ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

14
ಮಾರ್ಚ್

ಬಾಪೂ ನೇತಾಜಿಯನ್ನು ತುಳಿದರೆ ?

– ಶ್ರೀಹರ್ಷ ಸಾಲೀಮಠ

ಸುಭಾಷ ಚಂದ್ರ ಭೋಸರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಕಂಡ ಅತ್ಯಂತ ಚಾರ್ಮಿಂಗ್ ವ್ಯಕ್ತಿ. ಅವರು ಹುಟ್ಟಾ ಜಿನಿಯಸ್. ಕೇವಲ ಎಂಟು ತಿಂಗಳ ಅವಧಿಯ ಸಿದ್ಧತೆಯಲ್ಲಿ ಐ.ಸಿ.ಎಸ್ ಪರೀಕ್ಷೆಯಲ್ಲಿ ನಾಲ್ಕನೆಯ ರ್‍ಯಾಂಕ್ ಪಡೆದ ಮೇಧಾವಿ. ಸುಭಾಷ್ ರ ಚರಿಷ್ಮಾ ಹಿಟ್ಲರ್‌ನಂತಹವನನ್ನೇ ಬೆರಗುಗೊಳಿಸಿತ್ತು. ದೇಶಬಂಧು ಚಿತ್ತರಂಜನ್ ದಾಸ್ ರ ಗರಡಿಯಲ್ಲಿ ಪಳಗಿದ ನೇತಾಜಿ ಕ್ರಿಯಾಶಿಲತೆಯಲ್ಲೂ ಎಲ್ಲರಿಗಿಂತ ಒಂದು ಕೈ ಮೇಲು. ದೇಶಸೇವೆಯ ಕೈಂಕರ್ಯಕ್ಕೆ ಓಗೊಟ್ಟು ಐ.ಸಿ.ಎಸ್ ನಂತಹ ಹುದ್ದೆಯನ್ನು ಬಿಟ್ಟು ಮರಳಿದವರು. ನೇತಾಜಿಯ ದೇಶಭಕ್ತಿಯ ಬಗ್ಗೆ ಯಾರಿಗೂ ಅನುಮಾನಗಳಿರಲಿಲ್ಲ; ಇಂದಿಗೂ ಇಲ್ಲ!

ಸುಭಾಷರಿಗೂ ಬಾಪೂರಿಗೂ ತಾತ್ವಿಕವಾದ ಅಭಿಪ್ರಾಯಬೇಧಗಳಿದ್ದವು. ಅದನ್ನು ವೈಯಕ್ತಿಕ ಮಟ್ಟದ ಬೇಧಗಳು ಎಂಬಂತೆ ಚಿತ್ರಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕಸ್ತುರ್ ಬಾ ಹೇಳುತ್ತಾರೆ “ಗಾಂಧೀಜಿ ಮತ್ತು ಸುಭಾಷರು ಚರ್ಚೆಗೆ ಕುಳಿತರೆ ಇಬ್ಬರು ದೈವಿಪುರುಷರು ಸಂಭಾಷಣೆಗೆ ತೊಡಗಿದಂತೆ ತೋರುತ್ತಿತ್ತು.” ಅಭಿಪ್ರಾಯಗಳಲ್ಲಿ ಬಲವಾದ ಬೇಧಗಳಿದ್ದರೂ ನೇತಾಜಿ ಮತ್ತು ಬಾಪೂಜಿಯವರಲ್ಲಿ ವಯಕ್ತಿಕ ಮಟ್ಟದ ದ್ವೇಷಗಳಿರಲಿಲ್ಲ.

ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡಲು ವಿದೇಶಿ ತಾಕತ್ತು ಹಾಗೂ ಸೈನ್ಯದ ನೆರವು ಪಡೆಯಬೇಕು ಎಂಬ ಅಭಿಪ್ರಾಯ ನೇತಾಜಿಯವರಾಗಿತ್ತು. ಸಂಪೂರ್ಣ ಸ್ವದೇಶಿ ಮಾರ್ಗದಲ್ಲೇ ಸ್ವಾತಂತ್ರ್ಯ ಪಡೆಯಬೇಕೆಂಬುದು ಗಾಂಧೀಜಿಯ ಅಭಿಪ್ರಾಯವಾಗಿತ್ತು. ಯುದ್ಧಾಸ್ತ್ರಗಳು, ಬಾಂಬುಗಳ ಸಹಾಯದಿಂದ ನೆತ್ತರು ಹರಿಸಿ ಸ್ವಾಯತ್ತೆ ಪಡೆಯಬೇಕೆಂಬುದು ನೇತಾಜಿ ಚಿಂತನೆಯಾಗಿದ್ದರೆ ಸತ್ಯ ಮತ್ತು ಅಹಿಂಸೆ ಗಾಂಧೀಜಿಯ ಮಂತ್ರವಾಗಿತ್ತು. ಇದು ಅವರ ನಡುವೆ ಸಾಕಷ್ಟು ಜಿಜ್ಞಾಸೆ, ಚರ್ಚೆಗಳಿಗೆ ದಾರಿ ಮಾಡಿಕೊಂಡಿತ್ತು. ಹಾಗಂತ ಇಬ್ಬರೂ ಪರಸ್ಪರ ದ್ವೇಷಿಸುತ್ತಿರಲಿಲ್ಲ.

ಮತ್ತಷ್ಟು ಓದು »

24
ಫೆಬ್ರ

ತಲೆ ಮರೆಸಿಕೊ೦ಡಿದ್ದ “ಕಾ೦ಗ್ರೆಸ್” ರೇಡಿಯೋ

ಸಾತ್ವಿಕ್ ಎನ್. ವಿ.

ಸ್ವಾತಂತ್ರ ಹೋರಾಟದಲ್ಲಿ ಹಲವು ಮಾದರಿಗಳಲ್ಲಿದ್ದವು. ಅನೇಕ ರೀತಿಯ ಪ್ರಯತ್ನಗಳಿದ್ದವು. ಸಾಧ್ಯವಿದ್ದ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಸ್ವಾತಂತ್ರ್ಯ ಹೋರಾಟವನ್ನು ಉತ್ತೇಜಿಸುವುದು ಅಂದಿನ ಹೋರಾಟಗಾರರ ಉದ್ದೇಶವಾಗಿತ್ತು. ಅ೦ಥ ಸಮಯದಲ್ಲಿ ಸಮೂಹ ಮಾಧ್ಯಮ ಕ್ರಾ೦ತಿಯ ಶಿಶುವಾದ ರೇಡಿಯೋವನ್ನು ಮರೆಯಲು ಸಾಧ್ಯವೇ? ಆದರೆ ಬ್ರಿಟಿಷರ ವಸಾಹತುವಾಗಿದ್ದ ಭಾರತದಲ್ಲಿ ರೇಡಿಯೋ ಪ್ರಸಾರವು ಕೂಡಾ ಬ್ರಿಟಿಷ್ ಅಧಿಕಾರದ ಕೈಕೆಳಗೆ ಇತ್ತು. ಇ೦ಥ ಸಮಯದಲ್ಲಿ ರೂಪಿಸಿದ ಯೋಜನೆಯೇ- ಹೋರಾಟಗಾರರೇ ಪ್ರತ್ಯೇಕ ರೇಡಿಯೋ ಪ್ರಸಾರ ಆರ೦ಭಿಸುವುದು. ಆದರೆ ಅದು ಅಷ್ಟು ಸುಲಭವಾಗಿರಲಿಲ್ಲ. ಹೋರಾಟದ ಯಾವುದೇ ಕುರುಹುಗಳನ್ನು ಉಳಿಯದ೦ತೆ ಅ೦ದಿನ ಬ್ರಿಟಿಷ್ ಶಾಹಿ ಅಳಿಸಿಹಾಕುತ್ತಿತ್ತು.

‘ಕ್ವಿಟ್ ಇ೦ಡಿಯಾ’ ಚಳುವಳಿಯ ನಾಯಕರುಗಳಿಗೆ ರೇಡಿಯೋ ಅಥವಾ ಪತ್ರಿಕೆಗಳ ಸ೦ಪರ್ಕ ಇರಲಿಲ್ಲ. ಆಲ್ ಇ೦ಡಿಯಾ ರೇಡಿಯೋವು ಅ೦ದಿನ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಅಜೆ೦ಡಾವನ್ನು ಕಾರ್ಯಗತಗೊಳಿಸುವ ಯ೦ತ್ರವಾಗಿತ್ತು. ವೃತ್ತ ಪತ್ರಿಕೆಗಳು ಕೂಡಾ ತೀವ್ರ ಸೆನ್ಸಾರ್ ಗೆ ಒಳಗಾಗಿದ್ದುವು. ಆ ಸ೦ದರ್ಭದಲ್ಲಿ ನೇತಾರರಿಗೆ ಸಿಕ್ಕ ಏಕೈಕ ಪರ್ಯಾಯವೆ೦ದರೆ ‘ರೇಡಿಯೋ ಪ್ರಸಾರ’. ಅದು ಕೂಡಾ ತಲೆ ಮರೆಸಿಕೊ೦ಡು ಪ್ರಸಾರಕ ಬಳಸಿ ಪ್ರಸಾರ ಮಾಡುವುದಾಗಿತ್ತು. ಅ೦ದಿನ ಯುವ ಹೋರಾಟಗಾರರಾದ ಉಷಾ ಮೆಹ್ತ, ವಿಠಲ ದಾಸ್ ಕಾಕರ್, ಚ೦ದ್ರಕಾ೦ತ್ ಜಾವೇರಿ ಸೇರಿ ಕಾ೦ಗ್ರೆಸ್ ರೇಡಿಯೋವನ್ನು ೩ ಸೆಪ್ಟೆ೦ಬರ್ ೧೯೪೨ರ೦ದು ೪೨.೩೪ ಕಿರು ತರ೦ಗಾ೦ತರಗಳ ಮೇಲೆ ಆರ೦ಭಿಸಿದರು. ‘ಭಾರತ ಒ೦ದೆಡೆಯಿ೦ದ’ ಎ೦ಬ ಆರ೦ಭ ಘೋಷಣೆಯೊ೦ದಿಗೆ ಈ ರೇಡಿಯೋ ಕಾರ್ಯಾಚರಿಸುತ್ತಿದ್ದರೂ ಇದರ ಮೂಲ ಸ್ಥಳ ಮು೦ಬೈಯೇ ಆಗಿತ್ತು. ಈ ಪ್ರಸಾರವು ನವೆ೦ಬರ್ ೧೧ ರವರೆಗೆ ಮು೦ದುವರಿಯಿತು. (ಒಕ್ಟೋಬರ್ ೧೫ ರಿ೦ದ ೧೭ರ ವರೆಗೆ ಪ್ರಸಾರ ಶಕ್ತಿ ಹೆಚ್ಚಿಸುವ ಸಲುವಾಗಿ ಪ್ರಸಾರ ನಿಲ್ಲಿಸಲಾಗಿತ್ತು). ಪ್ರಸಾರಕವನ್ನು ಬ್ರಿಟಿಷ್ ಪೋಲಿಸರು ಗುರುತಿಸದಂತೆ ಬೇರೆ ಬೇರೆ ಜಾಗಗಳಿಗೆ ಸ್ಥಳಾ೦ತರ ಮಾಡಲಾಗುತಿತ್ತು. ಆದರೂ ಬ್ರಿಟಿಷ್ ಪೋಲೀಸರು ಇದರ ಇರುವಿಕೆಯನ್ನು ಪತ್ತೆ ಹಚ್ಚಿ ಪ್ರಸಾರ ನಿಲ್ಲಿಸಿದರು.

ಈ ಪ್ರಕರಣದ ಕುರಿತು ಪೋಲೀಸ್ ಆಯುಕ್ತರು ತಮ್ಮ ವರದಿಯಲ್ಲಿ ಈ ಕೃತ್ಯದ ಯಶಸ್ಸಿಗೆ ಗು೦ಪಿನ ನಾಯಕರಾದ ರಾಮ ಮನೋಹರ ಲೋಹಿಯಾರೇ ನೇರ ಬಾಧ್ಯಸ್ಥರು ಮತ್ತು ಇದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಿದ್ದಾರೆ ಎಂದು ದೂರು ದಾಖಲಿಸಿದರು. ಹೀಗೆ ಮುಂದೆ ಉತ್ಸಾಹಿ ರೇಡಿಯೋ ಪ್ರಸಾರಕರೇ ಖೈದಿಗಳಾದರು ಮತ್ತು ತನಿಖೆಗೆ ಗುರಿಯಾದರು. ಇದರಲ್ಲಿ ಖಾಕರ್ ಅವರನ್ನು ಮುಖ್ಯ ಆರೋಪಿ ಎ೦ದು ಗುರುತಿಸಲಾಯಿತು. ಅಶಾ೦ತಿಯನ್ನು ಹರಡುವುದು ಮತ್ತು ಹೋರಾಟದ ಪ್ರಯತ್ನವನ್ನು ಉತ್ತೇಜಿಸುವುದಕ್ಕಾಗಿ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದರೆ, ಇನ್ನುಳಿದವರು ಒಂದು ವರ್ಷ ಸೆರೆಮನೆ ವಾಸ ಅನುಭವಿಸಿದರು. ಹೀಗೆ ರಾಷ್ಟ್ರ್‍ಈಯವಾದಿಗಳು ಅಧಿಕೃತ ಸರಕಾರಿ ಸಂಸ್ಥೆಯಾದ ಆಲ್ ಇ೦ಡಿಯಾ ರೇಡಿಯೋಕ್ಕೆ ಪರ್ಯಾಯವಾಗಿ ನಡೆಸಿದ ಏಕಾ೦ಗಿ ಹೋರಾಟ ಕೊನೆಗೊ೦ಡಿತು.

ಚಿತ್ರ ಕೃಪೆ :ಆಫರ್ ಪೋಟೋ.ಕಾಂ

21
ಫೆಬ್ರ

ಯಾರಿಗೂ ಅರ್ಥವಾಗದ ಬಾಪೂ …!

ಶ್ರೀಹರ್ಷ ಸಾಲಿಮಠ

ಇದನ್ನು ಬೆಳಗೆರೆ ಕೃಷ್ಣಶಾಸ್ತ್ರಿಗಳು ಸ್ವತಃ ನನಗೆ ಹೇಳಿದ್ದು. ಈ ಘಟನೆ ನಡೆಯುವಾಗ ಶಾಸ್ತ್ರಿಗಳು ಖುದ್ದು ಎದುರಿಗೇ ಇದ್ದರಂತೆ.
ಸ್ವಾತಂತ್ರ್ಯದ ಸಮಯ. ಭಾರತದ ಪ್ರಧಾನಿ ಯಾರಾಗಬೇಕೆಂದು ನಿರ್ಧರಿಸಲು ನಡೆದ ಶಾಸನ ಸಭೆಯಲ್ಲಿ ನಡೆದ ಚುನಾವಣೆಯಲ್ಲಿ ನೆಹರೂ ಸರ್ದಾರ್ ಪಟೇಲರ ಎದುರಿಗೆ ೧೧-೧ ಮತಗಳ ಅಂತರದಿಂದ ಸೋತಿದ್ದರು. ಸ್ವಯಂ ನೆಹರೂ ಬಿಟ್ಟು ಬೇರೆ ಯಾರೂ ನೆಹರೂರವರಿಗೆ ಮತ ಹಾಕಿರಲಿಲ್ಲ!
ಇದಾದ ಮರುದಿನ ನೆಹರೂ ಗಾಂಧೀಜಿಯ ಬಳಿ ಬಂದು ನಿಮ್ಮ ಪ್ರಭಾವ ಬಳಸಿ ತಮ್ಮನ್ನು ಪ್ರಧಾನಿಯನ್ನಾಗಿ ಮಾಡಬೇಕೆಂದು ಕೇಳಿಕೊಂಡರು. ಅದಕ್ಕೆ ಗಾಂಧೀಜಿ “you are independent now. think independently. take independent decisions. why do you need my help?” ಎಂದರು. ನೆಹರೂಗೆ ನಿರಾಶೆಯಾಯಿತು. ವಾಪಸು ಹೊರಡಲು ಅನುವಾದರು. ಎರಡು ಹೆಜ್ಜೆ ಬಾಗಿಲ ದಿಕ್ಕಿನಲ್ಲಿ ನಡೆದು ಗಾಂಧೀಜಿಯ ತಿರುಗಿ “If I don’t become prime minister I will burn this country”ಎಂದರು. ಗಾಂಧೀಜಿ ಉತ್ತರಿಸದೆ ತಮ್ಮ ಕೆಲಸದಲ್ಲಿ ಮಗ್ನರಾದರು. ಮರುದಿನ ಸರ್ದಾರ್ ಪಟೇಲರು ಗಾಂಧೀಜಿಯವರ ಬಳಿ ಬಂದರು. ಸ್ವಲ್ಪ ಮಾತಾದ ಮೇಲೆ “ನೆಹರೂ ಇಲ್ಲಿಗೆ ಬಂದಿದ್ದರೆ?” ಎಂದು ಕೇಳಿದರು.
ಬಾಪೂ “ಹೌದು” ಎಂದರು.
“ಏನು ಹೇಳಿದರು ನೆಹರೂ?”
ಮತ್ತಷ್ಟು ಓದು »

4
ಫೆಬ್ರ

ಇದು ಕನ್ನಡಕ್ಕಾದ ಅವಮಾನವಲ್ಲವೇ?

ಕರ್ನಾಟಕದಲ್ಲಿ ಕನ್ನಡದ ಪರ ಕೆಲಸ ಮಾಡಿದವರಿಗೆ ಗೌರವ ಕೊಡೋದು ತಪ್ಪಾ? ತಪ್ಪು ಅನ್ನೋದಾದ್ರೆ ರಾಜ್ಯಪಾಲರು, ಡಾ|| ಎಂ. ಚಿದಾನಂದಮೂರ್ತಿ  ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನಿರಾಕರಿಸಿರುವುದು ಸರಿಯಾಗುತ್ತದೆ,ಅಲ್ವಾ? ಚಿಮೂ ಯಾರು? ಕನ್ನಡಕ್ಕೆ ಅವರ ಕೊಡುಗೆಯೇನು? ಎಲ್ಲ ಅರ್ಹತೆಯಿದ್ದರು ಅವರಿಗೆ ಗೌರವ ಡಾಕ್ಟರೇಟ್  ನಿರಾಕರಿಸಲು ನೀಡಿರುವ ಕಾರಣವಾದರು ಏನು ಅಂತ ನೋಡಿದರೆ ‘ಸಂಘ ಪರಿವಾರದ’ ಜೊತೆ ಅವರು ಗುರ್ತಿಸಿಕೊಂಡಿರುವ ಮಹಾಪರಾಧವನ್ನ ಮಾಡಿರುವುದಂತೆ!

ಅದ್ಯಾವ ಸೀಮೆಯ ಅಪರಾಧ ಅಂತ ನನಗೂ ಇನ್ನು ಕೆಲವರಿಗೂ ಅನ್ನಿಸಬಹುದು ಆದರೆ ಸಿಕ್ಯುಲರ್ ಮನಸ್ಸುಗಳಿಗೆ ಅದು ದೇಶ ದ್ರೋಹಕ್ಕೆ ಸಮ ಅನ್ನಿಸಲೂಬಹುದು.ಆದರೆ ಚಿಮೂ ಅವರನ್ನ ಕೇಸರಿ-ಹಸಿರಿನ ಪರದೆ ಸರಿಸಿ, ಕೆಂಪು-ಹಳದಿಯ ಕನ್ನಡದ ಪರದೆಯ ಮೂಲಕ ನೋಡಿದಾಗಲೂ ಅವರ ವಿರೋಧಿಗಳು ಅವರಿಗೆ ಗೌರವ ಡಾಕ್ಟರೇಟ್ ನೀಡುವುದನ್ನು ವಿರೋಧಿಸಬಲ್ಲರೆ?

ಯಾವುದೇ ರಾಜಕೀಯ ಪಕ್ಷ,ಸಂಘಟನೆ, ಪಂಥಕ್ಕೆ ಸೇರದ ಒಬ್ಬ ಸಾಮನ್ಯ ಕನ್ನಡಿಗನ ಕಣ್ಣಿಗೆ ಚಿಮೂ ಅವರು,ಕನ್ನಡದ ಪ್ರಖ್ಯಾತ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕರಾಗಿ ಮಾತ್ರ ಕಾಣಬಲ್ಲರು.

ಇಂತ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನಿರಾಕರಿಸುವುದು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಪ್ರಾಚೀನ ಕರ್ನಾಟಕದ ಬಗ್ಗೆ ಅವರ ಒಲವನ್ನ,ನಿಷ್ಠೆಯನ್ನ,ತುಡಿತವನ್ನ ಮತ್ತು ಕನ್ನಡಕ್ಕಾಗಿ ಅವರು ಮಾಡಿರುವ ಕೆಲಸವನ್ನ ಕಡೆಗಣಿಸಿದಂತೆ ಅವಮಾನಿಸಿದಂತಲ್ಲವೇ? ಕನ್ನಡಕ್ಕಾಗಿ ಕೆಲಸ ಮಾಡಿದವರನ್ನ ಕಡೆಗಣಿಸುವುದು ಕನ್ನಡಿಗರನ್ನ,ಕರ್ನಾಟಕವನ್ನ ಕಡೆಗಣಿಸಿದಂತೆ-ಅವಮಾನಿಸಿದಂತೆಯೇ ಸರಿ. ಮತ್ತಷ್ಟು ಓದು »

26
ಜನ

ಕರ್ನಾಟಕವೂ ಸಹ ಭಾರತದ ಭಾಗವಾಗಿರಲಿಲ್ಲ!

– ರಾಕೇಶ್ ಶೆಟ್ಟಿ

ಅಲ್ಲಿ ರಾಷ್ಟ್ರ ಧ್ವಜ ಹಾರುತ್ತದೋ ಇಲ್ವೋ? ಹಾರಿದರೆ ಏನಾಗುತ್ತೆ? ಅನ್ನೋದಕ್ಕೆಲ್ಲ ಬಹುಷಃ ಜನವರಿ ೨೬ರ ಇಂದಿನ ದಿನ ಉತ್ತರ ಸಿಗಲಿದೆ.Fine ನಾನೀಗ ಅರುಂಧತಿ ರಾಯ್ ಅವರ ಹೇಳಿಕೆಯ ಸುತ್ತ ಮಾತಾಡ ಹೊರಟೆ.

‘ಕಾಶ್ಮೀರ ಭಾರತದ ಭಾಗವಾಗಿರಲಿಲ್ಲ’ ಅಂತೇಳಿದ ಸುದ್ದಿ ಜೀವಿ  ಅರುಂಧತಿ ರಾಯ್ ಅವರಿಗೆ ‘ಕರ್ನಾಟಕವೂ ಸಹ ಭಾರತದ ಭಾಗವಾಗಿರಲಿಲ್ಲ’, ಹಾಗೆ ಇನ್ನ ಸ್ವಲ್ಪ ಕೆದಕುತ್ತ ಹಿಂದೆ ಹೋದರೆ ಖುದ್ದು ‘ಭಾರತವೂ ಸಹ ಭಾರತದ ಭಾಗವಾಗಿರಲಿಲ್ಲ’ ಅನ್ನೋದು ಗೊತ್ತಿಲ್ಲ ಅನ್ನಿಸುತ್ತೆ.

ಅಸಲಿಗೆ ಉಪಖಂಡವನ್ನ ಆಡಳಿತದ ಕಾರಣಕ್ಕಾಗಿ ‘ಭಾರತ’ ಅಂತ ಹಿಡಿದಿಟ್ಟವರು ಬ್ರಿಟಿಷರು.೪೭ರಲ್ಲಿ ಅವರು ಸ್ವಾತಂತ್ರ್ಯ ಕೊಟ್ಟು ಹೊರಡುವಾಗ ಇಲ್ಲಿ ೫೫೦ಕ್ಕು ಹೆಚ್ಚು ಸಣ್ಣ ಪುಟ್ಟ ರಾಜ ಸಂಸ್ಥಾನಗಳಿದ್ದವು. ಅವೆಲ್ಲ ಪಟೇಲರ ಮಂತ್ರದಂಡಕ್ಕೆ ತಲೆಬಾಗಿ ಭಾರತದ ಒಕ್ಕೊಟವನ್ನ ಸೇರಿಕೊಂಡವು.

 

ಮತ್ತಷ್ಟು ಓದು »

11
ಜನ

ಓಶೋ ಕಂಡಂತೆ ಗಾಂಧಿ!

ಸುಪ್ರೀತ್, ಬೆಂಗಳೂರು

ಓಶೋ ರಜನೀಶ್ ಜಗತ್ತು ಕಂಡ ಅತ್ಯಂತ ವಿವಾದಾಸ್ಪದ ವ್ಯಕ್ತಿ. ಮಧ್ಯಪ್ರದೇಶದ ಜೈನ ಕುಟುಂಬವೊಂದರಲ್ಲಿ ಹುಟ್ಟಿದ ರಜನೀಶ್ ಬಾಲ್ಯದಿಂದಲೇ ಸ್ವತಂತ್ರ ಚಿಂತನೆಯೆಡೆಗೆ ಒಲವು ಹೊಂದಿದ್ದ. ತನ್ನ ಇಪ್ಪತ್ಮೂರನೆಯ ವಯಸ್ಸಿನಲ್ಲಿ ತನಗೆ ಜ್ಞಾನೋದಯವಾಯಿತು ಎಂದು ಹೇಳಿಕೊಳ್ಳುವ ಈತ ಜಗತ್ತಿನ ಎಲ್ಲಾ ಧರ್ಮಗಳ ಬಗ್ಗೆ ಅತ್ಯಂತ ವಸ್ತುನಿಷ್ಠವಾದ, ಹಿಂದೆ ಯಾರೂ ಹೇಳಿರದಿದ್ದ ಸಂಗತಿಗಳನ್ನು ಹೇಳಿದ. ನಂಬಿಕೆಗಳನ್ನು ಬಿತ್ತುವ, ಆ ಮೂಲಕ ಸ್ವತಂತ್ರ ಚಿಂತನೆಯನ್ನು ನಾಶ ಮಾಡುವ ಎಲ್ಲಾ ವ್ಯವಸ್ಥೆಗಳನ್ನೂ ಖಂಡಿಸಿದ. ಮನುಷ್ಯ ತತ್‌ಕ್ಷಣಕ್ಕೆ ಮಾತ್ರ ಸ್ಪಂದಿಸಬೇಕು. ಯಾವ ಪೂರ್ವಾಗ್ರಹವಿಲ್ಲದೆ, ಭವಿಷ್ಯತ್ತಿನ ಬಗ್ಗೆ ಯೋಜನೆಯಿಲ್ಲದೆ ಈ ಕ್ಷಣದಲ್ಲಿ ಬದುಕಬೇಕು ಎಂದು ಹೇಳಿದ. ಜಗತ್ತಿನ ಯಾವ ವ್ಯಕ್ತಿಯನ್ನೂ, ನಂಬಿಕೆಗಳನ್ನೂ ಬಿಡದೆ ಜಾಲಾಡಿದವ ಈತ. ೧೯೯೦ರಂದು ಹೃದಯಾಘಾತದಿಂದ ನಿಧನನಾದ.

ಇಡೀ ಜಗತ್ತೇ ಮಹಾತ್ಮಾ ಗಾಂಧಿಯನ್ನು ಅಹಿಂಸಾ ಮಾರ್ಗದ ಅನ್ವೇಷಕ ಎಂದು ಕೊಂಡಾಡಿದರೆ ಈತ ಗಾಂಧಿಯನ್ನು ಕುಟಿಲ ರಾಜಕಾರಣಿ ಎಂದು ಕರೆದ. ಗಾಂಧೀಜಿ ಪ್ರತಿಪಾದಿಸಿದ ಅಹಿಂಸೆ, ಸತ್ಯಾಗ್ರಹವೆಲ್ಲವೂ ಕೇವಲ ರಾಜಕೀಯ ತಂತ್ರಗಳು ಎಂದು ವಾದಿಸಿದ. ಗಾಂಧೀಜಿಯ ಸರಳತೆ ಢೋಂಗಿಯದು ಎಂದು ಜರೆದ. ಅವರ ಆಧ್ಯಾತ್ಮ, ಶಿಸ್ತು, ಬ್ರಹ್ಮಚರ್ಯ, ದೇವರ ಕಲ್ಪನೆ ಎಲ್ಲವನ್ನೂ ಲೇವಡಿ ಮಾಡಿದ.

ನಿಜವಾದ ಚಿನ್ನವನ್ನು ಯಾವ ಒರಗೆ ಹಚ್ಚಿದರೂ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತದೆಯೇ ಹೊರತು ಕಳೆಗುಂದುವುದಿಲ್ಲ. ಹೀಗಾಗಿ ಓಶೋ ರಜನೀಶ್ ಗಾಂಧಿಯ ಬಗ್ಗೆ ಮಾತಾಡಿರುವ ಬಗ್ಗೆ ಸ್ವಲ್ಪ ತಿಳಿಯೋಣ. ಇದರಲ್ಲಿ ನಮಗೆ ಗಾಂಧೀಜಿಯ ವ್ಯಕ್ತಿತ್ವದ ಬಗ್ಗೆ, ಘನತೆಯ ಬಗ್ಗೆ ಹೊಸತೊಂದು ಆಯಾಮ ಸಿಕ್ಕಬಹುದು. ಯಾರನ್ನೂ ಕಣ್ಣು ಮುಚ್ಚಿ ಒಪ್ಪಬಾರದು ಎಂಬ ಎಚ್ಚರಿಕೆಯಿದ್ದರೆ ನಮ್ಮ ಪ್ರಯತ್ನ ಹೆಚ್ಚು ಪ್ರಯೋಜನಕಾರಿಯಾಗಬಲ್ಲದು.

***

… ನನ್ನ ಪ್ರಕಾರ ಮಹಾತ್ಮ ಗಾಂಧಿ ಒಬ್ಬ ಕಪಟ ರಾಜಕಾರಣಿ. ಅಹಿಂಸೆಯನ್ನು ಅಳವಡಿಸಿಕೊಳ್ಳುವ ಮೂಲಕ ಆತ ಎಷ್ಟೋ ಸಂಗತಿಗಳನ್ನು ತನಗೆ ಹಿತವಾಗುವಂತೆ ನಿರ್ವಹಿಸಿದ. ಎಲ್ಲಾ ಜೈನರು ಆತನ ಅನುಯಾಯಿಗಳಾದರು. ತಾವು ನಂಬಿದ ಅಂಹಿಸೆಯ ತತ್ವವನ್ನು ಬೆಂಬಲಿಸುವ ಒಬ್ಬ ವ್ಯಕ್ತಿಯನ್ನು ಅವರು ಆತನಲ್ಲಿ ಕಂಡಿದ್ದರು. ಗಾಂಧಿ ಜೈನನಾಗಿರಲಿಲ್ಲ. ಆತ ಕೇವಲ ಶೇ ೯ರಷ್ಟು ಜೈನನಾಗಿದ್ದ. ನಾನು ಗಾಂಧಿಯನ್ನು ಹೀಗೆ ವರ್ಣಿಸಲು ಇಚ್ಚಿಸುತ್ತೇನೆ: ಆತ ಹುಟ್ಟಿನಿಂದ ಹಿಂದು ಆದರೆ ಆತ ಕೇವಲ ಶೇ ೧ರಷ್ಟು ಹಿಂದು. ಆತ ಹುಟ್ಟಿದ್ದು ಜೈನರು ಹೆಚ್ಚು ಸಂಖ್ಯೆಯಲ್ಲಿದ್ದ ಗುಜರಾತಿನಲ್ಲಿ ಹೀಗಾಗಿ ಆತ ಶೇ ೯ರಷ್ಟು ಜೈನ. ಉಳಿದ ಶೇ ೯೦ರಷ್ಟು ಆತ ಕ್ರಿಶ್ಚಿಯನ್ ಆಗಿದ್ದ. ಮೂರು ಬಾರಿ ಆತ ಕ್ರೈಸ್ತನಾಗಿ ಮತಾಂತರವಾಗುವ ಹಂತದಲ್ಲಿದ್ದ. ಮತ್ತಷ್ಟು ಓದು »

20
ನವೆಂ

ಕೋಮುವಾದವೂ ಮೂಲಭೂತವಾದವೂ

ಅಜಕ್ಕಳ ಗಿರೀಶ ಭಟ್

ದಕ್ಷಿಣ ಕನ್ನಡದಲ್ಲಿ ಈಚಿನ ವರ್ಷಗಳಲ್ಲಿ ಹಿಂದೂ- ಮುಸ್ಲಿಂ ಸಂಘರ್ಷಗಳು ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಬಗ್ಗೆ ಸಾಕಷ್ಟು ಲೇಖನಗಳು ಕಾಲಕಾಲಕ್ಕೆ ವಿವಿಧ ಪತ್ರಿಕೆಗಳಲ್ಲಿ ಬಂದಿವೆ. ಪುಸ್ತಕಗಳೂ ಬಂದಿವೆ. ಆದರೆ , ಹೆಚ್ಚಿನ ಲೇಖನಗಳು ಸಮಸ್ಯೆಯ ಆಳಕ್ಕಿಳಿದು ಚರ್ಚಿಸುವುದಿಲ್ಲ. ಮೇಲು ಮೇಲಿಂದ ನೊಡಿ ಎಲ್ಲ ಕೋಮುವಾದಿಗಳನ್ನು ಖಂಡಿಸಬೇಕು ಎಂದು ಹೇಳಿದಾಕ್ಷಣ ಸಮಸ್ಯೆ ಪರಿಹಾರವಾಗದು.

ವಾಸ್ತವವಾಗಿ ಹಿಂದೂ ಮತ್ತು ಮುಸ್ಲಿಂ ಸಂಸ್ಕೃತಿಗಳು ಬದುಕನ್ನು ಗ್ರಹಿಸುವ ಬಗೆಯಲ್ಲಿಯೇ ವ್ಯತ್ಯಾಸಗಳಿವೆ.

ಹಿಂದೂ ಎಂಬೊಂದು ಏಕರೂಪಿ ಘಟಕ ಇಲ್ಲ ನಿಜ. ಆದರೆ ಸೃಷ್ಟಿ ಮತ್ತು ಸೃಷ್ಟಿಕರ್ತ ಇವೆಲ್ಲ ಪೂಜನೀಯ ಎಂದು ಗ್ರಹಿಸುವ ,ಅಂಥ ನಂಬಿಕೆಗಳನ್ನು ಹೊಂದಿರುವುದೇ ಈ “ಹಿಂದು” ಎಂದು ನಾವು ಅನುಕೂಲಕ್ಕಾಗಿ ಕರೆಯುವ ಗುಂಪುಗಳ ನಡುವೆ ಇರುವ ಸಾಮ್ಯತೆ ಎನ್ನಬಹುದು. ಇಂಥ ನಂಬಿಕೆಗಳು ಬಹುಸಂಸ್ಕೃತಿಗಳ ಅಸ್ತಿತ್ವಕ್ಕೆ ಪೂರಕ ಎಂದು ಬೇರೆ ಹೇಳಬೇಕಾಗಿಲ್ಲ. ಹಿಂದೂ ಧರ್ಮಗಳ ಒಳಗೇ ಭೇದಭಾವ ಇತ್ಯಾದಿ ಸಮಸ್ಯೆಗಳಿವೆ.ಅದು ಸಾಕಷ್ಟು ಚರ್ಚಿತವಾದ ವಿಷಯವೇ ಆಗಿದೆ.

ವಾಸ್ತವವಾಗಿ ಹಿಂದೂ-ಮುಸ್ಲಿಂ ಸಂಘರ್ಷವೆಂದರೆ ಅದು ಆಧುನಿಕತೆಗೆ ತೆರೆದುಕೊಂಡ ಮತ್ತು ಹಾಗೆ ತೆರೆದುಕೊಳ್ಳಲು ಹಿಂಜರಿಯುವ ಸಂಸ್ಕೃತಿಗಳ ನಡುವಿನ ಸಂಘರ್ಷವೂ ಹೌದು.ಅವರವರು ಅವರವರಷ್ಟಕ್ಕೇ ಇರಲಿ ಏನು ಸಮಸ್ಯೆ ಎನ್ನಲು ಸಾಧ್ಯವಿಲ್ಲ ಯಾಕೆಂದರೆ ಇವೆರಡೂ ಸಂಸ್ಕೃತಿಗಳೂ ಒಟ್ಟಿಗೇ ಬದುಕಬೇಕಾಗಿದೆ ಇಲ್ಲಿ.

ದಕ್ಷಿಣ ಕನ್ನಡದಲ್ಲಿ “ಹಿಂದೂ ಹುಡುಗಿ ” ಮತ್ತು “ಮುಸ್ಲಿಂ ಹುಡುಗ” ಜತೆಯಾಗಿ ಬಸ್ಸಲ್ಲಿ ಪ್ರಯಾಣಿಸಿದರೆ ಅಥವಾ ಪರಸ್ಪರ ಮಾತನಾಡಿದರೆ ಹಲ್ಲೆಗೆ ಒಳಗಾಗುವ ಪ್ರಸಂಗಗಳು ವರದಿಯಾಗುತ್ತವೆ.ಇಂಥ ಹಲ್ಲೆಗಳು ಖಂಡನೀಯವೇ ಹೌದು. ಇದರ ಹಿಂದೆ ಪುರುಷಾಹಂಕಾರದ ಪ್ರವೃತ್ತಿ ಇದೆ ಎನ್ನುವುದು ಎಲ್ಲರಿಗೂ ಅರ್ಥವಾಗುವ ವಿಚಾರ. ಆದರೆ ಇಂಥ ಪ್ರಸಂಗಗಳ ಬಗ್ಗೆ ಚಿಂತಿಸುವಾಗ ಇನ್ನಷ್ಟು ಸೂಕ್ಷ್ಮವಾಗಿ ನೋಡಬೇಕಾದ ಅಗತ್ಯವಿದೆ. ಉದಾಹರಣೆಗೆ ಮಂಗಳೂರಿನ ಕುಪ್ರಸಿದ್ಧ ಪಬ್ ದಾಳಿಯ ನಂತರ ಮಂಗಳೂರು ಹೇಗೆ ಕೋಮುವಾದಿಗಳ ತಾಣವಾಗುತ್ತಿದೆ ಎನ್ನುವ ಲೇಖನ ದ ವೀಕ್ ಪತ್ರಿಕೆಯಲ್ಲಿ ಪ್ರಕಟವಾಯಿತು. ( ಎನ್, ಭಾನುತೇಜ್, ವೀಕ್, ಫೆಬ್ರವರಿ -೨೦೦೯). ಎಲ್ಲ ಸರಿ; ಆದರೆ ಅದರಲ್ಲಿದ್ದ ಕೆಲವು ಸಾಲುಗಳು ಹೀಗಿದ್ದವು.”ಮುಸ್ಲಿಂ ಹುಡುಗರು ಮತ್ತು ಹಿಂದೂ ಹುಡುಗಿಯರ ನಡುವಿನ ಸ್ನೇಹಕ್ಕೆ ಗರಿಷ್ಟ ಶಿಕ್ಷೆ. ಹಿಂದು ಹುಡುಗ-ಮುಸ್ಲಿಂ ಹುಡುಗಿ ಸ್ನೇಹದ ವಿರುದ್ಧ ಯಾವುದೇ ಅಟ್ಯಾಕ್ ಆದ ಬಗ್ಗೆ ವರದಿಗಳಿಲ್ಲ.”(ಪು.೧೬). ಈ ಹೇಳಿಕೆ ನಿಜವಾಗಿ ಮಿಸ್ ಲೀಡ್ ಮಾಡುವಂಥದ್ದು. ದ.ಕ.ದಲ್ಲಿ ಹಿಂದು ಹುಡುಗ ಮತ್ತು ಮುಸ್ಲಿಂ ಹುಡುಗಿ ಝತೆಯಾಗಿ ಓಡಾಡುವ ಸನ್ನಿವೇಶಗಳು ಇಲ್ಲವೆಂಬಷ್ಟು ಕಡಮೆ ಎನ್ನುವ ಸತ್ಯವನ್ನು ಈ ಹೇಳಿಕೆ ಮರೆಮಾಚುತ್ತದೆ. ಮತ್ತಷ್ಟು ಓದು »

13
ನವೆಂ

ಕನ್ನಡವೇ ಸತ್ಯ-ನಿತ್ಯ ಸತ್ಯ……

ಅರೆಹೊಳೆ ಸದಾಶಿವ ರಾವ್

ಕನ್ನಡ ಡಿ೦ಡಿಮ ಮತ್ತೆ ಮೊಳಗಿದೆ. ಇಲ್ಲಿ‘ಮತ್ತೆ’ ಯಾಕೆ೦ದರೆ ಪ್ರತೀ ವರ್ಷ ಕನ್ನಡ ಡಿ೦ಡಿಮ ಮೊಳಗುವುದು ಕೇವಲ ನವೆ೦ಬರ್‌ನಲ್ಲಿ ಮಾತ್ರ. ಈ ಒ೦ದು ತಿ೦ಗಳು ಎಲ್ಲೆಡೆಯಲ್ಲಿಯೂ, ಎಲ್ಲರ ಬಾಯಲ್ಲೂ ಕನ್ನಡ.. ಕನ್ನಡ.. ಕನ್ನಡ !ಮತ್ತೆ ಹನ್ನೊ೦ದು ತಿ೦ಗಳು ಆ ಮಾತಿಗೆ ದೀರ್ಘ ರಜೆ. ನವೆ೦ಬರ್ ಕಳೆದು ಡಿಸೆ೦ಬರ್ ಬ೦ದರೆ, ಚಳಿಗಾಲದ ಆರ೦ಭದೊಡನೆ, ಕನ್ನಡ ಚಳಿಹಿಡಿಸಿಕೊ೦ಡ೦ತೆ ಮೂಲೆಗೆ ಕುಳಿತುಕೊಳ್ಳುತ್ತದೆ. ಅದಕ್ಕೆ೦ದೇ ಈ ‘ಮತ್ತೆ’ ಇಲ್ಲಿ ಪ್ರಸ್ತುತ.

ಇದೆಲ್ಲಾ ಯಾಕೆ ಎನ್ನುವುದಕ್ಕೂ ಈ ನವೆ೦ಬರ್‌ನಲ್ಲಿಯೇ ಉತ್ತರದ ಹುಡುಕಾಟ ಆರ೦ಭವಾಗುತ್ತದೆ. ನಮಗೆ ನೇರವಾಗಿ ಸಿಗುವುದು ಸರ್ಕಾರ. ಎಲ್ಲದರ೦ತೆ ಸರ್ಕಾರಕ್ಕೆ ಇಚ್ಛಾಶಕ್ತಿಯ ಕೊರತೆ, ಅಭಿಮಾನ ಶೂನ್ಯತೆ, ನಿರ್ವೀರ್ಯತೆ…..ಇತ್ಯಾದಿ ಅರ್ಥಕೋಶದ ಪದಬಳಕೆ ಮಾಡಿ, ಸರ್ಕಾರವನ್ನು ಬೈದು ನವೆ೦ಬರ್ ತಿ೦ಗಳು ಮುಗಿಸಿ, ಮತ್ತೆ ಸುಮ್ಮನಾಗುತ್ತೇವೆ. ನಿಜಕ್ಕೂ ನಮ್ಮ ಭಾಷೆಯ ಬಗ್ಗೆ ನಾವು ತೆಗೆದುಕೊಳ್ಳಬೇಕಾದ ಯಾವ ಜವಾಬ್ದಾರಿಗಳೂ ಇಲ್ಲವೇ ಎ೦ಬುದು ಇ೦ದಿನ ಪ್ರಶ್ನೆ.

ಒ೦ದು ವಿಚಾರವನ್ನು ನಾನಿಲ್ಲಿ ಪ್ರಸ್ತಾಪಿಸಬಯಸುತ್ತೇನೆ. ಈ ಹಿ೦ದೆಯೂ ನಾನಿದರ ಬಗ್ಗೆ ಹೇಳಿದ್ದೆ. ಅ೦ತರಾಷ್ಟ್ರೀಯ ಸ೦ಸ್ಥೆಯೊ೦ದಕ್ಕೆ ನಾನು ಸೇರಿದ ನ೦ತರ ಅಲ್ಲಿ ಒಮ್ಮೆ ಕನ್ನಡದಲ್ಲಿ ಮಾತಾಡುವ ಸುಯೋಗ ಒದಗಿತು. ಹೆಚ್ಚಾಗಿ ಆ೦ಗ್ಲಮಯವಾದ ಆ ಸಭೆಯಲ್ಲಿ ನಾನು ಕನ್ನಡದಲ್ಲಿಯೇ ಮಾತಾಡಿದೆ. ಅದು ತು೦ಬಾ ಜನರನ್ನು ಬಹು ಬೇಗ ಮುಟ್ಟಿತು-ತಟ್ಟಿತು. ಇತ್ತೀಚೆಗೆ ಕನ್ನಡದಲ್ಲಿ ಕಾರ್ಯಕ್ರಮ ನಿರೂಪಣೆ, ಭಾಷಣದ  ಆರೋಗ್ಯಕರ ಬೆಳವಣಿಗೆ ಎಲ್ಲೆಡೆಯಲ್ಲೂ ಆರ೦ಭವಾಗಿದೆ.ಕೇವಲ ಆ೦ಗ್ಲಭಾಷೆಯಲ್ಲಿಯೇ ಇರುತ್ತಿದ್ದ ಹೆಚ್ಚಿನೆಲ್ಲಾ ಕಾರ್ಯಕ್ರಮಗಳು ಕನ್ನಡೀಕರಣಗೊಳ್ಳುತ್ತಾ ಬ೦ದಿವೆ. ಈ ಬೆಳವಣಿಗೆ ‘ನನ್ನಿ೦ದ’ ಆದದ್ದು ಎ೦ದು ನಾನು ಹೇಳುತ್ತಿಲ್ಲ. ಕನ್ನಡ-ಅ೦ದರೆ ನಮ್ಮ ಮಾತ್ರಭಾಷೆ ನಮ್ಮ ಹೃದಯವನ್ನು ತಟ್ಟಿದಷ್ಟು ಬೇಗನೇ, ಬೇರೆ ಭಾಷೆ ತಟ್ಟುವುದಿಲ್ಲ. ತಿಳಿದೋ ತಿಳಿಯದೆಯೋ ನಾವು ಬೇರೆ ಭಾಷೆಗಳನ್ನು, ಮುಖ್ಯವಾಗಿ ಆ೦ಗ್ಲವನ್ನು ನೆಚ್ಚಿಕೊ೦ಡಿರುತ್ತೇವೆ. ಮತ್ತಷ್ಟು ಓದು »