ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

7
ನವೆಂ

ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?

– ಸಂತೋಷಕುಮಾರ ಮೆಹೆಂದಳೆ. ಕೈಗಾ 

dsc8476_tipu_sultan_m
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? )   ಮತ್ತಷ್ಟು ಓದು »

30
ಆಕ್ಟೋ

ದೀಪಾವಳಿಯ ಬೆಳಕಿಗೆ ಶಾಶ್ವತ ಕತ್ತಲೆ ತುಂಬಿದ ಸೈತಾನ

– ಸಂತೋಷ್ ತಮ್ಮಯ್ಯ

dsc8476_tipu_sultan_mಮಂಡ್ಯದಲ್ಲಿ ಅಕಸ್ಮಾತ್ತಾಗಿ ಪರಿಚಯವಾದ ಒಬ್ಬರು ತನ್ನನ್ನು ಸೂರಜ್ ರಂಗಯ್ಯನ್ ಎಂದು ಹೇಳಿಕೊಂಡರು. ಕನ್ನಡದ್ದಲ್ಲದ ಕನ್ನಡದ ಹೆಸರು. ಕನ್ನಡದಂತೆಯೇ ಕೇಳಿಸುವ ಆ ಹೆಸರಿನ ಮೂಲವನ್ನು ಹೇಳುತ್ತಾ ಹೋದಂತೆ ಅದೊಂದು ಕಥೆಯೇ ಆದೀತು. ಆ ಕಥೆ ಮತ್ತೆಲ್ಲಿಗೋ ತಿರುವನ್ನು ಪಡೆದುಕೊಳ್ಳತೊಡಗಿತು. ಆ ಕಥೆ ಇತಿಹಾಸವಾಯಿತು. ಇತಿಹಾಸ ಭೀಕರತೆಯನ್ನು ಹೇಳಿತು. ಭೀಕರತೆ ಸೂತಕವನ್ನು ಹೇಳಿತು. ಆ ಇತಿಹಾಸ ವಿಚಿತ್ರವಾಗಿತ್ತು. ಅಪರೂಪವಾಗಿತ್ತು. ನೋವಿನಿಂದ ಕೂಡಿತ್ತು. ಆ ಇತಿಹಾಸ, ಭೀಕರತೆ, ನೋವಿನ ಉಳಿಕೆಯಂತೆ ಸೂರಜ್ ರಂಗಯ್ಯನ್ ಕಂಡರು. ಸೂಕ್ಷ್ಮವಾಗಿ ನೋಡಿದರೆ ಇನ್ನೂರು ವರ್ಷಗಳ ಹಿಂದಿನ ನೋವು ಇಂದೂ ಅವರ ಮುಖದಲ್ಲಿ ಇಣುಕುತ್ತಿತ್ತು. ಇತಿಹಾಸವನ್ನು ಹೇಳುತ್ತಾ ಹೇಳುತ್ತಾ ಸೂರಜ್ “ಹಾಗಾಗಿ ನಾವು ಇಂದಿಗೂ ದೀಪಾವಳಿ ಆಚರಿಸುತ್ತಿಲ್ಲ” ಎಂದು ಮುಗಿಸಿದರು. ಸೌಜನ್ಯಕ್ಕೂ ಹಬ್ಬಕ್ಕೆ ಕರೆಯಲಾರದ ಸ್ಥಿತಿ ಅವರದ್ದು. ಅವರು ಮಂಡ್ಯದ ಸದ್ಗಹಸ್ಥರು. ಅತಿ ವಿರಳ ಸಂಖ್ಯೆಯಲ್ಲಿರುವ ಮಂಡಯಂ ಅಯ್ಯಂಗಾರರರು ಎಂಬ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಮತ್ತಷ್ಟು ಓದು »

9
ಆಕ್ಟೋ

ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )

– ಡಾ. ಮಾಧವ ಪೆರಾಜೆ

tirumala‘ದೇವಾಲಯ ಪ್ರವೇಶ’ ಎನ್ನುವ ಸಂಗತಿಯು ಈಗ ಒಂದು ಜ್ವಲಂತ ಸಮಸ್ಯೆ ಎನ್ನುವ ಹಾಗೆ ಪ್ರತಿಬಿಂಬಿತವಾಗುತ್ತಿದೆ. ಕನ್ನಡದ ಜನಪ್ರಿಯ ದಿನಪತ್ರಿಕೆಯಾದ ಪ್ರಜಾವಾಣಿಯಲ್ಲಿ ‘ದೇಗುಲ ಪ್ರವೇಶವೂ ಶುದ್ಧೀಕರಣವೂ’ ಎನ್ನುವ ಲೇಖನ (ಲೇ: ಹೊಸಕೆರೆ ನಂಜುಂಡೇಗೌಡ, ದಿ.6.10.14) ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಇದು ಅತ್ಯಂತ ಸಮಕಾಲೀನ ಸಂಗತಿಯಾಗಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಉಪನ್ಯಾಸಕ್ಕೆ ಸಂಬಂಧಿಸಿದ ಹಾಗೆ ಶೀರ್ಷಿಕೆಯ ಹಾಗಿರುವ ‘ಬಾಗಿಲನು ತೆರೆದು’ ಎನ್ನುವ ಕೀರ್ತನೆಯ ಸಾಲೊಂದು, ಈ ಉಪನ್ಯಾಸಕ್ಕೆ ಬಾಗಿಲೇ ಆಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ಆ ಕೀರ್ತನೆಯನ್ನು ಪೂರ್ಣವಾಗಿ ಇಲ್ಲಿ ಉದ್ಧರಿಸಲಾಗಿದೆ. ಮತ್ತಷ್ಟು ಓದು »

29
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೫)

– ಶ್ರೀಕಾಂತ್ ಶೆಟ್ಟಿ

ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಪ್ರೇತದ ಆತ್ಮ ಚರಿತೆ! (ಭಾಗ ೪)

14225499_1081747878587487_1441481958757222525_nಛೇ ಏನಾಗಿ ಹೋಯಿತು. ದೇಶದ ಗಡಿಗಳನ್ನು ಕಾಯ ಬೇಕಿದ್ದ ಮರಾಠಾ ಖಡ್ಗಗಳು ತಮ್ಮತಮ್ಮೊಳಗೆ ಕಣಕಣಿಸತೊಡಗಿದವು. ಹೆಣ್ಣೊಬ್ಬಳ ದುಷ್ಟತನಕ್ಕೆ ಸಾಮ್ರಾಜ್ಯದ ಸ್ಥಂಭಗಳೇ ಬುಡ ಕಳಚಿಕೊಂಡವು. ತನ್ನ ನಿಷ್ಟಾವಂತ ಸೇನಾನಿಗಳನ್ನು ಕೂಡಿಕೊಂಡು ರಘುನಾಥ ರಾವ್ ಪೇಶ್ವಾ ಪಟ್ಟವನ್ನು ಅಲಂಕರಿಸಿಯೇ ಬಿಟ್ಟ.!! ನಾರಾಯಣ ರಾವ್ ರಕ್ತದಿಂದ ತೊಯ್ದು ಹೋಗಿದ್ದ ಪೇಶ್ವಾ ಕಿರೀಟ ರಘುನಾಥ ರಾವ್ ಪೇಶ್ವಾ ತಲೆಯಲ್ಲಿ ಘಟಸರ್ಪವೊಂದು ಮಡಿಕೆ ಹಾಕಿ ಕುಳಿತಂತೆ ಕಾಣುತ್ತಿತ್ತು. ಯಾವುದೇ ಕ್ಷಣದಲ್ಲಾದರೂ ಆ ಆತ್ಮ ಪ್ರತಿಕಾರಕ್ಕಿಳಿಯದೆ ಸುಮ್ಮನಿರುವುದಿಲ್ಲ. ಅಷ್ಟು ಭೀಕರವಾಗಿ ಆ ಬಾಲಕನನ್ನು ಕತ್ತರಿಸಿ ಕೊಲ್ಲಲಾಗಿತ್ತು. ನಾರಾಯಣನ ಕಣ್ಣೀರು ರಕ್ತ ಒಂದಾಗಿ ಬೆರೆತು ರಘುನಾಥನ ಪಾದ ತೊಯ್ದರೂ ಆತ ಆ ಮುಗ್ದ ಬಾಲಕನ ಮೇಲೆ ಕರುಣೆ ತೋರಿರಲಿಲ್ಲ. ಮತ್ತಷ್ಟು ಓದು »

23
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡವು, ಮಂಗಳೂರಿನಲ್ಲಿ ( 18.09.2016 ) ರಂದು ನಡೆಸಿದ ‘ಕಾಶ್ಮೀರದ ಕುರಿತು ವಿಚಾರ ಸಂಕಿರಣ’  ಕಾರ್ಯಕ್ರಮದಲ್ಲಿ  ಚಕ್ರವರ್ತಿ ಸೂಲಿಬೆಲೆಯವರ ಮಾತುಗಳನ್ನು ರೂಪಲಕ್ಷ್ಮೀಯರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

ಚಕ್ರವರ್ತಿ ಸೂಲಿಬೆಲೆಯವರ ಭಾಷಣದ ಮುಖ್ಯಾಂಶಗಳು.

14088692_10154596775090649_5386569408904041755_nವರ್ಷಕೊಮ್ಮೆ ನಾನು ಜಮ್ಮು, ಕಾಶ್ಮೀರಕ್ಕೆ ಹೋಗೋದ್ರಿಂದ, ಅಲ್ಲಿ ನಾನು ನೋಡಿರುವ ಆಧಾರದ ಮೇಲೆ, ನನ್ನ ವಿಚಾರಗಳನ್ನು ಹೇಳ್ತೀನಿ. ಪ್ರೊಫೆಸರ್ ಪ್ರೇಮ್ ಶೇಖರ್ ಅವರು ಆಗಲೇ ಹೇಳಿದ ಪ್ರಕಾರ, ಕಾಶ್ಮೀರದಲ್ಲಿ ಮೂರು ತರಹದ ಜನಾಂಗಗಳಿವೆ. ೧. ಹಿಂದು, ೨. ಮುಸ್ಲಿಮ್ ಮತ್ತು ೩. ಬುದ್ದಿಸ್ಟ್ – ಲಡಾಕ್ ನಲ್ಲಿರುವಂತಹವರು. ಆದರೆ ಮುಸ್ಲಿಮರು ಹೇಳೋದು – ಕಾಶ್ಮೀರದಲ್ಲಿ ನಾಲ್ಕು ತರಹದ ಜನರಿದ್ದಾರೆ. ೧. ಹಿಂದೂ, ೨. ಮುಸ್ಲಿಮ್ – ಸುನ್ನಿ ಮತ್ತು ಶಿಯಾ ೩. ಲಡಾಕ್. ಪ್ರೇಮ್ ಶೇಖರ್ ಸರ್ ಹೇಳಿದ ಹಾಗೆಯೇ ಇನ್ನು ಮುಂದೆ ಕಾರ್ಗಿಲ್ ನ ಸುದ್ಧಿಗೆ ಪಾಕಿಸ್ತಾನ್ ಬರೋಲ್ಲ. ಯಾಕೆಂದರೆ ಕಾರ್ಗಿಲ್ ನಲ್ಲಿ ಹೆಚ್ಚಾಗಿರುವ ಮುಸ್ಲಿಮರು – ಶಿಯಾ ಪಂಗಡದವರು. ಪಾಕಿಸ್ತಾನದಲ್ಲಿರುವ ಮುಸ್ಲಿಮರು – ಸುನ್ನಿ ಪಂಗಡದವರು. ಕಾಶ್ಮೀರದ ಕಣಿವೆಯಲ್ಲಿರೋ ಮುಸ್ಲಿಮರು, ಪಾಕಿಸ್ತಾನದ ಮುಸ್ಲಿಮರನ್ನು ತಮ್ಮ ಮುಸಲ್ಮಾನರು ಅಂತಂದುಕೊಳ್ತಾರೆ. ಆದರೆ ಕಾರ್ಗಿಲ್ ನ ಶಿಯಾದವರಿಗೆ ಚೆನ್ನಾಗಿ ಗೊತ್ತು. ತಾವೇನಾದರೂ ಪಾಕಿಸ್ತಾನಕ್ಕೆ ಹೋದರೆ, ಇದುವರೆವಿಗೂ ಕಣಿವೆಯಲ್ಲಾದ ಅತ್ಯಾಚಾರಗಳು, ದೌರ್ಜನ್ಯಗಳನ್ನು, ಈ ಪಾಕಿಸ್ತಾನದ ಸುನ್ನಿಗಳು ತಮ್ಮ ಮೇಲೆಯೇ ನಡೆಸುತ್ತಾರೆ. ಆ ಭಯದಿಂದ ಕಾರ್ಗಿಲ್ ನ ಮುಸ್ಲಿಮರು, ಏನೇ ಆದರೂ ನಾವು ಭಾರತದಲ್ಲೇ ಇರ್ತೀವಿ. ಪಾಕಿಸ್ತಾನಕ್ಕೆ ಸೇರೋಲ್ಲ ಅಂತಾ ಹೇಳ್ತಾರೆ. ಮತ್ತಷ್ಟು ಓದು »

21
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೪)

– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)

14117697_1080861882009420_308061420913968049_nಆಗಷ್ಟ್ ೩೦ ೧೭೭೩ ಇಡಿ ಪುಣೆ ಗಣೇಶ ಉತ್ಸವದ ಸಂಭ್ರಮದಲ್ಲಿ ಮುಳುಗೇಳುತ್ತಿದೆ. ಕೇಸರಿ ಗುಲಾಬಿ ರಂಗಿನೋಕುಳಿಗೆ ನಗರ ನವಶೃಂಗಾರಗೊಂಡಿದೆ. ಶನಿವಾರವಾಡೆಯಲ್ಲೂ ಉತ್ಸವ ಕಳೆಗಟ್ಟಿತ್ತು. ಹಾಡು, ಕುಣಿತ, ಕೀರ್ತನೆ,ಆರತಿ, ಸಂತರ್ಪಣೆ ಭರ್ಜರಿಯಾಗಿ ನಡೆದಿತ್ತು. ಪೇಶ್ವಾಗಳ ಆರಾಧ್ಯಮೂರ್ತಿ ಚಿಂತಾಮಣಿ ಗಣಪತಿಯ ಪೂಜೆ ಆಗ‍ಷ್ಟೆ ಮುಗಿದು ಎಲ್ಲರೂ ವರ್ಷಕ್ಕಾಗುವಷ್ಟು ಸಂಭ್ರಮವನ್ನು ಮನದಲ್ಲಿ ತುಂಬಿಕೊಂಡು ಮರಳಿದರು. ವಾಡೆಯಲ್ಲಿ ಕಾವಲು ಭಟರು ಮತ್ತು ಪರಿಚಾರಕ ವರ್ಗವನ್ನು ಬಿಟ್ಟು ಉಳಿದವರೆಲ್ಲರೂ ತಮ್ಮ ತಮ್ಮ ಸ್ವಸ್ಥಾನ ಸೇರಿಕೊಂಡಿದ್ದರು. ಮಹಾ ದುರಂತವೊಂದು ನಡೆಯುವ ಮೊದಲು ಆವರಿಸುವ ಅಸಾದ್ಯ ನೀರವತೆ ವಾಡೆಯನ್ನು ಆವರಿಸಿಕೊಂಡಿತ್ತು. ರಂಗ ಮಹಲ್ ಕಡೆಯಿಂದ ಐದಾರು ದೀವಟಿಕೆಗಳು ಒಳಪ್ರವೇಶಿಸಿದವು. ಖಿಡ್ಕಿ ದರವಾಜಾ ಬಳಿ ಎರಡು ಬಟ್ಟೆ ಸುತ್ತಿದ ಮುಖಗಳು ಗೋಚರಿಸಿದವು. ಕ್ಷಣಮಾತ್ರದಲ್ಲೇ ಶನಿವಾರವಾಡೆಯ ಹಜಾರಗಳಲ್ಲಿ ಹತ್ತಾರು ಗುಂಪುಗಳ ಹೆಜ್ಜೆಯ ಸಪ್ಪಳ ಮೊಳಗಿತು. ವಾಡೆಯ ಮುಖ್ಯದ್ವಾರದ ಬಳಿ ಐವತ್ತು ಜನರಿದ್ದ ಸೇನಾ ತುಕುಡಿಯೊಂದು ಬಂದು ನಿಂತಿತು. ಗುಂಪಿನ ನಾಯಕ ಸುಮೇರು ಸಿಂಗ್ ಕಾವಲುಗಾರನ ಬಳಿ ಬಂದು ಕೂಡಲೆ ಪೇಶ್ವಾ ಅವರನ್ನು ಕಾಣಬೇಕು ತುರ್ತು ಕೆಲಸವಿದೆ ಎಂದ. ಈಗ ಪೇಶ್ವಾ ಅವರು ನಿದ್ದೆಯಲ್ಲಿದ್ದಾರೆ. ನಾಳೆ ಬಂದು ಭೇಟಿಯಾಗಿ ಎಂದ ಮುಖ್ಯದ್ವಾರದ ರಕ್ಷಣೆಯಲ್ಲಿದ್ದ ಮಹಾದಜಿ ಗೋರೆ… ಮಾತು ಪೂರ್ಣಗೊಳ್ಳುವ ಮೊದಲೇ ಸುಮೇರು ಸಿಂಗ್ ಓರೆಯಿಂದ ಕತ್ತಿ ಹೊರಬಂದು ಗೋರೆಯ ಹೊಟ್ಟೆ ಸೀಳಿ ಹಾಕಿತು. ತುಕುಡಿಯನ್ನು ಒಳನುಗ್ಗುವಂತೆ ಸುಮೇರ್ ಆದೇಶಿಸಿದ ಕೇವಲ ಹತ್ತು ನಿಮಿಷದಲ್ಲೇ ವಾಡೆ ಸುಮೇರು ಸಿಂಗ್ ಕೈವಶವಾಯಿತು. ಆ ವಾಡೆಯ ಕೆಳ ಅಂತಸ್ತಿನಲ್ಲೇ ರಘುನಾಥ ರಾವ್, ಆನಂದಿ ಬಾಯಿ ವಾಸವಾಗಿದ್ದರು. ಸುಮೇರು ಸಿಂಗ್ ಹಿಂಬಾಲಕರು ವಾಡೆಯ ಕಾವಲಿಗಿದ್ದವರನ್ನು ತರಿದು ಹಾಕಿದರು. ಘನಘೊರ ರಕ್ತಪಾತ ನಡೆಯಿತು. ಕೆಲವೇ ಗಂಟೆಗಳ ಮೊದಲು ಚೌತಿಯ ಸಡಗರದಲ್ಲಿ ಗಿಜಿಗುಟ್ಟುತ್ತಿದ್ದ ಶನಿವಾರವಾಡೆ ಈಗ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿತ್ತು. ವಾಡೆಯ ಮೊದಲ ಅಂತಸ್ತಿನ ತೇಗದ ಮುಚ್ಚಿಗೆಗಳಿಂದ ರಕ್ತ ಒಸರ ತೊಡಗಿತು. ಸುಮೇರು ಸಿಂಗ್ ನಾರಾಯಣ ಪೇಶ್ವಾ ಮಲಗಿದ್ದ ಕೋಣೆಗೆ ನುಗ್ಗಿದ. ವಾಡೆಯಲ್ಲಿ ಆಹಾಕಾರ ಚೀತ್ಕಾರಗಳು ಎದ್ದಿರುವುದನ್ನು ಕಂಡು ನಾರಾಯಣನಿಗೆ ಪರಿಸ್ಥಿತಿಯ ಅರಿವಾಯಿತು. ಮತ್ತಷ್ಟು ಓದು »

19
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ 3)

– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
14095896_1079496802145928_6391696631532931089_nಶನಿವಾರವಾಡೆಗೆ ಶನಿ ಎಡಗಾಲಿಟ್ಟು ವಕ್ಕರಿಸಿದ್ದ. ರಘುನಾಥನನ್ನು ಗೃಹಬಂಧನದಲ್ಲಿ ಇಢಲಾಗಿದ್ದರೂ, ಆತನ ದುಷ್ಟಕೂಟ ಮಾತ್ರ ಸುಮ್ಮನೆ ಕೂತಿರಲಿಲ್ಲ. ಅದು ಒಂದಲ್ಲಾ ಒಂದು ಸಂಚನ್ನು ಹೆಣೆಯುತ್ತಲೇ ಇತ್ತು. ರಘುನಾಥನ ಬಂಧನವಾದ ಕೆಲವೇ ದಿನದಲ್ಲಿ ಪೇಶ್ವಾ ಮಾಧವ ರಾವ್ ಮೇಲೆ ಮಾರಣಾಂತಿಕ ದಾಳಿ ನಡೆಯಿತು. ಮಾಧವ ರಾವ್ ಬೆಂಗಾವಲಿಗನಾಗಿದ್ದ ರಾಮಸಿಂಗ್ ಎಂಬಾತ ಮಾಧವ್ ರಾವ್ ಮೇಲೆ ಅನಿರೀಕ್ಷಿತವಾಗಿ ತಲವಾರು ಝಳಪಿಸಿದ. ಕುತ್ತಿಗೆಗೆ ಬೀಳಬೇಕಿದ್ದ ಪೆಟ್ಟು ತೋಳಿಗೆ ಬಿತ್ತು ಬದುಕಿಕೊಂಡ, ಇದರ ಹಿಂದೆ ರಘುನಾಥ ರಾವ್ ಕೈವಾಡ ಇತ್ತು ಎಂದು ಬಳಿಕ ತಿಳಿದು ಬಂತು. ಹೈದರ್ ಆಲಿಯ ವಿರುದ್ಧ ಮೂರನೇ ಯುದ್ಧಕ್ಕೆ ಮಾಧವ್ ರಾವ್ ಪೇಶ್ವಾ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಪೇಶ್ವಾ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಭಯಾನಕ ಟಿಬಿ ಖಾಯಿಲೆ ಪೇಶ್ವಾನಿಗೆ ತಟ್ಟಿತ್ತು. ಅಂದಿನ ಕಾಲಕ್ಕೆ ಅದು ಬ್ರಿಟಿಷರು ತಂದು ಬಿಟ್ಟಿದ್ದ ಹೊಸ ಖಾಯಿಲೆಯಾದ ಕಾರಣ ಇಲ್ಲಿ ಟಿಬಿಗೆ ಸರಿಯಾದ ಚಿಕಿತ್ಸೆ ಇರಲಿಲ್ಲ. ಥೇವೂರು ಚಂತಾಮಣಿ ದೇವಾಲಯದಲ್ಲಿ ಪೇಶ್ವಾ ಮಾಧವ ರಾವ ಕೊನೆಯುಸಿರೆಳೆದ. ಅಲ್ಲೇ ಆತನ ಅಂತ್ಯಸಂಸ್ಕಾರ ನಡೆಸಲಾಯಿತು. ಆತನ ಪ್ರಿಯ ಪತ್ನಿ ರಾಮಾಬಾಯಿ ಗಂಡನ ಚಿತೆಗೆ ಹಾರಿ ಪ್ರಾಣ ಬಿಟ್ಟಳು. ಮಾಧವ ರಾವ್, ಶನಿವಾರವಾಡೆಯ ಪೇಶ್ವಾ ಗದ್ದುಗೆ ಅಲಂಕರಿಸಿದ ಕೊನೆಯ ಸಮರ್ಥ ಪೇಶ್ವಾ. ಈತ ಹಲವಾರು ಸಮರ್ಥ ಸೇನಾನಿಗಳನ್ನು ಗುರುತಿಸಿ ಅವರಿಗೆ ಬೇರೆ ಬೇರೆ ವಲಯಗಳ ಅಧಿಕಾರ ನೀಡಿದ. ಇಂದು ನಾವು ರಾಜಸ್ಥಾನದಲ್ಲಿ ಕಾಣುತ್ತಿರುವ ಸಿಂಧ್ಯಾ ಮನೆತನದ ಮೂಲ ಪುರುಷ ಮಹಾದ್ ಜಿ ಸಿಂಧ್ಯಾನನ್ನು ಬೆಳೆಸಿದ್ದು ಮಾಧವರಾವ್ ಪೇಶ್ವಾ. ಕೊಲ್ಹಾಪುರದ ಭೋಸ್ಲೆಗಳು, ಬರೋಡಾದ ಗಾಯಕ್ವಾಡರು, ಉತ್ತರಭಾರತದಲ್ಲಿ ಹೋಳ್ಕರ್‌ಗಳು ಇವರೆಲ್ಲಾ ಮಾಧವರಾವ್ ಪೇಶ್ವಾನ ಗರಡಿಯಲ್ಲೇ ಪಳಗಿ ಪುಣೆಗೆ ನಿಷ್ಟರಾಗಿ ಆಡಳಿತ ನಡೆಸಿದರು. ಮಾಧವರಾವ್ ಪೇಶ್ವೆ ತೀರಿಕೊಳ್ಳುತ್ತಿದ್ದಂತೆ ಈ ರಾಜ್ಯಗಳ ಹಿಡಿತ ಪುಣೆಯಿಂದ ಕೈ ತಪ್ಪಿತು. ಎಲ್ಲರೂ ಸ್ವತಂತ್ರರಾಗಿ ಆಳ್ವಿಕೆ ಮಾಡಲು ಆರಂಭಿಸಿದರು. ಮಾಧವ ರಾವ್ ಬಳಿಕ ಪುಣೆಯಲ್ಲಿ ನಾಲಾಯಕ್ಕುಗಳ ಸರದಿ ಆರಂಭ ವಾಯಿತು. ಪೇಶ್ವಾಯಿಯ ರಕ್ತ ಎಲ್ಲಿ ಕಳಪೆಯಾಯಿತೋ ಗೊತ್ತಿಲ್ಲ, ಒಬ್ಬರಿಗಿಂತ ಒಬ್ಬರು ಅಯೋಗ್ಯರೇ ಬರಲಾರಂಭಿಸಿದರು. ಶನಿವಾರ ವಾಡೆಯನ್ನು ಇಂದಿಗೂ ಕಾಡುತ್ತಿರುವ ಪ್ರೇತದ ಕತೆ ಇಲ್ಲಿ ಆರಂಭವಾಗುತ್ತದೆ. ಮತ್ತಷ್ಟು ಓದು »

16
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 30:
ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ:
– ರಾಮಚಂದ್ರ ಹೆಗಡೆ

bhogeswwani-fukanani-catch-live-bhogeswwari-fukananiರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಬಲಿದಾನಗೈದ ಅಸ್ಸಾಮಿನ ವೀರವನಿತೆಯರು ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಭೂಪಟ, ವಂದೇಮಾತರಂ ಎಲ್ಲವೂ ದೇಶಾಭಿಮಾನದ ಅಭಿವ್ಯಕ್ತಿಯ ಸಂಕೇತಗಳಾದರೂ ಅವು ನಮ್ಮಲ್ಲಿ ಸೃಷ್ಟಿಸುವ ಭಾವ ವರ್ಣನಾತೀತ. ಸೈನಿಕನೊಬ್ಬ ಯುದ್ಧ ಗೆದ್ದಾಗ, ಕ್ರೀಡಾಳುವೊಬ್ಬ ಆಟದಲ್ಲಿ ಗೆದ್ದಾಗ ತ್ರಿವರ್ಣ ಧ್ವಜ ಹಿಡಿದು ಕುಣಿದು ಕುಪ್ಪಳಿಸುವುದು ಕಾಣುತ್ತೇವೆ. ಯುದ್ಧಕ್ಕೆ ಹೋರಾಟ ಯೋಧನೊಬ್ಬ ಗೆದ್ದರೆ ಧ್ವಜ ಹಿಡಿದು ಬರುವೆ, ಸತ್ತರೆ ತ್ರಿವರ್ಣಧ್ವಜವನ್ನು ಸುತ್ತಿಕೊಂಡು ಬರುವೆ ಎಂದು ಹೇಳಿದ್ದು ಈ ಎಲ್ಲ ಸಂಕೇತಗಳ ಕುರಿತು ನಮಗಿರುವ ಹೆಮ್ಮೆ ಅಭಿಮಾನದ ಪ್ರತೀಕ. ರಾಷ್ಟ್ರಧ್ವಜವೆಂದರೆ ಕೇವಲ ಅದು ಬಟ್ಟೆಯಲ್ಲ. ಅದು ನಮ್ಮ ಹೆಮ್ಮೆ, ದೇಶದ ಕುರಿತ ಪ್ರೀತಿಯ ಸಂಕೇತ, ಅದು ನಮ್ಮ ಆತ್ಮಾಭಿಮಾನದ ಸಂಕೇತ. ರಾಷ್ಟ್ರಧ್ವಜದ ಪೂಜ್ಯತೆ ಹಾಗೂ ಗೌರವದ ರಕ್ಷಣೆಗಾಗಿ ೧೭ ರ ತರುಣಿ ಕನಕಲತಾರಿಂದ ಹಿಡಿದು ೭೩ ರ ವೃದ್ಧೆ ಮಾತಂಗಿನಿ ಹಜ್ರಾರವರೆಗೆ ಸ್ವಾತಂತ್ರ್ಯ ಸಮರದ ಉದ್ದಕ್ಕೂ ಸಾವಿರಾರು ಮಂದಿ ಬಲಿದಾನ ಮಾಡಿದ್ದಾರೆ. ಮತ್ತಷ್ಟು ಓದು »

16
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೨)

– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
14141908_1078958802199728_8622841239691589630_nಅದು ಮನುಕುಲ ಕಂಡ ಪರಮ ಪಾಪಿಗಳಲ್ಲೊಬ್ಬ ಔರಂಗಜೇಬ ದಿಲ್ಲಿಯ ಗದ್ದುಗೆಯಲ್ಲಿದ್ದ ಸಮಯ. ಪ್ರಜೆಗಳನ್ನು ಪರಿಪಾಲನೆ ಮಾಡಬೇಕಾದ ದೊರೆಯೇ ಜಿಸಿಯಾ ತಲೆಗಂದಾಯ ಹೇರಿ ಒಂದು ನಿರ್ದಿಷ್ಟ ಸಮಾಜದ ಸರ್ವನಾಶಕ್ಕೆ ಪಣತೊಟ್ಟು ಸಾವಿರಾರು ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದ ಕಂಟಕಕಾಲ.. ಆ ಹೊತ್ತಿನಲ್ಲಿ ಸ್ವಾಭಿಮಾನಿ ಹಿಂದೂಗಳ ಪಾಲಿಗೆ ಆಪತ್ಭಾಂದವರಾಗಿ ಶಿವಾಜಿ ಮಹಾರಾಜರು ಉದಿಸಿದರು. ಸಹ್ಯಾದ್ರಿಯ ಸಿಂಹದ ಗುಡುಗಿಗೆ ದಿಲ್ಲಿಯ ಮೊಘಲರ ಮಯೂರ ಸಿಂಹಾಸನ ತಣ್ಣಗೆ ಕಂಪಿಸಿದ್ದಂತೂ ಸತ್ಯ. ಪ್ರವಾಹಕ್ಕೆ ವಿರುದ್ಧವಾಗಿ ಈಜಿ ತನ್ನ ಸದ್ಗುಣಗಳಿಂದ ಪ್ರಜೆಗಳ ಹೃದಯವನ್ನೂ… ಖಡ್ಗಪರಾಕ್ರಮದಿಂದ ಯವನರ ಸೈನ್ಯವನ್ನೂ ಗೆದ್ದ ಶಿವಾಜಿ, ಹಿಂದವೀ ಸ್ವಾರಾಜ್ಯವನ್ನು ಕಟ್ಟಿದರು. ಅಖಂಡ ಹಿಂದೂ ಸಾಮ್ರಾಜ್ಯಕ್ಕೆ ಬೀಜಾರೋಹಣ ಮಾಡಿದವರು ಶಿವಾಜಿ ಮಹಾರಾಜರಾದರೂ, ಅವರ ಕನಸನ್ನು ನನಸು ಮಾಡಿದವರು ಮಾತ್ರ ಪುಣೆಯ ಪೇಶ್ವಾಗಳು. ಮತ್ತಷ್ಟು ಓದು »

15
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 29:
ವಾಂಚಿನಾಥನ್ ಅಯ್ಯರ್
– ರಾಮಚಂದ್ರ ಹೆಗಡೆ

download-1ತಮಿಳುನಾಡಿನ ರಾಷ್ಟ್ರಭಕ್ತ ಕ್ರಾಂತಿಕಾರಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು ಪ್ರಾಣಾರ್ಪಣೆ ಮಾಡಿದ ಹುತಾತ್ಮ ವಾಂಚಿನಾಥನ್ ಅಯ್ಯರ್. ಜನರಿಂದ ‘ವಂಚಿ’ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಈ ೨೫ ರ ದೇಶಭಕ್ತ ತರುಣ ತಿರುನಲ್ವೇಲಿಯ ಕಲೆಕ್ಟರ್ ರಾಬರ್ಟ್ ಆಶ್ ನನ್ನು ಹಾಡಹಗಲೇ ಗುಂಡಿಕ್ಕಿ ತಾನೂ ಆತ್ಮಾರ್ಪಣೆ ಮಾಡಿದ. ತಿರುನಲ್ವೇಲಿ ಜಿಲ್ಲೆಯ ಸೆಂಗೊತ್ತೈ ಎಂಬ ಊರಿನಲ್ಲಿ ಜನಿಸಿದ ವಾಂಚಿನಾಥನ್ ಪ್ರಾಥಮಿಕ ಶಿಕ್ಷಣವನ್ನು ತನ್ನೂರಿನಲ್ಲೇ ಮುಗಿಸಿ, ಎಂ.ಎ ಪದವಿಯನ್ನು ತಿರುವನಂತಪುರದ ಕಾಲೇಜಿನಲ್ಲಿ ಪಡೆದಿದ್ದ. ಕಾಲೇಜಿನಲ್ಲಿ ಓದುವಾಗಲೇ ಮದುವೆಯೂ ಆಗಿತ್ತು. ಸರ್ಕಾರಿ ಹುದ್ದೆಯಲ್ಲಿ ನೌಕರಿ ಮಾಡುತ್ತಿದ್ದ. ಅದೇ ಹೊತ್ತಿಗೆ ತಮಿಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಜೋರಾಗಿತ್ತು. ಸ್ವದೇಶೀ ನೇವಿಗೇಷನ್ ಕಂಪನಿ ಹುಟ್ಟುಹಾಕಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರಾಷ್ಟ್ರಭಕ್ತ ಚಿದಂಬರಂ ಪಿಳ್ಳೈ ಹಾಗೂ ‘ಭಾರತಮಾತಾ ಅಸೋಸಿಯೇಷನ್’ ಕಟ್ಟಿ ಕ್ರಾಂತಿಕಾರಿಗಳನ್ನು ತಯಾರು ಮಾಡುತ್ತಿದ್ದ ನೀಲಕಂಠ ಬ್ರಹ್ಮಚಾರಿ ಅವರ ಹೋರಾಟಗಳಿಂದ ವಾಂಚಿ ಸ್ವಾತಂತ್ರ್ಯ ಸಮರದೆಡೆಗೆ ಆಕರ್ಷಿತನಾದ. ದಕ್ಷಿಣ ಭಾರತದ ಕೆಲವೇ ಕೆಲವು ಕ್ರಾಂತಿಕಾರಿ ಸಂಘಟನೆಗಳಲ್ಲಿ ಒಂದಾದ, ನೀಲಕಂಠನಿಂದ ಬ್ರಹ್ಮಚಾರಿಯವರ ‘ಭಾರತಮಾತಾ ಅಸೋಸಿಯೇಷನ್’ ಸಶಸ್ತ್ರ ಕ್ರಾಂತಿಗಾಗಿ ಯುವಕರನ್ನು ತರಬೇತಿಗೊಳಿಸುತ್ತಿತ್ತು. ಮತ್ತಷ್ಟು ಓದು »