ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

24
ಫೆಬ್ರ

ನಮ್ಮ ಮಕ್ಕಳಿಗೆ ಎಂಥ ಶಿಕ್ಷಣ ಕೊಡಬೇಕು?

ವಲವಿ, ಬಿಜಾಪೂರ

ಶಿಕ್ಷಣ ವ್ಯವಸ್ಥೆ೧೯೮೩ ಅಥವಾ ೧೯೮೪ ನೇ ಇಸ್ವಿ ಇರಬಹುದೇನೋ? ಸರಿಯಾಗಿ ನೆನಪಿಲ್ಲ. ನಮ್ಮ ಶಾಲೆಯಲ್ಲಿ (ಆಗ ನಾನು ೮/೯ ತರಗತಿಯಲ್ಲಿ ಒದುತ್ತಿರಬಹುದು ) ಪೈಥಾಗೋರಸನ ಪ್ರಮೇಯವನ್ನು ನನ್ನ ಗುರುಗಳು ಹೇಳುತ್ತಾ ಈ ಸೂತ್ರವನ್ನು ಪೈಥಾಗೊರಸನಕ್ಕಿಂತಲೂ ಮೊದಲು ಹೇಳಿದವನು ಭಾಸ್ಕರಾಚಾರ್ಯ ಎಂದು ವಿವರಿಸುತ್ತಾ ಅವನ ಲೀಲಾವತಿ ಗ್ರಂಥದಲ್ಲಿ ಈ ಸಾಲುಗಳನ್ನು ಹೇಳಲಾಗಿದೆ ಎಂದು ಪೈಥಾಗೋರಸನ ಪ್ರಮೇಯದ ರೀತಿಯಲ್ಲಿ ಬಿಡಿಸಬಹುದಾದ ಒಂದು ಲೆಕ್ಕವನ್ನು ತಿಳಿಸಿದ್ದರು. ಆಗ ನಾನು, ಸರ್ ಹಾಗಿದ್ದರೆ ಅದನ್ನು ಪುಸ್ತಕದಲ್ಲೇಕೆ ಬರೆದಿಲ್ಲ?? ಎಂದು ಸಹಜವಾಗಿ ಕೇಳಿದ್ದೆ. ಆಗವರು ನಮ್ಮನ್ನು ನಾವು(ಭಾರತೀಯರನ್ನು) ಹೊಗಳಿಕೊಳ್ಳುವ ಜಾಯಮಾನ ನಮಗಿಲ್ಲ ಎಂದಿದ್ದರು. ಅವರು ವ್ಯಂಗವಾಗಿ ಇದನ್ನು ಹೇಳಿದರೋ ಸಹಜವಾಗಿ ಹೇಳಿದರೋ ನನಗಂತೂ ಅರ್ಥವಾಗಿರಲಿಲ್ಲ.

ಮುಂದೆ ನಾನು ಶಿಕ್ಷಕಿಯಾಗಿ ಗಣಿತ ವಿಷಯದ ತರಬೇತಿಗಾಗಿ ಹೋದಾಗ ಶ್ರೀಮತಿ ಮಂಜುಳಾ ಜೋಷಿ ಎನ್ನುವ ತರಬೇತುದಾರರು ಇದೇ ವಿಷಯವನ್ನು ಮತ್ತು ಭಾಸ್ಕರಾಚಾರ್ಯರ ಅವೇ ಸಾಲುಗಳನ್ನು ಪೈಥಾಗೊರಸನ ಪ್ರಮೇಯ ಕುರಿತು ಹೇಳುವಾಗ ಪುನಃ ಹೇಳಿದರು. (ಬಹುಶಃ ೨೦೦೨/೨೦೦೩ ರಲ್ಲಿ ಹೇಳಿರಬಹುದು.) ಆಗಲೂ ನಾನು ಮೇಲಿನ ಪ್ರಶ್ನೆ ಕೇಳಿದೆ. ಆಗ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಬದಲಾವಣೆ ಮಾಡಲು ಹೊರಟು ಕೇಸರೀಕರಣಗೊಳಿಸುತ್ತಿದೆ ಎಂಬ ಬೊಬ್ಬೆ ಎಲ್ಲೆಡೆ ಶುರುವಾಗಿತ್ತು. ಹಾಗಾಗಿ ಶ್ರೀಮತಿ ಜೋಷಿಯವರು ನಾವು ಹಾಗೆ ಹೇಳಿಕೊಳ್ಳಲು ಬಿಡುತ್ತಿಲ್ಲ ಸರ್ಕಾರವೇನು ಮಾಡಬೇಕು? ಎಂದು ಪ್ರಶ್ನಿಸಿ ಚರ್ಚೆಯನ್ನು ಹುಟ್ಟುಹಾಕಿದ್ದರು. ಬಹುತೇಕ ಶಿಕ್ಷಕರು ನಮ್ಮ ಪೂರ್ವಿಕರ ಸಾಧನೆಗಳನ್ನು ನಮ್ಮ ಮಕ್ಕಳಿಗೆ ತಿಳಿಸುವದರಿಂದ ಅವರು ಸ್ಪೂರ್ತಿಗೊಳ್ಳುತ್ತಾರೆ ಆತ್ಮವಿಶ್ವಾಸ ಬೆಳೆಸಿಕೊಳ್ಳುತ್ತಾರೆಂದು ವಾದಿಸಿದರು. ಅಂದರೆ ತರಬೇತಿಗೆ ಹಾಜರಾಗಿದ್ದ ೧೦೦ ಶಿಕ್ಷಕರಲ್ಲಿ ಸುಮಾರು ೮೦/೯೦ ಜನ ಹೀಗೆ ವಾದಿಸಿದರೆಂದರೆ ಜನರಿಗೆ ತಮ್ಮ ಪೂರ್ವಿಕರ ಮಹತ್ವದ ಲಸ ಸಂಶೋಧನೆಗಳನ್ನು ತಮ್ಮ ಪರಂಪರೆಯನ್ನು ಮುಂದಿನ ಪೀಳಿಗೆ ತಿಳಿಯಲಿ ಎಂಬ ಆಶಯ ಇದೆ ಎಂದಾಯ್ತು. ಆದರೂ ಅಂಥ ಕೆಲಸಗಳು ನಡೆದಾಗ ಕೆಲವರು ನಿಲ್ಲಿಸಲು ಕೇಸರೀಕರಣವೆಂದು ಬೊಬ್ಬೆ ಹೊಡೆಯುತ್ತಾರೆ. ಪುರೋಹಿತಶಾಹಿಯ ಹುನ್ನಾರವೆಂದು, ಇನ್ನು ಕೆಲವರು ಬ್ರಾಹ್ಮಣಿಕೆಯ ಹೇರಿಕೆ ಎಂದೂ ಏನೇನೋ ಅಲ್ಲಸಲ್ಲದ ಅಪಪ್ರಚಾರ ಮಾಡುತ್ತಾರೆ. ಅದು ಹ್ಯಾಗೋ ಇವರ ದನಿ ಮೇಲಾಗಿ ಪಠ್ಯಪುಸ್ತಕಗಳಲ್ಲಿ ಅದೇ ಬ್ರಿಟೀಷರನ್ನು ಯುರೋಪಿಯನ್ನರನ್ನು ಹೊಗಳುವಂಥ ಪಾಠಗಳೇ ಪಠ್ಯ ಪುಸ್ತಕದಲ್ಲಿ ಬಂದು ಬಿಡುತ್ತವೆ.
ಮತ್ತಷ್ಟು ಓದು »

21
ಫೆಬ್ರ

ರಾಜಿನಾಮೆ ಕೊಡಲು ಸಿದ್ಧ !

– ನವೀನ್ ನಾಯಕ್

ಅಟಲ್,ಅಡ್ವಾಣಿ,ಮೋದಿರಾಜಿನಾಮೆ ಕೊಡಲು ಸಿದ್ಧ !
ಯಾರು ಗೊತ್ತೇ ಹೀಗೆ ಹೇಳಿದ್ದು ? ನರೇಂದ್ರ ಮೋದಿಯವರು !

ಅಡ್ವಾಣಿ ಮತ್ತು ಅಟಲ್ ಜೀಯರ ನಡುವೆ ಎದ್ದ ಭಿನ್ನಾಭಿಪ್ರಾಯಗಳಲ್ಲಿ ಮಹತ್ವದ ಎರಡು ಘಟನೆಗಳು ಒಂದು ಅಯೋಧ್ಯಾ ವಿಚಾರ ಇನ್ನೊಂದು ಮೋದಿಯವರ ರಾಜಿನಾಮೆ ವಿಚಾರ. ಮೋದಿಯವರ ವಿಚಾರದಲ್ಲಿ ಅಡ್ವಾಣಿಯವರು  ತಮ್ಮ ದೃಷ್ಟಿಕೋನವನ್ನು ಬೇರೆ ರೀತಿಯಾಗಿಸಿಕೊಂಡರು. ದಂಗೆಯ ಸಮಯದಲ್ಲಿ ಗುಜರಾತಿಗೆ ತೆರಳಿ ಅಲ್ಲಿಯ ಸಮಾಜದ ವಿವಿಧ ವರ್ಗಕ್ಕೆ ಸೇರಿದ ಅಪಾರ ಜನದೊಂದಿಗೆ ಮಾತನಾಡಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅರಿತುಕೊಂಡರು. ಕ್ರಮಗಳ ಕುರಿತು ಅಲ್ಲಿಯ ಜನತೆ ತೃಪ್ತಿಯನ್ನು ಹೊಂದಿತ್ತು. ಇದರಿಂಧ ಮೋದಿಯವರು ಅಪರಾಧಿಯಾಗಿರಲಿಲ್ಲ ಬದಲಾಗಿ ಅವರು ಸ್ವಯಂ ರಾಜಕೀಯ ಬಲಿಪಶುವಾಗಿದ್ದಾರೆಂಬುದು ತಿಳಿದುಕೊಂಡರು. ಆದ್ದರಿಂದ ಮುಖ್ಯಮಂತ್ರಿಯಾಗಿ ಒಂದು ವರ್ಷವೂ ಕಳೆಯದ ಮೋದಿಯವರನ್ನು ಸಂಕೀರ್ಣ ಕೋಮು ಸನ್ನಿವೇಶಕ್ಕೆ ರಾಜಿನಾಮೆ ಪಡೆಯುವುದು ಅನ್ಯಾಯವಾಗುತ್ತದೆ. ಅದಲ್ಲದೇ ರಾಜಿನಾಮೆ ಪಡೆಯುವುದರಿಂದ ಗುಜರಾತಿನ ಸಾಮಾಜಿಕ ಸ್ಥಿತಿಗತಿಯನ್ನು ಧೀರ್ಘಕಾಲೀನವಾಗಿ ಹದಗೆಡಬಹುದೆಂದು ಅಡ್ವಾಣಿಯವರು ಅರಿತುಕೊಂಡರು.

ಮತ್ತಷ್ಟು ಓದು »

15
ಜನ

ವಿಧಿ 370 – ಚರ್ಚೆ

– ಪ್ರವೀಣ್ ಪಟವರ್ಧನ್

Jammu Kashmir- Debate on Article 370ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮುವಿನಲ್ಲಿ ನಡೆದ ಇತ್ತೀಚೆಗಿನ ಸಮಾವೇಶದಲ್ಲಿ ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯವರ ನಿಲುವನ್ನು ಪ್ರಶ್ನಿಸಿದ್ದಾರೆ. ಡಾ|| ಶ್ಯಾಮಾ ಪ್ರಸಾದ್ ಮುಖರ್ಜೀ ಯವರ ಜಮ್ಮು ಕಾಶ್ಮೀರದಲ್ಲಿನ ಹೋರಾಟವನ್ನು, ಬಲಿದಾನವನ್ನು (ನಿಗೂಢ ಸಾವು ಎಂದರೆ ತಪ್ಪಾಗಲಾರದು) ನೆನಪಿಸಿಕೊಂಡಿದ್ದಾರೆ. ಭಾರತ ಸಂವಿಧಾನದ ವಿಧಿ 370 (Article 370) ಯನ್ನು ಚರ್ಚಿಸಬೇಕೆಂದು ಕೇಳಿಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿಸುವ ಕೆಲ ಮಾಧ್ಯಮ ವರ್ಗದವರು ಮೋದಿಯ ಭಾಷಣವನ್ನು ಆಕ್ಷೇಪಿಸಿದ್ದಾರೆ.ಕಾರಣ ಮಾಜಿ ಪ್ರಧಾನಿ ನೆಹರೂರಿಗೆ ಅವಮಾನವಾಯ್ತೆಂದೋ, ಅಥವಾ ನೆಹರೂರವರು ಕಾಶ್ಮೀರದಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಒಪ್ಪಿಕೊಳ್ಳಲಾಗದೆಂದೋ ಗೊತ್ತಿಲ್ಲ. ಹಿಂದೊಮ್ಮೆ ಸರ್ದಾರ್ ವಲ್ಲಭ ಭಾಯಿ ಪಟೇಲ್, ನೆಹರೂರ ತುಲನೆ ಮಾಡಿದ್ದ ಮೋದಿಯನ್ನು ಆಕ್ಷೇಪಿಸಿದ್ದು ಸ್ಮರಿಸಬಹುದು. ನೆಹರೂ ರವರು ಅಪ್ರತಿಮ ದೇಶಭಕ್ತ, ದ್ರಷ್ಟಾರ; ಅವರ ಬಗ್ಗೆ ಲಘುವಾಗಿ ಮಾತನಾಡಿದ್ದು  ಮೋದಿಯವರ ತಪ್ಪು ಎಂದು ಅವರು ಸಮರ್ಥಿಸಿಕೊಂಡರೆ ಅದಕ್ಕಿಂತ ದೊಡ್ಡ ಹಾಸ್ಯ ಮತ್ತೊಂದಿರಲಿಕ್ಕಿಲ್ಲ.

ಮೊದಲನೆಯದಾಗಿ ನೆಹರೂ ಭಾರತದ ಜೊತೆಗಿನ ಕಾಶ್ಮೀರದ ವಿಲೀನವನ್ನು ಗೊಂದಲಕ್ಕೆ ಮಾರ್ಪಾಟು ಮಾಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಈಗಾಗಲೇ ಹಲವಾರು ಲೇಖಕರು, ಚಿಂತಕರು ತೋರಿಸಿಕೊಟ್ಟಿದ್ದಾರೆ. ಇನ್ನು ನೆಹರೂ ದೇಶಭಕ್ತರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಕ್ಕೆ ಬ್ರಿಟಿಷರಿಂದ ಬಿಡುಗಡೆ ತಂದುಕೊಟ್ಟವರಲ್ಲಿ ಅಗ್ರಗಣ್ಯರು – ಹಾಗಾಗಿ ನೆಹರೂ ರವರನ್ನು ದೂಷಿಸಬಾರದು ಎಂದಾದರೆ – ಅದೂ ಒಪ್ಪಿಕೊಳ್ಳುವ ಮಾತಲ್ಲವೇ ಅಲ್ಲ. ಒಬ್ಬರ ನಿಲುವನ್ನು ಪ್ರಶ್ನಿಸುವ, ತೆಗೆದುಕೊಂಡ ನಿಷ್ಕರ್ಷೆಯಿಂದ ದೇಶಕ್ಕೇ ಮಾರಕವಾದಾಗಲೂ ನಿಲುವನ್ನು ಪ್ರಷ್ನಿಸಬಾರದು ಎನ್ನುವುದು ಮೂರ್ಖತನದ ಪರಮಾವಧಿ. ಈ ದೇಶದ ಸಾಮಾನ್ಯ ಪ್ರಜೆಗೂ ಆ ಹಕ್ಕು ಇದ್ದೇ ಇರುತ್ತದೆ. ಅದೇ ರೀತಿಯಲ್ಲಿ, ಕೆಲ ವರ್ಷಗಳ ನಂತರ ಮೋದಿಯವರು ತೆಗೆದುಕೊಂಡ ಯವುದೋ ನಿಲುವು ತಪ್ಪೆಂದು ಜನರು ಮೋದಿಯವರ ನಿರ್ಧಾರವನ್ನು ಟೀಕಿಸಬಹುದಲ್ಲವೇ?

ಮತ್ತಷ್ಟು ಓದು »

9
ಜನ

ಮೈಸೂರು ಹುಲಿಯ ವಿರುದ್ಧ ಸೆಟೆದು ನಿಂತ ಸಹ್ಯಾದ್ರಿಯ ಹುಲಿ

 – ಕ.ವೆಂ.ನಾಗರಾಜ್

Dhondiya Waghಟಿಪ್ಪು ಸುಲ್ತಾನನ ಪರವಾಗಿ ಮತ್ತು ವಿರುದ್ಧವಾಗಿ ಬರುತ್ತಿರುವ ಲೇಖನಗಳು ಮತ್ತು ಹೇಳಿಕೆಗಳನ್ನು ಗಮನಿಸಿದಾಗ ಹೆಚ್ಚಿನವು ಉತ್ಪ್ರೇಕ್ಷೆಯಿಂದ ಕೂಡಿದುದೆಂದು ಮೇಲ್ನೋಟಕ್ಕೆ ಕಾಣುತ್ತವೆ. ಇದರಲ್ಲಿ ಜಾತಿ, ಧರ್ಮಗಳೂ ಥಳಕು ಹಾಕಿಕೊಂಡು ವಿಷಯವನ್ನು ಜಟಿಲಗೊಳಿಸುತ್ತವೆ. ಟಿಪ್ಪು ಪರಮತ ಸಹಿಷ್ಣುವೋ ಅಲ್ಲವೋ, ಕ್ರೂರಿಯೋ ಅಲ್ಲವೋ ಎಂಬ ಬಗ್ಗೆ ಪ್ರಖರವಾದ ವಾದ, ಪ್ರತಿವಾದಗಳನ್ನು ಕಂಡಿದ್ದೇವೆ. ಟಿಪ್ಪು ಹೆಸರಿನಲ್ಲಿ ಮುಸ್ಲಿಮ್ ವಿಶ್ವವಿದ್ಯಾಲಯದ ಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನ ಇಂತಹ ಚರ್ಚೆಗಳಿಗೆ ಮತ್ತಷ್ಟು ಒತ್ತು ಕೊಟ್ಟಿದೆ. ಇತಿಹಾಸವನ್ನು ಇತಿಹಾಸವಾಗಿಯೇ ಆಧ್ಯಯನ ಮಾಡಬೇಕು, ಅದಕ್ಕೆ ಜಾತ್ಯಾತೀತತೆಯ ಲೇಪ ಕೊಡುವ ಸಲುವಾಗಿ ವಾಸ್ತವತೆಯನ್ನು ಮರೆಮಾಚುವ ಕೆಲಸ ಇತಿಹಾಸಕ್ಕೆ ಮಾಡುವ ಅಪಚಾರವಾಗುತ್ತದೆ ಎಂಬುದನ್ನು ಎಷ್ಟು ಬೇಗ ಮನಗಾಣುತ್ತೇವೋ ಅಷ್ಟೂ ದೇಶಕ್ಕೆ ಒಳ್ಳೆಯದು. ಈಗಾಗಲೇ ಬಹಳಷ್ಟು ಚರ್ಚಿತವಾಗಿರುವ ವಿಷಯಗಳನ್ನು ಪುನಃ ಇಲ್ಲಿ ಪ್ರಸ್ತಾಪಿಸಹೋಗದೆ ಟಿಪ್ಪುವಿನ ಕಾಲದಲ್ಲಿ ಬಂದಿಗಳಾಗಿದ್ದವರ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಪ್ರಸ್ತಾಪಿಸಿ, ಟಿಪ್ಪುವಿನ ವಿರುದ್ಧ ಸೆಟೆದು ನಿಂತಿದ್ದ ಒಬ್ಬ ಧೀರ ಕನ್ನಡಿಗನ ಬಗ್ಗೆ ನನಗೆ ತಿಳಿದಿರುವ ಸಂಗತಿಗಳನ್ನು ಹಂಚಿಕೊಳ್ಳುತ್ತೇನೆ.

ಮೂಲ ವಿಷಯಕ್ಕೆ ಬರುವ ಮುನ್ನ ಮೊದಲೇ ಹೇಳಿದ್ದಂತೆ ಹೈದರ್ ಮತ್ತು ಟಿಪ್ಪೂರ ಕಾಲದಲ್ಲಿ ಬಂದಿಗಳ ಸ್ಥಿತಿಯನ್ನು ತಿಳಿಸುವ ಸಲುವಾಗಿ ಜೇಮ್ಸ್ ಸ್ಕರಿ ಎಂಬ ಬ್ರಿಟಿಷ್ ಕೈದಿಯೊಬ್ಬನ ಬಗ್ಗೆ ಸಂಕ್ಷಿಪ್ತವಾಗಿ ತಿಳಿಯೋಣ. ಜೇಮ್ಸ್ ಸ್ಕರಿಯ ತಂದೆ ಒಬ್ಬ ಬ್ರಿಟಿಷ್ ಸೈನಿಕನಾಗಿದ್ದು, ಸ್ಕರಿ ಚಿಕ್ಕಂದಿನಲ್ಲೇ ಗನ್ ಪೌಡರ್ ಸಾಗಾಟದ ಕೆಲಸ ಮಾಡುತ್ತಿದ್ದು ಅದಕ್ಕಾಗಿ ಸಮುದ್ರಯಾನ ಮಾಡಬೇಕಾಗುತ್ತಿತ್ತು. ಹೀಗೆ ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ತನ್ನ ೧೪ನೆಯ ವಯಸ್ಸಿನಲ್ಲೇ ಸೈಂಟ್ ಹೆಲೆನಾ ಎಂಬ ದ್ವೀಪದಲ್ಲಿ ಫ್ರೆಂಚರಿಂದ ಹಡಗಿನಲ್ಲಿದ್ದ ಇತರ ೧೪ ಸಿಬ್ಬಂದಿಗಳೊಂದಿಗೆ ಕ್ರಿ.ಶ. ೧೭೮೦ರಲ್ಲಿ ಬಂಧಿಸಲ್ಪಟ್ಟ. ಈ ೧೫ ಜನರನ್ನು ಫ್ರೆಂಚ್ ಅಡ್ಮಿರಲ್ ಸಫ್ರೆನ್ ಹೈದರಾಲಿಯ ವಶಕ್ಕೆ ಒಪ್ಪಿಸಿದ. ಇವರುಗಳನ್ನು ಮೊದಲು ಬೆಂಗಳೂರಿನ ಜೈಲಿಗೆ, ನಂತರ ಶ್ರೀರಂಗಪಟ್ಟಣದ ಸೆರೆಮನೆಗೆ ಸಾಗಿಸಲಾಯಿತು. ಸೆರೆಯಾದ ಕೂಡಲೇ ಕಾಲುಗಳಿಗೆ ಬಲವಾದ ಕಬ್ಬಿಣದ ಸರಪಳಿಗಳನ್ನು ಹಾಕಿ, ಕೈಗಳಿಗೂ ಕಬ್ಬಿಣದ ಕೋಳಗಳನ್ನು ಹಾಕಿ ಸೆರೆಮನೆ ತಲುಪುವವರಗೆ ಹಲವಾರು ದಿನಗಳ ಕಾಲ ನಡೆಸಿಕೊಂಡೇ ಹೋಗಲಾಗಿತ್ತು. ಟಿಪ್ಪು ಇವರೆಲ್ಲರನ್ನೂ ಬಲವಂತವಾಗಿ ಇಸ್ಲಾಮ್ ಮತಕ್ಕೆ ಮತಾಂತರಿಸಿ, ಜೇಮ್ಸ್ ಸ್ಕರಿಗೆ ಮುಸ್ಲಿಮ್ ಹೆಸರಾದ ಶಂಶೇರ್ ಖಾನ್ ಎಂದು ಹೊಸ ಹೆಸರು ಕೊಟ್ಟು ಬಲವಂತವಾಗಿ ತನ್ನ ಸೇನೆಯಲ್ಲಿ ಕೆಲಸ ಮಾಡಿಸಿದ್ದ.

ಮತ್ತಷ್ಟು ಓದು »

12
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ

370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6  ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988,  ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.

ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »

15
ನವೆಂ

ಗಾ೦ಧಿ ಹ೦ತಕ ಗೋಡ್ಸೆ ಮತ್ತು ಆರ್.ಎಸ್.ಎಸ್ ಎನ್ನುವ ಭಯೋತ್ಪಾಧಕ ಸ೦ಘಟನೆ ..!!!

– ಗುರುರಾಜ್ ಕೊಡ್ಕಣಿ

Godse-Gandhijiಆತ ಹೇಳುತ್ತಲೇ ಹೋದ .’ನೀವು ಏನೇ ಹೇಳಿ ಸರ್,ಆರ್.ಎಸ್.ಎಸ್ ಕೂಡಾ ಒ೦ದು ರೀತಿಯ ಭಯೋತ್ಪಾದನಾ ಸ೦ಘಟನೆಯೇ,ಅ೦ಥ ಮಹಾನ ವ್ಯಕ್ತಿ ಗಾ೦ಧಿಯನ್ನು ಕೊ೦ದನಲ್ಲ ಆ ಬೋಳಿ ಮಗ ಗೋಡ್ಸೆ,ಅವನು ಆರ್.ಎಸ್.ಎಸ್ ನವನೇ.ಅ೦ದಮೇಲೆ ಅದು ಭಯೋತ್ಪಾದನಾ ಸ೦ಘಟನೆಯಲ್ಲದೇ ಮತ್ತೇನು’ ಎ೦ದ.ಆತ ನನಗೆ ಪರಿಚಿತ.ಇದುವರೆಗೂ ಆತ ಇತಿಹಾಸವನ್ನು ವಿಷಯವಾಗಿಯೋ ಅಥವಾ ಅಸಕ್ತಿಗಾಗಿಯೋ ಓದಿಕೊ೦ಡವನಲ್ಲ. ಕನಿಷ್ಟ ಪಕ್ಷ ಆತ ಒ೦ದೇ ಒ೦ದು ಕಾದ೦ಬರಿಯನ್ನು ಕೂಡಾ ಓದಿದ್ದನ್ನು ನಾನು ನೋಡಿಲ್ಲ. ಆತನಿಗೆ ’ಆರ್.ಎಸ್.ಎಸ್’ನ ವಿಸ್ತೃತ ರೂಪವಾದರೂ ತಿಳಿದಿದಿಯೋ ನನಗೆ ಅನುಮಾನ.ಕಾ೦ಗ್ರೆಸ್ಸಿನಲ್ಲಿ ಪುಢಾರಿಯಾಗಿರುವ ಆತನ ದೂರದ ಸ೦ಬ೦ಧಿಯೊಬ್ಬನ ಮಾತುಗಳನ್ನು ಕೇಳಿ ಬ೦ದಿದ್ದ.ಅದನ್ನೇ ನನ್ನ ಮು೦ದೇ ಒದರುತ್ತಿದ್ದ.ಇನ್ನು ಈತನಿಗೆ ಆರ್.ಎಸ್.ಎಸ್.ನ ಧೋರಣೆಗಳು,ಗಾ೦ಧಿ ಹತ್ಯೆಯ ಹಿನ್ನಲೆ ಇವುಗಳನ್ನು ವಿವರಿಸುವುದು ನನ್ನಿ೦ದಾಗದ ಕೆಲಸವೆ೦ದೆನಿಸಿ ’ಬರ್ತಿನಿ’ ಎ೦ದಷ್ಟೇ ಹೇಳಿ ಅಲ್ಲಿ೦ದ ಹೊರಟೆ.

ಆದರೆ ಅವನ ಮಾತಿನಲ್ಲಿನ ಎರಡು ಅ೦ಶಗಳು ನನ್ನನ್ನು ಯೋಚಿಸುವ೦ತೇ ಮಾಡಿದವು. ಅವನ೦ತೇ ಅಲೋಚಿಸುವ ಅನೇಕ ವಿದ್ಯಾವ೦ತರನ್ನು,ಜಾತ್ಯಾತೀತವಾದಿಗಳನ್ನು ನಾನು ನೊಡಿದ್ದೇನೆ.ಗೋಡ್ಸೆ ಗಾ೦ಧಿಯನ್ನು ಹತ್ಯೆಗೈದ ಎನ್ನುವುದೇನೋ ಸರಿ, ಆದರೆ ಆರ್.ಎಸ್.ಎಸ್ ಭಯೋತ್ಪಾಧನಾ ಸ೦ಘಟನೆಯಾಗಿದ್ದು ಯಾವಾಗ..? ಗೊಡ್ಸೆ ಕೆಲಕಾಲ ಆರ್.ಎಸ್.ಎಸ್ ನ ಸದಸ್ಯನಾಗಿದ್ದ ಎ೦ಬುದನ್ನೂ ಒಪ್ಪಿಕೊಳ್ಳೋಣ.ಅ೦ದ ಮಾತ್ರಕ್ಕೆ ಅರ್.ಎಸ್.ಎಸ್ ಭಯೋತ್ಪಾದನಾ ಸ೦ಘಟನೆಯಾಗಿಬಿಡಬೇಕೇ..? ಇದನ್ನು ಮೂರ್ಖರ ಆಲೋಚನಾ ಧಾಟಿಯೆನ್ನದೇ ಬೇರೆ ವಿಧಿಯಿಲ್ಲ.ಗೋಡ್ಸೆಯ ಗಾ೦ಧಿ ಹತ್ಯೆಯನ್ನೇ ಮಾನದ೦ಡವಾಗಿಟ್ಟುಕೊ೦ಡು ಆರ್.ಎಸ್.ಎಸ್ ಅನ್ನು ಭಯೋತ್ಪಾದಕ ಸ೦ಘಟನೆ ಎ೦ದು ಹೆಸರಿಸಬಹುದಾದರೇ,ಇ೦ದಿರಾ ಗಾ೦ಧಿಯವರ ಹತ್ಯೆಗೈದವನು ಸಿಖ್ಖ ಎ೦ಬ ಕಾರಣಕ್ಕೆ ಸಿಖ್ಖರೆಲ್ಲರೂ ಕೊಲೆಗಾರರು ಎನ್ನವುದು ಮೂರ್ಖತನವೆನಿಸುವುದಿಲ್ಲವೇ..? ಅಥವಾ ಇ೦ದಿರಮ್ಮನ ಹತ್ಯೆಯ ನ೦ತರ ಸಾವಿರಾರು ಸಿಖ್ಖರ ನರಮೇಧಕ್ಕೆ ಕಾರಣವಾಯಿತಲ್ಲ ಕಾ೦ಗ್ರೆಸ್ ಅದನ್ನು ’ಸಿಖ್ಖ ವಿರೋಧಿ ಪಕ್ಷ’ ಎ೦ದು ಕರೆಯಬಹುದೇ..?

ಮತ್ತಷ್ಟು ಓದು »

14
ನವೆಂ

ಚಾಚಾ… Oh My God… !!!

– ಅಶ್ವಿನ್ ಅಮೀನ್

Neharu Gandhijiನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ..  ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.

ಆದರೆ…

ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ  ಮೂರ್ಖತನದ ಪರಮಾವಧಿ…!

ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.

ಮತ್ತಷ್ಟು ಓದು »

23
ಆಕ್ಟೋ

ಜಾತಿ ಆಧಾರಿತ ಮೀಸಲಾತಿಯ ಎರಡು ಮುಖಗಳು

– ಮು.ಅ ಶ್ರೀರಂಗ,ಬೆಂಗಳೂರು

Reservtion is Gud r Badಜಾತಿ ಆಧಾರಿತ ಮೀಸಲಾತಿ ಕುರಿತ ಪರ-ವಿರೋಧ ಚರ್ಚೆಗಳಲ್ಲಿ ಅದರ ಪರವಾಗಿ ವಾದಿಸುತ್ತಿರುವವರ ಸಂಖ್ಯೆ ಜಾಸ್ತಿಯೇ ಇದೆ. ಇದಕ್ಕೆ ಅವರುಗಳು ಮನುವಿನಿಂದ ಹಿಡಿದು ಪುರೋಹಿತಶಾಹಿ ವಾದಗಳನ್ನು ಮಂಡಿಸುತ್ತಾ ಬಂದಿದ್ದಾರೆ. ವಿರೋಧವಾಗಿರುವವರದ್ದು ಅವರವರ ಸದ್ಯದ ಸ್ವಂತ ಅನುಭವವಷ್ಟೇ ಆಗಿ ಕ್ಷೀಣ ದನಿಯಾಗಿದೆ. ಮೀಸಲಾತಿಯು ವೋಟಿನ ರಾಜಕಾರಣಕ್ಕೆ ನೇರವಾಗಿ ಸಂಬಂಧಿಸಿರುವ ಕಾರಣದಿಂದ ಸ್ವಾತಂತ್ರ್ಯಾನಂತರ ಮೀಸಲಾತಿಯ ಗಡಿಗಳು(line of limits) ವಿಸ್ತಾರಗೊಳ್ಳುತ್ತಲೇ ಇದೆ. ಇದು ವೈಜ್ನಾನಿಕವೋ,ಅವೈಜ್ನಾನಿಕವೋ ಅಥವಾ ಸಹಜ ನ್ಯಾಯವೋ ಎಂಬ ಯಾವುದೇ ಚರ್ಚೆಗೆ, ಸಂವಾದಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಏನೂ ಬೆಲೆಯಿಲ್ಲ. ಇಷ್ಟಾಗಿಯೂ ಸಹ ಮೀಸಲಾತಿಯ ಗಡಿ ರೇಖೆಯಿಂದಾಚೆಗೆ ಇರುವ ಜಾತಿಗಳಲ್ಲಿನ(ಸರ್ಕಾರದ ದೃಷ್ಟಿಯಲ್ಲಿ ಮುಂದುವರಿದವರು, ಮೇಲ್ಜಾತಿಯವರು) ಕೆಲವರು ಆಗಾಗ ತಮ್ಮ ವಿರೋಧವನ್ನು ಧರಣಿ,ಮೆರವಣಿಗೆಗಳ ಮೂಲಕ ವ್ಯಕ್ತಪಡಿಸುತ್ತಿರುತ್ತಾರೆ. ತೀರಾ ಭಾವಾವೇಶಕ್ಕೊಳಗಾದ ಒಂದಿಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುತ್ತಾರೆ;ಪ್ರಾಣ ಕಳೆದುಕೊಳ್ಳುತ್ತಾರೆ. ಕಾಲ ಕಳೆದಂತೆ ಜನಗಳು ಅದನ್ನೆಲ್ಲಾ ಮರೆಯುತ್ತಾರೆ. ಸರ್ಕಾರಗಳು ಬದಲಾಗುತ್ತವೆ. ವ್ಯವಸ್ಥೆ ಹಿಂದಿನಂತೆಯೇ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತದೆ. ತಮ್ಮ ಹಿರಿಯರು ಮಾಡಿದರೆನ್ನಲಾದ ಪಾಪದ ಹೊರೆ ಹೊರಬೇಕಾಗಿ ಬಂದಿರುವ ಮೇಲ್ಜಾತಿಯ ಯುವ ಜನತೆ “ಯಾವ ರಾಜ ಬಂದರೇನು ರಾಗಿ ಬೀಸುವುದಂತೂ ತಪ್ಪುವುದಿಲ್ಲವಲ್ಲ” ಎಂಬ ಗಾದೆಯಂತೆ ಸನ್ನಿವೇಶಕ್ಕೆ ಹೊಂದಿಕೊಂಡು ಹೋಗುತ್ತಾರೆ. ಕ್ರಮೇಣ ಇದೇ ಅಭ್ಯಾಸವಾಗಿ ತಾನಾಯ್ತು ತನ್ನ ಸಂಸಾರವಾಯ್ತು ಎಂದು ಅಷ್ಟಕ್ಕೇ ತಮ್ಮನ್ನು ಸೀಮಿತಗೊಳಿಸಿಕೊಳ್ಳುತ್ತಾರೆ.

ಮತ್ತಷ್ಟು ಓದು »

9
ಆಕ್ಟೋ

ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……

– ಶಂಕರ್ ನಾರಾಯಣ್

Bodhi Dharma N Oshoಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..

ಆದರೆ,

ಮತ್ತಷ್ಟು ಓದು »