹಾರ ಪಾನಿಯಗಳನ್ನು ನೀಡಿರುವುದು.
  5. ಹಲವು ಹಳ್ಳಿಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ದೇವಾಲಯ ಪ್ರವೇಶಕ್ಕೆ ನಿರಾಕರಿಸುವುದು.
  6. ಸಾರ್ವಜನಿಕ ಕೊಳವೆಗಳಿಂದ ನೀರು ಪಡೆಯುವಾಗ ಉನ್ನತ ಜಾತಿಯ ಸದಸ್ಯರು ಪರಿಶಿಷ್ಟ ಜಾತಿಯ ಸದಸ್ಯರೊಂದಿಗೆ ಜಗಳವಾಡುವುದು ಕಂಡುಬರುತ್ತದೆ. ಮೇಲ್ಜಾತಿಯವರು ಕೆಳಜಾತಿಯವರಿಗೆ ಕೆಲವು ಪ್ರದೇಶಗಳಲ್ಲಿ ನೀರು ಹಿಡಿದುಕೊಳ್ಳಲು ಬಿಡುವುದಿಲ್ಲ.

ಮತ್ತಷ್ಟು ಓದು »

28
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೧

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ-577451

The Scheduled Castes and Scheduled Tribes (Prevention of Atrocities) Act, 1989ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಮೂಲಕ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಾ ಇವೆ. ಈ ರೀತಿಯ ದೌರ್ಜನ್ಯಗಳಿಂದ ದಲಿತರನ್ನು ರಕ್ಷಿಸಿ ಅವರನ್ನು ಅಸ್ಪೃಷ್ಯತೆಯ ಆಚರಣೆಗಳಿಂದ ಮುಕ್ತಿಗೊಳಿಸುವ ಒಂದು ಮಹಾಅಸ್ತ್ರವೆಂಬಂತೆ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆಯನ್ನು ಭಾರತ ಸರ್ಕಾರ 1989ರಲ್ಲಿ ಜಾರಿಗೆ ತಂದಿದೆ. ಈ ಕಾಯಿದೆಯ ಜಾರಿಯಾದ ಎರಡು ದಶಕಗಳ ತರುವಾಯ ಈ ಕಾಯಿದೆಯ ಜಾರಿ ಮತ್ತು ಅದರ ಪರಿಣಾಮದ ಕುರಿತು ಚರ್ಚೆಗಳು ಮತ್ತು ಅಧ್ಯಯನಗಳು ನಡೆಯುತ್ತಿವೆ. ಬಹುತೇಕ ಈ ಚರ್ಚೆಗಳಲ್ಲಿನ ಸಾಮಾನ್ಯ ನಿಲುವೆಂದರೆ ಅಸ್ಪೃಷ್ಯತೆ ಆಚರಣೆಯ ವಿರುದ್ದ ಪ್ರಬಲವಾದ ಕಾಯಿದೆ ಇದ್ದರೂ ಇದರ ಪರಿಣಾಮಕಾರಿ ಜಾರಿಯಲ್ಲಿ ಅಧಿಕಾರಿಗಳು ಆಸಕ್ತಿವಹಿಸದಿರುವುದರಿಂದ ಈ ಕಾಯಿದೆಯಿಂದ ದಲಿತರಿಗೆ ಸಿಗಬೇಕಾದ ನ್ಯಾಯ ದೊರೆಯುತ್ತಿಲ್ಲ ಎನ್ನುವ ಸಾಮಾನ್ಯ ಆತಂಕ-ಕಾಳಜಿಗಳು ವ್ಯಕ್ತವಾಗುತ್ತಿವೆ.

ಪ್ರಸ್ತುತ ಲೇಖನವು ಈ ಆತಂಕಗಳ ವಾಸ್ತವತೆಯನ್ನು ಪರೀಕ್ಷಿಸಲು ಪ್ರಯತ್ನಿಸಿದೆ.ಸರ್ಕಾರವೇ ನಡೆಸಿರುವ ಈ ಕಾಯಿದೆಯ ಮೌಲ್ಯಮಾಪನ ಅಧ್ಯಯನ ವರಧಿಯ ಅಂಕಿಅಂಶಗಳು ಮತ್ತು ಅದರಲ್ಲಿನ ವಿವರಣೆಗಳನ್ನು ಆದರಿಸಿ ಈ ಕಾನೂನಿನಡಿಯಲ್ಲಿ ದಾಖಲಾಗಿರುವವ ಪ್ರಕರಣಗಳ ವಾಸ್ತವ ಸ್ಥಿತಿಯನ್ನು ಇಲ್ಲಿ ಪರೀಕ್ಷಿಸಲಾಗಿದೆ.

ಈ ವರದಿಯಲ್ಲಿ ಉಲ್ಲೇಖವಾಗಿರುವಂತೆ, ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿದ ದಲಿತರು ಈ ಕಾನೂನಿನಿಂದ ದೊರೆಯುವ ಪರಿಹಾರ ಪಡೆದ ನಂತರ ಪ್ರಕರಣದ ಕುರಿತು ಆಸಕ್ತಿಯನ್ನು ಕಳೆದುಕೊಳ್ಳುವುದೇ ಪ್ರಕರಣಗಳು ಇತ್ಯರ್ಥಗೊಳ್ಳದಿರಲು ಮುಖ್ಯ ಕಾರಣವೆಂದು ಗುರುತಿಸುತ್ತದೆ. ಜೊತೆಗೆ, ಈ ಕಾನೂನಿನಡಿಯಲ್ಲಿ ಅಸ್ಪೃಷ್ಯತೆಯ ಆಚರಣೆಯ ಕಾರಣಕ್ಕೆ ದಾಖಲಾಗುವ ಪ್ರಕರಣಗಳು ಅತಿಕಡಿಮೆ ಇದ್ದು ಇತರೇ ಜಗಳ-ವ್ಯಾಜ್ಯಗಗಳೇ ಈ ಕಾಯಿದೆಯಡಿಯಲ್ಲಿ ದಾಖಲಾಗುತ್ತಿರುವ ಅಂಶವನ್ನು ಎತ್ತಿ ತೋರಿಸುತ್ತವೆ.ಈ ರೀತಿಯಲ್ಲಿ ಈ ಕಾಯಿದೆಯು ಅಸ್ಪೃಷ್ಯತೆಯ ಆಚರಣೆಯಲ್ಲದ ವಿಚಾರಗಳಿಗೆ (ದುರು)ಉಪಯೋಗವಾಗುತ್ತಿರುವುದಕ್ಕೆ ಈ ಕಾಯಿದೆ ರೂಪುಗೊಂಡಿರುವ ಸೈದ್ಧಾಂತಿಕ ಚೌಕಟ್ಟಿನಲ್ಲಿಯೆ ಸಮಸ್ಯೆ ಇರಬೇಕೆಂದು ಈ ಲೇಖನವು ತರ್ಕಿಸುತ್ತದೆ.

ಮುಖ್ಯವಾಗಿ, ಭಾರತೀಯ ಸಮಾಜದ ಕುರಿತ ಜಾತಿವ್ಯವಸ್ಥೆಯ ಚೌಕಟ್ಟಿನ ಹಿನ್ನೆಲೆಯಲ್ಲಿ ಕೆಳಜಾತಿ-ಮೇಲ್ಜಾತಿಗಳ ಕುರಿತು ವಸಾಹತುಶಾಹಿ ಸ್ಟೀರಿಯೋಟೈಪುಗಳು ಸಮಾಜವಿಜ್ಞಾನದಲ್ಲಿ ಹರಡಿಕೊಂಡಿದೆ. ಜಾತಿಗಳ ಕುರಿತ ಈ ರೀತಿಯ ಸ್ಟೀರಿಯೋಟೈಪುಗಳನ್ನು ಆಧರಿಸಿದ ನಿರೂಪಣೆಗಳಿಂದ ಹುಟ್ಟಿಕೊಂಡಿರುವ ಬೌದ್ಧಿಕ ವಲಯದಲ್ಲಿನ ಸಾಮಾನ್ಯ ಗ್ರಹಿಕೆಗಳು ಈ ಕಾಯಿದೆ ರೂಪಿತಗೊಳ್ಳಲು ಕಾರಣವಾಗಿದೆ. ಈ ಸಾಮಾನ್ಯಗ್ರಹಿಕೆಗಳು ಇಲ್ಲಿಯ ವಾಸ್ತವ ಸ್ಥಿತಿಯಾಗಿರದೇ ಇರುವುದರಿಂದ ಈ ಕಾಯಿದೆಯಿಂದ ತಮ್ಮ ಸಮಸ್ಯೆಗಳನ್ನು ಪರಿಹಾರ ಮಾಡಿಕೊಂಡು ನ್ಯಾಯಪಡೆಯುವುದಕ್ಕಿಂತ ಹೆಚ್ಚಾಗಿ ಲಾಭ ಪಡೆಯುವ ಕಡೆಗಷ್ಟೇ ಒಲವಿದೆ. ಅಲ್ಲದೆ ದಲಿತರ ಸಮಸ್ಯೆಗಳನ್ನು ಪರಿಹರಿಸುವುದಕ್ಕಿಂತ ಹೆಚ್ಚಾಗಿ ಈ ಕಾಯಿದೆಯು ಹಲವು ಹೊಸ ರೀತಿಯ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ ಎಂದು ಈ ಲೇಖನವು ವಾದಿಸುತ್ತದೆ. ಮತ್ತಷ್ಟು ಓದು »