ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

24
ಸೆಪ್ಟೆಂ

ಸಂಸ್ಕೃತಿ ಸಂಕಥನ – ೬

ರಮಾನಂದ ಐನಕೈ

ಸಂಶೋಧನೆ ಅಂದರೆ ಏನು? ಇತ್ತೀಚಿನ ದಿನಗಳಲ್ಲಿ ಯಾರಾದರೂ ಸಂಶೋಧನೆ ಮಾಡಿದ್ದಾರೆ ಅಥವಾ ಪಿ.ಎಚ್.ಡಿ. ಪದವಿ ಪಡೆದಿದ್ದಾರೆಂದರೆ ನಗು ಬರುತ್ತದೆ. ನೌಕರಿ ಪಡೆಯಲು ಅಥವಾ ನೌಕರಿಯಲ್ಲಿ ಬಡ್ತಿ ಪಡೆಯಲು ಈ ಪಿ.ಎಚ್.ಡಿ. ಅರ್ಹತೆಯಾಗುತ್ತದೆಯೆಂಬ ಕಾರಣಕ್ಕೆ ಮಾಡುತ್ತಾರೆಯೇ ವಿನಾ ಆಸಕ್ತಿಗಾಗಿ ಅಲ್ಲ. ನಮ್ಮ ವಿಶ್ವವಿದ್ಯಾಲಯಗಳ ಸಂಶೋಧನಾ ವಿಭಾಗಗಳಿಗೆ ಈ ದುರ್ಗತಿ ಬಂದಿದೆ. ಹಣ ಕೊಟ್ಟರೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರೇ ಪ್ರಬಂಧ ಬರೆದು ಪದವಿ ಕೊಡುತ್ತಾರೆ. ಪಿ.ಎಚ್.ಡಿ. ಎಂಬುದು ವ್ಯಾಪಾರವಾಗಿದೆ. ಸಂಶೋಧನೆಗೆ ಆಯ್ದುಕೊಳ್ಳುವ ವಿಷಯವಾದರೂ ಎಂಥದ್ದು. ಯಾರಿಗೂ ಪ್ರಯೋಜನವಾಗದ ವಿಷಯ. ಸಂಶೋಧನಾ ಪ್ರಬಂಧವನ್ನು ನೆಟ್ಟಗೆ ಮೂರು ಜನರು ಓದಲಾರರು. ಈ ರೀತಿಯ ಸಂಶೋಧನೆಗಳಿಂದ ಅಥವಾ ಸಂಶೋಧಕರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯಾ?

ಸುಮಾರು ಹತ್ತು ವರ್ಷಗಳ ಹಿಂದಿನ ಘಟನೆ. ಶಿರಸಿಯ ಗಣಪತಿ ದೇವಸ್ಥಾನದ ಹತ್ತಿರವಿರುವ ಶಂಕರಹೊಂಡದ ಸ್ವಚ್ಛತಾ ಕಾರ್ಯಕ್ರಮ ನಡೆಯತ್ತಿತ್ತು. ಆಗ ಒಂದು ಪುಟ್ಟ ವಿಗ್ರಹ ಸಿಕ್ಕಿತು. ಕ್ಷಣಾರ್ಧದಲ್ಲಿ ಇಡೀ ಶಿರಸಿ ನಗರ ವ್ಯಾಪಿಸಿತು ಈ ಸುದ್ದಿ. ಅಷ್ಟರಲ್ಲಿ ಇತಿಹಾಸ ಸಂಶೋಧಕನೊಬ್ಬ ಅಲ್ಲಿಗೆ ಬಂದ ಆತ ಆಗಷ್ಟೇ ಅರೆಕಾಲಿಕ ಇತಿಹಾಸ ಉಪನ್ಯಾಸಕನಾಗಿ ಸೇರಿದವ. ಆಗಲೇ ಹೆಸರಿನ ಹಿಂದೆ ಪ್ರೊಫೆಸರ್ ಎಂದು ಬಳಸುತ್ತಿದ್ದ. ಆತ ಈ ವಿಗ್ರಹವನ್ನು ಕೂಲಂಕಶವಾಗಿ ಪರಿಶೀಲಿಸಿ ಅದರ ಕುರಿತು ಪತ್ರಿಕಾ ಪ್ರಕಟಣೆ ನೀಡಿದ.

ಮತ್ತಷ್ಟು ಓದು »

23
ಸೆಪ್ಟೆಂ

ಕುರುಡಾಗದಿರು ಭಾರತೀಯ ನಿನ್ನ ಕಣ್ಣುಗಳಿರುವ ತನಕ..

ಅಶ್ವಿನ್ ಎಸ್ ಅಮೀನ್

ಕೋಮುವಾದ, ಜಾತಿವಾದ,  ಇವುಗಳ ನಡುವಿನ ಸಂಘರ್ಷಗಳು ಯಾವ ದೇಶದಲ್ಲಿ ಎಷ್ಟರವರೆಗೆ ಇರುತ್ತವೆಯೋ ಅಲ್ಲಿಯ ತನಕ ಆ ದೇಶದ ಬೆಳವಣಿಗೆ ಕುಂಠಿತವಾಗಿ ಸಾಗುತ್ತದೆ. ಅದರಲ್ಲೂ ಆಳುವ ಸರಕಾರಗಳು ನಡೆಸುವ ಒಂದು ಸಮುದಾಯದವರ ಓಲೈಕೆ ಅದು ಅಲ್ಪಸಂಖ್ಯಾತರನ್ನಾಗಲೀ, ಬಹುಸಂಖ್ಯಾತರನ್ನಾಗಲೀ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ.

ನಮ್ಮೀ ಭಾರತ ಇದೆಲ್ಲ ಸಮಸ್ಯೆಗಳಿಂದ ಹೊರತಾಗಿಲ್ಲ.. ಬಹುಶಃ ಈ ತರಹದ ಕೋಮು ವಿಂಗಡಣೆ, ಜಾತಿ ವಿಂಗಡಣೆ ರಾಜಕೀಯ ಭಾರತದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಸಿಗದು..! ತಾಜಾ ಉದಾಹರಣೆಯಾಗಿ ಕೇಂದ್ರದ NAC ಸಿದ್ದಪಡಿಸಿದ ಕೋಮು ಸಂಘರ್ಷ ನಿಯಂತ್ರಣಾ ಕಾಯಿದೆಯ ಕರಡು ರೂಪದಲ್ಲೊಮ್ಮೆ ಕಣ್ಣಾಡಿಸಿ. ಇಲ್ಲಿ ಕಾಣಸಿಗುವುದು ಅಲ್ಪ ಸಂಖ್ಯಾತ, ಬಹು ಸಂಖ್ಯಾತ, ಪರಿಶಿಷ್ಟ ವರ್ಗ – ಪಂಗಡಗಳೆಂಬ ವಿಂಗಡಣಾ ರಾಜಕೀಯ.
ಕೋಮು ಸಂಘರ್ಷಗಳಲ್ಲಿ ತಪ್ಪಿತಸ್ಥರಾದವರಿಗೆ ಎಲ್ಲರಿಗೂ ಶಿಕ್ಷೆಯಾಗುವುದಾದರೆ ಈ ಕೋಮು ಸಂಘರ್ಷ ನಿಯಂತ್ರಣ ಕಾಯಿದೆ ಸ್ವಾಗತಾರ್ಹವಾಗುತಿತ್ತು. ಇಡೀ ಭಾರತಕ್ಕೆ ಭಾರತವೇ NAC ಯ ಮುಖ್ಯಸ್ಥೆ ಸೋನಿಯಾ ಗಾಂದಿಯವರನ್ನು ಅಭಿನಂದನೆಗಳಿಂದ ಮುಳುಗೇಳಿಸುತ್ತಿತ್ತು. ಆದರೆ ಹಾಗಾಗಲಿಲ್ಲ..! ಕಾರಣ ಇಲ್ಲಿ ಕೇವಲ ಬಹುಸಂಖ್ಯಾತರಿಗಷ್ಟೇ ಶಿಕ್ಷೆ.. ಅಲ್ಪಸಂಖ್ಯಾತರು ಯಾವುದೇ ಗಲಬೆಗಳಲ್ಲಿ ಪಾಲ್ಗೊಂಡರೂ ಈ ಕಾಯಿದೆಯಡಿ ಶಿಕ್ಷೆಯಿಲ್ಲ. ಅದರಲ್ಲೂ ಬೆಂಕಿಗೆ ತುಪ್ಪ ಸುರಿದಂತೆ ಬಹುಸಂಖ್ಯಾತ ಹಿಂದೂ ಧರ್ಮದಿಂದ ಪರಿಶಿಷ್ಟ ವರ್ಗ-ಪಂಗಡಗಳನ್ನು ಬೇರ್ಪಡಿಸಿರುವುದು..! ಪರಿಶಿಷ್ಟ ವರ್ಗ-ಪಂಗಡಗಳಿಗೆ ಸೌಲಭ್ಯ ಕಲ್ಪಿಸಿರುವುದು ಒಳ್ಳೆಯದೇ ಆಗಿದೆ. ಆದರೆ ಇಲ್ಲಿ ಭಾರತದ ಮೂಲ ಧರ್ಮವಾದ ಸನಾತನ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಅಡಗಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮತ್ತಷ್ಟು ಓದು »
12
ಸೆಪ್ಟೆಂ

ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?

– ಕೆ.ಎಸ್ ರಾಘವೇಂದ್ರ ನಾವಡ

  “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!

ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್  ಕಾರ್ಯಕರ್ತರ ಹಠಾತ್ ಕಣ್ಮರೆ..

ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ

ಕಾಲ : ೨೦೦೨

ಆ ನರಮೇಧದ ಹಿ೦ದಿನ ರೂವಾರಿಯ  ಹೆಸರು ಸುಶಾ೦ತ್ ಘೋಷ್!!

ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..

 

ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು!   ಒಮ್ಮೆ ಮಮತಾ ದೀದಿ   ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು  ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!

ಮತ್ತಷ್ಟು ಓದು »

12
ಸೆಪ್ಟೆಂ

ರೇಲ್ವೇ ಇಲಾಖೆ ಮತ್ತು ಹಿಂದಿ ಹೇರಿಕೆ.!

– ಮಹೇಶ.ಎಮ್.ಆರ್

ವಿ.ಸೂ: ಬೇರೆ ಒಂದು ಬಾಶೆಯನ್ನು ಗೌರವಿಸುವುದಕ್ಕೂ ಅದನ್ನು ನಮ್ಮ ಮೇಲೆ ಹೇರಿಸಿಕೊಳ್ಳುವುದಕ್ಕೂ ಇರುವ ವ್ಯತ್ಯಾಸವನ್ನು ತಿಳಿದಿರುವವರು ಮಾತ್ರ ಮುಂದುವರಿಯಲು ಕೋರಿಕೆ.!

ಸ್ವಾತಂತ್ರ್ಯ ನಂತರ, ಬಾರತೀಯತೆಗೂ ಹಿಂದಿಗೂ ತಳುಕು ಹಾಕಿ ಅದನ್ನು ರಾಶ್ಟ್ರ ಬಾಶೆ ಮಾಡಲು ಹೊರಟ ಕೇಂದ್ರ ಸರಕಾರದ ಮತ್ತು ಕೆಲವರ ಪ್ರಯತ್ನ ಅನೇಕ ಹಿಂದಿಯೇತರರ ವಿರೋದಿ ಹೋರಾಟದ ಫಲವಾಗಿ ವಿಫಲವಾಯಿತು. ಇದರ ತರುವಾಯ ಮುಂದೆ ಕೇಂದ್ರ ಸರಕಾರ ನೋಡಿಕೊಂಡ ದಾರಿಯೇ ಆಡಳಿತ ಬಾಶೆಯೆಂಬ ಹಿಂದಿನ ಬಾಗಿಲು. ಹಿಂದಿಯನ್ನು ಆಡಳಿತ ಬಾಶೆಯನ್ನಾಗಿ ಮಾಡಿ ತನ್ನ ಸಂಸ್ಥೆ, ಇಲಾಖೆ, ಬ್ಯಾಂಕುಗಳನ್ನು ಉಪಯೋಗಿಸಿ ಹಿಂದಿನ ಬಾಗಿಲ ಮೂಲಕ.

ಮತ್ತಷ್ಟು ಓದು »

20
ಆಗಸ್ಟ್

ಸಂಸ್ಕೃತಿ ಸಂಕಥನ – ೫

– ರಮಾನಂದ ಐನಕೈ

ಆಧುನಿಕ ಇತಿಹಾಸದಲ್ಲಿ ಪದೇ ಪದೇ ಕಲ್ಯಾಣ ರಾಜ್ಯ ‘ವೆಲ್ಫೇರ್ ಸ್ಟೇಟ್’ದ ಕುರಿತು ಉಲ್ಲೇಖವಾಗುತ್ತದೆ. ಕಲ್ಯಾಣ ರಾಜ್ಯ ಅಂದರೆ ಏನು? ಪ್ರಜೆಗಳ ಸರ್ವತೋಮುಖ ಕ್ಷೇಮವನ್ನು ಹೆಗಲ ಮೇಲೆ ಹೊತ್ತ ಪರಿಕಲ್ಪನೆ ಇದು. ಸಾಮಾಜಿಕ ಭದ್ರತೆ (ಸೋಶಿಯಲ್ ಸೆಕ್ಯುರಿಟಿ) ಕಲ್ಯಾಣ ರಾಜ್ಯದ ಒಂದು ಆದರ್ಶ. ಪ್ರತಿಯೊಬ್ಬ ಪ್ರಜೆಗೆ ಸಾಮಾಜಿಕ ಭದ್ರತೆ ನೀಡುವುದೂ ಕಲ್ಯಾಣ ರಾಜ್ಯದ ಒಂದು ಗುರಿ.

ಪಾಶ್ಚಾತ್ಯರು ಈ ಸಮಾಜಿಕ ಭದ್ರತೆಯನ್ನು ಕಲ್ಪಿಸಿಕೊಂಡ ರೀತಿ ಭಿನ್ನವಾಗಿದೆ. ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೆ ಬದುಕುವ ಹಕ್ಕಿದೆ. ಇದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಮನುಷ್ಯನಿಗೆ ಬದುಕಲು ಬೇಕಾದ ಅನ್ನ, ನೀರು, ಮನೆ, ಬಟ್ಟೆ ಮುಂತಾದ ಅನೇಕ ಅವಶ್ಯಕತೆಗಳನ್ನು ಪ್ರಭುತ್ವ (ಸ್ಟೇಟ್) ಪೂರೈಸಿ ಅವರಲ್ಲಿ ಭದ್ರತೆಯ ಭಾವನೆಯನ್ನು ಹುಟ್ಟಿಸಬೇಕು. ಆಗ ಪ್ರಜೆಗಳು ಸಂತೋಷವಾಗಿರುತ್ತಾರೆ ಎಂಬುದು ಅವರ ಚಿಂತನೆ. ಇದನ್ನೇ ಸಾಮಾಜಿಕ ಭದ್ರತೆ ಎಂದು ಕರೆದರು. ಇದಕ್ಕಾಗೇ ಅನೇಕ ರಾಷ್ಟ್ರಗಳು ತಮ್ಮನ್ನು ವೆಲ್ಫೇರ್ ಸ್ಟೇಟ್ಸ್ ಎಂದು ಕರೆದುಕೊಂಡವು. ಇದನ್ನು ಸರಳವಾಗಿ ಹೇಳಬಹುದಾದರೆ ಕನಿಷ್ಟ ಅವಶ್ಯಕತೆಯ ಭೌತಿಕ ಸವಲತ್ತುಗಳನ್ನು ನೀಡುವುದೇ ಅವರ ಪ್ರಕಾರ ಸಾಮಾಜಿಕ ಭದ್ರತೆ. ಪಾಶ್ಚಾತ್ಯರ ಈ ಲೋಕಜ್ಞಾನ ಭಾರತೀಯರಿಗೆ ರೋಮಾಂಚಕವಾಗಿ ಕಂಡದ್ದು ಸಹಜ. ಏಕೆಂದರೆ ಪಾಶ್ಚಾತ್ಯ ಸಂಸ್ಕೃತಿಯನ್ನು ಒಂದು ಪರಿಪೂರ್ಣ ಮಾದರಿ ಎಂದು ನಾವು ಸ್ವೀಕರಿಸಿಬಿಟ್ಟಿದ್ದೇವೆ.

ಮತ್ತಷ್ಟು ಓದು »

17
ಆಗಸ್ಟ್

`ಆವರಣ’ ಹಿಂದಿಗೆ

-ಕಾಲಂ ೯

ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.

ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.

ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ|  ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.

ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.

ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.

**********

15
ಆಗಸ್ಟ್

ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!

– ರಾಕೇಶ್ ಶೆಟ್ಟಿ

ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.

ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.

“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦

ಮತ್ತಷ್ಟು ಓದು »

15
ಆಗಸ್ಟ್

ಸತ್ಯೇಂದ್ರನಾಥ್ ಬೋಸ್ – Another Forgotten Hero…

– ಭೀಮ ಸೇನ್ ಪುರೋಹಿತ್

ನಮ್ಮ ದೇಶದ ಸ್ವಾತಂತ್ರ್ಯಹೋರಾಟಕ್ಕೆ ಅತಿಹೆಚ್ಚು ಹಾಗು ಪ್ರಖರ ಕೊಡುಗೆಗಳನ್ನು  ನೀಡಿದ ಯಶಸ್ಸು ‘ಪಶ್ಚಿಮ ಬಂಗಾಳ’ ರಾಜ್ಯಕ್ಕೆ ಸಲ್ಲುತ್ತದೆ. ಆ ಬಂಗಾಳದ ಮತ್ತೊಂದು ಹುಲಿಯೇ “ಸತ್ಯೇಂದ್ರನಾಥ್ ಬೋಸ್”. ಇವನ ಇಡೀ ಕುಟುಂಬವೇ ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿತ್ತು. ಅವನ ತಂದೆ ‘ರಾಜನಾರಾಯಣ ಬೋಸ್’, ಸಹೋದರರಾದ ‘ಜ್ಞಾನೇಂದ್ರನಾಥ್ ಬೋಸ್’,’ಭೂಪೆಂದ್ರನಾಥ್ ಬೋಸ್’,ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರೆ.. ಮಿಡ್ನಾಪುರ್ ಜಿಲ್ಲೆಯಲ್ಲಿ ಜನಿಸಿದ ಸತ್ಯೇನ್, ಓದಿನಲ್ಲಿ ಜಾಣ. ಬಿ.ಎ ತನಕ ಓದಿದರೂ, ಮುಂದೆ ಓದಲಾಗಲಿಲ್ಲ..ಇನ್ನೊಂದು ವಿಶೇಷ ಅಂದ್ರೆ, ಈ ಸತ್ಯೇಂದ್ರನಾಥ್, ಶ್ರೀ ಅರವಿಂದ್ ಘೋಶರಿಗೆ ಸಂಬಂಧಿ…

“ಅಲಿಪುರ ಬಾಂಬ್ ಪ್ರಕರಣ” ಮತ್ತು “ಮಾಣಿಕ್ ತೊಲಾ ಗಾರ್ಡನ್ ಬಾಂಬ್ ಪ್ರಕರಣ”, ಈ ಎರಡು ಪ್ರಕರಣಗಳೂ, ಸ್ವಾತಂತ್ರ್ಯಹೋರಾಟದ ಸಮಯದಲ್ಲಿ, ಬಂಗಾಳ ಪ್ರಾಂತದಲ್ಲಿ ನಡೆದ ಬಹುದೊಡ್ಡ ಬ್ರಿಟಿಶ್ ವಿರೋಧಿ ಕಾರ್ಯಗಳು.. ಇವೆರಡರ ಹಿಂದೆ ಇದ್ದಿದ್ದು ಬಂಗಾಳದ “ಅನುಶೀಲನ ಸಮಿತಿ” ಹಾಗು “ಯುಗಾಂತರ ಸಮಿತಿ”ಯ ಕ್ರಾಂತಿಕಾರಿಗಳು, ಹಾಗು ಈ ಕ್ರಾಂತಿಕಾರಿಗಳನ್ನ ಪ್ರೆರೆಪಿಸಿದವ್ರು, ಮಹಾನ್ ರಾಷ್ಟ್ರವಾದಿ ( ನಾನಂತೂ ಅವರನ್ನ ‘ಮಹರ್ಷಿ’ ಅಂತಾನೆ ಕರೆಯೋದು ) ಶ್ರೀ ಅರವಿಂದ್ ಘೋಷ್…. ಈ ಎರಡು ಪ್ರಕರಣಗಳಾದ ಮೇಲೆ ಬ್ರಿಟಿಷರು ಎಚ್ಚೆತ್ತು ತನಿಖೆ ಶುರು ಮಾಡಿದ್ರು.. ಎರಡರಲ್ಲಿಯೂ ಬಳಸಲಾದ ಬಾಂಬ್ ಗಳು ಒಂದೇ ಥರದ್ದು ಅಂತ ಗೊತ್ತಾಯ್ತು. ಹೀಗಾಗಿ ಅನುಶೀಲನ ಸಮಿತಿ ಹಾಗು ಯುಗಾಂತರದ ಕೆಲವು ಕ್ರಾಂತಿಕಾರಿಗಳನ್ನ ಬಂಧಿಸಲಾಯ್ತು. ಜೊತೆಗೆ ಇವರೆಲ್ಲರ ಹಿಂದೆ ಇರೋರು ಅರವಿಂದ ಘೋಶರೆ ಅಂತ ಅಪಾದನೆ ಹೊರಿಸಿ ಅವರನ್ನೂ ಜೈಲಿಗೆ ಕಳಿಸಿದರು..ಇದು ಕ್ರಾಂತಿಕಾರಿಗಳಲ್ಲಿ ಬೇಸರ ಹಾಗು ಆಕ್ರೋಶವನ್ನ ಮೂಡಿಸ್ತು..

ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಯ್ತು. ಬ್ರಿಟಿಷರು ಎಂದಿನಂತೆ ಕ್ರಾಂತಿಕಾರಿಗಳಿಗೆ ಚಿತ್ರಹಿಂಸೆ ಕೊಟ್ಟು ಬಾಯಿಬಿಡಿಸೋದಕ್ಕೆ ಪ್ರಯತ್ನಿಸಿದರು.. ಅದಕ್ಕೆ ಹೆದರಿ, ಬ್ರಿಟಿಷರ ಆಮಿಷಕ್ಕೆ ಸೋತು, ‘ನರೇನ್ ಗೋಸ್ವಾಮಿ’ ಅನ್ನೋನು approver ಆಗ್ಬಿಟ್ಟ.. ಭಾರತದ ಇತಿಹಾಸದುದ್ದಕ್ಕೂ ದೇಶಭಕ್ತರಷ್ಟೇ, ದೇಶದ್ರೋಹಿಗಳೂ ಇದಾರೆ..!!!
ಇತ್ತ ಕೋರ್ಟ್ ನಲ್ಲಿ ನರೇನ್ ಎಲ್ಲರ ವಿರುದ್ಧ ಸಾಕ್ಷಿ ಹೇಳೋದಕ್ಕೆ ಶುರು ಮಾಡಿದ. ಅಷ್ಟೇ ಆಗಿದ್ರೆ ಸುಮ್ನಿರ್ತಿದ್ರೆನೋ.. ಆದ್ರೆ ನರೇನ್, ಅರವಿಂದ ಘೋಷ್ ವಿರುದ್ಧನೂ ಸಾಕ್ಷಿ ಹೇಳೋದಕ್ಕೆ ತಯಾರಾದ.ಅಲ್ಲಿಗೆ ಕ್ರಾಂತಿಕಾರಗಳ ಸಿಟ್ಟು ಮಿತಿ ಮೀರಿತು..ಜೈಲಿನ ಒಳಗಿದ್ದ ‘ಸತ್ಯೇಂದ್ರನಾಥ್’ ಹಾಗು ಅವನ ಗೆಳೆಯ ‘ಕನ್ನಯ್ಯಲಾಲ್ ದತ್ತ’ ಇಬ್ರೂ ಸೇರಿ ಆ ದ್ರೋಹಿ ನರೇನ್ ಸಂಹಾರಕ್ಕೆ ಪ್ಲಾನ್ ಹಾಕಿದರು…

ಮತ್ತಷ್ಟು ಓದು »

15
ಆಗಸ್ಟ್

ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ

– ಪವನ್ ಪರುಪತ್ತೆದಾರ್

ಮೊದಲಿಗೆ ನಿಲುಮೆಯ ಎಲ್ಲ ಓದುಗರಿಗೆ ಸ್ವಾತಂತ್ರ್ಯದಿನದ ಶುಭಾಶಯಗಳು. ೬೫ ನೆ ಸ್ವತಂತ್ರ ದಿನದ ಆಚರಣೆ ಎಲ್ಲ ಕಡೆ ಭರ್ಜರಿಯಿಂದ ಸಾಗಲಿ ಎಂದು ಆಶಿಸೋಣ. ೧೯೪೭ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಸಿಕ್ಕಿದ ವಿಷಯ ನಮಗೆಲ್ಲ  ತಿಳಿದಿದ್ದೆ. ಇಂದು  ನಮಗೆ  ಅ  ಸ್ವಾತಂತ್ರ್ಯ ಎಷ್ಟರ ಮಟ್ಟಿಗೆ  ಸಿಕ್ಕಿದೆಯೆಂದರೆ ನಮ್ಮ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸುವ  ಮಟ್ಟಿಗೆ ಸಿಕ್ಕಿದೆ. ನಾ ಬೇಕಾದರೆ ಬಾಜಿ ಕಟ್ಟುತ್ತೇನೆ ನಾಳಿನ ಪೇಪರ್ ನೋಡಿ ನಮ್ಮ ರಾಜ್ಯದಲ್ಲೇ  ಒಂದೆರಡು  ಕಡೆಯಾದರು ಧ್ವಜವನ್ನು ಉಲ್ಟಾ ಹಾರಿಸಿರುತ್ತಾರೆ. ಬ್ರಿಟಿಷರ ದಬ್ಬಾಳಿಕೆ ಹದ್ದು ಮೀರಿದಾಗ ಹಿಂಸೆಯ ನಾನಾ ಮಾರ್ಗಗಳು ಪ್ರಯೋಗಿಸಿ ಹುತಾತ್ಮರಾದವರು, ನಂತರ ದೇಶವನ್ನೆಲ್ಲ ಒಟ್ಟಿಗೆ ಸಂಘಟಿಸಿ ಅಹಿಂಸೆಯಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಾಧ್ಯ ಎಂದು ತೋರಿಸಿಕೊಟ್ಟು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ  ಮಹಾತ್ಮರು, ನಮ್ಮ ಈಗಿನ ಸ್ವಾತಂತ್ರ್ಯವನ್ನೇನಾದರು ನೋಡಿದ್ದರೆ, ಇವರಿಗೆ  ಯಾಕಾದ್ರು ಸ್ವಾತಂತ್ರ್ಯ ಕೊಡಿಸಿದೆವೋ ಎಂದು ಮರುಗುತಿದ್ದರೆನೋ…..

ನನ್ನ  ಮಾತುಗಳು ಅತಿಶಯೋಕ್ತಿ ಎನಿಸಬಹುದು. ಆದರೆ ನಮ್ಮ ದೇಶದಲ್ಲಿ ಎಲ್ಲರಿಗು ಎಷ್ಟು ಸ್ವಾತಂತ್ರ್ಯವಿದೆ ಅಂತ ನಿಮಗೆ ಗೊತ್ತು. ಟ್ರಾಫಿಕ್ ಪೋಲಿಸ್ ಡಾಕುಮೆಂಟ್ ಸರಿ ಇದ್ದರು ಲಂಚ ಪಡೆಯುವ ಸ್ವಾತಂತ್ರ್ಯ, ಖಾತೆ ಬದಲಾವಣೆ ಮಾಡಿಸಬೇಕಾದರೆ ಪತ್ರ ಸ್ಕಾನ್ನಿಂಗ್ ಮಾಡುವನಿಂದ ಹಿಡಿದು, ಮೊಹರು ಹಾಕುವ ಗುಮಸ್ತನಿಂದ ಹಿಡಿದು, revinue inspector ತನಕ ಲಂಚ ಪಡೆಯುವ ಸ್ವಾತಂತ್ರ್ಯ. ಗೆದ್ದೊಡನೆ ತಮ್ಮ ಕ್ಷೇತ್ರದ ಜನತೆಯನ್ನು ಮರೆತು ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡುವ ಸ್ವಾತಂತ್ರ್ಯ, ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತು ಪಕ್ಷಾಂತರ ಮಾಡುವ ಸ್ವಾತಂತ್ರ್ಯ, ರೈತನ ಜಮೀನನ್ನು ಕಸಿದು ಅಧುನಿಕರಣದ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸ್ವಾತಂತ್ರ್ಯ, ನಮ್ಮ ಭೂಮಿಯ ಸಂಪತ್ತಲ್ಲದೆ ಅಂತರಂಗದಲ್ಲಿರುವ ತರಂಗಾಂತರಗಳನ್ನು ಮೋಸದಿಂದ ಮಾರುವ ಸ್ವಾತಂತ್ರ್ಯ, ಇನ್ನು ತಮಾಷೆಯೆಂದರೆ ತಪ್ಪು ಮಾಡಿ ದುಷ್ಕ್ರುತ್ಯಗಳನ್ನೆಸಗಿ ವಾರ್ಷಿಕ ೧೧ ಕೋಟಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿಸಿಕೊಳ್ಳೋ ಸ್ವಾತಂತ್ರ್ಯ ಮತ್ತು ತಪ್ಪಿತಸ್ತ ಎಂದು ಖಾತರಿಯಾದ ಮೇಲು ಶಿಕ್ಷೆ ಇಲ್ಲದೆ ಐಶಾರಾಮಿ ಜೀವನ ನಡೆಸುವ ಸ್ವಾತಂತ್ರ್ಯ, ಇಂತಹದ್ದೆನ್ನಲ್ಲ ವಿರೋಧಿಸಿದರೆ ವಿರೋಧಿಸಿದವರ ವಿರುದ್ದವೇ ಕೇಸು ಜಡಿಯುವ ಸ್ವಾತಂತ್ರ್ಯ.ಆಹಾ ಹೇಳುತ್ತಾ ಹೋದರೆ ಪುಟಗಟ್ಟಲೆ ಇಂತಹ ಸ್ವಾತಂತ್ರ್ಯಗಳು ಸಿಗುತ್ತವೆ.

ಮತ್ತಷ್ಟು ಓದು »

6
ಆಗಸ್ಟ್

ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?

– ಕುಮಾರ ರೈತ

 “ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”

ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ  ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’

ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು  ಕನ್ನಡಿಗ ರಾಮನಾಯಕ.  (ಟಿಪ್ಪು ಸುಲ್ತಾನ್ ಸೈನ್ಯದ  ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.

ಮತ್ತಷ್ಟು ಓದು »