ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

16
ಮೇ

ವಂದೇ ಮಾತರಂ ಹಾಡಲಾಗದಿದ್ದರೆ…

-ಅಶ್ವಿನ್ ಅಮೀನ್

Vande Mataram BSPಅದನ್ನು ಬರಿ ಗೀತೆ ಅನ್ನಬಹುದೇ?ಊಹೂಂ ಅದು ಗೀತೆಯಲ್ಲ, ಅದು ಭಾರತದ ಸ್ವಾತಂತ್ರ್ಯ ಹೋರಾಟದ ಬೀಜಮಂತ್ರ.ಬ್ರಿಟಿಷರ ನಿದ್ದೆ ಕೆಡಿಸುತ್ತಿದ್ದ ಮಂತ್ರವದು.ಎದೆಯುಬ್ಬಿಸಿ ಗರ್ವದಿಂದ ಗರ್ಜಿಸುವಾಗ ಮೈ ಮನಸ್ಸುಗಳು ರೋಮಾಂಚನಗೊಳ್ಳುತ್ತವೆ.. ಅದೆಂತಾ ಶಕ್ತಿಯಿದೆ ಈ ‘ವಂದೇ ಮಾತರಂ’ ನಲ್ಲಿ. ಅದೆಷ್ಟೋ ಹೋರಾಟಗಳ ಸ್ಪೂರ್ತಿ ಇದು, ದೇಶ ಪ್ರೇಮವ ಬಡಿದೆಬ್ಬಿಸುವ ಬೀಜಮಂತ್ರವಿದು. ಪ್ರತಿಯೊಬ್ಬ ಭಾರತೀಯನ ನಾಡಿ ಮಿಡಿತವಿದು… ವಂದೇ ಮಾತರಂ ಅನ್ನು ವಿಶ್ಲೇಷಿಸ ಹೊರಟರೆ ಆ ವಿಶ್ಲೇಷಣೆಯೇ ಒಂದು ವೀರ ಗೀತೆಯಾದೀತು…!!!!

ಆದರೆ…ವಂದೇ ಮಾತರಂ ಅನ್ನು ಗೌರವಿಸುವ ಮನಸ್ಸುಗಳ ನಡುವೆ ಧರ್ಮದ ನೆಪವೊಡ್ಡಿ ಅದನ್ನು ವಿರೋಧಿಸುವ ಕೆಲ ವಿಷ ಮನಸ್ಸುಗಳೂ ತುಂಬಿರುವುದು ಖೇದಕರ..

ಮೊನ್ನೆ ಮೊನ್ನೆ ತಾನೆ ತಾನು ಮುಸ್ಲಿಂ ಎಂಬ ಕಾರಣಕ್ಕೆ ವಂದೇ ಮಾತರಂ ಹಾಡುವುದಿಲ್ಲ ಎಂದು ವಂದೇ ಮಾತರಂ ಹಾಡಿನ ಮಧ್ಯೆಯೇ ಸಂಸತ್ತಿನಿಂದ ಹೊರನಡೆದು ಉದ್ದಟತನ ತೋರಿದ ಬಿಎಸ್ಪಿ ಸಂಸದ ಶಫಿಕುರ್ ರೆಹಮಾನ್ ಬಗ್ಗೆ ಕೇಳಿರುತ್ತೀರಿ. ಇಂತಹ ಮತಾಂಧವಾದದ ನಡೆ ಇದೇ ಮೊದಲಲ್ಲ. ವಂದೇ ಮಾತರಂ ಅನ್ನು ವಿರೋಧಿಸಿ ಭಾರತೀಯರಲ್ಲಿ ವಿಷ ಬೀಜ ಬಿತ್ತಿದವರಲ್ಲಿ ಆಲಿ ಸಹೋದರರು ಮೊದಲಿಗರಾಗಿ ಕಂಡು ಬರುತ್ತಾರೆ.

ಆ ಘಟನೆ ಹೀಗಿದೆ;

1923. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ಸ್ ನ ರಾಷ್ಟ್ರೀಯ ಅಧಿವೇಶನ ನಡೆಯುತ್ತಿತ್ತು. ಆಗ ಪ್ರತಿ ಅಧಿವೇಶನದಲ್ಲಿ ವಂದೇ ಮಾತರಂ ಹಾಡುವ ಸಂಪ್ರದಾಯ ಬೆಳೆದು ಬಂದಿತ್ತು. ಪಂಡಿತ್ ವಿಷ್ಣು ದಿಗಂಬರ ಫಲುಸ್ಕರ್ ಪ್ರತಿ ವರ್ಷದಂತೆ ವಂದೇ ಮಾತರಂ ಹಾಡ ಹೊರಟಾಗ ಆಗಿನ ಕಾಂಗ್ರೆಸ್ಸ್ ಅಧ್ಯಕ್ಷ (ಮುಸ್ಲಿಂ ಲೀಗ್ ನ ಸ್ಥಾಪಕರಲ್ಲೊಬ್ಬರಾದ) ಮೌಲಾನ ಅಹಮದ್ ಆಲಿ ಆತನ ಸಹೋದರ ಶೌಕತ್ ಆಲಿ ತಡೆದರು. ಇಸ್ಲಾಂನ ಕಾನೂನಿನಂತೆ ಸಂಗೀತ ನಿಷಿದ್ಧ ಎಂಬುದು ಅವರು ಕೊಟ್ಟ ಕಾರಣವಾಗಿತ್ತು. ಹಠಾತ್ ಬೆಳವಣಿಗೆಯಿಂದ ಕೆಂಡಾ ಮಂಡಲರಾದ ಫಲುಸ್ಕರ್ ಇದು ಕಾಂಗ್ರೆಸ್ಸ್ ನ ಅಧಿವೇಶನ, ಒಂದು ಧರ್ಮದ ಸಭೆಯಲ್ಲ.. ಮುಸ್ಲಿಮರ ದರ್ಗಾ, ಮಸೀದಿಯೂ ಅಲ್ಲ.. ಈ ರಾಷ್ಟ್ರೀಯ ವೇದಿಕೆ ಮೇಲೆ ವಂದೇ ಮಾತರಂಗೆ ಅಡ್ಡಿಪಡಿಸಲು ನಿಮಗೇನು ಅಧಿಕಾರವಿದೆ? ಅಧಿವೇಶನ ಪ್ರಾರಂಭವಾಗುವ ಮೊದಲು ಅಧ್ಯಕ್ಷೀಯ ಮೆರವಣಿಗೆ ಯಲ್ಲಿ ವಿಜೃಂಭಣೆಯ ಸಂಗೀತ ವಾದ್ಯಗಳೊಂದಿಗೆ ಬರುವಾಗ ನಿಮಗೆ ಹಿಡಿಸಿತೇ ?! ವಂದೇ ಮಾತರಂಗೆ ವಿರೋಧ ಇರುವವರು ಧಾರಾಳವಾಗಿ ಹೊರ ನಡೆಯಬಹುದು ಎಂದು ಆಲಿ ಸಹೋದರರನ್ನು ಜಾಡಿಸಿದರು. ನಂತರ ವಂದೇ ಮಾತರಂ ಅನ್ನು ಪೂರ್ತಿಯಾಗಿ ಹಾಡಿ ವಂದಿಸಿ ಕೆಳಗಿಳಿದರು.
ಮತ್ತಷ್ಟು ಓದು »

6
ಏಪ್ರಿಲ್

ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?

-ಸಾತ್ವಿಕ್ ಎನ್.ವಿ.

ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.

ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು »

23
ಮಾರ್ಚ್

‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…

– ರಾಕೇಶ್ ಶೆಟ್ಟಿ

ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ್ದೋ ತುರ್ತು ಕೆಲಸವಿದೆ ಅನ್ನುವಂತೆ ಎದ್ದು ಹೊರಟವರು,ಸತ್ತು ಬದುಕುವುದು ಹೇಗೆ ಅಂತ ತೋರಿಸಿಕೊಟ್ಟು ಹೋದವರು ಭಗತ್ ಸಿಂಗ್,ರಾಜಗುರು ಮತ್ತು ಸುಖದೇವ್.

ಅವರು ಹುತಾತ್ಮರಾಗಿ ಇಂದಿಗೆ ೮೦ ವರ್ಷಗಳಾಯಿತು.ಬಹುಷಃ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ  ಕ್ರಾಂತಿಯ ಕಿಡಿಯನ್ನ ಭಾರತೀಯರಲ್ಲಿ ಬಡಿದ್ದೆಬ್ಬಿಸಿದ ಅಪ್ರತಿಮ ವ್ಯಕ್ತಿ ಭಗತ್ ಸಿಂಗ್.ಚಂದ್ರ ಶೇಖರ್ ಆಜಾದ್ರಂತ ಮಹಾನ್ ಗುರುವಿನ ಶಿಷ್ಯ ಗುರುವನ್ನು ಮೀರಿಸುವಂತೆ ಮುನ್ನಡೆದು ಬಿಟ್ಟರು.ಜಲಿಯನ್ ವಾಲ ಬಾಗ್ನ ದುರಂತ ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯ ಉದಯಕ್ಕೆ ಮುನ್ನುಡಿ ಬರೆದಿತ್ತು.ಗಾಂಧೀಜಿಯವರ ಅಸಹಕಾರ ಚಳುವಳಿಗೆ ಓ ಕೊಟ್ಟು ಬೀದಿಗಿಳಿದ ಭಾರತೀಯರಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರು ಇದ್ದರು.ಅಂತವರ ಮಧ್ಯೆ ಬಾಲಕ ಭಗತ್ ಕೂಡ ಇದ್ದ.ಚೌರಿ-ಚೌರಾದ ಘಟನೆಯ ನಂತರ ಗಾಂಧೀಜಿ ಏಕಾಏಕಿ ಚಳುವಳಿಯನ್ನ ಹಿಂದೆ ಪಡೆದಾಗ,ಮತ್ತು ಆ ನಂತರ ಗಾಂಧೀಜಿಯ ಮಾತು ಕೇಳಿ ಶಾಲೆ ಬಿಟ್ಟು ಹೊರಬಂದು ಪಟ್ಟ ಪಾಡು ಇವೆಲ್ಲ ಭಗತ್ ಮನಸಿನಲ್ಲಿ ಗಾಂಧೀವಾದದ ಬಗ್ಗೆ ನಂಬಿಕೆ ಕಳೆಯುವಂತೆ ಮಾಡಿತು.ಬಹುಷಃ ಇವೆರಡು ಘಟನೆಗಳು ಭಗತ್ ಸಿಂಗ್ನ  ಮುಂದಿನ ಜೀವನ ದಿಕ್ಕನ್ನು ಬದಲಾಯಿಸಿದವು ಅನ್ನಬಹುದೇನೋ?

ಮತ್ತಷ್ಟು ಓದು »

21
ಮಾರ್ಚ್

“ಅರ್ನೆಸ್ಟೊ ಚೆಗುವಾರ ಕ್ರಾಂತಿಕಾರಿ ಭಾವಜೀವಿ”

– ನಾರಾಯಣ್ ಕೆ ಕ್ಯಾಸಂಬಳ್ಳಿ

Cheguvera‘ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ. ಸೋಲಿಗಿಂತ ಸಾವನ್ನೆ ಹೆಚ್ಚು ಇಚ್ಛಿಸುತ್ತೇನೆ’  ಎಂದು ಕ್ಯೂಬ ಬಿಡುವ ಮೊದಲು ಹೇಳಿದ ಮಾತಿನಂತೆಯೇ ನಿರಂತರವಾಗಿ ಹೋರಾಟದಲ್ಲೇ ತಮ್ಮ ಜೀವನವನ್ನು ಸವೆದು ಸೋಲಲು ಇಚ್ಛಿಸಿದೆ ತನನ್ನು ಸಾವಿಗೆ ಒಡ್ಡಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೊ ಚೆಗುವರ ಜಗತ್ತಿನ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖರು. ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಅರ್ನೆಸ್ಟೊ ಚೆಗುವಾರ ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ತಂದೆ ತಾಯಿಗಳ ಮೊದಲ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ. ಚೆಗುವರ ಚಿಕ್ಕಂದಿನಿಂದಲೇ ಬಡವರ, ಶ್ರಮಿಕರ ಪರವಾಗಿ ಹೆಚ್ಚು ಪ್ರೀತಿಯನ್ನು ಬೆಳೆಸಿಕೊಂಡವನು ಮತ್ತು ಎಡಪಂಥೀಯ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ಸ್ಪಷ್ಟ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯ ದೊರೆಯುತಿತ್ತು.

ಸ್ಪ್ಯಾನಿಷ್ ಅಂತರ್‍ಯುದ್ಧದ ಕಾಲದಿಂದಲೂ ಗಣತಂತ್ರ ವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತ್ತು.ಚೆಗುವಾರ ತನ್ನ 19ನೇ ವಯಸ್ಸಿನಲ್ಲಿ (1948) ವೈದ್ಯಕೀಯ ಕಲಿಕೆಗಾಗಿ ಬ್ಯೂನಸ್ ಐರ್ಸ್ ವಿಶ್ವವಿದ್ಯಾನಿಲಯಕ್ಕೆ ಸೇರುತ್ತಾನೆ. ಆದರೆ 1951ರಲ್ಲಿ ವಿಶ್ವವಿದ್ಯಾಲಯದಿಂದ ಒಂದು ವರ್ಷ ರಜೆ ಪಡೆದು ತನ್ನ ಆಪ್ತಮಿತ್ರ ಅಲ್ಬರ್ಟೊ ಗ್ರೆನಡೋ ಜೊತೆಗೂಡಿ ಮೋಟರ್ ಸೈಕಲ್ ಮೇಲೆ ದಕ್ಷಿಣ ಅಮೆರಿಕಾದ ಪ್ರವಾಸ ಹೊರಡುತ್ತಾನೆ. ಚೆಗುವಾರನ ಬದುಕಿನಲ್ಲಿ ಈ ಪ್ರವಾಸ ಬಹಳ ಪ್ರಮುಖವಾದದ್ದು ಮತ್ತು ಚೆಗುವಾರ ತಾನೊಬ್ಬ ಕ್ರಾಂತಿಕಾರಿಯಾಗಿರಲು ಪ್ರಮುಖ ಕಾರಣ ಈ ಪ್ರವಾಸದ ಅನುಭವಗಳೇ. ಅವನೆ ಹೇಳಿದ, ಬರೆದುಕೊಂಡಿರುವ ಹಾಗೆ “ಆಂಡೀಸ್ ಪರ್ವತಶ್ರೇಣಿಯ ಉನ್ನತ ಶಿಖರವಾದ ಮಾಚು ಪಿಚ್ಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂಮಾಲೀಕರಿಂದ ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನಸಮುದಾಯಗಳ ಹೀನಾಯ ಬದುಕು, ಕಡುಬಡತನ, ನನ್ನ ಮನಸ್ಸಿಗೆ ತಾಕಿತು. ಈ ಜನರಿಗೆ ನೆರವಾಗಬೇಕಿದ್ದಲ್ಲಿ ನಾನು ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ರಾಜಕೀಯ ರಂಗಕ್ಕೆ ಪ್ರವೇಶಿಸಬೇಕಿದೆ ಎಂದು ಮನವರಿಕೆಯಾಯಿತು” ಎಂದು ನಂತರ ಚೆಗುವಾರ ಬರೆದುಕೊಳ್ಲುತ್ತಾನೆ. ಹಾಗಾಗಿ ಈ ಮೋಟಾರ್ ಸೈಕಲ್ ಪ್ರವಾಸ್ ಚೆಗುವಾರನ ಕ್ರಾಂತಿ ಬದುಕಿನ ಬಹಳ ದೊಡ್ಡ ತಿರುವು. ಮೋಟಾರ್ ಸೈಕಲ್ ಪ್ರವಾಸದ ಜೊತೆಗಾರ ಆಲ್ಬರ್ಟೊ ಗ್ರಾನಡೊಸ್  ಚೆ ಕುರಿತು ಹೇಳುತ್ತಾ  ಟೆಟೆ (‘ಚೆ’ ನನ್ನು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು) ನನ್ನು ನಾನು ಮೊದಲು ಭೇೀಟಿ ಆಗಿದ್ದು 1941ರಲ್ಲಿ ಅದು ನನ್ನ ಸಹೋದರ ಥಾಮಸ್ ಮೂಲಕ. ಆಗ ನನಗೆ 13 ವರ್ಷ ವಯಸ್ಸು. ನಮ್ಮಿಬ್ಬರನ್ನು ಒಟ್ಟೊಟ್ಟಾಗಿ ತಂದ ವಿಷಯವೆಂದರೆ ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ. ಚೆ ಮನೆಗೆ ನಾನು  ವಾಡಿಕೆಯ ಅಥಿತಿಯಾಗಿದ್ದೆ. ಅಲ್ಲಿದ್ದ ಗ್ರಂಥಭಂಡಾರವನ್ನು ನನ್ನದೆಂಬತೆಯೇ ಬಳಸಿಕೊಳ್ಳುತ್ತಿದ್ದೆ. ಟೆಟೆ (ಚೆ) ಒಬ್ಬ ರೂಢಿಯ ಮಾತುಗಾರನಾಗಿದ್ದ.

ಮತ್ತಷ್ಟು ಓದು »

14
ಮಾರ್ಚ್

ಟಿಪ್ಪು ಹೊಗಳಿದ ಮೇಲೆ ಕೋವಿದನೂ ಅಲ್ಲ ಕೋದಂಡನೂ ಅಲ್ಲ

– ಸಂತೋಶ್ ತಮ್ಮಯ್ಯ

Pratap Simha's bookಕೊಡವರಿಗೆ ಕಾವೇರಮ್ಮನ ಶಾಪವಿದೆಯಂತೆ, ಬ್ರಹ್ಮಹತ್ಯಾದೋಷವೂ, ನಾಗದೋಷವೂ ಕಾಡುತ್ತಿದೆಯಂತೆ. ಹಾಗಾಗಿ ಕೊಡವರಿಗೆ ಶಾಂತಿ ನೆಮ್ಮದಿ ಇಲ್ಲವಂತೆ, ಅಷ್ಟಮಂಗಲ ಪ್ರಶ್ನೆಯಲ್ಲಿ ಅದು ಕಂಡುಬಂದಿದೆಯಂತೆ. ಇದು ಸದ್ಯ ಕೊಡಗಿನಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ದೋಷ, ಶಾಪ, ಪ್ರಶ್ನೆ, ಅದಕ್ಕಿರುವ ಪರಿಹಾರಗಳು ಏನೇನಿವೆಯೋ ಗೊತ್ತಿಲ್ಲ. ಆದರೆ ಒಂದು ಶಾಪವಂತೂ ಅಷ್ಟಮಂಗಲ ಪ್ರಶ್ನೆಯ ಹೊರತಾಗಿಯೂ ಪ್ರಜ್ನಾವಂತ ಕೊಡವರಿಗೆ ತಿಳಿದೇ ಇದೆ.

ಅದೆಂದರೆ ಕರ್ನಾಟಕದ ಎಲ್ಲರಿಗೂ ಕೊಡಗಿಗೆ ಹೋದಾಗ ಅಲ್ಲಿನ ಯೋಧರು, ಧೀರರು, ಶೂರರು ಎಲ್ಲರೂ ನೆನಪಾಗಿಬಿಡುತ್ತಾರೆ. ಮಡಿಕೇರಿಗೆ ಬಂದ ರಾಜಕಾರಣಿಗಳು, ಸಾಹಿತಿಗಳಿಗೆ ಯೋಧರನ್ನು ಹೊರತಾಗಿಸಿ ಮಾತು ಹೊರಬರುವುದೇ ಇಲ್ಲ. ಅವರೆಲ್ಲರಿಗೂ ಭಾಷಣಕ್ಕೆ, ಸಾಹಿತ್ಯಕ್ಕೆ, ಸಿನಿಮಾಕ್ಕೆ ಕೊಡಗಿನ ಯೋಧರು, ಬ್ರಹ್ಮಗಿರಿ, ಕಾವೇರಮ್ಮೆ, ಇಗ್ಗುತ್ತಪ್ಪರು ಬೇಕು. ಆದರೆ ಅವರೆಲ್ಲರೂ ಟಿಪ್ಪು ವಿಷಯಕ್ಕೆ ಬಂದರೆ ಟಿಪ್ಪು ಆ ಯೋಧರನ್ನೆಲ್ಲಾ ಮೀರಿ ನಿಂತುಬಿಡುತ್ತಾನೆ! ಅಂದರೇ ಧರ್ಮಕ್ಕಾಗಿ ಹೋರಾಡಿದ ಕೊಡಗಿನ ಯೋಧರು ಸಾಹಿತಿಗಳ ಪ್ರಕಾರ ಸೆಕ್ಯುಲರ್ ಆಗಿಬಿಡುತ್ತಾರೆ. ಈ ಸೆಕ್ಯುಲರ್ ವ್ಯಾದಿ ಸಾಹಿತಿಗಳ ಪ್ರಾರಬ್ಧವಾದರೂ ಕೊಡವರ ಪಾಲಿಗೆ ಅದು ಶಾಪ. ಅವರ ಭಾವನೆಗಳ ಮೇಲಿನ ಚೆಲ್ಲಾಟ. ಏಕೆಂದರೆ ಈ ಸೆಕ್ಯುಲರ್ ವ್ಯಾದಿ ಟಿಪ್ಪುವನ್ನು ಹೊಗಳಲು ಕೊಡವರ ಬಲಿದಾನವನ್ನೂ ತಿರುಚಲೂ ಹಿಂಜರಿಯುವುದಿಲ್ಲ. ಹೀಗೆ ಟಿಪ್ಪುವನ್ನು ಹೊಗಳುತ್ತಾ ಕೊಡವರ ಯೋಧತನವನ್ನು ವರ್ಣಿಸಲು ಹೇಗೆ ತಾನೇ ಸಾಧ್ಯ? ಸಾಧ್ಯವಿಲ್ಲ ನಿಜ. ಆದರೆ ಅದು ನಿರಂತರ ನಡೆಯುತ್ತಲೇ ಇದೆ. ಕೊಡಗಲ್ಲೇ ಕೆಲವರು ಭಂಡರಿದ್ದಾರೆ. ಅಂಥವರಿಗೆ ಅಷ್ಟು ಮಾತುಗಳು ಸಾಕಾಗುತ್ತವೆ. ಸಾಹಿತಿ-ರಾಜಕಾರಣಿಗಳಿಗೆ ಚಪ್ಪಾಳೆಗಳು ಭರಪೂರ ಗಿಟ್ಟುತ್ತವೆ. ಹಾಗಾಗಿ ಕಾರ್ನಾಡರೂ “ಟಿಪ್ಪು ಸುಲ್ತಾನ ಕಂಡ ಕನಸು” ಎಂದು ಬರೆಯುತ್ತಾರೆ. ಕೆಲವರು “ಟಿಪ್ಪು ಜನ್ಮದಿನವನ್ನು ಆಚರಿಸಲು ಶಾಲೆಗಳಿಗೆ ರಜಾ ಘೋಷಿಸಲಾಗುವುದು” ಎನ್ನುತ್ತಾರೆ. ಇನ್ನೊಬ್ಬರು ” ಟಿಪ್ಪು ಓರ್ವ ಸಂತ” ಎಂದುಬಿಡುತ್ತಾರೆ. ವಿಚಿತ್ರವೆಂದರೆ ಇವರೆಲ್ಲರೂ ಹೀಗೆ ಹೇಳುವ ಮೊದಲು ಮಡಿಕೇರಿಯ ಯುದ್ಧ ಸ್ಮಾರಕಗಳಿಗೆ ಹಾರ ಹಾಕಿ ಬಂದಿರುತ್ತಾರೆ. ಇವನ್ನೆಲ್ಲಾ ಕೇಳುವುದು, ನೋಡುವುದೇ ಕೊಡಗಿನವರ ಪಾಲಿನ ಶಾಪ. ಏಕೆಂದರೆ ಕೊಡಗಲ್ಲಿ ಬಂದು ಟಿಪ್ಪುವನ್ನು ಹೊಗಳುವುದೆಂದರೆ ಕೊಡಗಿನ ಪೂರ್ವಜರನ್ನು ನಿಂದಿಸಿದಂತೆಯೇ.

ಮತ್ತಷ್ಟು ಓದು »

27
ಫೆಬ್ರ

“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!

ಭೀಮಸೇನ್ ಪುರೋಹಿತ್

“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”

ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ  ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..

ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..

ಮತ್ತಷ್ಟು ಓದು »

26
ಫೆಬ್ರ

ರಾಮಸೇತು: ಭಕ್ತಿ ಭಾವನೆಯ ಜೊತೆಗೆ ಜೀವನೋಪಾಯದ ಪ್ರಶ್ನೆಯೂ ಹೌದು

– ಅಜಿತ್ ಶೆಟ್ಟಿ,ಉಡುಪಿ

Raama Setuveರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಹಿಂದೂಗಳಿಗೆ ಧಾರ್ಮಿಕ ಪವಿತ್ರ ಗ್ರಂಥಗಳಾಗಿದ್ದು, ಈ ಎರಡೂ ಕೃತಿಗಳು ಇತಿಹಾಸದ ಕಥೆಗಳಾಗಿವೆ .ಅನಾದಿಕಾಲದಿಂದ ಮಹಾಪಂಡಿತರು, ತಿಳಿದವರು ಇವನ್ನು ಪಂಚಮವೇದವೆಂದು ಕೈ ಮುಗಿಯುತ್ತಾರೆ. ಸಾವಿರಾರು ವರ್ಷಗಳಿಂದ ಭಾರತೀಯರ ಜನಜೀವನದಲ್ಲಿ ಮಿಳಿತವಾಗಿರುವ ಈ ಪವಿತ್ರ ಗ್ರಂಥಗಳ ಯಥಾರ್ಥವೇನು ಎಂದು ಕೇಳಿದರೆ ಏನೂಂತ ಹೇಳಬೇಕು? ಆರ್ಯ-ದ್ರಾವಿಡರು ವೈರಿಗಳೆಂದು ಕಥೆ ಕಲ್ಪಿಸಿ, ರಾಮ ಯಾವ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದನೆಂದು ಸರ್ಟಿಫಿಕೇಟ್ ಕೊಡಿ,ಸಾಕ್ಷಧಾರ ಕೊಡಿ ಎನ್ನುವ ಮೂರ್ಖ ಕರುಣಾನಿಧಿಯಂಥವರಿಗೆ ಏನೆಂದು ಉತ್ತರಿಸಬೇಕು ?

ಮೊದಲು ಹಿಂದೂ ರಾಷ್ಟ್ರ ಅಖಂಡ ಭಾರತದ ಮೇಲೆ ಮಹಮದೀಯರ ಆಕ್ರಮಣವಾಯಿತು . ನಂತರ ವ್ಯವಹಾರಕ್ಕೆ ಬಂದ ಕ್ರೈಸ್ತ ಯುರೋಪಿಯನ್ನರ ಆಕ್ರಮಣ . ಮಹಮದೀಯರು ಹೆದರಿಸಿ ಬೆದರಿಸಿ,ಕೊಲೆ ಸುಲಿಗೆ ಮಾಡುತ್ತ ನಮ್ಮ ಸಂಪತ್ತು ಲೂಟಿ ಹೊಡೆದರು.ಮೋಸದಿಂದ, ವಿಶ್ವಾಸಘಾತುಕ ಕೆಲಸದಿಂದ,ಕುಟಿಲ ತಂತ್ರದಿಂದ ಹಿಂದೂ ದೊರೆಗಳನ್ನು ಸೋಲಿಸಿ,ಪ್ರಜೆಗಳನ್ನು ಹೆದರಿಸಿ,ಒಪ್ಪದವರ ಕೊಲೆ ಮಾಡಿ ಅವರ ಮತ ಪ್ರಚಾರ ಮಾಡಿ ಮತಾಂತರಿಸಿದರು.ಅಲ್ಲಾವುದ್ದೀನ್ ಖಿಲ್ಜಿ, ಔರಂಗಜೇಬ್,ತುಘಲಕ್ ಅವರಿಂದ ಟಿಪ್ಪುವಿನವರೆಗೆ ಎಲ್ಲರೂ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣದ ಆಡಳಿತ ನಡೆಸಿದವರೇ. ಅದಕ್ಕೆ ಇರಬೇಕು ವಿಲ್ ದುರಂಟ್ STORY OF CIVILIZATION ಕೃತಿಯಲ್ಲಿ ಭಾರತದ ಮೇಲೆ ನಡೆದ ಇಸ್ಲಾಮಿನ ಆಕ್ರಮಣ ವಿಶ್ವದ ಇತಿಹಾಸದ ಅತ್ಯಂತ ರಕ್ತಸಿಕ್ತ ಅದ್ಯಾಯವೆಂದಿದ್ದು.ಯುರೋಪಿಯನ್ನರು ಭಾರತೀಯರ ಶಕ್ತಿ ಅಡಗಿರುವುದು ಭಾರತೀಯ ಸಂಸ್ಕೃತಿಯಲ್ಲಿ ಎಂದು ಮನಗಂಡು ಹಿಂಸಾ ಮಾರ್ಗವನ್ನು ಬದಿಗಿಟ್ಟು, ಹಿಂದೂ ನಂಬಿಕೆ , ಅಚಾರ ವಿಚಾರ ದೇವರನ್ನು ಪ್ರಶ್ನಿಸುತ್ತಾ,ಲೇವಡಿ ಮಾಡುತ್ತ,ಹಣದ ಆಮಿಷವೊಡ್ಡಿ ಮಿಷನರಿಗಳ ಮೂಲಕ ಉಪಾಯದಿಂದ ಮತಾಂತರದ ಕ್ರೈಸ್ತಿಕರಣಕ್ಕೆ ಮುಂದಾದರು.ಹಿಂದೂ ಧರ್ಮ ಪ್ರಸಾರಕ್ಕೆ ಇಲ್ಲಿತನಕ ಎಲ್ಲಿಯೂ ಹಿಂದೂಗಳು ಯುದ್ದ ಮಾಡಿಲ್ಲ,ಇನ್ನೊಂದು ಧರ್ಮವನ್ನು ನಿಂದಿಸಿಲ್ಲ ತೀರ ವಿಪರೀತವಾಗುತ್ತಿದೆ,ಸ್ವಾಭಿಮಾನಕ್ಕೆ ದಕ್ಕೆಯಾಗುತ್ತಿದೆ ಎಂದೆನಿಸಿದಾಗ ಅದಕ್ಕೆ ಉತ್ತರಿಸಿದ್ದಾರೆ.

ಮತ್ತಷ್ಟು ಓದು »

28
ಡಿಸೆ

ಭಗತ್ ಸಿಂಗ್ – ಮತೀಯವಾದ ಮರೆ ಮಾಡುತ್ತಿರುವ ಇತಿಹಾಸ

– ಕ.ವೆಂ.ನಾಗರಾಜ್

ScreenShot       ದೇಶದ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಾ ಭಗತ್ ಸಿಂಗ್ ಗಲ್ಲಿಗೇರಿದಾಗ ಅವನ ವಯಸ್ಸು ಕೇವಲ 23 ವರ್ಷಗಳು. ಬ್ರಿಟಿಷರ ಕುತಂತ್ರ, ಮುಸಲ್ಮಾನರ ಪ್ರತ್ಯೇಕ ರಾಷ್ಟ್ರಕ್ಕಾಗಿ ಮಹಮದಾಲಿ ಜಿನ್ನಾ ಒತ್ತಾಯ, ಒತ್ತಡಕ್ಕೆ ಮಣಿದ ಗಾಂಧೀಜಿಯಂತಹ ನಾಯಕರುಗಳ ಕಾರಣದಿಂದ ಭಾರತದ ವಿಭಜನೆ ಮತ್ತು ಆ ತರುಣದಲ್ಲೇ ನಡೆದ ಭೀಕರ ಕೋಮು ದಳ್ಳುರಿ ದೇಶವನ್ನು ದಹಿಸಿತು, ಸ್ವಾತಂತ್ರ್ಯ ಪ್ರೇಮಿಗಳ ಅಸಹಾಯಕತೆಯ ಕಂಬನಿ ಸುರಿಯಿತು. ಭಗತ್ ಸಿಂಗನಂತಹ ವೀರರ ಬಲಿದಾನವಾಗದಿದ್ದರೆ, ಜಿನ್ನಾರಂತಹವರು ಪಾಕಿಸ್ತಾನದ ಬೇಡಿಕೆ ಮುಂದಿಡಲಾಗುತ್ತಿರಲಿಲ್ಲ. ದೇಶ ವಿಭಜನೆಯಾದಾಗ ಭಗತ್ ಸಿಂಗನ ತವರೂರು ಫೈಸಲಾಬಾದಿನ ಲಿಲ್ಲಾಪುರಬಾಂಗೆ ಪಾಕಿಸ್ತಾನದ ಭಾಗವಾಯಿತು. ಭಗತ್ ಸಿಂಗ್ ಭಾರತ ಮತ್ತು ಪಾಕಿಸ್ತಾನಗಳೆರಡರ ಸ್ವಾತಂತ್ರ್ಯ ಹೋರಾಟದ ಅವಿಭಾಜ್ಯ ಅಂಗ. ಆದರೆ ಅವನ ಹೆಸರನ್ನು, ನೆನಪನ್ನು ಮರೆ ಮಾಡುವ ವ್ಯವಸ್ಥಿತ ಷಡ್ಯಂತ್ರ ಪಾಕಿಸ್ತಾನದಲ್ಲಿ ಸಾಗಿದೆ. ದೇಶ ವಿಭಜನೆಯಾದಾಗ ಪಾಕಿಸ್ತಾನದ ಭಾಗದಲ್ಲಿದ್ದ ಹಿಂದೂಗಳ ಮೇಲೆ ನಡೆದ ದೌರ್ಜನ್ಯ, ಆ ಕಾರಣದಿಂದ ಪಾಕಿಸ್ತಾನದಿಂದ ಭಾರತದ ಭಾಗಕ್ಕೆ ವಲಸೆ ಬಂದ ಹಿಂದೂಗಳ ಸಂಖ್ಯೆ ಅಗಣಿತ. ಈಗ ಪಾಕಿಸ್ತಾನದಲ್ಲಿನ ಹಿಂದೂಗಳ ಸಂಖ್ಯೆ ವಿಭಜನಾಪೂರ್ವದಲ್ಲಿದ್ದವರ ಸಂಖ್ಯೆಯ ಶೇ. 10ಕ್ಕಿಂತಲೂ ಕಡಿಮೆ. ಅವರು ಎರಡನೆಯ ದರ್ಜೆಯ ನಾಗರಿಕರಂತೆ ಬಾಳಬೇಕಾಗಿದೆ. ಪಾಕಿಸ್ತಾನದಲ್ಲಿ ಕಟ್ಟರ್ ಮತೀಯವಾದ ಪರಧi ಸಹಿಷ್ಣುತೆಯನ್ನು ದೂರವಿರಿಸಿದ್ದರೆ, ಭಾರತದಲ್ಲಿ ಇಂತಹ ವಾಸ್ತವ ಸಂಗತಿಗಳನ್ನು ಮಾತನಾಡುವವರನ್ನು ಇಲ್ಲಿನ ಜಾತ್ಯಾತೀತವಾದಿಗಳೆನಿಸಿಕೊಂಡವರು ಹೀಯಾಳಿಸುವ ಪ್ರವೃತ್ತಿ ಹೊಂದಿದ್ದಾರೆ. ಕಟು ವಾಸ್ತವ ಇತಿಹಾಸದ ಮೇಲೆ ಪೊರೆ ಮುಸುಕುವುದಕ್ಕೆ, ಬರೆ ಎಳೆಯುವುದಕ್ಕೆ ಇದಕ್ಕಿಂತ ಉತ್ತಮ ವಾತಾವರಣ ಬೇರೆ ಬೇಕಿಲ್ಲ.
     ಭಗತ್ ಸಿಂಗ್ ಒಬ್ಬ ಮಾನವತಾವಾದಿ. ಮಾನವತೆಯನ್ನು ಗೌರವಿಸದ ಧರ್ಮ ಧರ್ಮವೆಂದೆನ್ನಬಹುದೇ? ಭಗತ್ ಸಿಂಗ್ ಸಾಯುವ ಮುನ್ನ ವ್ಯಕ್ತಪಡಿಸಿದ್ದ ಬಯಕೆಗಳಲ್ಲಿ ಒಂದು ತಾನು ಇದ್ದ ಜೈಲಿನ ಕೊಠಡಿಯ ಶೌಚಾಲಯದ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕೆಳವರ್ಗದ ಹೆಣ್ಣುಮಗಳ ಕೈಯಿಂದ ರೊಟ್ಟಿ ತಿನ್ನಬೇಕು ಅನ್ನುವುದು. ಅದಕ್ಕೆ ಅವನು ಕೊಟ್ಟಿದ್ದ ಕಾರಣವೆಂದರೆ ತಾನು ಚಿಕ್ಕ ಮಗುವಾಗಿದ್ದಾಗ ತನ್ನ ಹೇಸಿಗೆಯನ್ನು ತೊಳೆದು ಸ್ವಚ್ಛ ಮಾಡುತ್ತಿದ್ದವಳು ಹೆತ್ತ ತಾಯಿಯಾದರೆ, ಜೈಲಿನ ತನ್ನ ಕೊಠಡಿಯ ಶೌಚಾಲಯದ ಹೇಸಿಗೆ ತೊಳೆಯುತ್ತಿದ್ದವಳೂ ಅಮ್ಮನೇ ಆಗಬೇಕು ತಾನೇ! ಅವನು ಆಕೆಯನ್ನು ಸಂಬೋಧಿಸುತ್ತಿದ್ದುದೂ ಅಮ್ಮ ಎಂದೇ!
19
ನವೆಂ

ಬ್ರಿಟಿಷರ ನಿದ್ದೆ ಕೆಡಿಸಿದ ಭಾರತದ ಸಿಂಹಿಣಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ

– ಶ್ರೀವಿದ್ಯಾ,ಮೈಸೂರು

ನಮ್ಮ ಭಾರತದ ವೀರ ಮಹಿಳೆ ರಾಣಿ ಲಕ್ಷ್ಮೀಬಾಯಿ ಅವರಂತಹ ಮಹಿಳೆ ಯಾರಾದರೂ ಇದ್ದಾರಾ ಎಂದು ಹೆಮ್ಮೆ ಪಟ್ಟವರು ನಮ್ಮ ಗುರು ಸ್ವಾಮಿ ವಿವೇಕಾನಂದ !!

ಅವಳ ಸೌಂದರ್ಯ, ಶೌರ್ಯ, ನಡವಳಿಕೆ, ಜನರ ಮೇಲೆ ಪ್ರೀತಿ, ದೇಶದ ಪ್ರೇಮ, ಹೋರಾಟ, ನೋವು-ನಲಿವು ಇವೆಲ್ಲವೂ ಯಾರಿಗೂ ಸಮಾನವಿಲ್ಲ. ಅವಳೇ ಭಾರತದ ಏಕಮಾತ್ರ ವೀರಮಹಿಳೆ. ಬ್ರಿಟಿಷರ ವಿರುದ್ಧ ಹೋರಾಡಿದ ಸಿಂಹಿಣಿ ! ಕೊನೆಯಲ್ಲಿ ಅವಳ ಸಾವು ಹೇಗಿತ್ತು ಅಂದರೆ ನಮ್ಮ ಕಣ್ಣೀರು ಸುರಿಸುವಂತೆ ಅಲ್ಲದೇ ಬ್ರಿಟಿಷರ ಮೇಲೆ ರೋಷವೂ ಉಕ್ಕಿ ಬರುತ್ತದೆ ! ಅವಳ ಕೊನೆಯ ಹೋರಾಟ ಹಾಗೂ ಸಾವು ಓದಿದರೆ ಅದು ನಮ್ಮ ಕಣ್ಣ್ಮುಂದೆ ನಡೆಯೋ ಹಾಗೆ ಅನ್ನಿಸುತ್ತೆ !!!

ಅವಳ ಜೀವನ ಹೇಗಿತ್ತು ?? ಓದೋಣ –

ಕಾರ್ತಿಕ ಮಾಸದ ಬಿದಿಗೆಯ ದಿನ ೧೮೩೫ ನೇ ಇಸವಿ ನವೆಂಬರ್ ೧೯ ರಂದು ಮನೂಬಾಯಿ ಜನಿಸಿದಳು. ಅವಳ ತಂದೆ ಮೋರೋಪಂತ್, ತಾಯಿ ಭಾಗೀರಥಿಬಾಯಿ. ಮನೂಬಾಯಿಗೆ ನಾಲ್ಕು ವರ್ಷದವಳಾಗಿದ್ದಾಗ ತಾಯಿ ತೀರಿಕೊಂಡಳು. ಅವಳ ಪೂರ್ಣ ಜವಾಬ್ದಾರಿ ತಂದೆಯದಾಯಿತು. ಅವಳು ನಾನಾಸಾಹೇಬ್, ರಾವ್ ಸಾಹೇಬರ ಜೊತೆಗೆ ಆಪ್ತಳಾಗಿದ್ದಳು. ಅವಳು ಅವರ ಜೊತೆ ಹುಡುಗಾಟ, ಕುದುರೆಸವಾರಿ ಮಾಡುತ್ತಿದ್ದಳು. ಅವಳು ತಂದೆಯವರಿಂದ ಸಾಧ್ವಿಸೀತೆ, ವೀರಮಾತೆ ಜೀಜಾಬಾಯಿ, ವೀರಾಂಗನೆ ತಾರಾಬಾಯಿಯವರ ಜೀವನ – ಆದರ್ಶಗಳನ್ನು ರೂಢಿಸಿಕೊಂಡಿದ್ದಳು. ಕತ್ತಿವರಸೆ, ಕುದುರೆಸವಾರಿ, ಬಂದೂಕುಗುರಿ ಸಾಧನೆಗಳ ಜೊತೆಯಲ್ಲೇ ವಿದ್ಯಾಭ್ಯಾಸವೂ ದೊರಕಿತು.ಅವಳಿಗೆ ಏಳು ವರ್ಷ ಆಗಿದ್ದಾಗ ನಲವತ್ತೈದು ವರ್ಷದ ಝಾನ್ಸಿ ಮಹಾರಾಜ ಗಂಗಾಧರರಾಯರ ಗೃಹಲಕ್ಷ್ಮಿಯಾದಳು. ಝಾನ್ಸಿ ರಾಜ್ಯದ ರಾಣಿ ಲಕ್ಷ್ಮೀಬಾಯಿಯಾದಳು.

ಮತ್ತಷ್ಟು ಓದು »

15
ನವೆಂ

ಒಂದು ಸೋಲಿನ ವೃತ್ತಾಂತ; ಪಾಠ ಕಲಿಯದ ದುರಂತ

-ರಾಕೇಶ್ ಏನ್  ಎಸ್

ಸೋಲು… ಸೋಲು… ಸೋಲು
ಸೋಲು ಅಕ್ಷ್ಯಮ್ಯ, ಅದರಲ್ಲಿಯೂ ಯುದ್ಧಭೂಮಿಯಲ್ಲಿನ ಅಪಜಯಕ್ಕೆ ಕ್ಷಮೆಯೇ ಇಲ್ಲ ಎಂದು ಕೊಂಡಿರುವ ಪರಂಪರೆ ನಮ್ಮದು. ಸೋತವ ಎಂಬ ಹಣೆಪಟ್ಟಿ ಯಾರಿಗೂ ಬೇಡ, ಸೋಲು ಎಂದಿಗೂ ತಬ್ಬಲಿ.

ಸರಿಯಾಗಿ ೫೦ ವರ್ಷಗಳ ಹಿಂದೆ, ಇದೇ ಸಮಯದಲ್ಲಿ ಹಿಮಾಲಯದ ಧವಳಗಿರಿಗಳ ಮಧ್ಯೆ ಭಾರತೀಯರನ್ನು ಅಪ್ಪಿಕೊಳ್ಳಲು ಇಂತಹದ್ದೆ ಒಂದು ಸೋಲು ಹೊಂಚು ಹಾಕಿ ಕುಳಿತಿತ್ತು. ಚೀನಾದ ಕೆಂಪು ಪಡೆ ಹೆದ್ದೆರೆಯೋಪಾದಿಯಲ್ಲಿ ನಡೆಸಿದ ದಾಳಿಗೆ ಗಣತಂತ್ರ ಸ್ವತಂತ್ರ ಭಾರತ ಬೆರಗಾಗಿತ್ತು, ಬೆನ್ನು ಬಾಗಿಸಿ ವಂದಿಸಿ ಸೋತು ಹೋಗಿತ್ತು.

ಭಾರತ ಮತ್ತು ಚೀನಾ ಪ್ರಾಚೀನ ನಾಗರಿಕತೆಗಳ ತವರೂರು. ಹಾಗೆಯೆ ಜಾಗತಿಕರಣಗೊಂಡ ಜಗತ್ತನ್ನು ಹೊತ್ತು ಸಾಗಿಸುವ ಗಾಲಿಗಳು. ಈ ಎರಡು ದೇಶಗಳಿಗೆ ಭೂತ ಮತ್ತು ಭವಿಷ್ಯದಲ್ಲಿರುವ ಪ್ರಾಮುಖ್ಯತೆ ಆಪಾರ. ಆದರೆ ಭಾರತ ಮತ್ತು ಚೀನಾದ ಮಧ್ಯೆ ಹುಟ್ಟಿಕೊಂಡ ಸಂಘರ್ಷದ ಕಾಲಘಟ್ಟ ಬಹಳ ವಿಚಿತ್ರವಾದದ್ದು.

೧೯೫೦ರ ದಶಕದಲ್ಲಿ ಚೀನಾವು ಮಾವೋ ತ್ಸೆತುಂಗ್‌ನ ತೆಕ್ಕೆಯಲ್ಲಿ ಅಪರಿಮಿತ ವೇಗದ ಅಭಿವೃದ್ಧಿಯ ಕನಸನ್ನು ಹೊಸೆಯುತ್ತಿದ್ದರೆ, ಭಾರತ ಬ್ರಿಟಿಷರಿಂದ ಮುಕ್ತವಾಗಿ ಪ್ರಜಾರಾಜ್ಯದ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿದ್ದ ಸಮಯ, ಸಂದರ್ಭವದು. ಆಗ ಈ ಎರಡು ದೇಶಗಳಿಗೆ ಯುದ್ಧವೆಂಬ ಹೊರೆ ಬೇಕಾಗಿರಲಿಲ್ಲ.

ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ’ಹಿಂದಿ ಚೀನಿ ಭಾಯಿ ಭಾಯಿ’ ಎಂಬ ಉದ್ಘೋಷವನ್ನು ೧೯೫೦ರ ದಶಕದಲ್ಲಿ ಮುನ್ನೆಲೆಗೆ ತಂದಿದ್ದರು. ತೈವಾನ್ ವಿವಾದದಿಂದಾಗಿ ವಿಶ್ವ ಗುಂಪಿನಲ್ಲಿ ಚೀನಾ ಮೂಲೆಗುಂಪಾದ ಸಂದರ್ಭದಲ್ಲಿ ಅದನ್ನು ಒಂದು ದೇಶವೆಂದು ಪರಿಭಾವಿಸಿ ಅದರೊಂದಿಗೆ ಸ್ನೇಹ ಸಂಬಂಧ ಬೆಳೆಸಿದ ದೇಶಗಳಲ್ಲಿ ಭಾರತವು ಒಂದು. ಇಂತಹ ಮಧುರ ಸಂಬಂಧ ಉತ್ತುಂಗಕ್ಕೇರುತ್ತಲೇ ಪರಸ್ಪರ ಅನುಮಾನದ ಪಾತಳಕ್ಕೆ ಕುಸಿದದ್ದು ಚರಿತ್ರೆಯ ವೈಚಿತ್ರ. ಮತ್ತಷ್ಟು ಓದು »