267 ನೇ ನಂಬರಿನ ಕೋಣೆ
-ವಸಂತ್ ಕುಮಾರ್ ಆರ್ ಕೋಡಿಹಳ್ಳಿ
ಅದೊಂದು ಕಿರಿದಾದಕೋಣೆ, ಕೋಣೆಯ ಸುತ್ತಲೂ ಗಾಡಕತ್ತಲು ಕವಿದಿದೆ,. ಮಧ್ಯ ಭಾಗದಲ್ಲೊಂದು ಬೆಳಕು ನಿಧಾನವಾಗಿ ಅತ್ತಿಂದಿತ್ತ ಇತ್ತಿಂದತ್ತ ತೂಗಾಡುತ್ತಿದೆ. ಕೋಣೆಯ ನಾಲ್ಕೂ ಮೂಲೆಗಳಲ್ಲಿ ಯಾವುದೇ ಧನಿಯಿಲ್ಲ ತುಂಬಾ ನಿಶ್ಚಬ್ಧ ನಿಶ್ಚಲತೆ ಆವರಿಸಿದೆ. ಏನನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ?. ಗೋಡೆಗೆ ಕೈ ತಾಗಿಸುತ್ತೇನೆ, ತುಂಬಾ ಒರಟಾಗಿದೆ, ಅಲ್ಲಲ್ಲಿ ಕೆಂಪು ಕಲೆಗಳ ಗುರುತುಗಳಿವೆ. ಆ ಮಂದ ಬೆಳಕಿನಲ್ಲಿ ಗಾಯದ ಗುರುತುಗಳಂತೆ ಕಾಣುತ್ತವೆ. ಅವು ಕೆಂಪು ಕಲೆಯ ಗುರುತುಗಳೇ ಆದರೆ ಅವು ಇನ್ನೂ ಅಸಿಯಾಗಿ ಕೈಗೆ ಅಂಟುವ ಸ್ಥತಿಯಲ್ಲಿವೆ. ಬಹುಷಃ ಯಾರದೋ ರಕ್ತದ ಕಲೆಗಳಿರಬೇಕು. ಮುಂದೊಂದು ಭಾಗದ ಅಡಿಯಲ್ಲಿ ಎಂಥದ್ದೋ ಕಾಗದದ ಚೂರುಗಳು ಕೈತಾಗುತ್ತಿವೆ. ಇನ್ನೂ ಸ್ವಲ್ಪ ಹುಡುಕಿದಾಗ ಕಬ್ಬಿಣದ ಬಾಗಿಲೊಂದು ಸ್ವರ್ಷಿಸುತ್ತದೆ. ತುಂಬಾ ಉದ್ದವಾಗಿದೆ ಅದರ ಸರಳುಗಳುಗಳು. ಬಲಿಷ್ಟವಾದ ಕಬ್ಬಿಣದ ಬಾಗಿಲು. ಏನೂ ಅರ್ಥವಾದ ಸ್ಥತಿಯಿಂದ ನೋಡುತ್ತಿದ್ದೇನೆ. ಇಲ್ಲಿ ಕಬ್ಬಿಣದ ಬಾಗಿಲಾಕಿದೆ ಯಾವುದೀ ಕೋಣೆ ?
ಇಂಥ ಕೋಣೆಯನ್ನು ನನ್ನ ಜೀವಮಾನದಲ್ಲೇ ಎಲ್ಲೂ ನೋಡಲಿಲ್ಲವಲ್ಲ. ಇದಕ್ಕೆ ಉತ್ತರಿಸಲು ನನ್ನೊಬ್ಬನನ್ನು ಬಿಟ್ಟು ಬೇರೆ ಯಾರೂ ಕಾಣುತ್ತಿಲ್ಲ. ನನ್ನ ಕೋಣೆಯ ತುಂಬಾ ಪುಸ್ತಕಗಳು ತುಂಬಿರುತ್ತಿದ್ದವು, ಕಬ್ಬಿಣದ ಕುರ್ಚಿಯೊಂದಿರಬೇಕಿತ್ತು. ಅದರ ಪಕ್ಕದಲ್ಲಿ ಮರದ ಪೆಟ್ಟಿಗೆ. ಅದರ ಕೊನೆಯಲ್ಲೊಂದು ಗಾಜಿನ ಶೀಷೆ, ಅಂದರೆ ನನ್ನ ಲೇಖನಿಗೆ ಮಸಿಯನ್ನು ತುಂಬಿಸುತ್ತಿದ್ದ ಶೀಷೆ. ಮೇಲೊಂದು ಸೀಮೆ ಎಣ್ಣೆಯ ದೀಪ. ಕರೆಂಟ್ ಇಲ್ಲಾದಾಗ ಅಚ್ಚುತ್ತಿದ್ದ ದೀಪ. ಗೋಡೆಗೆ ತಗುಲಿಸಿದ್ದ ಕ್ಯಾಲೆಂಡರ್ರು. ಮಧ್ಯಭಾಗದಲ್ಲಿ ಹಳೆಯ ಎರಡು ಮಣ್ಣಿನ ಕಪಾಟುಗಳು, ಅದರೊಳಗೆ ಮುಚ್ಚಿಟ್ಟಿದ್ದ ಚಿಲ್ಲರೆ ನಾಣ್ಯಗಳು. ಕಥೆ ಕವನ ಬರೆದಿಡುತ್ತಿದ್ದ ಹಾಳೆಗಳು. ಯಾವೂದೂ ಸಹ ಕಾಣುತ್ತಿಲ್ಲ. ನನ್ನ ಕೋಣೆಯಲ್ಲಿ ಮಂದವಾಗಿ ಬೆಳಗುತ್ತಿದ್ದ ಹೈಮಾಸ್ ದೀಪ, ರೋಸ್ ಹುಡ್ ಮರದಿಂದ ತಯಾರಿಸಿದ್ದ ಮರದ ಬಾಗಿಲು ಯಾವುದೂ ಇಲ್ಲ.ಈ ಸ್ಥಳ ನನಗೆ ತೀರ ಹೊಸದಂತಿದೆ. ಅಂದರೆ ನಾನು ಓದುತ್ತಿದ್ದ (julius fuchik) “ಜ್ಯೂಲಿಯಸ್ ಫ್ಯೂಚಿಕ್ ”ರ ಕಥೆಯನ್ನು ನೆನಪಿಸುವ ಕೋಣೆಯ ಹಾಗೆ. ಅವರ 267 ನೇ ನಂಬರಿನ ಖಾರಾಗೃಹದ ಕೋಣೆಯಯಂತೆ. ಹೌದು ಅದು ತುಂಬಾ ಭಯಾನಕ ಕೋಣೆ. ಜೂಲಿಯಸ್ಸರನ್ನು ಕ್ಷಣ ಕ್ಷಣವೂ ಹಿಂಸಿಸಿ ವಧೆಮಾಡಿದ ಕೋಣೆ. ಖಂಡಿತ ಅದು ಸಾವಿನ ಕೋಣೆ. ಅವರ ಪುಸ್ತಕದಲ್ಲೇ ಓದಿದ್ದೇನೆ. ಅದು 267 ನೇ ನಂಬರಿನ ಕೋಣೆ. ಜೂಲಿಯಸ್ಸರು ತಮ್ಮ ಜೀವನದ ಕಟ್ಟ ಕಡೆಯ ಕ್ಷಣಗಳನ್ನು ಆ ಕೋಣೆಯಲ್ಲೇ ಕಳೆದಿದ್ದರು. ತುಂಬಾ ದಯಾನೀಯ ಸ್ಥಿತಿಯಲ್ಲೂ. ಅವರು ಸಾವನ್ನೂ ಸಹ ಸರಳವಾಗಿ ತೆಗೆದುಕೊಂಡಂತ ಮಹಾತ್ಮರು. ಅವರ ನೋವು – ಕಷ್ಟಗಳು ಯಾವುದನ್ನೂ ಲೆಕ್ಕಿಸದೆ. ಪಾನ್ ಕ್ರಾಟ್ ಜೈಲಿನಲ್ಲಿ “ಕೊನ್ ಲಿಕ್ಸಿ” ಎಂಬ ಕಾವಲುಗಾರನ ಸಹಾಯದೊಂದಿಗೆ ರಹಸ್ಯವಾಗಿ ತರಿಸಿಕೊಂಡ “ಪೆನ್ಸಿಲ್ ಮತ್ತು ಕಾಗದ”ದ ಚೂರುಗಳಿಂದ ನಾಜಿ ಜೈಲೆಂಬ ಪಿಶಾಚ ಗೃಹದಲ್ಲಿನ ಕಂಡುಂಡ ಪ್ರತ್ಯಕ್ಷ ಅನುಭವದ ದಾಖಲು. ತನ್ನ ಕಟ್ಟ ಕಡೆಯ ದಿನಗಳ ಯಾತನಾ ದಿನಚರಿಯ ಟಿಪ್ಪಣಿಗಳ ಸಂಗ್ರಹ. ತನ್ನ ಪತ್ನಿಯಾದ ಆಗಸ್ಟಿನಾ ಫ್ಯೂಚಿಕ್ ಪ್ರಕಟಿಸಿದ್ದ ಪುಸ್ತಕ. ಹೌದು ಅದೇ ಪುಸ್ತಕದಲ್ಲಿ ಬರುವಂತ ಕೋಣೆ. ಅದರಲ್ಲಿ ಕೆಲವು ಘಟನೆಗಳು ನನ್ನ ಕಣ್ಣಮುಂದೆ ಸುಳಿದಾಡಿತ್ತವೆ ಜೂಲಿಯಸ್ ಫ್ಯೂಚಿಕ್ ರು ತಮ್ಮ ಸಮಗ್ರ ಬದುಕನ್ನೇ ಸಮರ್ಪಿಸಿಕೊಂಡ ಮಹಾ ಕೃತಿಯ ಕೊನೆಯ ಭಾಗದ ಅಧ್ಯಾಯವದು. ಆ ಪುಸ್ತಕವನ್ನು ಓದುತ್ತಿದ್ದ ಪ್ರತಿ ಬಾರಿಯೂ ನನ್ನ ಕಣ್ಣುಗಳು ಹನಿಗೂಡುತ್ತವೆ. ಕಾರಣ ಅವರನ್ನು ಅಷ್ಟೊಂದು ದಾರುಣ ಹಿಂಸೆಗೆ ಗುರಿಪಡಿಸಿ, ಪ್ರತಿಬಾರಿಯೂ ಚಿತ್ರ ವಧೆಮಾಡಿ, ಪ್ರಜ್ಞಾಶೂನ್ಯ ಸ್ಥಿತಿಯ ತನಕ ಬಡಿದು, ಕೊನೆಗೆ ಸಾಯಿಸಿಯೇ ಬಿಟ್ಟದ್ದು. ಆ ಘನ ಘೋರ ಚಿತ್ರವಧೆಯನ್ನು ನೆನೆಪಿಸಿಕೊಂಡರೆ ಹೃದಯ ತುಂಬಿಬರುತ್ತದೆ. ಯಾವುದೇ ಎದುರಾಳಿಗಳಿಗೂ ಅಂಥ ಗತಿ ಬರಬಾರದೆಂದುಕೊಳ್ಳುತ್ತೇನೆ. ನಿಮಗೆ ಗೊತ್ತಿಲ್ಲವೇನೋ!.
ಶರಣಾಗತ..!!
ಪ್ರದೀಪ್ ಬಹಳ ದಿನಗಳಾದ ಮೇಲೆ ಪ್ರೀತಂ ನ ಭೇಟಿ ಆಗಿದ್ದ. ಆದರು ಭೇಟಿಯಾಗಿದ್ದ ಜಾಗವಾದರೂ ಯಾವುದು, ಚಾರ್ಮಡಿ ಘಾಟ್. ಘಟ್ಟ ಪ್ರದೇಶದ ತುತ್ತ ತುದಿಯಲ್ಲಿ ಚಾರಣ ಮಾಡುತಿದ್ದ ಪ್ರೀತಂ ಗೆ ಪ್ರದೀಪ್ ಇದ್ದಕಿದ್ದಂತೆ ಕಾಣಿಸಿಕೊಂಡಿದ್ದ. ನೋಡಿದೊಡನೆ ಪ್ರದೀಪ್ ಮತ್ತು ಪ್ರೀತಂ ಇಬ್ಬರು ಸ್ವಲ್ಪ ಗಾಬರಿಯದರು, ಪ್ರದೀಪ್ ಮಗಾ ಪ್ರೀತಂ ಅಂತ ಒಮ್ಮೆಲೇ ಅಪ್ಪಿ ಕೆನ್ನೆಗೊಂದು ಮುತ್ತು ಕೊಟ್ಟಿದ್ದ. ಇಬ್ಬರ ಆನಂದಕ್ಕು ಪಾರವೇ ಇರಲಿಲ್ಲ. ಪ್ರೀತಂ ಇನ್ನೇನು, ಏನು ಮಗಾ ಇಲ್ಲಿ ಅಂತ ಕೇಳಬೇಕು, ಅಷ್ಟರಲ್ಲಿ ಅದೇ ಪ್ರಶ್ನೆಯನ್ನ ಪ್ರದೀಪ್ ಪ್ರೀತಂ ಗೆ ಕೇಳ್ದ. ಚಾರಣ ಮಾಡ್ಕೊಂಡು ತಂಡದ ಜೊತೆ ಬಂದಿದ್ದೆ ದಾರಿ ತಪ್ಪಿ ಬಿಟ್ಟೆ ಮಗಾ ಅಂದ ಪ್ರದೀಪನ ಮಾತು ಕೇಳಿ ನಂದೂ ಅದೇ ಕಥೆ ದಾರಿ ತಪ್ಪಿದ್ದಿನಿ. ಬಾ ಒಟ್ಟಿಗೆ ದಾರಿ ಹುಡುಕೋಣ ಎಂದು ಹೇಳುತ್ತಾ, ಹಳೆಯ ಕಾಲೇಜು ದಿನಗಳನ್ನು ಮೆಲುಕು ಹಾಕುತ್ತ ಕಾಡಿನಲ್ಲಿ ನಡೆದರು.ಪ್ರೀತಂ ಮತ್ತು ಪ್ರದೀಪ್ ಒಂದೇ ಕಾಲೇಜ್ ಒಂದೇ ಕ್ಲಾಸ್ ಒಂದೇ ಬೆಂಚ್, ಹಾಸ್ಟೆಲ್ನಲ್ಲಿ ಸಹ ಒಂದೇ ರೂಂ. ಒಬ್ಬರ ಮಧ್ಯೆ ಒಬ್ಬರಿಗೆ ಗಾಢವಾದ ಸ್ನೇಹವಿತ್ತು, ಪ್ರೀತಂ ನ ತಂದೆ ಒಬ್ಬ ಸರ್ಕಾರೀ ಅಧಿಕಾರಿ. ಮಗನಿಗೆ ದೂರದ ಕಾಲೇಜಿಗೆ ಸೀಟ್ ಸಿಕ್ಕಾಗ ಮಗನ್ನ ಹಾಸ್ಟೆಲ್ ಅಲ್ಲಿ ಇದ್ದು ಓದಲಿ ಅಂತ ಆಸೆಯಿಂದ ಸೇರಿಸಿದ್ದರು. ಹಾಸ್ಟೆಲ್ ಅಲ್ಲಿದ್ದರೆ ಎಲ್ಲ ಜನರ ಮಧ್ಯೆಯೂ ಬೆರೆಯಬಹುದು ಎಲ್ಲರ ಕಷ್ಟ ಸುಖಗಳನ್ನು ತಿಳಿಯಬಹುದು ಎಂಬುದೇ ಅವರ ಅಭಿಪ್ರಾಯ. ಓದಿನಲ್ಲೂ ಪ್ರೀತಂ ಮತ್ತು ಪ್ರದೀಪ್ ಯಾವಾಗಲು ಮುಂದೆ ಇರುತಿದ್ದರು. ಪ್ರೀತಂ ತಂದೆಗೆ ಒಂದು ಆಸೆ, ಮಗ ತನ್ನ ಹೆಸರನ್ನು ಎಲ್ಲು ಬಳಸಿಕೊಳ್ಳಬಾರದೆಂದು. ಅದಕ್ಕೆ ಪ್ರೀತಂ ಬಳಿ ಮಾತು ಸಹ ತೆಗೆದುಕೊಂಡಿದ್ದರು, ಎಂದಿಗೂ ನನ್ನ ಹೆಸರನ್ನು ಕಾಲೇಜ್ ನಲ್ಲಿ ಯಾರಿಗೂ ಹೇಳಬೇಡ ಎಂದು. ಪ್ರೀತಂ ಸಹ ಹಾಗೆ ಇದ್ದ. ಪ್ರೀತಂ ಮತ್ತು ಪ್ರದೀಪ್ ಓದಿನಲ್ಲಿ ಆಟದಲ್ಲಿ ಎಲ್ಲ ಕಡೆಯೂ ಮುಂದುವರೆಯುತ್ತಾ 4ನೆ ಸೆಮಿಸ್ಟರ್ ಮುಗಿಸಿದರು. ಅಷ್ಟರಲ್ಲಿ ಪ್ರದೀಪ್ ನ ತಂದೆ ವಿಧಿಯಾಟಕ್ಕೆ ಸಿಕ್ಕಿ ಅಪಘಾತದಲ್ಲಿ ಮೃತ ಪಟ್ಟಿದ್ದರು. ಮತ್ತಷ್ಟು ಓದು 
ಕುರಿ ಮತ್ತು ನಾನು
-ಸತೀಶ್ ರಾಮನಗರ
ಮನೆಯ ಕಾಂಪೌಂಡ್ ಇಷ್ಟೊಂದು ದೊಡ್ಡದಾಗಿದೆ. ಒಂದು ಚಿಕ್ಕ ಕುರಿಮರಿ ತನ್ನಿ ಸಾಕೋಣ. ಸುತ್ತಾ ಮುತ್ತಾ ಇರುವ ಹುಲ್ಲನ್ನು ತಿಂದುಕೊಂಡು ಬೆಳೆಯುತ್ತೆ. ಮೇಯಿಸಲು ಹೊರಗಡೆ ಹೋಗುವ ಅವಶ್ಯಕತೆಯಿರುವುದಿಲ್ಲ. ನನಗು ಮನೆಯಲ್ಲಿ ಸುಮ್ಮನೆ ಕೂತು ಕಾಲ ಕಳೆಯುವುದು ತಪ್ಪುತ್ತದೆ ಎಂಬ ಅಮ್ಮನ ಮಾತಿಗೆ ಬೆಲೆ ಕೊಟ್ಟು ಅಪ್ಪಾ ಒಂದು ಸಣ್ಣನೆಯ ಕುರಿಮರಿಯನ್ನು ಮಾರನೆಯ ದಿನವೇ ತಂದರು. ನಾನು ಶಾಲೆಯಲ್ಲಿ ಕುಳಿತಿದ್ದರು ಕುರಿಮರಿಯದೆ ಧ್ಯಾನ. ಬೆಲ್ಲು ಎಷ್ಟು ಬೇಗ ಹೊಡೆಯುವುದೋ ಎಂಬ ನಿರೀಕ್ಷೆಯಲ್ಲಿ ಮೇಷ್ಟ್ರು ಹೇಳಿಕೊಟ್ಟ ಪಾಠ ತಲೆಗೆ ಸೇರುತ್ತಿರಲಿಲ್ಲ.
ಶಾಲೆ ಬಿಟ್ಟ ತಕ್ಷಣ ಓಡುವುದಕ್ಕೆ ಶುರುಮಾಡಿದರೆ ಮನೆಯ ಬಳಿ ಬಂದಾಗಲೇ ನನ್ನ ಕಾಲಿಗೆ ಬ್ರೇಕ್ ಬೀಳುತಿದ್ದುದ್ದು. ಕುರಿಮರಿಯನ್ನು ಒಮ್ಮೆ ಮುದ್ದಾಡಿ, ಅದರ ಪಿಳಿ ಪಿಳಿ ಕಣ್ಣುಗಳನ್ನು ನೋಡುತ್ತಾ ಮತ್ತೊಮ್ಮೆ ಅದರ ಮೈದಡವಿದರೆ ಸಾಕು, ಕುರಿಮರಿ ಚಂಗನೆ ಮೇಲಕ್ಕೆಗರಿ ಸುತ್ತಲು ಕುಣಿದು ಕುಪ್ಪಳಿಸುತಿತ್ತು. ನನ್ನಷ್ಟೇ ಆಸಕ್ತಿಯಿಂದ ಕುರಿಮರಿಯ ಬಾಲಲೀಲೆಯನ್ನು ನೋಡಲು ಕಣ್ಣರಳಿಸಿಕೊಂಡು ಬರುತ್ತಿದ್ದಳು ನನ್ನ ಚಿಕ್ಕ ಮುದ್ದು ತಂಗಿ. ಹೀಗೊಂದು ದಿನ ಕಾಣದ ಹಾಗೆ ಅಪ್ಪನ ಜೇಬಿನಿಂದ ಕದ್ದ ಕಾಸಿನಿಂದ ಒಂದು ಚಿಕ್ಕ ಗಂಟೆಯನ್ನು ಕೊಂಡು ತಂದು ಕುರಿಮರಿಯ ಕೊರಳಿಗೆ ಕಟ್ಟಿದೆ. ಅದು ಚಂಗನೆ ನೆಗೆದಾಗ ಹೊಮ್ಮುತಿದ್ದ ಗಂಟೆಯ ಕಿಣಿ ಕಿಣಿ ಶಬ್ದ ಕೇಳಿದಾಗ ಎಂತಹುದೋ ಸಾರ್ಥಕ ಭಾವ ನನ್ನ ಮನದಲ್ಲಿ.
ಮರಳಿ ಬಂದವಳು….!!!!
-ಸಂತೋಷ್ ಎನ್ ಆಚಾರ್ಯ
ನಾನು ನೋಡುತ್ತಿರುವುದು ನಿಜವಾಗಿಯೂ ಅವಳನ್ನಾ! ಕಣ್ಣುಗಳನ್ನು ಮತ್ತೆ ಮತ್ತೆ ಉಜ್ಜಿ ನೋಡಿದೆ. ನಿಜಕ್ಕೂ ಅವಳೇ, ಸಂದೇಹವೇ ಇಲ್ಲ. ಸ್ವಲ್ಪ ದಪ್ಪವಾಗಿದ್ದಾಳೆ. ಮುಖದ ಕಾಂತಿ ಈಗಲೂ ಹಾಗೆಯೇ ಇದೆ.
‘ಏನೋ ಹಾಗೆ ನೋಡ್ತಾ ಇದ್ದೀಯಾ?’ ಎಂದಳು.
‘ನೀನು… ಇಲ್ಲಿ…?’ ಮಾತುಗಳ ಪ್ರಶ್ನೆಗಳಿಗಿಂತ ಮುಖದ ಪ್ರಶ್ನೆಗಳೇ ಎದ್ದು ತೋರುತ್ತಿದ್ದವು.
‘ಯಾಕೆ ಬರಬಾರದಾ?’ ಎಂದಳು . ನನಗೆ ಏನು ಉತ್ತರಿಸಬೇಕೆಂದೇ ಗೊತ್ತಾಗಲಿಲ್ಲ.
‘ಏನಾಯ್ತೋ ನಿಂಗೆ, ಓಕೆ, ಕಣ್ತುಂಬಾ ನೋಡೋ ಆಸೆ ನಾ! ನೋಡು ನೋಡು! ಮುಗಿದ ನಂತರ ಹೇಳು ‘ ಎಂದು ಪುನಃ ನಕ್ಕಳು. ಎಷ್ಟೆಂದರೂ ನಗಲೆಂದೇ ಹುಟ್ಟಿದವಳಲ್ಲವೇ? ಆದರೆ ಇವಳೇಕೆ ಇಲ್ಲಿಗೆ ಬಂದಳು? ಮುಗಿದೇ ಹೋದಂತಿದ್ದ ಕಥೆಯನ್ನು ಪುನಃ ಬರೆಯಲು.
‘ಇಲ್ಲ ಹಾಗೇನಿಲ್ಲ ಅವತ್ತು ಹೇಳಿದೆಯಲ್ಲ, ಬರುವುದಾದರೆ ಮತ್ತೆ ಬರುತ್ತೇನೆ ನಿನ್ನ ಬದುಕಿಗೆ ಗೆಳತಿಯಾಗಿ. ಸತ್ಯವಾಗುತ್ತದೆ ಎಂದೆನಿಸಲಿಲ್ಲ’ ಎಂದೆ. ಅವಳ ಸುಂದರ ಮೊಗವನ್ನು ನೋಡುತ್ತಿರುವಾಗ ಎಂದಿನಂತೆ ಹೊಡೆದಿತ್ತು ಮಿಂಚು !
ಅವಳು ಮುಗುಳ್ನಕ್ಕು ,’ಅವತ್ತು ತುಂಬಾ ನೊಂದಿದ್ದೆ ನೋಡು! ಯಾರೂ ಬೇಕೆನಿಸಲಿಲ್ಲ. ಮತ್ತೆ ಯಾಕೋ ಗೊತ್ತಿಲ್ಲ, ನೀನು ಬೇಕು ಅನಿಸತೊಡಗಿತು. ನಿನ್ನ ಜೊತೆ ಕಳೆದ ಕ್ಷಣಗಳು ಎಲ್ಲಾ ನೆನಪಾಗತೊಡಗಿದವು’ ನಾನು ಸುಮ್ಮನಿದ್ದೆ, ‘ನಿನ್ನ ಜೊತೆ ಯಾವುದೇ ಹಂಗು ಇರಲಿಲ್ಲ ನೋಡು. ಯಾವತ್ತೂ ಹೀಗೆ ಮಾಡು ಹಾಗೆ ಮಾಡು ಎಂದು ಆರ್ಡರ್ ಮಾಡಿದವನೇ ಅಲ್ಲ! ನಿನ್ನೊಂದಿಗೆ ಇರೋವಾಗ ನಾನು ನಾನಾಗಿದ್ದೆ’
‘ಆದ್ರೆ ನಾನಂದ್ಕೊಂಡಿದ್ದೆ ಹುಡುಗಿಯರಿಗೆ ಆರ್ಡರ್ ಮಾಡುವವರು ಇಷ್ಟ, ಅವರ ಹಿಂದೂ ಮುಂದೂ ತಿರುಗೋರು ಇಷ್ಟ ಅಂತ’ ಮತ್ತಷ್ಟು ಓದು 
ಈ ಪ್ರೀತಿ…!!
– ಸುಷ್ಮಾ ಮೂಡಬಿದ್ರಿ
ಇಬ್ಬರ ಮದ್ಯದಲ್ಲೂ ನೀರವ ಮೌನ…ಆಗತಾನೆ ಹೊರಗೆ ಮಳೆ ತಣ್ಣಗೆ ಆರಂಭವಾಗಿ, ಭೋರ್ಗರೆಯುತ್ತಾ ಸುರಿಯಲಾರಂಭಿಸಿತು. ಬೀಸಿ ಬಂದ ಗಾಳಿಗೆ ಕಿಟಕಿ ಪರದೆಗಳೆಲ್ಲಾ ನೃತ್ಯವಾಡುತ್ತಿತ್ತು…ಕಿಟಕಿಯಿಂದ ಹೊರಗೆ ದೂರದ ಅದ್ಯಾವ ಬಿಂದುಗೋ ದೃಷ್ಟಿ ಹಾಯಿಸುತ್ತಾ ನಿಂತಿದ್ದ..ಮೆಲ್ಲಗೆ “ಸುಂಜೂ….”ಎಂದೆ..ರಭಸದ ಮಳೆ ಸದ್ದಿಗೋ ಏನೋ ಕೇಳಿಸಿಲ್ಲವೆಂಬಂತೆ ನಿಂತೇ ಇದ್ದ ಅಂವ..ಮೌನ ಮುರಿಯಲಾಗಲಿಲ್ಲ ನನ್ನಿಂದ..ಶೂನ್ಯದೆಡೆಗಿನ ಅವನ ನೋಟ ಕದಲಿಸಲಾಗಲಿಲ್ಲ..ಹತ್ತಿರ ಬಂದು ನಿಂತೆ..ಈಗ ನೋಡಿದ..ಕಂಗಳು ಕಾಂತಿಹೀನ ಅನಿಸಿತು.
“ಮಾತಡೋಲ್ಲವಾ….”ಎಂದೆ..
ಮತ್ತೇ ದೃಷ್ಟಿ ಬದಲಿಸಿದ…ಈ ಬಗೆಯ ಮೌನ ಸಹಿಸಲಾಗಲಿಲ್ಲ…
“ಪ್ಲೀಸ್..”ಎಂದ ನನ್ನ ಕಣ್ಣಲ್ಲಿ ನೀರಾಡಿತ್ತು…
ಅದೇನನಿಸಿತೋ..”ಸುಶೀ..”ಕರೆದ…ಹ್ಞು0 ಗುಟ್ಟಿದೆ…
ಅವನು ಕುತ್ತಿಗೆಗೆ ಚಾಕು ಇಟ್ಟ, ದೇಹ ಹೆಣವಾಗಿತ್ತು :ಆಫ್ರೀಕಾದ ಕ್ಯಾಮರೂನ್ ಲೂಟಿ ಪ್ರಸಂಗ !
-ರವಿ ಮೂರ್ನಾಡು
ಅಲ್ಲೆಲ್ಲೋ ಕೊಲೆಯಾದ ವ್ಯಕ್ತಿಯ ಬಂಧುಗಳು ನ್ಯಾಯಕ್ಕಾಗಿ ಗೋಗರೆಯುತ್ತಿದ್ದರು. ಪತ್ರಿಕಾ ಕಚೇರಿಯಲ್ಲಿ ಕುಳಿತು ಅದು ಅರಿವಿಗೆ ಬಂದಿರಲಿಲ್ಲ. ಪುಸ್ತಕವೊಂದಕ್ಕೆ ಆಸ್ಪತ್ರೆಯ ಶವಾಗಾರದಲ್ಲಿ ಮಲಗಿದ ಹೆಣದ ಟಿಪ್ಪಣಿ ಮಾಡುವಾಗಲೂ ಅದು ಗೊತ್ತಿರಲಿಲ್ಲ. ನನ್ನ ಕುತ್ತಿಗೆಗೆ ಚಾಕು ಇಟ್ಟಾಗ ನಾನೇ ಹೆಣವಾಗಿದ್ದೆ. ಆಫ್ರೀಕಾದ ಕ್ಯಾಮರೂನಿನಲ್ಲಿ ಲೂಟಿಗಾರರು ಸುತ್ತುವರಿದು ವಾಚು-ಮೊಬೈಲು-ಹಣಕ್ಕಾಗಿ ತಡಕಾಡಿ ಮುಗಿಸುವವರೆಗೂ ಜೀವ ಅವರ ಕೈಯಲ್ಲೇ ಇತ್ತು. ಸತ್ತ ದೇಹ ನನ್ನಲ್ಲಿತ್ತು. ಕತ್ತಿನಿಂದ ಚಾಕು ತೆಗೆದದ್ದೇ ತಡ, ಸತ್ತವನು ಎದ್ದು ಕುಳಿತಿದ್ದೆ. ..!
ಇಲ್ಲಿನ ಡ್ವಾಲಾ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2007 ರಲ್ಲಿ ಕಾಲಿಟ್ಟು ಪಾಸ್ಪೋರ್ಟಿಗೆ ಮುದ್ರೆಯೊತ್ತಿ ಲಗ್ಗೇಜು ವಿಲೇವಾರಿಗೆ ಬರುವಾಗಲೇ ಈರ್ವರು ಹಿಂದೆಯೇ ಬಂದರು. “ ನಾನು ಕಸ್ಟಂ ಅಧಿಕಾರಿ, ನಿಮ್ಮ ಬ್ಯಾಗ್ ಚೆಕ್ ಮಾಡಬೇಕು, ಸ್ವಲ್ಪ ಈ ಕಡೆ ಬನ್ನಿ” ಅಂದರು. ಅರೆ..! ಅಧಿಕಾರಿಯಾಗಿದ್ದರೆ ಮರೆಗೆ ಕರೆಯುವ ಆಲೋಚನೆ ಏನು ಅಂತ ಯೋಚಿಸಿದ್ದೆ. ಇಲ್ಲಿನ ಐದು ಸಾವಿರ ಕ್ಯಾಮರೂನ್ ಫ್ರಾಂಕ್ ಕೊಟ್ಟರೆ ತಕರಾರಿಲ್ಲ ಅಂದರು. ಅಲ್ಲಿಯೇ ನಮ್ಮ ಕಂಪೆನಿಯ ವಾರೀಸುದಾರರು ಮಧ್ಯೆ ಬಂದಿದ್ದರಿಂದ ಆ ಪೀಡನೆಯಿಂದ ಪಾರಾದೆ. ಅಮಾನುಷ ಕೃತ್ಯಗಳ ಹೆಣಗಳ ವಾಸನೆ ನನ್ನ ಮೂಗಿಗೆ ಆಗಲೇ ಬಡಿದಿದೆ. ಹಣ ಕೊಟ್ಟರೆ ಕಾನೂನುಗಳು ಇಲ್ಲಿ ನಮ್ಮ ಕೈಗೆ ಬರುತ್ತವೆ. ಹಾಗಂತ ಹಣಕ್ಕೆ ಬಾಯ್ಬಿಟ್ಟ ನಡೆದಾಡುವ ಹೆಣಗಳೇ ಇಲ್ಲಿನ ಮನುಷ್ಯರು. ಭಾರತದಲ್ಲಿ ಇಂತಹದ್ದು ಬೇಕಾದಷ್ಟು ನಡೆಯುತ್ತವೆ. ಅದನ್ನು ಪ್ರಶ್ನಿಸುವ ಜನರಿದ್ದಾರೆ ಅನ್ನುವ ಸಮಾಧಾನ. ಇಲ್ಲಿ ಕೇಳುವವರು, ಕೊಡುವವರು ಎಲ್ಲರೂ ಕಳ್ಳರೇ ಅಂದಾಗ ಸತ್ಯಕ್ಕೂ ಹಲ್ಲು ಕಿರಿಯಲು ನಾಚಿಕೆ…!
ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉತ್ತಮ ಭವಿಷ್ಯ ಇಲ್ಲವೇ?
-ರಾವ್ ಎವಿಜಿ
ಇಲ್ಲ ಎಂದು ಬಹುಮಂದಿ ನಂಬಿರುವುದರಿಂದ ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಹಿಂಜರಿಯುವ ಜನ್ಮದಾತೃಗಳ ಸಂಖ್ಯೆ ಹೆಚ್ಚುತ್ತಿದೆ. ತತ್ಪರಿಣಾಮವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಶಾಲೆಗಳು, ವಿಶೇಷತಃ ಸರ್ಕಾರೀ ಶಾಲೆಗಳು ದುಸ್ಥಿತಿಯಲ್ಲಿವೆ. ಈ ಪರಿಸ್ಥಿತಿಗೆ ಕಾರಣ?
ನಾನು ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಯಲ್ಲಿ ಓದಿದವನು. ಪಿ ಯು ಸಿ ಮತ್ತು ಆನಂತರದ ಶಿಕ್ಷಣ ಪಡೆದದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಆಗ ಕೊಡಗಿನಲ್ಲಿ ಎಲ್ಲರೂ ಶಿಕ್ಷಣ ಪಡೆಯುತ್ತಿದ್ದದ್ದೇ ಹೀಗೆ. ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ಹಂಬಲವೇ ಆಗಲಿ, ಖಾಸಗಿ ಶಾಲೆಗಳು ಸರ್ಕಾರೀ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತವೆ ಎಂಬ ನಂಬಿಕೆಯೇ ಆಗಲಿ ಅಂದಿನ ಜನ್ಮದಾತೃಗಳಿಗೆ ಇರಲಿಲ್ಲ. ವಾಸ್ತವವಾಗಿ, ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮ, ಪಿ ಯು ಸಿ ಮತ್ತು ಆನಂತರದ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಆಗ ಅಲ್ಲಿ ಇರಲೇ ಇಲ್ಲ. (ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಮೈಸೂರು, ಮಂಗಳೂರು, ಬೆಂಗಳೂರುಗಳಂಥ ದೊಡ್ಡ ನಗರಗಳಲ್ಲಿ ಲಭ್ಯವಿತ್ತಂತೆ) ನನಗೆ ತಿಳಿದ ಮಟ್ಟಿಗೆ ಕೊಡಗಿನಲ್ಲಿ ಆಗ ಇದ್ದದ್ದು ಎರಡೋ ಮೂರೋ ಕ್ರಿಶ್ಚಿಯನ್ ಆಡಳಿತದ ಖಾಸಗಿ ಪ್ರೌಢಶಲೆಗಳು. ಖಾಸಗಿ ಕಾಲೇಜುಗಳು ಇರಲೇ ಇಲ್ಲ. ಈ ಪದ್ಧತಿಯಲ್ಲಿ ಶಿಕ್ಷಣ ಪಡೆದ ನಾನು ಏನಾಗ ಬಯಸಿದ್ದೆನೋ ಅದೇ ಆದೆ. ಈ ಪದ್ಧತಿಯಲ್ಲಿ ಶಿಕ್ಷಣ ಪಡೆದವರು ಎಂಜಿನಿಯರುಗಳೂ ಡಾಕ್ಟರುಗಳೂ ಆಗುತ್ತಿದ್ದರು. ಎಂದೇ, ೧ ನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಆವಶ್ಯಕತೆ ಇದೆ ಎಂದು ಯಾರೂ ತಿಳಿದಿರಲಿಲ್ಲ. ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದರಿಂದ ಯಾರ ಭವಿಷ್ಯವೂ ಅಂದು ಹಾಳಾದದ್ದು ನನಗೆ ತಿಳಿದಿಲ್ಲ. ಆಗ ಏಕೆ ಹಾಗಿತ್ತು?
ಆಧುನಿಕ ವಿಕ್ರಮಾದಿತ್ಯ, ಬೇತಾಳನೂ ಮತ್ತು ಕುರುನಾಡ ಉಳಿಸಿ ವೇದಿಕೆಯ ವ್ಯಥೆಯೂ…
-ಸಾತ್ವಿಕ್ ಎನ್ ವಿ
ಎಂದಿನಂತೆ ಬೇತಾಳವು ಲೇಡಿಸ್ ಹಾಸ್ಟೆಲ್ ಎದುರಿಗಿನ ಹುಣಸೆ ಮರದ ತನ್ನ ಕೊಂಬೆಯ ಮೇಲೆ ನೇತಾಡುತ್ತಿತ್ತು. ರಸ್ತೆ ಅಗಲೀಕರಣವಾಗುವಾಗ ತನ್ನ ಮರಕ್ಕೂ ಎಲ್ಲಿ ಕೊಡಲಿ ಬೀಳುತ್ತದೋ ಎಂಬ ಭಯ ಇದ್ದುದರಿಂದ ತರಗತಿಯಲ್ಲಿರುವ ಸಭ್ಯ ವಿದ್ಯಾರ್ಥಿಯಂತೆ ಒಂದೇ ಕಣ್ಣಿನಲ್ಲಿ ನಿದ್ದೆ ಮಾಡುತ್ತಿತ್ತು. ಇಂಥ ಸ್ಥಿತಿಯಲ್ಲಿ ವೋಟರ್ ಐಡಿಯಲ್ಲಿರುವ ಫೋಟೋದಂತೆ ಮುಖ ಮಾಡಿಕೊಂಡು ವಿಕ್ರಮರಾಜನು ಬೇತಾಳವನ್ನು ಸೆಳೆದುಕೊಂಡು ಹೋಗಲು ಧಾವಿಸಿದನು. ಆಗ ಬೇತಾಳವು ‘ನಿನಗಂತೂ ಕೆಲಸವಿಲ್ಲ. ಪದೇಪದೇ ಬಂದು ನನ್ನನ್ನು ಹೊತ್ತುಕೊಂಡು ಹೋಗುತ್ತಿಯಾ. ಆದರೆ ಒಮ್ಮೆಯೂ ನೀನು ನಿನ್ನ ಕೆಲಸದಲ್ಲಿ ಉತ್ತೀರ್ಣನಾಗಿಲ್ಲ. ಇದೆಲ್ಲ ನೋಡಿದರೆ ಮುಂದಿನ ಜನ್ಮದಲ್ಲಿ ನೀನು ಎಂಜಿನಿಯರಿಂಗ್ ವಿದ್ಯಾರ್ಥಿಯಾಗುವ ಎಲ್ಲ ಅರ್ಹತೆಗಳಿವೆ’ ಎಂದಿತು.
ಇದೆಲ್ಲವನ್ನೂ ತಲೆಗೆ ತೆಗೆದುಕೊಳ್ಳದ ವಿಕ್ರಮನು, ಮುಂದೆ ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ಇಲ್ಲದಿದ್ದರೂ ಮಕ್ಕಳಿಗೆ ಒಳಿತನ್ನೇ ಬಯಸುವ ಪಾಪದ ತಂದೆತಾಯಿಗಳ ಹಾಗೆ ತನ್ನಷ್ಟಕ್ಕೆ ತನ್ನ ಕಾರ್ಯದಲ್ಲಿ ನಿರತನಾದನು. ಇವನ ಹಸುತನವನ್ನು ಗಮನಿಸಿದ ಬೇತಾಳದ ಮನಸ್ಸು ಕರಗಿ ವಿಕ್ರಮನೇ, ನಿನ್ನ ಕಾರ್ಯಶ್ರದ್ಧೆಯನ್ನು ಮೆಚ್ಚಿದ್ದೇನೆ. ಪದೇ ಪದೇ ವಿಫಲನಾದರೂ ಸ್ವಮೇಕ್ ಚಿತ್ರವನ್ನೇ ಮಾಡುವ ಕನ್ನಡ ನಿರ್ದೇಶಕನಂಥ ನಿನ್ನ ಅಚಲ ನಿರ್ಧಾರವನ್ನು ಗೌರವಿಸುತ್ತೇನೆ. ದಾರಿ ಸವೆಯಲಿ ಎಂದು ಕಥೆಯೊಂದನ್ನು ಹೇಳುತ್ತೇನೆ ಎಂದು ಹೇಳಿ ವಿಕ್ರಮನ ಅನುಮತಿಯನ್ನೂ ಕಾಯದೇ ಕಥೆಯೊಂದನ್ನು ಹೇಳಲು ಪ್ರಾರಂಭಿಸಿತು. ಮತ್ತಷ್ಟು ಓದು 
ಸೂರ್ಯಾಸ್ತ
-ನವನೀತ್ ಪೈ
ಆಗಸ ಕೆಂಪಾಗಿತ್ತು. ಕೆಂಪು ಎನ್ನುವುದು ಪ್ರೀತಿಯ ಸಂಕೇತವೂ ಹೌದು ಅಪಾಯದ ಸಂಕೇತವೂ ಹೌದು. ಸೂರ್ಯ ತನ್ನ ಕೆಲಸವನ್ನು ಮುಗಿಸಿ ಮನೆಗೆ ತೆರಳುವ ಸಂತಸದಲ್ಲಿ ಕೆಂಪಾಗಿದ್ದ ಮಾತ್ರವಲ್ಲ ಬಾನನ್ನು ಕೆಂಪಾಗಿಸಿದ್ದ. ಆ ಸುಂದರ ಸಂಜೆಯಲ್ಲಿ ಮಹಾನಗರದ ಮಧ್ಯದಲ್ಲಿ ರಂಗು ರಂಗಿನ ದೀಪಗಳಿಂದ ಅಲಂಕೃತವಾದ ಆಬಾಲವೃದ್ಧರನ್ನೂ ಕೈ ಬೀಸಿ ಕರೆಯುತ್ತಿರುವ ಸುಸಜ್ಜಿತ ವಸ್ತು ಪ್ರದರ್ಶನ. ತಾಜ್ ಮಹಲ್ ನ ಪ್ರತಿಕೃತಿಯನ್ನು ಸ್ವಾಗತ ಗೋಪುರವನ್ನಾಗಿಸಿ ಒಳಗೆ ಸ್ವರ್ಗವನ್ನೇ ಏರ್ಪಡಿಸಿದ್ದರು ಆ ಕಲಾವಿದರು. ಈ ಒಂದು ಪ್ರದರ್ಶನಕ್ಕೆ ಬಂದ ಸಾವಿರಾರು ಜನರ ಮಧ್ಯೆ ಇರುವ ಒಂದು ಪುಟ್ಟ ಸಂಸಾರ ನಮ್ಮ ಮುಮದಿನ ಕಥೆಯ ಮೂಲವಸ್ತು.
ಎಷ್ಟೋದಿನಗಳ ಸತತ ಹಠದ ನಂತರ ಐದಾರು ವರ್ಷದ ಮುಗ್ಧಬಾಲಕ ರವಿಯನ್ನು ಆತನ ತಂದೆ ತಾಯಿ ಆ ವಸ್ತು ಪ್ರದರ್ಶನಕ್ಕೆ ಕರೆತಂದಿದ್ದರು. ಸ್ವಾಗತ ಗೋಪುರದ ಪಕ್ಕದ ಟಿಕೆಟ್ ಕೌಂಟರಿನಲ್ಲಿ ಎರಡೂವರೆ ಟಿಕೆಟ್ನ್ನು(೬ ವರ್ಷದ ಮಗುವನ್ನು ೩ ವರ್ಷ ಎಂದು ಟಿಕೆಟ್ ನೀಡುವವನ ಬಳಿಯಲ್ಲಿ ವಾದಿಸಿ ಅರ್ಧ ಟಿಕೆಟ್ ಪಡೆದಿದ್ದರು.) ಪಡೆದು ಸ್ವಾಗತ ಗೋಪುರದ ಎದುರು ನಿಂತಾಗ ಮನದ ಆಯಾಸವೆಲ್ಲ ನಾಶವಾಗಿ ಮನಕ್ಕೆ ಆನಂದವಾಯಿತು. ವಸ್ತು ಪ್ರದರ್ಶನದ ಒಳಗೆ ಕಾಲಿಟ್ಟಾಗ ಮಿಠಾಯಿ ಅಂಗಡಿಗಳ ಸಾಲು ರವಿಯನ್ನು ಬಹುವಾಗಿ ಆಕರ್ಷಿಸಿದವು.
ಬಣ್ಣ ಬಣ್ಣದ ಘಮ ಘಮ ಸುವಾಸನೆಯ ಮಿಠಾಯಿಗಳು ರವಿಯ ಬಾಯಲ್ಲಿ ನೀರೂರಿಸಿದವು. ಅವರು ಮುಂದೆ ನಡೆಯುತ್ತಿದ್ದಂತೆ ಒಂದು ಅಂಗಡಿಯಲ್ಲಿ ಎಣ್ಣೆ ಬಾಂಡಲೆಯಲ್ಲಿ ಜಿಲೇಬಿಯನ್ನು ಬಿಡುತ್ತಿದ್ದರು. ಜಿಲೇಬಿಗಳ ಮೇಲಿಂದ ಇಳಿಯುತ್ತಿರುವ ಪಾಕವು ಆ ಜಿಲೇಬಿಗಳನ್ನೇ ನೋಡುತ್ತಾ ನಡೆಯುತ್ತಿರುವ ರವಿಯ ಜಿಲೇಬಿಯಂತಹ ನಾಲಗೆಯಿಂದ ಇಳಿಯುತ್ತಿರುವ ಲಾಲಾ ಪಾಕದಂತಿತ್ತು.
ಸ್ವಲ್ಪ ಮುಂದೆ ನಡೆದಾಗ ಇನ್ನೊಂದು ಅಂಗಡಿಯಲ್ಲಿ ಬೊಂಬಾಯಿ ಮಿಠಾಯಿ ತಯಾರಿಸುತ್ತಿದ್ದರು. ಆಗಸದಲ್ಲಿ ಸ್ವಚ್ಛಂದವಾಗಿ ಹಾರಾಡುವ ಮೋಡಗಳಂತೆ ತೇಲುತ್ತಿರುವ ಬೊಂಬಾಯಿ ಮಿಠಾಯಿಯ ಎಳೆಗಳನ್ನು ಕಡ್ಡಿಯಿಂದ ಸುತ್ತುತ್ತಿದ್ದರು. ಮತ್ತಷ್ಟು ಓದು 
ದೀಪಾವಳಿ – ಬಚ್ಚಿಟ್ಟ ಬುತ್ತಿಯಿಂದ…. ೧
–ಅರವಿಂದ್
ದೀಪದಿಂದ ದೀಪವ ಹಚ್ಚಬೇಕು ಮಾನವ………….
ಪ್ರೀತಿಯಿಂದ ಪ್ರೀತಿ ಹಂಚಲು…..
ಮನಸಿನಿಂದ ಮನಸನು ಬೆಳಗಬೇಕು ಮಾನವ…..
ಇದ್ಯಾವ ಸಿನಿಮಾದ ಹಾಡಿನ ಸಾಲೋ ನೆನಪಿಲ್ಲ… ಆದರೆ ಪ್ರತಿ ದೀಪಾವಳಿಗೂ ಈ ಹಾಡು, ಉಕ್ಕುಕ್ಕಿ ಬರುವ ಕಡಲಿನಂತೆ……. ಸಾಗುತ್ತಲೇ ಇರುತ್ತದೆ ಮನದ ಮೂಲೆಯಲ್ಲಿ,ಬಹುಶಃ ದೀಪಾವಳಿಯ ದೀಪದ ಸಾಲು ಪ್ರತಿ ಮನೆಯಲ್ಲಿ ಬೆಳಗುತಿರುವಾಗಲೇ, ಹೌದು ಆ ದಿನ, ಅಷ್ಟು ಗಾಢ ಮೌನ ಮನದಲ್ಲಿ, ಮನೆಯಲ್ಲೂ ಸಹ, ಬದುಕಿ ಬಾಳನ್ನೇ ಬಂಗಾರವಾಗಿಸಿಕೊಳ್ಳಬೇಕಾದ ತಂಗಿ…. ಮರ ಹತ್ತಿ ಉರಿದಂತೆ ಕಣ್ಣೆದುರೇ ಉರಿದು ಹೋದಾಗಲಂತು ನನ್ನಿಡಿ ಜಂಘಾಬಲವೇ ಹುದುಗಿ ಹೋಗಿತ್ತು.
ಸಹನಾ…….. ಅವತ್ತೊಂದಿಷ್ಟು ಸಹನೆಯೊಂದಿಗಿದ್ದಿದ್ದರೆ, ಅವಳಿಡೀ ಜೀವನವೂ ಸೌಗಂಧಿಕದಂತೆ ಸುಂದರವಾಗುತ್ತಿತ್ತೇನೋ, ಹುಚ್ಚು ಕೊಡಿ ಮನಸು ಅದು, ಹಠಕ್ಕೆ ಮತ್ತೊಂದು ಹೆಸರಷ್ಟೇ ಸಹನಾ,
ಮತ್ತಷ್ಟು ಓದು 




