ಆರ್ಯರಿಂದ ಭಾರತದ ಮೇಲೆ ದಾಳಿ ಎಂಬ ಪೊಳ್ಳು ವಾದ
– ವಿನೋದ್ ಹಿಂದೂ ನ್ಯಾಷನಲಿಸ್ಟ್
ದೇಶದಲ್ಲಿ ಅಸಹಿಷ್ಣುತೆ (Intolerance) ಮಿತಿ ಮೀರುತ್ತಿದೆ ದೇಶದಲ್ಲಿ ಉಸಿರುಗಟ್ಟೋ ವಾತಾವರಣವಿದೆ ಅಂತ ಕೆಲ ತಿಂಗಳಿನಿಂದ ಹಲವಾರು ಸಾಹಿತಿಗಳು, ಬುದ್ಧಿಜೀವಿಗಳು, ಲೇಖಕರು, ನಟ ನಟಿಯರು ತಮಗೆ ದೊರೆತ ಪ್ರಶಸ್ತಿಗಳನ್ನು ವಾಪಸ್ ಮಾಡುತ್ತಿರುವುದು ನಿಮಗೆಲ್ಲ ತಿಳಿದ ವಿಷಯವೇ, ಅದೇ ಪ್ರಶಸ್ತಿ ವಾಪಸಾತಿ, ಅಸಹಿಣ್ಣುತೆಯ ವಾದದ ತಿಕ್ಕಾಟದಲ್ಲೇ ಅಮೀರ್ ಖಾನ್ ಕೂಡ ದೇಶದಲ್ಲಿ ಕಳೆದ 6-8 ತಿಂಗಳಿನಿಂದ ಒಂದು ತರಹ ಭಯದ ವಾತಾವರಣ ದೇಶದಲ್ಲಿದೆ, “ನನ್ನ ಪತ್ನಿ ದೇಶ ಬಿಡೋಣವೇ” ಅಂದಿದ್ದಳು ಅಂತ ಹೊಸ ವಿವಾದವನ್ನೇ ಸೃಷ್ಟಿಸಿದ್ದರು ಹಾಗು ಅಮೀರ್ ಖಾನರವರ ಪರ ವಿರೋಧವಾಗಿ ನಾನಾ ರೀತಿಯ ಪ್ರತಿಭಟನೆಗಳು ನಡೆದಿದ್ದು ತಮಗೆಲ್ಲ ತಿಳಿದ ವಿಷಯವೇ.
ಇದೇ ವಿಷಯವನ್ನಿಟ್ಟುಕೊಂಡು ಮೊನ್ನೆ ತಾನೆ ಶುರುವಾಗಿರೋ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೂ ಕೋಲಾಹಲವೆದ್ದಿತ್ತು. ಆಗ ನಮ್ಮ ದೇಶದ ಮಾನ್ಯ ಗೃಹಮಂತ್ರಿ ರಾಜನಾಥ ಸಿಂಗ್ ಸಂಸತ್ತಿನಲ್ಲಿ ಮಾತನಾಡುತ್ತ ಈ ತಥಾಕತಿತ ಅಸಹಿಣ್ಣುತೆಯ ಬಗ್ಗೆ ಚರ್ಚೆ ಮಾಡುವಾಗ ಸಂವಿಧಾನ ಕರ್ತೃ ಅಂಬೇಡ್ಕರರ ವಿಷಯವನ್ನು ಪ್ರಸ್ತಾಪಿಸುತ್ತ ದಲಿತ ಶೋಷಣೆಯನ್ನು ತಮ್ಮ ಧ್ವನಿ ಎತ್ತಿ ದಲಿತರ ಹಕ್ಕುಗಳಿಗಾಗಿ ಸಮರ್ಥವಾಗಿ ಹೋರಾಟ ನಡೆಸಿ ಅವರ ಹಕ್ಕುಗಳನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು ಹೊರತು ಅಂಬೇಡ್ಕರರು ಯಾವತ್ತೂ ದೇಶ ಬಿಡುವ ಯೋಚನೆ ಮಾಡಿರಲಿಲ್ಲ ಅಂತ ಉಲ್ಲೇಖಿಸುತ್ತ ನಮ್ಮ ದೇಶ ಸಾವಿರಾರು ವರ್ಷಗಳಿಂದ ಇಡೀ ಜಗತ್ತಿನಲ್ಲೇ ಸಹಿಷ್ಣು ರಾಷ್ಟ್ರವಾಗಿದೆ ಅನ್ನೋ ಮಾತನ್ನು ಹೇಳಿದರು.
ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಹಾಗು ಕಲ್ಬುರ್ಗಿಯ ಸಂಸದ ಮಲ್ಲಿಕಾರ್ಜುನ ಖರ್ಗೆಯವರು ಅಂಬೇಡ್ಕರ್ ದೇಶ ಬಿಡ್ತೀನಿ ಅನ್ನೋ ಮಾತನ್ನು ಆಡಿರಲೇ ಇಲ್ಲ. ನಾವು ದ್ರಾವಿಡರು ಈ ದೇಶದ ಮೂಲನಿವಾಸಿಗಳು ನೀವು(ಆರ್ಯರು) ಹೊರಗಿನಿಂದ ಬಂದವರು ಅಂತ ಒಂದು ಸ್ಟೇಟ್’ಮೆಂಟ್ ಕೊಟ್ಟಿದ್ದರು.
ಭಾರತಕ್ಕೆ ಆರ್ಯರು ಹೊರಗಿನಿಂದ ಬಂದವರು, ದ್ರಾವಿಡರು ಮೂಲನಿವಾಸಿಗಳು ಅನ್ನೋದು ಪೊಳ್ಳು ವಾದವಂತ ಎಷ್ಟೋ ಜನ ಪಾಶ್ಚಾತ್ಯ ವಿದ್ವಾಂಸರು, ಇತಿಹಾಸಕಾರರೇ ಸಾಕ್ಷ್ಯಾಧರ, ಸಂಶೋಧನೆಗಳ ಮೂಲಕ ಒಪ್ಪಿಕೊಂಡಾಗ “Aryan Invasion Theory” ಒಟ್ಟಾರೆಯಾಗಿ baseless ಅನ್ನೋದು ಜಗಜ್ಜಾಹಿರಾಗಿರುವ ಸಂದರ್ಭದಲ್ಲಿ ಮತ್ತೆ ಆ ಪೊಳ್ಳು ವಾದವನ್ನಿಟ್ಟುಕೊಂಡು ರಾಜಕಾರಣ ಮಾಡುವುದು ಮಾತ್ರ ಇನ್ನೂ ಭಾರತದಲ್ಲಿ ನಿಂತಿಲ್ಲ ಅನ್ನುವುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರ ಮಾತಿನಿಂದಲೆ ಅರ್ಥವಾಗುತ್ತದೆ. ಇದೇ “ಆರ್ಯರಿಂದ ಭಾರತದ ಮೇಲೆ ದಾಳಿ” ಎಂಬ ವಿಷಯ ಮಂಡಿಸಿ ಬ್ರಿಟೀಷರು ಅನುಸರಿಸಿದ divide and rule ಪಾಲಿಸಿಯನ್ನ ನಮ್ಮ ರಾಜಕಾರಣಿಗಳು ಇನ್ನೂ ಅನುಸರಿಸಿ ಜನರ ಮನಸ್ಸಿನಲ್ಲಿ ಜಾತಿಯೆಂಬ ವಿಷಬೀಜ ಬಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದು ಮಾತ್ರ ದೇಶದ ಐಕ್ಯತೆಗೆ ಮಾರಕವೇ ಸರಿ.
ಉಕ್ಕಿನ ಮನುಷ್ಯನಿಗೆ ಸಿಗಲಿ ತಕ್ಕ ಗೌರವ
– ರೋಹಿತ್ ಚಕ್ರತೀರ್ಥ
1909ರ ಒಂದು ದಿನ. ನ್ಯಾಯಾಲಯದಲ್ಲಿ ಕ್ರಾಸ್ ಎಕ್ಸಾಮಿನೇಶನ್ ನಡೆಯುತ್ತಿದೆ. ನಿರಪರಾಧಿಯೊಬ್ಬ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾನೆ. ವಕೀಲರು ಪಾಟೀಸವಾಲು ಹಾಕುತ್ತಿರುವಾಗಲೇ ಮಧ್ಯದಲ್ಲಿ ಅವರಿಗೊಂದು ಟೆಲಿಗ್ರಾಂ ಬಂತು. ಆ ಕಾಲದಲ್ಲಿ ಯಾರಿಗಾದರೂ ತಂತಿ ಸಂದೇಶ ಬಂತೆಂದರೆ ಅದು ಸಾವಿನ ಸುದ್ದಿಯೆಂದೇ ಲೆಕ್ಕ. ಚೀಟಿಯತ್ತ ಒಮ್ಮೆ ಕಣ್ಣುಹಾಯಿಸಿ, ಕ್ಷಣಕಾಲ ಕಣ್ಣುಮುಚ್ಚಿ ದೀರ್ಘವಾಗಿ ಉಸಿರೆಳೆದು, ಅವರು ಆ ಚೀಟಿಯನ್ನು ತನ್ನ ಕೋಟಿನ ಜೇಬಿನೊಳಗಿಳಿಸಿ ವಾದ ಮುಂದುವರಿಸಿದರು. ಕೊನೆಗೆ ಕಟಕಟೆಯಲ್ಲಿ ನಿಂತಿದ್ದ ವ್ಯಕ್ತಿ ನಿರಪರಾಧಿಯೆಂದು ಸಾಬೀತಾಯಿತು. ಕೋರ್ಟಿನ ಕಲಾಪಗಳು ಮುಗಿದ ನಂತರ ನ್ಯಾಯಮೂರ್ತಿಗಳು ಟೆಲಿಗ್ರಾಂ ವಿಷಯ ಪ್ರಸ್ತಾಪಿಸಿದಾಗ ವಕೀಲರು, “ಅದು ನನ್ನ ಪತ್ನಿಯ ಸಾವಿನ ಸುದ್ದಿ. ನಾನು ಆ ಕೂಡಲೇ ನ್ಯಾಯಾಲಯದಿಂದ ಹೊರಟುಬಿಡುತ್ತಿದ್ದರೆ ಇಲ್ಲಿ ನಿರಪರಾಧಿಯ ಪರವಾಗಿ ವಾದಿಸುವವರು ಯಾರೂ ಇಲ್ಲದೆ ಅವನು ಶಿಕ್ಷೆಗೆ ಗುರಿಯಾಗುತ್ತಿದ್ದನೇನೋ. ಒಂದು ಪ್ರಾಣ ಹೇಗೂ ಹೋಗಿಯಾಗಿದೆ. ಇಲ್ಲಿಂದ ಹೊರನಡೆದಿದ್ದರೆ ಈ ದಿನ ನಾನು ಎರಡನೇ ಸಾವನ್ನೂ ನೋಡಬೇಕಾಗಿತ್ತಲ್ಲ” ಎಂದರು. ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಉಕ್ಕಿನ ಮನುಷ್ಯ ಎಂದು ಕರೆಯುವುದು ಸುಮ್ಮನೇ ಅಲ್ಲ ಎನ್ನುವುದಕ್ಕೆ ಇದೊಂದು ದೃಷ್ಟಾಂತ ಸಾಕು.
ಪಟೇಲರು 1875ನೇ ಇಸವಿ ಅಕ್ಟೋಬರ್ 31ರಂದು ಗುಜರಾತ್ನಲ್ಲಿ ಜನಿಸಿದರು. ಪಟೇಲ್ ಸಮುದಾಯದ ಸಂಪ್ರದಾಯದಂತೆ ಹುಡುಗನಿಗೆ 18ರ ಹರೆಯದಲ್ಲೇ ಮದುವೆಯಾಯಿತು. ಕುಟುಂಬ ದೊಡ್ಡದು. ಜೀವನ ನಿರ್ವಹಣೆಗೆ ಶಕ್ತಿಮೀರಿ ದುಡಿಯುವುದು ಅನಿವಾರ್ಯ ಕರ್ಮವಾಗಿದ್ದ ಕಾಲ. ಪಟೇಲರು ಸ್ವಂತ ಪರಿಶ್ರಮದಿಂದ ಓದಿ, ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಇಂಗ್ಲೆಂಡಿಗೆ ಹೋಗುವ ಕನಸು ಕಂಡಿದ್ದರು. ಅವರ ಕನಸಿಗೆ ನೀರೆರೆಯುವಂತೆ ಇಂಗ್ಲೆಂಡಿನಿಂದ ವಕೀಲಿ ವ್ಯಾಸಂಗದ ಪ್ರವೇಶಾತಿಯ ಕಾಗದಪತ್ರಗಳೂ ಪ್ರಯಾಣದ ಟಿಕೇಟೂ ಬಂದವು. ಆ ಎಲ್ಲ ದಾಖಲೆಗಳಲ್ಲೂ ಪಟೇಲರ ಹೆಸರನ್ನು ವಿ.ಜೆ. ಪಟೇಲ್ ಎಂದು ನಮೂದಿಸಲಾಗಿತ್ತು. ಆಗ, ಇಂಗ್ಲೆಂಡಿಗೆ ಹೋಗಿ ಕಲಿಯಲು ತನಗೂ ಆಸೆಯಿದೆ ಎಂದು ಸೋದರ ವಿಠಲಭಾಯಿ ಝಾವೆರ್ಬಾಯಿ ಪಟೇಲ್ ಮುಂದೆ ಬಂದು ಅಣ್ಣನ ಬಳಿ ಹೇಳಿಕೊಂಡ. ಅಣ್ಣ ವಲ್ಲಭಭಾಯಿ ತಮ್ಮನ ಆಸೆ ಮನ್ನಿಸಿ ಆತನಿಗೆ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟು ತಾನು ಭಾರತದಲ್ಲೆ ಉಳಿದರು. ವಜ್ರದಂಥ ವ್ಯಕ್ತಿಯ ಮನಸ್ಸು ಹೂವಿನಷ್ಟು ಮೃದುವೂ ಆಗಿತ್ತೆನುವುದಕ್ಕೆ ಈ ಘಟನೆ ಸಾಕ್ಷಿ.
ಬಹುಶಃ ನನಗೇ ಈ ಶೋಷಣೆ,ಸಮಾನತೆ,ಸಹಪಂಕ್ತಿ ಇವೆಲ್ಲಾ ಅರ್ಥವಾಗೊಲ್ಲ
– ರಾಘವೇಂದ್ರ ಸುಬ್ರಹ್ಮಣ್ಯ,ಶೃಂಗೇರಿ
ಯಾಕಂದ್ರೆ ನಮ್ಮೂರಲ್ಲಿ ದೇವಸ್ಥಾನಕ್ಕೆ ಒಳಗೆ ಬಿಡೋದ್ರ ಬಗ್ಗೆ ಗಲಾಟೆಯೇ ಇಲ್ಲ. ಶೃಂಗೇರಿ ಅಂತಲ್ಲ, ಸುತ್ತ ಮುತ್ತಲಿನ ಯಾವೂರಿನಲ್ಲೂ ‘ಏಯ್ ಹೊರಗೆ ಹೋಗೋ, ದೇವಸ್ಥಾನದೊಳಗೆ ನೀನು ಬರೋ ಹಾಗಿಲ್ಲ’ ಅನ್ನಲ್ಲ. ಅಲ್ಲಿ ಜನರನ್ನ ಹೊರಗಿಡೋದು ಬಿಡಿ, ಉಲ್ಟಾ, ಕೆಲವಷ್ಟು ಕೆಲಸಗಳಿಗೆ ಕೆಲಜನರು ಬರದಿದ್ರೆ ಮುಖ್ಯ ಕೆಲಸಗಳೇ ನಡೀತಾ ಇರ್ಲಿಲ್ಲ. ಉದಾಹರಣೆಗೆ, ಭೋವಿ ಜನಾಂಗದ ಜನರು ಬಂದು ಪಲ್ಲಕ್ಕಿ ಹೊರ್ಲಿಲ್ಲ ಅಂದ್ರೆ, ಸಾರದಬಾಗಿಲಿನಿಂದ ಜನ ಬಂದು ದೀಪ, ದೀವಟಿಗೆ, ಚಾಮರ ಹಿಡೀಲಿಲ್ಲ ಅಂದ್ರೆ ನವರಾತ್ರಿಯ ಅಡ್ಡಪಲ್ಲಕ್ಕಿಯ ಉತ್ಸವವೇ ನಡಿತಾ ಇರ್ಲಿಲ್ಲ. ಅವತ್ತಿನ ಮಟ್ಟಿಗೆ ನಾನಂತೂ ಅದನ್ನ ಶೋಷಣೆ ಅಂತಾ ಅಂದ್ಕೊಳ್ಳಿಲ್ಲ. ಉಲ್ಟಾ ಅದು ನಮ್ಮ ಐಡೆಂಟಿಟಿಯಾಗಿತ್ತು. ಇವತ್ತಿನ ಹುಡುಗ್ರು ಏನಂದ್ಕೊಳ್ತಾರೋ ಗೊತ್ತಿಲ್ಲಪ್ಪ. ಶೃಂಗೇರಿಯಲ್ಲಂತೂ ಬುರ್ಖಾ ಹಾಕಿಕೊಂಡೇ ಕೆಲ ಹೆಣ್ಣುಮಕ್ಕಳು ದೇವಸ್ಥಾನದಲ್ಲಿರೋ ಮೀನುಗಳಿಗೆ ಮಂಡಕ್ಕಿ ತಿನ್ಸೋಕೆ ಬಂದಿರೋದನ್ನ ನೋಡಿದ್ದೇನೆ. ದೇವಸ್ಥಾನವೆಂದರೆ ನಾಲ್ಕು ಜನ ಸೇರೋ ಜಾಗ ಅಂದುಕೊಂಡು ಬೆಳೆದ ನನಗೆ ಶೋಷಣೆಯ ಆಂಗಲ್ಲೇ ಹೊಳೆಯಲಿಲ್ಲ. ಅದೂ ಅಲ್ದೆ ‘ತಿಂಗಳ ಆ ದಿನಗಳಲ್ಲಿ’ ದೇವಸ್ಥಾನದೊಳಗೆ ಹೋಗದ ನನ್ನ ಅತ್ತೆಯಂದಿರು, ಉತ್ಸವ ಮೂರ್ತಿ ಹೊರಗೆ ಬಂದಾಗ ಕೈಮುಗಿದು ‘ನೋಡು ನಾವು ಒಳಗೆ ಹೋಗದಿದ್ರೇನಂತೆ, ಶಾರದಮ್ಮನೇ ಹೊರಗೆ ಬಂದು ನಮಗೆ ದರ್ಶನ ಕೊಟ್ಲು’ ಅಂತಾ ಹೇಳಿದ್ದು ನನಗೆ ತಮಾಷೆ ಎನ್ನಿಸಲೇ ಇಲ್ಲ. ಅವೊಂತರಾ pradigm shift ಮಾಡುವಂತಾ ಮಾತುಗಳಾಗಿಬಿಟ್ಟವು. ಆದರೂ ಕೆಲವರು ‘ನಮ್ಮನ್ನು ದೇವಸ್ಥಾದೊಳಕ್ಕೆ ಬಿಡಲಿಲ್ಲ’ ಅಂತಾ ಹೋರಾಟ ಮಾಡುವಾಗ ನನಗೆ ಆಶ್ಚರ್ಯವಾಗುತ್ತೆ. ಅದಕ್ಕೇ ಏನೋಪ್ಪ ನನಗೆ ಇವೆಲ್ಲಾ ಅರ್ಥವಾಗೊಲ್ಲ.
ಏಕ್ ಥಾ ಟೈಗರ್!
– ರೋಹಿತ್ ಚಕ್ರತೀರ್ಥ
“ಹ್ಞೂ ಅಂತಿಯೋ ಊಹ್ಞೂ ಅಂತಿಯೋ?”
“ಏನೇ ಹೇಳುವ ಮೊದಲು ನನಗೆ ಸ್ವಲ್ಪ ಮಾಹಿತಿಯಾದರೂ ಇರಬೇಕು ತಾನೆ? ನನ್ನ ಕೆಲಸ ಏನು ಅಂತಾದ್ರೂ ಹೇಳಿ!”
“ನೀನು ಮೊನ್ನೆ ಕಾಲೇಜಲ್ಲಿ ಸ್ಟೇಜ್ ಮೇಲೆ ಏನು ಮಾಡಿದಿಯೋ ಅದೇ.”
“ಅಂದ್ರೆ??”
“ನಾಟಕ ಆಡೋದು”
“ನೀವೇನು ನಾಟಕ ಕಂಪೆನಿಯವರಾ? ನಾನಿಲ್ಲಿ ಬಿಕಾಂ ಮಾಡ್ತಿದೇನೆ. ಡಿಗ್ರಿ ಮುಗಿಸಿ ನಾಟಕ ಮಂಡಳಿ ಸೇರಿದೆ ಅಂತ ಹೇಳಿದರೆ ನನ್ನಪ್ಪ ಸಿಗಿದು ತೋರಣ ಕಟ್ತಾರೆ ಅಷ್ಟೆ.ಅಲ್ಲದೆ, ನಟನಾಗಿ ಹೆಸರು ಮಾಡೋ ಆಸೆ ಅಷ್ಟೇನೂ ಇಲ್ಲ ನನಗೆ”
“ನಮ್ಮಲ್ಲಿ ನಾಟಕಕ್ಕೆ ಸೇರಿದರೆ ನಿನ್ನ ಕಟೌಟನ್ನು ಎಲ್ಲೂ ನಿಲ್ಲಿಸೋಲ್ಲ. ಇನ್ನು ನಿನ್ನ ಕೆಲಸದ ಬಗ್ಗೆ ಹೊರಗೆಲ್ಲೂ ಹೇಳುವ ಹಾಗೂ ಇಲ್ಲ. ನಿನ್ನ ಜೀವನಪೂರ್ತಿ ಅದೊಂದು ರಹಸ್ಯವಾಗಿರುತ್ತೆ. ಆದರೆ ನೀನು ಆ ಉದ್ಯೋಗ ಮಾಡೋದು ನಿನಗಾಗಿ ಅಥವಾ ಕುಟುಂಬಕ್ಕಾಗಿ ಅಲ್ಲ; ಬದಲು ದೇಶಕ್ಕಾಗಿ. ಅದೊಂದು ಮಹೋನ್ನತ ಉದ್ಯೋಗ.”
“ಯಾ..ಯಾರು ನೀವು?”
“ರಾ ಅಧಿಕಾರಿಗಳು. ದೇಶದ ಹಿತ ಕಾಯುವ ಬೇಹುಗಾರರು.”
ರವೀಂದ್ರ ಕೌಶಿಕ್ ಬೆಚ್ಚಿಬಿದ್ದ. ಹಣೆಯ ನೆರಿಗೆಯ ಮೇಲೆ ಬೆವರಿನ ತೋರಣ ಕಟ್ಟಿತು. ಇವರು ನನ್ನನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ? ಎರಡು-ಮೂರು ಸಾವಿರ ವಿದ್ಯಾರ್ಥಿಗಳಿರುವ ಕಾಲೇಜಿನ ಕ್ಯಾಂಪಸ್ಸಿನಲ್ಲಿ ನಾನೊಬ್ಬ ಗುಂಪಿನಲ್ಲಿ ಗೋವಿಂದನಾಗಿರುವ ಸಾಮಾನ್ಯ ಯುವಕ. ಕಾಮರ್ಸ್ ಪದವಿ ಮಾಡುತ್ತಿದ್ದೇನೆ. ಆಗೀಗ ಕಾಲೇಜಿನ ಟ್ಯಾಲೆಂಟ್ ಶೋಗಳಲ್ಲಿ ಸಣ್ಣಪುಟ್ಟ ಪ್ರಹಸನ ಮಾಡಿದ್ದುಂಟು. ಮೂರುದಿನದ ಹಿಂದೆ ಒಂದು ಕಾರ್ಯಕ್ರಮದಲ್ಲಿ, ಚೀನಾದ ಸೈನಿಕರಿಗೆ ಸಿಕ್ಕಿಯೂ ರಹಸ್ಯಗಳನ್ನು ಬಿಟ್ಟುಕೊಡದ ಭಾರತೀಯ ಸೈನಿಕನ ಪಾತ್ರ ಮಾಡಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿದ್ದೆ. ಅಷ್ಟೆ! ಅಷ್ಟು ಮಾಡಿದ್ದು ಬಿಟ್ಟರೆ ನನಗೆ ಈ ಸೇನೆ, ರಕ್ಷಣೆ, ಬೇಹುಗಾರಿಕೆ ಇವೆಲ್ಲ ಏನೇನೂ ಗೊತ್ತಿಲ್ಲ. ನನ್ನಲ್ಲಿ ಯಾವ ಮಹಾಗುಣ ನೋಡಿ ಈ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ? RK ಚಿಂತೆಗೆ ಬಿದ್ದ.
ಗಾಂಧಿ ಮತ್ತು ದೇವನೂರ
– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ
ಮೊನ್ನೆ ಗಾಂಧಿ ನೆನಪಾದರು. ನೆನಪಾದರು ಎನ್ನುವುದು ಅವರು ಮರೆತುಹೋಗಿರಬಹುದು ಎಂದೂ ಧ್ವನಿಸಬಹುದು. ನೆನಪು ಮತ್ತು ಮರೆತುಹೋಗುವಿಕೆ ಈ ಎರಡೂ ಸ್ಥಿತಿಗಳಲ್ಲಿ ಗಾಂಧಿ ಜೀವಂತವಾಗಿದ್ದು ನಮ್ಮನ್ನು ಕಾಡುತ್ತಲೇ ಇರುವರು. ಇದು ಗಾಂಧಿಯಂಥ ಗಾಂಧಿಯಿಂದ ಮಾತ್ರ ಸಾಧ್ಯವಾಗುವಂತಹದ್ದು. ಏಕೆಂದರೆ ಗಾಂಧಿ ಸೂಟು ಬೂಟು ಧರಿಸಿ, ಪಂಚೆ ಉಟ್ಟುಕೊಂಡು ಮತ್ತು ಲಂಗೋಟಿ ಸಿಕ್ಕಿಸಿಕೊಂಡು ಭಾರತೀಯ ಜೀವನಕ್ರಮದ ಎಲ್ಲ ವರ್ಗಗಳನ್ನು ತಮ್ಮೊಳಗೆ ಅಂತರ್ಗತಗೊಳಿಸಿಕೊಂಡವರು. ಒಬ್ಬನೇ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಭಾರತೀಯ ಜೀವನ ಕ್ರಮದ ಎಲ್ಲ ವರ್ಗಗಳನ್ನು ಪ್ರತಿನಿಧಿಸುವುದು ಅದು ಗಾಂಧೀಜಿಯಂಥ ವ್ಯಕ್ತಿಯಿಂದ ಮಾತ್ರ ಸಾಧ್ಯವಾಗುವ ಬಹುದೊಡ್ಡ ಸಾಮಾಜಿಕ ಪಲ್ಲಟ.
ಇನ್ನು ಗಾಂಧಿ ಏಕೆ ನೆನಪಾದರು ಎನ್ನುವ ವಿಷಯಕ್ಕೆ ಬರುತ್ತೇನೆ. ಆವತ್ತು ದಲಿತ ಸಂಘರ್ಷ ಸಮಿತಿಯವರ ಮೆರವಣಿಗೆ ರಸ್ತೆಯ ಮೇಲೆ ನಡೆದು ಹೋಗುತ್ತಿತ್ತು. ಬುದ್ಧ, ಬಸವ, ಅಂಬೇಡ್ಕರ್ ಎನ್ನುವ ಜಯಘೋಷ ಅಲ್ಲಿ ಮೊಳಗುತ್ತಿತ್ತು. ಜೊತೆಗೆ ಬುದ್ಧ-ಬಸವ-ಅಂಬೇಡ್ಕರರ ಆಳೆತ್ತರದ ಭಾವಚಿತ್ರಗಳು ರಾರಾಜಿಸುತ್ತಿದ್ದವು. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಶತಮಾನಗಳಿಂದ ಮನೆಮಾಡಿಕೊಂಡಿದ್ದ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಈ ಮೂವರು ಮಾಡಿದ ಪ್ರಯತ್ನ ಮತ್ತು ಹೋರಾಟ ಅದು ಚರಿತ್ರೆಯ ಪುಟಗಳಲ್ಲಿ ಸದಾಕಾಲ ಅಳಿಸಲಾಗದ ಐತಿಹಾಸಿಕ ಪ್ರಯತ್ನವಾಗಿ ದಾಖಲಾಗಿ ಉಳಿದಿದೆ. ಆದರೆ ಆ ಸಂದರ್ಭ ಅಲ್ಲಿನ ಭಾವಚಿತ್ರಗಳಲ್ಲಿ ಮತ್ತು ಅವರು ಮೊಳಗಿಸುತ್ತಿದ್ದ ಜಯಘೋಷಗಳಲ್ಲಿ ಗಾಂಧಿ ಅನುಪಸ್ಥಿತಿ ನನಗೆ ಬಹುಮುಖ್ಯ ಕೊರತೆಯಾಗಿ ಕಾಣಿಸಿತು.
ಬಹುಸಂಖ್ಯಾತರಿಗೆ ರಿಲಿಜನ್ ಇಲ್ಲವಾದರೆ ಅಲ್ಪಸಂಖ್ಯಾತರು ಯಾರು?
– ರಾಕೇಶ್ ಶೆಟ್ಟಿ
ಅದು ರಾಮಕೃಷ್ಣ ಮಿಷನ್ ವರ್ಸಸ್ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆದ ಕುತೂಹಲಕಾರಿ ಕಾನೂನು ಕದನ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಮಕೃಷ್ಣ ಮಿಷನ್ ಸಂಸ್ಥೆಗೆ ಸೇರಿದ ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾಗಿದ್ದ ಕಾಲೇಜಿನ ನಿರ್ವಹಣೆಗೆ ಸಂಬಂಧಿಸಿದಂತೆ,ಸರ್ಕಾರದ ಹಸ್ತಕ್ಷೇಪವನ್ನು ಪ್ರಶ್ನಿಸಿ ರಾಮಕೃಷ್ಣ ಮಿಷನ್ ನ್ಯಾಯಾಲಯದ ಮೆಟ್ಟಿಲೇರಿತ್ತು.ತಮ್ಮ ಸಂಘಟನೆಯೂ ರಾಮಕೃಷ್ಣರ ಬೋಧನೆಗಳ ಮೇಲೆ ಆಧಾರಿತವಾಗಿರುವುದರಿಂದ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಸಂವಿಧಾನದ Article 30(1) ಮತ್ತು Article 26(a) ಕಾಯ್ದೆಯಡಿಯಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಇರಬೇಕಾದ ರಕ್ಷಣೆಯಿದೆ ಎಂದು ವಾದಿಸಿತ್ತು.ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟು, ರಾಮಕೃಷ್ಣಯಿಸಂ ಎಂಬ ಪ್ರತ್ಯೇಕವಾದ ರಿಲಿಜನ್ ಇಲ್ಲ ಮತ್ತದು ಹಿಂದೂ ಸಂಪ್ರದಾಯಗಳ ವ್ಯಾಪ್ತಿಯಲ್ಲೇ ಇದೆ ಎಂದಿತ್ತು ಹಾಗೂ ಹಿಂದೂ ಎಂಬುದು ರಿಲಿಜನ್ ಅಲ್ಲ ಅದೊಂದು ಜೀವನ ಪದ್ಧತಿ ಎಂದು ತೀರ್ಪು ನೀಡಿತ್ತು.ಈ ದೇಶದ ಸರ್ವೋಚ್ಚ ನ್ಯಾಯಾಲಯವೇ ಹಿಂದೂ ಎಂಬುದು ರಿಲಿಜನ್ ಅಲ್ಲ ಎಂದ ಮೇಲೆ ನಮ್ಮ ಸರ್ಕಾರಗಳು ಅದನ್ನು ಪರಿಗಣಿಸಬೇಕಿತ್ತಲ್ಲವೇ?
ಒಂದು ವೇಳೆ ಪರಿಗಣಿಸಿದ್ದರೆ ಈಗಲೂ ಸರ್ಕಾರಿ,ಖಾಸಗಿ ಕಚೇರಿ,ಶಿಕ್ಷಣ ಸಂಸ್ಥೆ ಇತ್ಯಾದಿಗಳ ಅರ್ಜಿಗಳಲ್ಲಿ “ಹಿಂದೂ” ಎಂಬುದನ್ನು “ರಿಲಿಜನ್” ಕಾಲಂನಲ್ಲಿ ಭರ್ತಿ ಮಾಡಿಕೊಳ್ಳುತ್ತಿರಲಿಲ್ಲ. ಉದಾಹರಣೆಗೆ ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಸರ್ಕಾರ ಮಾಡಿದ ಜಾತಿಗಣತಿಯ ವೇಳೆ ನನಗಾದ ಅನುಭವದ ಬಗ್ಗೆ ಹೇಳಬೇಕು.
ಐಡಿಯಾಲಜಿ,ಚಿಂತನೆ ಮತ್ತು ಜೀವನದ ವಾಸ್ತವಗಳು
– ಮು.ಅ ಶ್ರೀರಂಗ,ಬೆಂಗಳೂರು
ಡಾ. ಕಿರಣ್ ಎಂ ಗಾಜನೂರು ಅವರು ೧೩-೪-೧೫ರ ಪ್ರಜಾವಾಣಿ ದಿನಪತ್ರಿಕೆಯ ‘ಸಂಗತ’ ಕಾಲಂನಲ್ಲಿ ‘ಮೋಡಿ’ಯಿಂದ ಬಿಡಿಸಿಕೊಳ್ಳಿ ಎಂಬ ಶೀರ್ಷಿಕೆಯಲ್ಲಿ ಬರೆದಿರುವ ಲೇಖನಕ್ಕೆ ಇದೊಂದು ಪ್ರತಿಕ್ರಿಯಾತ್ಮಕ ಸಹಸ್ಪಂದನ.
‘ಶ್ರಮಸಹಿತ ಸರಳ ಬದುಕು, ಸುಂದರ ಬದುಕು’ ಎಂಬ ತತ್ವವನ್ನು ಸಾರುವ ಸಲುವಾಗಿ ರಂಗಕರ್ಮಿ ಪ್ರಸನ್ನ ಅವರು ಬದನವಾಳುವಿನಲ್ಲಿ ‘ಸತ್ಯಾಗ್ರಹ ಮತ್ತು ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶ’ ಆಯೋಜಿಸಿರುವ ಬಗ್ಗೆ ಈಗಾಗಲೇ ಪತ್ರಿಕೆಗಳಲ್ಲಿ ವರದಿಗಳು,ಲೇಖನಗಳು ಬಂದಿವೆ. ‘ಶ್ರಮಸಹಿತ ಸರಳ ಬದುಕು’ ಎಂಬ ಮೂರ್ನಾಲಕ್ಕು ಪದಗಳನ್ನು ವಿಶ್ಲೇಷಿಸಿದರೆ ನಮಗೆ ಸಿಗಬಹುದಾದ ಸಂಭಾವ್ಯ ಉತ್ತರಗಳು –
(೧) ಈಗ ಒಂದಿಲ್ಲೊಂದು ಕೆಲಸದ ಮೂಲಕ ತಮ್ಮ ಅನ್ನ ಸಂಪಾದಿಸಿಕೊಳ್ಳುತ್ತಿರುವ ಜನಗಳು ಶ್ರಮಪಡದೆ ಅದನ್ನು ಪಡೆಯುತ್ತಿದ್ದಾರೆ ಅಥವಾ
(೨) ಜನಗಳ ಕೈಯಲ್ಲಿ ಹೆಚ್ಚು ದೈಹಿಕ ಶ್ರಮದ ಅವಶ್ಯಕತೆ ಇಲ್ಲದ ಸಣ್ಣಪುಟ್ಟ ಕೆಲಸಮಾಡಿಸಿಕೊಂಡು ಅವರ ಸರಳ ಬದುಕಿಗೆ ಎಷ್ಟು ಬೇಕೋ ಅಷ್ಟು ಅನ್ನ ಕೊಟ್ಟು ಸಾಕುತ್ತಿರುವ ಧರ್ಮಾರ್ತರು ನಮ್ಮ ನಡುವೆ ಇದ್ದಾರೆ.
ಸ್ವಲ್ಪ ಸಾಮಾನ್ಯ ಜ್ಞಾನ ಇರುವವರಿಗೂ ಮೇಲಿನ ಎರಡು ಉತ್ತರಗಳಲ್ಲಿರುವ ಹುಳುಕುಗಳು,ತಪ್ಪುಗಳು ಕಾಣುತ್ತವೆ.ಇಂದು ಒಬ್ಬ ಶ್ರೀಸಾಮಾನ್ಯ ಒಂದು ಹೊತ್ತಿಗೆ ಊಟ ಸಂಪಾದಿಸಿಕೊಳ್ಳಬೇಕಾದರೂ ಶ್ರಮ ಪಟ್ಟು ಕೆಲಸ ಮಾಡಲೇಬೇಕು. ಅದು ಅವರವರ ವಿದ್ಯೆ,ಕುಶಲತೆ,ಕೆಲಸದ ರೀತಿಗೆ ಸಂಬಂಧಪಟ್ಟಿರುತ್ತದೆ…ಕೆಲಸಮಾಡದೆ ಸಿಕ್ಕಷ್ಟು ತಿಂದು ತನ್ನ ಹೊಟ್ಟೆಹೊರೆದುಕೊಳ್ಳಬೇಕಾದರೆ ಎಲ್ಲರಂತೆ ಕೆಲಸ ಮಾಡೋಕ್ಕೆ ನಿನಗೇನು ಧಾಡಿಯೆಂದು ಬೈಸಿಕೊಂಡು ಬೀದಿ ಬೀದಿಯಲ್ಲಿ ಭಿಕ್ಷೆ ಬೇಡಬೇಕು.
‘ಸುಂದರ ಬದುಕು’ ಸಾಧ್ಯವಾಗುವುದು ಯಾವಾಗ? ನಮ್ಮ ಜೀವನ ನಿನ್ನೆಗಿಂತ ಇಂದು,ಇಂದಿಗಿಂತ ನಾಳೆ ಉತ್ತಮವಾಗಿದ್ದರೆ ಅದನ್ನು ಸುಂದರ ಅನ್ನಬಹುದು.ನಮ್ಮ ತಾತ ಎಲ್ಲಾ ಕಡೆಗೂ ನಡೆದುಕೊಂಡೇ ಹೋಗುತ್ತಿದ್ದ; ನಾನೂ ನಡೆದುಕೊಂಡೇ ಓಡಾಡುವ ಸ್ಥಿತಿಯಲ್ಲಿ ಜೀವನ ನಡೆಸುತ್ತೇನೆ ಎನ್ನುವುದು ಬದುಕು ಸುಂದರವಾಗುವ ಲಕ್ಷಣವೆ? ಕೆಲವೊಂದು ವಿಚಾರಗಳನ್ನು ನಾವು ನಮ್ಮ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವುಗಳ ಸಾಧ್ಯತೆ-ಅಸಾಧ್ಯತೆಗಳ ಬಗ್ಗೆ ಯೋಚಿಸಬೇಕಾಗುತ್ತದೆ.ಇಲ್ಲವಾದರೆ ನಮ್ಮನ್ನು ನಾವೇ ಮಾನಸಿಕವಾಗಿ ವಂಚಿಸಿಕೊಳ್ಳುತ್ತಾ ಹೋಗುತ್ತೇವೆ. ಇದೇನು ದೊಡ್ಡ ತತ್ವಶಾಸ್ತ್ರೀಯ ಸಮಸ್ಯೆ ಅಲ್ಲ. ಚಿಕ್ಕ ಚಿಕ್ಕ ಸಂಗತಿಗಳನ್ನೇ ನೋಡೋಣ ಸಾಕು.
ಮತ್ತಷ್ಟು ಓದು 
ನೆಹರೂ ಎಂಬ ಸ್ವಾರ್ಥ ರಾಜಕಾರಣಿ ಮತ್ತು ನೇತಾಜಿ ಎಂಬ ಸ್ವಾತಂತ್ರ್ಯ ಸೇನಾನಿ
– ರಾಕೇಶ್ ಶೆಟ್ಟಿ
“ಸುಭಾಷ್ ಸೈನ್ಯವೇನಾದರೂ ಭಾರತಕ್ಕೆ ಬಂದರೆ ನಾನು ಕತ್ತಿ ಹಿಡಿದು ಹೋರಾಡುತ್ತೇನೆ”. ಹೀಗೆ ಹೇಳಿದ ಕಠಾರಿವೀರ ಯಾವುದೋ ಬ್ರಿಟಿಷನಲ್ಲ.ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಶ್ರೀಮಾನ್ ಚಾಚಾ ನೆಹರೂ.ಅಷ್ಟಕ್ಕೂ ನೆಹರೂವನ್ನು “ಗಾಂಧಿ ಪಕ್ಷದೊಳಗಿನ ಬ್ರಿಟಿಷ್” ಎಂದು ನಾನು ಕರೆಯುತ್ತಿಲ್ಲ.ಖುದ್ದು ನೆಹರೂ ಅವರ ಅಮೇರಿಕಾದ ಗೆಳೆಯನಾಗಿದ್ದ ಜಾನ್ ಕೆನೆತ್ ಗಾಲ್ಬ್ರೈತ್ ಬಳಿ “ಭಾರತವನ್ನು ಆಳುವ ಕಡೆಯ ಬ್ರಿಟಿಷ್ ನಾನೇ” ಎಂದು ಹೇಳಿಕೊಂಡಿದ್ದರು. (ಈ ಜಾನ್ ಎಂತ ಮಹಾನುಭಾವನೆಂದರೆ, ಭಾರತವು ಬ್ರಿಟಿಷ್ ಆಳ್ವಿಕೆಗೆ ಒಳಪಟ್ಟಿದ್ದು ಪುಣ್ಯ ಎನ್ನುವಂತ ಮನಸ್ಥಿತಿಯವ)
ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಎನ್ನಲಿಕ್ಕೆ ಇನ್ನೊಂದು ಸತ್ಯವೂ ಈಗ ಬಹಿರಂಗವಾಗಿದೆ.ಭಾರತವು ಸ್ವತಂತ್ರವಾಗಿ, ಸುಮಾರು ೨೦ ವರ್ಷಗಳ ಕಾಲ ನೇತಾಜಿ ಕುಟುಂಬದ ಮೇಲೆ ಶ್ರೀಮಾನ್ ನೆಹರೂ ಅವರ ಘನ ಸರ್ಕಾರ “ಗೂಢಚಾರಿಕೆ”ಯನ್ನು ಮಾಡಿದೇ ಎಂಬುದೇ ಆ ಸತ್ಯ.ಅದೂ ಬ್ರಿಟಿಷರ MI15 ಎಂಬ ಗೂಢಚಾರ ಸಂಸ್ಥೆಯೊಂದಿಗೆ ಸೇರಿಕೊಂಡು! ಹೀಗಿರುವಾಗ ನೆಹರೂ ತನ್ನನ್ನು ತಾನು “I am the last Englishman to rule in India.” ಎಂದಿದ್ದು ಸರಿಯಾಗಿಯೇ ಇದೆ ಅಲ್ಲವೇ? ಅಷ್ಟಕ್ಕೂ ಬ್ರಿಟಿಷರಿಗೆ ನೇತಾಜಿಯವರ ಮೇಲೆ ಗೂಢಚಾರಿಕೆ ಮಾಡಲಿಕ್ಕೆ ಕಾರಣಗಳಿದ್ದವು.ಆದರೆ ನೆಹರೂ ಮಹಾಶಯರಿಗೇನಿತ್ತು ಅಂತ ಕಾರಣ? “ಅಭದ್ರತೆ” ಭಾವವೇ?ನೇತಾಜಿಯವರು ತೈಪೆಯ ವಿಮಾನಾಪಘಾತದಲ್ಲಿ ಮರಣಹೊಂದಿದರು ಎಂದು ಸೃಷ್ಟಿಸಲಾಗಿದ್ದ ಸುದ್ದಿಯನ್ನು ಇತರರಂತೆ ನೆಹರೂ ಸಹ ನಂಬಿರಲಿಲ್ಲ.ಒಂದು ವೇಳೆ ಸ್ವತಂತ್ರ ಭಾರತಕ್ಕೆ ನೇತಾಜಿ ಕಾಲಿಟ್ಟರೆ,ಗಾಂಧೀಜಿಯ ಮರಣದ ನಂತರ ಏಕಮೇವಾದ್ವೀತಿಯನಂತಿರುವ ತನ್ನ ಕುರ್ಚಿ ಉಳಿಯುವುದಿಲ್ಲವೆಂಬ ಘೋರ ಸತ್ಯ ತಿಳಿದಿದ್ದರಿಂದಲೇ? ನೆಹರೂವಿಗೆ,ನೇತಾಜಿಯವರ ಮೇಲೆ ಅಂತದ್ದೊಂದು ಅಭದ್ರತೆ,ಈರ್ಷ್ಯೆ ಇರಲಿಲ್ಲವೆಂದಾದರೇ, ಬ್ರಿಟನ್ ಪ್ರಧಾನಿಯಾಗಿದ್ದ ಕ್ಲೆಮೆಂಟ್ ಆಟ್ಲಿಯವರಿಗೆ,ಸುಭಾಷ್ ರಷ್ಯಾದಲ್ಲಿ ಇರುವ ಬಗ್ಗೆ ಮತ್ತು ರಷ್ಯಾ ಮಿತ್ರಪಡೆಗಳಿಗೆ ನಂಬಿಕೆ ದ್ರೋಹ ಮಾಡಿದಂತೆ ಎಂಬಂತ ಸಾಲುಗಳಿರುವ ಪತ್ರವೊಂದನ್ನು ಬರೆದಿದ್ದರು ಎನ್ನುವುದು ಸುಳ್ಳೇ? ಅದೆಲ್ಲಾ ಬಿಡಿ.ಸ್ವಾತಂತ್ರ್ಯ ಸಿಕ್ಕ ನಂತರ ಐ.ಎನ್.ಎ ಸೈನಿಕರನ್ನು ನೆಹರೂ ನಡೆಸಿಕೊಂಡ ರೀತಿ ನೋಡಿ.ಆ ಸೈನಿಕರಿಗೆ ಭಾರತೀಯ ಸೈನ್ಯದಲ್ಲಿ ಕಾಲಿಡಲು ಬಿಡಲಿಲ್ಲ.ಪಿಂಚಣಿಗಾಗಿ ಆ ಸೈನಿಕರು ೧೯೭೭ರವರೆಗೂ ಕಾಯಬೇಕಾಯಿತು! ಆಜಾದ್ ಹಿಂದ್ ಸೈನಿಕರು ಭಾರತೀಯ ಸೇನೆ ಸೇರಿಕೊಂಡ ಮೇಲೆ ನೇತಾಜಿ ಪ್ರತ್ಯಕ್ಷವಾದರೇ,ಸೈನ್ಯ ಅವರ ಪರ ನಿಂತೀತೂ ಎಂಬ ಭಯವಿತ್ತೇ? ನೆಹರೂ ಅವರ ಈ ನಡೆಗಳನ್ನೆಲ್ಲ ಹೇಗೆ ಅರ್ಥೈಸಿಕೊಳ್ಳಬೇಕು?
ತಿರುಚಿ ಬರೆದ ಮಾತ್ರಕ್ಕೆ ಇತಿಹಾಸ ಬದಲಾದೀತೆ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
‘ಭಾರತವೆನ್ನುವುದು ವಿಶ್ವದ ಅತ್ಯ೦ತ ಅಪಾಯಕಾರಿ ರಾಷ್ಟ್ರ.ಅದು ಮನುಷ್ಯತ್ವದ ಶತ್ರುರಾಷ್ಟ್ರಗಳಲ್ಲೊ೦ದು.ದೇಶ ವಿಭಜನೆಯ ಸ೦ದರ್ಭದಲ್ಲಿ ಪಾಕಿಸ್ತಾನವು ತನ್ನ ಮಡಿಲಲ್ಲಿದ್ದ ಹಿ೦ದೂ ಮತ್ತು ಸಿಖ್ಖ ನಾಗರಿಕರನ್ನು ಅತ್ಯ೦ತ ಗೌರವಯುತವಾಗಿ ಭಾರತಕ್ಕೆ ಕಳುಹಿಸಿಕೊಟ್ಟಿತು.ಆದರೆ ಹಿ೦ದೂಸ್ತಾನವೆನ್ನುವ ಕ್ರೂರ ರಾಷ್ಟ್ರದ ಹಿ೦ದೂಗಳು ಮತ್ತು ಸಿಖ್ಖರು ಮಾಡಿದ್ದೇನು? ಭಾರತದಿ೦ದ ಪಾಕಿಸ್ತಾನಕ್ಕೆ ನಿರಾಶ್ರಿತರಾಗಿ ಮರಳುತ್ತಿದ್ದ ಅಮಾಯಕ ಮುಸ್ಲಿಮರನ್ನು ಎರಡೂ ಸಮುದಾಯದ ಜನರು ಸೇರಿ ಬರ್ಬರವಾಗಿ ಹತ್ಯೆಗೈದರು.ಮುಸಲ್ಮಾನರು ಸಾಗುತ್ತಿದ್ದ ರೈಲು ,ಬಸ್ಸುಗಳನ್ನು ಲೂಟಿಗೈದರು.ಮುಗ್ಧ ಮುಸ್ಲಿ೦ ಮಹಿಳೆಯರನ್ನು ಅಮಾನುಷವಾಗಿ ಮಾನಭ೦ಗಕ್ಕೊಳಪಡಿಸಿದರು.ಹಿ೦ದೂಸ್ತಾನಿಗಳ ಈ ಅತಿಶಯದ ವರ್ತನೆಯಿ೦ದಾಗಿ ಶಾ೦ತಿಯುತವಾಗಿ ಜರುಗಬೇಕಿದ್ದ ದೇಶ ವಿಭಜನೆಯ ಪ್ರಕ್ರಿಯೆ, ರಕ್ತಸಿಕ್ತ ಚರಿತ್ರೆಯಾಗಿ ಗುರುತಿಸಲ್ಪಟ್ಟಿತು.ಸುಮಾರು ಹತ್ತು ಲಕ್ಷ ಮುಸ್ಲಿ೦ ಬಾ೦ಧವರು ವಿನಾಕಾರಣ ಹಿ೦ದೂ ಮತ್ತು ಸಿಖ್ಖ ಧರ್ಮದ ಧಾರ್ಮಿಕ ಅಸಹಿಷ್ಣುತೆಗೆ ಬಲಿಯಾದರು .ಹಿ೦ದೂಸ್ತಾನವೆನ್ನುವ ಭಯಾನಕ ರಾಷ್ಟ್ರದ ಚರ್ಯೆಯೇ ಅ೦ಥದ್ದು.ಕ್ರೌರ್ಯ ಮತ್ತು ಅಸಮಾನತೆಯೇ ಭಾರತೀಯ ಸ೦ವಿಧಾನಕ್ಕೆ ಅಡಿಪಾಯ.ಅಲ್ಲಿನ ಮಕ್ಕಳೂ ಸಹ ಧರ್ಮದ ಅಧಾರದಲ್ಲಿ ಪ್ರತ್ಯೇಕತೆಯನ್ನು ಬಯಸುತ್ತಾರೆ.ನಮಗ೦ತೂ ಅದು ಅತ್ಯ೦ತ ಕಡು ದ್ವೇಷಿ ರಾಷ್ಟ್ರ.ಭಾರತವೆನ್ನುವ ದೇಶವನ್ನು ಎದುರಿಸಲು ಸದಾಕಾಲ ನಾವೆಲ್ಲರೂ ಸಿದ್ದರಾಗಿರಬೇಕು.’
ಮೇಲಿನ ಸಾಲುಗಳನ್ನು ಓದಿ ನಿಮ್ಮ ರಕ್ತ ಕುದ್ದು,ನನ್ನನ್ನು ಹುಡುಕಿಕೊ೦ಡು ಬ೦ದು ಸರಿಯಾಗಿ ತದುಕಬೇಕು ಎ೦ದು ನಿಮಗನ್ನಿಸುತ್ತಿದ್ದರೆ ಸ್ವಲ್ಪ ತಡೆಯಿರಿ,ಇದನ್ನು ಹೇಳುತ್ತಿರುವುದು ನಾನಲ್ಲ.ಪಾಕಿಸ್ತಾನವೆನ್ನುವ ಮೂಢ ರಾಷ್ಟ್ರ ತನ್ನ ಮು೦ದಿನ ಪೀಳಿಗೆಗೆ ಹೇಳಿಕೊಡುತ್ತಿರುವ ಪಾಠವಿದು.ಅರ್ಥವಾಗಲಿಲ್ಲವೇ?ಪಾಕಿಸ್ತಾನದ ಪ್ರಾಥಮಿಕ ಶಾಲೆಗಳ ನಾಲ್ಕನೆಯ ತರಗತಿಯಿ೦ದ ಏಳನೆಯ ತರಗತಿಯವರೆಗಿನ ವಿದ್ಯಾರ್ಥಿಗಳ ’ಸಮಾಜ ವಿಜ್ನಾನ’ದ ಪಾಠಗಳಲ್ಲಿ ಬರುವ ಕೆಲವು ಸಾಲುಗಳ ಸಣ್ಣ ಸಾರಾ೦ಶವಿದು.ವಿಪರ್ಯಾಸವೆ೦ದರೆ ಇ೦ಥಹ ಅಪದ್ಧಗಳಿ೦ದ ಕೂಡಿದ ಇತಿಹಾಸದ ಪಾಠಗಳಿಗೆ ಪಾಕಿಸ್ತಾನಿ ಶಿಕ್ಷಣ ಮ೦ಡಳಿಯು ಯಾವುದೇ ತಕರಾರಿಲ್ಲದೆ ತನ್ನ ಅನುಮತಿಯ ಮೊಹರೆಯನ್ನೊತ್ತಿದೆ ಎ೦ದರೆ ನೀವು ನ೦ಬಲೇಬೇಕು.ಮೇಲಿನ ಹೇಳಿಕೆಗಳನ್ನು ಓದಿದಾಗ ಇಡೀ ವಿಶ್ವದ ಎಳೆಯರು ಓದುವ ಇತಿಹಾಸವೇ ಒ೦ದಾದರೆ ಪಾಕಿಸ್ತಾನದ ಚಿಣ್ಣರು ತಿಳಿದುಕೊಳ್ಳುವ ಇತಿಹಾಸವೇ ಬೇರೆ ಎ೦ದೆನಿಸುವುದು ಸುಳ್ಳಲ್ಲ.ತನ್ನ ದೇಶವಾಸಿಗಳ ಶೌರ್ಯವನ್ನು ವಿವರಿಸುವ ಭರದಲ್ಲಿ ಪಾಕಿಸ್ತಾನಿ ಶಿಕ್ಷಣ ವ್ಯವಸ್ಥೆ ಅದ್ಯಾವ ಪರಿಯ ಸುಳ್ಳು ಹೇಳುತ್ತದೆ ಗೊತ್ತೆ?
ಪ್ರಸ್ಥಾನ: ಕಲ್ಕತ್ತಾದಿಂದ ಬರ್ಲಿನ್ನಿನ ವರೆಗೆ; ದಾಸ್ಯದಿಂದ ಮುಕ್ತಿಯವರೆಗೆ
– ಎಸ್.ಎನ್.ಭಾಸ್ಕರ್
ಕಲ್ಕತ್ತಾ ನಗರದ ಎಲ್ಗಿನ್ ರಸ್ತೆಯ ಮನೆಯೊಂದರಲ್ಲಿನ ಪ್ರತ್ಯೇಕ ಕೋಣೆ. ದಿನಾಂಕ ೧೬ ನೇ ಜನವರಿ, ಇಸವಿ ೧೯೪೧.
“ರಾಷ್ಟ್ರಂ ಧಾರಯತಾಂ ಧ್ರೃವಂ”
“ರಾಷ್ಟ್ರಂ ಅಶ್ವಮೇಧಃ”
ಇದು ಸಂಕಲ್ಪ. ಈ ಧೀರ ಸಂಕಲ್ಪ ಮನೆಮಾಡಿದ್ದ ಆ ವ್ಯಕ್ತಿ ಪದ್ಮಾಸನ ಹಾಕಿ ಕುಳಿತಿದ್ದಾರೆ. ಎಡಗೈನಲ್ಲಿ ಜಪಮಾಲೆ ಮನದಲ್ಲಿ ಪ್ರಣವಮಂತ್ರ. ಮುಚ್ಚಿದ ಕಣ್ಗಳ ಹಿಂದೆ ಅದೆಂತಹ ಉಜ್ವಲ ಭವಿತವ್ಯದ ನೋಟವಿತ್ತೋ..! ಅರಿಯಬಲ್ಲವರು ತಾನೇ ಯಾರಿದ್ದರು ?
ಮಂದಸ್ಮಿತ ಅಂತರ್ಮುಖಿಯಾದ ಮುಖಾರವಿಂದದ ನೆರಳಿನಲ್ಲಿ ಸ್ಪಷ್ಟ ನಿಲುವು ಅಪ್ರಯತ್ನಪೂರ್ವಕವಾಗಿ ನಳನಳಿಸುತಲಿತ್ತು. ಆಳವಾದ ಧ್ಯಾನ. ಜಪಮಾಲೆಯನ್ನು ಹಿಡಿದಿದ್ದ ಕೈ ಬೆರಳುಗಳನ್ನು ಹೊರತು ಪಡಿಸಿ ಇಡೀ ದೇಹ ನಿರ್ಲಿಪ್ತ. ಮನದಲ್ಲಿ ಜ್ವಾಲಾಮುಖಿಯೇ ಇದ್ದರೂ, ಹಿಮಾಲಯದ ಪರ್ವತದಂತೆ ಶಾಂತಸ್ಮಿತ. ಮುಂಜಾನೆಯ ಮೊಗ್ಗರಳುವಂತೆ ನಿಧಾನವಾಗಿ ಕಣ್ಣಗಳನ್ನು ತೆರೆಯುತ್ತಾರೆ. ಎದುರಿಗೆ ಗೋಡೆಯ ಮೇಲೆ ಸ್ವಾಮಿ ವಿವೇಕಾನಂದರ ಭಾವಚಿತ್ರ ಅದರ ಎಡಗಡೆಗೆ ರಾಮಕೃಷ್ಣ ಪರಮಹಂಸರು, ಬಲಗಡೆಗೆ ಮಹರ್ಷಿ ಅರವಿಂದರು. ತನ್ನೆರಡೂ ಕೈಗಳನ್ನೂ ಕಟ್ಟಿ ನಸುನಗುತ್ತಾ ನಿಂತಿದ್ದ ವಿವೇಕಾನಂದರ ಭಾವಚಿತ್ರವನ್ನೇ ನೋಡುತ್ತಾ ನಿಶ್ಚಲರಾಗಿ ಕುಳಿತೇ ಇದ್ದರು. ಅದೆಂತಹ ದಿವ್ಯ ಚೈತನ್ಯ, ದೇದೀಪ್ಯಮಾನವಾದ ಪ್ರಾಂಜ್ವಲ ಕಣ್ಗಳಲ್ಲಿ ಹೊಳೆಯುತ್ತಿದ್ದ ಅಚಲ ವಿಶ್ವಾಸ. ನೋಡುತ್ತಿದ್ದರೇ ಆ ಕಣ್ಗಳೆಂಬ ಸಾಗರದಲ್ಲಿ ಮುಳುಗೇ ಹೋಗುತ್ತೇವೆ. ಸೂಜಿಗಲ್ಲಿಗೆ ಸೆಳೆಯಲ್ಪಡುವ ಕಬ್ಬಿಣದ ಚೂರುಗಳಂತೆ ಸೆಳೆದು ಬಂಧಿಯಾಗುತ್ತೇವೆ. ಎಂತಹ ಆಕರ್ಷಣೀಯ ವ್ಯಕ್ತಿತ್ವ…!! ಕಣ್ತುಂಬಿ ಬಂತು ಮೂಡಿದ ಹನಿಗಳು ಧಳ ಧಳನೇ ಇಳಿಯತೊಡಗಿದವು ನೋಟ ಮಾತ್ರ ನಿಶ್ಚಲ..ನಿರ್ಲಿಪ್ತ. ರೋಮ ರೋಮಗಳಲ್ಲೂ ವಿದ್ಯುತ್ ಸಂಚಾರ. ಅವರ ನಿರ್ಧಾರ ಸಂಪೂರ್ಣವಾಗಿತ್ತು. ರೂಪುರೇಷೆಗಳು ಸಿದ್ದವಾಗಿದ್ದವು. ಇಟ್ಟ ಹೆಜ್ಜೆ ಹಿಂತೆಗೆದ ನಿದರ್ಶನ ಜಾಯಮಾನದಲ್ಲೇ ಇಲ್ಲವಲ್ಲ. “ರಾಷ್ಟ್ರಂ ಧಾರಯತಾಂ ದ್ರೃವಂ: ರಾಷ್ಟ್ರಂ ಅಶ್ವಮೇಧಃ:”.





