ಕೈಲಾಗದ ರಾಜಕಾರಣಿಗಳ ಕೊಲವೆರಿ, ಕನ್ನಡಿಗರ ಜೀವನಾಡಿ ಕಾವೇರಿ
– ರಾಕೇಶ್ ಶೆಟ್ಟಿ
ಅವತ್ತು ಬೆಳ್ಳಂಬೆಳಗ್ಗೆ ತಮ್ಮ ಹಿಂಬಾಲಕರ ಹಿಂಡು,ಕ್ಯಾಮೆರಾ ದಂಡಿನೊಂದಿಗೆ ಮೀಡಿಯಾ ಡಾರ್ಲಿಂಗ್ ಕಾನೂನು ಸಚಿವ ಸುರೇಶ್ ಕುಮಾರ್, ಗೃಹ ಸಚಿವ ಅಶೋಕ್ ಬೆಂಗಳೂರಿನಿಂದ ಗುಳೆ ಹೊರಟಿದ್ದ ಅಸ್ಸಾಂ ಜನರನ್ನು ಸಂತೈಸಲು ರೈಲ್ವೇ ನಿಲ್ದಾಣಕ್ಕೆ ಹೋಗಿ ನಿಂತಿದ್ದರು.ಆದರೆ ಈಗ ನೋಡಿ ಕಳೆದ ಇಪ್ಪತ್ತು ದಿನದಿಂದ ಕಾವೇರಿಕೊಳ್ಳದ ರೈತರು ಕಣ್ಣೀರಿಡುತಿದ್ದಾರೆ.ಬಂದ್,ಹರತಾಳಗಳಿಂದ ರಾಜ್ಯದ ಕಾನೂನು ಹದಗೆಡುತ್ತಿದೆ ಆದರೆ ಮಾನ್ಯ ಕಾನೂನು ಸಚಿವರು ನಾಪತ್ತೆಯಾಗಿದ್ದಾರೆ…! ಈ ನಡುವೆ ಗೃಹ ಸಚಿವರು ಅಸ್ಸಾಂಗೆ ಹೋಗಿದ್ದಾರಾ? ತಮಿಳುನಾಡಿಗೆ ಹೋಗಿ ಜಯಲಲಿತಾಗೂ ವಸ್ತುಸ್ಥಿತಿ ತಿಳಿಸಬಹುದಿತ್ತಲ್ಲಾ,ಯಾಕೆ ಹೋಗಲಿಲ್ಲ?
ಸುದ್ದಿ ಮಾಡಲು ಇದೇನು “ಭಾರತ”ದ ವಿಷಯವೋ ಅಥವಾ ಅವರ ಸಂಘ ಪರಿವಾರದ “ದೇಶ ಭಕ್ತಿ”ಯ ವಿಷಯವೋ ಅಲ್ಲವಲ್ಲ.ಇದು ಬರಿ ಕಾವೇರಿಯ ವಿಷ್ಯ,ಇದು ಕರ್ನಾಟಕದ ಜನತೆಯ ಪ್ರಾದೇಶಿಕತೆಯ ಸಂಕುಚಿತತೆಯ ಹೋರಾಟ ಅನ್ನಿಸರಬೇಕು.ಒಂದೆಡೆ ಇಂತ ದೇಶಭಕ್ತ ಕಾನೂನು ಸಚಿವ.ಮತ್ತೊಂದೆಡೆ ಸುಪ್ರೀಂ ಕೋರ್ಟ್ ಮುಂದೆ ನಿಂತು ೧೦ ಟಿಎಂಸಿ ನೀರು ನಾವೇ ಕೊಡ್ತೀವಿ ಅಂತ ಮುಂಚಿತವಾಗಿ ಬರೆದು ಕೊಟ್ಟ ಜಲಸಂಪನ್ಮೂಲ ಸಚಿವ ಮತ್ತು ಇಂತ ಎಡವಟ್ಟು ಸಚಿವರಿಗೊಬ್ಬ ಕಳಸವಿಟ್ಟ ಮುಖ್ಯಮಂತ್ರಿ.
ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಪ್ರಧಾನಿ ತೀರ್ಪನ್ನು ವಿರೋಧಿಸಿ, ಕುರ್ಚಿ ಬೇಕಾದರೂ ಬಿಡುತ್ತೇನೆ, ಕಾವೇರಿ ಬಿಡಲಾರೆ ಅಂದ ಶೆಟ್ಟರ್ ಮುಖಾಂತರ ಒಬ್ಬ ಹೀರೊನನ್ನು ಹುಡುಕಲು ರಾಜ್ಯದ ರೈತರು ಕನಸು ಕಾಣುತಿದ್ದರು.ಆದರೆ ಅವರಿಗೆ ಕಾವೇರಿಗಿಂತ ಕುರ್ಚಿಯೇ ಹೆಚ್ಚಾಯಿತು ನೋಡಿ.ರಾತ್ರೋ ರಾತ್ರಿ ನೀರು ಹರಿಸಲು ಶುರು ಮಾಡಿದ್ದಾರೆ.ಹೀರೊ ಆಗೋದು ಬಿಡಿ ಕಡೆ ಪಕ್ಷ ಜೀರೊ ಆದರು ಅಂತೇಳಿದರೆ, ಅದು ನಾವು ಆ “ಜೀರೊ” ಅನ್ನೋ ಪದಕ್ಕೆ ಅವಮಾನ ಮಾಡಿದಂತೆ. ಇಡೀ ರಾಜ್ಯ ಬಂದ್ ಮಾಡಿ ಹೊತ್ತಿ ಉರಿಯುತಿದ್ದರೆ ಮಾನ್ಯ ಮುಖ್ಯಮಂತ್ರಿಗಳು ಪೋಲಿಸ್ ಸರ್ಪಗಾವಲಿನೊಂದಿಗೆ ಭದ್ರವಾಗಿ ಮನೆಯಲ್ಲಿ ಕುಳಿತಿದ್ದಾರೆ, ರೋಮ್ ಹತ್ತಿ ಉರಿಯುತಿದ್ದಾಗ ಪಿಟೀಲು ಕುಯ್ಯುತಿದ್ದ ನೀರೋನಂತೆ…!
ಕಾವೇರಿ ನದಿನೀರು ಹಂಚಿಕೆಯಲ್ಲಿ ನಾಡಿಗಾದ ಅನ್ಯಾಯ – ಕಿರು ವರದಿ
– ಜಯಪ್ರಕಾಶ್ ಪಿ., ಕರುನಾಡ ದನಿ
ಕಾವೇರಿ ನದಿಯು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಬ್ರಹ್ಮಗಿರಿ ತಪ್ಪಲಿನ ’ತಲಕಾವೇರಿ’ ಯಲ್ಲಿ ಹುಟ್ಟಿ ಕರ್ನಾಟಕದ ಬಹುತೇಕ ಭಾಗದಲ್ಲಿ ಹರಿದು ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಹರಿದು ಹೋಗುತ್ತದೆ. 1883 ರಲ್ಲಿ ಅಂದಿನ ಮೈಸೂರು ಪ್ರಾಂತ್ಯದ ದಿವಾನರು ಕಾವೇರಿ ನದಿನೀರನ್ನು ನೀರಾವರಿ ಯೋಜನೆಗೆ ಬಳಸಿಕೊಳ್ಳಲು ಮುಂದಾದಾಗ, ಅಂದಿನ ಬ್ರಿಟಿಷ್ ಆಳ್ವಿಕೆಯಲ್ಲಿದ್ದ ಮದರಾಸು ಪ್ರಾಂತ್ಯ ಅದನ್ನು ಸಹಿಸದೆ, ಮದರಾಸಿಗೆ ಅನುಕೂಲವಾಗುವಂತ ಅನೇಕ ಕಟ್ಟಳೆಗಳನ್ನು ಮಾಡುವ ಮೂಲಕ ತಾರತಮ್ಯ ನೀತಿ ಆರಂಭಿಸಿತು. ಅಂದು ಆರಂಭವಾದ ಕಾವೇರಿ ನದಿನೀರಿನ ಸಮಸ್ಯೆ ಸುಮಾರು 120ವರ್ಷಗಳೇ ಕಳೆದಿದ್ದರೂ,ಸರಿಯಾದ ಒಂದು ನಿಷ್ಪಕ್ಷಪಾತ ಜಲನೀತಿ ಇಲ್ಲದ ಪರಿಣಾಮವಾಗಿ ಇಂದು ಬಗೆಹರಿಯದ ಕಗ್ಗಂಟಾಗಿ ಬೆಳೆದು ನಿಂತಿದೆ.ಕನ್ನಡದಲ್ಲಿ ಉನ್ನತ ವ್ಯಾಸಾಂಗ
– ಬಿಂದುಮಾಧವಿ ಪಿ,ಹೈದರಾಬಾದ್
ನಮ್ಮ ದೇಶವು ವಿದ್ಯೆಯಲ್ಲಿ ಯಾವ ದೇಶಕ್ಕೂ ಕಡಿಮೆಯಿಲ್ಲ. ವಿದ್ಯಾವಂತರಿಗೆ ಬರವಿಲ್ಲ. ಹಾಗಿದ್ದರೂ ನಮ್ಮ ದೇಶದಿಂದ ಹೊಸ ಹೊಸ ಸಂಶೋಧನೆಗಳು ವಿರಳವಾಗಿವೆ. ಸಿ.ವಿ ರಾಮನ್, ಹರಗೋವಿಂದ ಖೊರಾನ ಇವರುಗಳ ಹೆಸರನ್ನೇ ಅನೇಕ ದಶಕಗಳಿಂದ ಹೇಳುತ್ತಿದ್ದೇವೆ. ಇದೇಕೆ ಹೀಗೆ?
ಗಣಿತದಲ್ಲಿ ಭಾರತೀಯರು ಎಂದೂ ಮುಂದು.ಅಮೇರಿಕದಲ್ಲಿ ಅನೇಕ ಸ್ಪರ್ಧೆಗಳಲ್ಲಿ ಭಾರತೀಯ ಮೂಲದ ಬಾಲಕರೇ ಮೊದಲ ಸ್ಥಾನ ಗಳಿಸುತ್ತಾರೆ. ಹಾಗಿರುವಾಗ Inventions and Discoveries ಪಟ್ಟಿಯಲ್ಲಿ ನಮ್ಮ ದೇಶದ ಹೆಸರು ಏಕೆ ಕಾಣುವುದಿಲ್ಲ?
ಇದಕ್ಕೆ ಉತ್ತರ ನಮ್ಮ ಮಾಧ್ಯಮ. ಒಂದರಿಂದ ಏಳನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ನಾನು, ಅಲ್ಲಿಯವರೆಗೆ ಯಾವತ್ತೂ ತರಗತಿಯಲ್ಲಿ ಮೊದಲಿಗಳಾಗಿರುತ್ತಿದ್ದೆ. ನಂತರ ಪ್ರೌಢಶಾಲೆಯಲ್ಲಿ ಆಂಗ್ಲ ಮಾಧ್ಯಮ ಅದೂ ಮರಿಮಲ್ಲಪ್ಪ ಶಾಲೆಯಲ್ಲಿ. ಅಲ್ಲಿ ಅಪರೂಪಕ್ಕೆ ಮೂರನೇ ಅಥವಾ ನಾಲ್ಕನೆಯ ಸ್ಥಾನ ಬಂದರೆ ಅದೇ ಹೆಚ್ಚು. ಪದವಿ ಪೂರ್ವ ಕಾಲೇಜಿನಲ್ಲಿ, ನಂತರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಗೂ ಹೀಗೂ ಮೊದಲ ದರ್ಜೆಯಲ್ಲಿ ಉತ್ತೀರ್ಣಳಾಗುವುದೇ ಹೆಚ್ಚಾಯಿತು. ಏಕೆ ಹೀಗೆ? ಬಹುಶ: ನಾನು ಕನ್ನಡ ಮಾಧ್ಯಮದಲ್ಲೇ ಮುಂದುವರೆದಿದ್ದರೆ ಎಂದಿಗೂ ಮೊದಲ ಸ್ಥಾನದಲ್ಲಿ ಇರುತ್ತಿದ್ದೆನೇನೊ?
ಮತ್ತಷ್ಟು ಓದು 
ಬರಹಗಾರನ ಭಾಷೆ ಮತ್ತು ಸ್ಮಾರಕ
ಆರ್. ಕೆ. ನಾರಾಯಣ್ ಯಾರಿಗೆ ಸೇರಿದವರು? ಅವರು ಮೂಲತಃ ತಮಿಳಿಗ, ಕರ್ನಾಟಕದ ಮೈಸೂರಿನಲ್ಲೂ ವಾಸಿಸಿದ್ದರು. ಬರೆದಿದ್ದು ತಮಿಳಿನಲ್ಲೂ ಅಲ್ಲ, ಕನ್ನಡದಲ್ಲೂ ಅಲ್ಲ; ನಮ್ಮ ದೇಶದ್ದೇ ಅಲ್ಲದ ಆಂಗ್ಲ ಭಾಷೆಯಲ್ಲಿ. ಇದೊಂದೇ ಕಾರಣಕ್ಕೆ ಅವರನ್ನು ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ ಕೊನೆಗೆ ಭಾರತದವರೇ ಅಲ್ಲ ಎನ್ನಲಾದೀತೆ? ಬರಹಗಳು ಒಂದು ಭಾಷೆ, ರಾಜ್ಯ, ರಾಷ್ಟ್ರಕ್ಕಷ್ಟೇ ಸೀಮಿತವಾದ ಸಂಗತಿಯೇ? ಮನದ ಭಾವನೆ ತುಮುಲಗಳನ್ನು, ಸಮಾಜದ ಜೀವನ ವಿಧಾನವನ್ನು ಬರಹರೂಪದಲ್ಲಿ ಕಟ್ಟಬಯಸುವ ಲೇಖಕನಿಗೆ ತನಗೆ ಹಿಡಿತವಿರುವ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿದ್ದೇ ಇದೆ. ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಮೇಲ್ನೋಟಕ್ಕೆ ಆ ಭಾಷಿಗರಿಗಷ್ಟೇ ಸೀಮಿತವೆಂಬಂತೆ ತೋರಿದರೂ ಅನುವಾದಗಳ ಮುಖಾಂತರ ಅನ್ಯಭಾಷಿಗರನ್ನೂ ತಲುಪುತ್ತದೆ. ರಷಿಯನ್ ಭಾಷೆಯಲ್ಲಿ ಬರೆದ ಲಿಯೋ ಟಾಲ್ ಸ್ಟಾಯ್, ದಸ್ತೋವಸ್ಕಿ ಪ್ರಪಂಚವನ್ನೆಲ್ಲ ತಲುಪಲು ಸಾಧ್ಯಾವಾಗಿದ್ದು ಅನುವಾದದಿಂದ. ತೆಲುಗಿನ ಯಂಡಮೂರಿ ವಿರೇಂದ್ರನಾಥ್ ನಮ್ಮವನೆನಿಸಿದ್ದು ಅನುವಾದದಿಂದ. ಭಾಷೆಗಿಂತ ಬರಹಗಳಲ್ಲಿನ ಮಾನವೀಯತೆ, ಸಾರ್ವತ್ರಿಕತೆಯಷ್ಟೇ ಕೊನೆಗೆ ಮುಖ್ಯವಾಗುಳಿಯುವುದು. ಆರ್. ಕೆ. ನಾರಾಯಣ್ ರ ಬಹುತೇಕ ಕೃತಿಗಳು ಕನ್ನಡಕ್ಕೆ ಅನುವಾದಗೊಂಡು ಕನ್ನಡಿಗರನ್ನೂ ತಲುಪಿದೆ. ಓದಲು ಬಾರದವರಿಗೆ, ಓದಲು ಇಚ್ಛಿಸದವರಿಗೆ ಶಂಕರ್ ನಾಗ್ ರ ಸಮರ್ಥ ನಿರ್ದೇಶನದಲ್ಲಿ ಮೂಡಿಬಂದ ಮಾಲ್ಗುಡಿ ಡೇಸ್ ಧಾರಾವಾಹಿಯ ಮುಖಾಂತರ ಹಿಂದಿ ಅರ್ಥೈಸಿಕೊಳ್ಳುವ ಜನರಿಗೂ ತಲುಪಿದೆ. ಎಲ್ಲರ ಮನಸ್ಸು ತಟ್ಟುವ ನಮ್ಮದೇ ಜೀವನದ ತುಣುಕುಗಳಂತೆ ಕಾಣುವ ನಾರಾಯಣ್ ರ ಕಥೆಗಳು ಭಾಷೆಯನ್ನು ಮೀರಿ ನಮ್ಮನ್ನು ತಲುಪುತ್ತದೆ.
ಮೈಸೂರಿನಲ್ಲಿ ಆರ್. ಕೆ. ನಾರಾಯಣ್ ವಾಸವಿದ್ದ ಮನೆಯನ್ನು ಸ್ಮಾರಕವಾಗಿಸಬೇಕೆಂಬ ಸರಕಾರದ ಉದ್ದೇಶವನ್ನು ಕನ್ನಡದ ಕೆಲವು ಲೇಖಕರು ವಿರೋಧಿಸಿದ್ದಾರೆ. ‘ಕನ್ನಡಕ್ಕೆ ಆರ್. ಕೆ. ನಾರಾಯಣರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ. ಆರ್. ಕೆ. ನಾರಾಯಣ್ ಕನ್ನಡಿಗರೂ ಅಲ್ಲ, ತಮಿಳರೂ ಅಲ್ಲ, ಭಾರತೀಯರೂ ಅಲ್ಲವೆಂಬ ಭಾವನೆ ಅವರ ಬರಹದ ಭಾಷೆಯ ಚೌಕಟ್ಟಿನಿಂದಾಗಿ ಉದ್ಭವವಾಗುವುದಾದರೆ ಆರ್. ಕೆ. ನಾರಾಯಣ್ ಒಬ್ಬ ಶ್ರೇಷ್ಠ ಸಾಹಿತಿ ಎಂಬ ದೃಷ್ಟಿಕೋನವಾದರೂ ಇರಬೇಕಲ್ಲವೇ? ಇಂಥ ಒಬ್ಬ ಸಾಹಿತಿ ವಾಸವಿದ್ದ, ಬರವಣಿಗೆ ನಡೆಸಿದ ಮನೆಯನ್ನು ಸ್ಮಾರಕ ಮಾಡುವುದನ್ನು ವಿರೋಧಿಸುವುದಕ್ಕೆ ಭಾಷೆಯೊಂದೇ ಕಾರಣವಾಗುವುದು ಸರಿಯಲ್ಲ. ಆರ್. ಕೆ. ನಾರಾಯಣ್ ರ ಸಾಹಿತ್ಯಿಕ ಕೊಡುಗೆಯನ್ನು ಗಮನಿಸುವಾಗ ಭಾಷೆ ಗೌಣವಾಗಬೇಕು. ನಾರಾಯಣ್ ರ ಮನೆಯವರು ಅವರು ವಾಸವಿದ್ದ ಮನೆಯನ್ನು ಸರಕಾರಕ್ಕೆ ‘ಮಾರಿದ್ದಾರೆ’ ಎಂಬ ಆರೋಪವೂ ಇದೆ. ಅದು ಅವರ ಮನೆಯವರ ಅನಿವಾರ್ಯತೆಯೇನೋ? ಖಾಸಗಿ ವ್ಯಕ್ತಿ ಖರೀದಿಸಿ ವಾಸ್ತುವಿನ ಹೆಸರಲ್ಲೋ, ನವೀಕರಣದ ಹೆಸರಲ್ಲೋ ಮನೆಯನ್ನು ಕೆಡವಿ ಕೆಡಿಸುವುದಕ್ಕಿಂತ ಸರಕಾರ ಖರೀದಿಸುವುದೇ ಸೂಕ್ತವಲ್ಲವೇ?
ಇನ್ನು ಲೇಖಕರ ಮನೆಯನ್ನು ಸ್ಮಾರಕವನ್ನಾಗಿಸಿ ಪ್ರವಾಸಿ ತಾಣದಂತೆ ಮಾರ್ಪಡಿಸುವುದು ಎಷ್ಟರಮಟ್ಟಿಗೆ ಸಾಹಿತ್ಯಕ್ಕೆ ಉಪಯೋಗಕಾರಿ? ಸ್ಮಾರಕಗಳಿಗೆ ವೆಚ್ಚ ಮಾಡುವ ಹಣವನ್ನು ಸಾಹಿತಿಯ ಪುಸ್ತಕಗಳನ್ನು ಮುದ್ರಿಸಿ ಜನರಿಗೆ ತಲುಪಿಸುವುದು ಹೆಚ್ಚು ಸೂಕ್ತವೆಂಬ ವಾದವೂ ಇದೆ. ಪ್ರತಿಮೆಗಳಿಗೆ ವೆಚ್ಚ ಮಾಡುವುದನ್ನು ವಿರೋಧಿಸುವುದು ಅರ್ಥಪೂರ್ಣ. ಆದರೆ ಸ್ಮಾರಕಗಳಿಂದ ಸಾಹಿತ್ಯಿಕ ಉಪಯೋಗವಿಲ್ಲ ಎಂಬುದನ್ನು ಸಂಪೂರ್ಣವಾಗಿ ಒಪ್ಪುವುದು ಕಷ್ಟ. ಮೋಜಿಗಾಗಿ, ಪ್ರವಾಸಕ್ಕಾಗಿ ಇಂಥ ಸ್ಮಾರಕಗಳಿಗೆ ಭೇಟಿ ನೀಡುವವರು ಇದ್ದಾರಾದರೂ ಸಾಹಿತಿಯ ಬರಹಗಳನ್ನು ಓದಿದ ಓದುಗನಿಗೆ ಆ ಸಾಹಿತಿ ಓಡಾಡಿದ, ಆ ಸಾಹಿತ್ಯ ಪಡಿಮೂಡಿದ ಜಾಗವನ್ನು ನೋಡುವ ಕುತೂಹಲವೂ ಇರುತ್ತದೆ. ಪುತ್ತೂರಿನ ಶಿವರಾಮ ಕಾರಂತ ಬಾಲವನ, ಕುವೆಂಪುರವರ ಕುಪ್ಪಳ್ಳಿಗೆ ಭೇಟಿ ನೀಡಿದಾಗ ಓದುಗರಿಗೆ ಸಿಗುವ ಉಲ್ಲಾಸ, ‘ನಾನೂ ಬರೆಯಬೇಕೆಂದು’ ಕೊಂಡವರಿಗೆ ಸಿಗುವ ಉತ್ಸಾಹ – ಪ್ರೇರಣೆಯನ್ನು ಕಡೆಗಣಿಸಲಾದೀತೆ? ಪುಸ್ತಕಗಳನ್ನು ಜನರಿಗೆ ತಲುಪಿಸುವುದು ಸಾಹಿತಿಗೆ ತೋರುವ ಶ್ರೇಷ್ಠ ಗೌರವವೆಂಬುದು ಸತ್ಯ, ಇದರೊಟ್ಟಿಗೆ ಸಾಹಿತಿಗಳ ಮನೆಯನ್ನು ಸ್ಮಾರಕವಾಗಿಸುವುದು ಕೂಡ ಅವರನ್ನು ಮತ್ತಷ್ಟು ಅರಿಯಲು, ಮಗದಷ್ಟು ಓದಲು ಸಹಾಯಕ.
ಚಿತ್ರಗಳು – ಡಾ ಅಶೋಕ್ ಕೆ ಆರ್, churumuri
ಹೈದರಾಬಾದ್ ನಲ್ಲಿರುವ ಕನ್ನಡಿಗರೂ, ಬೆಂಗಳೂರಿನಲ್ಲಿರುವ ತೆಲುಗರೂ….
– ಬಿಂದುಮಾಧವಿ ಪಿ
ಈಗ ನಾನು ಯಾವ ವಿಷಯದ ಬಗ್ಗೆ ಬರೆಯಲಿ? ಮೊದಲಿಗೆ ಕನ್ನಡ ಚಲನಚಿತ್ರಗಳು ಇತರ ರಾಜ್ಯಗಳಲ್ಲಿ ಭಿತ್ತರವಾಗದಿರುವ ಬಗ್ಗೆ ಬರೆಯಲೋ ಅಥವಾ, ಕೊನೆಗೂ ತೆಲುಗು ಚಿತ್ರಕ್ಕೇ ಶರಣಾಗಬೇಕಾದ ನನ್ನ ಸ್ಥಿತಿಯ ಬಗ್ಗೆ ಬರೆಯಲೋ?
ನೋಡಿ ನಮಗಂತೂ ನಮ್ಮ ದೇಶ ಭಾಷೇ ಎರಡರ ಮೇಲೂ ಅಪಾರ ಪ್ರೀತಿ. ಆದರೆ ಏನು ಮಾಡುವುದು? ಬೆಂಗಳೂರಿನಲ್ಲಿ ಎಲ್ಲ ಭಾಷೆಗಳೂ ಯಾರ ಹಂಗಿಲ್ಲದೆ, ರಾರಾಜಿಸುತ್ತಿರುತ್ತವೆ, ಆದರೆ, ಇತರ ರಾಜ್ಯಗಳಲ್ಲಿ, ಅದೂ ನೆರೆ ರಾಜ್ಯಗಳಲ್ಲೂ ನಮಗೆ ಕನ್ನಡದ ಇರುವಿಕೆ ಭೂತಗನ್ನಡಿ ಹಿಡಿದು ಹುಡುಕಿದರೂ ಸಿಗುವುದಿಲ್ಲ. ಏಕೆ ಹೀಗೆ?
ನಾವೂ ಹೈದರಾಬಾದಿಗೆ ಬಂದು ನಾಲ್ಕು ವರ್ಷಗಳಾಗುತ್ತಾ ಬಂತು. ಚಿತ್ರರಂಗದಲ್ಲಿ ಕನ್ನಡ ಚಿತ್ರ ನೋಡುವ ಆಸೆ ಬಿಡಿ, ಟಿವಿಯಲ್ಲಿ ಕನ್ನಡ ಚಾನಲ್ ಹುಡುಕೋಣವೆಂದರೆ, ಒಂದಾರೂ ಸಿಗಬೇಡವೆ? ಇಲ್ಲವೇ ಇಲ್ಲ. ಹಾಗಂತ ಇಲ್ಲಿ ಕನ್ನಡಿಗರು ಇಲ್ಲವೆಂದಿಲ್ಲ. ನನಗೆ ಎಲ್ಲಿ ಹೋದರೂ ಕನ್ನಡಿಗರು ಸಿಗುತ್ತಿರುತ್ತಾರೆ. ನಮ್ಮ ಮಗಳ ಶಾಲೆಯಲ್ಲಿ ಪ್ರಾಂಶುಪಾಲರು ಕನ್ನಡಿಗರು, ಅವಳ ತರಗತಿಯ ಉಪಾಧ್ಯಾಯಿನಿ ಕನ್ನಡಿಗರು, ಇಲ್ಲಿ ವಿಧ್ಯಾರ್ಥಿಗಳಲ್ಲಿ ಕನ್ನಡಿಗರು ಯಾರು ಎಂದು ಕೇಳಿ ಅವರ ಪರಿಚಯವನ್ನೂ ಮಾಡಿಕೊಂಡು ಆಯಿತು. ಆದರೆ ಕನ್ನಡ ನ್ಯೂಸ್ ಪೇಪರ್ ಆಗಲಿ, ಕನ್ನಡದ ಪುಸ್ತಕಗಳಾಗಲಿ, ಕನ್ನಡದ CD ಗಳಾಗಲಿ ಇಲ್ಲಿ ದೊರಕುವುದಿಲ್ಲ. ಅದೇ ಬೆಂಗಳೂರಿನಲ್ಲಿ, ಅಲ್ಲಿ ಕೂಡ ಅನೇಕ ಪ್ರದೇಶಗಳಲ್ಲಿ ಕನ್ನಡ ಪೇಪರ್, ಕನ್ನಡ ಚಿತ್ರದ CD ಗಳು ದೊರಕುವುದಿಲ್ಲ!! ಆದರೆ ಇತರ ಭಾಷೆಯ ಪತ್ರಿಕೆಗಳು, cd ಗಳು, ಜನರು ಎಲ್ಲಾ ಸಿಗುತ್ತಾರೆ.
ಮೊಬೈಲುಗಳಲ್ಲಿ ಕನ್ನಡದ ಬೆಂಬಲ ಬರಲಿ
-ರವಿ ಸಾವ್ಕರ್
HTC ಕಂಪನಿಯವರು ತಮಿಳು, ಹಿಂದಿ ,ಮರಾಠಿ ಭಾಷೆಗಳ ಬೆಂಬಲವನ್ನು ಕೊಡುಲು ಮುಂದಾಗಿರುವ ಸುದ್ದಿ ಬಂದಿದೆ. ಆದರೆ ಕನ್ನಡ ಭಾಷೆಯ ಬೆಂಬಲದ ಬಗೆಗೆ ಪ್ರಸ್ತಾಪವೂ ಮಾಡಿಲ್ಲ. ಕನ್ನಡದಲ್ಲಿ ಸಹ ಮೊಬೈಲುಗಳನ್ನು ಹೊರತನ್ನಿ ಎಂದು HTC ಕಂಪನಿಯವರಿಗೆ ತಿಳಿಸಬೇಕಾಗಿದೆ.
ಜಾತಿ ರಾಜಕೀಯದ ನಡುವೆ ಜಾತಿ ಇಲ್ಲದವನ ಪಾಡು..!
-ಶ್ರೀಧರ್ ಜಿ ಬನವಾಸಿ
ಮೊನ್ನೆ ರಾಜ್ಯ ಒಕ್ಕಲಿಗರ ಸಮಾವೇಷ ಅದ್ದೂರಿಯಾಗಿ ನೇರವೇರಿತು. ಜಗದ್ಗುರು ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಒಕ್ಕಲಿಗರ ಘಟಾನಘಟಿ ನಾಯಕರುಗಳನ್ನೆಲ್ಲಾ ಒಂದೇ ವೇದಿಕೆಯಲ್ಲಿ ಕೂರಿಸಲಾಗಿತ್ತು. ಒಕ್ಕಲಿಗರ ಬೇರೆ ಬೇರೆ ಮಠದ ಸ್ವಾಮೀಜಿಗಳು ಕೂಡ ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದು ಆ ದಿನದ ವಿಶೇಷವಾಗಿತ್ತು. ಒಕ್ಕಲಿಗರಲ್ಲಿ ಮೂರ್ನಾಲ್ಕು ಪಂಗಡಗಳಿದ್ದರೂ ನಾವೆಲ್ಲಾ ಒಂದೇ ಅಂತ ತೋರಿಸುವ ಪ್ರಯತ್ನ ಹಾಗೂ ರಾಜಕೀಯ ಪಕ್ಷಗಳ ನಡುವೆಯೂ ಒಕ್ಕಲಿಗರು ಒಂದು ತೋರಿಸವ ಪ್ರಯತ್ನ ಕೂಡ ಮಾಡಲಾಯಿತು. ಮುಖ್ಯಮಂತ್ರಿ ಸದಾನಂದ ಗೌಡರು ತಮಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದ್ದೇ ತಾವು ಒಕ್ಕಲಿಗ ಅನ್ನುವ ಕಾರಣ ಅಂತ ಸಭೆಯಲ್ಲಿ ಉದ್ಗೋಷಿಸಿದರು.
ಧರ್ಮವೆಂಬ ಅಫೀಮು ಮತ್ತು ಜಾತಿಯೆಂಬ ಮರಿಜುವಾನ….
– ಡಾ. ಅಶೋಕ್ ಕೆ.ಆರ್
ಮಾರ್ಕ್ಸ್ ವಾದ ಮತ್ತದರ ವಿವಿಧ ಸರಣಿವಾದಗಳು ಪದೇ ಪದೇ ವಿಫಲವಾದ ನಂತರೂ ಮತ್ತೆ ಮತ್ತೆ ಪ್ರಸ್ತುತವೆನ್ನಿಸುತ್ತಲೇ ಸಾಗುವುದಕ್ಕೆ ಕಾರಣಗಳೇನು? ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದಾಗ “Religion is opium” ಎಂದು ದಶಕಗಳ ಹಿಂದೆ ಯಾವಗಲೋ ಮಾರ್ಕ್ಸ್ ಹೇಳಿದ್ದ ಮಾತುಗಳು ನೆನಪಾಗದೇ ಇರದು. ‘ಭಿನ್ನ’ ಪಕ್ಷವೆಂದು ತನ್ನ ಬೆನ್ನು ತಾನೇ ತಟ್ಟಿಕೊಳ್ಳುವ ಭಾ.ಜ.ಪದ ಭಿನ್ನತೆ ಇಷ್ಟೊಂದು ಅಸಹ್ಯಕರವಾಗಿರಬಲ್ಲದು ಎಂದು ಸ್ವತಃ ಅದರ ಕಾರ್ಯಕರ್ತರೇ ನಿರೀಕ್ಷಿಸಿರಲಿಲ್ಲವೇನೋ?!
ಯಾವ್ ಜಾತಿಯ ಮುಖ್ಯಮಂತ್ರಿ ಬೇಕು!?
– ರಾಕೇಶ್ ಶೆಟ್ಟಿ
ಯಡ್ಡಿ ಕೆಳಗಿಳಿದಾಗ ಬರೆದಿದ್ದು.. ಈಗ ಸದಾ ಇಳಿಯುವಾಗಲೂ ಅಪ್ಪ್ಲೈ ಆಗುತ್ತೆ…! ಅತಿ ಕೆಟ್ಟ ರಾಜಕಾರಣಕ್ಕೆ ನಮ್ಮ ರಾಜ್ಯ ಸಾಕ್ಷಿಯಾಗಿರುವುದು ದೌರ್ಭಾಗ್ಯ…!
———————————————————————————————————————————————-
ಅಂತು ಬಿಜೆಪಿ ಹೈಕಮಾಂಡ್ ಧೈರ್ಯ ಮಾಡಿದೆ…! ಯಡ್ಯೂರಪ್ಪನವ್ರಿಗೆ ಕುರ್ಚಿ ಬಿಡಿ ಅನ್ನುವ ಸಂದೇಶವನ್ನ ರವಾನಿಸಿದೆ.ಸಂದೇಶ ಮಾಧ್ಯಮದ ಮೂಲಕ ಬಂದಿದ್ದು ನಿನ್ನೆ ಬೆಳಿಗ್ಗೆಯೇ.ಆದ್ರೆ ಇನ್ನ ಯಡ್ಯೂರಪ್ಪ ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ..!
ಕಳೆದ ೧೦-೧೫ ದಿನಗಳಿಂದ ಕರ್ನಾಟಕ ಸರ್ಕಾರ ಜನರ ಸಮಸ್ಯೆಯನ್ನ ನೋಡೋದು ಬಿಟ್ಟು ತನ್ನ ಬುಡ ಭದ್ರ ಮಾಡಿಕೊಳ್ಳುವ ಬಗ್ಗೆಯೇ ತಲೆಕೆಡಿಸಿಕೊಂಡು ಕೂತಿದೆ.ಕಳೆದ ಹತ್ತು ದಿನ ಬಿಡಿ, ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನ ತುತ್ತು ಅನ್ನಕ್ಕೆ ಸೂರಿಗೆ ಪರದಾಡುತ್ತಿರುವಾಗಲೇ ರೆಡ್ಡಿಗಳು ಬಂಡಾಯದ ಬಾವುಟ ಹಾರಿಸಿದಾಗಲೂ ಜನ ಸತ್ತರೆ ಸಾಯಲಿ ಕುರ್ಚಿ ಉಳಿದರೆ ಸಾಕು ಅಂತ ಬಿಜೆಪಿ ಸರ್ಕಾರವೇ ದೆಹಲಿಗೆ ಓಡಿ ಹೋಗಿತ್ತು…! ಹಾಗೇನಾದರೂ ಯಡ್ಯೂರಪ್ಪ ಬಂಡಾಯಕ್ಕೆ ಬಗ್ಗದೇ ರಾಜೀನಾಮೆ ಕೊಟ್ಟಿದ್ದರೆ ಜನ ಮತ್ತೆ ಗೆಲ್ಲಿಸಿ ಕಳಿಸುತಿದ್ದರೇನೋ.ಆದರೆ ಯಡ್ಯೂರಪ್ಪ ಶರಣಾಗಿ ಕುರ್ಚಿಯ ಮುಂದೆ ಬೋರಲು ಬಿದ್ದಿದ್ದರು..!
ಹಾಗೇ ನೋಡಿದರೆ ಈ ಸರ್ಕಾರ ರೆಡ್ಡಿಗಳ ಬಂಡಾಯದ ಸಮಯದಲ್ಲಿ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಕ್ಕಿ ತತ್ತರಿಸುತ್ತಿದ್ದರೂ ಹಾಳು ಬಿದ್ದು ಹೋಗಿ ಅನ್ನುವಂತೆ ಸುಮ್ಮನಿದ್ದಿದ್ದೇ ಕಡೆ ಬಾರಿಯೇನಲ್ಲ,ಅದಾದ ಮೇಲೆ ರೆಸಾರ್ಟ್ನಲ್ಲಿ ಕತ್ತೆ ವ್ಯಾಪರಕ್ಕಿಳಿದಾಗಲೂ ತಿಂಗಳುಗಟ್ಟಲೇ ರಾಜ್ಯ ಅನಾಥವಾಗಿತ್ತು.ಸರ್ಕಾರಿ ಯಂತ್ರಕ್ಕೆ ತುಕ್ಕು ಹಿಡಿದಿತ್ತು.
ಮತ್ತೆ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದಾಗ ಖುದ್ದು ಆಡಳಿತ ಪಕ್ಷವೇ ಬಂದ್ ಕರೆ ಕೊಟ್ಟೂ ವೋಟ್ ಹಾಕಿ ಕಳುಹಿಸಿದ ಜನಸಾಮಾನ್ಯರಿಗೆ ತೊಂದರೆ ಕೊಟ್ಟಿದ್ದು ಮಹಾನ್ ಸಾಧನೆಯೇ (?) ಸರಿ.ಅದೆಲ್ಲಾ ಆಗಿ ಮತ್ತೆ ಸುಪ್ರಿಂ ಕೋರ್ಟ್ ತೀರ್ಪು ಬಂದ ಮೇಲೂ ಮತ್ತೆ ದೆಹಲಿಯಲ್ಲಿ ಕುರ್ಚಿ ಸವಾರಿ ಮಾಡಿ ಬಂದಾಗಲೂ ಕರ್ನಾಟಕ ಅನಾಥವಾಗಿತ್ತು.








