ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

30
ಸೆಪ್ಟೆಂ

ಇತಿಹಾಸದ ಅಚ್ಚರಿಗಳಲ್ಲಿ ಒಂದು ಇಣುಕು: ‘ಕರ್ನಾಟಕದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಹುಗಳು’

– ರಾಘವೇಂದ್ರ ಅಡಿಗ ಹೆಚ್.ಎನ್

Chidananda Murthy - Kannada ಕಳೆದ ವಾರ ಕನ್ನಡದ ಒಂದು ಅಪೂರ್ವ ಮತ್ತು ನೂತನ ಸ್ವರೂಪದ ಕೃತಿಯೊಂದರ ಬಿಡುಗಡೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಿತು.( ಆ ಸಂದರ್ಭದಲ್ಲಿ ನಾನೂ ಸಹ ಅಲ್ಲಿ ಇದ್ದೆ ಎನ್ನುವ ವಿಚಾರವೇ ನನಗೊಂದು ಖುಷಿಯ ಸಂಗತಿ.) ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಅಗ್ರರಲ್ಲಿ ಒಬ್ಬರಾದ ಡಾ. ಎಮ್. ಚಿದಾನಂದಮೂರ್ತಿಯವರ ‘ಕರ್ನಾಟದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಗಳು’ ಎನ್ನುವ ಹೆಸರಿನ ಕೃತಿಯು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಅದರಲ್ಲಿರುವ ವಿಷಯದ ದೃಷ್ಟಿಯಿಂದ ತೀರಾ ವಿನೂತನವಾದುದ ಅಷ್ಟೇ ಅಲ್ಲ ಬಹು ಮೌಲ್ಯಯುತವಾದುದು ಕೂಡ. ಲೇಖಕರೇ ಹೇಳುವಂತೆ ‘ಇಂತಹಾ ಒಂದು ಪುಸ್ತಕ ಕನ್ನಡದಲ್ಲಿ ಬರುತ್ತಿರುವುದು ಇದೇ ಮೊದಲು,ಇತರೆ ಭಾರತೀಯ ಭಾಷೇಗಳಲ್ಲಿಯೂ ಬಂದಂತಿಲ್ಲ’. ಈ ಒಂದು ಪುಸ್ತಕದಿಂದ ನಾವು-ನೀವು ಓದಿರುವ ಕನ್ನಡದ ಪ್ರಾಚೀನ ಕವಿಗಳು, ನಮ್ಮನ್ನಾಳಿದ ರಾಜ ಮಹಾರಾಜರ ವಂಶಸ್ಥರ ಕುರಿತಾಗಿ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬಹುದು.

ಕನ್ನಡದ ಶ್ರೇಷ್ಠ ಸಂಶೋಧಕರೂ, ಚಿಂತಕರೂ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ. ಎಮ್. ಚಿದಾನಂದಮೂರ್ತಿಗಳ ಈ ಕಿರುಹೊತ್ತಿಗೆ ಅವರ ಹಲವು ವರ್ಷಗಳ ಪರಿಶ್ರಮದ ಫಲ. ಶತ ಶತಮಾನಗಳ ಹಿಂದೆ ಆಳಿಹೋದ ರಾಜವಂಶಸ್ಥರ, ನೂರಾರು-ಸಾವಿರಾರು ವರ್ಷಗಳ ಹಿಂದೆ ಬದುಕಿ ಕಾವ್ಯಗಳನ್ನು ರಚಿಸಿದ ಪ್ರಾಚೀನ ಕವಿಮಹೋದಯರ ಈಗಿನ ವಂಶಸ್ಥರು ಯಾರೆನ್ನುವುದನ್ನು ಪತ್ತೆ ಮಾಡಿ ಅವರನ್ನು ಸಂದರ್ಶಿಸಿ, ಅವರ ಬಳಿ ಇದ್ದ ಅಂದಿನ ಕಾಲದ ಕುರುಹುಗಳನ್ನು ನೋಡಿ ಅದರ ಬಗ್ಗೆ ಲೇಖನ ಅಥವಾ ಪುಸ್ತಕ ಬರೆಯುವುದು ಅಷ್ಟೇನೂ ಸುಲಭವಲ್ಲ. ಉದಾಹರಣೆಗೆ ಕನ್ನಡದ ಆದಿಕವಿ ಪಂಪನನ್ನು ತೆಗೆದುಕೊಂಡರೆ ಅವನ ಕಾಲ ಕ್ರಿ.ಶ.೯೦೨. ಅವನು ‘ವಿಕ್ರಮಾರ್ಜುನ ವಿಜಯ’ ಕಾವ್ಯವನ್ನು ಪೂರ್ಣಗೊಳಿಸಿದ್ದು ಕ್ರಿ.ಶ.೯೪೨ ರಲ್ಲಿ. ಅಂದರೆ ಇಂದಿಗೆ ಸುಮಾರು ಸಾವಿರದ ನೂರು ವರ್ಷಗಳಾದವು. ಹೀಗೆ ಸಾವಿರ ವರ್ಷಗಳ ಹಿಂದೆ ಬದುಕಿದ್ದ ಪಂಪನ ತಂದೆ ಹಾಗೂ ತಾಯಿಯ ವಂಶಸ್ಥರ ವಿವರಗಳಾನ್ನು ಪತ್ತೆ ಮಾಡುವುದು ಮತ್ತು ಅವರನ್ನು ಸ್ವತಃ ಸಂದರ್ಶಿಸಿ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿ ಪುಸ್ತಕ ಪ್ರಕಟಿಸುವುದು ಬಲು ಅಪರೂಪದ ಸಂಗತಿ. ಹೀಗಾಗೆ ಇಂತಹಾ ಪುಸ್ತಕವು ಕನ್ನಡದಲ್ಲಿ ತೀರಾ ನೂತನವಾಗಿರುವುದು ಸಾಧ್ಯ.

ಮತ್ತಷ್ಟು ಓದು »

4
ಸೆಪ್ಟೆಂ

“ಡುಂಢಿ” ಅನ್ನುವ ಕೃತಿ ಮತ್ತು “ಸೆಕ್ಯುಲರಿಸಂ” ಅನ್ನುವ ಅವಕಾಶವಾದ …!

– ರಾಕೇಶ್ ಶೆಟ್ಟಿ

Dundi mattu CSLC“ಡುಂಢಿ”ಯ ಬಗ್ಗೆ ಗೆಳೆಯರೊಬ್ಬರ ಜೊತೆ ಮಾತನಾಡುತಿದ್ದೆ. ಅವರು “Immortals of Meluha” ಪುಸ್ತಕವನ್ನು ಉಲ್ಲೇಖಿಸಿ, “ಆ ಪುಸ್ತಕದಲ್ಲಿ ಶಿವ, ಗಾಂಜಾ ಸೇದುತ್ತಾನೆ,ಟಿಬೆಟಿಯನ್ ಮೂಲದವನು ಅಂತ ಬರೆದಿತ್ತು ಅದು ಭರ್ಜರಿ ಸೇಲ್ ಆಗಿತ್ತು.ಈ ಡುಂಢಿ ಪ್ರಿಂಟ್ ಹಾಕಿಸಿದ್ದೇ ೧೫೦-೨೦೦ ಪ್ರತಿಯಂತಲ್ಲ” ಅಂದರು. ನಾನಂದೆ “ನಿಮಗೆ, ’ದೇವರ ಪಾಲಿಟಿಕ್ಸ್’ ಅರ್ಥವಾಗಿಲ್ಲ. ಆ ಪುಸ್ತಕದಲ್ಲಿ ಶಿವನನ್ನು, ’ಟಿಬೆಟಿಯನ್’ ಅನ್ನುವ ಬದಲೋ ’ಬ್ರಾಹ್ಮಣ/ಆರ್ಯ’ ಅಂತೇನಾದರೂ ಚಿತ್ರಿಸಿದ್ದರೇ ಈಗ ಡುಂಢಿಯ ಪರ ಮಾತನಾಡುತ್ತಿರುವ ಕರ್ನಾಟಕದ ಸೋ-ಕಾಲ್ಡ್ ಸೆಕ್ಯುಲರ್ ಗಳೆಲ್ಲ ಆ ಪುಸ್ತಕದ ವಿರುದ್ಧ ಮಾತನಾಡುತಿದ್ದರು”.

“ಒಬ್ಬ ನಕಲಿಯೋ ಅಥವಾ ಹಲವಾರು ಅಸಲಿಗಳ ಒಂದು ಸಂಕೇತವೊ ಆಗಿರುವ ಗಣಪತಿಯನ್ನು ಕುರಿತು ಹಲವು ಪುರಾಣಗಳು ಹಲವಾರು ರೀತಿಯ ಕಥೆಗಳನ್ನು ಹೇಳಿವೆ. ಈ ಢುಂಢೀಯೂ ಹಾಗೇ ಒಂದು ಮನೋರಂಜನೆ ಅಥವಾ ವಿಚಾರಕ್ಕೆ ಹಚ್ಚಬಹುದಾದ, ನಿಜವೆಂದು ನಂಬಲು ಇಷ್ಟ ಪಡುವ ಹೂರಣದ ಒಂದು ಕಲ್ಪನೆಯ ಪುರಾಣವೇ.” ಅನ್ನುವ ಮಾತುಗಳನ್ನಿಟ್ಟುಕೊಂಡ “ಡುಂಢಿ” ಅನ್ನುವ ಕೃತಿಯನ್ನು ಓದದೇ ಅದು ಕೃತಿಯೋ,ವಿಕೃತಿಯೋ ಅಂತ ನಿರ್ಧಾರ ಮಾಡುವುದು ಹೇಗೆ? ಅನ್ನುವ ಪ್ರಶ್ನೆಯನ್ನು ಮುಂದಿಡುತ್ತ ಮತ್ತು ಒಬ್ಬ ಲೇಖಕನನ್ನು ಬಂಧಿಸುವಂತ ಮಟ್ಟದವರೆಗೂ ಹೋಗಿದ್ದನ್ನು ವಿರೋಧಿಸುತ್ತಲೇ,ಈ ಮಾತು ಕೇಳುತಿದ್ದೇನೆ.ನಾನು ನನ್ನ ಗೆಳೆಯರಿಗೆ ಹೇಳಿದ ಮಾತಿನಲ್ಲಿ ಸತ್ಯವಿರಬಹುದು ಅಂತ ನಿಮಗೂ ಅನ್ನಿಸುವುದಿಲ್ಲವೇ? (“ಶಿವ”ನಮ್ಮವನು ಅವನನ್ನು ಹೈಜಾಕ್ ಮಾಡಿದ್ದಾರೆ ಅಂತ ಬರೆದವರನ್ನೂ ನೋಡಿದ್ದೇನೆ. ದೇವರನ್ನೂ ಈ ಮಂದಿ ತಮ್ಮ ಗುಂಪಿನೊಳಗೆ ಸೇರಿಸಿಕೊಳ್ಳುತ್ತಾರೆ ಶಿವಾ ಶಿವಾ…!)

ಮತ್ತಷ್ಟು ಓದು »

28
ಆಗಸ್ಟ್

ಸ್ವಾತಂತ್ರ್ಯ ಇನ್ನೆಷ್ಟು ದಿನ !!!

– ಮಧುಚಂದ್ರ , ಭದ್ರಾವತಿ                      

೨೯ ಮೇ ೧೪೫೩, ಅಟ್ಟೋಮನ್ ತುರ್ಕರು ಕಾಂಸ್ಟನ್ಟಿನೋಪಾಲ್ ನಗರವನ್ನು ಆಕ್ರಮಿಸಿ (ಇಂದಿನ ಇಸ್ತಾಂಬುಲ್) ತಮ್ಮ ವಶಕ್ಕೆ ತಗೆದುಕೊಂಡ ದಿನ. ಈ ದಿನಕ್ಕೂ ಮುಂಚೆ ಪೂರ್ವ ಮತ್ತು ಪಶ್ಚಿಮಗಳ ವ್ಯಾಪಾರ ಮತ್ತು ಭಾಂದವ್ಯ ಸಮುದ್ರ ಮಾರ್ಗವಾಗಿ ಈ ನಗರದ ಮೂಲಕವೇ ನಡೆಯುತ್ತಿತ್ತು. ತುರ್ಕರ ಆಕ್ರಮಣದೊಂದಿಗೆ ಪಶ್ಚಿಮದವರ ವ್ಯಾಪಾರದ ಬಾಗಿಲು ಸಂಪೂರ್ಣವಾಗಿ ಮುಚ್ಚಲ್ಪಟ್ಟಿತು. ಹೊಸ ಮಾರ್ಗದ ಅನ್ವೇಷಣೆ ಪಶ್ಸಿಮದವರಿಗೆ ಅನಿವಾರ್ಯವಾಯಿತು.

ಮೊದಲಿಗೆ ಸ್ಪೇನ್ ದೇಶದ ನಾವಿಕ ಕೊಲಂಬಸ್ ಮುಂದಾದ, ಭಾರತವನ್ನು ಕಂಡುಹಿಡಿಯುವ ಬದಲಿಗೆ ಅಮೇರಿಕ ಖಂಡವನ್ನು ಅನ್ವೇಷಿಸಿದ. ನಂತರ ಪೋರ್ಚುಗಲ್ನ ನಾವಿಕ ಬರ್ತ ಲೋಮಿಯ ಡಯಾಜ್ , ಪೋರ್ಚುಗಲ್ ದೇಶದ ದಕ್ಷಿಣದಿಂದ ಆರಂಭಿಸಿ ಆಫ್ರಿಕಾ ಖಂಡದ ತುದಿಯನ್ನು ಮುಟ್ಟಿದ ಆದರೆ ಸಮುದ್ರದಲ್ಲಿ ಉಂಟಾದ ಭಾರಿ ಅನಾಹುತಗಳಿಂದ ಅವನ ಸಹ ನಾವಿಕರು ಮುಂದೆ ಸಾಗಲು ನಿರಾಕರಿಸಿದರು. ಆಫ್ರಿಕದ ತುಟ್ಟ ತುದಿ ಕೇಪ್ ಆಫ್ ಗುಡ್ ಹೋಪ್ ಕಂಡು ಹಿಡಿದು ಪೋರ್ಚುಗಲ್ಗೆ ಹಿಂದಿರುಗಿದ. ಮತ್ತೆ ಅದೇ ಯತ್ನವನ್ನು ಪೋರ್ಚುಗಲ್ಲಿನ ವಾಸ್ಕೋ ಡ ಗಾಮ ಬರ್ತ ಲೋಮಿಯ ಡಯಾಜ್ ಬಳಸಿದ ಮಾರ್ಗದಲ್ಲೇ ಹೋಗಿ ಆಫ್ರಿಕಾ ಖಂಡವನ್ನು ಒಂದು ಸುತ್ತು ಹಾಕಿ ಕಡೆಗೆ ಕೇರಳದ ಕಲ್ಲಿ ಕೋಟೆಯಲ್ಲಿ ೨೦ ಮೇ ೧೪೯೮ ಕಾಲಿಟ್ಟ. ಕಲ್ಲಿಕೋಟೆಯ ದೊರೆ ಜಮೂರಿನ ವಾಸ್ಕೋ ಡ ಗಾಮನನ್ನು ಆತ್ಮೀಯವಾಗಿ ಸ್ವಾಗತಿಸಿ ಪೂರ್ವ ಪಶ್ಚಿಮಗಳ ವ್ಯಾಪಾರಕ್ಕೆ ಮುನ್ನುಡಿ ಬರೆದ.

ಸತತ ನೂರು ವರ್ಷಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಭಾರತದ ಪಶ್ಚಿಮ ಸಮುದ್ರ ತೀರದ ಎಲ್ಲಾ ಪ್ರಮುಖ ನಗರದಲ್ಲಿ ಒಂದು ಒಂದು ಶಾಖೆಗಳನ್ನು ಸ್ಥಾಪಿಸಿ ಪೋರ್ಚುಗೀಸರು ತಮ್ಮ ವ್ಯಾಪಾರ ಮುಂದುವರೆಸಿದರು. ೧೬೦೦ ಬ್ರಿಟೀಷರು, ೧೬೦೨ ರಲ್ಲಿ ಡಚ್ಚರು, ೧೬೬೪ ರಲ್ಲಿ ಫ್ರೆಂಚರು ಈಸ್ಟ್ ಇಂಡಿಯಾ ಕಂಪನಿ ಹೆಸರಿನಲ್ಲಿ ಭಾರತ ಖಂಡದಲ್ಲಿ ನಿಧಾನವಾಗಿ ತಮ್ಮ ಖಾತೆ ತೆರೆದರು.

ಮತ್ತಷ್ಟು ಓದು »

22
ಆಗಸ್ಟ್

ಮ್ಯೂಟ್ ಮೋಡ್ ನಲ್ಲಿ ಭಾರತ, ಫೈಟ್ ಮೋಡ್ ನಲ್ಲಿ ಚೀನಾ!!

– ವಿಕಾಸ್ ಪುತ್ತೂರು

Mouna -China‘ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು’ ಎಂದು ಸಾರುತ್ತಲೇ “ಶಾಂತಿಧೂತ”ನೆಂದು ಖ್ಯಾತಿಗಳಿಸಿದ  ಆ ಗಾಂಧಿಯೂ ಕೂಡ, ಇಂದಿದ್ದಿದ್ದರೆ, ಪ್ರಸ್ತುತ ಚೀನಾದ ತಕರಾರುಗಳಿಗೆ ಬೇಸತ್ತು ಕೆನ್ನೆ ತೋರಿಸುವುದನ್ನು ನಿಲ್ಲಿಸಿ, ಒಂದು  ಬಾರಿಸಿ ಬಿಡುತ್ತಿದ್ದರೇನೋ! ಅದೇನೆ ಇರಲಿ,  ನಮ್ಮ ಪ್ರಧಾನಿಗಳು ಮಾತ್ರ, ಚೀನಾ ವಿಷಯದಲ್ಲಿ ಆ ಗಾಂಧಿಯ ಮೂರು ಮಂಗಗಳ ಗುಣಗಳನ್ನು ಯತಾವತ್ತಾಗಿ  ಅನುಸರಿಸಿರುವಂತೆ ಕಾಣುತ್ತಿದೆ, ಚೀನಾದ ಅತಿಕ್ರಮಣಗಳನ್ನು ಕಂಡೂ ಕಾಣದಂತೆ ಕುರುಡರಾಗಿಬಿಟ್ಟಿದ್ದಾರೆ, ಅವರ ಆಕ್ರಮಣಗಳ ಬಗ್ಗೆ ತುಟಿಬಿಚ್ಚದೆ  ಚಕಾರವೆತ್ತದೆ ಮೂಕರಾಗಿಬಿಟ್ಟಿದ್ದಾರೆ,  ಚಿಂಗಿಯರ ಕುತಂತ್ರಗಳನ್ನಂತೂ  ಬೇಕೆಂದೇ ಕೇಳಿಸಿಕೊಳ್ಳದೆ ಕಿವುಡನೂ ಆಗಿಬಿಟ್ಟಿದ್ದಾರೆ! ಅವರೇ ಹೇಳುವಂತೆ, ಗಾಂಧಿಯ ಹಾದಿಯಲ್ಲಿ ಸಾಗುವುದೆಂದರೆ ಇದೇ ಇರಬೇಕೇನೋ! ಕಳೆದ ಹತ್ತು ವರ್ಷಗಳಲ್ಲಿ ಮನಮೋಹನರು ಸದನ ಪ್ರವೇಶಿಸಿರುವುದಕ್ಕಿಂತ ಹೆಚ್ಚು  ಬಾರಿ ಚೀನಿಯರು ಭಾರತವನ್ನು ಅತಿಕ್ರಮವಾಗಿ  ಪ್ರವೇಶಿಸಿದ್ದಾರೆ. ಆರ್ಥಿಕವಾಗಿ ಹಾಗು ಸಾಂಸ್ಕೃತಿಕವಾಗಿ  ಭಾರತವನ್ನು ಮುಗಿಸಲು ತುದಿಗಾಲಲ್ಲಿ ನಿಂತು ಅತ್ಯಂತ ವ್ಯವಸ್ತಿತವಾಗಿ ಷಡ್ಯಂತ್ರ ರಚಿಸಿರುವ,  ರಚಿಸುತ್ತಿರುವ ಚೀನಾಗೆ ಸಮರ್ಥವಾಗಿ ಉತ್ತರ ಕೊಡಲು ಸಾಧ್ಯವಾಗದೆ, ಪ್ರಶ್ನೆಯ ಹುಡುಕಾಟದಲ್ಲಿಯೇ ಕಪಟ ನಾಟಕವಾಡುತ್ತಿದೆ ನಮ್ಮ ಕೇಂದ್ರ ಸರಕಾರ.

ಭಾರತದ ಅತಿದೊಡ್ಡ ಶತ್ರು ಪಾಕಿಸ್ತಾನ, ಬೇರೆಲ್ಲಾ ರಾಷ್ಟ್ರಗಳು ಬಹುತೇಕ ಭಾರತದ ಮಿತ್ರರಾಷ್ಟ್ರಗಳೇ ಎಂದು ವಿಶ್ವಾವ್ಯಾಪಿ ಬಿಂಬಿತವಾಗಿರುವುದು ಭಾರತದ ಅತಿದೊಡ್ಡ ದುರಂತ. ರಾಷ್ಟ್ರೀಯ ಭದ್ರತೆಯ ವಾಸ್ತವಕ್ಕಿಳಿದು ನೋಡಿದಾಗ ಭಾರತಕ್ಕೆ, ಪಾಕಿಸ್ತಾನಕ್ಕಿಂತಲೂ  ಚೀನಾದಿಂದ ನೂರು ಪಟ್ಟು ಹೆಚ್ಚು ಆತಂಕ  ಸೃಷ್ಟಿಯಾಗಿದೆ. ಭಾರತದ ಭೂ ಹಾಗು ಸಾಗರಕ್ಕೆ, ಇತರೆ ಒಟ್ಟು 9ರಾಷ್ಟ್ರಗಳು ಅಂಟಿಕೊಂಡಿವೆ, ದಕ್ಷಿಣಕ್ಕೆ ಶ್ರೀಲಂಕಾ ಹಾಗು ಮಾಲ್ಡೀವ್ಸ್. ಪಶ್ಚಿಮಕ್ಕೆ ಪಾಕಿಸ್ತಾನ ಹಾಗು ಅಫಗಾನಿಸ್ತಾನ, ಪೂರ್ವಕ್ಕೆ ನೇಪಾಳ, ಭೂತಾನ್, ಬಾಂಗ್ಲಾದೇಶ ಹಾಗು ಬರ್ಮಾ ಮತ್ತು ಉತ್ತರದಿಂದ ಪೂರ್ವದವರೆಗೂ ಮಹಾಕಂಟಕ ಚೀನಾ. ಈ 9ನೆರೆರಾಷ್ಟ್ರಗಳ ಪೈಕಿ ಭೂತಾನ್ ಎಂಬ ಪುಟ್ಟ ದೇಶವೊಂದನ್ನು  ಬಿಟ್ಟರೆ, ಉಳಿದ  8 ದೇಶಗಳೊಡನೆಯೂ  ಭಾರತದ  ಸಂಬಂಧ ಹಳಸಿದೆ! ಅತ್ಯಂತ ಆತಂಕಕಾರಿ  ಸಂಗತಿ ಎಂದರೆ, ಭಾರತವನ್ನು ಮಣಿಸಲು ಹಾತೊರೆಯುತ್ತಿರುವ ಚೀನಾ, ಉಳಿದ 7 ರಾಷ್ಟ್ರಗಳನ್ನೂ ಒಟ್ಟುಗೂಡಿಸಿ ಬಿಲಿಯನ್ ಡಾಲರ್ಗಟ್ಟಲೆ ಬಂಡವಾಳ ಹೂಡುತ್ತಾ, ತನ್ನ ಸಂಗಡ ಶಿಶ್ಯವೃಂದದಂತೆ ಇರಿಸಿಕೊಂಡಿದೆ.

ಮತ್ತಷ್ಟು ಓದು »

15
ಆಗಸ್ಟ್

ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!

– ರಾಕೇಶ್ ಶೆಟ್ಟಿ

ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,

ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”

“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು »

31
ಜುಲೈ

ಅವಮಾನಿಸಲು ಕರೆಸಿದವರು ಬಿರುದುಕೊಟ್ಟು ಕಳುಹಿಸಿದರು

– ಸಂತೋಷ್ ತಮ್ಮಯ್ಯ

Milkha Singh೧೯೪೭. ಹಳೆಯ ದೆಹಲಿಯ ಪುರಾನಾ ಕಿಲಾ. ದೇಶಕ್ಕೆ ಸ್ವಾತಂತ್ರ್ಯ ಬಂದು ಅತ್ತ ಲಾಲ್ ಕಿಲಾದಲ್ಲಿ ತಿರಂಗಾ ಹಾರಿ ಜನರು ಕುಣಿಯುತ್ತಿದ್ದರೆ  ಪುರಾನಾ ಕಿಲಾಕ್ಕೆ ಆ ಭಾಗ್ಯವಿರಲಿಲ್ಲ. ಏಕೆಂದರೆ ಅದೇ ಹೊತ್ತಿಗೆ ದೇಶವೂ ತುಂಡಾಗಿ, ಪಾಕಿಸ್ಥಾನದಿಂದ ರಾಶಿರಾಶಿ ಹೆಣಗಳೂ , ಹಿಂಡುಹಿಂಡಾಗಿ ನಿರ್ವಸಿತರೂ ದಿಕ್ಕಿಲ್ಲದೆ ಬರುತ್ತಿದ್ದರು. ಆಗ ಅವರಿಗೆಲ್ಲಾ ತಾತ್ಕಾಲಿಕ ನೆಲೆಯನ್ನು ಕೊಟ್ಟಿದ್ದು ಈ ಪುರಾನಾ ಕಿಲಾ. ಹಳೆಯ ಕೋಟೆ. ಧ್ವಜ ಹಾರದ ಕೋಟೆ. ಹಾರಿಸಿದರೂ ಯಾರೂ ಸಂತೋಷ ಪಡದಿರುವಂಥ ಕೋಟೆ. ದೂರದ ಮುಲ್ತಾನ್, ಸಿಂಧ್, ಪಂಜಾಬ್‌ಗಳಿಂದ ಬಂದವರೆಲ್ಲಾ ಅಲ್ಲಿ ನೆರೆದು ಬೇರೆಯೇ ಆದ ಒಂದು ಭಾರತ ಅಲ್ಲಿ ನಿರ್ಮಾಣವಾಗಿತ್ತು. ಪುನರ್ವಸತಿ ಆಗುವವರೆಗೆ ಅವರಿಗೆಲ್ಲಾ ಅದೇ ಮನೆ. ಅದೇ ನೆಲೆ. ಅಂಥ ಒಂದು ದಿನ ಸಂಘಟನೆಯೊಂದು ನಿರ್ವಸಿತರಿಗೆ ಆಹಾರದ ಪೊಟ್ಟಣಗಳನ್ನು ವಿತರಣೆ ಮಾಡುತ್ತಿತ್ತು. ಅಲ್ಲಿ ಹನ್ನೆರಡು ವರ್ಷದ ಬಾಲಕ ಜನರ ನಡುವೆ ನುಸುಳುತ್ತಿದ್ದ. ದೊಡ್ಡ ಕೈಗಳ ಮಧ್ಯೆ ಸಣ್ಣ ಕೈಗೆ ಪೊಟ್ಟಣಗಳು ಎಟುಕುತ್ತಿರಲಿಲ್ಲ. ದೊಡ್ಡ ಕೈಗಳು ಸಂತ್ರಪ್ತವಾದ ಮೇಲೆ ಹಸಿದಿದ್ದ ಆ ಬಾಲಕನಿಗೂ ಆಹಾರದ ಪೊಟ್ಟಣ ಸಿಕ್ಕಿತ್ತು.

ಆ ಬಾಲಕ ಮುಂದೆ ಫ್ಲೈಯಿಂಗ್ ಸಿಕ್ಖ್ ಎಂದೇ ಹೆಸರಾದ ಖ್ಯಾತ ಅಥ್ಲೆಟ್ ಮಿಲ್ಖಾ ಸಿಂಗ್. ಪುರಾನಾ ಕಿಲಾದಲ್ಲಿ ಆಹಾರದ ಪೊಟ್ಟಣವನ್ನು ವಿತರಿಸಿದ ಆ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಆರೆಸ್ಸೆಸ್ಸ್. ಆ ಬಾಲಕ ಫ್ಲೈಯಿಂಗ್ ಸಿಕ್ಖ್ ಆಗುವಲ್ಲಿ ಆ ಆಹಾರ ಪೊಟ್ಟಣದ ಪಾತ್ರವೂ ಇದೆ. ಯಾರೂ ಹೇಳದಿದ್ದರೂ, ಯಾರೂ ಬರೆಯದಿದ್ದರೂ, ಯಾರೂ ತೋರಿಸದಿದ್ದರೂ ಅದರ ಪಾತ್ರವನ್ನು, ಅಂದಿನ ಸತ್ಯವನ್ನು ಅಲ್ಲಗೆಳೆಯಲಾಗದು. ದೇಶವಿಭಜನೆಯ ಮಹಾದುರಂತದ ಒಂದು ಉಳಿಕೆ, ಒಂದು ಚಿಹ್ನೆ, ಒಂದು ಜೀವಂತ ಸ್ಮಾರಕವಾದವರು ಸರ್ದಾರ್ ಮಿಲ್ಖಾ ಸಿಂಗ್. ದೇಶ ವಿಭಜನೆಯ ಹೊತ್ತಲ್ಲಿ ಪಾಕಿಸ್ಥಾನದಿಂದ ಓಡಿ ಭಾರತಕ್ಕೆ ಬಂದವರಿಗೆಲ್ಲಾ ಲಾಲ್ ಕೃಷ್ಣ ಅಧ್ವಾನಿ, ಸರ್ದಾರ್ ಮನಮೋಹನ ಸಿಂಗರಾಗುವ ಅದೃಷ್ಟವಿರಲಿಲ್ಲ. ಅಂಥವರಲ್ಲಿ ಮಿಲ್ಖಾ ಸಿಂಗ್‌ರಂಥವರೇ ಹೆಚ್ಚಿದ್ದರೆಂಬುದು ಇತಿಹಾಸದ ವಾಸ್ತವ. ಅದು ತಿಳಿಯುವುದು ಮಿಲ್ಖಾ ಸಿಂಗನ The Race of my life ನಂಥ ಆತ್ಮ ಕಥೆಗಳಿಂದ.

ಮತ್ತಷ್ಟು ಓದು »

18
ಜುಲೈ

ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು

– ಪ್ರೇಮ ಶೇಖರ

Bharatiya Muslimaru“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ‍್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು.  ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್‌ನ ರ‍್ಯಾಲಿಗಳು ಕಾರಣವಾಗಿವೆ.  ಅವು ಸಮಾಜವನ್ನು, ದೇಶವನ್ನು ಒಡೆದಿವೆ.”

ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ‍್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು.  ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.

ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ‍್ಯಾಲಿಗಳು ಕಾರಣವಾಗಿರಲಿಲ್ಲ.  ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ‍್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ‍್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು.  ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್‌ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು.  ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »

5
ಜೂನ್

ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ

– ರಾಕೇಶ್ ಶೆಟ್ಟಿ

chini yuddhaಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.

ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್  ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.

ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).

ಮತ್ತಷ್ಟು ಓದು »

30
ಮೇ

ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು

– ಚಕ್ರವರ್ತಿ ಸೂಲಿಬೆಲೆ

NS(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…

ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.

ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!

ಮತ್ತಷ್ಟು ಓದು »