ಇದು ಹಿಂದಿ ಹೇರಿಕೆ ಬೂತದ ಕೈಚಳಕ
ಸರಕಾರ ತನ್ನ ಕಾರ್ಯಗಳು ಜನರಿಗೆ ತಲುಪಿಸೊಕ್ಕೆ ಪತ್ರಿಕೆಗಳನ್ನ ಅವಲಂಬಿಸಿದೆ. ಕೆಲವು ಪ್ರಮುಕ ಕಾರ್ಯಗಳನ್ನ/ ಸೌಲಬ್ಯಗಳನ್ನ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತೆ. ಪತ್ರಿಕೆಗಳಲ್ಲಿ ಜಾಹಿರಾತನ್ನ ನೋಡೊ ಜನ, ಆ ಕಾರ್ಯ/ಸೌಲಬ್ಯದ ಲಾಬ ಪಡೆದುಕೊಳ್ಳಬೇಕು ಅನ್ನೊದು ಉದ್ದೇಶ(?).ಆದರೆ ಸರಕಾರ ಈ ಜಾಹಿರಾತು ನೀಡೋ ವಿಶಯದಲ್ಲೂ ತಾರತಮ್ಯ ಮಾಡಿ ತನ್ನ ಕಾರ್ಯ/ ಸೌಲಬ್ಯ ಗಳು ಕನ್ನಡಿಗರಿಗೆ ಸಿಗಬಾರ್ದು ಅನ್ನೊ ತರ ನಡೆದುಕೊಳ್ತಿರೋದು ಮಾತ್ರ ನಿಗೂಡ! ಇದೋ ಹೀಗೆ ಅಂತೀರ- ಕನ್ನಡ ಪತ್ರಿಕೆಗಳಲ್ಲಿ ಕನ್ನಡವಲ್ಲದ, ಕನ್ನಡಿಗರಿಗೆ ಅರಿವಿಲ್ಲದ ಹಿಂದಿ ಬಾಶೆಯಲ್ಲಿ ಜಾಹಿರಾತು ನೀಡೋದು.
ಈ ಕೆಲ್ಸವನ್ನ ಸರಕಾರ ಬಹಳ ವ್ಯವಸ್ತಿತವಾಗಿ ಮಾಡ್ತಿದೆ. ಇದರ ಕೆಲವು ಕೆಲವು ಸ್ಯಾಂಪಲ್ ಗಳು-
೧. ಕೆಲವು ವರ್ಶಗಳ ಹಿಂದೆ ನೈರುತ್ಯ ರೈಲ್ವೆ ,ಡಿ ದರ್ಜೆ ನೌಕರರಿಗೆ(೭ ಅತವಾ ೮ ನೇ ತರಗತಿ ಪಾಸಾದವರಿಗೆ) ಅರ್ಜೆಗೆ ಅಹ್ವಾನಿಸಿ, ಕನ್ನಡವಲ್ಲದ ಬಾಶೆಯಲ್ಲಿ ಯಾವುದೋ ಒಂದೆರಡು ಚಿಕ್ಕ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತಂತೆ. ಆ ಜಾಹಿರಾತು ಓದೋಕ್ಕೆ ಆಗದ ಕನ್ನಡದವರು ಅರ್ಜಿ ಹಾಕಿದ್ದೆ ಕಡಿಮೆ ಜನ. ಎಂತಾ ದುರಂತ.
ಮತ್ತಷ್ಟು ಓದು 
ಚಿತ್ರದುರ್ಗ: ಒಂದು ಅಪರೂಪ ಐತಿಹಾಸಿಕ ತಾಣ.
– ಆರ್.ರಾಘವೇಂದ್ರ, ಚಳ್ಳಕೆರೆ
ಇತಿಹಾಸ ಪ್ರಸಿದ್ಧ ಚಿತ್ರದುರ್ಗ ಜಿಲ್ಲೆಯು ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಹೊಳಲ್ಕೆರೆ ಎಂಬ ಆರು ತಾಲ್ಲೂಕು ಕೇಂದ್ರಗಳನ್ನೊಳಗೊಂಡಂತೆ ೧೮೫ ಗ್ರಾಮ ಪಂಚಾಯಿತಿ ಕೇಂದ್ರಗಳಿಂದ ಕೂಡಿರುತ್ತದೆ. ಚಿತ್ರದುರ್ಗ ಜಿಲ್ಲೆಯು ೮೩೮೮ ಚ.ಕಿ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು ೧೫,೧೦,೨೨೭ ಜನಸಂಖ್ಯೆ ಇರುತ್ತದೆ.
ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ, ಚಿತ್ರದುರ್ಗ ತಾಲ್ಲೂಕು ಸಾಪೇಕ್ಷಿತವಾಗಿ ಅಭಿವೃದ್ಧಿ ಹೊಂದಿದ ತಾಲ್ಲೂಕಿನ ಗುಂಪಿನಲ್ಲಿದ್ದರೆ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ ಅತಿ ಹಿಂದುಳಿದ ತಾಲ್ಲೂಕುಗಳ ಗುಂಪಿನಲ್ಲಿವೆ ಹಾಗೂ ಮೊಳಕಾಲ್ಮೂರು ತಾಲ್ಲೂಕು ಅತ್ಯಂತ ಹಿಂದುಳಿದ ತಾಲ್ಲೂಕಿನ ಗುಂಪಿನಲ್ಲಿದೆ. ಆದರೆ ರಾಜ್ಯದ ಹಿಂದುಳಿದ ಪ್ರದೇಶವಾಗಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಅದು ಹೇಗೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕ್ಷರತೆ ಪ್ರಮಾಣ, ಮಕ್ಕಳು-ಉಪಾಧ್ಯಾಯರ ಅನುಪಾತ, ೬-೧೪ ವಯೋಮಾನದಲ್ಲಿ ಶಾಲೆ ಸೇರದ ಮಕ್ಕಳ ಪ್ರಮಾಣ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇವುಗಳ ಮೇಲೆ ನಾವು ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಕಾಣಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶವೆಂದು ಮೊಳಕಾಲ್ಮೂರು ತಾಲ್ಲೂಕು ಒಂದೇ. ಚಿತ್ರದುರ್ಗವು ತಾಮ್ರದ ಖನಿಜ ಸಂಪತ್ರವನ್ನು ಇಂಗಳದಾಳ್ನಲ್ಲಿ ಒಳಗೊಂಡಿದೆ.
ಸಾಹಿತ್ಯ ಕ್ಷೇತ್ರದ ಮೇರುವ್ಯಕ್ತಿಯಾದ ರಸಕವಿ ‘ಕುವೆಂಪು’ರವರನ್ನೇ ಶಿಷ್ಯರಾಗಿ ಪಡೆದಂತಹ ಕೀರ್ತಿ ಟಿ.ಎಸ್.ವೆಂಕಣ್ಣಯ್ಯರವರದು. ತಳಕಿನ ಕುಟುಂಬದ ತ.ಸು.ಶಾಮರಾಯರು, ತ.ರಾ.ಸು., ಅಂಬುಜಾ ತ.ರಾ.ಸು., ರವರು ಸೇರಿದಂತೆ, ಬೆಳಗೆರೆ ಮನತೆನದ ಬೆಳಗೆರೆ ಚಂದ್ರಶೇಖರಶಾಸ್ತ್ರಿ, ಬೆಳಗೆರೆ ಕೃಷ್ಣಶಾಸ್ತ್ರಿ, ಬೆಳಗೆರೆ ಜಾನಕಮ್ಮ ಮುಂತಾದ ಸಾಹಿತ್ಯ ಗಣಿಗಳು ಚಿತ್ರದುರ್ಗದ ಸಾಹಿತ್ಯವನ್ನು ಅಮರವಾಗಿಸಿದ್ದಾರೆ. ತ.ರಾ.ಸು. ರವರ ದುರ್ಗಾಸ್ತಮಾನ, ನಾಗರಹಾವು ಹಾಗೂ ಇತರೆ ಕೃತಿಗಳು ವಿಶ್ವಕ್ಕೆ ಚಿತ್ರದುರ್ಗದ ಪರಿಚಯವನ್ನು ಬಹುಸುಂದರವಾಗಿ ಮಾಡಿಕೊಟ್ಟಿದೆ. ‘ಬಿ.ಎಲ್.ವೇಣು’ ರವರ ‘ಕಲ್ಲರಳಿ ಹೂವಾಗಿ’ ಚಲನಚಿತ್ರವು ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಪಡೆದಿದ್ದು, ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರು, ಪ್ರೋ. ಲಕ್ಷ್ಮಣ ತೆಲಗಾವಿ, ಪ್ರೋ. ಬಿ.ರಾಜಶೇಖರಪ್ಪ, ಜಾನಪದ ತಜ್ಞರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಮಲ್ಲಿಕಾರ್ಜುನ ಕಲಮರಹಳ್ಳಿ, ನೇಮಿಚಂದ್ರ, ಮುಂತಾದವರು ಸೇರಿದಂತೆ ಅನೇಕ ಸಾಹಿತ್ಯ ಕಣ್ಮಣಿಗಳನ್ನೊಳಗೊಂಡಿದ್ದು, ದುರ್ಗವು ಸಾಹಿತ್ಯದ ಗಣಿಯಾಗಿದೆ. ಮತ್ತಷ್ಟು ಓದು 
ಒಂದು ತುತ್ತು ಅನ್ನ… ಎರಡು ತೊಟ್ಟು ಕಣ್ಣೀರು…!
-ರವಿ ಮೂರ್ನಾಡು
ಮದುವೆಗೆ ಗೆಳತಿಯ ಆಮಂತ್ರಣ ಬಂದಿತ್ತು.ಆ ಮದುವೆ ಶುಭದಿನ ಹೊಸ ಜಗತ್ತೊಂದನ್ನು ಚಿತ್ತಪಟದಲ್ಲಿ ಮುದ್ರೆಯೊತ್ತುತ್ತದೆ ಅಂತ ತಿಳಿದಿರಲಿಲ್ಲ. ಜೀವವಿರುವ ಪ್ರತಿಯೊಂದು ಜೀವಿಗೂ ತನ್ನದೇ ಆದ ಕವಚವೊಂದು ಬದ್ಧತೆಯನ್ನು ನಿರ್ಮಿಸಿ ಕೊಡುತ್ತದೆ ಅಂತ ಗೊತ್ತಿತ್ತು. ಅದನ್ನು ಮೀರಿ ಮನುಷ್ಯನ ಮನಸ್ಸಿಗೇ ಸವಾಲೊಡ್ಡುವ ಶಾರೀರಿಕ ತಲ್ಲಣದ ಸನ್ನಿವೇಶಕ್ಕೆ ಎದೆಯನ್ನೊಮ್ಮೆ ಮುಟ್ಟಿ ನೋಡುತ್ತೇನೆ. ಹಸಿವಿನ ಪ್ರಪಂಚದ ನದಿಯ ಪ್ರವಾಹಕ್ಕೆ ಕೊಚ್ಚಿ ಹೋಗುತ್ತೇನೆ. ಈ ಕಡಲ ಅಲೆಗಳಲ್ಲಿ ದಡ ಸೇರಲು ಹವಣಿಸುವ ಪುಟ್ಟ ದೋಣಿಯೆಂದು ಗೊತ್ತಿರಲಿಲ್ಲ. ಅಲೆಗಳು ಹಾಗೇ ಬಡಿಯುತ್ತಲೆ ಇವೆ…..ತಡಿಯಲ್ಲಿ ಮೂಡಿಸಿದ ಹೆಜ್ಜೆಗಳ ಅಳಿಸುತ್ತಲೇ ಇದೆ….! ಹೆಜ್ಜೆಗಳು ಮೂಡುತ್ತಲೇ ಇವೇ…
ಮದುವೆ ಇದ್ದದ್ದು ಬೆಂಗಳೂರಿನಲ್ಲಿ. 500 ರೂಪಾಯಿಯೊಂದಿಗೆ ನನ್ನ ಪ್ರಯಾಣ.ಎಂದಿಗೂ ಎಲ್ಲಿಗೂ ಹೊರಡುವಾಗ ಒಂದಷ್ಟು ಸಾಹಿತಿಗಳ ಪುಸ್ತಕ, ಪತ್ರಕರ್ತನಾಗಿದ್ದರಿಂದ ಒಂದೆರಡು ಲೇಖನಗಳ ಟಿಪ್ಪಣಿ. ಜೋಳಿಗೆ ಹೆಗಲಿಗೆ ಭಾರವಾಗುತ್ತಿರಲಿಲ್ಲ. ಬಸ್ಸಿನಲ್ಲಿ ಮಡಿಕೇರಿಯಿಂದ ಬೆಂಗಳೂರುವರೆಗೆ ಆರು ಗಂಟೆಗಳ ಕಾಲ ಕೂರಬೇಕಲ್ಲ. ಸುಮ್ಮನೇ ಕುಳಿತಾಗ ಸಮಯದ ಗೈರು ಹಾಜರಿಯ ಕೊರತೆಯನ್ನು ಈ ಪುಸ್ತಕಗಳು ನೀಗಿಸುತ್ತಿದ್ದವು. ನನ್ನೊಂದಿಗೆ ಮಾತಾಡುತ್ತಿದ್ದವು.
ಹಾಗೇ ದ.ರಾ.ಬೆಂದ್ರೆ, ಎಂ.ಟಿ.ವಾಸುದೇವನ್ ನಾಯರ್, ಪ್ರೇಮ್ಚಂದ್., ಜಿ.ಎಸ್. ಶಿವರುದ್ರಪ್ಪ.. ಇತ್ಯಾದಿ…! ಅದರಲ್ಲಿ ವಾಸುದೇವನ್ ನಾಯರರ ಒಂದು ಕಥೆ ಹಸಿವಿನ ಕ್ಷಣಗಳನ್ನು ಕದಕಿದಂತಾಯಿತು. ಕಥೆ ” ಕರ್ಕಟಕ ಮಾಸ”. ಕೇರಳದಲ್ಲಿ ” ಕಕ್ಕಡ ಮಾಸಂ” ಅಂತ ಕರೀತಾರೆ.ಕೃಷಿಕರಿಗೆ ತುಂಬಾ ಕಷ್ಟದ ತಿಂಗಳು ಇದು. ಈ ನಕ್ಷತ್ರದಲ್ಲಿ ಹುಟ್ಟಿದವರಿಗೆ ಅಶುಭ ಅಂತ ಪ್ರತೀತಿ.ಜ಼ಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರರ ಹುಟ್ಟಿದ ನಕ್ಷತ್ರ ಇದು. ಅದರಲ್ಲಿ ಅವರ ಹುಟ್ಟುಹಬ್ಬದ ದಿನವನ್ನು ಅವರ ತಾಯಿ ಹೇಗೆ ಆಚರಿಸಿದರು ಅಂತ ವಿವರಿಸುತ್ತಾರೆ. ಖಾಧ್ಯಾನ್ನಗಳ ವಿಚಾರದಲ್ಲಿ ಕೇರಳ ಸ್ವಾವನಂಭಿಯಲ್ಲ ಎಂದೂ ವ್ಯಂಗ್ಯವಾಡುತ್ತಾರೆ. ಮತ್ತಷ್ಟು ಓದು 
ಅಮರನಾಥ ಯಾತ್ರೆಯ ಪ್ರಾರಂಭ
ಶ್ರೀಹರ್ಷ ಸಾಲಿಮಠ
ಅಮರನಾಥ ಯಾತ್ರೆ ಮತ್ತೆ ಶುರುವಾಗಿದೆ. ಅಲ್ಲಿ ಇಲ್ಲಿ ರಿಸರ್ಚು ಮಾಡುವವರಿಗಿಂತ ಹೋಗಿಬಂದವನ ಬಾಯಲ್ಲೇ ಕೇಳಿದರೆ ವಿವರವಾದ ಐಡಿಯಾ ಸಿಗುತ್ತದೆ! ವಾಟ್ ಎನ್ ಐಡಿಯಾ ಸರ್ ಜಿ!
ಅಮರನಾಥಕ್ಕೆ ಹೋಗುವವರು ಮೊದಲು ಪರವಾನಗಿ ಪಡೆಯಬೇಕು. ಪರವಾನಗಿ ಜೆ&ಕೆ (ಜಮ್ಮು ಕಾಶ್ಮೀರ) ಬ್ಯಾಂಕ್ ನಲ್ಲಿ ದೊರೆಯುತ್ತದೆ. ಕರುನಾಡಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ಬ್ಯಾಂಕಿದೆ. ಬೆಂಗಳೂರಲ್ಲಿ ಅವೆನ್ಯೂ ರಸ್ತೆಯ ಕೊನೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಬಳಿ ಜಮ್ಮು ಕಾಶ್ಮೀರ ಬ್ಯಾಂಕಿದೆ. ದಿನಕ್ಕೆ ಪರಿಮಿತ ಜನರಿಗೆ ಮಾತ್ರ ಪರವಾನಗಿ ಕೊಡುತ್ತಾರೆ. ಇವತ್ತು ಪರವಾನಗಿ ಪಡೆದರೆ ಜುಲೈಗೆ ಸಿಗಬಹುದು. ಪರವಾನಗಿ ಸಿಕ್ಕ ದಿನವೇ ಗುಹೆಯ ಬಳಿ ಹೋಗಬೇಕೆಂದು ಹೇಳುತ್ತಾರಾದರೂ ಅಮರನಾಥದಲ್ಲಿ ಅಷ್ಟು ಕಟ್ಟುನಿಟ್ಟಿನ ನಿಯಮವಿರಲಿಲ್ಲ.
ಯಾತ್ರೆಗೆ ಹೊರಡಲು ಮದ್ಯಮವರ್ಗದವರಿಗೆ ರೈಲು ಒಳ್ಳೆಯ ಮಾರ್ಗ. ಪುಣೆಯಿಂದ ಜಮ್ಮುವಿಗೆ ನೇರ ರೈಲು ಇದೆ. ಇಲ್ಲವೇ ಹುಬ್ಬಳ್ಳಿ ಅಥವಾ ಬೆಂಗಳೂರಿನಿಂದ ಹೊಸದೆಹಲಿ ತಲುಪಿ ಹಳೆ ದೆಹಲಿ ರೇಲ್ವೇ ನಿಲ್ದಾಣದಿಂದ ಜಮ್ಮು ತಲುಪಬಹುದು (ಹೊಸ ದೆಹಲಿ ಯಿಂದ ಹಳೆದೆಹಲಿ ರೇಲ್ವೇ ನಿಲ್ದಾಣಕ್ಕೆ ಹೋಗಬೇಕು). ದೆಹಲಿಯಿಂದ ಜಮ್ಮು ಸುಮಾರು ಹದಿನೈದು ತಾಸುಗಳ ರೈಲು ಪಯಣ. ಸರ್ಕುಲಾರ್ ಟಿಕೆಟ್ ಕಾಯ್ದಿರಿಸಿದರೆ ಟಿಕೆಟ್ ದರದಲ್ಲಿ ರಿಯಾಯಿತಿ ಸಿಗುತ್ತದೆ.
ಜಮ್ಮು ಕಾಶ್ಮೀರದಲ್ಲಿ ಆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳನ್ನು ಹೊರತುಪಡಿಸಿ ಬೇರೆ ರಾಜ್ಯದ ಪ್ರಿಪೇಡ್ ಸಿಮ್ ಕಾರ್ಡುಗಳು ಕೆಲಸ ಮಾಡುವುದಿಲ್ಲ. ಎಲ್ಲ ರಾಜ್ಯದ ಎಲ್ಲ ಪೋಸ್ಟ್ ಪೇಡ್ ನೆಟ್ವರ್ಕ್ಗಳು ಕೆಲಸ ಮಾಡುತ್ತವಾದರೂ ಬಿ ಎಸ್ ಎನ್ ಎಲ್ ಪೋಸ್ಟ್ ಪೇಡ್ ಉತ್ತಮವಾದದ್ದು. ಮತ್ತಷ್ಟು ಓದು 
ಪಾಕಿಸ್ತಾನದ ಭೂಪಟ 17.05.2011ರ ಕನ್ನಡಪ್ರಭದಲ್ಲಿ…
– ಪಿ.ಎಸ್.ರಂಗನಾಥ
ಒಂದು ದೇಶದ ಭೂಪಟ ಅಂದರೆ ಅದರ ಭೌಗೋಳಿಕ ವಿನ್ಯಾಸ ಹಾಗು ಅದರ ಸರಿಹದ್ದು ಗಳನ್ನು ತೋರಿಸುವ ಚಿತ್ರ ಅಂತ ನಮ್ಮೆಲ್ಲರಿಗು ಗೊತ್ತಿರುವ ವಿಷಯ. ಪ್ರತಿಯೊಂದು ದೇಶವೂ ತನ್ನದೇ ಆದ ಒಂದು ನಕ್ಷೆಯನ್ನು ಸಿದ್ದಪಡಿಸಿಕೊಂಡು ಅಂತರಾಷ್ಟ್ರೀಯವಾಗಿ ತನ್ನನ್ನು ಗುರುತಿಸಿಕೊಳ್ಳುತ್ತದೆ. ಸದ್ಯಕ್ಕೆ ನಮ್ಮ ದೇಶಕ್ಕೆ ಬಂದರೆ ನಮ್ಮ ಕೆಲವು ಪ್ರಾಂತ್ಯಗಳು ಪಾಕಿಸ್ತಾನ ಹಾಗು ಚೀನಾದ ವಶದಲ್ಲಿದ್ದರು ನಾವುಗಳು ನಮ್ಮ ದೇಶದ ಗಡಿಯನ್ನು ಹಾಕಿ ನಾವು ಗುರುತಿಸಿಕೊಂಡಿದ್ದೇವೆ ಹಾಗು ಸರಕಾರ ಅದನ್ನು ಒಪ್ಪಿ ಅಧಿಕೃತವಾಗಿ ಮುದ್ರೆ ಹಾಕಿದೆ ಜತೆ ರಾಷ್ಟ್ರದ ಪ್ರಜೆಗಳಿಗೆ ಸಹ ಒಪ್ಪಿಗೆ ಯಾಗಿದೆ. ಯಾವುದೇ ಪುಸ್ತಕಗಳಲ್ಲಿ, ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಹಾಗು ರಾಷ್ಟ್ರದ ಮೂಲೆ ಮೂಲೆ ಗಳಲ್ಲಿ ಮುದ್ರಿತವಾಗಿ ಪ್ರಸಾರ ವಾಗುತ್ತಿರುವುದು POK (Pak Occupied Kashmir) ಹಾಗು ಚೈನಾ ಆಕ್ರಮಿತ ಕೆಲ ಭಾಗವನ್ನು ಒಳಗೊಂಡ ಭೂಪಟ ಮಾತ್ರ. ಆದರೆ ಪಾಕಿಸ್ತಾನ POK ಪ್ರಾಂತ್ಯವನ್ನು ತನ್ನ ಅಧಿಕೃತ ನಕ್ಷೆ ಯಾಗಿ ಉಪಯೋಗಿಸುತ್ತಿದೆ. ಅದನ್ನು ನಮ್ಮ ರಾಷ್ಟ್ರದವರು ಒಪ್ಪುವುದಿಲ್ಲ ಹಾಗು ಆ ಪ್ರಾಂತ್ಯ ಪಾಕಿಸ್ತಾನದ ವಶದಲ್ಲಿದ್ದರು ಸಹ ಅದಕ್ಕೆ ಅಂತರಾಷ್ಟ್ರೀಯ ಮನ್ನಣೆ ಇನ್ನು ದೊರಕಿಲ್ಲ. ಅದು disputed area ಅಂತ ಬೇರೆ ದೇಶದವರು dotted / dashed line ನಲ್ಲಿ ತೋರಿಸುತ್ತಾರೆ.
ನಾನು ಕಳೆದ ೪ ವರ್ಷಗಳಿಂದ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುತಿದ್ದೀನಿ, ಸಾಮನ್ಯವಾಗಿ ಭಾರತದ ಭೂಪಟ, ರಾಷ್ಟ್ರದ ಲಾಂಛನ, ಭಾವುಟ ಗಳನ್ನು ನೋಡಿ ನನಗೆ ಬಹಳ ಖುಶಿ ಯಾಗುತ್ತೆ. ಯಾವುದಾದರು ಕಛೇರಿ ಗಳಲ್ಲಿ ಹಾಕಿರುವ ಪ್ರಪಂಚದ ಭೂಪಟ ದಲ್ಲಿ ನಮ್ಮ ಭಾರತ ದೇಶವನ್ನು ಗಮನಿಸುವುದು ನನ್ನ ಅಭ್ಯಾಸ, ಒಂದು ವೇಳೆ ಭಾರತದ ಭೂಪಟದಲ್ಲಿ ಏನಾದರು ವ್ಯತ್ಯಾಸ ಗಳಿದ್ದರೆ, ಅಲ್ಲಿರುವ ಭಾರತೀಯ ಸಿಬ್ಬಂದಿ ಯವರ ಗಮನಕ್ಕೆ ತರುವ ಪ್ರಯತ್ನ ಮಾಡಿ ಬದಲಾಯಿಸಲು ಯತ್ನಿಸುವೆ. ಕೆಲವರು ನನ್ನ ವಿಚಾರಕ್ಕೆ ಸಹಮತ ವ್ಯಕ್ತ ಪಡಿಸಿ ವಿಷಾದ ವ್ಯಕ್ತ ಪಡಿಸುದ್ದುಂಟು. ಇನ್ನು ಕೆಲವರು, ಇಲ್ಲಿ ಸಿಗೋದೆ ಇದೇ ಮ್ಯಾಪ್ ಇದು ಬಿಟ್ರೆ ಬೇರೆ ವಿಧಿಯಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತಿದ್ದರು, .
ಕನ್ನಡಪ್ರಭ ೧೭.೦೫.೨೦೧೧ ಪುಟ ೯ರಲ್ಲಿ ಪ್ರಕಟವಾಗಿರುವ ಲೇಖನ “ದಾವುದ್ ನ ಮುಗಿಸುವ ಗುಂಡು ಸಿದ್ಧವಾಗಿಲ್ಲವೇ? ರಲ್ಲಿ ಮುದ್ರಿತವಾಗಿರುವ ಪಾಕಿಸ್ತಾನದ ಭೂಪಟ, ನಮ್ಮ ದೇಶದ ಕಾಶ್ಮಿರದ ಒಂದು ಭಾಗವನ್ನು ಅದರಲ್ಲಿ ಒಳಗೊಂಡಿದೆ.
ಬೆಂಗಳೂರಿನ ಕೆಲವು ವಿಶೇಷ ಸ್ಥಳನಾಮಗಳು ಬದಲಾಗುವ ಪ್ರವೃತ್ತಿ
ಡಾ|| ಬಿ.ಆರ್. ಸತ್ಯನಾರಾಯಣ
ಮೊನ್ನೆ ಅಂದರೆ ಏಪ್ರಿಲ್ 12 ಮತ್ತು 13ನೆಯ ತಾರೀಖುಗಳಂದು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ‘ಬೆಂಗಳೂರು ನಗರ ಇತಿಹಾಸ ಮತ್ತು ಪುರಾತತ್ವ’ ಕುರಿತಂತೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆದಿತ್ತು. ನಾನು 13ರಂದು ಮಂಡಿಸಿದ ‘ಬೆಂಗಳೂರಿನ ಕೆಲವು ವಿಶೇಷ ಸ್ಥಳನಾಮಗಳು ಬದಲಾಗುವ ಪ್ರವೃತ್ತಿ’ ಎಂಬ ಲೇಖನದ ಪೂರ್ಣಪಾಠ ಇಲ್ಲಿದೆ. 14.4.11ರ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಪ್ರಬಂಧದ ಬಗ್ಗೆ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಅದರ ಚಿತ್ರವನ್ನು ಇಲ್ಲಿ ಕಾಣಿಸಿರುತ್ತೇನೆ.

ಶಾಪ ವಿಮೋಚನೆಯಾಗದ ಅಹಲ್ಯೆಯರು…
– ರೂಪ ರಾವ್,ಬೆಂಗಳೂರು
ರಾಮಾಯಣದ ಸೀತಾ ಸ್ವಯಂವರದ ನಾಟಕದ ತಾಲೀಮು ನಡೆಯುತ್ತಿತ್ತು. 
ಅದರಲ್ಲಿ ಬರುವ ಅಹಲ್ಯಾ ಶಾಪ ವಿಮೋಚನೆಯ ಪ್ರಸಂಗವನ್ನೂ ವೇದಿಕೆಯಮೇಲೆ ತರೋಣ
“ಗೀತಾ ಅಹಲ್ಯಾ ಪಾತ್ರ ನೀನೇ ಮಾಡಬೇಕು .” ಮೇಡಂ ನನ್ನನ್ನು ಈ ಪಾತ್ರಕ್ಕೆ ಕರೆದಾಗ ನಾನು ಕಕ್ಕಾಬಿಕ್ಕಿ, ಜೊತೆಗೆ ಒಮ್ಮೆಗೆ,ಮಾಡಬಾರದೆನಿಸಿತು.
“ಮೇಡಂ ನಾ………….ನು …………ಈ ಪಾರ್ಟ್ ಮಾಡಲ್ಲ. ………” ಹಿಂಜರಿಕೆಯಿಂದಲೇ ನುಡಿದೆ.
“ಯಾಕೆ ಗೀತಾ “? ನನ್ನತ್ತಲೇ ತೀಕ್ಷ್ಣವಾಗಿ ನೋಡುತ್ತಾ
“ಮೇಡಂ iam not happy with Ahalya’s charactor. ತುಂಬಾ ಸಲ ಅನ್ಕೂಂಡಿದ್ದೀನಿ ಯಾಕೆ ಈ ಪಂಚ ಮಹಾ ಕನ್ನಿಕೆಯರ ಹೆಸರಲ್ಲಿ ಅಹಲ್ಯಾ ಹೆಸರು ಸೇರಿದೆ ಅಂತ?”
“ಯಾಕಮ್ಮಾ”? ಮತ್ತೆ ಪ್ರಶ್ನೆ ಎಸೆದರು.
” ಹಾಗಲ್ಲ ಮೇಡಂ ಗಂಡ ಇರದಿದ್ದಾಗ ಮತ್ತೊಬ್ಬನ ಜೊತೆ ಸಂಬಂಧ ಹೊಂದಿದವಳು. ಅಸಲಿಗೆ ಆ ಕಥೆಯೇ ಬೇಕಿರಲಿಲ್ಲ .ರಾಮನ ಔನ್ನತೆಯನ್ನ ಎತ್ತಿ ತೋರೋದಿಕ್ಕೆ ಈ ಕತೆ ಸೇರಿಸಿದ್ದಾರೆ ಅಷ್ಟೇ.
“ಸರಿ.ಆಯ್ತು,ನಿನಗೆ ಯಾವ ಪಾತ್ರ ಬೇಕೋ ಅದನ್ನೇ ಚೂಸ್ ಮಾಡು.ಆದರೂ ಪಾತ್ರಕ್ಕಿಂತ ಪಾತ್ರಧಾರಿಯ ಆ ಪಾತ್ರದಲ್ಲಿ ಹೇಗೆ ಇನ್ವಾಲ್ವ್ ಆಗ್ತಾನೆ ಅನ್ನೋದು ಮುಖ್ಯ. ಮತ್ತೆ ಪುರಾಣದಲ್ಲಿ ಕೇಳಿದ ಕಥೆಯನ್ನ ಆ ನೆಲೆಯಲ್ಲಿಯೇ ನೋಡುವುದಕ್ಕಿಂತ ಒಂದು ವಿಭಿನ್ನ ನೆಲೆಯಲ್ಲಿ ನೋಡಿದರೆ ಪಾತ್ರ ಇಂಟರೆಸ್ಟಿಂಗ್ ಆಗಿರುತ್ತೆ. ಅಹಲ್ಯಾ ಜೀವನದಲ್ಲಿ ನಿಜಕ್ಕೂ ಏನು ನಡೆದಿರಬಹುದು ಅನ್ನೋದನ್ನ ಯೋಚಿಸಿದರೆ ಆ ಪಾತ್ರ ನಿಜಕ್ಕೂ ತುಂಬಾ ಕಾಂಪ್ಲಿಕೇಟೆಡ್ ಅನ್ಸುತ್ತೆ. “ಮೇಡ್ಂ ಒಂದೇ ಸಲಕ್ಕೆ ಒಪ್ಪಿ, ಜೊತೆಗೇ ನನ್ನ ಮನಸಲ್ಲಿ ಅಲೆಯನ್ನು ಎಬ್ಬಿಸಿದರು.
ಮತ್ತಷ್ಟು ಓದು 
ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!
– ರಾಘವೇಂದ್ರ ನಾವಡ ಕೆ ಎಸ್
ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ ಹೇಗೆ ನಾವೇ ಆರಿಸಿ ಕಳುಹಿಸಿದ ನಮ್ಮ ಕಲ್ಯಾಣದ ಬಗ್ಗೆ ಯೋಚಿಸಬೇಕಾದ ನಾಯಕರು ತಮ್ಮನ್ನು ಹಾಗೂ ತಮ್ಮ ಗಳಿಕೆಯನ್ನು ರಕ್ಷಿಸಿಕೊಳ್ಳಲು ಮು೦ದಾಗಿರುವ ಬಗ್ಗೆ.. ಅದಕ್ಕಾಗಿ ತುಳಿದಿರುವ ಹಾದಿಗಳ ಬಗ್ಗೆ..!
ಮೊದಲನೆಯದಾಗಿ ಭಾರತದ ಯಾವ ರಾಜಕೀಯ ನಾಯಕನಿಗೂ ಲೋಕಪಾಲ ಮಸೂದೆಯ ಮ೦ಡನೆಯಾಗುವುದು ಬೇಕಿಲ್ಲ! ಆ ಮೂಲಕ ತಾವು ಬಟಾ ಬಯಲಿಗೆ ಬೀಳುವುದು ಇಷ್ಟವಿಲ್ಲ.. ತನ್ನ ಮಕ್ಕಳು ಮರಿ ಮೊಕ್ಕಳು ಅವರ… ಹೀಗೆ ಹತ್ತಾರು ತಲೆಮಾರುಗಳು ಆರಾಮಾಗಿ ಕುಳಿತು ತಿನ್ನಲೆ೦ದು ಮಾಡಿಕೊ೦ಡ ಆಸ್ತಿಯನ್ನು ಯಾರು ತಾನೇ ತನ್ನ ಜಮಾನಾದಲ್ಲೇ ಅದನ್ನು ಕಳೆದುಕೊಳ್ಳಲು ಇಷ್ಟ ಪಡುತ್ತಾನೆ? ಮು೦ದೆ ನಮ್ಮ ಅಪ್ಪ ನಮಗಾಗಿ ಏನನ್ನೂ ಮಾಡಿಟ್ಟಿಲ್ಲ! ಎ೦ಬ ಮಾತನ್ನು ಕೇಳಲು ಅವರು ಸಿಧ್ಧರಿಲ್ಲ! ನಾಯಕರ ಈ ಹಪಾಹಪಿಯೇ ಆದಷ್ಟೂ ಹಜಾರೆ ಹಾಗೂ ಅವರ ಟೀಮ್ ನ ದಿಕ್ಕು ತಪ್ಪಿಸುವತ್ತ ತನ್ನೆಲ್ಲಾ ಪಟ್ಟುಗಳನ್ನೂ ಬಳಸಿಕೊ೦ಡು ಆಖಾಡಕ್ಕೆ ಇಳಿದಿದೆ! ಮು೦ದೇನು? ಕಾದು ನೋಡಬೇಕು!!
ಅಮೇರಿಕಾ ಕಲಿಸಿದ ಪಾಠ…?
ಅರೆಹೊಳೆ ಸದಾಶಿವ ರಾವ್

ಅಂತ:ಶಕ್ತಿ ಮತ್ತು ಅಂತರಿಕ ದೌರ್ಬಲ್ಯದ ಬಗ್ಗೆ ಒಂದು ಮಾತಿದೆ. ಅಂತ:ಶಕ್ತಿ ಲಾಭದಾಯಕವಾದರೆ, ಅಂತರಿಕ ದೌರ್ಬಲ್ಯ ಅಪಾಯಕಾರಿ. ವಿಶ್ವದ ಉಗ್ರರ ಪಟ್ಟಿಯಲ್ಲಿ ನಂ.೧ ನೆಯ ಸ್ಥಾನದಲ್ಲಿದ್ದವನು ಒಸಾಮಾ ಬಿನ್ ಲ್ಯಾಡೆನ್. ಅಮೇರಿಕಾ ಅವನನ್ನು ಹತ್ತುವರ್ಷಗಳ ಭೇಟೆಯ ನಂತರ ಕೊಂದು ಮುಗಿಸಿದೆ. ಗುಣಕ್ಕೆ ಮತ್ಸರವಿಲ್ಲದಂತೆ ಭಾವಿಸಿದರೆ, ಅಮೆರಿಕಾಕ್ಕೆ ಈ ವಿಷಯದಲ್ಲಿ ಹ್ಯಾಟ್ಸ್ ಆಫ್ ಹೇಳಲೇ ಬೇಕು.
ಹಾಗೇ ಸುಮ್ಮನೇ ಒಮ್ಮೆ ನಮ್ಮ ಪರಿಸ್ಥಿತಿಗೆ ಈ ಘಟನೆಯನ್ನು ಸಮೀಕರಿಸಿಕೊಳ್ಳೋಣ. ಭಾರತದ ಪವಿತ್ರ ಸಂಸತ್ತಿನ ಮೇಲೆ ಉಗ್ರ ಅಫ್ಜಲ್ ದಾಳಿ ಮಾಡಿದ ಮತ್ತು ಸಿಕ್ಕಿ ಬಿದ್ದ. ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿಯಲ್ಲಿ ಕಸಬ್ ಸಿಕ್ಕಿ ಬಿದ್ದ. ನಾವು, ಇಬ್ಬರನ್ನೂ ಕಟ Pಟೆಯಲ್ಲಿ ನಿಲ್ಲಿಸಿದೆವು. ಇಬ್ಬರಿಗೂ ಅವರ ಪರವಾಗಿ ವಾದ ಮಾಡಲೆಂದು, ಒಲ್ಲೆ ಒಲ್ಲೆನೆಂದರೂ ವಕೀಲರನ್ನು ಸರಕಾರಿ ಖರ್ಚಿನಲ್ಲಿ ಒದಗಿಸಿಕೊಟ್ಟೆವು. ವಾದ ವಿವಾದಗಳು ನಡೆದುವು. ಎಲ್ಲರೂ ನಿರೀಕ್ಷಿಸಿದ್ದಂತೆ, ನ್ಯಾಯಾಲಯ ನ್ಯಾಯ ನೀಡಿತು. ಜೊತೆಗಿದ್ದ ಕೆಲವರು ಆರೋಪ ಮುಕ್ತರಾದರೆ, ಈ ದಾಳಿಗಳ ರೂವಾರಿಗಳಾದ ಅಫ್ಜಲ್, ಕಸಬ್ರಿಗೆ ಮರಣದಂಡನೆಯನ್ನು ನ್ಯಾಯಾಲಯ ಘೋಷಿಸಿತು. ಈಗ ಕಸಬ್ ಕಾನೂನು ಸಮರ ಮುಂದುವರಿಸಿದ್ದರೆ, ಅಫ್ಜಲ್ ದಯಾ ಭಿಕ್ಷೆಯನ್ನುಕೇಳಿಕೊಂಡು, ಕೆಲವು ವರ್ಷಗಳಿಂದ ಜೈಲಿನಲ್ಲಿಯೇ ಇದ್ದಾನೆ. ಅಫ್ಜಲ್ನ ಕಥೆ ಏನು ಎಂಬುದಕ್ಕೆ ಯಾವ ಸರಕಾರವೂ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ‘ರಾಜಕೀಯ’ ಲೆಕ್ಕಾಚಾರದಲ್ಲಿ ಸಿಗಬಹುದಾದ ಲಾಭಕ್ಕಾಗಿ ಕಾದು ಕುಳಿತಿದ್ದಾರೆ.
ಹಲವು ಸಾವಿಗೆ ಕಾರಣರಾದ ಉಗ್ರರಾದ ಅಫ್ಜಲ್ ಮತ್ತು ಕಸಬ್ರ ‘ರಕ್ಷಣೆ’ಗಾಗಿ ನಮ್ಮ ಸರಕಾರಗಳು ಕೋಟಿ ಕೋಟಿ ವ್ಯಯಿಸುತ್ತಿವೆ. ಮತ್ತೊಂದರ್ಥದಲ್ಲಿ ನಮ್ಮ ಮೇಲೆ, ನಮ್ಮ ಸ್ವಾಭಿಮಾನದ ಮೇಲೆ ಮತ್ತು ತೀರಾ ನಮ್ಮ ಮಾತ್ರಭೂಮಿಯ ಮೇಲೆ, ದಾಳಿಯ ಮೂಲಕ ಅಕ್ಷಮ್ಯ ಅಪರಾಧವನ್ನು ಮಾಡಿದ ಈ ಉಗ್ರರನ್ನು ನಾವು ‘ರಕ್ಷಿ’ಸುತ್ತಿದ್ದೇವೆ. ಮತ್ತಷ್ಟು ಓದು 
ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !
– ರಾಕೇಶ್ ಶೆಟ್ಟಿ
ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.
ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!





