ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ
– ಚಕ್ರವರ್ತಿ ಸೂಲಿಬೆಲೆ
ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?
ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!
ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.
ನನ್ನ ಊಟದ ಮೆನು ನಿರ್ಧರಿಸಲು ನೀವ್ಯಾರು?
– ರಾಕೇಶ್ ಶೆಟ್ಟಿ
ಕುಡಿಯುವ ನೀರು ಕೇಳಿದಾಗ “ನೀರು ಕೊಟ್ಟರೆ ನನ್ನ ಜಾತಿ ಕೆಡುತ್ತದೆ” ಅಂದ ಮಂಗಲ್ ಪಾಂಡೆಗೆ, “ಸ್ವಲ್ಪ ಇರು,ದನದ ಕೊಬ್ಬು ಹಚ್ಚಿರುವ ಕಾಡತೂಸು ಕಚ್ಚಲು ಹೇಳುತ್ತಾರೆ,ಆಮೇಲೆ ನಿನ್ನ ಜಾತಿ ಅದೇನಾಗುತ್ತೋ ನಾನು ನೋಡುತ್ತೇನೆ” ಅಂದಿದ್ದ ಆ ಕೆಳ ಜಾತಿಯ ಹುಡುಗ.ಮೊದಲೆ ಈ ಕಾಡತೂಸಿನ ಗುಸು-ಗುಸಿಗೆ ಗಾಯಗೊಂಡಿದ್ದವನಿಗೆ ಉಪ್ಪು ಸವರಿದಂತಾಗಿತ್ತು ಹುಡುಗನ ಮಾತು,ಕಡೆಗದು ’ಬ್ಯಾರಕ್ ಪುರ’ದಲ್ಲಿ ಕ್ರಾಂತಿಯ ಕಿಡಿಯಾಗಿ ಭಾರತವನ್ನ ವ್ಯಾಪಿಸಿಕೊಂಡಿತ್ತು.ಇತಿಹಾಸ ಅದಕ್ಕೆ ಕೊಟ್ಟ ಹೆಸರು “೧೮೫೭ರ ಪ್ರಪ್ರಥಮ ಸ್ವಾತಂತ್ರ್ಯ ಸಂಗ್ರಾಮ’.
೧೭೫೭ರಲ್ಲಿ ಪ್ಲಾಸಿ ಕದನದ ನಂತರ ಭಾರತವನ್ನ ಇಡಿಯಾಗಿ ಆಪೋಶನ ತೆಗೆದುಕೊಂಡ ಬ್ರಿಟಿಶರಿಂದ ತೆಪ್ಪಗೆ ಆಳಿಸಿಕೊಳ್ಳುತಿದ್ದ ಭಾರತದ ಸತ್-ಪ್ರಜೆಗಳ ಎದೆಯೊಳಗಿನ ನೋವಿನ ಜ್ವಾಲಾಮುಖಿ ಸ್ಫೋಟವಾಗಲು ಕಾರಣವೊಂದು ಬೇಕಿತ್ತು,ಕಾರಣವಾಗಿ ಬಂದದ್ದು ದನದ ಮತ್ತು ಹಂದಿಯ ಕೊಬ್ಬು ಸವರಿದ ಎನ್-ಫಿಲ್ಡ್ ಬಂದೂಕು..!
ಹೌದು.ಭಾರತದ ಸತ್-ಪ್ರಜೆಗಳೇ ಹಾಗೆ ಹೊಟ್ಟೆಗೆ ಅನ್ನ,ತಲೆಗೊಂದು ಸೂರು ಕೊಡದ ಸರ್ಕಾರವಾದರೂ ಸರಿ,ಕೋಟಿಗಟ್ಟಲೆ ಹಣ ಲೂಟಿ ಮಾಡಿದರೂ ಸರಿ ಅಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ.ಆದರೆ ಧರ್ಮದ ವಿಚಾರಕ್ಕಿಳಿದಿರೋ ಅಲ್ಲಿಗೆ ಮುಗಿಯಿತು..! ಇದು ಕೇವಲ ಇತಿಹಾಸದ ಕತೆಯಲ್ಲ,ತೀರಾ ಕಳೆದ ವರ್ಷ ತಸ್ಲೀಮಾ ನಸ್ರೀನ್ ಅವರು ಬರೆದ ಲೇಖನ (ಎಂದು ಹೇಳಲಾದ )ಪ್ರಕಟವಾದಾಗ ಶಿವಮೊಗ್ಗ-ಹಾಸನದಲ್ಲಿ ಏನಾಗಿತ್ತು ಅನ್ನುವುದು ನೆನಪಿದೆಯಲ್ವಾ?
ಕಳೆದ ಒಂದು ವರ್ಷಗಳಿಂದಲೂ ರಾಜ್ಯದಲ್ಲಿ ಸದ್ದು ಮಾಡುತ್ತಿರುವುದು ’ಗೋ-ಹತ್ಯೆ ನಿಷೇಧ’ ಮಸೂದೆ.ಸಾಕಷ್ಟು ಚರ್ಚೆಗಳು,ವಾದಗಳು ನಡೆದಿವೆ.ಬಹುಷಃ ಅದು ಎಂದಿಗೂ ಮುಗಿಯಲಾರದು.
ಏಕಪಾತ್ರಾಭಿನಯಕ್ಕೆ ಪಾತ್ರ ಹುಡುಕುತ್ತಿದ್ದಾಗ ಸಿಕ್ಕ ಸೇನಾನಿ..!!!!!
– ಭೀಮಸೇನ್ ಪುರೋಹಿತ್
ಪ್ರತಿವರ್ಷ ನಮ್ಮ ಕಾಲೇಜಿನಲ್ಲಿ ನಡೆಯುವ ಅಂತರ್ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧಾಹಬ್ಬ “ದವನ”ದಲ್ಲಿ “ಏಕಪಾತ್ರಾಭಿನಯ”ವೂ ಒಂದು ಸ್ಪರ್ಧೆ.. ಈ ವರ್ಷ ಯಾರ ಅಭಿನಯ ಮಾಡಲಿ ಎಂದು ಯೋಚಿಸುತ್ತಿದ್ದೆ.. ಅಭಿನಯವಂತೂ ಇದ್ದಿದ್ದೇ. ಆದಷ್ಟು ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಪಾತ್ರ ಆಯ್ದುಕೊಂಡರೆ, ಬಹಳಷ್ಟು ಜನಕ್ಕೆ ಆ ಚರಿತ್ರೆಯನ್ನು ತಲುಪಿಸಿದಂತಾಗುತ್ತದೆ, ಅದರಲ್ಲೂ ಕರ್ನಾಟಕದವನೇ ಆದರೆ, ಪಾತ್ರದ ಸಂಭಾಷಣೆ ಬರೆಯುವುದೂ ನನಗೆ ಸುಲಭವಾಗುತ್ತದೆ ಎಂದು ಭಾವಿಸಿ, ಅಂಥಾ ಚಾರಿತ್ರಿಕವ್ಯಕ್ತಿಯ ಹುಡುಕಾಟದಲ್ಲಿ ಇದ್ದಾಗ, ಥಟ್ಟನೆ ಒಬ್ಬನ ನೆನಪಾಯಿತು..
ಎಂಟನೆ ತರಗತಿಯಲ್ಲಿದ್ದಾಗ ಅವನ ಬಗೆಗಿನ ಪುಸ್ತಕ ಓದಿದ್ದಷ್ಟೇ ನೆನಪು.. ಆದರೆ, ಅವನ ಉಜ್ವಲ ದೇಶಭಕ್ತಿ ಇವತ್ತಿಗೂ ಅವನ ಚಿತ್ರಣವನ್ನು ನನ್ನ ಮನಸ್ಸಿನಲ್ಲಿ ಹಸಿರಾಗಿಸಿದೆ..
“ಸುರಪುರ”-ಗದಗ ಜಿಲ್ಲೆಯ ಊರು. “ಬೇಡ”ನಾಯಕರು ಅದನ್ನು ಆಳುತ್ತಿದ್ದರು. ವಿಜಯನಗರದ ರಾಜರುಗಳಿಂದ ಪ್ರಭಾವಿತರಾಗಿದ್ದ ನಾಯಕರು, ಸಹಜವಾಗಿಯೇ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಧೈರ್ಯ-ಸಾಹಸಗಳಿಗೆ ಹೆಸರಾದ ವಂಶ ಅದು.. ಇಂಥ ಪರಂಪರೆಯಲ್ಲಿ ಬಂದವನೇ ಈ ಲೇಖನದ ಮೂಲಸ್ರೋತ “ವೆಂಕಟಪ್ಪ ನಾಯಕ”…!!
ಗುಂಡು ಬಿಡದ ಬಂದೂಕುಗಳ ನಡುವೆ!
– ಸಂತೋಷ್ ಆಚಾರ್ಯ
೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು 
ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ
– ರಾಕೇಶ್ ಶೆಟ್ಟಿ
ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…
ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!
”ಇಂದು’ ಆಕೆ ಬದುಕಿದ್ದರೆ!?’
– ರಾಕೇಶ್ ಶೆಟ್ಟಿ
(ವಾಜಪೇಯಿಯವರ ಬಗ್ಗೆ ನರೇಂದ್ರ ಅವರು ಬರೆದ ಲೇಖನದಲ್ಲಿ ’ಆಪರೇಶನ್ ಬ್ಲೂ ಸ್ಟಾರ್ ಅನ್ನು ಎಳೆದು ತಂದಿದ್ದು ನೋಡಿ ಈ ಹಿಂದೆ ನಾನು ದೇಶ ಕಂಡ ಖಡಕ್ ಪ್ರಧಾನಿಯವರ ಬಗ್ಗೆ ಬರೆದ ಲೇಖನ ನೆನಪಾಯಿತು.ವಾಜಪೇಯಿಯಂತವರನ್ನ ಹೊಗಳಲು ಬೇರೆ ಇನ್ಯಾರನ್ನು ತೆಗಳಬೇಕಾದ ಅವಶ್ಯಕತೆಯೇನಿಲ್ಲ)
ಅದು ೧೯೭೭ – ೭೮ರ ಇಸವಿಯಿದ್ದಿರಬೇಕು, ಬಿಹಾರದ ಬೆಲ್ಚಿ ಎಂಬ ಗ್ರಾಮದಲ್ಲಿ ಮೇಲ್ಜಾತಿಯವರ ಕ್ರೌರ್ಯಕ್ಕೆ ಸಿಕ್ಕಿ ದಲಿತರ ಮಾರಣ ಹೋಮವಾಗಿತ್ತು. ಘಟನೆಯಲ್ಲಿ ನೊಂದವರಿಗೆ ಸಾಂತ್ವಾನ ಹೇಳಲು (ರಾಜಕೀಯ ಉದ್ದೇಶವು ಇತ್ತು, ಅದು ಬೇರೆ ಮಾತು ಬಿಡಿ) ಅದೇ ದಿನ ನಡು ರಾತ್ರಿಯಲ್ಲಿ ಏಕಾಂಗಿಯಾಗಿ ದಿಲ್ಲಿಯಿಂದ ಹೊರಟು,ಜೀಪಿನಿಂದ ಪ್ರಯಾಣ ಶುರು ಮಾಡಿ,ನಂತರ ಜೀಪು ಮುಂದೆ ಸಾಗದಿದ್ದಾಗ ರೈತನ ಟ್ರಾಕ್ಟರ್ ನಲ್ಲಿ ಮುಂದೆ ಸಾಗಿ, ನಡುವಲ್ಲಿ ನದಿ ಬಂದಾಗ ಆನೆಯೇರಿ ಘಟನೆ ನಡೆದ ಸ್ಥಳಕ್ಕೆ ಒಬ್ಬಂಟಿಯಾಗಿ ಬಂದ ಅವರನ್ನು ನೋಡಿದಾಗ ನೊಂದವರಿಗೆ ಸಾಕ್ಷಾತ್ ‘ತಾಯಿ’ಯನ್ನು ನೋಡಿದಂತೆ ಆಯ್ತು. ಆ ತಾಯಿ ‘ಇಂದಿರಾ ಗಾಂಧೀ’ ಅವರ ಕಣ್ಣೀರು ಒರೆಸಿದ್ದಳು.
೧೯೭೧ರ ಸಮಯದಲ್ಲಿ ಪಾಕಿಗಳು ಅವರ ಸಹೋದರರು ಎಂದೆ ಹೇಳಿಕೊಳ್ಳುವ ಬಾಂಗ್ಲಾದೇಶದವರ ಮೇಲೆ ದೌರ್ಜನ್ಯ ಮಾಡುತಿದ್ದಾಗ,ಸೈನ್ಯವನ್ನು ನುಗ್ಗಿಸಿ ಪಾಕಿಗಳಿಗೆ ಮರೆಯಲಾಗದ ಪಾಠವನ್ನೇ ಕಲಿಸಿದ್ದರು, ಆಗಿನ ವಿರೋಧ ಪಕ್ಷದ ನಾಯಕರಾಗಿದ್ದಂತಹ ‘ವಾಜಪೇಯಿ’ ಅವರೇ ಅವರನ್ನು ‘ದುರ್ಗಾ’ ಅಂತ ಕರೆದಿದ್ದರು.ಆ ಯುದ್ಧದಲ್ಲಿ ಇಂದಿರಾ ಗಾಂಧಿಯವರು ನಡೆದು ಕೊಂಡ ರೀತಿಯತ್ತಲ್ಲ, ಆ ಯುದ್ಧದಲ್ಲಿ ಅವರು ತೋರಿದ ಗಟ್ಟಿತನವನ್ನ ಮತ್ಯಾವ ಭಾರತದ ಪ್ರಧಾನಿಯೂ ತೋರಿಸಿಲ್ಲ ಬಿಡಿ.ಖುದ್ದು ಅವರಪ್ಪನನ್ನೇ ಈ ವಿಷಯದಲ್ಲಿ ಅವರು ಮೀರಿಸಿದ್ದರು.
ಮತ್ತಷ್ಟು ಓದು 
ಸಶಸ್ತ್ರಕ್ರಾಂತಿಯ ಪೀಠಿಕೆ – ಬರೆದಿತ್ತವನು ಫಡ್ಕೆ…!!!!!!
-ಭೀಮಸೇನ್ ಪುರೋಹಿತ್
ಆಗ ತಾನೆ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಭೀಕರತೆಯಿಂದ ಸುಧಾರಿಸಿಕೊಳ್ಳುತ್ತಿದ್ದ ಬ್ರಿಟಿಷರಿಗೆ, ಅದರಷ್ಟೇ ಪ್ರಖರ ಭಯವನ್ನು ಒಬ್ಬನೇ ವ್ಯಕ್ತಿ ಮತ್ತೊಮ್ಮೆ ಹುಟ್ಟಿಸಿದ್ದ.. ಅವನ ಹೆಸರು “ವಾಸುದೇವ ಬಲವಂತ ಫಡ್ಕೆ”. ಮಹಾರಾಷ್ಟ್ರದ ಶಿರ್ಧೋನ್ ನಲ್ಲಿ ಜನನ. 1857 ಸಂಗ್ರಾಮ ನಡೆದಾಗ, ಆತ ಹೈಸ್ಕೂಲ್ ಓದುತ್ತಿದ್ದ. ಅದರಿಂದ ಪ್ರೇರಿತಗೊಂಡ ಫಡ್ಕೆ ಅರ್ಧಕ್ಕೆ ಶಾಲೆಗೆ ನಮಸ್ಕಾರ ಹೇಳಿದ.1860 ರಲ್ಲಿಯೇ ಅವನ ಮದುವೆಯೂ ಆಯಿತು. ಇಷ್ಟ ಇಲ್ಲದಿದ್ದರೂ ಸಂಸಾರದ ನಿರ್ವಹಣೆಗೆ ಒಂದು ವೈದ್ಯಕೀಯ ಕಾಲೇಜಿನಲ್ಲಿ ನೌಕರಿ ಸೇರಿದ. ಅದೊಮ್ಮೆ ಅವನ ತಾಯಿ ತೀರಾ ಅಸ್ವಸ್ಥರಾದ ಸಂದೇಶ ಬಂತು. ಕೂಡಲೇ ರಜೆಗೆ ಅರ್ಜಿ ಹಾಕಿದರೂ ಅನುಮತಿ ಸಿಗಲಿಲ್ಲ. ಆದರೂ ಲೆಕ್ಕಿಸದೆ ಊರಿಗೆ ಹೋದಾಗ ಅವನ ತಾಯಿ ಅದಾಗಲೇ ಸ್ವರ್ಗಸ್ಥರಾಗಿದ್ದರು. ಇದರಿಂದ ಆಕ್ರೋಶಗೊಂಡ ಫಡ್ಕೆ ಕೆಲಸಕ್ಕೆ ರಾಜೀನಾಮೆ ನೀಡಿದ..
ನಿಜವಾಗಿ ಇತಿಹಾಸ ಗಮನಿಸೋದಾದ್ರೆ, ಈ “ಸ್ವದೇಶೀ” ಚಳುವಳಿಯನ್ನು ಮನೆಮನೆಗೂ ಕೊಂಡೊಯ್ದ ಮೊದಲಿಗ ಅಂದ್ರೆ ಈ ಫಡ್ಕೇನೆ.. ಜಸ್ಟಿಸ್ ಮಹದೇವ್ ಗೋವಿಂದ್ ರಾನಡೆಯವರ ಸ್ವದೇಶೀ ವಿಚಾರಗಳಿಂದ ಸ್ಫೂರ್ತಿ ಪಡೆದ ಫಡ್ಕೆ, ಗಲ್ಲಿ ಗಲ್ಲಿಗಳಿಗೂ ಹೋಗಿ, ಸ್ವದೆಶಿತನದ ಮಹತ್ವದ ಬಗ್ಗೆ ಉಪನ್ಯಾಸ ನೀಡುತ್ತಿದ್ದ. ಆದರೆ, ಜನರಲ್ಲಿ ಅಂತಸ್ಸತ್ವ ಕಳೆದುಹೋಗಿತ್ತು. ಕೇವಲ ಭಾಷಣಗಳಿಂದ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂದು ಬೇಗನೆ ಅರ್ಥವಾಯಿತು. ಅಲ್ಲದೆ ಯುವಕರಿಗೆ ರಾಷ್ಟ್ರೀಯ ಶಿಕ್ಷಣ ಅವಶ್ಯಕ ಎಂಬ ದೃಷ್ಟಿಯಲ್ಲಿ ಶಿಕ್ಷಣ ಸಂಸ್ಥೆಯನ್ನೂ ತೆರೆದ. ಇದರ ಮಧ್ಯೆಯೇ, ಮಹಾರಾಷ್ಟ್ರದಲ್ಲಿ ಭೀಕರ ಕ್ಷಾಮ ತಲೆದೋರಿತು.ಜನ ಒಪ್ಪತ್ತು ತುತ್ತಿಗೂ ಗತಿಯಿಲ್ಲದೆ ಪರದಾಡುವಂತಾಯಿತು. ಆದ್ರೆ ಕ್ರೂರ ಬ್ರಿಟಿಶ್ ಸರ್ಕಾರ ಮಾತ್ರ, ಎಂದಿನಂತೆ ತೆರಿಗೆಯ ವಸೂಲಿಯನ್ನು ಮುಂದುವರೆಸಿತು.ಬ್ರಿಟಿಷರ ಈ ನೀಚಕೃತ್ಯಗಳಿಂದ ಕುಪಿತನಾದ ಫಡ್ಕೆ ಮುಂದೆ ಇಟ್ಟ ಹೆಜ್ಜೆಯೇ ಇತಿಹಾಸ..
ಸಂಸ್ಕೃತಿ ಸಂಕಥನ – 24 – ಗತ ಕಥೆಯ ಚರಿತ್ರೆ
-ರಮಾನಂದ ಐನಕೈ
ನಾವು ದಿನನಿತ್ಯ ಒಂದಲ್ಲೊಂದು ಸಂದರ್ಭ ದಲ್ಲಿ ಉಲ್ಲೇಖಿಸುವ ಚರಿತ್ರೆ ಅಥವಾ ಹಿಸ್ಟರಿ ಅಂದರೆ ಏನು? ನಾವು ಪಠ್ಯಗಳ ಮೂಲಕ ಚರಿತ್ರೆಯ ಅಭ್ಯಾಸ ಮಾಡುವಾಗ ಹಲವು ವ್ಯಾಖ್ಯೆಗಳನ್ನು ಕಂಠಪಾಠ ಮಾಡಿದ್ದೇವೆ. ಚರಿತ್ರೆ ಅಂದರೆ ಒಂದು ವಿಜ್ಞಾನ. ಏಕೆಂದರೆ ಗತಕಾಲದ ಬಗ್ಗೆ ವೈಜ್ಞಾನಿಕ ವಾಗಿ ಅಧ್ಯಯನ ನಡೆಸಿ ಸೆರೆಹಿಡಿದ ವಾಸ್ತವವೇ ಹಿಸ್ಟರಿ. ಚರಿತ್ರೆ ಅಂದರೆ ಗತಕಾಲದ ರಾಜಕೀಯ. ಚರಿತ್ರೆ ಅಂದರೆ ಗತಕಾಲದ ಸಮಾಜವಿಜ್ಞಾನ. ಹೀಗೆ ಚರಿತ್ರೆಯನ್ನು ಒಂದು ವಸ್ತುನಿಷ್ಠ ವಿಷಯ ಎಂಬಂತೆ ಬಿಂಬಿಸಿಕೊಂಡು ಬಂದಿದ್ದೇವೆ.
ಈಗ ಆಧುನಿಕ ಯುಗದ ನಮ್ಮ ಮನಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಎಲ್ಲ ಗತಕಾಲಕ್ಕೂ ಚರಿತ್ರೆ ಯನ್ನು ಕಟ್ಟಲಾಗುತ್ತಿದೆ. ಚರಿತ್ರೆಗೆ ಸಿಲುಕದ ಗತಕಾಲವನ್ನು ಅವಾಸ್ತವಿಕ ಅಥವಾ ಮೌಢ್ಯ ಎಂದು ಗೇಲಿ ಮಾಡುತ್ತೇವೆ. ಎಲ್ಲ ಗತಕಾಲವೂ ಏಕೆ ಚರಿತ್ರೆ ಯಾಗಲೇಬೇಕು ಎಂಬುದು ನಮ್ಮ ಮುಂದಿರುವ ಪ್ರಶ್ನೆ. ಇದನ್ನು ಅರ್ಥ ಮಾಡಿಕೊಳ್ಳಬೇಕಾದರೆ ನಾವು ಚರಿತ್ರೆ ಅಂದರೆ ಏನು? ಇದು ಯಾವಾಗ ಹುಟ್ಟಿತು ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ.
ಕೇಸರಿಕರಣ ಅಂದರೆ ಕೇಸರಿ ಬಣ್ಣದ ಪುಸ್ತಕವೇ?
– ಅಶ್ವಿನ್ ಅಮೀನ್
ದ್ವಾರಕನಾಥ್ ಅವರೇ, ನೀವು ಇತ್ತೀಚಿಗೆ ಪ್ರಜಾವಾಣಿಯಲ್ಲಿ ಬರೆದ ‘ಪ್ರಾಥಮಿಕ ಪಠ್ಯದಲ್ಲಿ ಕೇಸರೀಕರಣದ ಸ್ಯಾಂಪಲ್’ ಎಂಬ ಲೇಖನದ ಬಗ್ಗೆ ಹಲವು ಸಂದೇಹಗಳಿರುವುದರಿಂದ ಈ ಪ್ರತಿಕ್ರಿಯೆಯನ್ನು ನೀಡಲಿಚ್ಚಿಸುತ್ತೇನೆ.
ಮೊದಲನೆಯದಾಗಿ ನೀವು ಅರ್ಥೈಸಿಕೊಂಡಂತೆ ‘ಕೇಸರೀಕರಣ’ ಎಂದರೇನು ಎಂದು ತಿಳಿಯಬಯಸುತ್ತೇನೆ. ಭಾರತದ ಮೂಲ ಇತಿಹಾಸವನ್ನು, ಸಂಸ್ಕೃತಿಯನ್ನು, ಪರಂಪರೆಯನ್ನು, ಪ್ರಾಚೀನ ಭಾರತದ ಜನರ ಜೀವನ ವಿಧಾನಗಳನ್ನು, ಅವರು ಆಚರಿಸಿಕೊಂಡು ಬರುತ್ತಿದ್ದ ವಿವಿಧ ಆಚರಣೆಗಳನ್ನು ಯಥಾವತ್ತಾಗಿ ತಿಳಿಸಿಕೊಡುವುದು ಕೇಸರೀಕರಣವಾಗುತ್ತದೆಯೇ?.. ಇಷ್ಟಕ್ಕೂ ನಿಮಗೆ ಈ ‘ಕೇಸರಿ’ ಎಂಬ ಕಲರ್ ಕೋಡ್ ಕೊಟ್ಟವರು ಯಾರು?… ಹಾಗಿದ್ದಲ್ಲಿ ಹಿಂದಿನ ಪಠ್ಯಪುಸ್ತಕಗಳಲ್ಲಿ ಇದ್ದಂತೆ ಭಾರತದ ಮೇಲೆ ಹಲವು ಬಾರಿ ಧಾಳಿ ಮಾಡಿ ಇಲ್ಲಿನ ಹಲವು ವೈಭವೋಪೇತ ದೇಗುಲಗಳನ್ನು ನಾಶ ಮಾಡಿ, ಸಂಪತ್ತನ್ನು ಲೂಟಿಗೈದ ಮಹಮ್ಮದ್ ಗಜಿನಿ, ಮಹಮ್ಮದ್ ಘೋರಿ ಮುಂತಾದ ಲೂಟಿಕೋರರ ವರ್ಣನೆ.. ಭಾರತದ ಮೇಲೆ ದಂಡೆತ್ತಿ ಬಂದ ಅಲೆಕ್ಸಾಂಡರನನ್ನು ಸೋಲಿಸಿ ಓಡಿಸಿದ ‘ಭಾರತೀಯ’ ದೊರೆ ‘ಪೌರವ’ನನ್ನು ವರ್ಣಿಸದೇ ಅಲೆಕ್ಸಾಂಡರನನ್ನು ವರ್ಣಿಸಿರುವುದು.. ಸ್ವಾತಂತ್ರ ಹೋರಾಟದ ಪಾಠಗಳಲ್ಲಿ ಆಜಾದ್, ಸಾವರ್ಕರ್, ನೇತಾಜಿ, ಭಗತ್ ಸಿಂಗ್, ಲಾಲ ಲಜಪತ್ ರಾಯ್ ಯಂತವರನ್ನು ನಾಲ್ಕೈದು ಸಾಲುಗಳಿಗೆ ಸೀಮಿತಗೊಳಿಸಿ ಗಾಂಧೀ-ನೆಹರೂ ಮುಂತಾದ ಕಾಂಗ್ರೆಸ್ಸ್ ನಾಯಕರುಗಳ ಬಗ್ಗೆ ಪುಟಗಟ್ಟಲೆ ಬರೆಯುವುದು.. ಮೌಲಾನ ಅಬ್ದುಲ್ ಕಲಾಮ್ ಅಜಾದರಂತಹ ಗಾಂಧಿಯ ಹಿಂಬಾಲಕರ ಬಗ್ಗೆ ಪಾಠಗಳನ್ನು ಸೃಷ್ಟಿಸಿ, ಅಶ್ಫಾಕುಲ್ಲ ಖಾನ್ ನಂತಹ ಕ್ರಾಂತಿಕಾರಿ ದೇಶಪ್ರೇಮಿಯನ್ನು ಕಡೆಗಣಿಸಿರುವುದು.. ಶಿವಾಜಿ ರಾಜ್ಯ ಕಟ್ಟಿದ ರೀತಿ, ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ಅವನು ಪಟ್ಟ ಶ್ರಮದ ಬಗ್ಗೆ ಪಾಠಗಳನ್ನು ರಚಿಸದೇ ಔರಂಗಜೇಬನನ್ನು ಪಠ್ಯದಲ್ಲಿ ವರ್ಣಿಸಿ ಸೇರಿಸಿರುವುದು .. ಇವೆಲ್ಲ ನಿಮಗೆ ಸರಿ ಕಂಡು ಬರುವುದೇ.. ಒಂದರ್ಥದಲ್ಲಿ ಇವೆಲ್ಲ ‘ಹಸಿರೀಕರಣ’ವಾಗದೆ?!!!! ಅದಕ್ಕೇಕೆ ನೀವು ‘ಹಸಿರು’ ಎಂಬ ಕಲರ್ ಕೋಡ್ ಕೊಡುವುದಿಲ್ಲ.? ಸುಳ್ಳು ಇತಿಹಾಸವನ್ನು ಸೃಷ್ಟಿಸಿ ಬರೆದರೆ ಅದು ನಿಮಗೆ ಒಪ್ಪಿಗೆಯಾಗುತ್ತದೆ. ಅದೇ ಭಾರತದ ನಿಜವಾದ ಇತಿಹಾಸವನ್ನು ಮಕ್ಕಳಿಗೆ ತೆರೆದಿಟ್ಟರೆ ಅದು ಹೇಗೆ ಕೇಸರೀಕರಣವಾಗುತ್ತದೆ?
ಸಂಸ್ಕೃತಿ ಸಂಕಥನ – 21 – ಬುದ್ಧ ಬ್ರಾಹ್ಮಣ ವಿರೋಧಿಯೇ?
-ರಮಾನಂದ ಐನಕೈ
ನಿಜಕ್ಕೂ ಇದು ಕುತೂಹಲದ ಪ್ರಶ್ನೆ. ಈ ಕುರಿತು ಸಂಶೋಧನೆ ಮಾಡಿದ ಬಾಲಗಂಗಾಧರರ ಅಭಿಪ್ರಾಯಗಳು ನಮಗೆ ಹೊಸತೊಂದು ಸತ್ಯದ ಲೋಕವನ್ನು ತೆರೆದುಕೊಡುತ್ತದೆ. ಬುದ್ಧ ವರ್ಣ ವ್ಯವಸ್ಥೆಯನ್ನು ದ್ವೇಷಿಸಿದ್ದು ನಿಜವೇ? ವರ್ಣ ವ್ಯವಸ್ಥೆಯನ್ನು ಒಪ್ಪಿಕೊಂಡೆ ಆತ ಬ್ರಾಹ್ಮಣತ್ವವನ್ನು ಚರ್ಚೆಗೆ ಎಳೆಯುತ್ತಾನೆ. ಇದು ಹೇಗೆ ಸಾಧ್ಯ? ನಮ್ಮ ದೇಶದ ದಲಿತರು ಬುದ್ಧಿಸಂನ್ನು ಆರಾಧಿಸು ವುದು ಅದು ನಿಜವಾದ ಮಾನವೀಯ ಧರ್ಮ ಅಂತಲೋ ಅಥವಾ ಬುದ್ಧಿಸಂ ಬ್ರಾಹ್ಮಣರನ್ನು ದ್ವೇಷಿಸುತ್ತದೆ ಎಂಬ ಕಲ್ಪಿತ ಕಥೆಯ ಪ್ರೇರಣೆ ಯಿಂದಲೋ?
ಹಿಂದೂಯಿಸಂ ಹಾಗೆ ಬುದ್ಧಿಸಂ ಕುರಿ ತಾಗಿಯೂ ವರ್ಣರಂಜಿತ ಕಥೆ ಕಟ್ಟಿದವರೂ ಐರೋಪ್ಯರೆ. ಏಕೆಂದರೆ ಬುದ್ಧಿಸಂನ್ನು ಕೂಡಾ ಅವರು ತಮ್ಮ ಕನ್ನಡಕದಿಂದಲೇ ನೋಡಿದರು. ಜೊತೆ ಜೊತೆಗೆ ಹಿಂದೂಯಿಸಂ ಕುರಿತಾದ ಕೆಲವು ಕಗ್ಗಂಟುಗಳಿಂದ ತಪ್ಪಿಸಿಕೊಳ್ಳಲು ಬುದ್ಧಿಸಂನ್ನು ವೈಭವೀಕರಿಸುವ ಅಗತ್ಯ ಅವರಿಗಿತ್ತು. ಬುದ್ಧಿಸಂ ಅನ್ನುವುದು ಹಿಂದೂಯಿಸಂಗಿಂತ ಉತ್ತಮವಾದ ರಿಲಿಜನ್ ಎಂದು ಭಾವಿಸಲು ಅವರಲ್ಲಿ ಸಾಕಷ್ಟು ಸಮರ್ಥನೆಗಳಿದ್ದವು. ಬುದ್ಧಿಸಂ ಏಕದೇವನ ಕಲ್ಪನೆಯಲ್ಲಿದೆ. ತ್ರಿಪಿಟಕಗಳು ಅವರ ಸ್ಕ್ರಿಪ್ಚರ್ಗಳು. ಮತಾಂತರಕ್ಕ ಮಾನ್ಯತೆ ಇದೆ. ಹಾಗಾಗಿ ಬುದ್ಧಿಸಂ ಅನ್ನುವುದು ಒಂದು ಶುದ್ಧವಾದ ರಿಲಿಜನ್ ಅಂದು ಕೊಂಡರು.




