ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

21
ಡಿಸೆ

ರಷ್ಯಾದಲ್ಲಿ ಭಗವದ್ಗೀತೆ ನಿಷೇಧಕ್ಕೆ ಯಾಕೀ ಕೂಗಾಟ ?

-ಅರವಿಂದ್

ಮಾಧ್ಯಮಗಳಲ್ಲಿ ಹಾಗೂ ಲೋಕಸಭೆಯಲ್ಲಿ ನೆನ್ನೆಯಿಂದಲೂ ಒಕ್ಕೊರಲಿಗಿನ ವಾದ-ವಿವಾದ. ಬಿಜೆಪಿ ಇನ್ನಿತರ ವಿರೋಧಪಕ್ಷಗಳು, ಹಿಂದೂ ಹೋರಾಟಗಾರರು, ಇಸ್ಕಾನು ಎಲ್ಲರದೂ ಒಂದೇ, ಮಾತು. ರಷ್ಯಾದಲ್ಲಿ ಭಗವದ್ಗೀತೆ ನಿಷೇಧ ಬೇಡವೆಂಬ ಕೂಗು. ಇದ್ಯಾಕೋ ಗೊತ್ತಾಗಲಿಲ್ಲ. ರಷ್ಯಾದಲ್ಲಿ ಭಗವದ್ಗೀತೆ ನಿಷೇಧಿಸಿದರೆ ಭಾರತಕ್ಕಾಗುವ ನಷ್ಟವೇನು ? ಹೇಳಿ ಕೇಳಿ ರಷ್ಯಾ ಕಮ್ಯೂನಿಷ್ಟ್ ದೇಶ. ಆ ದೇಶ ಭಾರತದಂತೆ ಯಾವುದೇ ಧರ್ಮ ತಳಹದಿಯ ಮೇಲೆ ನಿರ್ಮಾಣವಾದ ದೇಶವಲ್ಲ. ಅದು ಧರ್ಮವನ್ನು ಅಫೀಮು ಎಂದುಕೊಂಡ ದೇಶ. ಇಂಥ ದೇಶಕ್ಕೆ ಧರ್ಮಗಳಿಂದ ನಾಗರೀಕರನ್ನು ಉದ್ಧಾರ ಮಾಡುವ ರಾಜಕೀಯವೂ ಇಲ್ಲ. ಇಂಥ ದೇಶದಲ್ಲಿ ಭಗವದ್ಗೀತೆಯಾದರೇನು, ಖುರಾನಾದರೇನು ಇನ್ಯಾವುದೇ…. ಇದ್ದರೇನು ಧರ್ಮಗ್ರಂಥಗಳಿಗೆ ವಿಶೇಷ ಮಾನ್ಯತೆಯೂ ಇಲ್ಲ.

ರಷ್ಯಾಕ್ಕೆ ತನ್ನದೇ ಆದ ಇತಿಹಾಸವಿದೆ, ಕಮ್ಯೂನಿಷ್ಟ್ ಮ್ಯಾನಿಫೆಸ್ಟೋ ಅಲ್ಲಿನ ಧರ್ಮಗ್ರಂಥವಿದ್ದಂತೆ. ಇಂಥ ದೇಶದಲ್ಲಿ ಭಗವದ್ಗೀತೆ ನಿಷೇಧಿಸಬಾರದೆಂಬ ಕೂಗು, ಅದಕ್ಕೆ ಬೇಕಾದ ರಾಜತಾಂತ್ರಿಕತೆಯ ರಾಯಭಾರ ಭಾರತಕ್ಯಾಕೆ ಅಂತ ತಿಳಿಯುತ್ತಿಲ್ಲ. ಹೋರಾಟ ಇವೆಲ್ಲ ಅವಶ್ಯಕತೆ ಇದ್ಯಾ ? ಭಾರತದಲ್ಲಿ ಮುಸಲ್ಮಾನ, ಕ್ರ್ಯೆಸ್ತ ಅನುಯಾಯಿಗಳು ಆ ಧರ್ಮದ ಪ್ರಚಾರ ಕ್ಯೆಗೊಂಡರೆ ಅದು ಮತಾಂತರವಾದರೆ, ರಷ್ಯಾಗೂ ಅದು ಅನ್ವಯಿಸುವುದಿಲ್ಲವೇ ? ನಾನಿಲ್ಲಿ ಯಾವುದೇ ಧರ್ಮ ದೊಡ್ಡದು ವಿಶಾಲವಾದದ್ದೂ ಅನ್ನೋ ತುಲನೆಗೆ ಹೇಳುತ್ತಿಲ್ಲ. ಪ್ರತಿ ದೇಶಕ್ಕೂ ಅದರದ್ದೇ ಆದ ಸಂವಿಧಾನ ಕರಡು ಇರುತ್ತದೆ. ರಷ್ಯಾಕ್ಕೆ ಭಗವದ್ಗೀತೆಯ ಅವಶ್ಯಕತೆಯಿಲ್ಲ ಮತ್ತು ಅಲ್ಲಿ ಭಗವದ್ಗೀತೆಯ ಯಾವುದೋ ಅಧ್ಯಾಯದ ಯಾವುದೋ ಸಾಲು ಅಹಿಂಸೆಯನ್ನು ಸೃಷ್ಠಿಮಾಡುತ್ತದೆ ಎಂಬ ಆಲೋಚನೆಯಿದ್ದರೆ ಇರಲಿ ಬಿಡಿ, ಅದರಿಂದ ನಮಗ್ಯಾವ ನಷ್ಟವೂ ಇಲ್ಲ. ಭಗವದ್ಗೀತೆ ಭಾರತದ ಸಂಸ್ಕೃತಿಗೆ ತಳಹದಿಯಾದರೆ, ಅದು ಭಾರತಕ್ಕಾದೀತು. ರಷ್ಯಾವೂ ಭಾರತದಂತೆ ಪಾಲಿಸಬೇಕು ಅನ್ನುವ ಹಠ ಯಾಕೆ ? ಅದೇನೋ ಆಗಬಾರದ್ದು ಮಾಡಬಾರದ್ದು ಮಾಡುತ್ತಿರುವಂತೆ ಕೂಗಾಡುವ ಅವಶ್ಯಕತೆಯೇನಿದೆ. ಮತ್ತಷ್ಟು ಓದು »

20
ಡಿಸೆ

ರಾಮುಲು ಗೆಲುವು ಬಿಜೆಪಿಗೆ ದಿಗಿಲು

-ರಾಕೇಶ್ ಎನ್ ಎಸ್
ಈ ಬಾರಿ ಮಾಗಿಯ ಚಳಿಯಲ್ಲಿ ರಾಜ್ಯದ ಶ್ರೀಸಾಮಾನ್ಯ ಆರಾಮವಾಗಿ ದಿನ ಸಾಗಿಸುತ್ತಿದ್ದರೆ ರಾಜ್ಯದ ಅಧಿಕಾರರೂಢರು ಮಾತ್ರ ಗಡಗಡ ನಡುಗುತ್ತ ಅಯ್ಯೋ ರಾಮ ರಾಮ ಅನ್ನುತ್ತಿದ್ದಾರೆ. ಕಳೆದ ಮೂರುವರೆ ವರ್ಷಗಳಿಂದ ಕಂಬಳಿ ಹೊದ್ದುಕೊಂಡೆ ವಿಧಾನ ಸೌಧವನ್ನು ಆಳುತ್ತಿದ್ದವರನ್ನು ಈ ಬಾರಿ ಬಳ್ಳಾರಿಯಿಂದ ಬೀಸಿದ ರಾಮುಲು ನಾಮಧೇಯದ ಶೀತಲ ಮಾರುತ ಥರಗುಟ್ಟುವಂತೆ ಮಾಡಿದೆ.ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ‘ಸ್ವಾಭಿಮಾನಿ’ ಶ್ರೀರಾಮುಲು ಮತ್ತು ಕುಮಾರಸ್ವಾಮಿ ಗೆದ್ದಿದ್ದಾರೆ. ಬಿಜೆಪಿ ಸೋತಿದೆ. ಕಾಂಗ್ರೆಸ್ ಉಪಚುನಾವಣೆಗಳಲ್ಲಿ ಸೋಲುವ ತನ್ನ ಸಂಪ್ರದಾಯವನ್ನು ಇಲ್ಲಿಯೂ ಚಾಚು ತಪ್ಪದೆ ಪಾಲಿಸಿಕೊಂಡು ಬಂದಿದೆ. ಇದು ಮೊನ್ನೆ ಭಾನುವಾರದ ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟವಾಗಿದ್ದ ವಿದ್ಯಮಾನ. ಆದರೆ ಈ ಚುನಾವಣೆ ನಡೆಯಲು ಕಾರಣ, ಚುನಾವಣೆಗೆ ನಡೆದ ಪ್ರಚಾರ ಯಾವುವು ಕೂಡ ಜನರ ಕಣ್ಣಿಗೆ ಇನ್ನೂ ಸ್ಪಷ್ಟವಾಗಿಲ್ಲ. ಎಲ್ಲವೂ ರಾಜಕೀಯದ ಕರಾಳ ಕತ್ತಲೆಯ ಕೂಪದಲ್ಲಿ ನಡೆದ, ಆದರೆ ನಡೆಯಬಾರದ ಸಂಗತಿಗಳಾಗಿದ್ದವು ಎಂದೇ ನಾಡಿನ ಪ್ರಜ್ಞಾವಂತರು ಅಭಿಪ್ರಾಯಪಡುತ್ತಾರೆ.ರಾಮುಲು ಒಂದೆ ಒಂದು ಮತದಿಂದ ಗೆದ್ದಿದ್ದರೂ ಕೂಡ ರಾಜ್ಯ ರಾಜಕೀಯ ಮಗ್ಗಲು ಬದಲಾಯಿಸುವುದು ಸಾಧ್ಯವಿತ್ತು. ಅಂತಹದ್ದರಲ್ಲಿ ಅವರು ಗಳಿಸಿರುವ ಈ ಭಾರಿ ಅಂತರದ ಗೆಲುವಂತೂ ನಮ್ಮ ರಾಜ್ಯದ ರಾಜಕೀಯ ಚಿತ್ರಣವನ್ನೆ ಬದಲಾಯಿಸುವ ಎಲ್ಲ ಸಾಧ್ಯತೆಗಳಿವೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ (ಈ ಹಿಂದೆ ಕುರಗೋಡು ಕ್ಷೇತ್ರ ಎಂದು ಕರೆಯಲಾಗುತ್ತಿತ್ತು) ಹೆಚ್ಚಾಗಿ ಲಿಂಗಾಯತರೇ ಗೆದ್ದು ಬರುತ್ತಿದ್ದರು. ರಾಮುಲು ಈ ಪರಂಪರೆಯನ್ನು ಮುರಿದಿದ್ದಾರೆ (ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ). ಆದರೆ ಈ ಮುರಿಯುವ ಪ್ರಕ್ರಿಯೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಅನಭಿಷಿಕ್ತ ನಾಯಕ ತಾನೇ ಎಂದು ಸ್ವಯಂಘೋಷಿಸಿಕೊಂಡಿರುವ ಅಥವಾ ಆ ರೀತಿ ತನ್ನ ಭಟ್ಟಂಗಿಗಳಿಂದ ಘೋಷಿಸಲ್ಪಟ್ಟಿರುವ ಯಡಿಯೂರಪ್ಪರಿಗೆ ಒಂದು ರೀತಿಯಲ್ಲಿ ಹೊಡೆತ ಮತ್ತು ಮತ್ತೊಂದು ರೀತಿಯಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿದ್ದಾರೆ. ಮತ್ತಷ್ಟು ಓದು »

19
ಡಿಸೆ

ಸಂಸ್ಕೃತಿ ಸಂಕಥನ -14 -ಏನಿದು ಸೆಕ್ಯುಲರಿಸಂ

ರಮಾನಂದ ಐನಕೈ

ರಿಲಿಜನ್ ಅನ್ನುವುದು ಮನುಷ್ಯ ಚಿಂತನೆಯಿಂದ ಹುಟ್ಟಿದ್ದಲ್ಲ. ಅದು ಗಾಡ್ನ  ಕೊಡುಗೆ. ಹಾಗಾಗಿ ರಿಲಿಜನ್ನಿನ ನಂಬಿಕೆ ಹಾಗೂ ಆಚರಣೆ ಎಂಬುದು ಮನುಷ್ಯನಿಗೆ ಗಾಡ್ ಹಾಕಿಕೊಟ್ಟ ಪಾಠ. ರಿಲಿಜನ್ ಅನುಭವಿಸುವುದು ಪ್ರತಿಯೊಬ್ಬ ಕ್ರಿಶ್ಚಿಯನ್ನನ ಹಕ್ಕು. ರಿಲಿಜನ್ ಅನ್ನುವುದು ಮನುಷ್ಯ  ನಿರ್ಮಿತ ಪ್ರಭುತ್ವವನ್ನೂ ಮೀರಿದ ಒಂದು ದೈವಿವ್ಯವಸ್ಥೆ ಎಂಬ ಗಾಢವಾದ ನಂಬಿಕೆಯಿದ್ದ  ಸಂದರ್ಭದಲ್ಲಿ ಕೆಥೋಲಿಕ್ ಹಾಗೂ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿ ಪಂಥ ರಿಲಿಜನ್ನಿನ ನಂಬಿಕೆಯ ಕುರಿತು ಒಳಜಗಳವನ್ನು ಪಂಚಾಯತಿಗೆ ತಂದಾಗ ಪ್ರಭುತ್ವ ಏನು ಮಾಡಬೇಕು? ಯಾರಿಗೆ ನ್ಯಾಯ ಕೊಟ್ಟರೂ ರಿಲಿಜನ್ನಿಗೆ ಅನ್ಯಾಯವಾಗುತ್ತದೆ. ಇದು ಪ್ರಭುತ್ವದ ಸಂದಿಗ್ಧ ಅಲ್ಲೇ ಹುಟ್ಟಿತು ಈ ಸೆಕ್ಯುಲರಿಸಂ ಎಂಬ ಹೊಸ ವಾಸ್ತವ……………

ದಿನನಿತ್ಯ ಒಂದಲ್ಲಾ ಒಂದು ಕಾರಣಕ್ಕಾಗಿ ನಾವು ‘ಸೆಕ್ಯುಲರಿಸಂ’ ಅನ್ನುವ ಪದವನ್ನು ಉಪ ಯೋಗಿಸುತ್ತೇವೆ. ಸೆಕ್ಯುಲರಿಸಂ ಆಧುನಿಕ ಚಿಂತನೆಯ ಪ್ರಮುಖ ಅಂಗವೇ ಆಗಿದೆ. ಹಾಗಾ ದರೆ ಸೆಕ್ಯುಲರಿಸಂ ಅನ್ನುವುದರ ಅರ್ಥ ಏನು? ನಮ್ಮ ಪರಿಸ್ಥಿತಿ ಏನಾಗಿದೆ ಎಂದರೆ ಸೆಕ್ಯುಲರಿಸಂ ಅಂದರೆ ಮನಸ್ಸಿನಲ್ಲಿ ಅರ್ಥವಾದಂತಾಗುತ್ತದೆ. ಆದರೆ ಅದನ್ನು ಬಾಯಲ್ಲಿ ಹೇಳಲಿಕ್ಕೆ ಬರುವುದಿಲ್ಲ. ಅದಕ್ಕೆ ಕಾರಣ ನಮ್ಮಲ್ಲಿ ಸೆಕ್ಯುಲರಿಸಂನ ಅನುಷ್ಠಾನ ಅಷ್ಟು ಗೋಜಲಾಗಿದೆ. ಹೀಗೆ ಹೇಳಲಿಕ್ಕೆ ಬಾರದ ಸೆಕ್ಯುಲರಿಸಮ್ಮೆ ದೇಶದ ಅನೇಕ ತೊಂದರೆಗಳಿಗೆ ಕಾರಣವಾಗಿದೆಯೋ ಎಂಬುದನ್ನು ಅರಿತುಕೊಳ್ಳ ಬೇಕಾಗಿದೆ. ಸಮಾಜಶಾಸ್ತ್ರದ ಹಕೀಮರಾದ ಬಾಲಗಂಗಾಧರರು ಕರ್ನಾಟಕದ ತುಂಬ ಸಂಚರಿ ಸುತ್ತ ಹೀಗೆ ಹೇಳಲುಬಾರದ ಅನೇಕಾನೇಕ ಸಂಗತಿಗಳನ್ನು ಸುಸಂಬದ್ಧವಾಗಿ ಹೇಳುವ ತಿಳುವಳಿಕೆ ನೀಡುತ್ತಿದ್ದಾರೆ.

ಮತ್ತಷ್ಟು ಓದು »

16
ಡಿಸೆ

ಏನ್ ಇವಾಗ? ನಾವ್ ಇರೋದೇ ಹೀಗೆ…

-ಸಾತ್ವಿಕ್ ಎನ್ ವಿ

ಒಮ್ಮೊಮ್ಮೆ ಇಂಥ ಪ್ರಸಂಗಗಳಿಗೆ ಹೇಗೆ ಪ್ರತಿಕ್ರಿಯಿಸುವುದೋ ತಿಳಿಯುವುದಿಲ್ಲ.  ನಿನ್ನೆ ನಮ್ಮ ಮೇಡಂ ಒಬ್ಬರು ಕಾಲ್ ಮಾಡಿ ’ಸಾತ್ವಿಕ್ ನಿಮ್ಮ ಕಡೆ ಯಾರಾದ್ರೂ ಹುಡುಗಿಯಿದ್ದರೆ ಹೇಳೋ ಅಂದ್ರು’. ಅದಕ್ಕೆ ತಮಾಷೆಯಿಂದ ’ನಾನು ಒಂದು ವಧುವರರ ಕೇಂದ್ರ ತೆಗೆದ್ರೆ ಒಳ್ಳೆ ಕಲೆಕ್ಷನ್ ಆಗಬಹುದು ಅಲ್ವಾ ಮೇಡಂ’ ಅಂದೆ. ಅವರು ತಮ್ಮ ಮಾತಿನಲ್ಲಿ ಗಂಭೀರತೆಯನ್ನು ಬಿಟ್ಟು ಕೊಡದೇ ’ಹಾಗಲ್ಲ, ನಿನಗೆ ಗೊತ್ತಲ್ಲ. ನಮ್ಮಲ್ಲಿ ಅಬಕ ಜಾತಿಯ ವಧುಗಳು ಸಿಗೋದು ಬಹಳ ಕಷ್ಟ ಆಗಿದೆ.  ಹಾಗಾಗಿ ಅನಿವಾರ್ಯವಾಗಿ ಬೇರೆ ಜಾತಿಯ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ’ ಅಂದ್ರು. ನನ್ನ ವಯಸ್ಸಿನ ಯೋಚನೆಗೆ ನಿಲುಕದ ವಿಷಯವಾದ ಕಾರಣ ’ಆಯ್ತು ಮೇಡಂ ಪ್ರಯತ್ನಿಸುತ್ತೇನೆ’ ಅಂತ ಹೇಳಿ ಮಾತನ್ನು ಮುಗಿಸಲು ನೋಡಿದೆ.

ಕುತೂಹಲಕ್ಕೆ ’ವರನ ಮನೆಯ ಕಡೆಯಿಂದ ಏನೇನು ನಿರೀಕ್ಷೆಗಳಿರುತ್ತವೆ’ ಅಂತ ಕೇಳಿದೆ. ’ಅಂಥ ವಿಶೇಷಗಳೇನು ಇಲ್ಲ. ಹುಡುಗಿ ತಕ್ಕ ಮಟ್ಟಿಗೆ ಓದಿದ್ದರೆ ಸಾಕು. ಆದರೆ ಆಕೆ ಹುಟ್ಟಿನಿಂದ ಸಸ್ಯಾಹಾರಿ ಕುಟುಂಬದ ಹುಡುಗಿ ಆಗಿರಬೇಕು. ಮದುವೆಯ ನಂತರ ತನ್ನ ತವರಿನ ಜೊತೆಗಿರುವ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಬೇಕು. ಅಕೆಯ ಮನೆಯವರು ವರನ ಮನೆಗೆ ಬರುವುದಾಗಲಿ ಅಥವಾ ಸಂಪರ್ಕ ಇಟ್ಟುಕೊಳ್ಳುವುದಾಗಲಿ ಮಾಡಬಾರದು. ಇವು ಸದ್ಯ ವರನ ಮನೆಯವರು ನಿರೀಕ್ಷಿಸುತ್ತಿರುವ ಅಗತ್ಯಗಳು’ ಎಂದರು. ಎರಡನೆಯ ಸಂಗತಿಯನ್ನು ಕೇಳಿ ನನಗೆ ಸಖೇದಾಶ್ಚರ್ಯವಾಯಿತು.

ಹೆಣ್ಣು ಮಕ್ಕಳ ಕೊರತೆಯಿರುವ ಬೇರೊಂದು ಜಾತಿಯ ಹೆಣ್ಣು ಮಕ್ಕಳನ್ನು ಮದುವೆಯಾಗಬೇಕಾದ ಪರಿಸ್ಥಿತಿಯಿರುವ ಜನರಿಗೂ ಇಷ್ಟೊಂದು ಕರಾರು ಮತ್ತು ಆಯ್ಕೆಗಳಿರುತ್ತವೆಯೇ? ಕೊಡುವವರಿಗೆ ಆಯ್ಕೆಗಳಿರುತ್ತವೆ. ಆದರೆ ಕೇಳುವವರಿಗೆ? ಮತ್ತಷ್ಟು ಓದು »

16
ಡಿಸೆ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ 15: ಸಣ್ಣವರು,ದೊಡ್ಡವರು…

ನಾನು ಸಣ್ಣವನಿದ್ದಾಗ, ಹಲವು ಮಂದಿ ದೊಡ್ಡವರು ನನ್ನ ಕೈ ಹಿಡಿದು ನಡೆಸಿದ್ದರು. ದೈನಂದಿನ ಜೀವನಕ್ಕೆ ಅನ್ವಯಿಸುವಷ್ಟೇ ಪರಿಣಾಮಕಾರಿಯಾಗಿ ಆ ಮಾತು ಕಲಾ ಜೀವನಕ್ಕೂ ಅನ್ವಯಿಸುವಂತಹುದು. ಆಮೇಲೆ, ನಾನೂ ಒಬ್ಬ ಕಲಾವಿದ ಎಂದು ಹೇಳಿಕೊಳ್ಳುವ ಶಕ್ತಿ ಬಂದಾಗ (ಶಕ್ತಿಗಿಂತಲೂ ಹೆಚ್ಚಿನ ಕುರುಡು ಧೈರ್ಯವೂ ಇದ್ದಾಗ) ಹಲವು ಮಂದಿ ದೊಡ್ಡವರೆನಿಸಿಕೊಂಡವರ ಸ್ನೇಹ-ಪರಿಚಯಗಳನ್ನು ಮಾಡಿಕೊಂಡಿದ್ದೇನೆ. ಎಷ್ಟೋ ಮಂದಿ ಸಣ್ಣವರನ್ನು ಕಲಾರಂಗಕ್ಕೆ ಪರಿಚಯ ಮಾಡಿಸಿಕೊಟ್ಟಿದ್ದೇನೆ.
ದೊಡ್ಡವರೆನಿಸಿದವರು ಹಲವರಲ್ಲಿ ಕೆಲವರು ಈಗ ಕಣ್ಮರೆಯಾಗಿದ್ದಾರೆ. ಇನ್ನು ಕೆಲವರು ನಿವೃತ್ತರಾಗಿದ್ದಾರೆ. ಸಣ್ಣವರಾಗಿದ್ದವರು ಮೆಲ್ಲಮೆಲ್ಲನೆ ದೊಡ್ಡವರಾಗುತ್ತಲಿದ್ದಾರೆ. ನಾನು ಎಳೆಯ ಕಲಾವಿದರನ್ನು ತರಬೇತಿಗಾಗಿ ನಮ್ಮಲ್ಲಿಗೆ ಎಳೆದು ತಂದಾಗ, ನನ್ನ ಆಯ್ಕೆಯ ಕ್ಷೇತ್ರವನ್ನು ವಿಸ್ತಾರಗೊಳಿಸುವ ಧೈರ್ಯ ನನಗಿರಲಿಲ್ಲ. ಮನೆಯವರಿಂದ ಬೇರ್ಪಡಿಸಿ ಹುಡುಗರನ್ನು ನನ್ನ ಬಳಿಗೆ ಕರೆತರಿಸಿಕೊಳ್ಳುವುದು ಅಷ್ಟು ಸುಲಭದ ಕೆಲಸವೂ ಆಗಿರಲಿಲ್ಲ. ನಮ್ಮ ಮನೆಯ ಸಮೀಪದವರನ್ನಾದರೂ ಕರೆತಂದು ಸೇರಿಸಿಕೊಳ್ಳುವ ಮೊದಲು “ನಿಮ್ಮ ಹುಡುಗನಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತೇನೆ.” ಎಂಬ ಭರವಸೆ ಕೊಟ್ಟೇ ಕರೆತರಬೇಕಾಗುತ್ತಿತ್ತು. ಹಾಗೆ ತಂದು ತರಬೇತಿ ಮಾಡಿಸಿದವರಲ್ಲಿ ಹೆಚ್ಚಿನವರು ತಮ್ಮ ರಂಗಪ್ರವೇಶದ ಹಾರೈಕೆಗಳನ್ನು ಸಾರ್ಥಕಗೊಳಿಸಿದ್ದಾರೆ. ಇನ್ನು ಕೆಲವರು ತಾವು ಪರಿಣತರಾದೆವೆಂದು ತಿಳಿದುಕೊಂಡಿದ್ದಾರೆ. ಇನ್ನೂ ಕೆಲವರು, ಜೀವನದ ಇತರ ಜಂಜಾಟಗಳಿಗೆ ಸಿಕ್ಕಿ ತಮ್ಮ ಪ್ರತಿಭೆಯನ್ನು ಕಳೆದುಕೊಳ್ಳುವ ಮಟ್ಟಕ್ಕೂ ಮುಟ್ಟಿದ್ದಾರೆ.

ಎಲ್ಲರೂ ಒಂದೇ ರೀತಿಯಾಗಿರಬೇಕೆಂದು ನಿರೀಕ್ಷಿಸುವುದಾದರೂ ಹೇಗೆ? ಏಕರೂಪದ ಸಾಕಾರವೇ ಸಾಕ್ಷಾತ್ಕಾರವಾಗುವುದಾದರೆ, ಭಗವದ್ ಸೃಷ್ಟಿಯಲ್ಲಿ ವೈವಿಧ್ಯವೇ ಇರಲಾರದಲ್ಲ? ನನ್ನೊಂದಿಗೆ ಸಣ್ಣವರಾಗಿದ್ದು ದೊಡ್ಡವರಾಗುತ್ತಿರುವಾಗಲೇ ವಿಧಿಯ ಕಡೆ ಸೇರಿದವರು ಇಬ್ಬರು-ನಮ್ಮ ದೊಡ್ಡಪ್ಪನ ಮಕ್ಕಳು. ಒಬ್ಬನ ಹೆಸರು ರಾಮ, ಇನ್ನೊಬ್ಬನ ಹೆಸರು ಕೃಷ್ಣ. ರಾಮನ ಹೆಸರು ಅವನು ನಿರ್ವಹಿಸುತ್ತಿದ್ದ ರಾಕ್ಷಸ ಪಾತ್ರಗಳಿಂದಾಗಿ ಮೆರೆದಿತ್ತು. ಕೃಷ್ಣ ಸ್ತ್ರೀ ಪಾತ್ರಗಳಿಗೆ ಹೆಸರಾಗಿದ್ದ. ಅವರಿಬ್ಬರೂ ಪಡೆದು ಬಂದಿದ್ದ ಪ್ರತಿಭೆಯನ್ನು ಮೆರೆಸಲು ಸರಿಯಾದ ಅವಕಾಶ ದೊರೆಯುವ ಮೊದಲೇ ಇಬ್ಬರೂ ಅನಾರೋಗ್ಯಕ್ಕೆ ತುತ್ತಾದರು. ನನ್ನ ಜೊತೆಗೇ- ಅಥವಾ ಒಂದೆರಡು ವರ್ಷಗಳ ಹಿಂದು ಮುಂದಿನ ವ್ಯತ್ಯಾಸದಲ್ಲಿ- ರಂಗಪ್ರವೇಶ ಮಾಡಿ ಇಂದಿಗೂ ತಮ್ಮ ಕಲಾಸೇವೆಯನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಹೋಗುತ್ತಲಿರುವವರು ಕೆಲವರಿದ್ದಾರೆ. ಅವರೆಲ್ಲರನ್ನೂ ನಾನು ಪ್ರತ್ಯೇಕವಾಗಿ ಹೆಸರಿಸಬೇಕಾಗಿಲ್ಲ.

15
ಡಿಸೆ

ಮೂಢನಂಬಿಕೆಗಳು ಅಂಧಾನುಕರಣೆಯೇ ?

-ರಾವ್ ಎವಿಜಿ

ಮೂಢನಂಬಿಕೆ ಎಂದರೇನು? ಈ ಪ್ರಶ್ನೆ ನನ್ನಲ್ಲಿ ಉದ್ಭವಿಸಲು ಕಾರಣವಾದದ್ದು ಹಾಲಿ ಅಸ್ತಿತ್ವದಲ್ಲಿ ಇರುವ ಕೆಲವು ಮತೀಯ ಆಚರಣೆಗಳ ಪರ-ವಿರೋಧ ವಾದಗಳು. ಇದಕ್ಕೆ ಸಂಬಂಧಿಸಿದಂತೆ ನನ್ನ ಗಮನ ಸೆಳೆದ ಪತ್ರಿಕೆಗಳಲ್ಲಿ ವರದಿ ಆದ ಮತೀಯ ಆಚರಣೆಗಳು ಇವು:

(೧) ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಲು ಹಿಂದಿನಿಂದ ಆಚರಣೆಯಲ್ಲಿ ಇರುವ ‘ಬ್ರಾಹ್ಮಣರು ಉಂಡೆದ್ದ ಎಂಜಲೆಲೆಗಳ ಮೇಲೆ ಉರುಳು ಸೇವೆ ಮಾಡುವ ಮಡೆಸ್ನಾನ ಪದ್ಧತಿ’

(೨) ಗುಲ್ಬರ್ಗ ಜಿಲ್ಲೆಯಲ್ಲಿ ಆಚರಣೆಯಲ್ಲಿ ಇರುವ ‘ಸೂರ್ಯಗ್ರಹಣ ಕಾಲದಲ್ಲಿ ಸುಮಾರು ೬ ತಾಸು ಕಾಲ ಮಕ್ಕಳನ್ನು ಆಂಗವೈಕಲ್ಯದ ನಿವಾರಣೆಗಾಗಿ ಕುತ್ತಿಗೆಯ ತನಕ ಭೂಮಿಯಲ್ಲಿ ಹುಗಿದಿರಇಸುವ ಪದ್ಧತಿ’

(೩) ಮಹಾರಾಷ್ಟ್ರದ ಶೋಲಾಪುರದಲ್ಲಿ ಆಚರಣೆಯಲ್ಲಿ ಇರುವ  ‘ಸುಮಾರು  ೫೦ ಅಡಿ ಎತ್ತರದಿಂದ ಹಸುಗೂಸುಗಳನ್ನು ಕೆಳಗೆ ಬಿಗಯಾಗಿ ಎಳದು ಹಿಡಿದುಕೊಂಡಿರುವ ಬೆಡ್ ಶೀಟಿಗೆ ಎತ್ತಿ ಹಾಕುವ ಪದ್ಧತಿ’

(೪) ತಮಿಳುನಾಡಿನಲ್ಲಿ ಆಚರಣೆಯಲ್ಲಿ ಇರುವ ‘ಗಲ್ಲದ ಮೂಲಕ ಚೂಪಾದ ದಬ್ಬಳದಂಥ ಸಾಧನಗಳನ್ನು, ಬೆನ್ನಿನ ಚರ್ಮಕ್ಕೆ ಕಬ್ಬಿಣದ ಕೊಕ್ಕೆಗಳನ್ನು ಸಿಕ್ಕಿಸಿಕೊಂಡು ಆವೇಶದಿಂದ ಕುಣಿಯುವ ಕಾವಡಿ ಆಟಮ್ ಪದ್ಧತಿ’

(೫) ಭಾರತದ ಗಡಿಗೆ ತಾಗಿಕೊಂಡಿರುವ ನೇಪಾಳದ ಹಳ್ಳಿಯೊಂದರಲ್ಲಿ  ೫ ವರ್ಷಕ್ಕೊಮ್ಮೆ ಜರಗುವ ಹಿಂದೂ ಹಬ್ಬದಲ್ಲಿ ಸುಮಾರು ೨೫೦೦೦೦ ಕ್ಕೂ ಅಧಿಕ ಪ್ರಾಣಿಗಳನ್ನು (ವಿಶೇಷತಃ ಎಮ್ಮೆಗಳನ್ನು) ಬಲಿ ಕೊಡುವ ಪದ್ಧತಿ

(೬) ಒರಿಸ್ಸಾದ ಕೆಲವೆಡೆ ಆಚರಣೆಯಲ್ಲಿ ಇರುವ ‘ಪುಟ್ಟ ಬಾಲಕರನ್ನು ನಾಯಿಯೊಂದಿಗೆ ಮದುವೆ ಮಾಡುವ ಪದ್ಧತಿ’

(೭) ಚಾಮರಾಜನಗರ ಜಿಲ್ಲೆಯಲ್ಲಿ ಸುಬ್ರಹ್ಮಣ್ಯ ಷಷ್ಠಿಯಂದು ಆಚರಿಸುವ ‘ಹುತ್ತಕ್ಕೆ ಪೂಜೆ ಸಲ್ಲಿಸಿ ಅದರ ಮೇಲೆ ಒಂದು ಕೋಳಿಮೊಟ್ಟೆ ಇಟ್ಟು (ಸಾಮಾನ್ಯವಾಗಿ ಹೆಂಗಸರು) ಕೋಳಿಯ ಕತ್ತು ಕೊಯ್ದು ಬಿಸಿರಕ್ತ ಸುರಿಯುವ ಪದ್ಧತಿ’

ಇಲ್ಲಿ ನಮೂದಿಸಿರುವ ಪ್ರತೀ ಆಚರಣೆಯನ್ನು ಸಮರ್ಥಿಸಿಕೊಳ್ಳಲು ‘ಅನಾದಿಕಾಲದಿಂದಲೂ ಆಚರಣೆಯಲ್ಲಿದೆ’, ‘ಆಚರಣೆಯಿಂದ ಅನೇಕರಿಗೆ ಒಳ್ಳೆಯದಾಗಿದೆ’, ‘ಅನೇಕರಿಗೆ ರೋಗ ವಾಸಿ ಆಗಿದೆ’ ‘ನಮಗೆ ಮನಶ್ಶಾಂತಿ ದೊರೆತಿದೆ’, ‘ಇತರರಿಗೆ ತೊಂದರೆ ಕೊಡುವುದಿಲ್ಲ’ ಮುಂತಾದ ವಾದಗಳನ್ನು ಮುಂದಿಡುತ್ತಾರೆ. ಇವುಗಳನ್ನು ‘ಆಧ್ಯಾತ್ಮಿಕ ಪ್ರತೀಕಗಳಾಗಿ’ ಏಕೆ ಪರಿಗಣಿಸ ಬೇಕು ಅನ್ನುವುದನ್ನು ವಿವರಿಸುವುದೂ ಉಂಟು. ಇವು ‘ಅಮಾನವೀಯ’, ‘ಅನಾಗರೀಕ’. ‘ವೈದಿಕ ಸಂಪ್ರದಾಯವಾದಿಗಳು ಅರ್ಥಾತ್ ಬ್ರಾಹ್ಮಣ ವರ್ಗದವರು ಹಿಂದುಳಿದವರನ್ನೂ ದಲಿತರನ್ನೂ ಶೋಷಿಸಲೋಸುಗವೇ ಹುಟ್ಟುಹಾಕಿ ಪೋಷಿಸಿಕೊಂಡು ಬಂದಿರುವ ಮೂಢನಂಬಿಕೆಗಳು’ ಎಂದೆಲ್ಲ ವಿರೋಧಿಸುವವರೂ ಇದ್ದಾರೆ. ಇರುವ   ಅಸಂಖ್ಯ ಸ್ವಘೋಷಿತ ಮತ್ತು ಪರಂಪರಾಗತ ಮಠಾಧಿಪತಿಗಳ ಪೈಕಿ ಬಹುತೇಕರು ಈ ಕುರಿತು ‘ದಿವ್ಯಮೌನ’ ತಳೆದಿದ್ದಾರೆ, ಕೆಲವರು ‘ಇವೆಲ್ಲ ನಂಬಿಕೆಯ ಪ್ರಶ್ನೆಗಳು, ಬಲು ಹಿಂದಿನಿಂದ ಪರಂಪರಾಗತ ನಂಬಿಕೆಯನ್ನು ಪ್ರಶ್ನಿಸಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಸರಿಯಲ್ಲ’, ಆತ್ಮಸಂತೋಷಕ್ಕಾಗಿ ಅವರಿಗೆ ಸರಿ ಅನ್ನಿಸಿದ್ದನ್ನು ಮಾಡುವ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುವುದು ಸರಿಯೇ?’ ಅನ್ನುವುದರ ಮೂಲಕ ಈ ಆಚರಣೆಗಳನ್ನು ಪರೋಕ್ಷವಾಗಿ ಪೋಷಿಸುತ್ತಿದ್ದಾರೆ. ಮತ್ತಷ್ಟು ಓದು »

12
ಡಿಸೆ

ನಾವು ನಿಜಕ್ಕೂ ತಾಂತ್ರಿಕತೆಯನ್ನು ಬಳಸ್ತಾ ಇದೇವ?

-ಮುರಳಿಧರ ದೇವ್
ಬೆಂಗಳೂರನ್ನು ವಿಶ್ವದಾದ್ಯಂತ ತಾಂತ್ರಿಕತೆಯಲ್ಲಿ ಮುಂದಿರುವ ನಗರವೆಂದು ಗುರುತಿಸಲಾಗುತ್ತೆ, ಅಲ್ಲದೆ ಜಗತ್ತಿನ ಬಹುತೇಕ ಕಂಪನಿಗಳು ನಮ್ಮ ಬೆಂಗಳೂರಿನಲ್ಲಿ ಅವರ ಒಂದು ವಿಭಾಗ ಅಥವಾ ಬ್ರ್ಯಾಂಚ್ ಇರಬೇಕೆಂದು ಬಯಸುತ್ತವೆ. ಬಹುತೇಕ ಸಾಫ್ಟವೇರ್ ಅನ್ನು ಅಭಿವೃದ್ದಿ ಪಡಿಸೋದರಲ್ಲೂ ಬೆಂಗಳೂರಿಗರು ಮುಂದಿದ್ದಾರೆ. ಆದರೆ ನಮ್ಮದೇ ರಾಜ್ಯದಲ್ಲಿ ಈ ತಾಂತ್ರಿಕತೆಯನ್ನು ಉಪಯೋಗ ಪಡೆಯೋದರಲ್ಲಿ ತುಂಬಾ ಹಿಂದೆ ಉಳಿದಿದಿವಿ ಅಂತ ಅನ್ಸುತ್ತೆ. ಬೆಂಗಳೂರಿನ ಬಹುತೇಕ ಬಿ.ಎಂ.ಟಿ.ಸಿ. ಬಸ್ಸುಗಳಲ್ಲಿ ಕೆಲ ದಿನಗಳಿಂದ ಬಸ್ ನಂಬರ್, ಮಾರ್ಗ ಇತ್ಯಾದಿಗಳನ್ನು ತೋರಿಸಲು ಎಲ್.ಇ.ಡಿ. ಗಳನ್ನೂ ಬಳಸ್ತಾ ಇದಾರೆ. ಇದರಿಂದ ಕೇವಲ ಕೆಲ ನಿಮಿಷದಲ್ಲೇ ರೂಟನ್ನು ಚಾಲಕರು ಬದಲಾಯಿಸಬಹುದು. ಆದರೆ ಮಾರ್ಗ ಇತ್ಯಾದಿ ತೋರಿಸುವಾಗ ಹೆಚ್ಚಾಗಿ ಇಂಗ್ಲಿಷ್ ಕಾಣ್ತಾ ಇದೆ, ಹಾಗಂತ ಕನ್ನಡ ಇಲ್ಲ ಅಂತೇನು ಅಲ್ಲ, ಮಾಹಿತಿ ಇಂಗ್ಲಿಷ್ನಲ್ಲಿ ೫ ಸೆಕೆಂಡ್ಸ್ ಬಂದ್ರೆ ಕನ್ನಡದಲ್ಲಿ ಕೇವಲ ೨ಡೇ ಸೆಕಂಡ್ ಬರುತ್ತೆ. ಇದನ್ನು ಪ್ರಶ್ನಿಸೋಕೆ ಹೋದರೆ ತಾಂತ್ರಿಕತೆ ಇರೋದೇ ಹೀಗೆ ಅಂತ ಸಿದ್ದ ಉತ್ತರ ಸಿಗುತ್ತೆ. ಅಲ್ಲದೆ ಟಿಕೆಟನ್ನು ಮುದ್ರಿಸೋ ಯಂತ್ರದಿಂದ ಟಿಕೆಟ್ ಪಡೆದರೆ ಅದರಲ್ಲಿ ಬಿ.ಎಂ.ಟಿ.ಸಿ. ಅಂತ ಬಿಟ್ರೆ ಬೇರೆಲ್ಲೂ ಕನ್ನಡ ಅನ್ನೋ ಪದಾನೆ ಇಲ್ಲ. ಎಲ್ಲಿಂದ, ಎಲ್ಲಿಗೆ, ಮಾರ್ಗ ಯಾವುದು ಎಲ್ಲ ಇಂಗ್ಲಿಷ್ನಲ್ಲೇ ಇರುತ್ತದೆ. ಇದಕ್ಕೂ ಅದೇ ಸಿದ್ದ ತಾಂತ್ರಿಕತೆಯ ಕಾರಣ ಕೊಡ್ತಾರೆ ಅಧಿಕಾರಿಗಳು. ಅಥವಾ ಕನ್ನಡದಲ್ಲಿ ಟಿಕೆಟ್ ಮುದ್ರಿಸೋಕೆ ಟಿಕೆಟ್ನಲ್ಲಿ ಸ್ಥಳದ ಅಭಾವ ಅಂತ ಹೇಳ್ತಾರೆ. ನಿಜಕ್ಕೂ ತಾಂತ್ರಿಕತೆಯಲ್ಲಿ ಇದು ಸಾಧ್ಯವಿಲ್ಲ ಅಂತ ನಂಬೋಣ ಅಂದ್ರೆ ಬೇರೆ ರಾಜ್ಯಗಳಲ್ಲಿ ಈ ಪರಿಸ್ಥೀತಿಯಿಲ್ಲ. ಮತ್ತಷ್ಟು ಓದು »
9
ಡಿಸೆ

ಇಂತಹ ಘಟನೆ ಇನ್ಯಾವ ನಾಡಿನಲ್ಲಿ ನಡೆದೀತು.

– ಸಂತೋಷ್ ಪೂಜಾರಿ

ಸಾರ್ವಜನಿಕ ಕಾರ್ಯಕ್ರಮಲ್ಲಿ ಭಾಗವಹಿಸುವ ಆಸಕ್ತಿ ಅಷ್ಟಕಷ್ಟೆ.ತನಗೆ ಯಾರಾದರೂ ಸನ್ಮಾನ ಮಾಡಿದರೇ ಆ ಬಗ್ಗೆ ಅಸಮಧಾನ ವ್ಯಕ್ತಪಡಿಸುತ್ತಿದ್ದ ಭಾರತದ ಪ್ರಪ್ರಥಮ ಮಹಾ ದಂಡನಾಯಕನಾದ ಫೀಲ್ಡ್ ಮಾರ್ಶಲ್ ಕಾರ್ಯಪ್ಪನವರ ಪ್ರತಿಮೆಗೆ ದಿನಾಂಕ ೧೪/೧೧/೨೦೧೧ ರಂದು ಒದಗಿದ ಸ್ಥಿತಿಯಿಂದಾಗಿ ಭಾರತದ ಸೇನಾ ಜಿಲ್ಲೆಯ ವೀರ ಪರಂಪರೆಯ ಜನರು ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ.

 

ಕೊಡಂದೇರ ಮಾದಪ್ಪ  ಕಾರ್ಯಪ್ಪ ೨೮ ಜನರು ೧೮೯೯ ರಂದು ಕೊಡಗಿನ  ಶನಿವಾರ ಸಂತೆಯಲ್ಲಿ ಜನ್ಮತಾಳಿದ ಇವರು ತಮ್ಮ ಪ್ರಾಥಮಿಕ ಹಾಗೂ ಪ್ರೌಡ ವಿಧ್ಯಾಭ್ಯಾಸವು ಮಡಿಕೇರಿಯಲ್ಲಿ ಮುಗಿಸಿ ಕಾಲೇಜು ವಿಧ್ಯಾಭ್ಯಾಸವನ್ನು ಚೆನೈನಲ್ಲಿ ಮುಗಿಸಿತ್ತಾರೆ. ತಮ್ಮ ಕಾಲೇಜು ದಿನಗಳಲ್ಲಿ ಉತ್ತಮ ಕ್ರಿಢಾಪಟುವಾಗಿದ್ದ ಇವರು ಉತ್ತಮ ಹಾಕಿ ಮತ್ತು ಟೆನ್ನಿಸ್ ಆಟಗಾರರಾಗಿದ್ದರು. ನಂತರದಲ್ಲಿ  ಸೈನಿಕ ಸೇರಿದ ಈ ವೀರ ಸೇನಾನಿ ನಂತರ ತಮ್ಮ ಪ್ರಾಮಾಣಿಕತೆ ಶಿಸ್ತು ಹಾಗೂ ತನ್ನ ಕೆಲಸದಿಂದ ಭಾರತ ಮೊದಲ ಮಹಾ ದಂಡನಾಯಕರಾಗಿ ಕಾರ್ಯ ನಿರ್ವಯಿಸಿದ್ದಾರೆ.

ಎರಡನೆ ಪ್ರಪಂಚ ಯುದ್ದದಲ್ಲಿ ಪಾಲ್ಗೊಂಡಿದ್ದ ಎವರು ನಂತರ ೧೯೪೭ ರ ಭಾರತ ಮತ್ತು ಪಾಕಿಸ್ತಾನದ ಯುದ್ಧದಲ್ಲಿ ಭಾರತೀಯ ಸೈನ್ಯವನ್ನು ಮುಂದುವರೆಸಿದರು ಭಾರತದ ಸ್ವತಂತ್ರ ಬಂದ ನಂತರ ಅದರ ಬೆನ್ನ ಹಿಂದೆ ಇಡಿ ಭಾರತಕ್ಕೆ ಆಪತ್ತು ತಂದುಕೊಡುವ ನಮ್ಮ ಬೆನ್ನಿಗೆ ಚೂರಿ ಹಾಕಿದ ಪಾಕಿಸ್ತಾನದ ವಿರುದ್ದ ಯುದ್ದ ಮಾಡಬೇಕಾಯಿತು.ಸ್ವತಂತ್ರ ಭಾರತದ ಮಹಾ ಸೇನಾನಿಯಾದ ಕಾರ್ಯಪ್ಪನವರಿಗೆ ಸ್ವತಂತ್ರ ಬಂದ ತಕ್ಷಣ ಅದರ ಬೆನ್ನಲ್ಲೇ ಮತ್ತೊಂದು ಯುದ್ದವನ್ನು ಎದುರಿಸುವುದು ಮಹಾನ್ ಕಠಿಣ ಸವಾಲಾಗಿತ್ತು ಭಾರತದ ಸ್ವತಂತ್ರ ಆಗ ತಾನೆ ಸಿಕ್ಕ ಕಾರಣ ಸೈನಿಕರಲ್ಲಿ ಶಿಸ್ತು, ಯುದ್ದ ಸಲಕರಣೆಗಳ ಅಲಭ್ಯತೆ ಸೈನಿಕರ ದಕ್ಷತೆ ಇವೆಲ್ಲದರ ಬಗ್ಗೆ ಹೆಚ್ಚಿನ ಗಮನ ಕೊಡಬೇಕಾಯಿತು. ಆದರೆ ಈಗಾಗಲೆ ಎರಡನೇ ಪ್ರಪಂಚ ಯುದ್ದದಲ್ಲಿ ಪಾಲ್ಗೊಂಡ ಅನುಭವವಿದ್ದ ಕಾರ್ಯಪ್ಪನವರಿಗೆ ಸೈನ್ಯವನ್ನು ಮುನ್ನೆಡೆಸುವುದು ಕಠಿಣವಾಗಲಿಲ್ಲ ಅವರು ಅದನ್ನು ಯಶಸ್ವಿಯಾಗಿ ನಿರ್ವಯಿಸಿದರು ಕೊಡ ಯಾವ ದೇಶ ನಮ್ಮ ಜೊತೆಗೆ ಯುದ್ದವನ್ನು ಮಾಡಿ ನಮ್ಮ ಸರ್ವನಾಶ ಮಾಡುವುದರ ಪಣ ತೊಟ್ಟಿತೊ, ಅದೇ ದೇಶ ಮತ್ತೆ ತನ್ನ ಪ್ರಾಣ ಭಿಕ್ಷೆಯನ್ನು ಬೇಡುವ ತರ ಕಾರ್ಯಪ್ಪನವರು ನಮ್ಮ ಹೋರಾಟಾವನ್ನು ಸಂಘಟಿಸಿದರು ಅದು ಅತ್ಯಂತ ಸಣ್ಣದಿನದ ಅಂತರದಲ್ಲಿ ಸುಲಭ ಜಯ ಸಾಧಿಸಿದರು ಭಾರತೀಯರಿಗೆ ಆ ವಿಜಯ ತಂದು ಕೊಟ್ಟಾ ಆತ್ಮ ವಿಶ್ವಾಸ ಇದೆಯಲ್ಲ ಅದು ವರ್ಣಿಸಲು ಸಾದ್ಯವಿಲ್ಲ ಆಲ್ಲಿಂದ ಮುಂದೆ ಭಾರತೀಯರು ಯಾವುದೇ ಯುದ್ದಕ್ಕೆ ಎದರಲಿಲ್ಲ. ಅದೇ ಭಾರಿ ಬೇರೆ ಬೇರೆ ದೇಶಗಳು  ನಮ್ಮ ಮೇಲೆ ಯುದಕ್ಕೆ ಬಂದರೂ ಮೊದಲ ಜಯದ ನೆನಪಿನೊಂದಿಗೆ ಇಂದು ನಮ್ಮ ಸೈನಿಕರು ಯುದ್ದಕ್ಕೆ ತೆರಳುತ್ತಾರೆ.ಅದಕ್ಕೆ ಕಾರಣಿಭೊತರಾಗಿದ್ದ ನಮ್ಮ ಕೊಡಗಿನ ಹೆಮ್ಮೆಯ ಕುಲಪುತ್ರ ಫೀಲ್ಡ್ ಮಾರ್ಶಲ್ ಕಾರ್ಯಪ್ಪ ಅವರು ಭಾರತೀಯ ಸೇನೆಗೆ ಮಾಡಿದ ಸೇವೆಯನ್ನು ಮನ್ಗಂಡು ೧೯೯೬ ರಲ್ಲಿ ಮಡಿಕೇರಿಯಲ್ಲಿ ಸುದರ್ಶನ ವೃತ್ತದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಯಿತು.

ಮತ್ತಷ್ಟು ಓದು »

9
ಡಿಸೆ

ಈ ದೌರ್ಜನ್ಯಗಳಿಗೆ ಕೊನೆ ಎಂದು?

-ವಿಜಯೇಂದ್ರ

ದನಗಳನ್ನು ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದಲೆನ್ನಲಾದ ಕೃಷ್ಣಪ್ಪ ಎಂಬ ದಲಿತನನ್ನು ಪ್ರಾಣಿ ದಯಾ ಸಂಘಕ್ಕೆ  ಸೇರಿದವರು ಎನ್ನಲಾದ ಹಲವರು ತಡೆದು ಹೊಡೆದು ಸಾವಿಗೀಡು ಮಾಡಿದರು ಎಂದು ಸುದ್ದಿ ಇತ್ತೀಚೆಗಷ್ಟೇ ಗ್ರಾಮೀಣ ಬೆಂಗಳೂರು ವಿಭಾಗದಿಂದ ವರದಿಯಾಗಿದೆ. ಈ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಪೊಲೀಸರು ಪ್ರಯತ್ನಿಸಿದ್ದು ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಸ್ವ್ವಾತಂತ್ರ್ಯ ಬಂದ ಆರು ದಶಕಗಳ ಅನಂತರವೂ ಭಾರತದಲ್ಲಿ ಒಂದು ವರ್ಗದ ಜನತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಕ್ಷುಲ್ಲಕ ಕಾರಣಗಳಿಗಾಗಿ ಅವರ ಮೇಲೆ ಅತ್ಯಾಚಾರ, ಹಲ್ಲೆ, ಮಾನಭಂಗಗಳಂತಹ ಗಂಭೀರ ಅಫರಾದಗಳನ್ನು ಎಸಗಲಾಗುತ್ತಿದೆ.

೫೦೦೦ ವರ್ಷಗಳ ಕಾಲ ವರ್ಣಾಶ್ರಮ ಪದ್ದತಿಯನ್ನು ಭಾರತ ಅನುಸರಿಸಿಕೊಂಡು ಬಂದ ಫಲವಾಗಿ ಹುಟ್ಟಿಕೊಂಡ ಅಸ್ಪೃಶ್ಯ ಜಾತಿ ಮತ್ತು ವರ್ಗಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಗಿನ್ನೀಸ್ ಧಾಖಲೆಯನ್ನು ಮೀರಿಸುತ್ತದೆ ಎಂದರೆ ತಪ್ಪ್ಪಾಗಲಾರದು.

ಯಾವುದೇ ಧರ್ಮ ಜಾತಿ ಆಧರಿತ ತಾರತಮ್ಯ ಕಾನೂನು ಬಾಹಿರ ಎಂದು ಸಂವಿಧಾನದ ಕಲಂಗಳಲ್ಲಿ ಸಾರಿ ಹೇಳಿದರೂ ಸಮಾಜದ ಒಂದು ಪ್ರಮುಖ ಭಾಗದ ಜನರನ್ನು ನಾವು ನಿರ್ಲಕ್ಷಿಸಿದ್ದೇವೆ. ಅನುಚ್ಚೇದ ೧೭ ರಲ್ಲಿ ಅಸ್ಪೃಶ್ಯ ಆಚರಣೆ ನಿಷೇದವೆಂದು ಸ್ಪಷ್ಟಪಡಿಸಿದ್ದರೂ, ರಾಷ್ಟ್ರದ ಎಲ್ಲಾ ಕಡೆ ದಲಿತರ ಮೇಲೆ ಕೊಲೆ, ಅತ್ಯಾಚಾರ. ದೌರ್ಜನ್ಯ, ಬಹಿಷ್ಕಾರಗಳಂತಹ ಅನಿಷ್ಟ ಕ್ರೂರ ಪದ್ದತಿಗಳು ಮುಂದುವರಿದೇ ಇದೆ. ಮತ್ತಷ್ಟು ಓದು »

8
ಡಿಸೆ

ಗಾಂಧಿಬಂದ ವಿವಾದ : ಆತ್ಮಾವಲೋಕನೆಗೆ ಸುಸಂದರ್ಭ

-ಪ್ರವೀಣ್. ಟಿ. ಎಲ್

ನಾಗವೇಣಿಯವರ ‘ಗಾಂಧಿಬಂದ’ ಎಂಬ ಕಾದಂಬರಿಯ ಕುರಿತು ಬೇರೆ ಬೇರೆ ಪತ್ರಿಕೆಗಳಲ್ಲಿ ಇಂದು ವಿವಾದ ನಡೆಯುತ್ತಿದೆ. ಇದಕ್ಕೆ ರಾಜೇಂದ್ರ ಚೆನ್ನಿಯವರು 1-12-2011 ರಂದು ತಮ್ಮ ಪತ್ರಿಕೆಯಲ್ಲಿ   ಗಾಂಧಿ ಬಂದ’ ಕೃತಿಯ ನಿಷೇಧಕ್ಕೆ ಒತ್ತಾಯ ತರವಲ್ಲ ಎಂಬ ಶೀರ್ಷಿಕೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯದ ಹಿನ್ನೆಲೆಯಲ್ಲಿ ನನ್ನ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಅದು ‘ಜಾತಿ ಸಂಸ್ಥೆಗಳು’ ವಿಶ್ವವಿದ್ಯಾನಿಲಯಗಳ ಮೇಲೆ ತರುತ್ತಿರುವ ‘ಅನೈತಿಕ ಒತ್ತಡ’ವಾಗಿದ್ದು, ಅವುಗಳನ್ನು ‘ಲಕ್ಷ’ಕ್ಕೆ ತೆಗೆದುಕೊಳ್ಳಬಾರದೆಂಬ ವಾದವನ್ನು ಮುಂದಿಟ್ಟರು. ಹಾಗೂ ಅವರ ವಾದವು  ಮೇಲ್ನೋಟಕ್ಕೆ ಸಮಂಜಸವಾಗಿ ಕಾಣುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಜಾತಿ ಸಂಸ್ಥೆಗಳ ರಾಜಕೀಯ ಎಂಬುದನ್ನು ಗುರುತಿಸಿದಾಗ ಈ ರಾಜಕೀಯದಲ್ಲಿ ಸಾಹಿತ್ಯವು ತಟಸ್ಥ ಪಕ್ಷವಾಗಿ ತನ್ನನ್ನು ಉಳಿಸಿಕೊಂಡಿದೆಯೆ? ಎಂಬ ಪ್ರಶ್ನೆ ಏಳುತ್ತದೆ.

ತಮಗೆ ಪಥ್ಯವಾಗದ ಯಾವುದೋ ವಿಚಾರವನ್ನು ಮಂಡಿಸಿದೆ ಎನ್ನುವ ಕಾರಣಕ್ಕಾಗಿ ಗ್ರಂಥಗಳನ್ನೇ ನಿಷೇಧಿಸಬೇಕೆಂಬ ಹಾಗೂ ಸಂಶೋಧನೆಗಳನ್ನೇ ನಿಲ್ಲಿಸಬೇಕೆಂದು ಒತ್ತಡ ತರುವ ಪೃವೃತ್ತಿಯು ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂಬುದು ವಿಷಾದಕರ  ಸಂಗತಿ ಹಾಗೂ ಖಂಡನೀಯ. ಇದು ನಮ್ಮ ಸಂಸ್ಕೃತಿಗೆ ತೀರ ಅಸಹಜವಾದ ಒಂದು ಬೆಳವಣಿಗೆ ಎಂಬುದರಲ್ಲಿ ಸಂದೇಹವಿಲ್ಲ. ಏಕೆಂದರೆ ಕೆಲವು ಜಾತಿಯ ಪಾತ್ರಗಳನ್ನು ಹಿಯ್ಯಾಳಿಸುವ, ವ್ಯಂಗ್ಯವಾಡುವ ಹಲವಾರು ಪ್ರದರ್ಶನ ಕಲೆಗಳು ಇಂದಿಗೂ ಯಾವ ‘ಜಾತಿಸಂಸ್ಥೆಗಳ’ ಕೆಂಗಣ್ಣಿಗೂ ಗುರಿಯಾಗದೇ ಮುಂದುವರೆದುಕೊಂಡು ಬರುತ್ತಿರುವುದನ್ನು ನಮ್ಮ ಸಮಾಜದಲ್ಲಿ ನೋಡಲು ಸಾಧ್ಯವಾಗುತ್ತಿದೆ. ಉದಾಹರಣೆಗೆ ಜಾನಪದೀಯ ಕಲೆಗಳಾದ, ‘ಯಕ್ಷಗಾನ’, ‘ತಾಳಮದ್ದಳೆ’, ‘ಶನಿಮಹಾತ್ಮನ ಆಟ’ ಇವುಗಳ ಸಂದರ್ಭದಲ್ಲಿ ಬ್ರಾಹ್ಮಣರಾದಿಯಾಗಿ ಎಷ್ಟೋ ಜಾತಿಗಳ ಪಾತ್ರಗಳನ್ನು(ಮಾಣಿಭಟ್ಟ, ಇತ್ಯಾದಿ) ಹಾಸ್ಯಕ್ಕೆ, ವಿಡಂಬಿಸುವುದಕ್ಕಾಗಿ ಸೃಷ್ಟಿಸಲಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಅದೇ ಜಾತಿಯ ಜನರು ಅಂತಹ ಪ್ರದರ್ಶನಗಳನ್ನು ನೋಡಿ ಸಂತೋಷವನ್ನು ಪಡುತ್ತಾರೆ, ಕಲಾವಿದನ ಪ್ರತಿಭೆಯನ್ನು ಮೆಚ್ಚಿ ಹೊಗಳುತ್ತಾರೆ. ಜೊತೆಗೆ ಅಂತಹ  ಪ್ರದರ್ಶನಗಳು ಪದೇ ಪದೇ ತಮ್ಮ ಊರುಗಳಲ್ಲಿ ನಡೆಯುವಂತೆ ಅಲ್ಲಿನ ಜನರು ಮತ್ತು ಈ ‘ಜಾತಿಸಂಸ್ಥೆಗಳೇ’ ನೋಡಿಕೊಳ್ಳುತ್ತವೆ. ಈ ಸಾಂಪ್ರದಯಿಕ ಕಲೆಯ ಸಂದರ್ಭದಲ್ಲಿ ಕಾಣದ ಪೃವೃತ್ತಿಯು ಆಧುನಿಕ ಸಾಹಿತ್ಯದ ಸಂದರ್ಭದಲ್ಲೇಕೆ ಹುಟ್ಟಿಕೊಳ್ಳಬೇಕು? ಆಧುನಿಕ ಸಾಹಿತ್ಯದ ಸಂದರ್ಭದಲ್ಲೂ ಕೂಡ ಚೆನ್ನಿಯವರು ಹೇಳುವಂತೆ ಈ ಪೃವೃತ್ತಿಯು ಜಾತಿ ರಾಜಕೀಯ ಸಂಸ್ಥೆಗಳಿಂದ ಪ್ರಚೋದಿತವಾದುದನ್ನೇ ಕಾಣುತ್ತೇವೆಯೇ ವಿನಃ ಸಾಮಾನ್ಯ ಓದುಗರಿಂದಲ್ಲ. ಹಾಗಾಗಿ ಈ ಪೃವೃತ್ತಿಗೂ ನಮ್ಮ ಸಾಂಪ್ರದಾಯಿಕ ಸಮಾಜಕ್ಕೂ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಇದೊಂದು ಭಿನ್ನವಾದ  ಸಾಮಾಜಿಕ ವಾಸ್ತವದಲ್ಲಿ ಹುಟ್ಟಿಕೊಂಡ ಸಮಸ್ಯೆಯಾಗಿದೆ. ಮತ್ತಷ್ಟು ಓದು »