ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

8
ಡಿಸೆ

ಗೆಂದಾಲಾಲ್ ದಿಕ್ಷಿತ್ — ಅಪರೂಪದ ಅಜ್ಞಾತ ಕ್ರಾಂತಿಕಾರಿ..!!!

-ಭೀಮಸೇನ್ ಪುರೋಹಿತ್

ಭಾಳ ಅಂದ್ರೆ ಆ ಹುಡುಗನಿಗೆ 9-10 ವರ್ಷ ವಯಸ್ಸಿರಬಹುದು.. ಅವತ್ತೊಂದಿನ, ಬೆಳಗಿನ ನಸುಕಿನಲ್ಲಿಯೇ ಎದ್ದು, ತನ್ನೂರಿನಲ್ಲಿ ಹರಿಯುತ್ತಿದ್ದ ಯಮುನಾ ನದಿಗೆ ತೆರಳಿ ಸ್ನಾನ ಮಾಡಿ ಶುದ್ಧನಾದ. ಮಿಂದೆದ್ದು ಬಂದವನೇ, ದಡದ ಮೇಲಿದ್ದ ಕಾಳಿಯ ಗುಡಿಯೆಡೆ ಹೊರಟ.. ಪೂಜೆಗೆ ಹೋಗ್ತಾ ಇರಬಹುದೆಂದು ಎಲ್ಲರೂ ಅನ್ಕೊಂಡಿದ್ರು.. ಆದ್ರೆ ಅವನು ಹೋಗ್ತಿದ್ದಿದ್ದು ಪೂಜೆಗಲ್ಲ, ಪ್ರತಿಜ್ಞೆಗೆ..!!!!!!!!

” ತಾಯೆ, ಆಂಗ್ಲರ ದುರಾಡಳಿತದಲ್ಲಿ ನಲುಗುತಿರುವ ದೇಶದ ಸ್ವಾತಂತ್ರ್ಯವೇ ನನ್ನ ಜೀವನದ ಧ್ಯೇಯ.. ನನ್ನ ಕೊನೆ ಉಸಿರಿನವರೆಗೂ, ಕೊನೆ ರಕ್ತದ ಹನಿ ಪುಟಿಯುವವರೆಗೂ ಭಾರತಿಯ ಸೇವೆಗಾಗಿ ನನ್ನ ಬದುಕು ಮುಡಿಪು”, ಅಂತ ಆ ಸಣ್ಣ ಬಾಲಕ ಶಪಥಗೈದಿದ್ದ..!!!!

ಅವನ ಹೆಸರು “ಗೆಂದಾಲಾಲ್ ದಿಕ್ಷಿತ್”. 1888 ರಲ್ಲಿ, ಉತ್ತರಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಹಳ್ಳಿಯೊಂದರಲ್ಲಿ  ಜನನ. ಸಣ್ಣವನಿಂದಲೂ ದೇಶಭಕ್ತಿಯನ್ನು ಮೈಗೂಡಿಸಿಕೊಂಡಿದ್ದವ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿದ ಮೇಲೆ, DAV ಶಾಲೆಯಲ್ಲಿ ಶಿಕ್ಷಕನಾಗಿ ಸೇರಿಕೊಂಡ..

ಅದು 1905. ‘ಒಡೆದು ಆಳುವ’ ನೀತಿಯನ್ನೇ ಅನುಸರಿಸುತ್ತಿದ್ದ ಆಂಗ್ಲರ ಅಧಿಕಾರಿ “ಲಾರ್ಡ್ ಕರ್ಜನ್” ಬಂಗಾಳವನ್ನು ವಿಭಜಿಸಿದ. ಅವನೇನೋ ಜನರನ್ನು ಒಡೆಯಲು ಹಾಗೆ ಮಾಡಿದ.. ಆದರೆ ಆದದ್ದೇ ಬೇರೆ. ಅವನ ಈ ಕೃತ್ಯಕ್ಕೆ ಇಡೀ ದೇಶವೇ ಎದ್ದು ನಿಂತಿತು. ಎಲ್ಲೆಲ್ಲೂ ಹರತಾಳ, ಮೆರವಣಿಗೆ, ಹೋರಾಟಗಳು ನಡೆದವು. ತಿಲಕರಂತೂ ತಮ್ಮ ಕೇಸರಿ ಪತ್ರಿಕೆಯಲ್ಲಿ ಪ್ರತಿದಿನ, ಬಂಗಾಳ-ವಿಭಜನೆಯ ವಿರುದ್ಧ ಬೆಂಕಿಯ ಬರಹಗಳನ್ನು ಪ್ರಕಟಿಸ್ತಿದ್ರು.. ಅದರ ಕಿಡಿ, ಗೆನ್ದಾಲಾಲನಿಗೂ ಬಡಿಯಿತು. ತಿಲಕರಿಂದ ತುಂಬಾ ಸ್ಫೂರ್ತಿಗೊಂಡ ಗೆಂದಾಲಾಲ್, ಅವರು ಶುರುಮಾಡಿದ ಶಿವಾಜಿ-ಉತ್ಸವ, ಸಾರ್ವಜನಿಕ ಗಣೇಶ-ಉತ್ಸವ ಇದರಿಂದಲೂ ಪ್ರಭಾವಿತನಾದ. ಶಿವಾಜಿಯ ಚರಿತೆಯನ್ನು ಓದಿ, ಆ ಛತ್ರಪತಿಯ ಸಂಘಟನಾ ಕೌಶಲ್ಯ, ಧೈರ್ಯಗಳಿಂದ ಉತ್ತೇಜಿತಗೊಂಡ. ಗೆಂದಾಲಾಲ್ ಸಣ್ಣವನಿದ್ದಾಗ ಮಾಡಿದ್ದ ಪ್ರತಿಜ್ಞೆ ಈಡೇರುವ ಕಾಲ ಆಗ ಬಂದಿತ್ತು.. ಅದರ ಫಲವೇ, ಭಾರತದ ಕ್ರಾಂತಿ ಇತಿಹಾಸದಲ್ಲಿ, ಮತ್ತೊಂದು ಕ್ರಾಂತಿ ಸಂಘಟನೆಯ ಜನನ..

ಮತ್ತಷ್ಟು ಓದು »

8
ಡಿಸೆ

ಸಂಸ್ಕೃತಿ ಸಂಕಥನ – ೧೩ ಬಾಲಗಂಗಾಧರರ ಸೂಕ್ಷ್ಮದರ್ಶಕದಲ್ಲಿ ಕೋಲಾರದ ಘಟನೆ

– ರಮಾನಂದ ಐನಕೈ

ಇತ್ತೀಚೆಗೆ ಕೋಲಾರದ ಭಗವದ್ಗೀತಾ ಅಭಿಯಾನದ ಸಂದರ್ಭದಲ್ಲಿ ಸ್ವರ್ಣವಲ್ಲೀ ಸ್ವಾಮೀಜಿಯವರಿಗೆ ಹಾಗೂ ಭಗವದ್ಗೀತೆಗೆ ಅವಮಾನ ಮಾಡಿದ ಘಟನೆಯ ಹಿಂದೆ ಅನೇಕ ತಪ್ಪು ತಿಳುವಳಿಕೆಗಳು ಕೆಲಸ ಮಾಡಿವೆ. ಮೇಲ್ನೋಟಕ್ಕೆ ನೋಡಿದರೆ ಇದೊಂದು ರಾಜಕೀಯ ಚದುರಂಗದಾಟ ಎಂಬುದು ಸ್ಪಷ್ಟ. ಹಿಂದೆ ಇದೇ ಭಗವದ್ಗೀತಾ ಅಭಿಯಾನ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಲ್ಲೆಲ್ಲೂ ನಡೆಯದ ಭಯಂಕರ ವಿರೋಧ ಕೋಲಾರದಲ್ಲೇ ಏಕೆ ನಡೆಯಿತು? ಅದನ್ನು ಅರಿತುಕೊಳ್ಳುವ ಅಗತ್ಯ ಇದೆ.

ಕೋಲಾರದಲ್ಲಿ ಕಾರ್ಮಿಕ ವರ್ಗ ಪ್ರಬಲವಾಗಿದೆ. ಹಾಗಾಗಿ ಇಲ್ಲಿ ಕಮ್ಯುನಿಸ್ಟ್ ಪಾರ್ಟಿಯ ಪ್ರಾಬಲ್ಯ ಇದೆ. ಜೊತೆಗೆ ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದ ಕೃಷ್ಣಪ್ಪ ಇದೇ ಜಿಲ್ಲೆಯವರು. ದಲಿತ ಹೋರಾಟವೂ ಈ ಜಿಲ್ಲೆಯಲ್ಲಿ ಹೆಚ್ಚು ಜೀವಂತವಾಗಿದೆ. ಈ ಕಾರಣಕ್ಕಾಗಿ ಅವರು ಭಗವದ್ಗೀತಾ ಅಭಿಯಾನವನ್ನು ಭಾರತೀಯ ಜನತಾ ಪಾರ್ಟಿಯ ಪ್ರೊಪಗಾಂಡಾ ಎಂಬಂತೆ ಗ್ರಹಿಸಿರುವ ಸಾಧ್ಯತೆ ಇದೆ. ಇಂದು ಭಾರತೀಯ ಸಮಾಜಶಾಸ್ತ್ರವನ್ನು ನಿರ್ಣಯಿಸುತ್ತಿರುವುದು ಇಂಥ ತಪ್ಪು ತಿಳುವಳಿಕೆಗಳೆ. ಭಗವದ್ಗೀತೆ ಅಂದರೆ ಬ್ರಾಹ್ಮಣರದ್ದು, ಮೇಲ್ವರ್ಗದ್ದು ಎಂಬ ನಂಬಿಕೆ ಇದೆ. ಇತ್ತೀಚೆಗೆ ಎಸ್.ಎಫ್.ಐ. ರಾಜ್ಯ ಉಪಾಧ್ಯಕ್ಷರ ಸಂದರ್ಶನದಲ್ಲೂ ಇದು ಸ್ಪಷ್ಟವಾಗಿದೆ. ಭಾಜಪಾ ಮೇಲ್ವರ್ಗದವರ ಪಕ್ಷ. ಹಾಗಾಗಿ ಭಗವದ್ಗೀತೆಯ ಪ್ರಚಾರದ ಮೂಲಕ ಪಕ್ಷ ಬಲಪಡಿಸುತ್ತಿದ್ದಾರೆಂಬ ತಿಳುವಳಿಕೆಯೂ ಇರಬಹುದು.

ಮತ್ತಷ್ಟು ಓದು »

24
ನವೆಂ

ಸಂಸ್ಕೃತಿ ಸಂಕಥನ – ೧೨- ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ

– ರಮಾನಂದ ಐನಕೈ

ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ

ಕೆಲವು ವೈದ್ಯರಿರುತ್ತಾರೆ. ಔಷಧಿ ಕೊಟ್ಟಾಕ್ಷಣ ರೋಗ ವಾಸಿಯಾಗುತ್ತದೆ. ನಾವಂದುಕೊಳ್ಳುತ್ತೇವೆ ‘ಅವರು ತುಂಬಾ ಚೆನ್ನಾಗಿ ಔಷಧಿ ಕೊಡುತ್ತಾರೆ’ ಎಂದು. ಹಾಗಾದರೆ ಮಾರುಕಟ್ಟೆಯಲ್ಲಿ ಎಷ್ಟೊಂದು ವೈವಿಧ್ಯಮಯವಾದ ಔಷಧಿಗಳು ಸಿಗುತ್ತವೆ. ಎಲ್ಲ ವೈದ್ಯರು ಕೊಡಬಹುದಲ್ಲ? ಇಲ್ಲೇ ಇದೆ ಸೂಕ್ಷ್ಮ. ವೈದ್ಯರ ಯಶಸ್ಸು ಇರುವುದು ಔಷಧಿ ಕೊಡುವುದರಲ್ಲೊಂದೇ ಅಲ್ಲ. ಅದಕ್ಕಿಂತ ಮುಖ್ಯವಾಗಿ ವ್ಯಕ್ತಿಯಲ್ಲಿರುವ ರೋಗ ಪತ್ತೆಮಾಡುವುದರಲ್ಲಿರುತ್ತದೆ. ಒಮ್ಮೆ ರೋಗ ಗೊತ್ತಾದರೆ ಅದಕ್ಕೆ ಔಷಧ ಯಾವುದೆಂಬುದು ವೈದ್ಯಕೀಯ ಸಾಮಾನ್ಯಜ್ಞಾನ.

ಸದ್ಯದ ಸಮಾಜವಿಜ್ಞಾನ ಪ್ರಕಾರ ಭಾರತೀಯ ಸಮಾಜದ ಪರಿಸ್ಥಿತಿಯೂ ಇದೇ ಆಗಿದೆ. ಭಾರತೀಯ ಸಮಾಜ ವ್ಯವಸ್ಥೆ ಸರಿಯಾಗಿಲ್ಲ. ಮೌಢ್ಯ ಮತ್ತು ಅಸಮಾನತೆಯಿಂದ ಕೊಳೆಯುತ್ತ ರೋಗಗ್ರಸ್ತವಾಗಿವೆ ಎಂಬುದು ಚಿಂತಕರ ಅಭಿಮತ. ಜಾತಿವ್ಯವಸ್ಥೆ ಭಾರತೀಯಸಮಾಜಕ್ಕೆ ಅಂಟಿಕೊಂಡ ದೊಡ್ಡ ರೋಗ. ಹಾಗಾಗಿ ಈ ರೋಗ ಹೋಗಬೇಕಾದರೆ ಜಾತಿವ್ಯವಸ್ಥೆಯನ್ನು ಆಮೂಲಾಗ್ರವಾಗಿ ನಾಶಮಾಡಬೇಕು ಎಂಬ ಮಾತು ದಿನನಿತ್ಯ ಕೇಳಿಬರುತ್ತವೆ. ಭಾರತೀಯ ಸಮಾಜಕ್ಕೆ ಈ ರೀತಿಯ ರೋಗವಿದೆಯೆಂಬ ತಿಳುವಳಿಕೆ ಎಲ್ಲಿಂದ ಬಂತು? ಇದು ನಿಜವಾಗಿಯೂ ರೋಗ ಹೌದೋ ಎಂಬುದರ ಬಗ್ಗೆ ನಾವು ಚಿಂತಿಸಿಲ್ಲ. ನೂರಾರು ವರ್ಷಗಳಿಂದ ಹಲವಾರು ರೀತಿಯ ಔಷಧ ಮಾಡುತ್ತಲೇ ಬಂದಿದ್ದೇವೆ. ರೋಗ ಗುಣಾಗುವುದರ ಬದಲು ಉಲ್ಭಣಿಸುತ್ತ ಬಂದಿದೆ. ಅಂದರೆ ನಾವು ರೋಗವನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ. ಹಾಗಾಗಿ ನಾವು ನೀಡುವ ಔಷಧಿಗಳು ವ್ಯರ್ಥವಾಗುತ್ತಿವೆ. ರೋಗ ಇಲ್ಲದೆಯೇ ಔಷಧ ಕೊಡುವುದು ಅಥವಾ ಸರಿಯಾದ ರೋಗಕ್ಕೆ ಸರಿಯಾದ ಔಷಧ ಕೊಡದೇ ಇರುವುದು ಯಾವತ್ತೂ ಅಪಾಯ. ಅದು ದೊಡ್ಡ ರೋಗಕ್ಕೆ ನಾಂದಿಯಾಗುತ್ತದೆ.

ಮತ್ತಷ್ಟು ಓದು »

17
ನವೆಂ

ಸಂಸ್ಕೃತಿ ಸಂಕಥನ – ೧೧ -ಬ್ರಾಹ್ಮಣರಿಗೆ ಖಳನಾಯಕರ ಪಟ್ಟ ಕಟ್ಟಿದ ಇತಿಹಾಸ

– ರಮಾನಂದ ಐನಕೈ

ಬ್ರಾಹ್ಮಣರಿಗೆ ಖಳನಾಯಕರ ಪಟ್ಟ ಕಟ್ಟಿದ ಇತಿಹಾಸ

ಇತ್ತೀಚೆಗೆ ನಾಡಿನ ಪ್ರಸಿದ್ಧ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಮಾತನಾಡುತ್ತ ಈ ದೇಶ ಮುಸ್ಲಿಂ, ಕ್ರಿಶ್ಚಿಯನ್ ಹಾಗೂ ವೈದಿಕಶಾಹಿ ಆಡಳಿತ ಕಂಡಿದೆ. ಇವೆಲ್ಲವುಗಳಲ್ಲಿ ವೈದಿಕಶಾಹಿ ಆಡಳಿತ ಭಯಂಕರವಾಗಿತ್ತು ಎಂದಿದ್ದಾರೆ.  ನನ್ನ ಇತಿಹಾಸ ಜ್ಞಾನದ ಪ್ರಕಾರ ಮುಸ್ಲಿಂ,ಕ್ರಿಶ್ಚಿಯನ್ ಹಾಗೂ ಕೆಲವು ಕಾಲ ಮೌರ್ಯರು, ಗುಪ್ತರು ಮುಂತಾದ ರಾಜರುಗಳು ಆಳಿದ್ದನ್ನು ಓದಿದ್ದೇನೆ. ಈ ವೈದಿಕಶಾಹಿಗಳು ಯಾರು? ಇವರು ಎಷ್ಟನೇ ಇಸವಿಯಿಂದ ಎಷ್ಟನೇ ಇಸವಿಯವರೆಗೆ ಆಳಿದರು? ಇವರ ಆಡಳಿತದ ಹಾಗೂ ಯುದ್ಧದ ವಿವರಗಳೇನು? ಈ ಕುರಿತು ಗ್ರಂಥ, ಶಾಸನ, ನಾಣ್ಯ ಇತ್ಯಾದಿಗಳು ಇವೆಯೇ ಎಂಬ ಉತ್ತರ ಬೇಕು. ಸುಮ್ಮ ಸುಮ್ಮನೇ ವೇದಿಕೆಯ ಮೇಲೆ ಮಾತನಾಡುವುದು ಈ ದೇಶದ ವಾಕ್ ಸ್ವಾತಂತ್ರ್ಯದ ಫಲ. ಪ್ರಗತಿಪರರೆನಿಸಿಕೊಂಡವರು ವೇದಿಕೆ ಹತ್ತಿದಾಕ್ಷಣ ಪುರೋಹಿತಶಾಹಿ, ವೈದಿಕಶಾಹಿ ಮುಂತಾದ ಪದಪುಂಜಗಳೇ ಹೊರಗೆ ಬರುತ್ತವೆ. ಇದಕ್ಕೆ ಆಧಾರ ಇದೆಯೇ? ಇವೆಲ್ಲ ಪರೋಕ್ಷವಾಗಿ ಬ್ರಾಹ್ಮಣರನ್ನು ಪ್ರಹಾರ ಮಾಡಲು ಉಪಯೋಗಿಸುವ ಪ್ರತಿಮೆಗಳು. ಇದರಿಂದ ಕಂಡಿತ ತೆ ಸಾಧ್ಯವಿಲ್ಲ.

ಸೆಕ್ಯುಲರ್ ಬುದ್ಧಿಜೀವಿಗಳ ದೃಷ್ಟಿಯಲ್ಲಿ ಭಾರತದಲ್ಲಿ ಬ್ರಾಹ್ಮಣರು ಖಳನಾಯಕರು. ಇವರನ್ನು ಪುರೋಹಿತಶಾಹಿಗಳು, ವೈದಿಕಶಾಹಿ ಗಳು ಎಂಬಿತ್ಯಾದಿಯಾಗಿ ಚಿತ್ರಿಸುತ್ತಿದ್ದಾರೆ. ಬ್ರಾಹ್ಮಣರು ಪ್ರಾಚೀನ ಭಾರತವನ್ನು ಆಳಿದವರು, ದಬ್ಬಾಳಿಕೆ ಮಾಡಿದವರು, ತರತಮದ ಸಾಮಾಜಿಕ ವ್ಯವಸ್ಥೆಯ ಶಿಲ್ಪಿಗಳು ಇವೇ ಮುಂತಾಗಿ ಬಾಯಿಗೆ ಬಂದಂತೆ ಹಲುಬುತ್ತಿದ್ದಾರೆ. ನಿದು ನಿಜವೇ? ಇವರಿಗೆ ಈ ತಿಳುವಳಿಕೆ ಏಕೆ ಬಂತು? ಎಲ್ಲಿಂದ ಬಂತು? ಬ್ರಾಹ್ಮಣರು ನಿಜವಾಗಿಯೂ ಪುರೋ ಹಿತಶಾಹಿಗಳೇ?

ಮತ್ತಷ್ಟು ಓದು »

14
ನವೆಂ

ಮುಂದಿದೆ ಮಾರಿ ಹಬ್ಬ : ಯಡಿಯೂರಪ್ಪ ಅವರ ಮುಂದಿನ ರಾಜಕೀಯ ನಡೆಯೇನು?

-”ಸಿದ್ಧಾರ್ಥ

೨೪ ದಿನಗಳ ಸೆರೆಮನೆ ವಾಸದ ನಂತರ ಅಂತೂ ಇಂತೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ. ಇದನ್ನೇ ಒಂದು ವಿಜಯೋತ್ಸವವೆಂಬಂತೆ ಅವರ ಬೆಂಬಲಿಗರು ಬಾಣ ಬಿರುಸು, ಪಟಾಕಿಗಳನ್ನು ಸಿಡಿಸಿ ಹರ್ಷಿಸಿದ್ದಾರೆ. ಯಡಿಯೂರಪ್ಪ ಅವರು ದೇಗುಲಗಳ, ಮಠಗಳ ದರ್ಶನ ಕಾರ್ಯದಲ್ಲಿ ಮುಳುಗಿದಂತೆ ನಟಿಸುತ್ತಿದ್ದರು, ಅವರ ಅಂತರ್ಯ್ಯದಲ್ಲಿ ಮುಕ್ಕಾಗಿ ಹೋದ ವೈಬವವನ್ನು, ಅಧಿಕಾರವನ್ನು ಮರಳಿ ಪಡೆಯುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಅದಕ್ಕೆ ಪೂರಕವೆನ್ನುವಂತೆ ಅವರ ಆಪ್ತ ಮಂತ್ರಿಗಳನೇಕರು ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಕಾರಣೀಭೂತರಾದ ಯಡಿಯೂರಪ್ಪನವರೇ ಪಕ್ಷದ ಪ್ರಶ್ನಾತೀತ ನಾಯಕರು ಆದ್ದರಿಂದ ಅವರನ್ನೇ ರಾಜ್ಯದ ಪಕ್ಷಾದ್ಯಕ್ಷರನ್ನಾಗಿ ಮಾಡಿ ಎಂಬ ಬೆದರಿಕೆ ರೂಪದ ಒತ್ತಡವನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಸೆರಮನೆ ವಾಸ, ಅದೆಷ್ಟೇ ಅಲ್ಪಾವಧಿಯಾದಾಗಿರಲಿ ಅದಷ್ಟೇ ಸುಖ ವೈಬೋಗಗಳಿಂದ ಕೂಡಿರಲಿ, ಮಾನಸಿಕವಾಗಿ ಅದು ಸೆರಮನೆ ವಾಸವೇ. ಪರಿಸ್ಥಿತಿಯ ಶಿಶುವಾಗಿ ತಮ್ಮದಲ್ಲದ ತಪ್ಪಿಗೆ ಸೆರಮನೆ ವಾಸ ಕಂಡ ಯಡಿಯೂರಪ್ಪನವರಿಗೆ ಕಡ್ಡಾಯ ಬಂದನ ಒಂದು ರೀತಿಯಲ್ಲಿ ಪಾಠವಾಗಬೇಕಾಗಿತ್ತು. ಸಾಮಾನ್ಯವಾಗಿ ಸೆರೆಮನೆಯಲ್ಲಿ ಸಿಗುವ ಏಕಾಕಿತನದಲ್ಲಿ ವ್ಯಕ್ತಿಯೊಬ್ಬರ ಮನಸ್ಸು ಹಲವು ಬದಲಾವಣೆಗೆ ಒಳಪಡುತ್ತದೆ. ಸರಿ ತಪ್ಪುಗಳ ವಿಮರ್ಶೆಯ ಆತ್ಮಾವಲೋಕನಕ್ಕೆ ಅದು ಸಕಾಲವಾಗುತ್ತದೆ. ಕೆಲವೊಮ್ಮೆ ಏಕಾಂಗಿ ತನದಲ್ಲಿ ವ್ಯಕ್ತಿಯ ಮನಸ್ಸು, ಪ್ರತಿಭೆ ಅರಳುತ್ತದೆ. ಮತ್ತಷ್ಟು ಓದು »

2
ನವೆಂ

ಅಶ್ಫಾಕುಲ್ಲಾ ಖಾನ್” — ದೇಶಭಕ್ತಿಯ ಮೂರ್ತರೂಪ..

– ಭೀಮಸೇನ್ ಪುರೋಹಿತ್

ಆಗಸ್ಟ್ 9 – 1925.. ಅವತ್ತಿನ ರಾತ್ರಿ ಭಾರತದ ಕ್ರಾಂತಿಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾದ ದಿನ.. ಇನ್ನೂ ಮೀಸೆ ಚಿಗುರದ ನವತರುಣರು ಆಂಗ್ಲಶಾಹಿಯೆದುರಿಗೆ ತೊಡೆತಟ್ಟಿ ನಿಂತ ದಿನ ಅದು.. ಅದೇ “ಕಾಕೋರಿ” ಪ್ರಕರಣ..

ಆ ಹೊತ್ತಿಗಾಗಲೇ, ಅಮೇರಿಕಾದ “ಗದರ್” ಪಾರ್ಟಿಯ ಪ್ರಖರತೆ ಕಮ್ಮಿಯಾಗಿತ್ತು. ಭಾರತದಲ್ಲಿ, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಗದರ್ ಪಾರ್ಟಿಯ ಹಳೆಯ ಕೆಲವು ನಾಯಕರು ಸೇರಿ “ಹಿಂದುಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್” ಎಂಬ ಕ್ರಾಂತಿಸಮಿತಿಯನ್ನು ಶುರು ಮಾಡಿದ್ರು. ಗದರ್ ಪಾರ್ಟಿಯ ಪತನದ ನಂತರ  ಕ್ರಾಂತಿ ತಣ್ಣಗಾಗಿದೆ ಅಂತ, ಆಂಗ್ಲರು ಈ  HRA ಅನ್ನು  ಉಪೇಕ್ಷಿಸಿದ್ದರು.. ಅವರ ಆ ಅಲಕ್ಸ್ಯವೇ ಕ್ರಾಂತಿಕಾರಿಗಳಿಗೆ ವಾರವಾಯಿತು..

ರಾಮಪ್ರಸಾದ್ ಮತ್ತು ಅಶ್ಫಾಕ್ ಇಬ್ರೂ ಜೀವಕ್ಕೆ ಜೀವ ಕೊಡೊ ಗೆಳೆಯರು.. ಅವರ ಸ್ನೇಹದ ನಡುವೆ ಧರ್ಮ ಯಾವತ್ತೂ ಅಡ್ಡಿ ಬರ್ಲಿಲ್ಲ.. ಹಾಗೆ ನೋಡಿದರೆ, ರಾಮ್, ಪಕ್ಕಾ ಅರ್ಯಸಮಾಜದ ಹಿಂದೂವಾದಿ. ಆದ್ರೆ ಅವನು ಅಶ್ಫಾಕ್ ನನ್ನು ಅಪಾರವಾಗಿ ಗೌರವಿಸುತ್ತಿದ್ದ. ಹಾಗೆಯೇ ಅಶ್ಫಾಕ್ ಕೂಡ ಯಾವಾಗಲೂ “ನನ್ನ ರಾಮ” ಅಂತಾನೆ ಜಪಿಸುತ್ತಿದ್ದ.. ಅಶ್ಫಾಕ್  ಉತ್ತರಪ್ರದೇಶದ ಷಹಜಹಾನ್ ಪುರದವನು. ಅಶ್ಫಾಕ್ ಒಬ್ಬ ಮಹಾನ್ ಉರ್ದು ಕವಿ ಕೂಡ ಆಗಿದ್ದ.. ಅತ್ಯಂತ ಉದ್ಬೋಧಕ ದೇಶಭಕ್ತಿ ಗೀತೆಗಳನ್ನು ಬರೆದ ಸಾಹಿತಿ ಅವನು.. ಅದೇ ಅಶ್ಫಾಕ್ ಬಿಸ್ಮಿಲ್ಲನ ಸಹವಾಸಕ್ಕೆ ಬಂದೊಡನೆ, ಅವನ ಪಟ್ಟಶಿಷ್ಯನಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದ..

ಮತ್ತಷ್ಟು ಓದು »

27
ಆಕ್ಟೋ

ಸಂಸ್ಕೃತಿ ಸಂಕಥನ – ೮

– ರಮಾನಂದ ಐನಕೈ

ಮೂರ್ತಿ ಪೂಜೆಗೆ ಕಾರಣಗಳು ಬೇಕಾಗಿಲ್ಲ 

ಯಾವ ಸಂಸ್ಕೃತಿಯಲ್ಲಿ ರಿಲಿಜನ್ ಇದೆಯೋ ಆ ಸಂಸ್ಕೃತಿ ವಿಗ್ರಹ ಆರಾಧನೆ ಅಥವಾ ಮೂರ್ತಿ ಪೂಜೆಯನ್ನು ವಿರೋಧಿಸುತ್ತದೆ. ಏಕೆಂದರೆ ರಿಲಿಜನ್ನಿನಲ್ಲಿ ಗಾಡ್ ಹಾಗೆ ಆಜ್ಞಾಪಿಸಿದ್ದಾನೆ. ಗಾಡ್ ಮಾತ್ರ ನಿಜವಾದ ದೇವರು. ಉಳಿದ ದೇವರುಗಳೆಲ್ಲ ಗಾಡ್ನ ವೈರಿ ಸೈತಾನನ ಪ್ರತಿರೂಪಗಳು. ಹಾಗಾಗಿ ಸೈತಾನನ ಪ್ರತಿರೂಪವಾದ ನೂರಾರು ಮೂರ್ತಿಗಳನ್ನು ಪೂಜಿಸುವುದು ಅನೈತಿಕ. ಪಾಶ್ಚಾತ್ಯರು ಅದೇ ದೃಷ್ಟಿಯಲ್ಲಿ ನಮ್ಮ ಮೂರ್ತಿಪೂಜೆಗಳನ್ನು ನೋಡಿ ಟೀಕೆ ಮಾಡಿದರು. ಆದರೆ ಅದು ನಮಗ ಅರ್ಥವೇ ಆಗಲಾರದು. ಏಕೆಂದರೆ ನಮ್ಮದು ರಿಲಿಜನ್ನೇ ಇಲ್ಲದ ಬಹುಸಂಸ್ಕೃತಿಗಳ ನಾಡು.

 

ಪಾಶ್ಚಾತ್ಯರು ಭಾರತೀಯರ ಮೂರ್ತಿ ಪೂಜೆ ಯನ್ನು ಅನೈತಿಕ ಎಂದು ವ್ಯಾಖ್ಯಾನಿಸಿದರು. ಏಕಿರ ಬಹುದು? ಅದರ ಹಿಂದಿನ ನಿಜ ಏನಿರಬಹುದು?

ಮತ್ತಷ್ಟು ಓದು »

26
ಆಕ್ಟೋ

ಪಾಂಚಾಲಿ ಪ್ರಲಾಪ

-ರೂಪ ರಾವ್ 
ಈ ವಿಜಯಕ್ಕೆ ನಗಬೇಕೆ? ಇಲ್ಲ ಅಳಬೇಕೆ? ನನ್ನೈವರು ಪತಿ ಉಳಿದರು ಎಂದು ಸಂತಸ ಪಡಲೇ ಇವರಬಿಟ್ಟು ಇನ್ನೆಲ್ಲರನ್ನೂ ಕಳೆದುಕೊಂಡ ದುರದೃಷ್ಟತನಕ್ಕೆ ದು:ಖಿಸಲೇ.
ಭಗವಂತ ಎಂಬುವನು ನಿಜಕ್ಕೂ ಇದ್ದಾನೆಯೇ, ಕಣ್ಣಿಗೇ ಕಾಣೋ ದೇವರಂತೆ  ಈ ಕೃಷ್ಣ   ಅಣ್ಣ  ಕೂಡ, ಇವನೊಬ್ಬನೇ  ಈ ಬಾಳಿಗುಳಿದ ಸೌಭಾಗ್ಯವೇ?ಯುದ್ದ ಮುಗಿದ ನಂತರ ಆ ರಕ್ತದ ಹೊಳೆ ನೋಡಿ ಮತ್ತೆ ರಾಣಿಯಂತೆ ಬದುಕಬೇಕೆಂಬ ಆಸೆಯಿರಲಿ ಬದುಕುವಾಸೆಯೇ ಮುರುಟಿ ಹೋಗಿದೆ…..
ಆವತ್ತು ಹಾಳು ಅಶ್ವಥ್ತಾಮ ಒಬ್ಬರಲ್ಲಿ ಒಬ್ಬರನ್ನೂ ಉಳಿಸಬಾರದಿತ್ತೆ , ನನ್ನ ಕರುಳ ಕುಡಿ ಎಂದು. ಹೆಣ್ಣಿನ ಸೌಭಾಗ್ಯ ಪತಿ, ಅವರೆಲ್ಲಾ ಬದುಕಿದ್ದಾರೆ ಎಂದು ಸಂತೈಸುತ್ತಿರುವ ಅತ್ತೆಯ ನೋಡಿ ನಿನ್ನ ಮಕ್ಕಳಲ್ಲಿ ಯಾರದರೂಬ್ಬರನ್ನು ಕಳೆದುಕೊಂಡಿದ್ದರೂ ನಿರ್ಲಿಪ್ತಳಾಗುತ್ತಿದ್ದೆಯಾ ಎಂದು ಕೇಳಿದ್ದಕ್ಕೆ ಕೋಪಿಸಿಕೊಂಡು ದುರು ದುರುಗುಟ್ಟಿ ನೋಡಿ ಎದ್ದು ಹೋಗಿದ್ದಳು. ಸತ್ತ ಅಷ್ಟೂ ಮಕ್ಕಳ ನೋಡಿ ನಾನು ಅಳುತ್ತಿದ್ದರೇ ಆ ಸ್ವಾರ್ಥಿ ಗಂಡಂದಿರು , ಇವರಲ್ಲಿ ಯಾರು ಯಾರ ಮಕ್ಕಳಿದ್ದಿರಬಹುದು? ಅಳಬೇಕೆ ಬೇಡವೇ ಎಂದು ಯೋಚಿಸುತ್ತಿದ್ದಾಗ, ಕಣ್ಣೀರು ಕುದಿ ಕುದಿದು ಮರಗಟ್ಟಿ ಹೋಗಿತ್ತು.
ಪಾಪಿಗಳು ಇವರು ಹೆಜ್ಜೆ ಇಟ್ಟಲ್ಲೆಲ್ಲಾ ಹೆಜ್ಜೆ ಇಟ್ಟೆ, ಒಬ್ಬ ಒಳ್ಳೆಯ ಗಂಡ ಸಿಗುವುದು ದುಸ್ತರವಾಗುತ್ತಿರುವ ಈಕಾಲದಲ್ಲಿ ಐವರು ಅತಿರಥ ಮಹಾರಥರೆಂದು ಹೆಸರು ಪಡೆದ ಈ  ಐವರೂ ನನ್ನನ್ನ ಮಡದಿ ಎಂದು ಪಾಣಿಗ್ರಹಿಸಿದಾಗ , ನಗಬೇಕೆ, ಅಳಬೇಕೇ ತಿಳಿಯದೇ ಕಕ್ಕಾಬಿಕ್ಕಿಯಾಗಿ ನಿಂತಿದ್ದೆ, , ಇದೇ  ಕುಂತಿ –ಯಾಕಾದರೂ ಐದು ಜನರನ್ನು ಹೆತ್ತಳೋ . (ಐದು ಅದು ನೆನ್ನೆಯವರೆಗೆ, ಇಂದು ಆ ಸತ್ಯ ಕೂಡ ಗೊತ್ತಾಯಿತಲ್ಲ ಆ ಕರ್ಣನೂ ಇವಳ ಮಗನೇ ಅಂತೆ.)  ಆ ಐದೂ ಜನರನ್ನ ಮದುವೆಯಾಗು ನಿನ್ನನ್ನು ಸುಖವಾಗಿ ನೋಡಿಕೊಳ್ಳುತ್ತಾರೆ ಎಂದಾಗ ಹಿರಿ ಹಿರಿ ಹಿಗ್ಗಿದ್ದೆ, ಅಪ್ಪ ಕಣ್ಣನು ತುಂಬಿಕೊಂಡು ನಿನಗೆ ಒಪ್ಪಿಗೆಯೇ ಎಂದಾಗ ಸಮ್ಮತಿಸಿದ್ದು ಕೂಡ ಆ ಕುಂತಿ ಹೇಳಿದ ಮಾತಿಗಾಗಿ  ಮದುವೆಯಾದ ಕೆಲವು ವರ್ಷದಲ್ಲೇ ಇವರೆಲ್ಲರ ಗೋಳುಗಳು ತಿಳಿದದ್ದು, ಇವರ ದಾಯಾದಿಗಳು ಇವರ ಮೇಲೆ ದ್ವೇಷ ತುಂಬಿಕೊಂಡು ಇವರ ಅವನತಿಗೆ ಹೊಂಚು ಹಾಕುತ್ತಿದ್ದಾರೆಂದು. ಆಗಲೇ ಮತ್ತೊಂದು ಸತ್ಯ ಎದುರಾಗಿತ್ತು . ಅಪ್ಪ ದ್ರೋಣನ ಮೇಲಿನ ಕೋಪಕ್ಕಾಗಿ ತನ್ನನ್ನು ಅರ್ಜುನನಿಗೆ ಕೊಟ್ಟು ಮದುವೆ ಮಾಡುವುದಾಗಿ ಶಪಥ ತೊಟ್ಟಿದ್ದನಂತೆ. ಒಟ್ಟಿನಲ್ಲಿ ಇವರೆಲ್ಲರ ಆಸೆಗೆ, ಶಪಥಕ್ಕೆ ನಾನು ಬಲಿಯಾಗಿದ್ದೆ. ಮತ್ತಷ್ಟು ಓದು »
22
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 7 – ಗುರುವಿಗಾಗಿ ನಾಟ್ಯಶಾಲೆ

 ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ಜನಿಸಿದ್ದು ಕಳೆದ ಶತಮಾನದ 1912ರ ಸೆಪ್ಟೆಂಬರ್ 08ರಂದು. ತಮ್ಮ ವಯಸ್ಸಿನ ನೂರನೇ ಸಂವತ್ಸರದ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆ ದಲ್ಲಿ ಪ್ರಕಟವಾಗುತ್ತಿದೆ.
 
***
ರಂಗ ಪ್ರವೇಶದ ಪ್ರಥಮ ವರ್ಷದ ಸಂಪೂರ್ಣ ಕಥೆಯನ್ನು ದಿನ ದಿನಗಳ ಅನುಭವದ ವಿವರಗಳೊಂದಿಗೆ ಹೇಳುತ್ತಾ ಹೋಗಬೇಕೆನ್ನುವುದು ನನ್ನ ಉದ್ದೇಶವಲ್ಲ. ಆದರೆ ಮೊದಲಿನ ಎರಡು ದಿನಗಳ ಅನುಭವವನ್ನು ಅನಿವಾರ್ಯವಾಗಿ ಹೇಳಬೇಕಾಗುತ್ತದೆ. ಎರಡನೇ ಆಟ ಕಟೀಲಿನ ಬಳಿಯ ಶಿಬರೂರಿನಲ್ಲಿ ಆಗಿತ್ತು.ಅಂದಿನದು ‘ಪಟ್ಟಾಭಿಷೇಕ’ (ಪಾದುಕಾ ಪಟ್ಟಾಭಿಷೇಕದ ಕಥೆ.) ಅನುಭವದಲ್ಲಿ ನನಗೆ ಅಣ್ಣನಾದ ಅಳಿಕೆ ರಾಮಯ ರೈಗಳು ತಾನು ಭರತನ ಪಾತ್ರವಹಿಸಿ, ನನಗೆ ರಾಮನ ಪಾತ್ರವನ್ನೇ ತೆಗೆಸಿಕೊಟ್ಟಿದ್ದರು.ರಾಮಯ ರೈಗಳು ನಾಟ್ಯಪ್ರವೀಣ. ಮಾತುಗಾರಿಕೆಯಲ್ಲೂ ಮುಂದು. ವ್ಯಾಸಂಗ ಮಾಡುತ್ತಲೇ ಇರುವುದು ಅವರ ಅಭ್ಯಾಸ.ನಾಟ್ಯ ಬಲ್ಲ ಅವರೆಡೆಯಲ್ಲಿ ನಾನೆಲ್ಲಿ? ಎಂಬುದೇ ನನ್ನ ಕೊರಗು. ಆದರೆ, ಅವರೇ ನನಗೆದುರಾಗಿ ರಂಗದಲ್ಲಿ ಬಂದಾಗ ಆ ಕೊರಗು ಅದಾವ ಮಾಯದಿಂದಲೋ ಕಾಣದಾಯಿತು. ಚಿತ್ರಕೂಟದ ರಾಮ ಭರತರ ಸಮಾಗಮ ಅತ್ಯುದ್ಭುತವೆನಿಸಿತು. ನನಗೆ ಬಂದ ಆ ಸನ್ನಿವೇಶದ ಸಹಜ ಸ್ಫೂರ್ತಿ ಅದಕ್ಕೆ ಎಷ್ಟರ ಮಟ್ಟಿಗೆ ಕಾರಣವೋ, ಅಷ್ಟೇ ಪರಿಮಾಣದಲ್ಲಿ ರಾಮಯ ರೈಗಳ ಪಾತ್ರ ಸ್ಫೂರ್ತಿಯೂ ಕಾರಣ.

ಮರುದಿನ ಶ್ರೀ ಶೆಟ್ಟರು ವೇತನದ ವಿಷಯ ಪ್ರಸ್ತಾಪ ಮಾಡಿದರು.

ಮತ್ತಷ್ಟು ಓದು »

29
ಸೆಪ್ಟೆಂ

ಸಂಸ್ಕೃತಿ ಸಂಕಥನ – ೭

– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ

ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು »