ಸೈಮನ್ ಅಯೋಗಕ್ಕೆ ತೊಡೆ ತಟ್ಟಿದ ಪಂಜಾಬಿನ ಕೇಸರಿ.
– ಶಿವಾನಂದ ಶಿವಲಿಂಗ ಸೈದಾಪೂರ
ಪಂಜಾಬ್ದ ಕೇಸರಿ ಎಂದೇ ಪ್ರಸಿದ್ದರಾದ ಲಾಲಾ ಲಜಪತ್ ರಾಯರು 1865 ರ ಜನೇವರಿ 28 ರಂದು ಪಂಜಾಬ್ ನ ಮುನ್ಷಿ ರಾದಾಕೃಷ್ಣ ಆಜಾದ್ ಮತ್ತು ಗುಲಾಬ್ ದೇವಿಯರ ಮಗನಾಗಿ ಜನಿಸಿದರು. ಸ್ವತಂತ್ರ ಹೋರಾಟದ ದಿಕ್ಕನ್ನೇ ಬದಲಿಸಿದ ಒಂದೇ ಹೆಸರಿನಿಂದ ಮೂವರು ಜನ ಗುರುತಿಸಿಕೊಂಡ “ಲಾಲಬಾಲಪಾಲ್” ರಲ್ಲಿ ಇವರು ಒಬ್ಬರು.
1905 ರ ವರೆಗೂ ಕಾಂಗ್ರೇಸ್ನ ನೀತಿಯಿಂದಾಗಿ ಮಂದಗತಿಯಲ್ಲಿಯೇ ಸಾಗುತ್ತಿದ್ದ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚನ್ನು ಉದ್ದೀಪನಗೊಳಿಸಿದವರಲ್ಲಿ ಇವರು ಒಬ್ಬರು. ಪ್ರಖರ ವಾಗ್ಮಿಯಾದ ಇವರು ತಮ್ಮ ಭಾಷಣಗಳಲ್ಲಿ “ಜಗತ್ತಿನ ಇತಿಹಾಸ ರೂಪಗೊಂಡಿದ್ದೇ ರಕ್ತದಿಂದ. ನಮ್ಮ ಮಾತೃಭೂಮಿ ನಮ್ಮ ರಕ್ತವನ್ನು ಅಪೇಕ್ಷಿಸುತ್ತಾಳೆ. ರಾಷ್ಟ್ರಕ್ಕಾಗಿ ಅದನ್ನು ನೀಡಿಯೇ ಅಮರರಾಗೋಣ”. ಎಂದು ಸದಾಕಾಲ ಭಾರತೀಯ ಕ್ಷಾತ್ರ ಪರಂಪರೆಯನ್ನು ಎಚ್ಚರಗೊಳಿಸುತಿದ್ದರು. ಮಂದಗತಿಯಲ್ಲಿ ಸಾಗುತಿದ್ದ ಹೋರಾಟಕ್ಕೆ “ನಾವು ಒಂದು ಸಾಮ್ರಾಜ್ಯದ ಪ್ರಜೆಗಳು, ಭಿಕ್ಷುಕರಲ್ಲ. ಹೋರಾಟದ ಈ ಪ್ರಜ್ಞೆ ನಮ್ಮಲ್ಲಿರಬೆಕಾದದ್ದು ಅಗತ್ಯ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಪ್ರಜೆಗಳು ನಾವಾಗಿರಬೇಕು. ಒಂದು ದೃಢ ನಿಲುವನ್ನು ತಳೆದು ಅದಕ್ಕೆ ಅಂಟಿಕೋಳ್ಳಬೇಕು” ಎಂದು ಹೇಳುತಿದ್ದರು. “ಈ ಭೂಮಿಯ ಮೇಲೆ ಸೊಂಕಿರುವುದು ನಮ್ಮ ಪೂರ್ವಜರ ರಕ್ತ. ನಾವು ಅದರ ಮೇಲೆ ಬದುಕುತಿದ್ದೇವೆ. ಈ ಭೂಮಿ ನಮ್ಮದು ಇಲ್ಲವೇ ದೇವರದ್ದು” ಎಂದು ನಿರಂತರವಾಗಿ ಒತ್ತಿ ಒತ್ತಿ ಹೇಳಿದರು. ಮತ್ತಷ್ಟು ಓದು 
ಸಂಘಟನೆಯನ್ನು ನಿಷೇಧಿಸಬಹುದು.ಆದರೆ ಮನಸ್ಥಿತಿಯನ್ನು ಏನು ಮಾಡುವುದು?
– ರಾಕೇಶ್ ಶೆಟ್ಟಿ
ಸಂಘಟನೆಯನ್ನು ನಿಷೇಧಿಸಬಹುದು.ಆದರೆ,ಮನಸ್ಥಿತಿಯನ್ನು ಏನು ಮಾಡುವುದು? ಇಂತಹದ್ದೊಂದು ಪ್ರಶ್ನೆಯನ್ನು ಫೇಸ್ಬುಕ್ಕಿನಲ್ಲಿ ಗೆಳೆಯ ಸಂದೀಪ್ ಕೇಳಿದ್ದರು.ಅವರ ಪ್ರಶ್ನೆಯಿದ್ದಿದ್ದು Ban PFI ಎಂಬ ಹೋರಾಟದ ಕುರಿತು. ವಾಜಪೇಯಿಯವರ ಕಾಲದಲ್ಲಿ ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ಆಮೇಲೇನಾಯ್ತು? ರಕ್ತಬೀಜಾಸುರರಂತೆ ನಾನಾ ಹೆಸರು,ಸಂಘಟನೆಗಳನ್ನು ಮಾಡಿಕೊಂಡು ಇಸ್ಲಾಮೀಕರಣದ ತಮ್ಮ ಅಜೇಂಡಾವನ್ನು ಇವರು ಒಂದಲ್ಲ ಒಂದು ರೀತಿಯಲ್ಲಿ ಮುಂದುವರೆಸಿಕೊಂಡು ಬಂದರು.ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಹಿಡಿದು ಇತ್ತೀಚಿನ ದಿನಗಳವರೆಗೂ ದೇಶದಲ್ಲಿ ನಡೆದ ಬಾಂಬ್ ಸ್ಪೋಟದ ಆರೋಪಿಗಳು ಒಂದೋ ನಿಷೇಧಿತ ಸಿಮಿಯ ಕಾರ್ಯಕರ್ತರಾಗಿದ್ದವರು ಅಥವಾ ಹೊಸತೊಂದು ಸಂಘಟನೆಯ ಬ್ಯಾನರಿನಡಿಯಲ್ಲಿ ಸಿಮಿಯ ಕಾರ್ಯವನ್ನೇ ಮುಂದುವರೆಸಿದ್ದವರು.ಅಂದರೆ ಒಂದು ವಿಷಯ ಸ್ಪಷ್ಟವಾಗಿದೆ. ಸಂಘಟನೆ ನಿಷೇಧವಾದರೂ, ಹೆಸರು ಬದಲಾದರೂ ಅವರ “ಉದ್ದೇಶ” ಬದಲಾಗಲಿಲ್. ಏಕೆ? ಈ ಪ್ರಶ್ನೆಗೆ ಉತ್ತರ ಡಾ.ಬಿ.ಆರ್ ಅಂಬೇಡ್ಕರ್ ಅವರ “Pakistan or Partition of India” ಪುಸ್ತಕದಲ್ಲಿ ಸಿಗುತ್ತದೆ. ಆ ಪುಸ್ತಕದಲ್ಲಿ ಅಂಬೇಡ್ಕರ್ ಅವರು ಭಾರತದ ವಿಭಜನೆ ಮತ್ತು ಪಾಕಿಸ್ತಾನದ ಬಗ್ಗೆ ಮಾತ್ರ ಮಾತನಾಡಿಲ್ಲ,ಅವೆರಡರ ಜೊತೆಗೆ ಮುಖ್ಯವಾಗಿ,ಇಸ್ಲಾಮ್ ಹಾಗೂ ಭಾರತೀಯ ಮುಸ್ಲಿಂರ ಮನಸ್ಥಿತಿಯ ಬಗ್ಗೆಯೂ ವಿವರವಾಗಿ ಬರೆದಿದ್ದಾರೆ.
ಇಂತಹ ಸಂಘಟನೆಗಳ ಬಹುಮುಖ್ಯ ಉದ್ದೇಶ,ಒಂದು ದೇಶವನ್ನು ದಾರ್-ಉಲ್-ಅರ್ಬ್ ನಿಂದ ದಾರ್-ಉಲ್-ಇಸ್ಲಾಮ್ ಮಾಡುವುದೇ ಆಗಿರುತ್ತದೆ. ಏನಿದು ದಾರ್-ಉಲ್-ಅರ್ಬ್/ದಾರ್-ಉಲ್-ಇಸ್ಲಾಮ್? ಅಂಬೇಡ್ಕರ್ ಅವರ ಮಾತನ್ನೇ ಕೋಟ್ ಮಾಡುತ್ತೇನೆ. “… According to Muslim Canon Law the world is divided into two camps, Dar-ul-lslam (abode of Islam), and Dar-ul-Harb (abode of war). A country is Dar-ul-lslam when it is ruled by Muslims. A country is Dar-ul-Harb when Muslims only reside in it but are not rulers of it. That being the Canon Law of the Muslims, India cannot be the common motherland of the Hindus and the Musalmans. It can be the land of the Musalmans—but it cannot be the land of the ‘Hindus and the Musalmans living as equals…” ಅಂದರೆ, ಯಾವ ದೇಶವು ಸಂಪೂರ್ಣವಾಗಿ ಇಸ್ಲಾಮ್ ಅನ್ನು ಒಪ್ಪಿಕೊಂಡು ಮುಸ್ಲಿಮರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಇಸ್ಲಾಮ್ ಎಂದು ಕರೆಸಿಕೊಳ್ಳುತ್ತದೆ. ಯಾವ ದೇಶವು ಮುಸ್ಲಿಮೇತರರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಅರ್ಬ್ ಆಗಿರುತ್ತದೆ.
ಕೋರೆಗಾಂವ್ ಸ್ವಾಭಿಮಾನದ ವಿಜಯವಾದರೆ ಕೊಡವರದ್ದೇನು?
“ಹೊಸ ಪೇಶ್ವೆಗಳ ವಿರುದ್ಧ ನಾವು ಹೋರಾಟ ಮಾಡಲು ನಮಗೆ ಯಾವ ಚುನಾವಣಾ ರಾಜಕೀಯದಿಂದಲೂ ಸಾಧ್ಯವಿಲ್ಲ. ಅದಕ್ಕೆ ಬೀದಿ ಕಾಳಗವನ್ನೇ ಮಾಡಬೇಕು. ದಲಿತರ ಮೇಲಿನ ದೌರ್ಜನ್ಯಕ್ಕೆ ಬೀದಿ ಕಾಳಗವೊಂದೇ ಪರಿಹಾರ ”ಹಿಂದೂ ಧರ್ಮಕ್ಕೆ ಹಿಂದು ಮುಂದಿಲ್ಲವೇ..?
– ಪ್ರೊ. ಪ್ರೇಮಶೇಖರ
ಹಿಂದೂ ಧರ್ಮದ ಅಪಹಾಸ್ಯ, ಅವಹೇಳನ ಇಂದು ನಿನ್ನೆಯದಲ್ಲ. ಅದು ಆರಂಭವಾಗಿ ಶತಮಾನಗಳೇ ಕಳೆದುಹೋಗಿವೆ. ತನ್ನ ಚಿಪ್ಪಿನೊಳಗೇ ಅಡಗಿಕೊಂಡು ಹೊರಪ್ರಪಂಚಕ್ಕೆ ಬಹುತೇಕ ಅಪರಿಚವಾಗಿಯೇ ಇದ್ದ ಹಿಂದೂ ಸಮಾಜ ತನ್ನ ಅಪರಿಚಿತತೆಯಿಂದಲೇ ಮೊದಲಿಗೆ ಅರಬ್ ಮುಸ್ಲಿಮ್ ಧಾಳಿಕಾರರಲ್ಲಿ, ನಂತರ ಕ್ರಿಶ್ಚಿಯನ್ ವರ್ತಕರು ಮತ್ತು ಸೈನಿಕರಲ್ಲಿ ಅಚ್ಚರಿಯನ್ನುಂಟುಮಾಡಿತು. ಅನೇಕ ದೇವದೇವಿಯರುಳ್ಳ, ಒಂದೇ ಒಂದು ನಿರ್ದಿಷ್ಟ ಧರ್ಮಗ್ರಂಥವಿಲ್ಲದ, ಶ್ರೇಣೀಕೃತ ಜಾತಿವ್ಯವಸ್ಥೆಯ ಅನಿಷ್ಟದಲ್ಲಿ ಒಡೆದು ಹಂಚಿಹೋಗಿದ್ದ ಹಿಂದೂ ಸಮಾಜ ಏಕದೈವವನ್ನು, ಏಕಧರ್ಮಗ್ರಂಥವನ್ನೂ ಹೊಂದಿದ್ದ, ಸಮಾನತೆಯ ತಳಹದಿಯ ಮೇಲೆ ರಚಿತವಾಗಿದ್ದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಾಜಗಳಿಗೆ ಸಂಪೂರ್ಣ ವಿರುದ್ಧವಾಗಿದ್ದುದರಿಂದಾಗಿ ಆ ಧರ್ಮಗಳ ಅನುಯಾಯಿಗಳಲ್ಲಿ ಕುತೂಹಲ, ಅಪನಂಬಿಕೆಗಳನ್ನುಂಟುಮಾಡಿದ್ದು ಸಹಜವೇ ಆಗಿತ್ತು. ಆದರೆ ಈ ಭಾವನೆಗಳು ಕ್ಷಿಪ್ರಕಾಲದಲ್ಲೇ ಅವಹೇಳನದ ರೂಪ ಪಡೆದುಕೊಂಡದ್ದು ದುರ್ಭಾಗ್ಯದ ಬೆಳವಣಿಗೆ. ಅದಕ್ಕಿಂತಲೂ ದೌರ್ಭಾಗ್ಯದ ಸಂಗತಿಯೆಂದರೆ ಪರಧರ್ಮೀಯರು ಆರಂಭಿಸಿದ ಹಿಂದೂ ಅವಹೇಳನವನ್ನು ಈಗ ಸ್ವತಃ ಹಿಂದೂಗಳೇ ಮುಂದುವರೆಸಿಕೊಂಡುಹೋಗುತ್ತಿರುವುದು.ಅವರ ಈ ಕೃತ್ಯ ಆರೋಗ್ಯಕರವಾಗಿದ್ದು ಹಿಂದೂಧರ್ಮದ ಕೆಲವೊಂದು ಅನಾಚಾರಗಳನ್ನು ತೊಡೆದುಹಾಕುವಂತಿದ್ದರೆ ಅದು ಸ್ವಾಗತಾರ್ಹ ಹಾಗೂ ಶ್ಲಾಘನೀಯವಾಗಿರುತ್ತಿತ್ತು. ಆದರೆ ದುರದೃಷ್ಟವಶಾತ್ ವಾಸ್ತವ ಹಾಗಿಲ್ಲ. ಅವರ ಟೀಕೆಗಳಲ್ಲಿ ಎದ್ದುಕಾಣುತ್ತಿರುವುದು ಹೆಚ್ಚಿನಂಶ ಕಿಡಿಗೇಡಿತನ. ಅಂಥವರಿಗೆ ಚಿಂತಕರೆಂಬ ಹಣೆಪಟ್ಟಿ ದಕ್ಕುತ್ತಿರುವುದು ಸಮಕಾಲೀನ ಸಮಾಜದ ಒಂದು ವರ್ಗದ ಬೌದ್ಧಿಕ ದಾರಿದ್ರ್ಯದ ದ್ಯೋತಕ. ಇವರು ಈಗ ಎತ್ತುತ್ತಿರುವ ಪ್ರಶ್ನೆ ಹಿಂದೂಧರ್ಮದ ಅದಿಯ ಕುರಿತಾಗಿ, ಇತರ ಧರ್ಮಗಳಿಗಿರುವಂತೆ ಹಿಂದೂಧರ್ಮಕ್ಕೆ ಸ್ಥಾಪಕನೊಬ್ಬ ಇಲ್ಲ ಎನ್ನುವ ಕುರಿತಾಗಿ. ಮತ್ತಷ್ಟು ಓದು 
ಸಂವಿಧಾನ ತಿದ್ದಿದ್ದ ಇಂದಿರಾ ಅಂಬೇಡ್ಕರರಿಗಿಂತ ಶ್ರೇಷ್ಠರಾಗಿದ್ದರೇ?
ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಯಾರು ಗೊತ್ತೇ CM ಸಿದ್ದರಾಮಯ್ಯನವರೇ?
– ರಾಕೇಶ್ ಶೆಟ್ಟಿ
ಒಂದು ಸುಳ್ಳನ್ನು ಸತ್ಯವಾಗಿಸಲು ಏನು ಮಾಡಬೇಕು? ಮತ್ತೊಂದು,ಮಗದೊಂದು ಸುಳ್ಳಿನ ಸೌಧವನ್ನು ಕಟ್ಟುತ್ತಾ ಹೋಗಬೇಕು. ರಾಜ್ಯದ ತುಘಲಕ್ ದರ್ಬಾರಿನಲ್ಲಿ ನಡೆಯುತ್ತಿರೋದು ಅದೇ. ಶಾಂತವಾಗಿದ್ದ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಮೊದಲು ಕೈಹಾಕಿದ್ದು ಟಿಪ್ಪು ಯುನಿವರ್ಸಿಟಿ ನಿರ್ಮಾಣದ ಯೋಜನೆಯ ಮೂಲಕ. ತೀವ್ರ ಪ್ರತಿರೋಧ ಬಂದ ನಂತರ ಅದು ಮೂಲೆ ಸೇರಿತ್ತು. ಸುಲ್ತಾನ್ ಸಿದ್ಧರಾಮಯ್ಯನವರು ಅಧಿಕಾರಕ್ಕೆ ಬಂದ ನಂತರ, ಮತ್ತೆ ಟಿಪ್ಪುವಿನ ಘೋರಿ ತೆಗೆಯಲು ನಿರ್ಧರಿಸಿದರು.ಬದುಕಿದ್ದಾಗಲೇ ಲಕ್ಷಾಂತರ ಜನರ ಮಾರಣಹೋಮ,ಮತಾಂತರ ಮಾಡಿದವನ ಆತ್ಮ ಶತಮಾನಗಳ ನಂತರ ಹೊರ ಬಂದರೆ ಸುಮ್ಮನಿದ್ದೀತೆ? ಮಡಿಕೇರಿಯಲ್ಲಿ ಟಿಪ್ಪು ಆಧುನಿಕ ಸೈನಿಕರಿಗೆ ಕುಟ್ಟಪ್ಪ ಬಲಿಯಾದರು. ಕಳೆದ ಮೂರು ವರ್ಷಗಳಿಂದ ನವೆಂಬರ್ ತಿಂಗಳು ಹತ್ತಿರ ಬಂದರೆ, ಕರ್ನಾಟಕದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗುತ್ತಿದೆ. ಟಿಪ್ಪು ಸುಲ್ತಾನನಿಂದ ಹಿಡಿದು ಸಿದ್ಧರಾಮಯ್ಯನವರವರೆಗೂ ಈ ಭೀತಿಯ ವಾತಾವರಣ ಸೃಷ್ಟಿ ನಿಂತಿಲ್ಲ.ಸಜ್ಜನರ ಜಯಂತಿ ಮಾಡುತ್ತೇವೆಂದರೆ ಈ ನೆಲದ ಜನ ಆತನ ಜಾತಿ,ಧರ್ಮದ ಲೆಕ್ಕವಿಡದೆ ಸಂಭ್ರಮಿಸುತ್ತಾರೆ. ಸಂತ ಶಿಶುನಾಳ ಶರೀಫಜ್ಜ ನಮ್ಮ ಪಾಲಿಗೆ “ಸಂತ’ನಾಗಿಯೇ ಮುಖ್ಯವಾಗುತ್ತಾನೆಯೇ ಹೊರತು, ಷರೀಫ್ ಅನ್ನುವ ಕಾರಣಕ್ಕಲ್ಲ. ಇಂತಹ ಸೌಹಾರ್ದಕ್ಕೆ ಕೊಳ್ಳಿಯಿಟ್ಟವರು ಸಿದ್ಧರಾಮಯ್ಯನವರು. ಟಿಪ್ಪುವೆಂಬ ಮತಾಂಧನನ್ನು, ಸತ್ಯಸಂಧ,ಜನಾನುರಾಗಿ ಅಂತೆಲ್ಲ ಬಿಂಬಿಸಲು ಹೊರಟು ನಿಂತರು. ಉಂಡ ಮನೆಗೆ ದ್ರೋಹ ಬಗೆಯುವ ಬುದ್ಧಿಜೀವಿಗಳ ಸುಳ್ಳು ಇತಿಹಾಸದ ನಡುವೆ ಅವಿತುಕೊಂಡು, ಟಿಪ್ಪು ಸುಲ್ತಾನ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಎಂದು ಖುದ್ಧು ಕರ್ನಾಟಕ ಸರ್ಕಾರವೇ ನಾಚಿಕೆ ಬಿಟ್ಟು ಸುಳ್ಳು ಜಾಹಿರಾತು ನೀಡಿತು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅದನ್ನೇ ಟ್ವೀಟು ಮಾಡಿದರು.
ಹೌದೇ? ನಿಜವಾಗಿಯೂ ಟಿಪ್ಪು ಸುಲ್ತಾನ ಮೊದಲ ಸ್ವಾತಂತ್ರ್ಯ ಹೋರಾಟಗಾರನೇ? ಆತನೊಬ್ಬ ರಾಜನಲ್ಲವೇ? ರಾಜನೊಬ್ಬ ಪರಕೀಯರೊಂದಿಗೆ ಹೋರಾಡಿದ್ದನ್ನೇ ಸ್ವಾತಂತ್ರ್ಯ ಸಂಗ್ರಾಮವೆನ್ನುವುದಾದರೇ, ಈ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಂತ ಇದ್ದರೆ ಅದು ಉಳ್ಳಾಲದ ರಾಣಿ ಅಬ್ಬಕ್ಕ ಮಾತ್ರವೇ.ರಾಣಿ ಅಬ್ಬಕ್ಕ ಪೋರ್ಚುಗೀಸರೊಂದಿಗೆ ಯುದ್ಧಕ್ಕಿಳಿದಾಗ, ಟಿಪ್ಪು ಸುಲ್ತಾನ ಬಿಡಿ ಅವರಪ್ಪ ಹೈದರನೇ ಹುಟ್ಟಿರಲಿಲ್ಲ.ಟಿಪ್ಪುವನ್ನು ಹಾಡಿ ಹೊಗಳಿದರೆ ಮುಸ್ಲಿಮರ ವೋಟು ಬುಟ್ಟಿಯಲ್ಲಿ ಬಂದು ಬೀಳುತ್ತದೆ. ರಾಣಿ ಅಬ್ಬಕ್ಕ ಮತ್ತವರ ವೀರ ಮೊಗವೀರ ಪಡೆಯ ಕತೆ ಹೇಳಿದರೆ ಸಿದ್ಧರಾಮಯ್ಯನವರಿಗೇನು ಲಾಭ ಹೇಳಿ? ಹಾಗಾಗಿಯೇ ಖುದ್ದು ಮುಖ್ಯಮಂತ್ರಿ ಮತ್ತವರ ರಾಜ್ಯ ಸರ್ಕಾರ ಇತಿಹಾಸಕ್ಕೆ ಅಪಚಾರವೆಸಗಿರುವುದು.ಟಿಪ್ಪು ಸುಲ್ತಾನ, ಸುಲ್ತಾನ್ ಸಿದ್ಧರಾಮಯ್ಯನವರ ಬಗ್ಗೆ ಬರೆದು ಸಮಯ ವ್ಯರ್ಥ ಮಾಡುವ ಬದಲು, ಉಳ್ಳಾಲದ ವೀರರಾಣಿ ಅಬ್ಬಕ್ಕನ ಬಗ್ಗೆ ಹೇಳುತ್ತೇನೆ. ಆ ನಂತರ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಪಟ್ಟ ಯಾರಿಗೆ ದಕ್ಕಬೇಕೆನ್ನುವುದನ್ನು ಓದುಗರೇ ನಿರ್ಧರಿಸಲಿ…
ಸ್ವಾತಂತ್ರ್ಯದ ದೀಪ ಹಚ್ಚಿದ ಮೊದಲ ಭಾರತದ ನಾರಿಯ ನೆನೆಯುತ್ತ… ಮತ್ತಷ್ಟು ಓದು 
ಇಸ್ರೇಲಿನಲ್ಲಿ ಮೈಸೂರಿನ ಅಶ್ವಾರೂಢರ ಅಟ್ಟಹಾಸ
– ವಿಂಗ್ ಕಮಾಂಡರ್ ಸುದರ್ಶನ
sudarshanbadangod@gmail.com
1914 ರಲ್ಲಿ ಮೈಸೂರಿನ ಮಹರಾಜರಾದ ನಾಲ್ಮಡಿ ಕೃಷ್ಣರಾಜ ಒಡೆಯರ ಸೈನ್ಯದಲ್ಲಿ ಒಂದು ವಿಶೇಷ ಅಶ್ವಾರೂಢರ ದಳವಿತ್ತು. 29 ಸೈನ್ಯಾಧಿಕಾರಿಗಳ, 444 ಅಶ್ವಯೋಧರೊಂದಿಗೆ 526 ಶ್ರೇಷ್ಠ ಅರಬ್ಬೀ ಕುದುರೆಗಳ ಈ ಪಡೆಗೆ ವಿಶೇಷ ಗೌರವವಿತ್ತು. ಆಗಾಗಲೇ ಫಿರಂಗಿಗಳ, ಮಷೀನುಗನ್ನುಗಳ ಆಗಮನವಾಗಿ, ಕುದುರೆಗಳ ನಾಗಾಲೋಟದ, ಖರಪುಟದ ಶಬ್ದದ ಕಾಲ ಮುಗಿದೇ ಬಿಡ್ತೇನೋ ಎನ್ನುವ ಸಮಯವದು. ಹೈದ್ರಾಬಾದಿನ ನಿಜಾಮರ ಮತ್ತು ರಾಜಾಸ್ಥಾನದ ರಾಜರ ಸೈನ್ಯಗಳನ್ನು ಹೊರತು ಪಡಿಸಿದರೆ ಬೇರೆಲ್ಲೆಡೂ ಆಶ್ವಾರೂಢದ ದಳವೇ ಇರಲಿಲ್ಲ. ಮತ್ತಷ್ಟು ಓದು 
ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು 
ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರೇ?
ಮೂಲ ಲೇಖಕ : ಉದಯ್ ಕುಲಕರ್ಣಿ
ಅನುವಾದ : ರಾಕೇಶ್ ಶೆಟ್ಟಿ
ಹೈದರಾಲಿ,ಟಿಪ್ಪು ಸುಲ್ತಾನನಿಂದ ದೇವಾಲಯಗಳ ನಾಶದ ಬಗ್ಗೆ ಮಾತನಾಡಿದ ತಕ್ಷಣ ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರು, ಟಿಪ್ಪು ಸ್ವಾಮೀಜಿಯವರ ಸಹಾಯಕ್ಕೆ ಬಂದಿದ್ದ ಎಂದು ಕಮ್ಯುನಿಸ್ಟರು ಮುಂದೆ ನಿಲ್ಲುತ್ತಾರೆ.ಹಾಗಿದ್ದರೆ ಈ ದುರ್ಘಟನೆಯ ಸತ್ಯವೇನು? ಈ ಘಟನೆಯ ಇನ್ನೊಂದು ಮಗ್ಗುಲನ್ನು ತಿಳಿಸುವ ಇತಿಹಾಸ ತಜ್ಞ ಉದಯ್ ಕುಲಕರ್ಣಿಯವರು ಸ್ವರಾಜ್ಯ ಮ್ಯಾಗಜಿನ್ನಿನಲ್ಲಿ ಬರೆದ ಲೇಖನ ನಿಲುಮಿಗರಿಗಾಗಿ – ನಿಲುಮೆ
ಟಿಪ್ಪುವಿನ ಮತಾಂಧತೆಯನ್ನು ತಮ್ಮ ರೆಡ್ ಕಾರ್ಪೆಟಿನ ಅಡಿಯಲ್ಲಿ ತೂರಿಸುವ ಅಭ್ಯಾಸವುಳ್ಳ ಕಮ್ಯುನಿಸ್ಟ್ ಇತಿಹಾಸಕಾರರು ಆತ ಸೆಕ್ಯುಲರ್ ಆಗಿದ್ದ ಎಂದು ತೋರಿಸಲು ಪದೇ ಪದೇ ಬಳಸುವದು ಮರಾಠರ ಸೈನ್ಯ ಶೃಂಗೇರಿ ಮಠದ ಮೇಲೆ ದಾಳಿ ಮಾಡಿ ಕೊಳ್ಳೆ ಹೊಡೆದ ನಂತರ ಟಿಪ್ಪು ಅದರ ಜೀರ್ಣೋದ್ಧಾರಕ್ಕೆ ಸಹಾಯ ಮಾಡಿದ ಎನ್ನುವುದಾಗಿದೆ. ಆದರೆ ಆ ದಿನ ನಿಜವಾಗಿಯೂ ನಡೆದಿದ್ದೇನು ಎನ್ನುವುದನ್ನು ‘Solstice at Panipat’ ಪುಸ್ತಕ ಲೇಖಕರು ಮತ್ತು ಇತಿಹಾಸಕಾರರಾದ ಉದಯ್ ಕುಲಕರ್ಣಿಯವರು ಲಭ್ಯವಿರುವ ಪುರಾವೆಗಳ ಸಹಿತ ವಿವರಿಸುತ್ತಾರೆ.
“ಟಿಪ್ಪುವಿನ ನಡೆಗಳು ಸರಿಯಿಲ್ಲ. ಅಹಂಕಾರವೇ ತುಂಬಿರುವ ಆತ ಇತ್ತೀಚಿಗೆ ನೂರ್ ಮುಹಮ್ಮದನಿಗೆ ಬರೆದ ಪಾತ್ರದಲ್ಲಿ ತಾನು 50,000 ಹಿಂದುಗಳನ್ನು, ಮಹಿಳೆಯರು ಮಕ್ಕಳನ್ನು ಒಳಗೊಂಡಂತೆ ಇಸ್ಲಾಮ್ ಗೆ ಮತಾಂತರಿಸಿದ್ದೇನೆ. ಹಿಂದಿನ ಯಾವುದೇ ಪಡಿಶಾಹ್ ಅಥವಾ ವಜೀರ್ ಮಾಡಲಾಗದ್ದನ್ನು ನಾನು ಅಲ್ಲಾಹ್ ಕೃಪೆಯಿಂದ ಮಾಡಿದ್ದೇನೆ . ಹಳ್ಳಿಗೆ ಹಳ್ಳಿಯನ್ನೇ ಮತಾಂತರಿಸಿದ್ದೇನೆ ಎನ್ನುತ್ತಾನೆ” – ನಾನಾ ಫಡ್ನವಿಸ್ ಅವರು ಮಹಾಡ್ಜಿ ಸಿಂಧಿಯಾಗೇ ಬರೆದ ಪತ್ರ 5 September 1784.
ಥಾಮಸ್ ಡೇನಿಯಲ್ ಮತ್ತು ಜೇಮ್ಸ್ ವೇಲ್ಸ್ ಅವರು ಬಿಡಿಸಿರುವ ಚಿತ್ರವೊಂದು ಪುಣೆಯ ಶನಿವಾರ್ ವಾಡದಲ್ಲಿ ಗಮನ ಸೆಳೆಯುತ್ತದೆ.ಬ್ರಿಟಿಷರ ಚಾರ್ಲ್ಸ್ ಎಂ ಮಾಲೆಟ್ ಮತ್ತು ಮರಾಠರ ನಡುವಿನ ಒಪ್ಪಂದದ ಚಿತ್ರವದು. ಮಾಲೆಟ್ ವಿಶೇಷ ಆಸಕ್ತಿಯಿಂದ ಮಾಡಿಸಿದ ಈ ಚಿತ್ರವು, ಮರಾಠರು,ನಿಜಾಮರನ್ನು ಬ್ರಿಟಿಷ್ ಪಡೆಯೊಂದಿಗೆ ಸೇರಿಕೊಳ್ಳುವಂತೆ ಆತ ನಡೆಸಿದ ರಾಜತಾಂತ್ರಿಕತೆಯ ಪ್ರಾಮುಖ್ಯತೆಯನ್ನು ಹತ್ತು ವರ್ಷಗಳ ಹಿಂದೆ ಬ್ರಿಟಿಷರು ಹೊಂದಿದ್ದ ಮಿತ್ರ ಪಡೆಯನ್ನು ನೋಡುವ ಮೂಲಕ ಗಮನಿಸಬೇಕು. ಆ ಸಮಯದಲ್ಲಿ ಹೈದರಾಲಿಯ ಮರಾಠರ ಮಿತ್ರನಾಗಿದ್ದ. 1790 ರ ಸಮಯಕ್ಕಾಗಲೇ ಟಿಪ್ಪು ತನ್ನ ತಂದೆಯ ಹಳೆಯ ಮಿತ್ರಪಡೆಗಳಲ್ಲಿ ಅದೆಷ್ಟು ಆಕ್ರೋಶ ಮೂಡಿಸಿದ್ದನೆಂದರೆ ಅವರು ಬ್ರಿಟಿಷರೊಂದಿಗೆ ಕೈ ಜೋಡಿಸಿಬಿಟ್ಟಿದ್ದರು.
1790-1792ರ ನಡುವೆ ಟಿಪ್ಪುವಿನ ಮೇಲೆ ನಡೆದ ಯುದ್ಧದ ಸಮಯದಲ್ಲಿ, ಮರಾಠರ ಸೇನಾ ಮುಖ್ಯಸ್ಥ ರಘುನಾಥ ರಾವ್ ‘ದಾದಾ’ ಕುರುಂದ್ವಾಡ್ಕರ್ ಅವರ ಮೇಲ್ವಿಚಾರಣೆಯಲ್ಲಿದ್ದ ಸೇನೆಯ ತುಕಡಿಯೊಂದು ಶೃಂಗೇರಿಯ ಶಂಕರಾಚಾರ್ಯ ಮಠದ ಮೇಲೆ ದಾಳಿ ಮಾಡಿ, ಲೂಟಿಗೈದು ಹಾಳುಗೆಡವಿತ್ತು. ಇಂದಿಗೂ ಮಾಗದ ಗಾಯದಂತಿರುವ ಈ ದಾಳಿಯ ಹೊಣೆಯನ್ನು ಮರಾಠರು ಮತ್ತು ಪರಶುರಾಮ್ ಭಾವ್ ಪಟವರ್ಧನ್ ಅವರ ಮೇಲೆಯೇ ಹೊರಿಸಲಾಗಿದೆ.1791ರ ಸಮಯದಲ್ಲಿ ಮರಾಠರ ನಡುವೆ ಈ ಅನಾಹುತದ ಸುತ್ತ ನಡೆದಿರುವ ಪತ್ರ ವಿನಿಮಯಗಳ ಮೇಲೆ ಭಾಷಾ ಸಮಸ್ಯೆಯಿಂದಲೋ ಅಥವಾ ಉದ್ದೇಶಪೂರ್ವಕವಾಗಿಯೋ ಬೆಳಕು ಚೆಲ್ಲಲಾಗಿಲ್ಲ.
ಅಂಬೇಡ್ಕರ್ ಅವರ ಮತಪರಿವರ್ತನೆ ಮತ್ತು ಸಮಕಾಲಿನ ಸವಾಲುಗಳು
– ರಘು.ಎಸ್,ಸಂಶೋಧನಾ ವಿದ್ಯಾರ್ಥಿ,
ಕುವೆಂಪು ವಿಶ್ವವಿದ್ಯಾನಿಲಯ,ಜ್ಞಾನ ಸಹ್ಯಾದ್ರಿ ಶಂಕರಘಟ್ಟ.
ಕೆಲವು ದಿನಗಳ ಹಿಂದೆ ಯಾವುದೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಂಬೇಡ್ಕರ್ ಅವರ ಮೊಮ್ಮೊಗರಾದ ಪ್ರಕಾಶ್ ಯಶವಂತ್ ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ದಲಿತರೆಲ್ಲರೂ ಮತಾಂತರವಾಗಬೇಕು ಎಂದು ಕರೆ ನೀಡುತ್ತಾರೆ. ಇದು ಕೇವಲ ಅಂಬೇಡ್ಕರ್ ಮೊಮ್ಮೊಗ ಅವರ ಕರೆ ಮಾತ್ರ ಅಲ್ಲ. ಇಂದು ದಲಿತ ಸಮಸ್ಯೆಯ ಕುರಿತು ಮಾತನಾಡುವ ಬಹುತೇಕ ಚಿಂತಕರು ತಮ್ಮ ಭಾಷಣಗಳಲ್ಲಿ ಹಾಗೂ ಬರವಣಿಗೆಗಳಲ್ಲಿ ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ಕಾರಣವೇನು? ಅಥವಾ ದಲಿತರು ಏಕೆ ಹಿಂದೂಧರ್ಮವನ್ನು ಬಿಟ್ಟು ಬೇರೆ ರಿಲಿಜನ್ನುಗಳಿಗೆ ಮತಾಂತರವಾಗಬೇಕು? ಎಂದು ಕೇಳಿದರೆ ಅಂಬೇಡ್ಕರ್ ಅವರ ವಾದದ ಹೊರತಾಗಿ ಯಾವ ಹೊಸ ಅಂಶವನ್ನು ಇವರ ಉತ್ತರದಲ್ಲಿ ಗುರುತಿಸಲು ಸಾಧ್ಯವಾಗುವುದಿಲ್ಲ.
ಅಂದರೆ “ಭಾರತದಲ್ಲಿ ಹಿಂದೂಯಿಸಂನ ಅವಿಭಾಜ್ಯ ಅಂಗವಾಗಿರುವ ಜಾತಿವ್ಯವಸ್ಥೆಯು ಶ್ರೇಣಿಕರಣಗೊಂಡಿದ್ದು, ಈ ಶ್ರೇಣಿಕರಣದಲ್ಲಿ ಬ್ರಾಹ್ಮಣ ಪುರೋಹಿತಶಾಹಿಗಳು ಮೇಲ್ವರ್ಗದವರಾದರೆ ದಲಿತರು ಕೆಳವರ್ಗದವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ಸಾವಿರಾರು ವರ್ಷಗಳಿಂದಲೂ ಬ್ರಾಹ್ಮಣ ಪುರೋಹಿತಶಾಹಿಗಳು ಹಾಗೂ ದಲಿತರ ನಡುವೆ ವರ್ಗ ಸಂಘರ್ಷ ನಡೆಯುತ್ತಿದೆ. ಈ ವರ್ಗ ಸಂಘರ್ಷದಲ್ಲಿ ದಲಿತರು ಬದುಕುಳಿಯಲು ಸಾಧ್ಯವಿಲ್ಲ. ಕಾರಣ ದಲಿತರಿಗೆ ಹಣಬಲವಾಗಲಿ, ಜನಬಲವಾಗಲಿ ಅಥವಾ ಬುದ್ಧಿಬಲವಾಗಲಿ ಇಲ್ಲ. ಈ ಕಾರಣಕ್ಕೆ ದಲಿತರು ಹಿಂದೂಯಿಸಂ ಗೆ ಹೊರತಾದ ಬೇರೊಂದು ರಿಲಿಜನ್ನಿಗೆ ಮತಾಂತರವಾಗದ ಹೊರತು ಹಿಂದೂಗಳ ದಬ್ಬಾಳಿಕೆಯಿಂದ ಮುಕ್ತವಾಗಲು ಸಾಧ್ಯವಿಲ್ಲ”ಎನ್ನುವುದು ಅಂಬೇಡ್ಕರ್ ಅವರ ವಾದ. ಇಂದು ಮತಾಂತರದ ಪರವಾಗಿ ಮಾತನಾಡುವ ಚಿಂತಕರು ಕೂಡ ಅಂಬೇಡ್ಕರ್ ಅವರ ಮೇಲಿನ ವಾದವನ್ನೇ ಪುನರುಚ್ಚರಿಸುವುದು ಕಂಡುಬರುತ್ತದೆ. ಆದರೆ ಅಂಬೇಡ್ಕರ್ ಅವರ ವಾದವನ್ನು ಮುಂದೊತ್ತುತ್ತಿದ್ದೇವೆ ಎನ್ನುವ ಪ್ರಸ್ತುತ ಚಿಂತಕರು ತಮಗೆ ಅರಿವಿಲ್ಲದೇ ಅಂಬೇಡ್ಕರ್ ಅವರಿಗೆ ವಿರುದ್ಧವಾಗಿ ನಿಲ್ಲುತ್ತಾರೆ. ಪ್ರಸ್ತುತ ಲೇಖನದಲ್ಲಿ ಇದನ್ನು ಪರಿಶೀಲಿಸಲಾಗುವುದು.
ಭಾರತದಲ್ಲಿ ಹಿಂದೂಯಿಸಂ ಹಾಗೂ ಜಾತಿವ್ಯವಸ್ಥೆಯ ಕಾರಣದಿಂದಾಗಿ ದಲಿತರು ಅನೇಕ ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದಾರೆ ಎಂದು ಹೇಳುವ ಅಂಬೇಡ್ಕರ್ ಅವರು, ಹಿಂದೂಯಿಸಂ ಅನ್ನು ತೊರೆಯುವುದೇ ದಲಿತರ ಸಮಸ್ಯೆ ನಿವಾರಣೆಯಾಗಲು ಸೂಕ್ತ ಪರಿಹಾರ ಎಂದು ಹೇಳುತ್ತಾರೆ ಎನ್ನುವುದೇನೋ ನಿಜ. ಆದರೆ ಈ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ಸಾಕಷ್ಟು ಅಧ್ಯಯನವನ್ನು ನಡೆಸುರುತ್ತಾರೆ. 1935ರಲ್ಲಿ “ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯಲಾರೆ”ಎಂದು ಹೇಳುವ ಅಂಬೇಡ್ಕರ್ ಅವರು ಅಂತಿಮವಾಗಿ 1956ರಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳ ಜೊತೆ ಬೌದ್ಧ ಧರ್ಮವನ್ನು ಸ್ವೀಕರಿಸುತ್ತಾರೆ. ಬೌದ್ಧ ಧರ್ಮವನ್ನೇ ಏಕೆ ಸ್ವೀಕರಿಸಿದರು? ಬಹುಶಃ ಮತಾಂತರದ ಪರವಾಗಿ ಮಾತನಾಡುವ ಪ್ರಸ್ತುತ ಚಿಂತಕರಿಗೆ ಈ ಪ್ರಶ್ನೆ ಹೊಳೆದಿರಲಿಕ್ಕಿಲ್ಲ. ಆದರೆ ಅಂಬೇಡ್ಕರ್ ಅವರ ಬರವಣಿಗೆಗಳ ಕಡೆ ಕಣ್ಣು ಹಾಯಿಸಿದರೆ ಇದಕ್ಕೆ ಸ್ಪಷ್ಟವಾದ ಉತ್ತರ ಸಿಗುತ್ತದೆ. ಅಂದರೆ ದಲಿತರ ಸಮಸ್ಯೆಗೆ ಮತಾಂತರವೇ ಅಂತಿಮ ಪರಿಹಾರ ಎಂದು ಹೇಳುವ ಅಂಬೇಡ್ಕರ್ ಅವರು ಯಾವ ಮತಕ್ಕೆ ಹೋದರೆ ದಲಿತರ ಸಮಸ್ಯೆ ಬಗೆಹರಿಯಲು ಸಾಧ್ಯ ಎನ್ನುವುದರ ಕುರಿತೂ ಚಿಂತನೆ ನಡೆಸುತ್ತಾರೆ.





