ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

13
ನವೆಂ

ಬಿಟ್ಟೇ ಹೋಗುವ ಬೆಂಗಳೂರು ಅರಮನೆ

-ಪ್ರಶಸ್ತಿ ಪಿ ಸಾಗರ

ಬೆಂಗಳೂರು ಅರಮನೆ

ಬೆಂಗಳೂರಲ್ಲಿ ಲಾಲ್ ಬಾಗ್ , ವಿಧಾನ ಸೌಧ, ಕಬ್ಬನ್ ಪಾರ್ಕ್ ಗೊತ್ತು. ಇದೆಲ್ಲಿಂದ ಬಂತಪ ಅರಮನೆ ಅಂದ್ಕಂಡ್ರಾ ? ಮೈಸೂರು ಅರಮನೆ ಬಗ್ಗೆ ಬರೆಯೋಕೆ ಪೀಟಿಕೆ ಹಾಕ್ತಿದೀನಿ ಅಂದ್ಕಂಡ್ರಾ ? ಇಲ್ಲ ಸ್ವಾಮಿ . ನಾ ಹೇಳೋಕೆ ಹೊರಟಿರೋದು ಅರಮನೆ ರೋಡಲ್ಲಿರೋ ಮಹಾರಾಜರ ಬೇಸಿಗೆ ಅರಮನೆ ಬಗ್ಗೆನೇ . ಟಿಪ್ಪು ಅರಮನೆ ಅಂತ ಮಾರ್ಕೆಟ್ ಹತ್ರ ಇದ್ಯಲ ಅಂದ್ರ್ರ ? ಅದ್ರ ಬಗ್ಗೆನೂ.. ಹರಿಕತೇನೆ ನಿಮಗೆ ನಿದ್ದೆ ತರಿಸೋ ಮೊದ್ಲು ಅರಮನೆಗೆ ವಾಪಾಸ್ ಬರೋಣ.

ಹಿಂದಿನ ವಾರ ನಾವು ಗೆಳೆಯರು ಬೆಂಗಳೂರು ಅರಮನೆಗೆ ಹೋಗಿದ್ವಿ .ಮೂರು ಬಣ್ಣದ ರಕ್ಷಕರ ಭದ್ರತೆ ಕಾಣ್ತಿತ್ತು ಹೊರಗಿಂದ . ಗೂಗಲ್ ದೈವ ದಯಪಾಲಿಸಿದ್ದ ಚಿತ್ರಗಳನ್ನ್ನು ನ್ನೋಡಿಯೇ   ಕೆರಳಿದ್ದ ನಮ್ಮ ಕುತೂಹಲ ಪೋಲಿಸ್ ಮಾವಂದಿರ ದರ್ಶನದಿಂದ  ಇನ್ನು ಹೆಚ್ಚಾಯ್ತು. ಹೊರಗಿನಿಂದಲೂ ಚಿತ್ರ ತೆಗೆಯಕ್ಕೆ ಬಿಡಲಿಲ್ಲ ಅಲ್ಲಿ ಸಿಬ್ಬಂದಿ. ಅದರೂ ಮೊಬೈಲ್ ಕ್ಯಾಮರ ಸಮಾಧಾನಿಸುತ್ತ ಒಳ ಸಾಗಿದ ನಮಗೆ ಮತ್ತೊಂದು ಬೇಸರ ಕಾದಿತ್ತು. ಪ್ರವೇಶ ಶುಲ್ಕ ೨೦೦ ರೂ. ಮೈಸೂರು ಅರಮನೆಯಲ್ಲೂ ನೂರರ ಮೇಲಿಲ್ಲ . ತಾಜಮಹಲ್ , ಕೆಂಪುಕೋಟೆ  ಹೀಗೆ ಭಾರತದಲ್ಲೇ ಭಾರತೀಯರಿಗೆ ಎಲ್ಲೂ ಇರದಷ್ಟು ಶುಲ್ಕ ಇಲ್ಲಿ !! ಆದರೆ ಬರೋದು ಬಂದಾಗಿದೆ .ನೋಡ್ಕೊಂಡೆ ಹೋಗೋದು ಅಂತ ತೀರ್ಮಾನ ಮಾಡಿದ್ವಿ. ಗೆಳೆಯರ ಹತ್ರ ಇದ್ದ ಬದ್ದ ದುಡ್ಡೆಲ್ಲ ಗುಡ್ಡೆ ಹಾಕಿ ಅಂತೂ ಒಳಗೆ ಸೇರಿದ್ವಿ. ಅಲ್ಲಿರೋ ಎಲ್ಲದರ ಮಾಹಿತಿ ಇದ್ದ ಆಡಿಯೋ ಗೈಡ ಉಚಿತ ಅನ್ನೋದಷ್ಟೇ ಅವಾಗಿದ್ದ ಸಮಾಧಾನ.

ಮೊದಲ್ನೇ ಜಾಗ ಅಂದ್ರೆ ಮತ್ತೆ ಹೊರಬಾಗಿಲಿಗೆ ಬಂದ್ವಿ. ಈ ಅರಮನೆಯನ್ನು  ೧೮೭೩ರಲ್ಲಿ ಕಟ್ಟಲಾಯಿತಂತೆ. ಅದನ್ನು ಕಟ್ಟಿದ ಪರಿ, ಆಗಿನ ರಾಜ ವೊಡೆಯರರ ಮೈಸೂರು ಸಂಸ್ಥಾನದ ಪರಿ, ನೀರಾವರಿಯಿಂದ , ಅಭಿವೃದ್ದಿ ಯೋಜನೆಗಳೆಡೆಗೆ ಸಂಸ್ಥಾನ ಗಮನ ಹರಿಸಿದ ರೀತಿಯನ್ನು ಕೇಳುತ್ತ ಅಭಿಮಾನ ಕನಕಣದಲ್ಲೂ ಉಕ್ಕಿದ ಅನುಭವ. “ಅಪಾರ ಕೀರ್ತಿಯಿಂದ ಮೆರೆವ ದಿವ್ಯ ನಾಡಿದು ” .. ಹಾಡಿನ ಹಿಮ್ಮೇಳ ಕೇಳಿದಂತಾಯ್ತು   ಒಮ್ಮೆ . ಮತ್ತಷ್ಟು ಓದು »

28
ಆಕ್ಟೋ

ಸ್ವಾಮಿ ವಿವೇಕಾನಂದರ ಪದತಳದಲ್ಲಿ ಅರಳಿದ ಕುಸುಮ ಭಗಿನಿ ನಿವೇದಿತಾ

– ಶ್ರೀವಿದ್ಯಾ,ಮೈಸೂರು

ಇಂದು ನಮ್ಮ ಸೋದರಿ ನಿವೇದಿತಾ ಅವರ ಜನ್ಮದಿನ. ನಿವೇದಿತಾ ಅವರ ಜೀವನವನ್ನು ನಮ್ಮ ದೇಶಕ್ಕಾಗಿ ತ್ಯಾಗ ಮಾಡಿದವರು. ಉದಾರ ಮನಸ್ಸು ಅವರದ್ದು. ಸ್ವಾಮಿ ವಿವೇಕಾನಂದರ ಭವ್ಯ ಭಾರತದ ಕನಸ್ಸನ್ನು ನನಸಾಗಿಸಲು ಸಾಕಷ್ಟು ಪ್ರಯತ್ನಿಸಿದರು. ಆ ಕಾಲದಲ್ಲಿ ಮಹಿಳೆಯರಿಗೆಶಾಲೆಗಳು ಇರಲಿಲ್ಲ. ಜ್ಞಾನವೂ ಕಡಿಮೆಯಿತ್ತು. ಆದರೆ, ಈ ಕಾಲದಲ್ಲಿ ನೋಡಿ, ಎಷ್ಟೋ ಮಹಿಳೆಯರು ವಿದ್ಯಾವಂತರಾಗಿ ಜೀವನ ನಡೆಸುತ್ತಿರುವರು.ಇದೆಲ್ಲಾ ನಿವೇದಿತಾ ಅವರ ಪರಿಶ್ರಮದಿಂದ ! ನಿವೇದಿತಾ ಅವರು ಮನೆ ಮನೆಗಳಿಗೆ ಹೋಗಿ ಮನವೊಲಿಸಿ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಬೇಕೆಂದು ಜಾಗೃತಿ ಮೂಡಿಸಿ ಅನೇಕ ಶಾಲೆಗಳನ್ನು ಕಟ್ಟಿಸಿದರು. ಅಲ್ಲದೇ, ಪ್ಲೇಗ್ ರೋಗ ಬಂದಿದ್ದಾಗ ಜನರ ಸೇವೆ ಮಾಡಿದರು. ಅವರು ಅಸಾಮಾನ್ಯ ಮಹಿಳೆ. ಅವರ ದೇಶವನ್ನು ಬಿಟ್ಟು ಬಂದಾಗಲೂ ಅವರ ಮನಸ್ಸಿನಲ್ಲಿ ಅವರ ದೇಶದ ಜನರು ಅವರನ್ನು ದೂರವಿಡುತ್ತಾರೆಂದು ಹಿಂಸೆ, ನೋವಾಗುತ್ತಿತ್ತು. ಆದರೂ, ಭಾರತ ದೇಶಕ್ಕೆ ಅದೆಲ್ಲ ತ್ಯಾಗ ಮಾಡಿದ್ದು ಅವರ ಪ್ರೀತಿ, ಗೌರವ ದೊಡ್ಡದು ಅಲ್ಲವೇ ? ಅವರು ನಮ್ಮವರೇ ಎಂದು ಅವರ ಜನ್ಮದಿನವನ್ನು ನೆನೆಸಿಕೊಂಡು ಆಚರಿಸೋಣ

ಅವರ ಜೀವನವನ್ನು ತಿಳಿಸುತ್ತಿದ್ದೇನೆ…

೧೮೬೭ರ ಅಕ್ಟೋಬರ್ ೨೮ರಂದು ಮಾರ್ಗರೆಟ್ ಎಲಿಜಬೆತ್ ನೊಬೆಲ್(ನಿವೇದಿತಾ) ಐರ್ಲೆ೦ಡಿನಲ್ಲಿ ಹುಟ್ಟಿದಳು.ತಾಯಿ ಮೇರಿ ಇಸಬೆಲ್, ತಂದೆ ಸಾಮ್ಯುಅಲ್. ಐರ್ಲೆ೦ಡಿನಲ್ಲಿ ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಟಗಳು ನಡೆದಿದ್ದಾಗ ಅವಳ ಅಜ್ಜ ಹ್ಯಾಮಿಲ್ಟನ್ ಭಾಗವಹಿಸಿ, ಮನೆಮಾತಾಗಿದ್ದರು. ತಮ್ಮ ಅಜ್ಜನಿಂದ ಅಪಾರವಾದ ಧೈರ್ಯ ಮತ್ತು ದೇಶಭಕ್ತಿ, ಧರ್ಮಗುರುವಾದ ತಂದೆಯಿಂದ “ಮಾನವ ಸೇವೆಯೇ ಭಗವಂತನ ಸೇವೆ” ಎಂಬ ಆದರ್ಶಗಳನ್ನು ಬಾಲ್ಯದಿಂದಲೇ ಅವಳು ರೂಢಿಸಿಕೊಂಡಿದ್ದಳು. ಅಷ್ಟೇ ಅಲ್ಲ, ದಾಷ್ಟ್ರಭಕ್ತಿ, ದೈವಭಕ್ತಿ ಜೊತೆಯಾಗಿ ಅವಳ ಹೃದಯದಲ್ಲಿ ಬೆಳೆದವು. ದುಃಖದಲ್ಲಿರುವವರನ್ನು ಅನುಕಂಪದಿಂದ ಕಾಣುವ ಗುಣ ಬೆಳೆದವು. ಶಾಲೆಯಲ್ಲೂ ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದಳು. ರಗ್ಬಿ ಎನ್ನುವ ಸ್ಥಳದಲ್ಲಿ ಹೆಣ್ಣುಮಕ್ಕಳ ಉಚಿತ ಅನಾಥಾಲಯದಲ್ಲಿ ಒಂದು ವರ್ಷ ಕೆಲಸ ಮಾಡಿದಳು. ನಂತರ, ರೆಕ್ಸ್ ಹಾಮ್ ಎನ್ನುವ ಗಣಿಕೇಂದ್ರದಲ್ಲಿದ್ದ ಸೆಕೆಂಡರಿ ಶಾಲೆಯ ಶಿಕ್ಷಕಿಯಾಗಿ ಕೆಲಸ ಮಾಡಿದಳು. ಸಮಾಜ ಸೇವಕಿಯಾಗಿಯೂ ಕೆಲಸ ಪ್ರಾರಂಭಿಸಿದಳು.೧೮೯೨ರಲ್ಲಿ ತನ್ನದೇ ಸ್ವಂತ ಶಾಲೆಯನ್ನು ಪ್ರಾರಂಭಿಸಿದಳು. ಈ ಶಾಲೆ ಬಹುಬೇಗ ಜನಪ್ರಿಯವಾಯಿತು. ಅವಳು ಮದುವೆಯಾಗಬೇಕು ಎನ್ನುವ ಹಂತದಲ್ಲಿ ಮದುವೆ ಮುರಿದುಬಿತ್ತು. ೧೮೯೫, ಮಾರ್ಗರೆಟ್ ಸ್ವಾಮಿ ವಿವೇಕಾನಂದರನ್ನು ಕಂಡ ವರ್ಷ. ಅದು ಅವಳ ಜೀವನದ ದಿಕ್ಕನ್ನೇ ಬದಲಾಯಿಸಿದ ಮಹತ್ವದ ವರ್ಷ. ಈ ಭೇಟಿಯ ನಂತರ ಅವಳು ಸ್ವಾಮೀಜಿಯ ಮಾತು-ಬರಹಗಳನ್ನು ಮತ್ತೆ-ಮತ್ತೆ ಓದಿದಳು. ಭಾರತೀಯ ತತ್ವಶಾಸ್ತ್ರ, ಉಪನಿಷತ್ತು, ಭಗವದ್ಗೀತೆಯನ್ನು ಅಧ್ಯಯನ ಮಾಡಿ ಚರ್ಚೆ ಮಾಡಿದಳು. ಕ್ರಮೇಣ ಅವಳ ಸಂಶಯಗಳೆಲ್ಲ ದೂರವಾದವು. ವಿವೇಕಾನಂದರು ಭಾರತದ ಬಡಮಕ್ಕಳ, ಸ್ತ್ರೀಯರ ವಿದ್ಯಾಭ್ಯಾಸದ ವ್ಯವಸ್ಥೆಯನ್ನು ಕುರಿತು ಮಾತನಾಡುತ್ತಿರುವಾಗ ಮಾರ್ಗರೆಟ್ ” ನಾನು ಸಿದ್ಧಳಾಗಿದ್ದೇನೆ, ಆ ಕೆಲಸ ಮಾಡುತ್ತೇನೆ” ಎಂದಳು.
ಮತ್ತಷ್ಟು ಓದು »

25
ಆಕ್ಟೋ

ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ

-ರಾಕೇಶ್ ಎನ್ ಎಸ್ 

ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಈ ಹಿಂದೆ ಕಾವೇರಿ ವಿವಾದ ೨೦೦೨-೦೩ರಲ್ಲಿ ಉಚ್ಚ್ರಾಯ ಹಂತದಲ್ಲಿದ್ದಾಗ ದೆಹಲಿಯ ಪ್ರಗತಿ ಮೈದಾನದಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನದಿ ಬಗ್ಗೆ ಒಂದು ಪ್ರದರ್ಶನ ಕಾರ್ಯಕ್ರಮ ಇಟ್ಟುಕೊಂಡಿತ್ತಂತೆ. ಅದರಲ್ಲಿ ಕಾವೇರಿ ನದಿ ತಮಿಳುನಾಡಿನ ಸಂಸ್ಕೃತಿ, ಪರಂಪರೆಯ ಮೇಲೆ ಬೀರಿದ ಪರಿಣಾಮಗಳ ಬಗ್ಗೆ, ತಮಿಳು ಜೀವನದಲ್ಲಿ ಕಾವೇರಿಯ ಪಾತ್ರದ ಬಗ್ಗೆ, ತಮಿಳಿನ ಕಾವ್ಯ, ಕೃತಿಗಳಲ್ಲಿ ಕಾವೇರಿಯ ಬಣ್ಣನೆ ಸೇರಿದಂತೆ, ಕಾವೇರಿ ಸೀಮೆಯ ಕೃಷಿ ಚಟುವಟಿಕೆಗಳ ಬಗ್ಗೆ ಛಾಯಾಚಿತ್ರ ಸಹಿತ ವಿವರಣೆಗಳಿದ್ದವು. ಕಾವೇರಿ ನದಿ ಪೂಂಪ್‌ಹಾರ್‌ನಲ್ಲಿ ಬಂಗಾಳ ಕೊಲ್ಲಿಯಲ್ಲಿ ಲೀನವಾಗುವ ಮೊದಲು ಅದು ಹೇಗೆ ಅಲ್ಲಿನ ಜನಜೀವನದ ಮೇಲೆ ಪರಿಣಾಮ ಉಂಟು ಮಾಡಿದೆ ಎಂಬುದನ್ನು ದೇಶದ ಜನರಿಗೆ ತಿಳಿಯಪಡಿಸಲು ಅಲ್ಲಿನ ಸರ್ಕಾರ ಕೈಗೊಂಡ ಕ್ರಮವಾದು.ಆದರೆ ನಾವು ಕಾವೇರಿ ನಮ್ಮ ತಾಯಿ ಎಂದು ಭಾವನಾತ್ಮಕವಾಗಿ ಬೊಬ್ಬಿರಿಯುತ್ತೇವೆ, ಆ ತಾಯಿಯನ್ನು ಬಳಸಿಕೊಂಡು ಅದೇಷ್ಟು ರಾಜಕೀಯ ಲಾಭ ಪಡೆಯಬಹುದೋ ಅಷ್ಟನ್ನೂ ಬಾಚಿಕೊಳ್ಳಲು ಬಯಸುತ್ತೇವೆ. ಕಾವೇರಿ ಹೆಸರಲ್ಲಿ ಅದೇಷ್ಟು ಸಾಧ್ಯವೋ ಅಷ್ಟು ಸಂಘಟನೆಗಳನ್ನು ಕಟ್ಟಿ ದೊಣ್ಣೆ ನಾಯಕರಾಗಲು ಹೊರಡುತ್ತೇವೆ. ಆದರೆ ಕಾವೇರಿ ನಮ್ಮ ರಾಜ್ಯಕ್ಕೆ ನೀಡಿದ ಸಾಂಸ್ಕೃತಿಕ, ಸಾಹಿತ್ಯಿಕ, ಚಾರಿತ್ರಿಕ, ಆರ್ಥಿಕ ಕೊಡುಗೆಗಳನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮಾಡುವುದೇ ಇಲ್ಲ. ಅದ್ದರಿಂದ ಕಾವೇರಿ ವಿವಾದ ಭುಗಿಲೆದ್ದ ಸಂದರ್ಭಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಸಿಗಬೇಕಾದ ನೈತಿಕ ಬೆಂಬಲ ಸಿಗದೇ ಅದು ತಮಿಳುನಾಡಿನ ಪಾಲಾಗುತ್ತಿದೆ. ಮತ್ತಷ್ಟು ಓದು »
18
ಆಕ್ಟೋ

ಏಕ್ ಥಾ ಟೈಗರ್…! ಅವನೊಬ್ಬನಿದ್ದ ನಮ್ಮ ಸಳ…!

– ಚರಿತ್ರ ಕುಮಾರ್

ಮಲೆನಾಡಿನ ಒಂದು ಹಳ್ಳಿ. ಗುರುವೊಬ್ಬ ಶಿಷ್ಯರನ್ನು ಕೂರಿಸಿಕೊಂಡು ಬಯಲಲ್ಲಿ ಪಾಠ ಹೇಳಿಕೊಡುತ್ತಿದ್ದ. ತನ್ಮಯನಾಗಿದ್ದ ಗುರು. ಆಲಿಸುತ್ತಾ ಮನನಮಾಡಿಕೊಳ್ಳುತ್ತಿದ್ದ ಶಿಷ್ಯರು. ವಿದ್ಯೆಯನ್ನು ಪರಿಕಿಸಲೋ ಅಥವಾ ಶಿಷ್ಯರನ್ನು ಅಳೆಯಲೋ ಅಥವಾ ಗುರುವಿನ ಮಟ್ಟವನ್ನು ತಿಳಿಯಲೋ ಎಂಬಂತೆ ವ್ಯಾಘ್ರವೊಂದು ಘರ್ಜಿಸುತ್ತಾ ಬಂತು. ಎಂಥಾ ಗುರು-ಶಿಷ್ಯರೂ ಒಮ್ಮೆ ಅವಕ್ಕಾಗುವ ಸಮಯ. ಗುರುವಿನ ಬಾಯಿಂದ ಬಂದಿದ್ದು ಒಂದೇ ಒಂದು ಮಾತು “ಹೊಯ್-ಸಳ” . ಸಳ ಎಂಬವನು ಶಿಷ್ಯ. ಆತ ನೆಚ್ಚಿನ ಶಿಷ್ಯನೇ ಇರಬೇಕು. ಆತ ಕತ್ತಿ ಹಿರಿಯಲಿಲ್ಲ. ಬಾಣ ಹೂಡಲಿಲ್ಲ. ಬಯಲಲ್ಲಿ ಗುರುಸಮ್ಮುಖದಲ್ಲಿ ಪಾರಾಯಣ ಮಾಡುತ್ತಿದ್ದವನಿಗೆ ಗುರುವಾಕ್ಯವೇ ಆಯುಧಕ್ಕಿಂತ ವೊನಚಾಯಿತು. ಸಳ ಬರಿಗೈಯಲ್ಲೇ ಕಾದ. ಗುರುವಾಕ್ಯ ಪೂರೈಸಿತು. ಹುಲಿ ಅಸುನೀಗಿತು. ಹೊಯ್ ಸಳ ಎಂದಿದ್ದ ಗುರುವೇ ಈಗ “ಭಲೇ ಸಳ” ಎಂದ. ಮುಂದೆ ಗುರುವಾಕ್ಯಬಲದಿಂದಲೇ ಯುವಕ/ಬಾಲಕ ಸಳ ರಾಜ್ಯ ಕಟ್ಟಿದ, ಆಳಿದ. ವಿದ್ಯೆಯ ಬಲ, ಗುರುವಿನ ಬಲ ಮತ್ತು ಶಿಷ್ಯನ ಅಂತಶಕ್ತಿಗೆ ಇವೆಲ್ಲಾ ಘಟನೆಗಳು ಸಾಕ್ಷಿಗಳಾಗಿ ನಿಲ್ಲುತ್ತವೆ. ಇದು ಕನ್ನಡದ ಇತಿಹಾಸದಲ್ಲಿ ದಾಖಲಾಗುವ ಮಹತ್ತರ ಪ್ರಸಂಗ. ಸ್ವಶಕ್ತಿಯಿಂದ , ಸ್ವಚಿಂತನೆಯಿಂದ ಸಾಮ್ರಾಜ್ಯವೊಂದು ಮೈದಾಳಿದ ಕಥೆ. ಹೀಗೆ ಕರ್ನಾಟಕ ಮರೆಯಲಾಗದ, ಸುವರ್ಣಯುಗವನ್ನು ಕಂಡ ಹೊಯ್ಸಳ ಸಾಮ್ರಾಜ್ಯಮುಂದೆ ಹಲವು ವೈಭವಗಳನ್ನು ಕಂಡಿತು. ಕನ್ನಡದ ಹಲವು ಕುರುಹುಗಳನ್ನು ಬಿಟ್ಟುಹೋಯಿತು. ಕರ್ನಾಟಕ ಶಿಲ್ಪ ಕಲೆಗಳ ಬೀಡಾಯಿತು. ಭೂಲೋಕದ ಸ್ವರ್ಗ ಎಂದು ಕವಿಗಳು ವರ್ಣಿಸುವಂತಾಯಿತು. ಕರ್ನಾಟಕ ನಾಟ್ಯ ಕಲೆಗಳ ನಾಡಾಯಿತು. ಸರ್ವಧರ್ಮ ಸಮನ್ವಯದ ನೆಲೆಯಾಯಿತು. ದ್ವಾರಸಮುದ್ರದ ಹೊಯ್ಸಳರು ಗಡಿಯಾಚೆಗಿನ ರಾಜರೊಂದಿಗೂ ಕಾದಾಡಿ ಕನ್ನಡದ ಹಿರಿಮೆಯನ್ನು ಸಾರಿದರು. ಆಧುನಿಕ ಪರಿಭಾಷೆಯಲ್ಲಿ ಹೇಳಬೇಕೆಂದರೆ ಕನ್ನಡದ ಮನಸ್ಸನ್ನು ಪ್ರಬಲವಾಗಿ ರೂಪಿಸಿದವರೇ ಹೊಯ್ಸಳರು. ಕರ್ನಾಟಕದಲ್ಲಿ ಶಿವ ದೇವಾಲಯಗಳು ಪ್ರಸಿದ್ಧವಾಗಿದ್ದೇ ವೈಷ್ಣವರಾಗಿದ್ದ ಹೊಯ್ಸಳರ ಕಾಲದಲ್ಲಿ ಎಂಬುದು ಇಂದಿನ ಕಾಲಮಾನದಲ್ಲೂ ಸೋಜಿಗ ಹುಟ್ಟಿಸುವ ಸಂಗತಿ.

ಇಂಥ ಎಷ್ಟೋ ಸಂಗತಿಗಳನ್ನು ಇತಿಹಾಸದ ಪುಟಗಳು ವಿವರಿಸುತ್ತಾ ಹೋಗುತ್ತವೆ. ಆ ಸಂಗತಿಗಳೆಲ್ಲವೂ ಹುಲಿಕೊಂದ ಸಳನ ವಂಶದ ವೈಭವಗಳು-ಕೊಡುಗೆಗಳು. ಇಷ್ಟೊಂದು ವೈಭವಶಾಲಿ, ಪರಾಕ್ರಮಶಾಲಿ,ಪರಿಶ್ರಮಶಾಲಿ ಸಾಮ್ರಾಜ್ಯಕ್ಕೆ ಬೀಜ ಹಾಕಿದ ಸಳ ನಿಜವಾದ ಕರ್ನಾಟಕದ ಹುಲಿ. ಪರಾಕ್ರಮದಲ್ಲಿ, ಗುರುವಾಕ್ಯ ಪರಿಪಾಲನೆಯಲ್ಲಿ , ಹಿಡಿದ ಸಂಗತಿಯನ್ನು ಪಾಲಿಸುವುದರಲ್ಲಿ , ಧರ್ಮ ಕಾರ್ಯದಲ್ಲಿ ,ಪರೋಪಕಾರದಲ್ಲೂ ಆತ ಹುಲಿ. ಅವನೊಬ್ಬನಿದ್ದ ಹುಲಿ. ಏಕ್ ಥಾ ಟೈಗರ್. ಹುಲಿ ಎಂದು ಕರೆದರೆ ಇವನನ್ನೇ ಕರೆಯಬೇಕು ಎಂಬ ಗುಣಲಕ್ಷಣ, ವ್ಯಕ್ತಿತ್ವವನ್ನು ಹೊಂದಿದ್ದ ಸಳ ರಾಜ್ಯ ಕಟ್ಟದೆ ಇನ್ನಾರು ಕಟ್ಟಿಯಾರು? ಆತನನ್ನಲ್ಲದೆ ಇನ್ನಾರನ್ನು ತಾನೇ ಹುಲಿ ಎಂದು ಕರೆಯಲಾದೀತು?

ಮತ್ತಷ್ಟು ಓದು »

1
ಆಕ್ಟೋ

ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..

– ಅಶ್ವಿನ್ ಅಮೀನ್

ಕೆಲವು ವರ್ಷಗಳ ಹಿಂದೆ ಮಾಜಿ ಉಪ ಪ್ರಧಾನಿ ಎಲ್. ಕೆ.ಅಡ್ವಾಣಿ ಯವರು ಪಾಕಿಸ್ತಾನದಲ್ಲಿರುವ ಮಹಮ್ಮದ್ ಆಲಿ ಜಿನ್ನಾ ಸಮಾಧಿಗೆ ಭೇಟಿ ಕೊಟ್ಟು ‘ಜಿನ್ನಾ ಒಬ್ಬ ಜಾತ್ಯಾತೀತ ನಾಯಕ’ ಎಂದು ಉದ್ಗರಿಸಿದ್ದರು. ಆ ಹೇಳಿಕೆ ಭಾರತದಾದ್ಯಂತ ಎಷ್ಟು ಸಂಚಲನವನ್ನು ಉಂಟು ಮಾಡಿತ್ತೆಂದರೆ ಸ್ವಪಕ್ಷೀಯರೇ ಆಡ್ವಾಣಿಯನ್ನು ವಿರೋಧಿಸತೊಡಗಿದರು.ಆದರೆ, ಅಷ್ಟು ಹಿರಿಯ ಮುತ್ಸದ್ದಿಯಾದ ಆಡ್ವಾನಿಯವರು ಯಾವುದೇ ಆಧಾರ – ಕಾರಣಗಳಿಲ್ಲದೆ ಆ ಹೇಳಿಕೆ ನೀಡಿಯಾರೇ ಎಂಬ  ಪ್ರಶ್ನೆ ನನ್ನನ್ನು ಕಾಡುತ್ತಲೇ ಇತ್ತು. ಅದಕ್ಕೆ ಉತ್ತರ ಹುಡುಕುತ್ತಾ ಇತಿಹಾಸದ ಪುಟಗಳನ್ನು ತಿರುವ ಹೊರಟ ನನಗೆ ಕಂಡು ಬಂದ ಸತ್ಯ ಮಾತ್ರ ನಿಜಕ್ಕೂ ಆಘಾತಕಾರಿ!. ‘ಧರ್ಮಕ್ಕಿಂತ ದೇಶ ಮೊದಲು, ನಾನು ಮೊದಲು ಭಾರತೀಯ’ ಎನ್ನುತ್ತಿದ್ದ ಮಹಮ್ಮದ್ ಆಲಿ ಜಿನಾ ಭಾರತವನ್ನು ಒಡೆಯುವಷ್ಟರ ಮಟ್ಟಿಗೆ ಹೋಗಲು ಕಾರಣೀಭೂತರಾದರೂ ಯಾರು? ಆ ಸತ್ಯಗಳನ್ನು ತಿಳಿಯುತ್ತಾ ಹೋದಂತೆ ಆಡ್ವಾಣಿಯವರು ಜಿನ್ನಾರ ಬಗ್ಗೆ ಅಂದು ಹೇಳಿದ ಮಾತುಗಳು ಸತ್ಯವಾಗುತ್ತಾ ಹೋಯಿತು.

ಮಹಮ್ಮದ್ ಆಲಿ ಜಿನ್ನಾ… ಆತನ ವ್ಯಕ್ತಿತ್ವ ಎಂದಿಗೂ ಒಬ್ಬ ಮುಸ್ಲಿಮನಿಗೆ ತಕ್ಕುದಾಗಿ ಇರಲಿಲ್ಲ. ಆತನೆಂದೂ ಗಡ್ಡ ಬಿಡಲಿಲ್ಲ, ಸ್ಕಲ್ ಕ್ಯಾಪ್ ಹಾಕಲಿಲ್ಲ, ದಿನಕ್ಕೆ ಐದು ಬಾರಿ ನಮಾಜ್ ಮಾಡಲಿಲ್ಲ, ಮದರಸಾದಲ್ಲಿ ಕಲಿಯಲಿಲ್ಲ… ಮದುವೆಯಾಗಿದ್ದು ಪಾರ್ಸಿ ಹುಡುಗಿಯನ್ನು, ಕಲಿತಿದ್ದು ಕ್ರೈಸ್ತ ಕಾನ್ವೆಂಟ್ ನಲ್ಲಿ, ಇಂಗ್ಲೆಂಡ್ ನಲ್ಲಿ ಉನ್ನತ ವ್ಯಾಸಾಂಗ… ಆತ ಸಿಗರೇಟು ಸೇದುತ್ತಿದ್ದ, ಹಂದಿ ಮಾಂಸ ತಿನ್ನುತ್ತಿದ್ದ, ಮದ್ಯ ಸೇವಿಸುತ್ತಿದ್ದ… ಅಂತಹ ವ್ಯಕ್ತಿ ಅದೇಗೆ ಧರ್ಮಾಂಧನಾಗಲು ಸಾಧ್ಯ…?

ಮತ್ತಷ್ಟು ಓದು »

28
ಸೆಪ್ಟೆಂ

ಕ್ರಾಂತಿಕಾರಿ ಹೇಗೆ ತಾನೇ ಕಾಮ್ರೆಡ್ ಆಗಬಲ್ಲ?

 -ಸಂತೋಶ್ ತಮ್ಮಯ್ಯ

ಕೇರಳದ ತ್ರಿಶೂರ್‌ನಿಂದ ಕಣ್ಣೂರಿಗೆ ಹೋಗುತ್ತಿದ್ದರೆ ದಾರಿಯುದ್ದಕ್ಕೂ ವಿಚಿತ್ರಗಳು. ಕೆಂಪು ಕಮ್ಯುನಿಸ್ಟರ ಕಛೇರಿಗಳು. ರಸ್ತೆ ಬದಿಯುದ್ದಕ್ಕೂ ಬಂಟಿಂಗ್ಸ್‌ಗಳು. ದೊಡ್ಡ ದೊಡ್ಡ ಕೌಟೌಟ್‌ಗಳು,ಫ್ಲೆಕ್ಸ್‌ಗಳು,ಬ್ಯಾನರ್‌ಗಳು.ಈ ಬ್ಯಾನರ್‌ಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ’ಬೇಕಾಗಿದ್ದಾರೆ’ ಎಂದು ಹಾಕುವಲ್ಲಿ ಕಾಣಬಹುದಾದ ಭಾವಚಿತ್ರಗಳು.ವೊದಲ ನೋಟಕ್ಕೇ ಗೂಂಡಗಾಳು ಎಂದು ತಿಳಿದುಬಿಡುವ ವೃತ್ತಿಪರ ರೌಡಿಗಳ ಚಿತ್ರಗಳು. ಅವರೆಲ್ಲರೂ ಎಂದೋ ಸತ್ತುಹೋದವರು. ಕಮ್ಯುನಿಸ್ಟ್ ಕಾಮ್ರೆಡರ ಪ್ರಕಾರ ಅವರೆಲ್ಲರೂ ಹುತಾತ್ಮ ಕಾಮ್ರೆಡ್‌ಗಳು.ಇವನು ಕಮ್ಯುನಿಷ್ಟರ ಪ್ರಾರಬ್ಧ,ಸಾಯಲಿ ಎನ್ನುವಂತೆಯೂ ಇಲ್ಲ.ಏಕೆಂದರೆ ಈ ಸತ್ತ ಗೂಂಡಾಗಳ ಪಕ್ಕದಲ್ಲೇ ಹ್ಯಾಟು ಹಾಕಿದ ಭಗತ್ ಸಿಂಗ್ ಚಿತ್ರ. ಕಮ್ಯುನಿಸ್ಟರ ಪ್ರಕಾರ ದೇಶಕ್ಕಾಗಿ ಪ್ರಾಣ ಕೊಟ್ಟ ಭಗತ್‌ಸಿಂಗನೂ ಎಲ್ಲೋ ಕೊಲೆಯಾಗಿ ಹೋದ ರೌಡಿಗಳಿಬ್ಬರೂ ಕಾಮ್ರೆಡ್‌ಗಳು,ಶಹೀದ್‌ಗಳು. ಇಬ್ಬರಿಗೂ ಅವರದು ಲಾಲ್ ಸಲಾಂ. ಇನ್ನೊಂದೆಡೆ ದೇಶವನ್ನೇ ಅರಿಯದ ಲೋಕಲ್ ರೌಡಿ! ಕಮ್ಯುನಿಸ್ಟರ್ ಹಾಗೆಯೆ. ಅವರು ರೌಡಿಯನ್ನು ಕಾಣುವಂತೆಯೆ ಭಗತ್‌ಸಿಂಗ್‌ರನ್ನೂ ಕಾಣುತ್ತಾರೆ.ಇಬ್ಬರನ್ನೂ ಕಾಮ್ರೆಡ್ ಎಂದೇ ಭಾವಿಸುತ್ತಾರೆ.

ಈಗೊಂದು ಐದಾರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಫ್ರೀಡಂ ಪೆರೇಡ್ ಎಂಬ ಕಾರ್ಯಕ್ರಮ ನಡೆಯಿತು. ಕೆಎಫ್‌ಡಿಯ ಜನರನ್ನು ಎಲ್ಲೆಲ್ಲಿಂದಲೋ ಕರೆಸಿಕೊಳ್ಳಲಾಯಿತು. ಎಲ್ಲೆಲ್ಲಿಂದಲೋ ಬಸ್ಸುಗಳು ಬಂದವು. ಗಡ್ಡಧಾರಿಗಳು,ಆರ್ಮಿಯಂತೆ ಸಮವಸ್ತ್ರ ಭರಿಸಿದವರು ಬಂದಿಳಿದಿದ್ದರು. ಮುಂದೆ ಹುಣಸೂರಿನಲ್ಲಿ ಮಕ್ಕಳನ್ನು ಕೊಂದ ಆ ಸಂಘಟನೆಯ ಜನರನ್ನು ನೋಡುತ್ತಾ ಕೆಲವರು ’ಕರಾಚಿಯಾ?’ ಎಂದು ಮಾತಾಡಿಕೊಂಡರು.ಅವರೆಲ್ಲರೂ ಮಂಗಳಾ ಸ್ಟೇಡಿಯಂನಲ್ಲಿ ಸೇರಿ ಮಿಲಿಟರಿಯಂತೆ ಕವಾಯತು ನಡೆಸಿದರು. ಹಿಂದಿಯಲ್ಲಿ ಅವರನ್ನುದ್ದೇಶಿಸಿ ಒಬ್ಬ ಮಾತಾಡಿದ್ದ. ಸಾವರ್ಕರ್‌ರನ್ನು ಹಿಗ್ಗಾಮುಗ್ಗಾ ಬೈದಿದ್ದ. ಹೋಗಿ, ದನ ಕಡಿಯಿರಿ ಎಂದಿದ್ದ. ಆತ ಮಾತನಾಡುತ್ತಿದ್ದ ವೇದಿಕೆಯ ಹೆಸರು ’ಶಹೀದ್ ಭಗತ್ ಸಿಂಗ್ ವೇದಿಕೆ’ ಆಗಿತ್ತು. ಯಾವ ಭಗತ್ ಸಿಂಗ್ ದೇಶದ ಬಗ್ಗೆ ಕನಸು ಕಂಡಿದ್ದನೋ,ಯಾವ ಭಗತ್‌ಸಿಂಗ್‌ಗೆ ಸ್ಪಷ್ಟ ಸಾಮರಸ್ಯ ಸಮಾಜದ ಕಲ್ಪನೆಯಿತ್ತೋ , ಯಾವ ಭಗತ್‌ಸಿಂಗ್‌ಗೆ ದೇಶವೆನ್ನುವುದು ಉಸಿರಾಗಿತ್ತೋ ಅಂತಹ ಭಗತ್ ಸಿಂಗ್ ಇಂದು ಇವರೆಲ್ಲರ ಸ್ವತ್ತಂತೆ. ದಾಸ್ಯದ ಬಿಡುಗಡೆ ಕ್ರಾಂತಿಯಿಂದ ಅಸಾಧ್ಯ ಎಂದಿದ್ದ  ಭಗತ್ ಸಿಂಗ್‌ನ ಹೆಸರಲ್ಲಿ ಸಾವರ್ಕರ್‌ರನ್ನು ಬಯ್ಯುವುದು, ಧಾರ್ಮಿಕತೆ ಅಷ್ಟಕ್ಕಷ್ಟೇ ಎಂಬಂತಿದ್ದ ಭಗತ್‌ಸಿಂಗ್‌ನನ್ನು ನೆಪವಾಗಿಟ್ಟುಕೊಂಡು ಗೋಹತ್ಯೆಯನ್ನು ಸಮರ್ಥಿಸುವುದು , ದೇಶಪ್ರೇಮಕ್ಕೆ ಬಣ್ಣವನ್ನು  ಬಿತ್ತುವುದು ಇಂದು ನಿರಂತರ ನಡೆಯುತ್ತಿದೆ.

ಮತ್ತಷ್ಟು ಓದು »

15
ಆಗಸ್ಟ್

ಅಖಂಡ ಭಾರತ ಸಂಕಲ್ಪ ದಿನದ ಔಚಿತ್ಯವೇನು…?

– ಅಶ್ವಿನ್ ಅಮೀನ್

ಆಗಸ್ಟ್ 14,ಸಂಘಪರಿವಾರಾದಿಯಾಗಿ ಕೆಲ ಸಂಘಟನೆಗಳು ‘ಅಖಂಡ ಭಾರತ ಸಂಕಲ್ಪ ದಿನ’ವೆಂದು ಆಚರಿಸುತ್ತಾರೆ. ಪ್ರಾಚೀನ ಭಾರತದ ಭಾಗಗಳಾಗಿದ್ದ ಈಗ ಸ್ವತಂತ್ರ ದೇಶಗಳಾಗಿರುವ ಇಂದಿನ ಪಾಕಿಸ್ತಾನ, ಬಾಂಗ್ಲಾ (ಹಾಗು ಇತರ) ಗಳನ್ನು ಮತ್ತೆ ಭಾರತದೊಂದಿಗೆ ಸೇರಿಸಲು ಇಂದು ಪ್ರತಿಜ್ಞೆಗೈಯಲಾಗುತ್ತದೆ. ಈ ಆಚರಣೆ ಮೇಲ್ನೋಟಕ್ಕೆ ದೇಶಭಕ್ತಿಯ ಪ್ರತೀಕವೆಂಬಂತೆ ಕಂಡರೂ ಪ್ರಸ್ತುತ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗುವ ವಿಷಯವೇ ಎಂಬ ಪ್ರಶ್ನೆ ಬರುವುದು ಸುಳ್ಳಲ್ಲ. ಧರ್ಮ ದ್ವೇಷದ ಆಧಾರದ ಮೇಲೆ ವಿಭಜನೆಯಾಗಿರುವ ಈ ದೇಶಗಳು ಮತ್ತೆ ಭಾರತದೊಂದಿಗೆ ಸೇರುವುದು ಖಂಡಿತ ಅಸಂಭವ… ಒಂದು ವೇಳೆ ಹಾಗೂ ಹೀಗೂ ಅಖಂಡ ಭಾರತ ನಿರ್ಮಾಣವಾದರೆ ಭಾರತದ ಆಂತರಿಕ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಊಹಿಸಲೇ ಕಷ್ಟವಾಗುತ್ತದೆ.

ಭಾರತ-ಪಾಕ್ ಹಾಗು ಭಾರತ-ಬಾಂಗ್ಲಾ ವಿಭಜನೆಯಾದಂದಿನಿಂದ ಇಂದಿನವರೆಗೂ ಇವೆರಡೂ ದೇಶಗಳಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಕೊಲೆ, ಅತ್ಯಾಚಾರ, ಬಲವಂತದ ಮತಾಂತರಗಳು ನಿಂತಿಲ್ಲ.. ಅಲ್ಲಿರುವ ಬೆರಳೆಣಿಕೆಯ ಹಿಂದುಗಳಿಗೆ ರಕ್ಷಣೆಯಿಲ್ಲದಾಗಿದೆ.  ಅಲ್ಲಿ ಹಿಂದೂಗಳ ಮೇಲೆ ನಡೆಯುವ ಎಲ್ಲಾ ಅತ್ಯಾಚಾರ, ಹತ್ಯಾಕಾಂಡಗಳು ಹೊರಗಿನ ಪ್ರಪಂಚಕ್ಕೆ ತಿಳಿಯುವುದಿಲ್ಲ.. ಕೆಲವೇ ಕೆಲವು ಘಟನೆಗಳು ಮಾತ್ರ ಮಾಧ್ಯಮದ ಮೂಲಕ ತಿಳಿಯುತ್ತದೆ. ಅಪ್ರಾಪ್ತ ಹಿಂದೂ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರಗೈದು ಮುಸ್ಲಿಂ ಆಗಿ ಮತಾಂತರಿಸಲಾಗುತ್ತಿದೆ. ಹಿಂದೂ ಜನರನ್ನು ಅಟ್ಟಾಡಿಸಿಕೊಂಡು ಹತ್ಯೆಗೈಯಲಾಗುತ್ತಿದೆ. ಬಲವಂತದ ಸುನ್ನತ್-ಮತಾಂತರಗಳು ಎಗ್ಗಿಲ್ಲದೆ ನಡೆಯುತ್ತಿದೆ… ಅಲ್ಲಿನ ಹಿಂದೂ ದೇಗುಲಗಳು ಧರೆಗುರುಳುತ್ತಿವೆ, ಕೆಲ ಕಡೆ ಹಿಂದುಗಳನ್ನು ಅವರ ಮನೆಯಿಂದಲೇ ಹೊರಗಟ್ಟಲಾಗುತ್ತಿದೆ. ಈ ಎಲ್ಲಾ ಆಕ್ರಮಣಗಳಿಗೆ ಹೆದರಿ ಈಗಾಗಲೇ ಪಾಕಿಸ್ತಾನದಿಂದ ಭಾರತದತ್ತ ವಲಸೆ ಬರುತ್ತಿರುವ ಹಿಂದೂ ಕುಟುಂಬಗಳ ಬಗ್ಗೆ ಕೇಳಿರುತ್ತೀರಿ. ಪಾಪ ಅವರ ಸ್ಥಿತಿ ಅತ್ತ ಪಾಕಿಸ್ತಾನವೂ ಇಲ್ಲ ಇತ್ತ ಭಾರತವೂ ಇಲ್ಲವೆಂಬಂತಾಗಿದೆ.
ಮತ್ತಷ್ಟು ಓದು »

5
ಜೂನ್

ಒಮ್ಮೆ ಜನಮತಸಾಂದ್ರತೆ (Demography) ಬದಲಾದರೆ…

– ಎಂ.ಡಿ ಸುಬ್ರಮಣ್ಯ ಮಾಚಿಕೊಪ್ಪ

ಪ್ರದೇಶವೊಂದನ್ನು (ಅದು ರಾಜ್ಯವಾಗಿರಲಿ ಅಥವಾ ರಾಜ್ಯವೊಂದರ ಭಾಗವಾಗಿರಲಿ) ದೇಶದಲ್ಲಿ ಇರುವಂತೆ ಮಾಡುವ ಅನೇಕ ಸಮಾನ ಅಂಶಗಳಿರುತ್ತವೆ. ಅವುಗಳಲ್ಲಿ ಅತ್ಯಂತ ಮುಖ್ಯವಾಗಿದ್ದು ಆ ಪ್ರದೇಶದ ಜನಮತಸಾಂದ್ರತೆ (demography) ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ. ಒಮ್ಮೆ ಆ ಪ್ರದೇಶದ ಜನಮತಸಾಂದ್ರತೆ ಬದಲಾದರೆ ಎಲ್ಲವೂ ಬದಲಾಗುತ್ತದೆ. ಇಲ್ಲಿ ಎಲ್ಲವೂ ಅಂದರೆ ಆ ಪ್ರದೇಶದ ಭಾಷೆ, ಆಚಾರ-ವಿಚಾರ, ರಾಷ್ಟ್ರನಿಷ್ಠೆ, ನಾಯಕರುಗಳು-ಎಲ್ಲವೂ ಬದಲಾಗುತ್ತದೆ!!! ಇದಕ್ಕೆ ಕಶ್ಮೀರಕಣಿವೆಯ ಉದಾಹರಣೆಯೇ ನಮ್ಮ ಕಣ್ಣುಮುಂದೆ (ಕಣ್ಣಿದ್ದವರಿಗೆ) ಕಾಣುತ್ತಿದೆ. ಕಲ್ಹಣ ಸಾಹಿತ್ಯ ರಚಿಸಿದ ಆ ಕಾಶ್ಮೀರಿ ಭಾಷೆ ಕಣಿವೆಯಲ್ಲಿ ಎಲ್ಲಿದೆ? ಬೋರ್ಡ್ ಗಳಲ್ಲೆಲ್ಲಾ ಅರಬಿ ಲಿಪಿ. ‘India’ ಎಂದು ಕಾಣುವ ಬೋರ್ಡ್ ಗಳ ಮೇಲೆ ಕಲ್ಲು, ಆಗಸ್ಟ್ ೧೫ ಬಂದ್!! ವಿಜೃಂಭಣೆಯ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ!!! ನಾಗಲ್ಯಾಂಡ್, ಮಿಜೊರಾಂ ಪರಿಸ್ಥಿತಿಯೂ (ಸದ್ಯಕ್ಕೆ ತಣ್ಣಕ್ಕಿದ್ದಂತೆ ಕಂಡರೂ) ತುಂಬವೇನು ಭಿನ್ನವಾಗಿಲ್ಲ. ಒಟ್ಟು ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿದ್ದು ಕಶ್ಮೀರ, ನಾಗಲ್ಯಾಂಡ್ ಮತ್ತು ಮಿಜೋರಾಂಗಳಲ್ಲಿ ಅವರು ತುಂಬಾ ಅಲ್ಪಸಂಖ್ಯಾತರಾಗಿದ್ದು ಮುಸ್ಲಿಂ ಹಾಗೂ ಕ್ರೈಸ್ತರು ಅಲ್ಲಿ ಬಹುಸಂಖ್ಯಾತರಾಗಿರುವುದೇ ಇದಕ್ಕೆ ಕಾರಣ. (ಹಿಂದೂಗಳು ಅಲ್ಪಸಂಖ್ಯಾತರಾಗಿರುವ ಆದರೆ ಬೌದ್ದರೇ ಸಾಕಷ್ಟು ಸಂಖ್ಯೆಯಲ್ಲಿರುವ ಲಡಕ್ ಪ್ರದೇಶದಲ್ಲಿ ಈ ಸಮಸ್ಯೆ ಅಷ್ಟಿಲ್ಲ!!) ಒಮ್ಮೆ ಜನಮತಸಾಂದ್ರತೆ ಬದಲಾದರೆ ರಾಷ್ಟ್ರನಿಷ್ಟೆಯೂ ಬದಲಾಗುತ್ತದೆಂಬುದು (ಪ್ರಪಂಚ ಮಟ್ಟದಲ್ಲಿ) ಅಪ್ರಿಯ ಸತ್ಯ.

16
ಮೇ

ನಮ್ಮ ಇತಿಹಾಸ ನಾವೇ ಬರೆದು ಓದೋದು ಬೇಡವೆ?

– ಚಕ್ರವರ್ತಿ ಸೂಲಿಬೆಲೆ

ಬ್ರಿಟಿಷ್ ಅಧಿಕಾರಿ ಮ್ಯಾಲೆಸನ್ ಈ ದೇಶದ ಜನರನ್ನು ಹುಚ್ಚರು ಅಂತ ಕರೀತಾನೆ. ಏಕೆ ಗೊತ್ತೇನು? ನೇಣು ಶಿಕ್ಷೆಗೆ ಕಳಿಸಿದರೆ ಈ ದೇಶದ ಜನ ಹೆದರೋದಿರಲಿ, ತಾವೇ ನೇಣುಗಂಬದ ಬಳಿ ಧಾವಿಸಿ ನೇಣು ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡುಬಿಡ್ತಾ ಇದ್ದರಂತೆ. ಆದಷ್ಟು ಬೇಗ ನನ್ನ ನೇಣಿಗೇರಿಸಿ ಅಂತ ಗೋಗರಿಯುತ್ತಾ ಇದ್ದರಂತೆ. ಹೀಗೇಕೆಂದು ಪ್ರಶ್ನಿಸಿದಾಗ, ಪುನರ್ಜನ್ಮ ನಂಬೋರು ನಾವು, ಬೇಗ ಹೊರಟರೆ, ಬೇಗ ಮರಳಿ ಬರುತ್ತೇವಲ್ಲ! ಅನ್ನುವ ವಾದ ಮಂಡಿಸುತ್ತಿದ್ದರಂತೆ. ಹೆದರಿಸಬೇಕೆಂದು ನೇಣಿಗೇರಿಸಿದರೆ, ಅದೇ ಪ್ರೇರಣೆಯಾಗುವ ರೀತಿ ಅತೀ ವಿಶಿಷ್ಟವಲ್ಲವೆ? ಅದಕ್ಕೇ ಬ್ರಿಟಿಷರಿಗೆ ಅಷ್ಟೊಂದು ಕೋಪ.

ಮೇ ೧೦ಕ್ಕೆ ೧೮೫೭ರಲ್ಲಿ ಸಂಗ್ರಾಮವೊಂದಕ್ಕೆ ಮುನ್ನುಡಿ ಬರೆಯಲಾಗಿತ್ತು. ಬ್ಯಾರಕ್‌ಪುರದ ಮಂಗಲ್‌ಪಾಂಡೆ ಆಂಗ್ಲ ಪೊಲೀಸ್ ಅಧಿಕಾರಿಯತ್ತ ಗುಂಡು ಸಿಡಿಸಿ, ತಿಂಗಳ ಕೊನೆಯಲ್ಲಿ ಆರಂಭವಾಗಬೇಕಾಗಿದ್ದ ಕ್ರಾಂತಿಗೆ ಆಗಲೇ ಕಿಡಿ ಹಚ್ಚಿಬಿಟ್ಟಿದ್ದ. ಅಲ್ಲಿಂದಾಚೆಗೆ ಮೀರತ್, ದೆಹಲಿಗಳು ಕ್ರಾಂತಿಯ ಕಿಡಿಗೆ ಉರಿದು ಬಿದ್ದವು. ಕಾನ್‌ಪುರ, ಝಾನ್ಸಿಗಳು ಜಯಘೋಷ ಮೊಳಗಿಸಿದವು. ಬಿಹಾರ ಕುದಿಯಿತು. ದಕ್ಷಿಣದಲ್ಲೂ ಬ್ರಿಟಿಷರ ಬುಡಕ್ಕೆ ಬಲವಾದ ಪೆಟ್ಟು ಬಿತ್ತು. ಅಂದುಕೊಂಡಂತೆಯೇ ಎಲ್ಲವೂ ಆಗಿದ್ದರೆ, ಇತಿಹಾಸದ ಹಾದಿ ಬೇರೆಯೇ ಇರುತ್ತಿತ್ತು. ಆ ವೇಳೆಗೆ ಆಂಗ್ಲರೊಟ್ಟಿಗೆ ಕಾದಾಡಿ ಹೈರಾಣಾಗಿದ್ದ ಸಿಕ್ಖರು ಭಾರತೀಯ ಸೈನಿಕರ ಬೆಂಬಲಕ್ಕೆ ಬರಲಿಲ್ಲ. ಅಯ್ಯೋ ಪಾಪ! ಅನ್ನುವ ಕೆಲವಷ್ಟು ಜನ ಆಂಗ್ಲ ಅಧಿಕಾರಿಗಳಿಗೆ ಉಳಿದುಕೊಳ್ಳುವ ಮಾರ್ಗ ತೋರಿದರು. ಅಂತೂ ಮಹಾಯುದ್ಧವೊಂದರಲ್ಲಿ ನಾವು ಸೋತಿದ್ದೆವು.

ಮತ್ತಷ್ಟು ಓದು »

8
ಮೇ

ಡಬ್ಬಿಂಗ್ ಅವಶ್ಯಕವೇ?

 ಡಾ ಅಶೋಕ್. ಕೆ. ಆರ್.

ಡಬ್ಬಿಂಗ್ ವಿವಾದ ಮತ್ತೆ ಗರಿಗೆದರಿದೆ. ಕಳೆದ ಹಲವಾರು ತಿಂಗಳುಗಳಿಂದ ‘ಏನ್ ಗುರು’ವಿನಂಥ ಬ್ಲಾಗುಗಳಲ್ಲಿ, ಫೇಸ್ ಬುಕ್ ನಂಥ ಸಾಮಾಜಿಕ ತಾಣಗಳಿಗೆ ಸೀಮಿತವಾಗಿದ್ದ ಈ ಚರ್ಚೆ ಅಮೀರ್ ಖಾನನ ‘ಸತ್ಯಮೇವ ಜಯತೆ’ಯ ಕನ್ನಡದವತರಣಿಕೆಯ ತಯಾರಿಕೆಯ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗಳಲ್ಲೂ ಚರ್ಚೆಗೊಳಪಡುತ್ತಿದೆ. ‘ಸತ್ಯಮೇವ ಜಯತೆ’ಯನ್ನು ಕನ್ನಡದಲ್ಲಿ ಪ್ರಸರಿಸಲು ಮುಂದಾಗಿದ್ದ ಸುವರ್ಣ ವಾಹಿನಿಯು ಚಿತ್ರೋದ್ಯಮದ ‘ಬೆದರಿಕೆ’ ಭರಿತ ವಿರೋಧದ ಹಿನ್ನೆಲೆಯಲ್ಲಿ ಪ್ರಸಾರದಿಂದ ಹಿಂದೆ ಸರಿದಿದೆ. ‘ಪ್ರಾಣ ಹೋದರೂ ಸರಿಯೇ ಡಬ್ಬಿಂಗಿಗೆ ಅವಕಾಶ ಕೊಡುವುದಿಲ್ಲ. ಅಪ್ಪಾಜಿಯ ಮೇಲಾಣೆ’ ಎಂದು ಶಿವರಾಜ್ ಕುಮಾರ್ ಆರ್ಭಟಿಸಿದ್ದಾರೆ. ಪ್ರಜಾವಾಣಿ ಶನಿವಾರದ ಪುಟವೊಂದನ್ನು ಡಬ್ಬಿಂಗಿನ ಚರ್ಚೆಗೆ ಮೀಸಲಿರಿಸಿದರೆ ಸುವರ್ಣ ವಾರ್ತಾ ವಾಹಿನಿಯು ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮದನ್ ಪಟೇಲ್ ಮತ್ತು ಬನವಾಸಿ ಬಳಗದ ಆನಂದ್ ರನ್ನು ಕರೆಸಿ ಜುಗಲ್ ಬಂದಿ ನಡೆಸಿದ್ದಾರೆ.
ಡಬ್ಬಿಂಗ್ ಪರವಾಗಿರುವವರು ವಾದಿಸುವುದೆಂದರೆ ‘ ನಾವು ಗ್ರಾಹಕರು. ಏನು ಪಡೆಯಬೇಕು ಎಂಬುದನ್ನು ನಾವು ನಿರ್ಧರಿಸಬೇಕೆ ಹೊರತು ಚಿತ್ರರಂಗದ ಕೆಲವರಲ್ಲ. ಇತರೆ ರಾಜ್ಯದವರು ತಮ್ಮ ತಮ್ಮ ಮಾತೃಭಾಷೆಯಲ್ಲೇ ಕಾರ್ಟೂನ್, ಡಿಸ್ಕವರಿ, ಪೋಗೋದಂಥಹ ವಾಹಿನಿಗಳನ್ನು, ಆಂಗ್ಲ ಸಿನಿಮಾಗಳನ್ನು ನೋಡುತ್ತಿರುವಾಗ ನಾವ್ಯಾಕೆ ಪರಭಾಷೆಯಲ್ಲೇ ಅವುಗಳನ್ನು ವೀಕ್ಷಿಸಬೇಕು? ಕನ್ನಡಿಗನಾಗಿ ಹುಟ್ಟಿದ್ದಕ್ಕೆ ಕನ್ನಡದಲ್ಲಿ ಚಿತ್ರ – ವಾಹಿನಿಗಳನ್ನು ವೀಕ್ಷಿಸುವ ಸೌಲಭ್ಯದಿಂದ ವಂಚಿತನಾಗಬೇಕೇಕೆ? ಅರ್ಥವಾಗದ ಭಾಷೆಯ ಸಿನಿಮಾಗಳನ್ನು ನೋಡಿ ಅರ್ದಂಬರ್ಧ ತಿಳಿದುಕೊಳ್ಳುವ ಬದಲು ಡಬ್ಬಿಂಗ್ ಮಾಡಿದರೆ ನನ್ನ ಭಾಷೆಯಲ್ಲೇ ನೋಡಿ ಆನಂದಿಸಿ ಸಂಪೂರ್ಣ ಅರಿತುಕೊಳ್ಳುವುದು ಒಳ್ಳೆಯದಲ್ಲವೇ? ತಮಿಳಿನಲ್ಲೇ ಪೋಗೋ ವೀಕ್ಷಿಸುವ ಹುಡುಗನಿಗೆ ತನ್ನ ಭಾಷೆಯ ಬಗ್ಗೆ ಪ್ರೀತಿ ಬೆಳೆಯುತ್ತದೆಯೇ ಹೊರತು ಅದೇ ಕಾರ್ಯಕ್ರಮಗಳನ್ನು ಇಂಗ್ಲೀಷಿನಲ್ಲಿ ನೋಡುವ ನಮ್ಮ ಮಕ್ಕಳಿಗೆ ಕನ್ನಡದ ಬಗ್ಗೆ ಪ್ರೀತಿ ಬೆಳೆಯಲು ಹೇಗೆ ಸಾಧ್ಯ? ನಮ್ಮ ಹಕ್ಕನ್ನು ಕಸಿದುಕೊಂಡಿರುವ ಚಿತ್ರೋದ್ಯಮದ ಈ ನೀತಿ ಸಂವಿಧಾನಬಾಹಿರ’
ಇನ್ನು ಡಬ್ಬಿಂಗ್ ವಿರೋಧಿಸುವವರು ಮುಂದಿಡುವ ವಾದವೆಂದರೆ ‘ಡಬ್ಬಿಂಗ್ ವಿರೋಧಿ ಚಳುವಳಿಗೆ ದಶಕಗಳ ಇತಿಹಾಸವಿದೆ. ಅನಕೃರಂಥ ಹಿರಿಯ ಲೇಖಕರು ಆರಂಭಿಸಿದ ಈ ಚಳುವಳಿ ರಾಜ್ ಕುಮಾರ್ ರಂಥ ಮೇರು ನಟರ ನೇತೃತ್ವದಲ್ಲಿ ಮುಂದುವರಿದು ಕನ್ನಡ ಚಿತ್ರೋದ್ಯಮದ ಉಳಿವಿನ ದೃಷ್ಟಿಯಿಂದ ಡಬ್ಬಿಂಗ್ ನಿಷೇಧಿಸಲಾಗಿದೆ. ಈ ನಿಷೇಧ ತೆರವುಗೊಳಿಸಿದರೆ ಹೆಚ್ಚು ಬಂಡವಾಳದ ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ಕನ್ನಡ ಚಿತ್ರಗಳ ಮಾರುಕಟ್ಟೆಯನ್ನು ಕಿತ್ತುಕೊಳ್ಳುತ್ತದೆ. ಚಿತ್ರೋದ್ಯಮವನ್ನೇ ಅವಲಂಬಿಸಿದ ಜನರ ಹೊಟ್ಟೆಪಾಡಿಗೆ ಚ್ಯುತಿಯುಂಟಾಗುತ್ತದೆ. ಮೇಲಾಗಿ ಪರಸಂಸ್ಕೃತಿ ಬಿಂಬಿಸುವ ಚಿತ್ರಗಳು ಎಂದಿಗೂ ನಮ್ಮವಲಾಗಲಾರವು ಮತ್ತು ನಮ್ಮ ಕನ್ನಡ ಸಂಸ್ಕೃತಿಯನ್ನು ಅವನತಿಗೆ ದೂಡುತ್ತದೆ’ ಮತ್ತಷ್ಟು ಓದು »