ಪಾಂಚಾಲಿ ಪ್ರಲಾಪ
-ರೂಪ ರಾವ್ 
(ಪರಮ್)ಆತ್ಮ ವಿಮರ್ಶೆ
– ಅಭಿನಂದನ್ ಎಸ್ ಡಿ
ಆ non-stop ಡೈಲಾಗ್ಸು, ಆ ಹಣೆ ಕೆರ್ಕೊಂಡು ನಗ್ತಾ ಮಾತೋಡೋ ಸ್ಟೈಲು(ಹೀರೋದು), ಸ್ಮೈಲು(ಹೀರೋದು), ಆ ಅನಂತ್ ನಾಗು, ಆ ಒಂದೇ ಟ್ಯೂನಿನ ಎರಡು ಹಾಡು(infact ಹಾಡಿನ ಬಿಟ್ಸು), ಹಳ್ಳೀನಲ್ಲೂ ಚಡ್ಡಿಯಲ್ಲಿ ಓಡಾಡೋ ಹೆಣ್ಮಕ್ಳು..ಎಲ್ಲಾ mix ಆಗಿ…………………………
ಕರೆಕ್ಟು!!ಮುಂಗಾರು ಮಳೆ ಹ್ಯಾಂಗೋವರ್ರು. ಅದ್ರಿಂದ ಹೊರಗೆ ನಾವೂ ಬಂದಿಲ್ಲ. ಒಂದೊಂದು ವಿಷಯದಲ್ಲಿ ಭಟ್ರೂ ಅದ್ರಿಂದ ಹೊರಗೆ ಬಂದಂಗಿಲ್ಲ.
ಹ್ಯಾಂಗೋವರ್ರಿಂದ ಹೊರಗೆ ಬಂದಿರುವ ವಿಷಯಗಳು ಯಾವ್ದಪ್ಪ ಅಂದ್ರೆ..ಹೀರೋ ಗಡ್ಡ ಶೇವ್ ಮಾಡ್ಕೊಂಡು ನೀಟಾಗಿ ಇರೋದು ( ಇಡೀ ಚಿತ್ರದಲ್ಲಿರದ ಭಟ್ಟ್ರ ಗಡ್ಡ-ಪ್ರೀತಿ ಒಂದೇ ಸೀನಲ್ಲಿ full scaleನಲ್ಲಿ ವ್ಯಕ್ತವಾಗಿದೆ), ಧಾರಳವಾಗಿ ಹೀರೋ ಕಣ್ಣಿಂದ ಸುರೀತಿದ್ದ ನೀರಿಗೆ ಇಲ್ಲಿ ಕಟ್ಟೆ ಕಟ್ಟಿರೋದು, ಹೀರೋನ imageಗೋಸ್ಕರ ಭಟ್ಟರು ಅವರ ಸ್ಟೈಲನ್ನ ಸ್ವಲ್ಪ compromise ಮಾಡ್ಕೊಂಡಿರೋದು, “ರೀ”ಕಾರಕ್ಕೆ ಬ್ರೇಕ್ ಕೊಟ್ಟಿರೋದು.
ಟೈಟಲ್ ಕಾರ್ಡಿಂದಾನೇ ಮಾತಿನ ಮಳೆ. ಪುನೀತ್ ಕಣ್ಣಾಡಿಸೋ ರೀತಿ, dialogue ಡೆಲಿವರಿ, ಮಾತಿನ ವೇಗ, ಧಾಟಿ ಎಲ್ಲದರಲ್ಲೂ ಭಟ್ಟ-ತನವಿದೆ. ಹಾಗಾಗಿ ಅವರು ಭಟ್ಟರ ಬೇರೆ ಚಿತ್ರದ ನಾಯಕರಂತೆ ನಟಿಸಿದ್ದಂತೆ ಕಂಡರೆ ಅದನ್ನ ಅನ್ಯಥಾ ಭಾವಿಸಬಾರ್ದು. ಮತ್ತಷ್ಟು ಓದು 
ಆಜಬ್ಬ
– ಅಬ್ದುಲ್ ಸತ್ತಾರ್ ಕೊಡಗು
ಅದು ರಸ್ತೆ ಬದಿ. ಹೇಳ್ಕೊಳ್ಳೋಕೆ ಜಿಲ್ಲಾ ಹೆದ್ದಾರಿ ಆಗಿದ್ರೂ ಯಾರು ಈ ಸ್ಥಾನ ಕೊಟ್ರೋ ಗೊತ್ತಿಲ್ಲ. ದಿನಕ್ಕೆ ಮೂವತ್ತು ಗಾಡಿ ಓಡಾಡೋದೇ ಹೆಚ್ಚು. ಬರೀ ಗುಂಡಿಗಳಲ್ದೆ ರಸ್ತೆ ಏನೂ ಕಾನ್ತಿರ್ಲಿಲ್ಲ. ಒಂದು ಮಳೆಗಾಲಕ್ಕೆ ರಸ್ತೆ ಬದೀಲಿದ್ದ ಮರಗಳೆಲ್ಲಾ ಕೆಯೀಬಿಯೋರ ಇದ್ದ ಬದ್ದ ಕರೆಂಟು ಕಂಬದ ಮೇಲೆ ಬಿದ್ದಿದ್ದ್ರಿಂದ ಅವ್ರು ಆ ಮರಕ್ಕೆಲ್ಲಾ ಮೋಕ್ಷಾ ಕೊಟ್ಟಿದ್ರು. ವರ್ಷದ ಹಿಂದೆ ಕಡ್ದು ಹಾಕಿದ್ದ ಆ ಮರಗಳ ಬುಡ ಹಾಗೆ ಇದ್ದು ಈಗ ಸಂಪೂರ್ಣ ಒಣಗಿ ಹೋಗಿತ್ತು. ಮಾಗೊಡಪ್ಪನ ಅಂಗ್ಡಿಯಿಂದ ಹತ್ತಿಪ್ಪತ್ತು ಮೀಟರು ದೂರದಲ್ಲಿರೋ, ಕೆಯೀಬಿಯೋರ ಗರಗಸಾಕ್ಕೆ ಪ್ರಾಣ ಕೊಟ್ಟಿದ್ದ ಆ ಮರಗಳ ಬುಡ ನೆಲದಿಂದ ಎರಡಡಿ ಮೇಲೆ ನಿಂತಿದ್ವು. ಅವಕ್ಕೂ ಈಗ ಮೋಕ್ಷ ಸಿಕ್ಕಿತ್ತು.
ಆಜಬ್ಬನ ವಯ್ಸು ಸುಮಾರು ಅರವತ್ತು ದಾಟಿದೆ. ಬರೀ ಮೂಳೆ ಸ್ತಿತೀಗೆ ತಲುಪಿರೋ ಆಜಬ್ಬ ಹೊಟ್ಟೆ ಪಾಡಿಗೆ ರಸ್ತೆ ಬದೀಲಿದ್ದ, ಇಲ್ಲಾ ಇನ್ನೆಲ್ಲೇ ಸೌದೆ, ಕುಂಟೆ ಕಂಡರೆ ಅವನ್ನೆಲ್ಲಾ ಅವನ ಸೈಕಲ್ ಚಕ್ರದ ತಳ್ಳೋ ಗಾಡೀಲಿ ತುಂಬಿಸ್ಕೊಂಡು ಅಡ್ವಾನ್ಸಾಗಿ ಹೇಳಿದ್ದವ್ರ ಮನೆಗೆ ಸಾಗಿಸ್ತಿದ್ದ. ಒಂದು ಹೊರೆಗೆ ಹತ್ತಿಪ್ಪತ್ತು ರೂಪಾಯಿ ಜೊತೆಗೆ ಆಯಾ ಹೊತ್ತಿನೂಟ ಕೂಡ ಸಿಗ್ತಿತ್ತು. ಇತ್ತೀಚಿಗೆ ಸೌದೆ ಅಭಾವ ಉಂಟಾಗ್ತಾ ಬಂದಿದ್ರಿಂದ ರಸ್ತೆ ಬದೀಲಿದ್ದ ಒಂದೊಂದೇ ಬೊಡ್ಡೆ ಆಜಬ್ಬಂಗೆ ಸ್ವಾಹ ಆಗಿತ್ತು. ಮಾಗೊಡಪ್ಪನ ಅಂಗ್ಡಿ ಸಮೀಪ ಇರೋ ಆ ಬುಡಾನ ಕಡಿಯೋಕೆ ಆವತ್ತು ಗಾಡೀಲಿ ಗುದ್ಲಿ ಕೊಡಲಿ ಹಾಕ್ಕೊಂಡು ಬಂದಿದ್ದ ಆಜಬ್ಬ.
ಜಯಶಂಕ್ರ ಬಸ್ಸು ಆ ರಸ್ತೇಲಿ ಅದರ ಚಕ್ರಾನ ಪ್ರಾಯಾಸ ಪಟ್ಕೊಂಡು ಇಳಿಸ್ತಾ ಯೇರಿಸ್ತಾ ಬರ್ತಿದ್ದನ್ನ ಕಂಡ ಆಜಬ್ಬ ಸೌದೆ ಒಡಿಯೋದನ್ನ ನಿಲ್ಸಿ ಕೊಡಲೀನ ಗಾಡಿಗೆ ಆನಿಸಿ ಮದ್ಯಾನ ಆಗ್ತಿದೆ ಅಂತಾ ಅಂದಾಜು ಮಾಡ್ದ. ಹಟಾ ಹಿಡ್ದು ಸೌದೆ ಹೊಡಿತಿದ್ರಿಂದ ಆಜಬ್ಬಂಗೆ ಸುಸ್ತಾಗಿ ಉಸ್ರಾಟ ಹೆಚ್ಚಾಗಿತ್ತು. ಗಾಡೀಲಿ ಹಕ್ಕೊಂದ್ಬಂದಿದ್ದ ಬಾಟಲಿ ತೆರದು ನೀರು ಕುಡ್ದು ಸ್ವಲ್ಪ ಮುಖಕ್ಕೂ ಯೆರಚ್ಕೊಂಡ. ಹೊಟ್ಟೆ ಚುರುಗುಟ್ತಾ ಬೆನ್ನಿಗೆ ಅಂಟಿತ್ತು. ಉದ್ದುದ್ದ ಕೈ ಕಾಲು ಸುಕ್ಕು ಹಿಡ್ದು ಕೆನ್ನೆ, ಕಣ್ಣು ಗುಳೀ ಸೇರಿ ಸುಮಾರು ವರ್ಷ ಆದಂಗಿತ್ತು. ಸುಸ್ತು ಸ್ವಲ್ಪ ಕಡಮೆ ಆದ್ರಿಂದ ಪಂಚೆನ ಬಿಚ್ಚಿ ಮೇಲಕ್ಕೆ ಕಟ್ಕೊಂಡು ಅಮರು ಬೀಡಿ ಹಚ್ಚಿ ಕೊಡ್ಲೀನ ಕೈಗೆ ತಗೊಂಡ. ಗಾಡೀಲಿ ಈಗಾಗ್ಲೆ ಎರಡು ಹೊರೆಷ್ಟು ಸೌದೆ ತುಂಬಿತ್ತು. ಎರಡಡಿ ಇದ್ದ ಆ ಬುಡ ಈಗ ನೆಲಾ ಮಟ್ಟವಾಗಿತ್ತು. ಕೊಡ್ಲಿಯಿಂದಿನ್ನು ಆಗೋದಿಲ್ಲ ಅಂತ ಗಾಡೀಲಿದ್ದ ಗುದ್ಲಿ ತಗೊಂಡು ಬೇರ ಮಣ್ಣ ಬಿದ್ಸೋಕೆ ಶುರುವಾದ. ಮಣ್ಣ ಕೆಬರೀ ಕೆಬರೀ ಅವರ ಸುತ್ತ ಹೊಂಡಾನೇ ಸೃಷ್ಟಿ ಮಾಡ್ದ. ಇನ್ನೊಂದು ಹೊರೆ ಸೌದೆ ಆಗುತ್ತೆ ಅಂತ ಅಂದಾಜು ಮಾಡ್ತಿರೋವಾಗ ಹೊಟ್ಟೆ ಏನಾದ್ರೂ ಬೇಕು ಅಂತಿತ್ತು. ಕೊಡ್ಲಿ ಗುದ್ಲೀನ ಅಲ್ಲಿತ್ತು ಸೀದಾ ಮಾಗೊಡಪ್ಪನ ಅಂಗ್ಡಿ ಕಡೆ ಹೋದ.
ಮಿಂಚು ಮರೆಯಾದಾಗ…
– ಅಬ್ದುಲ್ ಸತ್ತಾರ್,ಕೊಡಗು
ಅದು ನಿರ್ಜನವಾದ ಒಂಟಿ ಮನೆ. ಸುತ್ತಲೂ ಹಸಿರಲ್ಲದೆ ದೂರದಲ್ಲೊಂದು ಬೆಟ್ಟ, ಮನೆಯ ಬೇಲಿ ದಾಟಿದಾಗ ನೆಟ್ಟಗೆ ಹಾದು ಹೋಗಿರುವ ರೈಲು ಕಂಬಿ. ಮಳೆ ಸುರಿಸೀ ಸುರಿಸೀ ಸುಸ್ತಾಗಿದ್ದ ಮಳೆರಾಯ ಅಂದು ಸುಮ್ಮನಾಗಿದ್ದ. ಮರ – ಗಿಡ – ಬಳ್ಳಿಗಳೆಲ್ಲಾ ಕೊಟ್ಟಿಕ್ಕುತ್ತಾ ಹಾಯಾಗಿದ್ದವು. ತಂಪು ತಂಪು ಗಾಳಿ, ಚಿಲಿ-ಪಿಲಿ ನಾದ. ವಾತಾವರಣ ನೋಡಿ ಸಮಯವೆಷ್ಟೆಂದು ಅಂದಾಜಿಸುವುದು ಅಸಾಧ್ಯ.
ಆ ಮನೆಯಿಂದ ಇಬ್ಬರು ಹೊರಬಂದರು. ಹೆಣ್ಣು-ಗಂಡು ಅಥವಾ ಪ್ರೇಯಸಿ-ಪ್ರಿಯತಮ ಅಥವಾ ಗಂಡಾ-ಹೆಂಡಿರಿರಬಹುದು. ಅವಳಿಗೆ ತಲೆ ತುಂಬಾ, ಮೈ ತುಂಬಾ ಶಾಲು ಹೊದಿಸಲಾಗಿತ್ತು. ಒಂದು ಕಯ್ಯಲ್ಲಿ ಮಡಚಿದ ಕೊಡೆ, ಮತ್ತೊಂದು ಕಯ್ಯಿಂದ ಅವಳ ತೋಳನ್ನ ಬಳಸಿಕೊಂಡಿದ್ದ. ವಿಶಾಲ ಜಗುಲಿ ದಾಟಿ ಗೇಟು ಮುಚ್ಚಿ ರೈಲು ಕಂಬಿಯಲ್ಲಿ ನಡೆಯಲು ಶುರುವಾದರು.
“ಆಗೋಲ್ಲ ಕಣೋ, ತುಂಬಾ ಚಳಿಯಾಗ್ತಿದೆ”, “ಏನೂ ಆಗೋಲ್ಲ ಪುಟ್ಟ, ಇಷ್ಟು ದಿನ ಜ್ವರ ಹಿಡುಕೊಂಡು ಮಲಗಿದ್ದ ನಿನಗೆ ಇದೊಳ್ಳೆ ಬಿಡುವು ಕೊಡುತ್ತೆ, ಇನ್ನು ಸ್ವಲ್ಪೇ ಸ್ವಲ್ಪ ನಡೆಯೋಣ”ಅಂದ. ಗೊರ ಗೊರ ಕೆಮ್ಮಿದಳು. ಪೂರ್ತಿ ನಿಶ್ಯಕ್ತಳಾಗಿದ್ದಳು. ಕೊಡೆಯನ್ನ ಹಳಿಯಲ್ಲಿ ಬಿಟ್ಟು ಅವಳನ್ನ ಗಟ್ಟಿಯಾಗಿ ತಬ್ಬಿಕೊಂಡ. ಅವಳು ಅಳುಮುಖದೊಂದಿಗೆ ಅವನನ್ನ ದಿಟ್ಟಿಸಿದಳು. ಕಣ್ಣು ಕೆಂಪಾಗಿತ್ತು. ಅವನ ಕಣ್ಣೂ ಯಾಕೋ ಹನಿಗೂಡಿತು. ಸ್ವಲ್ಪ ಹೊತ್ತು ಹಾಗೇ….,
ಮತ್ತಷ್ಟು ಓದು 




