“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್
ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು
ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. ಏಪ್ರಿಲ್ ಹತ್ತನೇ ತಾರೀಖು ನಮ್ಮ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿ ಅಧಿಕೃತವಾಗಿ ಪಾಸಾಗಿದ್ದೇವೆಂದು ಘೋಷಣೆಯಾಗುತ್ತಿದ್ದಂತೆ ನಮಗಿಂತ ಒಂದು ವರ್ಷ ಮುಂದಿನ ವಿದ್ಯಾರ್ಥಿಗಳೊಂದಿಗೆ ನಮ್ಮ ಮಾತುಕತೆ ಶಾಲಾ ಆವರಣದಲ್ಲೇ ಶುರುವಾಗುತ್ತಿತ್ತು. . ಮತ್ತಷ್ಟು ಓದು 
“ಚಪ್ಪಟೆ ಪಾದದ ಕನ್ನಡಿಗರು”
-ದೀಕ್ಷಿತ್ ಪೊಯ್ಯೆಕಂಡ
“100 ಮೀಟರ್ ಓಟವನ್ನು 15 ಸೆಕೆಂಡುಗಳಲ್ಲಿ ಮುಗಿಸಬಹುದು ಬಿಡು ಮತ್ತೆ ಹಗ್ಗ ಹತ್ತೋದು ಕಂಬ ಹತ್ತೋದು ಕಷ್ಟ ಬಿಡು” ಎಂದು ಮಂಜು ವೈದ್ಯಕೀಯ ಪರೀಕ್ಷೆಯ ಬಳಿಕ ಕೊಚ್ಚಿಕೊಳ್ಳತೊಡಗಿದ. ನನ್ನದೇನೂ ಹೊರತಾಗಿರಲಿಲ್ಲ, “ಅಯ್ಯೋ ಮೆಡಿಕಲ್ ಹೆಂಗೂ ಆಯ್ತು ಇನ್ನು ಫಿಸಿಕಲ್ ಟೆಸ್ಟ್ ಹೇಗೆ ಪಾಸ್ ಮಾಡೊದಪ್ಪಾ” ಅನ್ನುತ್ತಾ ಜೊತೆಗಿದ್ದವರೊಂದಿಗೆ ಮಾತಿಗಿಳಿದೆ. ಮತ್ತೊಬ್ಬನದೂ ಅದೇ ರಾಗ. ನಮಗಿದ್ದ ಸಂತೋಷದ ವಿಷಯವೆಂದರೆ ಆ ದಿನ 8 ಮಂದಿ ಕನ್ನಡಿಗರು ಅಲ್ಲಿದ್ದೆವು. ಸರಿಸುಮಾರು ಮೂರು ಗಂಟೆ ಕಾದ ಬಳಿಕ ಮೆಡಿಕಲ್ ರಿಸಲ್ಟ್ ಬಂತು. ಅದನ್ನು ಹಿಡಿದುಕೊಂಡು ಬಂದ ಏರ್ಪೋರ್ಟ್ ಮುಖ್ಯಸ್ಥ “ನಾನು ರಿಜೆಕ್ಟ್ ಆದ ಅಭ್ಯರ್ಥಿಗಳ ಹೆಸರು ಮಾತ್ರ ಕರೆಯುತ್ತಿದ್ದೇನೆ’ ಎಂದು ಮಲಯಾಳಿ ಮಿಶ್ರಿತ ಆಂಗ್ಲ ಭಾಷೆಯಲ್ಲಿ ಓದತೊಡಗಿದ. ರಮೇಶ್.. ಸುರೇಶ್.. ಹೀಗೆ ಹೆಸರು ಕೇಳಿದಾಗ, ನನಗೇನೋ ಫೈವ್ ಸ್ಟಾರ್ ಜಾಹೀರಾತು ಕೇಳಿದಂತಾಗುತಿತ್ತು. ಉಫ್ ಅದೇನೋ ಎದೆಯಲಿ ಡವ ಡವ! ವರುಷಗಳ ಕನಸು. ಲಿಖಿತ ಪರೀಕ್ಷೆಯ ಬಳಿಕದ ತಯಾರಿ, ಬಯಲಲ್ಲಿ ಪಟ್ಟ ಕಷ್ಟ ಎಲ್ಲವೂ ನೆನಪಾಗುತಿದ್ದವು. ಒಂದೊಂದೇ ಹೆಸರನ್ನು ಕೇಳಿಸಿಕೊಳ್ಳುತ್ತಾ ಹೋದಂತೆ ಸಿಡಿಲು ಬಡಿದಂತೆ ದೀಕ್ಷಿತ್ ಕುಮಾರ್ ಅಂತ ಹೆಸರನ್ನೂ ಕೇಳಿಬಿಟ್ಟೆ. ಆಯ್ತು ನನ್ನ ಕನ್ನಂಬಾಡಿ ಕಟ್ಟೆ ಒಡೆದೋಯ್ತು. ಕಣ್ಣು ಮಂಜಾಗತೊಡಗಿತು. ನನ್ನ ಹೆಸರನ್ನೂ ಹೇಳಿಯೇಬಿಟ್ಟರು. ಈ ಕೆಲಸಕ್ಕಾಗಿ ಇನ್ನಿಲ್ಲದಂತೆ ಪಟ್ಟ ಶ್ರಮವೆಲ್ಲಾ ವ್ಯರ್ಥವಾಗಿ ಹೋಯಿತು. ಮತ್ತೆ ಮಂಜು, ತ್ರಿಭುವನ್ ಹೀಗೇ ಮುಂದುವರಿದಿತ್ತು. ಅಷ್ಟೂ ಕನ್ನಡಿಗರ ಯಾತ್ರೆ ಮುಗಿದಿತ್ತು. ಕಾರಣ ಕೇಳಿದ್ರೆ, ನಮ್ಮದು ಚಪ್ಪಟೆ ಪಾದ ಅಂತೆ ! ಮತ್ತಷ್ಟು ಓದು 
ಹುಣ್ಣಿವೀ ಚಂದಿರನ ಹೆಣಾ ಬಂತೊ ಮುಗಿಲಾಗ ತೇಲತs ಹಗಲ!
– ರೋಹಿತ್ ಚಕ್ರತೀರ್ಥ
ಉಪೇಂದ್ರರ “ಉಪ್ಪಿ 2” ಚಿತ್ರ ಬಿಡುಗಡೆಯಾದ ಮರುದಿನ ಕನ್ನಡ ಪತ್ರಿಕೆಯೊಂದರಲ್ಲಿ ಒಂದು ಲೇಖನ ಬಂದಿತ್ತು. ಅದರಲ್ಲಿ ಮೊದಲಿಂದ ಕೊನೆವರೆಗೆ ಇದ್ದದ್ದು ಉಪ್ಪಿಟ್ಟಿನ ವಿವರಣೆ! ಉಪ್ಪಿಟ್ಟನ್ನು ಜನ ಹೇಗೆ ಮಾಡುತ್ತಾರೆ; ಹೇಗೆ ತಿನ್ನುತ್ತಾರೆ; ಮನೆಗಳಲ್ಲಿ ಉಪ್ಪಿಟ್ಟು ಮಾಡುವಾಗ ಯಾರ್ಯಾರ ಭಾವನೆ ಹೇಗಿರುತ್ತದೆ ಎಂದು ಇಡೀ ಲೇಖನದ ತುಂಬ ಉಪ್ಪಿಟ್ಟಿನ ಮಹಿಮೆಯನ್ನೇ ವರ್ಣಿಸಲಾಗಿತ್ತು. ಕೊನೆಗೆ ಮಾತ್ರ “ಇಲ್ಲಿ ಉಪ್ಪಿಟ್ಟು ಎಂದಿರುವಲ್ಲೆಲ್ಲ ಉಪ್ಪಿ – 2 ಎಂದು ಓದಿಕೊಳ್ಳಿ” ಎಂಬ ಸೂಚನೆ ಕೊಟ್ಟಿದ್ದರು! ಬಹುಶಃ ಸಿನೆಮದ ಬಗ್ಗೆ ಒಂದು ಸಾಲನ್ನೂ ಆಡದೆ ಬರೆದ ಮೊದಲ ಸಿನೆಮ ವಿಮರ್ಶೆ ಅದೇ ಇರಬೇಕು! ವಾಸ್ತವದಲ್ಲಿ, ವಿಮರ್ಶಕರು ತಾನು ಉಪ್ಪಿಟ್ಟಿನ ಬಗ್ಗೆ ಏನೇನು ಹೇಳುತ್ತ ಹೋಗುತ್ತಿದ್ದೇನೋ ಅವೆಲ್ಲವೂ ಆ ಹೆಸರಲ್ಲಿ ಬಂದ ಸಿನೆಮಕ್ಕೂ ಅನ್ವಯವಾಗುತ್ತವೆ ಎನ್ನುವುದನ್ನು ಲೇಖನದ ಉದ್ದಕ್ಕೂ ಪರೋಕ್ಷವಾಗಿ ಹೇಳಿಬಿಟ್ಟಿದ್ದರು. “ಈ ಚಿತ್ರ ಕೂಡ ಉಪ್ಪಿಟ್ಟಿನಂತೆ; ಅವರವರ ಭಾವಕ್ಕೆ, ಅವರವರ ಭಕುತಿಗೆ” ಎನ್ನುವುದು ಅವರ ಲೇಖನದ ಆಶಯವಾಗಿತ್ತು. ಹೀಗೆ, ಉಪ್ಪಿಯ ಚಿತ್ರವಿಮರ್ಶೆಯಲ್ಲಿ ಉಪಮಾ, ಉಪಮಾನವಾಗಿ ಬಂದುಹೋಯಿತು! ಮತ್ತಷ್ಟು ಓದು 
ಬೀಭತ್ಸ (ಭಾಗ ೨)
ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಭಾಗ 1 ರಿಂದ ಮುಂದುವರೆದ ಕತೆ
“ಎಷ್ಟು ಬೇಗ ಈ ಆಚರಣೆ ಮರುಕಳಿಸಿತು ಅಲ್ಲವಾ..”? ಎಂದವಳು ಶ್ರೀಮತಿ ಡೆಲಾಕ್ರೋಕ್ಸ್. ಅವಳ ಮಾತಿಗೆ ಸಮ್ಮತಿಸುವಂತೆ ತಲೆಯಾಡಿಸಿದ ಶ್ರೀಮತಿ ಗ್ರೇವ್ಸ್, “ಹೌದು, ಮೊನ್ನೆಮೊನ್ನೆಯಷ್ಟೇ ಕಳೆದ ವರ್ಷದ ಚೀಟಿಯೆತ್ತುವಿಕೆಯ ಆಚರಣೆ ಮುಗಿದಿತ್ತೇನೋ ಎಂದು ಭಾಸವಾಗುತ್ತಿದೆ. ಕಾಲ ಎಷ್ಟು ಬೇಗ ಸರಿದು ಹೋಗುತ್ತದಲ್ಲವಾ..’?”ಎಂದು ನುಡಿದಳು. ಅಷ್ಟರಲ್ಲಿ ಕ್ಲಾರ್ಕ್ ನ ಸರದಿ ಮುಗಿದು ಡೆಲಾಕ್ರೋಕ್ಸ್ ತನ್ನ ಪಾಳಿಗಾಗಿ ಕಾಯುತ್ತ ನಿಂತಿದ್ದ. “ಅಲ್ನೋಡು ನನ್ನ ಗಂಡನ ಸರದಿ ಬಂದೇ ಬಿಟ್ಟಿತು” ಎಂದ ಅವನ ಮಡದಿಗೆ ಒಂದು ಕ್ಷಣ ಉಸಿರು ನಿಂತ ಅನುಭವ. ಡೆಲಾಕ್ರೊಕ್ಸ್ ಚೀಟಿಯನ್ನೆತ್ತಿಕೊಂಡು ಸ್ವಸ್ಥಾನಕ್ಕೆ ಮರಳಿದ. “ಡನ್ಬರ್” ಎಂಬ ಹೆಸರು ಕೇಳುತ್ತಲೇ ಕಾಲು ಮುರಿದುಕೊಂಡು ಮನೆಯಲ್ಲಿಯೇ ಮಲಗಿದ್ದ ಡನ್ಬರನ ಮಡದಿ ನಿಧಾನವಾಗಿ ಕಪ್ಪುಪೆಟ್ಟಿಗೆಯ ಬಳಿ ನಡೆಯಲಾರಂಭಿಸಿದಳು. ಆಕೆಯನ್ನು ಗಮನಿಸಿದ ಮಹಿಳೆಯೊಬ್ಬಳು “ಧೈರ್ಯವಾಗಿ ಹೋಗು ಜೇನಿ, ಭಯ ಬೇಡ” ಎನ್ನುತ್ತ ಆಕೆಯನ್ನು ಹುರಿದುಂಬಿಸಿದಳು. “ನಮ್ಮದು ಮುಂದಿನ ಸರದಿ” ಎನ್ನುತ್ತ ಕೊಂಚ ಗಂಭೀರಳಾದಳು ಶ್ರೀಮತಿ ಗ್ರೇವ್ಸ್. ತನ್ನ ಪತಿ ಗಡಿಬಿಡಿಯಾಗಿ ಕರಿಪೆಟ್ಟಿಗೆಯತ್ತ ತೆರಳಿ ಸಮ್ಮರ್ಸನಿಗೊಂದು ನಮಸ್ಕಾರ ಹೇಳಿ, ಚೀಟಿಯನ್ನು ಎತ್ತಿದ್ದನ್ನು ದೂರದಿಂದಲೇ ಗಮನಿಸಿದಳಾಕೆ. ಸಾಕಷ್ಟು ಸಮಯ ಕಳೆದಿತ್ತು. ಅದಾಗಲೇ ಚೀಟಿಯನ್ನು ಎತ್ತುಕೊಂಡಿದ್ದ ಜನ ಚೀಟಿಯನ್ನು ತೆರೆದು ನೋಡಲಾಗದೆ, ಕುತೂಹಲವನ್ನು ತಡೆದುಕೊಳ್ಳಲಾಗದೆ ನಿಂತಲ್ಲೆ ಸಣ್ಣಗೆ ಕಂಪಿಸುತ್ತಿದ್ದರು. ಡನ್ಬರನ ಮಡದಿ ಸಹ ಕೊಂಚ ಆತಂಕದಿಂದಲೇ ತನ್ನೆರಡು ಮಕ್ಕಳೊಡಗೂಡಿ ಮೂಲೆಯೊಂದರಲ್ಲಿ ನಿಂತಿದ್ದಳು. ಅಷ್ಟರಲ್ಲಿ ಹರ್ಬರ್ಟನ ಸರದಿ ಮುಗಿದು, ಹಚ್ಚಿಸನ್ನನ ಸರದಿ ಬಂದಿತ್ತು. “ಬೇಗ ಹೋಗಿ ಚೀಟಿ ಎತ್ತು, ಬಿಲ್” ಎಂದ ಟೆಸ್ಸಿಯ ಮಾತಿನ ಶೈಲಿಯೇ ನೆರೆದಿದ್ದ ಕೆಲವರಿಗೆ ನಗು ತರಿಸಿತ್ತು. ಹಚ್ಚಿಸನ್ನನ ನಂತರ ಚೀಟಿಯೆತ್ತುವ ಸರದಿ ಜೋನ್ಸಳದ್ದು. ಮತ್ತಷ್ಟು ಓದು 
ಬೀಭತ್ಸ…….!!(ಭಾಗ ೧)
ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಅದು ಜೂನ್ ಇಪ್ಪತ್ತೇಳನೆಯ ತಾರೀಖು. ಎಳೆಯ ಬಿಸಿಲಿನ್ನೂ ಭೂಮಿಯನ್ನು ಚುಂಬಿಸುತಿತ್ತು. ಮೈದಾನದುದ್ದಕ್ಕೂ ಆವರಿಸಿಕೊಂಡಿದ್ದ ಹಸಿರು ಹುಲ್ಲಿನ ನಡುನಡುವೆ ಬೆಳೆದುಕೊಂಡಿದ್ದ ಸಣ್ಣ ಗಿಡಗಳ ತುಂಬೆಲ್ಲ ಚಂದದ ಪುಷ್ಫಗಳು ಅರಳಿಕೊಂಡಿದ್ದವು. ಹಳ್ಳಿಯ ಅಂಚೆ ಕಚೇರಿ ಮತ್ತು ಬ್ಯಾಂಕುಗಳ ರಸ್ತೆಗಳು ಕೂಡುವ ಚೌಕದಲ್ಲಿ ನಿಧಾನವಾಗಿ ಹಳ್ಳಿಗರು ಸೇರಲಾರಂಭಿಸಿದ್ದರು. ಹಳ್ಳಿಯ ಚೀಟಿ ಎತ್ತುವಿಕೆಯ ಕಾರ್ಯಕ್ರಮ ಕೇವಲ ಒಂದೇ ದಿನದಲ್ಲಿ ಮುಗಿದು ಹೋಗುತ್ತದೆ. ಆದರೆ ಬೇರೆ ಕೆಲವು ಪಟ್ಟಣಗಳಲ್ಲಿ ಜನಸಂಖ್ಯೆ ಹೆಚ್ಚಿರುವುದರಿಂದ ಕಡಿಮೆಯೆಂದರೂ ಎರಡು ದಿನಗಳಷ್ಟು ಕಾಲಾವಕಾಶ ಬೇಕು. ಕಡಿಮೆ ಜನಸಂಖ್ಯೆಯ ಕಾರಣದಿಂದಾಗಿ ಆ ಹಳ್ಳಿಯ ಜನ ಬೆಳಗ್ಗಿನ ಹತ್ತು ಗಂಟೆಗೆಲ್ಲ ಕಾರ್ಯಕ್ರಮ ಆರಂಭಿಸಿ, ಮಧ್ಯಾಹ್ನದ ಹೊತ್ತಿಗೆ ವಿಧಿವಿಧಾನಗಳನ್ನು ಪೂರೈಯಿಸಿ ಊಟಕ್ಕೆಂದು ತಮ್ಮತಮ್ಮ ಮನೆಗಳಿಗೆ ತೆರಳುತ್ತಿದ್ದರು. ಮತ್ತಷ್ಟು ಓದು 
ವಿಡಂಬನೆ: ಸಾಹಿತ್ಯ ಗದ್ದುಗೆ ಹಾಗೂ ಮಣ್ಣಂಗಟ್ಟಿ ಸಾಹಿತ್ಯ!
– ತುರುವೇಕೆರೆ ಪ್ರಸಾದ್
ತರ್ಲೆಕ್ಯಾತನಳ್ಳಿ ಖ್ಯಾತ ಸಾಹಿತಿ ಅನಂತ ಜೋಷಿ ಮತ್ತು ತಾಲ್ಲೂಕ ಸಾಹಿತ್ಯ ಸಭೆಯ ನೂತನ ಅಧ್ಯಕ್ಷ ಗುದ್ಲಿಂಗ ಜಮಖಂಡಿ ಅವರ ಮಧ್ಯೆ ನಡೆದ ಫೋನ್ ಸಂಭಾಷಣೆ ಹೀಗಿದೆ:
‘ನಮಸ್ಕಾರ್ರೀ ! ನಾನ್ ಜಮಖಂಡಿ ಮಾತಾಡಕ್ ಹತ್ತೀನಿ’
‘ಓಹೋ! ಜಮಖಂಡಿ ಅವರು!ಏನ್ರಪ್ಪಾ! ಆರಾಮದೀರೇನು?’
‘ಹಾಂ! ಆರಾಮದೀನಿ..ವಿಷ್ಯ ತಿಳೀತೇನ್ರೀ ಎಪ್ಪಾ?’
‘ಯಾವ ವಿಷ್ಯ ಹೇಳಕ್ ಹತ್ತೀರಿ ನೀವು? ಕೊಶ್ನೆ ಪೇಪರ್ ಲೀಕಾಯ್ತಲ್ಲ ಅದಾ ? ಇಲ್ಲ ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ ಸಿಕ್ತಲ್ಲ ಅದಾ?’
‘ಏ ! ಅವೆಲ್ಲಾ ಹಳೇದಾತ್ ಬಿಡ್ರಿ, ಈಗ ನಂಗ್ ಸಾಹಿತ್ಯ ಸಭೆ ಅಧ್ಯಕ್ಷಗಿರಿ ಸಿಕ್ಕೈತೆ, ಮೊನ್ನೆ ಯುಗಾದಿ ಮುಂದ ಪೇಪರ್ನಾಗ್ ಬಂದಿತ್ತು, ನೀವು ನೋಡ್ಲಿಲ್ಲೇನು?’
‘ಅರೆ! ಹೌದಾ? ನಿಮ್ಗೆ ಅಧ್ಯಕ್ಷಗಿರಿ ಕಟ್ಯಾರಾ? ಅಂದ್ರೆ ಹಾರ ತುರಾಯಿ ಹಾಕಿಸ್ಕೊಳೋಕ್ ಕೊಳ್ ಚಾಚ್ಕಂಡ್ ಕುಂತ್ ಬಿಟ್ರಿ ಅನ್ನಿ, ಇಂದ್ರಾಬಾಯವ್ರು ನಮಗಾ ಒಂದ್ ಮಾತೂ ಕೇಳ್ದ, ಸಭೆನೂ ಕರೀದೆ ನಿಮ್ಮನ್ನ ಹೆಂಗ್ ಅಧ್ಯಕ್ಷ ಮಾಡಾರೆ?’
‘ನಿಮ್ಗೆ ಇದ್ ಕೇಳಿದ್ ಕೂಡ್ಲೆ ಹೊಟ್ಟೆನಾಗೆ ಮೆಣಸಿನಕಾಯ್ ಕಿವುಚಿದಂಗಾಗ್ತದೆ ಅಂತ ನಂಗೊತ್ತಿತ್ತು ಬಿಡ್ರಲಾ! ಅದೆಂಥ ಹೊಟ್ಟೆ ಉರೀನ್ರೀ ನಿಮ್ದು..! ಇನ್ನೊಬ್ರಿಗೆ ಒಳ್ಳೇದಾತು ಅಂದ್ರೆ ಸಹಿಸೋ ಮಂದಿ ಅಲ್ಲ ನೀವು’ ಮತ್ತಷ್ಟು ಓದು 
ಕನ್ನಡ ಎನೆ ಕಿವಿ ನಿಮಿರಬೇಕಿರುವುದು ಪರರದ್ದು!
-ಸಂಕೇತ್ ಡಿ ಹೆಗಡೆ, ಸಾಗರ
ಕೋರಾ ಅಂತ ಒಂದು ಸಾಮಾಜಿಕ ಜಾಲತಾಣವಿದೆ. ಮೊನ್ನೆ ಹೀಗೆ ಜಾಲಾಡುತ್ತಿದ್ದಾಗ ಒಂದು ಭಲೇ ಬುದ್ಧಿವಂತಿಕೆಯ ಪ್ರಶ್ನೆ ಎದುರಾಯಿತು. ಪುಣ್ಯಾತ್ಮನೊಬ್ಬ ಬೆಂಗಳೂರಿನ ರಸ್ತೆಯೊಂದರ ಮೇಲೆ ಕಾರಿನಲ್ಲಿ ಕುಳಿತು ಪೋಸ್ಟ್ ಮಾಡಿದ್ದು. “ನಾನೀಗ ಬೆಂಗಳೂರಿನಲ್ಲಿದ್ದೇನೆ. ಕರ್ನಾಟಕ ಇಲ್ಲಿಂದ ಎಷ್ಟು ಕಿಲೋಮೀಟರ್ ಪ್ರಯಾಣಿಸಿದರೆ ಸಿಗುತ್ತೆ” ಅಂತ! ಹಾಗೆ ಕೇಳಿದವನ ಕಂಡು ಮತ್ತೊಬ್ಬ ಉತ್ತರ ಬರೆದಿದ್ದ. “೧೦೮ಕ್ಕೆ ಕರೆಮಾಡಿ ’ನಾನು ಬೆಂಗಳೂರಿನಲ್ಲಿದ್ದೇನೆ, ನನಗೆ ಕರ್ನಾಟಕಕ್ಕೆ ಕರೆದುಕೊಂಡುಹೋಗಿ’ ಅಂತ ಹೇಳಿ. ಅವರು ವಿಲ್ಸನ್ ಗಾರ್ಡನ್ ಅನ್ನುವ ಸ್ಥಳದಲ್ಲಿರುವ ನಿಮ್ಹಾನ್ಸ್ ಅನ್ನುವ ಕಟ್ಟಡದ ಬಳಿ ಇಳಿಸುತ್ತಾರೆ” ಅಂತ. ಇವರ ಪ್ರಶ್ನೋತ್ತರಗಳ ನೋಡಿ ಉಕ್ಕಿಬಂದ ನಗು, “ತಪ್ಪು ಅವನದಲ್ಲ” ಎಂದು ಅನಿಸಿದಾಗ ಮುಚ್ಚಿಕೊಂಡು ಹಿಂದೆಹೋಗಿಬಿಟ್ಟಿತು. ಎಂತಹ ಸ್ಥಿತಿಗೆ ಬೆಂಗಳೂರನ್ನು ತಂದಿಟ್ಟುಬಿಟ್ಟಿದ್ದೇವೆ ಅನ್ನುವುದು ನೆನಪಾಗಿ ಹೃದಯದ ಒಂದು ಮೂಲೆಯಲ್ಲಿರುವ ಭಾಷಾಭಿಮಾನಕ್ಕೆ ಅತೀವ ವೇದನೆಯಾಯಿತು. ಪಾಪ ಆ ಕಾರಿನವನದೇನು ತಪ್ಪು? ಬೆಂಗಳೂರಿನ ಗಾಳಿಯನ್ನು ಪ್ರಥಮ ಬಾರಿಗೆ ಕುಡಿಯುತ್ತಿರುವ ಯಾವನಿಗೆ ಕರ್ನಾಟಕದ “ರಾಜಧಾನಿ”ಯ ಗಾಳಿ ಕುಡಿದ ಅನುಭವವಾಗುತ್ತೆ? ಅವನೋ ಕನ್ನಡಿಗರ ನಾಡಾಗಿರುವ, ಕನ್ನಡವನ್ನು ಉಸಿರಾಗಿಸಿಕೊಂಡಿರುವ, ಕನ್ನಡತನದ ಬೀಡಾಗಿರುವ ಪ್ರದೇಶವೊಂದು ಸಿಕ್ಕಾಗ ಇಳಿದುಕೊಂಡುಬಿಡೋಣ ಅಂದುಕೊಂಡಿದ್ದ. ಅವನಿಗೇನು ಗೊತ್ತು, “ದಿಸ್ ಇಸ್ ಕರ್ನಾಟಕಾಸ್ ಕ್ಯಾಪಿಟಲ್, ಫಾರ್ ಯು” ಅಂತ. ಬೆಂಗಳೂರು ಕರ್ನಾಟಕದಲ್ಲಿದೆ, ಅದೇ ಅದರ ರಾಜಧಾನಿ ಅಂತ ಅವನಿಗೆ ಗೊತ್ತಿಲ್ಲದಿರುವ ಅವನ ಸಾಮಾನ್ಯ ಜ್ನಾನಕ್ಕೆ ವಿಷಾದಿಸೋಣ. ಆದರೆ ಅವನಿಗೆ ಬೆಂಗಳೂರಿನಲ್ಲಿದ್ದರೂ ಇದು ಕರ್ನಾಟಕವೆನ್ನುವುದು ಗೊತ್ತಾಗದ ಮಟ್ಟದಲ್ಲಿ ನಾವು ಬೆಂಗಳೂರನ್ನು ಕಾಪಾಡಿಕೊಂಡಿದ್ದೇವೆ ಎಂಬ ಕಟುವಾಸ್ತವಕ್ಕೆ, ಕೇವಲ ವಿಷಾದಿಸಿದರೆ ಸಾಕೇನು? ಮತ್ತಷ್ಟು ಓದು 
ಇದೊಂದು ಸಣ್ಣ ಸಂಗತಿ ತಿಳಿದಿದ್ದರೆ ಆ ಸಾವನ್ನು ಯಾರಾದರೂ ತಪ್ಪಿಸಬಹುದಿತ್ತು
– ರೋಹಿತ್ ಚಕ್ರತೀರ್ಥ
ಫೆಬ್ರವರಿ 17ನೇ ತಾರೀಖು ಬುಧವಾರದ ಪತ್ರಿಕೆಯಲ್ಲಿ ಪ್ರಕಟವಾದ ಆ ವರದಿಯನ್ನು ಹಾಗ್ಹಾಗೇ ಕೊಡುವುದಾದರೆ ಅದು ಹೀಗಿದೆ: ಹುಟ್ಟೂರಿನಲ್ಲಿ ನಡೆಯುತ್ತಿದ್ದ ಸ್ಥಳೀಯ ಚುನಾವಣೆಯಲ್ಲಿ ಓಟು ಹಾಕಲೆಂದು ಹರೀಶ್ ಶನಿವಾರ ಊರಿಗೆ ತೆರಳಿದ್ದರು. ತನ್ನ ಕುಟುಂಬದ ಜತೆ (ತಾಯಿ ಮತ್ತು ಅಣ್ಣ) ಒಂದಷ್ಟು ಹೆಚ್ಚಿನ ಸಮಯ ಕಳೆಯುವ ಉದ್ಧೇಶದಿಂದ ಸೋಮವಾರ ರಜೆ ಹಾಕಿದ್ದರು. ಮಂಗಳವಾರ ಆಫೀಸಿದ್ದುದರಿಂದ ಊರಿಂದ ಮುಂಜಾನೆ ಬೇಗನೇ ಹೊರಟಿದ್ದರು. ಬೈಕು ಚಲಾಯಿಸುತ್ತ ಬರುತ್ತಿದ್ದಾಗ, ತಿಪ್ಪಗೊಂಡನಹಳ್ಳಿಯ ಸಮೀಪ, ಹಿಂದಿನಿಂದ ಒಂದು ಲಾರಿ ಅವರನ್ನು ಓವರ್ಟೇಕ್ ಮಾಡುವ ಯತ್ನದಲ್ಲಿತ್ತು. ಲಾರಿ ಅತಿ ವೇಗದಲ್ಲಿದ್ದುದರಿಂದ, ಅದು ತನ್ನ ತೀರಾ ಹತ್ತಿರ ಬಂದಾಗ ಹರೀಶ್ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದರು. ಆದರೆ, ಲಾರಿ ಮಾತ್ರ ನಿಲ್ಲುವ ಸೂಚನೆ ತೋರಿಸಲಿಲ್ಲ. ಅದು, ಯಮವೇಗದಲ್ಲಿ ಮುಂದುವರಿದು ಹರೀಶರ ದೇಹದ ಮೇಲೆಯೇ ಹಾದುಹೋಯಿತು. ಮತ್ತಷ್ಟು ಓದು 
ಮತ್ತೊಮ್ಮೆ ಚೆಕಾಫ್
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಮಧ್ಯಾಹ್ನದ ಸಮಯವದು. ತೀಕ್ಷ್ಣ ಕಂಗಳ,ಎತ್ತರದ ನಿಲುವಿನ ನಡುವಯಸ್ಕ ವಾಲ್ಡೆರೆವ್ ಕಚೇರಿಯ ಬಾಗಿಲಲ್ಲಿ ನಿಂತಿದ್ದ .ಧರಿಸಿದ್ದ ಮೇಲಂಗಿಯನ್ನು ಸರಿಪಡಿಸಿಕೊಳ್ಳುತ್ತ ನಿಂತಿದ್ದ ಆತ ಮಟ್ಟಸವಾಗಿ ತಲೆ ಬಾಚಿದ್ದ.ತನ್ನ ರೇಷ್ಮೆಯ ರುಮಾಲಿನಲ್ಲಿ ಹುಬ್ಬನ್ನೊರಿಸಿಕೊಳ್ಳುತ್ತ ಆ ಸರಕಾರಿ ಕಚೇರಿಯನ್ನು ಪ್ರವೇಶಿಸಿದ್ದ ಅವನ ನಡಿಗೆಯೂ ಕೊಂಚ ವಿಭಿನ್ನತೆಯಿಂದ ಕೂಡಿತ್ತು. ಸರಕಾರಿ ಕಚೇರಿಯಲ್ಲಿ ಎಂದಿನ ಸೋಮಾರಿತನದ ವಾತಾವರಣ.ಒಂದು ಹರಿವಾಣದ ತುಂಬ ಹತ್ತಾರು ಗ್ಲಾಸುಗಳನ್ನಿಟ್ಟುಕೊಂಡು ಗಡಿಬಿಡಿಯಲ್ಲಿ ನಡೆಯುತ್ತಿದ್ದ ಜವಾನನೊಬ್ಬನನ್ನು ತಡೆದು ನಿಲ್ಲಿಸಿ,’ನಾನೊಂದು ಮಾಹಿತಿಯನ್ನು ಪಡೆಯಬೇಕಿತ್ತು.’ಎಂದು ಪ್ರಶ್ನಿಸಿದ.ಕ್ಷಣಕಾಲ ವಾಲ್ಡೆರೆವ್ ನನ್ನು ದಿಟ್ಟಿಸುತ್ತ ನಿಂತಿದ್ದ ಜವಾನನ್ನು ಗಮನಿಸಿದ ವಾಲ್ಡೆರೆವ್ ಮತ್ತೊಮ್ಮೆ ” ಸರ್ ನಾನು ತುಂಬ ಅಗತ್ಯವಾದ ಮಾಹಿತಿಯೊಂದನ್ನು ಪಡೆದುಕೊಳ್ಳಬೇಕಿತ್ತು.ಹಾಗೆಯೇ ಮಂಡಳಿ ಪಾಸು ಮಾಡಿದ ಗೊತ್ತುವಳಿಯ ಪ್ರತಿಯೊಂದನ್ನು ಪಡೆದುಕೊಳ್ಳಬೇಕಿತ್ತು.ಇದನ್ನೆಲ್ಲಿ ವಿಚಾರಿಸಬೇಕೆನ್ನುವುದನ್ನು ದಯವಿಟ್ಟು ತಿಳಿಸಿ”ಎಂದು ಪ್ರಶ್ನಿಸಿದ. ಮತ್ತಷ್ಟು ಓದು 
ಭಾಷೆ – ಜಿಜ್ಞಾಸೆ : ಗಂಜಿ, ಹಿಂಡಿ, ಬೂಸಾ ಇತ್ಯಾದಿ
– ರೋಹಿತ್ ಚಕ್ರತೀರ್ಥ
ನಮ್ಮ ಮನೆಯಲ್ಲಿದ್ದ ಕಾಮಧೇನು ಎಂಬ ದನವನ್ನು ದಿನವೂ ಬಯಲಿಗೆ ಅಟ್ಟಿಸಿಕೊಂಡು ಹೋಗಿ ಸಂಜೆ ಹೊತ್ತಿಗೆ ಮರಳಿ ಹಟ್ಟಿಗೆ ತರುವ ಕೆಲಸ ಮಾಡುತ್ತಿದ್ದ ನನಗೆ, ಹಸುವಿಗೆ ಅಕ್ಕಚ್ಚು ಇಡುವುದು ಅತ್ಯಂತ ಪ್ರಿಯವಾಗಿದ್ದ ಕೆಲಸ. ಬೆಂದ ಅನ್ನವನ್ನು ಬಸಿದಾಗ ಸಿಗುವ ಗಂಜಿನೀರಿಗೆ ಒಂದಷ್ಟು ಕಲ್ಲುಪ್ಪು ಹಾಕಿ ಕರಗಿಸಿ ಅಜ್ಜಿ ಕೊಟ್ಟರೆ ಅದನ್ನು ದನದ ಮುಂದಿಟ್ಟು ಅದು ಕುಡಿಯುವ ಚಂದ ನೋಡುತ್ತ ಕೂರುತ್ತಿದ್ದೆ. ಮೂತಿ ಇಳಿಸಿದರೂ ಮೂಗೊಳಗೆ ನೀರು ಹೋಗದಂತೆ ಬಹಳ ಎಚ್ಚರಿಕೆಯಿಂದ ನಾಜೂಕಾಗಿ ಸುರ್ಸುರ್ರೆನ್ನುತ್ತ ಗಂಜಿ ಹೀರುವ ದನದ ಜಾಣ್ಮೆಗೆ ತಲೆದೂಗುತ್ತಿದ್ದೆ. ಮತ್ತಷ್ಟು ಓದು 




