ವಿಷಯದ ವಿವರಗಳಿಗೆ ದಾಟಿರಿ

Posts from the ‘ನಾಡು-ನುಡಿ: ಮರುಚಿಂತನೆ’ Category

4
ನವೆಂ

ವಸಾಹತುಪ್ರಜ್ಞೆಯಲ್ಲಿ ಪುಣ್ಯಯೋನಿ-ಪಾಪಯೋನಿ

– ವಿನಾಯಕ್ ಹಂಪಿಹೊಳಿ

ಭಗವದ್ಗೀತೆಇತ್ತೀಚೆಗೆ ಕೆ. ಎಸ್. ಭಗವಾನ್ ಎಂಬ ಬುದ್ಧಿಜೀವಿಯೋರ್ವರಿಂದಾಗಿ ಭಗವದ್ಗೀತೆಯ ಒಂಬತ್ತನೇ ಅಧ್ಯಾಯದ ೩೨ ಮತ್ತು ೩೩ನೇ ಶ್ಲೋಕಗಳು ಭಾರೀ ವಿವಾದಕ್ಕೊಳಗಾದವು. ಆ ಶ್ಲೋಕಗಳಲ್ಲಿ ಕೆಲವೇ ವರ್ಗದ ಜನರನ್ನು ಪುಣ್ಯಯೋನಿಗಳೆಂತಲೂ ಉಳಿದ ಬಹುಸಂಖ್ಯಾತರನ್ನು ಪಾಪಯೋನಿಗಳೆಂತಲೂ ಕೃಷ್ಣ ಕರೆದದ್ದು ಈ ಹಿಂದೂ ರಿಲಿಜನ್ನಿನಲ್ಲಿ ಇರುವ ಸಾಮಾಜಿಕ ಅಸಮಾನತೆಗೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಚಿತ್ರಿಸಲಾಯಿತು. ಆ ಎರಡು ಶ್ಲೋಕಗಳನ್ನು ಗದ್ದೆಯಲ್ಲಿನ ಕಳೆಗೆ ಹೋಲಿಸಿ, ಇವುಗಳನ್ನು ತೆಗೆದು ಹಾಕಬೇಕೆಂದು ಅಭಿಪ್ರಾಯಪಟ್ಟರು. ಆ ಎರಡು ಶ್ಲೋಕಗಳು “ಶ್ರುಣ್ವಂತು ವಿಶ್ವೇ ಅಮೃತಸ್ಯ ಪುತ್ರಾಃ” ಎಂಬ ಉಪನಿಷದ್ವಾಕ್ಯಕ್ಕೆ ವಿರುದ್ಧವಾದ ಆಶಯವನ್ನು ಹೊಂದಿದೆ ಎಂಬುದಾಗಿ ಸಾರಿದರು. ಈ ಹಿಂದೂ ಎಂಬ ಧರ್ಮದಲ್ಲಿ ಎರಡು ಭಾಗಗಳಿವೆ, ಅವು ಸಾಮಾಜಿಕ ಮತ್ತು ಅಧ್ಯಾತ್ಮಿಕ, ಎರಡೂ ಕ್ಷೇತ್ರಗಳಲ್ಲಿ ಅನೇಕ ಕೃತಿಗಳಿವೆ, ಅದರಲ್ಲಿ ಅಧ್ಯಾತ್ಮಿಕ ಕೃತಿಗಳ ಕುರಿತು ಅವರಿಗೆ ಸಮ್ಮತಿಯಿದೆ, ಆದರೆ ಸಾಮಾಜಿಕ ಕೃತಿಗಳ ಕುರಿತು ಅವರಿಗೆ ಭಾರೀ ಆಕ್ಷೇಪವಿದೆ ಎಂಬ ಅವರ ಹೇಳಿಕೆಯನ್ನು ಅವರ ವಾದದ ಸಾರಾಂಶ ಎನ್ನಬಹುದು.

ನಮ್ಮ ಸಂಪ್ರದಾಯಗಳು ಪುನರ್ಜನ್ಮವನ್ನು ನಂಬುತ್ತವೆ. ಮತ್ತು ಜೀವನದಲ್ಲಿ ಕಾಣುವ ಪರಿಣಾಮಗಳಿಗೆ ಪ್ರತ್ಯಕ್ಷವಾಗಿ ಕಾಣದ ಕಾರಣಗಳನ್ನು ಪೂರ್ವಜನ್ಮಕ್ಕೆ ಹೊಂದಿಸಿ ಅರಿಯುವದು ನಮ್ಮಲ್ಲಿ ಮೊದಲಿನಿಂದ ಇರುವ ಪರಂಪರೆ. ತನ್ಮೂಲಕ ಒಬ್ಬ ಜೀವನದಲ್ಲಿ ಪಡೆದಿರುವ ಪ್ರತಿಯೊಂದಕ್ಕೂ ಒಂದು ಕಾರಣವನ್ನು ಹುಡುಕಿಕೊಳ್ಳುವದು ಸಹಜವಾದ ಪ್ರಕ್ರಿಯೆ. ಆತ್ಮಕ್ಕೆ ಲಿಂಗವಿರುವದಿಲ್ಲ, ಲಿಂಗವೆಂಬುದು ಕೇವಲ ದೇಹದ ಒಂದು ಗುಣ ಎಂಬುದು ನಮ್ಮ ಸಂಪ್ರದಾಯಗಳಲ್ಲಿ ಹಾಸುಹೊಕ್ಕಾಗಿರುವ ವಿಚಾರ. ಹೀಗಾಗಿ ಆತ್ಮ-ಪುನರ್ಜನ್ಮ-ದೇಹಗಳ ಕುರಿತು ಇರುವ ಈ ಆಧ್ಯಾತ್ಮಿಕ ವಿಚಾರಗಳಲ್ಲಿ ಒಂದು ಆತ್ಮ ಒಮ್ಮೆ ಗಂಡಾಗಿ, ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಮತ್ತೊಂದು ಜನ್ಮದಲ್ಲಿ ಪ್ರಾಣಿಯಾಗಿ ಹುಟ್ಟುವ ಕಲ್ಪನೆಗಳು ಕಥೆಗಳು ಹೇರಳವಾಗಿ ಕಂಡುಬರುತ್ತವೆ. ಹೀಗಾಗಿ ಜನ್ಮದಿಂದ ಜನ್ಮಕ್ಕೆ ಅಲೆಯುವ ಒಂದು ಆತ್ಮ ಗಂಡು ದೇಹ ಪಡೆಯುವದಕ್ಕೋ, ಇಲ್ಲವೇ ಹೆಣ್ಣು ದೇಹ ಪಡೆಯುವದಕ್ಕೋ ಒಂದು ಕಾರಣ ಬೇಕಾಗುತ್ತದೆ.

ಮತ್ತಷ್ಟು ಓದು »

12
ಆಕ್ಟೋ

ಇಂಡಿಯಾಸ್ ಡಾಟರ್ ಮತ್ತು ಬಿಬಿಸಿ-ವಿದೇಶಿಗರೊಬ್ಬರ ಬಿಚ್ಚು ನುಡಿ

ಇಂಗ್ಲಿಷ್ ಮೂಲ: ಜೇಕಬ್ ಡಿ ರೂವರ್
ಕನ್ನಡಕ್ಕೆ: ಅಶ್ವಿನಿ ಬಿ ದೇಸಾಯಿ, ಆರೋಹಿ, ಬೆಂಗಳೂರು

ಸಂತ್ರಸ್ತೆದೆಹಲಿಯಲ್ಲಿ ವರ್ಷಗಳ ಹಿಂದೆ ನಡೆದ ನಿರ್ಭಯಾ ಪ್ರಕರಣ ದೇಶವನ್ನಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಗೆಬಗೆಯ ಚರ್ಚೆಗೆ ಗ್ರಾಸವಾಗಿತ್ತು. ಅತ್ಯಾಚಾರದಂಥ ಹೇಯ ಕೃತ್ಯಗಳು ಎಲ್ಲೇ ನಡೆದರೂ ಖಂಡನೀಯ.ಇಂದು (12 ಅಕ್ಟೋಬರ್ 2015) ಕೂಡ ದೆಹಲಿಯಲ್ಲಿಯೂ ಮಂಡ್ಯದಲ್ಲಿಯೂ ಇದೇ ಬಗೆಯ ಪ್ರಕರಣಗಳ ವರದಿಯಾಗಿದೆ. ಇಂಥ ಕೃತ್ಯಗಳನ್ನು ಅಂತಾರಾಷ್ಟ್ರೀಯ ಮಾಧ್ಯಮಗಳು ಹೇಗೆ ನೋಡುತ್ತವೆ? ಚರ್ಚೆಯ ದಿಕ್ಕನ್ನು ಹೇಗೆ ತಪ್ಪಿಸುತ್ತವೆ? ಭಾರತದೊಳಗಿನ ಚರ್ಚೆಯನ್ನು ಕೂಡ ಹೇಗೆ ಪ್ರಭಾವಿಸುತ್ತಿವೆ? ಈ ನೆಪದಲ್ಲಿ ಭಾರತವನ್ನು ಹೇಗೆ ಚಿತ್ರಿಸುತ್ತವೆ? ಎಂಬ ಬಗ್ಗೆ ಬೆಲ್ಜಿಯಂನ ಪ್ರಾಧ್ಯಾಪಕ ರೂವರ್ ಅವರು ನೀಡಿದ ಒಂದು ಒಳನೋಟ.

ಹೀಗೊಮ್ಮೆ ಕಲ್ಪಿಸಿಕೊಳ್ಳಿ. ದೇಶದಲ್ಲಿರುವ ಶಿಶುಕಾಮ ಹಗರಣಗಳ ಬಗ್ಗೆ ಕೇಳಿದ ಚಿತ್ರ ನಿರ್ಮಾಪಕಿಯೊಬ್ಬರು ಬೆಲ್ಜಿಯಂಗೆ ಪ್ರವಾಸ ಕೈಗೊಳ್ಳುತ್ತಾರೆ. ಕುಖ್ಯಾತ ಶಿಶುಕಾಮಿಯೊಬ್ಬನ ಸಂದರ್ಶನವನ್ನೊಳಗೊಂಡ ಕಿರುಚಿತ್ರವೊಂದನ್ನು ಆಕೆ ನಿರ್ದೇಶಿಸುತ್ತಾಳೆ. ತಾನು ಅತ್ಯಾಚಾರವೆಸಗಿದ ಹೆಣ್ಣುಮಕ್ಕಳು ನಿಜವಾಗಿ ತನ್ನನ್ನೇ ಕೆಡಿಸಲು ಮುಂದಾದರಲ್ಲದೇ,ತನ್ನ ಕೃತ್ಯವನ್ನು ಅವರು ಸಂತೋಷದಿಂದ ಅನುಭವಿಸಿದ್ದಾರೆ ಎಂದು ಈ ಮನುಷ್ಯ ಹೇಳುತ್ತಾನೆ. ಏನನ್ನು ಚಿಂತಿಸಬೇಕೆಂದು ಇಂಥ ಶಿಶುಕಾಮಿಗಳಿಗೆ ಬೋಧಿಸುವ ಮೂಲಕ? ಬೆಲ್ಜಿಯಂ ಸಮಾಜ ಇದಕ್ಕೆ ಜವಾಬ್ದಾರಿ ಎಂದು ಚಿತ್ರನಿರ್ಮಾಪಕಿ ಟಿಪ್ಪಣಿ ನೀಡುತ್ತಾಳೆ. ಈ ದೇಶದ ಬಹುತೇಕ ಪುರುಷರು ಹೀಗೇ ತಯಾರಾಗಿದ್ದಾರೆಂದೂ ಆಕೆ ಹೇಳುತ್ತಾಳೆ. ನಿಜವಾಗಿ ಶಿಶುಕಾಮ ಬೆಲ್ಜಿಯಂನ ದೊಡ್ಡ ರೋಗ ಮತ್ತು ಸಂಸ್ಕೃತಿಯ ಭಾಗವಾದ್ದರಿಂದ ಬೆಲ್ಜಿಯಂ ಸಿನಿಮಾಗಳೂ ಅದನ್ನೇ ಪ್ರತಿಫಲಿಸುತ್ತವೆ ಎಂಬ ತೀರ್ಮಾನಕ್ಕೆ ಬರುತ್ತಾಳೆ. ಬೆಲ್ಜಿಯಂನ ನಾವು ಹೇಗೆ ಪ್ರತಿಕ್ರಿಯಿಸುತ್ತೇವೆ? ಈ ರೀತಿಯ ಹೇಳಿಕೆಗಳು ಆಘಾತಕಾರಿಯೂ, ನಮ್ಮನ್ನು ಕೆರಳಿಸುವಂಥದ್ದೂ ಆಗಿದೆ ಎಂದು ನಾವು ಭಾವಿಸುತ್ತೇವೆ. ಈ ರೀತಿಯ ಹೇಳಿಕೆಗಳು ಶಿಶುಕಾಮ ನಮ್ಮ ಸಂಸ್ಕೃತಿಯ ತಿರುಳಿನ ಅಭಿವ್ಯಕ್ತಿಯಾಗಿದ್ದು ಬಾಲದೌರ್ಜನ್ಯ ನಡೆಸುವಂತೆಯೇ ನಮ್ಮನ್ನೆಲ್ಲರನ್ನು ಸಿದ್ದಪಡಿಸಿದ್ದಾರೆ ಎನ್ನುವ ಭಾವನೆಯನ್ನು ಹುಟ್ಟಿಸುತ್ತದೆ.

ಮತ್ತಷ್ಟು ಓದು »

5
ಆಕ್ಟೋ

ಸೆಕ್ಯುಲರಿಸಂ ವರ್ಸಸ್ ಮೂಲಭೂತವಾದ…?

– ಡಾ. ಪ್ರವೀಣ್ ಟಿ. ಎಲ್, ಶಿವಮೊಗ್ಗ

ಮೂಲಭೂತವಾದಿ ಸೆಕ್ಯುಲರಿಸಂಪ್ರಜಾವಾಣಿಯ ಚರ್ಚೆಯೊಂದಕ್ಕೆ ಬರೆದ ಪ್ರತಿಕ್ರಿಯೆ. ಪ್ರತಿದಿನ ‘ಮೂಲಭೂತವಾದ, ಕೋಮುವಾದ/ಕೋಮುವಾದಿ ರಾಜಕಾರಣ ಅಪಾಯಕಾರಿ’ ಎಂದು ಊಳಿಡುವ ಲೇಖನಗಳನ್ನು ಪ್ರಕಟಿಸುವ ಪತ್ರಿಕೆಗೆ ಈ ಪ್ರತಿಕ್ರಿಯೆಯು ಅಪಥ್ಯವಾಗಿರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಏಕೆಂದರೆ ಪ್ರಕಟಿಸಿದರೆ ಕೆಲವರ ‘ವಿಶ್ವಾಸಾರ್ಹ’ತೆಯನ್ನು ಕಳೆದುಕೊಳ್ಳುವ ಭಯ. ಅದೇನೆ ಇರಲಿ ಸದ್ಯಕ್ಕೆ ಪತ್ರಿಕೆಯ ‘ವಿಶ್ವಾಸಾರ್ಹ’ತೆಯನ್ನು ಪ್ರಶ್ನಿಸುವುದು ಈ ಲೇಖನದ ಕಾಳಜಿ ಅಲ್ಲ.

ಹಿನ್ನೆಲೆ:
ಪ್ರೊ. ಮುಜಾಫ್ಫರ್ ಅಸ್ಸಾಧಿಯವರ “ರಾಜಕಾರಣದ ಲೆಕ್ಕಾಚಾರ ಮತ್ತು ಕಥನ” ಎಂಬ ಲೇಖನವನ್ನು ಪ್ರಜಾವಾಣಿಯಲ್ಲಿ 19-09-2015ರಂದು ಪ್ರಕಟಿಸಲಾಗಿತ್ತು. ಲೇಖನವು ವಸಾಹತುಶಾಹಿ ಪಳೆಯುಳಿಕೆಯಾದ ಜನಗಣತಿ ಮಾದರಿಯನ್ನು ನಿರ್ವಸಾಹತೀಕರಣಗೊಳಿಸುವ ಕುರಿತು ವಿಷಯ ಪ್ರಸ್ತಾಪಿಸಿದ್ದರು. ಈ ಜನಗಣತಿ ಮಾದರಿಯು ಅಲ್ಪಸಂಖ್ಯಾತ ಬಹುಸಂಖ್ಯಾತ ಎಂಬ ವರ್ಗೀಕರಣಕ್ಕೆ ನಾಂದಿಹಾಡುತ್ತದೆ. ಇದರ ಲಾಭವನ್ನು ಕೋಮುವಾದಿ ರಾಜಕಾರಣವು ತನ್ನದನ್ನಾಗಿಸಿಕೊಳ್ಳುತ್ತದೆ. ಹಾಗಾಗಿ ವಸಾಹತುಶಾಹಿ ನಿರ್ಮಿಸಿದ ಈ ಜನಗಣತಿ ಮಾದರಿಗಳನ್ನು ನಿರ್ವಸಾಹತೀಕರಣಕ್ಕೊಳಪಡಿಸಬೇಕು ಎಂಬುದನ್ನು ವಿವರಿಸಿದ್ದರು. ಡಾ. ಅಜಕ್ಕಳ ಗಿರೀಶ್ ಅಲ್ಪಸಂಖ್ಯಾತ- ಬಹುಸಂಖ್ಯಾತ ಎಂಬ ವರ್ಗೀಕರಣಗಳೂ ವಸಾಹತುಶಾಹಿಯ ಪಳೆಯುಳಿಕೆಗಳೇ ಅಲ್ಲವೇ? ಎಂಬ ಪ್ರಶ್ನೆಯನ್ನು ಎತ್ತಿದ್ದರು. ಆದರೆ ಇಬ್ಬರ ಕಾಳಜಿಯೂ ಭಾರತದಲ್ಲಿನ ಧರ್ಮಾಧಾರಿತ ಪ್ರಕ್ಷುಬ್ಧತೆಗಳನ್ನು, ಸಂಘರ್ಷಗಳನ್ನು ತೊಲಗಿಸಿ, ಅವುಗಳ ನಡುವೆ ಸೌಹಾರ್ಧತೆಯನ್ನು ತರುವುದರ ಕುರಿತೇ ಆಗಿತ್ತು. ಈ ಕಾಳಜಿಯು ಅತ್ಯಂತ ಅಭಿನಂದನಾರ್ಹ ಕೂಡ. ಹಾಗೂ ಇಂದಿನ ತುರ್ತೂ ಕೂಡ. ಏಕೆಂದರೆ ನಮ್ಮ ಸುತ್ತಮುತ್ತಲಿನ ಪರಿಸ್ಥಿತಿಗಳನ್ನು ನೋಡಿದರೆ, ‘ಧಾರ್ಮಿಕ’ ಗುಂಪುಗಳ ನಡುವಿನ ವೈರತ್ವಕ್ಕೆ ಕಾರಣವೇನು? ಯಾಕೆ ದಿನೇ ದಿನೇ ಹೆಚ್ಚಾಗುತ್ತಿದೆ? ಎಂಬುದನ್ನು ತಿಳಿಯುವ ಅನಿವಾರ್ಯತೆ ಹಾಗೂ ಅದಕ್ಕೆ ಪರಿಹಾರವನ್ನು ಸೂಚಿಸುವ ಒತ್ತಡ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಅಸ್ಸಾಧಿಯವರು ಹೇಳುವಂತೆ ನಿರ್ವಸಾಹತೀಕರಣದ ಅಗತ್ಯತೆ ಇಂದಿನ ಜರೂರು. ಅದರೆ ಅದು ಅವರು ಸೂಚಿಸುವಂತೆ ಜನಗಣತಿಯ ಮಾದರಿಯಲ್ಲಿ ಮಾತ್ರವಲ್ಲ ಬದಲಾಗಿ ಸೆಕ್ಯುಲರ್ ತತ್ವದಲ್ಲಿಯೇ ಆಗಬೇಕಿದೆ.
ಮತ್ತಷ್ಟು ಓದು »

9
ಸೆಪ್ಟೆಂ

ಅಂಬೇಡ್ಕರ್ ಮತ್ತು ಮಾರ್ಕ್ ವಾದ

– ಡಾ. ಜಿ. ಭಾಸ್ಕರ ಮಯ್ಯ

ಅಂಬೇಡ್ಕರ್-ಕಾರ್ಲ್ ಮಾರ್ಕ್ಸ್ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ ಅವರ ಸ್ಥಾನಮಾನಗಳ ಕುರಿತು ಸ್ಪಷ್ಟವಾಗಿ ಚರ್ಚಿಸಿದ್ದಾರೆ. ಈ ಕುರಿತು ಬಿ.ಟಿ. ರಣದಿವೆಯವರ “ಜಾತಿ ಮತ್ತು ವರ್ಗ” ಕೃತಿಯನ್ನು ನೋಡಬಹುದು. ಆದರೆ, ಬಹಳಷ್ಟು ಇತರೇ ಬುದ್ಧಿಜೀವಿಗಳಿಗೆ ಅಂಬೇಡ್ಕರ್ ಅವರು ಮಾರ್ಕ್ಸ್ ವಾದಕ್ಕೆ ಅತಿನಿಕಟ ಎಂತಲೊ ಅಥವಾ ಅಂಬೇಡ್ಕರ್‍ರದ್ದೇ ನಿಜವಾದ ಮಾರ್ಕ್ಸ್ ವಾದ ಎಂತಲೊ ಭ್ರಮೆಯಿದೆ.

ಇತ್ತೀಚೆಗೆ ವಿಜಯಕರ್ನಾಟಕದಲ್ಲಿ ಬರಗೂರು ರಾಮಚಂದ್ರಪ್ಪನವರ “ಕೆರಳಿದ ಕರುಳ ಧ್ವನಿ ಅಂಬೇಡ್ಕರ್” ಎಂಬ ಲೇಖನ ಪ್ರಕಟವಾಗಿದೆ. ಇಲ್ಲಿಯೂ ಅಂತಹ ಒಂದು ವಿಲಕ್ಷಣ ಭ್ರಮಾಪ್ರಯತ್ನವನ್ನು ನೋಡಬಹುದು. ಈ ಕುರಿತು ಒಂದು ಚರ್ಚೆ ಪ್ರಸ್ತುತ ಲೇಖನದ ಉದ್ದೇಶ. ಮೊದಲಿಗೆ ಬರಗೂರರು ಅಂಬೇಡ್ಕರರ ಮೂರು ಹೇಳಿಕೆಗಳನ್ನು (ಅವುಗಳಲ್ಲಿ 2, 3 ಮಾರ್ಕ್ಸ್ ವಾದವನ್ನು ಎತ್ತಿ ಹಿಡಿಯುತ್ತವೆ) ಉಲ್ಲೇಖಿಸಿ ಅದರ ಮೇಲೆ ತಮ್ಮ ಚರ್ಚೆಯನ್ನು ಆರಂಭಿಸುತ್ತಾರೆ.

ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರಲ್ಲ
ಗಾಂಧೀಜಿಯವರ ಕುರಿತು ಬರಗೂರು “ಆರಂಭದಲ್ಲಿ ಜಾತಿವರ್ಣಗಳನ್ನು ತಮ್ಮದೇ ವ್ಯಾಖ್ಯಾನದ ಮೂಲಕ ಸಮರ್ಥಿಸುತ್ತಿದ್ದ ಗಾಂಧೀಜಿ ಆನಂತರ ಜಾತಿ ಮತ್ತು ವರ್ಗರಹಿತ ಸಮಾಜದ ನಿರ್ಮಾಣವನ್ನು ಪ್ರತಿಪಾದಿಸಿದರು” ಎಂದಿದ್ದಾರೆ. ಜಗತ್ತಿನ ಯಾವ ಮಾರ್ಕ್ಸ್ ವಾದಿಯೂ ಮೈಮರೆತು ಕೂಡಾ ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರು ಎಂದು ಹೇಳಿಲ್ಲ. ಏಕೆಂದರೆ ಗಾಂಧೀಜಿ ಎಂದೂ ವರ್ಗರಹಿತ ಸಮಾಜ ನಿರ್ಮಾಣದ ಕನಸು ಕಂಡಿಲ್ಲ. ಭಾರತದ ಅತ್ಯುನ್ನತ ಮಟ್ಟದ ಮಾರ್ಕ್ಸ್ ವಾದಿಗಳಾದ ಡಾಂಗೆ, ಯಶ್‍ಪಾಲ್,ಇಎಂಎಸ್ ನಂಬೂದಿರಿ ಪಾಡ್-ಎಲ್ಲರೂ ಗಾಂಧೀಜಿಯ ಒಟ್ಟು ಐತಿಹಾಸಿಕ ಪಾತ್ರ ಬಂಡವಾಳಿಗರ ವರ್ಗವನ್ನು ಹೇಗೆ ಪ್ರತಿನಿಧಿಸುತ್ತಿತ್ತು ಎಂಬುದನ್ನೇ ವಿಶದೀಕರಿಸಿದ್ದಾರೆ. ಗಾಂಧೀಜಿಯವರ ಅತ್ಯಂತ ಯಥಾರ್ಥ
ಮೌಲ್ಯಮಾಪನವನ್ನು ಇಎಂಎಸ್ ತಮ್ಮ “ಗಾಂಧಿ ಎಂಡ್ ಹಿಸ್ ಇಸಮ್” ಕೃತಿಯಲ್ಲಿ ವಿವರವಾಗಿ ದಾಖಲಿಸಿದ್ದಾರೆ. ನನಗನ್ನಿಸುವಂತೆ ಬಹಳಷ್ಟು ಬುದ್ಧಿಜೀವಿಗಳಿಗೆ “ವರ್ಗ” ಎಂಬ ವಿಶೇಷ ಪದದ ಅರ್ಥವೇ ತಿಳಿದಿಲ್ಲ! ಅದರಿಂದಾಗಿಯೇ ಇಂತಹ ಅವಾಂತರಗಳು ಉಂಟಾಗುತ್ತವೆ.

ಮತ್ತಷ್ಟು ಓದು »

2
ಸೆಪ್ಟೆಂ

ಸಂಲೇಖನಾ-ಸಂಥರಾ ಆತ್ಮಹತ್ಯೆಯೆ?

– ಡಾ| ಜಿ. ಭಾಸ್ಕರ ಮಯ್ಯ

ಸಲ್ಲೇಖನ ವ್ರತಇತ್ತೀಚೆಗೆ ರಾಜಸ್ತಾನ್ ಹೈಕೋರ್ಟ್ “ಸಂಲೇಖನಾ-ಸಂಥರಾ”ವನ್ನು ಕಾನೂನು ಬಾಹಿರಗೊಳಿಸಿರುವ ವಿಚಾರ ಜೈನ ಸಮುದಾಯದ ಸಾತ್ವಿಕ ಆಕ್ರೋಶಕ್ಕೆ ಕಾರಣವಾಗಿದೆ. ಜನಸಂಖ್ಯೆಯಲ್ಲಿ 1 ಶೇ.ದಷ್ಟೂ ಇರದ ಜೈನ ಸಮುದಾಯದ ಧಾರ್ಮಿಕ ಆಚರಣೆಯ ಮೇಲೆ ಇದು ನಿಜಕ್ಕೂ ತಾಲಿಬಾನ್ ಮಾದರಿಯ ವ್ಯವಹಾರವಾಗಿದೆ. ನಮ್ಮ ಮಾನವ ಹಕ್ಕು ಹೋರಾಟಗಾರರು ಹಾಗೂ ಪ್ರಾಣಿದಯಾ ಸಂಘದ ಮಹಾಮಹಿಮರಿಗೆ ಇರುವುದು ಕುರುಡು ಸಿದ್ಧಾಂತ ಪ್ರೀತಿ ಹೊರತು ಮಾನವ ಪ್ರೀತಿಯಲ್ಲ. ತಮ್ಮಷ್ಟಕ್ಕೆ ತಾವಿದ್ದು, ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡಿದ ಹಾಗೂ ನೀಡುತ್ತಿರುವ ಜೈನ ಸಮುದಾಯಕ್ಕೆ ನೋವುಂಟು ಮಾಡುವ ಈ ಕೆಲಸ ನಿಜಕ್ಕೂ ನೀಚತನದ್ದಾಗಿದೆ.

ನಾನೀಗ ಈ ಆಚರಣೆಯ ಸಂಕ್ಷಿಪ್ತ ವಿವರವನ್ನು ನೀಡುತ್ತೇನೆ:-
ಈ ಆಚರಣೆಯನ್ನು ಜೈನ ದಿಗಂಬರ ಪರಂಪರೆಯಲ್ಲಿ “ಸಂಲೇಖನಾ” ಎಂತಲೂ ಶ್ವೇತಾಂಬರದಲ್ಲಿ “ಸಲ್ಲೇಖನಾ” ಎಂತಲೂ ಕರೆಯುತ್ತಾರೆ. ಇದು ಜೈನರ ಹಲವಾರು ವ್ರತಗಳಲ್ಲಿ ಅತಿಶ್ರೇಷ್ಠವಾದ ವ್ರತರಾಜ.ಸಂಲೇಖನಾ ಮನಸ್ಸಿನ ಸಾಧನೆಯ ಒಂದು ಉಚ್ಚತಮ ಆಧ್ಯಾತ್ಮಿಕ ಸ್ಥಿತಿ.

ಮರಣದ ವಿಧಗಳು: ಮರಣಗಳಲ್ಲಿ ಪ್ರಮುಖವಾಗಿ ಎರಡು ವಿಧ. ಬಾಲ ಮರಣ ಮತ್ತು ಪಂಡಿತ ಮರಣ.ಇದನ್ನು ಇನ್ನೊಂದು ಬಗೆಯಲ್ಲಿ-ಅಕಾಮ ಮರಣ (ವಿವೇಕ ರಹಿತ, ಹಲವು ಬಾರಿ) ಹಾಗೂ ಸಕಾಮ ಮರಣ(ವಿವೇಕ ಸಹಿತ, ಒಂದೇ ಬಾರಿ) ಎಂತಲೂ ಕರೆಯುತ್ತಾರೆ.”ಗುಮ್ಮಟಸಾರ”ದ ಪ್ರಕಾರ ಬಾಲ ಮರಣವು ಚ್ಯುತ ಮತ್ತು ಚ್ಯಾವಿತವೆಂದು ಎರಡು ಬಗೆ. ಚ್ಯುತವೆಂದರೆ ಆಯುಷ್ಯ ತೀರಿದ ಬಳಿಕ ಬರುವ ಸಾವು. ಚ್ಯಾವಿತವೆಂದರೆ ವಿಷ, ರಕ್ತಕ್ಷಯ, ಧಾತುಕ್ಷಯ ಶಸ್ತಾಘಾತ, ಅಗ್ನಿದಾಹ,ಜಲದಿಂದ ಬರುವ ಸಾವು. ಇನ್ನೊಂದು ಬಗೆಯ ಮರಣಕ್ಕೆ ‘ತ್ಯಕ್ತ’ ಎನ್ನುತ್ತಾರೆ. ತ್ಯಕ್ತವೆಂದರೆ ರೋಗದಿಂದಉಂಟಾದ ಅಸಾಧ್ಯ ಮಾರಣಾಂತಿಕ ಪರಿಸ್ಥಿತಿಯಲ್ಲಿ ವಿವೇಕದಿಂದ ಶರೀರ ತ್ಯಾಗ ಮಾಡುವುದು.
ಮತ್ತಷ್ಟು ಓದು »

24
ಆಗಸ್ಟ್

ಆನುದೇವಾ ಹೊರಗಣವನು ಸೆಕ್ಯುಲರಿಸಂನಿಂದ

– ರಾಕೇಶ್ ಶೆಟ್ಟಿ

ಆನುದೇವಾ ಹೊರಗಣವನು ಸೆಕ್ಯುಲರಿಸಂಅರಸರ ಆಡಳಿತದಲ್ಲಿದ್ದು ಆ ನಂತರ ದಶಕಗಳಿಗೂ ಹೆಚ್ಚು ಕಾಲದ ಮಾವೋವಾದಿಗಳ ಹಿಂಸಾಚಾರದ ನಂತರ ಅರಸರ ಆಡಳಿತಕ್ಕೆ ತಿಲಾಂಜಲಿಯಿಟ್ಟು ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡ ನೇಪಾಳಿಗಳು ಮತ್ತು ನೇಪಾಳ ಹೆಜ್ಜೆ-ಹೆಜ್ಜೆಗೂ ಸವಾಲುಗಳನ್ನು ಎದುರಿಸುತ್ತಲೇ ಸಾಗುತ್ತಲಿದೆ.ಪ್ರಜಾಪ್ರಭುತ್ವಕ್ಕೆ ಕಾಲಿಟ್ಟಂತೆ,ಹೊಸ ಸಂವಿಧಾನ ರಚಿಸುವ ನಿರ್ಧಾರಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬಂದಿದ್ದರೂ ೨೦೦೬ರಿಂದ ಈ ಪ್ರಕ್ರಿಯೆ ನಾನಾ ವಿಘ್ನಗಳಿಂದ ಕುಂಟುತ್ತಲೇ ಸಾಗಿದೆ.ಇತ್ತೀಚೆಗೆ ನಡೆದ ಪ್ರಬಲ ಭೂಕಂಪದ ನಂತರ ದೊಡ್ಡ ಮನಸ್ಸು ಮಾಡಿ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗೂಡಿ ಮತ್ತೆ ಈ ಕಾರ್ಯಕ್ಕೆ ಜೈ ಎಂದಿದ್ದವು.ಈಗ ಕಾರ್ಯ ಶುರುವಾದಂತೆ ಬಹಳಷ್ಟು ಪರ-ವಿರೋಧ ಪ್ರತಿಭಟನೆ ಚರ್ಚೆಗಳು ಶುರುವಾಗಿವೆ.

ಅವುಗಳಲ್ಲಿ ಒಂದು,ನೇಪಾಳದ ಭಾಗಗಳನ್ನು ಜನರ ಆಚರಣೆ-ಭಾಷೆಯ ಮೇಲೆ ಪ್ರತ್ಯೇಕವಾಗಿಸುವುದನ್ನು ವಿರೋಧ ವ್ಯಕ್ತವಾಗುತ್ತಿದೆ.ಈ ನಡೆ ಮುಂದೆ ನೇಪಾಳವನ್ನು ಇನ್ನಷ್ಟು ಚೂರು ಚೂರು ಮಾಡಲಿದೆ ಎಂಬ ದೂರದೃಷ್ಟಿಯುಳ್ಳವರು ನೇಪಾಳದಲ್ಲಿರುವುದು ನೇಪಾಳಿಗಳ ಪುಣ್ಯವೇ ಸರಿ.ಬಹುಷಃ ಅವರು ಭಾರತದ ಸ್ಥಿತಿಯಿಂದ ಪಾಠ ಕಲಿತಿರಬಹುದು.ಅದರಲ್ಲೂ ಮುಖ್ಯವಾಗಿ ಭಾರತದ ಈಶಾನ್ಯ ರಾಜ್ಯಗಳನ್ನು ನೋಡಿ.ಒಂದೆಡೆ ಮಿಷನರಿಗಳ ಚಿತಾವಣೆ,ಮತ್ತೊಂದೆಡೆ ಜನಾಂಗೀಯ ಆಧರಿತ ಉಗ್ರಪಡೆಗಳ ಹಿಂಸಾಚಾರಗಳಿಂದ ಈಗಾಗಲೇ ಎಂಟು ರಾಜ್ಯಗಳಾಗಿರುವ ಈಶಾನ್ಯ ಭಾಗವೂ ಇನ್ನೂ ಚೂರುಚೂರಾಗುವ ಆಂತಕವಿದ್ದೇ ಇದೆ.ಈಶಾನ್ಯ ರಾಜ್ಯಗಳ ಉದಾಹರಣೆಯೇಕೆ.ನೆರೆಯ ತಮಿಳುನಾಡಿನಲ್ಲಿಯೇ ಭಾಷೆ ಮತ್ತು ನಮ್ಮ ಸಂಸ್ಕೃತಿಯಗೇ ಪರಕೀಯವಾದ ’ದ್ರಾವಿಡ ಜನಾಂಗೀಯ’ ಎಂಬ ಹುಚ್ಚು ಕಲ್ಪನೆಯ ಚಳುವಳಿಯ ನೆಪದಲ್ಲಿ ಏನೆಲ್ಲಾ ಅಧ್ವಾನಗಳಾಯಿತು ಎಂಬುದನ್ನು ನೋಡಿದರೆ ಸಾಕಲ್ಲವೇ? ಈ ನಿಟ್ಟಿನಲ್ಲಿ ನೋಡಿದಾಗ ನೇಪಾಳಿಗಳ ಆತಂಕ ಸರಿಯಾಗಿದೆ ಎನಿಸುತ್ತದೆ.

ಮತ್ತಷ್ಟು ಓದು »

20
ಆಗಸ್ಟ್

Sin ಅನ್ನು ಭಾಷಾಂತರಿಸಿದ ಪಾಪವೇ ವಸಾಹತುಪ್ರಜ್ಞೆ

– ವಿನಾಯಕ ಹಂಪಿಹೊಳಿ

Colonial ConsciousnessSin ಶಬ್ದದ ಅರ್ಥವೇನು ಎಂದು ಕೇಳಿದರೆ ಎಗ್ಗಿಲ್ಲದೇ ಪಾಪ ಎಂದು ಉಚ್ಚರಿಸಿಬಿಡುತ್ತೇವೆ. ಇದರಲ್ಲಿ ಅಷ್ಟು ತಲೆಕೆಡಿಸಿಕೊಳ್ಳುವಂಥದ್ದೇನೂ ಇಲ್ಲ ಎಂದೇ ಅನ್ನಿಸುತ್ತದೆ. ಮಾಡಬಾರದ್ದನ್ನು ಮಾಡುವದು ಪಾಪ ಎಂದು ನಾವೂ ಹೇಳುತ್ತೇವೆ. ಪಾಶ್ಚಿಮಾತ್ಯ ಕ್ರೈಸ್ತರೂ ಹೇಳುತ್ತಾರೆ. ಹೀಗಾಗಿ ಒಂದು ಹಂತದಲ್ಲಿ Sin=ಪಾಪ ಎನ್ನುವದು ಒಪ್ಪಿತವೇ. ಹಾಗೆಯೇ sinner=ಪಾಪಿ ಎಂಬುದೂ ಸರಿ. ಆದರೆ ಇಲ್ಲೊಂದು ಸಮಸ್ಯೆಯಿದೆ. ಪಾಪದ ವಿರುದ್ಧ ಪದ ಏನು ಎಂದಾಗ ಕ್ಷಣವೂ ತಡಮಾಡದೇ ಪುಣ್ಯ ಎನ್ನುತ್ತೇವೆ. ಆದರೆ Sin ಶಬ್ದದ ವಿರುದ್ಧ ಪದ ಏನು ಎಂದು ಕೇಳಿದರೆ?

ಮುಗ್ಗರಿಸಿ ಬಿದ್ದ ಅನುಭವವಾಯಿತಲ್ಲವೇ? ಇರಲಿ, Thesaurus ನಲ್ಲಿ Sin ಗೆ ಎಷ್ಟೊಂದು ವಿರುದ್ಧಪದಗಳಿವೆಯೋ ಅವನ್ನೆಲ್ಲ ಗಮನಿಸೋಣ, ಅವುಗಳು advantage, good, goodness, good deed, kindness, obedience, right, virtue, perfection, behavior, morality.ಇವೆಲ್ಲ ಶಬ್ದಗಳೂ ಪುಣ್ಯದ ಸುತ್ತ ಗಿರಕಿ ಹೊಡೆಯುತ್ತವೆಯೇ ವಿನಃ ಒಂದಾದರೂ ಪುಣ್ಯವನ್ನು ಸಂಪೂರ್ಣವಾಗಿ ಪ್ರತಿನಿಧಿಸುವಷ್ಟು ಪುಣ್ಯ ಕಟ್ಟಿಕೊಂಡಿದೆಯೇ? “ನೀವು ಜೀವನದಲ್ಲಿ ಬಹಳಷ್ಟು ಪುಣ್ಯ ಗಳಿಸಿದ್ದೀರಿ” ಎನ್ನುವದನ್ನು ಹೇಗೆ ಭಾಷಾಂತರಿಸುತ್ತೀರಿ?

ಮತ್ತಷ್ಟು ಓದು »

11
ಆಗಸ್ಟ್

ನಾಡು-ನುಡಿ ಮರುಚಿಂತನೆ : ಬೌದ್ಧ ಮತ – ಸಂಘ ಮತ್ತು ಸಂಸಾರ

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಬುದ್ಧನಾವು ಇಂದು ಓದುತ್ತಿರುವ ಬೌದ್ಧ ಮತದ ಜನಪ್ರಿಯ ಇತಿಹಾಸದಲ್ಲಿ ಒಂದು ಸಮಸ್ಯೆಯಿದೆ. ಅದೆಂದರೆ ನಾವು ಕ್ರಿಶ್ಚಿಯಾನಿಟಿ ಹಾಗೂ ಇಸ್ಲಾಮಿನ ಮಾದರಿಗಳನ್ನಿಟ್ಟುಕೊಂಡು ಅವುಗಳ ಲಕ್ಷಣಗಳನ್ನು ಆರೋಪಿಸಿಕೊಂಡು ಬೌದ್ಧ ಮತ ಎಂಬುದನ್ನು ಊಹಿಸಿಕೊಳ್ಳುತ್ತಿರುತ್ತೇವೆ. ಅಂದರೆ ಬೌದ್ಧ ಮತವನ್ನು ಒಂದು ರಿಲಿಜನ್ನು ಎಂಬದಾಗಿ ಭಾವಿಸಿಕೊಂಡು ಪಾಶ್ಚಾತ್ಯ ವಿದ್ವಾಂಸರು ಮೊತ್ತಮೊದಲು ಅದನ್ನು ಅಧ್ಯಯನಕ್ಕೊಳಪಡಿಸಿದರು ಹಾಗೂ ಅವರನ್ನನುಸರಿಸಿ ಭಾರತೀಯರೂ ಇಂಥ ಅಧ್ಯಯನಗಳನ್ನು ಮುಂದುವರಿಸಿದರು.

ಬೌದ್ಧ ಮತದ ಕುರಿತು ನಮ್ಮ ಜನಪ್ರಿಯ ಇತಿಹಾಸದ ಪ್ರಕಾರ ಬುದ್ಧನು ಬುದ್ಧಿಸಂ ಎಂಬ ಒಂದು ಹೊಸ ಜಾತ್ಯತೀತ ಸಮಾಜದ ಹುಟ್ಟಿಗೆ ಕಾರಣನಾದನು. ಅವನು ಮಾಡಿದ ಉಪದೇಶಗಳು ಅವನ ಅನುಯಾಯಿಗಳ ಜೀವನವನ್ನು ನಿರ್ದೇಶಿಸುವ ನಿಯಮಗಳಾದವು. ಇಂಥ ನಿಯಮಗಳನ್ನು ತಿಳಿಸುವ ಬೌದ್ಧರ ಪವಿತ್ರ ಗ್ರಂಥವೇ ಪಾಳಿ ತ್ರಿಪಿಟಕ. ಇಂಥ ನಿಯಮಗಳಾದರೂ ಯಾವವು? ನಮಗೆ ಸದ್ಯಕ್ಕೆ ಗೊತ್ತಿರುವುದು ಒಂದೇ ಒಂದು ನಿಯಮ: ಅದೆಂದರೆ ಜಾತಿ ಭೇದವನ್ನು ನಿರಾಕರಿಸಿದ್ದು. ಅಂದರೆ ಬೌದ್ಧರ ಆಚರಣೆಗಳಲ್ಲಿ ಜಾತಿಯನ್ನಾಧರಿಸಿ ತರತಮಗಳನ್ನಾಗಲೀ, ವ್ಯತ್ಯಾಸವನ್ನಾಗಲೀ ಮಾಡುವಂತಿಲ್ಲ. ಬೌದ್ಧ ಸಂಘಗಳೆಂದರೆ ಚರ್ಚುಗಳಂತೇ. ಅವುಗಳ ಕೆಲಸ ಬೌದ್ಧರಲ್ಲದವರನ್ನು ಬೌದ್ಧ ಮತಕ್ಕೆ ಪರಿವರ್ತನೆ ಮಾಡುವುದು. ಬೌದ್ಧ ಮತದ ಜಾತ್ಯತೀತತೆಗೆ ಮನಸೋತು ವರ್ಣ ಸಮಾಜದಲ್ಲಿ ಸಾಮಾಜಿಕ ಸ್ಥಾನಮಾನಗಳನ್ನು ಕಳೆದುಕೊಂಡ ಜಾತಿಗಳೆಲ್ಲವೂ ಬೌದ್ಧರಾಗಿ ಸಮಾನತೆಯನ್ನು ಪಡೆದರು.ಈ ರೀತಿಯಲ್ಲಿ ಬೌದ್ಧ ಮತವು ಭಾರತ ಹಾಗೂ ಪೂರ್ವ ಏಶಿಯಾದಲ್ಲೆಲ್ಲ ಜನಪ್ರಿಯತೆಯನ್ನು ಪಡೆದು ವ್ಯಾಪಿಸಿಕೊಂಡಿತು. ಆದರೆ ಮಧ್ಯಕಾಲದಲ್ಲಿ ಭಾರತೀಯರೆಲ್ಲರೂ ಮತ್ತೆ ಬೌದ್ಧ ಮತವನ್ನು ಬಿಟ್ಟು ಹಿಂದೂಯಿಸಂಗೇ ಸೇರಿಕೊಂಡರು. ಬೌದ್ಧ ಮತವು ಭಾರತದಲ್ಲಿ ಅವನತಿ ಹೊಂದಿತು.  ಆದರೆ ಉಳಿದೆಡೆ ಉಳಿದುಕೊಂಡಿತು.
ಮತ್ತಷ್ಟು ಓದು »

20
ಜುಲೈ

ಕುವೆಂಪು ಮತ್ತು ಅಧ್ಯಾತ್ಮ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಕುವೆಂಪುಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. “ನಾನೃಷಿಃ ಕುರುತೇ ಕಾವ್ಯಂ” ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ‘Immediate feeling of unity of the self with God’ ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ ಪ್ರೇಮ, ಹೀಗೆ ಯಾವುದೇ ಶಾಶ್ವತ ಮೌಲ್ಯವೂ ದೇವರಾಗಬಹುದು. ಇವು ವ್ಯಕ್ತಿಯಲ್ಲಿ ಲೀನವಾಗುವ ಬಗೆ ಅಧ್ಯಾತ್ಮದ ಹಂತಕ್ಕೆ ಒಯ್ಯುತ್ತದೆ.

ತೀವ್ರ ವಿಚಾರವಾದಿ, ಅಧ್ಯಾತ್ಮವಾದಿ, ಅಧ್ಯಾತ್ಮ ಜೀವಿಯಾದ ಕುವೆಂಪು ಸುಲಭಗ್ರಾಹ್ಯರಲ್ಲ. ಅವರು ವಿಚಾರವಾದಿ ನಿಜ, ಆದರೆ ಕೇವಲ ಭೌತವಾದಿಯಲ್ಲ. ಅಧ್ಯಾತ್ಮವಾದಿ ನಿಜ, ಆದರೆ ಕರ್ಮಠರಲ್ಲ. ಅಧ್ಯಾತ್ಮ ಜೀವಿ ನಿಜ, ಆದರೆ ಸಂನ್ಯಾಸಿಯಲ್ಲ. ನಿರಂಕುಶಮತಿಗಾಗಿ ಅವರು ನೀಡುವ ಕರೆ,ಆತ್ಮಶ್ರೀಗಾಗಿಯೇ ವಿನಾ ಭೌತಿಕ ರುಚಿಗಳ ಆರೈಕೆ, ಪೂರೈಕೆಗಳಿಗಾಗಿ ಅಲ್ಲ.

ಯಾವುದೇ ಅಧ್ಯಾತ್ಮ ತತ್ತ್ವದ ಅಂತಿಮ ಬಿಂದು ವ್ಯಕ್ತಿ ನಿಷ್ಠತೆ, ವ್ಯಕ್ತಿ ಉದ್ಧಾರ. ಸಮೂಹವನ್ನು ಇಡಿಯಾಗಿ ಉದ್ಧರಿಸುವ ಆಧ್ಯಾತ್ಮಿಕ ಸೂತ್ರ ಇಲ್ಲವೇ ಇಲ್ಲ. ಭಗವದ್ಗೀತೆಯಲ್ಲಿ ಹೇಳುವ “ಉದ್ಧರೇದಾತ್ಮನಾತ್ಮನಂ” ಎಂಬ ಮಾತು ಅಕ್ಷರಶಃ ನಿಜ. ವ್ಯಕ್ತಿ ಸ್ವತಃ ಉದ್ಧಾರವಾಗಬೇಕು. ವ್ಯಕ್ತಿ ವ್ಯಕ್ತಿಗಳು ಕೂಡಿ ಒಂದು ಸಮಾಜ. ವ್ಯಕ್ತಿಗಳ ಉದ್ಧಾರವೇ ಸಮಾಜದ ಉದ್ಧಾರ. ಕುವೆಂಪು ಅವರ ಕಾವ್ಯ, ಸಾಹಿತ್ಯ ಸೃಷ್ಟಿಯ ಮುಖ್ಯ ಸೂತ್ರವೂ ವ್ಯಕ್ತಿಯ ಆತ್ಮ ಸ್ವಾತಂತ್ರ್ಯಕ್ಕಾಗಿ ತುಡಿಯುವುದೇ ಆಗಿದೆ. ನಮ್ಮ ಉದ್ಧಾರಕ್ಕಾಗಿ ಯಾರೋ ಒಬ್ಬರು ದುಡಿಯುತ್ತಾರೆ ಎಂದು ಬಯಸುವಂತಿಲ್ಲ. ಎಲ್ಲರೂ ದುಡಿಯುತ್ತಲೇ ಅವರವರ ಹಾದಿಯಲ್ಲಿ ನಡೆದು, ಉದ್ಧಾರ ಕಂಡುಕೊಳ್ಳಬೇಕೆಂಬುದು ಅವರ ಕಾಣ್ಕೆ. ಹಾಗಾಗಿಯೇ ಅವರ ಸಾಹಿತ್ಯ ಸರ್ವಸ್ವದ ಸಾರವೇ ಆಗಿರುವ ಸಪ್ತ ಸೂತ್ರಗಳಲ್ಲಿ, “ಮತ ತೊಲಗಿ ಅಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು ಹಾಗೂ ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾಗುವ ಎಲ್ಲವನ್ನೂ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ಪಡೆಯಬೇಕು” ಎಂದಿದ್ದಾರೆ.

ಮತ್ತಷ್ಟು ಓದು »

22
ಜೂನ್

ನಾಡು-ನುಡಿ ಮರುಚಿಂತನೆ : ಅಕ್ಷರಕ್ಕೂ,ಶಿಕ್ಷಣಕ್ಕೂ,ವಿದ್ಯೆಗೂ,ಜ್ಞಾನಕ್ಕೂ ಏನು ಸಂಬಂಧ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಜ್ಞಾನಸಾಧಾರಣವಾಗಿ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಯ ಕುರಿತು ಒಂದು ಆರೋಪವನ್ನು ಪದೇ ಪದೇ ಮಾಡಲಾಗುತ್ತದೆ: ಅದೆಂದರೆ  ಬ್ರಾಹ್ಮಣರು ಶೂದ್ರರನ್ನು ಹಾಗೂ ಅಸ್ಪೃಶ್ಯರನ್ನು ಅಕ್ಷರ ಜ್ಞಾನದಿಂದ ವಂಚಿಸಿದ್ದಾರೆ. ಆಕಾರಣದಿಂದಾಗಿ ಅವರಿಗೆ ಜ್ಞಾನವನ್ನೂ, ವಿದ್ಯೆಯನ್ನೂ ನಿರಾಕರಿಸಿದ್ದರು ಅಂತ. ನಮ್ಮ ಜಾತಿ ವ್ಯವಸ್ಥೆಯಲ್ಲಿ ಶೋಷಣೆಯ ಒಂದು ಲಕ್ಷಣ ಎಂಬಂತೆ ಕೆಲವು ಹಿತಾಸಕ್ತಿ ಪೀಡಿತ ಗುಂಪುಗಳು ಈ ಸಂಗತಿಯನ್ನು ತಪ್ಪದೇ ಹೇಳುತ್ತಿರುತ್ತವೆ.

ಹೀಗೆ ಹೇಳುವವರು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿರುತ್ತಾರೆ. ಆಧುನಿಕ ಶಿಕ್ಷಣವು ಅಕ್ಷರಾಭ್ಯಾಸಕ್ಕೂ ಶಿಕ್ಷಣಕ್ಕೂ ಒಂದು ಅವಿನಾಭಾವಿಯಾದ ಸಂಬಂಧ ಕಲ್ಪಿಸುತ್ತದೆ. ಆ ಕಾರಣದಿಂದಲೇ ಸಂಪೂರ್ಣ ಸಾಕ್ಷರತೆಯ ಕಾರ್ಯಕ್ರಮವನ್ನು ನಮ್ಮ ಸರ್ಕಾರವು ಹಮ್ಮಿಕೊಂಡಿದೆ ಹಾಗೂ ವಿಶ್ವಸಂಸ್ಥೆ ಕೂಡಾ ಅಕ್ಷರವನ್ನು ಅಭಿವೃದ್ಧಿಯ ಮಾನದಂಡವನ್ನಾಗಿ ಸ್ವೀಕರಿಸಿದೆ. ವಯಸ್ಕರಿಗೆ ಕೂಡಾ ಅವರು ಸಾಯುವುದರ ಒಳಗೆ ಒಮ್ಮೆಯಾದರೂ ಅಕ್ಷರಾಭ್ಯಾಸವನ್ನು ಮಾಡಿಸುವುದು ನಿರ್ಣಾಯಕ ಎಂದು ಭಾವಿಸಲಾಗಿದೆ. ಈ ರೀತಿಯ ಶಿಕ್ಷಣ ಪದ್ಧತಿಯಲ್ಲಿ ಜ್ಞಾನವನ್ನು ಪುಸ್ತಕವನ್ನು ಓದುವ ಮೂಲಕವೇ ಪಡೆಯುವುದು ಅತ್ಯವಶ್ಯ. ಇದು ಪಾಶ್ಚಾತ್ಯ ಸಂಸ್ಕೃತಿಯ ಕ್ರಮ. ಅಲ್ಲಿ ಸತ್ಯದೇವನ ವಾಣಿಯು ಅಂತಿಮವಾದ ಸತ್ಯವಾಗಿದ್ದು ಅದು ಬರೆಹದ ಮೂಲಕವೇ ಲಭ್ಯವಿರುವುದರಿಂದ ಬರೆಹವನ್ನು ಕಲಿಯುವುದು ನಿರ್ಣಾಯಕ.

ಮತ್ತಷ್ಟು ಓದು »