ಟೆಕ್ಕಿಗಳಿಂದ ಕನ್ನಡ ಹಾಸ್ಯ ನಾಟಕೋತ್ಸವ
ಪವನ್ ಪಾರುಪತ್ತೇದಾರ
ಪ್ರತಿದಿನ C++, Java,.net ಸರ್ವರ್ರುಗಳ ಮಧ್ಯೆ ಇರುವ ಸಾಫ್ಟ್ವೇರ್ ಇಂಜಿನಿಯರುಗಳ ತಂಡವೇ ರಂಗತಂತ್ರ. 2008ರಲ್ಲಿ ಸ್ಥಾಪಿತವಾದ ಈ ತಂಡ, ಹವ್ಯಾಸಿ ನಾಟಕಕಾರರನ್ನು ಹೊಂದಿದ್ದು, ಇಲ್ಲಿಯವರೆಗೂ 8 ಪ್ರದರ್ಶನಗಳನ್ನು ನೀಡಿದೆ. ಈ ಹವ್ಯಾಸಿ ಟೆಕ್ಕಿ ಕಲಾವಿದರು ತಮ್ಮ ಕಚೇರಿಯ ಬಿಡುವಿಲ್ಲದ ಸಮಯದ ಮಧ್ಯೆ, ತಮ್ಮ ವೀಕೆಂಡುಗಳನ್ನೆಲ್ಲ ಬದಿಗಿಟ್ಟು, ಬಹಳಷ್ಟು ಕಷ್ಟ ಪಟ್ಟು ಅಭ್ಯಾಸ ಮಾಡಿ, ಅಕ್ಟೋಬರ್ ತಿಂಗಳಲ್ಲಿ ನಿಮ್ಮ ಮುಂದೆ ಹಾಸ್ಯ ನಾಟಕೋತ್ಸವ ನಡೆಸಲು ಸಜ್ಜಾಗಿದ್ದಾರೆ.
ತಂಡದ ಮೇಷ್ಟ್ರು ಮಹದೇವ್ ಪ್ರಸಾದ್ ಯುವಪಡೆಯೊಂದನ್ನು ಸಜ್ಜು ಮಾಡಿಕೊಂಡಿದ್ದು, ನಾಟಕ ಪ್ರಿಯರಿಗೆ ನಗೆಯ ಹಬ್ಬದೂಟ ಬಡಿಸಲು ತಯಾರಿ ನಡೆಸುತಿದ್ದಾರೆ. ಲಾಕ್ ಔಟ್ ಅಲ್ಲ ನಾಕೌಟ್, ಶ್ರೀ ಕೃಷ್ಣ ಸಂಧಾನ ಮತ್ತು ಬಂಡ್ವಾಳವಿಲ್ಲದ ಬಡಾಯಿಯಂತಹ ಪ್ರಸಿದ್ಧ ಹಾಸ್ಯ ನಾಟಕಗಳನ್ನು ನಿಮ್ಮ ಮುಂದಿಡಲು ಕಾತುರದಿಂದ ಕಾಯುತಿದ್ದಾರೆ. ನಾಟಕ ಪ್ರಿಯರೆಲ್ಲ ಬಂದು ಸಾಫ್ಟ್ ವೇರ್ ಟೆಕ್ಕಿಗಳ ಪ್ರಯತ್ನವನ್ನು ಪ್ರೋತ್ಸಾಹಿಸಿ ಹರಸಬೇಕಾಗಿ ವಿನಂತಿ.
ನಾಟಕ ಪ್ರದರ್ಶನ ನಡೆಯುವ ದಿನಾಂಕಗಳು ಕೆಳಗಿನಂತಿವೆ.
ಅಕ್ಟೋಬರ್ 12 – ಶ್ರೀ ಕೃಷ್ಣ ಸಂಧಾನ
ಅಕ್ಟೋಬರ್ 13 – ಬಂಡ್ವಾಳವಿಲ್ಲದ ಬಡಾಯಿ
ಶ್ರೀ ಕೃಷ್ಣ ಸಂಧಾನ : ರಚನೆ : ವಿ ಎನ್ ಅಶ್ವಥ್
ವಿದ್ಯೆ ಇಲ್ಲದ ಹಳ್ಳಿ ಜನ ನಾಟಕ ಮಾಡಲು ಹೊರಟಾಗ ಎದುರಾಗುವ ಛಾಲೆಂಜುಗಳೇನು, ಅ ಹಳ್ಳಿ ಜನಕ್ಕೆ ನಾಟಕ ಹೇಳಿಕೊಡಲು ಬರುವ ಮೇಷ್ಟ್ರಿಗೆ ಅದರ ಅರಿವಿರೋದಿಲ್ಲ. ಬಂದು ಇವ್ರಿಗೆ ನಾಟಕ ಹೇಳಿಕೊಡಕ್ಕೆ ಶುರು ಮಾಡಿ ಗೆಜ್ಜೆಗ್ ಪೂಜೆ ಮಾಡ್ಸೋ ಅಷ್ಟ್ರಲ್ಲಿ ಮೇಷ್ಟ್ರು ಗೋಳು ಕೇಳಕ್ಕಾಗಲ್ಲ. ಅಂತಹ ಮೇಷ್ಟ್ರು ಮತ್ತೆ ಶಿಶ್ಯಂದಿರ ನಡುವೆ ನಡೆವ ನಗೆ ನಾಟಕ ಕೃಷ್ಣ ಸಂಧಾನ. ಈ ನಾಟಕ ಈಗಾಗ್ಲೆ ಕನ್ನಡದ ನಾಟಕ ಪ್ರಿಯರಿಗೆಲ್ಲ ಚಿರಪರಿಚಿತ. ಆದಕ್ಕೆ ಕಾರಣ ನಾಟಕದ ಪ್ರತಿಯೊಂದು ಸಾಲಿನಲ್ಲು ಇರುವ ನಗೆಮಿಠಾಯಿ ಅಂದ್ರೆ ತಪ್ಪಾಲ್ಲ ಬಿಡಿ. ನಾಟಕದ ಪ್ರತಿಯೊಂದು ಲೈನ್ ಸಹ ಪಂಚ್ ಲೈನ್. ನೀವೆಷ್ಟು ಬಾರಿ ನೋಡಿದರೂ ಬೇಜಾರಾಗದ ನಾಟಕ ಇದು. ಇಂತಹ ನಗೆಯ ರಸಾಯನ ಸಹ ರಂಗತಂತ್ರದ ಹಾಸ್ಯೋತ್ಸವದ ಕೊಡುಗೆ.
ಚಂದ್ರಮನ ಚಂದ್ರಿಕೆ
– ರಂಜಿತಾ ಅಂಜು
ಅದು ಸುಂದರದ ಆ ಕ್ಷಣ , ಸೂರ್ಯನು ತನ್ನ ಕೋಪವನ್ನು ಇಂಗಿಸುತ್ತಾ , ನೆಮ್ಮದಿಯ ನಿಟ್ಟಿಸಿರು ಬಿಡುತ್ತಾ , ವನ್ಯ ಸಂಕುಲಗಳ ಮೇಲೆ ಪ್ರೀತಿ ತೋರುತ್ತಾ , ಆಗಸದಲ್ಲಿ ಮರೆಯಾಗುತಿದ್ದನು. ಹಕ್ಕಿಗಳು ಚಿಲಿಪಿಲಿ ಸದ್ದಿನೊಂದಿಗೆ , ತಮ್ಮ ಜೊತೆಗಾರರನ್ನು ಸೇರಲು ಗುಂಪಿನೊಂದಿಗೆ ತಮ್ಮ ತಮ್ಮ ಗೂಡನ್ನು ತಾವು ಸೇರಿಕೊಳ್ಳುತ್ತಿದ್ದವು…. ತಂಪನೆಯ ತಂಗಾಳಿ ಇಡೀ ಪ್ರಕೃತಿಗೆ ಉಲ್ಲಾಸದ ಅನುಭವ ನೀಡುತಲಿತ್ತು…
ಆ ರವಿಯ ಶಾಂತತೆಗೆ ಆಗಸವು ನಾಚಿ ತನ್ನ ಹೊಂಬೆಳಕಿನ ಮುಡಿಯಲ್ಲಿ ಕೆಂಪನೆಯ ಗುಲಾಬಿಯನ್ನು ಮುಡಿದಂತೆ , ಇಡೀ ಆಗಸದಲ್ಲಿ ಹಲವು ಬಣ್ಣಗಳ ರಂಗಿನಾಟದಲ್ಲಿ ಮುಳುಗಿತ್ತು. ನಿಸರ್ಗವು ತನ್ನ ನಲ್ಲನು ಅವಳನ್ನು ನೋಡಲು ಬರುತಿಹನೆಂದು ಖಾತರಿ ಪಡಿಸಿ , ತನ್ನನ್ನು ತಾನು ಸಿಂಗರಿಸಿಕೊಳ್ಳಲು ನಿರತಳಾದಳು….
ನನ್ನ ಅಜ್ಜಿ
– ಚೇತನ್ ಕೆ.ವಿ
ಬಹಳ ವರ್ಷಗಳ ನಂತರ ನಾನು ನನ್ನ ಅಜ್ಜಿ ಊರು, ಮಂಜುಗುಡ್ಡೆಗೆ ಕಾಲಿರಿಸಿದ್ದೆ. ಒಮ್ಮೆ ನನ್ನ ಬಾಲ್ಯದ ದಿನಗಳೆಲ್ಲ ಕಪ್ಪುಬಿಳಪು ಚಿತ್ರದಂತೆ ತಟ್ಟನೆ ಕಣ್ಣೆದುರು ಬಂದು ಹೋಯಿತು. ಗಲ್ಲಿ ಗಲ್ಲಿಗೆ ಕಾಲಿರಿಸಿದಂತೆ ಮತ್ತೆ ಹಳೆ ನೆನಪಿನ ಪುಟಗಳು ತಿರುವುತಿತ್ತು. ಸುತ್ತ ಇಬ್ಬನಿ ಮುಸುಕಿದ ಪ್ರದೇಶ. ಬರೇ ಏರು-ಪೇರುಗಳ ಜಾಗಗಳು ಹೆಸರಿಗೆ ತಕ್ಕಂತೆ – ಮಂಜುಗುಡ್ಡೆ. ನಾನು ಈ ಊರು ಬಿಟ್ಟು ೨೫ ವರ್ಷಗಳ ಮೇಲಾಯಿತು. ಹೈಸ್ಕೂಲ್ ಮುಗಿಸಿ ತಂದೆ-ತಾಯಿ ಜೊತೆ ಊರು ಬಿಟ್ಟವನು ಮತ್ತೆ ಈ ಕಡೆ ಬಂದವನೆ ಅಲ್ಲ.ಆದರೂ ಅಲ್ಪ ಸ್ವಲ್ಪ ಬದಲಾವಣೆ ಬಿಟ್ಟರೆ ಹೇಳಿಕೊಳ್ಳುವಂತ change ಎನೂ ತೋರಲಿಲ್ಲ,ಅದೆ ನಾನಿರುವ ಬೆಂಗಳೂರು ವರ್ಷ ವರ್ಷಕ್ಕೂ ಎಂತ ಬದಲಾವಣೆ,೧ ವರ್ಷ ಯಾವುದಾದರು ಜಾಗಕ್ಕೆ ಹೋಗದಿದ್ದರೆ ಮತ್ತೆ ಆ ಜಾಗ ಗುರುತು ಸಿಗೋದು ಕಷ್ಟವೆ ಸರಿ ಎಂದುಕೊಂಡು ಮೂಲೆಯ ಒಂದು ಪೆಟ್ಟಿಗೆಯಂತಹ ಅಂಗಡಿ ಹೊಕ್ಕೆ.
ನನ್ನ ಅಜ್ಜ ವೆಂಕಟರಾಜಪ್ಪನ ಹೆಸರು ಹೇಳಿ ಅವರ ಮನೆಯ ವಿಳಾಸ ಕೇಳಿ,ಅವನು ತೋರಿದ ದಾರಿ ಹಿಡಿದು ಹೊರಟೆ.
ಸರಿ ಸುಮಾರು ೨೫ ವರ್ಷಗಳ ನಂತರ ತನ್ನ ಅಜ್ಜನ ಮನೆಗೆ ಹೋಗುತ್ತಿರುವ ಸಂಭ್ರಮ ಒಂದು ಕಡೆಯಾದರೆ, ಅಜ್ಜ ಅಜ್ಜಿಯ ಗುರುತೆ ಮರೆತ ಬೇಸರ ಮತ್ತೊಂದೆಡೆ. ಅಮ್ಮ ಅಜ್ಜಿಯೋಂದಿಗೆ ಜಗಳವಾಡಿ ಊರು ಬಿಡಲೇ ಬೇಕು ಎಂದು ಹಟ ಹಿಡಿದು ಪಟ್ಟಣ ಸೇರಿದ ಮೇಲೆ ಈ ಕಡೆ ಮತ್ತೆ ತಲೆ ಹಾಕಿ ಸಹ ಮಲಗಿರಲಿಲ್ಲ.ಒಬ್ಬನೆ ಮಗನನ್ನು ಕಳೆದುಕೊಂಡು ಎಷ್ಟು ದುಃಖ ಪಟ್ಟಿದ್ದರೂ ಅಜ್ಜಿ ಎಂದುಕೊಳ್ಳುತ್ತಾ ಹೆಜ್ಜೆ ಮುಂದಿಟ್ಟೆ. ದಾರಿಯಲ್ಲಿ ವಿಳಾಸ ಕೇಳುತ್ತಾ ಅಂತು ಮನೆ ಎದಿರು ಬಂದೆ. ಹಾಳು ಬಿದ್ದ ಮನೆಯಂತಿದ್ದ ಆ ಮನೆಯನ್ನೆ ಹಾಗೆ ದಿಟ್ಟಿಸಿ ನೋಡಿದೆ.ಹೆಂಚಿನ ಮನೆ,ಮುಂದಿನ ಅಂಗಳ ತುಂಬೆಲ್ಲ ಹುಲ್ಲು ಬೆಳೆದು ಎತ್ತರವಾಗಿತ್ತು.ಹಾಗೆ gateನಂತೆ ಅಡ್ಡಲಾಗಿಟ್ಟಿದ್ದ ಮರದ ದಿಣ್ಣೆ ಸರಿಸಿ ಒಳ ಹೊಕ್ಕೆ. ಮನೆಯ ಹೆಬ್ಬಾಗಿಲ ಬಳಿ ಬಂದು ನಿಲ್ಲುತಿದ್ದ ಹಾಗೆ ಹೆಬ್ಬಾಗಿಲಿಗೆ ಹತ್ತಿದ ಒರಳೆ ಕಣ್ಣಿಗೆ ರಾಚಿತು.ಒಂದು ಭಾಗ ಪೂರ ತಿಂದು ಈಗಲೊ ಅಗಲೊ ಅನ್ನುವಂತಿತ್ತು.
ಒಣಗಿದ ಗಂಟಲಲ್ಲೆ ಮೂರು ಬಾರಿ ಅಜ್ಜಿ ಎಂದು ಜೋರಾಗಿ ಕೂಗಿದ ನಂತರ ಒಳಗಿಂದ ಬೆನ್ನು ಬಾಗಿಹೋದ ಅಜ್ಜಿ ಹಣೆಯ ಮೇಲೆ ಕೈ ಇಟ್ಟು “ಯಾರೂ…..” ಎಂದು ನಡುಗುವ ಆ ದನಿಯಲ್ಲೆ ಕೇಳುತ್ತಾ ಬಂದಳು.ಅಜ್ಜಿಯನ್ನು ನೋಡಿದಕೂಡಲೆ ಇದು ನನ್ನ ಅಜ್ಜಿಯೆ ಹೌದ ಎಂದೆನ್ನಿಸಿತು. ನೇರವಾಗಿದ್ದ ಬೆನ್ನು ಮುರಿದು ಬಾಗಿ ಹೋಗಿತ್ತು, ಹಲ್ಲುಗಳೆಲ್ಲ ಉದುರಿ ಹೋಗಿ ಮತ್ತಷ್ಟು ಓದು 
ಹುಣಸೆಮರ ಮತ್ತು ಪ್ರವೀಣ
ಪವನ್ ಪಾರುಪತ್ತೇದಾರ
ಯಾಕೋ ಈ ನಡುವೆ ಪ್ರವೀಣನಿಗೆ ದುಗುಡಗಳೇ ಹೆಚ್ಚಾಗಿತ್ತು, ಏನು ಕೆಲಸ ಮಾಡಬೇಕಾದರೂ ಭಯ, ಉತ್ಸಾಹವಿಲ್ಲ, ಜಗತ್ತಿನಲ್ಲಿ ತಾನೇನನ್ನೋ ಕಳೆದುಕೊಂಡವನ ಹಾಗೆ ಇರುತಿದ್ದ. ಯಾವಾಗಲೂ ಮನೆಯ ಜಗುಲಿಯ ಮೇಲೆ ಕೂತು ಮನೆ ಮುಂಭಾಗದ ಕಂಬವನ್ನೇ ದಿಟ್ಟಿಸಿ ನೋಡುತಿದ್ದ.ಅಕ್ಕ ಪಕ್ಕದ ಮನೆಯವರೆಲ್ಲ ಇವನಿಗ್ಯಾವುದೇ ಗರ ಬಡಿದಿರಬಹುದು ಎಂದುಕೊಂಡರು, ಬರು ಬರುತ್ತಾ ಮನೆಯವರಿಗೂ ಚಿಂತೆ ಅತಿಯಾಗಿ ಏನು ಮಾಡಲು ತೋಚದ ಸ್ಥಿತಿಯಲ್ಲಿರುವಾಗ ದೂರದ ನೆಂಟರೊಬ್ಬರು ಸಲಹೆ ಕೊಟ್ಟರು, ತಮ್ಮೂರಿನಲ್ಲೊಬ್ಬ ಭೂತ ಬಿಡಿಸುವವನಿದ್ದಾನೆ, ನಿಮ್ಮ ಮಗನಿಗೆ ಯಾವುದೋ ಭೂತ ಮೆಟ್ಟಿದೆ ಆದ್ದರಿಂದಲೇ ಹೀಗೆ ಇರುವುದು ಎಂದರು. ಹೆದರಿದ ಅಪ್ಪ ಅಮ್ಮ ಮಗನ ಭೂತ ಬಿಡಿಸಲು ಆ ನೆಂಟರ ಊರಿಗೆ ಹೊರಟರು.
ಭೂತ ಬಿಡಿಸುವ ಮಂತ್ರವಾದಿ ಬೇವಿನೆಲೆ, ತಲೆಬುರುಡೆ ಮುಂತಾದವುನೆಲ್ಲ ಹಿಡಿದು ವಿಚಿತ್ರವಾದ ಮಂತ್ರಗಳನ್ನೊದುರುತಿದ್ದ. ಈ ಮಂತ್ರವಾದಿಗಿಂತ ಪ್ರವೀಣನೆ ಮೇಲು ಸುಮ್ಮನೆ ಶಾಂತನಾಗಿ ಒಂದು ಕಡೆ ಕುಳಿತುಬಿಡುತಿದ್ದ ಅಂತ ಪ್ರವೀಣನ ಅಪ್ಪ ಗೊಣಗಿಕೊಂಡರು. ಪ್ರವೀಣನ ಅಮ್ಮ ಭಕ್ತಿ ಭಾವದಿಂದ ಮತ್ತು ಭಯದಿಂದ ಸ್ವಾಮಿ ನನ್ನ ಮಗ ತುಂಬಾ ಮಂಕಾಗಿ ಬಿಟ್ಟಿದ್ದಾನೆ, ಈ ನಡುವೆ ಯಾರ ಬಳಿಯೂ ಸರಿಯಾಗಿ ಮಾತಾಡೋಲ್ಲ. ಸುಮ್ಮನೆ ಕುಳಿತಿರುತ್ತಾನೆ, ಕೆಲಸಕ್ಕೂ ಹೋಗ್ತಿಲ್ಲ. ಏನಾದ್ರು ಬೈದರೂ ಸುಮ್ಮನೇ ಕೂರುತ್ತಾನೆ, ಏನು ಮಾಡೋದೋ ಗೊತ್ತಾಗ್ತಿಲ್ಲ ದಯವಿಟ್ಟು ನೀವೇ ಏನಾದ್ರು ಪರಿಹಾರ ಕೊಡಿ ಅಂತ ಬೇಡಿಕೊಂಡರು. ಮಂತ್ರವಾದಿ ಆಆಹಹಹ ಅಂತ ಅರಚುತ್ತಾ, ಬೇವಿನ ಸೊಪ್ಪನ್ನು ಒಂದೆರಡು ಬಾರಿ ಪ್ರವೀಣನೆ ಮೇಲೆ ಒದರಿ, ಕಪಾಲದಲ್ಲಿಂದ ತೀರ್ಥವನು ಪ್ರೋಕ್ಷಣೆ ಮಾಡಿ, ಪ್ರವೀಣನನ್ನೆ ದಿಟ್ಟಿಸಿ ನೋಡುತ್ತ, ನಿಮ್ಮ ಮಗನ ಮೇಲೆ ಯಾವುದೋ ಭೂತ ಹತ್ತಿದೆ, ಅವನ ಮುಖ ನೋಡಿದ್ರೆ ಗೊತ್ತಾಗುತ್ತೆ, ಖಂಡಿತ ಇದು ಮೋಹಿನಿಯೇ ಅಂದ. ಹೆದರಿದ ಪ್ರವೀಣನ ಅಪ್ಪ, ಸ್ವಾಮಿಗಳೇ ಈಗೇನು ಇದಕ್ಕೆ ಪರಿಹಾರ, ನಮಗಿರೋವ್ನು ಒಬ್ಬನೇ ಮಗ ನೀವೇ ದಾರಿ ತೋರಿಸ್ಬೇಕು ಅಂದ್ರು. ಆಗ ಮಂತ್ರವಾದಿ ಮನದಲ್ಲೇ ಏನೋ ಲೆಕ್ಕಾಚಾರ ಹಾಕಿಕೊಳ್ಳುತ್ತ, ಕಣ್ಣು ಗುಡ್ಡೆಯ ಮೇಲೆ ಮಾಡಿ ಯಾರ ಬಳಿಯೋ ಮಾತನಾಡಿದಂತೆ ಮಾಡಿ, ನಿಮ್ಮ ಮನೆ ಹತ್ರ ಯಾವುದಾದ್ರು ದೊಡ್ಡ ಮರ ಇದ್ಯ ಅಂದ. ಅದಕ್ಕೆ ಪ್ರವೀಣನ ಅಪ್ಪ ಹೌದು ಸ್ವಾಮಿ ನಮ್ಮ ತಾತನವರು ಹಾಕಿದ ಹುಣಸೆ ಮರ ಇದೆ, ನಮ್ಮ ಜಮೀನಲ್ಲೆ ಇದೆ ಅಂದ. ಥಟ್ಟನೆ ಮಂತ್ರವಾದಿ ಆ ಮರದಲ್ಲಿ ಅಡಗಿರೋ ದೆವ್ವಾನೆ ನಿಮ್ಮ ಮಗನ ಮೈ ಮೇಲೆ ಹೊಕ್ಕಿರೋದು. ಈಗ ಪರಿಹಾರ ಅಂದ್ರೆ ನಾನು ನಿಮ್ಮ ಮಗನಲ್ಲಿರುವ ದೆವ್ವಾನ ಮತ್ತೆ ಆ ಮರಕ್ಕೆ ಓಡುಸ್ತೀನಿ ಆಮೇಲೆ ನೀವು ಆ ಮರಾನ ಕಡಿದು ಹಾಕ್ಬೇಕು ಅಂದ.
((((((?)))))))
ನಾಳೆ ಬೆಳಗ್ಗೆ 6ಕ್ಕೆ ನನ್ನ ಗೆಳೆಯನ ಮದುವೆ..
ಹೋಗುವ ಮೊದಲು ಅಮ್ಮನಿಗೆ ಒಂದು ಮಾತು ಹೇಳಿ ಹೋಗೋಣ ಅಂತ.
ನಾನು ಹೋಗಲೇ ಬೇಕು ಅಂತ ಯೋಚಿಸುತ್ತ ಇದ್ದಾಗ ………

ದೀಪ ಭಾಗ -೩
-ವಿಜಯ ಹೂಗಾರ್
ಸೂರ್ಯ ನೆತ್ತಿಯಿಂದ ಇನ್ನೊಂದೆಡೆಗೆ ವಾಲುತ್ತಿದ್ದ.ಮನೆಯೊಳಗಿನ ಪೂಜೆ ಮುಗಿಸಿ ಎಂದಿನಂತೆ ಬೆಟ್ಟದ ಮೇಲಿರುವ ಲಕ್ಷ್ಮಿ ದೇವರ ಕಡೆಗೆ ಹೋಗಲು ನೈವಿದ್ಯದ ತಟ್ಟೆ ಸಿದ್ಧಪದಿಸುತ್ತಿದ್ದಳು.ಇಷ್ಟೊತ್ತಿಗೆ ಮೈದುನ ಸೂರಪ್ಪನ ಹೆಂಡತಿ ಗಿರಿಜಕ್ಕ ಪೂಜೆ ಮಾಡಿ ದೀಪ ಹಚ್ಚಿ ಬಂದಿರುತ್ತಾಳೆ ಅಂತ ಬೆಟ್ಟದ ಮೇಲಿರುವ ದೇವಸ್ಥಾನದ ಕಡೆ ಉರಿಬಿಸಿಲಲ್ಲಿ ಹೆಜ್ಜೆ ಹಾಕತೊಡಗಿದಳು.ನೂರಾಹನ್ನೊಂದು ಮೆಟ್ಟಿಲು ಏರಿದ ಮೇಲೆ ತುಂಡಿನಂತೆ ಬರುವ ಮಟ್ಟಸ ನೆಲದ ಮೇಲೆ ದೇವಸ್ಥಾನ ಕಟ್ಟಲಾಗಿತ್ತು.ಶಾಂತವಾಗಿ ತಂಗಾಳಿ ಸುಸುತ್ತಿರುವ ದೇವಸ್ಥಾನದಲ್ಲಿ ಊರ ಗೌಡರು ಮತ್ತು ಗಿರಿಜಕ್ಕ ಗುಸು ಗುಸು ಮಾತಾಡುವದು ಕೇಳಿ ಕಮಲಜ್ಜಿ ಬೆಚ್ಚಿದಳು.ಇವಳು ಒಳ ನಡೆದಳು.ಅವರು ಸುಮ್ಮನಾದರು.ಗರ್ಭ ಗುಡಿಯೊಳಗೆ ಸೇರಿದಳು .ಗಾಳಿಯ ಆಟಕ್ಕೆ ಆಡುವಂತೆ ನೀಲಾಂಜನ ಕುಣಿಯುತಿತ್ತು,ನಿನ್ನ ಕೈಗೆ ಸಿಗೋದಿಲ್ಲ ಅಂತ ಅಣುಕಿಸಿದಂತೆ.”ಸರದಿಯ ಪ್ರಕಾರ ನಿನಗೆ ದೀಪ ಹಚ್ಚುವ ಅವಕಾಶ ನಮಗೆ ಮಾಡಿ ಕೊಡು” ಅಂತ ದೇವರಿಗೆ ಅಧಿಕೃತವಾಗಿ ಬೇಡಿಕೊಂಡು ಹೊರಗೆ ಬಂದಳು.ಇನ್ನೇನು ಹೋಗಬೇಕು ಅನ್ನೋಷ್ಟರಲ್ಲಿ ಭೂಮಂಡಲದಂತಿರುವ ಹೊಟ್ಟೆಯ ಮೇಲೆ ಕೈ ಆಡಿಸುತ್ತ ಊರ ಗೌಡ ‘ಕಮಲಜ್ಜಿ ನಿಮ್ ಮಗ ರಾಮಪ್ಪನಿಗೆ ಊರಿಂದ ಕರೆಸು,ಅವನ ಜೊತೆ ಮಾತಾಡೋದಿದೆ’ ಅಂತ ಗೌಡರ ಉಗ್ಗಂಡ ಧ್ವನಿಯಲ್ಲೇ ಹೇಳಿದ.ಪರಕಿವಿಯಿಂದ ಆಲಿಸುವಂತೆ ಕೇಳಿ ಮನೆಕಡೆಗೆ ಧಾವಿಸಿದಳು.ಗಿರಿಜಕ್ಕ ಮಾಡುತ್ತಿರುವ ಹುನ್ನಾರ ಕಮಲಜ್ಜಿಗೆ ತುಸು ಅರ್ಥವಾಗತೊಡಗಿತು.ಸರದಿಯ ಪ್ರಕಾರ ನಾವು ಮಾಡಬೇಕಿದ್ದ ಪೂಜೆ ಹೇಗೋ ಗೌಡರನ್ನ ತನ್ನ ಬಲೆಗೆ ಸಿಲುಕಿಸಿ ಲಪಟಾಯಿಸಬೇಕೆನ್ನುವದು ಸ್ಪಷ್ಟವಾಗತೊಡಗಿತು.
ಅವಿವೇಕಿ ಮಿತ್ರನಿಗಿಂತ ವಿವೇಕಿ ಶತ್ರು ಮೇಲು
ಪ್ರವೀಣ ಓದೋ ವಿಷಯದಲ್ಲಿ ಯಾವಾಗ್ಲೂ ಸೋಂಬೇರಿ,ಅಪ್ಪ ಅಮ್ಮ ಎಷ್ಟು ಬೈದರೂ ತನ್ನ ಲೋಕದಲ್ಲೇ ಮಗ್ನ, ಸ್ನೇಹಿತರ ಜೊತೆ ಯಾವಾಗ್ಲೂ ತಿರುಗಾಡೋದು, ಅಪ್ಪ ಅಮ್ಮನ ಹತ್ರ ಹಣ ತೆಗೆದುಕೊಂಡು ಸಿನಿಮಾ ನೋಡೋದು, ಭಾನುವಾರ ಬಂದ್ರೆ ಸಾಕು ಬೆಳಿಗ್ಗೆ ಇಂದ ಸಂಜೆಯವರೆಗೂ ಬೆಟ್ಟಿಂಗ್ನಲ್ಲಿ ಕ್ರಿಕೆಟ್ ಆಡೋದು ಇದೇ ಕೆಲಸ, ಅಪ್ಪ ಅಮ್ಮನಿಗೂ ಬುದ್ಧಿ ಹೇಳಿ ಹೇಳಿ ಸುಸ್ತಾಗಿತ್ತು. ಹುಡುಗ್ರ ಸಹವಾಸ ಬರೀ ಆಡುವುದಕ್ಕೆ ಸೀಮಿತವಾಗದೆ ದುಶ್ಚಟಗಳ ಕಡೆಯೂ ಸಹ ವಾಲಿತ್ತು. ಮನೆಗೆ ಬಂದಾಗ ಒಮ್ಮೆ ಧೂಮಪಾನದ ಘಮಲು ಅಮ್ಮನ ಮೂಗು ಬಡಿದಿತ್ತು. ಆಗಾಗ ಅಪ್ಪನ ಜೇಬಿನಿಂದ ನೋಟುಗಳು ಸಹ ಕಾಣೆಯಾಗುತಿದ್ದವು. ಅಪ್ಪ ಅಮ್ಮ ಇಬ್ಬರು ಚರ್ಚಿಸಿ ಏನು ಮಾಡುವುದು ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದರು.
ಮರುದಿನ ಭಾನುವಾರ ಪ್ರವೀಣ ಎಂದಿನಂತೆ ಹೇಳದೆ ಕೇಳದೆ ಕ್ರಿಕೆಟ್ ಆಡಲು ಹೊರಟು ಬಿಟ್ಟ, ಅಪ್ಪ ಅಮ್ಮ ಸೀದ ಅವರಪ್ಪನ ಮನೆಗೆ ಹೋಗಿ ಪ್ರವೀಣನ ತಾತನನ್ನು ಕರೆ ತಂದರು. ತಾತನಿಗೆ ವಯಸ್ಸು ಸುಮಾರು ೭೦ ಆಗಿದ್ದರು ಬಹಳ ಚುರುಕು, ಕಾಲ ಕಾಲಕ್ಕೆ ತಾನು ಸಹ ಬದಲಾಗಿದ್ದಂತಹ ಘಾಟಿ ಮುದುಕ. ಕಂಪ್ಯೂಟರ್, ಕ್ರಿಕೆಟ್, ಸಿನಿಮಾ ಎಲ್ಲಾದ್ರಲ್ಲು ಎತ್ತಿದ ಕೈ. ಕ್ರಿಕೆಟ್ ಆಡಲು ಹೋಗಿದ್ದ ಪ್ರವೀಣ ಎಂದಿನಂತೆ ಮನೆಗೆ ಬಂದ, ಬಂದೊಡನೆ ತಾತನನ್ನು ನೋಡಿ ಆಶ್ಚರ್ಯ ಚಕಿತನಾದ, ತಾತನ ಕಾಲಿಗೆ ನಮಸ್ಕಾರ ಮಾಡೋ ಅಂತ ಅಪ್ಪ ಹೇಳೋ ತನಕ ಇವ್ನಿಗೆ ತೋಚಲಿಲ್ಲ, ಮಾಡ್ತೀನಿ ಕೈ ಕಾಲು ತೊಳ್ಕೊಂದು ಬಂದೆ ಅಂತ ಸ್ನಾನದ ಮನೆಗೆ ಹೋಗಿ ಟೂತ್ ಪೇಸ್ಟ್ ನ ಒಂದಷ್ಟು ಬಾಯಿಗೆ ಹಾಕಿಕೊಂಡು ಮುಕ್ಕಳಿಸಿ ಬಂದ, ಬಂದೊಡನೆ ನಮಸ್ಕಾರ ಮಾಡಿದಾಗ ತಾತನಿಗೆ ಧೂಮಪಾನದ ಘಮಲು ತಿಳಿದು ಬಿಡ್ತು. ಅದೂ ಅಲ್ದೆ ಮೊದಲೇ ಪ್ರವೀಣನ ಅಪ್ಪ ಅಮ್ಮ ತಮ್ಮ ಮಗ ದಾರಿ ತಪ್ತಾ ಇದ್ದಾನೆ ಅನ್ನೋ ವಿಷಯ ಬೇರೆ ಮೊದಲೇ ಹೇಳಿದ್ರು. ವಿಷಯ ಗೊತ್ತಾದ್ರು ತಾತ ಮುಗುಮ್ಮನೆ ಇದ್ದರು.
ಮಾರನೆ ದಿನ ಪ್ರವೀಣ ಕಾಲೇಜಿಗೆ ಅಂತ ಹೊರಟಾಗ, ತಾತ ಸಹ ತಯಾರಾಗಿ ಮೊಮ್ಮಗನೊಂದಿಗೆ ಹೊರಡಲು ಸಿದ್ದರಾಗಿದ್ದರು, ಪ್ರವೀಣ ತಾತ ಹಾಗೆಲ್ಲ ನಿಮ್ಮನ್ನ ಕಾಲೇಜಿಗೆ ಬಿಡಲ್ಲ, ಬಹಳಾ ಶಿಸ್ತು ಅಲ್ಲಿ ಅಂತೆಲ್ಲ ಹೇಳ್ದ, ಅದಕ್ಕೆ ತಾತ ನಾ ನೋಡದೇ ಇರೋ ಕಾಲೇಜೇನೋ ಅದು, ನೀನ್ ಓದ್ತಾ ಇರೋ ಕಾಲೇಜು ನನ್ನ ಫೇಸ್ಬುಕ್ ಗೆಳೆಯ ಪ್ರಕಾಶ್ ರಾಜು ದು, ಅವರು ನಾನು ಇಲ್ಲಿಗೆ ಬಂದಿರೋ ಸ್ಟೇಟಸ್ ನೋಡಿದ್ರಂತೆ, ಫೋನ್ ಮಾಡಿದ್ರು ಅದಕ್ಕೆ ಬರ್ತಾ ಇದ್ದೀನಿ ಅಂತ ಪ್ರವೀಣಂಗೆ ಒಳ್ಳೆ ಟಾಂಗ್ ಕೊಟ್ಟ್ರು. ಪ್ರವೀಣನ ಮೊಬೈಲ್ ಗೆ ಅವನ ಗೆಳೆಯನ ಫೋನ್ ಬಂತು, ಏನ್ ಮಗಾ ಸಿನಿಮಾಗೆ ಟಿಕೆಟ್ ತೊಗೊಂಡು ಕಾಯ್ತಾ ಇದ್ದೀವಿ ಎಲ್ಲಿದ್ಯ ಇನ್ನ?? ಪ್ರವೀಣ,ತಾತನ ಜೊತೆ ಇದ್ದೀನಿ ಮಗಾ ಆಮೇಲೆ ಫೋನ್ ಮಾಡ್ತೀನಿ ಅಂದ. ಫೋನ್ ಕಟ್ ಆದ ಮೇಲೆ ತಾತ ಕೇಳಿದ್ರು ಏನು ಸಿನಿಮಾಗೆ ಹೋಗ್ಬೇಕ ಅಂತ, ಅದಕ್ಕೆ ಪ್ರವೀಣ ಹೌದು ನಿಮಗೆ ಹೇಗೆ ಗೊತ್ತಾಯ್ತು ತಾತ ಅಂದ, ಅದಕ್ಕೆ ರಾತ್ರಿ ನೀನು ನಿನ್ನ ಗೆಳೆಯನ ಜೊತೆ ಫೋನಲ್ಲಿ ಮಾತಾಡ್ತಾ ಇದ್ದಲ್ಲ ಆಗ ಕೇಳಿಸ್ತು ನಂಗೆ ಅಂದ್ರು. ಆದ್ರೆ ಕಾಲೇಜಿಗೆ ಚಕ್ಕರ್ ಹೊಡೆದು ಸಿನಿಮಾ ನೋಡೋದು ತಪ್ಪಲ್ವ ಅಂದ್ರು. ಪ್ರವೀಣನಿಗೆ ಉತ್ತರ ಕೊಡಲು ಆಗ್ಲಿಲ್ಲ, ಕಡೆಗೆ ತಾತ, ನಿನ್ ಸ್ನೇಹಿತನಿಗೆ ಫೋನ್ ಮಾಡಿ ಹೇಳು ನನಗೂ ಒಂದು ಟಿಕೆಟ್ ತೊಗೊ ಅಂತ ನಾನು ಬರ್ತೀನಿ ಅಂದ್ರು. ಪ್ರವೀಣನಿಗೆ ಒಂದು ಕಡೇ ಖುಷಿ ಆಯ್ತು ಮತ್ತೆ ಭಯ ಸಹ ಆಯ್ತು ಮನೇಲಿ ಹೇಳಿಬಿಟ್ರೆ ಅಂತ ಅಷ್ಟ್ರಲ್ಲಿ ತಾತ, ನೀನೇನು ಯೋಚಿಸ ಬೇಡ ಮನೇಲಿ ನಾ ಏನು ಈ ವಿಷಯ ತಿಳಿಸಲ್ಲ ಅಂದಾಗ ಸ್ವಲ್ಪ ಸಮಾಧಾನ ಆಯ್ತು.
ದೀಪ ಭಾಗ ೨
– ವಿಜಯ್ ಹೂಗಾರ್
ಬೆಳಕಿಂಡಿಯಿಂದ ಮೂಡುವ ಹಿಡಿ ಬಿಸಿಲುಗರಿಗಳು ಇಣುಕುವ ಮುಂಚೆ ದೇವಕಿ ಅಡುಗೆ ಮನೆ ಸೇರಿದ್ದಳು.ಒಲೆ ಹತ್ತಿಸಿದ ಮೇಲೆ ಅಡುಗೆ ಮನೆ ಹೊಗೆಯಿಂದ ತುಂಬಿ ತುಳುಕುತ್ತಿತ್ತು.ಅಡುಗೆಮನೆಯಿಂದ ಹೊರಮನೆ,ಹೊರಮನೆಯಿಂದ ಕೇರಿಯಲ್ಲ ಹರಡುತಿತ್ತು.ಅಮಾವಾಸ್ಸೆಯ ಕತ್ತಲೆಯಂತೆ ಗೋಚರಿಸುತ್ತಿರುವ ಗೋಡೆಗಳ ಮಧ್ಯೆ ಖೆಮ್ಮುತ್ತ,ಬೆಂಕಿ ಆರುವಂತಿದ್ದರೆ ಊದುತ್ತ,ಮೈಯಲ್ಲ ಬೆವತು,ಸುರಿಯುವ ಬೆವರ ಧಾರೆಗೆ ಸೆರಗಿನಿಂದ ಒರೆಸುತ್ತಾ ರುಚಿ ರುಚಿಯಾದ ಅಡುಗೆ ಮಾಡುತ್ತಿದ್ದಳು.
ಅಷ್ಟೊತ್ತಿಗೆ “ಏ ಇನ್ಯಾ…! ಹೋಗಿ ಆ ಭುರೆಗೊಳ್ ಮನ್ಯಾಗಿಂದು ಪಾವ್ ಲೀಟರ್ ಹಾಲ ಸಿಗ್ತದೆನು ತೊಗೊಂಬಾ,ಚಾ ಮಾಡಕ್ಕ ಹಾಲಿಲ್ಲ” ಅಂತ ದೇವರ ಮನೆಯಿಂದ ತರಕಸ್ವಾರದಲ್ಲಿ ಕಮಲಜ್ಜಿಯ ಅವಾಜ್ ಕೇಳಿ, ಪಡಸಾಲೆಲ್ಲಿ ಟಿವಿ ನೋಡುತ್ತಾ ಕುಳಿತ ಮೊಮ್ಮಗ ಇನ್ಯಾ ತನ್ನ ಸಂಗಡಿಗರ ಸಮೇತ ಪುರ್ರ್ ಅಂತ ಹಾರಿಹೋದ.ಮನೆಯೆಲ್ಲ ಊದಿನ ನುರುಹೊಗೆಯ ಪರಿಮಳ ಸೂಸುತ್ತ ದೇವರ ಮನೆಯಿಂದ ಬಂದ ಕಮಲಜ್ಜಿ ಹಠತ್ತಾನೆ ಖಾಲಿಯಾದ ಪಡಸಾಲೆಯನ್ನು ನೋಡಿ,”ಅಯಿ…!ಹಾಟ್ಯಗಳ ತೊಗೊಂಬಂದು…!ಕೆಲಸ ಮಾಡಕ್ಕ ಏನ್ ಬ್ಯಾನಿ ಬರ್ತದ…?ತಿಲ್ಲಕ್ ಹ್ಯಾಂಗ್ ಬರ್ತದ,ಎರಡೂ ದವಡಿಯಲ್ಲಿ …!”ಅಂತ ಕೈಯಲ್ಲಿರುವ ನೈವಿದ್ಯದ ತಟ್ಟೆ ಹಿಡಿದು ಖಾಲಿ ಪಡಸಾಲೆಯ ಮೇಲೆ ತನ್ನ ಕೋಪ ತೋರಿಸುತ್ತ ನಿಂತಳು.’ಇನ್ಯಾರಿಗೆ ತೋರಿಸಬೇಕು…..?’ ಅಂತ ಪ್ರಶ್ನಾರ್ಥಕ ಮುಖದಿಂದ ಟಿವಿಯ ಪರದೆ ಕಮಲಜ್ಜಿಯ ಕಡೆ ಹೆದರಿ ಮುಜುಗುರದಿಂದ ನೋಡತೊಡಗಿತು.ಹಾಗೆ ಕೋಪದಿಂದ ಗಲಿಬಿಲಿಗೊಂಡ ಮುಖದಿಂದ ಮನೆಯ ಹೊರಗಡೆಯ ಇರುವ ಚಿಕ್ಕ ಕಟ್ಟೆಯಮೇಲೆ ಆಸಿನಳಾದ ತುಳಸಿಗೆ ಭುಸುಗುಟುತ್ತಲೇ ನೈವಿದ್ಯ ಅರ್ಪಿಸತೊಡಗಿದಳು.
ಮತ್ತಷ್ಟು ಓದು 
ದೀಪ. ಭಾಗ-೧
– ವಿಜಯ್ ಹೂಗಾರ್
ಸುಳಿಗಾಳಿಯಿಂದ ಹಗುರಾಗಿ ತೇಲಿದ ಮಣ್ಣು ಬಿಸಿಲಿನ ಪ್ರಭೆಗೆ ಮೊನಚಾಗಿ ಇಡೀ ಊರನ್ನ ಸಿಂಪಡಿಸಿದಂತೆ ಆವರಿಸಿತ್ತು.ಅಲ್ಲಲ್ಲಿ ತಲೆಯೆತ್ತಿದ ಮರಗಳು ತುಂಡು ತುಂಡಾಗಿ ನೆಲವನ್ನು ನೇವರಿಸುವಂತೆ ಬೇರುರಿದ್ದವು.ಊರ ಮಧ್ಯ ನಡುಗಡ್ದೆಯಂತೆ ಇರುವ ದೈತ್ಯ ಬೆಟ್ಟದ ಸುತ್ತಲೂ ಹರಿಯದ ನೀರಿನಂತೆ ಹರಿದ ಮನೆಗಳು ಕಲಸುಮೇಲೋಗರವಾಗಿ ಹರಡಿಕೊಂಡಿದ್ದವು.ಬೆಟ್ಟದ ಮೇಲೆ ಊರ ಕಾಯೋ ಪಹರೆದಾರನಂತೆ ಲಕ್ಷ್ಮಿ ದೇವತೆ ಭಕ್ತರ ಸೇವೆ ಸ್ವೀಕರಿಸುತ್ತಾ ವಾಸವಾಗಿದ್ದಳು.ಬೆಟ್ಟದ ಅಪರಭಾಗದಲ್ಲಿ ಬೀಕೋ ಅನ್ನುತ್ತಿರುವ ಬತ್ತಿ ಹಗುರಾದ ಕೆರೆ, ಆಡಿ ಹೋದ ಪುಟ್ಟ ಮಕ್ಕಳ ಹೆಜ್ಜೆಯ ಬರೆದಿಡುವ ಕಾಗದದಂತಿತ್ತು.ಬಿಸಿಲಿನ ಹೊಳೆಗೆ ತಟಸ್ಥವಾಗಿ ನಿಂತಿರುವ ಬೆವತ ಮನೆಗಳು ಶೋಕಸಾಗರದಲ್ಲಿ ಕಳೆದುಹೋದಂತೆ ಶಾಂತವಾಗಿದ್ದವು.
ಕಮಲಜ್ಜಿಗೆ ವಯಸ್ಸಾದರೂ ಈಗಲೂ ಚೂಟಿಯಾಗಿ ವಯಸ್ಸಿನ ಹುಡುಗಿಯರು ನಾಚುವಂತೆ ಕೆಲಸ ಮಾಡುತಿದ್ದಳು. ಮಗಳಮಗ ಹನುಮಂತನ ಮದುವೆಯಾಗಿ ಐದು ಸಂವತ್ಸರ ಕಳೆದರು ಮಕ್ಕಳಾಗಲಿಲ್ಲ ಅಂತ ತುಂಬಾ ಬೇಸರಿಸಿದ್ದಳು. ಮುತ್ತಜ್ಜಿಯಾಗಿ ಮರಿ ಮೊಮ್ಮಗನನ್ನು ಆಡಿಸಬೇಕೆಂದು ಬಲು ಆಸೆಯಿಂದ ಹನುಮಂತನ ಮದುವೆಯಾದ ಹೊಸತರಲ್ಲಿ ನವದಂಪತಿಗಳಿಗೆ ಖಾಸಗಿ ಕೋಣೆಯಲ್ಲಿ ಖಾಸಗಿಯಾಗಿ ಬಿಟ್ಟು ಕೊಟ್ಟಿಗೆಯಲ್ಲಿ ಇರುವ ಚಿಕ್ಕ ಕೋಣೆಯಲ್ಲಿ ಎಷ್ಟೋ ದಿವಸ ಒಬ್ಬಳೇ ಮಲಗಿದ್ದಳು.ಅದರಿಂದ ಫಲ ಕಾಣದೆ ಹೋದಾಗ ಪ್ಯಾಟೆಯಲ್ಲಿರುವ ದೊಡ್ಡ ಮಗ ರಾಮಪ್ಪನ ಹತ್ತಿರ ‘ಸೊಸೆಯನ್ನ ನೋಡಬೇಕೆನಿಸಿತು’ ಅಂತ ಹೇಳಿ ಪದೇ ಪದೇ ಹೋಗಿ ಬರುತ್ತಿದ್ದಳು.’ಈ ಕೈಯ್ಯಾಗ ಎಷ್ಟು ಬಾಣಂತನ ಮಾಡಿಲ್ಲ ಲಕ್ಷ್ಮಿಯಕ್ಕ,ಆದರ ನಮ್ಮ ದೇವಕಿಯ (ಹನುಮಂತನ ಹೆಂಡತಿ) ಬಾಣಂತನ ನನ್ನ ಕೈಯಾರ ಮಾಡಬೇಕೆಂಬುದು ಬಕ್ಕುಳ್ ಆಸೆ ಆಗ್ಯದ ನೋಡು’ ಅಂತ ತನ್ನ ಸಂಕಟದ ಆಶಯ ಲಕ್ಷ್ಮಿಯಕ್ಕನ ಮುಂದೆ ತೋಡಿಕೊಳ್ಳುತ್ತಿದ್ದಳು.ಪರಾಗಸ್ಪರ್ಷದ ಅಮೃತ ಘಳಿಗೆಯ ಕಾಯುವ ಹೂವಾಡಗಿತ್ತಿಯಂತೆ ದೇವಕಿಯಿಂದ ಹೂವಿನಂಥ ಮಗು ಬಯಸುತ್ತಿದ್ದಳು.ಇವಳ ಕೊನೆಗಾಣದ ಕೊರಗು ಕಂಡು ಕಮಲಜ್ಜಿಯ ಗಂಡ ಪೂಜಾರಪ್ಪ ಮಾತ್ರ “ಸ್ವಲ್ಪ ದಮ್ ತಿನು,ಬಿತ್ತಿದ ಪ್ರತಿವರ್ಷ ಬೆಳೆ ಚನ್ನಾಗಿ ಬರಬೇಕು ಅಂತೇನಿಲ್ಲ….ಕೆಲವೊಂದುಸಲ ಮಳೆ ಬಿದ್ದಿಲ್ಲ ಅಂದ್ರೆ ಬಿತ್ತಿದೆಲ್ಲ ಲುಕ್ಸಾನು ಆಗ್ತದ” ಅಂತ ಸಮಾಧಾನ ಮಾಡ್ತಿದ್ದ.ಅದಕ್ಕೆ ಕಮಲಜ್ಜಿ “ಹು ಲುಕ್ಸಾನ ಯಾಕ ಆಗ್ತದ,ಮಳಿ ಬರಾದ ನೋಡೇ ಬಿತ್ತೊಕೆನಾಗ್ತದ” ಅಂತ ಹೌಹಾರುತ್ತಿದ್ದಳು.
ತುಂಬೆ ನಿನ್ನ ಮಹಿಮೆ ಏನೆಂಬೆ …
-ಅನಿತಾ ನರೇಶ್ ಮಂಚಿ
ವಾಮನನಲ್ಲಿ ಬಲಿ ಚಕ್ರವರ್ತಿ ‘ ನಾನಿನ್ನು ಭೂಮಿಗೆ ಬರುವ ದಿನ ಯಾವುದು ‘ಎಂದು ಕೇಳಿದಾಗ ವಾಮನನ ಉತ್ತರದಲ್ಲಿ’ ತುಂಬೆಯ ಮರದಡಿ ಮಕ್ಕಳು







