ನಾಡು-ನುಡಿ : ಮರುಚಿಂತನೆ – ಜಾತಿಗಣತಿ ಪ್ರತಿನಿಧಿಸುವುದೇನನ್ನು?
ಇಂಗ್ಲೀಷ್ ಮೂಲ:-ವಿವೇಕ್ ಧಾರೇಶ್ವರ್, ಸ್ಕಾಲರ್ ಇನ್ ರೆಸಿಡೆನ್ಸ್, ಸೃಸ್ಟಿ ಸ್ಕೂಲ್ ಆಫ್ ಡಿಸೈನ್, ಬೆಂಗಳೂರು
ಕನ್ನಡ ಅನುವಾದ: ಅಶ್ವಿನಿ. ಬಿ. ದೇಸಾಯಿ, ಆರೋಹಿ ಸಂಶೋಧನಾ ಸಂಸ್ಥೆ, ಬೆಂಗಳೂರು
ನಮ್ಮ ರಾಜ್ಯದಲ್ಲಿ ಜಾತಿಗಳನ್ನು ಲೆಕ್ಕ ಮಾಡುವ, ಕರ್ನಾಟಕ ಸರಕಾರದ ಉದ್ದೇಶದ ಸ್ವರೂಪವೇನು ಎಂಬುದು ನಮಗೆ ಅರ್ಥವಾಗದ ಸಂಗತಿ. ಈ ಗಣತಿಯು, ಗಂಭೀರವಾದ ಬೌದ್ದಿಕ ಪ್ರಕ್ರಿಯೆಯೋ, ಸರಕಾರದ ನೀತಿಗಳನ್ನು ಸುಲಭಮಾಡುವ ಮಾಹಿತಿ ಸಂಗ್ರಹಣೆಯೋ ಅಥವಾ ರಾಜಕೀಯ ಪ್ರೇರಿತವಾದದ್ದೋ ಎಂಬುದು ಇನ್ನೂ ಸರಿಯಾಗಿ ಅರ್ಥವಾಗುತ್ತಿಲ್ಲ, ಉದಾಹರಣೆ, ಜಾತಿಗಣತಿಯವರು ಬಂದು ನಮ್ಮ ಮನೆ ಬಾಗಿಲು ಬಡಿದರೆ, ಈ ಪ್ರಕ್ರಿಯೆ ಬಗ್ಗೆ, ಹಾಗೂ ಜಾತಿವ್ಯವಸ್ಥೆ ಬಗ್ಗೆ, ಅನುಮಾನವಿರುವ ನಮ್ಮಂಥವರು ಏನು ಹೇಳಬೇಕೆಂಬುದು ಒಂದು ದೊಡ್ದ ಪ್ರಶ್ನೆಯಾಗಿದೆ.
ಜಾತಿ ಗಣತಿಯವರು ನನ್ನ ಜಾತಿ ಯಾವುದೆಂದು ಕೇಳಿದಾಗ ನಾನು “ಕಂಪ್ಯೂಟರ್ ವಿಜ್ಞಾನಿ” ಅಥವಾ ‘ಲಿಬರಲ್’ ಅಥವಾ ಮಾರ್ಕಿಸ್ಟ್ ಎಂದು ಹೇಳಿದರೆ ಏನಾಗಬಹುದು? ‘ಬಡಗಿ’, ‘ಮಾಧ್ವ’ ಮತ್ತು ‘ಅಯ್ಯಂಗಾರ್’ ಸರಿಯಾದ ಉತ್ತರಗಳಾದರೆ, ನನ್ನ ಉತ್ತರಗಳೇಕೆ ಸರಿಯಲ್ಲ? ಮೇಲೆ ಹೇಳಿದ ಇಂಗ್ಲಿಷ್ ಪದಗಳನ್ನು, ಕನ್ನಡೀಕರಿಸಿದರೆ ‘ಗಣಕಿ’, ‘ಉದಾರಿ’, ‘ಎಡಪಂಥಿ’ ಎಂದಾಗುತ್ತವೆ. ಇವನ್ನು ನಾವೇಕೆ ಜಾತಿಗಣತಿಯ ಪಟ್ಟಿಗೆ ಸೇರಿಸಬಾರದು? ಮೇಲ್ಕಂಡ ಪ್ರಶ್ನೆಗಳು ನಮಗೆ ಈ ವಿಷಯದ ಬಗ್ಗೆ ಇರುವ ಅಸ್ಪಷ್ಟತೆ ಗೆ ಸ್ಪಷ್ಟ ಉದಾಹರಣೆ.
ನಮ್ಮಲ್ಲಿ ಅನೇಕರಿಗೆ ನಿಮ್ಮ ರಿಲಿಜನ್ ಯಾವುದು ಎಂದಾಗ, ಹಿಂದೂ ಎಂದು ಹೇಳುವುದು ಅಸಹಜವೆನಿಸುತ್ತದೆ. ಇಂತಹ ಪ್ರತಿಕ್ರಿಯೆ ಜಾತಿ ಎಂಬ ಪ್ರಭೇದಕ್ಕೂ ಅನ್ವಯಿಸುತ್ತದೆ. ನಮ್ಮ ದೈನಂದಿನ ಬದುಕಿನಲ್ಲಿ ಚರ್ಚೆ ಮಾಡುವಾಗ ತಾವು ಯಾವ ಮತದವರು? ಅಥವಾ ಯಾವ ಸಂಪ್ರದಾಯದವರು? ಎಂಬ ಪ್ರಶ್ನೆ ಎದುರಾಗುವುದುಸರ್ವೇಸಾಮಾನ್ಯ. ಇಂತಹ ಪ್ರಶ್ನೆಗಳಿಗೆ ಪಶ್ಚಿಮದಲ್ಲಿರುವುದು “ಎತ್ನಿಕ್” ಎಂಬ ಉತ್ತರಮಾತ್ರ. ಅದನ್ನು ವಿವರಿಸಲು ನಮ್ಮ ಬಳಿ ಶಬ್ದಗಳಿಲ್ಲ. ಜಾತಿ ಮತ್ತು ಮತ (ರಿಲಿಜನ್) ಈ ಅರ್ಥಕೊಡುವ ಶಬ್ದಗಳಾಗಿ ಮಾರ್ಪಟ್ಟಿವೆ. ಕಾರಣ, ಎತ್ನಿಕ್ಗೆ ಹೊಂದುವ ಶಬ್ದಗಳು ಇಲ್ಲಿಲ್ಲ.
ನಾಡು-ನುಡಿ : ಮರುಚಿಂತನೆ – ಭಕ್ತಿ ಮಾರ್ಗವನ್ನೇ ನಿರಾಕರಿಸುವವರಿಗೆ ಭಕ್ತರು ಹೇಗೆ ಅರ್ಥವಾದಾರು?
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ಇತ್ತೀಚೆಗೆ ಕನಕದಾಸರ ಜಯಂತಿಯ ಆಚರಣೆ ನಡೆಯಿತು.ಹಾಗೂ ಪತ್ರಿಕೆಗಳಲ್ಲಿ ಅವರ ಕುರಿತು ಲೇಖನಗಳು ಪ್ರಕಟವಾದವು. ಜೊತೆಗೇ ರಾಜಕಾರಣಿಗಳು ತಮ್ಮ ಭಾಷಣಗಳಲ್ಲಿ ನೀಡಿದ ಹೇಳಿಕೆಗಳೂ ವರದಿಯಾದವು. ಅವುಗಳಲ್ಲಿ ತೀರಾ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಪ್ರಗತಿಪರ ಧೋರಣೆಯೊಂದರ ಕುರಿತು ಇಲ್ಲಿ ಚರ್ಚಿಸುತ್ತೇನೆ.ನಮ್ಮ ವಚನಕಾರರು, ದಾಸರು ಇವರೆಲ್ಲರೂ ಶಿವ ಭಕ್ತರು, ವಿಷ್ಣು ಭಕ್ತರು ಎಂಬುದಾಗಿ ತಿಳಿದಿದ್ದೇವೆ. ಆದರೆ ಆಶ್ಚರ್ಯದ ವಿಷಯವೆಂದರೆ ಈ ಶರಣರ, ದಾಸರ ಭಕ್ತಿಯ ಪರಿಕಲ್ಪನೆಯ ಕುರಿತಾಗಲೀ, ಅವರು ಭಗವಂತನ ಕುರಿತು ಏನು ಹೇಳುತ್ತಾರೆ ಎಂಬುದರ ಕುರಿತಾಗಲೀ ಕುತೂಹಲವೇ ನಮ್ಮ ಬಹುತೇಕ ಸಾಮಾಜಿಕ ಚಿಂತಕರಿಗೆ ಅಪ್ರಸ್ತುತವಾದಂತಿದೆ. ಹಾಗೂ ಅಂಥ ಚಿತ್ರಣದ ಅಗತ್ಯವೇ ಇಲ್ಲ ಎಂಬ ಧೋರಣೆಯನ್ನು ಇಂಥ ಚಿಂತಕರು ಹಾಗೂ ಅವರಿಂದ ಪ್ರಭಾವಿತರಾದ ರಾಜಕಾರಣಿಗಳು ತಳೆದಂತಿದೆ. ಆ ಶರಣರು ಹಾಗೂ ದಾಸರೆಲ್ಲ ಲಿಂಗ, ಜಾತಿ, ವರ್ಗ ಸಮಾನತೆಗಾಗಿ ಹೋರಾಡಿದರು ಎಂಬುದೊಂದೇ ವಿಷಯ ಅಲ್ಲಿ ಮುಖ್ಯವಾಗುತ್ತದೆ. ಅದರಲ್ಲೂ ಅವರು ಜಾತಿಯ ತುಳಿತಕ್ಕೊಳಗಾಗಿದ್ದರು, ಹಾಗೂ ಅದರ ವಿರುದ್ಧ ಹೋರಾಡುವ ಏಕಮೇವ ಉದ್ದೇಶಕ್ಕಾಗಿಯೇ ಅವರು ಸಂತರಾದರು ಎಂದು ಬಿಂಬಿಸಲಾಗುತ್ತದೆ. ಇಂಥವರು ನಮ್ಮ ಭಕ್ತಿಯುಗದ ಸಂತರನ್ನು ಎಷ್ಟು ಅರ್ಥಮಾಡಿಕೊಂಡಿದ್ದಾರೆ?
ನಾಡು-ನುಡಿ : ಮರುಚಿಂತನೆ – ಹಿಂದೂ ಶಬ್ದಕ್ಕೆ ನಕಾರಾತ್ಮಕ ಅರ್ಥವೇಕೆ?
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ದಲಿತರನ್ನು ಹಿಂದೂ ಸಮಾಜದ ಒಳಗೆ ತರಬೇಕೆಂಬ ಪ್ರತಿಪಾದನೆ ಕಳೆದ ನೂರಾರು ವರ್ಷಗಳಿಂದ ನಡೆದು ಬಂದಿದೆ. ಹಿಂದೂ ಸಮಾಜದ ಐಕ್ಯತೆಯನ್ನು ಸಾಧಿಸಬೇಕೆನ್ನುವ ರಾಷ್ಟ್ರೀಯ ನಾಯಕರೆಲ್ಲರೂ ಇಂಥ ಕಾರ್ಯಕ್ರಮಗಳ ಮಹತ್ವವನ್ನು ಒಪ್ಪಿದ್ದಾರೆ. ಮತ್ತೊಂದೆಡೆ ಈ ಕಾರ್ಯಕ್ರಮವನ್ನು ಒಂದು ಹುನ್ನಾರವೆಂಬಂತೆ ನೋಡುವ ಹಾಗೂ ಆ ಕಾರಣದಿಂದ ಅದನ್ನು ತಿರಸ್ಕರಿಸುವ ಪ್ರಯತ್ನಗಳೂ ನೂರಾರು ವರ್ಷಗಳಿಂದ ನಡೆದಿವೆ. ಹುನ್ನಾರವೇಕೆಂದರೆ, ಜಾತಿ ವ್ಯವಸ್ಥೆಯ ಹಿಂದೂ ಸಮಾಜದೊಳಗೆ ದಲಿತರನ್ನು ಮತ್ತೆ ಸೇರಿಸಿ ಶೋಷಿಸುವ ಉದ್ದೇಶದಿಂದ ಸಂಪ್ರದಾಯಸ್ಥ ಹಿಂದೂಗಳು ಈ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ ಎಂಬ ಆರೋಪ. ಆದರೆ ಜಾತಿ ವ್ಯವಸ್ಥೆಯು ಹಿಂದೂ ಸಮಾಜದ ಲಕ್ಷಣವಾದರೆ, ಹಾಗೂ ದಲಿತರು ಹಿಂದೂ ಸಮಾಜದೊಳಗೆ ಇಲ್ಲ ಅಂತಾದರೆ ಅವರು ಇದುವರೆಗೆ ಜಾತಿ ವ್ಯವಸ್ಥೆಗೆ ಒಳಪಟ್ಟಿಲ್ಲ ಎಂದು ಇಂಗಿತವೆ? ಅಥವಾ ಜಾತಿವ್ಯವಸ್ಥೆಯ ಹೊರಗಿದ್ದೂ ಅವರನ್ನು ಸಾವಿರಾರು ವರ್ಷಗಳ ವರೆಗೆ ಶೋಷಿಸಲು ಹಿಂದೂಗಳಿಗೆ ಸಾಧ್ಯವಾಗಿದ್ದೇ ಹೌದಾದಲ್ಲಿ ಆ ಕೆಲಸವನ್ನೇ ಮಾಡಲು ಹಿಂದೂ ಸಮಾಜದೊಳಗೆ ಅವರನ್ನು ಹೊಸತಾಗಿ ಸೇರಿಸಿಕೊಳ್ಳುವ ಅಗತ್ಯವೇಕೆ? ಒಟ್ಟಿನಲ್ಲಿ ಇದು ಒಂದು ಒಗಟಾಗಿ ಬಿಡುತ್ತದೆ.
ಈ ಒಗಟು ಏಕೆ ಹುಟ್ಟುತ್ತದೆಯೆಂದರೆ ನಮ್ಮ ಸಂಸ್ಕೃತಿಯ ಇತಿಹಾಸವನ್ನು ಕಟ್ಟುವಾಗ ಪರಸ್ಪರ ಸುಸಂಬದ್ಧವಲ್ಲದ ಅನೇಕ ವಿವರಗಳನ್ನು ಒಟ್ಟಿಗೆ ತರಲಾಗಿದೆ. ಅವುಗಳಲ್ಲಿ ಒಂದು ಹಿಂದೂಯಿಸಂ ಎಂಬ ರಿಲಿಜನ್ನಿನ ಕಲ್ಪನೆ, ಮತ್ತೊಂದು ಆರ್ಯರ ಆಕ್ರಮಣದ ಕಥೆ. ಭಾರತದಲ್ಲಿ ಹಿಂದೂಯಿಸಂ ಎಂಬ ರಿಲಿಜನ್ನಿದೆ, ಅದಕ್ಕೆ ಬ್ರಾಹ್ಮಣರು ಪುರೋಹಿತಶಾಹಿಗಳು, ಇದರಲ್ಲಿ ಮೂರ್ತಿಪೂಜೆ ಜಾತಿ ವ್ಯವಸ್ಥೆಗಳಂಥ ಅನಿಷ್ಟ ಆಚರಣೆಗಳಿವೆ ಎಂಬ ಕಥೆ 19ನೆಯ ಶತಮಾನದಲ್ಲೇ ಗಟ್ಟಿಯಾಯಿತು. ಪಾಶ್ಚಾತ್ಯರು ಕ್ಯಾಥೋಲಿಕ್ ಚರ್ಚಿನಂತೇ ಇದೊಂದು ಭ್ರಷ್ಟವಾದ ರಿಲಿಜನ್ನು ಎಂದು ಭಾವಿಸಿದ್ದರು. ಆ ಸಂದರ್ಭದಲ್ಲಿ ರಾಜಾ ರಾಮಮೋಹನರಾಯರಂಥವರು ಹಿಂದೂಯಿಸಂ ಮೂಲತಃ ಉದಾತ್ತವಾದ ರಿಲಿಜನ್ನಾಗಿದೆ ಎಂಬ ನಿರೂಪಣೆಯನ್ನು ಗಟ್ಟಿಮಾಡತೊಡಗಿದರು.ಈ ನಿರೂಪಣೆಗೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯ ಏಕದೇವತಾ ತತ್ವವೇ ಆಧಾರವಾಯಿತು.ಅಂದರೆ ಹಿಂದೂಯಿಸಂನ ಶುದ್ಧ ರೂಪವು ವೇದಾಂತದಲ್ಲಿ ಇದೆ ಎಂದಾಯಿತು.
ನಾವು, ನಮ್ಮ ಹರಕೆ, ನಮ್ಮ ಸೇವೆ!
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ದಿನಾಂಕ 19-04-2015 ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಮಾದಪ್ಪನ ಸನ್ನಿಧಿಯಲ್ಲಿ ಸಣ್ಣ ಸ್ವಚ್ಛಭಾರತ್” ಲೇಖನ ಪ್ರಕಟವಾಯಿತು. ಇದರಲ್ಲಿ ಜಾಗದ ಮಿತಿಯಿಂದಲೋ ಸೈದ್ಧಾಂತಿಕ ಮಿತಿಯಿಂದಲೋ ಲೇಖನದ ಬಹುತೇಕ ಭಾಗಗಳಿಗೆ ಕತ್ತರಿ ಪ್ರಯೋಗವಾಗಿತ್ತು. ಅದರ ಪೂರ್ಣಪಾಠ ಇಲ್ಲಿದೆ.
ಮಲೆ ಮಹದೇಶ್ವರ ಬೆಟ್ಟ. ಬೆಳಿಗ್ಗೆ ಆರು ಗಂಟೆಯ ಸಮಯ. ದೇವಾಲಯದ ಮುಂಭಾಗ ರಾತ್ರಿ ಬಂದ ಯಾತ್ರಿಗಳು ಅನುದ್ದೇಶಪೂರ್ವಕ ಚೆಲ್ಲಿದ ಕಸಕಡ್ಡಿಗಳು ಅಲ್ಲಲ್ಲಿ ಹರಡಿದ್ದವು. ಹರಕೆ ತೀರಿಸಲು ಬಂದ ಭಕ್ತಾದಿಗಳಿಂದ ಬಗೆಬಗೆಯ ಆಚರಣೆಗಳು ಸುತ್ತಲೂ ನಡೆಯುತ್ತಿದ್ದವು. ಮುಖ್ಯ ದೇಗುಲದ ಮುಂಭಾಗದಲ್ಲಿರುವ ಕಲ್ಯಾಣಿ ಪಕ್ಕದ ಜಡೆ ಮಾದೇಶ್ವರ ಗುಡಿಯ ಮುಂದೆ ಹತ್ತಾರು ಹೆಂಗಸರು ಮಕ್ಕಳು ಸೇರಿಕೊಂಡಿದ್ದರು. ಒಬ್ಬ ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದಂತೆ ಸುತ್ತ ನೆರೆದಿದ್ದವರು ಒಕ್ಕೊರಲಲ್ಲಿ “ಉಘೇ ಉಘೇ” ಅನ್ನುತ್ತಿದ್ದರು. ಗುಡಿಯ ಮುಂದೆ ಕತ್ತೆಯೊಂದು ತರಬೇತಿ ನೀಡಿದ್ದಾರೇನೋ ಎಂಬಂತೆ ಸ್ತಬ್ದವಾಗಿ ನಿಂತಿತ್ತು. ಕೆಲವು ಹೆಂಗಸರು ಅದರ ಕಾಲು ತೊಳೆದರು. ಮತ್ತೆ ಕೆಲವರು ಅದಕ್ಕೆ ಮಲ್ಲಿಗೆ ಹಾರ ತೊಡಿಸಿದರು. ಮತ್ತೆ ಹಲವರು ಅರಿಶಿಣ ಕುಂಕುಮ ಹಾಕಿ ಅದರ ಕಾಲಿಗೆ ಅಡ್ಡ ಬಿದ್ದರು. ಇನ್ನು ಕೆಲವರು ಆರತಿ ಬೆಳಗಿದರು.
ಕತ್ತೆಯ ಪಕ್ಕದಲ್ಲಿ ಹೊಚ್ಚ ಹೊಸ ತೆಂಗಿನ ಗರಿಯಿಂದ ತಯಾರಿಸಿದ ಒಂದಿಷ್ಟು ಪೊರಕೆಗಳನ್ನು ಸಾಲಾಗಿ ಜೋಡಿಸಿದ್ದರು. ಈ ಪೊರಕೆಗಳಿಗೆ ಅರಿಶಿನ ಕುಂಕುಮ ಹಾಕಿ, ಹೂವು ಏರಿಸಿ ಎಲ್ಲರೂ ಕೈ ಮುಗಿದರು. ಒಬ್ಬೊಬ್ಬರೂ ಒಂದೊಂದು ಪೊರಕೆಯನ್ನು ಕೈಗೆತ್ತಿಕೊಂಡರು. ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದ. ಉಳಿದವರು “ಉಘೇ ಉಘೇ” ಅನ್ನುತ್ತ ಸುತ್ತಲ ಕಸ ಕಡ್ಡಿಗಳನ್ನು ಗುಡಿಸಿ ಸ್ವಚ್ಛಮಾಡತೊಡಗಿದರು. ಅರ್ಧಗಂಟೆಯಲ್ಲಿ ಸುತ್ತಲ ಪರಿಸರ ತೊಳೆದಿಟ್ಟಂತೆ ಕಂಗೊಳಿಸತೊಡಗಿತು.
ನಾಡು-ನುಡಿ : ಮರುಚಿಂತನೆ – ನೆಹರು ಸೆಕ್ಯುಲರಿಸಂ ಯಾರ ವಾರಸುದಾರ?
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ನೆಹರು ಅವರು ಮಹಾತ್ಮಾ ಗಾಂಧಿಯವರ ಪಟ್ಟದ ಶಿಷ್ಯ. ಅಷ್ಟಾಗಿಯೂ ನೆಹರೂ ಅವರ ನೀತಿಗಳು ಹಾಗೂ ಕಾರ್ಯಕ್ರಮಗಳು ದೇಶವನ್ನು ಗಾಂಧಿವಾದದ ವಿರುದ್ಧ ದಿಶೆಗೆ ಒಯ್ದವು ಎಂಬುದಾಗಿ ವಿದ್ವಾಂಸರ ಅಂಬೋಣ. ಉದಾಹರಣೆಗೆ ಗಾಂಧಿಯವರ ಗ್ರಾಮ ಸ್ವರಾಜ್ಯ ಕಲ್ಪನೆ, ಆಧುನೀಕರಣದ ಕುರಿತ ವಿರೋಧ, ಇವೆಲ್ಲವೂ ನೆಹರೂ ಯುಗದ ನಂತರ ರಾಜಕಾರಣದ ಕಸದ ಬುಟ್ಟಿ ಸೇರಿದ್ದು ಈಗ ಇತಿಹಾಸವಾಗಿದೆ. ಹಾಗಾಗಿ ಯಾರೂ ಈ ವಿಷಯದಲ್ಲಿ ನೆಹರೂ ಅವರು ಗಾಂಧಿಯವರ ಶಿಷ್ಯತ್ವವನ್ನು ಪೂರೈಸಿದರು ಎನ್ನುವ ಸಾಹಸಕ್ಕೆ ಹೋಗಲಾರರು. ಆದರೆ ಅಷ್ಟಾಗಿಯೂ ಕೂಡ ನೆಹರೂ ಅವರು ಗಾಂಧಿಯವರ ಶಿಷ್ಯರಾಗಿ ಉಳಿದುಕೊಳ್ಳುವುದು ಸೆಕ್ಯುಲರ್ ನೀತಿಯಲ್ಲಿ ಎಂಬುದು ನೆಹರೂ ಅವರ ಪರ ವಿರೋಧಿಗಳಿಬ್ಬರಲ್ಲೂ ಮನೆಮಾಡಿರುವ ಅನ್ನಿಸಿಕೆ. ಭಾರತದಲ್ಲಿ ಹಿಂದುತ್ವವಾದಿಗಳನ್ನು ನಿಯಂತ್ರಿಸುವ ಹಾಗೂ ಅಲ್ಪಸಂಖ್ಯಾತರ ಹಿತವನ್ನು ರಕ್ಷಿಸುವ ಕುರಿತಂತೆ ತಮ್ಮ ಗುರುವಿನ ಆಲೋಚನೆಗಳನ್ನು ನೆಹರೂ ಕಾರ್ಯರೂಪಕ್ಕೆ ಸಮರ್ಥವಾಗಿ ಇಳಿಸಿದವರು ಎಂಬುದರಲ್ಲಿ ಇಂದು ಯಾರಿಗಾದರೂ ಸಂದೇಹವಿದೆ ಎನ್ನಿಸುವುದಿಲ್ಲ. ಈ ಮೇಲಿನ ಕೊನೆಯ ಅಂಶವನ್ನು ಮಾತ್ರ ಕಾಂಗ್ರೆಸ್ಸು ಒತ್ತಿ ಹೇಳಿ ತಾನು ಗಾಂಧೀಜಿಯವರ ನಿಜವಾದ ವಾರಸುದಾರ ಎನ್ನುತ್ತ ಬಂದಿದೆ. ಆದರೆ ನೆಹರು ಸೆಕ್ಯುಲರಿಸಂಗೆ ಗಾಂಧಿಯವರ ವಾರಸುದಾರಿಕೆ ಎಷ್ಟಿದೆ?
ಇಂದು ಗಾಂಧೀ ಸೆಕ್ಯುಲರಿಸಂ ಅಂತ ಪ್ರತ್ಯೇಕವಾಗಿ ಯಾವುದೂ ಕಣ್ಣಿಗೆ ಕಾಣುವುದಿಲ್ಲ. ನೆಹರು ಸೆಕ್ಯುಲರಿಸಮ್ಮಿನ ಇಂದಿನ ವಾರಸುದಾರರ ಚಿಂತನೆಗೂ ಗಾಂಧೀ ಚಿಂತನೆಗೂ ಇರುವ ಬಿರುಕುಗಳನ್ನು ಗಮನಿಸಿದರೆ ಈ ವಾರಸುದಾರಿಕೆಯ ಸ್ವರೂಪವು ಸ್ಪಷ್ಟವಾಗಬಹುದು. ನೆಹರೂ ಕಾಲದಲ್ಲಿ ಪ್ರಚಲಿತದಲ್ಲಿ ಬಂದ ಸೆಕ್ಯುಲರಿಸಂಗೆ ಅಲ್ಪಸಂಖ್ಯಾತರ ಓಲೈಕೆಯ ರಾಜಕೀಯವನ್ನು ಬಿಟ್ಟರೆ ಅದರಲ್ಲಿ ಸೆಕ್ಯುಲರ್ ಆದದ್ದು ಏನೂ ಕಾಣಿಸುವುದಿಲ್ಲ. ಹಾಗೂ ಹಿಂದೂ ಸಂಪ್ರದಾಯಗಳ ಕುರಿತು ಜಿಗುಪ್ಸೆ, ಅವಹೇಳನವೂ ಕೂಡ ಈ ಸೆಕ್ಯುಲರಿಸಂನ ಒಂದು ಲಕ್ಷಣ. ಅಂದರೆ ಹಿಂದೂ ಪರಂಪರೆಯು ಅನೈತಿಕ ಸಮಾಜ ವ್ಯವಸ್ಥೆಯನ್ನು, ಅರ್ಥಾತ್ ಜಾತಿವ್ಯವಸ್ಥೆಯನ್ನು ಎತ್ತಿ ಹಿಡಿಯುತ್ತದೆ, ಸಮಸ್ತ ಸಂಸ್ಕೃತ ಗ್ರಂಥಗಳೆಲ್ಲವೂ ಬ್ರಾಹ್ಮಣೇತರರ ಶೋಷಣೆಗಾಗಿಯೇ ರಚನೆಯಾಗಿವೆ, ಈ ಸಮಾಜವನ್ನು ಆದಷ್ಟೂ ಹಿಂದೂ ಸಂಪ್ರದಾಯಗಳ ಹಿಡಿತದಿಂದ ಹೊರತಂದ ಹೊರತೂ ಅದರ ಉದ್ಧಾರ ಸಾಧ್ಯವಿಲ್ಲ ಎನ್ನುವುದೇ ಇಂದಿನ ಸೆಕ್ಯುಲರಿಸಂ ಆಗಿದೆ. ಈ ಸೆಕ್ಯುಲರಿಸಂ ಪ್ರಕಾರ ಹಿಂದೂ ಸಂಪ್ರದಾಯಗಳಲ್ಲಿನ ಮೌಢ್ಯದ ನಿರ್ಮೂಲನೆಗಾಗಿ ಕಾನೂನುಗಳನ್ನು ಮಾಡುವುದೇ ಮುಖ್ಯ ಕಾರ್ಯಕ್ರಮ.
“ಧರ್ಮ”ದ ದಾರಿ ತಪ್ಪಿಸುತ್ತಿರುವ ಹಿರಿಯರು;ಇಲ್ಲದ ಹಿಂದೂ ರಿಲಿಜನ್ನಿನ ಭ್ರಮೆಯಲ್ಲಿ ಕಿರಿಯರು
– ರಾಕೇಶ್ ಶೆಟ್ಟಿ
ಕಳೆದ ಜೂನ್ ೯ರಂದು ನಡೆದಿದ್ದ ಮೌಢ್ಯಮುಕ್ತ ಸಮಾಜ,ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಕಲ್ಬುರ್ಗಿಯವರು,“ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು” ಎಂದು ಹೇಳಿ ಸುದ್ದಿಯಾಗಿದ್ದರು. ಈಗ ಮತ್ತೆ, ಗದುಗಿನಲ್ಲಿ ಆಯೋಜಿಸಲಾಗಿದ್ದ ’ಸಮಾಜಶಾಸ್ತ್ರ,ಕನ್ನಡಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಚಾರಗೋಷ್ಠಿ’ಯಲ್ಲಿ, “ಹಿಂದುಗಳಿಗೆ ಧರ್ಮಗ್ರಂಥವೇ ಇಲ್ಲ.ಭಗವದ್ಗೀತೆ ಹಿಂದುಗಳ ಧರ್ಮ ಗ್ರಂಥವಲ್ಲ,ಅದೊಂದು ವಚನ ಸಾಹಿತ್ಯ… ರಾಜ್ಯ ಸರ್ಕಾರ ನಡೆಸಲು ತೀರ್ಮಾನಿಸಿರುವ ಜಾತಿಜನಗಣತಿಯ ಪ್ರಶ್ನಾವಳಿಯಲ್ಲಿ ಧರ್ಮ,ಜಾತಿ,ಉಪಜಾತಿಗೊಂದು ಪ್ರತ್ಯೇಕ ಕಾಲಂ ನಿಗದಿಪಡಿಸಲಾಗಿದೆ.ಜಾತಿ ಜನಗಣತಿಯಲ್ಲಿ ಧರ್ಮ ಯಾಕೆ ಬೇಕು.ಏಕೆಂದರೆ ಧರ್ಮ ಮತ್ತು ಜಾತಿ ಎರಡೂ ಒಂದೇ.ಜೈನ ಧರ್ಮವೂ ಹೌದು,ಜಾತಿಯೂ ಹೌದು.ಅದರಂತೆ ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಬೌದ್ಧ ಧರ್ಮವೂ ಹೌದು,ಜಾತಿಯೂ ಹೌದು.ಹೀಗಿದ್ದಾಗ ಇಂತಹ ಅನವಶ್ಯಕ ಕಾಲಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆಂದು ವರದಿಯಾಗಿತ್ತು.
ಡಾ.ಕಲ್ಬುರ್ಗಿಯವರ ಹೇಳಿಕೆಯನ್ನು ವಿರೋಧಿಸಿ,ಹಿರಿಯ ಸಂಶೋಧಕರಾದ ಡಾ.ಎಂ ಚಿದಾನಂದ ಮೂರ್ತಿಗಳು ವಿಜಯವಾಣಿಯ ಜನಮತ ವಿಭಾಗದಲ್ಲಿ ಪತ್ರವೊಂದನ್ನು ಬರೆದು ’ಕಲ್ಬುರ್ಗಿಯವರು ಗದುಗಿನಲ್ಲಿ ಮಾತನಾಡುತ್ತ ’ಹಿಂದೂ ಎಂಬ ಧರ್ಮವೇ ಇಲ್ಲ’ ಎಂದು ವಿತಂಡವಾದ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ’ ಎನ್ನುತ್ತಾ ಮುಂದುವರೆದೂ ’ಧರ್ಮ ಎಂಬ ಶೀರ್ಷಿಕೆಯಡಿಯಲ್ಲಿ ಹಿಂದೂ ಎಂದು ದಾಖಲಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ.’ಹಿಂದೂ ವಿವಾಹ ಕಾನೂನು’ ಎಂಬ ಕಾನೂನು ಕೂಡ ಇದೆ.ಕಲ್ಕತ್ತೆಯ ಮಠವೊಂದು ತಾನು ಹಿಂದು ವ್ಯಾಪ್ತಿಗೆ ಬರುವುದಿಲ್ಲವೆಂದಾಗ,೧೯೯೫ರಲ್ಲಿ ಸರ್ವೋಚ್ಚ ನ್ಯಾಯಾಲಯದ ಪೂರ್ಣಪೀಠವು ಅದು ’ಹಿಂದು ಧರ್ಮಕ್ಕೆ ಸೇರಿದ ಮಠ” ಎಂದು ತೀರ್ಪು ನೀಡಿದೆ.ಗಾಂಧೀಜಿ ತಮ್ಮನ್ನು ’ಸನಾತನಿ ಹಿಂದೂ’ ಎನ್ನುತ್ತಾರೆ.ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ತಮ್ಮನ್ನು ’ಹಿಂದು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ… ” ಇತ್ಯಾದಿ ಉದಾಹರಣೆಗಳನ್ನು ನೀಡಿದ್ದಾರೆ.
ಹಿಂದೂ ಸಂಸ್ಕೃತಿಯ ಕುರಿತು ವಿವೇಕಾನಂದರ ವಿಚಾರಗಳು
– ಪ್ರೊ.ರಾಜಾರಾಮ ಹೆಗಡೆ,
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
೧.ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
೨.ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
೩.ವಿವೇಕಾನಂದರ ವಿಚಾರಗಳ ಐತಿಹಾಸಿಕ ಸಂದರ್ಭ
ವಿವೇಕಾನಂದರ ಗುರಿಯನ್ನು ಒಂದೇ ಸಾಲಿನಲ್ಲಿ ಹೇಳಬಹುದಾದರೆ ‘ಹಿಂದೂ ಸಂಸ್ಕೃತಿಯ ಉದಾತ್ತ ಧ್ಯೇಯಗಳ ಕುರಿತು ಜಾಗೃತಿ ಮೂಡಿಸುವುದು’ ಎನ್ನಬಹುದು. ಆದರೆ ಈ ಒಂದು ಸಾಲೇ ನಮಗಿಂದು ಅರ್ಥವಾಗದ ಸ್ಥಿತಿಗೆ ಬಂದಿದ್ದೇವೆ ಎಂಬುದೊಂದು ವಿಪರ್ಯಾಸ. ಅದಕ್ಕೆ ಕಾರಣ ಕಳೆದ ನೂರು ವರ್ಷಗಳಲ್ಲಿ ಭಾರತೀಯ ರಾಜಕೀಯದಲ್ಲಿ ನಡೆದಿರುವ ಬೆಳವಣಿಗೆಗಳು. ಹಿಂದೂ ಎಂಬ ಶಬ್ದವನ್ನು ಇಂದು ನಿರ್ವಿಕಾರವಾಗಿ, ವಸ್ತುನಿಷ್ಠವಾಗಿ ನೋಡುವುದೇ ನಮಗೆ ಸಾಧ್ಯವಿಲ್ಲದಂತಾಗಿದೆ. ಒಂದೆಡೆ ಹಿಂದುತ್ವದ ರಾಜಕೀಯದಿಂದಾಗಿ ಅದನ್ನು ಭಾವನಾತ್ಮಕವಾಗಿ ಕ್ರೈಸ್ತ, ಇಸ್ಲಾಂ ಎಂಬ ಪ್ರಭೇದಗಳಿಗೆ ಪ್ರತಿಯಾಗಿ ನಮ್ಮೊಂದು ಅಹಂ ಎಂಬಂತೇ ನೋಡುವುದನ್ನು ಕಲಿತಿದ್ದೇವೆ,ಅಥವಾ ಪ್ರಗತಿಪರ ಚಳವಳಿಗಳ ರಾಜಕೀಯದಿಂದಾಗಿ ಅದಕ್ಕೆ ಇಲ್ಲದ ಹಲ್ಲು ಉಗುರುಗಳನ್ನು ಆರೋಪಿಸಿ ಅದರ ಕುರಿತು ಸಂದೇಹ ಹಾಗೂ ಭಯಗಳ ಮೂಲಕ ಪ್ರತಿಕ್ರಿಯಿಸುವುದನ್ನು ಕಲಿತಿದ್ದೇವೆ. ಎರಡೂ ಪಕ್ಷಗಳೂ ಈ ಶಬ್ದಕ್ಕೆ ನಿರ್ದಿಷ್ಟ ರಾಜಕೀಯ ಅರ್ಥಗಳನ್ನು ರೂಢಿಸಿಬಿಟ್ಟಿವೆ. ವಿವೇಕಾನಂದರ ಕುರಿತು ನಮ್ಮ ತಲೆಮಾರಿನವರ ಪ್ರತಿಕ್ರಿಯೆಗಳು ಈ ಅರ್ಥಗಳಿಂದ ಪ್ರಭಾವಿತವಾಗಿವೆ ಎಂಬುದು ಸ್ಪಷ್ಟ.
ವಿವೇಕಾನಂದರ ವಿಚಾರಗಳ ಐತಿಹಾಸಿಕ ಸಂದರ್ಭ
– ಪ್ರೊ.ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
೧.ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
೨.ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
ಕಳೆದೆರಡು ಅಂಕಣಗಳಲ್ಲಿ ವಿವೇಕಾನಂದರು ಸಮಾಜ ಸುಧಾರಣೆಯ ಕುರಿತು ಹಾಗೂ ಜಾತಿಯ ಕುರಿತು ಏನು ಹೇಳುತ್ತಾರೆ ಎಂಬುದನ್ನು ನೋಡಿದೆವು. ಪ್ರಗತಿಪರರು ಜಾತಿ ಪದ್ಧತಿಯ ಹಾಗೂ ಬ್ರಾಹ್ಮಣರ ಕುರಿತ ಅವರ ಟೀಕೆಗಳು, ಕ್ರೈಸ್ತ, ಇಸ್ಲಾಂ ಮತಗಳ ಕುರಿತು ಹೇಳಿದ ಸಕಾರಾತ್ಮಕ ಮಾತುಗಳನ್ನಷ್ಟೇ ಎತ್ತಿ ಹೇಳಿದ್ದಾರೆ. ಮತ್ತೊಂದು ಥರದ ಹೇಳಿಕೆಗಳನ್ನು ನಾನು ಪ್ರಸ್ತುತ ಪಡಿಸಿದ್ದೇನೆ. ಅಲ್ಲಿ ಅವರು ಸಮಾಜ ಸುಧಾರಕರನ್ನು ಟೀಕಿಸುತ್ತಾರೆ ಹಾಗೂ ಜಾತಿ, ಬ್ರಾಹ್ಮಣ ಇತ್ಯಾದಿಗಳ ಕುರಿತು ತುಂಬಾ ಹೆಮ್ಮೆಯಿಂದ ಮಾತನಾಡುತ್ತಾರೆ. ಈ ಎರಡೂ ರೀತಿಯ ಹೇಳಿಕೆಗಳನ್ನು ಯಾವ ರೀತಿ ಜೋಡಿಸಿಕೊಂಡರೆ ವಿವೇಕಾನಂದರು ಒಟ್ಟಾರೆಯಾಗಿ ಏನು ಹೇಳುತ್ತಿದ್ದಾರೆ ಎಂಬುದು ಅರ್ಥವಾಗಬಹುದು? ಅದಕ್ಕೆ ಅವರ ಕಾಲಕ್ಕೆ ಹೋಗಬೇಕು. ವಿವೇಕಾನಂದರು ತಮ್ಮ ಕಾಲದ ಯಾವ ಸವಾಲುಗಳಿಗೆ ಉತ್ತರಿಸುತ್ತಿದ್ದರು?
ವಿವೇಕಾನಂದರು ರಾಮಕೃಷ್ಣರ ಶಿಷ್ಯರಾಗುವ ವೇಳೆಗಾಗಲೇ ಬಂಗಾಲದಲ್ಲಿ ಆಧುನಿಕ ವಿಚಾರಧಾರೆಯು ವಿದ್ಯಾವಂತರಲ್ಲಿ ತನ್ನ ಪ್ರಭಾವವನ್ನು ಸಾಕಷ್ಟು ಬೀರಿತ್ತು. ಪಾಶ್ಚಾತ್ಯ ಶಿಕ್ಷಣವೆಂದರೆ ಈ ಪ್ರಪಂಚದ ಕುರಿತು ವೈಜ್ಞಾನಿಕ ಚಿತ್ರಣಗಳನ್ನು ತಿಳಿದುಕೊಳ್ಳುವುದು.ಈ ಚಿತ್ರಣಗಳನ್ನಾಧರಿಸಿ ಭಾರತದಲ್ಲಿ ಸಮಾಜ ಸುಧಾರಣೆಗಳು ಮೊದಲುಗೊಂಡವು. ಭಾರತೀಯ ಸಮಾಜದಲ್ಲಿ ಉಳಿದೆಲ್ಲ ಸಮಾಜಗಳಲ್ಲಿ ಇರುವಂತೆ ದೌರ್ಜನ್ಯಗಳು, ಕ್ರೂರ ಆಚರಣೆಗಳು ಎಲ್ಲ ಇದ್ದವು. ಆದರೆ ಬ್ರಿಟಿಷರು ಭಾರತದಲ್ಲಿ ಇರುವ ಕ್ರೂರ ಆಚರಣೆಗಳೆಲ್ಲವೂ ಹಿಂದೂಯಿಸಂ ಎಂಬ ಭ್ರಷ್ಟ ರಿಲಿಜನ್ನಿನ ಲಕ್ಷಣಗಳು, ಇವನ್ನೆಲ್ಲ ಬ್ರಾಹ್ಮಣರು ಬಹು ಹಿಂದೆಯೇ ಸ್ವಲಾಭಕ್ಕಾಗಿ ಹುಟ್ಟುಹಾಕಿದ್ದಾರೆ.ಈ ಆಚರಣೆಗಳೆಲ್ಲವೂ ಸ್ವಾರ್ಥದ ಮೌಢ್ಯದ ಅನೈತಿಕ ತಳಹದಿಯ ಮೇಲೆ ನಿಂತಿವೆ, ಇತ್ಯಾದಿಯಾಗಿ ಅದಕ್ಕೊಂದು ಕಾರಣವನ್ನು ನೀಡಿದರು.ಹಾಗಾಗಿ ಇಂಥ ಕ್ರೂರ ಆಚರಣೆಗಳನ್ನು ನಿಲ್ಲಿಸಬೇಕಾದರೆ ಈ ಸಮಾಜದ ತಳಹದಿಯನ್ನೇ ನಾಶಗೊಳಿಸಬೇಕು ಎಂಬ ಅಭಿಪ್ರಾಯವನ್ನು ವಿದ್ಯಾವಂತರಲ್ಲಿ ಹುಟ್ಟುಹಾಕಿದರು.ಅಂದರೆ ಭಾರತೀಯರ ರಿಲಿಜನ್ನೇ ಭ್ರಷ್ಟವಾಗಿದೆ, ಅಮಾನವೀಯವಾಗಿದೆ ಎಂಬುದು ಈ ವಿದ್ಯಾವಂತರ ಸಾಮಾನ್ಯ ಜ್ಞಾನವಾಯಿತು.
ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
– ಪ್ರೊ.ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
ಸಾಧಾರಣವಾಗಿ ಇಂದು ವಿವೇಕಾನಂದರ ಕುರಿತು ಒಂದು ಅಭಿಪ್ರಾಯ ಚಾಲ್ತಿಯಲ್ಲಿರುವುದು ಕಂಡುಬರುತ್ತದೆ. ಅದೆಂದರೆ ಅವರು ಜಾತಿ ಪದ್ಧತಿಯ ನಿರ್ಮೂಲನೆಗಾಗಿ ಹೋರಾಡಿದರು ಎಂಬುದು. ವಿವೇಕಾನಂದರ ಕುರಿತ ಈ ಚಿತ್ರವು ಇಂದು ಎಷ್ಟು ಗಟ್ಟಿಯಾಗಿದೆಯೆಂದರೆ ಅವರ ಅನುಯಾಯಿಗಳು ಕೂಡ ಅವರ ಕುರಿತು ಮಾತನಾಡುವಾಗ ಈ ಅಂಶವನ್ನೇ ಮೊದಲು ಒತ್ತಿ ಹೇಳುತ್ತಾರೆ. ವಿವೇಕಾನಂದರ ಪ್ರಸ್ತುತತೆಯನ್ನು ಮನದಟ್ಟು ಮಾಡಿ ಕೊಡುವಾಗ ಅವರು ಹಿಂದೂ ಧರ್ಮದ ಶ್ರೇಷ್ಟತೆಯನ್ನು ಎತ್ತಿಹಿಡಿದಿದ್ದರು ಎನ್ನುವುದು ಅನಿವಾರ್ಯ.
ಆ ಅಂಶವನ್ನಿಟ್ಟುಕೊಂಡೇ ಹಿಂದುತ್ವವಾದಿಗಳು ವಿವೇಕಾನಂದರನ್ನು ತಮ್ಮ ಮೂಲಪುರುಷರೆಂಬಂತೆ ಪರಿಗಣಿಸುತ್ತಾರೆ. ಹಾಗಾಗಿ ಬಹುಶಃ ಇಂದಿನ ಸೆಕ್ಯುಲರ್ ಚಿಂತಕರು ಅವರು ಜಾತಿಯ ಕುರಿತು ಮಾಡಿದ ಟೀಕೆಗಳನ್ನು ಪ್ರಧಾನವಾಗಿ ಇಟ್ಟು ಅವರ ವಿಚಾರಗಳನ್ನು ಪ್ರಸ್ತುತ ಪಡಿಸುವ ಉಪಾಯಗಳನ್ನು ಬೆಳೆಸಿರಲೂ ಬಹುದು. ಒಟ್ಟಿನಲ್ಲಿ ವಿವೇಕಾನಂದರ ಸೆಕ್ಯುಲರೀಕರಣದ ಒಂದು ಭಾಗವಾಗಿ ಈ ಅಭಿಪ್ರಾಯವು ಜನಪ್ರಿಯತೆಯನ್ನು ಪಡೆದಿದೆ.
ಕರ್ನಾಟಕದಲ್ಲಿ ಕುವೆಂಪು ಅವರು ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿದ್ದರು ಹಾಗೂ ಅವರ ಮೂಲಕ ವಿವೇಕಾನಂದರ ವಿಚಾರಗಳು ಶೂದ್ರ ಚಳವಳಿಯ ಒಂದು ಭಾಗವಾಗಿ ಕನ್ನಡ ಚಿಂತಕರಿಗೆ ಪರಿಚಯಿಸಲ್ಪಟ್ಟಿವೆ. ಹಿಂದುತ್ವದವರು ಬ್ರಾಹ್ಮಣರ ವಕ್ತಾರರು ಎಂದು ಈ ಚಿಂತಕರು ಪರಿಗಣಿಸಿರುವುದರಿಂದ ವಿವೇಕಾನಂದರ ಮೂಲ ಆಶಯವನ್ನು ಇವರು ತಿರುಚಬಹುದೆಂಬ ಆತಂಕ ಕೂಡ ಈ ಚಿಂತಕರಲ್ಲಿದೆ. ಹಾಗಾಗಿ ಕುವೆಂಪು ಅವರು ಹಿಂದೂ ಪರಂಪರೆಯ ಶ್ರೇಷ್ಟತೆಯ ಕುರಿತು ವ್ಯಕ್ತಪಡಿಸುವ ಚಿಂತನೆಗಳನ್ನು ಅವರ ಆರಾಧಕರು ಈಗ ಮೂಲೆಗೆ ಹಾಕಿದಂತಿದೆ. ಅವರನ್ನೂ ಕೂಡ ಇಂದಿನ ಪ್ರಗತಿಪರರ ಆಕಾರಕ್ಕೆ ಒಗ್ಗಿಸುವ ಪ್ರಯತ್ನವೇ ಎದ್ದುಕಾಣುವಂತಿದೆ. ಒಟ್ಟಿನಲ್ಲಿ ವಿವೇಕಾನಂದರು ಜಾತಿವಿರೋಧಿ ಎಂಬ ಚಿತ್ರಣವನ್ನು ತಮಗೆ ಬೇಕಾದಂತೆ ಕಲ್ಪಿಸಿಕೊಳ್ಳಲಾಗುತ್ತಿದೆ. ವಿವೇಕಾನಂದರು ಜಾತಿಯ ಕುರಿತು ಏನು ಹೇಳುತ್ತಾರೆ?
ನಮ್ಮದು ಜ್ಞಾನ ಮಾರ್ಗ.ನಿಮ್ಮ ಮಾರ್ಗ ಯಾವುದು ಬುದ್ಧಿಜೀವಿಗಳೇ?
– ರಾಕೇಶ್ ಶೆಟ್ಟಿ
ಬುದ್ಧಿಜೀವಿ/ಸೆಕ್ಯುಲರ್/ಪ್ರಗತಿಪರರಿಗೆ ನಮಸ್ಕಾರ,
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದಿರುವ,ನಡೆಯುತ್ತಿರುವ ಬೌದ್ಧಿಕ ಫ್ಯಾಸಿಸಂನ ವಿರುದ್ಧ ನೀವೆಲ್ಲರೂ ಜನವರಿ ೩೦ನೇ ತಾರೀಖು ಬೆಂಗಳೂರಿನಲ್ಲಿ ಮೆರವಣಿಗೆ ಮತ್ತು ಬಹಿರಂಗ ಸಭೆಯೊಂದನ್ನು ಮಾಡಿದ್ದೀರಿ.ಆ ಸಭೆಯ ಕರಪತ್ರದ ಕೆಲವು ಸಾಲುಗಳ ಮೂಲಕ ನನ್ನ ಈ ಬಹಿರಂಗ ಪತ್ರವನ್ನು ಪ್ರಾರಂಭಿಸುತಿದ್ದೇನೆ.
“ತಾತ್ವಿಕವಾದ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಪರಸ್ಪರ ಗೌರವದಿಂದ ನಡೆದುಕೊಳ್ಳುವ ಸಂಸ್ಕೃತಿ ಕರ್ನಾಟಕದಲ್ಲಿತ್ತು. ಚಾರ್ವಾಕರಿಗೆ ಕೂಡ ನಮ್ಮ ಚರ್ಚೆಯ ಚಾವಡಿಯಲ್ಲಿ ಒಂದಿಷ್ಟು ಜಾಗವಿತ್ತು.ಆದರೆ ಈಗ ಇದ್ದಕ್ಕಿದ್ದ ಹಾಗೆ ಸಾಹಿತಿಗಳು, ಚಿಂತಕರು,ಬುದ್ಧಿಜೀವಿಗಳು,ಪತ್ರಕರ್ತರು ಹೋರಾಟಗಾರರಲ್ಲಿ ಒಬ್ಬೊಬ್ಬರನ್ನೇ ಆಯ್ದು ಹಂಗಿಸಿ,ನಿಂದಿಸಿ,ಅಪಹಾಸ್ಯ ಮಾಡಿ, ಸುಳ್ಳು ಆರೋಪಗಳ ಮೂಲಕ ಅವರ ಚಾರಿತ್ರ್ಯ ಹನನ ಮಾಡಲಾಗುತ್ತಿದೆ.ಇದು ಸತ್ಯ,ನ್ಯಾಯ ಮತ್ತು ನಿಜವಾದ ಧರ್ಮದ ಪರ ಮಾತನಾಡುವವರ ನೈತಿಕ ಸ್ಥೈರ್ಯ ಕುಸಿದುಹೋಗುವಂತೆ ಮಾಡುವ ಹುನ್ನಾರ.ಈ ಕುಟಿಲ ಉದ್ದೇಶಕ್ಕಾಗಿ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಜನವಿರೋಧಿ ನಿಲುವು ಹೊಂದಿರುವ ಹಿಡಿಯಷ್ಟಿರುವ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನೇ ಸಾರ್ವಜನಿಕ ಅಭಿಪ್ರಾಯವೆಂದು ಬಿಂಬಿಸಲು ಹೊರಟಿದ್ದಾರೆ.ಇದನ್ನೇ ಬಳಸಿಕೊಂಡು ಮಾಧ್ಯಮಗಳು ತಮ್ಮ ತೀರ್ಮಾನಗಳನ್ನು “ಜನಭಿಪ್ರಾಯ”ದ ಹೆಸರಲ್ಲಿ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ…”
ಹೌದೇ? ನಿಜವಾಗಿಯೂ ಕರ್ನಾಟಕದಲ್ಲಿ ನಮ್ಮ ಸೆಕ್ಯುಲರ್ ‘ಆಪ್ತ ಮಿತ್ರ’ರು ಹೇಳುತ್ತಿರುವಂತೆ ಬೌದ್ಧಿಕವಾಗಿ ಉಸಿರು ಕಟ್ಟಿಸುವ ವಾತವರಣ ನಿರ್ಮಾಣವಾಗಿದೆಯೇ? ಅವರ ಆತಂಕ ಸಕಾರಣವೇ? ಹೌದು ಎನ್ನುವುದು ನನ್ನ ಅಭಿಪ್ರಾಯ.ರಾಜ್ಯದಲ್ಲಿ ನಡೆದ “ಬೌದ್ಧಿಕ ಫ್ಯಾಸಿಸಂ”ನ ಘಟನೆಗಳ ಉದಾಹರಣೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ.
ಮೊದಲನೆಯ ಉದಾಹರಣೆ :ಬೆಲ್ಜಿಯಂನ ಗೆಂಟ್ ವಿವಿಯ ಸಹಭಾಗಿತ್ವದಲ್ಲಿ ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಪ್ರೊ.ಎಸ್ ಎನ್ ಬಾಲಗಂಗಾಧರ ಅವರ ನೇತೃತ್ವದಲ್ಲಿ ಭಾರತೀಯ ಸಮಾಜ ಮತ್ತು ಸ್ಥಳಿಯ ಸಂಸ್ಕೃತಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದ “ಸ್ಥಳಿಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ(CSLC)”ವನ್ನು ಮುಚ್ಚಿಸಲಾಯಿತು.ಕಾರಣ ಆ ಸಂಸ್ಥೆ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣಿಯದೇ ತನ್ನ ಸಂಶೋಧನೆಯ ವಿಷಯಗಳನ್ನು ಮಂಡಿಸಿದ್ದು. ಮತ್ತಷ್ಟು ಓದು 




