ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

5
ಆಗಸ್ಟ್

ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು

ಡಾ. ರಾಜಾರಾಮ ಹೆಗಡೆ

ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ  ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು  ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.

ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ  ಅದೊಂದು ಅಪಾಯಕಾರಿ ಗ್ರಂಥವಾಗಿದೆ.  ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು »

5
ಆಗಸ್ಟ್

ಸಂಸ್ಕೃತಿ ಸಂಕಥನ – ೪

– ರಮಾನಂದ ಐನಕೈ

ಧರ್ಮದ ಮೈಮೇಲೆ – ರಿಲಿಜನ್ನಿನ ಅಂಗಿ 

 ವಿಪರ್ಯಾಸ ನೋಡಿ. ಒಂದು ಕಡೆ ‘ಹಿಂದೂ ಧರ್ಮ’ ಅನ್ನುತ್ತೇವೆ. ಇನ್ನೊಂದು ಕಡೆ ಅದನ್ನೇ ‘ಹಿಂದೂ ರಿಲಿಜನ್’ ಅನ್ನುತ್ತೇವೆ. ಯಾವುದೇ ಭಾರತೀಯರನ್ನು ಕೇಳಿದರೆ ಇವೆರಡರ ನಡುವೆ ವ್ಯತ್ಯಾಸವೇ ಇಲ್ಲ ಎಂದು ಆತ್ಮವಿಶ್ವಾಸದಿಂದ ಪ್ರತಿಪಾದಿಸುತ್ತಾರೆ. ಇವೆರಡರ ವ್ಯತ್ಯಾಸ ತಿಳಿಯದಿದ್ದದ್ದೇ ಭಾರತೀಯರ ಮುಖ್ಯ ಮಾನಸಿಕ ತೊಂದರೆ. ಹಾಗಾಗೇ ನಿತ್ಯ ಗೊಂದಲದಲ್ಲಿ ಒದ್ದಾಡುತ್ತೇವೆ.

‘ರಾಜಕೀಯದಲ್ಲಿ ಧರ್ಮ ಇರಬಾರದು’, ‘ಸಾಹಿತ್ಯದಲ್ಲಿ ಧರ್ಮ ಬರಬಾರದು’, ‘ಕೋಮು ಗಲಭೆಗೆ ಧರ್ಮ ಕಾರಣ’ – ಇತ್ಯಾದಿ ಹೇಳಿಕೆ ಕೇಳಿದಾಗ ನಮಗೆ ಪುನಃ ಗೊಂದಲ. ಏಕೆಂದರೆ ಈ ಹೇಳಿಕೆಯನ್ನು ತೇಲಿ ಬಿಡುವವರು ಬುದ್ಧಿಜೀವಿಗಳು. ಅವರು ರಿಲಿಜನ್ ಎಂಬ ಪರಿಕಲ್ಪನೆಯ ಮೇಲೆ ಪ್ರಜ್ಞಾಪೂರ್ವಕವಾಗಿ ವಾದಿಸುತ್ತಾರೆ. ಆದರೆ ನಾವು ಸಾಮಾನ್ಯ ನಾಗರಿಕರು ಧರ್ಮ ಎಂಬ ಅರ್ಥದ ನೆಲೆಯಲ್ಲಿ ಅದನ್ನು ಗ್ರಹಿಸುತ್ತೇವೆ. ಹಾಗಾಗಿ ಎಲ್ಲವೂ ನಮ್ಮ ಮನಸ್ಸಿಗೆ ಅರ್ಧಸತ್ಯ ಅನಿಸುತ್ತದೆ. ಧರ್ಮ ಬೇಡ ಅಂದರೆ ಪ್ರತಿಯೊಂದಕ್ಕೂ ಅದರದ್ದೇ ಆದ ಕರ್ತವ್ಯ ಬೇಡವೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ ಧರ್ಮ ಹಾಗೂ ರಿಲಿಜನ್ ಮಧ್ಯೆ ವ್ಯತ್ಯಾಸ ಇರಲೇಬೇಕೆಂಬುದು ನಮ್ಮ ಗೃಹಿಕೆಗೆ ಸೂಚಿಸುತ್ತದೆ. ಎರಡೂ ಒಂದೇ ಆಗಿದ್ದರೆ ಈ ರೀತಿ ಗೊಂದಲ ಏಕೆ ಸೃಷ್ಟಿಯಾಗುತ್ತದೆ? ಇದೇ ಅರ್ಥವಾಗದ ಒಗಟು.

ಮತ್ತಷ್ಟು ಓದು »

30
ಜುಲೈ

ಸಂಸ್ಕೃತಿ ಸಂಕಥನ – ೩

– ರಮಾನಂದ ಐನಕೈ

ವಿದ್ಯಾವಂತರೆನಿಸಿಕೊಂಡ ನಮಗೆಲ್ಲ ಒಂದು ತೊಂದರೆ ಇದೆ. ಅದೇನೆಂದರೆ ನಮ್ಮ ಜೀವನಶೈಲಿಯೊಂದಿಗೆ ಅನಿವಾರ್ಯವಾಗಿ ಪಾಲಿಸಲೇಬೇಕಾದ ಸಂಪ್ರದಾಯಗಳು. ಇದನ್ನು ಪಾಲಿಸದಿದ್ದರೆ ನಾವು ಸಮುದಾಯದಿಂದ ಹೊರಗುಳಿಯತ್ತೇವೆ. ಕೆಲವೊಮ್ಮೆ ಮಾನಸಿಕವಾಗಿ ನಮ್ಮೊಳಗೇ ಅಭದ್ರತೆಗೊಳಗಾಗುತ್ತೇವೆ. ಹಾಗಂತ ಸಂಪ್ರದಾಯವನ್ನು ಪಾಲಿಸಲು ನಮ್ಮ ವೈಚಾರಿಕತೆ ಅನುವು ಮಾಡಿಕೊಡುವುದಿಲ್ಲ. ನಾವು ಭೌತಿಕವಾಗಿ ಬದುಕುತ್ತಿರುವುದು ಸಂಪ್ರದಾಯದ ಸಮಾಜದಲ್ಲಿ. ಮಾನಸಿಕವಾಗಿ ಬದುಕುತ್ತಿರುಉವದು ವೈಚಾರಿಕತೆಯೆಂಬ ಭ್ರಮೆಯಲ್ಲಿ. ಯಾಕೆ ಹೀಗಾಗುತ್ತಿದೆ? ನಮ್ಮ ಸಂಪ್ರದಾಯಗಳಲ್ಲಿ ನಮಗೇಕೆ ಅರ್ಥ ಕಾಣುತ್ತಿಲ್ಲ? ಅಥವಾ ಅರ್ಥ ಹುಡುಕುವ ಹಠವಾದರೂ ಏಕೆ? ಇವುಗಳಿಗೆಲ್ಲ ಅರ್ಥ ಇರಲೇಬೇಕೆಂದಿದೆಯೇ? ಸ್ವತಂತ್ರ ಭಾರತದ 60 ವರ್ಷ ಕಳೆದರೂ ಇಂಥ ಗೊಂದಲಗಳಿಂದ ಮುಕ್ತರಾಗದೇ ಇದ್ದದ್ದು ನಿಜಕ್ಕೂ ಗಂಭೀರವಾಸ್ತವ.

ಸಂಪ್ರದಾಯ ಅಂದರೆ ತಲೆತಲಾಂತರದಿಂದ ನಡೆಸಿಕೊಂಡು ಬಂದ ಆಚರಣೆಗಳು. ನಮ್ಮ ಹಿರಿಯರು ಅವರ ಹಿರಿಯರನ್ನು ಅನುಕರಿಸಿದರು. ಅವರ ಹಿರಿಯರು ಅವರ ಹಿರಿಯರನ್ನು… ಹೀಗೆ ಯಾಕೆ ಆಚರಿಸಬೇಕೆಂದು ಯಾರೂ ಯಾರನ್ನೂ ಪ್ರಸ್ನಿಸಲಿಲ್ಲ. ಪ್ರಶ್ನಿಸುವ ಜಿಜ್ಞಾಸ ಹುಟ್ಟಲೇ ಇಲ್ಲ. ಏಕೆಂದರೆ ಎಲ್ಲರೂ ಅದು ತಮ್ಮದು ಎಂದು ನಂಬಿದ್ದರು. ಪ್ರೀತಿಸುತ್ತಿದ್ದರು. ಸ್ವಾತಂತ್ರ್ಯಾನಂತರ ನಮಗೆ ಸಂಪ್ರದಾಯಗಳ ಕುರಿತು ಹೆಚ್ಚು ಪ್ರಶ್ನೆಗಳು ಏಳಲು ಶುರುವಾಗಿವೆ. ಅದಕ್ಕೆ ಕಾರಣ ನಾವು ಪ್ರಭಾವಿಸಿಕೊಂಡ ಎರವಲು ವೈಚಾರಿಕತೆ ಅಥವಾ ವಿಚಾರವಾದ. ಅದು ನಮ್ಮ ಶಿಕ್ಷಣ ಹಾಗೂ ಓದುತ್ತಿರುವ ಸಮಾಜವಿಜ್ಞಾನಗಳಿಂದ ಸೃಷ್ಟಿಯಾದದ್ದು. ಪರೋಕ್ಷವಾಗಿ ಹೇಳಬಹುದಾದರೆ ಪಾಶ್ಚಾತ್ಯರು ಹೇಳಿಕೊಟ್ಟ ಕಂಠಪಾಠ. ಅವರ ಪ್ರಕಾರ ವೈಚಾರಿಕತೆಯತ್ತ ಸಾಗುವುದೇ ಪ್ರಗತಿ ಅಥವಾ ನಾಗರಿಕತೆಯ ಲಕ್ಷಣ. ಭಾರತೀಯ ಸಂಪ್ರದಾಯಗಳು (ಹಿಂದೂ ರಿಲಿಜನ್) ಅವೈಚಾರಿಕವಾದ್ದರಿಂದ ಭಾರತ ಹಿಂದುಳಿದ ದೇಶ. ಇಲ್ಲಿಯ ಜನ ಮೂಢರು ಮತ್ತು ದಡ್ಡರು. ಅರ್ಥವಿಲ್ಲದ ಆಚರಣೆಗಳನ್ನು ಮಾಡುವವರು ಎಂಬಿತ್ಯಾದಿ. ಇದೇ ನಿಜ ಎಂದು ನಾವೆಲ್ಲ ನಂಬಿಕೊಂಡಿದ್ದರಿಂದ ನಮ್ಮ ಸಂಪ್ರದಾಯಗಳು ನಮಗೆ ಅರ್ಥಹೀನ ಅನಿಸುತ್ತದೆ.

ಮತ್ತಷ್ಟು ಓದು »

28
ಜುಲೈ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

-ರಾಕೇಶ್ ಎನ್ ಎಸ್
ಲೋಕಾಯುಕ್ತ ವರದಿ ಸೋರಿಕೆಯಾಗುತ್ತಲೆ ಯಡಿಯೂರಪ್ಪ, ರೆಡ್ಡಿ ಸೋದರರು, ಕುಮಾರಸ್ವಾಮಿ, ಅನಿಲ್ ಲಾಡ್ ಸೇರಿದಂತೆ ರಾಜ್ಯದ ಅನೇಕ ಅತಿರಥ ಮಹಾರಥಿಗಳು ಮತ್ತು ಸುಮಾರು ೫೦೦ಕ್ಕೂ ಮಿಕ್ಕ ಅಧಿಕಾರಿಗಳ ಮೇಲಿದ್ದ ಊಹಾಪೋಹ ಆಧಾರಿತ ಆರೋಪಗಳು ಇದೀಗ ತಾತ್ವಿಕ ಮತ್ತು ಸಾಂವಿಧಾನಿಕ ನೆಲಗಟ್ಟಿನ ಮೇಲೆ ನಿಂತ ಆರೋಪಗಳಾಗಿ ಪರಿವರ್ತನೆ ಗೊಂಡಿದೆ.ಯಡಿಯೂರಪ್ಪ ಸಕಲ ಭ್ರಷ್ಟಾಚಾರ ಕಲಾ ವಲ್ಲಭ ಎಂಬುದನ್ನು ಸಾಬೀತು ಮಾಡಲು ದೇಶದ ಜನರಿಗೆ ಯಾವುದೇ ವರದಿಯ ಅಗತ್ಯವಿರಲಿಲ್ಲ. ಆದರೆ ತಾನು ಭ್ರಷ್ಟಾಚಾರಿ ಎಂದು ಅವರನ್ನು ಅರ್ಥ ಮಾಡಿಕೊಳ್ಳಲು ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿಗೆ ಇದು ಗೊತ್ತಾಗಲು ಇಂತಹವೊಂದು ವರದಿ ಅಗತ್ಯವಾಗಿತ್ತು. ಆ ಕೆಲಸವನ್ನು ನ್ಯಾ. ಸಂತೋಷ್ ಹೆಗ್ಗಡೆ ಮಾಡಿ ಮುಗಿಸಿದ್ದಾರೆ.ಯಡಿಯೂರಪ್ಪ ಕರ್ನಾಟಕದ ಸಂಪತ್ತನ್ನು ಸುಮಾರು ೫ ವರ್ಷಗಳಿಂದ ಹುಲುಸಾಗಿ ಮೇಯುತ್ತಿದ್ದಾರೆ, ಕಳೆದ ಮೂರು ವರ್ಷಗಳಲ್ಲಿ ಅದು ಮಿತಿ ಮೀರಿದೆ. ಪ್ರತಿಯೊಂದಕ್ಕೂ ಕೊನೆ ಎಂಬುದು ಇದ್ದೆ ಇರುತ್ತದೆ. ಅದೇ ರೀತಿ ಯಡಿಯೂರಪ್ಪರ ಭ್ರಷ್ಟ ಆಡಳಿತಕ್ಕೆ ಕೊನೆಯ ಷರಾವನ್ನು ಲೋಕಾಯುಕ್ತದ ಈ ವರದಿ ಬರೆಯುತ್ತದೆಯೋ? ಇಲ್ಲ, ೨ ವರ್ಷಗಳ ಬಳಿಕ ಕರ್ನಾಟಕದ ಪ್ರಜ್ಙಾವಂತ ಜನರೇ ಬರೆಯಬೇಕಾಗುತ್ತದೆಯೇ? ಎಂಬುದು ಈಗಿರುವ ಪ್ರಶ್ನೆ… ಮತ್ತಷ್ಟು ಓದು »
22
ಜುಲೈ

ಕಣ್ಣೀರ ಭಾಷೆ ಅರ್ಥವಾಗದವರಿಗೆ…

– ಚಿತ್ರಾ ಸಂತೋಷ್

“ಒಬ್ಬ ವ್ಯಕ್ತಿಯ ಕಣ್ಣೀರು, ದುಃಖ, ವಿಷಾದಗಳು ಅರ್ಥವಾಗದವನಿಗೆ ಅಧಿಕಾರವೂ ಅರ್ಥವಾಗಲು ಸಾಧ್ಯವಿಲ್ಲ. ಈ ಮೂರು ಅರ್ಥವಾಗದವನು ಅಧಿಕಾರ ಎಂದರೆ ಮೋಜು ಎಂದು ಅರ್ಥಮಾಡಿಕೊಳ್ಳುವ ಅಪಾಯವಿದೆ” ಬ್ರಿಟನ್ ಮಾಜಿ ಪ್ರಧಾನಿ ವಿನ್ ಸ್ಟನ್ ಚರ್ಚಿಲ್ ತನ್ನ ಆತ್ಮಕಥೆಯಲ್ಲಿ ಹೇಳಿದ್ದು ಹೀಗೆ. ಜನರ ಕಣ್ಣೀರು, ಕಣ್ಣೀರ ಭಾಷೆ ಅರ್ಥವಾದವನಿಗೆ ಮಾತ್ರ ಅಧಿಕಾರ ಎಂದರೆ ಏನೂಂತ ಅರ್ಥವಾಗಬಹುದು ಎನ್ನುವುದು ಚರ್ಚಿಲ್ ಮಾತು.

ಹೌದು, ನನಗೂ ನೆನಪಾಯಿತು. ನಮ್ಮಲ್ಲೂ ಜನಪ್ರಿಯ ರಾಜಕಾರಣಿಗಳಿದ್ದಾರೆ.  ಜನರ ಕಣ್ಣೀರ ಜೊತೆ ತಾವೂ ಕಣ್ಣೀರಧಾರೆಯಾಗುವ ಜನಪ್ರತಿನಿಧಿಗಳಿದ್ದಾರೆ. ಕೆಲತಿಂಗಳ ಹಿಂದೆ ರಾಜ್ಯದಲ್ಲಿ ನೆರೆ ಬಂದಾಗ, ಜನರು ಕಷ್ಟಗಳನ್ನು ತೋಡಿಕೊಂಡು ಅತ್ತಾಗ ತಾವೂ ಅತ್ತು ನೀರಾದವರು ಇದ್ದಾರೆ!  ಗೋಲಿಬಾರ್‌ನಲ್ಲಿ ರೈತ ಗುಂಡೇಟಿಗೆ ಬಲಿಯಾದಾಗ ರೈತನ ಶವದೆದುರು ಗಳಗಳನೆ ಅತ್ತು ಮಾಧ್ಯಮದಲ್ಲಿ ದೊಡ್ಡ ಫೋಟೋವಾಗಿ ರಾರಾಜಿಸಿದ ರಾಜಕಾರಣಿಗಳಿಗೇನು ನಮ್ಮಲ್ಲಿ ಬರಗಾಲವಿಲ್ಲ.

ಮತ್ತಷ್ಟು ಓದು »

21
ಜುಲೈ

ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?

– ಕುಮಾರ ರೈತ

ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?

2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು.
16
ಜುಲೈ

ಸಂಸ್ಕೃತಿ ಸಂಕಥನ – ೨

-ರಮಾನಂದ ಐನಕೈ

ಸಂಸ್ಕೃತಿ ಸಂಕಥನ – ೧

ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.

ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ  ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್‌ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.

ಮತ್ತಷ್ಟು ಓದು »

11
ಜುಲೈ

ದಕ್ಷಿಣ ಸುಡಾನ್ ಈಗ ಸ್ವತಂತ್ರ

ಗೋವಿಂದ ಭಟ್

ಸೈಕಲು ಪ್ರವಾಸದಲ್ಲಿ ನಾನು ಕೆನ್ಯಾ ರಾಜದಾನಿ ನೈರೋಬಿಗೆ ಹಾರುವುದು. ಅನಂತರ ಉಗಂಡಾ, ಸುಡಾನ್ ದಾರಿಯಾಗಿ ಈಜಿಪ್ಟ್ ತಲಪುವುದು ನನ್ನ ಗುರಿಯಾಗಿತ್ತು. ಬಹು ಪಾಲು ರಸ್ತೆ ಇಲ್ಲದ ಕಾರಣ ಜುಬಾ ಪಟ್ಟಣದಿಂದ ನೈಲ್ ನದಿಯ ದೋಣಿಯಲ್ಲಿ ಉತ್ತರಕ್ಕೆ ಸಾಗುವುದು ನನ್ನ ಆಲೋಚನೆಯಾಗಿತ್ತು. ನನ್ನ ಉದ್ದೇಶಿತ ಹಾದಿಯಲ್ಲಿ ಬಹು ಕಾಲದಿಂದ ಅಂದರೆ ಅಂದಿಗೆ ಮೂವತ್ತು ವರ್ಷದಿಂದ ಜನಾಂಗಿಯ ಕಲಹ ನಡೆಯುತ್ತಿದ್ದರೂ ಹಲವು ಪ್ರವಾಸಿಗರು ದೋಣಿಯಲ್ಲಿ ದಾಟುವುದರಲ್ಲಿ ಸಫಲರಾಗಿದ್ದರು. ಅಲ್ಲಿನ ಒಂದು ದೋಣಿಯ ಚಿತ್ರ ಇಲ್ಲಿದೆ. ನನ್ನ ಜರ್ಮನಿಯ ಸೈಕಲು ಗೆಳೆಯ ಫ್ರೆಡ್ ಪೋಲ್ ೧೯೬೪ ರಲ್ಲಿ ಇಲ್ಲೆ ದಾಟಿದ್ದರು. ಅದಕ್ಕೆ ನಾನು ಸಾಕಷ್ಟು ತಯಾರಿ ನಡೆಸಿದ್ದೆ.

ಆದರೆ ಕೆನ್ಯಾ ತಲಪುವಾಗ ಪರೀಸ್ಥಿತಿ ಕಠೀಣವಾಗಿರುವುದು ಅರಿವಾಯಿತು. ನನ್ನ ದಾರಿಯಲ್ಲಿದ್ದ ಉಗಂಡಾ ಹಾಗೂ ಸುಡಾನ್ ಅಂತರ್ಯುದ್ದ ಬರ್ಜರಿಯಾಗಿ ನಡೆಯುತ್ತಿದ್ದರೆ ಉತ್ತರದ ಇತಿಯೋಪಿಯ ಸಹಾ ದಾರಿ ಬಿಡುತ್ತಿರಲಿಲ್ಲ. ಹಾಗಾಗಿ ನನ್ನ ಯೋಜನೆಗಳೆಲ್ಲ ತಲೆಕೆಳಗಾಗಿ ಯುರೋಪಿನಿಂದ ಹಿಂತಿರುಗುವ ಬದಲು ಅಮೇರಿಕವನ್ನು ಹಾದು ಜಗತ್ತು ಪೂರ್ತಿ ಸುತ್ತು ಬರಲು ತೀರ್ಮಾನಿಸಿದೆ.

ಸುಡಾನ್ ದೇಶದಲ್ಲಿ ಉತ್ತರದಲ್ಲಿ ಅರಬ್ ಮುಸ್ಲಿಮರ ಪ್ರಾಬಲ್ಯ. ಅದಿಕಾರವೆಲ್ಲ ಅವರ ಕೈಯಲ್ಲಿ ಕೇಂದ್ರಿತ. ದಕ್ಷಿಣದಲ್ಲಿ ವಾಸ್ತವ್ಯ ಇರುವುದು ಕರಿಯ ಕ್ರೈಸ್ತ ಅನುಯಾಯಿಗಳು. ಬ್ರೀಟಿಶರು ಸ್ವಾತಂತ್ರ ಕೊಡುವಾಗ ಈಜಿಪ್ಟ್ ಜತೆ ಒಪ್ಪಂದ ಮಾಡಿ ಒಂದು ಕಿತಾಪತಿ ಮಾಡಿದ್ದರು. ಈ ಕರಿ ಜನರೇ ಜೀವಿಸುವ ದಕ್ಷಿಣ ಸುಡಾನ್ ಪ್ರಾಂತ್ಯವನ್ನು ಪಕ್ಕದ ಕರಿಯ ಜನರಿರುವ ಕೆನ್ಯಾ ಉಗಂಡಾದಿಂದ ಬೇರ್ಪಡಿಸಿ ಬಹುಕಾಲ ಈಜಿಪ್ಟ್ ವಶವಾಗಿದ್ದ ಉತ್ತರ ಸುಡಾನ್ ಜತೆ ಸೇರಿಸಿಬಿಟ್ಟರು. ಚಿತ್ರದಲ್ಲಿ ಕಾಣುವಂತೆ ಉತ್ತರಬಾಗ ಮರುಭೂಮಿಯಾದರೆ ದಕ್ಷಿಣಬಾಗದಲ್ಲಿ ಹುಲ್ಲುಗಾವಲು ಹಾಗೂ ಕುರುಚಲು ಕಾಡು. ಉತ್ತರದವರಿಂದ ಸತತವಾಗಿ ದಬ್ಬಾಳಿಕೆ, ಅನ್ಯಾಯ. ಶ್ರೀಲಂಕದಲ್ಲಿ ಇದ್ದಂತಹ ಪರಿಸ್ಥಿತಿ.

ಮತ್ತಷ್ಟು ಓದು »

8
ಜುಲೈ

ಸಂಸ್ಕೃತಿ ಸಂಕಥನ – ೧

– ರಮಾನಂದ ಐನಕೈ

ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.

ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.

ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.

ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.

ಮತ್ತಷ್ಟು ಓದು »

29
ಜೂನ್

ಸರ್ಕಾರಿ ಇಂಗ್ಲಿಶ್ ಶಾಲೆ – ಬೇಲಿಯೇ ಎದ್ದು ಹೊಲವ ಮೇಯ್ದೊಡೆ ಕಾಯುವರಾರು ?

 –ವಸಂತ್ ಶೆಟ್ಟಿ
ಜನರ ಅಪೇಕ್ಷೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಜನರಿಂದ ಬೇಡಿಕೆ ಬಂದ್ರೆ ಆರನೇ ತರಗತಿಯಿಂದ ಎಲ್ಲೆಡೆ ಇಂಗ್ಲಿಶ್ ಮಾಧ್ಯಮದ ಶಾಲೆಗಳನ್ನು ತೆರೆಯಲು ಸರ್ಕಾರ ತಯಾರಾಗಿದೆ ಅನ್ನುವ ಹೇಳಿಕೆಯನ್ನು ಪ್ರಾಥಮಿಕ ಮತ್ತು ಪ್ರೌಡಶಾಲೆ ಸಚಿವರಾದ ಕಾಗೇರಿಯವರು ಹೇಳಿದ್ದು ಮೊನ್ನೆ ಮೊನ್ನೆ ಪತ್ರಿಕೆಗಳಲ್ಲಿ ಕಂಡೆ. ಬೇಲಿಯೇ ಎದ್ದು ಹೊಲವ ಮೇಯೊದು ಅಂದ್ರೆ ಇದೇನಾ ಅನ್ನಿಸ್ತಾ ಇತ್ತು. ಒಂದೆಡೆ ಪಾಲಿಕೆ ವ್ಯಾಪ್ತಿಯ ಕನ್ನಡ ಶಾಲೆಗಳನ್ನು ಸಿ.ಬಿ.ಎಸ್.ಈ ತೆಕ್ಕೆಗೆ ಕೊಡಿಸಿ ತಮ್ಮ ಜನ್ಮ ಪಾವನವಾಯ್ತು ಅನ್ನುವ ಸಚಿವರೊಬ್ಬರು, ಇನ್ನೊಂದೆಡೆ ಜನರ ಅಪೇಕ್ಷೆ ಈಡೇರಿಸಲು ಎಲ್ಲೆಡೆ ಇಂಗ್ಲಿಶ್ ಶಾಲೆಗಳನ್ನು ತೆರೆಯುವುದಾಗಿ ಹೇಳುವ ಈ ಸಚಿವರು. ಇವರ ಹೊಣೆಗಾರಿಕೆ ಇಲ್ಲದ ಈ ನಡೆಗಳು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಗಟ್ಟಿಯಾದ ಸಮಾಧಿಯೊಂದನ್ನು ಸದ್ದಿಲ್ಲದೇ ಕಟ್ಟುತ್ತಿವೆ ಅನ್ನಬಹುದು.
ಇದೇ ಸಂದರ್ಭದಲ್ಲಿ ತಾಯ್ನುಡಿ ಶಿಕ್ಷಣದ ಬದಲು ಇಂಗ್ಲಿಶ್ ಬೇಕೆನ್ನುವವರ ವಾದವಾದರೂ ಏನು ಅಂದರೆ ನನಗೆ ಕಾಣುವುದು ಕೆಳಗಿನ ಕೆಲವು ಮಾತುಗಳು. ಅವುಗಳಿಗೆ ನನ್ನ ಅನಿಸಿಕೆ ಏನು ಅನ್ನುವುದನ್ನು ಈ ಸಂದರ್ಭದಲ್ಲಿ ಬರೆದಿರುವೆ.
ಕನ್ನಡ ಮಾಧ್ಯಮ ಬೇಕು ಅನ್ನುವವರದ್ದು ಬೂಟಾಟಿಕೆ. ಕನ್ನಡ ಮಾಧ್ಯಮ ಬೇಕು ಅನ್ನುವ ಸಾಹಿತಿಗಳು, ಚಿಂತಕರು, ಕನ್ನಡ ಪರ ಹೋರಾಟಗಾರರು, ರಾಜಕಾರಣಿಗಳು ತಮ್ಮ ಮಕ್ಕಳನ್ನು ಸೇರಿಸುವುದು ಇಂಗ್ಲಿಶ್ ಮಾಧ್ಯಮದ ಸಿ.ಬಿ.ಎಸ್.ಈ/ಐ.ಸಿ.ಎಸ್.ಈ ಶಾಲೆಗಳಿಗೆ, ಆದರೆ ಸಾಮಾನ್ಯ ಜನರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಬೇಕು. ತಮ್ಮ ಮಕ್ಕಳು ಯಾವ ಮಾಧ್ಯಮದಲ್ಲಿ ಕಲಿಯಬೇಕು ಅನ್ನುವುದನ್ನು ಪಾಲಕರ ನಿರ್ಧಾರಕ್ಕೆ ಬಿಡಿ.   ಮತ್ತಷ್ಟು ಓದು »